Tag: Airstrike

  • ಕಾಬೂಲ್‌ ಮೇಲೆ ಪಾಕ್‌ ಏರ್‌ಸ್ಟ್ರೈಕ್‌ – ಇಸ್ಲಾಮಾಬಾದ್‌, ರಾವಲ್ಪಿಂಡಿಯಲ್ಲಿ ಇಂಟರ್‌ನೆಟ್‌ ಬಂದ್‌

    ಕಾಬೂಲ್‌ ಮೇಲೆ ಪಾಕ್‌ ಏರ್‌ಸ್ಟ್ರೈಕ್‌ – ಇಸ್ಲಾಮಾಬಾದ್‌, ರಾವಲ್ಪಿಂಡಿಯಲ್ಲಿ ಇಂಟರ್‌ನೆಟ್‌ ಬಂದ್‌

    – ತಾಲಿಬಾನ್‌ ವಿದೇಶಾಂಗ ಸಚಿವ ಭಾರತದಲ್ಲಿರುವಾಗ ದಾಳಿ

    ಕಾಬೂಲ್/ ಇಸ್ಲಾಮಾಬಾದ್‌: ಗುರುವಾರ ರಾತ್ರಿ ಅಫ್ಘಾನಿಸ್ತಾನದ (Afghanistan) ರಾಜಧಾನಿ ಕಾಬೂಲ್‌ (Kabul) ನಗರದ ಮೇಲೆ ಪಾಕಿಸ್ತಾನ (Pakistan) ಯುದ್ಧ ವಿಮಾನಗಳನ್ನು ಬಳಸಿ ವಾಯು ದಾಳಿ (Air Strike) ನಡೆಸಿದೆ.

    ಕಾಬೂಲ್ ನಗರದಲ್ಲಿ ಸ್ಫೋಟದ ಶಬ್ದ ಕೇಳಿಬಂದಿದೆ. ಯಾರೂ ಭಯಪಡುವ ಅಗತ್ಯವಿಲ್ಲ.ಘಟನೆಯ ತನಿಖೆ ನಡೆಯುತ್ತಿದೆ, ಇಲ್ಲಿಯವರೆಗೆ ಯಾವುದೇ ಹಾನಿಯ ವರದಿ ಬಂದಿಲ್ಲ ಎಂದು ಅಫ್ಘಾನ್-ತಾಲಿಬಾನ್ ವಕ್ತಾರರು ತಿಳಿಸಿದ್ದಾರೆ.

    ವರದಿಗಳ ಪ್ರಕಾರ ಕಾಬೂಲ್‌ನ ಪೂರ್ವ ಭಾಗದಲ್ಲಿರುವ ತಾಲಿಬಾನ್‌ ಸರ್ಕಾರದ ಪ್ರಮುಖ ಸರ್ಕಾರಿ ಕಚೇರಿಗಳನ್ನು ಗುರಿಯಾಗಿಸಿ ಈ ದಾಳಿ ನಡೆದಿದೆ.

    ದೇಶದ ಒಳಗಡೆ ನಡೆಯುತ್ತಿರುವ ಭಯೋತ್ಪಾದಕ ದಾಳಿಗೆ ತಾಲಿಬಾನ್‌ನಲ್ಲಿರುವ ತೆಹ್ರೀಕ್-ಇ-ತಾಲಿಬಾನ್(TTP) ಉಗ್ರರೇ ಕಾರಣ ಎಂದು ಪಾಕಿಸ್ತಾನ ದೂರಿದೆ. ಈ ಉಗ್ರರಿಗೆ ಅಫ್ಘಾನಿಸ್ತಾನ ಬೆಂಬಲ ನೀಡುತ್ತಿರುವುದಕ್ಕೆ ತಾಲಿಬಾನ್‌ ಸರ್ಕಾರದ ವಿರುದ್ಧ ಪಾಕ್‌ ಸಿಟ್ಟಾಗಿದೆ..  ಇದನ್ನೂ ಓದಿ:  ಭಾರತಕ್ಕೆ ಆಗಮಿಸಿದ ತಾಲಿಬಾನ್‌ ವಿದೇಶಾಂಗ ಸಚಿವ

    ಅಫ್ಘಾನಿಸ್ತಾನದ ಹಂಗಾಮಿ ವಿದೇಶಾಂಗ ಸಚಿವ ಅಮೀರ್ ಖಾನ್ ಮುತಾಕಿ (Amir Khan Muttaqi) ಭಾರತಕ್ಕೆ ಭೇಟಿ ನೀಡುತ್ತಿರುವ ಸಮಯದಲ್ಲಿ ಮತ್ತು ಇಂದು ವಿದೇಶಾಂಗ ಸಚಿವ ಎಸ್ ಜೈಶಂಕರ್ ಅವರೊಂದಿಗೆ ಪ್ರಮುಖ ಮಾತುಕತೆ ನಡೆಸಲು ಸಿದ್ಧರಾಗಿರುವ ಸಮಯದಲ್ಲಿ ಕಾಬೂಲ್‌ನಲ್ಲಿ ಪಾಕಿಸ್ತಾನ ದಾಳಿ ನಡೆಸಿರುವುದು ಮಹತ್ವ ಪಡೆದಿದೆ.

    ಕಾಬೂಲ್‌ ಮೇಲೆ ಏರ್‌ಸ್ಟ್ರೈಕ್‌ ನಡೆದ ಬೆನ್ನಲ್ಲೇ ಪಾಕಿಸ್ತಾನ ರಾಜಧಾನಿ ಇಸ್ಲಾಮಾಬಾದ್‌ ಮತ್ತು ಸೇನೆಯ ಪ್ರಧಾನ ಕಚೇರಿ ಇರುವ ರಾವಲ್ಪಿಂಡಿಯಲ್ಲಿ ಮುಂದಿನ ಆದೇಶ ಜಾರಿಯಾಗುವವರೆಗೂ ಮೊಬೈಲ್‌ ಇಂಟರ್‌ನೆಟ್‌ ಸೇವೆಯನ್ನು ಸ್ಥಗಿತಗೊಳಿಸಲಾಗಿದೆ.

  • ತನ್ನ ದೇಶದಲ್ಲೇ ಪಾಕ್‌ ಏರ್‌ಸ್ಟ್ರೈಕ್‌ಗೆ 30 ಮಂದಿ ಬಲಿ – UNHRC ಸಭೆಯಲ್ಲಿ ಭಾರತ ತೀವ್ರ ಖಂಡನೆ

    ತನ್ನ ದೇಶದಲ್ಲೇ ಪಾಕ್‌ ಏರ್‌ಸ್ಟ್ರೈಕ್‌ಗೆ 30 ಮಂದಿ ಬಲಿ – UNHRC ಸಭೆಯಲ್ಲಿ ಭಾರತ ತೀವ್ರ ಖಂಡನೆ

    ಲಂಡನ್‌: ಇತ್ತೀಚೆಗೆ ಪಾಕಿಸ್ತಾನ (Pakistan) ತನ್ನ ದೇಶದ ಮೇಲೆಯೇ ನಡೆಸಿದ ವಾಯುದಾಳಿಯಲ್ಲಿ 30 ಮಂದಿ ನಾಗರಿಕರು ಬಲಿಯಾಗಿರುವ ಘಟನೆಯನ್ನು ವಿಶ್ವಸಂಸ್ಥೆಯ ಮಾನವ ಹಕ್ಕುಗಳ ಮಂಡಳಿ (UNHRC) ಸಭೆಯಲ್ಲಿ ಭಾರತ ತೀವ್ರವಾಗಿ ಖಂಡಿಸಿದೆ.

    ತನ್ನ ದೇಶದಲ್ಲೇ ವೈಮಾನಿಕ ದಾಳಿ ನಡೆಸಿದ ಪಾಕ್‌ ನಡೆಗೆ ಭಾರತ ಪ್ರತಿಕ್ರಿಯಿಸಿದೆ. ಜಾಗತಿಕವಾಗಿ ಅಸ್ಥಿರತೆ ಉಂಟುಮಾಡಲು ಭಯೋತ್ಪಾದನೆ ರಫ್ತು ಮಾಡುತ್ತದೆ. ಈಗ ನೋಡಿದ್ರೆ ತನ್ನ ಸ್ವಂತ ನಾಗರಿಕರ ಮೇಲೆಯೇ ಬಾಂಬ್‌ ದಾಳಿ ಮಾಡಿದೆ. ಭಯೋತ್ಪಾದನೆಯ ಪ್ರಚಾರಕ್ಕಾಗಿ ಅಂತಾರಾಷ್ಟ್ರೀಯ ವೇದಿಕೆಗಳನ್ನ ದುರುಪಯೋಗಪಡಿಸಿಕೊಂಡಿದೆ. ಎಂದು UNHRCಯಲ್ಲಿನ ಭಾರತೀಯ ಪ್ರತಿನಿಧಿ ಕ್ಷಿತಿಜ್ ತ್ಯಾಗಿ ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಇದನ್ನೂ ಓದಿ: ಪಾಕ್‌ ಒಳಗಡೆಯೇ ಏರ್‌ಸ್ಟ್ರೈಕ್‌ – 7 ಬಾಂಬ್‌ಗೆ 30 ಮಂದಿ ಬಲಿ

    30 killed as pakistan air force drops bombs during strikes in khyber pakhtunkhwa

    ಕಾರ್ಯಸೂಚಿ ಐಟಂ-4ರ ವೇಳೆ ಮಾತನಾಡುವಾಗ, ಸೋಮವಾರ ಬೆಳಗ್ಗಿನ ಜಾವ ಜೆಎಫ್ -17 ಪಾಕಿಸ್ತಾನಿ ಯುದ್ಧ ವಿಮಾನಗಳು ತನ್ನ ಮಾಟ್ರೆ ದಾರಾ ಗ್ರಾಮದ ಮೇಲೆ 8 SL-6 ಬಾಂಬ್‌ಗಳ ಮೂಲಕ ವಾಯುದಾಳಿ ನಡೆಸಿದೆ. ಆ ದಾಳಿಯಲ್ಲಿ ಮಹಿಳೆಯರು ಮಕ್ಕಳು ಸೇರಿ 30 ಮಂದಿ ಬಲಿಯಾಗಿದ್ದಾರೆ ಎಂಬ ಅಂಶವನ್ನು ಉಲ್ಲೇಖಿಸಿದರು.

    ನಮ್ಮ ಪ್ರದೇಶವನ್ನು ಅಪೇಕ್ಷಿಸುವ ಬದಲು, ಪಾಕಿಸ್ತಾನ ಅಕ್ರಮವಾಗಿ ಆಕ್ರಮಿಸಿಕೊಂಡಿರುವ ಭಾರತೀಯ ಪ್ರದೇಶವನ್ನು ಖಾಲಿ ಮಾಡಬೇಕು ಎಂದರಲ್ಲದೇ ಭಯೋತ್ಪಾದನೆ ರಫ್ತು ಮಾಡುವುದರಿಂದ, ತಮ್ಮದೇ ಜನರ ಮೇಲೆ ಬಾಂಬ್ ದಾಳಿ ಮಾಡುವುದರಿಂದ, ವಿಶ್ವಸಂಸ್ಥೆ ಗುರುತಿಸಿದ ಉಗ್ರರಿಗೆ ಆಶ್ರಯ ನೀಡುವುದರಿಂದ ಸಮಯ ಸಿಕ್ಕರೆ ಜೀವ ಬೆಂಬಲದ ಮೇಲೆ ಆರ್ಥಿಕತೆ ಸುಧಾರಿಸುವತ್ತ ಗಮನಹರಿಸಬೇಕು. ಆದ್ರೆ ಪಾಕಿಸ್ತಾನಕ್ಕೆ ಸಮಯ ಸಿಕ್ಕರೆ ತನ್ನದೇ ದೇಶದ ನಾಗರಿಕೆ ಮೇಲೆ ದಾಳಿ ಮಾಡುವ ಕೆಲಸವನ್ನು ಮಾಡುತ್ತಿದೆ ಎಂದು ವಾಗ್ತಾಳಿ ನಡೆಸಿದರು. ಇದನ್ನೂ ಓದಿ: ತೈವಾನ್‌ನಲ್ಲಿ ʻರಗಾಸಾʼ ಚಂಡಮಾರುತಕ್ಕೆ 14 ಬಲಿ, 124 ಮಂದಿ ಮಿಸ್ಸಿಂಗ್‌

    ಮುಂದುವರಿದು.. ಪುಲ್ವಾಮಾ, ಉರಿ, ಪಠಾಣ್‌ಕೋಟ್ ಮತ್ತು ಮುಂಬೈ ಸೇರಿದಂತೆ ಹಿಂದಿನ ದಾಳಿಗಳು ಹಾಗೂ ಪಹಲ್ಗಾಮ್‌ ದಾಳಿಯನ್ನು ಉಲ್ಲೇಖಿಸಿ ಪಾಕ್‌ ವಿರುದ್ಧ ಕಿಡಿ ಕಾರಿದರು.

  • ಏರ್‌ಸ್ಟ್ರೈಕ್‌ಗೆ ಸಾಕ್ಷಿ ಎಲ್ಲಿದೆ ಅಂದವರ ಬಾಯಿಯನ್ನೇ ಬಂದ್‌ ಮಾಡಿದ ಸೇನೆ!

    ಏರ್‌ಸ್ಟ್ರೈಕ್‌ಗೆ ಸಾಕ್ಷಿ ಎಲ್ಲಿದೆ ಅಂದವರ ಬಾಯಿಯನ್ನೇ ಬಂದ್‌ ಮಾಡಿದ ಸೇನೆ!

    ನವದೆಹಲಿ: ಬಾಲಾಕೋಟ್‌ ಏರ್‌ ಸ್ಟ್ರೈಕ್‌ (Balakot Air Strike) ನಡೆದ ಬಳಿಕ ಭಾರತದಲ್ಲಿ ವಿರೋಧ ಪಕ್ಷಗಳು ದಾಳಿ ನಡೆದಿದೆ ಎನ್ನುವುದಕ್ಕೆ ಸಾಕ್ಷಿ (Proof) ಎಲ್ಲಿದೆ ಎಂದು ಕೇಳಿದ್ದವು. ಆದರೆ ಈ ಬಾರಿ ಈ ಪ್ರಶ್ನೆ ಕೇಳುವವರ ಬಾಯಿಯನ್ನೇ ನಮ್ಮ ರಕ್ಷಣಾ ಪಡೆ ಬಂದ್‌ ಮಾಡಿವೆ.

    ಹೌದು. ಪುಲ್ವಾಮಾ (Pulwama) ದಾಳಿಯ ನಂತರ ಭಾರತದ ಪಾಕಿಸ್ತಾನ ಒಳಗಡೆ ನುಗ್ಗಿ ಉಗ್ರರ ನೆಲೆಗಳ ಮೇಲೆ ಏರ್‌ಸ್ಟ್ರೈಕ್‌ ಮಾಡಿತ್ತು. ಈ ಏರ್‌ಸ್ಟ್ರೈಕ್‌ನಲ್ಲಿ 100 ಕ್ಕೂ ಹೆಚ್ಚು ಮಂದಿ ಉಗ್ರರು ಹತ್ಯೆಯಾಗಿದ್ದರು. ಈ ದಾಳಿಯನ್ನು ಪಾಕಿಸ್ತಾನ ನಡೆದೇ ಇಲ್ಲ ಎಂಬಂತೆ ಹೇಳಿತ್ತು. ಆದರೆ ಉಪಗ್ರಹ ಚಿತ್ರಗಳ ಮೂಲಕ ಇದು ದೃಢಪಟ್ಟಿತ್ತು.  ಇದನ್ನೂ ಓದಿ: ಪಿಕ್ಚರ್ ಅಭಿ ಬಾಕಿ ಹೈ: ಉಗ್ರರಿಗೆ ಎಚ್ಚರಿಕೆ ಕೊಟ್ಟ ಮಾಜಿ ಸಿಡಿಎಸ್‌ ನರವಾಣೆ

    ಹೀಗಿದ್ದರೂ ಭಾರತದಲ್ಲಿ ಏರ್‌ಸ್ಟ್ರೈಕ್‌ ದೊಡ್ಡ ಮಟ್ಟ ರಾಜಕೀಯ ಚರ್ಚೆಗೆ ಕಾರಣವಾಗಿತ್ತು. ಕೇಂದ್ರದ ಮಂತ್ರಿಗಳು ಹೇಳಿದರೂ ವಿಪಕ್ಷಗಳು ಪದೇ ಪದೇ ಸಾಕ್ಷಿಯನ್ನು ಕೇಳುತ್ತಿದ್ದವು. 2019ರ ಲೋಕಸಭಾ ಚುನಾವಣೆಯಲ್ಲೂ ಇದು ದೊಡ್ಡ ಸುದ್ದಿಯಾಗಿತ್ತು. ಇದನ್ನೂ ಓದಿ: ಪಾಕ್‌ ಉಗ್ರರ ದಾಳಿಗೆ SCALP, HAMMER ಕ್ಷಿಪಣಿಯನ್ನೇ ಬಳಸಿದ್ದು ಯಾಕೆ?

    ಕಳೆದ ಬಾರಿ ಸಾಕ್ಷಿ ಕೇಳಿದವರಿಗೆ ಈ ಬಾರಿ ನಮ್ಮ ಪಡೆಗಳು ಸಾಕ್ಷಿ ಸಮೇತ ಉತ್ತರ ನೀಡಿವೆ. ಪಾಕ್‌ ಆಕ್ರಮಿತ ಕಾಶ್ಮೀರ ಮತ್ತು ಪಾಕಿಸ್ತಾನದಲ್ಲಿ ನಡೆಸಿದ ಆಪರೇಷನ್‌ ಸಿಂಧೂರ(Operation Sindoor) ದಾಳಿ ನಡೆದ ಪ್ರತಿ ಜಾಗದ ವಿಡಿಯೋ/ ಫೋಟೊ ತೋರಿಸುವ ಮೂಲಕ ಪುರಾವೆ ನೀಡಿದೆ. ಇದಕ್ಕೆ ಪೂರಕ ಎಂಬಂತೆ ಪಾಕಿಸ್ತಾನವೇ ದಾಳಿ ನಡೆದಿದ್ದನ್ನು ಒಪ್ಪಿಕೊಂಡಿದೆ.

     

  • ಬಾಲಾಕೋಟ್‌ ದಾಳಿಯ ನಂತರ ಶಕ್ತಿಶಾಲಿಯಾದ ಭಾರತ! – ಬತ್ತಳಿಕೆಗೆ ಏನೇನು ಸೇರಿದೆ?

    ಬಾಲಾಕೋಟ್‌ ದಾಳಿಯ ನಂತರ ಶಕ್ತಿಶಾಲಿಯಾದ ಭಾರತ! – ಬತ್ತಳಿಕೆಗೆ ಏನೇನು ಸೇರಿದೆ?

    ನವದೆಹಲಿ: ನಮ್ಮ ಮೇಲೆ ಭಾರತ (India) ಯುದ್ಧ ಸಾರಲಿದೆ ಎಂದು ಪಾಕ್‌ (Pakistan) ಹೇಳುತ್ತಾ ಬರುತ್ತಿದೆ. ಆದರೆ ಭಾರತ ಇಲ್ಲಿಯವರೆಗೆ ಯುದ್ಧದ ಬಗ್ಗೆ ಯಾವುದೇ ಹೇಳಿಕೆ ನೀಡಿಲ್ಲ. ಆದರೆ ಭಾರತ ಬಾಲಾಕೋಟ್‌ ಮೇಲಿನ ಏರ್‌ ಸ್ಟ್ರೈಕ್‌ (Balakot Air Strike) ಮಾಡಿದ ಬಳಿಕ ತನ್ನ ಬತ್ತಳಿಕೆಗೆ ಹಲವಾರು ಶಸ್ತ್ರಾಸ್ತ್ರಗಳನ್ನು ಸೇರ್ಪಡೆ ಮಾಡುವ ಮೂಲಕ ಪಾಕಿಸ್ತಾನಕ್ಕೆ ಬಿಸಿ ಮುಟ್ಟಿಸಿದೆ.

    ಹಾಗೇ ನೋಡಿದರೆ ಬಾಲಾಕೋಟ್‌ ಏರ್‌ಸ್ಟ್ರೈಕ್‌ ನಡೆಸಿದ ನಂತರ ಭಾರತದ ಮೂರು ಪಡೆಗಳು ಮತ್ತಷ್ಟು ಬಲಶಾಲಿಯಾಗಿದೆ. ಹೀಗಾಗಿ 2019 ರಿಂದ ಏನೇನು ಬದಲಾವಣೆಯಾಗಿದೆ? ಈ ಎಲ್ಲಾ ವಿವರಗಳನ್ನು ಇಲ್ಲಿ ನೀಡಲಾಗಿದೆ. ಇದನ್ನೂ ಓದಿ: ದೀರ್ಘ ರಜೆ ಕೊಡಲ್ಲ – ಶಸ್ತ್ರಾಸ್ತ್ರ ಕಾರ್ಖಾನೆ ಉದ್ಯೋಗಿಗಳಿಗೆ ಸೂಚನೆ

    ಭಾರತದ ಒಳಗಡೆಯಿಂದಲೇ ದಾಳಿ:
    2019 – ಬಾಲಾಕೋಟ್‌ ಮೇಲಿನ ಏರ್‌ ಸ್ಟ್ರೈಕ್‌ ವೇಳೆ ಮಿರಾಜ್‌ ವಿಮಾನಗಳು ಗಡಿ ನಿಯಂತ್ರಣ ರೇಖೆಯನ್ನು ದಾಟಿ ಉಗ್ರರ ನೆಲೆಗಳ ಮೇಲೆ ಇಸ್ರೇಲ್‌ ನಿರ್ಮಿತ SPICE ಬಾಂಬ್‌ ಹಾಕಿತ್ತು. ಈ ರೀತಿಯ ಕಾರ್ಯಾಚರಣೆಯ ಸಂದರ್ಭದಲ್ಲಿ ಶತ್ರು ರಾಷ್ಟ್ರಗಳು ವಿಮಾನದ ಮೇಲೆ ದಾಳಿ ನಡೆಸುವ ಸಾಧ್ಯತೆ ಹೆಚ್ಚು. ಅಭಿನಂದನ್‌ ವರ್ಧಮಾನ್‌ ಅವರಂತೆ ಪೈಲಟ್‌ಗಳನ್ನು ಸೆರೆ ಹಿಡಿಯವ ಅಪಾಯದ ಸಾಧ್ಯತೆಯಿದೆ.

    2025 – 300 ಕಿ.ಮೀ ದೂರದಲ್ಲಿ ಟಾರ್ಗೆಟ್‌ ಧ್ವಂಸ ಮಾಡಬಲ್ಲ SCALP ಕ್ಷಿಪಣಿಯನ್ನು ಭಾರತ ಹೊಂದಿದೆ. ಭಾರತದ ಒಳಗಡೆಯೇ ರಫೇಲ್‌ ಯುದ್ಧ ವಿಮಾನದಲ್ಲಿ ಕ್ಷಿಪಣಿ ಹಾರಿಸಿ ಶತ್ರುಗಳ ನೆಲೆಗಳನ್ನು ಧ್ವಂಸ ಮಾಡಬಹುದು. ಗಡಿ ದಾಟದೇ ಬ್ರಹ್ಮೋಸ್‌ ಕ್ಷಿಪಣಿಯ ಮೂಲಕ ಶತ್ರು ದೇಶದ ವಾಯುನೆಲೆಯನ್ನೇ ಹಾಳು ಮಾಡಬಹುದು.  ಇದನ್ನೂ ಓದಿ: ಯುದ್ಧ ನಡೆದರೆ ಇಂಗ್ಲೆಂಡ್‌ಗೆ ಪಲಾಯನ – ಪಾಕ್‌ ಸಂಸದ

    ಡ್ರೋನ್‌ ಶಕ್ತಿ
    2019 – ಗಡಿ ನಿಯಂತ್ರಣ ರೇಖೆಯ ಬಳಿಯ ಶತ್ರುಗಳ ಪೋಸ್ಟ್‌ಗಳನ್ನು ಗುರಿಯಾಗಿಸಿ ಸೈನಿಕರು ಫಿರಂಗಿಯಿಂದ ಮಾತ್ರ ದಾಳಿ ನಡೆಸಬಹುದಾಗಿತ್ತು.

    2020 – ಭಾರತ ಈಗ ಸ್ವದೇಶಿ ALS-50 ರೆಕ್ಕೆಯನ್ನು ಹೊಂದಿರುವ ಡ್ರೋನ್‌ ಅಭಿವೃದ್ಧಿ ಪಡಿಸಿದೆ. ಈ ಡ್ರೋನ್‌ ಮೂಲಕ 50 ಕಿ.ಮೀ ದೂರದಲ್ಲಿರುವ ಶತ್ರುವಿನ ನೆಲೆಯನ್ನು ಟಾರ್ಗೆಟ್‌ ಮಾಡಬಹುದಾಗಿದೆ.

    ಗಡಿಗಳ ಬಳಿ ತ್ವರಿತ, ನಿಖರ ಮತ್ತು ಕಡಿಮೆ-ವೆಚ್ಚದ ಯುದ್ಧತಂತ್ರದ ಕಾರ್ಯಾಚರಣೆಗಳಿಗಾಗಿ ನಾಗಾಸ್ತ್ರದಂತ ಸೂಸೈಡ್‌ ಡ್ರೋನ್‌ ಮತ್ತು ಇತರ ಡ್ರೋನ್‌ಗಳನ್ನು ಭಾರತ ಖರೀದಿಸಿದೆ. ಜಿಪಿಎಸ್‌ ಆಧಾರಿತ ನಾಗಾಸ್ತ್ರ 30 ಕಿ.ಮೀ ದೂರವನ್ನು ಕ್ರಮಿಸುವ ಸಾಮರ್ಥ್ಯವನ್ನು ಹೊಂದಿದೆ.

    ನೆಲದಿಂದಲೇ ಉರುಳಿಸಬಹುದು
    2019 – ಶತ್ರು ದೇಶದ ಯುದ್ಧ ವಿಮಾನಗಳು ಭಾರತದ ಗಡಿಯನ್ನು ದಾಟಿ ಬಂದರೆ ನಾವು ಯುದ್ಧ ವಿಮಾನವನ್ನು (ಎರಡು ಯುದ್ಧ ವಿಮಾನಗಳ ಕಾದಾಟಕ್ಕೆ ಡಾಗ್‌ ಫೈಟ್‌ ಎಂದು ಕರೆಯಲಾಗುತ್ತದೆ) ಹಾರಿಸಿ ಹಿಮ್ಮೆಟಿಸಬೇಕಿತ್ತು. ಬಾಲಾಕೋಟ್‌ ಏರ್‌ಸ್ಟ್ರೈಕ್‌ ಮಾಡಿದ ಬಳಿಕ ಪಾಕ್‌ ಯುದ್ಧ ವಿಮಾನಗಳು ಭಾರತದ ಮೇಲೆ ದಾಳಿ ನಡೆಸಲು ಬಂದಿತ್ತು. ಈ ಸಂದರ್ಭದಲ್ಲಿ ಮಿಗ್‌, ಸುಕೋಯ್‌ ವಿಮಾನಗಳನ್ನು ಹಾರಿಸಿ ಭಾರತ ತಡೆದಿತ್ತು. ಹಾರುವ ಶವಪೆಟ್ಟಿಗೆ ಎಂದೇ ಕುಖ್ಯಾತವಾಗಿರುವ ಮಿಗ್‌ ವಿಮಾನದ ಮೂಲಕವೇ ಅಭಿನಂದನ್‌ AMRAAM ಕ್ಷಿಪಣಿ ಸಿಡಿಸಿ ಎಫ್‌16 ವಿಮಾನವನ್ನು ಹೊಡೆದು ಹಾಕಿದ್ದರು.

    2025 – ಭಾರತ ಈಗ ರಷ್ಯಾದ ಅತ್ಯಾಧುನಿಕ S-400 ವಾಯು ರಕ್ಷಣಾ ಕ್ಷಿಪಣಿ ವ್ಯವಸ್ಥೆಯನ್ನು ಹೊಂದಿದೆ. ಶತ್ರು ದೇಶದ ವಿಮಾನ ಅಥವಾ ಯಾವುದೇ ಕ್ಷಿಪಣಿ ಬಂದರೂ ಅದರ ವೇಗವನ್ನು ಗುರುತಿಸಿ ನೆಲದಿಂದಲೇ ಕ್ಷಿಪಣಿ ಹಾರಿಸಿ ಹೊಡೆದು ಹಾಕುತ್ತದೆ. ಈ ಮೂಲಕ ಭಾರತ ಶತ್ರು ದೇಶದ ಮೇಲೆ ದಾಳಿ ಮಾಡುವುದರ ಜೊತೆಗೆ ಶತ್ರು ದೇಶದಿಂದ ಬಂದ ಪ್ರತಿದಾಳಿಯನ್ನು ತಟಸ್ಥಗೊಳಿಸುವ ಸಾಮರ್ಥ್ಯವನ್ನು ಪಡೆದಿರುವುದು ವಿಶೇಷ.

  • ಲೆಬನಾನ್‌ ಮೇಲೆ ಇಸ್ರೇಲ್‌ ಆಕ್ರಮಣ ತೀವ್ರ – ಹಿಜ್ಬುಲ್ಲಾ ಸಂಘಟನೆಯ 15 ಮಂದಿ ಹತ್ಯೆ!

    ಲೆಬನಾನ್‌ ಮೇಲೆ ಇಸ್ರೇಲ್‌ ಆಕ್ರಮಣ ತೀವ್ರ – ಹಿಜ್ಬುಲ್ಲಾ ಸಂಘಟನೆಯ 15 ಮಂದಿ ಹತ್ಯೆ!

    – ಗಾಜಾದಲ್ಲಿ ಹಮಾಸ್‌ ಮುಖ್ಯಸ್ಥನ ರೈಡ್‌ಹ್ಯಾಂಡ್‌ ಸೇರಿ ಮೂವರ ಹತ್ಯೆ

    ಬೈರೂತ್‌: ದಕ್ಷಿಣ ಲೆಬನಾನ್ ಮೇಲೆ ನಡೆಸಿದ ವಾಯು ದಾಳಿಯಲ್ಲಿ (IDF Airstrike) ಹಿಜ್ಜುಲ್ಲಾ (Hezbollah) ಸಂಘಟನೆಯ 15 ಮಂದಿಯನ್ನು ಹತ್ಯೆ ಮಾಡಲಾಗಿದೆ. ಇರಾನ್ ಬೆಂಬಲಿತ ಹಿಜ್ಜುಲ್ಲಾ ಸಂಘಟನೆಯನ್ನು ಗುರಿಯಾಗಿಸಿ ದಾಳಿ ನಡೆಸಲಾಗಿದೆ ಎಂದು ಇಸ್ರೇಲ್ ಸೇನೆ ಹೇಳಿದೆ.

    ಬೈರೂತ್‌ ಮೇಲೆ ಬಾಂಬ್ ದಾಳಿ:
    ಮತ್ತೊಂದುಕಡೆ ಲೆಬನಾನ್ ರಾಜಧಾನಿ ಹಾಗೂ ಅತಿ ದೊಡ್ಡ ನಗರ ಬೈರೂತ್ ಮೇಲೆ ʻಎನಿಮಿʼ ಜೆಟ್‌ ಮೂಲಕ ಇಸ್ರೇಲ್ ಬಾಂಬ್ ದಾಳಿ ನಡೆಸಿದ್ದು ಆರು ಮಂದಿ ಮೃತಪಟ್ಟಿದ್ದಾರೆ ಎಂದು ವರದಿಯಾಗಿದೆ. ಘಟನೆಯಲ್ಲಿ ಏಳು ಮಂದಿ ಗಾಯಗೊಂಡಿದ್ದು, ಹಲವು ಕಟ್ಟಡಗಳು ಧ್ವಂಸಗೊಂಡಿವೆ.

    ಲೆಬನಾನ್‌ನ (Lebanon) ರಾಜಧಾನಿಯ ಮೇಲೆ ಇಸ್ರೇಲ್ ನಡೆಸಿದ ವೈಮಾನಿಕ ದಾಳಿಯ ವಿಡಿಯೋ ಸೋಷಿಯಲ್‌ ಮೀಡಿಯಾದಲ್ಲಿ ಸದ್ದು ಮಾಡುತ್ತಿವೆ. ಹಮಾಸ್ ಮತ್ತು ಹಿಬ್ಬುಲ್ಲಾ ಸಂಘಟನೆಗಳನ್ನು ಗುರಿಯಾಗಿಸಿ ಇಸ್ರೇಲ್ ಕ್ಷಿಪಣಿ ದಾಳಿ ಮುಂದುವರಿಸಿದೆ. ಇಸ್ರೇಲ್ ಮೇಲೆ ಇರಾನ್ ಕ್ಷಿಪಣಿ ದಾಳಿಗೆ ಪ್ರತೀಕಾರ ತೀರಿಸುವುದಾಗಿ ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಹೇಳಿದ್ದಾರೆ. ಆದರೆ ಇಸ್ರೇಲ್ ದಾಳಿ ನಡೆಸಿದರೆ ಇದಕ್ಕಿಂತಲೂ ದೊಡ್ಡ ಮಟ್ಟದಲ್ಲಿ ಪ್ರತಿದಾಳಿ ನಡೆಸುವುದಾಗಿ ಇಸ್ರೇಲ್ ಎಚ್ಚರಿಸಿದೆ.

    ಗಾಜಾದಲ್ಲಿ ಹಮಾಸ್‌ ಮುಖ್ಯಸ್ಥನ ರೈಟ್‌ಹ್ಯಾಂಡ್‌ ಹತ್ಯೆ:
    ಇಸ್ರೇಲ್‌-ಇರಾನ್‌ ನಡುವಿನ ಯುದ್ಧದ ತೀವ್ರತೆ ಹೆಚ್ಚಾಗುತ್ತಿರುವ ಹೊತ್ತಿನಲ್ಲಿ ಇಸ್ರೇಲ್‌ ಮತ್ತೊಂದು ಸ್ಫೋಟಕ ಹೇಳಿಕೆ ನೀಡಿದೆ. ಮೂರು ತಿಂಗಳ ಹಿಂದೆ ಗಾಜಾದ ಮೇಲೆ ನಡೆಸಿದ ವಾಯುದಾಳಿಯಲ್ಲಿ ಹಮಾಸ್‌ ಮುಖ್ಯಸ್ಥನ ರೈಟ್‌ಹ್ಯಾಂಡ್‌ ರಾವ್ಹಿ ಮುಶ್ತಾಹಾ ಇತರ ಇಬ್ಬರು ಲೀಡರ್‌ಗಳನ್ನ ಹತ್ಯೆಗೈದಿರುವುದಾಗಿ ಘೋಷಿಸಿದೆ.

  • ಇರಾನ್, ಇಸ್ರೇಲ್‍ಗೆ ಪ್ರಯಾಣಿಸದಂತೆ ನಾಗರಿಕರಿಗೆ ಕೇಂದ್ರದ ಸಲಹೆ

    ಇರಾನ್, ಇಸ್ರೇಲ್‍ಗೆ ಪ್ರಯಾಣಿಸದಂತೆ ನಾಗರಿಕರಿಗೆ ಕೇಂದ್ರದ ಸಲಹೆ

    ನವದೆಹಲಿ: ಇರಾನ್ (Iran) ಮತ್ತು ಇಸ್ರೇಲ್ (Israel) ನಡುವಿನ ಸಂಘರ್ಷದಿಂದ ಉಂಟಾಗಿರುವ ಉದ್ವಿಗ್ನತೆಯನ್ನು ಗಮನದಲ್ಲಿಟ್ಟುಕೊಂಡು ಮುಂದಿನ ಸೂಚನೆ ಬರುವವರೆಗೆ ಎರಡೂ ದೇಶಗಳಿಗೆ ಪ್ರಯಾಣಿಸದಂತೆ ಕೇಂದ್ರ ಸರ್ಕಾರ ನಾಗರಿಕರಿಗೆ ಸಲಹೆ ನೀಡಿದೆ.

    ಸಿರಿಯಾದಲ್ಲಿರುವ ತನ್ನ ರಾಯಭಾರಿ ಕಚೇರಿಯ ಮೇಲೆ ಶಂಕಿತ ಇಸ್ರೇಲಿ ವೈಮಾನಿಕ ದಾಳಿಗೆ (Airstrike) ಪ್ರತೀಕಾರ ತೀರಿಸಿಕೊಳ್ಳುವುದಾಗಿ ಇರಾನ್‍ನ ಬೆದರಿಕೆ ಬಂದ ನಂತರ ವಿದೇಶಾಂಗ ಸಚಿವಾಲಯ (Foreign Ministry) ಈ ಸಲಹೆ ನೀಡಿದೆ. ಉಭಯ ದೇಶಗಳಲ್ಲಿನ ತಮ್ಮ ದೇಶದ ನಾಗರಿಕರು ಸುರಕ್ಷತೆಯ ಬಗ್ಗೆ ಹೆಚ್ಚಿನ ಮುನ್ನೆಚ್ಚರಿಕೆಗಳನ್ನು ಅನುಸರಿಸಬೇಕು. ಅನಗತ್ಯ ಸಂಚಾರ ಮಾಡಬಾರದು ಎಂದು ವಿದೇಶಾಂಗ ಸಚಿವಾಲಯ ಎಚ್ಚರಿಕೆ ನೀಡಿದೆ. ಇದನ್ನೂ ಓದಿ: ರಾತ್ರಿ 10 ಗಂಟೆ ನಂತರವೂ ಪ್ರಚಾರ – ಅಣ್ಣಾಮಲೈ ವಿರುದ್ಧ ದೂರು ದಾಖಲು

    ಅಮೆರಿಕ ಮತ್ತು ರಷ್ಯಾ ಸೇರಿದಂತೆ ಇತರೆ ದೇಶಗಳು ತಮ್ಮ ಸಿಬ್ಬಂದಿ ಮತ್ತು ನಾಗರಿಕರಿಗೆ ಇದೇ ರೀತಿಯ ಸಲಹೆಗಳನ್ನು ನೀಡಿವೆ.

    ಇರಾನ್‍ನ ಪ್ರತೀಕಾರ, ಗಾಜಾದಲ್ಲಿ ಇರಾನ್ ಬೆಂಬಲಿತ ಹಮಾಸ್ ಉಗ್ರರು ಮತ್ತು ಇಸ್ರೇಲ್ ನಡುವಿನ ಯುದ್ಧದಂತೆ ಮರುಕಳಿಸಬಹುದು ಎಂಬ ಆತಂಕವನ್ನು ಹುಟ್ಟುಹಾಕಿದೆ.

    ಸಂಘರ್ಷವನ್ನು ನಿಯಂತ್ರಿಸುವ ಸಲುವಾಗಿ ಅಮೆರಿಕ, ಸೌದಿ ಅರೇಬಿಯಾ, ಯುಎಇ, ಕತಾರ್ ಮತ್ತು ಇರಾಕ್‍ನ ವಿದೇಶಾಂಗ ಮಂತ್ರಿಗಳಿಗೆ ಮಾತುಕತೆ ನಡೆಸಿದೆ. ಇರಾನ್‍ಗೆ ಇಸ್ರೇಲ್‍ನೊಂದಿಗಿನ ಉದ್ವಿಗ್ನತೆಯನ್ನು ಕಡಿಮೆ ಮಾಡಲು ಒತ್ತಾಯಿಸುವಂತೆ ಕೇಳಿಕೊಳ್ಳಲಾಗಿದೆ. ಇದನ್ನೂ ಓದಿ: ಫುಟ್‌ಪಾತ್‌ನಲ್ಲಿ ಬಟ್ಟೆ ವ್ಯಾಪಾರ ಮಾಡಿದ್ದ ಮತೀನ್‌ ಬಾಂಬ್‌ ಸ್ಫೋಟದ ಸೂತ್ರಧಾರ!

  • ಇಸ್ರೇಲ್ ವೈಮಾನಿಕ ದಾಳಿಯಲ್ಲಿ 78 ಮಂದಿ ಪ್ಯಾಲೆಸ್ತೇನಿಯರ ದುರ್ಮರಣ

    ಇಸ್ರೇಲ್ ವೈಮಾನಿಕ ದಾಳಿಯಲ್ಲಿ 78 ಮಂದಿ ಪ್ಯಾಲೆಸ್ತೇನಿಯರ ದುರ್ಮರಣ

    – ಹಮಾಸ್ ಉಗ್ರರ ಸುರಂಗದಲ್ಲಿ ಐವರು ಒತ್ತೆಯಾಳುಗಳ ಶವ ಪತ್ತೆ

    ಟೆಲ್ ಅವೀವ್: ಒಂದೆಡೆ ಗಾಜಾದ ಮೇಲೆ ಇಸ್ರೇಲ್ (Israel) ವೈಮಾನಿಕ ದಾಳಿ (Airstrike) ನಡೆಸಿದ್ದರೆ, ಇನ್ನೊಂದೆಡೆ ಹಮಾಸ್ (Hamas) ಬಂಡುಕೋರರ ಸುರಂಗದಲ್ಲಿ ಐವರು ಒತ್ತೆಯಾಳುಗಳ ಶವ ಪತ್ತೆಯಾಗಿರುವುದಾಗಿ ವರದಿಯಾಗಿದೆ.

    ಗಾಜಾದ ಮಾಘಜಿ ನಿರಾಶ್ರಿತರ ಶಿಬಿರದ ಮೇಲೆ ಇಸ್ರೇಲ್ ನಡೆಸಿದ ವೈಮಾನಿಕ ದಾಳಿಯಲ್ಲಿ 78 ಮಂದಿ ಸಾವನ್ನಪ್ಪಿದ್ದಾರೆ ಎಂದು ಪ್ಯಾಲೆಸ್ತೇನಿ ಅಧಿಕಾರಿಗಳು ತಿಳಿಸಿದ್ದಾರೆ. ಇನ್ನೊಂದೆಡೆ ಉತ್ತರ ಗಾಜಾದಲ್ಲಿ ಹಮಾಸ್ ಉಗ್ರರ ಭೂಗತ ಸುರಂಗ ಜಾಲದಲ್ಲಿ ಸೆರೆಯಲ್ಲಿದ್ದ ಐವರು ಇಸ್ರೇಲಿ ಒತ್ತೆಯಾಳುಗಳ ಶವಗಳನ್ನು ವಶಪಡಿಸಿಕೊಂಡಿರುವುದಾಗಿ ಇಸ್ರೇಲ್ ಸೇನೆ ತಿಳಿಸಿದೆ. ಇದನ್ನೂ ಓದಿ: ಭಾರತದ ಧ್ವಜವುಳ್ಳ ಕಚ್ಚಾತೈಲ ಟ್ಯಾಂಕರ್‌ ಮೇಲೆ ಹೌತಿ ಉಗ್ರರಿಂದ ಡ್ರೋನ್‌ ದಾಳಿ

    ಗಾಜಾದ ಮೇಲೆ ಭಾನುವಾರ ರಾತ್ರಿ ಆರಂಭವಾದ ಇಸ್ರೇಲ್ ದಾಳಿ ಕ್ರಿಸ್‍ಮಸ್ ದಿನವಾದ ಸೋಮವಾರ ಬೆಳಗ್ಗೆವರೆಗೂ ಮುಂದುವರಿಯಿತು. ಈ ವೇಳೆ ಗಾಜಾದ ಅಲ್-ಬುರೇಜ್‍ನ ಮೇಲೆ ಇಸ್ರೇಲ್ ತೀವ್ರ ವೈಮಾನಿಕ ದಾಳಿ ನಡೆಸಿದೆ. ಪರಿಣಾಮ ಮಾಘಜಿ ನಿರಾಶ್ರಿತರ ಶಿಬಿರದಲ್ಲಿ 70 ಮಂದಿ ಸಾವಿಗೀಡಾಗಿದ್ದಾರೆ. ಇದರಲ್ಲಿ ಮಹಿಳೆಯರು ಮತ್ತು ಮಕ್ಕಳು ಸೇರಿದ್ದಾರೆ ಎಂದು ವರದಿಯಾಗಿದೆ.

    ಇದರ ನಡುವೆಯೇ ಬೆಥ್ ಲೆಹೆಮ್‍ನಲ್ಲಿ (Bethlehem) ಪ್ಯಾಲೇಸ್ತೇನಿ ಜನರು ಶಾಂತಿಗಾಗಿ ಪ್ರಾರ್ಥನೆ ಸಲ್ಲಿಸಿದ್ದಾರೆ. ಅ.7ರಂದು ಹಮಾಸ್, ಇಸ್ರೇಲ್ ಮೇಲೆ ದಾಳಿ ಮಾಡಿದ ನಂತರ 200ಕ್ಕೂ ಹೆಚ್ಚು ಒತ್ತೆಯಾಳುಗಳನ್ನು ಸೆರೆ ಹಿಡಿದಿತ್ತು. ಹಿಂದಿನ ಕದನ ವಿರಾಮ ಒಪ್ಪಂದದ ಅಡಿಯಲ್ಲಿ ಹಮಾಸ್ 105 ಒತ್ತೆಯಾಳುಗಳನ್ನು ಬಿಡುಗಡೆ ಮಾಡಿತ್ತು. ಇಸ್ರೇಲ್ 200 ಪ್ಯಾಲೇಸ್ತೇನಿ ಕೈದಿಗಳನ್ನು ಬಿಡುಗಡೆ ಮಾಡಿತ್ತು. ಇದನ್ನೂ ಓದಿ: ಆಕ್ಸಿಡೆಂಟ್ ಆಗಿ ಕಟ್ ಆದ ತಲೆ ಮೂರೂವರೆ ಗಂಟೆ ಶೋಧದ ಬಳಿಕ ಸಿಕ್ತು..!

  • ತಾಲಿಬಾನ್ ಮೇಲೆ ಪಾಕಿಸ್ತಾನ ಏರ್‌ಸ್ಟ್ರೈಕ್ – 30 ಮಂದಿ ಸಾವು

    ತಾಲಿಬಾನ್ ಮೇಲೆ ಪಾಕಿಸ್ತಾನ ಏರ್‌ಸ್ಟ್ರೈಕ್ – 30 ಮಂದಿ ಸಾವು

    ಕಾಬೂಲ್: ಅಫ್ಘಾನಿಸ್ತಾನದ ಖೋಸ್ಟ್ ಪ್ರಾಂತ್ಯದ ಮೇಲೆ ಪಾಕಿಸ್ತಾನಿ ವಿಮಾನಗಳು ವೈಮಾನಿಕ ದಾಳಿಯನ್ನು ನಡೆಸಿವೆ. ದಾಳಿಯಲ್ಲಿ ಮಹಿಳೆಯರು ಮತ್ತು ಮಕ್ಕಳು ಸೇರಿದಂತೆ ಕನಿಷ್ಠ ೩೦ ಜನರು ಸಾವನ್ನಪ್ಪಿದ್ದಾರೆ ಎಂದು ವರದಿಯಾಗಿದೆ.

    ಪಾಕಿಸ್ತಾನಿ ವಿಮಾನಗಳು ಖೋಸ್ಟ್ ಪ್ರಾಂತ್ಯದ ಸ್ಪರ್ರಾ ಜಿಲ್ಲೆಯ ಪ್ರದೇಶಗಳಾದ ಮಿರ್ಪರ್, ಮಾಂಡೆ, ಶೈದಿ ಮತ್ತು ಕೈ ಗ್ರಾಮಗಳನ್ನು ಗುರಿಯಾಗಿಸಿಕೊಂಡು ದಾಳಿ ನಡೆಸಿವೆ ಎಂದು ತಾಲಿಬಾನ್ ಪೊಲೀಸ್ ಮುಖ್ಯಸ್ಥರ ವಕ್ತಾರು ತಿಳಿಸಿದ್ದಾರೆ. ಇದನ್ನೂ ಓದಿ: ಈ ಕಾಂಗ್ರೆಸ್‍ನವರು ದರಿದ್ರ ನನ್ಮಕ್ಕಳು, ಅವರ ಜೊತೆ ಹೋಗಬಾರದಿತ್ತು: ನಂಜೇಗೌಡ

    ಶುಕ್ರವಾರ ಗೋರ್ಬ್ಜ್ ಜಿಲ್ಲೆಯ ಮಾಸ್ಟರ್ಬೆಲ್ ಪ್ರದೇಶದಲ್ಲಿ ಪಾಕಿಸ್ತಾನ ಮತ್ತು ತಾಲಿಬಾನ್ ಪಡೆಗಳ ಮಧ್ಯೆ ಘರ್ಷಣೆ ನಡೆದಿದೆ. ಮಾಧ್ಯಮ ವರದಿಗಳು ಮತ್ತು ಹಲವಾರು ಪ್ರತ್ಯಕ್ಷದರ್ಶಿಗಳ ಸಾಕ್ಷ್ಯಗಳು ಶುಕ್ರವಾರ ರಾತ್ರಿ ಅಫ್ಘಾನಿಸ್ತಾನದ ಪೂರ್ವ ಕುನಾರ್ ಮತ್ತು ಆಗ್ನೇಯ ಖೋಸ್ಟ್ ಪ್ರಾಂತ್ಯಗಳ ಎರಡು ಪ್ರದೇಶಗಳಲ್ಲಿ ಪಾಕಿಸ್ತಾನಿ ಪಡೆಗಳು ವೈಮಾನಿಕ ದಾಳಿ ನಡೆಸಿವೆ ಎಂದು ತಿಳಿಸಿವೆ. ಇದನ್ನೂ ಓದಿ: ಪಾಲಕ್ಕಾಡ್‍ನಲ್ಲಿ RSS ಮುಖಂಡ ಹತ್ಯೆ

    ಪಾಕಿಸ್ತಾನ ಸರ್ಕಾರ ಮತ್ತು ಅಫ್ಘಾನಿಸ್ತಾನದ ವಿದೇಶಾಂಗ ಸಚಿವಾಲಯ ಇದುವರೆಗೆ ಈ ಬಗ್ಗೆ ಯಾವುದೇ ಪ್ರತಿಕ್ರಿಯೆ ನೀಡಿಲ್ಲ.

  • ಉಕ್ರೇನ್‌ ಏರ್‌ಪೋರ್ಟ್‌ ಮೇಲೆ ರಷ್ಯಾ ವೈಮಾನಿಕ ಬಾಂಬ್‌ ದಾಳಿ- 9 ಮಂದಿ ಬಲಿ

    ಉಕ್ರೇನ್‌ ಏರ್‌ಪೋರ್ಟ್‌ ಮೇಲೆ ರಷ್ಯಾ ವೈಮಾನಿಕ ಬಾಂಬ್‌ ದಾಳಿ- 9 ಮಂದಿ ಬಲಿ

    ಕೀವ್: ಉಕ್ರೇನ್‌ನ ವಿನ್ನಿಟ್ಸಿಯಾ ವಿಮಾನ ನಿಲ್ದಾಣದ ಮೇಲೆ ರಷ್ಯಾ ನಡೆಸಿದ ವೈಮಾನಿಕ ಬಾಂಬ್‌ ದಾಳಿಗೆ 9 ಮಂದಿ ಬಲಿಯಾಗಿದ್ದಾರೆ.

    ದಾಳಿಯಲ್ಲಿ ಅನೇಕರು ಗಂಭೀರ ಗಾಯಗೊಂಡಿದ್ದಾರೆ. ಉಕ್ರೇನಿಯನ್‌ ಸಿಬ್ಬಂದಿ ರಕ್ಷಣಾ ಕಾರ್ಯಾಚರಣೆ ನಡೆಸಿ 15 ಮಂದಿಯನ್ನು ರಕ್ಷಿಸಿದ್ದಾರೆ. ಮೃತಪಟ್ಟವರಲ್ಲಿ ಐವರು ನಾಯಕರು ಹಾಗೂ ನಾಲ್ವರು ಯೋಧರಾಗಿದ್ದಾರೆ. ಇದನ್ನೂ ಓದಿ: ಜಾಗತಿಕ ರಾಷ್ಟ್ರಗಳ ನಿರ್ಬಂಧಕ್ಕೆ ರಷ್ಯಾ ಸೆಡ್ಡು- ಇಂಟರ್‌ನೆಟ್‌ ಸ್ವಾವಲಂಬನೆಯತ್ತ ಹೆಜ್ಜೆ

    ದಾಳಿ ಕುರಿತು ಮಾತನಾಡಿರುವ ಉಕ್ರೇನ್‌ ಅಧ್ಯಕ್ಷ ವೊಲೊಡಿಮಿರ್‌ ಝೆಲೆನ್‌ಸ್ಕಿ, ಉಕ್ರೇನ್‌ ಮೇಲೆ ಹಾರಾಟ ನಿಷೇಧ ವಲಯವನ್ನು ರೂಪಿಸಿ ಎಂದು ನಾನು ಐರೋಪ್ಯ ರಾಷ್ಟ್ರಗಳಲ್ಲಿ ಮತ್ತೆ ಕೇಳುತ್ತಿದ್ದೇನೆ. ರಷ್ಯಾದ ಕ್ಷಿಪಣಿಗಳ ದಾಳಿ ಮಾಡದಂತೆ ಹಾರಾಟ ನಿಷೇಧ ವಲಯ ರೂಪಿಸಿ ಎಂದು ಒತ್ತಾಯಿಸಿದ್ದಾರೆ.

    Vladimir Putin

    ಐರೋಪ್ಯ ಒಕ್ಕೂಟದ ಅಧ್ಯಕ್ಷ ಚಾರ್ಲ್ಸ್ ಮೈಕೆಲ್ ಅವರು, ಉಕ್ರೇನ್ ಮೇಲೆ ಹಾರಾಟ ನಿಷೇಧ ವಲಯ ರೂಪಿಸಿದರೆ ವಿಶ್ವಯುದ್ಧವನ್ನು ಹುಟ್ಟುಹಾಕಿದಂತಾಗುತ್ತದೆ ಎಂದು ಉಕ್ರೇನ್‌ ಮನವಿಯನ್ನು ತಿರಸ್ಕರಿಸಿತ್ತು. ಇದಕ್ಕೆ ಉಕ್ರೇನ್‌ ಅಧ್ಯಕ್ಷ ಆಕ್ರೋಶ ವ್ಯಕ್ತಪಡಿಸಿದ್ದರು. ಇದನ್ನೂ ಓದಿ: ರಷ್ಯಾ, ಉಕ್ರೇನ್ ಯುದ್ಧ – 14 ವರ್ಷದ ಬಳಿಕ ಕಚ್ಚಾತೈಲ ಬೆಲೆ ಭಾರೀ ಏರಿಕೆ

  • ಪುಲ್ವಾಮಾ ದಾಳಿಗೆ ಪ್ರತೀಕಾರ – ಏರ್‌ಸ್ಟ್ರೈಕ್‌ಗೆ ಒಂದು ವರ್ಷ

    ಪುಲ್ವಾಮಾ ದಾಳಿಗೆ ಪ್ರತೀಕಾರ – ಏರ್‌ಸ್ಟ್ರೈಕ್‌ಗೆ ಒಂದು ವರ್ಷ

    ನವದೆಹಲಿ: ಪಾಕಿಸ್ತಾನದ ಬಾಲಕೋಟ್‍ನಲ್ಲಿ ಏರ್‌ಸ್ಟ್ರೈಕ್‌ ನಡೆಸಿ ಇಂದಿಗೆ ಒಂದು ವರ್ಷ ಕಳೆದಿದೆ. ಕಳೆದ ವರ್ಷ ಜಮ್ಮು-ಕಾಶ್ಮೀರದ ಪುಲ್ವಾಮಾದಲ್ಲಿ ಸಿಆರ್‌ಪಿಎಫ್‌ ಯೋಧರ ವಾಹನದ ಮೇಲೆ ಪಾಕ್ ಉಗ್ರ ಸಂಘಟನೆ ಜೈಷ್-ಎ-ಮೊಹಮ್ಮದ್ ನಡೆಸಿದ್ದ ದಾಳಿಗೆ ಪ್ರತೀಕಾರವಾಗಿ ಬಾಲಾಕೋಟ್ ಉಗ್ರ ಶಿಬಿರದ ಮೇಲೆ ಭಾರತೀಯ ವಾಯುಪಡೆ ದಾಳಿ ನಡೆಸಿತ್ತು. ಇದನ್ನೂ ಓದಿ: ಬಾಲಾಕೋಟ್ ಏರ್ ಸ್ಟ್ರೈಕ್‍ನಲ್ಲಿ ನೂರಕ್ಕೂ ಅಧಿಕ ಉಗ್ರರು ಬಲಿ – ಮೃತದೇಹವನ್ನು ನದಿಗೆ ಎಸೆದಿದ್ದ ಪಾಕ್

    ಪುಲ್ವಾಮಾ ದಾಳಿ ನಡೆದ 12ನೇ ದಿನಕ್ಕೆ ಪಾಕ್‍ಗೆ ತಕ್ಕ ಉತ್ತರ ನೀಡಲು ನಿರ್ಧರಿಸಿದ ಭಾರತ ಕಳೆದ ವರ್ಷ ಇದೇ ದಿನ ನಸುಕಿನ ಜಾವ, ಬಾಲಾಕೋಟ್‍ನಲ್ಲಿದ್ದ ಜೈಷ್ ಉಗ್ರರ ತರಬೇತಿ ಕೇಂದ್ರಗಳ ಮೇಲೆ ವೈಮಾನಿಕ ದಾಳಿ ನಡೆಸಿತ್ತು. ಗಡಿ ನಿಯಂತ್ರಣ ರೇಖೆ ದಾಟಿ ಸುಮಾರು 85 ಕಿ.ಮೀ. ಒಳನುಗ್ಗಿದ್ದ 12 ಮಿರಾಜ್-2000 ಯುದ್ಧ ವಿಮಾನಗಳು ಜೈಷ್‍ನ ತರಬೇತಿ ಕೇಂದ್ರಗಳ ಮೇಲೆ ಅತ್ಯಾಧುನಿಕ ಬಾಂಬ್‍ಗಳನ್ನು ಹಾಕಿ ಸಂಪೂರ್ಣ ನಾಶ ಮಾಡಿದ್ದವು. ನಸುಕಿನ ಜಾವ 3.30ರಿಂದ 3.55ರ ಅವಧಿಯಲ್ಲಿ ನಡೆದ ಈ ದಾಳಿಯಲ್ಲಿ ಸುಮಾರು 300 ಉಗ್ರರನ್ನು ಹೊಡೆದು ಹಾಕಲಾಗಿತ್ತು. ಆದರೆ ಪಾಕಿಸ್ತಾನ ತನ್ನ ಉಗ್ರ ಪೋಷಣೆಯನ್ನು ಮುಚ್ಚಿಕೊಳ್ಳಲು ದಾಳಿಯನ್ನು ಅಲ್ಲಗಳೆದಿತ್ತು. ಯಾವುದೇ ದಾಳಿಗಳು ನಡೆದಿಲ್ಲ ಎಂದು ಹೇಳಿಕೊಂಡಿತ್ತು. ಇದಾದ ಬಳಿಕ ಪಾಕಿಸ್ತಾನ ಮತ್ತು ಭಾರತದ ನಡುವೆ ಕೆಲ ದಿನಗಳ ಕಾಲ ಯುದ್ಧದ ಕಾರ್ಮೋಡ ನಿರ್ಮಾಣವಾಗಿತ್ತು. ಇದನ್ನೂ ಓದಿ: ಭಾರತಕ್ಕಿಂದು ಕರಾಳ ದಿನ – ಪುಲ್ವಾಮಾ ದಾಳಿಗೆ 1 ವರ್ಷ

    ಬಾಲಕೋಟ್ ದಾಳಿಗೆ ಪ್ರತಿಯಾಗಿ ಪಾಕ್ ತನ್ನ ಮೂರು ಎಫ್-16 ಯುದ್ಧ ವಿಮಾನಗಳ ಮೂಲಕ ಭಾರತ ಮೇಲೆ ದಾಳಿ ನಡೆಸಲು ಮುಂದಾಗಿತ್ತು. ಈ ವೇಳೆ ಪಾಕ್‍ನ ವಿಮಾನಗಳು ಭಾರತ ಗಡಿದಾಟಿ ಒಳಗೆ ಬಂದಿದ್ದವು. ತಕ್ಷಣ ಭಾರತದ ಕಡೆಯಿಂದ ಮಿಗ್-21 ವಿಮಾನಗಳು ಪಾಕ್ ವಿಮಾನಗಳನ್ನು ಹಿಮ್ಮೆಟ್ಟಿಸಲು ಮುಗಿಬಿದ್ದವು. ಈ ವೇಳೆ ಮಿಗ್-21 ವಿಮಾನದಲ್ಲಿದ್ದ ವಿಂಗ್ ಕಮಾಂಡರ್ ಅಭಿನಂದನ್, ಪಾಕ್‍ನ ಎಫ್-16 ಯುದ್ಧ ವಿಮಾನವನ್ನು ಹೊಡೆದುರುಳಿಸಿದ್ದರು. ಈ ವೇಳೆ ಅವರ ವಿಮಾನ ಅಪಘಾಕ್ಕೀಡಾಗಿತ್ತು. ನಂತರ ಪಾಕ್ ಸೇನೆ ಅವರನ್ನು ವಶಕ್ಕೆ ಪಡೆದಿತ್ತು. ಭಾರತ ಹಾಗೂ ಜಾಗತಿಕ ಮಟ್ಟದ ಒತ್ತಡಕ್ಕೆ ಮಣಿದ ಪಾಕ್ ಅಭಿನಂದನ್ ಅವರನ್ನು ಭಾರತಕ್ಕೆ ಹಸ್ತಾಂತರಿಸಿತು. ಇದನ್ನೂ ಓದಿ: ರಾತ್ರಿ ವಿಮಾನಗಳ ಶಬ್ಧ ಹೆಚ್ಚಿತ್ತು, ದಿಢೀರ್ ಒಂದು ಶಬ್ಧ ಬಂತು – ಬಾಲಕೋಟ್ ನಿವಾಸಿಗಳ ಪ್ರತಿಕ್ರಿಯೆ