Tag: Aishwarya Shivakumar

  • ಡಿ.ಕೆ.ಶಿವಕುಮಾರ್ ಪುತ್ರಿಗೆ ಕೂಡಿಬಂದ ಕಂಕಣ ಭಾಗ್ಯ

    ಡಿ.ಕೆ.ಶಿವಕುಮಾರ್ ಪುತ್ರಿಗೆ ಕೂಡಿಬಂದ ಕಂಕಣ ಭಾಗ್ಯ

    -ರಾಜಕೀಯ ಗುರುವಿನ ಕುಟುಂಬದ ಜೊತೆ ಸಂಬಂಧ

    ಬೆಂಗಳೂರು: ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಹಿರಿಯ ಪುತ್ರಿ ಐಶ್ವರ್ಯಾರಿಗೆ ಕಂಕಣ ಭಾಗ್ಯ ಕೂಡಿ ಬಂದಿದೆ.

    ಡಿ.ಕೆ.ಶಿವಕುಮಾರ್ ತಮ್ಮ ರಾಜಕೀಯ ಗುರು ಮಾಜಿ ಸಿಎಂ ಎಸ್.ಎಂ.ಕೃಷ್ಣ ಕುಟುಂಬದ ಜೊತೆಯೇ ಸಂಬಂಧ ಬೆಳಸಲಿದ್ದಾರೆ. ಎಸ್.ಎಂ.ಕೃಷ್ಣ ಅವರ ಮೊಮ್ಮಗ, ಉದ್ಯಮಿ ದಿವಂಗತ ಸಿದ್ದಾರ್ಥ್ ಹಿರಿಯ ಪುತ್ರ ಅಮರ್ಥ್ಯ ಸುಬ್ರಮಣ್ಯ ಹೆಗ್ಡೆ ಜೊತೆಗೆ ಡಿ.ಕೆ.ಶಿವಕುಮಾರ್ ಹಿರಿಯ ಪುತ್ರಿ ಐಶ್ವರ್ಯ ಮದುವೆ ಮಾತುಕತೆ ನಡೆದಿದೆ. ಕಳೆದ ಮೂರು ತಿಂಗಳಿನಿಂದ ಈ ಸಂಬಂಧ ಮಾತುಕತೆ ಹಂತ ಹಂತವಾಗಿ ನಡೆದಿತ್ತು. ಈಗ ಅಂತಿಮ ಮಾತುಕತೆ ನಡೆದಿದ್ದು ವಧು ವರರ ಮನೆಯವರು ಪರಸ್ಪರರ ಮನೆಗೆ ಹೋಗಿ ಬರುವ ಶಾಸ್ತ್ರವನ್ನ ಮುಗಿಸಿದ್ದಾರೆ.

    ಬಹುತೇಕ ಮಾತುಕತೆ ಮುಗಿದಿದ್ದು ಮುಂದಿನ ವರ್ಷ ಮದುವೆ ದಿನಾಂಕ ನಿಗದಿಯಾಗುವ ಸಾಧ್ಯತೆಗಳಿವೆ. ಶೀಘ್ರದಲ್ಲಿಯೇ ನಿಶ್ಚಿತಾರ್ಥ ಸಹ ನಡೆಯಲಿದೆ ಎಂದು ಹೇಳಲಾಗಿದೆ. ಸಿದ್ಧಾರ್ಥ ಹೆಗ್ಡೆ ಪುತ್ರ ಅಮರ್ಥ್ಯ ಸುಬ್ರಮಣ್ಯ ಹೆಗ್ಡೆ ಯುವ ಉದ್ಯಮಿಯಾಗಿ ಗುರುತಿಸಿಕೊಂಡಿದ್ದಾರೆ. ನಿಶ್ಚಿತಾರ್ಥ ದಿನಾಂಕ ಹಾಗೂ ಮದುವೆ ದಿನಾಂಕವಷ್ಟೆ ಅಧಿಕೃತವಾಗಬೇಕಿದೆ.

    ಮದುವೆ ಸ್ವರ್ಗದಲ್ಲಿ ನಿಶ್ಚಯವಾಗಿರುತ್ತದೆ. ಎಲ್ಲ ದೇವರ ಇಚ್ಛೆ. ಸಿದ್ಧಾರ್ಥ್ ಅವರು ಸಾವನ್ನಪ್ಪಿ ಇನ್ನು ಒಂದು ವರ್ಷ ಕಳೆದಿಲ್ಲ. ಸಿದ್ಧಾಥ್ ಅವರ ಒಂದು ವರ್ಷದ ಕಾರ್ಯಗಳು ನಡೆಯಬೇಕಿದೆ. ಎಲ್ಲ ಕಾರ್ಯಕ್ರಮಗಳು ಮುಗಿದ ಬಳಿಕ ಮದುವೆಯ ಕೆಲಸಗಳು ನಡೆಯಲಿವೆ ಎಂದು ಡಿ.ಕೆ.ಶಿವಕುಮಾರ್ ಹೇಳಿದ್ದಾರೆ.

  • ಡಿಕೆಶಿಗೆ ಹೈ ಬಿಪಿ, ಹೊಟ್ಟೆ ನೋವು-ಆಸ್ಪತ್ರೆಗೆ ದಾಖಲು

    ಡಿಕೆಶಿಗೆ ಹೈ ಬಿಪಿ, ಹೊಟ್ಟೆ ನೋವು-ಆಸ್ಪತ್ರೆಗೆ ದಾಖಲು

    -ಡಿಕೆಶಿ ಪುತ್ರಿಯ ವಿಚಾರಣೆ ಅಂತ್ಯ, ನಾಳೆಯೂ ವಿಚಾರಣೆಗೆ ಹಾಜರಾಗುವಂತೆ ಸೂಚನೆ

    ನವದೆಹಲಿ: ಇಂದು ಒಂದು ಕಡೆ ಮಗಳ ವಿಚಾರಣೆ ನಡೆಯುತ್ತಿದ್ದರೆ, ಮಗದೊಂದು ಕಡೆ ಡಿಕೆ ಶಿವಕುಮಾರ್ ವಿಚಾರಣೆ ಕೂಡ ನಡೆದಿತ್ತು. ವಿಚಾರಣೆ ವೇಳೆ ಹೈಬಿಪಿ ಹಾಗೂ ಹೊಟ್ಟೆ ನೋವು ಕಾಣಿಸಿಕೊಂಡಿದ್ದರಿಂದ ಡಿಕೆಶಿ ಅವರನ್ನು ಹತ್ತಿರದ ಆರ್‍ಎಂಎಲ್ ಆಸ್ಪತ್ರೆಗೆ ಕರೆದುಕೊಂಡು ಹೋಗಲಾಗಿತ್ತು. ಸದ್ಯ ವೈದ್ಯರ ಸಲಹೆ ಮೇರೆಗೆ ಡಿ.ಕೆ.ಶಿವಕುಮಾರ್ ವಿಶ್ರಾಂತಿ ಪಡೆದುಕೊಳ್ಳುತ್ತಿದ್ದಾರೆ. ಶುಕ್ರವಾರ ಇಡಿ ಕಸ್ಟಡಿ ಅವಧಿ ಮುಗಿಯಲಿದ್ದು, ನಾಳೆ ಮಧ್ಯಾಹ್ನ ಕೋರ್ಟ್ ಮುಂದೆ ಹಾಜರು ಪಡಿಸಲಾಗುತ್ತಿದೆ. ವಿಚಾರಣೆಗಾಗಿ ಮತ್ತೆ 4 ದಿನ ಕಸ್ಟಡಿಗೆ ಒಪ್ಪಿಸುವಂತೆ ಇಡಿ ಕೋರುವ ಸಾಧ್ಯತೆ ಇದೆ.

    ಸಮನ್ಸ್ ನೀಡಿದ ಸಂದರ್ಭದಲ್ಲಿ ಡಿ.ಕೆ.ಶಿವಕುಮಾರ್ ನಾಲ್ಕು ದಿನ ವಿಚಾರಣೆಗೆ ಹಾಜರಾಗಿದ್ದರು. ಅಧಿಕಾರಿಗಳು ವಶಕ್ಕೆ ಪಡೆದ ಮೇಲೆ 10 ದಿನ ವಿಚಾರಣೆ ನಡೆಸಿದ್ದಾರೆ. ಒಟ್ಟು 14 ದಿನ ಡಿ.ಕೆ.ಶಿವಕುಮಾರ್ ವಿಚಾರಣೆಗೆ ಹಾಜರಾಗಿದ್ದು, ಜಾಮೀನು ನೀಡಬೇಕೆಂದು ಡಿಕೆಶಿ ಪರ ವಕೀಲರು ನಾಳೆ ನ್ಯಾಯಾಲಯದ ಮುಂದೆ ಮನವಿ ಮಾಡುವ ಸಾಧ್ಯತೆಗಳಿವೆ. ಇತ್ತ ಇಡಿ ಪರ ವಕೀಲರು ಡಿ.ಕೆ.ಶಿವಕುಮಾರ್ ವಿಚಾರಣೆಗೆ ಸ್ಪಂದಿಸುತ್ತಿಲ್ಲ. ಪ್ರಕರಣಕ್ಕೆ ಸಂಬಂಧಿಸಿದಂತೆ ದಾಖಲೆಗಳನ್ನು ಕಲೆ ಹಾಕಬೇಕಿದೆ. ಹೆಚ್ಚುವರಿ ನಾಲ್ಕು ದಿನಾ ಕಸ್ಟಡಿ ವಿಸ್ತರಿವಂತೆ ಇಡಿ ಮನವಿ ಮಾಡುವ ಸಾಧ್ಯತೆಗಳಿವೆ.

    ಡಿಕೆ ಶಿವಕುಮಾರ್ ಪುತ್ರಿ ಐಶ್ವರ್ಯ ಇವತ್ತು ಇ.ಡಿ. ಮುಂದೆ ಹಾಜರಾಗಿದ್ದರು. ದೆಹಲಿಯ ಲೋಕಭವನದಲ್ಲಿರೋ ಇಡಿ ಕಚೇರಿಗೆ ಬೆಳಗ್ಗೆ 11 ಗಂಟೆಗೆ ವಿಚಾರಣೆಗೆ ಹಾಜರಾದ ಐಶ್ವರ್ಯಗೆ ಇಡಿ ಅಧಿಕಾರಿಗಳು ಪ್ರಶ್ನೆ ಮೇಲೆ ಪ್ರಶ್ನೆ ಹಾಕಿದ್ದಾರೆ. ಐಶ್ವರ್ಯ ಹೆಸರಲ್ಲಿರುವ ಆಸ್ತಿ ಬಗ್ಗೆ ಮಾಹಿತಿ ಪಡೆದಿದ್ದಾರೆ. ಇಡಿ ಅಧಿಕಾರಿಗಳ ಪ್ರಶ್ನೆಯನ್ನು ಡಿಕೆಶಿ ಪುತ್ರಿ ಸಮರ್ಥವಾಗಿಯೇ ಎದುರಿಸಿದ್ದಾರೆ. ವಿಚಾರಣೆಗೆ ಮುನ್ನ ತಂದೆ ಡಿಕೆಶಿಯನ್ನು ಐಶ್ವರ್ಯ ಭೇಟಿಯಾಗಿದ್ದಾಗಿ ತಿಳಿದು ಬಂದಿದೆ.

    ಯಾವುದೇ ಕಾರಣಕ್ಕೂ ಧೃತಿಗೇಡಬೇಡ, ಧೈರ್ಯವಾಗಿ ವಿಚಾರಣೆ ಎದುರಿಸು ಅಂತ ಡಿಕೆಶಿ ಹೇಳಿದ್ದರು ಎನ್ನಲಾಗಿದೆ. ವಿಚಾರಣೆಗೆ ಹಾಜರಾದ ಐಶ್ವರ್ಯಗೆ ಸಂಬಂಧಿ ಹಾಗೂ ಕುಣಿಗಲ್ ಶಾಸಕ ರಂಗನಾಥ್ ಪತ್ನಿ ಸಾಥ್ ನೀಡಿದ್ದರು. ಇಡಿ ಅಧಿಕಾರಿಗಳು ವಿಚಾರಣೆ ನಡೆಸುವಾಗ ಪುತ್ರಿ ಐಶ್ವರ್ಯ ತಂದೆಯ ಫಾರ್ಮುಲಾ ಬಳಸಿ ಖಡಕ್ ಉತ್ತರಗಳನ್ನು ನೀಡಿದ್ದಾರೆ ಎಂಬ ಮಾಹಿತಿಗಳು ಲಭ್ಯವಾಗಿದೆ.

     

    ಇಡಿ ಅಧಿಕಾರಿಗಳ ಪ್ರಶ್ನೆಗೆ ಉತ್ತರಿಸಿರುವ ಐಶ್ವರ್ಯ, ನನಗೆ ಗೊತ್ತಿರುವ ಮತ್ತು ನೆನಪಿನಲ್ಲಿರುವ ವಿಷಯಗಳನ್ನು ಮಾತ್ರ ಹೇಳುತ್ತೇನೆ. ನನಗೆ ತಿಳಿಯದಿರದ ಪ್ರಶ್ನೆಗಳಿಗೆ ದಾಖಲೆ ನೋಡಿ ಮತ್ತು ಚಾರ್ಟೆಡ್ ಅಕೌಂಟಂಟ್ ಬಳಿ ಕೇಳಿ ಹೇಳುತ್ತೇನೆ. ನನಗೆ ಗೊತ್ತಿಲ್ಲದೇ ಯಾವ ವ್ಯವಹಾರಗಳು ನಡೆದಿಲ್ಲ. ಬ್ಯಾಂಕ್ ವ್ಯವಹಾರಗಳ ಬಗ್ಗೆ ಮಾಹಿತಿ ಇದೆ. ನನ್ನ ಎಲ್ಲ ವ್ಯವಹಾರಗಳಿಗೆ ತಂದೆಯ ಆರ್ಥಿಕ ನೆರವು ಇದೆ. ಎಲ್ಲ ವ್ಯವಹಾರಗಳನ್ನು ಘೋಷಿಸಿಕೊಂಡು ತೆರಿಗೆಯನ್ನು ಪಾವತಿಸಿದ್ದೇನೆ. ತಂದೆ ಜೊತೆ ನಾನು ವ್ಯವಹಾರಗಳನ್ನು ನಿರ್ವಹಿಸುತ್ತಿದ್ದೇನೆ ಎಂದು ಐಶ್ವರ್ಯ ದಿಟ್ಟ ಉತ್ತರ ನೀಡಿದ್ದಾರೆ ಎಂದು ಮೂಲಗಳು ತಿಳಿಸಿವೆ.

  • ಇಡಿ ಪ್ರಶ್ನೆಗೆ ಐಶ್ವರ್ಯ ಖಡಕ್ ಉತ್ತರ-ವಿಚಾರಣೆಯಲ್ಲಿ ತಂದೆಯ ಫಾರ್ಮುಲಾ ಬಳಸಿದ ಪುತ್ರಿ

    ಇಡಿ ಪ್ರಶ್ನೆಗೆ ಐಶ್ವರ್ಯ ಖಡಕ್ ಉತ್ತರ-ವಿಚಾರಣೆಯಲ್ಲಿ ತಂದೆಯ ಫಾರ್ಮುಲಾ ಬಳಸಿದ ಪುತ್ರಿ

    ನವದೆಹಲಿ: ಮಾಜಿ ಸಚಿವ ಡಿ.ಕೆ.ಶಿವಕುಮಾರ್ ಪುತ್ರಿ ಐಶ್ವರ್ಯ ಇಂದು ದೆಹಲಿಯ ಇಡಿ ಅಧಿಕಾರಿಗಳ ಮುಂದೆ ವಿಚಾರಣೆಗೆ ಹಾಜರಾಗಿದ್ದಾರೆ. ಅಧಿಕಾರಿಗಳ ಪ್ರಶ್ನೆಗಳಿಗೆ ತಂದೆಯ ಫಾರ್ಮುಲಾ ಬಳಸಿರುವ ಐಶ್ವರ್ಯ ಶಿವಕುಮಾರ್ ಖಡಕ್ ಉತ್ತರ ನೀಡಿದ್ದಾರೆ ಎಂಬ ಮಾಹಿತಿಗಳು ಪಬ್ಲಿಕ್ ಟಿವಿಗೆ ಲಭ್ಯವಾಗಿವೆ.

    ಇಡಿ ಅಧಿಕಾರಿಗಳ ಪ್ರಶ್ನೆಗೆ ಉತ್ತರಿಸಿರುವ ಐಶ್ವರ್ಯ, ನನಗೆ ಗೊತ್ತಿರುವ ಮತ್ತು ನೆನಪಿನಲ್ಲಿರುವ ವಿಷಯಗಳನ್ನು ಮಾತ್ರ ಹೇಳುತ್ತೇನೆ. ನನಗೆ ತಿಳಿಯದಿರದ ಪ್ರಶ್ನೆಗಳಿಗೆ ದಾಖಲೆ ನೋಡಿ ಮತ್ತು ಚಾರ್ಟೆಡ್ ಅಕೌಂಟಂಟ್ ಬಳಿ ಕೇಳಿ ಹೇಳುತ್ತೇನೆ. ನನಗೆ ಗೊತ್ತಿಲ್ಲದೇ ಯಾವ ವ್ಯವಹಾರಗಳು ನಡೆದಿಲ್ಲ. ಬ್ಯಾಂಕ್ ವ್ಯವಹಾರಗಳ ಬಗ್ಗೆ ಮಾಹಿತಿ ಇದೆ ಎಂದು ಹೇಳಿದ್ದಾರೆ ಎಂದು ಮೂಲಗಳು ತಿಳಿಸಿವೆ.

    ನನ್ನ ಎಲ್ಲ ವ್ಯವಹಾರಗಳಿಗೆ ತಂದೆಯ ಆರ್ಥಿಕ ನೆರವು ಇದೆ. ಎಲ್ಲ ವ್ಯವಹಾರಗಳನ್ನು ಘೋಷಿಸಿಕೊಂಡು ತೆರಿಗೆಯನ್ನು ಪಾವತಿಸಿದ್ದೇನೆ. ತಂದೆ ಜೊತೆ ನಾನು ವ್ಯವಹಾರಗಳನ್ನು ನಿರ್ವ ಹಿಸುತ್ತಿದ್ದೇನೆ ಎಂದು ಐಶ್ವರ್ಯ ದಿಟ್ಟ ಉತ್ತರ ನೀಡಿದ್ದಾರೆ ಎಂದು ತಿಳಿದು ಬಂದಿದೆ.

    ಇಂದು ಬೆಳಗ್ಗೆ ಸುಮಾರು 11 ಗಂಟೆಗೆ ವಿಚಾರಣೆಗೆ ಹಾಜರಾದಾಗ ತಂದೆ ಶಿವಕುಮಾರ್ ಅವರನ್ನು ಇಡಿ ಕಚೇರಿಯಲ್ಲಿ ಭೇಟಿಯಾಗಿದ್ದಾರೆ. ಈ ವೇಳೆ ಡಿಕೆಶಿ ಎಲ್ಲ ಪ್ರಶ್ನೆಗಳಿಗೂ ಧೈರ್ಯವಾಗಿ ಉತ್ತರಿಸುವಂತೆ ಪುತ್ರಿಗೆ ಸಲಹೆ ನೀಡಿದ್ದಾರೆ ಎನ್ನಲಾಗಿದೆ.

  • ಐಶ್ವರ್ಯಗೆ ಸಮನ್ಸ್ ನೀಡಿರುವ ಹಿಂದೆ ಕೇಂದ್ರದ ಅಧಿಕಾರಿಗಳಿದ್ದಾರೋ, ಬೇರೆಯವರಿದ್ದಾರೋ ಗೊತ್ತಿಲ್ಲ: ಎಚ್ಡಿಕೆ

    ಐಶ್ವರ್ಯಗೆ ಸಮನ್ಸ್ ನೀಡಿರುವ ಹಿಂದೆ ಕೇಂದ್ರದ ಅಧಿಕಾರಿಗಳಿದ್ದಾರೋ, ಬೇರೆಯವರಿದ್ದಾರೋ ಗೊತ್ತಿಲ್ಲ: ಎಚ್ಡಿಕೆ

    ರಾಮನಗರ: ಇಡಿ ಕಸ್ಟಡಿಯಲ್ಲಿರುವ ಮಾಜಿ ಸಚಿವ ಡಿಕೆ ಶಿವಕುಮಾರ್ ಅವರ ಪುತ್ರಿ ಐಶ್ವರ್ಯಗೆ ಇಡಿ ಸಮನ್ಸ್ ನೀಡಿರುವ ವಿಚಾರದಲ್ಲಿ ಇಷ್ಟೊಂದು ತರಾತುರಿ ಅಗತ್ಯ ಇರಲಿಲ್ಲ. ಹಲವರು ದೊಡ್ಡ ಮಟ್ಟದಲ್ಲಿ ಕಾನೂನುಬಾಹಿರ ಚಟುವಟಿಕೆ ಮಾಡಿರುವ ಬಗ್ಗೆ ಗಮನವಿಲ್ಲ. ಆದರೆ ಇದ್ಯಾವುದೋ ಕೇಸ್ ಇಟ್ಕೊಂಡು ಅವರ ಕುಟುಂಬದ ವಿರುದ್ಧ ಹೊರಟ್ಟಿದ್ದಾರೆ ಎಂದು ಮಾಜಿ ಸಿಎಂ ಎಚ್ ಡಿ ಕುಮಾರಸ್ವಾಮಿ ಆರೋಪ ಮಾಡಿದ್ದಾರೆ.

    ಇಂದು ಚನ್ನಪಟ್ಟಣದಲ್ಲಿ ಪ್ರಗತಿ ಪರಿಶೀಲನೆ ಸಭೆ ನಡೆಸಿ ಮಾತನಾಡುದ ಎಚ್‍ಡಿಕೆ ಅವರು, ಡಿಕೆಶಿ ಪುತ್ರಿಗೆ ಸಮನ್ಸ್ ನೀಡಿದ್ದರಲ್ಲಿ ಕೇಂದ್ರದ ಅಧಿಕಾರಿಗಳಿದ್ದಾರೋ, ಬೇರೆಯವರಿದ್ದಾರೋ ಗೊತ್ತಿಲ್ಲ ಎಂದರು.

    ಇದೇ ವೇಳೆ ರಾಜ್ಯದಲ್ಲಿ ನೂತನವಾಗಿ ಜಾರಿಯಾಗಿರುವ ಮೋಟಾರ್ ವಾಹನ ಕಾಯ್ದೆ ಅನ್ವಯ ಜನಸಾಮಾನ್ಯರಿಗೆ ಅನುಕೂಲವಾಗುವ ತೀರ್ಮಾನವನ್ನು ಮಾಡಬೇಕು. ಈಗ ನನ್ನ ಕೈಯಲ್ಲಿ ಅಧಿಕಾರವಿಲ್ಲ, ಅಧಿಕಾರದಲ್ಲಿ ಇರುವವರು ಏನು ಮಾಡುತ್ತಾರೆ ನೋಡೋಣ. ಬಿಜೆಪಿಯಲ್ಲಿರುವವರಿಗೆ ಗೊತ್ತು ಗುರಿಯಿಲ್ಲ. ಅವರು ಅಧಿಕಾರ ಮಾಡುತ್ತಿರುವ ವಿಧಾನ ನಿಮಗೆ ಗೊತ್ತಿದೆ. ನಾನು ಈ ಬಗ್ಗೆ ಚರ್ಚೆ ಮಾಡಲ್ಲ, ಜನರಿಗೆ ಈ ಸರ್ಕಾರದ ಪೆಟ್ಟು ಕೆಲವೇ ದಿನಗಳಲ್ಲಿ ಗೊತ್ತಾಗಲಿದೆ ಎಂದರು.

    ಸಿಪಿವೈಗೆ ಪರೋಕ್ಷ ಟಾಂಗ್ : ಪ್ರಗತಿ ಪರಿಶೀಲನ ಸಭೆಯಲ್ಲಿ ಮಾತನಾಡುತ್ತಾ ಕೆಲವರು ಈಗ ಹಣದ ವಸೂಲಿ ದಂಧೆಗೆ ಇಳಿದಿದ್ದಾರೆ. ಯಾವುದೇ ಕಾರಣಕ್ಕೂ ಅಧಿಕಾರಿಗಳು ಅಂತಹವರಿಗೆ ಮಣೆ ಹಾಕಬೇಡಿ ನನಗೆ ಗೊತ್ತಿದೆ. ಈ ಸರ್ಕಾರದ ಆಯಸ್ಸು ಕೆಲವೇ ತಿಂಗಳು ಮಾತ್ರ. ನಿಮ್ಮ ಜೊತೆಗೆ ನಾನಿದ್ದೇನೆ ಎಂದು ಅಧಿಕಾರಿಗಳಿಗೆ ಹೇಳುವ ಮೂಲಕ ಮಾಜಿ ಶಾಸಕ ಸಿ.ಪಿ.ಯೋಗೇಶ್ವರ್‍ಗೆ ಪರೋಕ್ಷವಾಗಿ ಟಾಂಗ್ ನೀಡಿದರು.

    ಪೊಲೀಸ್ ಇಲಾಖೆ ತಮ್ಮ ವ್ಯಾಪ್ತಿಯಲ್ಲಿ ಪ್ರಾಮಾಣಿಕವಾಗಿ ಕೆಲಸ ಮಾಡಲಿ. ಅಕ್ರಮ ಮರಳು ಸಾಗಾಣಿಕೆಗೆ ನಾನೆಂದೂ ಪ್ರೋತ್ಸಾಹ ನೀಡಿಲ್ಲ. ಪೊಲೀಸ್ ಇಲಾಖೆಯನ್ನು ರಾಜಕೀಯವಾಗಿ ದುರ್ಬಳಕೆ ಮಾಡಿಕೊಂಡಿಲ್ಲ. ನಾನು ಜವಾನನಿಂದ ಹಿಡಿದು ಎಲ್ಲರನ್ನೂ ಬಹುವಚನದಿಂದಲೇ ಮಾತನಾಡಿದ್ದೇನೆ. ಅಧಿಕಾರ ಶಾಶ್ವತ ಅಲ್ಲ, ನಾನು ದಬ್ಬಾಳಿಕೆ ನಡೆಸುವುದಿಲ್ಲ. ಕ್ಷೇತ್ರದ ಜನತೆ ಕೆಲಸ ಕಾರ್ಯಗಳಿಗೆ ಯಾವುದೇ ಅಧಿಕಾರಿ ತೊಂದರೆ ಮಾಡಬೇಡಿ ಎಂದು ಎಚ್ಚರಿಸಿದರು.

    ಇದಕ್ಕೂ ಮುನ್ನ ಮಳೂರು ಸಮೀಪದ ನಡೆದ ಶಿಕ್ಷಕರ ದಿನಾಚರಣೆಯಲ್ಲಿ ಅವರು ಭಾಗಿಯಾಗಿ ನಿವೃತ್ತ ಶಿಕ್ಷಕರನ್ನು ಸನ್ಮಾನಿಸಿದರು. ಆ ಬಳಿಕ ಮಾತನಾಡಿ, ಋಣ ಮುಕ್ತ ಕಾಯ್ದೆ ವಿಚಾರದಲ್ಲಿ ಇಂದಿನ ಸರ್ಕಾರ ಕ್ರಮ ಕೈಗೊಳ್ಳಬೇಕು. ಕಾಯ್ದೆ ಜಾರಿಯ ಬಗ್ಗೆ ಜವಾಬ್ದಾರಿಯೂ ಕೂಡ ಇದೆ. ನಾನು ಋಣ ಮುಕ್ತ ಖಾಯ್ದೆ ಜಾರಿಗೆ ತಂದಿದ್ದು, ಯಾರು ಖಾಸಗಿ ವ್ಯಕ್ತಿಗಳಿಂದ ಹಣವನ್ನು ಬಡ್ಡಿಗೆ ಸಾಲ ಪಡೆದು, ಅಸಲಿಗಿಂತ ಬಡ್ಡಿಯನ್ನ ಜಾಸ್ತಿ ಕಟ್ಟಿರುವ ಪ್ರಕರಣಗಳು ನನ್ನ ಗಮನಕ್ಕೆ ಬಂದ ಕಾರಣದಿಂದ ಯೋಜನೆ ಜಾರಿ ಮಾಡಿದೆ. ಬಡವರು ಸಮಸ್ಯೆಯಿಂದ ಬಳಲಬಾರದು ಎಂಬುವುದು ನನ್ನ ಯೋಜನೆಯನ್ನು ಜಾರಿಗೆ ತಂದಿದ್ದೆ ಎಂದು ತಿಳಿಸಿದರು.