Tag: Ajaneesh B.Loknath

  • `ಕಾಂತಾರ’ ಸಕ್ಸಸ್ ನಂತರ ಚಿರಂಜೀವಿ ಅಳಿಯನ ಚಿತ್ರಕ್ಕೆ ಅಜನೀಶ್ ಸಂಗೀತ

    `ಕಾಂತಾರ’ ಸಕ್ಸಸ್ ನಂತರ ಚಿರಂಜೀವಿ ಅಳಿಯನ ಚಿತ್ರಕ್ಕೆ ಅಜನೀಶ್ ಸಂಗೀತ

    ಚಿತ್ರರಂಗದಲ್ಲಿ `ಕಾಂತಾರ’ ಸಿನಿಮಾ ದೊಡ್ಡಮಟ್ಟದಲ್ಲಿ ಯಶಸ್ಸು ಕಂಡಿದೆ. ಸಿನಿಮಾ ಕಥೆ ಮಾತ್ರವಲ್ಲ. ಚಿತ್ರದ ಸಾಂಗ್ಸ್ ಕೂಡ ಸೂಪರ್ ಹಿಟ್ ಆಗಿದೆ. ಈ ಚಿತ್ರಕ್ಕೆ ಸಂಗೀತ ಸಂಯೋಜನೆ ನೀಡಿದ್ದ ಅಜನೀಶ್ ಲೋಕನಾಥ್‌ಗೂ ಭರ್ಜರಿ ಆಫರ್ಸ್‌ ಅರಸಿ ಬರುತ್ತಿದೆ. ಮೆಗಾಸ್ಟಾರ್ ಕುಟುಂಬದ ಸ್ಟಾರ್ ನಟನ ಸಿನಿಮಾಗೆ ಅಜನೀಶ್ ಮ್ಯೂಸಿಕ್ ಕಂಪೋಸ್ ಮಾಡುತ್ತಿದ್ದಾರೆ.

    `ಕಾಂತಾರ’ ಚಿತ್ರದಲ್ಲಿ ಕಥೆಯಷ್ಟೇ ಅಲ್ಲ, ಹಾಡಿನ ಮೇಲೂ ಫ್ಯಾನ್ಸ್ ಸಿಕ್ಕಾಪಟ್ಟೆ ಕ್ರೇಜ್ ಇದೆ. ಪ್ರಮೋದ್ ಮರವಂತೆ ಬರೆದಿರುವ `ಸಿಂಗಾರ ಸಿರಿಯೇ’ ಸಾಹಿತ್ಯಕ್ಕೆ ಅಜನೀಶ್ ಸಂಗೀತ ಸಂಯೋಜನೆ ಮಾಡಿದ್ದಾರೆ. `ವರಾಹ ರೂಪಂ’ ಸಾಂಗ್ ಬಿಗ್ ಹಿಟ್ ಆಗಿದೆ. ಈ ಸಕ್ಸಸ್ ಬೆನ್ನಲ್ಲೇ ಸಂಗೀತ ನಿರ್ದೇಶಕ ಅಜನೀಶ್ ಲೋಕನಾಥ್‌ಗೆ ತೆಲುಗಿನಿಂದ ಬುಲಾವ್ ಬಂದಿದೆ. ತೆಲುಗಿನಲ್ಲಿ ತೆರೆಕಂಡ ʻಕಿರಿಕ್ ಪಾರ್ಟಿʼ ಚಿತ್ರಕ್ಕೆ ಅಜನೀಶ್ ಸಂಗೀತ ನಿರ್ದೇಶನ ಮಾಡಿದ್ದರು. ಇದೀಗ ಮತ್ತೆ ಮೆಗಾಸ್ಟಾರ್ ಕುಟುಂಬದ ಕುಡಿ ಸಾಯಿ ಧರ್ಮ್ ತೇಜ್‌ ಮುಂಬರುವ ಚಿತ್ರಕ್ಕೆ ಮ್ಯೂಸಿಕ್ ಕಂಪೋಸ್ ಮಾಡುವ ಮೂಲಕ ಮತ್ತೆ ಎಂಟ್ರಿ ಕೊಡ್ತಿದ್ದಾರೆ. ಇದನ್ನೂ ಓದಿ:ಚೇತನ್ ವಿವಾದಾತ್ಮಕ ಹೇಳಿಕೆಗೆ ನೋ ಕಾಮೆಂಟ್ಸ್ ಎಂದ `ಕಾಂತಾರ’ ನಟ ರಿಷಬ್

    ಮೆಗಾಸ್ಟಾರ್ ಚಿರಂಜೀವಿ ಅಳಿಯ ಸಾಯಿ ಧರ್ಮ್ ತೇಜ್ ಮುಂದಿನ ಪ್ರಾಜೆಕ್ಟ್‌ಗೆ ಅಜನೀಶ್ ಲೋಕನಾಥ್ ಸಂಗೀತ ನಿರ್ದೇಶನ ಮಾಡುತ್ತಿರುವುದಾಗಿ ರಿವೀಲ್ ಮಾಡಿದ್ದಾರೆ. ಅದಕ್ಕಾಗಿ ತೆರೆಮರೆಯಲ್ಲಿ ಭರ್ಜರಿ ತಯಾರಿ ನಡೆಯುತ್ತಿದೆ. ಮುಂದಿನ ದಿನಗಳಲ್ಲಿ ಕಂಪ್ಲೀಟ್ ಅಪ್‌ಡೇಟ್‌ವೊಂದಿಗೆ ಅಧಿಕೃತವಾಗಿ ತಿಳಿಸುವುದಾಗಿ ಮಾತನಾಡಿದ್ದಾರೆ.

    Live Tv
    [brid partner=56869869 player=32851 video=960834 autoplay=true]

  • ಜಂಟಲ್ ಮನ್: ವಸಿಷ್ಠ ಕಂಠಸಿರಿಯಲ್ಲೊಂದು ವಿಶಿಷ್ಟ ಹಾಡು!

    ಜಂಟಲ್ ಮನ್: ವಸಿಷ್ಠ ಕಂಠಸಿರಿಯಲ್ಲೊಂದು ವಿಶಿಷ್ಟ ಹಾಡು!

    ಪ್ರಜ್ವಲ್ ದೇವರಾಜ್ ನಾಯಕನಾಗಿ ನಟಿಸಿರುವ ಜಂಟಲ್ ಮನ್ ಚಿತ್ರವೀಗ ಬಿಡುಗಡೆಯ ಹಂತದಲ್ಲಿದೆ. ಗುರು ದೇಶಪಾಂಡೆ ಜಿ ಸಿನಿಮಾಸ್ ಬ್ಯಾನರಿನಡಿಯಲ್ಲಿ ನಿರ್ಮಾಣ ಮಾಡಿರುವ ಈ ಚಿತ್ರದ ಲಿರಿಕಲ್ ವಿಡಿಯೋ ಸಾಂಗ್ ಇದೀಗ ಬಿಡುಗಡೆಯಾಗಿದೆ. ವಿಶೇಷವೆಂದರೆ ಈ ಹಾಡಿನ ಮೂಲಕವೇ ನಾಯಕ ಪ್ರಜ್ವಲ್ ದೇವರಾಜ್ ಅವರ ಒಂದಷ್ಟು ಗೆಟಪ್ಪುಗಳನ್ನೂ ಅನಾವರಣಗೊಳಿಸಿದೆ. ಪ್ರತಿಯೊಬ್ಬರಿಗೂ ಆಪ್ತವಾಗುವಂಥಾ ಆವೇಗದ ಸಾಲುಗಳನ್ನೊಳಗೊಂಡ ಈ ಹಾಡು ನಟ ವಸಿಷ್ಠ ಸಿಂಹ ಅವರ ಕಂಠಸಿರಿಯಲ್ಲಿ ರಗಡ್ ಶೈಲಿಯಲ್ಲಿ ಮೂಡಿ ಬಂದಿದೆ.

    ‘ನಡುಗುತಿದೆ ಎದೆಗೂಡು ಸುಡುಗಾಡು ಬರಿ ಮೌನ. ತೆವಳುತಿದೆ ವಾತ್ಸಲ್ಯ ಬರಿ ಮೋಸ ದ್ವೇಷ ಇದೇ ಜಮಾನ’ ಅಂತ ಶುರವುವಾಗೋ ಈ ಹಾಡನ್ನು ಧನಂಜಯ್ ಬರೆದಿದ್ದಾರೆ. ಅಜನೀಶ್ ಲೋಕನಾಥ್ ಅದಕ್ಕೆ ವಿಶಿಷ್ಟ ಅನ್ನಿಸುವಂಥಾ ಶೈಲಿಯಲ್ಲಿಯೇ ಸಂಗೀತ ಸಂಯೋಜನೆ ಮಾಡಿದ್ದಾರೆ. ಪ್ರತಿ ಸಾಲುಗಳಲ್ಲಿಯೂ ಬಹುತೇಕರಿಗೆ ಆಪ್ತವಾಗುವಂಥಾ ಸಾಲುಗಳೊಂದಿಗೆ, ವಸಿಷ್ಠ ಸಿಂಹ ಅವರ ಬೇಸ್ ವಾಯ್ಸ್ ನೊಂದಿಗೆ ಮೂಡಿ ಬಂದಿರೋ ಈ ಹಾಡಿನಲ್ಲಿಯೇ ಕಥೆಯ ಝಲಕ್ಕುಗಳಿವೆ. ಅದು ಇದೊಂದು ಸಸ್ಪೆನ್ಸ್ ಥ್ರಿಲ್ಲರ್ ಕಥಾನಕದ ಚಿತ್ರವೆಂಬುದನ್ನೂ ಋಜುವಾತುಗೊಳಿಸುವಂತಿವೆ.

    ಈ ಲಿರಿಕಲ್ ವಿಡಿಯೋ ಸಾಂಗ್‍ನಲ್ಲಿಯೇ ಅದು ಮೂಡಿ ಬಂದಿರೋ ರೀತಿ ಮತ್ತು ಮೇಕಿಂಗ್ ಮಜಲುಗಳನ್ನೂ ತೆರೆದಿಡಲಾಗಿದೆ. ವಿಜಯಲಕ್ಷ್ಮಿ ಮುರುಗೇಶ್ ನಾಯ್ಡು ಅವರ ಆಶೀರ್ವಾದದೊಂದಿಗೆ, ಬಿ.ಟಿ ಮಂಜುನಾಥ್ ಅರ್ಪಿಸುವ ಈ ಚಿತ್ರವನ್ನು ಗುರು ದೇಶಪಾಂಡೆ ಜಿ ಸಿನಿಮಾಸ್ ಬ್ಯಾನರಿನಡಿಯಲ್ಲಿ ನಿರ್ಮಾಣ ಮಾಡಿದ್ದಾರೆ. ಸಾಮಾನ್ಯವಾಗಿ ಗುರು ದೇಶಪಾಂಡೆ ನಿರ್ದೇಶನದ ಯಾವುದೇ ಸಿನಿಮಾಗಳನ್ನು ನೋಡಿದರೂ ಅದರಲ್ಲಿ ಹಾಡುಗಳಿಗೆ ಕಥೆಯಷ್ಟೇ ಮಹತ್ವ ಕೊಟ್ಟು ರೂಪಿಸಿದ್ದಾರೆ. ಅವರು ನಿರ್ಮಾಣ ಮಾಡಿರುವ ಜಂಟಲ್ ಮನ್ ಕೂಡಾ ಅದಕ್ಕೆ ತಕ್ಕುದಾಗಿಯೇ ರೂಪುಗೊಳ್ಳುತ್ತಿದೆ.

    ಅಜನೀಶ್ ಲೋಕನಾಥ್ ಗುರು ದೇಶಪಾಂಡೆಯವರ ಇಂಗಿತದಂತೆಯೇ ಈ ಸಿನಿಮಾದ ಎಲ್ಲ ಹಾಡುಗಳಿಗೂ ಭಿನ್ನವಾದ ಸಂಗೀತದ ಪಟ್ಟುಗಳನ್ನು ಹಾಕಿದ್ದಾರಂತೆ. ಅಂದಹಾಗೆ ಈ ಚಿತ್ರದಲ್ಲಿ ಪ್ರಜ್ವಲ್ ದೇವರಾಜ್ ಈ ವರೆಗೆ ನಟಿಸಿರದಂಥ ಪಾತ್ರಕ್ಕೆ ಜೀವ ತುಂಬಿದ್ದಾರೆ. ಅದು ಸ್ಲೀಪಿಂಗ್ ಬ್ಯೂಟಿ ಸಿಂಡ್ರೋಮ್ ಎಂಬ ಅಪರೂಪದ ಕಾಯಿಲೆಯ ಬೇಸಿನ ಗುಣಲಕ್ಷಣಗಳನ್ನು ಹೊಂದಿರುವ ಪಾತ್ರ. ಇದರ ಸುತ್ತಾ ಸಸ್ಪೆನ್ಸ್ ಥ್ರಿಲ್ಲರ್ ಶೈಲಿಯಲ್ಲಿ ಜಂಟಲ್ ಮನ್‍ನನ್ನು ರೂಪಿಸಲಾಗಿದೆ. ಇದರಲ್ಲಿ ಕ್ರೈಂ ಅಂಶಗಳೂ ಸೇರಿಕೊಂಡಿವೆಯಾ ಎಂಬ ಕುತೂಹಲ ಮೂಡಿಸುವಲ್ಲಿಯೂ ಇದೀಗ ಬಿಡುಗಡೆಯಾಗಿರುವ ಲಿರಿಕಲ್ ವಿಡಿಯೋ ಯಶ ಕಂಡಿದೆ. ಈ ಚಿತ್ರ ಮುಂದಿನ ವರ್ಷದ ಆರಂಭದ ತಿಂಗಳುಗಳಲ್ಲಿಯೇ ಬಿಡುಗಡೆಯಾಗಲಿದೆ.