Tag: Ajay Devgan

  • ಒಟಿಟಿಗೆ ಬಂತು ಜ್ಯೋತಿಕಾ ನಟನೆಯ ಶೈತಾನ್ ಸಿನಿಮಾ

    ಒಟಿಟಿಗೆ ಬಂತು ಜ್ಯೋತಿಕಾ ನಟನೆಯ ಶೈತಾನ್ ಸಿನಿಮಾ

    ಕ್ಷಿಣ ಭಾರತದ ಹೆಸರಾಂತ ನಟಿ, ನಿರ್ಮಾಪಕಿ ಜ್ಯೋತಿಕಾ (Jyothika) ನಟನೆಯ ಶೈತಾನ್ ಸಿನಿಮಾ ಈಗಾಗಲೇ ಬಾಕ್ಸ್ ಆಫೀಸಿನಲ್ಲಿ ಸಖತ್ ಸದ್ದು ಮಾಡಿತ್ತು. ಇದೀಗ ನಾಳೆಯಿಂದ ಒಟಿಟಿಯಲ್ಲಿ ಈ ಸಿನಿಮಾ ಲಭ್ಯವಿರಲಿದೆ. ಬರೋಬ್ಬರಿ 25 ವರ್ಷಗಳ ಬಳಿಕ ಬಾಲಿವುಡ್ ಗೆ ಜ್ಯೋತಿಕಾ ಈ ಸಿನಿಮಾದ ಮೂಲಕ ಮರಳಿದ್ದಾರೆ. ಶೈತಾನ್ (Shaitan) ಸಿನಿಮಾದಲ್ಲಿ ಅವರು ಹೊಸ ಬಗೆಯ ಪಾತ್ರ ಮಾಡಿದ್ದಾರೆ.

    ಹಾರರ್ ಕಥಾನಕ ಹೊಂದಿರುವ ಸಿನಿಮಾದ ದೃಶ್ಯಗಳು ಬೆಚ್ಚಿ ಬೀಳಿಸುತ್ತಿವೆ. ವಶೀಕರಣದ ವಿಷಯವನ್ನೂ ಸಿನಿಮಾ ಒಳಗೊಂಡಿದೆ. ಜ್ಯೋತಿಕಾ ಹಿಂದೆ ಹಿಂದಿ, ಕನ್ನಡ, ತಮಿಳು, ತೆಲುಗು ಸಿನಿಮಾಗಳಲ್ಲಿ ನಟಿಸಿ, ಆನಂತರ ಚಿತ್ರೋದ್ಯಮದಿಂದಲೇ ದೂರವಾಗಿದ್ದರು. ಇದೀಗ ಬಾಲಿವುಡ್ (Bollywood) ಶೈತಾನ್ ಸಿನಿಮಾವನ್ನು ಒಪ್ಪಿಕೊಳ್ಳುವ ಮೂಲಕ ಮತ್ತೆ ಚಿತ್ರರಂಗದಲ್ಲಿ ಸಕ್ರೀಯರಾಗಿದ್ದಾರೆ.

     

    ಅಜಯ್ ದೇವಗನ್ (Ajay Devgn) ಕೂಡ ಸಿನಿಮಾದಲ್ಲಿ ನಟಿಸಿದ್ದು, ಜ್ಯೋತಿಕಾ ಇವರ ಪತ್ನಿಯಾಗಿ ಕಾಣಿಸಿಕೊಂಡಿದ್ದಾರೆ. ಇದೊಂದು ಹಾರರ್ ಚಿತ್ರವಾಗಿದ್ದು, ಆರ್. ಮಧುವನ್ ಕೂಡ ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ.

  • ‘ಪುಷ್ಪ 2’ಗೆ ಹೆದರಿ ಸೈಡಿಗೆ ಹೋದ ಬಾಲಿವುಡ್ ಸಿಂಗಂ

    ‘ಪುಷ್ಪ 2’ಗೆ ಹೆದರಿ ಸೈಡಿಗೆ ಹೋದ ಬಾಲಿವುಡ್ ಸಿಂಗಂ

    ಲ್ಲು ಅರ್ಜುನ್ (Allu Arjun) ನಟನೆಯ ಪುಷ್ಪ 2 (Pushpa 2) ಸಿನಿಮಾ ಇದೇ ಆಗಸ್ಟ್ 15ರಂದು ಬಿಡುಗಡೆ ಮಾಡುವುದಾಗಿ ಈಗಾಗಲೇ ಚಿತ್ರತಂಡ ಘೋಷಣೆ ಮಾಡಿದೆ. ಅದೇ ರೀತಿಯ ಬಾಲಿವುಡ್ ನ ಹೆಸರಾಂತ ನಟ ಅಜಯ್ ದೇವಗನ್ (Ajay Devgan) ನಟನೆಯ ಸಿಂಗಂ ಅಗೇನ್ ಚಿತ್ರ ಕೂಡ ಅದೇ ದಿನಾಂಕದಂದು ರಿಲೀಸ್ ಆಗಬೇಕಿತ್ತು. ಆದರೆ, ಸಿಂಗಂ (Singam Again) ಸೈಡ್ ಗೆ ಹೋಗಿದೆ ಎನ್ನುವ ಮಾಹಿತಿ ಹರಿದಾಡುತ್ತಿದೆ.

    ಪುಷ್ಪ 2 ಸಿನಿಮಾ ಸಾಕಷ್ಟು ಸದ್ದು ಮಾಡುತ್ತಿದೆ. ಸಿನಿ ಪಂಡಿತರ ಲೆಕ್ಕಾಚಾರದಂತೆ ಸಾವಿರಾರು ಕೋಟಿ ರೂಪಾಯಿ ವ್ಯಾಪಾರ ಮಾಡುವ ಶಕ್ತಿ ಈ ಚಿತ್ರಕ್ಕಿದೆಯಂತೆ. ಅಲ್ಲದೇ, ದೊಡ್ಡ ಮಟ್ಟದಲ್ಲಿ ಮತ್ತು ಹಲವು ಭಾಷೆಗಳಲ್ಲಿ ಈ ಚಿತ್ರವನ್ನು ತೆರೆಗೆ ತರಲು ಸಿದ್ಧತೆ ಮಾಡಿಕೊಳ್ಳಲಾಗುತ್ತಿದೆ. ಹಾಗಾಗಿ ಸಿಂಗಂ ಅಗೇನ್ ಚಿತ್ರದ ರಿಲೀಸ್ ಅನ್ನು ಮುಂದೂಡಿಕೆ ಮಾಡುವ ಯೋಚನೆ ಮಾಡಲಾಗಿದೆಯಂತೆ.

     

    ರೋಹಿತ್ ಶೆಟ್ಟಿ ನಿರ್ದೇಶನದಲ್ಲಿ ಮೂಡಿ ಬಂದಿರುವ ಸಿಂಗಂ ಅಗೇನ್, ಅನೇಕ ಹೆಸರಾಂತ ಕಲಾವಿದರು ಇದ್ದಾರೆ. ಆದರೂ, ರೋಹಿತ್ ಶೆಟ್ಟಿ ತಮ್ಮ ಸಿನಿಮಾವನ್ನು ಪುಷ್ಪ 2 ಎದುರು ರಿಲೀಸ್ ಮಾಡಲು ಮನಸ್ಸು ಮಾಡುತ್ತಿಲ್ಲ ಎನ್ನುವುದು ಬಿಟೌನ್ ಸಮಾಚಾರ.

  • ಅಜಯ್ ದೇವಗನ್ ನಟಿಸಿರುವ ‘ಮೈದಾನ’ ಚಿತ್ರಕ್ಕೆ ತಡೆಯಾಜ್ಞೆ ತಂದ ಮೈಸೂರಿನ ಅನಿಲ್ ಕುಮಾರ್

    ಅಜಯ್ ದೇವಗನ್ ನಟಿಸಿರುವ ‘ಮೈದಾನ’ ಚಿತ್ರಕ್ಕೆ ತಡೆಯಾಜ್ಞೆ ತಂದ ಮೈಸೂರಿನ ಅನಿಲ್ ಕುಮಾರ್

    ಜಯ್ ದೇವಗನ್ (Ajay Devgan) ನಟಿಸಿರುವ ಮೈದಾನ (Maidan) ಸಿನಿಮಾ ಏಪ್ರಿಲ್ 11 ರಂದು ದೇಶಾದ್ಯಂತ ರಿಲೀಸ್ ಆಗಲು ಸಿದ್ಧತೆ ಮಾಡಿಕೊಳ್ಳಲಾಗಿತ್ತು. ಈಗಾಗಲೇ ದೇಶದ ನಾನಾ ರಾಜ್ಯಗಳಲ್ಲಿ ಅಜಯ್ ದೇವಗನ್ ಅಭಿಮಾನಿಗಳು ಚಿತ್ರ ನೋಡಲು ಕಾತರದಿಂದ ಕಾಯುತ್ತಿದ್ದರು. ಇದೀಗ ಚಿತ್ರಕ್ಕೆ ತಡೆಯಾಜ್ಞೆ ತರಲಾಗಿದೆ. ಮೈಸೂರಿನ (Mysore) ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರು ತಡೆಯಾಜ್ಞೆಯ (Injunction) ಆದೇಶ ನೀಡಿದ್ದಾರೆ.

    ಅಮಿತ್ ಶರ್ಮಾ ನಿರ್ದೇಶನದ ಈ ಚಿತ್ರವನ್ನು ಬೋನಿ ಕಪೂರ್ ಮತ್ತು ಜೀ ಸ್ಟುಡಿಯೋ ಜಂಟಿಯಾಗಿ ನಿರ್ಮಾಣ ಮಾಡಿದೆ. ಚಿತ್ರಕ್ಕಾಗಿ ಸೈವಾನ್ ಖದ್ರಾಸ್, ಆಕಾಶ್ ಜಾವ್ಲಾ ಮತ್ತು ಅರುಣವಾ ಜಾಯ್ ಸೇನ್ ಗುಪ್ತಾ ಕಥೆ ಬರೆದಿದ್ದಾರೆ. ಆದರೆ, ಆ ಕಥೆ ತಮ್ಮದು ಎಂದು  ಮೈಸೂರಿನ ಸ್ಟೋರಿ ರೈಟರ್ ಅನಿಲ್ ಕುಮಾರ್ (Anil Kumar) ಎಂಬುವರು ಕೋರ್ಟ್ ಮೆಟ್ಟಿಲು ಏರಿದ್ದರು. ಅವರು ನೀಡಿರುವ ದೂರಿನ ಆಧಾರದ ಮೇಲೆ ಚಿತ್ರ ಬಿಡುಗಡೆಗೆ ಮಧ್ಯಂತರ ತಡೆಯಾಜ್ಞೆ  ಆದೇಶ ನೀಡಿದ ಮೈಸೂರಿನ ಪ್ರಧಾನ ಜಿಲ್ಲಾ ಸತ್ರ ನ್ಯಾಯಾಲಯ.

    ತಮ್ಮ ಚಿತ್ರದ ಮೂಲ ಕಥೆಯನ್ನು ಚಿತ್ರತಂಡ ಕದಿದ್ದೆ. 2019 ರ ಫೆಬ್ರವರಿಯಲ್ಲಿ ಸ್ಕ್ರೀನ್ ರೈಟ್ ಅಸೋಸಿಯೇಷನ್ ನಲ್ಲಿ ಚಿತ್ರದ ಹೆಸರನ್ನು ರಿಜಿಸ್ಟರ್ ಮಾಡಿಸಿದ್ದೇನೆ. 2018ರಲ್ಲಿ ಚಿತ್ರ ಕಥೆಯನ್ನ ಲಿಂಕ್ ಡಿನ್ ನಲ್ಲಿ ಅಪ್ಲೋಡ್ ಮಾಡಲಾಗಿತ್ತು. ಕಥೆಯನ್ನ ಗಮನಿಸಿದ  ಸುಕ್ ದಾಸ್ ಸೂರ್ಯವಂಶಿ ನನ್ನ ಜೊತೆ ಮಾತು ಕತೆ ನಡೆಸಿದರು. 1950 ರಲ್ಲಿ ಫೀಫಾ ವಿಶ್ವಕಪ್ ಟೂರ್ನಮೆಂಟ್ ನಿಂದ ಭಾರತ ತಂಡವನ್ನ ಹೊರಹಾಕಲಾಗಿತ್ತು. ಈ ಬಗ್ಗೆ ಚಿತ್ರ ಕಥೆಯನ್ನ ಸಿದ್ದಪಡಿಸಿದೆ. ಶಾರುಕ್ ಖಾನ್, ಸಲ್ಮಾನ್ ಖಾನ್, ಅಮಿರ್ ಖಾನ್, ಅಜಯ ದೇವಗನ್, ಅಕ್ಷರ್ ಕುಮಾರ್ ಎಲ್ಲರನ್ನ ಸೇರಿಸಿ ಚಿತ್ರ ಮಾಡಲು ನಾನೇ ಐಡಿಯಾ ಕೊಟ್ಟಿದ್ದೆ. ಪಾದ ಖಂಡುಕ ಎಂದು ಹೆಸರಿಟ್ಟಿದೆ. Players with out shoe ಎಂದು ಇಂಗ್ಲೀಷ್ ನಲ್ಲಿ ಕರೆಯುತ್ತಾರೆ. ನನ್ನ ಮೂಲ ಕಥೆಯನ್ನು ಕದ್ದು ಮೈದಾನ ಎಂದು ಹೆಸರಿಟ್ಟಿದ್ದಾರೆ. ನನಗೆ ಮೈಸೂರು ನ್ಯಾಯಾಲಯದಿಂದ ನ್ಯಾಯ ಸಿಕ್ಕಿದೆ ಎನ್ನುತ್ತಾರೆ ರೈಟರ್ ಅನಿಲ್ ಕುಮಾರ್.

    ಮೈದಾನ ಚಿತ್ರಕ್ಕೆ ಮಧ್ಯಂತರ ತಡೆಯಾಜ್ಞೆ ಸಿಕ್ಕಿದೆ. ಈ ವಿಷಯ ಸಿನಿಮಾ ತಂಡದ ಗಮನಕ್ಕೆ ತಲುಪು, ಈ ಸಿನಿಮಾ ಅಂದುಕೊಂಡ ದಿನಾಂಕದಂದು ಬಿಡುಗಡೆ ಆಗತ್ತಾ? ಅಥವಾ ಬೇರೆ ಏನಾದರೂ ಉಪಾಯ ನಡೆಯತ್ತಾ ಕಾದು ನೋಡಬೇಕು.

  • ಅಜಯ್ ದೇವಗನ್ ಹುಟ್ಟುಹಬ್ಬಕ್ಕೆ ‘ಮೈದಾನ್’ ಗಿಫ್ಟ್

    ಅಜಯ್ ದೇವಗನ್ ಹುಟ್ಟುಹಬ್ಬಕ್ಕೆ ‘ಮೈದಾನ್’ ಗಿಫ್ಟ್

    ಜಯ್ ದೇವಗನ್ (Ajay Devgan) ನಟನೆಯ  ಮೈದಾನ್ ಸಿನಿಮಾದ ಟ್ರೈಲರ್ ಅನ್ನು ಅವರ ಹುಟ್ಟು ಹಬ್ಬದ (Birthday) ದಿನದಂದ ಬಿಡುಗಡೆ ಮಾಡಲಾಗಿದೆ. ಈ ಟ್ರೈಲರ್ ಗೆ ದಿ ಫೈನಲ್ ಟ್ರೈಲರ್ ಎಂದು ಕರೆದಿದ್ದಾರೆ. ಮೈದಾನ ಸಿನಿಮಾದ ಟ್ರೈಲರ್ ಅನ್ನು ಅವರ ಅಭಿಮಾನಿಗಳು ಮೆಚ್ಚಿಕೊಂಡು ಚಿತ್ರಕ್ಕೆ ಶುಭ ಹಾರೈಸಿದ್ದಾರೆ.

    ಈ ನಡುವೆ ಮೈದಾನ್ ಸಿನಿಮಾ ಮತ್ತೊಂದು ಭಾರೀ ಬಜೆಟ್ ಚಿತ್ರದೊಂದಿಗೆ ಪೈಪೋಟಿ ನೀಡಬೇಕಾಗಿದೆ. ಈ ಬಾರಿ ಅಕ್ಷಯ್ ಕುಮಾರ್ ಮತ್ತು ಅಜಯ್ ದೇವಗನ್ ಮತ್ತೆ ಮುಖಾಮುಖಿ ಆಗುತ್ತಿದ್ದಾರೆ. ಏಪ್ರಿಲ್ 10ರಂದು ಅಕ್ಷಯ್ ಕುಮಾರ್ ನಟನೆಯ ಬಡೆ ಮಿಯಾ ಚೋಟೆ ಮಿಯಾ ಹಾಗೂ ಅಜಯ್ ದೇವಗನ್ ಅವರ ಮೈದಾನ (Maidan) ಸಿನಿಮಾ ಏಕಕಾಲಕ್ಕೆ ಬಿಡುಗಡೆ ಆಗುತ್ತಿದೆ. ಹೀಗೆ ಈ ಕಲಾವಿದರ ಚಿತ್ರಗಳು ಒಂದೇ ದಿನಾಂಕದಂದು ರಿಲೀಸ್ ಆಗುತ್ತಿರುವುದು 9ನೇ ಬಾರಿ ಎನ್ನುವುದು ವಿಶೇಷ.

    ಮೊನ್ನೆಯಷ್ಟೇ ಅಕ್ಷಯ್ ಕುಮಾರ್ (Akshay Kumar) ಹಾಗೂ ಟೈಗರ್ ಶ್ರಾಫ್ (Tiger Shroff) ನಟನೆಯ ಬಡೆ ಮಿಯಾ ಚೋಟೆ ಮಿಯಾ (bade miyan chote miyan)  ಸಿನಿಮಾದ ಟ್ರೈಲರ್ (Trailer) ರಿಲೀಸ್ ಆಗಿದೆ. ಹಿಂದಿ, ಕನ್ನಡ ಸೇರಿದಂತೆ ಐದು ಭಾಷೆಯಲ್ಲಿಯೂ ಮೊದಲ ನೋಟ ಅನಾವರಣಗೊಂಡಿದೆ. 3 ನಿಮಿಷ 3 ಸೆಕೆಂಡ್ ಇರುವ ಪವರ್ ಪ್ಯಾಕ್ಡ್ ಟ್ರೈಲರ್ ನಲ್ಲಿ ಅಕ್ಷಯ್ ಹಾಗೂ ಟೈಗರ್ ಭರ್ಜರಿ ಆಕ್ಷನ್ ಮೂಲಕ ಅಬ್ಬರಿಸಿದ್ದಾರೆ.

     

    ಬಡೆ ಮಿಯಾ ಚೋಟೆ ಮಿಯಾ ಟ್ರೈಲರ್ ನಲ್ಲಿ ಮೈ ಜುಮ್ ಎನಿಸುವ ಹೈ ಆಕ್ಷನ್ ಸೀಕ್ವೆನ್ಸ್ ಹೈಲೆಟ್ ಆಗಿವೆ. ದೇಶಭಕ್ತಿ ಉಕ್ಕಿಸುವ ಈ ಝಲಕ್ ನಲ್ಲಿ ಕಿಲಾಡಿ ಟೈಗರ್ ಜುಗಲ್ ಬಂಧಿ ನೋಡುಗರಿಗೆ ಸಖತ್ ಕಿಕ್ ಕೊಡಲಿದೆ. ಖಳನಾಯಕನಾಗಿ ಪೃಥ್ವಿರಾಜ್ ಸುಕುಮಾರನ್ ಕಾಣಿಸಿಕೊಂಡಿದ್ದು, ಆದ್ರೆ ಟ್ರೇಲರ್ ನಲ್ಲಿ ಅವರ ಮುಖವನ್ನೇ ರಿವೀಲ್ ಮಾಡದೇ ಚಿತ್ರತಂಡ ಸೀಕ್ರೆಟ್ ಕಾಯ್ದುಗೊಂಡಿದೆ. ಬಾಲಿವುಡ್ ನಟಿಮಣಿಯರಾದ ಸೋನಾಕ್ಷಿ ಸಿನ್ಹಾ, ಮಾನುಷಿ ಚಿಲ್ಲರ್, ಅಲಯಾ ಎಫ್ ಪ್ರಮುಖ ಪಾತ್ರಗಳಲ್ಲಿ ಅಭಿನಯಿಸಿದ್ದಾರೆ.

  • ಬಾಕ್ಸ್ ಆಫೀಸ್ ಸ್ಟಾರ್ ವಾರ್ : 9ನೇ ಬಾರಿ ಈ ಸ್ಟಾರ್ ನಟರು ಮುಖಾಮುಖಿ

    ಬಾಕ್ಸ್ ಆಫೀಸ್ ಸ್ಟಾರ್ ವಾರ್ : 9ನೇ ಬಾರಿ ಈ ಸ್ಟಾರ್ ನಟರು ಮುಖಾಮುಖಿ

    ಬಾಲಿವುಡ್ ನಲ್ಲಿ ಸ್ಟಾರ್ ವಾರ್ ಹೊಸದೇನೂ ಅಲ್ಲ. ಆದರೂ, ಹೊಂದಾಣಿಕೆಯ ಮೇಲೆ ಸಿನಿಮಾಗಳನ್ನು ರಿಲೀಸ್ ಮಾಡಿಕೊಂಡು ಬರಲಾಗುತ್ತಿದೆ. ಆದರೆ, ಈ ಬಾರಿ ಅಕ್ಷಯ್ ಕುಮಾರ್ ಮತ್ತು ಅಜಯ್ ದೇವಗನ್ ಮತ್ತೆ ಮುಖಾಮುಖಿ ಆಗುತ್ತಿದ್ದಾರೆ. ಏಪ್ರಿಲ್ 10ರಂದು ಅಕ್ಷಯ್ ಕುಮಾರ್ ನಟನೆಯ ಬಡೆ ಮಿಯಾ ಚೋಟೆ ಮಿಯಾ ಹಾಗೂ ಅಜಯ್ ದೇವಗನ್ ಅವರ ಮೈದಾನ (Maidan) ಸಿನಿಮಾ ಏಕಕಾಲಕ್ಕೆ ಬಿಡುಗಡೆ ಆಗುತ್ತಿದೆ. ಹೀಗೆ ಈ ಕಲಾವಿದರ ಚಿತ್ರಗಳು ಒಂದೇ ದಿನಾಂಕದಂದು ರಿಲೀಸ್ ಆಗುತ್ತಿರುವುದು 9ನೇ ಬಾರಿ ಎನ್ನುವುದು ವಿಶೇಷ.

    ಮೊನ್ನೆಯಷ್ಟೇ ಅಕ್ಷಯ್ ಕುಮಾರ್ (Akshay Kumar) ಹಾಗೂ ಟೈಗರ್ ಶ್ರಾಫ್ (Tiger Shroff) ನಟನೆಯ ಬಡೆ ಮಿಯಾ ಚೋಟೆ ಮಿಯಾ (bade miyan chote miyan)  ಸಿನಿಮಾದ ಟ್ರೈಲರ್ (Trailer) ರಿಲೀಸ್ ಆಗಿದೆ. ಹಿಂದಿ, ಕನ್ನಡ ಸೇರಿದಂತೆ ಐದು ಭಾಷೆಯಲ್ಲಿಯೂ ಮೊದಲ ನೋಟ ಅನಾವರಣಗೊಂಡಿದೆ. 3 ನಿಮಿಷ 3 ಸೆಕೆಂಡ್ ಇರುವ ಪವರ್ ಪ್ಯಾಕ್ಡ್ ಟ್ರೈಲರ್ ನಲ್ಲಿ ಅಕ್ಷಯ್ ಹಾಗೂ ಟೈಗರ್ ಭರ್ಜರಿ ಆಕ್ಷನ್ ಮೂಲಕ ಅಬ್ಬರಿಸಿದ್ದಾರೆ.

    ಬಡೆ ಮಿಯಾ ಚೋಟೆ ಮಿಯಾ ಟ್ರೈಲರ್ ನಲ್ಲಿ ಮೈ ಜುಮ್ ಎನಿಸುವ ಹೈ ಆಕ್ಷನ್ ಸೀಕ್ವೆನ್ಸ್ ಹೈಲೆಟ್ ಆಗಿವೆ. ದೇಶಭಕ್ತಿ ಉಕ್ಕಿಸುವ ಈ ಝಲಕ್ ನಲ್ಲಿ ಕಿಲಾಡಿ ಟೈಗರ್ ಜುಗಲ್ ಬಂಧಿ ನೋಡುಗರಿಗೆ ಸಖತ್ ಕಿಕ್ ಕೊಡಲಿದೆ. ಖಳನಾಯಕನಾಗಿ ಪೃಥ್ವಿರಾಜ್ ಸುಕುಮಾರನ್ ಕಾಣಿಸಿಕೊಂಡಿದ್ದು, ಆದ್ರೆ ಟ್ರೇಲರ್ ನಲ್ಲಿ ಅವರ ಮುಖವನ್ನೇ ರಿವೀಲ್ ಮಾಡದೇ ಚಿತ್ರತಂಡ ಸೀಕ್ರೆಟ್ ಕಾಯ್ದುಗೊಂಡಿದೆ. ಬಾಲಿವುಡ್ ನಟಿಮಣಿಯರಾದ ಸೋನಾಕ್ಷಿ ಸಿನ್ಹಾ, ಮಾನುಷಿ ಚಿಲ್ಲರ್, ಅಲಯಾ ಎಫ್ ಪ್ರಮುಖ ಪಾತ್ರಗಳಲ್ಲಿ ಅಭಿನಯಿಸಿದ್ದಾರೆ.

    ಮುಂಬೈ, ಲಂಡನ್, ಅಬುಧಾಬಿ, ಸ್ಕಾಟ್ಲೆಂಡ್ ಮತ್ತು ಜೋರ್ಡಾನ್ ಸ್ಥಳಗಳಲ್ಲಿ ಚಿತ್ರೀಕರಣ ನಡೆಸಲಾಗಿದೆ. ಹಾಲಿವುಡ್ ರೇಂಜ್ಗೆ ಬಿಗ್ ಬಜೆಟ್ನಲ್ಲಿ ‘ಬಡೇ ಮಿಯಾನ್ ಚೋಟೆ ಮಿಯಾನ್’ ಅನ್ನು ನಿರ್ಮಿಸಲಾಗಿದೆ. ಟೈಗರ್ ಜಿಂದಾ ಹೈ, ಸುಲ್ತಾನ್ ಸಿನಿಮಾಗಳನ್ನು ನಿರ್ದೇಶಿಸಿರುವ ಅಲಿ ಅಬ್ಬಾಸ್ ಜಫರ್ ಈ ಚಿತ್ರಕ್ಕೆ ಆಕ್ಷನ್ ಕಟ್ ಹೇಳಿದ್ದಾರೆ.

     

    ವಶು ಭಗ್ನಾನಿ, ದೀಪಿಕ್ಷಾ ದೇಶ್ಮುಖ್, ಜಾಕಿ ಭಗ್ನಾನಿ, ಹಿಮಾಂಶು ಕಿಶನ್ ಮೆಹ್ರಾ, ಅಲಿ ಅಬ್ಬಾಸ್ ಜಾಫರ್ ಚಿತ್ರ ನಿರ್ಮಾಣ ಮಾಡಿದ್ದಾರೆ. ವಶು ಭಗ್ನಾನಿ ಮತ್ತು ಪೂಜಾ ಎಂಟರ್ಟೈನ್ಮೆಂಟ್ ಎಎಝೆಡ್ ಫಿಲ್ಮ್ಸ್ ಸಹಯೋಗದಡಿ ಈ ಚಿತ್ರವನ್ನು ಪ್ರಸ್ತುತಪಡಿಸುತ್ತಿದ್ದಾರೆ. 2024ರ ಏಪ್ರಿಲ್ – ಈದ್ ಸಂದರ್ಭ ಹಿಂದಿ, ಕನ್ನಡ, ತೆಲುಗು, ತಮಿಳು, ಮಲೆಯಾಳಂ ಭಾಷೆಯಲ್ಲಿ ಈ ಚಿತ್ರ ಬಿಡುಗಡೆ ಆಗಲಿದೆ.

  • ಸಿನಿಮಾ ಪ್ರಚಾರಕ್ಕಾಗಿ ಗಿಮಿಕ್‌ ಮಾಡಿದ ಕಾಜೋಲ್‌ಗೆ ನೆಟ್ಟಿಗರಿಂದ ತರಾಟೆ

    ಸಿನಿಮಾ ಪ್ರಚಾರಕ್ಕಾಗಿ ಗಿಮಿಕ್‌ ಮಾಡಿದ ಕಾಜೋಲ್‌ಗೆ ನೆಟ್ಟಿಗರಿಂದ ತರಾಟೆ

    ಬಾಲಿವುಡ್ (Bollywood) ನಟಿ ಕಾಜೋಲ್ (Kajol) ಅವರು ತಮ್ಮ ಕೆರಿಯರ್ ಹೊಸತರಲ್ಲಿ ಸಾಕಷ್ಟು ಚಿತ್ರಗಳಲ್ಲಿ ಸ್ಟಾರ್ ನಟರಿಗೆ ನಾಯಕಿಯಾಗಿ ಮಿಂಚಿದ್ದರು. ಪೀಕ್‌ನಲ್ಲಿರುವಾಗಲೇ ಅಜಯ್ ದೇವಗನ್ ಜೊತೆ ನಟಿ ದಾಂಪತ್ಯ ಜೀವನಕ್ಕೆ ಕಾಲಿಟ್ಟರು. ಬಳಿಕ ಸಿನಿಮಾ ಸೆಲೆಕ್ಷನ್‌ನಲ್ಲಿ ಸಖತ್ ಚ್ಯುಸಿಯಾದ್ರು. ಅಲ್ಲೊಂದು ಇಲ್ಲೊಂದು ಸಿನಿಮಾ ಮಾಡುತ್ತಾ ವೈಯಕ್ತಿಕ ಬದುಕಿನಲ್ಲಿ ಬ್ಯುಸಿಯಾದರು. ಆದರೆ ಇತ್ತೀಚಿನ ನಟಿಯ ಪೋಸ್ಟ್‌ವೊಂದು ಸಾಮಾಜಿಕ ಜಾಲತಾಣದಲ್ಲಿ ಸಂಚಲನ ಮೂಡಿಸಿತ್ತು. ದಾಂಪತ್ಯದಲ್ಲಿ ಬಿರುಕು(Divorce) ಉಂಟಾಗಿದ್ಯಾ.? ಎಂಬ ಅನುಮಾನ ಕಾಡಿತ್ತು. ಆದರೆ ಅಸಲಿ ವಿಚಾರವೇ ಬೇರೇ.

     

    View this post on Instagram

     

    A post shared by Kajol Devgan (@kajol)

    ತಮ್ಮ ಸಿನಿಮಾದ ಪ್ರಚಾರಕ್ಕಾಗಿ, ಬ್ರೇಕಿಂಗ್ ನ್ಯೂಸ್‌ಗಾಗಿ ನಟಿ ಹೊಸ ತಂತ್ರ ರೂಪಿಸಿದ್ದರು. ಜೀವನದ ದೊಡ್ಡ ವಿಚಾರಣೆ ಎದುರಿಸುತ್ತಿದ್ದೇನೆ. ಹಾಗಾಗಿ ಸೋಶಿಯಲ್ ಮೀಡಿಯಾದಿಂದ ಬ್ರೇಕ್ ತೆಗೆದುಕೊಳ್ಳುತ್ತಿದ್ದೇನೆ ಎಂದು ಅವರು ಪೋಸ್ಟ್ ಮಾಡಿದ್ದಾರೆ. ಅದು ಪ್ರಚಾರದ ಗಿಮಿಕ್ ಎಂಬುದು ಈಗ ಬಯಲಾಗಿದೆ.‌ ಇದನ್ನೂ ಓದಿ:ಮೆಗಾ ಪ್ರಿನ್ಸ್ ವರುಣ್ ತೇಜ್- ಲಾವಣ್ಯ ತ್ರಿಪಾಠಿ ಗ್ರ್ಯಾಂಡ್‌ ಎಂಗೇಜ್‌ಮೆಂಟ್

     

    View this post on Instagram

     

    A post shared by Disney+ Hotstar (@disneyplushotstar)

    ಅಮೆರಿಕದ ‘ದಿ ಗುಡ್ ವೈಫ್’ ಸರಣಿಯ ಇಂಡಿಯನ್ ವರ್ಷನ್‌ಗೆ ‘ದಿ ಟ್ರಯಲ್’ (The Trail) ಎಂದು ಶೀರ್ಷೀಕೆ ಇಡಲಾಗಿದೆ. ಇದರಲ್ಲಿ ಕಾಜೋಲ್ ಅವರು ಲೀಡ್ ರೋಲ್‌ನಲ್ಲಿ ನಟಿಸಿದ್ದಾರೆ. ಅದರ ಟ್ರೇಲರ್ ಬಿಡುಗಡೆಗೆ ದಿನಾಂಕ ಫಿಕ್ಸ್ ಆಗಿದೆ. ಜೂನ್ 12ರಂದು ‘ದಿ ಟ್ರಯಲ್’ ಟ್ರೇಲರ್ ಅನಾವರಣ ಆಗಲಿದೆ. ಈ ಟೈಟಲ್ ಜೊತೆ ‘ಪ್ರೀತಿ, ಕಾನೂನು ಮತ್ತು ಮೋಸ’ ಎಂಬ ಟ್ಯಾಗ್ ಲೈನ್ ಇದೆ. ಹಾಗಾಗಿ ಈ ವೆಬ್ ಸರಣಿ ಬಗ್ಗೆ ಹೆಚ್ಚಿನ ಕುತೂಹಲ ನಿರ್ಮಾಣ ಆಗಿದೆ. ಇದು ಕೋರ್ಟ್ ರೂಮ್ ಡ್ರಾಮಾ ಶೈಲಿಯಲ್ಲಿ ಮೂಡಿಬಂದಿದ್ದು, ಟ್ರೇಲರ್ ನೋಡಲು ಫ್ಯಾನ್ಸ್ ಕಾದಿದ್ದಾರೆ.

    ಜೀವನದ ದೊಡ್ಡ ವಿಚಾರಣೆ ಎದುರಿಸುತ್ತಿದ್ದೇನೆ. ಹಾಗಾಗಿ ಸೋಶಿಯಲ್ ಮೀಡಿಯಾದಿಂದ ಬ್ರೇಕ್ ತೆಗೆದುಕೊಳ್ಳುತ್ತಿದ್ದೇನೆ ಎಂದು ಕಾಜೋಲ್ ಅವರು ಪೋಸ್ಟ್ ಮಾಡಿದಾಗ ಅಪ್ಪಟ ಅಭಿಮಾನಿಗಳಿಗೆ ಅಚ್ಚರಿ ಆಗಿದ್ದು ನಿಜ. ಇದು ಡಿವೋರ್ಸ್ ಮುನ್ಸೂಚನೆ ಇರಬಹುದೇ ಕಾಜೋಲ್ ಅವರ ಸಂಸಾರದಲ್ಲಿ ಬಿರುಕು ಮೂಡಿರಬಹುದೇ ಎಂಬಿತ್ಯಾದಿ ಅನುಮಾನಗಳು ಮೂಡಿತ್ತು. ಸಾಮಾಜಿಕ ಜಾಲತಾಣದಲ್ಲಿ ಈ ವಿಚಾರ ಚರ್ಚೆಗೆ ಗ್ರಾಸವಾಗಿತ್ತು. ಕಾಜೋಲ್‌ ಡ್ರಾಮಾಗೆ ನೆಟ್ಟಿಗರು ಖಡಕ್‌ ಕ್ಲಾಸ್‌ ತೆಗೆದುಕೊಂಡಿದ್ದಾರೆ. ಸಿನಿಮಾ ಪ್ರಚಾರಕ್ಕೆ ಹೀಗೆ ಗಿಮಿಕ್‌ ಮಾಡೋದಾ ಅಂತಾ ನೆಟ್ಟಿಗರು ಪ್ರಶ್ನೆ ಮಾಡಿದ್ದಾರೆ.

  • `ನಾಟು ನಾಟು’ ಸಾಂಗ್ ಆಸ್ಕರ್ ಗೆಲ್ಲೋಕೆ ನಾನೇ ಕಾರಣ: ಅಜಯ್ ದೇವಗನ್

    `ನಾಟು ನಾಟು’ ಸಾಂಗ್ ಆಸ್ಕರ್ ಗೆಲ್ಲೋಕೆ ನಾನೇ ಕಾರಣ: ಅಜಯ್ ದೇವಗನ್

    ರಾಜಮೌಳಿ (Rajamouli) ನಿರ್ದೇಶನದ RRR ಸಿನಿಮಾದ `ನಾಟು ನಾಟು’ (Naatu Naatu Song)  ಹಾಡಿಗೆ ಆಸ್ಕರ್ ಬಂದಿರೋದು ವಿಶ್ವದೆಲ್ಲೆಡೆಯಿಂದ ಪ್ರಶಂಸೆಯ ಮಹಾಪೂರವೇ ಹರಿದು ಬರುತ್ತಿದೆ. ನಾಟು ನಾಟು ಸಾಂಗ್ ಆಸ್ಕರ್ ಗೆದ್ದಿರೋದ್ದಕ್ಕೆ ಇಡೀ ತಂಡದ ಶ್ರಮವಿದೆ. ಹೀಗಿರುವಾಗ ಹಿಂದಿ ನಟ ಅಜಯ್ ದೇವಗನ್ ಅವರು ʻನಾಟು ನಾಟು ಆಸ್ಕರ್ ಗೆದ್ದಿದ್ದಕ್ಕೆ ನಾನೇ ಕಾರಣʼ ಎಂದು ಹೇಳಿಕೆ ನೀಡಿದ್ದಾರೆ. ಇದನ್ನೂ ಓದಿ: ಪ್ರಜ್ವಲ್ ದೇವರಾಜ್ ನಟನೆಯ ‘ವೀರಂ’ ಟ್ರೈಲರ್ ರಿಲೀಸ್

    ಬಾಲಿವುಡ್ ನಟ ಅಜಯ್ ದೇವಗನ್ (Ajay Devgan) ನಟಿಸಿ, ನಿರ್ದೇಶಿಸಿರುವ `ಭೋಲಾ’ (Bhola) ಸಿನಿಮಾ ಮಾರ್ಚ್ 30ರಂದು ತೆರೆಗೆ ಅಪ್ಪಳಿಸಲು ಸಜ್ಜಾಗಿದೆ. ಸದ್ಯ ಈ ಸಿನಿಮಾದ ಪ್ರಚಾರ ಕಾರ್ಯಕ್ರಮದಲ್ಲಿ ನಟ ಬ್ಯುಸಿಯಾಗಿದ್ದಾರೆ. ಇದೀಗ ಸಂದರ್ಶನವೊಂದರಲ್ಲಿ ನಾಟು ನಾಟು ಹಾಡಿನ ಬಗ್ಗೆ ಅಜಯ್ ದೇವಗನ್ ತಮಾಷೆ ಮಾಡಿದ್ದಾರೆ.

    `ನಾಟು ನಾಟು’ ಹಾಡು ಆಸ್ಕರ್ ಗೆಲ್ಲೋಕೆ ಹಲವು ವಿಚಾರ ಕಾರಣ ಆಗಿದೆ. ಚಿತ್ರದ ಸಂಗೀತವೂ ಕಮಾಲ್ ಮಾಡಿದೆ. ಒಟ್ಟಾರೆ ಹಾಡಿನಲ್ಲಿರುವ ಪ್ರತಿ ವಿಚಾರವೂ ಆಸ್ಕರ್ ಗೆಲ್ಲೋಕೆ ಸಹಕಾರಿ ಆಗಿದೆ. ಈಗ ಅಜಯ್ ದೇವಗನ್ ಈ ವಿಚಾರದಲ್ಲಿ ಜೋಕ್ ಮಾಡಿದ್ದಾರೆ. ನಾಟು ನಾಟು’ ಆಸ್ಕರ್ ಗೆಲ್ಲೋಕೆ ನಾನೇ ಕಾರಣ, ಏಕೆಂದರೆ ನಾನು ಆ ಹಾಡಿನಲ್ಲಿ ಡ್ಯಾನ್ಸ್ ಮಾಡಿಲ್ಲವಲ್ಲ ಎಂದಿದ್ದಾರೆ. ಈ ಮೂಲಕ ತಮಗೆ ಡ್ಯಾನ್ಸ್ ಮಾಡೋಕೆ ಬರಲ್ಲ ಎಂದಿದ್ದಾರೆ.

    ಇದೀಗ ಅಜಯ್ ದೇವಗನ್ ಅವರ ಜೋಕ್ ಅಭಿಮಾನಿಗಳಿಗೆ ಇಷ್ಟವಾಗಿದೆ. ಮೊದಲ ಬಾರಿಗೆ ಅವರು ನಗೋದನ್ನ ನೋಡಿದೆವು ಎಂದು ಫ್ಯಾನ್ಸ್ ಕಾಮೆಂಟ್ ಮಾಡಿದ್ದಾರೆ.

  • `ಕೆಜಿಎಫ್ 2′ ನಟಿ ರವೀನಾ ಟಂಡನ್ ಪುತ್ರಿ ರಾಶಾ ಬಾಲಿವುಡ್‌ಗೆ ಎಂಟ್ರಿ

    `ಕೆಜಿಎಫ್ 2′ ನಟಿ ರವೀನಾ ಟಂಡನ್ ಪುತ್ರಿ ರಾಶಾ ಬಾಲಿವುಡ್‌ಗೆ ಎಂಟ್ರಿ

    ಬಾಲಿವುಡ್‌ನ (Bollywood) ಸ್ಟಾರ್ ಕಲಾವಿದರ ಮಕ್ಕಳು ಒಬ್ಬಬ್ಬರೇ ಸಿನಿರಂಗಕ್ಕೆ ಎಂಟ್ರಿ ಕೊಡ್ತಿದ್ದಾರೆ. ಇದೀಗ ಈ ಸಾಲಿಗೆ ʻಕೆಜಿಎಫ್‌ 2ʼ ಖ್ಯಾತಿಯ ರವೀನಾ ಟಂಡನ್ (Raveena Tandon) ಮುದ್ದಿನ ಮಗಳು ರಾಶಾ (Rasha) ಬಿಟೌನ್‌ಗೆ ಲಗ್ಗೆ ಇಡ್ತಿದ್ದಾರೆ.

    ಚಿತ್ರರಂಗದಲ್ಲಿ ನಟ- ನಟಿಯರ ಮಕ್ಕಳು ಚಿತ್ರರಂಗಕ್ಕೆ ಎಂಟ್ರಿ ಕೊಡುವ ಪ್ರಕ್ರಿಯೆ ನಿರಂತರವಾಗಿ ನಡೆಯುತ್ತಿವೆ. ಇದೀಗ ಮತ್ತೊಬ್ಬ ಸ್ಟಾರ್‌ಕಿಡ್ ನಟನೆಗೆ ಪದಾರ್ಪಣೆ ಮಾಡುವ ಸುದ್ದಿ ಕೇಳಿ ಬರುತ್ತಿದೆ. ಬಾಲಿವುಡ್‌ನ ಜನಪ್ರಿಯ ನಟಿ ರವೀನಾ ಟಂಡನ್ (Raveena Tandon) ಮತ್ತು ಅನಿಲ್ ಥಡಾನಿ (Anil Thadani) ಅವರ ಪುತ್ರಿ ರಾಶಾ ಶೀಘ್ರದಲ್ಲಿಯೇ ಬಾಲಿವುಡ್‌ಗೆ ಎಂಟ್ರಿ ಕೊಡಲಿದ್ದಾರೆ ಎಂಬ ಸುದ್ದಿ ಬಿಟೌನ್‌ನಲ್ಲಿ ಹರಿದಾಡುತ್ತಿದೆ.

     

    View this post on Instagram

     

    A post shared by Rasha (@rashathadani)

    ರಾಶಾಗೆ ಈಗ 17ರ ಹರೆಯ. ಈಕೆ ಈಗ ತಾಯಿ ರವೀನಾ ಅವರಂತೆಯೇ ಸಾಗಲು ಸಿದ್ಧತೆ ನಡೆಸಿದ್ದಾಳೆ. ರವೀನಾ ಅವರ ಮಗಳು ಸದ್ಯ ಸಿನಿಮಾಗಳಲ್ಲಿ ಕಾಣಿಸಿಕೊಳ್ಳದೇ ಇದ್ದರು ಕೂಡ ಸೋಷಿಯಲ್ ಮೀಡಿಯಾದಲ್ಲಿ ಆಕ್ಟೀವ್ ಆಗಿದ್ದಾರೆ. ಈಕೆಗೆ 2 ಲಕ್ಷಕ್ಕೂ ಅಧಿಕ ಫಾಲೋವರ್ಸ್‌ಗಳು ಇದ್ದಾರೆ. ಇದನ್ನೂ ಓದಿ: ಬಳ್ಳಾರಿ ಉತ್ಸವದಲ್ಲಿ ಮಂಗ್ಲಿ ಕಾರು ಒಡೆದ ಕಿಡಿಗೇಡಿಗಳು- ಮೇಕಪ್‌ ರೂಂಗೆ ನುಗ್ಗಿ ದಾಂಧಲೆ

    ನಿರ್ದೇಶಕ ಅಭಿಷೇಕ್ ಕಪೂರ್ (Abhishek Kapoor) ತಮ್ಮ ಮುಂದಿನ ಚಿತ್ರದಲ್ಲಿ, ರವೀನಾ ಟಂಡನ್ ಮತ್ತು ಅನಿಲ್ ಥಡಾನಿ ಅವರ ಪುತ್ರಿ ರಾಶಾ ಅವರನ್ನು ಪರಿಚಯಿಸಲಿದ್ದಾರೆ ಎನ್ನಲಾಗಿದೆ. ಈ ಚಿತ್ರಕ್ಕೆ ಇನ್ನೂ ಹೆಸರಿಡಲಿಲ್ಲ. ಆದರೆ ಇದೊಂದು ಆ್ಯಕ್ಷನ್ ಓರಿಯೆಂಟೆಡ್ ಚಿತ್ರವಾಗಿದ್ದು, ಅಜಯ್ ದೇವಗನ್ (Ajay Devgan) ಪ್ರಮುಖ ಪಾತ್ರದಲ್ಲಿ ನಟಿಸಲಿದ್ದಾರೆ ಎನ್ನಲಾಗುತ್ತಿದೆ. ಇನ್ನೂ ಅಜಯ್ ದೇವಗನ್ ಅವರ ಸೋದರಳಿಯ ಅಮನ್ ದೇವಗನ್ (Aman Devgan) ಕೂಡ ಈ ಚಿತ್ರದ ಮೂಲಕ ಬಾಲಿವುಡ್‌ಗೆ ಪದಾರ್ಪಣೆ ಮಾಡಲಿದ್ದಾರೆ. ಅಜಯ್ ದೇವಗನ್ ಅವರು ಹಿಂದೆಂದೂ ಮಾಡಿರದಂಥ ಅವತಾರದಲ್ಲಿ ಕಾಣಿಸಿಕೊಳ್ಳಲಿದ್ದಾರೆ ಎನ್ನಲಾಗಿದೆ.

    ರಾಶಾ ಮತ್ತು ಅಮನ್ ದೇವಗನ್ ಸಿನಿಮಾ ಜೋಡಿಯಾಗಿ ಕಾಣಿಸಿಕೊಳ್ತಿದ್ದಾರೆ. ಈ ಚಿತ್ರದ ಮೂಲಕ  ಬಾಲಿವುಡ್‌ಗೆ ಪಾದಾರ್ಪಾಣೆ ಮಾಡ್ತಿದ್ದಾರೆ.

    Live Tv
    [brid partner=56869869 player=32851 video=960834 autoplay=true]

    Join our Whatsapp group by clicking the below link
    https://chat.whatsapp.com/E6YVEDajTzH06LOh77r25k

  • ಹಿಂದೂ ದೇವರ ಅಪಹಾಸ್ಯ: ಅಜಯ್ ದೇವಗನ್ ನಟನೆಯ ‘ಥ್ಯಾಂಕ್ ಗಾಡ್’ ಸಿನಿಮಾ ನಿಷೇಧಕ್ಕೆ ಹಿಂದೂ ಜನಜಾಗೃತಿ ಸಮಿತಿ ಒತ್ತಾಯ

    ಹಿಂದೂ ದೇವರ ಅಪಹಾಸ್ಯ: ಅಜಯ್ ದೇವಗನ್ ನಟನೆಯ ‘ಥ್ಯಾಂಕ್ ಗಾಡ್’ ಸಿನಿಮಾ ನಿಷೇಧಕ್ಕೆ ಹಿಂದೂ ಜನಜಾಗೃತಿ ಸಮಿತಿ ಒತ್ತಾಯ

    ಬಾಲಿವುಡ್ ನಟ ಅಜಯ ದೇವಗನ್ (Ajay devgan)ನಟನೆಯ ‘ಥ್ಯಾಂಕ್ ಗಾಡ್’ ಸಿನಿಮಾವನ್ನು ನಿಷೇಧಿಸಬೇಕೆಂದು ಹಿಂದೂ ಜನಜಾಗೃತಿ ಸಮಿತಿ ಒತ್ತಾಯಿಸಿದೆ. ಈ ಸಿನಿಮಾದಲ್ಲಿ ಹಿಂದೂ ದೇವರನ್ನು ಅಪಹಾಸ್ಯ ಮಾಡಲಾಗಿದ್ದು, ಇಂತಹ ಚಿತ್ರಗಳನ್ನು ಸೆನ್ಸಾರ್ ಮಂಡಳಿಯವರು ಬಿಡುಗಡೆ ಮಾಡಲು ಹೇಗೆ ಅನುಮತಿ ನೀಡುತ್ತಾರೆ ಎಂದು ಪ್ರಶ್ನೆ ಮಾಡಿದ್ದಾರೆ. ಟ್ರೈಲರ್ ಗೂ ಕೂಡ ಸರ್ಟಿಫಿಕೇಟ್ ನೀಡಲಾಗುತ್ತದೆ. ಈ ಸಿನಿಮಾದ ದೃಶ್ಯವನ್ನು ನೋಡುವಾಗ ಸೆನ್ಸಾರ್ ಮಂಡಳಿ ನಿದ್ದೆ ಮಾಡುತ್ತಿತ್ತೆ? ಎಂದಿದ್ದಾರೆ ಹಿಂದೂ ಜನ ಜಾಗತಿ ಸದಸ್ಯರು.

    ಬಿಡುಗಡೆಯಾದ ಟ್ರೇಲರ್ ನಲ್ಲಿ ಹಿಂದೂ ಧರ್ಮದಲ್ಲಿ ಮೃತ್ಯುವಿನ ನಂತರ ಪ್ರತಿಯೊಬ್ಬರ ಪಾಪ-ಪುಣ್ಯಗಳನ್ನು ಲೆಕ್ಕ ಹಾಕುವ ‘ಚಿತ್ರಗುಪ್ತ’ ದೇವರು ಮತ್ತು ಮೃತ್ಯುವಿನ ನಂತರ ಆತ್ಮವನ್ನು ತೆಗೆದುಕೊಂಡು ಹೋಗುವ ಯಮದೇವನನ್ನು ಆಧುನಿಕ ರೂಪದಲ್ಲಿ ತೋರಿಸಲಾಗಿದೆ. ಅವರನ್ನು ನಿಷ್ಪ್ರಯೋಜಕ ಹಾಸ್ಯದ ಮಾತುಗಳನ್ನಾಡುವಂತೆ ಚಿತ್ರಿಸಲಾಗಿದೆ. ಅಭಿವ್ಯಕ್ತಿ ಸ್ವಾತಂತ್ರ್ಯದ ಹೆಸರಿನಲ್ಲಿ ಹಿಂದೂ ಧರ್ಮದ ಚಿತ್ರಗುಪ್ತ ಮತ್ತು ಯಮ ದೇವರ ಅಪಹಾಸ್ಯವನ್ನು ನಾವು ಎಂದಿಗೂ ಸಹಿಸುವುದಿಲ್ಲ ಎಂದಿದ್ದಾರೆ ಹಿಂದೂ ಜನ ಜಾಗೃತಿಯ ಸದಸ್ಯರು. ಇದನ್ನೂ ಓದಿ:ಬಂಧನದ ಭೀತಿಯಿಂದ ಕೇರಳಕ್ಕೆ ಎಸ್ಕೇಪ್ ಆದ್ರಾ ನಟಿ ಶ್ರೀಲೀಲಾ ತಾಯಿ?: ಮನೆಗೆ ಬೀಗ, ಮೊಬೈಲ್ ಆಫ್

    ನಿನ್ನೆಯಷ್ಟೇ ಧಾರ್ಮಿಕ ಭಾವನೆಗಳಿಗೆ ಧಕ್ಕೆ ತರಲಾಗಿದೆ ಎಂದು ಆರೋಪಿಸಿ ಬಾಲಿವುಡ್ ನಟ ಅಜಯ್ ದೇವಗನ್ ಸೇರಿದಂತೆ ಮೂವರು ಮೇಲೆ ದೂರು (Complaint) ದಾಖಲಾಗಿದೆ. ಇನ್ನೆಷ್ಟೇ ರಿಲೀಸ್ ಆಗಬೇಕಿರುವ ಅಜಯ್ ದೇವಗನ್ ನಟನೆಯ ‘ಥ್ಯಾಂಕ್ ಗಾಡ್’ (Thank god) ಸಿನಿಮಾದ ಟ್ರೈಲರ್ ರಿಲೀಸ್ ಆಗಿದ್ದು, ಅದರಲ್ಲಿ ಧಾರ್ಮಿಕ ಭಾವನೆಗೆ ಧಕ್ಕೆ ತರುವ ಸನ್ನಿವೇಶವಿದೆ ಎಂದು ಹಿಮಾಂಶು ಶ್ರೀವಾಸ್ತವ್ ಎನ್ನುವವರು ಹೆಚ್ಚುವರಿ ಮ್ಯಾಜಿಸ್ಟ್ರೇಟ್ ಮೋನಿಕಾ ಮಿಶ್ರಾ ಅವರ ನ್ಯಾಯಾಲದಲ್ಲಿ (Court) ಪ್ರಕರಣ ದಾಖಲಾಗಿದೆ.

    ಥ್ಯಾಂಕ್ ಗಾಡ್ ಸಿನಿಮಾದಲ್ಲಿ ಚಿತ್ರಗುಪ್ತ ದೇವರನ್ನು ಪೂಜಿಸುವ ಕಾಯಸ್ಥ ಸಮುದಾಯದ ಭಾವನೆಗಳಿಗೆ ಧಕ್ಕೆ ತರಲಾಗಿದೆ ಎಂದು ಹಿಮಾಂಶು 9Himanshu Srivastav) ಆರೋಪ ಮಾಡಿದ್ದು, ಚಿತ್ರದ ನಟ ಅಜಯ್ ದೇವಗನ್, ಸಿದ್ಧಾರ್ಥ ಮಲ್ಹೋತ್ರಾ ಹಾಗೂ ಇಂದ್ರ ಕುಮಾರ್ ಮೇಲೆ ದೂರು ನೀಡಿದ್ದರು. ಹಿಮಾಂಶು ಅವರ ಹೇಳಿಕೆಯನ್ನು ದಾಖಲಿಸಲು ನ್ಯಾಯಾಧೀಶರು ನವೆಂಬರ್ 18 ದಿನಾಂಕ ನಿಗದಿ ಮಾಡಿದ್ದಾರೆ.

    ಅಜಯ್ ದೇವಗನ್ ಮುಖ್ಯ ಭೂಮಿಕೆಯ ಥ್ಯಾಂಕ್ ಗಾಡ್ ಸಿನಿಮಾ ತನ್ನದೇ ಆದ ಕಾರಣಗಳಿಂದಾಗಿ ಕುತೂಹಲ ಮೂಡಿಸಿದೆ. ಈಗಾಗಲೇ ಸಿನಿಮಾದ ಟ್ರೈಲರ್ ರಿಲೀಸ್ ಆಗಿದ್ದು, ಸಖತ್ ಮನರಂಜನೆ ಜೊತೆಗೆ ಒಂದೊಳ್ಳೆ ಸಂದೇಶವನ್ನು ನೀಡುವಂತಹ ಸಿನಿಮಾ ಇದಾಗಿದೆ. ಅಜಯ್ ದೇವಗನ್ ಕೂಡ ತುಂಬಾ ಚೆನ್ನಾಗಿ ನಟಿಸಿದ್ದಾರೆ. ಅಕ್ಟೋಬರ್ 25ಕ್ಕೆ ಈ ಸಿನಿಮಾ ರಿಲೀಸ್ ಆಗುತ್ತಿದ್ದು, ಅದಕ್ಕೂ ಮುನ್ನ ಟ್ರೈಲರ್ ಸದ್ದು ಮಾಡುತ್ತಿದೆ.

    Live Tv
    [brid partner=56869869 player=32851 video=960834 autoplay=true]

  • ‘ಥ್ಯಾಂಕ್ ಗಾಡ್’ ಚಿತ್ರದಲ್ಲಿ ಧಾರ್ಮಿಕ ಭಾವನೆಗೆ ಧಕ್ಕೆ: ನಟ ಅಜಯ್ ದೇವಗನ್ ವಿರುದ್ಧ ದೂರು ದಾಖಲು

    ‘ಥ್ಯಾಂಕ್ ಗಾಡ್’ ಚಿತ್ರದಲ್ಲಿ ಧಾರ್ಮಿಕ ಭಾವನೆಗೆ ಧಕ್ಕೆ: ನಟ ಅಜಯ್ ದೇವಗನ್ ವಿರುದ್ಧ ದೂರು ದಾಖಲು

    ಧಾರ್ಮಿಕ ಭಾವನೆಗಳಿಗೆ ಧಕ್ಕೆ ತರಲಾಗಿದೆ ಎಂದು ಆರೋಪಿಸಿ ಬಾಲಿವುಡ್ ನಟ ಅಜಯ್ ದೇವಗನ್ (Ajay Devgan) ಸೇರಿದಂತೆ ಮೂವರು ಮೇಲೆ ದೂರು ದಾಖಲಾಗಿದೆ. ಇನ್ನೆಷ್ಟೇ ರಿಲೀಸ್ ಆಗಬೇಕಿರುವ ಅಜಯ್ ದೇವಗನ್ ನಟನೆಯ ‘ಥ್ಯಾಂಕ್ ಗಾಡ್’ ಸಿನಿಮಾದ ಟ್ರೈಲರ್ ರಿಲೀಸ್ ಆಗಿದ್ದು, ಅದರಲ್ಲಿ ಧಾರ್ಮಿಕ ಭಾವನೆಗೆ ಧಕ್ಕೆ ತರುವ ಸನ್ನಿವೇಶವಿದೆ ಎಂದು ಹಿಮಾಂಶು ಶ್ರೀವಾಸ್ತವ್ ಎನ್ನುವವರು ಹೆಚ್ಚುವರಿ ಮ್ಯಾಜಿಸ್ಟ್ರೇಟ್ ಮೋನಿಕಾ ಮಿಶ್ರಾ ಅವರ ನ್ಯಾಯಾಲದಲ್ಲಿ ಪ್ರಕರಣ (Complaint)  ದಾಖಲಾಗಿದೆ.

    ಥ್ಯಾಂಕ್ ಗಾಡ್ (Thank God) ಸಿನಿಮಾದಲ್ಲಿ ಚಿತ್ರಗುಪ್ತ ದೇವರನ್ನು ಪೂಜಿಸುವ ಕಾಯಸ್ಥ ಸಮುದಾಯದ ಭಾವನೆಗಳಿಗೆ ಧಕ್ಕೆ ತರಲಾಗಿದೆ ಎಂದು ಹಿಮಾಂಶು ಆರೋಪ ಮಾಡಿದ್ದು, ಚಿತ್ರದ ನಟ ಅಜಯ್ ದೇವಗನ್, ಸಿದ್ಧಾರ್ಥ ಮಲ್ಹೋತ್ರಾ ಹಾಗೂ ಇಂದ್ರ ಕುಮಾರ್ ಮೇಲೆ ದೂರು ನೀಡಿದ್ದರು. ಹಿಮಾಂಶು (Himanshu Srivastav) ಅವರ ಹೇಳಿಕೆಯನ್ನು ದಾಖಲಿಸಲು ನ್ಯಾಯಾಧೀಶರು ನವೆಂಬರ್ 18 ದಿನಾಂಕ ನಿಗದಿ ಮಾಡಿದ್ದಾರೆ. ಇದನ್ನೂ ಓದಿ:ಬಿಗ್ ಬಾಸ್ ಟಿವಿ ಸೀಸನ್‌ನಲ್ಲಿ ಮತ್ತೆ ಪ್ರಶಾಂತ್‌ ಸಂಬರಗಿ, ಅನುಪಮಾ ಗೌಡ, ದೀಪಿಕಾ ದಾಸ್‌

    ಅಜಯ್ ದೇವಗನ್ ಮುಖ್ಯ ಭೂಮಿಕೆಯ ಥ್ಯಾಂಕ್ ಗಾಡ್ ಸಿನಿಮಾ ತನ್ನದೇ ಆದ ಕಾರಣಗಳಿಂದಾಗಿ ಕುತೂಹಲ ಮೂಡಿಸಿದೆ. ಈಗಾಗಲೇ ಸಿನಿಮಾದ ಟ್ರೈಲರ್ ರಿಲೀಸ್ ಆಗಿದ್ದು, ಸಖತ್ ಮನರಂಜನೆ ಜೊತೆಗೆ ಒಂದೊಳ್ಳೆ ಸಂದೇಶವನ್ನು ನೀಡುವಂತಹ ಸಿನಿಮಾ ಇದಾಗಿದೆ. ಅಜಯ್ ದೇವಗನ್ ಕೂಡ ತುಂಬಾ ಚೆನ್ನಾಗಿ ನಟಿಸಿದ್ದಾರೆ. ಅಕ್ಟೋಬರ್ 25ಕ್ಕೆ ಈ ಸಿನಿಮಾ ರಿಲೀಸ್ ಆಗುತ್ತಿದ್ದು, ಅದಕ್ಕೂ ಮುನ್ನ ಟ್ರೈಲರ್ ಸದ್ದು ಮಾಡುತ್ತಿದೆ.

    Live Tv
    [brid partner=56869869 player=32851 video=960834 autoplay=true]