Tag: ajay mishra

  • ಕೇಂದ್ರ ಸಚಿವ ಅಜಯ್ ಮಿಶ್ರಾ ಥೇನಿ ಸೋದರಳಿಯ ರಸ್ತೆ ಅಪಘಾತದಲ್ಲಿ ದುರ್ಮರಣ

    ಕೇಂದ್ರ ಸಚಿವ ಅಜಯ್ ಮಿಶ್ರಾ ಥೇನಿ ಸೋದರಳಿಯ ರಸ್ತೆ ಅಪಘಾತದಲ್ಲಿ ದುರ್ಮರಣ

    ಲಕ್ನೋ: ಕೇಂದ್ರ ಗೃಹ ಖಾತೆ ಸಚಿವ ಅಜಯ್ ಮಿಶ್ರಾ ಥೇನಿ ಅವರ ಸೋದರಳಿಯ ರಸ್ತೆ ಅಪಘಾತದಲ್ಲಿ ಇಂದು ಮೃತಪಟ್ಟಿದ್ದಾರೆ.

    ಸೋನು ಮಿಶ್ರಾ ಮೃತ ದುರ್ದೈವಿ. ಲಖಿಂಪುರ ಖೇರಿ ಜಿಲ್ಲೆಯಲ್ಲಿ ಸಂಜೆ 5:10ರ ಸುಮಾರಿಗೆ ಬೀಸಿದ ಪ್ರಬಲ ಬಿರುಗಾಳಿಯಿಂದ ಈ ದುರ್ಘಟನೆ ನಡೆದಿದೆ.

    ಸೋನು ಅವರು ಇಂದು ತಮ್ಮ ಮೋಟಾರ್ ಸೈಕಲ್‍ನಲ್ಲಿ ಬನ್ವಾರಿಪುರದಿಂದ ಲಖಿಂಪುರಕ್ಕೆ ಬರುತ್ತಿದ್ದರು. ಈ ವೇಳೆ ಖಂಬರಖೇಡ ಸಕ್ಕರೆ ಕಾರ್ಖಾನೆ ಬಳಿ ಜೋರಾಗಿ ಬಿರುಗಾಳಿ ಬೀಸಿದೆ. ಈ ಸಂದರ್ಭದಲ್ಲಿ ರಸ್ತೆ ಬದಿಯ ಮರವೊಂದು ಸೋನು ಅವರ ಬೈಕ್ ಮೇಲೆ ಬಿದ್ದಿದೆ. ಪರಿಣಾಮ ಬೈಕ್ ಸಮೇತ ಸೋನು ಮರದಡಿ ಅಪ್ಪಚ್ಚಿಯಾಗಿ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಇದನ್ನೂ ಓದಿ: ಜಮ್ಮು-ಕಾಶ್ಮೀರ ಗಡಿಯುದ್ದಕ್ಕೂ ಕಾಡ್ಗಿಚ್ಚು – ನೆಲಬಾಂಬ್‌ಗಳು ಸ್ಫೋಟ

    ಘಟನೆ ನಡೆದ ಕೂಡಲೇ ಸ್ಥಳೀಯರು ಸ್ಥಳಕ್ಕೆ ಧಾವಿಸಿ ಹೇಗೋ ಮರವನ್ನು ಕಡಿದು ತೆಗೆದು, ಅವರ ಮೃತ ದೇಹವನ್ನು ತೆಗೆದರು. ಸ್ವಲ್ಪ ಸಮಯದ ನಂತರ ಮೃತಪಟ್ಟಿರುವುದು ಕೇಂದ್ರ ಗೃಹ ಖಾತೆ ಸಚಿವ ಅಜಯ್ ಮಿಶ್ರಾ ಥೇನಿ ಅವರ ಸೋದರಳಿಯ ಸೋನು ಮಿಶ್ರಾ ಎಂದು ಜನರಿಗೆ ತಿಳಿದುಬಂದಿದೆ. ಇದನ್ನೂ ಓದಿ: ಅಸ್ಸಾಂನಲ್ಲಿ ಪ್ರವಾಹ – 4 ಲಕ್ಷಕ್ಕೂ ಅಧಿಕ ಮಂದಿಗೆ ಹಾನಿ, ಕೊಚ್ಚಿಹೋದ ರಸ್ತೆ, ರೈಲು ಹಳಿ

    ಇತ್ತ ಅಜಯ್ ಮಿಶ್ರಾ ಥೇನಿ ಗುರುವಾರ ಪ್ರಯಾಗರಾಜ್‍ಗೆ ಬರಬೇಕಿತ್ತು. ಆದರೆ ಸೋದರಳಿಯನ ಮರಣದ ಸುದ್ದಿ ಕೇಳಿ ತಮ್ಮ ಎಲ್ಲಾ ಕೆಲಸವನ್ನು ಬಿಟ್ಟು ಅಂತಿಮ ಸಂಸ್ಕಾರಕ್ಕಾಗಿ ಅವರು ಲಖಿಂಪುರ ಖೇರಿಗೆ ತೆರಳಿದ್ದಾರೆ.

  • ಜ್ಞಾನವಾಪಿ ಮಾಹಿತಿ ಲೀಕ್ – ಚಿತ್ರೀಕರಣದಲ್ಲಿ ಭಾಗಿಯಾಗಿದ್ದ ಅಧಿಕಾರಿ ವಜಾ

    ಜ್ಞಾನವಾಪಿ ಮಾಹಿತಿ ಲೀಕ್ – ಚಿತ್ರೀಕರಣದಲ್ಲಿ ಭಾಗಿಯಾಗಿದ್ದ ಅಧಿಕಾರಿ ವಜಾ

    ಲಕ್ನೋ: ಉತ್ತರಪ್ರದೇಶದ ವಾರಣಾಸಿ ಜ್ಞಾನವಾಪಿ ಮಸೀದಿಯ ಸಮೀಕ್ಷೆಯ ವರದಿ ನ್ಯಾಯಾಲಯಕ್ಕೆ ಸಲ್ಲುವ ಮೊದಲೇ ಸೋರಿಕೆಯಾಗಿರುವ ಕುರಿತಂತೆ ವಾರಣಾಸಿ ನ್ಯಾಯಾಲಯ ಚಿತ್ರೀಕರಣದಲ್ಲಿ ಭಾಗಿಯಾಗಿದ್ದ ಉನ್ನತ ಅಧಿಕಾರಿ ಅಜಯ್ ಮಿಶ್ರಾ ಅವರನ್ನು ವಜಾಗೊಳಿಸಿದೆ.

    ನ್ಯಾಯಾಲಯ ಜ್ಞಾನವಾಪಿ ಮಸೀದಿಯ ವರದಿ ಸಲ್ಲಿಸಲು 2 ದಿನಗಳ ಕಾಲಾವಕಾಶ ನೀಡಿದೆ. ವರದಿ ಸಲ್ಲಿಕೆಗೂ ಮುನ್ನವೇ ಮಾಧ್ಯಮಗಳಿಗೆ ಚಿತ್ರೀಕರಣದ ಸಂಗತಿಗಳು ಸೋರಿಕೆಯಾದ ಹಿನ್ನೆಲೆಯಲ್ಲಿ ಅಡ್ವೋಕೇಟ್ ಕಮಿಷನರ್ ಅಜಯ್ ಮಿಶ್ರಾ ಅವರನ್ನು ನ್ಯಾಯಾಲಯ ವಜಾಗೊಳಿಸಿದೆ. ಇದನ್ನೂ ಓದಿ: ಶಿವಲಿಂಗ ಪತ್ತೆಯಾದ ಜಾಗವನ್ನು ರಕ್ಷಿಸಿ: ಸುಪ್ರೀಂ ಕೋರ್ಟ್‌

    ಈ ಹಿಂದೆ ನ್ಯಾಯಾಲಯ ಮೇ 17ರ ಒಳಗಾಗಿ ಸಮೀಕ್ಷಾ ವರದಿಗಳನ್ನು ನೀಡಬೇಕೆಂದು ಆದೇಶ ನೀಡಿತ್ತು. ಇದೀಗ ವರದಿ ಸಲ್ಲಿಸಲು ಆಯೋಗಕ್ಕೆ ನ್ಯಾಯಾಲಯ ಇನ್ನೆರಡು ದಿನಗಳ ಕಾಲಾವಕಾಶವನ್ನೂ ನೀಡಿದೆ. ವರದಿ ಸೋರಿಕೆಯಲ್ಲಿ ಪಾತ್ರವಹಿಸಿದ್ದ ಅಜಯ್ ಮಿಶ್ರಾ ಅವರನ್ನು ನ್ಯಾಯಾಲಯ ವಜಾಗೊಳಿಸಿದೆ ಎಂದು ಸಹಾಯಕ ವಕೀಲ ಕಮಿಷನರ್ ಅಜಯ್ ಪ್ರತಾಪ್ ಸಿಂಗ್ ತಿಳಿಸಿದ್ದಾರೆ. ಇದನ್ನೂ ಓದಿ: ರಾಜ್ಯದಲ್ಲಿ ಮತಾಂತರ ನಿಷೇಧ ಕಾಯ್ದೆ ಜಾರಿ


    ಅಜಯ್ ಮಿಶ್ರಾ ಸಮೀಕ್ಷೆಗೆ ಸಂಬಂಧಿಸಿದ ಮಾಹಿತಿಗಳನ್ನು ಮಾಧ್ಯಮಗಳಿಗೆ ಬಿಡುಗಡೆ ಮಾಡಿರುವುದಾಗಿ ವರದಿಯಾಗಿದೆ. ಈ ಹಿಂದೆ ಮಿಶ್ರಾ ಅವರನ್ನು ಅಡ್ವೋಕೇಟ್ ಕಮಿಷನರ್ ಸ್ಥಾನದಿಂದ ಕೈಬಿಡಬೇಕೆಂದು ಮಸೀದಿ ಆಡಳಿತ ಮಂಡಳಿಯ ವಕೀಲರು ಕೋರಿದ್ದರು. ಈ ಅರ್ಜಿಯನ್ನು ಕೋರ್ಟ್ ತಿರಸ್ಕರಿಸಿತ್ತು. ಇದಲ್ಲದೇ ಮಿಶ್ರಾ ಅವರಿಗೆ ನೆರವಾಗಲು ಹೆಚ್ಚುವರಿ ಕಮಿಷನರ್ ಹಾಗೂ ಸಹಾಯಕ ಕಮಿಷನರ್‌ಗಳನ್ನು ಕೋರ್ಟ್ ನೇಮಕ ಮಾಡಿತ್ತು.

  • ಬಿಜೆಪಿ ರೈತರನ್ನು ಬೆಂಬಲಿಸಲಿಲ್ಲ: ಪ್ರಿಯಾಂಕಾ ಗಾಂಧಿ ಕಿಡಿ

    ಬಿಜೆಪಿ ರೈತರನ್ನು ಬೆಂಬಲಿಸಲಿಲ್ಲ: ಪ್ರಿಯಾಂಕಾ ಗಾಂಧಿ ಕಿಡಿ

    ನವದೆಹಲಿ: ಬಿಜೆಪಿ ಸರ್ಕಾರ ರೈತರೊಂದಿಗೆ ನಿಲ್ಲುವ ಬದಲು ಲಖಿಂಪುರದ ಗೃಹ ಖಾತೆ ರಾಜ್ಯ ಸಚಿವ ಅಜಯ್ ಮಿಶ್ರಾ ಅವರಿಗೆ ಬೆಂಬಲ ನೀಡಿದೆ ಎಂದು ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ ಕಿಡಿಕಾರಿದರು.

    ಈ ಬಗ್ಗೆ ಮಾತನಾಡಿ ಲಖಿಂಪುರ ಹತ್ಯಾಕಾಂಡಕ್ಕೆ ಅಜಯ್ ಮಿಶ್ರಾ ಅವರ ಭಾಷಣವೇ ಕಾರಣವಾಗಿದೆ ಎಂದು ಅಲಹಾಬಾದ್ ಹೈಕೋರ್ಟ್ ಹೇಳಿದೆ. ಉನ್ನತ ಹುದ್ದೆಯಲ್ಲಿದ್ದ ಅಧಿಕಾರಿಗಳು ಬೇಜವಾಬ್ದಾರಿಯ ಹೇಳಿಕೆಗಳನ್ನು ನೀಡಬಾರದು. ಸಚಿವರು ಅವರ ಸ್ಥಾನಮಾನಕ್ಕೆ ಹಾಗೂ ಇಲಾಖೆಗೆ ಘನತೆ ತರುವ ಕೆಲಸವನ್ನು ಮಾಡಬೇಕು ಎಂದು ತಿಳಿಸಿದರು.

    ಲಖಿಂಪುರಂನ ನ್ಯಾಯಕ್ಕಾಗಿ ಹೋರಾಟ ಮುಂದುವರಿದಿದೆ. ಸಂತ್ರಸ್ತ ರೈತರ ಕುಟುಂಬದ ಜೊತೆಗೆ ನಾವಿದ್ದೇವೆ. ನ್ಯಾಯಕ್ಕಾಗಿ ಹೋರಾಟ ನಡೆಡಸುತ್ತೇವೆ ಎಂದರು. ಇದನ್ನೂ ಓದಿ: ಮಾಜಿ ಸಿಎಂ ಸಿದ್ದು ಆಪ್ತರ ಮೇಲೆ ಅನುಮಾನ ಪಟ್ಟಿದ್ದಾರಾ ಡಿಕೆಶಿ?

    ಉನ್ನತ ಹುದ್ದೆಯಲ್ಲಿರುವ ರಾಜಕಾರಣಿಗಳು ಬೇಜವಾಬ್ದಾರಿ ಹೇಳಿಕೆಗಳನ್ನು ನೀಡಬಾರದು. ತಮ್ಮ ಸ್ಥಾನಮಾನ ಹಾಗೂ ಹುದ್ದೆಯ ಘನತೆಗೆ ತಕ್ಕ ರೀತಿಯಲ್ಲಿ ನಡೆದುಕೊಳ್ಳಬೇಕು ಎಂದು ಅಲಹಾಬಾದ್ ಹೈಕೋರ್ಟ್ ಸೋಮವಾರ ಹೇಳಿತ್ತು.

    ಲಖಿಂಪುರ ಖೇರಿ ಪ್ರಕರಣದ ಆರೋಪಿಗಳ ಜಾಮೀನು ಅರ್ಜಿಯ ವಿಚಾರಣೆ ವೇಳೆ ಹೈಕೋರ್ಟ್‍ನ ಲಖನೌ ಪೀಠ ಈ ಅಭಿಪ್ರಾಯ ವ್ಯಕ್ತಪಡಿಸಿತ್ತು. ಅಲ್ಲದೆ, ಜಾಮೀನು ನಿರಾಕರಿಸಿತ್ತು. ಇದರ ಬೆನ್ನಲ್ಲೇ ಪ್ರಿಯಾಂಕಾ ಅವರು ಬಿಜೆಪಿ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಇದನ್ನೂ ಓದಿ: ಅಣ್ಣಮ್ಮ ದೇವಿ ಮೆರವಣಿಯಲ್ಲಿ ಹಿಂದೂ, ಮುಸ್ಲಿಂ ಮುಖಂಡರ ಭರ್ಜರಿ ಡಾನ್ಸ್

  • ಅಪರಾಧಿ ಹಾಗೂ ಬೆಂಬಲಿಗರ ಬಂಧನ: ಅಖಿಲೇಶ್ ಯಾದವ್

    ಅಪರಾಧಿ ಹಾಗೂ ಬೆಂಬಲಿಗರ ಬಂಧನ: ಅಖಿಲೇಶ್ ಯಾದವ್

    ಲಕ್ನೋ: ಲಖಿಂಪುರ ಪ್ರಕರಣದಲ್ಲಿ ಕೇಂದ್ರ ಸಚಿವ ಅಜಯ್ ಮಿಶ್ರಾ ಅವರ ಪುತ್ರನಿಗೆ ಜಾಮೀನು ನೀಡಿರುವುದನ್ನು ಖಂಡಿಸಿದ ಸಮಾಜವಾದಿ ಪಕ್ಷದ ಅಧ್ಯಕ್ಷ ಅಖೀಲೇಶ್ ಯಾದವ್ ಅವರು, ತಾವು ಅಧಿಕಾರಕ್ಕೆ ಬಂದರೆ ಅಪರಾಧಿಗಳನ್ನು ಹಾಗೂ ಅಪರಾಧಿಗಳ ರಕ್ಷಕರನ್ನು ಜೈಲಿಗೆ ಕಳಿಸುವುದಾಗಿ ಭರವಸೆ ನೀಡಿದರು.

    ಚುನಾವಣಾ ಸಭೆಯಲ್ಲಿ ಮಾತನಾಡಿದ ಅವರು, ರೈತರನ್ನು ತುಳಿದ ಸಚಿವರ ಮಗನಿಗೆ ನ್ಯಾಯಾಲಯದಿಂದ ಜಾಮೀನು ಸಿಕ್ಕಿದೆ. ಸರ್ಕಾರವು ಪ್ರಕರಣದ ತನಿಖೆಯನ್ನು ಸರಿಯಾದ ರೀತಿಯಲ್ಲಿ ಮುಂದುವರಿಸಿಲ್ಲ. ಆದರೆ ನಮ್ಮ ಸರ್ಕಾರ ಬಂದಾಗ ರೈತರ ಜೀವವನ್ನು ತೆಗೆದುಕೊಂಡ ಆರೋಪಿಗಳಿಗೆ ಮಾತ್ರವಲ್ಲದೇ ಅವರನ್ನು ರಕ್ಷಿಸಿದವರನ್ನು ಬಂಧಿಸಲಾಗುವುದು. ಜೊತೆ ಪ್ರಕರಣದ ಕುರಿತು ಸರಿಯಾಗಿ ತನಿಖೆ ನಡೆಸಲಾಗುವುದು ಎಂದ ಅವರು, ಕಾನೂನನ್ನು ತಮ್ಮ ಕೈಯಲ್ಲಿ ತೆಗೆದುಕೊಳ್ಳಲು ಬಯಸುವವರು ಮುಂಬರುವ ಚುನಾವಣೆಯಲ್ಲಿ ತಮ್ಮ ಪಕ್ಷಕ್ಕೆ ಮತ ಹಾಕುವ ಅಗತ್ಯವಿಲ್ಲ ಎಂದು ನುಡಿದರು.

    ನವ ಉತ್ತರಪ್ರದೇಶಕ್ಕೆ ಸಮಾಜವಾದಿ ಪಕ್ಷಕ್ಕೆ ಮತ ಕೇಳಿದ ಅವರು, ತಮ್ಮ ಪಕ್ಷವು ಅಧಿಕಾರಕ್ಕೆ ಬಂದರೆ ಖಾಲಿ ಇರುವ ಎಲ್ಲಾ ಸರ್ಕಾರಿ ಹುದ್ದೆಗಳನ್ನು ಮಾಡುವುದರ ಜೊತೆಗೆ ಇನ್ನೂ ಕೆಲವು ಪೊಲೀಸ್ ಹುದ್ದೇಗಳನ್ನು ಸೃಷ್ಟಿಸುವುದಾಗಿ ಭರವಸೆ ನೀಡಿದರು. ಸರ್ಕಾರಿ ನೌಕರರ ಬಹುಕಾಲದ ಬೇಡಿಕೆಯಂತೆ ಹಳೆ ಪಿಂಚಣಿ ಯೋಜನೆ ಜಾರಿಗೊಳಿಸುವುದಾಗಿ ಈಗಾಗಲೇ ಭರವಸೆ ನೀಡಿರುವ ಅವರು, ಉದ್ಯೋಗ ಪಡೆಯಲು ವಯೋಮಿತಿ ಸಡಿಲಿಸುವ ಭರವಸೆ ನೀಡಿ ನಿರುದ್ಯೋಗಿ ಯುವಕರನ್ನು ಓಲೈಸಲು ಯತ್ನಿಸಿದರು. ಇದನ್ನೂ ಓದಿ: ಪುಟ್ಟ ಕಂದಮ್ಮನೊಂದಿಗೆ ಪತಿಯನ್ನು ಹುಡುಕುತ್ತಾ ಕಾಡಿಗೆ ತೆರಳಿದ ಪತ್ನಿ..!

    ಕೇಂದ್ರ ಗೃಹ ಖಾತೆ ರಾಜ್ಯ ಸಚಿವ ಅಜಯ್ ಮಿಶ್ರಾ ಅವರ ಪುತ್ರ ಆಶಿಶ್ ಮಿಶ್ರಾ ಸೇರಿದಂತೆ ನಾಲ್ವರು ಲಖಿಂಪುರದ ಖೇರಿಯ ಎಂಟು ಜನರ ಸಾವಿಗೆ ಕಾರಣವಾದ ಆರೋಪಿಯಾಗಿದ್ದಾರೆ. ಆಶಿಶ್ ಮಿಶ್ರಾ ಅವರಿಗೆ ಇತ್ತೀಚೆಗೆ ಜಾಮೀನು ನೀಡಲಾಯಿತು ಮತ್ತು ಕಳೆದ ವರ್ಷ ಅಕ್ಟೋಬರ್‍ನಲ್ಲಿ ಅವರನ್ನು ಬಂಧಿಸಿದ ನಂತರ ಲಖಿಂಪುರ ಖೇರಿ ಜೈಲಿನಿಂದ ಬಿಡುಗಡೆ ಮಾಡಲಾಗಿದೆ. ಇದನ್ನೂ ಓದಿ: ಏರ್ ಇಂಡಿಯಾ ವಿಶ್ವದಲ್ಲೇ ಅತ್ಯುತ್ತಮವಾಗಿಸುವುದು ನಮ್ಮ ಗುರಿ: ಎನ್ ಚಂದ್ರಶೇಖರನ್

  • ಲಖಿಂಪುರ ಗಲಭೆಯ ಮುಖ್ಯ ಆರೋಪಿ ಆಶಿಶ್ ಮಿಶ್ರಾಗೆ ಜಾಮೀನು

    ಲಖಿಂಪುರ ಗಲಭೆಯ ಮುಖ್ಯ ಆರೋಪಿ ಆಶಿಶ್ ಮಿಶ್ರಾಗೆ ಜಾಮೀನು

    ಲಕ್ನೋ: ಕಳೆದ ವರ್ಷ ನಡೆದ ಲಖಿಂಪುರ ಗಲಾಟೆಯಲ್ಲಿ ಮುಖ್ಯ ಆರೋಪಿಯಾಗಿರುವ ಕೇಂದ್ರ ಸಚಿವ ಅಜಯ್ ಮಿಶ್ರಾ ಅವರ ಪುತ್ರ ಆಶಿಶ್ ಮಿಶ್ರಾ ಅವರಿಗೆ ಅಲಹಾಬಾದ್ ಹೈಕೋರ್ಟ್‍ನ ಲಕ್ನೋ ಪೀಠ ಜಾಮೀನು ಮಂಜೂರು ಮಾಡಿದೆ.

    ಕಳೆದ ವರ್ಷ ಲಖೀಂಪುರ ಖೇರಿ ಹಿಂಸಾಚಾರ ಪ್ರಕರಣದ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡವು ಆಶಿಶ್ ಮಿಶ್ರಾ ಎಂಬ ಆರೋಪಪಟ್ಟಿಯಲ್ಲಿ ಪ್ರಕರಣದ ಪ್ರಮುಖ ಆರೋಪಿ ಎಂದು ಹೆಸರಿಸಿತ್ತು. ಪ್ರತಿಭಟನಾನಿರತ ರೈತರ ಹತ್ಯೆಗೆ ಯೋಜಿತ ಸಂಚು ನಡೆದಿದೆ ಎಂದು ಹೇಳಿತ್ತು. 5,000 ಪುಟಗಳ ಚಾರ್ಜ್‍ಶೀಟ್‍ನಲ್ಲಿ, ಪ್ರಕರಣದ ಆರೋಪಿಗಳ ಸಂಖ್ಯೆಯನ್ನು 14ಕ್ಕೆ ಹೆಚ್ಚಿಸಲಾಗಿದೆ.

    ಮೂರು ವಿವಾದಾತ್ಮಕ ಕೃಷಿ ಕಾನೂನುಗಳ ವಿರುದ್ಧ ರೈತರ ಪ್ರತಿಭಟನೆಯ ಸಂದರ್ಭದಲ್ಲಿ 2021ರ ಅಕ್ಟೋಬರ್ 3ರಂದು ನಡೆದ ಲಖಿಂಪುರ ಖೇರಿ ಹಿಂಸಾಚಾರ ಘಟನೆಯಲ್ಲಿ ಎಂಟು ಜನರು ಸಾವನ್ನಪ್ಪಿದ್ದರು. ಘಟನೆ ಸಂಬಂಧ ಆಶಿಶ್ ಮಿಶ್ರಾ ಮತ್ತು ಕೇಂದ್ರದ ಮಾಜಿ ಸಚಿವ ಅಖಿಲೇಶ್ ದಾಸ್ ಅವರ ಸೋದರಳಿಯ ಅಂಕಿತ್ ದಾಸ್ ಪ್ರಕರಣದಲ್ಲಿ ಆರೋಪಿಗಳಾಗಿದ್ದಾರೆ. ಈ ಹಿನ್ನೆಲೆಯಲ್ಲಿ ಕಳೆದ ವರ್ಷ ಅ.9ರಂದು ಮಿಶ್ರಾ ಅವರನ್ನು ಬಂಧಿಸಲಾಗಿತ್ತು. ಇದನ್ನೂ ಓದಿ: ಬಹುಮಾನ ಘೋಷಣೆ ಮಾಡಿದ ಸಂಘಟನೆಯ ಬಗ್ಗೆ ಸಮಗ್ರ ತನಿಖೆಯಾಗಬೇಕು: ಯತ್ನಾಳ್

    ಉತ್ತರ ಪ್ರದೇಶದಲ್ಲಿ ಮೊದಲ ಹಂತದ ಮತದಾನ ಆರಂಭವಾದ ದಿನವೇ ಆಶಿಶ್ ಮಿಶ್ರಾಗೆ ಜಾಮೀನು ದೊರೆತಿದ್ದು ಸಾಮಾಜಿಕ ಜಾಲತಾಣದಲ್ಲಿ ಚರ್ಚೆಗೆ ಗ್ರಾಸವಾಗಿದೆ. ರೈತ ಸಮುದಾಯದ ಪ್ರಾಬಲ್ಯವಿರುವ ಪಶ್ಚಿಮ ಉತ್ತರಪ್ರದೇಶದಲ್ಲಿ ಇಂದಿನಿಂದ ಮೊದಲನೇ ಹಂತದ ಮತದಾನ ಪ್ರಾಭವಾಗಿದೆ. ಇನ್ನೂ 6 ಹಂತದ ಮತದಾನ ಬಾಕಿಯಿದೆ. ಇದನ್ನೂ ಓದಿ: ಒಂಟಿ ಮಹಿಳೆ ಮೇಲೆ ಹಲ್ಲೆ ಮಾಡಿದ ರೌಡಿಶೀಟರ್

  • ಲಖೀಂಪುರ್ ರೈತರ ಹತ್ಯಾಕಾಂಡ ಪ್ರಕರಣ- ಅಶೀಶ್ ಮಿಶ್ರಾ SIT ವಶಕ್ಕೆ

    ಲಖೀಂಪುರ್ ರೈತರ ಹತ್ಯಾಕಾಂಡ ಪ್ರಕರಣ- ಅಶೀಶ್ ಮಿಶ್ರಾ SIT ವಶಕ್ಕೆ

    ಲಕ್ನೋ: ಲಖೀಂಪುರ್ ರೈತರ ಹತ್ಯಾಕಾಂಡ ಪ್ರಕರಣದಲ್ಲಿ ಕೇಂದ್ರ ಮಂತ್ರಿ ಅಜಯ್ ಮಿಶ್ರಾ ಪುತ್ರ ಅಶೀಶ್ ಮಿಶ್ರಾನನ್ನು  ವಿಶೇಷ ತನಿಖಾ ತಂಡ (ಎಸ್‍ಐಟಿ) ವಶಕ್ಕೆ ಪಡೆದಿದೆ.

    ನಿನ್ನೆ ಉತ್ತರಪ್ರದೇಶ ಸರ್ಕಾರವನ್ನು ಸುಪ್ರೀಂಕೋರ್ಟ್ ತರಾಟೆಗೆ ತೆಗೆದುಕೊಂಡಿದ್ದ ಬೆನ್ನಲ್ಲೇ, ಇವತ್ತು ವಿಚಾರಣೆಗೆ ಹಾಜರಾದ ಅಶೀಶ್ ಮಿಶ್ರಾನನ್ನು ವಶಕ್ಕೆ ಪಡೆಯಲಾಗಿದೆ. ಆದರೆ ವಿಚಾರಣೆಯ ಮಾಹಿತಿ ಸೋರಿಕೆ ಆಗೋ ಭಯದಲ್ಲಿ, ಕ್ರೈಂಬ್ರಾಂಚ್ ಕಚೇರಿ ಸುತ್ತಮುತ್ತ ಇಂಟರ್ನೆಟ್ ಸೇವೆ ಬಂದ್ ಮಾಡಲಾಗಿತ್ತು. ಬಿಗಿ ಪೊಲೀಸ್ ಬಂದೋಬಸ್ತ್ ಕೈಗೊಳ್ಳಲಾಗಿತ್ತು. ನಿನ್ನೆ ನನ್ನ ಮಗನಿಗೆ ಆರೋಗ್ಯ ಕೆಟ್ಟಿತ್ತು. ಹೀಗಾಗಿ ವಿಚಾರಣೆಗೆ ಬಂದಿರಲಿಲ್ಲ ಅಷ್ಟೇ. ನೇಪಾಳಕ್ಕೆ ಓಡಿ ಹೋಗಿದ್ದಾನೆ ಅನ್ನೋದೆಲ್ಲಾ ಸುಳ್ಳು. ನನ್ನ ಮಗ ಅಮಾಯಕ ಎಂದು ಕೇಂದ್ರ ಮಂತ್ರಿ ಹೇಳಿದ್ದಾರೆ. ಇದನ್ನೂ ಓದಿ: ಲಖಿಂಪುರ ಖೇರಿ ಹಿಂಸಾಚಾರ- ಯುಪಿ ಸರ್ಕಾರದಿಂದ 45 ಲಕ್ಷ ರೂ.ಪರಿಹಾರ ಘೋಷಣೆ

    ಈ ಮಧ್ಯೆ, ರೈತರ ಹತ್ಯೆ ಬಳಿಕದ ಹಿಂಸಾಚಾರವನ್ನು ರೈತ ಮುಖಂಡ ರಾಕೇಶ್ ಟಿಕಾಯತ್ ಸಮರ್ಥಿಸಿಕೊಂಡಿದ್ದು, ರೈತರನ್ನು ಹತ್ಯೆ ಮಾಡಿದಕ್ಕಾಗಿ ಬಿಜೆಪಿ ಕಾರ್ಯಕರ್ತನನ್ನು ಹತ್ಯೆ ಮಾಡಲಾಗಿದೆ ಇದು ಕ್ರಿಯೆಗೆ ಪ್ರತಿಕ್ರಿಯೆ ಸಹಜ ಎಂದಿದ್ದಾರೆ. ಇದನ್ನೂ ಓದಿ: ಲಖಿಂಪುರ್ ಸಂತ್ರಸ್ತ ಕುಟುಂಬಗಳಿಗೆ ಹಣ ಬೇಕಿಲ್ಲ, ನ್ಯಾಯ ಬೇಕು: ಪ್ರಿಯಾಂಕಾ ಗಾಂಧಿ

  • ಲಖಿಂಪುರ್ ಸಂತ್ರಸ್ತ ಕುಟುಂಬಗಳಿಗೆ ಹಣ ಬೇಕಿಲ್ಲ, ನ್ಯಾಯ ಬೇಕು: ಪ್ರಿಯಾಂಕಾ ಗಾಂಧಿ

    ಲಖಿಂಪುರ್ ಸಂತ್ರಸ್ತ ಕುಟುಂಬಗಳಿಗೆ ಹಣ ಬೇಕಿಲ್ಲ, ನ್ಯಾಯ ಬೇಕು: ಪ್ರಿಯಾಂಕಾ ಗಾಂಧಿ

    ಲಕ್ನೋ: ಲಖಿಂಪುರ್ ಖೇರಿಯಲ್ಲಿ ನಡೆದ ಹಿಂಸಾಚಾರ ಸಂಘರ್ಷದಲ್ಲಿ ಸಾವನ್ನಪ್ಪಿದ ರೈತರ ಕುಟುಂಬಗಳಿಗೆ ಸರ್ಕಾರದಿಂದ ಪರಿಹಾರದ ಹಣ ಬೇಕಿಲ್ಲ. ಆದರೆ ಅವರಿಗೆ ನ್ಯಾಯ ಬೇಕಾಗಿದೆ ಎಂದು ಕಾಂಗ್ರೆಸ್ ನಾಯಕಿ ಪ್ರಿಯಾಂಕ ಗಾಂಧಿ ವಾದ್ರಾ ಹೇಳಿದ್ದಾರೆ.

     

    ಮಾಧ್ಯಮದೊಂದಿಗೆ ಮಾತನಾಡಿದ ಅವರು, ನಾನು ಆ ಕುಟುಂಬಗಳಿಗೆ ಭೇಟಿ ನೀಡಿದಾಗ ಅವರು ಸರ್ಕಾರದಿಂದ 45 ಲಕ್ಷ ರೂಪಾಯಿ ಪರಿಹಾರ ನೀಡಿರುವುದಾಗಿ ತಿಳಿಸಿದರು. ಆದರೆ ಅವರಿಗೆ ಬೇಕಾಗಿರುವುದು ಹಣವಲ್ಲ ನ್ಯಾಯ ಎಂದು ನುಡಿದಿದ್ದಾರೆ.

    ಕೇಂದ್ರ ಸಚಿವ ಅಜಯ್ ಮಿಶ್ರಾ ಟೆನಿ, ಆರೋಪಿ ಆಶಿಶ್ ಮಿಶ್ರಾ ಅವರ ತಂದೆ ಕ್ಯಾಬಿನೆಟ್‍ನಲ್ಲಿ ತಮ್ಮ ಸ್ಥಾನದಲ್ಲಿರುವವರೆಗೂ ನ್ಯಾಯಯುತವಾಗಿ ತನಿಖೆ ನಡೆಸಲು ಸಾಧ್ಯವಾಗುವುದಿಲ್ಲ. ಈ ಘಟನೆ ಕುರಿತಂತೆ ಉಚ್ಛ ನ್ಯಾಯಾಲಯದ ಹಾಲಿ ನ್ಯಾಯಾಧೀಶರು ವಿಚಾರಣೆ ನಡೆಸುತ್ತಿದ್ದು, ಗೃಹ ಸಚಿವರು ಕೂಡ ಅಲ್ಲಿಯೇ ಇರುವುದರಿಂದ ನ್ಯಾಯಯುತವಾಗಿ ತನಿಖೆ ನಡೆಸಲಾಗುತ್ತದೆ ಎಂಬುವುದನ್ನು ನಿರೀಕ್ಷಿಸಲು ಸಾಧ್ಯವಿಲ್ಲ ಎಂದಿದ್ದಾರೆ. ಇದನ್ನೂ ಓದಿ: ಲಖಿಂಪುರ ಖೇರಿ ಹಿಂಸಾಚಾರ- ಯುಪಿ ಸರ್ಕಾರದಿಂದ 45 ಲಕ್ಷ ರೂ.ಪರಿಹಾರ ಘೋಷಣೆ

     

    ಇದೇ ವೇಳೆ ಆಶಿಶ್ ಮಿಶ್ರಾ ಬಂಧನ ವಿಳಂಬ ಕುರಿತಂತೆ ಮಾತನಾಡಿದ ಅವರು, ಪೊಲೀಸರು ಎರಡು ಬಾರಿ ಆತನಿಗೆ ಸಮನ್ಸ್ ಜಾರಿಗೊಳಿಸಿದ್ದಾರೆ. ಕೊಲೆಗಾರನನ್ನು ಬಂಧಿಸುವ ಮೊದಲು ಆತನು ಚೇತರಿಸಿಕೊಳ್ಳಲು ಸಮಯ ನೀಡಲಾಗಿದೆಯೇ? ಪೊಲೀಸರು ಯಾಕೆ ಆತನನ್ನು ಇನ್ನೂ ಬಂಧಿಸಿಲ್ಲ ಎಂದು ಪ್ರಶ್ನಿಸಿದ್ದಾರೆ. ಅಲ್ಲದೇ ಪ್ರಧಾನಿ ಮೋದಿಯವರು, ಮಗನ ವಿರುದ್ಧ ಕೊಲೆ ಆರೋಪ ಇರುವುದರಿಂದ ಅಜಯ್ ಮಿಶ್ರಾ ತೆನಿ ಅವರನ್ನು ಕೆಂದ್ರ ಸಚಿವ ಸಂಪುಟದಿಂದ ವಜಾಗೊಳಿಸಬೇಕೆಂದು ಆಗ್ರಹಿಸಿದ್ದಾರೆ. ಇದನ್ನೂ ಓದಿ: ಹತ್ಯಾಕಾಂಡದ ನಂತರವೂ ಮೌನವಾಗಿರುವವರು ಈಗಾಗಲೇ ಸತ್ತಿದ್ದಾರೆ: ರಾಹುಲ್ ಗಾಂಧಿ

    ಇತ್ತೀಚೆಗಷ್ಟೇ ಮೋದಿಯವರು 75ನೇ ಸ್ವಾತಂತ್ರ್ಯ ದಿನಾಚರಣೆಯ ಅಂಗವಾಗಿ ಲಕ್ನೋಗೆ ಭೇಟಿ ನೀಡಿ 3 ದಿನಗಳ ಕಾಲ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು. ಈ ವೇಳೆ ದೇಶದ ಜನರಿಗೆ ನೀವು ಏನು ಸಂದೇಶ ನೀಡಿದ್ದೀರಾ ಎಂದು ಕೇಳಲು ಬಯಸುತ್ತೇನೆ. ನೀವು ಇಲ್ಲಿಗೆ ಬಂದಿದ್ದರೂ ಒಂದು ಮಾತು ಕೂಡ ಆಡಲಿಲ್ಲ ಎಂದು ಕಿಡಿಕಾರಿದ್ದಾರೆ. ಇದನ್ನೂ ಓದಿ: ಗೆಸ್ಟ್ ಹೌಸ್‌ನಲ್ಲಿ ಕಸ ಗುಡಿಸುತ್ತಿರೋ ಪ್ರಿಯಾಂಕಾ ಗಾಂಧಿ ವೀಡಿಯೋ ವೈರಲ್

    ನೀವು ಸಾಮಾನ್ಯ ವ್ಯಕ್ತಿಯಾಗಿದ್ದರೆ, ದಲಿತ, ಬಡ ಮಹಿಳೆಯರಿಗೆ ನ್ಯಾಯ ಒದಗಿಸಲು ಸಾಧ್ಯವಾಗುತ್ತಿರಲಿಲ್ಲ. ಆದರೆ ನೀವು ದೇಶಕ್ಕೆ ಸಂದೇಶ ಸಾರಲು ಬಯಸಿದರೆ, ನೀವು ಅಧಿಕಾದಲ್ಲಿದ್ದರೆ, ನೀವು ಹೃದಯ ಶ್ರೀಮಂತ ವ್ಯಕ್ತಿಯಾಗಿದ್ದರೆ ಅಥವಾ ನೀವು ಬಿಜೆಪಿ ನಾಯಕರೇ ಆಗಿದ್ದರೆ, ನಿಮಗೆ ನ್ಯಾಯ ದಕ್ಕಿಸಿಕೊಡಬಹುದಾದ ಶಕ್ತಿ ಇದೆ. ಒಂದು ವೇಳೆ ನೀವು ನ್ಯಾಯ ಒದಗಿಸಿ ಕೊಟ್ಟರೆ ದೇಶದ ಪ್ರಧಾನಿ ಯಾರಿಗೂ ಹೆದರುವುದಿಲ್ಲ ಎಂಬ ಸಂದೇಶ ನೀಡಿದಂತೆ ಆಗುತ್ತದೆ. ಸಚಿವರಿಗೆ ಯಾವುದೇ ರೀತಿಯ ಕಾನೂನು ಅನ್ವಯವಾಗುವುದಿಲ್ಲ ಮತ್ತು ತೊಂದರೆಯಾಗುವುದಿಲ್ಲ. ತನಿಖೆ ಮಾಡುವ ಅವಶ್ಯಕತೆ ಕೂಡ ಇರುವುದಿಲ್ಲ. ಆದರೆ ನ್ಯಾಯ ಒದಗಿಸದೇ ಇದ್ದಲ್ಲಿ ಇದು ಸಾರ್ವಜನಿಕರಿಗೆ ತಪ್ಪಾದ ಸಂದೇಶ ಸಾರುತ್ತದೆ ಎಂದು ವಾಗ್ದಾಳಿ ನಡೆಸಿದ್ದಾರೆ.

  • ರೈತರ ಬಗ್ಗೆ ಕಾಳಜೀ ಇದೆ ಅಂತಾರೆ, ರಸ್ತೆಗೆ ಬಂದ್ರೆ ಹುಷಾರ್ ಅಂತ ಎಚ್ಚರಿಕೆ ಕೊಡ್ತಾರೆ: ಖರ್ಗೆ ಕಿಡಿ

    ರೈತರ ಬಗ್ಗೆ ಕಾಳಜೀ ಇದೆ ಅಂತಾರೆ, ರಸ್ತೆಗೆ ಬಂದ್ರೆ ಹುಷಾರ್ ಅಂತ ಎಚ್ಚರಿಕೆ ಕೊಡ್ತಾರೆ: ಖರ್ಗೆ ಕಿಡಿ

    – RSS ಮನುಸ್ಮೃತಿಯನ್ನ ಪ್ರತಿಪಾದಿಸುತ್ತಿದೆ
    – ಅಜಯ್ ಮಿಶ್ರಾ ಸಚಿವ ಸ್ಥಾನದಿಂದ ಕೆಳಗಿಳಿಯಲಿ

    ಬೆಂಗಳೂರು: ಉತ್ತರ ಪ್ರದೇಶದಲ್ಲಿ ನಾಲ್ಕು ಜನ ರೈತರ ಮೇಲೆ ಗಾಡಿ ಹರಿಸಿ ಕೊಂದಿದ್ದಾರೆ. ಆದರೆ ಕೆಲ ನಾಯಕರು ನಾವು ರೈತರ ಪರ ಅಂತಾರೆ, ಮತ್ತೆ ರೈತರು ರಸ್ತೆ ಮೇಲೆ ಬಂದ್ರೆ ಪಾಠ ಕಲಿಸ್ತೇವೆ ಅಂತ ಯೋಗಿ, ಖಟ್ಟರ್ ರಂತಹ ನಾಯಕರು ರೈತರಿಗೆ ಎಚ್ಚರಿಕೆ ನೀಡಿದ್ದಾರೆ ಎಂದು ರಾಜ್ಯಸಭೆ ವಿಪಕ್ಷ ನಾಯಕ ಹಾಗೂ ರಾಜ್ಯ ಕಾಂಗ್ರೆಸ್ ಹಿರಿಯ ನಾಯಕ ಮಲ್ಲಿಕಾರ್ಜುನ ಖರ್ಗೆ ವಾಗ್ದಾಳಿ ನಡೆಸಿದ್ದಾರೆ.

    ಕೆಪಿಸಿಸಿ ಕಚೇರಿಯಲ್ಲಿ ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿದ ಅವರು, ರೈತರ ಬಗ್ಗೆ ಕಾಳಜೀ ಇದೆ ಅಂತಾರೆ. ಮುಖ್ಯಂಮತ್ರಿಗಳು ಇಂತಹ ಹೇಳಿಕೆ ನೀಡುತ್ತಾರೆ. ರಸ್ತೆಗೆ ಬಂದರೆ ಹುಷಾರು ಎಂದು ಎಚ್ಚರಿಕೆ ನೀಡಿದ್ದಾರೆ, ಒಬ್ಬ ಸಿಎಂ ಮತ್ತು ಗೃಹ ಖಾತೆ ಸಚಿವರು ಇಂತಹ ಬೇದರಿಕೆ ಹಾಕಬಹುದಾ? ಸ್ವತಃ ಮುಖ್ಯಮಂತ್ರಿ ಈ ರೀತಿ ಹೇಳಿಕೆ ನೀಡುವುದು ಎಷ್ಟು ಸರಿ? ಲಖೀಂಪುರ್ ಘಟನೆ ದೇಶದಲ್ಲೇ ಅಲ್ಲೋಲ, ಕಲ್ಲೋಲ ಉಂಟು ಮಾಡುವ ಘಟನೆಯಾಗಿದ್ದು, ರೈತರ ಮೇಲೆ ಯಾವ ರೀತಿ ಕೇಂದ್ರ ಹಾಗೂ ರಾಜ್ಯ ಸರ್ಕಾರ ವಿಶೇಷವಾಗಿ ಯುಪಿ ಹಾಗೂ ಹರಿಯಾಣ ಸರ್ಕಾರ ದಬ್ಬಾಳಿಕೆ ಮಾಡುತ್ತಿದೆ ಎಂಬುದಕ್ಕೆ ಇದು ಉದಾಹರಣೆ ಎಂದು ಕಿಡಿಕಾರಿದರು.  ಇದನ್ನೂ ಓದಿ: ಲಖೀಂಪುರದಲ್ಲಿ ನಾಲ್ವರು ರೈತರನ್ನು ಕೊಂದ ಪ್ರಕರಣ – ಇನ್ನೂ ಅರೆಸ್ಟ್ ಆಗಿಲ್ಲ ಮಂತ್ರಿ ಮಗ

    ಕೇಂದ್ರ ಸಚಿವರ ಮಗ ಚಳವಳಿ ಮಾಡುತ್ತಿದ್ದ ರೈತರಿಗೆ ನಿಮಗೆಲ್ಲಾ ಪಾಠ ಕಲಿಸುತ್ತಿದ್ದೆ ಎಂದು ಮೊದಲು ವಾರ್ನ್ ಮಾಡಿದ್ದ. ಆನಂತರ ಗಾಡಿ ತಗೆದುಕೊಂಡು ಹೋಗಿ ಗುದ್ದಿದ್ದಾನೆ ಆದರೂ ಕೇಂದ್ರ ಸರ್ಕಾರದ ಗೃಹ ಖಾತೆ ರಾಜ್ಯ ಸಚಿವರ ಮಗನನ್ನು ಯಾಕೆ ಅರೆಸ್ಟ್ ಮಾಡ್ತಿಲ್ಲ? ಸಾಂತ್ವಾನ ಹೇಳಲು ಹೋಗುವವರನ್ನು ಅರೆಸ್ಟ್ ಮಾಡಿ ಗೃಹ ಬಂಧನದಲ್ಲಿ ಇಡಲಾಗುತ್ತಿದೆ. ಬೇರೆ ಪಕ್ಷದ ನಾಯಕರು ಭೇಟಿ ಮಾಡಲು ಅವಕಾಶ ಕೊಟ್ಟಿದ್ದಾರೆ, ಅಲ್ಲಿನ ಸಿಎಂಗೆ ಭೇಟಿ ಮಾಡಲು ಅವಕಾಶ ಕೊಟ್ಟಿದ್ದಾರೆ. ಆದರೆ ಕಾಂಗ್ರೆಸ್ ಪಕ್ಷದವರಿಗೆ ಮಾತ್ರ ಅವಕಾಶ ನೀಡದೇ ಬಂಧಿಸಲಾಗುತ್ತಿದೆ. ಅಜಯ್ ಮಿಶ್ರಾರ ಕೇಂದ್ರ ಗೃಹ ಖಾತೆ ರಾಜ್ಯ ಸಚಿವ ಸ್ಥಾನದಿಂದ ಕೆಳಗಿಳಿಸಬೇಕು. ಕಾರಿನಲ್ಲಿ ಮಂತ್ರಿ ಮಗ ಇದ್ದ. ಅಲ್ಲಿನ ರೈತರೇ ಇದನ್ನು ಹೇಳಿದ್ದಾರೆ. ಆದರೆ ನನ್ನ ಮಗ ಅಲ್ಲಿರಲಿಲ್ಲ ಅಂತ ವಾದಿಸುತ್ತಿದ್ದಾರೆ ಎಂದು ಟೀಕಿಸಿದ್ದಾರೆ. ಇದನ್ನೂ ಓದಿ: ಚಾಲಕನ ಮೇಲೆ ದಾಳಿಯಾದಾಗ ನಿಯಂತ್ರಣ ತಪ್ಪಿ ಕಾರು ರೈತರ ಮೇಲೆ ಹರಿದಿದೆ: ಮಿಶ್ರಾ

    ಈ ಘಟನೆ ಬಗ್ಗೆ ಉಳಿದವರು ಬೇರೆ ರೀತಿ ಸತ್ತಿದ್ದಾರೆ ಎಂದು ಹೇಳುತ್ತಿದ್ದಾರೆ. ಇದೆಲ್ಲ ಹೇಗಾಯ್ತು ಎಂಬುದು ತನಿಖೆಯಿಂದ ಗೊತ್ತಾಗಲಿದೆ. ಸುಪ್ರೀಂಕೋರ್ಟ್ ಸಿಟ್ಟಿಂಗ್ ಜಡ್ಜ್ ಇಂದ ಈ ಘಟನೆ ಬಗ್ಗೆ ತನಿಖೆ ನಡೆದರೆ ಸತ್ಯ ಹೊರಬರುತ್ತದೆ. ನಂತರ ಬಗ್ಗೆ ಮಾತನಾಡಿ ಆರ್‌ಎಸ್‌ಎಸ್‌ ಮನುಸ್ಮೃತಿಯನ್ನು ಪ್ರತಿಪಾದಿಸುತ್ತಿದೆ. ಗೋಲ್ವಾಲ್ಕರ್ ಯಾರು, ಅದರ ಪ್ರತಿಪಾದಕ. ಆರ್‌ಎಸ್‌ಎಸ್‌ ಏನು ಪ್ರತಿಪಾದಿಸುತ್ತದೆ. ಮನುಸ್ಮೃತಿ ಏನು ಪ್ರತಿಪಾದಿಸುತ್ತದೆ ಎಂದು ಪ್ರಶ್ನಿಸಿ ಕಲಬುರಗಿಯಲ್ಲಿ ನನ್ನ ಸೋಲಿಗೆ ಆರ್‌ಎಸ್‌ಎಸ್‌ ಕೂಡ ಒಂದು ಕಾರಣ ಎಂದರು. ಇದನ್ನೂ ಓದಿ: ರಾಹುಲ್ ಗಾಂಧಿ ಲಖೀಂಪುರ್ ಭೇಟಿಗೆ ಅವಕಾಶವಿಲ್ಲವೆಂದ ಯೋಗಿ ಸರ್ಕಾರ

  • ಚಾಲಕನ ಮೇಲೆ ದಾಳಿಯಾದಾಗ ನಿಯಂತ್ರಣ ತಪ್ಪಿ ಕಾರು ರೈತರ ಮೇಲೆ ಹರಿದಿದೆ: ಮಿಶ್ರಾ

    ಚಾಲಕನ ಮೇಲೆ ದಾಳಿಯಾದಾಗ ನಿಯಂತ್ರಣ ತಪ್ಪಿ ಕಾರು ರೈತರ ಮೇಲೆ ಹರಿದಿದೆ: ಮಿಶ್ರಾ

    – ಮಗನ ಪರ ಮತ್ತೆ ತಂದೆ ಬ್ಯಾಟಿಂಗ್

    ನವದೆಹಲಿ: ಚಾಲಕನ ಮೇಲೆ ದಾಳಿಯಾದಾಗ ನಿಯಂತ್ರಣ ತಪ್ಪಿದ ಕಾರು ಸ್ಥಳದಲ್ಲಿದ್ದ ರೈತರ ಮೇಲೆ ಹರಿದಿದೆ ಎಂದು ಕೇಂದ್ರ ಸಚಿವ ಅಜಯ್ ಮಿಶ್ರಾ ಸಮರ್ಥನೆ ಮಾಡಿಕೊಂಡಿದ್ದಾರೆ.

    ಲಖೀಂಪುರ ಖೇರಿ ಪ್ರಕರಣ ಸಂಬಂಧ ಮಾಧ್ಯಮಕ್ಕೆ ಪ್ರತಿಕ್ರಿಯಿಸಿರುವ ಅವರು, ಮಗ ಆಶಿಶ್ ಮಿಶ್ರಾ ಪರ ಮತ್ತೆ ಹೇಳಿಕೆಯನ್ನು ನೀಡಿದ್ದಾರೆ. ಘಟನೆ ನಡೆದ ಸಂದರ್ಭದಲ್ಲಿ ನನ್ನ ಮಗ ಅಲ್ಲಿ ಇರಲಿಲ್ಲ ಎಂದು ಮತ್ತೆ ಪುನರುಚ್ಛರಿಸಿರುವ ಅಜಯ್ ಮಿಶ್ರಾ, ಕಾರು ಕಂಟ್ರೋಲ್ ತಪ್ಪಿದ್ದರಿಂದ ಈ ಅವಘಢ ಸಂಭವಿಸಿದೆ ಎಂದು ಹೇಳಿದ್ದಾರೆ. ಇದನ್ನೂ ಓದಿ: ಹತ್ಯೆ ಸ್ಥಳದಲ್ಲಿ ನನ್ನ ಮಗ ಇದ್ದಿದ್ದು ನಿಜವಾದ್ರೆ ರಾಜೀನಾಮೆ ನೀಡುತ್ತೇನೆ: ಅಜಯ್ ಮಿಶ್ರಾ

    ಪ್ರಕರಣ ಸಂಬಂಧ ಈ ಹಿಂದೆ ಮಾತನಾಡಿದ್ದ ಅಜಯ್ ಮಿಶ್ರಾ, ಘಟನೆ ನಡೆದ ವೇಳೆ ನನ್ನ ಮಗ ಕಾರಿನಲ್ಲಿ ಇರಲಿಲ್ಲ. ಒಂದು ವೇಳೆ ಆತ ಸ್ಥಳದಲ್ಲಿ ಇದ್ದಿದ್ದು ನಿಜವಾಗಿದ್ದರೆ ನನ್ನ ಸ್ಥಾನಕ್ಕೆ ರಾಜೀನಾಮೆ ನೀಡುವುದಾಗಿ ಹೇಳಿದ್ದರು. ಇದೀಗ ಮತ್ತೆ ಹೇಳಿಕೆ ನೀಡುವ ಮೂಲಕ ಮಗನನ್ನು ಅಪ್ಪ ಸಮರ್ಥಿಸಿಕೊಂಡಿದ್ದಾರೆ. ಇದನ್ನೂ ಓದಿ: ಲಖೀಂಪುರದಲ್ಲಿ ನಾಲ್ವರು ರೈತರನ್ನು ಕೊಂದ ಪ್ರಕರಣ – ಇನ್ನೂ ಅರೆಸ್ಟ್ ಆಗಿಲ್ಲ ಮಂತ್ರಿ ಮಗ

    ದುರ್ಘನೆ ನಡೆದ ಸಂದರ್ಭದಲ್ಲಿ ನನ್ನ ಮಗ ಕಾರಿನಲ್ಲಿ ಇರಲಿಲ್ಲ. ಪ್ರತಿಭಟನೆ ನಡೆಸುತ್ತಿದ್ದ ರೈತರು ಕಾರಿನ ಮೇಲೆ ದಾಳಿ ನಡೆಸಿದ್ದಾರೆ. ಈ ವೇಳೆ ಚಾಲಕನಿಗೂ ಗಾಯಗಳಾಗಿತ್ತು. ಗಾಯಗೊಂಡಿದ್ದರಿಂದ ಚಾಲಕ ಕಾರಿನ ನಿಯಂತ್ರಣ ಕಳೆದುಕೊಂಡಿದ್ದಾನೆ. ಪರಿಣಾಮ ಸ್ಥಳದಲ್ಲಿದ್ದ ರೈತರ ಮೇಲೆ ಕಾರು ಹರಿದಿದೆ. ಅವಘಡದಲ್ಲಿ ಜೀವ ಕಳೆದುಕೊಂಡು ರೈತರ ಬಗ್ಗೆ ನನಗೂ ಮರುಕವಿದೆ. ಈ ಬಗ್ಗೆ ಸೂಕ್ತ ತನಿಖೆ ನಡೆಸಲು ನಾನು ಒತ್ತಾಯಿಸುತ್ತೇನೆ ಎಂದು ಅಜಯ್ ಮಿಶ್ರಾ ಹೇಳಿದ್ದಾರೆ.

    ಒಟ್ಟಾರೆ ಪ್ರಕರಣ ಸಂಬಂಧ ಅಜಯ್ ಮಿಶ್ರಾ ಪುತ್ರ ಆಶೀಶ್ ಮಿಶ್ರಾ ವಿರುದ್ಧ ಲಖೀಂಪುರ್ ಖೇರಿ ಠಾಣೆಯ ಪೊಲೀಸರು ಎಫ್‍ಐಆರ್ ದಾಖಲಿಸಿಕೊಂಡಿದ್ದಾರೆ. ಆದರೆ ಇದುವರೆಗೆ ಆರೋಪಿಯ ಬಂಧನವಾಗಿಲ್ಲ. ಸದ್ಯ ಇದನ್ನು ವಿರೋಧ ಪಕ್ಷಗಳು ಪ್ರಶ್ನಿಸುತ್ತಿವೆ. ಇದನ್ನೂ ಓದಿ: ರೈತರ ಮೇಲೆ ವಾಹನ ಹತ್ತಿಸಿದ ವೀಡಿಯೋ ಲಭ್ಯ- ಅಜಯ್ ಮಿಶ್ರಾ ಪುತ್ರನ ವಿರುದ್ಧ ಕೊನೆಗೂ FIR

  • ಲಖೀಂಪುರದಲ್ಲಿ ನಾಲ್ವರು ರೈತರನ್ನು ಕೊಂದ ಪ್ರಕರಣ – ಇನ್ನೂ ಅರೆಸ್ಟ್ ಆಗಿಲ್ಲ ಮಂತ್ರಿ ಮಗ

    ಲಖೀಂಪುರದಲ್ಲಿ ನಾಲ್ವರು ರೈತರನ್ನು ಕೊಂದ ಪ್ರಕರಣ – ಇನ್ನೂ ಅರೆಸ್ಟ್ ಆಗಿಲ್ಲ ಮಂತ್ರಿ ಮಗ

    – ಪ್ರಿಯಾಂಕ ಬಂಧನ, ರಾಹುಲ್ ಭೇಟಿಗೆ ತಡೆ

    ಲಕ್ನೋ: ಉತ್ತರಪ್ರದೇಶದಲ್ಲಿ ಕೇಂದ್ರ ಸಚಿವನ ಮಗ ಕಾರು ಹತ್ತಿಸಿ ನಾಲ್ವರು ಹತ್ಯೆಗೈದಿದ್ದ ಪ್ರಕರಣ ಸಂಬಂಧ ಕೇಂದ್ರ ಗೃಹ ಸಚಿವ ಅಜಯ್ ಮಿಶ್ರಾನ ಮಗ ಆಶಿಶ್ ಮಿಶ್ರಾ ವಿರುದ್ಧ ಎಫ್‍ಐಆರ್ ದಾಖಲಾಗಿದೆಯಾದರೂ ಇನ್ನೂ ಆತನನ್ನು ಪೊಲೀಸರು ಬಂಧಿಸಿಲ್ಲ. ಆ ಜೀಪ್ ನನ್ನದೇ ಎಂದಿರುವ ಸಚಿವ, ಆದರೆ ಮಗ ಕಾರಲ್ಲಿ ಇರಲಿಲ್ಲ ಎಂದು ಹೇಳಿದ್ದಾರೆ.

    ಇತ್ತ ಲಖೀಂಪುರ್ ಖೇರಿಗೆ ಇಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ನೇತೃತ್ವದ ನಿಯೋಗ ಭೇಟಿ ನೀಡುತ್ತಿದೆ. ಆದರೆ ರಾಹುಲ್ ನಿಯೋಗಕ್ಕೆ ಉತ್ತರಪ್ರದೇಶ ಸರ್ಕಾರ ಅನುಮತಿ ನಿರಾಕರಿಸಿದೆ. ಇದನ್ನೂ ಓದಿ: ರೈತರ ಮೇಲೆ ವಾಹನ ಹತ್ತಿಸಿದ ವೀಡಿಯೋ ಲಭ್ಯ- ಅಜಯ್ ಮಿಶ್ರಾ ಪುತ್ರನ ವಿರುದ್ಧ ಕೊನೆಗೂ FIR

    ಈ ನಡುವೆ ಲಖೀಂಪುರ್ ಖೇರಿ ಭೇಟಿಗೆ ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ಅವರನ್ನು 2 ದಿನ ಗೃಹ ಬಂಧನದಲ್ಲಿಟ್ಟಿದ್ದ ಯೋಗಿ ಆದಿತ್ಯನಾಥ್ ಸರ್ಕಾರ ಈಗ ಬಂಧನಕ್ಕೆ ಒಳಪಡಿಸಿದ್ದು, ಪ್ರಿಯಾಂಕ ವಿರುದ್ಧ ಎಫ್‍ಐಆರ್ ದಾಖಲಿಸಿದೆ. ಆದರೆ ಪ್ರಿಯಾಂಕಾ ಗೃಹ ಬಂಧನದಲ್ಲಿಟ್ಟಿರುವ ಪೊಲೀಸರ ಕ್ರಮದ ಬಗ್ಗೆ ಖಂಡನೆ ವ್ಯಕ್ತವಾಗಿದೆ. ಇದನ್ನೂ ಓದಿ: ರೈತರ ಮೇಲೆ ಕಾರು ಹತ್ತಿಸಿದ ಕೇಂದ್ರ ಸಚಿವನ ಮಗ – ನಾಲ್ವರು ರೈತರು ಸೇರಿ 8 ಮಂದಿ ಸಾವು

    ಗೃಹ ಬಂಧನದಿಂದಲೇ ಪ್ರಿಯಾಂಕಾ ಉತ್ತರಪ್ರದೇಶದಲ್ಲಿರುವ ತಮ್ಮ ಕಾರ್ಯಕರ್ತರಿಗೆ ಆಡಿಯೋ ಸಂದೇಶ ರವಾನಿಸಿದ್ದಾರೆ. ನಿನ್ನೆ ಲಖೀಂಪುರ್‍ಖೇರಿಗೆ ಭೇಟಿ ನೀಡಲು ಬಂದಿದ್ದ ಛತ್ತೀಸ್‍ಗಢ ಸಿಎಂ ಭೂಪೇಂದ್ರ ಸಿಂಗ್ ಬಘೇಲ್‍ಗೂ ಪೊಲೀಸರು ಅನುಮತಿ ನಿರಾಕರಿಸಿದ್ದರು. ಈ ಹಿನ್ನೆಲೆಯಲ್ಲಿ ಬಘೇಲ್ ವಿಮಾನ ನಿಲ್ದಾಣದಲ್ಲಿಯೇ ಧರಣಿ ಕೂತಿದ್ದರು. ಆದರೆ ಟಿಎಂಸಿ ಸಂಸದರ ನಿಯೋಗಕ್ಕೆ ಭೇಟಿಗೆ ಅನುಮತಿ ನೀಡಲಾಗಿದೆ. ಇದನ್ನೂ ಓದಿ:  ಗೆಸ್ಟ್ ಹೌಸ್‌ನಲ್ಲಿ ಕಸ ಗುಡಿಸುತ್ತಿರೋ ಪ್ರಿಯಾಂಕಾ ಗಾಂಧಿ ವೀಡಿಯೋ ವೈರಲ್