Tag: Ajay Rao

  • ನಟ ಅಜಯ್ ರಾವ್ ದಾಂಪತ್ಯದಲ್ಲಿ ಬಿರುಕು – ಮತ್ತೆ ಒಂದಾಗೋಕೆ ಬಯಸಿದ ಪತ್ನಿ ಸಪ್ನ

    ನಟ ಅಜಯ್ ರಾವ್ ದಾಂಪತ್ಯದಲ್ಲಿ ಬಿರುಕು – ಮತ್ತೆ ಒಂದಾಗೋಕೆ ಬಯಸಿದ ಪತ್ನಿ ಸಪ್ನ

    ಸ್ಯಾಂಡಲ್‌ವುಡ್‌ನ ನಟ ಅಜಯ್ ರಾವ್ ಅವರ ಪತ್ನಿ ಸಪ್ನ ವಿಚ್ಛೇದನ ಬಯಸಿ ಶನಿವಾರ (ಆ.16) ಅರ್ಜಿ ಸಲ್ಲಿಸಿದ್ದರು. ಇದೀಗ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್‌ವೊಂದನ್ನು ಹಂಚಿಕೊಂಡಿದ್ದು, ಮತ್ತೆ ಹೊಂದಾಣಿಕೆ ಜೀವನ ನಡೆಸಲು ನಿರ್ಧರಿಸಿದ್ದಾಗಿ ತಿಳಿಸಿದ್ದಾರೆ.ಇದನ್ನೂ ಓದಿ: ಡಿಗ್ನಿಫೈಡ್ ರೀತಿಯಲ್ಲಿ ಹ್ಯಾಂಡಲ್ ಮಾಡಿ ಸಾಲ್ವ್ ಮಾಡಿಕೊಳ್ತೀನಿ: ಅಜಯ್‌ ರಾವ್‌

    ಪೋಸ್ಟ್‌ನಲ್ಲಿ ಏನಿದೆ?
    ತಾಯಿಯಾಗಿ ನನ್ನ ಮೊದಲ ಜವಾಬ್ದಾರಿ ನನ್ನ ಮಗಳ ಸುರಕ್ಷತೆ, ಗೌರವ ಮತ್ತು ಅವಳ ಭವಿಷ್ಯಕ್ಕಾಗಿ ನಾನು ಪ್ರತಿದಿನ ಧೈರ್ಯವನ್ನು ಕೂಡಿಸಿ, ನನಗೆ ತೀವ್ರವಾಗಿ ಪರೀಕ್ಷಿಸುವ ಸವಾಲುಗಳನ್ನು ಎದುರಿಸುತ್ತಿದ್ದೇನೆ. ಪ್ರಿಯ ಸ್ನೇಹಿತರೇ ಮತ್ತು ಸಹೋದರರೇ. ಈ ಹಂತದಲ್ಲಿ ನಾನು ಮತ್ತು ನನ್ನ ಮಗಳು ನಮ್ಮ ಬದುಕನ್ನು ಪುನರ್‌ನಿರ್ಮಿಸಿಕೊಳ್ಳಲು ಮತ್ತು ನಮ್ಮ ದಾಂಪತ್ಯ ಜೀವನವನ್ನು ಪುನಃ ನಿರ್ಮಿಸಿಕೊಳ್ಳಲು ನಿಮ್ಮ ಹಾರೈಕೆಗಳು ಮತ್ತು ಪ್ರಾರ್ಥನೆಗಳನ್ನು ನಿಮ್ಮಲಿ ಕೇಳಿಕೊಳ್ಳುತ್ತಿದೇನೆ ಮತ್ತು ನಾನು ಅತ್ಯಂತ ಗೌರವದಿಂದ ತಿಳಿಸಲು ಬಯಸುವುದೇನೆಂದರೆ, ಈ ವಿಷಯವು ನಮ್ಮ ವೈಯಕ್ತಿಕ, ಆಳವಾದ ಭಾವನಾತ್ಮಕ ಮತ್ತು ದಾಂಪತ್ಯ ಜೀವನಕ್ಕೆ ಮಾತ್ರ ಸಂಬಂಧಿಸಿದ್ದು ಹೊರತು ಬೇರೆ ಯಾವುದೇ ರೀತಿಯಲ್ಲಿ ಸಂಬಂಧಿಸಿಲ್ಲ ಎಂದು ತಿಳಿಸಲು ಬಯಸುತ್ತೇನೆ ಎಂದು ಬರೆದುಕೊಂಡಿದ್ದಾರೆ.

    2014ರಲ್ಲಿ ಡಿಸೆಂಬರ್ 18ರಲ್ಲಿ ಪ್ರೀತಿಸಿ ಮದ್ವೆಯಾಗಿದ್ದ ಈ ಜೋಡಿ ಇತ್ತೀಚಿಗೆ ಹೊಸ ಮನೆಯ ಗೃಹ ಪ್ರವೇಶ ಮಾಡಿತ್ತು. ಹೊಸಪೇಟೆಯಲ್ಲಿ ಸರಳವಾಗಿ ದಾಂಪತ್ಯ ಜೀವನಕ್ಕೆ ಕಾಲಿಟ್ಟಿತ್ತು. ಆದರೆ ಶನಿವಾರ ಅಜಯ್ ರಾವ್ ಪತ್ನಿ ಸಪ್ನ ವಿಚ್ಛೇದನ ಬಯಸಿ ಅರ್ಜಿ ಸಲ್ಲಿಸಿದ್ದರು.ಇದನ್ನೂ ಓದಿ: ಸ್ಯಾಂಡಲ್‌ವುಡ್‌ ನಟನ ಬಾಳಲ್ಲಿ ಬಿರುಗಾಳಿ – ನಟ ಅಜಯ್ ರಾವ್ ಪತ್ನಿಯಿಂದ ವಿಚ್ಛೇದನಕ್ಕೆ ಅರ್ಜಿ

  • ಸಿನಿಮಾ ನಿರ್ಮಾಣಕ್ಕೆ ಕೈ ಹಾಕಿದ್ದರಿಂದ ಅಜಯ್‌ ರಾವ್‌ ಬಾಳಲ್ಲಿ ಬಿರುಗಾಳಿ!

    ಸಿನಿಮಾ ನಿರ್ಮಾಣಕ್ಕೆ ಕೈ ಹಾಕಿದ್ದರಿಂದ ಅಜಯ್‌ ರಾವ್‌ ಬಾಳಲ್ಲಿ ಬಿರುಗಾಳಿ!

    ಬೆಂಗಳೂರು: ನಟ ಅಜಯ್ ರಾವ್ (Ajay Rao) ಸಿನಿಮಾ ನಿರ್ಮಾಣಕ್ಕೆ (Cinema Production) ಕೈ ಹಾಕಿದ್ದರಿಂದ ಬದುಕಿನಲ್ಲಿ ಬಿರುಗಾಳಿ ಎದ್ದಿದೆ ಎನ್ನಲಾಗುತ್ತಿದೆ.

    ಪತ್ನಿ ಸ್ವಪ್ನಾ ಅವರನ್ನು ಮದುವೆಯಾದ ನಂತರ ಅಜಯ್‌ ರಾವ್‌ ಶ್ರೀ ಕೃಷ್ಣ ಆರ್ಟ್ ಅಂಡ್ ಕ್ರಿಯೇಷನ್ ಹೆಸರಿನಲ್ಲಿ ನಿರ್ಮಾಣ ಸಂಸ್ಥೆಯನ್ನು ಸ್ಥಾಪಿಸಿದ್ದರು.

    ಪತ್ನಿ ಸ್ವಪ್ನಾ ಅವರು ಸಿನಿಮಾ ನಿರ್ಮಾಣಕ್ಕೆ ಇಳಿಯಬೇಡಿ ಎಂದು ಪದೇ ಪದೇ ಗಂಡನಿಗೆ ಎಚ್ಚರಿಸುತ್ತಿದ್ದರು. ಹೀಗಿದ್ದರೂ ಕೃಷ್ಣಲೀಲಾ, ಯುದ್ಧಕಾಂಡ (Yuddha Kaanda) ಸೇರಿದಂತೆ ಹಲವು ಚಿತ್ರಗಳನ್ನು ಅಜಯ್ ರಾವ್ ನಿರ್ಮಾಣ ಮಾಡಿದ್ದರು.  ಇದನ್ನೂ ಓದಿ: ಕೃಷ್ಣ ಜನ್ಮಾಷ್ಟಮಿಯಂದೇ ಮಗನ ನಾಮಕರಣ ಮಾಡಿದ `ಸಿಂಹಪ್ರಿಯ’ ಜೋಡಿ ಹೆಸರೇನು ಗೊತ್ತಾ?

    ಯುದ್ಧಕಾಂಡ ಸಿನಿಮಾಗಾಗಿ ಅಜಯ್ ರಾವ್ ಭಾರೀ ಸಾಲ ಮಾಡಿಕೊಂಡಿದ್ದರು. ಅಷ್ಟೇ ಅಲ್ಲದೇ ಯುದ್ಧಕಾಂಡ ಚಿತ್ರಕ್ಕಾಗಿ ನೆಚ್ಚಿನ ದುಬಾರಿ ಕಾರನ್ನೂ (Car) ಮಾರಾಟ ಮಾಡಿದ್ದರು.

    ಯುದ್ಧಕಾಂಡ ಬಿಡುಗಡೆಯ ನಂತವೂ ಕೌಟುಂಬದಲ್ಲಿ ಪದೇ ಪದೇ ಕಲಹ ನಡೆಯುತ್ತಿತ್ತು. ವಿಪರೀತ ಸಾಲ ಮಾಡಿಕೊಂಡಿದ್ದೇ ದಾಂಪತ್ಯದಲ್ಲಿ ಬಿರುಕಿಗೆ ಕಾರಣ ಎನ್ನಲಾಗುತ್ತಿದೆ. ಕಲಹಕ್ಕೆ ಬೇಸತ್ತು ವಿಚ್ಚೇದನಕ್ಕೆ ಸ್ವಪ್ನಾ ಅರ್ಜಿ ಸಲ್ಲಿಸಿದ್ದಾರೆ.

    ಯುದ್ಧಕಾಂಡ ಸಿನಿಮಾ ಸಂದರ್ಭದಲ್ಲಿ ಅಜಯ್‌ ರಾವ್‌ ತಮ್ಮ ಬಿಎಂಡಬ್ಲ್ಯೂ ಕಾರನ್ನು ಮಾರಾಟ ಮಾಡಿದ್ದರು. ಈ ವೇಳೆ ಅವರ ಪುತ್ರಿ ಕಾರನ್ನು ಮಾರಾಟ ಮಾಡಬೇಡಿ ಎಂದು ಹೇಳಿ ಅಳುತ್ತಿರುವ ದೃಶ್ಯ ಸಾಮಾಜಿಕ ಜಾಲತಾಣದಲ್ಲಿ ಹರಿದಾಡಿತ್ತು.

  • ಸ್ಯಾಂಡಲ್‌ವುಡ್‌ ನಟನ ಬಾಳಲ್ಲಿ ಬಿರುಗಾಳಿ – ನಟ ಅಜಯ್ ರಾವ್ ಪತ್ನಿಯಿಂದ ವಿಚ್ಛೇದನಕ್ಕೆ ಅರ್ಜಿ

    ಸ್ಯಾಂಡಲ್‌ವುಡ್‌ ನಟನ ಬಾಳಲ್ಲಿ ಬಿರುಗಾಳಿ – ನಟ ಅಜಯ್ ರಾವ್ ಪತ್ನಿಯಿಂದ ವಿಚ್ಛೇದನಕ್ಕೆ ಅರ್ಜಿ

    ಇತ್ತೀಚೆಗೆ ಸೆಲೆಬ್ರಿಟಿಗಳು ವಿಚ್ಛೇದನ (Divorce) ತೆಗೆದುಕೊಳ್ಳುತ್ತಿರುವ ಪ್ರಕರಣ ಹೆಚ್ಚಾಗುತ್ತಿದೆ. ಪ್ರತಿ ದಿನ ಒಬ್ಬರಲ್ಲ ಒಬ್ಬರ ಡಿವೋರ್ಸ್ ಸುದ್ದಿಗಳು ಬೆಳಕಿಗೆ ಬರುತ್ತಲೇ ಇವೆ, ಈಗ ಆ ಸಾಲಿಗೆ ಸ್ಯಾಂಡಲ್‌ವುಡ್‌ನ ನಟ ಅಜಯ್‌ ರಾವ್‌ (Ajay Rao) ಕೂಡ ಸೇರಿಕೊಂಡಿದ್ದಾರೆ. ಹೌದು. ನಟ ಅಜಯ್‌ ರಾವ್‌ ಪತ್ನಿ ಸಪ್ನಾ (Sapna) ವಿಚ್ಛೇದನ ಬಯಸಿ ಅರ್ಜಿ ಸಲ್ಲಿಸಿದ್ದಾರೆ.

    2014ರಲ್ಲಿ ಡಿಸೆಂಬರ್‌ 18ರಲ್ಲಿ ಪ್ರೀತಿಸಿ ಮದ್ವೆಯಾಗಿದ್ದ (Love Marriage) ಈ ಜೋಡಿ ಇತ್ತೀಚಿಗೆ ಹೊಸ ಮನೆಯ ಗೃಹ ಪ್ರವೇಶ ಮಾಡಿತ್ತು. ಹೊಸಪೇಟೆಯಲ್ಲಿ ಸರಳವಾಗಿ ದಾಂಪತ್ಯ ಜೀವನಕ್ಕೆ ಕಾಲಿಟ್ಟಿತ್ತು. ಇತ್ತೀಚೆಗಷ್ಟೇ ಹೊಸ ಮನೆಗೆ ಗೃಹ ಪ್ರವೇಶ ಮಾಡಿತ್ತು ಈ ಜೋಡಿ. ಇದನ್ನೂ ಓದಿ: `ಗ್ರೀನ್ ಗರ್ಲ್’ಗೆ ಸಿಕ್ತು ಕನ್ನಡದ ಪ್ರತಿಷ್ಠಿತ ನಿರ್ಮಾಣ ಸಂಸ್ಥೆಯ ಸಾಥ್

    ಇದೀಗ ನಟನ ದಾಂಪತ್ಯ ಜೀವನದಲ್ಲಿ ಬಿರುಕು ಮೂಡಿದೆ. ಪತ್ನಿ ಸ್ವಪ್ನ ರಾವ್‌ ವಿಚ್ಛೇದನ ಕೋರಿ ಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದಾರೆ. ಅಜಯ್‌ ರಾವ್‌ ಸಪ್ನಾ ದಂಪತಿಗೆ ಓರ್ವ ಪುತ್ರಿ ಕೂಡ ಇದ್ದಾರೆ. ಇದನ್ನೂ ಓದಿ: ಡಿ ಗ್ಯಾಂಗ್‌ಗೆ ಮತ್ತಷ್ಟು ಢವಢವ – ಫಾಸ್ಟ್‌ ಟ್ರ್ಯಾಕ್ ಕೋರ್ಟ್‌ಗೆ ಮನವಿ ಸಲ್ಲಿಸಲು ಪೊಲೀಸರ ತಯಾರಿ

    11 ವರ್ಷಗಳ ಬಳಿಕ ದೂರಾಗಲು ನಿರ್ಧರಿಸಿದ್ದೇಕೆ? 
    2014ರಲ್ಲಿ ಮದ್ವೆಯಾಗಿದ್ದ ಈ ಜೋಡಿ 11 ವರ್ಷಗಳ ಬಳಿಕ ದಾಂಪತ್ಯ ಜೀವನಕ್ಕೆ ವಿದಾಯ ಹೇಳಲು ಬಯಸಿದೆ. ಅಜಯ್ ರಾವ್ ವಿರುದ್ಧ ಕೌಟುಂಬಿಕ ದೌರ್ಜನ್ಯ ತಡೆ ಕಾಯ್ದೆಯಡಿ ಪತ್ನಿ ದೂರು ದಾಖಲಿಸಿದ್ದಾರೆ. ಪತ್ನಿ ಜೊತೆಗೆ ಮಗಳು ಚರಿಷ್ಮಾ ಸಹ ಅಜಯ್ ರಾವ್ ವಿರುದ್ಧ ದೂರು ದಾಖಲಿದ್ದಾರೆ ಎಂದು ತಿಳಿದುಬಂದಿದೆ. ಇದನ್ನೂ ಓದಿ: ಇವರೇ ಕರ್ಕೊಂಡು ಹೋಗಿ ಹೊಡಿ ಬಡಿ ಮಾಡಿದ್ದು ತಪ್ಪು: ಪ್ರಿಯಾ ಹಾಸನ್‌

  • ಅಜಯ್ ರಾವ್ ಈಗ ರಗಡ್ ಹೀರೋ – ಹೊಸ ಚಿತ್ರಕ್ಕೆ ಚಾಲನೆ

    ಅಜಯ್ ರಾವ್ ಈಗ ರಗಡ್ ಹೀರೋ – ಹೊಸ ಚಿತ್ರಕ್ಕೆ ಚಾಲನೆ

    `ನನ್ ಮಗಳೇ’ ಹೀರೋಯಿನ್ ಸೇರಿದಂತೆ ಹಲವು ಸದಭಿರುಚಿಯ ಚಿತ್ರಗಳ ನಿರ್ದೇಶಕ ಎಸ್.ಕೆ. ಬಾಹುಬಲಿ (S.K Bahubali) ಇದೀಗ ಕೃಷ್ಣ ಅಜಯ್ ರಾವ್ (Ajay Rao) ಚಿತ್ರಕ್ಕೆ ಆಕ್ಷನ್ ಕಟ್ ಹೇಳುತ್ತಿದ್ದಾರೆ. ಪಿ.ಕೆ. ಪ್ರೊಡಕ್ಷನ್ಸ್ ಮೂಲಕ ನಿರ್ಮಾಪಕ ಕಿರಣ್ ಅವರು ಮೊದಲ ಬಾರಿಗೆ ಈ ಚಿತ್ರವನ್ನು ನಿರ್ಮಿಸುತ್ತಿದ್ದಾರೆ. ಇನ್ನೂ ಹೆಸರಿಡದ ಈ ಚಿತ್ರದ ಮುಹೂರ್ತ ಸಮಾರಂಭ ಶ್ರೀ ಬಂಡೆ ಮಹಾಕಾಳಮ್ಮ ದೇವಸ್ಥಾನದಲ್ಲಿ ನೆರವೇರಿತು. ಚಿತ್ರದ ಪ್ರಥಮ ದೃಶ್ಯಕ್ಕೆ ಯೋಗರಾಜ್ ಭಟ್ಟರು ಕ್ಲಾಪ್ ಮಾಡಿದರೆ, ದಿನಕರ್ ತೂಗುದೀಪ ಕ್ಯಾಮೆರಾ ಚಾಲನೆ ಮಾಡಿದರು. ನಿರ್ದೇಶಕ ಎಂ.ಡಿ. ಶ್ರೀಧರ್, ಎಸ್. ನಾರಾಯಣ್, ಶಿವತೇಜಸ್ ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದರು. ಲವರ್ ಬಾಯ್, ಆಕ್ಷನ್ ಹೀರೋ, ಭಗ್ನ ಪ್ರೇಮಿಯಾಗಿ ಕಾಣಿಸಿಕೊಂಡಿದ್ದ ಅಜಯ್ ರಾವ್ ಈ ಚಿತ್ರದ ಮೂಲಕ ರಗಡ್ ಹೀರೋ ಆಗುತ್ತಿದ್ದಾರೆ.

    ಮುಹೂರ್ತದ ನಂತರ ನಿರ್ದೇಶಕ ಬಾಹುಬಲಿ ಮಾತನಾಡುತ್ತ ಇದೊಂದು ಫ್ಯಾಮಿಲಿ ಥ್ರಿಲ್ಲರ್ ಚಿತ್ರ, ನ್ಯಾಷನಲ್ ಲೆವೆಲ್‌ನಲ್ಲಿ ನಡೆಯುವ ಕಥೆ. ಒಂದು ಘಟನೆಯನ್ನು ಇನ್‌ಸ್ಪಿರೇಶನ್ ಆಗಿ ತೆಗೆದುಕೊಂಡು ಸ್ಕ್ರಿಪ್ಟ್ ಮಾಡಿದ್ದೇವೆ. ನಾನು ಈ ಕಥೆ ಮಾಡಿಕೊಂಡಾಗಲೇ ಈ ಕ್ಯಾರೆಕ್ಟರನ್ನು ಅಜಯ್ ರಾವ್ ಕೈಲೇ ಮಾಡಿಸಬೇಕೆಂದುಕೊಂಡೆ. ಅವರು ಫ್ಯಾಮಿಲಿ ಹೀರೋ, ಕಥೆ ಕೇಳಿದ ತಕ್ಷಣ ಅವರೂ ಸಹ ಒಪ್ಪಿದರು. ಅವರ ಪಾತ್ರಕ್ಕೆ 4-5 ಶೇಡ್ಸ್ ಇದೆ. ಅದರಲ್ಲಿ ಈ ಬೋಳು ತಲೆಯ ಗೆಟಪ್ ಕೂಡ ಒಂದು. ಇದಕ್ಕೆ ಬಾಂಬೆಯಿಂದ ವಿಗ್ ಮೇಕರ್ ಕರೆಸಿದ್ದೆವು. ಅವರು ನಾಲ್ಕೈದು ಗಂಟೆ ತೆಗೆದುಕೊಂಡು ಅಜಯ್‌ ರಾವ್ ಅವರಿಗೆ ಈ ವಿಗ್ ಕೂರಿಸಿದರು. ಚಿತ್ರದಲ್ಲಿದು 2-3 ಸೀನ್ ಮಾತ್ರ ಬರುತ್ತದೆ. ಬೆಂಗಳೂರು, ಮೈಸೂರು, ಪಾಂಡಿಚೇರಿ ಸುತ್ತಮುತ್ತ 60 ರಿಂದ 70 ದಿನ ಶೂಟಿಂಗ್ ನಡೆಸುವ ಪ್ಲಾನ್‌ ಇದೆ. ಉಪಾಧ್ಯಕ್ಷ ಖ್ಯಾತಿಯ ಮಲೈಕಾ ಟಿ.ವಸುಪಾಲ್ ಅವರು ಚಿತ್ರದ ನಾಯಕಿ ಪಾತ್ರ ಮಾಡುತ್ತಿದ್ದಾರೆ ಎಂದರು. ಇದನ್ನೂ ಓದಿ: ಯಶ್‌ಗೆ ಹಾಲಿವುಡ್‌ನ ಆಸ್ಕರ್ ವಿಜೇತ ಪ್ರೊಡ್ಯೂಸರ್ ಬಲ!

    ನಾಯಕ ಅಜಯ್‌ ರಾವ್ ಮಾತನಾಡಿ ಯುದ್ದಕಾಂಡ ಟೈಮಲ್ಲಿ ಬಾಹುಬಲಿ ಬಂದು ಈ ಕಥೆ ಹೇಳಿದರು. ಕೇಳಿದಕೂಡಲೇ ಇಷ್ಟವಾಯ್ತು. ಯೋಗಾನಂದ್ ಅದ್ಭುತವಾದ ಡೈಲಾಗ್ ಬರೆದಿದ್ದಾರೆ. ಫಿಟ್‌ನೆಸ್ ಬಗ್ಗೆ ಏನೋ ಒಂದು ಸಾಧನೆ ಮಾಡಬೇಕೆಂದು ಹೊರಟಾಗ ಆತ ಏನೆಲ್ಲಾ ಎದುರಿಸಬೇಕಾಗುತ್ತದೆ ಎಂಬುದನ್ನು ಈ ಸಿನಿಮಾ ಮೂಲಕ ಬಾಹುಬಲಿ ಅವರು ಹೇಳಹೊರಟಿದ್ದಾರೆ. ನನ್ನ ಪಾತ್ರಕ್ಕೆ ಫಿಸಿಕಲ್ ಟ್ರಾನ್ಸ್‌ಫಾರ್ಮೇಶನ್ ತುಂಬಾ ಇರುತ್ತದೆ, ನಿರ್ಮಾಪಕರಿಗೆ ಸಿನಿಮಾ ಬಗ್ಗೆ ತುಂಬಾ ಕಾನ್ಫಿಡೆನ್ಸ್ ಇದೆ ಎಂದು ಹೇಳಿದರು.

    ಚಿತ್ರದ ನಿರ್ಮಾಪಕ ಕಿರಣ್ ಮಾತನಾಡುತ್ತ ಬಾಹುಬಲಿ ನನಗೆ ಬಹಳ ದಿನಗಳಿಂದ ಪರಿಚಯ. ತುಂಬಾ ಕಥೆ ಹೇಳಿದ್ದರು. ಅದರಲ್ಲಿ ಈ ಕಥೆ ಇಷ್ಟವಾಯಿತು ಎಂದು ಹೇಳಿದರು. ಛಾಯಾಗ್ರಾಹಕ ಸುಜ್ಞಾನ್ ಮಾತನಾಡುತ್ತ ನಿರ್ದೇಶಕರು ತುಂಬಾ ಚೆನ್ನಾಗಿ ಸ್ಕ್ರಿಪ್ಟ್ ಮಾಡಿಕೊಂಡಿದ್ದಾರೆ. ಅಜಯ ರಾವ್ ಅವರಿಗೆ ಬೇರೆ ಬೇರೆ ಗೆಟಪ್ ಇರೋದ್ರಿಂದ ನಾವು ತುಂಬಾ ಕೆಲಸ ಮಾಡಬೇಕಿದೆ. ತುಂಬಾ ಚಾಲೆಂಜ್ ಇರುತ್ತೆ ಎಂದರು. ಉಳಿದಂತೆ ನಟ ಉಗ್ರಂ ಮಂಜು, ಸಂಭಾಷಣೆಗಾರ ಯೋಗಾನಂದ್ ಮದ್ದಾನ್ ಚಿತ್ರದ ಕುರಿತಂತೆ ಮಾತನಾಡಿದರು.

    ನಿರ್ದೇಶಕರೇ ಚಿತ್ರಕ್ಕೆ ಕಥೆ, ಚಿತ್ರಕಥೆ ಬರೆದಿದ್ದಾರೆ. ಅಲ್ಲದೆ ಈ ಚಿತ್ರದ ಹಾಡುಗಳಿಗೆ ಮ್ಯೂಸಿಕ್ ಮಾಂತ್ರಿಕ ಅರ್ಜುನ್ ಜನ್ಯ ಅವರ ಸಂಗೀತ ಸಂಯೋಜನೆಯಿದ್ದು ಯೋಗರಾಜ್ ಭಟ್, ಕವಿರಾಜ್, ನಾಗೇಂದ್ರ ಪ್ರಸಾದ್ ಅವರ ಸಾಹಿತ್ಯ, ಕೆ.ಎಂ.ಪ್ರಕಾಶ್ ಅವರ ಸಂಕಲನ, ಡಿಫರೆಂಟ್ ಡ್ಯಾನಿ, ರವಿವರ್ಮ ಅವರ ಸಾಹಸ ಸಂಯೋಜನೆ ಈ ಚಿತ್ರಕ್ಕಿದೆ. ಇದನ್ನೂ ಓದಿ: 22 ಲಕ್ಷ ವಂಚನೆ ಆರೋಪ – ನಂದಕಿಶೋರ್ ವಿರುದ್ಧ ಫಿಲ್ಮ್ ಚೇಂಬರ್‌ಗೆ ದೂರು ಕೊಡಲು ಮುಂದಾದ ಶಬರೀಶ್

  • ಹೊಸ ಸಿನಿಮಾದ ರಗಡ್ ಲುಕ್ನಲ್ಲಿ ಕಾಣಿಸಿಕೊಂಡ ಅಜಯ್ ರಾವ್

    ಹೊಸ ಸಿನಿಮಾದ ರಗಡ್ ಲುಕ್ನಲ್ಲಿ ಕಾಣಿಸಿಕೊಂಡ ಅಜಯ್ ರಾವ್

    ಯುದ್ದಕಾಂಡ ಚಿತ್ರದ ಯಶಸ್ಸಿನ ನಂತರ ನಟ, ನಿರ್ಮಾಪಕ ಕೃಷ್ಣ ಅಜಯ್ ರಾವ್ (Krishna Ajay Rao) ಅವರು ಇದೀಗ ಮತ್ತೊಂದು ಇಂಟರೆಸ್ಟಿಂಗ್ ಕ್ಯಾರೆಕ್ಟರ್ ಮೂಲಕ ಸಿನಿ ರಸಿಕರ ಮುಂದೆ ಬರುತ್ತಿದ್ದಾರೆ. ಇದುವರೆಗೂ ಲವರ್ ಬಾಯ್, ಆಕ್ಷನ್ ಹೀರೋ, ಭಗ್ನ ಪ್ರೇಮಿಯಾಗಿ ತೆರೆಮೇಲೆ ಕಾಣಿಸಿಕೊಂಡಿದ್ದ ಅಜಯ್ ರಾವ್ ಅವರು ವಿಭಿನ್ನವಾದ ರಗಡ್ ಗೆಟಪ್ ಮೂಲಕ ನೋಡುಗರ ಗಮನ ಸೆಳೆಯುತ್ತಿದ್ದಾರೆ.

    ಬೋಳು ತಲೆಯಲ್ಲಿ, ಅರ್ಧ ಕೂಲಿಂಗ್ ಗ್ಲಾಸ್ ಹಾಕಿ ವಿಲನ್‌ಗಳಿಗೆ ಗಳಿಗೆ ಸಿಂಹಸ್ವಪ್ನ ಎನ್ನುವಂತೆ ಕಾಣಿಸಿಕೊಂಡಿದ್ದಾರೆ. ನನ್ ಮಗಳೇ ಹೀರೋಯಿನ್ ಖ್ಯಾತಿಯ ನಿರ್ದೇಶಕ ಎಸ್.ಕೆ ಬಾಹುಬಲಿ ಅವರು ಈ ಚಿತ್ರಕ್ಕೆ ಕಥೆ ಚಿತ್ರಕಥೆ ಬರೆದು ಆಕ್ಷನ್ ಕಟ್ ಹೇಳುತ್ತಿದ್ದಾರೆ. ಇದನ್ನೂ ಓದಿ: ‘ಪೆನ್‌ ಡ್ರೈವ್‌’ಗಾಗಿ ಕಿಶನ್ ಜೊತೆ ಜಬರ್ದಸ್ತ್ ಕುಣಿದ ತನಿಷಾ ಕುಪ್ಪಂಡ

    ಪಿಕೆ ಪ್ರೊಡಕ್ಷನ್ಸ್ ಮೂಲಕ ಕಿರಣ್ ಅವರು ನಿರ್ಮಿಸುತ್ತಿರುವ ಈ ಚಿತ್ರದ ಹಾಡುಗಳಿಗೆ ಮ್ಯೂಸಿಕ್ ಮಾಂತ್ರಿಕ ಅರ್ಜುನ್ ಜನ್ಯ ಅವರ ಸಂಗೀತ ಸಂಯೋಜನೆಯಿದ್ದು, ಸುಜ್ಞಾನ್ ಅವರು ಕ್ಯಾಮೆರಾ ವರ್ಕ್ ನಿಭಾಯಿಸುತ್ತಿದ್ದಾರೆ. ಇದನ್ನೂ ಓದಿ: Exclusive | ಲಕ್ಷ ಲಕ್ಷ ಹಣ ವಂಚನೆ ಆರೋಪ – ನನ್ನ ಹೆಸರು ಹಾಳು ಮಾಡುವ ಉದ್ದೇಶ ಬಿಟ್ಟು ಬೇರೆನಿಲ್ಲ: ಗೋಲ್ಡ್‌ ಸುರೇಶ್‌

  • ‘ಯುದ್ಧಕಾಂಡ’ ಚಿತ್ರದ ಫಸ್ಟ್ ಲುಕ್ ರಿಲೀಸ್: ಅಜಯ್ ರಾವ್ ಹುಟ್ಟುಹಬ್ಬಕ್ಕೆ ಗಿಫ್ಟ್

    ‘ಯುದ್ಧಕಾಂಡ’ ಚಿತ್ರದ ಫಸ್ಟ್ ಲುಕ್ ರಿಲೀಸ್: ಅಜಯ್ ರಾವ್ ಹುಟ್ಟುಹಬ್ಬಕ್ಕೆ ಗಿಫ್ಟ್

    ಸ್ಯಾಂಡಲ್‌ವುಡ್‌ ನಟ ಅಜಯ್‌ ರಾವ್‌ ಕನ್ನಡ ಚಿತ್ರರಂಗದಲ್ಲಿದ್ದು ದಶಕಗಳ ಮೇಲಾಯಿತು. ಅಂದಿನಿಂದ ಇಲ್ಲಿಯವರೆಗೂ ಸಾಕಷ್ಟು ಸಿನಿಮಾಗಳಲ್ಲಿ ಅಜಯ್‌ ನಟಿಸಿದ್ದಾರೆ. ಹೊಸ ಹೊಸ ಪ್ರಯೋಗಕ್ಕೂ ತಮ್ಮನ್ನು ಒಡ್ಡಿಕೊಂಡಿದ್ದಾರೆ. ನಟನಾಗಿ ನಿರ್ಮಾಪಕನಾಗಿ ಗುರುತಿಸಿಕೊಂಡಿರುವ ಅವರಿಗಿಂದು ಜನ್ಮದಿನದ ಸಂಭ್ರಮ. ಅಜಯ್ ರಾವ್ ಹುಟ್ಟುಹಬ್ಬದ ವಿಶೇಷವಾಗಿ  ಯುದ್ಧಕಾಂಡ ಸಿನಿಮಾದ ಫಸ್ಟ್ ಲುಕ್ ರಿಲೀಸ್ ಮಾಡಿ ಶುಭ ಕೋರಲಾಗಿದೆ.

    ಕರಿಕೋಟು ತೊಟ್ಟು ಕೈಯಲ್ಲಿ ಪುಸ್ತಕ ಹಿಡಿದು ಲಾಯರ್ ಅವತಾರದಲ್ಲಿ ಕೃಷ್ಣ ಅಜಯ್ ರಾವ್ ಕಾಣಿಸಿಕೊಂಡಿದ್ದಾರೆ.‌ ಯುದ್ಧಕಾಂಡ ಚಿತ್ರವನ್ನು  ಅಜಯ್ ರಾವ್ ತಮ್ಮದೇ ನಿರ್ಮಾಣ ಸಂಸ್ಥೆ ‘ಶ್ರೀಕೃಷ್ಣ ಆರ್ಟ್ಸ್ ಅಂಡ್ ಕ್ರಿಯೇಷನ್ಸ್’ ಮತ್ತು ‘ಅಜಯ್ ರಾವ್ ಪ್ರೊಡಕ್ಷನ್ಸ್’ ನಡಿ ನಿರ್ಮಾಣ ಮಾಡುತ್ತಿದ್ದಾರೆ. ಈ ಮೂಲಕ ‘ಕೃಷ್ಣ ಲೀಲಾ’ ಸಿನಿಮಾ ನಂತರ ಮತ್ತೊಮ್ಮೆ ನಿರ್ಮಾಣ ಸಾಹಸಕ್ಕೆ ಮುಂದಾಗಿದ್ದಾರೆ.

    ಅಂದಹಾಗೇ ಚಿತ್ರಕ್ಕೆ  ಪವನ್ ಭಟ್ ಆಕ್ಷನ್‌ ಕಟ್‌ ಹೇಳುತ್ತಿದ್ದು ಕಾರ್ತಿಕ್ ಶರ್ಮಾ ಕ್ಯಾಮೆರಾ ಕೈಚಳಕವಿದೆ. ಬಹುಭಾಷೆಯಲ್ಲಿ ತಯಾರಾಗುತ್ತಿರುವ ಈ ಚಿತ್ರದಲ್ಲಿ ಪ್ಯಾನ್ ಇಂಡಿಯಾ ತಾರಾಬಳಗವಿರಲಿದೆ.

    ಸದ್ಯ ಯುದ್ಧಕಾಂಡ ಸಿನಿಮಾದ ಚಿತ್ರೀಕರಣ ಭರದಿಂದ ಸಾಗುತ್ತಿದೆ. ಶೀಘ್ರದಲ್ಲೇ ಮತ್ತೊಂದು ಅಪ್ಡೇಟ್ ನೊಂದಿಗೆ ಚಿತ್ರತಂಡ ನಿಮ್ಮ ಮುಂದೆ ಹಾಜರಾಗಲಿದೆ.

  • ಅಜಯ್ ರಾವ್ ಹುಟ್ಟುಹಬ್ಬಕ್ಕೆ ಹೊಸ ಚಿತ್ರ ಘೋಷಣೆ

    ಅಜಯ್ ರಾವ್ ಹುಟ್ಟುಹಬ್ಬಕ್ಕೆ ಹೊಸ ಚಿತ್ರ ಘೋಷಣೆ

    ನವರಿ 24, ನಾಯಕ ಅಜಯ್ ರಾವ್ (Ajay Rao)  ಅವರ ಹುಟ್ಟುಹಬ್ಬ (Birthday). ಈ ಸಂದರ್ಭದಲ್ಲಿ ಅವರು ನಾಯಕನಾಗಿ ನಟಿಸಲಿರುವ ನೂತನ ಚಿತ್ರದ ಘೋಷಣೆಯಾಗಿದೆ. ಹೆಚ್ ಪಿ ಆರ್ ಎಂಟರ್ ಪ್ರೈಸಸ್ ಲಾಂಛನದಲ್ಲಿ ಹರೀಶ್ ದೇವಿತಂದ್ರೆ ನಿರ್ಮಿಸುತ್ತಿರುವ ಈ ಚೊಚ್ಚಲ ಚಿತ್ರವನ್ನು ಮಳೆ ಚಿತ್ರದ ಖ್ಯಾತಿಯ ಶಿವತೇಜಸ್ (Shivtejas) ನಿರ್ದೇಶಿಸುತ್ತಿದ್ದಾರೆ.

    ಈ ಹಿಂದೆ ನಾನು ನಿರ್ದೇಶಿಸಿದ ಧೈರ್ಯಂ ಚಿತ್ರದಲ್ಲಿ ಅಜಯ್ ರಾವ್ ನಾಯಕನಾಗಿ ನಟಿಸಿದ್ದರು ಹಾಗೂ ‘ದಿಲ್ ಪಸಂದ್’ ಚಿತ್ರದಲ್ಲಿ ಅತಿಥಿಪಾತ್ರದಲ್ಲಿ ಕಾಣಿಸಿಕೊಂಡಿದ್ದರು. ಈಗ ನಮ್ಮಿಬ್ಬರ ಕಾಂಬಿನೇಶನ್ ನಲ್ಲಿ ಹೊಸ ಚಿತ್ರವೊಂದು ಸದ್ಯದಲ್ಲೇ ಆರಂಭವಾಗಲಿದೆ. ಚಿತ್ರದ ಶೀರ್ಷಿಕೆ ಹಾಗೂ ಇತರ ಮಾಹಿತಿಯನ್ನು ಸದ್ಯದಲ್ಲೇ ನೀಡುವುದಾಗಿ ನಿರ್ದೇಶಕ ಶಿವತೇಜಸ್ ತಿಳಿಸಿದ್ದಾರೆ.

     

    ಅಜಯ್ ರಾವ್ ಹುಟ್ಟುಹಬ್ಬದ ದಿನದಂದು ಅವರ ಅಭಿಮಾನಿಗಳಿಗೆ ಕೊಟ್ಟ ವಿಶೇಷ ಗಿಫ್ಟ್ ಇದಾಗಿದ್ದು, ಹೆಚ್ಚಿನ ಮಾಹಿತಿಯನ್ನು ಮುಂದಿನ ದಿನಗಳಲ್ಲಿ ನೀಡಲಿದೆಯಂತೆ ಚಿತ್ರತಂಡ.

  • ನವೆಂಬರ್ ನಲ್ಲಿ ಅಜಯ್ ರಾಜ್‍ ನಟನೆಯ ‘ಮನ್ ರೇ’ ಶೂಟಿಂಗ್

    ನವೆಂಬರ್ ನಲ್ಲಿ ಅಜಯ್ ರಾಜ್‍ ನಟನೆಯ ‘ಮನ್ ರೇ’ ಶೂಟಿಂಗ್

    ಳೆದ ತಿಂಗಳು ನಡೆದ ‘ಸೇನಾಪುರ’ ಚಿತ್ರದ ಟ್ರೈಲರ್ ಬಿಡುಗಡೆ ಸಮಯದಲ್ಲಿ ಸದ್ಯದಲ್ಲೇ ಇನ್ನೊಂದು ಹೊಸ ಚಿತ್ರದ ಘೋಷಣೆ ಮಾಡುವುದಾಗಿ ನಿರ್ದೇಶಕ ಗುರು ಸಾವನ್‍ ಹೇಳಿಕೊಂಡಿದ್ದರು. ಅದರಂತೆ ಒಂದು ತಿಂಗಳ ಒಳಗೆ ಅವರು ಇನ್ನೊಂದು ಹೊಸ ಚಿತ್ರದೊಂದಿಗೆ ಬಂದಿದ್ದಾರೆ. ಅದೇ ‘ಮನ್ ರೇ’. ಚಿತ್ರದ ಘೋಷಣೆ ಅಧಿಕೃತವಾಗಿ ಸೋಮವಾರದಂದು ಆಗಿದ್ದು, ನವೆಂಬರ್‌ನಲ್ಲಿ ಚಿತ್ರೀಕರಣ ಪ್ರಾರಂಭವಾಗಲಿದೆ.

    ಭೂಮಿಕಾ ಕ್ರಿಯೇಷನ್ಸ್ ಅಡಿ ತಿಲಕ್‍ ರಾಜು ಮತ್ತು ರಾಜಣ್ಣ ನಿರ್ಮಿಸುತ್ತಿರುವ ‘ಮನ್‍ರೇ’ ಚಿತ್ರದಲ್ಲಿ ಅಜಯ್‍ ರಾಜ್‍ ನಾಯಕನಾಗಿ ಕಾಣಿಸಿಕೊಂಡರೆ, ಗಾಯಕಿ ಐಶ್ವರ್ಯ ರಂಗರಾಜನ್‍ ಈ ಚಿತ್ರದಲ್ಲಿ ನಾಯಕಿಯಾಗಿ ನಟಿಸುತ್ತಿದ್ದಾರೆ. ಇನ್ನು, ‘ಅಮೃತವರ್ಷಿಣಿ’ ಖ್ಯಾತಿಯ ರಜನಿ, ಪ್ರಮೋದ್‍ ಶೆಟ್ಟಿ, ಸೂರ್ಯ ಸಿದ್ಧಾರ್ಥ್, ಅಮಿತ್ ರಾಜ್ ಮುಂತಾದವರು ನಟಿಸುತ್ತಿದ್ದಾರೆ. ‘ಮನ್‍ರೇ’ ಕುರಿತು ಮಾತನಾಡುವ ಗುರು ಸಾವನ್‍, ‘ಮನ್‍ ರೇ’ ಎಂದರೆ ಮನಸ್ಸಿನ ಎಕ್ಸ್ ರೇ ಎಂದರ್ಥ. ಮನಸ್ಸಿನ ತೊಳಲಾಟವನ್ನು ಈ ಚಿತ್ರದ ಮೂಲಕ ಹೇಳುವ ಪ್ರಯತ್ನ ಮಾಡುತ್ತಿದ್ದೇವೆ. ಕಾನ್ಶಿಯಸ್‍ ಮತ್ತು ಸಬ್‍ ಕಾನ್ಶಿಯಸ್‍ ಮೈಂಡ್‍ ನಡುವಿನ ತೊಳಲಾಟವಿದು. ಸುಮಾರು 8-9 ವರ್ಷಗಳ ಹಿಂದೆಯೇ ಕಥೆ ಮಾಡಿಕೊಂಡಿದ್ದೆ. ಇದೊಂದು ಸೈಕಲಾಜಿಕಲ್‍ ಥ್ರಿಲ್ಲರ್ ಕಥೆ. ಸಂಪೂರ್ಣ ಕಾಲ್ಪನಿಕ’ ಎನ್ನುತ್ತಾರೆ ಅವರು.

    ಈ ಸಮಸ್ಯೆ ಪ್ರತಿಯೊಬ್ಬರಲ್ಲೂ ಇದ್ದೇ ಇರುತ್ತದೆ ಎನ್ನುವ ಗುರು, ‘ನಾವು ಏನೋ ಕೆಲಸ ಮಾಡುತ್ತಿದ್ದರೆ, ಮನಸ್ಸು ಇನ್ನೇನೋ ಯೋಚಿಸುತ್ತಿರುತ್ತದೆ. ಇಲ್ಲಿ ನಾಯಕ ಆರವ್‍, ಭ್ರಮೆಯ ಲೋಕದಲ್ಲಿ ಬದುಕುತ್ತಿರುತ್ತಾನೆ. ಅವನು ವಾಸ್ತವಕ್ಕೆ ಹೇಗೆ ಬರುತ್ತಾನೆ. ಅವನ ಸುತ್ತಲಿನವರು, ಅವನ ಈ ಸಮಸ್ಯೆಯಿಂದ ಎಷ್ಟೆಲ್ಲಾ ಕಷ್ಟಪಡುತ್ತಾರೆ ಎನ್ನುವುದನ್ನು ಈ ಚಿತ್ರದ ಮೂಲಕ ಪ್ರಯತ್ನ ಮಾಡುತ್ತಿದ್ದೇವೆ. ಪ್ರಮೋದ್‍ ಶೆಟ್ಟಿ ಇಲ್ಲಿ ಅರಸ್‍ ಎಂಬ ವೈದ್ಯರ ಪಾತ್ರ ಮಾಡುತ್ತಿದ್ದಾರೆ. ಈಗಾಗಲೇ ಪ್ರೀಪ್ರೊಡಕ್ಷನ್‍ ಕೆಲಸಗಳು ನಡೆಯುತ್ತಿವೆ. ನವೆಂಬರ್‌ನಲ್ಲಿ ಚಿತ್ರೀಕರಣ ಪ್ರಾರಂಭವಾಗಿ ಮುಂದಿನ ವರ್ಷ ಮೇನಲ್ಲಿ ಬಿಡುಗಡೆ ಮಾಡುವ ಪ್ಲಾನ್‍ ಇದೆ’ ಎನ್ನುತ್ತಾರೆ.

    ಸಾಮಾನ್ಯವಾಗಿ ಸೈಕಾಲಾಜಿಕಲ್‍ ಥ್ರಿಲ್ಲರ್ ಎಂದರೆ ಕ್ರೈಮ್‍ ಅಥವಾ ಹಿಂಸೆ ಇರುತ್ತದೆ. ಆದರೆ, ಈ ಚಿತ್ರದಲ್ಲಿ ಅಂಥದ್ದು ಯಾವುದೂ ಇರುವುದಿಲ್ಲ ಎನ್ನುವ ಅಜಯ್‍ ರಾಜ್‍, ‘ಸರಳವಾಗಿ ಹೇಳಬೇಕು ಎಂದರೆ ಇದು ಮನಸ್ಸಿನೊಳಗೆ ನಡೆಯುವ ಸಂಘರ್ಷ. ಇಲ್ಲಿ ನಾಯಕನೇ ಸಮಸ್ಯೆ. ಅವನಿಂದ ಏನಾಗುತ್ತದೆ ಎಂಬುದು ಕಥೆ’ ಎಂದರು.

    ರಜನಿಗೆ ಇಲ್ಲಿ ವಿಶೇಷ ಪಾತ್ರ ಸಿಕ್ಕಿದೆಯಂತೆ. ಅಷ್ಟೇ ಅಲ್ಲ, ಇದು ಅವರ ಕನಸಿನ ಪಾತ್ರವಂತೆ. ‘ನಿರ್ದೇಶಕರು ಬಂದು ಒಂದು ಸೀನ್‍ ಕೇಳಿ, ಆ ನಂತರ ಚಿತ್ರದಲ್ಲಿ ನಟಿಸುವ ಬಗ್ಗೆ ಯೋಚನೆ ಮಾಡಿ ಎಂದರು. ಬಹುಶಃ ಗ್ಲಾಮರಸ್‍ ಪಾತ್ರ ಇರಬಹುದು ಎಂದುಕೊಂಡೆ. ಆದರೆ, ಹಾಗೇನಿಲ್ಲ. ಇದೊಂದು ಸವಾಲಿನ ಪಾತ್ರ. ನಾನು ಇದುವರೆಗೂ ನೋಡಿರುವ ಚಿತ್ರಗಳಲ್ಲಿ ಇಂಥದ್ದೊಂದು ಪಾತ್ರ ಬಂದಿಲ್ಲ. ಹಾಗೆಯೇ ಇಂಥದ್ದೊಂದು ಪಾತ್ರ ಹೇಗೆ ಹೊಳೆಯಿತು ಎಂಬ ಆಶ್ಚರ್ಯವೂ ಆಯಿತು’ ಎಂದರು. ಇನ್ನು, ಮತ್ತೊಬ್ಬ ನಾಯಕಿಯಾಗಿರುವ ಐಶ್ವರ್ಯಾ ಚಿತ್ರದಲ್ಲಿ ನಟಿಸುತ್ತಿರುವುದಕ್ಕೆ ಖುಷಿಪಟ್ಟರು.

     

    ನಿರ್ಮಾಪಕರಲ್ಲೊಬ್ಬರಾದ ತಿಲಕ್‍ ರಾಜು ಅನಿವಾಸಿ ಭಾರತೀಯರು. ಸದ್ಯ ಅಮೇರಿಕಾದಲ್ಲಿ ವಾಸಿಸುತ್ತಿರುವ ಅವರಿಗೆ ಚಿತ್ರ ಮಾಡುವುದು ಬಹುದಿನಗಳ ಕನಸಂತೆ. ಈ ಚಿತ್ರದ ಮೂಲಕ ಅದು ನನಸಾಗುತ್ತಿರುವುದಾಗಿ ಖುಷಿಪಟ್ಟರು. ‘ಮನ ರೇ‘ ಚಿತ್ರಕ್ಕೆ ಆದಿ ಅವರ ಛಾಯಾಗ್ರಹಣವಿದೆ. ಈಗಾಗಲೇ ಸಾಕಷ್ಟು ಜನಪ್ರಿಯ ಚಿತ್ರಗಳಿಗೆ ಹಾಡಿ, ಉತ್ತಮ ಗಾಯಕರೆನಿಸಿಕೊಂಡಿರುವ ಅನಿರುದ್ಧ್ ಶಾಸ್ತ್ರಿ ಈ ಚಿತ್ರಕ್ಕೆ ಸಂಗೀತ ನೀಡುತ್ತಿದ್ದಾರೆ. ಜೊತೆಗೆ ಪ್ರಮುಖಪಾತ್ರದಲ್ಲೂ ನಟಿಸುತ್ತಿದ್ದಾರೆ.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • Bigg Bossಗೆ ಇವರೇನಾ ಸ್ಪರ್ಧಿಗಳು? ಸೋಷಿಯಲ್‌ ಮೀಡಿಯಾದಲ್ಲಿ ಪಟ್ಟಿ ವೈರಲ್‌

    Bigg Bossಗೆ ಇವರೇನಾ ಸ್ಪರ್ಧಿಗಳು? ಸೋಷಿಯಲ್‌ ಮೀಡಿಯಾದಲ್ಲಿ ಪಟ್ಟಿ ವೈರಲ್‌

    ಕಿರುತೆರೆಯ ಅತೀ ದೊಡ್ಡ ರಿಯಾಲಿಟಿ ಶೋ ಬಿಗ್ ಬಾಸ್‌ಗೆ (Bigg Boss Kannada 10) ದಿನಗಣನೆ ಶುರುವಾಗಿದೆ. ಈಗಾಗಲೇ ತೆಲುಗಿನ ಬಿಗ್ ಬಾಸ್‌ಗೆ ಚಾಲನೆ ಸಿಕ್ಕಿರುವ ಬೆನ್ನಲ್ಲೇ ಕನ್ನಡದ ಬಿಗ್ ಬಾಸ್‌ಗೆ ಬರುವ ಸ್ಪರ್ಧಿಗಳ ಬಗ್ಗೆ ಸೋಷಿಯಲ್ ಮೀಡಿಯಾದಲ್ಲಿ ಚರ್ಚೆ ಶುರುವಾಗಿದೆ. ಬಿಗ್ ಬಾಸ್ ಸೀಸನ್ 10ರ ಕಾರ್ಯಕ್ರಮದಲ್ಲಿ ಇವರೆಲ್ಲಾ ಸ್ಪರ್ಧಿಸುತ್ತಾರಾ?

    ಬಿಗ್ ಬಾಸ್ 10ನೇ ಸೀಸನ್ ಆಗಿರುವ ಕಾರಣ ಒಟಿಟಿ ಇಲ್ಲದೇ ಟಿವಿ ಬಿಗ್ ಬಾಸ್ ಶುರು ಮಾಡಲು ವಾಹಿನಿ ನಿರ್ಧರಿಸಿದೆ. ದೊಡ್ಮನೆ ಆಟಕ್ಕೆ ತೆರೆಮರೆಯಲ್ಲಿ ಎಲ್ಲಾ ತಯಾರಿ ಕೂಡ ನಡೆಯುತ್ತಿದೆ. ಹಾಗಾದ್ರೆ ಯಾರೆಲ್ಲಾ ಸ್ಟಾರ್‌ಗಳ ಹೆಸರು ಸದ್ದು ಮಾಡ್ತಿದೆ. ಇಲ್ಲಿದೆ ಮಾಹಿತಿ.

    artist_48037_megha-shetty-photos-images-86684

    ಟಿವಿ ಲೋಕದ ಸ್ಟಾರ್ ನಟಿ ಮೇಘಾ ಶೆಟ್ಟಿ (Megha Shetty) ಅವರು ‘ಜೊತೆ ಜೊತೆಯಲಿ’ (Jothe Jotheyali) ಧಾರಾವಾಹಿ ಮೂಲಕ ಪ್ರೇಕ್ಷಕರಿಗೆ ಪರಿಚಿತರಾದರು. ಈಗಾಗಲೇ ‘ದಿಲ್ ಪಸಂದ್’ ಮತ್ತು ‘ತ್ರಿಬಲ್ ರೈಡಿಂಗ್’ (Triple Riding) ಚಿತ್ರಗಳು ರಿಲೀಸ್ ಆಗಿವೆ. ಸೋಷಿಯಲ್ ಮೀಡಿಯಾದಲ್ಲಿ ಮಿಲಿಯನ್ ಫಾಲೋವರ್ಸ್ ಹೊಂದಿರುವ ಮೇಘಾ ಕೂಡ ದೊಡ್ಮನೆಗೆ ಬರುತ್ತಾರೆ ಎಂದು ಚರ್ಚೆಯಾಗುತ್ತಿದೆ.

    ಸುನೀಲ್ ರಾವ್ (Sunil Rao) ಎಂದಾಕ್ಷಣ ಮೊದಲು ನೆನಪಾಗೋದು ರಮ್ಯಾ(Ramya), ಅಜಯ್ ರಾವ್ ಜೊತೆಗಿನ ಎಕ್ಸ್‌ಕ್ಯೂಸ್‌ ಮಿ (Excuse Me) ಸಿನಿಮಾ. ಸಾಕಷ್ಟು ಸಿನಿಮಾಗಳಲ್ಲಿ ನಟಿಸಿದ್ರು ಚಿತ್ರರಂಗದಲ್ಲಿ ನಾಯಕನಾಗಿ ನಿಲ್ಲಲು ಸುನೀಲ್ ರಾವ್‌ಗೆ ಅದೃಷ್ಟ ಒಲಿಯಲಿಲ್ಲ. ಈಗ ವರ್ಷಕ್ಕೆ ಒಂದು ಸಿನಿಮಾದಲ್ಲಿ ನಟಿಸುತ್ತಾ, ಉದ್ಯಮಿಯಾಗಿ ಸುನೀಲ್ ಗುರುತಿಸಿಕೊಳ್ತಿದ್ದಾರೆ.

    ‘ನಾಗಿಣಿ 2’ (Nagini 2) ಸೀರಿಯಲ್‌ನ ಜೋಡಿ ನಿನಾದ್ ಹರಿತ್ಸ (Ninaad Harithsa) ಮತ್ತು ನಮ್ರತಾ ಗೌಡ (Namratha Gowda) ಇಬ್ಬರ ಹೆಸರು ಕೂಡ ನೆಟ್ಟಿಗರ ಚರ್ಚೆಗೆ ಗ್ರಾಸವಾಗಿದೆ. ನಮ್ರತಾ, ಬಾಲನಟಿಯಾಗಿ ಹಲವು ಸಿನಿಮಾಗಳಲ್ಲಿ ನಟಿಸಿದ ಕಲಾವಿದೆ. ಕಿರುತೆರೆಯಲ್ಲಿ ಸಿಕ್ಕ ಬ್ರೇಕ್, ನಾಯಕಿಯಾಗಿ ಬೆಳ್ಳಿಪರದೆಯಲ್ಲಿ ಮಿಂಚಲು ಸಿಗಲಿಲ್ಲ. ಇನ್ನೂ ನಟನೆ ಮತ್ತು ಗಾಯನದ ಮೂಲಕ ನಿನಾದ್ ಗಮನ ಸೆಳೆದಿದ್ದಾರೆ. ಇದನ್ನೂ ಓದಿ:ಮಿಲಿಯನ್ ಗಡಿ ದಾಟಿದ ಸೋನು ಬಿಕಿನಿ ವಿಡಿಯೋ

    ದಿವಂಗತ ಬುಲೆಟ್ ಪ್ರಕಾಶ್ ಪುತ್ರ ರಕ್ಷಕ್ (Rakshak Bullet Prakash) ಅವರು ‘ಗುರು ಶಿಷ್ಯರು’ ಸಿನಿಮಾ ಮೂಲಕ ಸ್ಯಾಂಡಲ್‌ವುಡ್‌ಗೆ ಪಾದಾರ್ಪಣೆ ಮಾಡಿದರು. ಈಗ ದೊಡ್ಮನೆಗೆ ಕಾಲಿಡುತ್ತಾರೆ ಎಂದು ರಕ್ಷಕ್ ಸುದ್ದಿಯಲ್ಲಿದ್ದಾರೆ.

    ಪ್ರತಿ ಸೀಸನ್‌ನಲ್ಲೂ ಸಿಂಗರ್‌ಗಳಿಗೆ ಬಿಗ್ ಬಾಸ್ ಟೀಂ ಗಾಳ ಹಾಕುತ್ತಾರೆ. ಅದರಂತೆ ಈ ಬಾರಿ ರ‍್ಯಾಪರ್-ಸಿಂಗರ್ ಇಶಾನಿ (Eshani) ಕೂಡ ಬರುತ್ತಾರೆ ಎಂದು ಹೇಳಲಾಗುತ್ತಿದೆ.

    ಕಳೆದ ವರ್ಷ ಡ್ರೋನ್ ಪ್ರತಾಪ್ (Drone Prathap) ಅವರು ಬಿಗ್ ಬಾಸ್‌ಗೆ(Bigg Boss Kannada) ಬರುತ್ತಾರೆ ಎಂದು ಹೇಳಲಾಗಿತ್ತು. ಆದರೆ ಬರಲಿಲ್ಲ. ಈ ಬಾರಿ ಕೂಡ ದೊಡ್ಮನೆಗೆ ಬರುವ ಅವಕಾಶ ಸಿಕ್ಕಿದೆ. ಒಪ್ಪಿ ಮನೆಗೆ ಬರುತ್ತಾರಾ ಕಾಯಬೇಕಿದೆ.

    ಸೋಷಿಯಲ್ ಮೀಡಿಯಾದಲ್ಲಿ ಸೆನ್ಸೇಷನ್ ಕ್ರಿಯೇಟ್ ಮಾಡಿದ್ದ ಧನುಶ್ರೀ, ಸೋನು ಗೌಡಗೆ ಕಳೆದ ಬಾರಿ ಅವಕಾಶ ನೀಡಿದ್ದರು. ಈ ಬಾರಿ ಶಿಲ್ಪಾ ಗೌಡ(Shilpa Gowda), ಭೂಮಿಕಾ ಬಸವರಾಜ್(Bhumika Basavaraj), ಬಿಂದು ಗೌಡ ಬರಲಿದ್ದಾರೆ ಎನ್ನಲಾಗುತ್ತಿದೆ. ಶೋ ಶುರುವಾಗುವ ಸಮಯದಲ್ಲಿ ಅಧಿಕೃತ ಮಾಹಿತಿ ಸಿಗಲಿದೆ.

    ಈಗಾಗಲೇ ಬಿಗ್ ಬಾಸ್ ಕನ್ನಡ ಸೀಸನ್ 10ರ ಮೊದಲ ಪ್ರೋಮೋ ರಿಲೀಸ್ ಆಗಿದೆ. ಸಮ್‌ಥಿಂಗ್ ಸ್ಪೆಷಲ್ ಆಗಿ ಈ ಸೀಸನ್ ಇರಲಿದೆ ಎಂಬುದನ್ನ ವಾಹಿನಿ ತಿಳಿಸಿದೆ. ಅಕ್ಟೋಬರ್ ಮೊದಲ ವಾರದಲ್ಲಿ ಬಿಗ್ ಬಾಸ್ ಆಟ ಶುರುವಾಗಲಿದೆ. ಅಷ್ಟರ ಒಳಗೆ ನಟ ಕಮ್ ನಿರೂಪಕ ಸುದೀಪ್, ಈಗಾಗಲೇ ಒಪ್ಪಿರುವ ಸಿನಿಮಾಗಳ ಕೆಲಸ ಮುಗಿಸಬೇಕಿದೆ.

    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ‘ತಾಜ್ ಮಹಲ್’ ಚಿತ್ರಕ್ಕೆ 16ರ ಸಂಭ್ರಮ : ನಿರ್ದೇಶಕ ಆರ್.ಚಂದ್ರು ಸಿನಿಯಾನ

    ‘ತಾಜ್ ಮಹಲ್’ ಚಿತ್ರಕ್ಕೆ 16ರ ಸಂಭ್ರಮ : ನಿರ್ದೇಶಕ ಆರ್.ಚಂದ್ರು ಸಿನಿಯಾನ

    ಣ್ಣ ಹಳ್ಳಿಯಿಂದ ಬಂದು, ಇಂದು ‘ಕಬ್ಜ’ ಎಂಬ ಪ್ಯಾನ್ ಇಂಡಿಯಾ ಸಿನಿಮಾ ಮೂಲಕ ಭಾರತದಾದ್ಯಂತ  ಹೆಸರು‌ ಮಾಡಿರುವ ನಿರ್ದೇಶಕ ಆರ್.ಚಂದ್ರು (R. Chandru) ಅವರ ಸಿನಿಯಾನಕ್ಕೆ ಈಗ ಹದಿನಾರನೇ ವಸಂತ. ಅವರ ನಿರ್ದೇಶನದ ಚೊಚ್ಚಲ ಸಿನಿಮಾ ‘ತಾಜ್ ಮಹಲ್’ (Taj Mahal) ತೆರೆಕಂಡು ಹದಿನೈದು ವರ್ಷ ಪೂರ್ಣಗೊಳಿಸಿದೆ.

    ಆರ್.ಚಂದ್ರು ನಿರ್ದೇಶನದ ಮೊದಲ ಚಿತ್ರ ‘ತಾಜ್ ಮಹಲ್’ ತೆರೆಕಂಡು ಜುಲೈ 25ಕ್ಕೆ ಹದಿನೈದು ವರ್ಷಗಳಾಗಿವೆ. (2008 ಜುಲೈ 25 ಈ ಚಿತ್ರ ಬಿಡುಗಡೆಯಾಗಿತ್ತು) ಶಿವಶಂಕರ್ ‌ರೆಡ್ಡಿ ನಿರ್ಮಿಸಿದ್ದ ಹಾಗೂ ಅಜೇಯ್ ರಾವ್ (Ajay Rao) ಹಾಗೂ ಪೂಜಾ ಗಾಂಧಿ (Pooja Gandhi) ನಾಯಕ, ನಾಯಕಿಯಾಗಿ ನಟಿಸಿದ್ದ ಈ ಚಿತ್ರ ಕರ್ನಾಟಕದಾದ್ಯಂತ ಭರ್ಜರಿ ಯಶಸ್ಸು ಕಂಡಿತ್ತು. ಇದನ್ನೂ ಓದಿ:ತಮಿಳು ‘ಜೈಲರ್’ ವಿರುದ್ದ ಮಲಯಾಳಂ ‘ಜೈಲರ್’ ರಿಲೀಸ್: ರಜನಿ ಸಿನಿಮಾಗೆ ಟಕ್ಕರ್

    ಅನೇಕ ಚಿತ್ರಮಂದಿರಗಳಲ್ಲಿ 200ಕ್ಕೂ ಅಧಿಕ ದಿನಗಳ ಕಾಲ ಈ ಸಿನಿಮಾ ಪ್ರದರ್ಶನವಾಗಿತ್ತು. ತಮ್ಮ ಮೊದಲ ನಿರ್ದೇಶನದ ಚಿತ್ರದಲ್ಲೇ ಆರ್.ಚಂದ್ರು ಡಬಲ್ ಸೆಂಚುರಿ ಬಾರಿಸಿದ್ದರು. ನಂತರದ ದಿನಗಳಲ್ಲಿ ಆರ್. ಚಂದ್ರು,  ತಾಜ್ ಮಹಲ್  ಚಂದ್ರು ಅಂತಲೇ ಪ್ರಸಿದ್ದರಾದರು. ಈ ಚಿತ್ರದ ಸಂಗೀತ ನಿರ್ದೇಶನಕ್ಕಾಗಿ ಅಭಿಮಾನ್ ರಾಯ್ ಅವರಿಗೆ ರಾಜ್ಯಪ್ರಶಸ್ತಿ ಸಹ ಬಂದಿತ್ತು. ಈ ಚಿತ್ರ 2010 ರಲ್ಲಿ ತಾಜ್ ಮಹಲ್ ಶೀರ್ಷಿಕೆಯಲ್ಲೇ ತೆಲುಗಿನಲ್ಲೂ ಬಿಡುಗಡೆಯಾಗಿತ್ತು.

    ಆನಂತರದ ದಿನಗಳಲ್ಲಿ ಆರ್.ಚಂದ್ರು ಕನ್ನಡದ ಹೆಸರಾಂತ ನಾಯಕ ನಟರ ಸಿನಿಮಾಗಳನ್ನು ನಿರ್ದೇಶಿಸಿ ಕನ್ನಡ ಚಿತ್ರರಂಗಕ್ಕೆ ಸೂಪರ ಹಿಟ್ ಚಿತ್ರಗಳನ್ನು ನೀಡಿದರು. ನಿರ್ಮಾಪಕರಾಗಿಯೂ ಆರ್ ಚಂದ್ರು ಜನಪ್ರಿಯರಾದರು.

    ತಾಜ್ ಮಹಲ್ ನಿಂದ ಇತ್ತೀಚೆಗೆ ತೆರೆಕಂಡ ಪ್ಯಾನ್ ಇಂಡಿಯಾ ಸಿನಿಮಾ ಕಬ್ಜ ತನಕ ಆರ್. ಚಂದ್ರು ಯಶಸ್ಸಿನ ಸಿನಿಮಾ ಯಾನ ಮುಂದುವರೆದುಕೊಂಡು ಬಂದಿದೆ.  ತಮ್ಮ ಸಿನಿ ಜರ್ನಿಗೆ 15 ವರ್ಷಗಳು ತುಂಬಿರುವ ಈ ಸುಸಂದರ್ಭದಲ್ಲಿ ಆರ್‌ ಚಂದ್ರು ತಮಗೆ ಸಹಕಾರ ನೀಡಿರುವ ಪ್ರತಿಯೊಬ್ಬರಿಗೂ ಧನ್ಯವಾದ ತಿಳಿಸಿದ್ದಾರೆ.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]