Tag: Ajay Rao

  • ಶಿವಣ್ಣ ಜೊತೆ ಅಜಯ್ ರಾವ್ : ಫಸ್ಟ್ ಲುಕ್ ರಿಲೀಸ್

    ಶಿವಣ್ಣ ಜೊತೆ ಅಜಯ್ ರಾವ್ : ಫಸ್ಟ್ ಲುಕ್ ರಿಲೀಸ್

    ನ್ ಮಗಳೇ ಹೀರೋಯಿನ್, ಎಂ.ಆರ್.ಪಿ. ರೀತಿಯ ಹಾಸ್ಯಮಯ ಚಲನಚಿತ್ರಗಳನ್ನು ನಿರ್ದೇಶನ‌ ಮಾಡಿಕೊಂಡು ಬಂದಿರುವ  ಎಸ್.ಕೆ. ಬಾಹುಬಲಿ (S.K. Baahubali) ಅವರು ಇದೇ ಮೊದಲಬಾರಿಗೆ ಮಲ್ಟಿ ಸ್ಟಾರ್  ಇಟ್ಟುಕೊಂಡು ಮಾಸ್ ಎಂಟರ್ಟೈನರ್ ಸಿನಿಮಾಗೆ ಆಕ್ಷನ್ ಕಟ್  ಹೇಳಲು ಹೊರಟಿದ್ದಾರೆ.

    ಕನ್ನಡದ ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ (Shivaraj Kumar)  ಹಾಗೂ ಕೃಷ್ಣ ಅಜಯ್ ರಾವ್ (Ajay Rao) ಇಬ್ಬರ ಕಾಂಬಿನೇಷನ್ ನಲ್ಲಿ  ಹೊಸ ಚಿತ್ರವೊಂದನ್ನು  ಬಾಹುಬಲಿ ನಿರ್ದೇಶನ‌ ಮಾಡುತ್ತಿದ್ದಾರೆ. ನಟ ಶಿವರಾಜ್ ಕುಮಾರ್ ಅವರ ಹುಟ್ಟುಹಬ್ಬದ ವಿಶೇಷವಾಗಿ ಈ ಚಿತ್ರದ ಫಸ್ಟ್ ಲುಕ್ (First Look) ಪೋಸ್ಟರನ್ನು ಇಂದು ಬಿಡುಗಡೆ ಮಾಡಲಾಗಿದೆ. ಇದನ್ನೂ ಓದಿ:ಗಂಡು ಮಗುವಿಗೆ ಜನ್ಮ ನೀಡಿದ ನಟಿ, ಡೆಲಿವರಿ ಆಗ್ತಿದ್ದಂತೆ ಶೂಟಿಂಗ್ ಹಾಜರಾದ ಮಮತಾ

    ಕುತೂಹಲ ಕೆರಳಿಸುವ ಆಕ್ಷನ್, ಡ್ರಾಮಾ ಕಥಾಹಂದರ ಒಳಗೊಂಡ ಈ ಚಿತ್ರಕ್ಕೆ ಬಾಹುಬಲಿ ಅವರೇ ಕಥೆ, ಚಿತ್ರಕಥೆ ಬರೆದು ನಿರ್ದೇಶನ ಮಾಡುತ್ತಿದ್ದಾರೆ. ಈ ಚಿತ್ರವನ್ನು ಪಿ.ಕೆ. ಪ್ರೊಡಕ್ಷನ್ಸ್  ಬ್ಯಾನರ್  ಮೂಲಕ  ಕಿರಣ್ ಅವರು ಬಿಗ್ ಬಜೆಟ್ ನಲ್ಲಿ ನಿರ್ಮಾಣ ಮಾಡುತ್ತಿದ್ದಾರೆ. ಸದ್ಯ ಚಿತ್ರದ ಪ್ರಿಪ್ರೊಡಕ್ಷನ್ ಕೆಲಸಗಳು ನಡೆಯುತ್ತಿದ್ದು ಮುಂದಿನ ದಿನಗಳಲ್ಲಿ ಸಂಪೂರ್ಣ ಮಾಹಿತಿ ಹೊರಬೀಳಲಿದೆ.

    ಈ ದಿನ ಶಿವಣ್ಣ ಅಭಿನಯಿಸಲಿರುವ  ಅನೇಕ ಚಲನಚಿತ್ರಗಳ, ಸಿನಿಮಾ ಶೀರ್ಷಿಕೆಗಳ‌ ಅನೌನ್ಸ್ ಆಗಿದೆ. ಆ ಚಿತ್ರಗಳಲ್ಲಿ ‘ಧೀರ’ ಚಿತ್ರವೂ ಒಂದು. ಹೆಚ್.ಸಿ. ಶ್ರೀನಿವಾಸ್ (ಶಿಲ್ಪ ಶ್ರೀನಿವಾಸ್) ಅರ್ಪಿಸುತ್ತಿರುವ ಈ ಚಿತ್ರವನ್ನು ಚಿಲ್ಲಿ ಫಿಲಂಸ್ ಎಂಟರ್ ಟೈನ್ ಮೆಂಟ್ ಅಡಿಯಲ್ಲಿ ಸಾಗರ್ ಅವರು ಅದ್ದೂರಿಯಾಗಿ ನಿರ್ಮಾಣ ಮಾಡುತ್ತಿದ್ದಾರೆ. ಇನ್ನು ಈ ಚಿತ್ರಕ್ಕೆ ನವೀನ್ ಶೆಟ್ಟಿ  ಆ್ಯಕ್ಷನ್ ಕಟ್ ಹೇಳುತ್ತಿದ್ದಾರೆ‌.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಅಜಯ್ ರಾವ್ ಚಿತ್ರಕ್ಕೆ ಕೆಜಿಎಫ್ ನಟಿ ಅರ್ಚನಾ ಜೋಯಿಸ್ ನಾಯಕಿ

    ಅಜಯ್ ರಾವ್ ಚಿತ್ರಕ್ಕೆ ಕೆಜಿಎಫ್ ನಟಿ ಅರ್ಚನಾ ಜೋಯಿಸ್ ನಾಯಕಿ

    ತಾಜ್ ಮಹಲ್, ಕೃಷ್ಣ ಲೀಲಾ, ಕೃಷ್ಣ ರುಕ್ಮಿಣಿ ಖ್ಯಾತಿಯ ನಟ ಅಜಯ್ ರಾವ್ (Ajay Rao) ಇದೀಗ ಮತ್ತೊಂದು ಹೊಸ ಸಿನಿಮಾದಲ್ಲಿ ನಟಿಸುತ್ತಿದ್ದು, ಈ ಚಿತ್ರಕ್ಕೆ ಕೆಜಿಎಫ್ (KGF 2) ಖ್ಯಾತಿಯ ನಟಿ ಅರ್ಚನಾ ಜೋಯಿಸ್ (Archana Jois) ನಾಯಕಿಯಾಗಿ ಆಯ್ಕೆಯಾಗಿದ್ದಾರೆ. ಈ ಚಿತ್ರಕ್ಕೆ ‘ಯುದ್ಧಕಾಂಡ’ ಎಂದು ಟೈಟಲ್ ಇಡಲಾಗಿದ್ದು, ಅಜಯ್ ರಾವ್ ತಮ್ಮದೇ ನಿರ್ಮಾಣ ಸಂಸ್ಥೆ ‘ಶ್ರೀಕೃಷ್ಣ ಆರ್ಟ್ಸ್ ಅಂಡ್ ಕ್ರಿಯೇಷನ್ಸ್’ ಮತ್ತು ‘ಅಜಯ್ ರಾವ್ ಪ್ರೊಡಕ್ಷನ್ಸ್’ ನಡಿ ನಿರ್ಮಾಣ ಮಾಡುತ್ತಿದ್ದಾರೆ.

    ‘ಯುದ್ಧಕಾಂಡ’ (Yudhkanda) ಎಂದಾಗ ಎಲ್ಲರಿಗೂ ನೆನಪಾಗೋದು ಲೆಜೆಂಡರಿ ರವಿ ಸರ್ ಸಿನಿಮಾ. ಆ ಸಿನಿಮಾದ ನಿರ್ದೇಶಕರಾದ ಕೆ. ವಿ ರಾಜು ಸರ್ ಜೊತೆ ನಾನು ಅಸಿಸ್ಟೆಂಟ್ ಡೈರೆಕ್ಟರ್ ಆಗಿ ಕೆಲಸ ಮಾಡಿದ್ದೇನೆ ಅದು ನನ್ನ ಅದೃಷ್ಟ. ಈ ಸಿನಿಮಾ ಲಾಂಚ್ ಮಾಡೋವಾಗ ಮೊದಲು ರವಿ ಸರ್ ಭೇಟಿ ಮಾಡಿ ಆಶೀರ್ವಾದ ತೆಗೆದುಕೊಂಡು ಬಂದೆ. ಒಳ್ಳೆದಾಗ್ಲಿ ಎಂದು ಆಶೀರ್ವಾದ ಮಾಡಿದ್ರು. ಆದ್ರೆ ಆಗ ಬಂದ ‘ಯುದ್ಧಕಾಂಡ’ ಚಿತ್ರಕ್ಕೂ ಈ ಚಿತ್ರಕ್ಕೂ ಯಾವುದೇ ಸಂಬಂಧ ಇಲ್ಲ. ಇದು ರಿಮೇಕ್ ಸಿನಿಮಾ ಕೂಡ ಅಲ್ಲ ಎಂದು ಅಜಯ್ ರಾವ್ ಮಾಹಿತಿ ನೀಡುತ್ತಾರೆ.

    ‘ಚಿತ್ರರಂಗಕ್ಕೆ ಎಂಟ್ರಿ ಕೊಟ್ಟು 20 ವರ್ಷ ಆಯ್ತು. ನಟನಾಗಿ ಯಶಸ್ಸು, ಸೋಲು ಎರಡನ್ನು ನೋಡಿದ್ದೇನೆ. ಕೇವಲ ನಟನಾಗಿ ಉಳಿಯದೇ ಸಿನಿಮಾದ ಎಲ್ಲಾ ಕ್ಷೇತ್ರದಲ್ಲಿ ಪ್ರಯೋಗ ಮಾಡಬೇಕು ಎಂದುಕೊಂಡು ಬೆಂಗಳೂರಿಗೆ ಬಂದವನು ನಾನು. ಹೀರೋ ಆಗಿದ್ದವನು ಕ್ಯಾರೆಕ್ಟರ್ ಆರ್ಟಿಸ್ಟ್ ಆಗಿಯೂ ಮಾಡಿದ್ದೇನೆ. ಕೃಷ್ಣ ಲೀಲಾ ಸಿನಿಮಾ ಮೂಲಕ ನಿರ್ಮಾಪಕನೂ ಆಗಿದ್ದೇನೆ. ಇದೀಗ ಏಳು ವರ್ಷದ ನಂತರ ಎರಡನೇ ಸಿನಿಮಾವನ್ನು ನಿರ್ಮಾಣ ಮಾಡುತ್ತಿದ್ದೇನೆ ಎನ್ನುವುದು ಅಜಯ್ ರಾವ್ ಮಾತು. ಇದನ್ನೂ ಓದಿ:ಮದುವೆಯಾಗಿ 14 ಕಳೆದರೂ ಮಕ್ಕಳಾಗದ್ದಕ್ಕೆ ಮಹತ್ವದ ನಿರ್ಧಾರ ಕೈಗೊಂಡ ‘ಲಾಲಿಹಾಡು’ ನಟಿ

    ‘ಯುದ್ಧಕಾಂಡ’ ಸಿನಿಮಾವನ್ನು ಕಟಿಂಗ್ ಶಾಪ್ ಸಿನಿಮಾ ಖ್ಯಾತಿಯ ಪವನ್ ಭಟ್ ನಿರ್ದೇಶಿಸುತ್ತಿದ್ದಾರೆ. ಕಾರ್ತಿಕ್ ಶರ್ಮಾ ಕ್ಯಾಮೆರಾ ವರ್ಕ್, ಕೆ.ಬಿ.ಪ್ರವೀಣ್ ಸಂಗೀತ ನಿರ್ದೇಶನ ಈ ಚಿತ್ರಕ್ಕಿದೆ. ‘ಯುದ್ಧಕಾಂಡ’ ಸಿನಿಮಾ ಈಗಾಗಲೇ ಶೇಕಡಾ 50 ರಷ್ಟು ಚಿತ್ರೀಕರಣ ಕೂಡ ಆಗಿದೆ.

  • ಗೌಡ್ರು ಎಂಬ ಕಾರಣಕ್ಕೆ ʻಎಕ್ಸ್‌ಕ್ಯೂಸ್‌ ಮಿʼ ಸಿನಿಮಾ ಒಪ್ಪಿಕೊಂಡೆ: ರಮ್ಯಾ

    ಗೌಡ್ರು ಎಂಬ ಕಾರಣಕ್ಕೆ ʻಎಕ್ಸ್‌ಕ್ಯೂಸ್‌ ಮಿʼ ಸಿನಿಮಾ ಒಪ್ಪಿಕೊಂಡೆ: ರಮ್ಯಾ

    ಮೋಹಕತಾರೆ ರಮ್ಯಾ (Ramya) ಸಿನಿಮಾರಂಗಕ್ಕೆ ಬಂದು 20 ವರ್ಷಗಳಾಗಿದೆ. ಎರಡು ದಶಕಗಳಿಂದ ರಮ್ಯಾ ಮೋಡಿ ಮಾಡಿರುವ ಪರಿ ಅಷ್ಟೀಷ್ಟಲ್ಲ. ಸಾಧಕರ ಸಾಲಿನಲ್ಲಿ ಕುಳಿತು ವೀಕೆಂಡ್ ವಿತ್ ರಮೇಶ್ ಶೋನಲ್ಲಿ ಸಾಧಕಿಯ ಸ್ಥಾನ ಅಲಂಕರಿಸಿರುವ ರಮ್ಯಾ ಎಲ್ಲೂ ಹೇಳಿರದ ಸಾಕಷ್ಟು ವಿಚಾರಗಳನ್ನ ಹಂಚಿಕೊಂಡಿದ್ದಾರೆ. ಸಕ್ಸಸ್‌ಫುಲ್ ಚಿತ್ರ Excuse Me ಚಿತ್ರವನ್ನು ಮೊದಲು ರಮ್ಯಾ ರಿಜೆಕ್ಟ್ ಮಾಡಿದ್ರಂತೆ, ಬಳಿಕ ಈ ಸಿನಿಮಾ ಒಪ್ಪಿಕೊಳ್ಳೊಕೆ ಅಸಲಿ ಕಾರಣ ಎನು ಎಂಬುದನ್ನ ನಟಿ ಹಂಚಿಕೊಂಡಿದ್ದಾರೆ.

    ದಿವ್ಯಾ ಸ್ಪಂದನ ರಮ್ಯಾ ಮೊದಲು ಆಡಿಷನ್ ಕೊಟ್ಟಿದ್ದು, ಪುನೀತ್ ನಟನೆಯ `ಅಪ್ಪು’ (Appu) ಚಿತ್ರಕ್ಕೆ ಆದರೆ ಈ ಸಿನಿಮಾಗೆ ರಮ್ಯಾ ರಿಜೆಕ್ಟ್ ಆಗಿದ್ದರು. ಬಳಿಕ ಮತ್ತೆ `ವಜ್ರೇಶ್ವರಿ ಕಂಬೈನ್ಸ್’ ರಮ್ಯಾ ಅವರನ್ನು ಸಂಪರ್ಕ ಮಾಡಿ ಅಭಿ (Abhi) ಚಿತ್ರಕ್ಕೆ ಆಫರ್ ನೀಡಿದರು. ಆಡಿಷನ್ ಮಾಡದೆ ಅಭಿ ಚಿತ್ರಕ್ಕೆ ರಮ್ಯಾ ಸೆಲೆಕ್ಟ್ ಆಗಿದ್ದರು. ಈ ಮೂಲಕ ರಮ್ಯಾ ಪುನೀತ್ ರಾಜ್‌ಕುಮಾರ್‌ಗೆ ನಾಯಕಿಯಾಗಿ ಎಂಟ್ರಿ ಕೊಟ್ಟರು.

    ಅಭಿ ಸಿನಿಮಾ ಭರ್ಜರಿಯಾಗಿ ಹಿಟ್ ಆಗಿತ್ತು. ಮೊದಲ ಚಿತ್ರದಲ್ಲಿಯೇ ರಮ್ಯಾ ಪ್ರೇಕ್ಷಕರ ಗಮನ ಸೆಳೆದರು. ಈ ಚಿತ್ರದ ರಿಲೀಸ್‌ಗೂ ಮೊದಲೇ ರಮ್ಯಾಗೆ `ಎಕ್ಸ್‌ಕ್ಯೂಸ್‌ ಮಿ’ ಸಿನಿಮಾಗೆ ಆಫರ್ ಬಂದಿತ್ತು. ನಿರ್ದೇಶಕ ಪ್ರೇಮ್ ನಿರ್ದೇಶನದಲ್ಲಿ ರಮ್ಯಾ ನಾಯಕಿಯಾಗಿ ಮಿಂಚಿದರು. ಆದರೆ ಈ ಸಿನಿಮಾದಲ್ಲಿ ನಟಿಸಲು ಇಷ್ಟವಿರಲಿಲ್ಲ ಎಂದು ರಮ್ಯಾ ರಿವೀಲ್ ಮಾಡಿದ್ದಾರೆ. ಪ್ರೇಮ್ (Director Prem) ಅವರು ಈ ಸಿನಿಮಾದ ಆಫರ್ ಮಾಡಿದಾಗ ನನಗೆ ಇಷ್ಟವಿರಲಿಲ್ಲ. ಆದರೆ ಅಮ್ಮ ನಮ್ಮ ಮಂಡ್ಯ ಗೌಡ್ರು ಒಪ್ಪಿಕೊ ಎಂದು ಹೇಳಿದರು. ಗೌಡ್ರು ಎನ್ನುವ ಕಾರಣಕ್ಕೆ ಒಪ್ಪಿಕೊಂಡೆ ಎಂದು ಹೇಳಿದರು. ಮೊದಲು ಈ ಸಿನಿಮಾದ ಅರ್ಧ ಭಾಗದ ಕಥೆ ಮಾತ್ರ ಹೇಳಿದ್ರು ಎಂದರು.

    ನಿರ್ದೇಶಕ ಪ್ರೇಮ್ ಸಿನಿಮಾ ಸೆಟ್‌ನಲ್ಲಿ ಕುಳಿತು ಕ್ಲೈಮ್ಯಾಕ್ಸ್ ಬರೆದರು ಎಂದು ಬಹಿರಂಗ ಪಡಿಸಿದ್ದಾರೆ. ಕ್ಲೈಮ್ಯಾಕ್ಸ್ ಬಗ್ಗೆ ಎಲ್ಲರಿಗೂ ಕ್ಯೂರಿಯಾಸಿಟಿ ಇತ್ತು. ಏನಾಗಲಿದೆ ಎಂದು ಎಲ್ಲರೂ ಕಾಯುತ್ತಿದ್ವೆ. ಪ್ರೇಮ್ ಕ್ಲೈಮ್ಯಾಕ್ಸ್ ಬರ್ದೆ ಇರಲಿಲ್ಲ. ಸೆಟ್‌ನಲ್ಲೇ ಕುಳಿತು ಬರೆದರು. ಅವರು ಕ್ಲೈಮ್ಯಾಕ್ಸ್ ಬರೆಯುವಾಗ ನಾವೆಲ್ಲಾ ಕುಳಿತು ಏನು ಬರೆಯುತ್ತಾರೆ ಎಂದು ಕಾಯುತ್ತಿದ್ವಿ. ಬಳಿಕ ಸಿನಿಮಾ ಮುಗಿಸಿ ರಿಲೀಸ್ ಆಯ್ತು. `ಎಕ್ಸ್‌ಕ್ಯೂಸ್‌ ಮಿ’ ಚಿತ್ರ ಯಶಸ್ವಿಯಾಯಿತು ಎಂದು ರಮ್ಯಾ ಹಳೆಯ ನೆನಪುಗಳನ್ನ ಬಿಚ್ಚಿಟ್ಟಿದ್ದಾರೆ.

  • ಅಜಯ್ ರಾವ್ ನೂತನ ಸಿನಿಮಾಗೆ ‘ಯುದ್ಧಕಾಂಡ’ ಟೈಟಲ್ ಫಿಕ್ಸ್

    ಅಜಯ್ ರಾವ್ ನೂತನ ಸಿನಿಮಾಗೆ ‘ಯುದ್ಧಕಾಂಡ’ ಟೈಟಲ್ ಫಿಕ್ಸ್

    ತಾಜ್ ಮಹಲ್, ಕೃಷ್ಣ ಲೀಲಾ, ಕೃಷ್ಣ ರುಕ್ಮಿಣಿ ಖ್ಯಾತಿಯ ನಟ ಅಜಯ್ ರಾವ್ ಸ್ಯಾಂಡಲ್ ವುಡ್ ಯುವ ನಿರ್ದೇಶಕನೊಂದಿಗೆ ಹೊಸ ಸಿನಿಮಾ ಘೋಷಿಸಿದ್ದಾರೆ. ಚಿತ್ರದ ಟೈಟಲ್ ಟೀಸರ್ ಬಿಡುಗಡೆಯಾಗಿದ್ದು, ಚಿತ್ರಕ್ಕೆ ‘ಯುದ್ಧಕಾಂಡ’ ಎಂದು ಟೈಟಲ್ ಇಡಲಾಗಿದೆ. ಸಖತ್ ಇಂಟ್ರಸ್ಟಿಂಗ್ ಆಗಿರೋ ಟೈಟಲ್ ಟೀಸರ್ ಸಿನಿರಸಿಕರ ಗಮನ ಸೆಳೆಯುತ್ತಿದೆ.

    ಈ ಚಿತ್ರವನ್ನು ಅಜಯ್ ರಾವ್ ತಮ್ಮದೇ ನಿರ್ಮಾಣ ಸಂಸ್ಥೆ ‘ಶ್ರೀಕೃಷ್ಣ ಆರ್ಟ್ಸ್ ಅಂಡ್ ಕ್ರಿಯೇಷನ್ಸ್’ ಮತ್ತು ‘ಅಜಯ್ ರಾವ್ ಪ್ರೊಡಕ್ಷನ್ಸ್’ ನಡಿ ನಿರ್ಮಾಣ ಮಾಡುತ್ತಿದ್ದಾರೆ. ಈ ಮೂಲಕ ಕೃಷ್ಣ ಲೀಲಾ ಸಿನಿಮಾ ನಂತರ ಮತ್ತೊಮ್ಮೆ ನಿರ್ಮಾಣ ಸಾಹಸಕ್ಕೆ ಮುಂದಾಗಿದ್ದಾರೆ. ಚಿತ್ರದಲ್ಲಿ ವಕೀಲರಾಗಿ ಕಾಣಿಸಿಕೊಳ್ಳುತ್ತಿರುವ ಅಜಯ್ ರಾವ್ ಸಿನಿಮಾವನ್ನು ವಕೀಲರಿಂದಲೇ ಲಾಂಚ್ ಮಾಡಿಸಿದ್ದು ವಿಶೇಷವಾಗಿತ್ತು. ಇದನ್ನೂ ಓದಿ: ಮದುವೆ ಬಗ್ಗೆ ವೈಷ್ಣವಿ ತುಂಬಾ ಕನಸು ಕಂಡಿದ್ದಳು: ತಂದೆ ರವಿಕುಮಾರ್

    ‘ಯುದ್ಧಕಾಂಡ’ ಎಂದಾಗ ಎಲ್ಲರಿಗೂ ನೆನಪಾಗೋದು ಲೆಜೆಂಡರಿ ರವಿ ಸರ್ ಸಿನಿಮಾ. ಆ ಸಿನಿಮಾದ ನಿರ್ದೇಶಕರಾದ ಕೆ. ವಿ ರಾಜು ಸರ್ ಜೊತೆ ನಾನು ಅಸಿಸ್ಟೆಂಟ್ ಡೈರೆಕ್ಟರ್ ಆಗಿ ಕೆಲಸ ಮಾಡಿದ್ದೇನೆ ಅದು ನನ್ನ ಅದೃಷ್ಟ. ಈ ಸಿನಿಮಾ ಲಾಂಚ್ ಮಾಡೋವಾಗ ಮೊದಲು ರವಿ ಸರ್ ಭೇಟಿ ಮಾಡಿ ಆಶೀರ್ವಾದ ತೆಗೆದುಕೊಂಡು ಬಂದೆ. ಒಳ್ಳೆದಾಗ್ಲಿ ಎಂದು ಆಶೀರ್ವಾದ ಮಾಡಿದ್ರು. ಆದ್ರೆ ಆಗ ಬಂದ ‘ಯುದ್ಧಕಾಂಡ’ ಚಿತ್ರಕ್ಕೂ ಈ ಚಿತ್ರಕ್ಕೂ ಯಾವುದೇ ಸಂಬಂಧ ಇಲ್ಲ. ಇದು ರಿಮೇಕ್ ಸಿನಿಮಾ ಕೂಡ ಅಲ್ಲ ಎಂದು ಅಜಯ್ ರಾವ್ ಮಾಹಿತಿ ಹಂಚಿಕೊಂಡ್ರು.

    ಚಿತ್ರರಂಗಕ್ಕೆ ಎಂಟ್ರಿ ಕೊಟ್ಟು 20 ವರ್ಷ ಆಯ್ತು. ನಟನಾಗಿ ಯಶಸ್ಸು, ಸೋಲು ಎರಡನ್ನು ನೋಡಿದ್ದೇನೆ. ಕೇವಲ ನಟನಾಗಿ ಉಳಿಯದೇ ಸಿನಿಮಾದ ಎಲ್ಲಾ ಕ್ಷೇತ್ರದಲ್ಲಿ ಪ್ರಯೋಗ ಮಾಡಬೇಕು ಎಂದುಕೊಂಡು ಬೆಂಗಳೂರಿಗೆ ಬಂದವನು ನಾನು. ಹೀರೋ ಆಗಿದ್ದವನು ಕ್ಯಾರೆಕ್ಟರ್ ಆರ್ಟಿಸ್ಟ್ ಆಗಿಯೂ ಮಾಡಿದ್ದೇನೆ. ಕೃಷ್ಣ ಲೀಲಾ ಸಿನಿಮಾ ಮೂಲಕ ನಿರ್ಮಾಪಕನೂ ಆಗಿದ್ದೇನೆ. ಇದೀಗ ಏಳು ವರ್ಷದ ನಂತರ ಎರಡನೇ ಸಿನಿಮಾವನ್ನು ನಿರ್ಮಾಣ ಮಾಡುತ್ತಿದ್ದೇನೆ ಎಂದು ಚಿತ್ರರಂಗದ ಜರ್ನಿಯನ್ನು ಮೆಲುಕು ಹಾಕಿದ್ರು ಅಜಯ್ ರಾವ್.

    ‘ಯುದ್ಧಕಾಂಡ’ ಸಿನಿಮಾವನ್ನು ಕಟಿಂಗ್ ಶಾಪ್ ಸಿನಿಮಾ ಖ್ಯಾತಿಯ ಪವನ್ ಭಟ್ ನಿರ್ದೇಶಿಸುತ್ತಿದ್ದಾರೆ. ಕಾರ್ತಿಕ್ ಶರ್ಮಾ ಕ್ಯಾಮೆರಾ ವರ್ಕ್, ಕೆ.ಬಿ.ಪ್ರವೀಣ್ ಸಂಗೀತ ನಿರ್ದೇಶನ ಈ ಚಿತ್ರಕ್ಕಿದೆ. ಸದ್ಯದಲ್ಲೇ ಸಿನಿಮಾ ಬಗ್ಗೆ ಹೆಚ್ಚಿನ ಮಾಹಿತಿ ಹಂಚಿಕೊಳ್ಳಲಿದೆ ‘ಯುದ್ಧಕಾಂಡ’ ಚಿತ್ರತಂಡ.

    Live Tv
    [brid partner=56869869 player=32851 video=960834 autoplay=true]

  • ‘ಬ್ಯಾಂಕ್ ಆಫ್ ಭಾಗ್ಯಲಕ್ಷ್ಮಿ’ ಸಿನಿಮಾಗೆ ಅಜಯ್ ರಾವ್ ಹೀರೋ

    ‘ಬ್ಯಾಂಕ್ ಆಫ್ ಭಾಗ್ಯಲಕ್ಷ್ಮಿ’ ಸಿನಿಮಾಗೆ ಅಜಯ್ ರಾವ್ ಹೀರೋ

    ರಂಗಿ ತರಂಗ’, ‘ಅವನೇ ಶ್ರೀಮನ್ನಾರಾಯಣ’ ಸಿನಿಮಾ ಖ್ಯಾತಿಯ ನಿರ್ಮಾಪಕ ಹೆಚ್. ಕೆ ಪ್ರಕಾಶ್ ಈ ಬಾರಿಯ ದೀಪಾವಳಿಗೆ ನಟ ಅಜಯ್ ರಾವ್ ಜೊತೆ ಹೊಸ ಸಿನಿಮಾ ಘೋಷಣೆ ಮಾಡಿದ್ದಾರೆ. ಈ ಬಾರಿಯೂ ಹೊಸ ಪ್ರತಿಭೆಗೆ ಅವಕಾಶ ನೀಡಿರುವ ನಿರ್ಮಾಪಕರು ಇಂಟ್ರಸ್ಟಿಂಗ್ ಟೈಟಲ್ ಕೂಡ ಅನೌನ್ಸ್ ಮಾಡಿದ್ದಾರೆ. ಅದುವೇ ‘ಬ್ಯಾಂಕ್ ಆಫ್ ಭಾಗ್ಯಲಕ್ಷಿ’.  ಇದು ಹೆಚ್. ಕೆ ಪ್ರಕಾಶ್ ಅವರ ಶ್ರೀದೇವಿ ಎಂಟರ್ಟೈನರ್ಸ್ ಬ್ಯಾನರ್ ನಡಿ ನಿರ್ಮಾಣವಾಗುತ್ತಿರುವ ಐದನೇ ಸಿನಿಮಾವಾಗಿದೆ.

    ‘ಬ್ಯಾಂಕ್ ಆಫ್ ಭಾಗ್ಯಲಕ್ಷಿ (Bank Of Bhagyalakshmi)’ ಕಥೆ ಕೇಳಿ ಥ್ರಿಲ್ ಆಗಿರೋ ನಟ ಅಜಯ್ ರಾವ್ (Ajay Rao) ಈ ಚಿತ್ರದಲ್ಲಿ ನಾಯಕ ನಟನಾಗಿ ಅಭಿನಯಿಸುತ್ತಿದ್ದಾರೆ. ಪ್ರತಿ ಬಾರಿ ನವ ನಿರ್ದೇಶಕರಿಗೆ ಮೊದಲ ಆದ್ಯತೆ ನೀಡುವ ನಿರ್ಮಾಪಕರಾದ ಹೆಚ್ ಕೆ ಪ್ರಕಾಶ್ ಈ ಬಾರಿಯೂ ನವ ಹಾಗೂ ಪ್ರತಿಭಾವಂತ ನಿರ್ದೇಶಕನೊಂದಿಗೆ ಕೈ ಜೋಡಿಸಿದ್ದಾರೆ. ಅಭಿಷೇಕ್ ಎಂ (Abhishek) ಈ ಚಿತ್ರದ ಮೂಲಕ ನಿರ್ದೇಶಕನಾಗಿ ಸ್ಯಾಂಡಲ್ ವುಡ್ ಅಂಗಳಕ್ಕೆ ಪರಿಚಿತರಾಗುತ್ತಿದ್ದಾರೆ. ನಿರ್ದೇಶಕ ಸಿಂಪಲ್ ಸುನಿ ಜೊತೆ ‘ಸಿಂಪಲ್ ಆಗಿ ಒಂದ್ ಲವ್ ಸ್ಟೋರಿ’, ‘ಬಹುಪರಾಕ್’ ಮತ್ತು ‘ಆಪರೇಷನ್ ಅಲಮೇಲಮ್ಮ’ ಸಿನಿಮಾಗಳಿಗೆ ಸಹ ನಿರ್ದೇಶಕನಾಗಿ ಕೆಲಸ ಮಾಡಿದ ಅನುಭವ ಇವರಿಗಿದೆ. ‘ಪಿನಾಕ’ ಎಂಬ VFX ಸ್ಟುಡಿಯೋ ಕೂಡ ಹೊಂದಿರುವ ಅಭಿಷೇಕ್ ಎಂ ‘ಬ್ಯಾಂಕ್ ಆಫ್ ಭಾಗ್ಯಲಕ್ಷಿ’ ಮೂಲಕ ಚೊಚ್ಚಲ ಬಾರಿಗೆ ನಿರ್ದೇಶಕನ ಕ್ಯಾಪ್ ತೊಡಲು ಸಜ್ಜಾಗಿದ್ದಾರೆ. ಇದನ್ನೂ ಓದಿ:ದೇಶ-ವಿದೇಶದಲ್ಲಿ ಮಾರ್ದನಿಸ್ತಿರೋ ಗಗ್ಗರ ಶಬ್ಧ- ಅಮೆರಿಕಾದಲ್ಲಿ ಎಂಟೂವರೆ ಕೋಟಿ ಬಾಚಿದ ಕಾಂತಾರ

    ಬ್ಯಾಂಕ್ ವೊಂದನ್ನು ದರೋಡೆ ಮಾಡಲು ಹೊರಟವರ ಸುತ್ತ ಹೆಣೆಯಲಾದ ಇಂಟ್ರಸ್ಟಿಂಗ್ ಕಥಾಹಂದರ ಈ ಚಿತ್ರ ಒಳಗೊಂಡಿದೆ. ಇದಿಷ್ಟನ್ನೇ ರಿವೀಲ್ ಮಾಡಿರುವ ಸಿನಿಮಾ ತಂಡ ಮುಂಬರುವ ದಿನಗಳಲ್ಲಿ ಚಿತ್ರದ ಬಗ್ಗೆ, ನಾಯಕಿ ಮತ್ತು ಕಲಾವಿದರ ಬಳಗ ಇದೆಲ್ಲದರ ಬಗ್ಗೆ  ಹೆಚ್ಚಿನ ಮಾಹಿತಿ ಹಂಚಿಕೊಳ್ಳಲಿದೆ. ಸದ್ಯ ಪ್ರಿಪ್ರೊಡಕ್ಷನ್ ಕೆಲಸದಲ್ಲಿ ಚಿತ್ರತಂಡ ನಿರತವಾಗಿದ್ದು, ಜನವರಿಯಲ್ಲಿ ಚಿತ್ರೀಕರಣ ಆರಂಭವಾಗಲಿದೆ. ಜ್ಯೂಡಾ ಸ್ಯಾಂಡಿ ಸಂಗೀತ ನಿರ್ದೇಶನ, ಅಭಿಷೇಕ್ ಜಿ ಕಾಸರಗೋಡು ಕ್ಯಾಮೆರಾ ನಿರ್ದೇಶನ, ತೇಜಸ್ ಆರ್ ಸಂಕಲನ, ರಾಘು ಕಲಾ ನಿರ್ದೇಶನ ಈ ಚಿತ್ರಕ್ಕಿದೆ.

    Live Tv
    [brid partner=56869869 player=32851 video=960834 autoplay=true]

  • ಟೂರ್ನಿಯಲ್ ಗೆ ಅದ್ಧೂರಿ ಚಾಲನೆ: ವಿವಿಧ ಗಣ್ಯರ ಉಪಸ್ಥಿತಿ

    ಟೂರ್ನಿಯಲ್ ಗೆ ಅದ್ಧೂರಿ ಚಾಲನೆ: ವಿವಿಧ ಗಣ್ಯರ ಉಪಸ್ಥಿತಿ

    ಟೂರ್ನಿವಲ್ (First indian international celebrbrity tournament and carnival) ನ ಉದ್ಘಾಟನಾ ಸಮಾರಂಭ ಇತ್ತೀಚಿಗೆ ಅದ್ದೂರಿಯಾಗಿ ನಡೆಯಿತು. ANYELP Entertainment ಹಾಗೂ White lotus entertainment ಸಂಸ್ಥೆ ಆಯೋಜಿಸಿರುವ ಸಮಾರಂಭದಲ್ಲಿ ಶ್ರೀಲಂಕಾ ಪ್ರವಾಸೋದ್ಯಮ ಸಚಿವರಾದ ಡಯಾನ ಗ್ಯಾಮೇಜ್, ಮಾಲ್ಡೀವ್ಸ್ ಪ್ರವಾಸೋದ್ಯಮ ಸಚಿವರಾದ ಇಬ್ರಾಹಿಂ ರಷೀದ್, ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಅಧ್ಯಕ್ಷರಾದ ಭಾ.ಮ.ಹರೀಶ್, ನಟಿ ಪ್ರಿಯಾಂಕ ಉಪೇಂದ್ರ, ಜಾಕಿರ್ ಹುಸೇನ್, ನಟ ರುದ್ರ, ನಾಗತಿಹಳ್ಳಿ ಚಂದ್ರಶೇಖರ್, ನಟ ಅಜಯ್ ರಾವ್ ಸೇರಿದಂತೆ ಅನೇಕ ಗಣ್ಯರು ಉಪಸ್ಥಿತರಿದ್ದರು.

    “ಟೂರ್ನಿವಲ್” ಎಂದರೆ ಸೌತ್ ಏಷ್ಯಾ ದೇಶಗಳ ನಡುವಿನ ಸಾಂಸ್ಕೃತಿಕ ವಿನಿಮಯ. ನಮ್ಮ ರಾಜ್ಯದ ಸಿನಿತಾರೆಯರು ಹಾಗೂ ಮಾಲ್ಡೀವ್ಸ್ ನ ಸಿನಿತಾರೆಯರ ನಡುವೆ ಫುಟ್ಬಾಲ್ ಟೂರ್ನಮೆಂಟ್  ಆಯೋಜಿಸಲಾಗುವುದು. ಬರೀ ಕ್ರೀಡೆ ಅಷ್ಟೇ ಅಲ್ಲ. ಬೇರೆಬೇರೆ ರೀತಿಯ ಸಾಂಸ್ಕೃತಿಕ ಕಾರ್ಯಕ್ರಮಗಳು ಮೂರು ದೇಶಗಳಲ್ಲೂ ನಡೆಸುವ ಉದ್ದೇಶವಿದೆ. ಇಲ್ಲಿನ ಚಿತ್ರ ಸಹ ಮಾಲ್ಡೀವ್ಸ್ ನಲ್ಲಿ ಬಿಡುಗಡೆಯಾಗಲಿದೆ ಎಂದು  ಕಾರ್ಯಕ್ರಮಗಳ ಬಗ್ಗೆ ವಿವರಣೆ ನೀಡಿದ “ಟೂರ್ನಿವಲ್” ನ ಮ್ಯಾನೇಜಿಂಗ್ ಡೈರೆಕ್ಟರ್ ಪೂಜಾಶ್ರೀ,  ಉದ್ಘಾಟನೆಗೆ ಆಗಮಿಸಿದ್ದ  ಶ್ರೀಲಂಕಾ ಹಾಗೂ ಮಾಲ್ಡೀವ್ಸ್ ದೇಶದ ಪ್ರವಾಸೋದ್ಯಮ ಸಚಿವರಿಗೆ, ಇಲ್ಲಿನ  ಗಣ್ಯರಿಗೆ ಧನ್ಯವಾದ ‌ತಿಳಿಸಿದರು. ಇದನ್ನೂ ಓದಿ:ಬಿಗ್ ಬಾಸ್ ವಿರುದ್ಧ ಮ್ಯಾಚ್ ಫಿಕ್ಸಿಂಗ್ ಆರೋಪ: ಗುರೂಜಿ ಮೇಲೆ ಕಿಚ್ಚ ಕೆಂಡಾಮಂಡಲ

    ಈ ಸಂಸ್ಥೆಯವರು ಒಳ್ಳೆಯ ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದ್ದಾರೆ. ಅವರಿಗೆ ಬೇಕಾದ ಸಹಕಾರ ನೀಡಲು ನಾವು ಸಿದ್ದ ಎಂದು ಮಾಲ್ಡೀವ್ಸ್ ಪ್ರವಾಸೋದ್ಯಮ ಸಚಿವರಾದ ಇಬ್ರಾಹಿಂ ರಷೀದ್ ಹಾಗೂ ಶ್ರೀಲಂಕಾ ಪ್ರವಾಸೋದ್ಯಮ ಸಚಿವರಾದ ಡಯನಾ ಗ್ಯಾಮೇಜ್ ತಿಳಿಸಿದರು.  ದೀಪ ಬೆಳಗುವುದರೊಂದಿಗೆ ಕಾರ್ಯಕ್ರಮ ಉದ್ಘಾಟನೆಯಾಯಿತು. ಪ್ರಸಿದ್ದ ಕಲಾವಿದರೊಬ್ಬರ ಭರತನಾಟ್ಯ, ಖ್ಯಾತ ಶ್ರೀಲಂಕಾ ಗಾಯಕಿ ಯೋಹಾನಿ ಅವರ ಗಾಯನ ಹಾಗೂ ಫ್ಯಾಷನ್ ಶೋ ಸೇರಿದಂತೆ ವಿವಿಧ ಮನೋರಂಜನಾ ಕಾರ್ಯಕ್ರಮಗಳು ಕಣ್ಮನ ಸೆಳೆಯಿತು. ಇದೇ ಸಂದರ್ಭದಲ್ಲಿ ಈ ಸಂಸ್ಥೆಯಿಂದ ನಿರ್ಮಾಣವಾಗುತ್ತಿರುವ  “Life of cockroach” ಚಿತ್ರದ ಶೀರ್ಷಿಕೆ ಅನಾವರಣ ಸಹ ನಡೆಯಿತು.

    ]Live Tv
    [brid partner=56869869 player=32851 video=960834 autoplay=true]

  • ರಚಿತಾ ರಾಮ್ @30: ಹ್ಯಾಪಿ ಬರ್ತ್‌ಡೇ ರಚ್ಚು ಅಂದ್ರು ಫ್ಯಾನ್ಸ್

    ರಚಿತಾ ರಾಮ್ @30: ಹ್ಯಾಪಿ ಬರ್ತ್‌ಡೇ ರಚ್ಚು ಅಂದ್ರು ಫ್ಯಾನ್ಸ್

    ಡಿಂಪಲ್ ಕ್ವೀನ್ ರಚಿತಾ ರಾಮ್ (Rachita Ram) ಇಂದು 30ನೇ ವರ್ಷದ ಹುಟ್ಟು ಹಬ್ಬವನ್ನು  (Birthday) ಆಚರಿಸಿಕೊಳ್ಳುತ್ತಿದ್ದಾರೆ. ಮಧ್ಯರಾತ್ರಿಯಿಂದಲೇ ರಚ್ಚು ಮನೆಯ ಮುಂದೆ ಅಭಿಮಾನಿಗಳು ಜಮಾಯಿಸಿದ್ದು, ನೆಚ್ಚಿನ ನಟಿಗೆ ಶುಭ ಹಾರೈಸಿದ್ದಾರೆ. ಅಭಿಮಾನಿಗಳ ಜೊತೆ ರಚಿತಾ ಬೆರೆತು ಅವರೊಂದಿಗೆ ಹುಟ್ಟು ಹಬ್ಬವನ್ನು ಆಚರಿಸಿಕೊಂಡಿದ್ದಾರೆ.

    ಕಿರುತೆರೆಯ ಮೂಲಕ ಬಣ್ಣದ ಪ್ರಪಂಚಕ್ಕೆ ಕಾಲಿಟ್ಟವರು ರಚಿತಾ ರಾಮ್. ಆನಂತರ ಸಿನಿಮಾ ರಂಗಕ್ಕೆ ಬಂದರು. ಅನೇಕ ಸ್ಟಾರ್ ನಟರ ಸಿನಿಮಾಗಳಲ್ಲಿ ನಟಿಸಿದ ಹೆಗ್ಗಳಿಕೆ ಕೂಡ ಇವರದ್ದು. ಇವರದ್ದೇ ಹೆಸರಿನಲ್ಲಿ ಲವ್ ಯೂ ರಚ್ಚು ಸಿನಿಮಾ ಕೂಡ ಮೂಡಿ ಬಂದಿತ್ತು. ಈ ಸಿನಿಮಾದಲ್ಲಿ ರಚಿತಾ ಅವರೇ ನಾಯಕಿಯಾಗಿ ನಟಿಸಿದ್ದರು. ಸಿನಿಮಾಗೆ ಪ್ರೇಕ್ಷಕರು ಅತ್ಯುತ್ತಮ ಪ್ರತಿಕ್ರಿಯೆ ಕೂಡ ನೀಡಿದ್ದರು. ಇದನ್ನೂ ಓದಿ:ಆರು ವರ್ಷಗಳ ಬಳಿಕ ಜೀ ಪಿಕ್ಚರ್ಸ್ ನಲ್ಲಿ ಸೂಪರ್ ಹಿಟ್ ‘ರಾಮಾ ರಾಮಾ ರೇ’ ಸಿನಿಮಾ

    ಉಪೇಂದ್ರ (Upendra) ನಟನೆಯ ಐ ಲವ್ ಯೂ, ಅಜಯ್ ರಾವ್ (Ajay Rao) ಜೊತೆ ಲವ್ ಯೂ ರಚ್ಚು ಸಿನಿಮಾಗಳಲ್ಲಿ ಸಖತ್ ಗ್ಲಾಮರೆಸ್ ಆಗಿ ಕಾಣಿಸಿಕೊಂಡಿದ್ದ ಅವರು, ಈ ಕಾರಣಕ್ಕಾಗಿ ಸುದ್ದಿ ಕೂಡ ಆಗಿದ್ದರು. ಅದರಲ್ಲೂ ಐ ಲವ್ ಯೂ ಸಿನಿಮಾದಲ್ಲಿ ಸಿಕ್ಕಾಪಟ್ಟೆ ಬೋಲ್ಡ್ ಪಾತ್ರ ನಿರ್ವಹಿಸಿ ಕಣ್ಣೀರಿಟ್ಟಿದ್ದರು. ಈ ರೀತಿಯ ಪಾತ್ರಗಳನ್ನು ನಾನು ಮಾಡಲಾರೆ ಎಂದು ಬಹಿರಂಗವಾಗಿಯೇ ಹೇಳಿಕೊಂಡಿದ್ದಾರೆ.

    ಮೊನ್ನೆಯಷ್ಟೇ ಇವರ ನಟನೆಯ ಮಾನ್ಸೂನ್ ರಾಗ (Monsoon Raga) ಸಿನಿಮಾ ರಿಲೀಸ್ ಆಗಿದೆ. ಈ ಸಿನಿಮಾದಲ್ಲಿ ಅವರು ವೇಶ್ಯೆಯ ಪಾತ್ರವನ್ನು ಮಾಡಿದ್ದಾರೆ. ಈ ಪಾತ್ರದ ಅಭಿನಯಕ್ಕಾಗಿ ನೋಡುಗರಿಗೆ ಮೆಚ್ಚುಗೆ ಕೂಡ ಆಯಿತು. ಈ ಸಿನಿಮಾ ಮೂಲಕ ಎಂತಹ ಸವಾಲಿನ ಪಾತ್ರವಿದ್ದರೂ ನಾನು ಮಾಡಲು ಸಿದ್ಧ ಎನ್ನುವುದನ್ನು ಅವರು ನಿರೂಪಿಸಿದ್ದಾರೆ.

    Live Tv
    [brid partner=56869869 player=32851 video=960834 autoplay=true]

  • ನಟ ಅಜಯ್ ರಾವ್ ನಿರ್ಮಾಣದಲ್ಲಿ ಮೂಡಿ ಬರಲಿದೆ ‘ಕಟಿಂಗ್ ಶಾಪ್’ ಸಿನಿಮಾ

    ನಟ ಅಜಯ್ ರಾವ್ ನಿರ್ಮಾಣದಲ್ಲಿ ಮೂಡಿ ಬರಲಿದೆ ‘ಕಟಿಂಗ್ ಶಾಪ್’ ಸಿನಿಮಾ

    ಈಗಾಗಲೇ ಕೃಷ್ಣ ಲೀಲಾ ಸಿನಿಮಾದ ಮೂಲಕ ಸ್ಯಾಂಡಲ್ ವುಡ್ ನಲ್ಲಿ ನಿರ್ಮಾಪಕರಾಗಿ ಗುರುತಿಸಿಕೊಂಡಿರುವ ನಟ ಅಜಯ್ ರಾವ್ (Ajay Rao), ಇದೀಗ ಮತ್ತೊಂದು ಸಿನಿಮಾವನ್ನು ತಯಾರಿಸಲು ಸಿದ್ಧತೆ ಮಾಡಿಕೊಂಡಿದ್ದಾರೆ. ಈ ಬಾರಿ ಹೊಸ ಹುಡುಗರಿಗೆ ಅವರು ಮನೆ ಹಾಕಿದ್ದು, ಹೊಸ ಬಗೆಯ ಸಿನಿಮಾವನ್ನು ಕನ್ನಡದ ಪ್ರೇಕ್ಷಕರಿಗೆ ನೀಡಲು ಮುಂದೆ ಬಂದಿದ್ದಾರೆ. ಈ ಚಿತ್ರದ ಮೂಲಕ ಹೊಸ ಹುಡುಗರು ಸಿನಿಮಾ ರಂಗಕ್ಕೆ ಪರಿಚಯವಾಗುತ್ತಿರುವುದು ವಿಶೇಷ.

    ಚಂದನವನದ ಪ್ರತಿಭಾವಂತ ನಟ ಅಜಯ್ ರಾವ್ ಹೊಸದೊಂದು ಸಿನಿಮಾಗೆ ಸಜ್ಜಾಗುತ್ತಿದ್ದು, ಪವನ್ ಭಟ್ (Pawan Bhatt) ನಿರ್ದೇಶನದ ಚಿತ್ರದಲ್ಲಿ ನಾಯಕ ನಟರಾಗಿ ನಟಿಸುತ್ತಿದ್ದಾರೆ. ಈ ಚಿತ್ರದ ನಿರ್ಮಾಣವನ್ನು ಅಜಯ್ ರಾವ್ ಮಾಡುತ್ತಿದ್ದು, ಈ ಮೂಲಕ ಕೃಷ್ಣ ಲೀಲಾ (Krishna Leela) ಸಿನಿಮಾ ನಂತರ ಮತ್ತೊಮ್ಮೆ ನಿರ್ಮಾಣ ಸಾಹಸಕ್ಕೆ ಮುಂದಾಗುತ್ತಿರುವುದು ವಿಶೇಷ. ಇದನ್ನೂ ಓದಿ:ಜನಾರ್ಧನ ರೆಡ್ಡಿ ಪುತ್ರ ಕಿರೀಟಿ ಸಿನಿಮಾದ ಟೈಟಲ್ ಲಾಂಚ್ ಗೆ ಮುಹೂರ್ತ ಫಿಕ್ಸ್

    ನಿರ್ದೇಶಕ ಪವನ್ ಭಟ್ ಕಥೆ ಕೇಳಿ ಇಂಪ್ರೆಸ್ ಆಗಿರುವ ಅಜಯ್ ರಾವ್ ತಮ್ಮದೇ ಶ್ರೀಕೃಷ್ಣ ಆರ್ಟ್ಸ್ ಅಂಡ್ ಕ್ರಿಯೇಷನ್ಸ್ ಬ್ಯಾನರ್ ನಡಿ ಸಿನಿಮಾ ನಿರ್ಮಾಣ ಮಾಡಲು ಡಿಸೈಡ್ ಮಾಡಿದ್ದಾರೆ. ‘ಕಟಿಂಗ್ ಶಾಪ್’ ಸಿನಿಮಾ ಮೂಲಕ ಸ್ಯಾಂಡಲ್ ವುಡ್ ಅಂಗಳದಲ್ಲಿ ಡೈರೆಕ್ಟರ್ ಕ್ಯಾಪ್ ತೊಟ್ಟಿರುವ ಪವನ್ ಭಟ್ ಎರಡನೇ ಸಿನಿಮಾವಿದು.  ಪ್ರಿ ಪ್ರೊಡಕ್ಷನ್ ಕೆಲಸದಲ್ಲಿ ಚಿತ್ರತಂಡ ಬ್ಯುಸಿಯಾಗಿದ್ದು ಹೊಸ ಕಲಾವಿದರಿಗಾಗಿ ಹುಡುಕಾಟ ನಡೆಸುತ್ತಿದೆ. ಸದ್ಯದಲ್ಲೇ ಟೈಟಲ್ ಹಾಗೂ ಚಿತ್ರದ ಬಗೆಗಿನ ಹೆಚ್ಚಿನ ಮಾಹಿತಿ ಹಂಚಿಕೊಳ್ಳಲಿದೆ ಚಿತ್ರತಂಡ.

    Live Tv
    [brid partner=56869869 player=32851 video=960834 autoplay=true]

  • ರಚಿತಾ ರಾಮ್ ನಿದ್ದೆ ಗೆಡಿಸಿದ ಗ್ಲಾಮರ್ ಗ್ರಾಮರ್: ಮತ್ತೆ ಬೇಸರಗೊಂಡ ಡಿಂಪಲ್ ಕ್ವೀನ್

    ರಚಿತಾ ರಾಮ್ ನಿದ್ದೆ ಗೆಡಿಸಿದ ಗ್ಲಾಮರ್ ಗ್ರಾಮರ್: ಮತ್ತೆ ಬೇಸರಗೊಂಡ ಡಿಂಪಲ್ ಕ್ವೀನ್

    ಚಿತಾ ರಾಮ್ ಬೇಸರಗೊಂಡಿದ್ದಾರೆ. ಹೀಗೆ ಅವರು ಬೇಸರಗೊಳ್ಳುವುದು ಇದೇ ಮೊದಲೇನೂ ಅಲ್ಲ. ಹಾಟ್ ಹಾಟ್ ದೃಶ್ಯಗಳಲ್ಲಿ ಅವರು ಕಾಣಿಸಿಕೊಂಡಾಗೆಲ್ಲ ಅವರು ಬೇಸರ ಹೊರಹಾಕುತ್ತಾರೆ. ಇದನ್ನೂ ಓದಿ : ಶಿವರಾತ್ರಿ ಸಡಗರಕ್ಕೆ ಸಿದ್ಧಗೊಂಡ ಸ್ಯಾಂಡಲ್ ವುಡ್

    ಈ ಹಿಂದೆ ಉಪೇಂದ್ರ ನಟನೆಯ ‘ಐ ಲವ್ ಯೂ’ ಚಿತ್ರದಲ್ಲಿ ಹಸಿಬಿಸಿ ದೃಶ್ಯಗಳಲ್ಲಿ ಡಿಂಪಲ್ ಕ್ವೀನ್ ಕಾಣಿಸಿಕೊಂಡಿದ್ದರು. ಅದನ್ನು ನಿರ್ದೇಶಕ ಆರ್.ಚಂದ್ರು ಪ್ರಚಾರಕ್ಕಾಗಿ ಬಳಸಿಕೊಂಡಿದ್ದರು. ಈ ಸಂದರ್ಭದಲ್ಲಿ ರಚಿತಾ ಬೇಸರಗೊಂಡಿದ್ದರು. ನಾನು ಅಂತಹ ದೃಶ್ಯಗಳಲ್ಲಿ ನಟಿಸಬಾರದಿತ್ತು. ನನ್ನ ತಂದೆ ಕೂಡ ಅದನ್ನು ಒಪ್ಪಲಿಲ್ಲ. ಐ ಯ್ಯಾಮ್ ಸ್ಸಾರಿ ಎಂದು ಭಾವುಕರಾಗಿದ್ದಾರೆ. ಇದನ್ನೂ ಓದಿ : ಮಾರ್ಚ್ ನಲ್ಲಿ ರಿಲೀಸ್ ಆಗಲಿರುವ ಬಿಗ್ ಬಜೆಟ್ ಸಿನಿಮಾಗಳಿಗೆ ಮತ್ತೆ ಸಂಕಷ್ಟ

    ಇನ್ಮುಂದೆ ರಚಿತಾ ರಾಮ್ ಅಂತ ಸನ್ನಿವೇಶಗಳಲ್ಲಿ ಯಾವುದೇ ಕಾರಣಕ್ಕೂ ಕಾಣಿಸಿಕೊಳ್ಳುವುದಿಲ್ಲ ಎನ್ನುವ ಹೊತ್ತಿಗೆ ‘ಲವ್ ಯೂ ರಚ್ಚು’ ಚಿತ್ರ ಹೊರ ಬಂದಿತ್ತು. ಅರೇ, ಅಲ್ಲಿಯೂ ಅದೇ ಕಥೆ. ಇವರೇ ಹಸಿ ಬಿಸಿ ದೃಶ್ಯಗಳಲ್ಲಿ ಕಾಣಿಸಿಕೊಳ್ಳುವುದಿಲ್ಲ ಎಂದು ಷರತ್ತು ಹಾಕಿದ್ದವರು, ಅಜಯ್ ರಾವ್ ಜತೆ ಅಂಥದ್ದೊಂದು ಸೀನ್ ನಲ್ಲಿ ಮತ್ತೆ ನಟಿಸಿದ್ದರು. ಆಗಲೂ, ಅವರನ್ನು ‘ನೀವೇಕೆ ಅಂತಹ ದೃಶ್ಯದಲ್ಲಿ ಕಾಣಿಸಿಕೊಂಡಿರಿ?’ ಎನ್ನುವ ಪ್ರಶ್ನೆ ಎದುರಾಯಿತು. ಅವತ್ತು ರಾಂಗ್ ಆದರು. ಪ್ರಶ್ನೆ ಕೇಳಿದವರಿಗೆ “ಫಸ್ಟ್ ನೈಟ್ನಲ್ಲಿ ನೀವೇನು ಮಾಡ್ತೀರಿ” ಎಂದು ಮರು ಪ್ರಶ್ನೆ ಹಾಕಿ ಟ್ರೋಲ್ ಆದರು. ಇದು ತಣ್ಣಗಾಗಿತು ಅನ್ನುವಷ್ಟರಲ್ಲಿ ಮತ್ತೊಂದು ಸಿನಿಮಾ ತೆರೆಗೆ ಅ‍ಪ್ಪಳಿಸಿ. ಇದನ್ನೂ ಓದಿ : ವಿಕ್ರಾಂತ್ ರೋಣ 2 ಮುನ್ಸೂಚನೆ ಕೊಟ್ಟರಾ ಸುದೀಪ್?

    ಪ್ರೇಮ್ ನಿರ್ದೇಶನದ ಹೊಸ ಸಿನಿಮಾದಲ್ಲಿ ರಚ್ಚು ಬೋಲ್ಡ್ ಆಗಿ ಕಾಣಿಸಿಕೊಂಡಿದ್ದಾರೆ. ಈ ಬಾರಿಯಂತೂ ಅವರು ಸಖತ್ ರಾಂಗ್ ಆಗಿದ್ದಾರೆ. ನಾನು ನಟಿಸಿದ ಬೋಲ್ಡ್ ಪಾತ್ರಗಳು ಮಾತ್ರ ನಿಮಗೆ ಕಾಣ್ತಿವೆಯಾ ಅಂತ ರಾಂಗ್ ಆಗಿದ್ದಾರೆ. ಹೌದು, ಒಬ್ಬ ನಟಿಯಾಗಿ ಯಾವ ರೀತಿಯ ಪಾತ್ರ ಮಾಡಬೇಕು, ಮಾಡಬಾರದು ಎನ್ನುವ ಅರಿವು ಅವರಿಗಿರುತ್ತದೆ. ಕಥೆ ಕೇಳುವಾಗಲೇ ಅವರು ಅಂತಹ ಪಾತ್ರ ಅಥವಾ ದೃಶ್ಯಗಳಿಗೆ ಒಪ್ಪಿಗೆ ಸೂಚಿಸಿಯೇ ನಟಿಸಿರುತ್ತಾರೆ. ಅದು ಅವರ ಆಯ್ಕೆ. ಆದರೆ, ಇಂತಹ ಪಾತ್ರ ಮಾಡಿದ್ದಕ್ಕೆ ಮತ್ತೆ ರಚ್ಚು ತಕರಾರು ತಗೆದಿದ್ದಾರೆ. ನಾನು ಆ ರೀತಿಯ ಪಾತ್ರವನ್ನು ಮಾಡಲೇಬಾರದು ಎನ್ನುವ ಪ್ರಶ್ನೆಯನ್ನೂ ಈ ಬಾರಿ ಹಾಕಿದ್ದಾರೆ. ಇದನ್ನೂ ಓದಿ : ಏನಾಯ್ತು ಅಮಿತಾಭ್ ಬಚ್ಚನ್ ಗೆ? ಆತಂಕದಲ್ಲಿ ಅಭಿಮಾನಿಗಳು

    ಯಾಕೋ ಗೊತ್ತಿಲ್ಲ ಇಂತಹ ಪಾತ್ರಗಳನ್ನು ಮಾಡಿದಾಗೆಲ್ಲ ರಚಿತಾ ರಾಮ್ ಗಲಿಬಿಲಿಗೊಳ್ಳುತ್ತಾರೆ. ಅದರಿಂದ ದಾಟಿಕೊಳ್ಳುವ ಮಾರ್ಗ ಮಾತ್ರ ಅವರಿಗೆ ಗೊತ್ತಾಗುತ್ತಿಲ್ಲ.

  • ಪ್ರಥಮ ಚಿಕಿತ್ಸೆ ಮಾಡಿ ಮಾನವೀಯತೆ ಮೆರೆದ ನಟ ಅಜಯ್ ರಾವ್

    ಪ್ರಥಮ ಚಿಕಿತ್ಸೆ ಮಾಡಿ ಮಾನವೀಯತೆ ಮೆರೆದ ನಟ ಅಜಯ್ ರಾವ್

    ವಿಜಯನಗರ: ಅಪಘಾತವಾದ ಗಾಯಾಳುಗಳಿಗೆ ಸ್ಯಾಂಡಲ್‍ವುಡ್ ನಟ ಅಜಯ್ ರಾವ್ ಪ್ರಥಮ ಚಿಕಿತ್ಸೆ ಮಾಡಿ ಮಾನವೀಯತೆ ಮೆರೆದಿದ್ದಾರೆ.

    ಹೊಸಪೇಟೆಯಿಂದ ಬೆಂಗಳೂರಿಗೆ ಅಜಯ್ ರಾವ್ ಹೊರಟಿದ್ದರು. ಈ ವೇಳೆ ಮೈಸೂರಿನಿಂದ ಹೊಸಪೇಟೆಗೆ ಬರುರ್ತಿದ್ದ ಕಾರು ನಿಯಂತ್ರಣ ತಪ್ಪಿ ಪಲ್ಟಿಯಾಗಿತ್ತು. ವಿಜಯನಗರ ಜಿಲ್ಲೆಯ ಕೂಡ್ಲಿಗಿ ತಾಲೂಕಿನ ಕಾನಾಹೊಸಳ್ಳಿ ಗ್ರಾಮದ ಹೊರವಲಯದ ರಾಷ್ಟ್ರೀಯ ಹೆದ್ದಾರಿ50ರಲ್ಲಿ ಅಪಘಾತ ಸಂಭವಿಸಿದೆ. ಇದನ್ನೂ ಓದಿ:  ಅಧಿಕಾರಿಗಳು ಇರುವುದೇ ನಮ್ಮ ಚಪ್ಪಲಿ ಎತ್ತಿಕೊಳ್ಳಲು: ಉಮಾಭಾರತಿ

    ಅಪಘಾತವಾದ ಕಾರ್‍ನಲ್ಲಿದ್ದವರಿಗೆ ಸಣ್ಣಪುಟ್ಟ ಗಾಯಗಳಾಗಿದ್ದವು, ಇದನ್ನು ಗಮನಿಸಿದ ಅಜಯ್ ರಾವ್ ತಮ್ಮ ಕಾರ್‌ನಲ್ಲಿದ್ದ ಪ್ರಥಮ ಚಿಕಿತ್ಸಾ ಪೆಟ್ಟಿಗೆ ತಂದು ಮೆಡಿಕಲ್ ವಸ್ತುಗಳನ್ನು ಬಳಸಿ ಪ್ರಥಮ ಚಿಕಿತ್ಸೆ ನೀಡಿದ್ದಾರೆ. ಕಾನಾಹೊಸಳ್ಳಿಯ ರಾ.ಹೆ.50 ರ ಸಾರ್ವಜನಿಕರು, ಪಿಎಸ್‍ಐ ಸಹಾಯಕ್ಕೆ ಧಾವಿಸಿದ್ದಾರೆ.