Tag: Ajay Rao

  • ಬಿಡುಗಡೆಯಾಯ್ತು ರೈನ್ ಬೋ ಮೋಷನ್ ಪೋಸ್ಟರ್!

    ಬಿಡುಗಡೆಯಾಯ್ತು ರೈನ್ ಬೋ ಮೋಷನ್ ಪೋಸ್ಟರ್!

    ಬೆಂಗಳೂರು: ರಾಜಾಹುಲಿ ಖ್ಯಾತಿಯ ನಿರ್ದೇಶಕ ಗುರುದೇಶಪಾಂಡೆ ನಿರ್ಮಾಪಕರಾಗಿ ರೈನ್ ಬೋ ಚಿತ್ರದ ಮೂಲಕ ಎರಡನೇ ಹೆಜ್ಜೆಯಿಟ್ಟಿದ್ದಾರೆ. ಕೃಷ್ಣ ಅಜೇಯ್ ರಾವ್ ಸೂಪರ್ ಕಾಪ್ ಆಗಿ ಮಿಂಚಲಿರೋ ಈ ಸಿನಿಮಾ ಮುಹೂರ್ತ ಸಮಾರಂಭ ಕೆಲದಿನಗಳ ಹಿಂದಷ್ಟೇ ನಡೆದಿತ್ತು. ಆ ಸಂದರ್ಭದಲ್ಲಿ ಈ ಚಿತ್ರದ ಬಗ್ಗೆ ಕೆಲ ಇಂಟರೆಸ್ಟಿಂಗ್ ವಿಚಾರಗಳೂ ಜಾಹೀರಾಗಿದ್ದವು. ಇದೀಗ ರೈನ್ ಬೋ ಚಿತ್ರದ ಮೋಷನ್ ಪೋಸ್ಟರ್ ಬಿಡುಗಡೆಯಾಗಿದೆ.

    ರೈನ್ ಬೋ ಕ್ರೈಂ ಥ್ರಿಲ್ಲರ್ ಜಾನರಿನ ಚಿತ್ರ. ಇದನ್ನು ಎಸ್. ರಾಜವರ್ಧನ್ ನಿರ್ದೇಶನ ಮಾಡಿದ್ದಾರೆ. ಗುರುದೇಶಪಾಂಡೆಯವರ ಗರಡಿಯಲ್ಲಿ ಹಲವಾರು ವರ್ಷಗಳ ಕಾಲ ಪಳಗಿಕೊಂಡಿರುವ ರಾಜವರ್ಧನ್ ಪಾಲಿಗಿದು ಮೊದಲ ಚಿತ್ರ. ಈ ಆರಂಭಿಕ ಹೆಜ್ಜೆಯಲ್ಲಿಯೇ ತಾಂತ್ರಿಕವಾಗಿಯೂ ಮಹತ್ವ ಹೊಂದಿರುವ, ಈವರೆಗೆ ಯಾರೂ ಗಮನಹರಿಸದಂಥಾ ಅಪರೂಪದ ಕಥೆಯೊಂದನ್ನು ಕೈಗೆತ್ತಿಕೊಂಡಿದ್ದಾರೆ. ಈಗ ವಿಶ್ವವನ್ನೇ ವ್ಯಾಪಿಸಿಕೊಂಡಿರೋ ಸೈಬರ್ ಕ್ರೈಂನ ಬೆಚ್ಚಿ ಬೀಳಿಸೋ ವೃತ್ತಾಂತಕ್ಕೆ ಈ ಸಿನಿಮಾ ಕನ್ನಡಿಯಾಗಲಿದೆ ಅನ್ನೋದಕ್ಕೆ ಸಾಕ್ಷಿಯೆಂಬಂತೆ ಈ ಮೋಷನ್ ಪೋಸ್ಟರ್ ಬಿಡುಗಡೆಯಾಗಿದೆ.

    ಕೃಷ್ಣ ಅಜೇಯ್ ರಾವ್ ಆರಂಭದಿಂದ ಒಂದು ಹಂತದವರೆಗೂ ಲವರ್ ಬಾಯ್ ಆಗಿಯೇ ಕಂಗೊಳಿಸಿದ್ದವರು. ಆದರೆ ಇತ್ತೀಚಿನ ದಿನಗಳಲ್ಲಿ ಅವರು ಆಕ್ಷನ್ ಸ್ವರೂಪದ ಚಿತ್ರಗಳತ್ತಲೇ ವಾಲಿಕೊಂಡಿದ್ದಾರೆ. ರೈನ್ ಬೋದಲ್ಲಂತೂ ಅವರು ಖಡಕ್ ಪೊಲೀಸ್ ಅಧಿಕಾರಿಯಾಗಿ ನಟಿಸಿದ್ದಾರಂತೆ. ಈವತ್ತಿಗೆ ಜನಸಾಮಾನ್ಯರ ಅರಿವಿಗೆ ಬಾರದಂತೆ ಅನಾಹುತ ಸೃಷ್ಟಿಸುತ್ತಿರುವ ಸೈಬರ್ ಕ್ರೈಂನ ಕರಾಳ ಮುಖವೊಂದನ್ನು ಈ ಸಿನಿಮಾ ಪ್ರೇಕ್ಷಕರೆದುರು ಬಿಚ್ಚಿಡಲು ಮುಂದಾಗಿದೆ. ಈಗ ಬಿಡುಗಡೆಯಾಗಿರೋ ಮೋಷನ್ ಪೋಸ್ಟರ್ ಕುತೂಹಲಕಾರಿಯಾಗಿ ಮೂಡಿ ಬಂದಿರೋದರಿಂದ ಪ್ರೇಕ್ಷಕರೆಲ್ಲ ರೈನ್ ಬೋದತ್ತ ಆಕರ್ಷಿತರಾಗಿದ್ದಾರೆ.

  • ಮಗಳಿಗೆ ಕೃಷ್ಣನ ಉಡುಪು ತೊಡಿಸಿದ ಅಜಯ್ ದಂಪತಿ: ವಿಡಿಯೋ

    ಮಗಳಿಗೆ ಕೃಷ್ಣನ ಉಡುಪು ತೊಡಿಸಿದ ಅಜಯ್ ದಂಪತಿ: ವಿಡಿಯೋ

    ಬೆಂಗಳೂರು: ಸ್ಯಾಂಡಲ್‍ವುಡ್ ಕೃಷ್ಣ ಎಂದೇ ಖ್ಯಾತರಾಗಿರುವ ಅಜಯ್ ರಾವ್ ಅವರು ತಮ್ಮ ಮಗಳು ಚರಿಷ್ಮಾಳಿಗೆ ಕೃಷ್ಣನ ಉಡುಪು ಹಾಕಿದ್ದಾರೆ.

    ಕೃಷ್ಣ ಜನ್ಮಾಷ್ಟಮಿ ಹಬ್ಬದ ಪ್ರಯುಕ್ತ ನಟ ಅಜಯ್ ರಾವ್ ಹಾಗೂ ಅವರ ಪತ್ನಿ ಸ್ವಪ್ನ ಅವರು ತಮ್ಮ ಮಗಳಿಗೆ ಕೃಷ್ಣನ ಉಡುಪು ತೋಡಿಸಿ ಫೋಟೋ ಕ್ಲಿಕ್ಕಿಸಿದ್ದಾರೆ. ಬಳಿಕ ಆ ಫೋಟೋಗಳನ್ನು ಇನ್‍ಸ್ಟಾಗ್ರಾಂನಲ್ಲಿ ಹಂಚಿಕೊಳ್ಳುವ ಮೂಲಕ ಅಭಿಮನಿಗಳಿಗೆ “ಕೃಷ್ಣ ಜನ್ಮಾಷ್ಟಮಿ ಶುಭಾಶಯ” ತಿಳಿಸಿದ್ದಾರೆ.

    ಅಜಯ್ ಹಾಗೂ ಸ್ವಪ್ನ ಅವರು ತಮ್ಮ ಚರಿಷ್ಮಾ ಕೃಷ್ಣನ ಉಡುಪಿನಲ್ಲಿ ಬೆಣ್ಣೆ ತಿನ್ನುತ್ತಿರುವ ಫೋಟೋವನ್ನು ಕ್ಲಿಕ್ಕಿಸಿದ್ದಾರೆ. ಬಳಿಕ ತಮ್ಮ ಮಗಳ ಜೊತೆ ಅಜಯ್ ಅವರು ಕೂಡ ಕೃಷ್ಣನಂತೆ ಪೇಟ ಧರಿಸಿ ಕೊಳಲು ಹಿಡಿದುಕೊಂಡಿದ್ದಾರೆ. ಅಜಯ್ ಹಾಗೂ ಸ್ವಪ್ನ ತಮ್ಮ ಕೃಷ್ಣನ ಕ್ಲಿಕ್ಕಿಸಿಕೊಂಡಿರುವ ಫೋಟೋಗೆ ಅಭಿಮಾನಿಗಳು ಮೆಚ್ಚುಗೆ ವ್ಯಕ್ತಪಡಿಸುತ್ತಿದ್ದಾರೆ.

     

    View this post on Instagram

     

    ಎಲ್ಲರಿಗೂ ಶ್ರೀ ಕೃಷ್ಣ ಜನ್ಮಾಷ್ಟಮಿಯ ಶುಭಾಷಯಗಳು????

    A post shared by Krishna Ajai Rao (@krishna_ajai_rao) on

    ಇತ್ತೀಚೆಗೆ ಅಜಯ್ ಅವರ ಪತ್ನಿ ಸ್ವಪ್ನ ರಾವ್ ಅವರು ವರಮಹಾಲಕ್ಷ್ಮಿ ಹಬ್ಬದಂದು ತಮ್ಮ ಮಗಳಿಗೆ ಸಾಂಪ್ರದಾಯಿಕ ಉಡುಪು ಹಾಕಿದ್ದರು. ಅಲ್ಲದೆ ಬ್ಯಾಕ್‍ಗ್ರೌಂಡ್‍ನಲ್ಲಿ ಭಾಗ್ಯದ ಲಕ್ಷ್ಮಿ ಬಾರಮ್ಮ ಹಾಡು ಹಾಕಿ ಚರಿಷ್ಮಾ ನಡೆದುಕೊಂಡು ಬರುತ್ತಿರುವ ವಿಡಿಯೋವನ್ನು ಇನ್‍ಸ್ಟಾಗ್ರಾಂನಲ್ಲಿ ಹಂಚಿಕೊಳ್ಳುವ ಮೂಲಕ ಹಬ್ಬದ ಶುಭಾಶಯ ತಿಳಿಸಿದ್ದರು.

    ಆಗಸ್ಟ್ 5ರಂದು ಸ್ವಪ್ನ ರಾವ್ ಅವರು ತಮ್ಮ ಮಗಳು ಚರಿಷ್ಮಾಗೆ ಬಸವಣ್ಣನಂತೆ ಉಡುಪು ಹಾಕಿ ಫೋಟೋ ಕ್ಲಿಕ್ಕಿಸಿದ್ದರು. ಈ ಫೋಟೋವನ್ನು ಕೂಡ ಅವರು ಇನ್‍ಸ್ಟಾಗ್ರಾಂನಲ್ಲಿ ಹಾಕಿ, “ನಮ್ಮನೆ ಪುಟ್ಟ ಬಸವಣ್ಣ” ಎಂದು ಬರೆದುಕೊಂಡಿದ್ದರು. ಸ್ವಪ್ನ ಅವರ ಈ ಪೋಸ್ಟ್ ಗೆ ಅಭಿಮಾನಿಗಳು ಫಿದಾ ಆಗಿ ಕ್ಯೂಟ್ ಪಿಕ್ ಎಂದು ಕಮೆಂಟ್ ಮಾಡಿದ್ದರು.

     

    View this post on Instagram

     

    All I see magic in you✨????❤

    A post shared by Sapna Rao (@sapnajairao) on

  • ಕೃಷ್ಣ ಅಜೇಯ್ ರಾವ್ ನಟನೆಯ ‘ರೈನ್‍ಬೋ’ ಗೆ ಮುಹೂರ್ತ

    ಕೃಷ್ಣ ಅಜೇಯ್ ರಾವ್ ನಟನೆಯ ‘ರೈನ್‍ಬೋ’ ಗೆ ಮುಹೂರ್ತ

    ಲವರ್ ಬಾಯ್, ಆ್ಯಕ್ಷನ್ ಹೀರೋ ಆಗಿ ಕಾಣಿಸಿಕೊಂಡಿದ್ದ ಕೃಷ್ಣ ಅಜೇಯ್ ರಾವ್ ಮೊದಲ ಬಾರಿ ಪೊಲೀಸ್ ಇನ್ಸ್ ಪೆಕ್ಟರ್ ಆಗಿ ‘ರೈನ್‍ಬೋ’ ಚಿತ್ರದಲ್ಲಿ ಅಭಿನಯಿಸುತ್ತಿದ್ದಾರೆ. ಈ ಚಿತ್ರದ ಶೀರ್ಷಿಕೆಯ ಕೆಳಗೆ ಕಲರ್ಸ್ ಆಫ್ ಕ್ರೈಂ ಎನ್ನುವ ಅಡಿಬರಹವನ್ನು ನೀಡಲಾಗಿದೆ. ಸೈಬರ್‌ಗೆಸಂಬಂಧಿಸಿದಂತೆ ಸಾಕಷ್ಟು ಅಪರಾಧ ಚಟುವಟಿಕೆಗಳು ನಡೆಯುತ್ತಿವೆ. ಆದರೆ ರೈನ್‍ಬೋ ಸಿನಿಮಾದಲ್ಲಿ ಈವರೆಗೆ ಯಾರೂ ಗಮನಿಸದ, ಅನಾಹುತಕಾರಿ ಅಪರಾಧದ ಸುತ್ತ ಕಥೆ ರಚಿಸಲಾಗಿದೆ.


    ಯಾವುದೇ ಒಂದು ಮೆಸೇಜ್ ಕಳುಹಿಸಿದರೆ, ಅದು ಮೊದಲು ಸ್ಯಾಟಲೈಟ್ ಸ್ಟೋರ್‌ಗೆ ತಲುಪುತ್ತದೆ. ನಂತರ ಸಂಬಂಧಪಟ್ಟವರಿಗೆ ಅದು ರವಾನೆಯಾಗುತ್ತದೆ. ಸ್ವೀಕೃತಿ ಮಾಡುವವನು ಹ್ಯಾಕ್ ಮಾಡಿ ಅದನ್ನು ದುರುಪಯೋಗ ಮಾಡಿಕೊಂಡರೆ ಅದರ ಪರಿಣಾಮವನ್ನು ಗ್ರಾಹಕ ಎದುರಿಸಬೇಕಾಗುತ್ತದೆ. ಇಂತಹುದನ್ನು ನಾಯಕ ನಟ ಹೇಗೆ ತನಿಖೆ ಮಾಡುತ್ತಾನೆ ಎಂಬುದು ಈ ಸಿನಿಮಾದ ಒಂದು ಎಳೆಯ ಸಾರಾಂಶವಾಗಿದೆ. ಬೆಂಗಳೂರು ಸುತ್ತಮುತ್ತ ಚಿತ್ರೀಕರಣ ನಡೆಯಲಿದೆ.


    ಇಲಾಖೆಯಲ್ಲಿ ನೇಮಕಗೊಂಡು, ಪರೀಕ್ಷಾ ಅವಧಿಯಲ್ಲಿ ಉನ್ನತ ಅಧಿಕಾರಿಗಳ ಅನುಮತಿಯನ್ನು ಹೇಗೆ ಪಡೆಯುತ್ತಾನೆ, ಯಾವ ರೀತಿಯಲ್ಲಿ ಅಪರಾಧಿಗಳನ್ನು ಹಿಡಿಯುತ್ತಾನೆ ಎನ್ನುವ ಪಾತ್ರದಲ್ಲಿ ಕೃಷ್ಣ ಅಜೇಯ್ ರಾವ್ ನಟಿಸಲಿದ್ದಾರೆ. ಖಾಸಗಿ ಕಂಪೆನಿಯಲ್ಲಿ ಕೆಲಸ ಮಾಡುತ್ತಾ, ಅನಾಥಳಾಗಿ ಪಿಜಿಯಲ್ಲಿ ಇದ್ದುಕೊಂಡು ತನಿಖೆಯಲ್ಲಿ ಸಹಕಾರ ನೀಡುವ ಮಾನ್ವಿತಾ ಹರೀಶ್ ನಾಯಕಿ. ಮುಖ್ಯ ಖಳನಾಯಕ ಮತ್ತು ತಾರಾಗಣ ಆಯ್ಕೆ ಪ್ರಕ್ರಿಯೆ ಸದ್ಯದಲ್ಲೇ ಮುಗಿಯಲಿದೆ. ಹೊಸತನ ಎನ್ನುವಂತೆ ಪ್ರತಿ ಪಾತ್ರ ಬಂದಾಗ ಅದಕ್ಕೊಂದು ಅರ್ಥಪೂರ್ಣ ಹಿನ್ನೆಲೆ ಸಂಗೀತವನ್ನು ಒದಗಿಸುತ್ತಿರುವುದು ಸಂಗೀತ ನಿರ್ದೇಶಕ ಎಮಿಲ್. ಚಿತ್ರಕತೆ ಜಡೇಶ್ ಕುಮಾರ್-ಜಾಯ್ ಜಾರ್ಸ್-ಎಸ್.ರಾಜವರ್ಧನ್, ಛಾಯಾಗ್ರಹಣ ಆರೂರು ಸುಧಾಕರಶೆಟ್ಟಿ, ಕಾರ್ಯಕಾರಿ ನಿರ್ಮಾಪಕ ವೈಭವ್ ನಾಗರಾಜ್.


    ಸೋಷಿಯಲ್ ಮೀಡಿಯಾವನ್ನು ಸನ್ಮಾರ್ಗದಲ್ಲಿ ಉಪಯೋಗಿಸಿದರೆ ಯಾವ ಕೆಡುಕೂ ಆಗುವುದಿಲ್ಲ. ಅದನ್ನು ಅನ್ಯ ಮಾರ್ಗಗಳಿಗಾಗಿ ಬಳಸಿದರೆ ಯಡವಟ್ಟು ಕಟ್ಟಿಟ್ಟ ಬುತ್ತಿ ಅನ್ನೋದನ್ನು ಈ ಚಿತ್ರದ ಮೂಲಕ ಹೇಳಲಾಗುತ್ತಿದೆ. ಕ್ರಿಯೇಟಿವ್ ಹೆಡ್ ಮತ್ತು ನಿರ್ಮಾಣ ಮಾಡುತ್ತಿರುವ ಗುರುದೇಶಪಾಂಡೆ ಅವರು ಶಿಷ್ಯ ಎಸ್.ರಾಜವರ್ಧನ್ ಅವರಿಗೆ ನಿರ್ದೇಶನ ಮಾಡಲು ಅವಕಾಶ ಮಾಡಿಕೊಟ್ಟಿದ್ದಾರೆ. ವರಮಹಾಲಕ್ಷೀ ಹಬ್ಬದಂದು ನಡೆದ ಮಹೂರ್ತ ಸಮಾರಂಭಕ್ಕೆ ನಿರ್ಮಾಪಕರಾದ ರಮೇಶ್‍ರೆಡ್ಡಿ ಮೊದಲ ದೃಶ್ಯಕ್ಕೆ ಕ್ಲಾಪ್ ಮಾಡಿದರೆ, ಸಮೃದ್ಧಿ ಮಂಜುನಾಥ್ ಕ್ಯಾಮೆರಾ ಆನ್ ಮಾಡಿ ತಂಡಕ್ಕೆ ಶುಭಹಾರೈಸಿದರು. ರೈನ್‍ಬೋ ಚಿತ್ರತಂಡ ಮುಂದಿನ ತಿಂಗಳಿನಿಂದ ಚಿತ್ರೀಕರಣ ನಡೆಸಲಿದೆ.

  • ಮನೆಯ ಪುಟ್ಟ ಬಸವಣ್ಣನನ್ನು ಪರಿಚಯಿಸಿದ ಅಜಯ್ ಪತ್ನಿ

    ಮನೆಯ ಪುಟ್ಟ ಬಸವಣ್ಣನನ್ನು ಪರಿಚಯಿಸಿದ ಅಜಯ್ ಪತ್ನಿ

    ಬೆಂಗಳೂರು: ಸ್ಯಾಂಡಲ್‍ವುಡ್ ಕೃಷ್ಣ ಅಜಯ್ ರಾವ್ ಅವರ ಪತ್ನಿ ತಮ್ಮ ಮಗಳಿಗೆ ಬಸವಣ್ಣನಂತೆ ಉಡುಪು ಹಾಕಿ ಫೋಟೋ ಕ್ಲಿಕ್ಕಿಸಿದ್ದಾರೆ.

    ಅಜಯ್ ರಾವ್ ಅವರ ಪತ್ನಿ ಸ್ವಪ್ನ ರಾವ್ ತಮ್ಮ ಇನ್‍ಸ್ಟಾಗ್ರಾಂನಲ್ಲಿ ಮಗಳು ಚರಿಷ್ಮಾಳ ಫೋಟೋ ಹಂಚಿಕೊಂಡಿದ್ದಾರೆ. ಅಲ್ಲದೆ ಅದಕ್ಕೆ, “ನಮ್ಮನೆ ಪುಟ್ಟ ಬಸವಣ್ಣ” ಎಂದು ಬರೆದುಕೊಂಡಿದ್ದಾರೆ. ಸ್ವಪ್ನ ಅವರ ಈ ಪೋಸ್ಟ್ ಗೆ ಅಭಿಮಾನಿಗಳು ಫಿದಾ ಆಗಿದ್ದಾರೆ. ಅಲ್ಲದೆ ಕ್ಯೂಟ್ ಪಿಕ್ ಎಂದು ಹೇಳುವ ಮೂಲಕ ಮೆಚ್ಚುಗೆ ವ್ಯಕ್ತಪಡಿಸುತ್ತಿದ್ದಾರೆ.

     

    View this post on Instagram

     

    Nammane putta Basavanna????

    A post shared by Sapna Rao (@sapnajairao) on

    ಅಜಯ್ ಅವರು ಡಿಸೆಂಬರ್ 2ರಂದು ತಮ್ಮ ಮುದ್ದಾದ ಹೆಣ್ಣು ಮಗುವಿಗೆ `ಚೆರಿಷ್ಮಾ’ ಎಂದು ನಾಮಕರಣ ಮಾಡಿದ್ದರು. ಅಜಯ್ ರಾವ್ ಅವರ ಪತ್ನಿ ಸ್ವಪ್ನ ರಾವ್ ನ. 23ರಂದು ಹೆಣ್ಣು ಮಗುವಿಗೆ ಜನ್ಮ ನೀಡಿದ್ದರು. ಈ ವೇಳೆ ಅಜಯ್ ರಾವ್ ಅವರು ತಮ್ಮ ಪತ್ನಿ ಸ್ವಪ್ನ ಹಾಗೂ ಪುಟ್ಟ ಕಂದಮ್ಮನ ಜೊತೆ ಸೆಲ್ಫಿ ತೆಗೆದುಕೊಂಡ ಫೋಟೋ ವೈರಲ್ ಆಗಿತ್ತು.

    ಮೇ 28ರಂದು ಅಜಯ್ ಅವರ ಪತ್ನಿ ಸ್ವಪ್ನ ಹುಟ್ಟುಹಬ್ಬ ಆಚರಿಸಿಕೊಂಡಿದ್ದರು. ಸ್ವಪ್ನ ಅವರ ಹುಟ್ಟುಹಬ್ಬಕ್ಕೆ ಅಜಯ್ ತಮ್ಮ ಫೇಸ್‍ಬುಕ್‍ನಲ್ಲಿ ಪತ್ನಿಗೆ ಶುಭಾಶಯ ತಿಳಿಸಿದ್ದರು. ಅಲ್ಲದೆ ಪತ್ನಿ ಜೊತೆ ಇರುವ ಮಗಳ ಫೋಟೋವನ್ನು ಕೂಡ ಹಂಚಿಕೊಂಡಿದ್ದರು.

    ಅಜಯ್ ರಾವ್ ಡಿಸೆಂಬರ್ 14, 2014ರಂದು ಸ್ವಪ್ನ ಅವರ ಜೊತೆ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದರು. ಸ್ವಪ್ನ ಅವರು ಎಂಜಿನಿಯರ್ ಪದವಿ ಪಡೆದಿದ್ದು, ಅಜಯ್ ಅವರದ್ದು ಲವ್ ಕಮ್ ಅರೆಂಜ್ ಮ್ಯಾರೇಜ್. ಅಜಯ್ ಆಡಂಭರ ಇಲ್ಲದೆ ತುಂಬಾ ಸರಳವಾಗಿ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದರು.

  • ಹುಟ್ಟುಹಬ್ಬದಂದೇ ಅಜಯ್ ರಾವ್ ವಿರುದ್ಧ ಆಕ್ರೋಶ..!

    ಹುಟ್ಟುಹಬ್ಬದಂದೇ ಅಜಯ್ ರಾವ್ ವಿರುದ್ಧ ಆಕ್ರೋಶ..!

    ಬೆಂಗಳೂರು: ಹುಟ್ಟುಹಬ್ಬದ ದಿನವೇ ಸ್ಯಾಂಡಲ್‍ವುಡ್ ನಟ ಅಜಯರಾವ್ ವಿರುದ್ಧ ಸಾಮಾಜಿಕ ಜಾಲತಾಣದಲ್ಲಿ ಆಕ್ರೋಶ ವ್ಯಕ್ತವಾಗಿದೆ.

    ಪೊಲೀಸ್ ಅಧಿಕಾರಿಯಾಗಿ ಬರೀ ಮೈಯಲ್ಲಿ ಶ್ರೀಕೃಷ್ಣನ ಅವತಾರದಲ್ಲಿರುವ ಪೋಸ್ಟರ್ ಒಂದನ್ನು ಸಾಮಾಜಿಕ ಜಾಲತಾಣದಲ್ಲಿ ಅಜಯ್ ಪೋಸ್ಟ್ ಮಾಡಿದ್ದರು. ಇದನ್ನು ಗಮನಿಸಿದ ಜಾಲತಾಣಿಗರು ನಟನ ವಿರುದ್ಧ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.

    ಪಬ್ಲಿಸಿಟಿಗಾಗಿ ದೇವರನ್ನು ಅವಹೇಳನಕಾರಿ ಬಳಕೆ ಮಾಡಿ, ಶ್ರೀಕೃಷ್ಣನಿಗೆ ಅವಮಾನ ಮಾಡಲಾಗ್ತಿದೆ. ಕೂಡಲೇ ಸಾಮಾಜಿಕ ಜಾಲತಾಣದಿಂದ ಪೋಸ್ಟರ್ ಡಿಲೀಟ್ ಮಾಡುವಂತೆ ತಾಕೀತು ಮಾಡಲಾಗಿದೆ. ಇದನ್ನೂ ಓದಿ:

    ಪೋಸ್ಟರ್ ಏನು..?
    ಹುಟ್ಟುಹಬ್ಬದ ಸಂದರ್ಭದಲ್ಲಿರದ್ದ ಅಜಯ್ ರಾವ್ ಗೆ ಉಡುಗೊರೆ ಎಂಬಂತೆ ಗುರು ದೇಶ್ ಪಾಂಡೆ ಪ್ರೊಡಕ್ಷನ್ ನಿಂದ ನಿರ್ಮಾಣವಾಗಲಿರುವ 27ನೇ ಹೊಸ ಸಿನಿಮಾದ ಫಸ್ಟ್ ಲುಕ್ ಬಿಡುಗಡೆ ಮಾಡಲಾಗಿತ್ತು. ಜಿ ಸಿನಿಮಾ ಸಂಸ್ಥೆಯಿಂದ ಅಜಯ್ ಅವರ 27ನೇ ಸಿನಿಮಾ ತಯಾರಾಗುತ್ತಿದ್ದು, ಹುಟ್ಟುಹಬ್ಬದ ದಿನವೇ ಚಿತ್ರದ ಫಸ್ಟ್ ಲುಕ್ ಬಿಡುಗಡೆ ಮಾಡಿ ಶುಭ ಹಾರೈಸಿದೆ. ಈ ಪೋಸ್ಟರ್ ಅನ್ನು ಅಜಯ್ ತಮ್ಮ ಸಾಮಾಜಿಕ ಮಜಾಲತಾಣದಲ್ಲಿ ಪೋಸ್ಟ್ ಮಾಡಿಕೊಂಡಿದ್ದರು.

    ಗುರು ದೇಶ್ ಪಾಂಡೆ ಸಿನಿಮಾಗೆ ಬಂಡವಾಳ ಹಾಕುತ್ತಿದ್ದಾರೆ. ರಾಜವರ್ಧನ್ ಶಂಕರ್ ಈ ಚಿತ್ರದ ನಿರ್ದೇಶನ ಮಾಡುತ್ತಿದ್ದಾರೆ. ಕಥೆ, ಚಿತ್ರಕಥೆ ಗುರು ದೇಶಪಾಂಡೆ, ಜಡೇಶ್ ಕುಮಾರ್ ಮತ್ತು ರಾಜವರ್ಧನ್ ಶಂಕರ್ ಅವರದ್ದಾಗಿದೆ. ಅಜಯ್ ಸಿನಿಮಾಕ್ಕೆ ಆರೂರ್ ಸುಧಾಕರ್ ಶೆಟ್ಟಿ ಸಿನಿಮಾಟೋಗ್ರಾಫರ್ ಆಗಿ ಕಾರ್ಯನಿರ್ವಹಿಸಲಿದ್ದಾರೆ ಎಂದು ತಿಳಿಸಿದೆ.


    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

  • ಮಗಳ ನಾಮಕರಣವನ್ನು ನೆರವೇರಿಸಿದ ನಟ ಅಜಯ್ ರಾವ್

    ಮಗಳ ನಾಮಕರಣವನ್ನು ನೆರವೇರಿಸಿದ ನಟ ಅಜಯ್ ರಾವ್

    ಬೆಂಗಳೂರು: ಸ್ಯಾಂಡಲ್‍ವುಡ್ ಕೃಷ್ಣ ಎಂದೇ ಖ್ಯಾತರಾಗಿರುವ ಅಜಯ್ ರಾವ್ ಅವರು ಇತ್ತೀಚೆಗೆ ಹೆಣ್ಣು ಮಗುವಿಗೆ ತಂದೆಯಾಗಿದ್ದು, ಈಗ ಅವರು ತಮ್ಮ ಮಗಳ ನಾಮಕರಣವನ್ನು ಮಾಡಿದ್ದಾರೆ.

    ತಮ್ಮ ಮುದ್ದಾದ ಹೆಣ್ಣು ಮಗುವಿಗೆ ‘ಚೆರಿಷ್ಮಾ’ ಎಂದು ಅಜಯ್ ರಾವ್ ದಂಪತಿ ನಾಮಕರಣ ಮಾಡಿದ್ದಾರೆ. ತಮ್ಮ ಮಗಳ ನಾಮಕರಣ ಕಾರ್ಯಕ್ರಮದ ಫೋಟೋವನ್ನು ಟ್ವಿಟ್ಟರಿನಲ್ಲಿ ಹಾಕಿ ಅದಕ್ಕೆ, “ನಾವು ಡಿ. 2ರಂದು ಅವಳಿಗೆ ಚೆರಿಷ್ಮಾ ಎಂದು ನಾಮಕರಣ ಮಾಡಿದ್ದೇವೆ. ಪೂರ್ತಿ ಹೆಸರು ಚೆರಿಷ್ಮಾ ಅಜಯ್ ರಾವ್” ಎಂದು ಟ್ವೀಟ್ ಮಾಡಿದ್ದಾರೆ.

    ಚೆರಿಷ್ಮಾ ಎಂದರೆ ಕಳೆ ಎಂಬರ್ಥ. ಅಜಯ್ ರಾವ್ ಅವರ ಪತ್ನಿ ಸ್ವಪ್ನ ರಾವ್ ನ. 23ರಂದು ಹೆಣ್ಣು ಮಗುವಿಗೆ ಜನ್ಮ ನೀಡಿದರು. ಈ ವೇಳೆ ಅಜಯ್ ರಾವ್ ಅವರು ತಮ್ಮ ಪತ್ನಿ ಸ್ವಪ್ನ ಹಾಗೂ ಪುಟ್ಟ ಕಂದಮ್ಮನ ಜೊತೆ ಸೆಲ್ಫೀ ತೆಗೆದುಕೊಂಡ ಫೋಟೋವೊಂದು ವೈರಲ್ ಆಗಿತ್ತು.

    ಅಜಯ್ ರಾವ್ ಡಿ. 14, 2014ರಂದು ಸ್ವಪ್ನ ಅವರ ಜೊತೆ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದರು. ಸ್ವಪ್ನ ಅವರು ಎಂಜಿನಿಯರ್ ಆಗಿದ್ದು, ಅಜಯ್ ಅವರದ್ದು ಲವ್ ಕಮ್ ಆರೆಂಜ್ ಮ್ಯಾರೇಜ್. ಆಡಂಭರ ಇಲ್ಲದೇ ತುಂಬಾ ಸರಳವಾಗಿ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದರು.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

  • ತಂದೆಯಾದ ಖುಷಿಯಲ್ಲಿ ನಟ ಅಜಯ್ ರಾವ್

    ತಂದೆಯಾದ ಖುಷಿಯಲ್ಲಿ ನಟ ಅಜಯ್ ರಾವ್

    ಬೆಂಗಳೂರು: ಸ್ಯಾಂಡಲ್‍ವುಡ್ ಕೃಷ್ಣ ಎಂದೇ ಖ್ಯಾತರಾಗಿರುವ ಅಜಯ್ ರಾವ್ ಇಂದು ಹೆಣ್ಣು ಮಗುವಿಗೆ ತಂದೆಯಾದ ಸಂತಸದಲ್ಲಿದ್ದಾರೆ.

    ಅಜಯ್ ರಾವ್ ಅವರ ಪತ್ನಿ ಸ್ವಪ್ನ ರಾವ್ ಇಂದು ಹೆಣ್ಣು ಮಗುವಿಗೆ ಜನ್ಮ ನೀಡಿದ್ದಾರೆ. ಸದ್ಯ ಅಜಯ್ ರಾವ್ ಅವರು ತಮ್ಮ ಪತ್ನಿ ಸ್ವಪ್ನ ಹಾಗೂ ಪುಟ್ಟ ಕಂದಮ್ಮನ ಜೊತೆ ಸೆಲ್ಫೀ ತೆಗೆದುಕೊಂಡ ಫೋಟೋವೊಂದು ವೈರಲ್ ಆಗುತ್ತಿದೆ.

    ಅಜಯ್ ಈ ಹಿಂದೆ ಗಣೇಶ ಚತುರ್ಥಿ ಹಬ್ಬದಂದು ತಮ್ಮ ಫೇಸ್‍ಬುಕ್‍ನಲ್ಲಿ ತಮ್ಮ ಪತ್ನಿ ಸ್ವಪ್ನ ಅವರು ಬಿಡಿಸಿದ ಗಣೇಶ ಚಿತ್ರವನ್ನು ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿದ್ದರು. ಈ ಫೋಟೋದಲ್ಲಿ ಸ್ವಪ್ನ ಅವರು ಗರ್ಭಿಣಿಯಾದ ಸಂತಸದಲ್ಲಿದ್ದರು.

    ಅಜಯ್ ರಾವ್ ಡಿ. 14, 2014ರಂದು ಸ್ವಪ್ನ ಅವರ ಜೊತೆ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದರು. ಸ್ವಪ್ನ ಅವರು ಎಂಜಿನಿಯರ್ ಆಗಿದ್ದು, ಅಜಯ್ ಅವರದ್ದು ಲವ್ ಕಮ್ ಆರೆಂಜ್ ಮ್ಯಾರೇಜ್ ಎಂದು ಹೇಳಲಾಗುತ್ತಿದೆ.

    ಅಜಯ್ ರಾವ್ ಆಡಂಭರ ಇಲ್ಲದೇ ತುಂಬಾ ಸರಳವಾಗಿ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದರು. ಸದ್ಯ ಈಗ ಅವರು ಹೆಣ್ಣು ಮಗುವಿನ ತಂದೆಯಾಗಿದ್ದಾರೆ. ಈ ಸುದ್ದಿ ಕೇಳಿ ಅಜಯ್ ಅವರ ಅಭಿಮಾನಿಗಳು ತಮ್ಮ ನೆಚ್ಚಿನ ನಟನಿಗೆ ಶುಭಾಶಯ ತಿಳಿಸುತ್ತಿದ್ದಾರೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

  • ದುಷ್ಟರ ಎದೆ ಅದುರಿಸೋ ‘ತಾಯಿಗೆ ತಕ್ಕ ಮಗ’!

    ದುಷ್ಟರ ಎದೆ ಅದುರಿಸೋ ‘ತಾಯಿಗೆ ತಕ್ಕ ಮಗ’!

    ಬೆಂಗಳೂರು: ಶಶಾಂಕ್ ನಿರ್ದೇಶನ ಮಾಡಿ ನಿರ್ಮಾಣದ ಜವಾಬ್ದಾರಿಯನ್ನೂ ಹೊತ್ತುಕೊಂಡಿರೋ ಚಿತ್ರ ತಾಯಿಗೆ ತಕ್ಕ ಮಗ. ಅಗಾಧವಾದ ನಿರೀಕ್ಷೆಗಳ ಒಡ್ಡೋಲಗದಲ್ಲಿ ಈ ಚಿತ್ರ ತೆರೆ ಕಂಡಿದೆ. ಪ್ರೇಕ್ಷಕರು ಯಾವ ಕುತೂಹಲವಿಟ್ಟುಕೊಂಡು ಕಾತರರಾಗಿದ್ದರೋ ಅದನ್ನು ಈ ಚಿತ್ರ ತಣಿಸುವಂತೆಯೇ ಮೂಡಿ ಬಂದಿದೆ.

    ಆಕೆ ವಕೀಲ ವೃತ್ತಿಯನ್ನು ನ್ಯಾಯಕ್ಕಾಗಿಯೇ ಮುಡಿಪಾಗಿಟ್ಟ ತಾಯಿ. ಎಂಥಾ ಸಂದರ್ಭದಲ್ಲಿಯಾದರೂ ಅನ್ಯಾಯದ ವಿರುದ್ಧ ಕಾನೂನು ಸಮರ ನಡೆಸುವ ಗಟ್ಟಿಗಿತ್ತಿಯಾದ ಆಕೆಗೊಬ್ಬ ಮಗ. ಅವನು ಮೋಹನದಾಸ. ಅಮ್ಮ ಅಂದರೆ ಈತನ ಪ್ರಪಂಚ. ನ್ಯಾಯ, ನೀತಿಯ ವಿಚಾರದಲ್ಲಿ ಮಾತ್ರವಲ್ಲದೇ ಎಲ್ಲದರಲ್ಲಿಯೂ ಈತ ತಾಯಿಗೆ ತಕ್ಕ ಮಗ.

    ಇಂಥಾ ವಕೀಲೆ ತನ್ನ ವೃತ್ತಿಯ ನಿಮಿತ್ತವಾಗಿಯೇ ದುಷ್ಟ, ಭ್ರಷ್ಟ ರಾಜಕಾರಣಿಯೋರ್ವನನ್ನ ಎದುರು ಹಾಕಿಕೊಳ್ಳಬೇಕಾದ ಸಂದರ್ಭ ಸೃಷ್ಟಿಯಾಗುತ್ತೆ. ಆ ರಾಜಕಾರಣಿ ಅಧಿಕಾರಕ್ಕಾಗಿ ಏನು ಬೇಕಾದರೂ ಮಾಡಿ ಬಿಡಬಲ್ಲ ಕಿರಾತಕ. ಆತನ ಮಗ ತಂದೆಯ ಅಧಿಕಾರದ ಅಮಲಿನಲ್ಲಿ ಬೇಡದ್ದನ್ನೇ ಮಾಡುತ್ತಾ ಸಮಾಜ ಕಂಟಕನಾಗಿರುತ್ತಾನೆ. ಸದಾ ಅಮ್ಮನ ರಕ್ಷಣೆಗೆ ನಿಲ್ಲುತ್ತಾ ದುಷ್ಟರನ್ನು ಬಗ್ಗು ಬಡಿಯುವ ಜಾಯಮಾನದ ಮೋಹನದಾಸ ಆ ರಾಜಕಾರಣಿ ಮತ್ತು ಮಗನ ವಿರುದ್ಧವೂ ಸೆಣಸಬೇಕಾಗಿ ಬರುತ್ತದೆ. ಈ ನ್ಯಾಯ ಪಥದ ಹೋರಾಟದಲ್ಲಿ ತಾಯಿ ಮತ್ತು ಮಗ ಗೆಲ್ಲುತ್ತಾರಾ? ಅವರ ಕಥೆ ಏನಾಗುತ್ತೆ ಎಂಬುದೇ ಅಸಲಿ ಕುತೂಹಲ.

    ಈ ಕಥಾ ಎಳೆ ತುಸು ಗಂಭೀರವಾಗಿ ಕಾಣಿಸೋದರಲ್ಲಿ ಅಚ್ಚರಿಯೇನಿಲ್ಲ. ಆದರೆ ಅದನ್ನು ಎಲ್ಲಿಯೂ ಹಾಗನ್ನಿಸದಂತೆ ನಿರ್ದೇಶಕ ಶಶಾಂಕ್ ಕಟ್ಟಿ ಕೊಟ್ಟಿದ್ದಾರೆ. ಸಾಧು ಕೋಕಿಲಾ ಸಮರ್ಥವಾಗಿ ನಗಿಸುತ್ತಾರೆ. ಭಜರಂಗಿ ಲೋಕಿ ಖಳನಾಗಿ ವಿಜೃಂಭಿಸಿದರೆ ಆತನ ಎದುರಿಗೆ ಅಜೇಯ್ ರಾವ್ ಅಕ್ಷರಶಃ ಅಬ್ಬರಿಸಿದ್ದಾರೆ. ಈ ಮೂಲಕವೇ ಅವರು ಆಕ್ಷನ್ ಹೀರೋ ಆಗಿ ನೆಲೆ ನಿಲ್ಲುವ ಸೂಚನೆಯನ್ನೂ ನೀಡುತ್ತಾರೆ. ಸುಮಲತಾ ಅವರದ್ದೂ ಕೂಡಾ ನೆನಪಲ್ಲುಳಿಯುವಂಥಾ ನಟನೆ. ಇದೆಲ್ಲದಕ್ಕೆ ಹಾಡು ಮತ್ತು ಹಿನ್ನೆಲೆ ಸಂಗೀತಗಳೂ ಸಾಥ್ ನೀಡಿವೆ.

    ಹಾಗಂತ ಇಡೀ ಚಿತ್ರದಲ್ಲಿ ಯಾವ ಕೊರತೆಯೂ ಇಲ್ಲ ಅನ್ನುವಂತಿಲ್ಲ. ಆದರೆ ಶಶಾಂಕ್ ಇಲ್ಲಿ ಅನುಸರಿಸಿರೋ ಮನೋರಂಜನೆಯ ಕಮರ್ಷಿಯಲ್ ಮಾರ್ಗ ಅಂಥಾ ಕುಂದು ಕೊರತೆಗಳನ್ನು ದೊಡ್ಡದಾಗಿ ಕಾಡದಂತೆ ಮಾಡುವಲ್ಲಿ ಯಶ ಕಂಡಿದೆ. ಈ ಮೂಲಕ ತಾಯಿಗೆ ತಕ್ಕ ಮಗ ಪ್ರೇಕ್ಷಕರನ್ನು ನಿರೀಕ್ಷೆಯಂತೆಯೇ ಹಿಡಿದಿಟ್ಟಿದೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv
    ಪಬ್ಲಿಕ್ ಟಿವಿ ಆಪ್ ಡೌನ್ ಲೋಡ್ ಮಾಡಿ: play.google.com/publictv
    ಯೂ ಟ್ಯೂಬ್‍ನಲ್ಲಿ ಪಬ್ಲಿಕ್ ಟಿವಿಯನ್ನು ಸಬ್ ಸ್ಕ್ರೈಬ್ ಮಾಡಿ: youtube.com/publictvnewskannada
    ಫೇಸ್‍ಬುಕ್‍ನಲ್ಲಿ ಪಬ್ಲಿಕ್ ಟಿವಿಯನ್ನು ಲೈಕ್ ಮಾಡಿ: facebook.com/publictv
    ಟ್ವಿಟ್ಟರ್‌ನಲ್ಲಿ ಪಬ್ಲಿಕ್ ಟಿವಿಯನ್ನು ಫಾಲೋ ಮಾಡಿ: twitter.com/publictvnews

  • ತಾಯಿಗೆ ತಕ್ಕ ಮಗನ ವಿಶೇಷತೆ ಮೊಗೆದಷ್ಟೂ ಮುಗಿಯೋದಿಲ್ಲ!

    ತಾಯಿಗೆ ತಕ್ಕ ಮಗನ ವಿಶೇಷತೆ ಮೊಗೆದಷ್ಟೂ ಮುಗಿಯೋದಿಲ್ಲ!

    ಬೆಂಗಳೂರು: ಶಶಾಂಕ್ ಸಿನಿಮಾಸ್ ಅಡಿಯಲ್ಲಿ ಶಶಾಂಕ್ ಅವರೇ ನಿರ್ಮಾಣ ಮಾಡಿ ನಿರ್ದೇಶನವನ್ನೂ ಮಾಡಿರೋ ಚಿತ್ರ ತಾಯಿಗೆ ತಕ್ಕ ಮಗ. ಈಗಾಗಲೇ ಮಾಧುರ್ಯದ ಹಾಡುಗಳು ಮತ್ತು ಎನರ್ಜೆಟಿಕ್ ಟ್ರೇಲರ್ ಮೂಲಕ ಪ್ರೇಕ್ಷಕರನ್ನು ಸೆಳೆದುಕೊಂಡಿರುವ ಈ ಚಿತ್ರ ಈ ವಾರ ತೆರೆ ಕಾಣುತ್ತಿದೆ.

    ‘ತಾಯಿಗೆ ತಕ್ಕ ಮಗ’ ಶಶಾಂಕ್ ಅವರ ಸ್ವಂತ ಬ್ಯಾನರಿನಡಿಯಲ್ಲಿ ನಿರ್ಮಾಣವಾಗುತ್ತಿರೋ ಮೊದಲ ಚಿತ್ರ. ಆದ್ದರಿಂದಲೇ ಆರಂಭವೇ ಅದ್ಧೂರಿಯಾಗಿರಬೇಕೆಂಬ ಮಹದಾಸೆಯಿಂದ ಪ್ರತಿಯೊಂದರಲ್ಲಿಯೂ ನಿಗಾ ವಹಿಸಿಯೇ ಈ ಚಿತ್ರವನ್ನು ರೂಪಿಸಿದ್ದಾರೆ. ಶಶಾಂಕ್ ಈ ಕಥೆಯನ್ನೂ ಕೂಡಾ ಅದಕ್ಕೆ ತಕ್ಕುದಾಗಿಯೇ ಹೊಸೆದಿದ್ದಾರಂತೆ. ಆದ್ದರಿಂದಲೇ ಬಿಡುಗಡೆಯ ಹೊಸ್ತಿಲಲ್ಲಿಯೇ ಗೆಲುವಿನ ಸೂಚನೆ ಮಿರುಗಲಾರಂಭಿಸಿದೆ.

    ಇದು ಶಶಾಂಕ್ ಮತ್ತು ಅಜೇಯ್ ರಾವ್ ಒಟ್ಟಾಗಿ ರೂಪಿಸಿದ ಮೂರನೇ ಚಿತ್ರ. ಅಜೇಯ್ ರಾವ್ ಅವರ ವೃತ್ತಿ ಜೀವನದಲ್ಲಿದು ಇಪ್ಪತೈದನೇ ಚಿತ್ರ. ಬಹಳಷ್ಟು ಕಷ್ಟಪಟ್ಟು ಚಿತ್ರರಂಗಕ್ಕೆ ಪಾದಾರ್ಪಣೆ ಮಾಡಿದ್ದ ಅಜೇಯ್ ರಾವ್ ಈ ಹಾದಿಯಲ್ಲಿ ಹದಿನೈದು ವರ್ಷ ಸಾಗಿ ಬಂದಿದ್ದಾರೆ. ಅದನ್ನು ತಾಯಿಗೆ ತಕ್ಕ ಮಗ ಚಿತ್ರ ಸಾರ್ಥಕಗೊಳಿಸಲಿದೆ ಎಂಬ ಭರವಸೆಯನ್ನೂ ಹೊಂದಿದ್ದಾರೆ.

    ಕಳೆದ ಹದಿನೈದು ವರ್ಷದ ಅಜೇಯ್ ರಾವ್ ಬಣ್ಣದ ಬದುಕನ್ನೊಮ್ಮೆ ಅವಲೋಕಿಸಿದರೆ ಅವರು ಈವರೆಗೂ ಲವರ್ ಬಾಯ್ ಪಾತ್ರಗಳಲ್ಲಿಯೇ ಮಿಂಚುತ್ತಾ ಬಂದಿದ್ದಾರೆ. ಆದರೆ ಅವರ ಪ್ರಧಾನ ಆಸಕ್ತಿ ಆಕ್ಷನ್‍ನತ್ತಲೇ ಇತ್ತೆಂಬುದು ಅಚ್ಚರಿಯಾದರೂ ಸತ್ಯ. ಅಷ್ಟಕ್ಕೂ ಅಜೇಯ್ ರಾವ್ ಶಾಲಾ ದಿನಗಳಿಂದಲೇ ಕರಾಟೆ ಚಾಂಪಿಯನ್. ಈ ಚಿತ್ರದಲ್ಲಿ ಕರಾಟೆ ಪಟ್ಟುಗಳನ್ನೂ ಕೂಡಾ ಅಜೇಯ್ ಪ್ರದರ್ಶಿಸಿದ್ದಾರಂತೆ!

    ಜೂಡಾ ಸ್ಯಾಂಡಿ ಸಂಗೀತ ನಿರ್ದೇಶನವಿರುವ ಈ ಚಿತ್ರಕ್ಕೆ ಶೇಖರ್ ಚಂದ್ರ ಅವರ ಛಾಯಾಗ್ರಹಣವಿದೆ. ಗಿರಿ ಮಹೇಶ್ ಸಂಕಲನ ಹಾಗೂ ಕೆ.ರವಿವರ್ಮ ಹಾಗೂ ಥ್ರಿಲ್ಲರ್ ಮಂಜು ಅವರ ಸಾಹಸ ನಿರ್ದೇಶನವಿರುವ ಈ ಚಿತ್ರದ ತಾರಾಬಳಗದಲ್ಲಿ ಕೃಷ್ಣ ಅಜೇಯ್ ರಾವ್, ಸುಮಲತಾ ಅಂಬರೀಶ್, ಆಶಿಕಾ ರಂಗನಾಥ್, ಅಚ್ಯುತಕುಮಾರ್, ಸಾಧುಕೋಕಿಲ, ಭಜರಂಗಿ ಲೋಕಿ, ಕೃಷ್ಣ ಹೆಬ್ಬಾಳೆ ಮುಂತಾದವರಿದ್ದಾರೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv
    ಪಬ್ಲಿಕ್ ಟಿವಿ ಆಪ್ ಡೌನ್ ಲೋಡ್ ಮಾಡಿ: play.google.com/publictv
    ಯೂ ಟ್ಯೂಬ್‍ನಲ್ಲಿ ಪಬ್ಲಿಕ್ ಟಿವಿಯನ್ನು ಸಬ್ ಸ್ಕ್ರೈಬ್ ಮಾಡಿ: youtube.com/publictvnewskannada
    ಫೇಸ್‍ಬುಕ್‍ನಲ್ಲಿ ಪಬ್ಲಿಕ್ ಟಿವಿಯನ್ನು ಲೈಕ್ ಮಾಡಿ: facebook.com/publictv
    ಟ್ವಿಟ್ಟರ್‌ನಲ್ಲಿ ಪಬ್ಲಿಕ್ ಟಿವಿಯನ್ನು ಫಾಲೋ ಮಾಡಿ: twitter.com/publictvnews

  • ತಾಯಿಗೆ ತಕ್ಕ ಮಗ – ಅಮ್ಮನ ಜೊತೆ ಸೆಲ್ಫಿ ಕಳಿಸಿ 50,000 ರೂ. ಗೆಲ್ಲಿ!

    ತಾಯಿಗೆ ತಕ್ಕ ಮಗ – ಅಮ್ಮನ ಜೊತೆ ಸೆಲ್ಫಿ ಕಳಿಸಿ 50,000 ರೂ. ಗೆಲ್ಲಿ!

    ಬೆಂಗಳೂರು: ತಾಯಿಗೆ ತಕ್ಕ ಮಗ ಚಿತ್ರ ಬಿಡುಗಡೆಗೆ ವಾರವಷ್ಟೇ ಬಾಕಿ ಉಳಿದಿದೆ. ಇದೀಗ ಪ್ರೇಕ್ಷಕರಿಗಾಗಿಯೇ ಚಿತ್ರತಂಡ ವಿನೂತನವಾದೊಂದು ಸ್ಪರ್ಧೆಯನ್ನು ಏರ್ಪಡಿಸಿದೆ. ಇದಕ್ಕೆ ತಾಯಿಗೆ ತಕ್ಕ ಮಗ ಸೆಲ್ಫಿ ಕಂಟೆಸ್ಟ್ ಎಂದೂ ಹೆಸರಿಟ್ಟಿದೆ.

    ಇದು ಅಮ್ಮ ಮಗನ ಪ್ರೀತಿಗೆ ಪೂರಕವಾದ ಸ್ಪರ್ಧೆ. ಯಾರೇ ಯಾದರೂ ತಮ್ಮ ಅಮ್ಮನ ಜೊತೆ ಸೆಲ್ಫಿ ತೆಗೆದುಕೊಂಡು 7338259619ಗೆ ವಾಟ್ಸಪ್ ಮಾಡಬಹುದು. ನಿಮ್ಮ ಫೋಟೋ ಮೊದಲ ಬಹುಮಾನಕ್ಕೆ ಪಾತ್ರವಾದರೆ ಐವತ್ತು ಸಾವಿರ ರೂಪಾಯಿಗಳನ್ನು ಗೆಲ್ಲ ಬಹುದು!

    ಮೊದಲನೆ ಬಹುಮಾನ 50 ಸಾವಿರ, ಎರಡನೆಯ ಬಹುಮಾನ 25 ಸಾವಿರ, ಮೂರನೇ ಬಹುಮಾನ 15 ಸಾವಿರ ಮತ್ತು ನಾಲಕ್ಕನೇ ಬಹುಮಾನ 10 ಸಾವಿರವೆಂದು ಚಿತ್ರ ತಂಡ ನಿಗದಿ ಮಾಡಿದೆ. ಅಂದಹಾಗೆ ಈ ಸ್ಪರ್ಧೆಗೆ ಫೋಟೋ ಕಳಿಸಲು ನವೆಂಬರ್ 2 ಕಡೆಯ ದಿನಾಂಕ. ನವೆಂಬರ್ 3ರಂದು ಲಕ್ಕಿ ಡ್ರಾ ನಡೆಯಲಿದೆ. ಆ ಬಳಿಕ ಫೇಸ್ ಬುಕ್ ಲೈವ್ ಮೂಲಕ ವಿಜೇತರನ್ನು ಆರಿಸಲಾಗುತ್ತದೆ. ಚಿತ್ರತಂಡಕ್ಕೆ ಸಂಬಂಧಪಟ್ಟವರಿಗೆ ಯಾವ ಕಾರಣಕ್ಕೂ ಈ ಸ್ಪರ್ಧೆಯಲ್ಲಿ ಪ್ರವೇಶವಿಲ್ಲ ಎಂಬ ಸೂಚನೆಯನ್ನೂ ನೀಡಲಾಗಿದೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv