Tag: Akash Ambani

  • ಮತ ಚಲಾಯಿಸುವುದು ಪ್ರತಿಯೊಬ್ಬ ಭಾರತೀಯನ ಕರ್ತವ್ಯ – ಹಕ್ಕು ಚಲಾಯಿಸಿದ ಮುಕೇಶ್‌ ಅಂಬಾನಿ ಕುಟುಂಬ!

    ಮತ ಚಲಾಯಿಸುವುದು ಪ್ರತಿಯೊಬ್ಬ ಭಾರತೀಯನ ಕರ್ತವ್ಯ – ಹಕ್ಕು ಚಲಾಯಿಸಿದ ಮುಕೇಶ್‌ ಅಂಬಾನಿ ಕುಟುಂಬ!

    ಜೈಪುರ: ರಿಲಯನ್ಸ್‌ ಇಂಡಸ್ಟ್ರೀಸ್ ಅಧ್ಯಕ್ಷ ಮುಕೇಶ್ ಅಂಬಾನಿ (Mukesh Ambani) ಅವರಿಂದು ಕುಟುಂಬಸ್ಥರೊಂದಿಗೆ ಮತಚಲಾಯಿಸಿದರು. ಮುಂಬೈನ ಮಲಬಾರ್ ಹಿಲ್ ಮತಗಟ್ಟೆಯಲ್ಲಿ ಪತ್ನಿ ನೀತಾ ಅಂಬಾನಿ, ಪುತ್ರ ಆಕಾಶ್‌ ಅಂಬಾನಿಯೊಂದಿಗೆ (Akash Ambani) ಬಂದು ಹಕ್ಕು ಚಲಾಯಿಸಿದರು.

    ಇದೇ ವೇಳೆ ಮಾಧ್ಯಮಗಳೊಂದಿಗೆ ಮಾತನಾಡಿದ ಮುಕೇಶ್‌ ಅಂಬಾನಿ, ಭಾರತೀಯ ಪ್ರಜೆಯಾಗಿ ಮತದಾನ ಮಾಡಬೇಕಾದದ್ದು ನಮ್ಮ ಕರ್ತವ್ಯ. ಇದು ಪ್ರಜಾಪ್ರಭುತ್ವ ದೇಶ, ಪ್ರತಿಯೊಬ್ಬ ಭಾರತೀಯನೂ ವೋಟ್‌ (Vote) ಮಾಡಬೇಕು ಎಂಬುದು ನನ್ನ ಮನವಿ ಎಂದು ನುಡಿದರು. ಇದೇ ವೇಳೆ, ಭಾರತೀಯ ಪ್ರಜೆಯಾಗಿ ಮತದಾನ ಮಾಡುವುದು ಮುಖ್ಯ. ಏಕೆಂದರೆ ಇದು ನಮ್ಮ ಹಕ್ಕು ಮತ್ತು ಕರ್ತವ್ಯ ಎಂದು ಪತ್ನಿ ನೀತಾ ಅಂಬಾನಿ (Nita Ambani) ಮತದಾನಕ್ಕೆ ಕರೆ ಕೊಟ್ಟರು.

    ಲೋಕಸಭಾ ಚುನಾವಣೆಯ 5ನೇ ಹಂತದ ಮತದಾನ ಇಂದು (ಸೋಮವಾರ) ನಡೆದಿದೆ. 6 ರಾಜ್ಯಗಳು ಮತ್ತು 2 ಕೇಂದ್ರಾಡಳಿತ ಪ್ರದೇಶಗಳಲ್ಲಿನ ಒಟ್ಟು 49 ಕ್ಷೇತ್ರಗಳಲ್ಲಿ ಬೆಳಗ್ಗೆ 7 ಗಂಟೆಯಿಂದ ಸಂಜೆ 6 ಗಂಟೆ ವರೆಗೂ ಮತದಾನ ನಡೆದಿದೆ. ಇನ್ನೂ 2 ಹಂತದ ಚುನಾವಣೆ ಬಾಕಿಯಿದ್ದು, ಮೇ 25 ರಂದು 6ನೇ ಹಂತ ಹಾಗೂ ಜೂನ್‌ 1ರಂದು 7ನೇ ಹಂತದ ಚುನಾವಣೆಗೆ ಮತದಾನ ನಡೆಯಲಿದೆ. ಜೂನ್‌ 4ರಂದು 7 ಹಂತಗಳ ಚುನಾವಣೆಯ ಫಲಿತಾಂಶ ಹೊರಬೀಳಲಿದೆ.

    ಮತದಾನ ನಡೆದ ಪ್ರಮುಖ ಕ್ಷೇತ್ರಗಳು:
    ಲಕ್ನೋ, ರಾಯ್ ಬರೇಲಿ, ಅಮೇಥಿ, ಫತೇಪುರ್, ಫೈಜಾಬಾದ್, ಕೈಸರ್‌ಗಂಜ್, ನಾಸಿಕ್, ಪಾಲ್ಘರ್, ಕಲ್ಯಾಣ್, ಥಾಣೆ, ಮುಂಬೈ ಉತ್ತರ ಮತ್ತು ಮಹಾರಾಷ್ಟ್ರದ ಮುಂಬೈ ದಕ್ಷಿಣ, ಬಂಗಾವ್, ಬ್ಯಾರಕ್‌ಪೋರ್, ಹೌರಾ ಮತ್ತು ಪಶ್ಚಿಮ ಬಂಗಾಳದ ಹೂಗ್ಲಿ, ಬಿಹಾರದ ಮುಜಾಫರ್‌ಪುರ, ಸರನ್ ಮತ್ತು ಹಾಜಿಪುರ, ಸುಂದರ್‌ಗಢ, ಒಡಿಶಾದ ಬೋಲಂಗೀರ್ ಮತ್ತು ಕಂಧಮಾಲ್, ಜಾರ್ಖಂಡ್‌ನ ಕೋಡರ್ಮಾ ಮತ್ತು ಹಜಾರಿಬಾಗ್, ಜಮ್ಮು ಮತ್ತು ಕಾಶ್ಮೀರದ ಬಾರಾಮುಲ್ಲಾ.

    ಚುನಾವಣಾ ಕಣದಲ್ಲಿದ್ದವರು:
    ರಕ್ಷಣಾ ಸಚಿವ ರಾಜನಾಥ್ ಸಿಂಗ್, ಸಚಿವ ಪಿಯೂಷ್ ಗೋಯಲ್, ರಾಹುಲ್ ಗಾಂಧಿ, ಸ್ಮೃತಿ ಇರಾನಿ, ಒಮರ್ ಅಬ್ದುಲ್ಲಾ, ಸಜ್ಜದ್ ಗನಿ ಲೋನ್, ಸಾಧ್ವಿ ನಿರಂಜನ್ ಜ್ಯೋತಿ, ಲಲ್ಲು ಸಿಂಗ್, ಕರಣ್ ಭೂಷಣ್ ಸಿಂಗ್, ಕೀರ್ತಿ ವರ್ಧನ್ ಸಿಂಗ್, ತನುಜ್ ಪೂಧನ್ ಸಿಂಗ್, ನರೇಶ್ ಉತ್ತಮ್ ಪಟೇಲ್, ಉಜ್ವಲ್ ನಿಕಮ್, ರಾಹುಲ್ ಶೆವಾಲೆ, ಅನಿಲ್ ದೇಸಾಯಿ, ವರ್ಷ ಗಾಯಕ್ವಾಡ್, ಸಂಜಯ್ ದಿನ ಪಾಟೀಲ್, ರವೀಂದ್ರ ವೈಕರ್, ಶ್ರೀಕಾಂತ್ ಶಿಂಧೆ, ಹೇಮಂತ್ ಗೋಡ್ಸೆ, ಭಾರತಿ ಪವಾರ್, ಕಪಿಲ್ ಮೊರೇಶ್ವರ್ ಪಾಟೀಲ್, ಸುಭಾಷ್ ರಾಮರಾವ್ ಭಮ್ರೆ, ಶಾಂತನು ಠಾಕೂರ್, ಅರ್ಜುನ್ ಸಿಂಗ್, ಪ್ರಸೂನೆಟ್ ಚಟರ್ಜಿ, ಕಲ್ಯಾಣ್ ಬ್ಯಾನರ್ಜಿ, ದೇವೇಶ್ ಚಂದ್ರ ಠಾಕೂರ್, ಅಲಿ ಅಶ್ರಫ್ ಫಾತ್ಮಿ, ಅಜಯ್ ನಿಶಾದ್, ರಾಜೀವ್ ಪ್ರತಾಪ್ ರೂಡಿ, ರೋಹಿಣಿ ಆಚಾರ್ಯ, ಚಿರಾಗ್ ಪಾಸ್ವಾನ್, ಜುಯಲ್ ಓರಮ್, ದಿಲೀಪ್ ಟಿರ್ಕಿ, ಅಚ್ಯುತ ಸಮಂತಾ, ಸಂಗೀತಾ ಕುಮಾರಿ ಸಿಂಗ್ ಡಿಯೋ, ಅನ್ನಪೂರ್ಣ ದೇವಿ ಮತ್ತು ಜೈ ಪ್ರಕಾಶ್ ಭಾಯಿ ಪಟೇಲ್ ಸೇರಿದಂತೆ ಹಲವಾರು ಪ್ರಮುಖ ಅಭ್ಯರ್ಥಿಗಳು ಕಣದಲ್ಲಿದ್ದರು.

  • ಬಾಲರಾಮನ ಪ್ರಾಣಪ್ರತಿಷ್ಠೆ ಸಂಪನ್ನ – ಅಯೋಧ್ಯೆಯಲ್ಲಿ ಅಂಬಾನಿ ಕುಟುಂಬ ಸಂಭ್ರಮ

    ಬಾಲರಾಮನ ಪ್ರಾಣಪ್ರತಿಷ್ಠೆ ಸಂಪನ್ನ – ಅಯೋಧ್ಯೆಯಲ್ಲಿ ಅಂಬಾನಿ ಕುಟುಂಬ ಸಂಭ್ರಮ

    ಅಯೋಧ್ಯೆ (ಉತ್ತರ ಪ್ರದೇಶ): ಬಾಲರಾಮನ ಪ್ರಾಣಪ್ರತಿಷ್ಠೆ (Ram lalla Pran Pratishtha) ಸಂಪನ್ನಗೊಂಡಿದ್ದು, ಬರೋಬ್ಬರಿ 500 ವರ್ಷಗಳ ಕಾಯುವಿಕೆಗೆ ಇದೀಗ ಅಂತ್ಯ ಬಿದ್ದಿದೆ.

    ಅಯೋಧ್ಯೆ ರಾಮಮಂದಿರದಲ್ಲಿ (Ayodhya Ram Mandir) ಮಧ್ಯಾಹ್ನ 12 ಗಂಟೆ 30 ನಿಮಿಷ 32 ಸೆಕೆಂಡ್‌ಗಳ ಮಧ್ಯೆ ಅಭಿಜಿತ್‌ ಮುಹೂರ್ತದಲ್ಲಿ (ಅಭಿಜಿತ್‌ʼ ಅಂದ್ರೆ ʼವಿಜಯಶಾಲಿʼ ಎಂದರ್ಥ) ಶಾಸ್ತ್ರೋಕ್ತವಾಗಿ ರಾಮಲಲ್ಲಾನ ಪ್ರಾಣ ಪ್ರತಿಷ್ಠಾಪನೆ ನೆರವೇರಿದೆ. ಅರ್ಚಕರು, ಪಂಡಿತರು ಹಾಗೂ ಯಜಮಾನ ಸ್ಥಾನದಲ್ಲಿದ್ದ ಪ್ರಧಾನಿ ಮೋದಿ ಅವರ ನೇತೃತ್ವದಲ್ಲಿ ಪ್ರಾಣಪ್ರತಿಷ್ಠೆ ನೆರವೇರಿದೆ. ಈ ವೇಳೆ ಆರ್‌ಎಸ್‌ಎಸ್‌ ಮುಖ್ಯಸ್ಥ ಮೋಹನ್‌ ಭಾಗವತ್‌, ಸಿಎಂ ಯೋಗಿ ಆದಿತ್ಯನಾಥ್‌, ಗುಜರಾತ್‌ ರಾಜ್ಯಪಾಲೆ ಆನಂದಿಬೆನ್‌ ಪಟೇಲ್‌ ಮೊದಲಾದವರು ಉಪಸ್ಥಿತರಿದ್ದರು. ಇದನ್ನೂ ಓದಿ: ಅಯೋಧ್ಯೆ ರಾಮಮಂದಿರದ ಗರ್ಭಗುಡಿಯಲ್ಲಿ ಬಾಲರಾಮನ ಪ್ರಾಣಪ್ರತಿಷ್ಠಾಪನೆ

    ದೇಶದ ಮೂಲೆ ಮೂಲೆಗಳಿಂದ ಸುಮಾರು 8 ಸಾವಿರಕ್ಕೂ ಅಧಿಕ ಗಣ್ಯರನ್ನ ಆಹ್ವಾನಿಸಲಾಗಿತ್ತು. ಅಂತೆಯೇ ಮುಕೇಶ್‌ ಅಂಬಾನಿ ಕುಟುಂಬಸ್ಥರು ಸಹ ಈ ಸಂಪನ್ನ ಕಾರ್ಯಕ್ರಮದಲ್ಲಿ ಭಾಗಿಯಾಗಿ ಸಂತಸ ಹಂಚಿಕೊಂಡರು. ರಿಲಯನ್ಸ್ ಇಂಡಸ್ಟ್ರೀಸ್‌ ಅಧ್ಯಕ್ಷ ಮುಖೇಶ್ ಅಂಬಾನಿ, ಪತ್ನಿ ನೀತಾ ಅಂಬಾನಿ, ಮಗ ಆಕಾಶ್ ಅಂಬಾನಿ ಮತ್ತು ಸೊಸೆ ಶ್ಲೋಕಾ ಮೆಹ್ತಾ ಕುಟುಂಬ ಸಮೇತರಾಗಿ ಸಮಾರಂಭದಲ್ಲಿ ಪಾಲ್ಗೊಂಡಿದ್ದರು. ಇದನ್ನೂ ಓದಿ: ಸರಯೂ ನದಿ ತಟದಲ್ಲಿ ವಿಶೇಷ ದೈವಿಕ ಅನುಭವ ಹಂಚಿಕೊಂಡ ಪಿ.ಟಿ ಉಷಾ

    ಪ್ರಾಣಪ್ರತಿಷ್ಠೆ ನೇರವೇರುತ್ತಿದ್ದ ಸಮಯಕ್ಕೆ ಭಾರತೀಯ ವಾಯುಪಡೆಯ (ಐಎಎಫ್) ಹೆಲಿಕಾಪ್ಟರ್‌ಗಳು ಅಯೋಧ್ಯೆಯ ಶ್ರೀ ರಾಮಮಂದಿರ ಆವರಣದಲ್ಲಿ ಹಾಗೂ ರಾಮಮಂದಿರದ ಮೇಲ್ಭಾಗದಲ್ಲಿ ಪುಷ್ಪಾರ್ಚನೆ ಸಲ್ಲಿಸಿದವು. ಈ ವೇಳೆ ರಾಮಭಕ್ತರಿಂದ ʻಜೈ ಶ್ರೀರಾಮ್‌ʼ ಉದ್ಘೋಷಗಳು ಕೇಳಿಬಂದಿತು. ಸಾವಿರಾರು ಭಕ್ತರಿಂದ ರಾಮನಾಮ ಝೇಂಕಾರ ಇದಕ್ಕೆ ಸಾಕ್ಷಿಯಾಯಿತು. ಇದನ್ನೂ ಓದಿ: ಈ ಭೂಮಿ ಮೇಲಿನ ಅದೃಷ್ಟಶಾಲಿ ವ್ಯಕ್ತಿ ನಾನು: ಅಯೋಧ್ಯೆಯಲ್ಲಿ ಶಿಲ್ಪಿ ಅರುಣ್‌ ಯೋಗಿರಾಜ್‌ ಮಾತು

    ಪ್ರಾಣಪ್ರತಿಷ್ಠಾಪನೆ ನೆರವೇರುವ ಸಮಯಕ್ಕೆ ದೇಶಾದ್ಯಂತ ರಾಮನ ದೇವಸ್ಥಾನಗಳಲ್ಲಿಯೂ ವಿಶೇಷ ಪೂಜಾ ಕೈಂಕರ್ಯಗಳು ಜರುಗಿದವು. ದೇಶಾದ್ಯಂತ ವಿವಿಧೆಡೆ ಪ್ರಾಣಪ್ರತಿಷ್ಠೆ ಕಣ್ತುಂಬಿಕೊಳ್ಳಲು ನೇರಪ್ರಸಾರಕ್ಕೆ ಅವಕಾಶ ಮಾಡಿಕೊಡಲಾಗಿತ್ತು. ಪ್ರಧಾನಿ ನರೇಂದ್ರ ಮೋದಿ ಅವರ ಎಕ್ಸ್‌ ಖಾತೆಯಲ್ಲೂ ಪ್ರಾಣಪ್ರತಿಷ್ಠೆ ಕಾರ್ಯಕ್ರಮವನ್ನು ನೇರಪ್ರಸಾರ ಮಾಡಲಾಯಿತು. ಇದನ್ನೂ ಓದಿ: ಅಯೋಧ್ಯೆಯಲ್ಲಿ ತಾರಾ ದಂಡು: ಭಾಗಿಯಾದವರು ಯಾರೆಲ್ಲ? 

  • ರಿಲಯನ್ಸ್ ಜಿಯೋ ನಿರ್ದೇಶಕ ಸ್ಥಾನದಿಂದ ಕೆಳಗಿಳಿದ ಮುಖೇಶ್ ಅಂಬಾನಿ – ಮಗ ಆಕಾಶ್‌ಗೆ ಪಟ್ಟ

    ರಿಲಯನ್ಸ್ ಜಿಯೋ ನಿರ್ದೇಶಕ ಸ್ಥಾನದಿಂದ ಕೆಳಗಿಳಿದ ಮುಖೇಶ್ ಅಂಬಾನಿ – ಮಗ ಆಕಾಶ್‌ಗೆ ಪಟ್ಟ

    ಮುಂಬೈ: ರಿಲಯನ್ಸ್ ಜಿಯೋ ನಿರ್ದೇಶಕರಾಗಿದ್ದ ಮುಖೇಶ್ ಅಂಬಾನಿ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದು, ತಮ್ಮ ಹಿರಿಯ ಮಗ ಆಕಾಶ್‌ಗೆ ನಿರ್ದೇಶಕ ಸ್ಥಾನವನ್ನು ಹಸ್ತಾಂತರಿಸಿದ್ದಾರೆ.

    ಕಂಪನಿಯ ನಿರ್ದೇಶಕರ ಮಂಡಳಿ ಸೋಮವಾರ ನಡೆದ ಸಭೆಯಲ್ಲಿ ಎಕ್ಸಿಕ್ಯೂಟಿವ್ ಡೈರೆಕ್ಟರ್ ಆಕಾಶ್ ಅಂಬಾನಿ ಅವರನ್ನು ಕಂಪನಿಯ ಅಧ್ಯಕ್ಷರನ್ನಾಗಿ ನೇಮಿಸಲು ಅನುಮೋದನೆ ನೀಡಿದೆ. ಈ ಬಗ್ಗೆ ರಿಲಯನ್ಸ್ ಇನ್ಫೋಕಾಮ್ ಭಾರತೀಯ ಷೇರು ಮಾರುಕಟ್ಟೆಗಳಿಗೆ ಮಾಹಿತಿ ನೀಡಿದೆ. ಇದನ್ನೂ ಓದಿ: ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್ – ಕೆಎಸ್‌ಆರ್‌ಟಿಸಿ ವಿದ್ಯಾರ್ಥಿ ಬಸ್ ಪಾಸ್ ಅವಧಿ ವಿಸ್ತರಣೆ

    ಆಕಾಶ್ ಅಂಬಾನಿ ಅಮೆರಿಕದ ಬ್ರೌನ್ ವಿಶ್ವವಿದ್ಯಾನಿಲಯದಲ್ಲಿ ಅರ್ಥಶಾಸ್ತ್ರ ಪದವೀಧರರಾಗಿದ್ದು, ಅವರು ಹೊಸ ತಂತ್ರಜ್ಞಾನಗಳು ಹಾಗೂ ಸಾಮರ್ಥ್ಯಗಳ ಅಭಿವೃದ್ಧಿಯಲ್ಲಿ ತೊಡಗಿಸಿಕೊಂಡಿದ್ದಾರೆ. ಅವರು ಡೇಟಾ ಮತ್ತು ತಂತ್ರಜ್ಞಾನವನ್ನು ಎಲ್ಲರಿಗೂ ಸುಲಭವಾಗಿ ತಲುಪಿಸಲು ಕೆಲಸ ಮಾಡುವುದಾಗಿ ಕಂಪನಿ ತಿಳಿಸಿದೆ.

    ಇದರೊಂದಿಗೆ ಮಂಡಳಿ ತನ್ನ ಸಭೆಯಲ್ಲಿ ಪಂಕಜ್ ಮೋಹನ್ ಪವಾರ್ ಅವರನ್ನು 5 ವರ್ಷಗಳ ಅವಧಿಗೆ ರಿಲಯನ್ಸ್ ಜಿಯೋ ವ್ಯವಸ್ಥಾಪಕ ನಿರ್ದೇಶಕರನ್ನಾಗಿ ನೇಮಿಸಲು ಅನುಮೋದಿಸಿದೆ. ರಮಿಂದರ್ ಸಿಂಗ್ ಗುಜ್ರಾಲ್ ಹಾಗೂ ಕೆ.ವಿ ಚೌಧರಿ ಅವರನ್ನು ಸ್ವತಂತ್ರ ನಿರ್ದೇಶಕರನ್ನಾಗಿ ನೇಮಿಸಿದೆ. ಇದನ್ನೂ ಓದಿ: ದಿಢೀರ್ ಭಾರೀ ಇಳಿಕೆಯಾಗಲಿದೆ ಫೋನ್ ಬೆಲೆ

    ರಾಜೀನಾಮೆ ನೀಡಿದ್ದರೂ ರಿಲಯನ್ಸ್ ಜಿಯೋ ಸೇರಿದಂತೆ ಎಲ್ಲಾ ಜಿಯೋ ಡಿಜಿಟಲ್ ಬ್ರ್ಯಾಂಡ್‌ಗಳ ಕಂಪನಿ ಜಿಯೋ ಪ್ಲಾಟ್‌ಫಾರ್ಮ್ ಲಿಮಿಟೆಡ್‌ನ ಅಧ್ಯಕ್ಷರಾಗಿ ಮುಖೇಶ್ ಅಂಬಾನಿಯೇ ಮುಂದುವರಿಯಲಿದ್ದಾರೆ. ಅಂಕಿ ಅಂಶಗಳ ಪ್ರಕಾರ ಭಾರತದ ಅತಿದೊಡ್ಡ ಟೆಲಿಕಾಂ ಆಪರೇಟರ್ ಜಿಯೋ ಏಪ್ರಿಲ್‌ನಲ್ಲಿ 16.8 ಲಕ್ಷ ಮೊಬೈಲ್ ಚಂದಾದಾರರನ್ನು ಗಳಿಸಿದೆ. ದೇಶದಲ್ಲಿ ಅತಿ ಹೆಚ್ಚು ಗ್ರಾಹಕರನ್ನು ಹೊಂದಿದ ಟೆಲಿಕಾಂ ನೆಟ್‌ವರ್ಕ್ ಪೈಕಿ ಮೊದಲ ಸ್ಥಾನದಲ್ಲಿದೆ.

    Live Tv

  • ಸೊಸೆಗೆ ನೀತಾ ಅಂಬಾನಿ ಗಿಫ್ಟ್ ಮಾಡಿದ್ರು ಬರೋಬ್ಬರಿ 300 ಕೋಟಿಯ ವಜ್ರದ ಹಾರ!

    ಸೊಸೆಗೆ ನೀತಾ ಅಂಬಾನಿ ಗಿಫ್ಟ್ ಮಾಡಿದ್ರು ಬರೋಬ್ಬರಿ 300 ಕೋಟಿಯ ವಜ್ರದ ಹಾರ!

    ಮುಂಬೈ: ಏಷ್ಯಾದ ಶ್ರೀಮಂತ ವ್ಯಕ್ತಿಯಾಗಿರುವ ಮುಕೇಶ್ ಅಂಬಾನಿ ಹಾಗೂ ನೀತಾ ಅಂಬಾನಿ ಪುತ್ರ ಆಕಾಶ್ ಅಂಬಾನಿ ತಮ್ಮ ಬಾಲ್ಯ ಸ್ನೇಹಿತೆ, ವಜ್ರ ವ್ಯಾಪಾರಿಯಾಗಿರುವ ರುಸ್ಸೆಲ್ ಮೆಹ್ತಾ ಅವರ ಪುತ್ರಿ ಶ್ಲೋಕಾ ಮೆಹ್ತಾರನ್ನು ಮಾರ್ಚ್ 9ರಂದು ವಿವಾಹವಾಗಿದ್ದಾರೆ. ಆದ್ದರಿಂದ ತಮ್ಮ ಪ್ರೀತಿಯ ಸೊಸೆಗೆ ನೀತಾ ಅಂಬಾನಿ ಬರೋಬ್ಬರಿ 300 ಕೋಟಿ ರೂ. ಬೆಲೆಬಾಳುವ ವಜ್ರದ ಹಾರವೊಂದನ್ನು ಉಡುಗೊರೆಯಾಗಿ ನೀಡಿದ್ದಾರೆ.

    ಹೌದು, ಸದ್ಯ ನೀತಾ ಅಂಬಾನಿ ತಮ್ಮ ಸೊಸೆ ಶ್ಲೋಕಾ ಅವರಿಗೆ ನೀಡಿರುವ ಈ ದುಬಾರಿ ಗಿಫ್ಟ್ ವಿಷಯ ಕೇಳಿದವರು ಒಂದು ಕ್ಷಣ ಅಚ್ಚರಿಪಡುತ್ತಾರೆ. ಮಗ ಆಕಾಶ್ ಕೈ ಹಿಡಿದು ಬಂದಿರುವ ಶ್ಲೋಕಾಗೆ ನೀತಾ ಅವರು ಸಖತ್ ದುಬಾರಿ ವಜ್ರದ ಹಾರ ಕೊಟ್ಟು ಸಪ್ರ್ರೈಸ್ ನೀಡಿದ್ದಾರೆ.

    ಅತ್ತೆಯ ಒಡವೆಗಳನ್ನು ಸೊಸೆಗೆ ನೀಡುವುದು ಅಂಬಾನಿ ಕುಟುಂಬದ ಸಂಪ್ರದಾಯವಾಗಿದೆ. ಆದರಿಂದ ನೀತಾ ಅಂಬಾನಿಯ ಅತ್ತೆ ತಮಗೆ ನೀಡಿದ್ದ ಒಡವೆಗಳನ್ನು ತಮ್ಮ ಸೊಸೆ ಶ್ಲೋಕಾರಿಗೆ ನೀಡಲು ನಿರ್ಧರಿಸಿದ್ದರು. ಆದರೆ ಆಕಾಶ್ ಹಾಗೂ ಶ್ಲೋಕಾ ಅವರ ಮದುವೆಯ ಬಳಿಕ ಸಂಪ್ರದಾಯದ ಪ್ರಕಾರ ಪರಂಪರೆಯಿಂದ ಬಂದ ಚಿನ್ನದ ಹಾರನ್ನು ಸೊಸೆಗೆ ನೀಡುವ ಬದಲಿಗೆ ದುಬಾರಿ ವಜ್ರದ ಹಾರವನ್ನು ನೀಡಿದ್ದಾರೆ.

    ಅಷ್ಟೇ ಅಲ್ಲದೆ ಮುಕೇಶ್ ಅಂಬಾನಿ ಪುತ್ರಿ ಇಶಾ ಅಂಬಾನಿ ಅವರು ತಮ್ಮ ಪ್ರೀತಿಯ ಅಣ್ಣ ಅತ್ತಿಗೆಗೆ ಮದುವೆ ಉಡುಗೊರೆಯಾಗಿ ಒಂದು ಐಶಾರಾಮಿ ಬಂಗಲೆಯನ್ನು ನೀಡಿದ್ದಾರೆ.

    ಅಕಾಶ್ ಶ್ಲೋಕಾ ಐಶಾರಾಮಿ ವಿವಾಹದಲ್ಲಿ ಬಾಲಿವುಡ್‍ನ ಸ್ಟಾರ್ ನಟ-ನಟಿಯರಿಂದ ಹಿಡಿದು ಹೆಸರಾಂತ ರಾಜಕಾರಿಗಳು, ಉದ್ಯಮಿಗಳು, ಅಂತರಾಷ್ಟ್ರಿಯ ಮಟ್ಟದಲ್ಲಿ ಹೆಸರುವಾಸಿಯಾಗಿರುವ ಗಣ್ಯರು ಭಾಗಿಯಾಗಿದ್ದರು. ಈ ಮೂಲಕ ಆಕಾಶ್ ಅಂಬಾನಿ ಹಾಗೂ ಶ್ಲೋಕಾ ಮೆಹ್ತಾ ಅವರ ಮದುವೆ ಸಮಾರಂಭ ದುಬಾರಿ ಉಡುಗೊರೆ ಹಾಗೂ ಹೆಸರಾಂತ ಗಣ್ಯರಿಂದ ಇನ್ನಷ್ಟು ಅದ್ದೂರಿಯಾಗಿ ನೆರವೇರಿತ್ತು.

  • ಅಂಬಾನಿ ಪುತ್ರನ ನಿಶ್ಚಿತಾರ್ಥದಲ್ಲಿ ಬಲೂನ್ ಟ್ರೇಯಲ್ಲಿ ಅತಿಥಿಗಳಿಗೆ ಭಕ್ಷ್ಯ- ವಿಡಿಯೋ ನೋಡಿ

    ಅಂಬಾನಿ ಪುತ್ರನ ನಿಶ್ಚಿತಾರ್ಥದಲ್ಲಿ ಬಲೂನ್ ಟ್ರೇಯಲ್ಲಿ ಅತಿಥಿಗಳಿಗೆ ಭಕ್ಷ್ಯ- ವಿಡಿಯೋ ನೋಡಿ

    ಮುಂಬೈ: ಇತ್ತೀಚೆಗೆ ರಿಲಯನ್ಸ್ ಇಂಡಸ್ಟ್ರೀಸ್ ಕಂಪೆನಿಯ ಮುಖ್ಯಸ್ಥ ಮುಕೇಶ್ ಅಂಬಾನಿ ಹಾಗೂ ನೀತಾ ಅಂಬಾನಿ ಅವರ ಪುತ್ರ ಆಕಾಶ್ ಅಂಬಾನಿ ನಿಶ್ಚಿತಾರ್ಥ ಸಮಾರಂಭದಲ್ಲಿ ಆಕಾಶದಿಂದ ಬಲೂನ್ ಟ್ರೇಗಳ ಮೂಲಕ ಊಟ ಬರುವ ವ್ಯವಸ್ಥೆ ಮಾಡಲಾಗಿತ್ತು.

    ಗುರುವಾರ ಮುಂಬೈನಲ್ಲಿ ಆಕಾಶ್ ಅಂಬಾನಿ ಹಾಗೂ ಶ್ಲೋಕಾ ಮಹ್ತಾ ನಿಶ್ಚಿತಾರ್ಥ ಕಾರ್ಯಕ್ರಮ ನೆರವೇರಿದೆ. ನಿಶ್ಚಿತಾರ್ಥದಲ್ಲಿ ವರ್ಣ ರಂಜಿತವಾದ ಪುಷ್ಪಾಲಂಕಾರವನ್ನು ಮಾಡಲಾಗಿತ್ತು. ಇದು ಎಲ್ಲರ ಕಣ್ಮನವನ್ನು ಸೆಳೆಯುತ್ತಿತ್ತು. ಇದರ ಜೊತೆಗೆ ಬಂದಿದ್ದ ಅತಿಥಿಗಳಿಗೆ ಬಲೂನ್ ಗಳ ಮೂಲಕ ಆಹಾರದ ಟ್ರೇಗಳು ಗಾಳಿಯಲ್ಲಿ ಬಂದು ಅವರ ಕೈಗೆ ಸೇರುತ್ತಿದ್ದವು.

    ಈ ಆಹಾರದ ಟ್ರೇಗಳು ಗಾಳಿಯಲ್ಲಿ ಬಂದು ಬೀಳುತ್ತಿದ್ದ ವಿಡಿಯೋ ಬೆಳಕಿಗೆ ಬಂದಿದ್ದು, ಈಗ ವಿಡಿಯೋ ವೈರಲ್ ಆಗಿದೆ. ನಿಶ್ಚಿತಾರ್ಥದಲ್ಲಿ ಫ್ರೆಂಚ್ ಐಷಾರಾಮಿ ಆಹಾರದ ಬ್ರಾಂಡ್ `ಲಡುರೀ’ ಯನ್ನು ಪಾರ್ಟಿಯಲ್ಲಿದ್ದ ಅತಿಥಿಗಳಿಗೆ ನೀಡಲಾಯಿತು.

    ಇನ್ನು ನಿಶ್ಚಿತಾರ್ಥ ನಡೆದ ವೇದಿಕೆಯನ್ನು ವಿವಿಧ ರೀತಿಯ ವರ್ಣ ರಂಜಿತವಾದ ಹೂಗಳಿಂದ ಅಲಂಕಾರ ಮಾಡಲಾಗಿತ್ತು. ನಿಶ್ಚಿತಾರ್ಥದ ಕೇಕ್ ಕೂಡ ಆಕರ್ಷಕವಾಗಿ ವಿನ್ಯಾಸ ಮಾಡಿಸಲಾಗಿತ್ತು. ಪಾರ್ಟಿಯಲ್ಲಿ ಎಲ್ಲೆಲ್ಲೂ ಹೂಗಳಿಂದ ಅಲಂಕೃತಗೊಂಡಿತ್ತು.

    ಆಕಾಶ್ ಹಾಗೂ ಶ್ಲೋಕಾ ನಿಶ್ಚಿತಾರ್ಥ ಮುಕೇಶ್ ಅಂಬಾನಿ ನಿಶ್ಚಿತಾರ್ಥದಲ್ಲಿ ಬಾಲಿವುಡ್ ತಾರೆಯರು, ಕ್ರಿಕೆಟರ್ ಹಾಗೂ ಗಣ್ಯ ವ್ಯಕ್ತಿಗಳು ಈ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದರು. ಸಚಿನ್ ತೆಂಡೂಲ್ಕರ್ ಹಾಗೂ ಅವರ ಪತ್ನಿ ಅಂಜಲಿ ಭಾಗಿಯಾಗಿದ್ದರು. ಇನ್ನೂ ಬಾಲಿವುಡ್ ತಾರೆಗಳಾದ ಶಾರೂಖ್ ಖಾನ್, ಪ್ರಿಯಂಕಾ ಚೋಪ್ರಾ, ನಿಕ್ ಜೋನಸ್, ಕರಣ್ ಜೋಹರ್, ಅಲಿಯಾ ಭಟ್ ಹಾಗೂ ರಣ್‍ಬೀರ್ ಕಪೂರ್ ಸೇರಿದಂತೆ ಹಲವು ಗಣ್ಯರು ಭಾಗಿಯಾಗಿದ್ದರು.

    ಕಾರ್ಯಕ್ರಮಕ್ಕೆ ಅಭಿಷೇಕ್ ಬಚ್ಚನ್ ಪತ್ನಿ ಐಶ್ಚರ್ಯಾ ರೈ ಬಚ್ಚನ್ ಮತ್ತು ಮಗಳು ಆರಾಧ್ಯಳೊಂದಿಗೆ ಆಗಮಿಸಿದ್ದರು. ಅಮೀರ್ ಖಾನ್, ಕಿರಣ್ ರಾವ್, ಹಿರಿಯ ನಟಿ ರೇಖಾ, ಪರಿಣೀತಿ ಚೋಪ್ರಾ, ಆದಿತ್ಯ ರಾಯ್ ಕಪೂರ್, ಸಿದ್ದಾರ್ಥ್ ಮತ್ತು ಶ್ರದ್ಧಾ ಕಪೂರ್ ಇನ್ನು ಅನೇಕ ಇನ್ನು ಗಣ್ಯರು ಪಾಲ್ಗೊಂಡಿದ್ದರು.

    ಮುಕೇಶ್ ಹಾಗೂ ನೀತಾ ಅಂಬಾನಿ ಅವರ ಪುತ್ರಿ ಇಶಾ ಅಂಬಾನಿ ನಿಶ್ಚಿತಾರ್ಥ ಕೂಡ ಉದ್ಯಮಿ ಅಜಯ್ ಪಿರಾಮಲ್ ಅವರ ಪುತ್ರ ಆನಂದ್ ಜೊತೆ ಮೇ ತಿಂಗಳಲ್ಲಿ ನಡೆದಿತ್ತು. ಸದ್ಯ ಈಗ ಆಕಾಶ್- ಶ್ಲೋಕಾ, ಇಶಾ ಹಾಗೂ ಆನಂದ್ ಮದುವೆ ಇದೇ ವರ್ಷ ಡಿಸೆಂಬರ್ ತಿಂಗಳಲ್ಲಿ ನಡೆಯಲಿದೆ ಎಂದು ಹೇಳಲಾಗುತ್ತಿದೆ.

    https://www.youtube.com/watch?v=opEIKlOe6CM

  • ಮಗನ ನಿಶ್ಚಿತಾರ್ಥದಲ್ಲಿ ನೀತಾ ಅಂಬಾನಿ ಡ್ಯಾನ್ಸ್- ವಿಡಿಯೋ ವೈರಲ್

    ಮಗನ ನಿಶ್ಚಿತಾರ್ಥದಲ್ಲಿ ನೀತಾ ಅಂಬಾನಿ ಡ್ಯಾನ್ಸ್- ವಿಡಿಯೋ ವೈರಲ್

    ಮುಂಬೈ: ಮಗನ ನಿಶ್ಚಿತಾರ್ಥ ಕಾರ್ಯಕ್ರಮದಲ್ಲಿ ನೀತಾ ಅಂಬಾನಿ ನೃತ್ಯ ಮಾಡಿದ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.

    ರಿಲಯನ್ಸ್ ಇಂಡಸ್ಟ್ರೀಸ್ ಕಂಪೆನಿಯ ಮುಖ್ಯಸ್ಥ ಮುಕೇಶ್ ಅಂಬಾನಿ ಹಾಗೂ ನೀತಾ ಅಂಬಾನಿ ಅವರ ಪುತ್ರ ಆಕಾಶ್ ಅಂಬಾನಿ ನಿಶ್ಚಿತಾರ್ಥ ಗುರುವಾರ ಮುಂಬೈನಲ್ಲಿ ನಡೆದಿದೆ. ಮಗನ ನಿಶ್ಚಿತಾರ್ಥ ಕಾರ್ಯಕ್ರಮದಲ್ಲಿ ನೀತಾ ಅಂಬಾನಿ ಹೆಜ್ಜೆ ಹಾಕಿದ್ದಾರೆ.

    ಆಕಾಶ್ ಅಂಬಾನಿ ಹಾಗೂ ಶ್ಲೋಕಾ ಮಹ್ತಾ ನಿಶ್ಚಿತಾರ್ಥ ಕಾರ್ಯಕ್ರಮದಲ್ಲಿ ನೀತಾ ಅಂಬಾನಿ ಬಾಲಿವುಡ್ ಹಾಡಿಗೆ ಹೆಜ್ಜೆ ಹಾಕಿ ಎಲ್ಲರ ಗಮನ ಸೆಳೆದಿದ್ದಾರೆ. ಕಾರ್ಯಕ್ರಮದಲ್ಲಿ ನೀತಾ ಅಬು ಜಾನಿ ಸಂದೀಪ್ ಕೋಸ್ಲಾ ಅವರ ಮರೂನ್ ಬಣ್ಣದ ಸೀರೆಯನ್ನು ಗುಜರಾತಿ ಸ್ಟೈಲ್‍ನಲ್ಲಿ ಧರಿಸಿ ಮಿಂಚಿದ್ದರು.

    ನೀತಾ ಅಂಬಾನಿ ಭರತನಾಟ್ಯ ನೃತ್ಯಗಾರ್ತಿ ಆಗಿದ್ದು, ‘ಕಾಯ್ ಪೋ ಚೇ’ ಸಿನಿಮಾದ ‘ಶುಭಾರಂಭ್’ ಹಾಡಿಗೆ ಹೆಜ್ಜೆ ಹಾಕಿದ್ದಾರೆ. ಸದ್ಯ ನೀತಾ ಅಂಬಾನಿ ಹೆಜ್ಜೆ ಹಾಕಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಸಾಕಷ್ಟು ವೈರಲ್ ಆಗಿದೆ.

    ಮತ್ತೊಂದು ವಿಡಿಯೋದಲ್ಲಿ ಆಕಾಶ್ ಅವರ ಅವಳಿ ಸಹೋದರಿ ಇಶಾ ಗುಜರಾತಿನ ಸಾಂಪ್ರದಾಯಿಕ ಹಾಡು ಹಾಡಿ ನವಜೋಡಿಗೆ ಆರತಿ ಮಾಡಿದ್ದಾರೆ. ಆರತಿ ಆದ ನಂತರ ಶ್ಲೋಕಾ ತನ್ನ ನಾದಿನಿ ಇಶಾ ಕಾಲು ಮುಟ್ಟಿ ಆರ್ಶಿವಾದ ಪಡೆದಿದ್ದಾರೆ. ನಂತರ ಒಬ್ಬರಿಗೊಬ್ಬರು ತಬ್ಬಿಕೊಂಡಿದ್ದಾರೆ. ಸದ್ಯ ಈ ವಿಡಿಯೋ ಕೂಡ ಸಾಕಷ್ಟು ವೈರಲ್ ಆಗಿದೆ.

    ಆಕಾಶ್ ಹಾಗೂ ಶ್ಲೋಕಾ ನಿಶ್ಚಿತಾರ್ಥ ಮುಕೇಶ್ ಅಂಬಾನಿ ಮನೆಯಾದ ಅಂಟಿಲ್ಲಾದ 27ನೇ ಮಹಡಿಯಲ್ಲಿ ನಡೆದಿದೆ. ಬಾಲಿವುಡ್ ತಾರೆಯರು, ಕ್ರಿಕೆಟರ್ ಹಾಗೂ ಗಣ್ಯ ವ್ಯಕ್ತಿಗಳು ಈ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದರು.

    ಕಾರ್ಯಕ್ರಮದಲ್ಲಿ ಮಾಸ್ಟರ್ ಬ್ಲಾಸ್ಟರ್ ಸಚಿನ್ ತೆಂಡೂಲ್ಕರ್ ಹಾಗೂ ಅವರ ಪತ್ನಿ ಅಂಜಲಿ ಭಾಗಿಯಾಗಿದ್ದರು. ಇನ್ನೂ ಬಾಲಿವುಡ್ ತಾರೆಗಳಾದ ಶಾರೂಖ್ ಖಾನ್, ಪ್ರಿಯಂಕಾ ಚೋಪ್ರಾ, ನಿಕ್ ಜೋನಸ್, ಕರಣ್ ಜೋಹರ್, ಅಲಿಯಾ ಭಟ್ ಹಾಗೂ ರಣ್‍ಬೀರ್ ಕಪೂರ್ ಸೇರಿದಂತೆ ಹಲವು ಗಣ್ಯರು ಭಾಗಿಯಾಗಿದ್ದರು.

    ಮುಕೇಶ್ ಹಾಗೂ ನೀತಾ ಅಂಬಾನಿ ಅವರ ಪುತ್ರಿ ಇಶಾ ಅಂಬಾನಿ ನಿಶ್ಚಿತಾರ್ಥ ಕೂಡ ಉದ್ಯಮಿ ಅಜಯ್ ಪಿರಾಮಲ್ ಅವರ ಪುತ್ರ ಆನಂದ್ ಜೊತೆ ಮೇ ತಿಂಗಳಲ್ಲಿ ನಡೆದಿತ್ತು. ಸದ್ಯ ಈಗ ಆಕಾಶ್- ಶ್ಲೋಕಾ, ಇಶಾ ಹಾಗೂ ಆನಂದ್ ಮದುವೆ ಇದೇ ವರ್ಷ ಡಿಸೆಂಬರ್ ತಿಂಗಳಲ್ಲಿ ನಡೆಯಲಿದೆ ಎಂದು ಹೇಳಲಾಗುತ್ತಿದೆ.

    ಯಾರು ಶ್ಲೋಕಾ ಮೆಹ್ತಾ?
    ಶ್ಲೋಕಾ ಮೆಹ್ತಾ ಈಗಾಗಲೇ ಉದ್ಯಮಿಯಾಗಿದ್ದು, ರೊಸಿ ಬ್ಲೂ ಡೈಮಾಂಡ್ ಹೆಸರಿನ ಸಂಸ್ಥೆಯನ್ನು ಮುನ್ನಡೆಸುತ್ತಿದ್ದಾರೆ. ರೊಸಿ ಬ್ಲೂ ಡೈಮಾಂಡ್ ಸಂಸ್ಥೆ ಪ್ರಪಂಚದ ಪ್ರಮುಖ ವಜ್ರದ ಕಂಪೆನಿಗಳಲ್ಲಿ ಒಂದಾಗಿ ಗುರುತಿಸಿಕೊಂಡಿದೆ. ಆಕಾಶ್ ಹಾಗೂ ಶ್ಲೋಕಾ ಇಬ್ಬರು ಬಾಲ್ಯದ ಗೆಳೆಯರಾಗಿದ್ದು, ಮುಂಬೈನ ಧೀರೂಬಾಯಿ ಅಂಬಾನಿ ಅಂತರಾಷ್ಟ್ರೀಯ ಶಾಲೆಯಲ್ಲಿ ಓದಿದ್ದರು. ಶ್ಲೋಕಾ ಮೆಹ್ತಾ ಲಂಡನ್ ಸ್ಕೂಲ್ ಆಫ್ ಎಕಾನಮಿಕ್ಸ್ ನಲ್ಲಿ ಪದವಿ ಪಡೆದಿದ್ದು, ಕುಟುಂಬದ ಉದ್ಯಮಗಳನ್ನು ನಿರ್ವಹಿಸುತ್ತಿದ್ದಾರೆ. ಇನ್ನು ಆಕಾಶ್ ರಿಲಯನ್ಸ್ ಉದ್ಯಮ ಸಂಸ್ಥೆಗಳ ಬೋರ್ಡ್ ಆಫ್ ಡೈರೆಕ್ಟರ್ ಆಗಿ ನೇಮಕವಾಗಿದ್ದಾರೆ.

    ಈ ಹಿಂದೆ ರಾಷ್ಟ್ರೀಯ ಸುದ್ದಿ ಮಾಧ್ಯಮಮೊಂದು ಆಯೋಜಿಸಿದ್ದ ಸಂವಾದ ಕಾಯಕ್ರಮದಲ್ಲಿ ಭಾಗವಹಿಸಿದ್ದ ನೀತಾ ಅಂಬಾನಿ, ತಮ್ಮ ಮಕ್ಕಳ ಜೀವನ ಸಂಗಾತಿಗಳ ಆಯ್ಕೆಯಲ್ಲಿ ಸ್ವಾತಂತ್ರ್ಯ ನೀಡಿರುವುದಾಗಿ ತಿಳಿಸಿದ್ದರು. ಇದನ್ನೂ ಓದಿ: ಮಗ 118 ಕೆಜಿ ತೂಕ ಇಳಿಸಿಕೊಂಡ ಗುಟ್ಟು ಬಿಚ್ಚಿಟ್ಟ ನೀತಾ ಅಂಬಾನಿ

  • ವಜ್ರ ಉದ್ಯಮಿಯ ಮಗಳನ್ನು ವರಿಸಲಿದ್ದಾರೆ ಮುಕೇಶ್ ಅಂಬಾನಿ ಪುತ್ರ – ಫೋಟೋಗಳಲ್ಲಿ ನೋಡಿ

    ವಜ್ರ ಉದ್ಯಮಿಯ ಮಗಳನ್ನು ವರಿಸಲಿದ್ದಾರೆ ಮುಕೇಶ್ ಅಂಬಾನಿ ಪುತ್ರ – ಫೋಟೋಗಳಲ್ಲಿ ನೋಡಿ

    ಮುಂಬೈ: ಭಾರತ ನಂಬರ್ ಒನ್ ಶ್ರೀಮಂತ, ರಿಲಯನ್ಸ್ ಇಂಡಸ್ಟ್ರೀಸ್ ಕಂಪೆನಿಯ ಮುಖ್ಯಸ್ಥ ಮುಕೇಶ್ ಅಂಬಾನಿ ಪುತ್ರ ಅಕಾಶ್ ಅಂಬಾನಿ ವಜ್ರದ ಉದ್ಯಮಿಯೊಬ್ಬರ ಪುತ್ರಿಯನ್ನು ವರಿಸಲಿದ್ದಾರೆ.

    ಮುಕೇಶ್ ಅಂಬಾನಿ ಅವರ ಹಿರಿಯ ಪುತ್ರ ಅಕಾಶ್ ಮತ್ತು ವಜ್ರ ಉದ್ಯಮಿ ರಸೆಲ್ ಮೆಹ್ತಾ ಅವರ ಪುತ್ರಿ ಶ್ಲೋಕ ಮೆಹ್ತಾ ಅವರನ್ನು ವರಿಸಲಿದ್ದಾರೆ. ಎರಡು ಕುಟುಂಬಗಳ ಶನಿವಾರ ಗೋವಾದಲ್ಲಿ ಮಾತುಕತೆ ನಡೆಸಿವೆ ಎಂದು ವರದಿಯಾಗಿದೆ.

    ಸಮಾರಂಭದ ಕುರಿತ ಫೋಟೋಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು, ಸುಂದರ ವಾತಾವರಣವೊಂದರಲ್ಲಿ ಎರಡು ಕುಟುಂಬಗಳ ಸದಸ್ಯರು ಒಂದಾಗಿ ಸಂಭ್ರಮಾಚರಣೆ ನಡೆಸಿದ್ದಾರೆ. ಕೆಲ ಸ್ಥಳೀಯ ಮಾಧ್ಯಮಗಳು ಈ ಸಮಾರಂಭವನ್ನು ನಿಶ್ಚಿತಾರ್ಥ ಸಮಾರಂಭವೆಂದು ವರದಿ ಮಾಡಿವೆ. ಆದರೆ ಇದುವರೆಗೂ ಎರಡು ಕುಟುಂಬಗಳಿಂದ ಯಾವುದೇ ಅಧಿಕೃತವಾಗಿ ಯಾವುದೇ ಹೇಳಿಕೆ ಬಂದಿಲ್ಲ.

    ಮುಕೇಶ್ ಹಾಗೂ ನೀತಾ ಅಂಬಾನಿ ದಂಪತಿಗೆ ಇಬ್ಬರು ಪುತ್ರರಿದ್ದು ಅಕಾಶ್ (25) ಹಿರಿಯ ಪುತ್ರ. ಇನ್ನು ರಸೆಲ್ ಮೆಹ್ತಾ ಅವರಿಗೆ ಮೊನಾ, ಶ್ಲೋಕ ಮೆಹ್ತಾ ಎಂಬ ಇಬ್ಬರು ಪುತ್ರಿಯರಿದ್ದಾರೆ. ಶ್ಲೋಕ ಮೆಹ್ತಾ ಈಗಾಗಲೇ ಉದ್ಯಮಿಯಾಗಿದ್ದು, ರೊಸಿ ಬ್ಲೂ ಡೈಮಾಂಡ್ ಹೆಸರಿನ ಸಂಸ್ಥೆಯನ್ನು ಮುನ್ನಡೆಸುತ್ತಿದ್ದಾರೆ. ರೊಸಿ ಬ್ಲೂ ಡೈಮಾಂಡ್ ಸಂಸ್ಥೆ ಪ್ರಪಂಚದ ಪ್ರಮುಖ ವಜ್ರದ ಕಂಪೆನಿಗಳಲ್ಲಿ ಒಂದಾಗಿ ಗುರುತಿಸಿಕೊಂಡಿದೆ.

    ಅಕಾಶ್ ಹಾಗೂ ಶ್ಲೋಕ ಇಬ್ಬರು ಬಾಲ್ಯದ ಗೆಳೆಯರಾಗಿದ್ದು, ಮುಂಬೈನ ಧೀರೂಬಾಯಿ ಅಂಬಾನಿ ಅಂತರಾಷ್ಟ್ರೀಯ ಶಾಲೆಯಲ್ಲಿ ಓದಿದ್ದರು. ಶ್ಲೋಕಾ ಮೆಹ್ತಾ ಲಂಡನ್ ಸ್ಕೂಲ್ ಆಫ್ ಎಕಾನಮಿಕ್ಸ್ ನಲ್ಲಿ ಪದವಿ ಪಡೆದಿದ್ದು, ಕುಟುಂಬದ ಉದ್ಯಮಗಳನ್ನು ನಿರ್ವಹಿಸುತ್ತಿದ್ದಾರೆ. ಇನ್ನು ಅಕಾಶ್ ರಿಲಯನ್ಸ್ ಉದ್ಯಮ ಸಂಸ್ಥೆಗಳ ಬೋರ್ಡ್ ಆಫ್ ಡೈರೆಕ್ಟರ್ ಆಗಿ ನೇಮಕವಾಗಿದ್ದಾರೆ.

    ಕಳೆದ ಕೆಲ ದಿನಗಳ ಹಿಂದೆ ರಾಷ್ಟ್ರೀಯ ಸುದ್ದಿ ಮಾಧ್ಯಮಮೊಂದು ಆಯೋಜಿಸಿದ್ದ ಸಂವಾದ ಕಾಯಕ್ರಮದಲ್ಲಿ ಭಾಗವಹಿಸಿದ್ದ ನೀತಾ ಅಂಬಾನಿ, ತಮ್ಮ ಮಕ್ಕಳ ಜೀವನ ಸಂಗಾತಿಗಳ ಆಯ್ಕೆಯಲ್ಲಿ ಸ್ವಾತಂತ್ರ್ಯ ನೀಡಿರುವುದಾಗಿ ತಿಳಿಸಿದ್ದರು. ಇದನ್ನೂ ಓದಿ: ಮಗ 118 ಕೆಜಿ ತೂಕ ಇಳಿಸಿಕೊಂಡ ಗುಟ್ಟು ಬಿಚ್ಚಿಟ್ಟ ನೀತಾ ಅಂಬಾನಿ