Tag: Akash Vijayvargiya

  • ಅತ್ಯಾಚಾರಿ, ಕೊಲೆಗಡುಕರ ತಂದೆ ತಾಯಿಗಳನ್ನು ಒಂದೆರಡು ವರ್ಷ ಶಿಕ್ಷಿಸಿ: ಬಿಜೆಪಿ MLA ಆಕಾಶ್

    ಅತ್ಯಾಚಾರಿ, ಕೊಲೆಗಡುಕರ ತಂದೆ ತಾಯಿಗಳನ್ನು ಒಂದೆರಡು ವರ್ಷ ಶಿಕ್ಷಿಸಿ: ಬಿಜೆಪಿ MLA ಆಕಾಶ್

    ಭೋಪಾಲ್: ಮೊದಲು ಅತ್ಯಾಚಾರಿಗಳು ಮತ್ತು ಕೊಲೆಗಡುಗರ ತಂದೆ, ತಾಯಿಯನ್ನು ಒಂದೆರಡು ವರ್ಷ ಶಿಕ್ಷೆಗೆ ಗುರಿಪಡಿಸಬೇಕೆಂದು ಮಧ್ಯಪ್ರದೇಶದ ಬಿಜೆಪಿ (BJP) ಎಮ್‍ಎಲ್‍ಎ ಆಕಾಶ್ ವಿಜಯವರ್ಗಿಯಾ (Akash Vijayvargiya) ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.

    ಕಾರ್ಯಕ್ರಮವೊಂದರಲ್ಲಿ ವಿದ್ಯಾರ್ಥಿಗಳನ್ನು ಉದ್ದೇಶಿಸಿ ಮಾತನಾಡಿದ ಅವರು, ಇದೀಗ ಒಬ್ಬ ಅತ್ಯಾಚಾರಿ ಆರೋಪಿ ಇದ್ದರೆ ನನ್ನ ಅಭಿಪ್ರಾಯದ ಪ್ರಕಾರ ಆರೋಪಿಗೆ ಮಾತ್ರ ಶಿಕ್ಷೆಯಲ್ಲ. ಆತನ ತಂದೆ, ತಾಯಿಗೂ (Parents) ಒಂದೆರಡು ವರ್ಷ ಶಿಕ್ಷೆ ನೀಡಬೇಕು. ಯಾಕೆಂದರೆ ತಮ್ಮ ಮಕ್ಕಳನ್ನು ತಂದೆ, ತಾಯಿ ಸರಿಯಾಗಿ ಬೆಳೆಸದ ತಪ್ಪಿಗೆ ಈ ಶಿಕ್ಷೆ ಅನುಭವಿಸಬೇಕೆಂದಿದ್ದಾರೆ. ಇದನ್ನೂ ಓದಿ: ಶೀಲ ಶಂಕಿಸಿ ಗರ್ಭಿಣಿ ಪತ್ನಿಯನ್ನು ಕೊಲೆ ಮಾಡಿ ದಟ್ಟ ಕಾಡಲ್ಲಿ ಹೂತಾಕಿದ ಪತಿ – ತಿಂಗಳ ಹಿಂದೆಯೇ ಪ್ಲಾನ್

    ತಮ್ಮ ಮಕ್ಕಳನ್ನು ಉತ್ತಮ ಪ್ರಜೆಗಳನ್ನಾಗಿಸುವಲ್ಲಿ ಪೋಷಕರ ಪಾತ್ರ ಮಹತ್ವದ್ದಾಗಿರುತ್ತದೆ. ಮಕ್ಕಳು ಉತ್ತಮ ಕೆಲಸ ಮಾಡಿದಾಗ ಪೋಷಕರನ್ನು ಹೊಗಳುತ್ತಾರೆ. ಅದೇ ರೀತಿ ಮಕ್ಕಳು ಕೆಟ್ಟ ಕೆಲಸ ಮಾಡಿದಾಗ ಅದೇ ಪೋಷಕರು ಆ ಕೆಟ್ಟ ಕೆಲಸಕ್ಕೆ ಕಾರಣಕರ್ತರಾಗಿರುತ್ತಾರೆ ಎಂದಿದ್ದಾರೆ. ಇದನ್ನೂ ಓದಿ: ಸ್ವಂತ ಮಗಳನ್ನ ಗುಂಡಿಕ್ಕಿ ಕೊಂದು, ಸೂಟ್‌ಕೇಸ್‌ನಲ್ಲಿ ಬಿಸಾಡಿದ ತಂದೆ

    ಪೋಷಕರು ಮಕ್ಕಳನ್ನು ಬೆಳೆಸುವ ರೀತಿಯನ್ನು ಗಮನಿಸಬೇಕು. ಮಕ್ಕಳಿಗೆ ಉತ್ತಮ ವ್ಯಕ್ತಿತ್ವ ಮತ್ತು ಸಂಸ್ಕೃತಿಯನ್ನು ಕಲಿಸುವುದು ಪೋಷಕರ ಪಾತ್ರವಾಗಿರುತ್ತದೆ ಎಂದು ಅಭಿಪ್ರಾಯಪಟ್ಟಿದ್ದಾರೆ. ಇದೀಗ ಅಕಾಶ್ ಮಾತನಾಡಿರುವ ಈ ಹೇಳಿಕೆ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದ್ದು, ನೆಟ್ಟಿಗರು ಆಕಾಶ್ ಪರ ಮತ್ತು ವಿರೋಧ ಕಾಮೆಂಟ್‍ಗಳ ಮೂಲಕ ಚರ್ಚೆಯಾಗುತ್ತಿದೆ.

    Live Tv
    [brid partner=56869869 player=32851 video=960834 autoplay=true]

  • ಕ್ರಿಕೆಟ್ ಬ್ಯಾಟ್‍ನಿಂದ ಅಧಿಕಾರಿ ಮೇಲೆ ಹಲ್ಲೆ ಮಾಡಿದ್ದ ಬಿಜೆಪಿ ಶಾಸಕ ಅರೆಸ್ಟ್

    ಕ್ರಿಕೆಟ್ ಬ್ಯಾಟ್‍ನಿಂದ ಅಧಿಕಾರಿ ಮೇಲೆ ಹಲ್ಲೆ ಮಾಡಿದ್ದ ಬಿಜೆಪಿ ಶಾಸಕ ಅರೆಸ್ಟ್

    ಭೋಪಾಲ್: ಇಂದೋರ್ ಮುನ್ಸಿಪಲ್ ಕಾರ್ಪೊರೇಷನ್ ಅಧಿಕಾರಿ ಮೇಲೆ ಹಲ್ಲೆ ಮಾಡಿದ್ದ ಬಿಜೆಪಿ ಹಿರಿಯ ನಾಯಕ ಕೈಲಾಶ್ ವಿಜಯ್ ವರ್ಗೀಯ ಅವರ ಪುತ್ರ, ಇಂದೋರ್-3 ಕ್ಷೇತ್ರದ ಶಾಸಕ ಆಕಾಶ್ ವಿಜಯ್ ವರ್ಗೀಯ ಅವರನ್ನು ಪೊಲೀಸರು ಬಂಧಿಸಿದ್ದಾರೆ.

    ಇಂದೋರ್ ಮುನ್ಸಿಪಲ್ ಕಾರ್ಪೊರೇಷನ್ ಇಂದು ಒತ್ತುವರಿ ತೆರವು ಕಾರ್ಯಾಚರಣೆ ನಡೆಸುತ್ತಿತ್ತು. ಈ ವೇಳೆ ಬೆಂಬಲಿಗನೊಬ್ಬನ ಕಟ್ಟಡ ತೆರುವುಗೊಳಿಸಿದ್ದಕ್ಕೆ ಶಾಸಕ ಆಕಾಶ್ ವಿಜಯ್ ವರ್ಗೀಯ ಅವರು ಅಧಿಕಾರಿಯ ಮೇಲೆ ಹಲ್ಲೆ ಮಾಡಿದ್ದಾರೆ.

    ಆಗಿದ್ದೇನು?:
    ಇಂದೋರ್ ನಗರದಲ್ಲಿ ಒತ್ತುವರಿ ಮಾಡಿ ನಿರ್ಮಿಸಿದ್ದ ಕಟ್ಟಡಗಳನ್ನು ಇಂದು ಅಧಿಕಾರಿಗಳ ತೆರವು ಗೊಳಿಸುತ್ತಿದ್ದರು. ಆದರೆ ಶಾಸಕರು ತಮ್ಮ ಬೆಂಬಲಿಗನ ಕಟ್ಟಡ ತೆರವುಗೊಳಿಸದಂತೆ ಸೂಚನೆ ನೀಡಿದ್ದರು. ಇದಕ್ಕೆ ಕ್ಯಾರೆ ಎನ್ನದ ಅಧಿಕಾರಿಗಳು ಕಟ್ಟಡ ತೆರವುಗೊಳಿಸುತ್ತಿದ್ದರು. ಈ ವೇಳೆ ಅಲ್ಲಿಗೆ ಬಂದ ಶಾಸಕ ಆಕಾಶ್ ವಿಜಯ್ ವರ್ಗೀಯ ಅವರು ಅಧಿಕಾರಿಗೆ ಕ್ರಿಕೆಟ್ ಬ್ಯಾಟ್‍ನಿಂದ ಹೊಡೆದಿದ್ದಾರೆ. ಅಷ್ಟೇ ಅಲ್ಲದೆ ಶಾಸಕರ ಬೆಂಬಲಿಗರು ಅಧಿಕಾರಿಯ ಅಂಗಿ ಹಿಡಿದು ಎಳೆದಾಡಿದ್ದಾರೆ. ಘಟನೆಯಿಂದ ತಕ್ಷಣವೇ ಜಾಗೃತಗೊಂಡ ಪೊಲೀಸರು ಅಧಿಕಾರಿಯನ್ನು ರಕ್ಷಿಸಿದ್ದಾರೆ.

    ಮಾಧ್ಯಮಗಳ ಮುಂದೆ ಆಕಾಶ್ ವಿಜಯ್ ವರ್ಗೀಯ ಹಲ್ಲೆ ಮಾಡಿದ್ದು ದೃಶ್ಯ ಕ್ಯಾಮೆರಾದಲ್ಲಿ ಸೆರೆಯಾಗಿತ್ತು. ಈ ವಿಡಿಯೋ ವೈರಲ್ ಆಗಿದೆ. ಶಾಸಕರು ಮಾತ್ರ ತಪ್ಪಿಗೆ ಕ್ಷಮೆ ಕೇಳುವ ಬದಲು, ಆಡಳಿತ ಪಕ್ಷವರು ಈ ರೀತಿಯ ತೆರವು ಕಾರ್ಯಾಚರಣೆಗೆ ಇಳಿದಿದ್ದಾರೆ ಎಂದು ಆರೋಪಿಸಿದ್ದಾರೆ.