Tag: Akhil Akkineni

  • ಟಾಲಿವುಡ್‌ನಲ್ಲಿ ಕಿಸ್ಸಿಕ್ ಬೆಡಗಿಗೆ ಕೈತಪ್ಪಿತು ಮತ್ತೊಂದು ಅವಕಾಶ

    ಟಾಲಿವುಡ್‌ನಲ್ಲಿ ಕಿಸ್ಸಿಕ್ ಬೆಡಗಿಗೆ ಕೈತಪ್ಪಿತು ಮತ್ತೊಂದು ಅವಕಾಶ

    ಟಾಲಿವುಡ್‌ನ ಕಲಾವಿದರ ಕುಟುಂಬದಿಂದ ಬಂದ ನಟ ಅಖಿಲ್ ಅಕ್ಕಿನೇನಿ (Akhil Akkineni) ಸಿನಿಮಾ ರಂಗದಲ್ಲಿ ಮಾತ್ರ ಹೇಳಿಕೊಳ್ಳುವ ಮಟ್ಟಿಗೆ ಸಕ್ಸಸ್ ಕಾಣುತ್ತಿಲ್ಲ. ಅಣ್ಣ ನಾಗಚೈತನ್ಯ (Naga Chaitanya) ಕ್ಲಿಕ್ ಆಗಿದ್ದಾರೆ. ಆದರೆ ಅಖಿಲ್‌ಗೆ ಬ್ರೇಕ್ ಕೊಡುವ ಸಿನಿಮಾಗಳು ಸಿಗುತ್ತಿಲ್ಲ. 2023ರಲ್ಲಿ ತೆರೆಕಂಡ ಎಜೆಂಟ್ ಸಿನಿಮಾ ಭಾರೀ ಸೋಲು ಕಂಡಿತ್ತು. ಬಳಿಕ ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದರು ಅಖಿಲ್.

    2023ರಲ್ಲಿ ತೆರೆಕಂಡ ಎಜೆಂಟ್ ಸಿನಿಮಾ ಅಖಿಲ್ ಕೆರಿಯರ್‌ಗೆ ಭಾರೀ ಆಘಾತ ತಂದೊಡ್ಡಿತ್ತು. ಬಳಿಕ ಇದೇ ವರ್ಷ ಜೂನ್ 6ರಂದು ಮುಂಬೈ ಮೂಲದ ನಟಿ ಝೈನಬ್ ರಾವ್ದ್ಜೀ ಜೊತೆ ಹಸೆಮಣೆ ಏರಿದ್ದರು. ವೈವಾಹಕ ಜೀವನಕ್ಕೆ ಕಾಲಿಟ್ಟ ಬಳಿಕ ಲೆನಿನ್ ಸಿನಿಮಾದ ಕೆಲಸಗಳಲ್ಲಿ ತೊಡಗಿಕೊಳ್ಳಲು ಪ್ಲ್ಯಾನ್‌ ನಡೆಸಿದ್ದಾರೆ.  ಇದನ್ನೂ ಓದಿ: ಅಲ್ಲು ಅರ್ಜುನ್ ಜೊತೆ ಪ್ರಶಾಂತ್ ನೀಲ್ ʻರಾವಣಂʼ

    ಈ ಸಿನಿಮಾದ ನಾಯಕಿಯಾಗಿ ಮೊದಲಿಗೆ ನಟಿ ಶ್ರೀಲೀಲಾ (Sreeleela) ಅವರನ್ನು ಆಯ್ಕೆ ಮಾಡಲಾಗಿತ್ತು ಚಿತ್ರತಂಡ. ಇದೀಗ ಈ ಸಿನಿಮಾದಿಂದ ಶ್ರೀಲೀಲಾಗೆ ಗೆಟ್‌ಪಾಸ್ ಕೊಡಲಾಗಿದೆಯಂತೆ. ಶ್ರೀಲೀಲಾ ಜಾಗಕ್ಕೆ ನಟಿ ಭಾಗ್ಯಶ್ರೀ ಬೋರ್ಸೆ ಅವರನ್ನು ಆಯ್ಕೆ ಮಾಡಲಾಗಿದೆ. ಈ ಮೊದಲು ಭಾಗ್ಯಶ್ರೀ ಯಾರಿಯಾನ್-2, ಚಂದು ಚಾಂಪಿಯನ್ ಚಿತ್ರದಲ್ಲಿ ನಟಿಸಿದ್ದಾರೆ. ಇದನ್ನೂ ಓದಿ: ಕಬಿನಿ ಡ್ಯಾಂಗೆ ಶಿವಣ್ಣ ದಂಪತಿ ಭೇಟಿ

    ಭಾಗ್ಯಶ್ರೀ ಬೋರ್ಸೆ ಸದ್ಯ ವಿಜಯ್ ದೇವರಕೊಂಡ (Vijay Devarakonda) ಅವರ ಕಿಂಗ್‌ಡಮ್ ಸಿನಿಮಾದಲ್ಲಿ ನಟಿಸುತ್ತಿದ್ದಾರೆ. ಇದೀಗ ಮತ್ತೆ ಟಾಲಿವುಡ್‌ನಲ್ಲಿ ಮತ್ತೊಂದು ಅವಕಾಶ ಗಿಟ್ಟಿಸಿಕೊಂಡಿದ್ದಾರೆ. ಈ ಮೂಲಕ ಕಿಸ್ಸಿಕ್ ಬೆಡಗಿಗೆ ಮತ್ತೊಂದು ಅವಕಾಶ ಕೈತಪ್ಪಿದೆ.

  • ಗರ್ಲ್ ಫ್ರೆಂಡ್ ಝೈನಬ್ ಮದ್ವೆಯಾದ ನಾಗಾರ್ಜುನ ಪುತ್ರ ಅಖಿಲ್

    ಗರ್ಲ್ ಫ್ರೆಂಡ್ ಝೈನಬ್ ಮದ್ವೆಯಾದ ನಾಗಾರ್ಜುನ ಪುತ್ರ ಅಖಿಲ್

    ತೆಲಗು ನಟ ನಾಗಾರ್ಜುನ (Nagarjuna) ಅವರ ಮಗ ಅಖಿಲ್ ಅಕ್ಕಿನೇನಿ (Akhil Akkineni) ತಮ್ಮ ಗೆಳತಿ ಝೈನಾಬ್ (Zainab Ravdjee) ಅವರನ್ನು ಮದುವೆಯಾಗಿದ್ದಾರೆ. ಮದುವೆ ಹೈದರಾಬಾದ್‌ನ ಅನ್ನಪೂರ್ಣ ಸ್ಟುಡಿಯೋದಲ್ಲಿ ನೆರವೇರಿದೆ.

    ಮದುವೆಯ ಫೊಟೋಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗಿವೆ. ಚಿತ್ರದಲ್ಲಿ ಅಖಿಲ್ ಬಿಳಿ ಕುರ್ತಾ ಮತ್ತು ಧೋತಿಯಲ್ಲಿ ಧರಿಸಿದ್ದು, ಜೈನಾಬ್ ಬಿಳಿ ರೇಷ್ಮೆ ಸೀರೆಯನ್ನು ಧರಿಸಿದ್ದರು. ಇನ್ನೂ ಮದುವೆ ನಡೆದ ಅನ್ನಪೂರ್ಣ ಸ್ಟುಡಿಯೋವನ್ನು ಅಖಿಲ್ ಅವರ ಅಜ್ಜ, ದಂತಕಥೆ ನಟ ಅಕ್ಕಿನೇನಿ ನಾಗೇಶ್ವರ ರಾವ್ ಸ್ಥಾಪನೆ ಮಾಡಿದ್ದರು.

    ಸಮಾರಂಭದಲ್ಲಿ ಚಿರಂಜೀವಿ, ರಾಮ್ ಚರಣ್ ಮತ್ತು ಅವರ ಪತ್ನಿ ಉಪಾಸನ, ಶೋಭಿತಾ ಧೂಲಿಪಾಲ ಮತ್ತು ನಾಗ ಚೈತನ್ಯ ಸೇರಿದಂತೆ ತೆಲುಗು ಚಲನಚಿತ್ರೋದ್ಯಮದ ಹಲವಾರು ಪ್ರಮುಖ ನಟ ನಟಿಯರು ಪಾಲ್ಗೊಂಡಿದ್ದರು. ವಿವಾಹಕ್ಕೂ ಮುನ್ನ ಉತ್ಸಾಹಭರಿತ ಬರಾತ್ ಸಮಾರಂಭವನ್ನು ನಡೆಸಲಾಯಿತು, ಅಲ್ಲಿ ಚೈತನ್ಯ ಸಾಂಪ್ರದಾಯಿಕ ಕೆಂಪು ಕುರ್ತಾದಲ್ಲಿ ನೃತ್ಯ ಪ್ರದರ್ಶನ ಮಾಡಿ ಗಮನ ಸೆಳೆದರು.

    ನಿರ್ದೇಶಕ ಪ್ರಶಾಂತ್ ನೀಲ್, ಚಿರಂಜೀವಿ, ದಗ್ಗುಬಾಟಿ ವೆಂಕಟೇಶ್ ಮತ್ತು ನಾಗಾರ್ಜುನ ಸೇರಿದಂತೆ ಅನೇಕ ಅತಿಥಿಗಳು ಸಹ ವಿವಾಹದಲ್ಲಿ ಭಾಗಿಯಾಗಿದ್ದರು. ಅಖಿಲ್ ಮತ್ತು ಝೈನಾಬ್‌ರ ನಿಶ್ಚಿತಾರ್ಥ ಕಳೆದ ನವೆಂಬರ್‌ನಲ್ಲಿ ನಡೆದಿತ್ತು. ಇದಕ್ಕೂ ಮೊದಲು ಎರಡು ವರ್ಷಗಳ ಕಾಲ ಅವರು ಡೇಟಿಂಗ್‌ನಲ್ಲಿದ್ದರು.

    ಅಖಿಲ್ ತಮ್ಮ ತಂದೆಯ ಚಲನಚಿತ್ರ ಸಿಸಿಂದ್ರಿದಲ್ಲಿ ಬಾಲನಟನಾಗಿ ತಮ್ಮ ಚಲನಚಿತ್ರ ವೃತ್ತಿಜೀವನವನ್ನು ಪ್ರಾರಂಭಿಸಿದರು ಮತ್ತು ನಂತರ ಏಜೆಂಟ್ (2023), ಮಿಸ್ಟರ್ ಮಜ್ನು (2019), ಹಲೋ! (2017) ಮತ್ತು ಅಖಿಲ್ (2015) ಸೇರಿದಂತೆ ಹಲವಾರು ಚಿತ್ರಗಳಲ್ಲಿ ನಟಿಸಿದ್ದಾರೆ.

  • ಜೂನ್‌ನಲ್ಲಿ ಝೈನಾಬ್ ಜೊತೆ ಅಖಿಲ್ ಅಕ್ಕಿನೇನಿ ಮದುವೆ?

    ಜೂನ್‌ನಲ್ಲಿ ಝೈನಾಬ್ ಜೊತೆ ಅಖಿಲ್ ಅಕ್ಕಿನೇನಿ ಮದುವೆ?

    ನಾಗಾರ್ಜುನ ಅಕ್ಕಿನೇನಿ ಪುತ್ರ ಅಖಿಲ್ ಅಕ್ಕಿನೇನಿ (Akhil Akkineni) ಹಸೆಮಣೆ ಏರಲು ಸಿದ್ಧರಾಗಿದ್ದಾರೆ. ಜೂನ್‌ನಲ್ಲಿ ಗೆಳತಿ ಝೈನಾಬ್ ಜೊತೆ ಅಖಿಲ್ ಮದುವೆ ಫಿಕ್ಸ್ ಆಗಿದೆ ಎನ್ನಲಾದ ಸುದ್ದಿಯೊಂದು ಹರಿದಾಡುತ್ತಿದೆ. ಇದನ್ನೂ ಓದಿ:ಕನ್ನಡ ತಮಿಳಿನಿಂದ ಹುಟ್ಟಿದೆ ಎಂದ ಕಮಲ್ ಹಾಸನ್ ಮಾತು ಒಪ್ಪಲ್ಲ- ಜಗ್ಗೇಶ್ ಖಂಡನೆ

    ಬಹುಕಾಲದ ಗೆಳತಿ ಝೈನಾಬ್ (Jainab (Ravdjee) ಜೊತೆ ಅಖಿಲ್ ಜೂನ್ 6ರಂದು ಹಸೆಮಣೆ ಏರಲಿದ್ದಾರೆ ಎನ್ನಲಾಗಿದೆ. ಹೈದರಾಬಾದ್‌ನ ಅನ್ನಪೂರ್ಣ ಸ್ಟುಡಿಯೋದಲ್ಲಿ ಮದುವೆ ನಡೆಯಲಿದೆ ಎಂದು ವರದಿ ಆಗಿದೆ. ಬಳಿಕ ರಾಜಸ್ಥಾನದಲ್ಲಿ ಅದ್ಧೂರಿಯಾಗಿ ಮದುವೆ ಆರತಕ್ಷತೆ ಕಾಯಕ್ರಮ ಜರುಗಲಿದೆ ಎನ್ನಲಾಗಿದೆ. ಈ ಬಗ್ಗೆ ಅಕ್ಕಿನೇನಿ ಕುಟುಂಬದಿಂದ ಅಧಿಕೃತ ಮಾಹಿತಿ ಘೋಷಿಸಬೇಕಿದೆ. ಇದನ್ನೂ ಓದಿ:ಹೃತಿಕ್ ರೋಷನ್ ಜೊತೆ ಸಿನಿಮಾ- ‘ಹೊಂಬಾಳೆ ಫಿಲಂಸ್’ನಿಂದ ಗುಡ್ ನ್ಯೂಸ್

    ಝೈನಾಬ್ ರಾವಡ್ಜಿ ಅವರನ್ನು ಅಖಿಲ್ 2 ವರ್ಷಗಳಿಂದ ಪ್ರೀತಿಸುತ್ತಿದ್ದರು. ಕಳೆದ ವರ್ಷ ನವೆಂಬರ್‌ನಲ್ಲಿ ಎಂಗೇಜ್‌ಮೆಂಟ್ ಮಾಡಿಕೊಂಡರು. ಈ ಬಗ್ಗೆ ಸ್ವತಃ ನಾಗಾರ್ಜುನ ರಿವೀಲ್ ಮಾಡಿದ್ದರು.

  • ಹಳ್ಳಿ ಹುಡುಗಿ ಗೆಟಪ್‌ನಲ್ಲಿ ‘ಕಿಸ್’ ನಟಿ- ಅಖಿಲ್ ಅಕ್ಕಿನೇನಿಗೆ ಶ್ರೀಲೀಲಾ ಜೋಡಿ

    ಹಳ್ಳಿ ಹುಡುಗಿ ಗೆಟಪ್‌ನಲ್ಲಿ ‘ಕಿಸ್’ ನಟಿ- ಅಖಿಲ್ ಅಕ್ಕಿನೇನಿಗೆ ಶ್ರೀಲೀಲಾ ಜೋಡಿ

    ನ್ನಡದ ಕಿಸ್ ನಟಿ ಶ್ರೀಲೀಲಾ (Sreeleela) ತೆಲುಗು ಹಾಗೂ ಬಾಲಿವುಡ್‌ನಲ್ಲಿ ಬ್ಯುಸಿಯಾಗಿದ್ದಾರೆ. ‘ಪುಷ್ಪ 2’ ಕಿಸ್ಸಿಸ್ ಹಾಡಿನ ಸಕ್ಸಸ್ ಹಾಗೂ ‘ರಾಬಿನ್‌ಹುಡ್’ ಚಿತ್ರದ ಬಳಿಕ ಮತ್ತೊಂದು ಬಗ್ಗೆ ಗುಡ್ ನ್ಯೂಸ್ ಕೊಟ್ಟಿದ್ದಾರೆ. ರಗಡ್ ಅವತಾರ ತಾಳಿರೋ ಅಖಿಲ್ (Akhil Akkineni) ಜೊತೆ ಹಳ್ಳಿ ಹುಡುಗಿಯ ಗೆಟಪ್‌ನಲ್ಲಿ ಶ್ರೀಲೀಲಾ ಎಂಟ್ರಿ ಕೊಟ್ಟಿದ್ದಾರೆ. ಚಿತ್ರದ ಟೈಟಲ್ ಸಮೇತ ಫಸ್ಟ್ ಲುಕ್ ರಿವೀಲ್ ಆಗಿದೆ.‌ ಇದನ್ನೂ ಓದಿ:ಏ.16ರಿಂದ ‘ಬಿಲ್ಲ ರಂಗ ಭಾಷಾ’ ಚಿತ್ರದ ಶೂಟಿಂಗ್ ಆರಂಭ- ಅಪ್‌ಡೇಟ್ ಕೊಟ್ರು ಕಿಚ್ಚ

    ಹೆಚ್ಚು ಗ್ಲ್ಯಾಮರಸ್ ಪಾತ್ರಗಳಿಂದ ಗುರುತಿಸಿಕೊಂಡಿದ್ದ ಶ್ರೀಲೀಲಾ ‘ಭಗವಂತ ಕೇಸರಿ’ ಚಿತ್ರದ ಬಳಿಕ ಮತ್ತೊಮ್ಮೆ ಹಳ್ಳಿ ಹುಡುಗಿಯ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ಹೊಸ ಸಿನಿಮಾದಲ್ಲಿ ಖಡಕ್ ಆಗಿ ಡೈಲಾಗ್ ಹೊಡೆದು ರಗಡ್ ಅವತಾರ ತಾಳಿರೋ ಅಖಿಲ್‌ಗೆ ಶ್ರೀಲೀಲಾ ನಾಯಕಿಯಾಗಿದ್ದಾರೆ. ಈ ಸಿನಿಮಾಗೆ ‘ಲೆನಿನ್’ (Lenin) ಎಂದು ಟೈಟಲ್ ಇಡಲಾಗಿದೆ. ಈ ಚಿತ್ರದ ಮೊದಲ ಝಲಕ್ ನೋಡಿ ಫ್ಯಾನ್ಸ್ ಮೆಚ್ಚುಗೆ ಸೂಚಿಸಿದ್ದಾರೆ. ಇದನ್ನೂ ಓದಿ:‘ಸಿಕಂದರ್’ ಸೋಲಿನ ಹಿನ್ನೆಲೆ ಪ್ರಭಾಸ್ ಚಿತ್ರದಿಂದ ರಶ್ಮಿಕಾ ಮಂದಣ್ಣ ಔಟ್?

     

    View this post on Instagram

     

    A post shared by Akhil Akkineni (@akkineniakhil)

    ಈ ಸಿನಿಮಾವನ್ನು ಮುರುಳಿ ಕಿಶೋರ್ ಅಬ್ಬರು ನಿರ್ದೇಶನ ಮಾಡುತ್ತಿದ್ದಾರೆ. ಸಿತಾರಾ ಸಂಸ್ಥೆ ಜೊತೆ ಅನ್ನಪೂರ್ಣ ಸ್ಟುಡಿಯೋ ಜಂಟಿಯಾಗಿ ಈ ಚಿತ್ರವನ್ನು ನಿರ್ಮಾಣ ಮಾಡುತ್ತಿದೆ.

    ಅಂದಹಾಗೆ, ಉಸ್ತಾದ್ ಭಗತ್ ಸಿಂಗ್, ಆಶಿಕಿ 3, ಮಾಸ್ ಜಾತ್ರಾ, ಜ್ಯೂನಿಯರ್ ಸೇರಿದಂತೆ ಹಲವು ಸಿನಿಮಾಗಳು ನಟಿಯ ಕೈಯಲ್ಲಿವೆ.

  • ಝೈನಾಬ್ ಜೊತೆ ಗುಟ್ಟಾಗಿ ಎಂಗೇಜ್‌ಮೆಂಟ್ ಮಾಡಿಕೊಂಡ ಅಖಿಲ್ ಅಕ್ಕಿನೇನಿ

    ಝೈನಾಬ್ ಜೊತೆ ಗುಟ್ಟಾಗಿ ಎಂಗೇಜ್‌ಮೆಂಟ್ ಮಾಡಿಕೊಂಡ ಅಖಿಲ್ ಅಕ್ಕಿನೇನಿ

    ಟಾಲಿವುಡ್ ನಟ ನಾಗಾರ್ಜುನ ಅವರ ಪುತ್ರ ಅಖಿಲ್ ಅಕ್ಕಿನೇನಿ (Akhil Akkineni) ಅವರು ಝೈನಾಬ್ ರಾವಡ್ಜಿ (Zainab Ravdjee) ಅವರೊಂದಿಗೆ ಗುಟ್ಟಾಗಿ ನಿಶ್ಚಿತಾರ್ಥ ಮಾಡಿಕೊಂಡಿದ್ದಾರೆ. ಸಾಮಾಜಿಕ ಜಾಲತಾಣದಲ್ಲಿ ನಾಗಾರ್ಜುನ ಈ ಸುದ್ದಿಯನ್ನು ಹಂಚಿಕೊಂಡಿದ್ದು, ಯುವ ಜೋಡಿಗೆ ಶುಭ ಹಾರೈಸುವಂತೆ ಕೇಳಿದ್ದಾರೆ. ಇದನ್ನೂ ಓದಿ:ಡಿವೋರ್ಸ್ ಬಳಿಕ ಸೆಕೆಂಡ್ ಹ್ಯಾಂಡ್ ಎಂದು ಟೀಕಿಸಿದರು: ಸಮಂತಾ

    ನಾಗಚೈತನ್ಯ ಅವರ ಎರಡನೇ ಮದುವೆಗೆ ಮುನ್ನವೇ ಅಖಿಲ್ ನಿಶ್ಚಿತಾರ್ಥ ನೆರವೇರಿದೆ. ಗುಟ್ಟಾಗಿ ಅಖಿಲ್ ಎಂಗೇಜ್‌ಮೆಂಟ್ ನಡೆದಿದ್ದು, ಇದೀಗ ಅಭಿಮಾನಿಗಳಿಗೆ ಗುಡ್ ನ್ಯೂಸ್ ಕೊಟ್ಟಿದ್ದಾರೆ. ನಮ್ಮ ಮಗನ ನಿಶ್ಚಿತಾರ್ಥವನ್ನು ಘೋಷಿಸಲು ನಮಗೆ ಸಂತೋಷವಾಗುತ್ತಿದೆ. ಅಖಿಲ್ ಅಕ್ಕಿನೇನಿ ಹಾಗೂ ನಮ್ಮ ಸೊಸೆಗೆ ಝೈನಾಬ್ ರಾವಡ್ಜಿ ಅವರ ನಿಶ್ಚಿತಾರ್ಥವನ್ನು ನೆರವೇರಿಸಿದ್ದೇವೆ. ಝೈನಾಬ್ ಅವರನ್ನು ನಮ್ಮ ಕುಟುಂಬಕ್ಕೆ ಸ್ವಾಗತಿಸುತ್ತಿರುವುದಕ್ಕೆ ಅತ್ಯಂತ ಸಂತಸವಾಗುತ್ತಿದೆ. ಯುವ ದಂಪತಿಗಳನ್ನು ಅಭಿನಂದಿಸಲು ದಯವಿಟ್ಟು ನಮ್ಮೊಂದಿಗೆ ಸೇರಿ ಮತ್ತು ಅವರಿಗೆ ಪ್ರೀತಿ, ಸಂತೋಷ ಮತ್ತು ನಿಮ್ಮ ಆಶೀರ್ವಾದ ನೀಡಿ ಹಾರೈಸಬೇಕು ಎಂದು ಮನವಿ ಮಾಡಿದ್ದಾರೆ.

    ಅಂದಹಾಗೆ, ಈ ಹಿಂದೆ ಶ್ರಿಯಾ ಭೂಪಾಲ್ ಎಂಬುವವರ ಜೊತೆ ಅಖಿಲ್ ನಿಶ್ಚಿತಾರ್ಥ ನಡೆದಿತ್ತು. ಕೆಲ ಮನಸ್ತಾಪಗಳಿಂದ ಈ ಜೋಡಿ ಬ್ರೇಕಪ್‌ ಮಾಡಿಕೊಂಡರು. ಈಗ ಝೈನಾಬ್ ಜೊತೆ ಅಖಿಲ್ ಎಂಗೇಜ್ ಆಗಿದ್ದಾರೆ.

  • ಮಾಜಿ ಪತಿಯ ಕುಟುಂಬದ ಜೊತೆ ಟಚ್‌ನಲ್ಲಿದ್ದಾರೆ ಸಮಂತಾ

    ಮಾಜಿ ಪತಿಯ ಕುಟುಂಬದ ಜೊತೆ ಟಚ್‌ನಲ್ಲಿದ್ದಾರೆ ಸಮಂತಾ

    ಟಾಲಿವುಡ್ ನಟಿ ಸಮಂತಾ (Samantha)  ಸದ್ಯ ಬಾಲಿವುಡ್‌ನಲ್ಲಿ (Bollywood) ಬ್ಯುಸಿಯಾಗಿದ್ದಾರೆ. ಅನಾರೋಗ್ಯದಿಂದ ಚೇತರಿಸಿಕೊಂಡಿರುವ ನಟಿ ಮತ್ತೆ ಸಿನಿಮಾಗೆ ಕಮ್‌ಬ್ಯಾಕ್ ಮಾಡಿದ್ದಾರೆ. ಇದರ ನಡುವೆ ಇದೀಗ ಮತ್ತೆ ಸಮಂತಾರ ವೈಯಕ್ತಿಕ ವಿಚಾರವೊಂದು ಚರ್ಚೆಗೆ ಗ್ರಾಸವಾಗಿದೆ. ಮಾಜಿ ಪತಿ ನಾಗಚೈತನ್ಯ ಸಹೋದರ ಅಖಿಲ್ (Akhil Akkineni) ಜೊತೆ ಸಮಂತಾ ಟಚ್‌ನಲ್ಲಿದ್ದಾರೆ.

    ನಾಗಚೈತನ್ಯ ಜೊತೆ ಸಮಂತಾ ಡಿವೋರ್ಸ್ ಆಗಿ 3 ವರ್ಷಗಳು ಕಳೆದಿವೆ. ದಾಂಪತ್ಯ ಜೀವನಕ್ಕೆ ಅಂತ್ಯ ಹಾಡಿದ ಮೇಲೆ ಇಬ್ಬರೂ ತಮ್ಮ ಬದುಕಿನಲ್ಲಿ ಬ್ಯುಸಿಯಾಗಿದ್ದಾರೆ. ಮಾಜಿ ಪತಿ ಮತ್ತು ಅವರ ಆಪ್ತರ ಜೊತೆ ಸಮಂತಾ ಒಡನಾಟದಿಂದ ದೂರವಿದ್ದಾರೆ. ಆದರೆ ನಾಗಚೈತನ್ಯ ಸಹೋದರ ಅಖಿಲ್ ಅಕ್ಕಿನೇನಿ ಜೊತೆ ಸಮಂತಾ ಫ್ರೆಂಡ್‌ಶಿಪ್ ಇಂದಿಗೂ ಮುಂದೂವರೆದಿದೆ.

    ಅಖಿಲ್ ಅಕ್ಕಿನೇನಿ 30ನೇ ವರ್ಷದ ಹುಟ್ಟುಹಬ್ಬಕ್ಕೆ ನಟಿ ಸಮಂತಾ ವಿಶೇಷವಾಗಿ ಶುಭಕೋರಿದ್ದಾರೆ. ಹ್ಯಾಪಿ ಬರ್ತ್‌ಡೇ ಅಖಿಲ್. ನಿಮಗೆ ಒಳ್ಳೆದಾಗಲಿ, ದೇವರು ಒಳ್ಳೆಯದು ಮಾಡಲಿ ಎಂದು ಸಮಂತಾ ಶುಭಕೋರಿದ್ದಾರೆ. ಇದು ಫ್ಯಾನ್ಸ್‌ಗೆ ಅಚ್ಚರಿ ಮೂಡಿಸಿದೆ. ಇದನ್ನೂ ಓದಿ:ಸಾಯಿಬಾಬಾ ಮಂದಿರ ನಿರ್ಮಿಸಿ ತಾಯಿ ಕನಸು ಈಡೇರಿಸಿದ ನಟ ವಿಜಯ್

    ಅಖಿಲ್ ಬರ್ತ್‌ಡೇಗೆ ಮಾತ್ರವಲ್ಲ. ಅವರ ಸಿನಿಮಾಗಳ ಪೋಸ್ಟರ್ ಶೇರ್ ಮಾಡಿ ಸಿನಿ ಕೆರಿಯರ್‌ಗೂ ಶುಭಹಾರೈಸಿದ್ದು ಇದೆ. ಹೀಗೆ ಅಕ್ಕಿನೇನಿ ಕುಟುಂಬದ ಜೊತೆ ಒಡನಾಟ ಹೊಂದಿರುವ ಸಮಂತಾ ಮುಂದೆ ಮತ್ತೆ ನಾಗಚೈತನ್ಯ ಜೊತೆ ಒಂದಾಗಲಿ ಎಂದು ಫ್ಯಾನ್ಸ್ ಆಶಿಸುತ್ತಿದ್ದಾರೆ. ಮತ್ತೆ ಜೋಡಿ ಸಿಹಿಸುದ್ದಿ ಕೊಡಲಿ ಅಭಿಮಾನಿಗಳು ಎದುರು ನೋಡ್ತಿದ್ದಾರೆ.

  • ‘ಏಜೆಂಟ್’ ಸಿನಿಮಾ ಸೋಲಿನ ಬೆನ್ನಲ್ಲೇ ಪತ್ರ ಬರೆದ ಅಖಿಲ್ ಅಕ್ಕಿನೇನಿ

    ‘ಏಜೆಂಟ್’ ಸಿನಿಮಾ ಸೋಲಿನ ಬೆನ್ನಲ್ಲೇ ಪತ್ರ ಬರೆದ ಅಖಿಲ್ ಅಕ್ಕಿನೇನಿ

    ಸ್ಟಾರ್ ನಟ ನಾಗಾರ್ಜುನ (Nagarjuna) ಪುತ್ರ ಅಖಿಲ್ ಅಕ್ಕಿನೇನಿ (Akhil Akkineni) ನಟನೆಯ ‘ಏಜೆಂಟ್’ (Agent) ಸಿನಿಮಾದ ಸೋಲಿಗೆ ನೆಟ್ಟಿಗರಿಂದ ಭಾರೀ ಟೀಕೆಗೆ ಒಳಗಾಗಿದ್ದರು. ‘ಏಜೆಂಟ್’ ಚಿತ್ರದ ಹೀನಾಯ ಸೋಲಿನ (Flop) ಬೆನ್ನಲ್ಲೇ ಅಖಿಲ್ ಅಭಿಮಾನಿಗಳಿಗೆ ಬಹಿರಂಗ ಪತ್ರ ಬರೆದಿದ್ದಾರೆ.

    2015ರಲ್ಲಿ ‘ಅಖಿಲ್’ (Akhil) ಸಿನಿಮಾ ಸಿನಿರಂಗಕ್ಕೆ ಕಾಲಿಟ್ಟ ಅಖಿಲ್ ಅಕ್ಕಿನೇನಿ, ಸಾಕಷ್ಟು ಸಿನಿಮಾಗಳಲ್ಲಿ ನಟಿಸಿದ್ದರು. ಆದರೂ ಅವರಿಗೆ ಹೇಳಿಕೊಳ್ಳುವಂತಹ ಬ್ರೇಕ್ ಸಿಗಲಿಲ್ಲ. ಇತ್ತೀಚಿಗೆ ‘ಏಜೆಂಜ್’ ಚಿತ್ರದ ಮೂಲಕ ಗ್ರ್ಯಾಂಡ್ ಎಂಟ್ರಿ ಕೊಟ್ರು ಕೂಡ ಬಾಕ್ಸಾಫೀಸ್‌ನಲ್ಲಿ ಸಿನಿಮಾ ಮಕಾಡೆ ಮಲಗಿತ್ತು. ಅಖಿಲ್ ಸಿನಿಮಾ ಟ್ರೋಲಿಗರ (Troll) ಬಾಯಿಗೆ ಆಹಾರವಾಗಿತ್ತು. ಚಿತ್ರಕ್ಕೆ ಹಾಕಿದ ಬಂಡವಾಳ ಗಳಿಸುವುದರಲ್ಲೂ ಏಡವಿತ್ತು. ಇದನ್ನೂ ಓದಿ:ಪವಿತ್ರಾ ಲೋಕೇಶ್ ಗೆ ಪ್ರೀತಿಯಿಂದ ‘ಅಮ್ಮು’ ಎಂದು ಕರೆಯುತ್ತೇನೆ : ನಟ ನರೇಶ್

    ನಟ ಅಖಿಲ್ ಅಕ್ಕಿನೇನಿ ‘ಏಜೆಂಟ್’ ಸಿನಿಮಾ ಬಗ್ಗೆ ಬಹಿರಂಗ ಪತ್ರ ಬರೆದಿದ್ದಾರೆ. ‘ಏಜೆಂಟ್ ಚಿತ್ರತಂಡಕ್ಕೆ, ಈ ಸಿನಿಮಾ ನಿರ್ಮಾಣಕ್ಕೆ ತಮ್ಮ ಜೀವನವನ್ನು ಪಣವಾಗಿಟ್ಟ ಪ್ರತಿಯೊಬ್ಬರಿಗೂ ಧನ್ಯವಾದ. ಎಷ್ಟೇ ಕಷ್ಟ ಬಿದ್ದರೂ ದುರದೃಷ್ಟವಶಾತ್ ನಾವು ಅಂದುಕೊಂಡಿದ್ದನ್ನು ತೆರೆಮೇಲೆ ತರಲು ಸಾಧ್ಯವಾಗಲಿಲ್ಲ. ಆ ಮೂಲಕ ಒಳ್ಳೆ ಸಿನಿಮಾ ಕೊಡಲು ಸಾಧ್ಯವಾಗಲಿಲ್ಲ. ನನಗೆ ಬೆಂಬಲವಾಗಿ ನಿಂತ ನಿರ್ಮಾಪಕ ಅನಿಲ್ ಸುಂಕರ ಅವರಿಗೆ ಕೃತಜ್ಞತೆಗಳು.

     

    View this post on Instagram

     

    A post shared by Akhil Akkineni (@akkineniakhil)

    ನಮ್ಮ ಸಿನಿಮಾ ನಂಬಿದ ವಿತರಕರು, ಬೆಂಬಲಕ್ಕೆ ನಿಂತ ಮಾಧ್ಯಮಗಳಿಗೆ ಧನ್ಯವಾದಗಳು. ಅಭಿಮಾನಿಗಳು- ಶ್ರೇಯೋಭಿಲಾಷಿಗಳ ಪ್ರೀತಿಯಿಂದಲೇ ನಾನು ಕಷ್ಟ ಬಿದ್ದು ಕೆಲಸ ಮಾಡುತ್ತಿದ್ದೇನೆ. ನನ್ನ ಮೇಲೆ ನಂಬಿಕೆ ಇಟ್ಟುಕೊಂಡವರಿಗೆ ಮತ್ತಷ್ಟು ಗಟ್ಟಿಯಾಗಿ ವಾಪಸ್ ಬರ್ತೀನಿ ಎಂದು ಅಖಿಲ್ ಬರೆದುಕೊಂಡಿದ್ದಾರೆ. ಬಹುಕೋಟಿ ವೆಚ್ಚದಲ್ಲಿ ನಿರ್ಮಾಣ ಆಗಿದ್ದ ಈ ಚಿತ್ರದಲ್ಲಿ ಮಲಯಾಳಂ ನಟ ಮಮ್ಮುಟ್ಟಿ ಕೂಡ ಪ್ರಮುಖ ಪಾತ್ರದಲ್ಲಿ ನಟಿಸಿದ್ದರು.

  • ಅಖಿಲ್ ಅಕ್ಕಿನೇನಿ ಜೊತೆ ಜಾನ್ವಿ ಕಪೂರ್ ರೊಮ್ಯಾನ್ಸ್

    ಅಖಿಲ್ ಅಕ್ಕಿನೇನಿ ಜೊತೆ ಜಾನ್ವಿ ಕಪೂರ್ ರೊಮ್ಯಾನ್ಸ್

    ಹುಭಾಷಾ ನಟಿಯಾಗಿ ಶ್ರೀದೇವಿ ಕಪೂರ್ (Sridevi Kapoor)  ಜನಪ್ರಿಯತೆ ಗಳಿಸಿದ್ದರು. ಅಮ್ಮನ ಹಾದಿಯಲ್ಲೇ ಪುತ್ರಿ ಜಾನ್ವಿ ಕಪೂರ್ (Janhavi Kapoor) ಕೂಡ ಹೆಜ್ಜೆ ಇಡ್ತಿದ್ದಾರೆ. ದಕ್ಷಿಣದ ಸಿನಿಮಾಗಳತ್ತ ಜಾನ್ವಿ ಕಪೂರ್ ಹೆಚ್ಚು ಗಮನ ನೀಡ್ತಿದ್ದಾರೆ.

    ಮಿಲಿ, ಗುಡ್ ಲಕ್ ಜರ‍್ರಿ ಸಿನಿಮಾಗಳ ಮೂಲಕ ಬಾಲಿವುಡ್‌ನಲ್ಲಿ (Bollywood) ಮೋಡಿ ಮಾಡಿರುವ ಹಾಟ್ ಬ್ಯೂಟಿ ಜಾನ್ವಿ ಕಪೂರ್ ಇದೀಗ ತೆಲುಗಿನತ್ತ ಮುಖ ಮಾಡಿದ್ದಾರೆ. ಶ್ರೀದೇವಿ ಅವರು ಹೇಗೆ ಒಂದೊಂದೇ ಯಶಸ್ಸಿನ ಮೆಟ್ಟಿಲನ್ನ ಏರಿದ್ರೋ ಅದೇ ರೀತಿ ಸೌತ್ ಸಿನಿಮಾ ಸ್ಕ್ರಿಪ್ಟ್‌ಗಳಿಗೆ ಜಾನ್ವಿ ಹೆಚ್ಚಿನ ಪ್ರಾಮುಖ್ಯತೆ ನೀಡ್ತಿದ್ದಾರೆ. ಇದನ್ನೂ ಓದಿ:ಚೊಚ್ಚಲ ಸಿನಿಮಾ ನಿರ್ಮಾಣದತ್ತ ಶಿವಣ್ಣನ ಪುತ್ರಿ ನಿವೇದಿತಾ

    ಇದೀಗ ಜ್ಯೂನಿಯರ್ ಎನ್‌ಟಿಆರ್ (Jr.ntr) ಜೊತೆಗಿನ ಸಿನಿಮಾ ರಿಲೀಸ್ ಆಗುವ ಮುನ್ನವೇ ಮತ್ತೊಂದು ಬಂಪರ್ ಆಫರ್‌ನ್ನ ನಟಿ ತಮ್ಮದಾಗಿಸಿಕೊಂಡಿದ್ದಾರೆ. ಜಾನ್ವಿ ಇದೀಗ ಮತ್ತೊಬ್ಬ ತೆಲುಗಿನ ನಟನ ಜೊತೆ ನಟಿಸಲು ಗ್ರೀನ್ ಸಿಗ್ನಲ್ ಕೊಟ್ಟಿದ್ದಾರೆ. ಹೊಸ ಬಗೆಯ ಕಥೆಯಲ್ಲಿ ಜಾನ್ವಿ ಕಮಾಲ್‌ ಮಾಡಲಿದ್ದಾರೆ.

    ಹೊಸ ಸಿನಿಮಾಗೆ ನಾಗಾರ್ಜುನ ಪುತ್ರ ಅಖಿಲ್ ಅಕ್ಕಿನೇನಿಗೆ (Akhil Akkineni)  ನಾಯಕಿಯಾಗಿ ಜಾನ್ವಿ ಕಪೂರ್ ಸೆಲೆಕ್ಟ್ ಆಗಿದ್ದಾರೆ. ಯುವ ನಿರ್ದೇಶಕ ಅನಿಲ್ ಕುಮಾರ್ (Anil Kumar) ನಿರ್ದೇಶನದಲ್ಲಿ ಅಖಿಲ್- ಜಾನ್ವಿ ಆಕ್ಟ್ ಮಾಡಲಿದ್ದಾರೆ. ಅನಿಲ್ ಈ ಹಿಂದೆ ಪ್ರಭಾಸ್ ನಟನೆಯ ‘ಸಾಹೋ’ (Saho) ಚಿತ್ರದಲ್ಲಿ ಸಹಾಯಕ ನಿರ್ದೇಶಕನಾಗಿ ಕೆಲಸ ಮಾಡಿದ್ದಾರೆ.

    ಮೊದಲ ಬಾರಿಗೆ ಜಾನ್ವಿ- ಅಖಿಲ್‌ ತೆರೆಯ ಮೇಲೆ ಒಂದಾಗುತ್ತಿದ್ದು, ಈ ಫ್ರೆಶ್‌ ಫೇರ್‌ ಅದೆಷ್ಟರ ಮಟ್ಟಿಗೆ ಮೋಡಿ ಮಾಡಲಿದೆ ಎಂಬುದನ್ನ ಮುಂದಿನ ದಿನಗಳವರೆಗೂ ಕಾದುನೋಡಬೇಕಿದೆ.

  • ಸುಳ್ಳು ಸುದ್ದಿ ಬರೆದ ಸಿನಿಮಾ ವಿಶ್ಲೇಷಕನಿಗೆ ಚಳಿ ಬಿಡಿಸಿದ ನಟಿ ಊರ್ವಶಿ ರೌಟೇಲಾ

    ಸುಳ್ಳು ಸುದ್ದಿ ಬರೆದ ಸಿನಿಮಾ ವಿಶ್ಲೇಷಕನಿಗೆ ಚಳಿ ಬಿಡಿಸಿದ ನಟಿ ಊರ್ವಶಿ ರೌಟೇಲಾ

    ಹುಭಾಷಾ ನಟಿ ಊರ್ವಶಿ ರೌಟೇಲಾ (Urvashi Rautela) ಅವರು ಸಿನಿಮಾ ಬಿಟ್ಟು ಆಗಾಗ ರಿಷಬ್ ಪಂತ್ (Rishab Pant) ವಿಚಾರವಾಗಿ ಸುದ್ದಿಯಾಗುತ್ತಿದ್ದರು. ಇದೀಗ ತಮ್ಮ ಬಗ್ಗೆ ಸುಳ್ಳು ಸುದ್ದಿ ಬರೆದ ಸಿನಿಮಾ ವಿಶ್ಲೇಷಕ ಉಮೈರ್ ಸಂಧುಗೆ (Umair Sandhu) ಲೀಗಲ್ ನೋಟಿಸ್ ಕಳುಹಿಸಿದ್ದಾರೆ. ಸದಾ ಒಂದಲ್ಲಾ ಒಂದು ಕಿರಿಕ್ ಮಾಡುವ ಮೂಲಕ ಸುದ್ದಿಯಲ್ಲಿರುವ ಉಮೈರ್‌ಗೆ ನಟಿ ಊರ್ವಶಿ ಇದೀಗ ಬೆಂಡೆತ್ತಿದ್ದಾರೆ.

    ಕೆಲ ದಿನಗಳ ಹಿಂದೆ ‘ಶಾಕುಂತಲಂ’ ಸಿನಿಮಾ ಕಲೆಕ್ಷನ್ ಉಲ್ಲೇಖಿಸಿ ನಟಿ ಸಮಂತಾ (Samantha) ಫ್ಲಾಪ್ ನಟಿ ಎಂದು ಬರೆಯುವ ಮೂಲಕ ಸ್ಯಾಮ್ ಅಭಿಮಾನಿಗಳ ಕೆಂಗಣ್ಣಿಗೆ ಗುರಿಯಾಗಿದ್ದರು. ಬಳಿಕ ಊರ್ವಶಿ ರೌಟೇಲ್ -ಅಖಿಲ್ ಅಕ್ಕಿನೇನಿ ಬಗ್ಗೆ ಸುಳ್ಳು ಸುದ್ದಿ ಟ್ವೀಟ್ ಮಾಡಿದ್ದ ಉಮೈರ್ ಸಂಧುಗೆ ನಟಿ ಕಾನೂನು ಸಮರ ಸಾರಿದ್ದಾರೆ. ಅಷ್ಟಕ್ಕೂ ಆಗಿದ್ದೇನು?

    ನಟಿ ಊರ್ವಶಿ ಬಗ್ಗೆ ಅಸಭ್ಯವಾಗಿ ಬರೆದಿದ್ದಾರೆ. ಯುರೋಪ್‌ನಲ್ಲಿ ‘ಏಜೆಂಟ್’ (Agent) ಚಿತ್ರದ ಐಟಂ ಸಾಂಗ್ ಚಿತ್ರೀಕರಣದ ವೇಳೆ ನಟಿ ಅಖಿಲ್ ಅಕ್ಕಿನೇನಿ (Akhil Akkineni) ಬಾಲಿವುಡ್ ನಟಿ ಊರ್ವಶಿ ರೌಟೇಲಾ ಅವರಿಗೆ ಕಿರುಕುಳ ನೀಡಿದ್ದಾರೆ ಎಂದು ಉಮೈರ್ ಸಂಧು ಟ್ವೀಟ್ ಮಾಡಿದ್ದಾರೆ. ಇವರಿಬ್ಬರ ಫೋಟೋ ಲಗತ್ತಿಸಿ ತೀರಾ ಕೆಟ್ಟದ್ದಾಗಿ ಬರೆದಿದ್ದಾರೆ. ಇದೀಗ ಈ ಟ್ವೀಟ್ ಓದಿದ ಊರ್ವಶಿ ರೌಟೇಲಾ ಕೆಂಡಾಮಂಡಲವಾಗಿದ್ದಾರೆ. ಅವರು ಈ ಟ್ವೀಟ್‌ನ ಸ್ಕ್ರೀನ್‌ಶಾಟ್ ಅನ್ನು ಸಾಮಾಜಿಕ ಮಾಧ್ಯಮದಲ್ಲಿ ಹಂಚಿಕೊಂಡಿದ್ದಾರೆ. ಜೊತೆಗೆ ಅದರ ಮೇಲೆ ನಕಲಿ ಎಂದು ಬರೆದಿದ್ದಾರೆ. ಇದನ್ನೂ ಓದಿ:ಹನಿಮೂನ್‌ಗೆ ವಿದೇಶಕ್ಕೆ ಹಾರಿದ ಸಿಂಹಪ್ರಿಯಾ ಜೋಡಿ

     

    View this post on Instagram

     

    A post shared by Urvashi Rautela (@urvashirautela)

    ನನ್ನ ಕಾನೂನು ತಂಡವು ನಿಮಗೆ ಮಾನನಷ್ಟ ನೋಟಿಸ್ ಕಳುಹಿಸುತ್ತಿದೆ. ನಿಮ್ಮಂತಹ ಸಿನಿಮಾ ವಿಶ್ಲೇಷಕರ ಕೊಳಕು ಟ್ವೀಟ್‌ಗಳಿಂದ ಎಲ್ಲರೂ ಕೋಪಗೊಂಡಿದ್ದಾರೆ ಎಂದು ನಟಿ ಹೇಳಿದ್ದಾರೆ. ನೀವು ನನ್ನ ಅಧಿಕೃತ ವಕ್ತಾರರಲ್ಲ. ಅವರಂತೆ ವರ್ತಿಸಬೇಡಿ. ಇದರಿಂದ ಬಹಳಷ್ಟು ಮಂದಿಯ ಮನಸ್ಸಿಗೆ ನೋವುಂಟಾಗುತ್ತದೆ ಎಂದಿರುವ ನಟಿ, ಲೀಗಲ್ ನೋಟಿಸ್ ಕಳುಹಿಸಿದ್ದಾರೆ.

  • ಏಜೆಂಟ್ ಸಿನಿಮಾಗೆ ಬಾಲಿವುಡ್ ಸ್ಟಾರ್: ಡಿನೋ ಮೋರಿಯಾ ಫಸ್ಟ್ ಲುಕ್

    ಏಜೆಂಟ್ ಸಿನಿಮಾಗೆ ಬಾಲಿವುಡ್ ಸ್ಟಾರ್: ಡಿನೋ ಮೋರಿಯಾ ಫಸ್ಟ್ ಲುಕ್

    ಟಾಲಿವುಡ್ ಯಂಗ್ ಅಂಡ್ ಡೈನಾಮಿಕ್ ಹೀರೋ ಅಖಿಲ್ ಅಕ್ಕಿನೇನಿ (Akhil Akkineni) ನಟನೆಯ ಕ್ರೇಜಿ ಪ್ರಾಜೆಕ್ಟ್ ಏಜೆಂಟ್ ಅಂಗಳದಿಂದ ಹೊಸ ಅಪ್ ಡೇಟ್ ಸಿಕ್ಕಿದೆ. ಅಖಿಲ್ ಹುಟ್ಟುಹಬ್ಬಕ್ಕೆ ಹೊಸ ಪೋಸ್ಟರ್ ಅನಾವರಣ ಮಾಡಿದ್ದ ಚಿತ್ರತಂಡ ಈಗ ಮತ್ತೊಂದು ಪ್ರಮುಖ ಪಾತ್ರವನ್ನು ಸಿನಿರಸಿಕರಿಗೆ ಪರಿಚಯಿಸಿದೆ.  ಮಲಯಾಳಂ ಸೂಪರ್ ಸ್ಟಾರ್ ಮಮ್ಮುಟ್ಟಿ (Mummutty) ಪ್ರಮುಖ ಪಾತ್ರದಲ್ಲಿ ನಟಿಸಿದ್ದು, ಸಾಕ್ಷಿ ವೈದ್ಯ ನಾಯಕಿಯಾಗಿ ಅಭಿನಯಿಸಿರುವ ಏಜೆಂಟ್ (Agent) ಸಿನಿಮಾಗೆ ಬಾಲಿವುಡ್ ತಾರೆ ಎಂಟ್ರಿ ಕೊಟ್ಟಿದ್ದಾರೆ.

    ರಾಝ್, ಅಕ್ಸರ್, ಜೂಲಿ ಮುಂತಾದ ಪಾತ್ರಗಳ‌ ಮೂಲಕ ಖ್ಯಾತಿ ಪಡೆದಿರುವ ಬಿಟೌನ್ ಸ್ಟಾರ್ ಡಿಯೋ ಮೋರಿಯಾ (Deo Morea) ಏಜೆಂಟ್ ಸಿನಿಮಾದಲ್ಲಿ ದಿ ಗಾಡ್ ಎಂಬ ಪಾತ್ರದಲ್ಲಿ ಅಭಿನಯಿಸಿದ್ದಾರೆ. ಉದ್ದವಾದ ಕೇಶರಾಶಿ, ಮುಖದ‌ ಮೇಲೆ ಗಾಯದ ಗುರುತು, ಕೈಯಲ್ಲಿ ಗನ್ ಹಿಡಿದು ಡಿಯೋ ಮೋರಿಯಾ ರಗಡ್ ಆಗಿ ಕಾಣಿಸಿಕೊಂಡಿದ್ದಾರೆ. ಇದನ್ನೂ ಓದಿ:ಜ್ಯೂ.ಎನ್‌ಟಿಆರ್ ಎದುರು ಅಬ್ಬರಿಸಲಿದ್ದಾರೆ ಸೈಫ್ ಅಲಿ ಖಾನ್

    ಈಗಾಗಲೇ ಏಜೆಂಟ್ ಮೊದಲ ಎರಡು ಹಾಡುಗಳ ಹಿಟ್ ಲೀಸ್ಟ್ ಸೇರಿದ್ದು, ನಿನ್ನೆ ರಿಲೀಸ್ ಆಗಿರುವ ರಾಮ ಶ್ರೀಕೃಷ್ಣ ಎಂಬ ಹಾಡು ಬಜ್ ಕ್ರಿಯೇಟ್ ಮಾಡಿದೆ. ಆಕ್ಷನ್ ಹೈವೋಲ್ಟೇಜ್  ಏಜೆಂಟ್ ಸಿನಿಮಾವನ್ನು ರಾಮಬ್ರಹ್ಮಂ ಸುಂಕರ AK ಎಂಟರ್ಟೈನ್ಮೆಂಟ್ಸ್ ಹಾಗೂ ಸುರೇಂದ್ರ 2 ಸಿನಿಮಾ ಬ್ಯಾನರ್ ನಡಿ ನಿರ್ಮಾಣ ಮಾಡಿದ್ದಾರೆ.

    ಚಿತ್ರಕ್ಕೆ ವಕ್ಕನಾಥಂ ವಂಶಿ ಕಥೆ ಬರೆದಿದ್ದು, ರಾಷ್ಟ್ರ ಪ್ರಶಸ್ತಿ ವಿಜೇತ ನವೀನ್ ನೂಲಿ ಸಂಕಲನ, ಅವಿನಾಶ ಕೊಲ್ಲ ಕಲಾ ನಿರ್ದೇಶನ, ಅಜೇಯ್ ಸುಂಕರ, ಪಾತಿ ದೀಪ ರೆಡ್ಡಿ ಸಹ ನಿರ್ಮಾಣ ಚಿತ್ರಕ್ಕಿದೆ. ಹಿಪ್ ಹಾಪ್ ಥಮೀಜಾ ಸಂಗೀತ ನಿರ್ದೇಶನದಲ್ಲಿ ಮೂಡಿ ಬಂದ ಏಜೆಂಟ್ ಚಿತ್ರ ರಸೂಲ್ ಎಲ್ಲೋರೆ ಕ್ಯಾಮೆರಾ ಕಣ್ಣಲ್ಲಿ ಸೆರೆಯಾಗಿದೆ. ಸಾಕಷ್ಟು ಹೈಪ್ ಕ್ರಿಯೇಟ್ ಮಾಡಿರುವ ಏಜೆಂಟ್ ಸಿನಿಮಾ ಏಪ್ರಿಲ್ 28ಕ್ಕೆ ಬಿಡುಗಡೆಯಾಗುತ್ತಿದೆ.