Tag: Akkineni

  • ಸಮಂತಾ ಹೊಸ ಫೋಟೋ ಶೂಟ್: ಬೇಸಿಗೆ ಮತ್ತಷ್ಟು ಹಾಟ್ ಹಾಟ್

    ಸಮಂತಾ ಹೊಸ ಫೋಟೋ ಶೂಟ್: ಬೇಸಿಗೆ ಮತ್ತಷ್ಟು ಹಾಟ್ ಹಾಟ್

    ಕ್ಷಿಣದ ಪ್ರಸಿದ್ಧ ನಟಿ ಸುಮಂತಾ ವಿಚ್ಚೇದನದ ನಂತರ ಸಿಕ್ಕಾಪಟ್ಟೆ ಬ್ಯುಸಿ ಆಗಿದ್ದಾರೆ. ಪುಷ್ಪಾ ಸಿನಿಮಾದ ‘ಹ್ಞೂಂ ಅಂತೀಯಾ ಮಾವ’ ಹಾಡು ಅವರನ್ನು ಮತ್ತೊಂದು ಲೇವಲ್ ಗೆ ತಂದು ನಿಲ್ಲಿಸಿದೆ. ಪುಷ್ಪಾ ಸಿನಿಮಾದ ಗೆಲುವಿಗೆ ಈ ಹಾಡೂ ಕಾರಣವಾಗಿದೆ. ಹಾಗಾಗಿ ಗೆಳತಿ ನಯನಾ ತಾರಾ ನಟನೆಯ ಹೊಸ ಸಿನಿಮಾದಲ್ಲಿ ಸಮಂತಾ ಹಾಡೊಂದರಲ್ಲಿ ಕಾಣಿಸಿಕೊಂಡರು. ಇದನ್ನೂ ಓದಿ:  ಕಷ್ಟಪಟ್ಟು ಮಾಡುವ ಸಿನಿಮಾ ಬಗ್ಗೆ ಅಪಪ್ರಚಾರ ಮಾಡಬೇಡಿ ಎಂದು ಆಲಿಯಾ ಗರಂ

    ಇದೀಗ ಅವರು ಪತ್ರಿಕೆಯೊಂದಕ್ಕೆ ಹೊಸ ಫೋಟೋ ಶೂಟ್ ಮಾಡಿಸಿಕೊಂಡಿದ್ದು, ಆ ಫೋಟೋ ಪಡ್ಡೆಗಳ ನಿದ್ದೆ ಹಾಳು ಮಾಡಿದೆ. ಬೇಸಿಗೆಯನ್ನು ಮತ್ತಷ್ಟು ಹಾಟ್ ಆಗಿಸಿದೆ. ಸ್ವತಃ ಆ ಫೋಟೋವನ್ನು ತಮ್ಮ ಇನ್ಸ್ಟಾ ಪೇಜಿನಲ್ಲಿ ಹಂಚಿಕೊಂಡಿರುವ ಅವರು ಫಿಟ್ ನೆಸ್ ಕುರಿತಾಗಿ ಕೆಲವು ಅನಿಸಿಕೆಗಳನ್ನೂ ಬರೆದುಕೊಂಡಿದ್ದಾರೆ. ಇದನ್ನೂ ಓದಿ: ಬಾಲ್ಯ ವಿವಾಹ ಮಾಡಿ ತಾಳಿ ಬಿಚ್ಚಿಸಿ ಪರೀಕ್ಷೆಗೆ ಕಳುಹಿಸಿದ್ರು

    ಇತ್ತೀಚಿನ ದಿನಗಳಲ್ಲಿ ಆತ್ಮವಿಶ್ವಾಸದ ಬಗ್ಗೆ ಸಾಕಷ್ಟು ಅನಿಸಿಕೆಗಳನ್ನು ಬರೆದುಕೊಳ್ಳುತ್ತಿರುವ ಸಮಂತಾ, ನೊಂದವರ ಪಾಲಿಗೆ ಒಂದು ರೀತಿಯಲ್ಲಿ ಟಾನಿಕ್ ರೀತಿಯಲ್ಲಿ ಅವುಗಳು ಬಳಕೆ ಆಗುತ್ತಿವೆ. ಅಲ್ಲದೇ, ಫಿಟ್ ನೆಸ್, ಆರೋಗ್ಯಕ್ಕೆ ಸಂಬಂಧಿಸಿದ ಟಿಪ್ಸ್ ಗಳು ಕೂಡ ಅಭಿಮಾನಿಗಳ ಪಾಲಿಗೆ ಮಾರ್ಗದರ್ಶಿ ಆಗುತ್ತಿವೆ. ಇದನ್ನೂ ಓದಿ : ಸೆನ್ಸಾರ್ ಪಾಸ್ ಆದ ರಾಕಿಭಾಯ್ : ಕೆಜಿಎಫ್ 1 ಗಿಂತ ಕೆಜಿಎಫ್ 2 ಸಿನಿಮಾ 13 ನಿಮಿಷ ಉದ್ದ

    ಸದ್ಯ ಸಮಂತಾ ಶಾಕುಂತಲಂ ಮತ್ತು ತಮಿಳಿನ ಕಾತುವಾಕುಲ ರೆಂಡು ಕಾದಲ್ ಸಿನಿಮಾದ ಶೂಟಿಂಗ್ ಮುಗಿಸಿದ್ದು, ವಿಜಯ್ ಸೇತುಪತಿ ಅವರ ಸಿನಿಮಾದ ಸ್ಪೆಷಲ್ ಸಾಂಗ್ ಗೆ ಹೆಜ್ಜೆ ಹಾಕಿದ್ದಾರೆ. ಸದ್ಯಲ್ಲೇ ಅವರ ವೆಬ್ ಸಿರೀಸ್ ಕೂಡ ಶುರುವಾಗಲಿದೆ.

  • ಮದ್ವೆ ಸೀರೆ ವಾಪಸ್ಸು ಕೊಟ್ರಂತೆ ಸಮಂತಾ: ಮಳೆ ನಿಂತ್ರೂ ಮಳೆ ಹನಿ ನಿಲ್ಲದು!

    ಮದ್ವೆ ಸೀರೆ ವಾಪಸ್ಸು ಕೊಟ್ರಂತೆ ಸಮಂತಾ: ಮಳೆ ನಿಂತ್ರೂ ಮಳೆ ಹನಿ ನಿಲ್ಲದು!

    ನಾಗಚೈತನ್ಯ ಮತ್ತು ಸಮಂತಾ ದೂರವಾಗಿ ಹಲವು ತಿಂಗಳುಗಳೇ ಉರುಳಿವೆ. ಇಬ್ಬರೂ ತಮ್ಮ ಪಾಡಿಗೆ ತಾವು ಸಿನಿಮಾದಲ್ಲಿ ಬ್ಯುಸಿಯಾಗಿದ್ದಾರೆ. ಆದರೆ, ದಾಂಪತ್ಯದ ಹೊಸ ಹೊಸ ಮುಖಗಳು ಮಾತ್ರ ಅನಾವರಣಗೊಳ್ಳುತ್ತಲೇ ಇವೆ. ಇದನ್ನೂ ಓದಿ : ಡಾ.ರಾಜ್ ಹುಟ್ಟಿದ ಊರಲ್ಲಿ ಫಸ್ಟ್ ಟೈಮ್ ಸಿನಿಮಾ ಮುಹೂರ್ತ

    ಸಮಂತಾ ಬಗ್ಗೆ ನಾಗಚೈತನ್ಯ ಅಭಿಮಾನಿಗಳು ಸಲ್ಲದ ಆರೋಪ ಮಾಡಿದರು. ಅವರು ಯಾವುದೇ ಸಿನಿಮಾ ಒಪ್ಪಿಕೊಂಡರೂ, ಅದಕ್ಕೆ ಕೆಟ್ಟದ್ದಾಗಿ ಕಾಮೆಂಟ್ ಮಾಡಿದರು. ಪುಷ್ಪಾ ಸಿನಿಮಾದ ಹಾಡಿಗೆ ಹೆಜ್ಜೆ ಹಾಕಿದಾಗಲಂತೂ ಮಾನಹಾನಿ ಆಗುವಂತಹ ಸಂದೇಶಗಳನ್ನು ಕಳುಹಿಸಿದರು. ಇದೀಗ ಮದ್ವೆ ಸೀರೆ ಸುದ್ದಿ ಹಿಡಿದುಕೊಂಡು ಜಗ್ಗಾಡುತ್ತಿದ್ದಾರೆ. ಇದನ್ನೂ ಓದಿ : ಸಿನಿಮಾ ರಂಗಕ್ಕೆ ಬಾ ಅನ್ನಲಿಲ್ಲ ಬಂದ, ರಾಜಕಾರಣಕ್ಕೆ ಅವನನ್ನೇ ಕೇಳಬೇಕು : ಪುತ್ರನ ಬಗ್ಗೆ ಸುಮಲತಾ ಮಾತು

    ಈಗ ತೆಲುಗು ಸಿನಿಮಾ ರಂಗದಲ್ಲಿ ಚಿತ್ರಗಳಿಗಿಂತ ಹೆಚ್ಚು ಸದ್ದು ಮಾಡುತ್ತಿರುವ ಸುದ್ದಿಯೆಂದರೆ ಸಮಂತಾ ಅವರು ಮದ್ವೆ ಸೀರೆಯದ್ದು. ಮದುವೆ ದಿನದಂದು ನಾಗಚೈತನ್ಯ ಕುಟುಂಬವು ಬೆಲೆಬಾಳು ರೇಷ್ಮೆ ಸೀರೆಯನ್ನು ಸಮಂತಾಗೆ ನೀಡುತ್ತು. ಮದುವೆ ಸಂದರ್ಭದಲ್ಲಿ ಆ ಸೀರೆಯದ್ದೇ ಹೈಲೆಟ್ ಆಗಿತ್ತು. ಈಗ ಆ ಸೀರೆಯನ್ನೂ ನಾಗಚೈತನ್ಯ ಕುಟುಂಬಕ್ಕೆ ಸಮಂತಾ ವಾಪಸ್ಸು ಮಾಡಿದ್ದಾರೆ ಎನ್ನುವ ಮಾತು ಕೇಳಿ ಬರುತ್ತಿದೆ. ಇದರಿಂದಾಗಿ ಅಕ್ಕಿನೇನಿ ಕುಟುಂಬ ತೀರಾ ಮುಜಗರಕ್ಕೀಡಾಗಿದೆ ಎನ್ನಲಾಗುತ್ತಿದೆ. ಇದನ್ನೂ ಓದಿ : ರಶ್ಮಿಕಾ ಮಂದಣ್ಣ ಅವರ ‘ಮಿಷನ್ ಮಜ್ನು’ ಬರ್ತಿದ್ದಾನೆ, ದಾರಿ ಬಿಡಿ

    ದಾಂಪತ್ಯ ಜೀವನದಲ್ಲಿ ಬಿರುಕು ಕಾಣಿಸಿಕೊಂಡ ನಂತರ ಸಾಯುವತನಕ ಜತೆಗಿರುತ್ತೇನೆ ಎಂದು ಪ್ರಮಾಣ ಮಾಡಿದ ಪತಿಯನ್ನೇ ಬಿಟ್ಟು ಬಂದಿದ್ದೇನೆ. ಇನ್ನು ಅವರು ಕೊಟ್ಟಿರುವ ವಸ್ತುಗಳು ಯಾವ ಲೆಕ್ಕ ಎನ್ನುವ ಧೋರಣೆಯಿಂದಲೇ ಸಮಂತಾ ಹಾಗೆ  ಮಾಡಿದ್ದಾರೆ ಎನ್ನುವುದು ಸದ್ಯ ಸುದ್ದಿಗೆ ಸಿಕ್ಕ ಆಹಾರ.

  • ವಿಚ್ಛೇದನಕ್ಕೆ ಮುಂದಾದ್ರಾ ಸಮಂತಾ, ನಾಗಚೈತನ್ಯ?

    ವಿಚ್ಛೇದನಕ್ಕೆ ಮುಂದಾದ್ರಾ ಸಮಂತಾ, ನಾಗಚೈತನ್ಯ?

    ಹೈದರಾಬಾದ್: ದಕ್ಷಿಣ ಭಾರತ ಸಿನಿ ಅಂಗಳದ ಸೂಪರ್ ಹಿಟ್ ಜೋಡಿ ಸಮಂತಾ ಮತ್ತು ನಾಗಚೈತನ್ಯ. ಪ್ರೇಮಪಕ್ಷಿಗಳ ಹಾಗೆ ಹಾರಡುತ್ತಿದ್ದ ಈ ಜೋಡಿ ನಡುವೆ ಬಿರುಕು ಮೂಡಿದ್ದು, ಈಗ ವಿಚ್ಛೇದನದವರೆಗೂ ಹೋಗಿದೆ ಎಂಬ ಸುದ್ದಿ ಹರಿದಾಡುತ್ತಿದೆ.

    2010ರಲ್ಲಿ ತೆರೆಕಂಡ ‘ಯೇ ಮಾಯಾ ಚೆಸಾವಾ’ ಸಿನಿಮಾದಲ್ಲಿ ತೆರೆ ಮೇಲೆ ಜೋಡಿಯಾಗಿದ್ದ ಇವರು 2017ರಲ್ಲಿ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದರು. ಇವರ ದಾಂಪತ್ಯ ಜೀವನ ಪ್ರಾರಂಭವಾಗಿ ಕೇವಲ ನಾಲ್ಕು ವರ್ಷಗಳವಷ್ಟೇ ಆಗಿದೆ. ಈಗ ಇವರ ನಡುವೆ ಬಿರುಕು ಮೂಡಿದೆ ಎಂಬ ಮಾತುಗಳು ಕೇಳಿಬರುತ್ತಿದೆ.ಇದನ್ನೂ ಓದಿ:ಯುವನಟನಿಗೆ ಲಾಂಗ್ ಹಿಡಿಯುವುದನ್ನು ಹೇಳಿಕೊಟ್ಟ ಜೋಗಿ

    ಯಾಕೆ ಈ ಗುಸುಗುಸು?
    ‘ಅಕ್ಕಿನೇನಿ’ ಸೊಸೆಯಾದ ಸಮಂತಾ ತಮ್ಮ ಸೋಶಿಯಲ್ ಮೀಡಿಯಾದಲ್ಲಿ ಸಮಂತಾ ಅಕ್ಕಿನೇನಿ ಎಂದು ಮದುವೆ ನಂತರ ಹಾಕಿಕೊಂಡಿದ್ದರು. ಈ ಹೆಸರಿನಿಂದಲ್ಲೇ ಇವರನ್ನು ಕರೆಯಲಾಗುತ್ತಿತ್ತು. ಆದರೆ ದಿಢೀರ್ ಎಂದು ಸಮಂತಾ ತಮ್ಮ ಫೇಸ್‍ಬುಕ್, ಇನ್‍ಸ್ಟಾಗ್ರಾಮ್ ಹಾಗೂ ಟ್ವೀಟರ್‍ನಲ್ಲಿ ‘ಅಕ್ಕಿನೇನಿ’ ಹೆಸರನ್ನು ತೆಗೆದುಹಾಕಿದ್ದಾರೆ. ಇದು ಸಂದೇಹಕ್ಕೆ ಕಾರಣವಾಗಿದೆ.ಇದನ್ನೂ ಓದಿ:ದೈಹಿಕ ಹಾಗೂ ಮಾನಸಿಕ ಅತ್ಯಾಚಾರಕ್ಕೆ ಕೊನೆ ಯಾವಾಗ?: ಶ್ರುತಿ