Tag: Akkineni Nagarjuna

  • ಶೀಘ್ರದಲ್ಲೇ ‘ಬಿಗ್ ಬಾಸ್’ ಶೋ ಶುರು- ಸ್ಪರ್ಧಿಗಳ ಲಿಸ್ಟ್‌ ಔಟ್‌

    ಶೀಘ್ರದಲ್ಲೇ ‘ಬಿಗ್ ಬಾಸ್’ ಶೋ ಶುರು- ಸ್ಪರ್ಧಿಗಳ ಲಿಸ್ಟ್‌ ಔಟ್‌

    ಕಿರುತೆರೆಯ ಅತೀ ದೊಡ್ಡ ರಿಯಾಲಿಟಿ ಶೋ ಬಿಗ್ ಬಾಸ್ ಮತ್ತೆ ಶುರುವಾಗ್ತಿದೆ. ಶೀಘ್ರದಲ್ಲೇ ತೆಲುಗಿನ ಬಿಗ್ ಬಾಸ್ ಸೀಸನ್ 8 (Bigg Boss Telugu 8) ಶುರುವಾಗಲಿದೆ. ಈ ಮೂಲಕ ಫ್ಯಾನ್ಸ್‌ಗೆ ಸಿಹಿಸುದ್ದಿ ಸಿಕ್ಕಿದೆ. ಅದಷ್ಟೇ ಅಲ್ಲ, ದೊಡ್ಮನೆ ಆಟಕ್ಕೆ ಬರಲಿರುವ ಸ್ಪರ್ಧಿಗಳು ಕೂಡ ಫೈನಲ್ ಆಗಿದ್ದಾರೆ.

    ಕನ್ನಡದ ಬಿಗ್ ಬಾಸ್ ಮತ್ತು ತೆಲುಗಿನ ಬಿಗ್ ಬಾಸ್‌ಗಾಗಿ ಫ್ಯಾನ್ಸ್ ಕಾತರದಿಂದ ಕಾಯುತ್ತಾರೆ. ಬಿಗ್‌ ಬಾಸ್‌ಗೆ ದೊಡ್ಡಮಟ್ಟದ ಫ್ಯಾನ್ ಬೇಸ್ ಕೂಡ ಇದೆ. ಅಂದಹಾಗೆ, ಇದೇ ಆಗಸ್ಟ್ 4ರಂದು ತೆಲುಗಿನ ಬಿಗ್ ಬಾಸ್ ಪ್ರಸಾರವಾಗಿದೆ. ಇದನ್ನೂ ಓದಿ:ದುಬೈನಲ್ಲಿ ಚಂದನ್ ಶೆಟ್ಟಿ ನಟನೆಯ ‘ವಿದ್ಯಾರ್ಥಿ ವಿದ್ಯಾರ್ಥಿನಿಯರೇ’ ಚಿತ್ರದ ಪ್ರೀಮಿಯರ್ ಶೋ

    ಇನ್ನೂ ಸ್ಪರ್ಧಿಗಳ ವಿಚಾರಕ್ಕೆ ಬಂದರೆ, ಕುಮಾರಿ ಆಂಟಿ ಎಂಬುವರು ರಸ್ತೆ ಬದಿ ಫುಡ್ ಟ್ರಕ್ ಇಟ್ಟುಕೊಂಡಿದ್ದಾರೆ. ಇವರು ಬಿಗ್ ಬಾಸ್‌ಗೆ ಬರಲಿದ್ದಾರೆ ಎನ್ನಲಾಗಿದೆ. ರೇವ್ ಪಾರ್ಟಿ ಪ್ರಕರಣದ ಆರೋಪಿ ಹೇಮಾ (Hema), ಅಮೃತಾ ಪ್ರಣಯ್, ಯೂಟ್ಯೂಬರ್ ನೇತ್ರಾ ಮತ್ತು ವಂಶಿ ಸೇರಿದಂತೆ ಅನೇಕರ ಹೆಸರುಗಳು ವೈರಲ್ ಆಗಿದೆ. ಅಧಿಕೃತ ಮಾಹಿತಿಗಾಗಿ ಕಾಯಬೇಕಿದೆ.

    ಅಂದಹಾಗೆ, ಈ ಸೀಸನ್ ಕೂಡ ಅಕ್ಕಿನೇನಿ ನಾಗಾರ್ಜುನ (Akkineni Nagarjuna) ಅವರೇ ನಿರೂಪಣೆ ಮಾಡಲಿದ್ದಾರೆ. ಸದ್ಯ ಈ ಸುದ್ದಿ ಕೇಳಿ ಬಿಗ್ ಬಾಸ್ ಫ್ಯಾನ್ಸ್ ಥ್ರಿಲ್ ಆಗಿದ್ದಾರೆ.

  • ಆಶಿಕಾಗೆ ಮನೆ ಊಟ ಕಳುಹಿಸುತ್ತಿದ್ದ ನಾಗಾರ್ಜುನ- ನಟಿ ಭಾವುಕ

    ಆಶಿಕಾಗೆ ಮನೆ ಊಟ ಕಳುಹಿಸುತ್ತಿದ್ದ ನಾಗಾರ್ಜುನ- ನಟಿ ಭಾವುಕ

    ಶಿಕಾ ರಂಗನಾಥ್ (Ashika Ranganath) ಟಾಲಿವುಡ್‌ಗೆ (Tollywood) ಕಾಲಿಟ್ಟಿದ್ದಾರೆ. ನಟ ನಾಗಾರ್ಜುನ ಜೊತೆ ಮೊದಲ ಹೆಜ್ಜೆ ಹಾಕುತ್ತಿದ್ದಾರೆ. ಈ ಹೊತ್ತಲ್ಲೆ ನಾಗಾರ್ಜುನ ಮನೆಯಿಂದ ಬರುತ್ತಿದ್ದ ಊಟ ನೆನೆದು ಆಶಿಕಾ ಭಾವುಕರಾಗಿದ್ದಾರೆ. ಟಾಲಿವುಡ್‌ನಲ್ಲಿ ನನಗೆ ಇನ್ನೊಂದು ಮನೆ ಸಿಕ್ಕಿತು ಎಂದಿದ್ದಾರೆ. ಈಗಾಗಲೇ ಒಮ್ಮೆ ಡಿವೋರ್ಸ್ ಮಾಡಿಕೊಂಡು, ಆ ನಂತರ ನಟಿ ಅಮಲಾ ಕೈ ಹಿಡಿದ ನಾಗರ್ಜುನ ಅದ್ಯಾಕೆ ಆಶಿಕಾಗೆ ಊಟ ಕಳಿಸಿ ತೃಪ್ತರಾದರು? ಏನಿದರ ಹಿಂದಿನ ಅಸಲಿ ಗುಟ್ಟು? ಇಲ್ಲಿದೆ ಮಾಹಿತಿ.

    ಆಶಿಕಾ ರಂಗನಾಥ್ ಕನ್ನಡ ನಟಿ. ಹಲವಾರು ಸಿನಿಮಾಗಳಲ್ಲಿ ನಟಿಸಿದ್ದಾರೆ. ಅದರಲ್ಲಿ ಕೆಲವು ಹಿಟ್ ಇನ್ನು ಕೆಲವು ಫ್ಲಾಪ್. ಕನ್ನಡದಲ್ಲಿ ಹೇಳಿಕೊಳ್ಳುವಂತಹ ಯಶಸ್ಸು ಸಿಗದೇ ಇರುವ ಕಾರಣ. ಟಾಲಿವುಡ್‌ನಲ್ಲಿ ಆಶಿಕಾ ಈಗ ಅದೃಷ್ಟ ಪರೀಕ್ಷೆಗಿಳಿದಿದ್ದಾರೆ. ಇದನ್ನೂ ಓದಿ:ನಟಿ ಮಹಾಲಕ್ಷ್ಮಿ ಪತಿಗೆ ಐಸಿಯುನಲ್ಲಿ ಚಿಕಿತ್ಸೆ: ಆಸ್ಪತ್ರೆಯಲ್ಲಿ ರವೀಂದರ್

    ಸಕ್ಸಸ್‌ಗಾಗಿಯೇ ನಟ ಅಕ್ಕಿನೇನಿ ನಾಗಾರ್ಜುನ ಪಕ್ಕ ನಿಂತಿದ್ದಾರೆ. ‘ನಾ ಸಾಮಿ ರಂಗ’ (Na Saami Ranga) ಸಿನಿಮಾದಲ್ಲಿ ನಾಯಕಿಯಾಗಿ ಬಣ್ಣ ಹಚ್ಚಿದ್ದಾರೆ. ಶೂಟಿಂಗ್‌ಗಾಗಿ ಹೈದರಾಬಾದ್‌ನ ಹೋಟೆಲ್‌ನಲ್ಲಿ ತಂಗಿದ್ದ ಆಶಿಕಾಗೆ ಅಲ್ಲಿನ ಊಟ ಅಡ್ಜಸ್ಟ್ ಆಗಿರಲಿಲ್ಲ. ಆಗ ನಾಗಾರ್ಜುನ ಮನೆಯಿಂದ ನನಗೆ ನಿತ್ಯ ಊಟ ಬರುತ್ತಿತ್ತು. ಡಯಟ್ ಫಾಲೋ ಮಾಡಲು ಅದು ಅನುಕೂಲ ಆಗುತ್ತಿತ್ತು. ಇದರಿಂದ ನನಗೆ ಟಾಲಿವುಡ್‌ನಲ್ಲಿ ಇನ್ನೊಂದು ಮನೆ ಸಿಕ್ಕಂತಾಗಿದೆ ಎಂದು ಕಾರ್ಯಕ್ರಮವೊಂದರಲ್ಲಿ ನಟಿ ಭಾವುಕರಾಗಿದ್ದಾರೆ. ಈ ಮೂಲಕ ನಾಗಾರ್ಜುನ ಅವರು ತಮ್ಮನ್ನು ಯಾವ ರೀತಿ ಟ್ರೀಟ್ ಮಾಡಿದ್ದರು ಎಂಬುದನ್ನು ವಿವರಿಸಿದ್ದಾರೆ. ಟಾಲಿವುಡ್‌ನಲ್ಲಿ ಕನ್ನಡದ ನಟಿಯರಿಗೆ ಸಾಕಷ್ಟು ಗೌರವ ಮತ್ತು ಪ್ರೀತಿ ಸಿಗುತ್ತಿರುವ ಬಗ್ಗೆ ಮಾತನಾಡಿದ್ದಾರೆ.

    ಇನ್ನೂ ಕನ್ನಡ ಚಿತ್ರರಂಗದಲ್ಲಿ ಸಿಗದ ಸಕ್ಸಸ್ ಟಾಲಿವುಡ್‌ನಲ್ಲಿ ಸಿಗುತ್ತಾ? ರಶ್ಮಿಕಾ ಮಂದಣ್ಣ(Rashmika Mandanna), ಶ್ರೀಲೀಲಾರಂತೆಯೇ (Sreeleela) ಆಶಿಕಾ ಕೂಡ ಹವಾ ಕ್ರಿಯೇಟ್ ಮಾಡುತ್ತಾರಾ ಎಂದು ಕಾದುನೋಡಬೇಕಿದೆ.

  • Bigg Boss Telugu Promo: ಇಲ್ಲಿ ಎಲ್ಲವೂ ಉಲ್ಟಾ ಪಲ್ಟಾ ಎಂದು ಡೈಲಾಗ್‌ ಹೊಡೆದ ನಾಗಾರ್ಜುನ

    Bigg Boss Telugu Promo: ಇಲ್ಲಿ ಎಲ್ಲವೂ ಉಲ್ಟಾ ಪಲ್ಟಾ ಎಂದು ಡೈಲಾಗ್‌ ಹೊಡೆದ ನಾಗಾರ್ಜುನ

    ಬಿಗ್ ಬಾಸ್ ತೆಲುಗು ಸೀಸನ್ 7ಕ್ಕೆ (Bigg Boss Telugu 7) ಕೌಂಟ್ ಡೌನ್ ಶುರುವಾಗಿದೆ. ಇಲ್ಲಿ ಎಲ್ಲವೂ ಉಲ್ಟಾ ಪಲ್ಟಾ ಎಂದು ಖಡಕ್ ಡೈಲಾಗ್ ಹೊಡೆದು ನಟ ನಾಗಾರ್ಜುನ್ (Nagarjuna) ಎಂಟ್ರಿ ಕೊಟ್ಟಿದ್ದಾರೆ. ಬಿಗ್ ಬಾಸ್ ಹೊಸ ಸೀಸನ್‌ನಲ್ಲಿ ಸಾಕಷ್ಟು ಅಚ್ಚರಿಯ ವಿಚಾರಗಳು ಇರಲಿವೆ. ಸದ್ಯ ಪ್ರೋಮೋದಿಂದ ಬಿಗ್‌ ಬಾಸ್‌ ಸೀಸನ್‌ ಸಖತ್ ಸದ್ದು ಮಾಡುತ್ತಿದೆ.

    ತೆಲುಗಿನಲ್ಲಿ ದೊಡ್ಮನೆ ಆಟಕ್ಕೆ ದಿನಗಣನೆ ಶುರುವಾಗಿದೆ. ಬಿಗ್ ಬಾಸ್ (Bigg Boss) ಶೋಗಾಗಿಯೇ ಕಾಯುತ್ತಿದ್ದ ಅಭಿಮಾನಿಗಳಿಗೆ ಅಕ್ಕಿನೇನಿ ನಾಗಾರ್ಜುನ ಅವರು ಸಿಹಿಸುದ್ದಿ ನೀಡಿದ್ದಾರೆ. ಈಗಾಗಲೇ ಆರು ಸೀಸನ್‌ಗಳನ್ನು ಯಶಸ್ವಿಯಾಗಿ ಪೂರ್ಣಗೊಳಿಸಿದೆ. ಹೊಸ ಸೀಸನ್  ಪ್ರೋಮೋ ರಿಲೀಸ್ ಆಗಿದ್ದು, ಅಭಿಮಾನಿಗಳ ಗಮನ ಸೆಳೆಯುತ್ತಿದೆ.

    ಓರ್ವ ಹುಡುಗ ಕಂದಕದಲ್ಲಿ ಬೀಳುವವನಿರುತ್ತಾನೆ. ಆತನ ರಕ್ಷಣೆ ಮಾಡಲು ಹುಡುಗಿ ನಿಂತಿರುತ್ತಾಳೆ. ಆದರೆ, ಆತನ ಬದುಕಿಸೋಕೆ ಆಕೆಗೆ ಆಗುವುದೇ ಇಲ್ಲ. ಇಲ್ಲಿಗೆ ದಿ ಎಂಡ್ ಅಲ್ಲ, ಇಲ್ಲಿಂದಲೇ ಆರಂಭ ಎಂದು ಡೈಲಾಗ್ ಹೊಡೆಯುತ್ತಾರೆ ಅಕ್ಕಿನೇನಿ ನಾಗಾರ್ಜುನ. ಈ ರೀತಿಯಲ್ಲಿ ತೆಲುಗು ಬಿಗ್ ಬಾಸ್ ಪ್ರೋಮೋ ಸಖತ್ ಫನ್ನಿಯಾಗಿ ಮೂಡಿ ಬಂದಿದೆ. ಇದನ್ನೂ ಓದಿ:ನಟಿ ಜಾಕ್ವೆಲಿನ್ ಹುಟ್ಟುಹಬ್ಬಕ್ಕೆ ಜೈಲಿನಿಂದಲೇ ಭಾವುಕ ಪತ್ರ ಬರೆದ ಆರೋಪಿ ಸುಕೇಶ್

    ಸೆಪ್ಟೆಂಬರ್‌ ಮೊದಲ ವಾರದಲ್ಲಿ ಬಿಗ್ ಬಾಸ್ ತೆಲುಗು ಶುರುವಾಗಲಿದೆ. ಜಬರ್‌ದಸ್ತ್ ವರ್ಷ, ಮೋಹನ್ ಬಂಗಾರರಾಜು, ಕನ್ನಡದ ನಟಿಯರಾದ ಶೋಭಾ ಶೆಟ್ಟಿ (Shobha Shetty), ಐಶ್ವರ್ಯ (Aishwarya) ಸೇರಿದಂತೆ ಹಲವರು ಬಿಗ್ ಬಾಸ್ (Bigg Boss) ಮನೆಗೆ ಕಾಲಿಡಲಿದ್ದಾರೆ ಎನ್ನಲಾಗಿದೆ.

    ಕನ್ನಡ ಬಿಗ್ ಬಾಸ್‌ಗೂ ಶೀಘ್ರದಲ್ಲೇ ಚಾಲನೆ ಸಿಗಲಿದೆ. ಸದ್ಯ ಸುದೀಪ್ ‘K 46’ ಚಿತ್ರೀಕರಣದಲ್ಲಿ ಬ್ಯುಸಿಯಾಗಿದ್ದಾರೆ. ಈ ಚಿತ್ರದ ಬಳಿಕ ಸೆಪ್ಟೆಂಬರ್‌ನಲ್ಲಿ ಸುದೀಪ್ ನಿರೂಪಣೆಯ ಶೋ ಶುರುವಾಗಲಿದೆ.

    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಸೌತ್‌ನ ಇಬ್ಬರು ಸ್ಟಾರ್ ನಟರ ಚಿತ್ರಕ್ಕೆ ರಶ್ಮಿಕಾ ಮಂದಣ್ಣ ಹೀರೋಯಿನ್

    ಸೌತ್‌ನ ಇಬ್ಬರು ಸ್ಟಾರ್ ನಟರ ಚಿತ್ರಕ್ಕೆ ರಶ್ಮಿಕಾ ಮಂದಣ್ಣ ಹೀರೋಯಿನ್

    ನ್ನಡದ ‘ಕಿರಿಕ್ ಪಾರ್ಟಿ’ (Kirik Party) ಬ್ಯೂಟಿ ರಶ್ಮಿಕಾ ಮಂದಣ್ಣಗೆ (Rashmika Mandanna) ಟಾಲಿವುಡ್‌ನಲ್ಲಿ (Tollywood) ಡಿಮ್ಯಾಂಡ್ ಕಮ್ಮಿಯಾಗುತ್ತಿದೆ. ಬಾಲಿವುಡ್‌ನತ್ತ ಮುಖ ಮಾಡಿರೋ ಶ್ರೀವಲ್ಲಿಗೆ ಈಗ ಬಂಪರ್ ಆಫರ್‌ವೊಂದು ಸಿಕ್ಕಿದೆ. ಒಬ್ಬರಲ್ಲ ಸೌತ್‌ನ ಇಬ್ಬರು ಸೂಪರ್ ಸ್ಟಾರ್ ಜೊತೆ ತೆರೆಹಂಚಿಕೊಳ್ಳುವ ಅವಕಾಶವನ್ನ ನಟಿ ಗಿಟ್ಟಿಸಿಕೊಂಡಿದ್ದಾರೆ. ತೆಲುಗಿನ ಸ್ಟಾರ್ ನಿರ್ದೇಶಕ ಈ ಚಿತ್ರಕ್ಕೆ ಆ್ಯಕ್ಷನ್ ಕಟ್ ಹೇಳ್ತಿದ್ದಾರೆ.

    ನಿತಿನ್ ಸಿನಿಮಾದಿಂದ ಹೊರಬಂದ ಮೇಲೆ ಬಾಲಿವುಡ್ ಸಿನಿಮಾಗಳ ಮೇಲೆ ರಶ್ಮಿಕಾ ಮಂದಣ್ಣ (Rashmika Mandanna) ಗಮನ ಹರಿಸುತ್ತಿದ್ದಾರೆ. ರಶ್ಮಿಕಾ ಕೈಬಿಟ್ಟ ಸಿನಿಮಾ ಎಲ್ಲಾ ಶ್ರೀಲೀಲಾ ಪಾಲಾಗುತ್ತಿದೆ. ಹೀಗಿರುವಾಗ ನ್ಯಾಷನಲ್ ಕ್ರಶ್‌ಗೆ ಸೂಪರ್ ಡೂಪರ್ ಆಫರ್‌ವೊಂದು ಸಿಕ್ಕಿದೆ. ಎಂದೂ ನಟಿಸಿರದ ರೋಲ್‌ನಲ್ಲಿ ಪುಷ್ಪ ನಟಿ ಮಿಂಚಲಿದ್ದಾರೆ.

    ಫಿದಾ, ಲವ್ ಸ್ಟೋರಿ ಸೇರಿದಂತೆ ಹಲವು ಚಿತ್ರಗಳನ್ನ ಸೂಪರ್-ಡೂಪರ್ ಹಿಟ್ ಕೊಟ್ಟಿರುವ ನಿರ್ದೇಶಕ ಶೇಖರ್ ಕಮ್ಮುಲ ಇದೇ ಮೊದಲ ಬಾರಿಗೆ ತಮಿಳು-ತೆಲುಗು ಬೈಲಿಂಗ್ವಲ್ ಸಿನಿಮಾ ಮಾಡಲು ಮುಂದಾಗಿದ್ದಾರೆ. ಈ ಸಿನಿಮಾಕ್ಕೆ ತಮಿಳಿನಿಂದ ಒಬ್ಬರು ಹಾಗೂ ತೆಲುಗು ಇಂದ ಒಬ್ಬರು ಸೂಪರ್ ಸ್ಟಾರ್‌ಗಳನ್ನು ಸೆಲೆಕ್ಟ್ ಮಾಡಿದ್ದಾರೆ.‌ ಇದನ್ನೂ ಓದಿ:ಪಾರ್ವತಮ್ಮ ರಾಜ್ ಕುಮಾರ್ ಹಾದಿಯಲ್ಲೇ ಸೊಸೆ ಅಶ್ವಿನಿ: ಕಾದಂಬರಿ ಆಧರಿಸಿ ಸಿನಿಮಾ

    ಶೇಖರ್ ಕಮ್ಮುಲ ನಿರ್ದೇಶಿಸಲಿರುವ ಹೊಸ ಸಿನಿಮಾದಲ್ಲಿ ತಮಿಳಿನ ಸ್ಟಾರ್ ನಟ ಧನುಷ್ (Dhanush) ನಾಯಕನಾಗಿ ನಟಿಸಲಿದ್ದಾರೆ. ವಿಶೇಷವೆಂದರೆ ಈ ಸಿನಿಮಾದಲ್ಲಿ ತೆಲುಗಿನ ಸ್ಟಾರ್ ನಟ ಅಕ್ಕಿನೇನಿ ನಾಗಾರ್ಜುನ (Akkineni Nagarjuna) ಸಹ ನಟಿಸುತ್ತಿದ್ದು, ಈ ಸಿನಿಮಾ ತಮಿಳು ಹಾಗೂ ತೆಲುಗು ಭಾಷೆಗಳಲ್ಲಿ ಬಿಡುಗಡೆ ಆಗಲಿದೆ. ಈ ಸಿನಿಮಾಕ್ಕೆ ನಾಯಕಿಯಾಗಿ ನಟಿ ರಶ್ಮಿಕಾ ಮಂದಣ್ಣ ಫಿಕ್ಸ್ ಆಗಿದ್ದಾರೆ.

    ಸದ್ಯ ರಶ್ಮಿಕಾ ಮಂದಣ್ಣ ಪುಷ್ಪ 2(Pushpa 2) , ಅನಿಮಲ್, ರೈನ್‌ಬೋ, ಟೈಗರ್ ಶ್ರಾಫ್ ಜೊತೆಗಿನ ಸಿನಿಮಾ, ಶಾಹಿದ್ ಕಪೂರ್ ಜೊತೆಗೊಂದು ಸಿನಿಮಾ ಅಂತಾ ಬ್ಯುಸಿಯಾಗಿದ್ದಾರೆ.

    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಬಿಗ್ ಬಾಸ್ ನಿರೂಪಣೆಗೆ ಸಮಂತಾ ಫಿಕ್ಸ್: ನಾಗಾರ್ಜುನ ಔಟ್.?

    ಬಿಗ್ ಬಾಸ್ ನಿರೂಪಣೆಗೆ ಸಮಂತಾ ಫಿಕ್ಸ್: ನಾಗಾರ್ಜುನ ಔಟ್.?

    ಟಾಲಿವುಡ್‌ನಲ್ಲಿ ಈಗ ಸಮಂತಾದೇ ಬಿಸಿ ಬಿಸಿ ಸುದ್ದಿ. ಸಾಲು ಸಾಲು ಸಿನಿಮಾಗಳಲ್ಲಿ ಬ್ಯುಸಿಯಿರುವ ಸಮಂತಾ ಈಗ ಮಾಜಿ ಮಾವ ನಾಗಾರ್ಜುನ ಅವರಿಗೆ ಬಿಗ್ ಶಾಕ್ ಕೊಟ್ಟಿದ್ದಾರೆ. ಬಿಗ್ ಬಾಸ್ ಶೋಗೆ  ಸಮಂತಾ ನಿರೂಪಣೆ ಮಾಡಲಿದ್ದಾರೆ.

    ಅಭಿಮಾನಿಗಳ ನೆಚ್ಚಿನ ಜೋಡಿ ಎನಿಸಿಕೊಂಡಿದ್ದ ನಾಗಾಚೈತನ್ಯ ಮತ್ತು ಸಮಂತಾ ದೂರ ಆಗಿದ್ದೇ ಎಲ್ಲರಿಗೂ ಶಾಕಿಂಗ್ ವಿಚಾರ. ಅಂದಿನಿಂದ ಇಂದಿನವರೆಗೂ ಈ ಜೋಡಿಯ ಕುರಿತ ವಿಚಾರ ಏನೇ ಬಂದರೂ ಅಭಿಮಾನಿಗಳಿಗೆ ಕಿವಿ ನೆಟ್ಟಗಾಗುತ್ತದೆ. ಈಗ ಹೊಸ ಬ್ರೇಕಿಂಗ್ ವಿಚಾರ ಏನಪ್ಪಾ ಅಂದ್ರೆ ಪ್ರೇಕ್ಷಕರ ಅಚ್ಚು ಮೆಚ್ಚಿನ ಶೋ ಬಿಗ್ ಬಾಸ್ ಸೀಸನ್ 6ರ ನಿರೂಪಣೆ ಸಮಂತಾ ಮಾಡಲಿದ್ದಾರೆ. ಈ ಮೂಲಕ ಮಾಜಿ ಮಾವ ನಾಗಾರ್ಜುನ ಅವರಿಗೆ ಬಿಗ್ ಶಾಕ್ ಕೊಟ್ಟಿದ್ದಾರೆ.

    ಡೈವೋರ್ಸ್ ನಂತರ ಸಮಂತಾ ಡಿಮ್ಯಾಂಡ್ ಗಗನಕ್ಕೇರಿದೆ. ತೆಲುಗು, ತಮಿಳು, ಬಾಲಿವುಡ್, ಹಾಲಿವುಡ್ ಎಲ್ಲಾ ರಂಗದಲ್ಲೂ ಸಮಂತಾ ಬ್ಯುಸಿಯಾಗಿದ್ದಾರೆ. ಇಷ್ಟೊಂದು ಬ್ಯುಸಿಯಿರುವಾಗ ಸಮಂತಾಗೆ ಬಿಗ್ ಬಾಸ್ ಶೋ ನಡೆಸಲು ಬುಲಾವ್ ಬಂದಿದೆ. ಈ ಹಿಂದೆ ಬಿಗ್ ಬಾಸ್ ಶೋನಲ್ಲಿ ಅತಿಥಿಯಾಗಿ ಜತೆಗೆ ಮಾಜಿ ಮಾವನ ಅನುಪಸ್ಥಿತಿಯಲ್ಲಿ ಬಿಗ್ ಬಾಸ್ ಕಾರ್ಯಕ್ರಮವನ್ನು ಅಚ್ಚು ಕಟ್ಟಾಗಿ ನಿರ್ವಹಿಸಿ ಸೈ ಎನಿಸಿಕೊಂಡರು. ಈಗ ವಾಹಿನಿ ಕೂಡ ನಿರೂಪಣೆಗೆ ಸಮಂತಾನೇ ಬೇಕು ಅಂತಾ ಪಟ್ಟು ಹಿಡಿದಿದ್ದಾರಂತೆ. ಇದನ್ನೂ ಓದಿ: ಕ್ಯಾಪ್ ತೊಟ್ಟು ಬೇಬಿ ಬಂಪ್ ಫೋಟೋಶೂಟ್‌ನಲ್ಲಿ ಮಿಂಚಿದ ಪ್ರಣಿತಾ

    ಇಷ್ಟಕ್ಕೂ ಸ್ಟಾರ್ ನಟ ನಾಗಾರ್ಜುನ ಜಾಗಕ್ಕೆ ಸಮಂತಾ ಬರುತ್ತಿರೋದು ನಿಜನಾ ಅನ್ನೋದನ್ನ ಅಧಿಕೃತ ಮಾಹಿತಿಗಾಗಿ ಕಾಯಲೇಬೇಕಿದೆ. ಒಟ್ನಲ್ಲಿ ಸಮಂತಾ ಅಭಿಮಾನಿಗಳಿಗೆ ಇದು ಗುಡ್ ನ್ಯೂಸ್.

  • ನಾನು ಅವನ ಬಗ್ಗೆ ಯೋಚಿಸಿದ್ರೆ, ಅವನಿಗೆ ನನ್ನ ಬಗ್ಗೆಯೇ ಚಿಂತೆ ಜಾಸ್ತಿ: ನಾಗಾರ್ಜುನ್

    ನಾನು ಅವನ ಬಗ್ಗೆ ಯೋಚಿಸಿದ್ರೆ, ಅವನಿಗೆ ನನ್ನ ಬಗ್ಗೆಯೇ ಚಿಂತೆ ಜಾಸ್ತಿ: ನಾಗಾರ್ಜುನ್

    ಹೈದರಾಬಾದ್: ಟಾಲಿವುಡ್ ನಟ ಅಕ್ಕಿನೇನಿ ನಾಗಾರ್ಜುನ್ ಅವರು ತಮ್ಮ ಮಗ ನಾಗಚೈತನ್ಯ ಡಿವೋರ್ಸ್ ಕುರಿತಾಗಿ ಮೊದಲ ಬಾರಿಗೆ ಮನಸ್ಸು ಬಿಚ್ಚಿ ಮಾತನಾಡಿದ್ದಾರೆ.

     

    ಸಂಕ್ರಾಂತಿ ಪ್ರಯುಕ್ತ ನಾಗಾರ್ಜುನ್ ಅವರು ಅಭಿನಯಿಸಿರುವ ಬಂಗಾರ‍್ರಾಜು ಸಿನಿಮಾ ತೆರೆಕಂಡಿದೆ. ಚಿತ್ರದ ಪ್ರಚಾರದ ವೇಳೆ ನಾಗಾರ್ಜುನ್ ಮಾತನಾಡಿದ್ದಾರೆ. ನಾಗ ಚೈತನ್ಯ ಮತ್ತು ಸಮಂತಾ ಬೇರೆ ಆದಾಗ ತಮ್ಮ ಪರಿಸ್ಥಿತಿ ಹೇಗಿತ್ತು ಎಂಬುದನ್ನು ಭಾವನಾತ್ಮಕವಾಗಿ ಹೇಳಿದ್ದಾರೆ. ಇದನ್ನೂ ಓದಿ:  190 ವರ್ಷದ ಆಮೆ- ಗಿನ್ನಿಸ್ ಪುಟಕ್ಕೆ ಸೇರ್ಪಡೆ

    ಡಿವೋರ್ಸ್ ಆದ ಸಂದರ್ಭಗಳಲ್ಲಿ ಅವನು ಅಷ್ಟೊಂದು ಶಾಂತನಾಗಿ ಇದ್ದಿದ್ದಕ್ಕೆ ಅವನ ಬಗ್ಗೆ ನನಗೆ ಹೆಮ್ಮೆ ಇದೆ. ಒಂದು ಮಾತು ಹೇಳುವಷ್ಟು ಕೂಡ ಆತ ಪ್ರಚೋದನೆಗೆ ಒಳಗಾಗಲಿಲ್ಲ. ಎಲ್ಲ ತಂದೆಯರ ರೀತಿ ನಾನು ಕೂಡ ಮಗನ ಬಗ್ಗೆ ಚಿಂತೆಗೆ ಒಳಗಾಗಿದ್ದೆ. ಆದರೆ ಅವನಿಗೆ ನನ್ನ ಬಗ್ಗೆಯೇ ಚಿಂತೆ ಜಾಸ್ತಿ ಆಗಿತ್ತು ಎಂದು ನಾಗಾರ್ಜುನ ಹೇಳಿದ್ದಾರೆ. ಇದನ್ನೂ ಓದಿ: ಐತಿಹಾಸಿಕ ಕೌತುಕಕ್ಕೆ ಸಾಕ್ಷಿಯಾದ ಗವಿ ಗಂಗಾಧರೇಶ್ವರ ದೇಗುಲ – ಶಿವಲಿಂಗಕ್ಕೆ ಸೂರ್ಯ ರಶ್ಮಿ ಸ್ಪರ್ಶ

    ಸೆಲೆಬ್ರಿಟಿ ದಂಪತಿ ನಾಗ ಚೈತನ್ಯ, ಸಮಂತಾ ಕಳೆದ ವರ್ಷ ದಾಂಪತ್ಯಕ್ಕೆ ಅಂತ್ಯ ಹಾಡಿದ್ದಾರೆ. ಈ ವಿಚಾರವಾಗಿ ಚೈತನ್ಯ ತಂದೆ ಅಕ್ಕಿನೇನಿ ನಾಗಾರ್ಜುನ ಸೋಶಿಯಲ್ ಮೀಡಿಯಾದಲ್ಲಿ ಒಂದು ಪೋಸ್ಟ್ ಹಾಕಿ ಸುಮ್ಮನಾಗಿದ್ದರು. ಈಗ ಮಗನ ಡಿವೋರ್ಸ್ ಬಗ್ಗೆ ಮುಕ್ತವಾಗಿ ಕೆಲವು ವಿಚಾರವನ್ನು ಹಂಚಿಕೊಂಡಿದ್ದಾರೆ. ಇದನ್ನೂ ಓದಿ: ಬೇಬಿ ಬಂಪ್ ಫೋಟೋಶೂಟ್‍ನಲ್ಲಿ ನಟಿ ಅಮೂಲ್ಯ

     

  • ಭಾರವಾದ ಹೃದಯದಿಂದ ಸೊಸೆ ಕುರಿತಾಗಿ ಬರೆದ ನಾಗರ್ಜುನ್

    ಭಾರವಾದ ಹೃದಯದಿಂದ ಸೊಸೆ ಕುರಿತಾಗಿ ಬರೆದ ನಾಗರ್ಜುನ್

    ಹೈದರಾಬಾದ್: ಸೊಸೆ ಸಮಂತಾ ಅಕ್ಕಿನೇನಿ ಮತ್ತು ಮಗ ನಾಗಚೈತನ್ಯ ವಿಚ್ಛೇದನದ ವಿಚಾರವಾಗಿ ನಾಗಾರ್ಜುನ ಬೇಸರವನ್ನು ವ್ಯಕ್ತಪಡಿಸಿದ್ದಾರೆ.

    ಭಾರವಾದ ಹೃದಯದಿಂದ, ನಾನು ಇದನ್ನು ಹೇಳುತ್ತೇನೆ, ಸ್ಯಾಮ್ ಮತ್ತು ಚಾಯ್ ನಡುವೆ ನಡೆದದ್ದು ತುಂಬಾ ದುರದೃಷ್ಟಕರವಾಗಿದೆ. ದಂಪತಿ ಮಧ್ಯೆ ಏನಾಗುತ್ತಿದೆ ಎನ್ನುವುದು ತುಂಬಾ ವೈಯಕ್ತಿಕವಾಗಿದೆ. ಇಬ್ಬರು ನನಗೆ ಪ್ರಿಯರು. ನನ್ನ ಕುಟುಂಬವು ಸ್ಯಾಮ್ ಜೊತೆ ಕಳೆದ ಕ್ಷಣಗಳನ್ನು ಗೌರವಿಸುತ್ತದೆ. ಅವಳು ಯಾವಾಗಲೂ ನಮಗೆ ಪ್ರಿಯಳಾಗಿರುತ್ತಾಳೆ. ದೇವರು ಅವರಿಬ್ಬರಿಗೂ ಶಕ್ತಿಯನ್ನು ನೀಡಲಿ ಎಂದು ಸೋಶಿಯಲ್ ಮೀಡಿಯಾದಲ್ಲಿ ಮಗ ಮತ್ತು ಸೊಸೆ ದೂರವಾಗುತ್ತಿರುವ ಕುರಿತಾಗಿ ಬೇಸರ ಹೊರಹಾಕಿದ್ದಾರೆ. ಇದನ್ನೂ ಓದಿ:  ದಾಂಪತ್ಯಕ್ಕೆ ಅಂತ್ಯ ಹಾಡಿದ ಸಮಂತಾ, ನಾಗ ಚೈತನ್ಯ

    2017ರಲ್ಲಿ ಮದುವೆಯಾದ ನಟಿ ಸಮಂತಾ ಮತ್ತು ಅಕ್ಕಿನೇನಿ ನಾಗ ಚೈತನ್ಯ ಅವರ ಸಂಸಾರದಲ್ಲಿ ಈಗ ಏನೋ ಕಿರಿಕ್ ಎದುರಾಗಿದೆ ಎಂಬ ಅನುಮಾನ ಕೆಲವು ದಿನಗಳ ಹಿಂದೆ ಮೂಡಿತ್ತು. ಆ ಅನುಮಾನಕ್ಕೆ ಪೂರಕ ಆಗುವಂತಹ ಅನೇಕ ಘಟನೆಗಳು ಮತ್ತೆ ಮತ್ತೆ ನಡೆಯುತ್ತಿದ್ದವು. ಇಂದು ಇಬ್ಬರು ತಾವು ದೂರವಾಗುತ್ತಿರುವುದು ನಿಜ ಎಂದು ಸೋಶಿಯಲ್ ಮೀಡಿಯಾ ಮೂಲಕವಾಗಿ ಹೇಳಿಕೊಂಡಿದ್ದಾರೆ. ಸೊಸೆ ಕುಟುಂಬದಿಂದ ದೂರವಾಗುತ್ತಿರುವ ಕುರಿತಾಗಿ ನಾಗಾರ್ಜುನ್ ಅವರು ಭಾರದ ಮನಸ್ಸಿನಿಂದ ಕೆಲವು ವಿಚಾರಗಳನ್ನು ಶೇರ್ ಮಾಡಿಕೊಂಡಿದ್ದಾರೆ. ಇದನ್ನೂ ಓದಿ:  ರಿಲೇಶನ್‍ಶಿಪ್‍ನಲ್ಲಿದ್ದಾಗ ಕಲಿಬೇಕು, ಮುಂದೆ ಹೋಗುತ್ತಿರಬೇಕು: ಸೋನಾಕ್ಷಿ ಸಿನ್ಹಾ

     

    View this post on Instagram

     

    A post shared by S (@samantharuthprabhuoffl)

    ಕೆಲವು ದಿನಗಳ ಹಿಂದೆ ಸಮಂತಾ ಅವರು ಸೋಶಿಯಲ್ ಮೀಡಿಯಾದಲ್ಲಿ ತಮ್ಮ ಹೆಸರಿನ ಜೊತೆ ಇದ್ದ ಅಕ್ಕಿನೇನಿ ಎಂಬ ಸರ್‍ನೇಮ್ ಅನ್ನು ತೆಗೆದು ಹಾಕಿದ್ದರು. ಇದಾದ ಬಳಿಕ ಇಬ್ಬರ ದಾಂಪತ್ಯದ ಬಗ್ಗೆ ಅಭಿಮಾನಿಗಳಲ್ಲಿ ಸಂಶಯ ಹುಟ್ಟಿಕೊಂಡಿತ್ತು. ಆ ಬಗ್ಗೆ ಕುಟುಂಬದವರು ಏನೂ ಪ್ರತಿಕ್ರಿಯೆ ನೀಡಿಲ್ಲ. ಆದರೆ ಸಮಂತಾ, ನಾಗ ಚೈತನ್ಯ ನಾಲ್ಕು ವರ್ಷಗಳ ದಾಂಪತ್ಯಕ್ಕೆ ಇಂದು ಕೊನೆ ಹಾಡಿದ್ದಾರೆ. ತಾವು ವಿಚ್ಛೇದನ ಪಡೆದುಕೊಳ್ಳುತ್ತಿರುವ ಕುರಿತಾಗಿ ತಿಳಿಸಿದ್ದಾರೆ.

  • ಹ್ಯಾಟ್ರಿಕ್ ಹೀರೋ ಜತೆ ಸೂಪರ್ ಸ್ಟಾರ್ ನಾಗಾರ್ಜುನ್ ನಟಿಸಲ್ವಂತೆ..!

    ಹ್ಯಾಟ್ರಿಕ್ ಹೀರೋ ಜತೆ ಸೂಪರ್ ಸ್ಟಾರ್ ನಾಗಾರ್ಜುನ್ ನಟಿಸಲ್ವಂತೆ..!

    ಬೆಂಗಳೂರು: ಸೂರಿ ನಿರ್ದೇಶನದ ಟಗರು ಚಿತ್ರದ ನಂತರ ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ಮತ್ತೆ ಖಡಕ್ ಪೊಲೀಸ್ ಅಧಿಕಾರಿಯಾಗಿ ರುಸ್ತುಂ ಚಿತ್ರದಲ್ಲಿ ಕಾಣಿಸಿಕೊಳ್ಳಲಿರುವುದು ಗೊತ್ತಿರದ ವಿಚಾರವೇನಲ್ಲ. ಟಗರು ಚಿತ್ರದಲ್ಲಿ ಶಿವಣ್ಣನಿಗೆ ಡಾಲಿ ಧನಂಜಯ್, ಚಿಟ್ಟೆ ವಸಿಷ್ಠ ಸಿಂಹ ವಿಲನ್ ಗಳಾಗಿ ಠಕ್ಕರ್ ಕೊಟ್ಟಿದ್ರು. ರುಸ್ತುಂ ಚಿತ್ರದಲ್ಲಿಯೂ ವಿಲನ್ ಗಳದ್ದೇ ಹಾವಳಿಯಿದ್ದು ಶಿವಣ್ಣನಿಗೆ ಎದುರಾಳಿಯಾಗಿ ಬಾಲಿವುಡ್ ನಟ ವಿವೇಕ್ ಒಬೇರಾಯ್ ನಟಿಸುತ್ತಿದ್ದಾರೆ. ಎಲ್ಲ ಅಂದುಕೊಂಡಂತಾಗಿದ್ದರೆ ತೆಲುಗಿನ ಸೂಪರ್ ಸ್ಟಾರ್ ಅಕ್ಕಿನೇನಿ ನಾಗಾರ್ಜುನ್ ಹಾಗೂ ಶಿವಣ್ಣನ ನಡುವಿನ ಕಾಳಗವನ್ನೇ ನೋಡಬಹುದಾಗಿತ್ತು. ಆದ್ರೆ ಅಕ್ಕಿನೇನಿ ನಾಗಾರ್ಜುನ್ ಶಿವರಾಜ್ ಕುಮಾರ್ ಜತೆ ನಟಿಸೋದಿಲ್ಲ ಅಂತಾ ಹೇಳಿದ್ದಾರಂತೆ..!

    ಅಕ್ಕಿನೇನಿ ರಿಜೆಕ್ಟ್ ಮಾಡೋದಕ್ಕೆ ಕಾರಣವೇನು?
    ಶಿವಣ್ಣ ಮೊದಲೇ ಮಾಸ್ ಹೀರೋ. ಅಲ್ಲದೇ ರುಸ್ತುಂ ಹೇಳಿ ಕೇಳಿ ಮಾಸ್ ಎಂಟರ್ ಟೈನಿಂಗ್ ಸಿನಿಮಾ. ಆಕ್ಷನ್ ಓರಿಯೆಂಟೆಡ್ ಸಿನಿಮಾ ಕೂಡ. ಶಿವಣ್ಣ ಖಡಕ್ಕಾಗಿ ತಮ್ಮ ಖದರ್ ತೋರಿಸ್ತಾರೆ ಅನ್ನೋದು ಎಲ್ಲರಿಗೂ ತಿಳಿದ ವಿಚಾರ. ಹಾಗಿರೋವಾಗ ಅವರ ಎದುರಿಗೆ ತೊಡೆ ತಟ್ಟಿ ನಿಲ್ಲೋ ವಿಲನ್ ಅವರಿಗೆ ಸರಿ ಸಮನಾಗಿ ಇರಬೇಕಲ್ವಾ. ಯಾರೋ ನಟಿಸಿದ್ರೆ ಆ ಪಾತ್ರಕ್ಕೆ ತೂಕ ಇರೋದಿಲ್ಲ ಅಂದರಂತೆ.

    ನಿರ್ದೇಶಕ ರವಿ ವರ್ಮ ಏನ್ ಹೇಳ್ತಾರೆ..?
    ಈ ಮೊದಲು ರುಸ್ತುಂ ನಿರ್ದೇಶಕ ರವಿ ವರ್ಮ ಶಿವಣ್ಣನಿಗೆ ಎದುರಾಳಿಯಾಗಿ ನಾಗಾರ್ಜುನ ಮ್ಯಾಚ್ ಆಗ್ತಾರೆ ಅಂತ ಯೋಚಿಸಿ ಅವರನ್ನು ಅಪ್ರೋಚ್ ಮಾಡಿದ್ದಂತೆ. ಪ್ರಾರಂಭದಲ್ಲಿ ಖಂಡಿತಾ ಮಾಡ್ತೀನಿ ಅಂತ ನಾಗಾರ್ಜುನ್, ಆಮೇಲೆ ಪಾತ್ರದ ಆಳ ತಿಳಿದ ಮೇಲೆ ನಟಿಸಲು ನೋ ಎಂದಿದ್ದಾರಂತೆ. ಆಮೇಲೆ ಅನಿಲ್ ಕಪೂರ್ ಸೆಲೆಕ್ಟ್ ಮಾಡಿದ್ರೂ ಕಾರಣಾಂತರಗಳಿಂದ ಅವರೂ ರಿಜೆಕ್ಟ್ ಆಗಿ ಅಂತಿಮವಾಗಿ ವಿವೇಕ್ ಒಬೇರಾಯ್ ಅವರನ್ನು ಫೈನಲ್ ಮಾಡಲಾಗಿದೆಯಂತೆ.