Tag: alcohol

  • ಟೈರ್ ಬ್ಲಾಸ್ಟ್‌ನಿಂದ ವಾಹನ ಪಲ್ಟಿ – ಅಪಾರ ಪ್ರಮಾಣದ ಮದ್ಯ ನಾಶ

    ಟೈರ್ ಬ್ಲಾಸ್ಟ್‌ನಿಂದ ವಾಹನ ಪಲ್ಟಿ – ಅಪಾರ ಪ್ರಮಾಣದ ಮದ್ಯ ನಾಶ

    ಕಲಬುರಗಿ: ಟೈರ್ ಬ್ಲಾಸ್ಟ್ (tyre Blast) ಆಗಿ ಮದ್ಯ (Alcohol) ಸರಬರಾಜು ಮಾಡುತ್ತಿದ್ದ ವಾಹನ ಪಲ್ಟಿಯಾದ ಘಟನೆ ಕಲಬುರಗಿ (Kalaburagi) ಜಿಲ್ಲೆಯ ಜೇವರ್ಗಿ ತಾಲೂಕಿನ ಹಸನಾಪುರ ಗ್ರಾಮದ ಬಳಿ ನಡೆದಿದೆ.

    ಕಲಬುರಗಿ ನಗರದ ಗೋದಮಿನಿಂದ ಜೇವರ್ಗಿ ಪಟ್ಟಣದ ವೈನ್ ಶಾಪ್‍ಗಳಿಗೆ ಮದ್ಯವನ್ನು ಸರಬರಾಜು ಮಾಡಲು ಹೋಗುತ್ತಿದ್ದ ವಾಹನದ ಟೈರ್ ಬ್ಲಾಸ್ಟ್ ಆಗಿದೆ. ಈ ವೇಳೆ ಚಾಲಕನ ನಿಯಂತ್ರಣ ತಪ್ಪಿ ವಾಹನ ಪಲ್ಟಿಯಾಗಿದೆ. ಪರಿಣಾಮವಾಗಿ ಅಪಾರ ಪ್ರಮಾಣದ ಮದ್ಯದ ಬಾಟಲಿಗಳು ನಾಶವಾಗಿದೆ. ಇದನ್ನೂ ಓದಿ: ಐಷಾರಾಮಿ ಕಾರುಗಳ ಹೆಸರಲ್ಲಿ ಸ್ಯಾಂಟ್ರೋ ರವಿಯಿಂದ ನಡೀತಿತ್ತು ಸುಂದರಿಯರ ಸೆಲೆಕ್ಷನ್..!

    ಇನ್ನೂ ಘಟನೆ ವೇಳೆ ಯಾವುದೇ ಪ್ರಾಣಹಾನಿ ಆಗಿಲ್ಲ. ಚಾಲಕನಿಗೆ ಹಾಗೂ ಕ್ಲಿನರ್ ಸಣ್ಣಪುಟ್ಟ ಗಾಯಗಳಾಗಿದ್ದು, ಸದ್ಯ ಅವರನ್ನು ಹೆಚ್ಚಿನ ಚಿಕಿತ್ಸೆಗಾಗಿ ಸ್ಥಳೀಯ ಆಸ್ಪತ್ರೆಗೆ ಸ್ಥಳಾಂತರಿಸಲಾಗಿದೆ. ಘಟನೆಗೆ ಸಂಬಂಧಿಸಿದಂತೆ ಸ್ಥಳಕ್ಕೆ ಕಲಬುರಗಿ ನಗರ ಸಂಚಾರಿ 1 ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಇದನ್ನೂ ಓದಿ: ಹೊಸ ಪಕ್ಷದೊಂದಿಗೆ ಫುಲ್ ಆಕ್ಟೀವ್- ಜನಾರ್ದನ ರೆಡ್ಡಿ ಓಡಾಟದಿಂದ ಬಿಜೆಪಿಗೆ ಶುರುವಾಯ್ತು ನಡುಕ

    Live Tv
    [brid partner=56869869 player=32851 video=960834 autoplay=true]

    Join our Whatsapp group by clicking the below link
    https://chat.whatsapp.com/E6YVEDajTzH06LOh77r25k

  • ಪಾನಮತ್ತನಾಗಿ ಕರೆದೊಯ್ಯಲು ಬಂದ ಪತಿಯನ್ನು ಸರಪಳಿಯಲ್ಲಿ ಕಟ್ಟಿ ಹಾಕಿದ ಪತ್ನಿ!

    ಪಾನಮತ್ತನಾಗಿ ಕರೆದೊಯ್ಯಲು ಬಂದ ಪತಿಯನ್ನು ಸರಪಳಿಯಲ್ಲಿ ಕಟ್ಟಿ ಹಾಕಿದ ಪತ್ನಿ!

    ಚಿತ್ರದುರ್ಗ:  ಮದ್ಯಪಾನದ ಚಟವನ್ನು ಬಿಡಿಸಲು ಗಂಡನನ್ನು ಪತ್ನಿಯೇ ಸರಪಳಿಯಲ್ಲಿ ಬಂಧಿಸಿರುವ ಘಟನೆ ಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಾಲೂಕಿನ ಹೊಸೂರು ಗ್ರಾಮದಲ್ಲಿ ಬೆಳಕಿಗೆ ಬಂದಿದೆ.

    ‘ಒಲಿದರೆ ನಾರಿ ಮುನಿದರೆ ಮಾರಿ’ ಎಂಬ ಮಾತಿದೆ. ಅಂತೆಯೇ ಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಾಲೂಕಿನ ಹೊಸೂರು ಗ್ರಾಮದ ಅಮೃತಾ, ಹಿರಿಯೂರು ತಾಲೂಕಿನ ಕಳವಿಬಾಗಿಯ ರಂಗನಾಥ್ ಜೊತೆ ವಿವಾಹವಾಗಿದ್ದಳು. ರಂಗನಾಥ್ ಬೆಂಗಳೂರಿನ ಖಾಸಗಿ ಕಂಪನಿಯಲ್ಲಿ ಕೆಲಸ ಮಾಡ್ತಿದ್ದನು. ಇದನ್ನೂ ಓದಿ: ಕೆಂಪೇಗೌಡ ವಿಮಾನ ನಿಲ್ದಾಣದ ಭದ್ರತಾ ಸಿಬ್ಬಂದಿ ನನ್ನ ಶರ್ಟ್ ತೆಗೆದು ನಿಲ್ಲಿಸಿದ್ದಾರೆ: ಯುವತಿಯ ಆರೋಪ

    ಕೋವಿಡ್ ಎರಡನೇ ಅಲೆ ವೇಳೆ ಸ್ವಗ್ರಾಮ ಸೇರಿದ್ದ ರಂಗನಾಥ್, ಕುಡಿತದ ದಾಸನಾಗಿದ್ದನು. ಆಗ ದುಡಿಯಲಾರದ ಗಂಡನೊಂದಿಗೆ ಅಮೃತಾ ಹಿರಿಯೂರು ತಾಲೂಕಿನ ಹರ್ತಿಕೋಟೆಯಲ್ಲಿ ವಾಸವಾಗಿದ್ದಳು. ಇತ್ತ ಪ್ರತಿನಿತ್ಯ ಕುಡಿದು ಮನೆಗೆ ಧಾವಿಸುತಿದ್ದ ರಂಗನಾಥ್, ಪತ್ನಿ ಜೊತೆ ಜಗಳವಾಡ್ತಿದ್ದನು. ಇದರಿಂದ ಬೇಸತ್ತ ಪತ್ನಿ, ಪತಿಯಿಂದ ದೂರವಿದ್ದು, ತವರು ಮನೆಯಲ್ಲೇ ಬೀಡುಬಿಟ್ಟಿದ್ದಳು.

    ALCOHOL

    ಇತ್ತ ತವರು ಸೇರಿದ್ದ ಪತ್ನಿ ಅಮೃತಾಳನ್ನು ಕರೆತರಲು ಫುಲ್ ಟೈಟ್ ಆಗಿ ರಂಗನಾಥ್ ಬುಧವಾರ ಆಗಮಿಸಿ, ಮನೆ ಮುಂದೆ ಗಲಾಟೆ ಮಾಡಿದ್ದಾನೆ. ತಂದೆ ಉಮೇಶ್ ಜೊತೆ ಗಲಾಟೆ ಮಾಡುತ್ತಿದ್ದ ಪತಿಯ ವರ್ತನೆ ಕಂಡು ಅಮೃತಾ, ನೀನು ಕುಡಿಯುವುದು ಬಿಡುವ ತನಕ ಮನೆಗೆ ಬರಲ್ಲ ಅಂತಾ ಅವಾಜ್ ಹಾಕಿದ್ದಾಳೆ. ಅಲ್ಲದೆ ಅಲ್ಲೇ ಇದ್ದ ನಾಯಿ ಕಟ್ಟಿಹಾಕುವ ಸರಪಳಿಯನ್ನು ತಂದು ಪತಿಯನ್ನು ಬಂಧಿಸಿ, ಕಂಬಕ್ಕೆ ಕಟ್ಟಿದ್ದಾಳೆ.

    ಗಂಡನನ್ನು ಪತ್ನಿಯೇ ಸರಪಳಿಯಿಂದ ಬಂಧಿಸಿರುವ ವೀಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ತಾಣಗಳಲ್ಲಿ ಮಹಿಳೆಯ ಧೈರ್ಯಕ್ಕೆ ಮಹಿಳೆಯರು ಪ್ರಜ್ಞಾವಂತರು ಶಹಬ್ಬಾಸ್ ಎಂದಿದ್ದಾರೆ. ಈ ಘಟನೆ ಅಬ್ಬಿನಹೊಳೆ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.

    Live Tv
    [brid partner=56869869 player=32851 video=960834 autoplay=true]

    Join our Whatsapp group by clicking the below link
    https://chat.whatsapp.com/E6YVEDajTzH06LOh77r25k

  • ಮದ್ಯ, ದನದ ಮಾಂಸವನ್ನು ಸೇವಿಸಲು ನಿರಾಕರಿಸಿದ ವ್ಯಕ್ತಿಗೆ ಐವರಿಂದ ಹಲ್ಲೆ

    ಮದ್ಯ, ದನದ ಮಾಂಸವನ್ನು ಸೇವಿಸಲು ನಿರಾಕರಿಸಿದ ವ್ಯಕ್ತಿಗೆ ಐವರಿಂದ ಹಲ್ಲೆ

    ರಾಂಚಿ: ಮದ್ಯ (Alcohol) ಹಾಗೂ ದನದ ಮಾಂಸವನ್ನು (Beef) ಸೇವಿಸಲು ನಿರಾಕರಿಸಿದ್ದಕ್ಕೆ ವ್ಯಕ್ತಿಯೊಬ್ಬನಿಗೆ 5 ಜನರು ಸೇರಿ ದೊಣ್ಣೆ ಹಾಗೂ ಕಲ್ಲುಗಳಿಂದ ಥಳಿಸಿದ ಘಟನೆ ಜಾರ್ಖಂಡ್‍ನ (Jharkhand) ಸಾಹಿಬ್‍ಗಂಜ್‍ನ ರಾಧಾನಗರ ಗ್ರಾಮದಲ್ಲಿ ನಡೆದಿದೆ.

    ಚಂದನ್ ರವಿದಾಸ್ ಹಲ್ಲೆಗೊಳಗಾದ ವ್ಯಕ್ತಿ. ದನದ ಮಾಂಸವನ್ನು ತಿನ್ನಲು ನಿರಾಕರಿಸಿದ್ದಕ್ಕಾಗಿ ಮಿಥುನ್ ಶೇಖ್ ಹಾಗೂ ಇತರ ನಾಲ್ವರು ಸೇರಿ ಥಳಿಸಿದ್ದಾರೆ ಎಂದು ಚಂದನ್ ರವಿದಾಸ್ ಆರೋಪಿಸಿದ್ದಾನೆ.

    ಪಂಕಿಜ ಮೋರ್‌ನಲ್ಲಿರುವ ಅಂಗಡಿಯೊಂದಕ್ಕೆ ಚಂದನ್ ಹೋಗಿದ್ದ. ಆ ಅಂಗಡಿಯ ಹಿಂದೆ ಐವರು ಸೇರಿ ದನದ ಮಾಂಸವನ್ನು ಕುಡಿದು ಸೇವಿಸುತ್ತಿರುವುದು ಕಂಡು ಬಂದಿದೆ. ಇದೇ ವೇಳೆ ಚಂದನ್‍ಗೆ ಹಾಗೂ ಆ ಐವರಿಗೆ ತೀವ್ರ ವಾಗ್ವಾದ ನಡೆದಿದೆ. ಅದಾದ ಬಳಿಕ ಆ ಐವರು ಚಂದನ್‍ಗೆ ಬಲವಂತವಾಗಿ ಗೋಮಾಂಸ ತಿನ್ನಲು ಯತ್ನಿಸಿದ್ದಾರೆ. ಇದನ್ನೂ ಓದಿ: ಅನ್ಯ ಸಮುದಾಯದವರೊಂದಿಗೆ ಮಗ ಮಾತನಾಡಿದ್ದಕ್ಕೆ ನೆರೆಹೊರೆಯವರಿಂದ ತಂದೆಯ ಹತ್ಯೆ

    ಇದಕ್ಕೆ ಚಂದನ್ ನಿರಾಕರಿಸಿದ್ದಕ್ಕೆ ಆತನ ಮೇಲೆ ಆರೋಪಿಗಳು ಕಲ್ಲು (Stone) ತೂರಿ ಮೊಬೈಲ್‍ನ್ನು ಕಿತ್ತುಕೊಂಡಿದ್ದಾರೆ. ನಂತರ ಚಂದನ್‍ನಿಂದ 8 ಸಾವಿರ ರೂ. ದೋಚಿದ್ದಾರೆ ಆರೋಪಿಸಿದರು. ಘಟನೆಗೆ ಸಂಬಂಧಿಸಿ ಚಂದನ್ ಪೊಲೀಸರಿಗೆ ದೂರು ನೀಡಿದ್ದು, ಪ್ರಕರಣ ದಾಖಲಿಸಿಕೊಂಡ ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಇದನ್ನೂ ಓದಿ: ಸಿದ್ದೇಶ್ವರ ಶ್ರೀಗಳ ಅಂತ್ಯಸಂಸ್ಕಾರಕ್ಕೆ ಭರದ ಸಿದ್ಧತೆ- ಸಂಜೆ 5 ಗಂಟೆ ವೇಳೆಗೆ ಪಾರ್ಥಿವ ಶರೀರಕ್ಕೆ ಅಗ್ನಿ ಸ್ಪರ್ಶ

    Live Tv
    [brid partner=56869869 player=32851 video=960834 autoplay=true]

  • ಮದ್ಯವ್ಯಸನಿ ಅಧಿಕಾರಿಗಿಂತ ರಿಕ್ಷಾ ಎಳೆಯುವವನು ಉತ್ತಮ ವರನಾಗಬಹುದು: ಮಗನ ನೋವಿನ ಕಥೆ ವಿವರಿಸಿದ ಕೇಂದ್ರ ಸಚಿವ

    ಮದ್ಯವ್ಯಸನಿ ಅಧಿಕಾರಿಗಿಂತ ರಿಕ್ಷಾ ಎಳೆಯುವವನು ಉತ್ತಮ ವರನಾಗಬಹುದು: ಮಗನ ನೋವಿನ ಕಥೆ ವಿವರಿಸಿದ ಕೇಂದ್ರ ಸಚಿವ

    ಲಕ್ನೋ: ಮದ್ಯವ್ಯಸನಿ ಅಧಿಕಾರಿಗಿಂತ ರಿಕ್ಷಾ ಎಳೆಯುವವನು ಅಥವಾ ಕಾರ್ಮಿಕ ಉತ್ತಮ ವರನಾಗಬಹುದು ಎಂದು ಕೇಂದ್ರ ವಸತಿ ಮತ್ತು ನಗರ ವ್ಯವಹಾರಗಳ ರಾಜ್ಯ ಸಚಿವ, ಉತ್ತರ ಪ್ರದೇಶದ ಸುಲ್ತಾನ್‌ಪುರ ಕ್ಷೇತ್ರದ ಬಿಜೆಪಿ ಸಂಸದ ಕೌಶಲ್ ಕಿಶೋರ್(Kaushal Kishore) ಹೇಳಿದ್ದಾರೆ.

    ತಮ್ಮ ಕ್ಷೇತ್ರದಲ್ಲಿ ಆಯೋಜನೆಗೊಂಡಿದ್ದ ಮದ್ಯ ವರ್ಜನ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು ಹೆಣ್ಣುಮಕ್ಕಳನ್ನು ಮದ್ಯವ್ಯಸನಿಗಳಿಗೆ(Alcoholics) ಮದುವೆ ಮಾಡಿಕೊಡಬೇಡಿ ಎಂದು ಪೋಷಕರಲ್ಲಿ ಮನವಿ ಮಾಡಿದರು. ಮದ್ಯವ್ಯಸನಿಗಳ ಜೀವಿತಾವಧಿ ತುಂಬಾ ಕಡಿಮೆ ಎಂದು ಹೇಳಿ ತಮ್ಮ ಮಗನ ಕಥೆಯನ್ನು ವಿವರಿಸಿ ತಮಗಾದ ನೋವನ್ನು ತೋಡಿಕೊಂಡರು.

    ನಾನು ಸಂಸದನಾಗಿಯೂ, ನನ್ನ ಪತ್ನಿ ಶಾಸಕಿಯಾಗಿದ್ದರೂ ನಮಗೆ ನಮ್ಮ ಮಗನ ಜೀವ ಉಳಿಸಲು ಸಾಧ್ಯವಾಗದೇ ಇರುವಾಗ ಸಾಮಾನ್ಯ ಜನರಿಗೆ ಸಾಧ್ಯವೇ ಎಂದು ಪ್ರಶ್ನಿಸಿದರು.

    ನನ್ನ ಮಗ ಆಕಾಶ್ ಸ್ನೇಹಿತರೊಂದಿಗೆ ಮದ್ಯ ಸೇವಿಸುವ ಅಭ್ಯಾಸವನ್ನು ಬೆಳೆಸಿದ್ದ. ಈ ವಿಚಾರ ತಿಳಿದು ಆತನನ್ನು ಮದ್ಯ ವರ್ಜನ ಶಿಬಿರಕ್ಕೆ ಸೇರಿಸಲಾಯಿತು. ಅವನು ಕೆಟ್ಟ ಚಟವನ್ನು ಬಿಟ್ಟಿರಬಹುದು ಎಂದು ಭಾವಿಸಿ ಆರು ತಿಂಗಳ ಬಳಿಕ ಮದುವೆ ಮಾಡಿಸಿದ್ದೆವು. ಆದರೆ ಅವನು ಮತ್ತೆ ಕುಡಿಯಲು ಪ್ರಾರಂಭಿಸಿದ್ದ. ಅಂತಿಮವಾಗಿ ಅವನ ಸಾವಿಗೆ ಮದ್ಯವೇ ಕಾರಣವಾಯಿತು. ಎರಡು ವರ್ಷಗಳ ಹಿಂದೆ ಅಕ್ಟೋಬರ್ 19 ರಂದು ಆಕಾಶ್ ಮೃತಪಟ್ಟಾಗ ಆತನ ಮಗನಿಗೆ ಕೇವಲ ಎರಡು ವರ್ಷ ವಯಸ್ಸಾಗಿತ್ತು ಎಂದು ತಮ್ಮ ನೋವಿನ ಕಥೆಯನ್ನು ವಿವರಿಸಿದರು. ಇದನ್ನೂ ಓದಿ: 2022ರಲ್ಲಿ ದಾಖಲೆಯ ಡ್ರಿಂಕ್ ಅಂಡ್ ಡ್ರೈವ್ ಕೇಸ್ ದಾಖಲು

    ನನ್ನ ಮಗನನ್ನು ಉಳಿಸಲು ನನಗೆ ಸಾಧ್ಯವಾಗಲಿಲ್ಲ. ಮಗ ಮೃತಪಟ್ಟಿದ್ದರಿಂದ ಹೆಂಡತಿ ವಿಧವೆಯಾದಳು. ಈ ಕಾರಣಕ್ಕೆ ಹೆಣ್ಣುಮಕ್ಕಳನ್ನು ಮತ್ತು ಸಹೋದರಿಯರನ್ನು ನೀವು ರಕ್ಷಿಸಬೇಕು ಎಂದು ಜನರಲ್ಲಿ ಮನವಿ ಮಾಡಿದರು.

    ಸ್ವಾತಂತ್ರ್ಯ ಚಳವಳಿಯ 90 ವರ್ಷಗಳ ಅವಧಿಯಲ್ಲಿ 6.32 ಲಕ್ಷ ಜನರು ಬ್ರಿಟಿಷರ ವಿರುದ್ಧ ಹೋರಾಡಿ ತಮ್ಮ ಪ್ರಾಣವನ್ನು ತ್ಯಾಗ ಮಾಡಿದ್ದಾರೆ. ಆದರೆ ವ್ಯಸನದಿಂದಾಗಿ ಪ್ರತಿ ವರ್ಷ ದೇಶದಲ್ಲಿ ಸುಮಾರು 20 ಲಕ್ಷ ಜನರು ಸಾಯುತ್ತಿದ್ದಾರೆ ಎಂಬ ಆತಂಕಕಾರಿ ವಿಚಾರವನ್ನು ತಿಳಿಸಿದರು.

    ಜಿಲ್ಲೆಯನ್ನು ವ್ಯಸನಮುಕ್ತಗೊಳಿಸಲು ಎಲ್ಲಾ ಶಾಲೆಗಳಿಗೆ ವ್ಯಸನಮುಕ್ತ ಅಭಿಯಾನವನ್ನು ಕೊಂಡೊಯ್ಯಬೇಕು ಮತ್ತು ಬೆಳಗ್ಗಿನ ಪ್ರಾರ್ಥನೆಯ ಸಮಯದಲ್ಲಿ ಮಕ್ಕಳಿಗೆ ಈ ಬಗ್ಗೆ ಅರಿವು ಮೂಡಿಸಬೇಕು ಎಂದು ಸಚಿವರು ಹೇಳಿದರು.

    Live Tv
    [brid partner=56869869 player=32851 video=960834 autoplay=true]

  • ಆಸ್ಪತ್ರೆಗೆ ಹೋಗೋ ದಾರಿಯಲ್ಲಿ ಗಾಯಾಳುಗೆ ಮದ್ಯ ನೀಡಿ, ತಾನೂ ಕುಡಿದ ಅಂಬುಲೆನ್ಸ್ ಚಾಲಕ

    ಆಸ್ಪತ್ರೆಗೆ ಹೋಗೋ ದಾರಿಯಲ್ಲಿ ಗಾಯಾಳುಗೆ ಮದ್ಯ ನೀಡಿ, ತಾನೂ ಕುಡಿದ ಅಂಬುಲೆನ್ಸ್ ಚಾಲಕ

    ಭುವನೇಶ್ವರ: ಅಂಬುಲೆನ್ಸ್ ಚಾಲಕನೊಬ್ಬ (Ambulance Driver) ಆಸ್ಪತ್ರೆಗೆ ಹೋಗುತ್ತಿದ್ದ ದಾರಿಯಲ್ಲಿ ವಾಹನವನ್ನು ನಿಲ್ಲಿಸಿ, ಗಾಯಗೊಂಡಿದ್ದ ಪ್ರಯಾಣಿಕನಿಗೆ ಮದ್ಯ (Alcohol) ನೀಡಿದ್ದಲ್ಲದೇ ತಾನೂ ಸೇವಿಸಿರುವ ಘಟನೆ ಒಡಿಶಾದಲ್ಲಿ (Odisha) ನಡೆದಿದೆ. ಘಟನೆಯ ವೀಡಿಯೋವನ್ನು ಸೆರೆಹಿಡಿಯಲಾಗಿದ್ದು ಸಾಮಾಜಿಕ ಮಾಧ್ಯಮಗಳಲ್ಲಿ ಹರಿದಾಡಿದೆ.

    ವರದಿಗಳ ಪ್ರಕಾರ ಅಂಬುಲೆನ್ಸ್ ಚಾಲಕ ಆಸ್ಪತ್ರೆಗೆ ಹೋಗುತ್ತಿದ್ದ ದಾರಿಯಲ್ಲಿ ವಾಹನವನ್ನು ಟೊರ್ಟೋಲ್ ಪ್ರದೇಶದ ಹೆದ್ದಾರಿಯ ಬದಿಯಲ್ಲಿ ನಿಲ್ಲಿಸಿದ್ದಾನೆ. ಬಳಿಕ 2 ಗ್ಲಾಸ್‌ಗಳಿಗೆ ಮದ್ಯವನ್ನು ಸುರಿದಿದ್ದಾನೆ. ಒಂದು ಗ್ಲಾಸ್ ಅನ್ನು ಅಂಬುಲೆನ್ಸ್ನಲ್ಲಿ ಮಲಗಿದ್ದ ಗಾಯಾಳುವಿಗೆ ನೀಡಿದ್ದು, ಇನ್ನೊಂದು ಗ್ಲಾಸ್‌ನಲ್ಲಿದ್ದ ಮದ್ಯವನ್ನು ತಾನು ಕುಡಿದಿದ್ದಾನೆ. ಈ ಎಲ್ಲಾ ದೃಶ್ಯಗಳು ಸೆರೆಹಿಡಿಯಲಾದ ವೀಡಿಯೋದಲ್ಲಿ ಕಂಡುಬಂದಿದೆ.

    ಈ ವೀಡಿಯೋವನ್ನು ಸಾಮಾಜಿಕ ಜಾಲತಾಣಗಳಲ್ಲಿ ಅಪ್‌ಲೋಡ್ ಮಾಡಿದ ಬಳಿಕ ಘಟನೆ ಬೆಳಕಿಗೆ ಬಂದಿದೆ. ಈ ಬಗ್ಗೆ ಚಾಲಕನನ್ನು ಕೇಳಿದಾಗ ಆತ ಗಾಯಾಳುವೇ ತನ್ನ ಬಳಿ ಮದ್ಯ ನೀಡುವಂತೆ ಕೇಳಿದ್ದಾನೆ ಎಂದು ತಿಳಿಸಿದ್ದಾನೆ. ಅಂಬುಲೆನ್ಸ್‌ನಲ್ಲಿ ಒಬ್ಬ ಮಹಿಳೆ ಹಾಗೂ ಒಂದು ಮಗು ಇರುವುದೂ ಕಂಡುಬಂದಿದೆ.

    ಘಟನೆ ಬಗ್ಗೆ ಮಾತನಾಡಿರುವ ಜಗತ್‌ಸಿಂಗ್‌ಪುರ ಮುಖ್ಯ ಜಿಲ್ಲಾ ವೈದ್ಯಾಧಿಕಾರಿ (ಸಿಡಿಎಂಒ) ಡಾ. ಕ್ಷೇತ್ರಬಸಿ ದಾಶ್, ಇದು ಖಾಸಗಿ ಅಂಬುಲೆನ್ಸ್ ಆಗಿರುವುದರಿಂದ ನಾವು ಈ ಬಗ್ಗೆ ಹೆಚ್ಚಿನದೇನನ್ನೂ ಹೇಳಲು ಸಾಧ್ಯವಿಲ್ಲ. ಆದರೆ ಈ ರೀತಿ ತಪ್ಪು ಮಾಡಿರುವ ಚಾಲಕನ ವಿರುದ್ಧ ಪ್ರಾದೇಶಿಕ ಸಾರಿಗೆ ಕಚೇರಿ ಹಾಗೂ ಪೊಲೀಸರು ಕ್ರಮ ಕೈಗೊಳ್ಳಬೇಕು ಎಂದಿದ್ದಾರೆ. ಇದನ್ನೂ ಓದಿ: ಇನ್ಮುಂದೆ ಅಫ್ಘಾನ್‌ ವಿದ್ಯಾರ್ಥಿನಿಯರಿಗೆ ವಿಶ್ವವಿದ್ಯಾನಿಲಯ ಶಿಕ್ಷಣಕ್ಕೂ ಅವಕಾಶವಿಲ್ಲ

    ALCOHOL

    ಕುಡಿದು ವಾಹನ ಚಾಲನೆ ಮಾಡುವುದು ಸಂಚಾರ ಅಪರಾಧ ಎಂದು ಪರಿಗಣಿಸಲಾಗಿದೆ. ಆದರೆ ಇಲ್ಲಿಯವರೆಗೆ ಅಂಬುಲೆನ್ಸ್ ಚಾಲಕನ ವಿರುದ್ಧ ಯಾವುದೇ ದೂರು ದಾಖಲಾಗಿಲ್ಲ. ಎಫ್‌ಐಆರ್ ದಾಖಲಾದರೆ ಮಾತ್ರವೇ ತನಿಖೆ ನಡೆಸಲಾಗುವುದು ಎಂದು ತಿರ್ತೋಲ್ ಪೊಲೀಸ್ ಠಾಣೆಯ ಪ್ರಭಾರಿ ಇನ್ಸ್ಪೆಕ್ಟರ್ ಜುಗಲ್ ಕಿಶೋರ್ ದಾಸ್ ತಿಳಿಸಿದ್ದಾರೆ. ಘಟನೆಯ ಬಗ್ಗೆ ತನಿಖೆ ನಡೆಸಿ ಅಂಬುಲೆನ್ಸ್ ಚಾಲಕನ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಪ್ರದೇಶದ ನಿವಾಸಿಗಳು ಒತ್ತಾಯಿಸಿದ್ದಾರೆ. ಇದನ್ನೂ ಓದಿ: ಒಂದೇ ನೇಣಿಗೆ ಕೊರಳೊಡ್ಡಿ ಆತ್ಮಹತ್ಯೆಗೆ ಶರಣಾದ ಪ್ರೇಮಿಗಳು

    Live Tv
    [brid partner=56869869 player=32851 video=960834 autoplay=true]

  • ಮದ್ಯಪಾನ ಮಾಡೋರು ಸಾಯ್ತಾರೆ: ಬಿಹಾರ್ ಸಿಎಂ

    ಮದ್ಯಪಾನ ಮಾಡೋರು ಸಾಯ್ತಾರೆ: ಬಿಹಾರ್ ಸಿಎಂ

    ಪಾಟ್ನಾ: ಯಾರು ಮದ್ಯಪಾನ (Liquor) ಮಾಡುತ್ತಾರೋ ಅವರು ಸಾಯುತ್ತಾರೆ. ಈ ಪ್ರಕರಣ ನಮಗೆ ಉದಾಹರಣೆ ಆಗಿದೆ ಎಂದು ಬಿಹಾರ (Bihar) ಮುಖ್ಯಮಂತ್ರಿ ನಿತೀಶ್ ಕುಮಾರ್ (Nitish Kumar) ಹೇಳಿದರು.

    ಬಿಹಾರದ ಛಾಪ್ರಾದಲ್ಲಿ ಕಳ್ಳಬಟ್ಟಿ ಸೇವಿಸಿ 37 ಮಂದಿ ಬಲಿಯಾದ ಘಟನೆ ಕುರಿತು ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಮದ್ಯ ಸೇವಿಸುವವರು ಸಾಯುತ್ತಾರೆ. ಜನರು ಜಾಗರೂಕರಾಗಿರಬೇಕು ಎಂದ ಅವರು, ಕಳ್ಳಬಟ್ಟಿಯಿಂದ ಸಾವನ್ನಪ್ಪಿದವರ ಕುಟುಂಬಗಳಿಗೆ ಪರಿಹಾರ ನೀಡುವುದಿಲ್ಲ ಎಂದು ತಿಳಿಸಿದರು.

    ಮದ್ಯ ನಿಷೇಧದ ಬಗ್ಗೆ ನಾವು ಕಟ್ಟುನಿಟ್ಟಿನ ಕ್ರಮ ಕೈಗೊಂಡಿದ್ದೇವೆ. ಆದರೆ ಜನರು ಹೆಚ್ಚು ಜಾಗರೂಕರಾಗಿರಬೇಕು. ನಿಷೇಧವಿರುವಾಗ ಮಾರಾಟವಾಗುವ ಮದ್ಯದಲ್ಲಿ ಏನಾದರೂ ತಪ್ಪು ಇರುತ್ತದೆ. ಹೀಗಾಗಿ ನೀವು ಮದ್ಯ ಸೇವಿಸಬಾರದು. ಹೆಚ್ಚಿನ ಜನರು ನಿಷೇಧ ನೀತಿಯನ್ನು ಒಪ್ಪಿದ್ದಾರೆ. ಆದರೆ ಕೆಲವರು ತಪ್ಪು ಮಾಡುತ್ತಾರೆ ಅವರು ವಾದಿಸಿದರು. ಇದನ್ನೂ ಓದಿ: ಕತ್ತು ಕೊಯ್ದ ಸ್ಥಿತಿಯಲ್ಲಿ ಖಾಸಗಿ ಕಾಲೇಜಿನ ಹಾಸ್ಟೆಲ್‍ನಲ್ಲಿ ವಿದ್ಯಾರ್ಥಿ ಶವ ಪತ್ತೆ

    ಛಾಪ್ರಾ ಜಿಲ್ಲೆಯ ವಿವಿಧ ಗ್ರಾಮಗಳಲ್ಲಿ ಕಳ್ಳಬಟ್ಟಿ ಸೇವಿಸಿ ಕನಿಷ್ಠ 38 ಮಂದಿ ಸಾವನ್ನಪ್ಪಿದ್ದು, ಇನ್ನಷ್ಟು ಸಾವು ಸಂಭವಿಸುವ ಭೀತಿ ಎದುರಾಗಿದೆ. ಏಪ್ರಿಲ್ 2016ರಲ್ಲಿ ನಿತೀಶ್ ಕುಮಾರ್ ಸರ್ಕಾರವು ಬಿಹಾರದಲ್ಲಿ ಮದ್ಯ ಮಾರಾಟ ಮತ್ತು ಸೇವನೆಯನ್ನು ಸಂಪೂರ್ಣವಾಗಿ ನಿಷೇಧಿಸಿತು. ಆದರೆ ನಿಷೇಧವನ್ನು ಜಾರಿಗೊಳಿಸುವಲ್ಲಿ ನಿರ್ಲಕ್ಷ್ಯ ತೋರಿದ ಆರೋಪದ ಮೇಲೆ ವಿಧಾನಸಭೆ ಮತ್ತು ಹೊರಗೆ ಬಿಜೆಪಿ ಪ್ರತಿಭಟನೆ ನಡೆಸಿತ್ತು. ಇದನ್ನೂ ಓದಿ: ಮೋದಿ ಸರ್ಕಾರದಲ್ಲಿ ಚೀನಾ ವಿರುದ್ಧ ಮಾತನಾಡಲು ಅವಕಾಶವೇ ಇಲ್ಲ – ಖರ್ಗೆ ಕಿಡಿ

    Live Tv
    [brid partner=56869869 player=32851 video=960834 autoplay=true]

  • ನಾಯಿಮರಿಗಳ ಬಾಲ, ಕಿವಿ ಕತ್ತರಿಸಿ ಸ್ನ್ಯಾಕ್ಸ್ ಮಾಡಿ ತಿಂದ ಕುಡುಕ

    ನಾಯಿಮರಿಗಳ ಬಾಲ, ಕಿವಿ ಕತ್ತರಿಸಿ ಸ್ನ್ಯಾಕ್ಸ್ ಮಾಡಿ ತಿಂದ ಕುಡುಕ

    ಲಕ್ನೋ: ಕುಡುಕನೊಬ್ಬ ಮದ್ಯ (alcohol) ಸೇವಿಸಿದ ಅಮಲಿನಲ್ಲಿ 2 ನಾಯಿಮರಿಗಳ (Puppy) ಬಾಲ (Tail) ಮತ್ತು ಕಿವಿಗೆ (Ear) ಉಪ್ಪು ಸವರಿ ಸ್ನ್ಯಾಕ್ಸ್ ತಿಂದ ಅಮಾನವೀಯ ಘಟನೆ ಉತ್ತರ ಪ್ರದೇಶದ ಬರೇಲಿಯಲ್ಲಿ ನಡೆದಿದೆ.

    ಬರೇಲಿ ಜಿಲ್ಲೆಯ ಫರೀದ್‍ಪುರ ಪ್ರದೇಶದ ಎಸ್‍ಡಿಎಂ ಕಾಲೋನಿಯಲ್ಲಿ ಈ ಘಟನೆ ವರದಿಯಾಗಿದೆ. ಆರೋಪಿ ಮುಖೇಶ್ ವಾಲ್ಮೀಕಿ ಮತ್ತೊಬ್ಬ ವ್ಯಕ್ತಿಯೊಂದಿಗೆ ಮದ್ಯಪಾನ ಮಾಡುತ್ತಿದ್ದಾಗ ಈ ಅಮಾನವೀಯ ಕೃತ್ಯ ಎಸಗಿದ್ದಾನೆ.

    ALCOHOL

    ಕುಡುಕ ಮುಖೇಶ್ 2 ನಾಯಿ ಮರಿಗಳ ಒಂದು ಕಿವಿ ಹಾಗೂ ಬಾಲವನ್ನು ಕತ್ತರಿಸಿ ಮದ್ಯದೊಂದಿಗೆ ಸೇವಿಸಿದ್ದಾನೆ. ಇದರಿಂದಾಗಿ 2 ನಾಯಿ ಮರಿಗಳ ಸ್ಥಿತಿ ಚಿಂತಾಜನಕವಾಗಿದ್ದು, ಅವೆರೆಡು ಸದ್ಯಕ್ಕೆ ಚಿಕಿತ್ಸೆ ಪಡೆಯುತ್ತಿವೆ. ಇದನ್ನೂ ಓದಿ: ಮದ್ಯಕ್ಕೆ ಸಾಲ ಕೊಡಲ್ಲ ಎಂದಿದ್ದಕ್ಕೆ ಮಹಿಳೆಯನ್ನು ಕೊಲೆ ಮಾಡಿದ ನೆರೆಮನೆಯಾತ

    ಘಟನೆಗೆ ಸಂಬಂಧಿಸಿ ಪೀಪಲ್ ಫಾರ್ ಅನಿಮಲ್ಸ್ ಸಂಘಟನೆಯ ಸದಸ್ಯ ಧೀರಜ್ ಪಾಠಕ್ ಎಂಬಾತ ಸ್ಥಳೀಯ ಪೊಲೀಸ್ ಠಾಣೆಗೆ ದೂರು ನೀಡಿದ್ದಾನೆ. ಪ್ರಕರಣ ದಾಖಲಿಸಿಕೊಂಡ ಪೊಲೀಸರು ಆರೋಪಿ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವುದಾಗಿ ತಿಳಿಸಿದ್ದಾರೆ. ಇದನ್ನೂ ಓದಿ: ಕೇರಳ ಕುಟ್ಟಿ ಫೋಟೋಗೆ ಮನಸೋತ ಶಿಕ್ಷಕ – ಮ್ಯಾಟ್ರಿಮೊನಿ ಹೆಸರಲ್ಲಿ ಲಕ್ಷ ಲಕ್ಷ ಪೀಕಿದ ಯುವತಿ

    Live Tv
    [brid partner=56869869 player=32851 video=960834 autoplay=true]

  • ಮದ್ಯಕ್ಕೆ ಸಾಲ ಕೊಡಲ್ಲ ಎಂದಿದ್ದಕ್ಕೆ ಮಹಿಳೆಯನ್ನು ಕೊಲೆ ಮಾಡಿದ ನೆರೆಮನೆಯಾತ

    ಮದ್ಯಕ್ಕೆ ಸಾಲ ಕೊಡಲ್ಲ ಎಂದಿದ್ದಕ್ಕೆ ಮಹಿಳೆಯನ್ನು ಕೊಲೆ ಮಾಡಿದ ನೆರೆಮನೆಯಾತ

    ಮುಂಬೈ: ಮಹಿಳೆಯೊಬ್ಬಳು (Woman) ಮದ್ಯಕ್ಕೆ (Alcohol) ಸಾಲ ನೀಡುವುದಿಲ್ಲ ಎಂದಿದ್ದಕ್ಕೆ ಆಕೆಯ ನೆರೆ ಮನೆಯಾತನೇ ಕೊಲೆ ಮಾಡಿದ ಘಟನೆ ಮಹಾರಾಷ್ಟ್ರದ ಥಾಣೆ ಜಿಲ್ಲೆಯ ಡೊಂಬಿವ್ಲಿ ಪ್ರದೇಶದಲ್ಲಿ ನಡೆದಿದೆ.

    ಹತ್ಯೆಗೀಡಾದ ಮಹಿಳೆಯನ್ನು ವೈಶಾಲಿ ಮಸ್ದೂದ್ (44) ಎಂದು ಗುರುತಿಸಲಾಗಿದೆ. ವೈಶಾಲಿ ಬಳಿ ಆಗಾಗ ಆರೋಪಿಯು ಮದ್ಯಕ್ಕಾಗಿ ಹಣವನ್ನು (Money) ಎರವಲು ಪಡೆಯುತ್ತಿದ್ದ.

    ಈ ಹಿನ್ನೆಲೆಯಲ್ಲಿ ಮದ್ಯಕ್ಕಾಗಿ ಹಣ ಬೇಕು ಎಂದು ಆರೋಪಿಯು ಬುಧವಾರ ವೈಶಾಲಿ ಮನೆಗೆ ಬಂದಿದ್ದಾನೆ. ಆದರೆ ಈ ವೇಳೆ ವೈಶಾಲಿ ಮದ್ಯಕ್ಕಾಗಿ ಹಣ ನೀಡುವುದಿಲ್ಲ ಎಂದು ನಿರಾಕರಿಸಿದ್ದಾಳೆ. ಇದರಿಂದ ಸಿಟ್ಟಿಗೆದ್ದ ಆತ ತನ್ನ ಬಳಿ ಇದ್ದ ಚಾಕುವಿನಿಂದ ವೈಶಾಲಿಗೆ ಹಲವು ಬಾರಿ ಚುಚ್ಚಿ ಕೊಲೆ ಮಾಡಿದ್ದಾನೆ. ಇದನ್ನೂ ಓದಿ: ಜಿಂದಾಬಾದ್ ಗಿರಾಕಿಗಳಿಗೆ ಕಡಿವಾಣ ಹಾಕುವಂತೆ ಹೈಕಮಾಂಡ್‌ ಸೂಚನೆ

    ಘಟನೆಗೆ ಸಂಬಂಧಿಸಿ ಮಾನ್ಪಾಡ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ. ಇನ್ನೂ ಆರೋಪಿಯನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ. ಇದನ್ನೂ ಓದಿ: ಕೇರಳ ಕುಟ್ಟಿ ಫೋಟೋಗೆ ಮನಸೋತ ಶಿಕ್ಷಕ – ಮ್ಯಾಟ್ರಿಮೊನಿ ಹೆಸರಲ್ಲಿ ಲಕ್ಷ ಲಕ್ಷ ಪೀಕಿದ ಯುವತಿ

    Live Tv
    [brid partner=56869869 player=32851 video=960834 autoplay=true]

  • ಮದ್ಯ ಸೇವಿಸಿ ಗಲಾಟೆ- ಮಗಳ ಮದುವೆಗೆ ಕೆಲವೇ ಗಂಟೆ ಇರುವಾಗಲೇ ತಂದೆ ಆತ್ಮಹತ್ಯೆ

    ಮದ್ಯ ಸೇವಿಸಿ ಗಲಾಟೆ- ಮಗಳ ಮದುವೆಗೆ ಕೆಲವೇ ಗಂಟೆ ಇರುವಾಗಲೇ ತಂದೆ ಆತ್ಮಹತ್ಯೆ

    ಲಕ್ನೋ: ಮದ್ಯ (Alcohol) ಸೇವಿಸಿದ್ದಕ್ಕೆ ಅವಮಾನಿಸಿದ್ದಕ್ಕಾಗಿ ವ್ಯಕ್ತಿಯೊಬ್ಬ ತನ್ನ ಮಗಳ (Daughter) ಮದುವೆಗೆ (Marriage) ಕೆಲವೇ ಗಂಟೆಗಳು ಇರುವಾಗಲೇ ಆತ್ಮಹತ್ಯೆ ಮಾಡಿಕೊಂಡ ಘಟನೆ ಉತ್ತರ ಪ್ರದೇಶದ ಲಕ್ನೋದಲ್ಲಿ ನಡೆದಿದೆ.

    ಸುನೀಲ್ ಕುಮಾರ್ ದ್ವಿವೇದಿ (58) ಎಂಬಾತ ಆತ್ಮಹತ್ಯೆಗೆ ಶರಣಾದ ವ್ಯಕ್ತಿ. ಲಕ್ನೋದ ಹೊರವಲಯದಲ್ಲಿರುವ ಮೋಹನ್‍ಲಾಲ್‍ಗಂಜ್ ಪ್ರದೇಶದ ಟಿಕ್ರಾಸಾನಿ ಗ್ರಾಮದ ತನ್ನ ಮನೆಯಲ್ಲಿ ಈ ಘಟನೆ ನಡೆದಿದೆ. ಮದುವೆಗೆ ಬಂದಿದ್ದ ಸಂಬಂಧಿಕರು ಕೋಣೆಗೆ ಹೋಗಿ ನೋಡಿದಾಗ ಸುನೀಲ್ ಕುಮಾರ್ ಶವವಾಗಿ ಪತ್ತೆ ಆಗಿದ್ದಾನೆ.

    ಸುನೀಲ್ ಕುಮಾರ್ ತನ್ನ ಮಗಳ ಮದುವೆಗೆ ಕೆಲವೇ ಗಂಟೆಗಳಿರುವಾಗಲೇ ಮದ್ಯ ಸೇವಿಸಿ ಮದುವೆ ಮನೆಗೆ ಬಂದಿದ್ದ. ಅಷ್ಟೇ ಅಲ್ಲದೇ ಮದುವೆಗೆ ಬಂದಿದ್ದ ಸಂಬಂಧಿಗಳಿಗೆಲ್ಲ ಸುನೀಲ್ ಕುಮಾರ್‌ ಬೈದಿದ್ದ. ತಂದೆಯ ವರ್ತನೆಯನ್ನು ನೋಡಿದ್ದ ಆತನ ಪುತ್ರ ಬೈದು ಅವಮಾನ ಮಾಡಿದ್ದ. ಇದರಿಂದಾಗಿ ಸುನೀಲ್ ಕುಮಾರ್ ಬೇಸರಗೊಂಡು ನೇಣಿಗೆ ಶರಣಾಗಿದ್ದಾನೆ. ಇದನ್ನೂ ಓದಿ: ಪೀಸ್‌ಪೀಸ್ ಪ್ರೇಮಿ ಅಫ್ತಾಬ್ ಹತ್ಯೆಗೆ ಯತ್ನ – ಪೊಲೀಸ್ ವ್ಯಾನ್ ಮೇಲೆ ದಾಳಿ

    ಘಟನೆಗೆ ಸಂಬಂಧಿಸಿದಂತೆ ಸುನೀಲ್‌ ಕುಮಾರ್‌ನ ಶವವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದ್ದು, ಸ್ಥಳೀಯ ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಇದನ್ನೂ ಓದಿ: ನಾನು ಲೂಟಿ ಹೊಡೆದು ರಾಜಕೀಯ ಮಾಡಿಲ್ಲ, ಅಕ್ರಮ ಮಾಡಿ ಜೀವನ ಮಾಡಿಲ್ಲ: HDK

    Live Tv
    [brid partner=56869869 player=32851 video=960834 autoplay=true]

  • ಮದ್ಯ ಅಮಲಿನಲ್ಲಿ ಶಾಲೆಗೆ ತೂರಾಡುತ್ತಾ ಎಂಟ್ರಿ ಕೊಟ್ಟ ಶಿಕ್ಷಕ ಅಮಾನತು

    ಮದ್ಯ ಅಮಲಿನಲ್ಲಿ ಶಾಲೆಗೆ ತೂರಾಡುತ್ತಾ ಎಂಟ್ರಿ ಕೊಟ್ಟ ಶಿಕ್ಷಕ ಅಮಾನತು

    ಮುಂಬೈ: ಮದ್ಯ ಸೇವಿಸಿ ಶಾಲೆಗೆ ತೂರಾಡುತ್ತಾ ಬಂದು, ಕುಡಿದ ಅಮಲಿನಲ್ಲಿ ಕಚೇರಿಯ ಅಧಿಕಾರಿಯನ್ನು ಥಳಿಸಿದ ಆರೋಪದಡಿ ಶಿಕ್ಷಕನನ್ನು ಅಮಾನತಗೊಳಿಸಿರುವ ಘಟನೆ ಮಹಾರಾಷ್ಟ್ರದ (Maharashtra) ಪಾಲ್ಘರ್ (Palghar) ಜಿಲ್ಲೆಯಲ್ಲಿ ನಡೆದಿದೆ. ಇದೀಗ ಶಿಕ್ಷಕನನ್ನು ಕೆಲಸದಿಂದ ಅಮಾನತುಗೊಳಿಸಲಾಗಿದೆ.

    ದಹಾನು ತಾಲೂಕಿನ ದ್ಯಾಮಂಗಾವ್‍ನ ಪ್ರಾಥಮಿಕ ಶಾಲೆಯಲ್ಲಿ ಕಾರ್ಯನಿರ್ವಹಿಸುತ್ತಿದ್ದ ಶಿಕ್ಷಕ ನಿದ್ದೆ ಮಾಡುತ್ತಿದ್ದಾಗ ಸಿಕ್ಕಿಬಿದ್ದಿದ್ದು, ಶಾಲೆಯಲ್ಲಿದ್ದ ಕೆಲವರನ್ನು ಏಕಾಏಕಿ ನಿಂದಿಸುತ್ತಿದ್ದಾನೆ. ನಂತರ ಶಿಕ್ಷಕನ ವಿರುದ್ಧದ ದೂರು ದಾಖಲಿಸಿದ ಬಳಿಕ ಆತನನ್ನು ನವೆಂಬರ್ 22ರಂದು ಅಮಾನತುಗೊಳಿಸಲಾಗಿದೆ. ಇದನ್ನೂ ಓದಿ: ದೆವ್ವವಿಲ್ಲ ಎಂದು ಸಾರಲು ಸ್ಮಶಾನದಲ್ಲಿ ಅದ್ಧೂರಿಯಾಗಿ ಹುಟ್ಟುಹಬ್ಬ ಆಚರಿಸಿಕೊಂಡ

    ಸೇವಾ ನಿಯಮಗಳ ನಿಬಂಧನೆಗಳಿಗೆ ಅನುಗುಣವಾಗಿ ಹೊರಡಿಸಲಾದ ಅಮಾನತು ಪತ್ರದಲ್ಲಿ, ಅಮಾನತುಗೊಂಡ ಅವಧಿಯಲ್ಲಿ ಶಿಕ್ಷಕ ಪ್ರಧಾನ ಕಚೇರಿಯನ್ನು ಬಿಡುವಂತಿಲ್ಲ ಮತ್ತು ಬೇರೆ ಯಾವುದೇ ಕೆಲಸಕ್ಕೆ ಸೇರಿಕೊಳ್ಳುವಂತಿಲ್ಲ ಎಂದು ತಿಳಿಸಲಾಗಿದೆ. ಇದನ್ನೂ ಓದಿ: ಮತ್ತೆ ಹೊಸ ವರಸೆ ಶುರು ಮಾಡಿದ ಮಹಾರಾಷ್ಟ್ರ ಸಿಎಂ, ಗಡಿ ವಿವಾದ ಮಾತುಕತೆಯಿಂದ ಬಗೆಹರಿಯಲಿ: ಏಕನಾಥ ಶಿಂಧೆ

    Live Tv
    [brid partner=56869869 player=32851 video=960834 autoplay=true]