Tag: alia siddiqui

  • ಕಂಗನಾ ರಣಾವತ್ ವಿರುದ್ಧ ನವಾಜುದ್ದೀನ್ ಸಿದ್ದಿಕಿ ಪತ್ನಿ ಸಿಡಿಮಿಡಿ

    ಕಂಗನಾ ರಣಾವತ್ ವಿರುದ್ಧ ನವಾಜುದ್ದೀನ್ ಸಿದ್ದಿಕಿ ಪತ್ನಿ ಸಿಡಿಮಿಡಿ

    ಬಾಲಿವುಡ್ ಖ್ಯಾತ ನಟ ನವಾಜುದ್ದೀನ್ ಸಿದ್ದಿಕಿ (Nawazuddin Siddiqui) ಪತ್ನಿ ಅಲಿಯಾ ಸಿದ್ದಿಕಿ, ಖ್ಯಾತ ನಟಿ ಕಂಗನಾ ರಣಾವತ್ (Kangana Ranaut) ವಿರುದ್ಧ ತಿರುಗಿ ಬಿದ್ದಿದ್ದಾರೆ. ಕಂಗನಾ ವಿರುದ್ಧ ಸಿಡಿಮಿಡಿಗೊಳ್ಳುವುದಕ್ಕೂ ಕಾರಣವಿದೆ. ಈ ಹಿಂದೆ ನವಾಜುದ್ದೀನ್ ಸಿದ್ದಿಕಿ ಪರ ಕಂಗಣಾ ಬ್ಯಾಟಿಂಗ್ ಮಾಡಿದ್ದರು. ಅಲಿಯಾ ವಿರುದ್ಧ ಮಾತನಾಡಿದ್ದರು. ನವಾಜುದ್ದೀನ್ ಮತ್ತು ಅಲಿಯಾ ದಾಂಪತ್ಯದಲ್ಲಿ ಬಿರುಕು ಬಿದ್ದಾಗ, ಅಲಿಯಾ ವಿರೋಧಿಸಿ ಕಂಗನಾ ಮಾತನಾಡಿದ್ದರು. ಇದೀಗ ಅದಕ್ಕೆ ತಕ್ಕ ಉತ್ತರ ನೀಡಿದ್ದಾರೆ ಅಲಿಯಾ.

    ಕಂಗನಾ ರಣಾವತ್ ಎಲ್ಲದಕ್ಕೂ ಮೂಗು ತೂರಿಸುತ್ತಾರೆ. ಅವರ ಬದುಕಿನಲ್ಲೇ ನಾನಾ ತಪ್ಪುಗಳಿವೆ. ಅವುಗಳನ್ನು ತಿದ್ದಿಕೊಂಡರೆ ಸಾಕು. ಬೇರೆಯವರ ವಿಷಯದಲ್ಲಿ ಕಂಗನಾ ಬಾಯಿ ಹಾಕುವುದು ಒಳ್ಳೆಯದಲ್ಲ. ಕಂಗನಾ ಏನು ಸುಪ್ರೀಂ ಅಲ್ಲಎನ್ನುವ ಮೂಲಕ ತಿರುಗೇಟು ನೀಡಿದ್ದಾರೆ. ಬೇರೆಯವರ ವಿಷಯದಲ್ಲಿ ಕಂಗನಾ ಮೂಗು ತೂರಿಸುವುದರ ಬದಲು, ಒಳ್ಳೊಳ್ಳೆ ಕೆಲಸಗಳನ್ನು ಮಾಡಲಿ ಎಂದು ಸಲಹೆಯನ್ನೂ ನೀಡಿದ್ದಾರೆ. ಇದನ್ನೂ ಓದಿ:ಕೋಟಿ ಕೊಟ್ರೂ ಸಿನಿಮಾದಲ್ಲಿ ಕಿಸ್‌ ಮಾಡಲ್ಲ- ಪ್ರಿಯಾಮಣಿ ಖಡಕ್‌ ಉತ್ತರ

    ಅಲಿಯಾ (Alia Siddiqui) ಈ ರೀತಿ ತಿರುಗಿ ಬೀಳುವುದು ಹೊಸದೇನೂ ಅಲ್ಲ. ಮೊನ್ನೆಯಷ್ಟೇ ಬಿಗ್ ಬಾಸ್ ಮನೆಯಿಂದ ಹೊರ ಬೀಳುತ್ತಿದ್ದಂತೆಯೇ ಆ ಕಾರ್ಯಕ್ರಮವನ್ನು ನಿರೂಪಿಸುವ ಸಲ್ಮಾನ್ ಖಾನ್ ವಿರುದ್ಧವೂ ಬಾಂಬ್ ಸಿಡಿಸಿದ್ದರು. ಬಿಗ್ ಬಾಸ್ (Big Boss) ಶೋ ಮೇಲೆಯೇ ಪಕ್ಷಪಾತದ ಆರೋಪ ಮಾಡಿದ್ದರು. ನನ್ನೊಳಗಿನ ಹಲವು ಸತ್ಯಗಳು ಆಚೆ ಬರುತ್ತಿದ್ದವು. ಅದು ಸಲ್ಮಾನ್ ಖಾನ್ ಗೆ ಇಷ್ಟವಿರಲಿಲ್ಲ. ಹಾಗಾಗಿ ಎರಡನೇ ವಾರಕ್ಕೆ ನನ್ನನ್ನು ಮನೆಯಿಂದ ಆಚೆ ಹಾಕಿದರು ಎಂದು ನೇರವಾಗಿಯೇ ಆರೋಪ ಮಾಡಿದ್ದರು.

    ಆಲಿಯಾ ಸಿದ್ದಿಕಿ ಬಾಲಿವುಡ್ ಖ್ಯಾತ ನಟ ನವಾಜುದ್ದೀನ್ ಸಿದ್ದಿಕಿ  ಅವರ ಮಾಜಿ ಪತ್ನಿ. ನವಾಜುದ್ದೀನ್ ಅವರು ಸಲ್ಮಾನ್ ಖಾನ್ (Salman Khan)ಗೆ ತೀರಾ ಆಪ್ತರು. ಬಿಗ್ ಬಾಸ್ ಮನೆಯಲ್ಲಿ ಪತಿ ನವಾಜುದ್ದೀನ್ ಬಗ್ಗೆ ಹಲವಾರು ವಿಚಾರಗಳನ್ನು ಮಾತನಾಡುವುದಕ್ಕೆ ಶುರು ಮಾಡಿದ್ದರು. ತಮ್ಮ ಪತಿ ಎಂಥವರು ಎನ್ನುವ ವಿಚಾರವನ್ನು ಹೇಳಿಕೊಳ್ಳಲು ಹೊರಟಿದ್ದರು. ಅದನ್ನು ತಡೆಯುವುದಕ್ಕಾಗಿಯೇ ತಮ್ಮನ್ನು ಮನೆಯಿಂದ ಆಚೆ ಹಾಕಲಾಗಿದೆ ಎಂದು ಆಲಿಯಾ ಮಾತನಾಡಿದ್ದಾರೆ

    ನವಾಜುದ್ದೀನ್ ಜೊತೆಗಿನ ಬಾಂಧವ್ಯವನ್ನು ಮುರಿದುಕೊಂಡು ಆಲಿಯಾ ದೂರವಿದ್ದಾರೆ. ಈಗಾಗಲೇ ಪತಿಯ ಬಗ್ಗೆ ಸಾಕಷ್ಟು ಆರೋಪಗಳನ್ನು ಮಾಡಿದ್ದಾರೆ. ಕೋರ್ಟ್ ಮೆಟ್ಟಿಲು ಕೂಡ ಏರಿದ್ದಾರೆ. ಅವೆಲ್ಲವನ್ನೂ ಆಲಿಯಾ ದೊಡ್ಮನೆಯಲ್ಲಿ ಹೇಳಿಕೊಳ್ಳುತ್ತಿದ್ದರು. ಮೊದಲ ದಿನವೇ ಒಂದಷ್ಟು ಸಂಗತಿಗಳನ್ನು ಬಹಿರಂಗ ಪಡಿಸಿದ್ದರು. ಇನ್ನೂ ಹಲವು ವಿಷಯಗಳನ್ನು ಹಂಚಿಕೊಳ್ಳುವುದಾಗಿಯೂ ಅವರು ತಿಳಿಸಿದ್ದರು.

     

    ನವಾಜುದ್ದೀನ್ ವಿಷಯಗಳು ಆಚೆ ಬರುತ್ತವೆ ಎನ್ನುವ ಕಾರಣದಿಂದಾಗಿಯೇ ಸಲ್ಮಾನ್ ಖಾನ್ ಮಧ್ಯ ಪ್ರವೇಶ ಮಾಡಿ ತಮ್ಮನ್ನು ಮನೆಯಿಂದ ಹೊರ ಹಾಕುವಲ್ಲಿ ಯಶಸ್ವಿಯಾಗಿದ್ದಾರೆ. ಹಾಗಂತ ನಾನು ಸುಮ್ಮನೆ ಇರಲಾರೆ. ಆಚೆ ಬಂದರೂ, ನನ್ನ ಜೀವನದಲ್ಲಿ ನಡೆದ ಸಂಗತಿಗಳನ್ನು ತಿಳಿಸುತ್ತಲೇ ಇರುತ್ತೇನೆ ಅಂದಿದ್ದಾರೆ ಆಲಿಯಾ. ಇಂತಹ ಪಕ್ಷಪಾತಗಳು ಶೋಗಳಲ್ಲಿ ಇರಬಾರದು ಎಂದು ಅವರು ಸಲಹೆಯನ್ನೂ ನೀಡಿದ್ದಾರೆ.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಬಿಗ್ ಬಾಸ್ ಮೇಲೆ ಪಕ್ಷಪಾತ ಆರೋಪ : ಸಲ್ಮಾನ್ ವಿರುದ್ಧ ತಿರುಗಿ ಬಿದ್ದ ಆಲಿಯಾ

    ಬಿಗ್ ಬಾಸ್ ಮೇಲೆ ಪಕ್ಷಪಾತ ಆರೋಪ : ಸಲ್ಮಾನ್ ವಿರುದ್ಧ ತಿರುಗಿ ಬಿದ್ದ ಆಲಿಯಾ

    ಬಿಗ್ ಬಾಸ್ (Big Boss) ಶೋ ಮೇಲೆಯೇ ಪಕ್ಷಪಾತದ ಆರೋಪ ಮಾಡಿದ್ದಾರೆ ಈ ಬಾರಿಯ ಬಿಗ್ ಬಾಸ್ ಮನೆಯಲ್ಲಿದ್ದ ಸ್ಪರ್ಧಿ ಆಲಿಯಾ ಸಿದ್ದಿಕಿ (Alia Siddiqui). ಅವರು ನೇರವಾಗಿ ಸಲ್ಮಾನ್ ಖಾನ್ ಮೇಲೆಯೇ ಗೂಬೆ ಕೂರಿಸಿದ್ದು, ನನ್ನೊಳಗಿನ ಹಲವು ಸತ್ಯಗಳು ಆಚೆ ಬರುತ್ತಿದ್ದವು. ಅದು ಸಲ್ಮಾನ್ ಖಾನ್ ಗೆ ಇಷ್ಟವಿರಲಿಲ್ಲ. ಹಾಗಾಗಿ ಎರಡನೇ ವಾರಕ್ಕೆ ನನ್ನನ್ನು ಮನೆಯಿಂದ ಆಚೆ ಹಾಕಿದರು ಎಂದು ನೇರವಾಗಿಯೇ ಆರೋಪ ಮಾಡಿದ್ದಾರೆ.

    ಆಲಿಯಾ ಸಿದ್ದಿಕಿ ಬಾಲಿವುಡ್ ಖ್ಯಾತ ನಟ ನವಾಜುದ್ದೀನ್ ಸಿದ್ದಿಕಿ (Nawazuddin Siddiqui) ಅವರ ಮಾಜಿ ಪತ್ನಿ. ನವಾಜುದ್ದೀನ್ ಅವರು ಸಲ್ಮಾನ್ ಖಾನ್ (Salman Khan)ಗೆ ತೀರಾ ಆಪ್ತರು. ಬಿಗ್ ಬಾಸ್ ಮನೆಯಲ್ಲಿ ಪತಿ ನವಾಜುದ್ದೀನ್ ಬಗ್ಗೆ ಹಲವಾರು ವಿಚಾರಗಳನ್ನು ಮಾತನಾಡುವುದಕ್ಕೆ ಶುರು ಮಾಡಿದ್ದರು. ತಮ್ಮ ಪತಿ ಎಂಥವರು ಎನ್ನುವ ವಿಚಾರವನ್ನು ಹೇಳಿಕೊಳ್ಳಲು ಹೊರಟಿದ್ದರು. ಅದನ್ನು ತಡೆಯುವುದಕ್ಕಾಗಿಯೇ ತಮ್ಮನ್ನು ಮನೆಯಿಂದ ಆಚೆ ಹಾಕಲಾಗಿದೆ ಎಂದು ಆಲಿಯಾ ಮಾತನಾಡಿದ್ದಾರೆ. ಇದನ್ನೂ ಓದಿ:ಮಲಯಾಳಂ ಖ್ಯಾತ ನಟ ಮೋಹನ್ ಲಾಲ್ ಜೊತೆ ಕನ್ನಡಿಗ ಡ್ಯಾನಿಶ್ ನಟನೆ

    ನವಾಜುದ್ದೀನ್ ಜೊತೆಗಿನ ಬಾಂಧವ್ಯವನ್ನು ಮುರಿದುಕೊಂಡು ಆಲಿಯಾ ದೂರವಿದ್ದಾರೆ. ಈಗಾಗಲೇ ಪತಿಯ ಬಗ್ಗೆ ಸಾಕಷ್ಟು ಆರೋಪಗಳನ್ನು ಮಾಡಿದ್ದಾರೆ. ಕೋರ್ಟ್ ಮೆಟ್ಟಿಲು ಕೂಡ ಏರಿದ್ದಾರೆ. ಅವೆಲ್ಲವನ್ನೂ ಆಲಿಯಾ ದೊಡ್ಮನೆಯಲ್ಲಿ ಹೇಳಿಕೊಳ್ಳುತ್ತಿದ್ದರು. ಮೊದಲ ದಿನವೇ ಒಂದಷ್ಟು ಸಂಗತಿಗಳನ್ನು ಬಹಿರಂಗ ಪಡಿಸಿದ್ದರು. ಇನ್ನೂ ಹಲವು ವಿಷಯಗಳನ್ನು ಹಂಚಿಕೊಳ್ಳುವುದಾಗಿಯೂ ಅವರು ತಿಳಿಸಿದ್ದರು.

    ನವಾಜುದ್ದೀನ್ ವಿಷಯಗಳು ಆಚೆ ಬರುತ್ತವೆ ಎನ್ನುವ ಕಾರಣದಿಂದಾಗಿಯೇ ಸಲ್ಮಾನ್ ಖಾನ್ ಮಧ್ಯ ಪ್ರವೇಶ ಮಾಡಿ ತಮ್ಮನ್ನು ಮನೆಯಿಂದ ಹೊರ ಹಾಕುವಲ್ಲಿ ಯಶಸ್ವಿಯಾಗಿದ್ದಾರೆ. ಹಾಗಂತ ನಾನು ಸುಮ್ಮನೆ ಇರಲಾರೆ. ಆಚೆ ಬಂದರೂ, ನನ್ನ ಜೀವನದಲ್ಲಿ ನಡೆದ ಸಂಗತಿಗಳನ್ನು ತಿಳಿಸುತ್ತಲೇ ಇರುತ್ತೇನೆ ಅಂದಿದ್ದಾರೆ ಆಲಿಯಾ. ಇಂತಹ ಪಕ್ಷಪಾತಗಳು ಶೋಗಳಲ್ಲಿ ಇರಬಾರದು ಎಂದು ಅವರು ಸಲಹೆಯನ್ನೂ ನೀಡಿದ್ದಾರೆ.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಮಾಜಿ ಪತ್ನಿ, ಸಹೋದರನ ವಿರುದ್ಧ 100 ಕೋಟಿ ಮಾನನಷ್ಟ ಮೊಕದ್ದಮೆ ದಾಖಲಿಸಿದ ನವಾಜುದ್ದೀನ್ ಸಿದ್ದಿಕಿ

    ಮಾಜಿ ಪತ್ನಿ, ಸಹೋದರನ ವಿರುದ್ಧ 100 ಕೋಟಿ ಮಾನನಷ್ಟ ಮೊಕದ್ದಮೆ ದಾಖಲಿಸಿದ ನವಾಜುದ್ದೀನ್ ಸಿದ್ದಿಕಿ

    ಬಾಲಿವುಡ್ (Bollywood)  ನಟ ನವಾಜುದ್ದೀನ್ ಸಿದ್ದಿಕಿ (Nawazuddin Siddiqui) ಅವರು ಇತ್ತೀಚಿಗೆ ನೆಗೆಟಿವ್ ವಿಚಾರಗಳಿಂದಲೇ ಹೆಚ್ಚು ಸುದ್ದಿಯಾಗುತ್ತಿದ್ದಾರೆ. ಅವರ ಮಾಜಿ ಪತ್ನಿ ಆಲಿಯಾ ಸಿದ್ಧಿಕಿ (Aaliya Siddiqui) ಮತ್ತು ಸಹೋದರ ಶಾಮಸ್ ನವಾಬ್ ಸಿದ್ದಿಕಿ ಅವರ ವಿರುದ್ಧ ಹಲವು ಆರೋಪಗಳನ್ನ ಮಾಡಿದ್ದಾರೆ. ಕೊನೆಗೆ ನವಾಜುದ್ದೀನ್ ಈ ಬಗ್ಗೆ ಬಹಿರಂಗ ಪತ್ರಿಕಾ ಹೇಳಿಕೆಯನ್ನು ಕೂಡ ರಿಲೀಸ್ ಮಾಡಿದ್ದಾರೆ. ಮಾಜಿ ಪತ್ನಿ ಆಲಿಯಾ ಮತ್ತು ಸಹೋದರ (Brother) ಶಾಮಸ್ ನವಾಬ್ ವಿರುದ್ಧ 100 ಕೋಟಿ ರೂ. ಮಾನನಷ್ಟ ಮೊಕದ್ದಮೆ ಹೂಡಿದ್ದಾರೆ. ಇದನ್ನೂ ಓದಿ: ದುಬಾರಿ ಸೀರೆಯುಟ್ಟು `ಶಾಕುಂತಲಂ’ ಪ್ರಚಾರದಲ್ಲಿ ಭಾಗಿಯಾದ ಸಮಂತಾ

    ದಿನದಿಂದ ದಿನಕ್ಕೆ ನವಾಜುದ್ದೀನ್ ಮನೆಗೆ ರಂಪಾಟ ಹಲವು ತಿರುವುಗಳನ್ನ ಪಡೆಯುತ್ತಿದೆ. ಇದೀಗ ಮಾಜಿ ಪತ್ನಿ ಆಲಿಯಾ ಮತ್ತು ಸೋದರ ಶಮಸ್ ವಿರುದ್ಧ 100 ಕೋಟಿ ರೂ.ಗಳ ಮಾನನಷ್ಟ ಮೊಕದ್ದಮೆಯನ್ನು ನಟ ನವಾಜುದ್ದೀನ್ ಸಿದ್ದಿಕಿ ಹೂಡಿದ್ದು, ಮಾರ್ಚ್ 30ರಂದು ಬಾಂಬೆ ಹೈಕೋರ್ಟ್‌ನಲ್ಲಿ ಈ ಕೇಸ್‌ನ ವಿಚಾರಣೆ ನಡೆಯಲಿದೆ. ತನ್ನ ಸಹೋದರ ನವಾಜುದ್ದೀನ್ ಸಿದ್ದಿಕಿ ಅವರಿಗೆ 2018ರಿಂದಲೂ ಮ್ಯಾನೇಜರ್ ಆಗಿ ಕೆಲಸ ಮಾಡುತ್ತಿದ್ದಾರೆ. ತನ್ನ ಸಹೋದರನಿಗೆ ನವಾಜುದ್ದೀನ್ ಕ್ರೆಡಿಟ್ ಕಾರ್ಡ್ಸ್, ಎಟಿಎಂ ಕಾರ್ಡ್ಸ್, ಬ್ಯಾಂಕ್ ಪಾಸ್‌ವರ್ಡ್ಸ್ ನೀಡಿದ್ದರು. ಇದನ್ನೆಲ್ಲಾ ಆತ ದುರ್ಬಳಕೆ ಮಾಡಿಕೊಂಡಿದ್ದಾನೆ ಎಂದು ನವಾಜುದ್ದೀನ್ ಆರೋಪಿಸಿದ್ದಾರೆ.

    ನನ್ನ ಪತ್ನಿ ಆಲಿಯಾ ನನ್ನ ವಿರುದ್ಧ ನಿಲ್ಲುವಂತೆ ಶಮಸ್‌ ಎತ್ತಿ ಕಟ್ಟಿದ್ದಾನೆ ಎಂದಿದ್ದಾರೆ. ತಮ್ಮ ಮಕ್ಕಳ ಶಿಕ್ಷಣಕ್ಕಾಗಿ ಆಲಿಯಾಗೆ ಪ್ರತಿ ತಿಂಗಳು 10 ಲಕ್ಷ ರೂ. ನೀಡಲಾಗುತ್ತಿತ್ತು ಹಾಗೂ ಪ್ರೊಡಕ್ಷನ್ ಹೌಸ್ ಆರಂಭಿಸಲು 2.50 ಕೋಟಿ ರೂ. ನೀಡಲಾಗಿತ್ತು. ಆದರೆ ಈ ಹಣವನ್ನೆಲ್ಲ ಅವರು ತಮ್ಮ ಸ್ವಂತಕ್ಕೆ ಬಳಸಿದ್ದಾರೆ ಎಂದು ನಟ ಆರೋಪಿಸಿದ್ದಾರೆ.

    ಇದಲ್ಲದೆ, 2020ರಲ್ಲಿ ಮ್ಯಾನೇಜರ್ ಹುದ್ದೆಯಿಂದ ಶಮಾಸ್‌ರನ್ನು ತೆಗೆದ ನಂತರ ನವಾಜುದ್ದೀನ್ ಅವರು ಆದಾಯ ತೆರಿಗೆ, ಜಿಎಸ್‌ಟಿ ಮತ್ತು ಇತರ ಸರ್ಕಾರಿ ಇಲಾಖೆಗಳಿಂದ 37 ಕೋಟಿ ರೂಪಾಯಿ ತೆರಿಗೆ ಪಾವತಿಸದ ಕಾರಣಕ್ಕಾಗಿ ಕಾನೂನು ನೋಟಿಸ್‌ಗಳನ್ನು ಸ್ವೀಕರಿಸಿದ್ದಾರೆ ಎಂದು ನವಾಜುದ್ದೀನ್ ಅವರು ಅರ್ಜಿಯಲ್ಲಿ ಹೇಳಿದ್ದು, 100 ಕೋಟಿ ರೂಪಾಯಿ ಪರಿಹಾರ ನೀಡಲು ಆದೇಶಿಸುವಂತೆ ನವಾಜುದ್ದೀನ್ ಸಿದ್ದಿಕಿ ಕೋರಿದ್ದಾರೆ.