Tag: Alive

  • ಮೃತಪಟ್ಟಿದ್ದ 115ರ ಸಾಧು 4 ಗಂಟೆ ನಂತ್ರ ಎದ್ದು ನಿಂತ್ರು – ಬಾಬಾನ ದರ್ಶನಕ್ಕೆ ಮುಗಿಬಿದ್ದ ಜನ

    ಮೃತಪಟ್ಟಿದ್ದ 115ರ ಸಾಧು 4 ಗಂಟೆ ನಂತ್ರ ಎದ್ದು ನಿಂತ್ರು – ಬಾಬಾನ ದರ್ಶನಕ್ಕೆ ಮುಗಿಬಿದ್ದ ಜನ

    ಲಕ್ನೋ: ಉತ್ತರ ಪ್ರದೇಶದ ಕಾನ್ಪುರದ ಹಳ್ಳಿಯೊಂದರಲ್ಲಿ ಸಾವನ್ನಪ್ಪಿದ್ದಾರೆ ಎನ್ನಲಾಗಿದ್ದ ಸಾಧುವೊಬ್ಬರು 4 ಗಂಟೆಯ ನಂತರ ಎದ್ದು ನಿಂತ ಚಮತ್ಕಾರ ನಡೆದಿದೆ.

    ಕಾನ್ಪುರದ ರುಸೆಲ್ಲಾಬಾದ್ ತೆಹ್ಸಿಲ್ ಗ್ರಾಮದಲ್ಲಿ ಸೋಮವಾರ ಸಂಜೆ ಗ್ರಾಮದಲ್ಲಿದ್ದ 115 ವರ್ಷದ ಸಾಧು ನಾರಾಯಣ ಬಾಬಾ ಸಾವನ್ನಪ್ಪಿದ್ದರು. ಈ ವೇಳೆ ಊರವರೆಲ್ಲಾ ಸೇರಿ ಅವರ ಅಂತಿಮ ಸಂಸ್ಕಾರಕ್ಕೆ ತಯಾರಿ ನಡೆಸುತ್ತಿದ್ದರು. ಆದರೆ ಮೃತಪಟ್ಟ ನಾಲ್ಕು ಗಂಟೆಯ ನಂತರ ಚಮತ್ಕಾರ ಎಂಬಂತೆ ಸಾಧುವಿನ ಹೃದಯ ಬಡಿತ ಮತ್ತೆ ಶುರುವಾಗಿದೆ. ಇದನ್ನು ಕಂಡ ಗ್ರಾಮಸ್ಥರು ಮುಖವಿಸ್ಮಿತರಾಗಿದ್ದಾರೆ.

    ನಾರಾಯಣ ಬಾಬಾ ಕಳೆದ 15 ರಿಂದ 20 ವರ್ಷಗಳ ಹಿಂದೆ ಗ್ರಾಮದ ದೇವಸ್ಥಾನಕ್ಕೆ ಬಂದಿದ್ದರಂತೆ. ಆ ನಂತರ ಇಲ್ಲಿಯೇ ವಾಸಿಸಲು ಶುರು ಮಾಡಿದ್ದರು. ಅಲ್ಲದೆ ಅನೇಕ ವರ್ಷಗಳಿಂದ ಅನ್ನ ತ್ಯಜಿಸಿರುವ ಸಾಧು, ಹಣ್ಣನ್ನು ಮಾತ್ರ ಸೇವನೆ ಮಾಡುತ್ತಿದ್ದರು. ಹಾಗೆಯೇ ಅವರ ವಯಸ್ಸು ಅವರಿಗೆ ಸರಿಯಾಗಿ ತಿಳಿದಿಲ್ಲ. ಈ ಘಟನೆ ನಡೆದಿರುವುದು ಅಚ್ಚರಿ ಮೂಡಿಸಿದೆ ಎಂದು ಗ್ರಾಮಸ್ಥರು ಹೇಳಿದ್ದಾರೆ.

    ಈಗ ಚಮತ್ಕಾರಿ ಸಾಧುವನ್ನು ನೋಡಲು ಜನ ಮುಗಿಬಿದ್ದಿದ್ದಾರೆ. ಬೇರೆ ಬೇರೆ ಊರುಗಳಿಂದಲೂ ಕೂಡ ಜನರು ಸಾಧುವಿನ ದರ್ಶನ ಪಡೆಯಲು ಬರುತ್ತಿದ್ದಾರೆ.

  • ಬದುಕಿದ್ದೇನೆಂದು ತಿಳಿಸಲು 3 ವರ್ಷಗಳಿಂದ ಹೋರಾಡುತ್ತಿದ್ದಾನೆ ರೈತ!

    ಬದುಕಿದ್ದೇನೆಂದು ತಿಳಿಸಲು 3 ವರ್ಷಗಳಿಂದ ಹೋರಾಡುತ್ತಿದ್ದಾನೆ ರೈತ!

    ಮಂಡ್ಯ: ತಾನು ಬದುಕಿದ್ದೇನೆ ಎನ್ನುವುದನ್ನು ಸಾಬೀತು ಪಡಿಸಲು ರೈತರೊಬ್ಬರು ಕಳೆದ ಮೂರು ವರ್ಷಗಳಿಂದ ಹರಸಾಹಸ ಪಡುತ್ತಿರುವ ಶೋಚನಿಯ ಘಟನೆ ಜಿಲ್ಲೆಯ ಶ್ರೀರಂಗಪಟ್ಟಣ ತಾಲೂಕಿನ ಚಿಕ್ಕಹಾರೋಹಳ್ಳಿ ಗ್ರಾಮದಲ್ಲಿ ನಡೆದಿದೆ.

    ಚಿಕ್ಕಹಾರೋಹಳ್ಳಿ ಗ್ರಾಮದ ರಾಮೇಗೌಡ ದಾಖಲೆಗಳಲ್ಲಿ ಮೃತಪಟ್ಟು ನಿಜ ಜೀವನದಲ್ಲಿ ಬದುಕಿರುವ ರೈತನಾಗಿದ್ದಾರೆ. ಸರ್ಕಾರಿ ಅಧಿಕಾರಿಯ ಬೇಜವಾಬ್ದಾರಿತನದಿಂದ ಬದುಕಿರುವಾಗಲೇ ರೈತನಿಗೆ ಮರಣ ಪತ್ರ ನೀಡಿ, ರೈತನ ಬದುಕಿಗೆ  ಕೊಳ್ಳಿ ಇಟ್ಟಿದ್ದಾರೆ. ಹೀಗಾಗಿ ರಾಮೇಗೌಡರವರು ನಿಜವಾಗಿಯೂ ಸತ್ತೇ ಹೋಗಿದ್ದಾರೆ ಎಂದು ಸರ್ಕಾರಿ ದಾಖಲೆಗಳಲ್ಲಿ ನಮೂದಿಸಿ, ಮತದಾರರ ಪಟ್ಟಿಯಿಂದಲೂ ಹೆಸರನ್ನು ತೆಗೆದುಹಾಕಿದ್ದಾರೆ. ಇದರಿಂದಾಗಿ ಯಾವುದೇ ಸರ್ಕಾರಿ ಸೌಲಭ್ಯ ಪಡೆಯಲು ಮತ್ತು ಅಧಿಕೃತವಾಗಿ ವ್ಯವಹಾರ ನಡೆಸಲು ಸಾಧ್ಯವಾಗದೇ ರೈತ ಕಂಗಾಲಾಗಿ ಹೋಗಿದ್ದಾರೆ.

    ತನಗಾಗುತ್ತಿರುವ ಕಷ್ಟವನ್ನು ಪರಿಹರಿಸಿಕೊಡಿ ಎಂದು ಸತತ ಮೂರು ವರ್ಷಗಳಿಂದಲೂ ರಾಮೇಗೌಡ ಹೋರಾಟ ನಡೆಸುತ್ತಿದ್ದಾರೆ. ಆದರೆ ಅಧಿಕಾರಿಗಳು ಮಾತ್ರ ನೀನು ಈಗಾಗಲೇ ಸತ್ತು ಹೋಗಿದ್ದೀಯ, ಇನ್ನೇನು ಸರಿಪಡಿಸೋದು ಎಂದು ಅಪಹಾಸ್ಯ ಮಾಡುತ್ತಿದ್ದಾರೆ. ಅಧಿಕಾರಿಗಳ ಹೇಳಿಕೆಯಿಂದ ತೀವ್ರವಾಗಿ ಮನನೊಂದ ಅವರು ದಾಖಲೆಗಳಲ್ಲಿ ಮಾತ್ರ ಸತ್ತಿರುವ ನಾನು ನಿಜವಾಗಿಯೂ ಸತ್ತೇ ಹೋಗುತ್ತೇನೆ ಎಂದು ಆತ್ಮಹತ್ಯೆಗೂ ಪ್ರಯತ್ನಿಸಿದ್ದರು.

    ಆತ್ಮಹತ್ಯೆಗೆ ಯತ್ನಸಿದ ರಾಮೇಗೌಡರವರನ್ನು ಕುಟುಂಬಸ್ಥರು ಕಾಪಾಡಿಕೊಳ್ಳುವಲ್ಲಿ ಸಫಲರಾಗಿದರು. ಆದರೆ ಇನ್ನಾದರೂ ಸರ್ಕಾರಿ ಅಧಿಕಾರಿಗಳು ಬೇಜವಾಬ್ದಾರಿತನದಿಂದ ಮಾತನಾಡದೇ, ಆಗಿರುವ ತಪ್ಪನ್ನು ಸರಿಪಡಿಸಕೊಡಬೇಕೆಂದು ಕುಟುಂಬಸ್ಥರು ಮನವಿಮಾಡಿಕೊಂಡಿದ್ದಾರೆ.

    ಏನದು ಘಟನೆ?
    2015ರಲ್ಲಿ ರಾಮೇಗೌಡರ ತಂದೆ ತಿಮ್ಮೇಗೌಡರು ಮೃತಪಟ್ಟ ಹಿನ್ನೆಲೆಯಲ್ಲಿ ಅರಕೆರೆ ಗ್ರಾಮದ ನಾಡಕಚೇರಿಯಲ್ಲಿ ಅವರು ಮರಣಪತ್ರಕ್ಕಾಗಿ ಅರ್ಜಿ ಸಲ್ಲಿಸಿದ್ದರು. ಆದರೆ ವಿಲೇಜ್ ಅಕೌಂಟೆಂಟ್ ಲಿಂಗಪ್ಪಾಜಿ ಎಂಬವರ ಬೇಜವಾಬ್ದಾರಿತನದಿಂದಾಗಿ ಇಬ್ಬರ ಹೆಸರಲ್ಲೂ ಮರಣಪತ್ರ ನೋಂದಣಿಯಾಗಿದೆ. ಖುದ್ದು ತಲಶೀಲ್ದಾರರೇ ಸಹಿ ಹಾಕಿದ ಮರಣಪತ್ರಗಳನ್ನು ನಾಡಕಚೇರಿಯಿಂದ ರೈತ ಪಡೆದುಕೊಂಡು, ಆಘಾತಕ್ಕೆ ಒಳಗಾಗಿದ್ದರು.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv