Tag: Allahabad

  • ಹುಟ್ಟುಹಬ್ಬದ ಮುನ್ನಾ ದಿನ ಹಾಸ್ಟೆಲ್‌ನ 5ನೇ ಮಹಡಿಯಿಂದ ಹಾರಿ IIIT ವಿದ್ಯಾರ್ಥಿ ಆತ್ಮಹತ್ಯೆ

    ಹುಟ್ಟುಹಬ್ಬದ ಮುನ್ನಾ ದಿನ ಹಾಸ್ಟೆಲ್‌ನ 5ನೇ ಮಹಡಿಯಿಂದ ಹಾರಿ IIIT ವಿದ್ಯಾರ್ಥಿ ಆತ್ಮಹತ್ಯೆ

    ಲಕ್ನೋ: ಹುಟ್ಟುಹಬ್ಬದ ಮುನ್ನಾ ದಿನವೇ ಅಲಹಾಬಾದ್‌ನ (Allahabad) ಭಾರತೀಯ ಮಾಹಿತಿ ತಂತ್ರಜ್ಞಾನ ಸಂಸ್ಥೆಯ (IIIT) ಪ್ರಥಮ ವರ್ಷದ ವಿಶೇಷಚೇತನ ವಿದ್ಯಾರ್ಥಿ ಹಾಸ್ಟೆಲ್‌ನ 5ನೇ ಮಹಡಿಯಿಂದ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ.

    ಶನಿವಾರ ರಾತ್ರಿ ಹಾಸ್ಟೆಲ್ ಕ್ಯಾಂಪಸ್‌ನಲ್ಲಿ ವಿದ್ಯಾರ್ಥಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ಪೊಲೀಸರು ಭಾನುವಾರ ತಿಳಿಸಿದ್ದಾರೆ. ಪ್ರಯಾಗರಾಜ್‌ನ (Prayagraj) ಝಲ್ವಾ ಪ್ರದೇಶದಲ್ಲಿ ಈ ಘಟನೆ ನಡೆದಿದ್ದು, ತೆಲಂಗಾಣದ ವಿಶೇಷಚೇತನ ವಿದ್ಯಾರ್ಥಿ ರಾಹುಲ್ ಮದಲ ಚೈತನ್ಯ ಆತ್ಮಹತ್ಯೆಗೆ ಶರಣಾಗಿದ್ದಾನೆ. ಇದನ್ನೂ ಓದಿ: ಹುಬ್ಬಳ್ಳಿ, ಧಾರವಾಡದಲ್ಲಿ ಗುಡುಗು ಸಹಿತ ಭಾರೀ ಮಳೆ – ಸಿಡಿಲು ಬಡಿದು ವೃದ್ಧ ಸಾವು

    ಘಟನಾ ಸ್ಥಳದಲ್ಲಿ ಯಾವುದೇ ಡೆತ್‌ನೋಟ್ ಪತ್ತೆಯಾಗಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ. ಪ್ರಾಥಮಿಕ ತನಿಖೆಯಲ್ಲಿ ರಾಹುಲ್ ಪರೀಕ್ಷೆಯಲ್ಲಿ ಅನುತ್ತೀರ್ಣನಾದ ನಂತರ ಬೇಸರಗೊಂಡಿದ್ದ ಎಂದು ತಿಳಿದುಬಂದಿದೆ. ಘಟನೆಯ ತನಿಖೆಗಾಗಿ ಸಮಿತಿಯನ್ನು ರಚಿಸಲಾಗಿದೆ ಮತ್ತು ಏಳು ದಿನಗಳಲ್ಲಿ ವರದಿಯನ್ನು ಸಲ್ಲಿಸಲು ನಿರ್ದೇಶಿಸಲಾಗಿದೆ ಎಂದು ಸಂಸ್ಥೆ ತಿಳಿಸಿದೆ. ಇದನ್ನೂ ಓದಿ: ಹಿಮಾಚಲ ಪ್ರದೇಶ: ಬಿರುಗಾಳಿಗೆ ಉರುಳಿ ಬಿದ್ದ ಮರ – 6 ಕ್ಕೂ ಹೆಚ್ಚು ಮಂದಿ ಸಾವು

    ಪೊಲೀಸರ ಪ್ರಕಾರ, ಶನಿವಾರ ರಾತ್ರಿ 11:55ರ ಸುಮಾರಿಗೆ ರಾಹುಲ್ ಐಐಐಟಿ ಕ್ಯಾಂಪಸ್‌ನಲ್ಲಿರುವ ತನ್ನ ಹಾಸ್ಟೆಲ್‌ನ ಐದನೇ ಮಹಡಿಯಿಂದ ಹಾರಿದ್ದಾನೆ. ಮಾಹಿತಿ ದೊರೆತ ತಕ್ಷಣವೇ ಪೊಲೀಸ್ ತಂಡ ಸ್ಥಳಕ್ಕೆ ಧಾವಿಸಿ ರಾಹುಲ್‌ನನ್ನು ಆಸ್ಪತ್ರೆಗೆ ರವಾನಿಸಲಾಯಿತು. ಆದರೆ ಆಸ್ಪತ್ರೆಯಲ್ಲಿ ರಾಹುಲ್ ಕೊನೆಯುಸಿರೆಳೆದಿದ್ದಾನೆ ಎಂದು ಧೂಮಂಗಂಜ್ ಸಹಾಯಕ ಪೊಲೀಸ್ ಆಯುಕ್ತ (ಎಸಿಪಿ) ಅಜೇಂದ್ರ ಯಾದವ್ ಹೇಳಿದ್ದಾರೆ. ಇದನ್ನೂ ಓದಿ: ಮಹಾಭಾರತದಲ್ಲಿ ಜಯಗಳಿಸಿದ್ದು ಕೃಷ್ಣಾರ್ಜುನರೇ ಹೊರತು ಶಕುನಿ, ದೃತರಾಷ್ಟ್ರರಲ್ಲ: ಯತ್ನಾಳ್‌

    ಆತ್ಮಹತ್ಯೆಗೂ ಮುನ್ನ ಶನಿವಾರ ರಾತ್ರಿ ರಾಹುಲ್ ತನ್ನ ಕಿರಿಯ ಸಹೋದರ ಮತ್ತು ತಂದೆಯನ್ನು ಚೆನ್ನಾಗಿ ನೋಡಿಕೊಳ್ಳುವಂತೆ ತಾಯಿಗೆ ಸಂದೇಶ ಕಳುಹಿಸಿದ್ದ. ಸಂದೇಶವನ್ನು ನೋಡಿ ಭಯಭೀತರಾದ ತಾಯಿ ಮತ್ತು ಆತನಿಗೆ ಕರೆ ಮಾಡಿದ್ದಾರೆ. ಆದರೆ ರಾಹುಲ್‌ನ ಫೋನ್ ಸ್ವಿಚ್‌ಆಫ್ ಆಗಿತ್ತು. ಭಾನುವಾರ ಕ್ಯಾಂಪಸ್ ತಲುಪಿದಾಗ ಮಗ ಆತ್ಮಹತ್ಯೆ ಮಾಡಿಕೊಂಡಿರುವುದು ತಿಳಿಯಿತು. ಈ ವೇಳೆ ರಾಹುಲ್ ಆರು ತಿಂಗಳಿನಿಂದ ತರಗತಿಗಳನ್ನು ತಪ್ಪಿಸಿದ್ದಾನೆ ಎಂದು ಸಂಸ್ಥೆ ನನಗೆ ತಿಳಿಸಿದೆ. ಇದಕ್ಕೂ ಮುನ್ನ ಕಾಲೇಜು ಆಡಳಿತ ಮಂಡಳಿ ಈ ಕುರಿತು ನನಗೆ ಯಾವುದೇ ಮಾಹಿತಿ ನೀಡಿಲ್ಲ ಎಂದು ರಾಹುಲ್ ತಾಯಿ ಸ್ವರ್ಣಲತಾ ತಿಳಿಸಿದ್ದಾರೆ. ಇದನ್ನೂ ಓದಿ: ದೆಹಲಿಗೆ ಹೋಗುವ ಮುನ್ನ ಸಿಎಂ, ಡಿಸಿಎಂ ಮೀಟಿಂಗ್

  • ‘ಆದಿಪುರುಷ’ ಚಿತ್ರದಲ್ಲಿ ತಪ್ಪಾಗಿದೆ ಕ್ಷಮಿಸಿ: ಕೈ ಮುಗಿದು ಕ್ಷಮೆ ಕೇಳಿದ ರೈಟರ್

    ‘ಆದಿಪುರುಷ’ ಚಿತ್ರದಲ್ಲಿ ತಪ್ಪಾಗಿದೆ ಕ್ಷಮಿಸಿ: ಕೈ ಮುಗಿದು ಕ್ಷಮೆ ಕೇಳಿದ ರೈಟರ್

    ದಿಪುರುಷ ಸಿನಿಮಾದಲ್ಲಿ ಧಾರ್ಮಿಕ ಭಾವನೆಗಳಿಗೆ ಧಕ್ಕೆಯಾಗಿದೆ ಎಂದು ಹೋರಾಟ ಮಾಡಿದರೂ ಚಿತ್ರತಂಡವಾಗಲಿ ಅಥವಾ ಸಿನಿಮಾದ ಸಂಭಾಷಣೆಯನ್ನು ಬರೆದ ಮನೋಜ್ ಮುಂತಾಶಿರ್ (Manoj Muntashir) ಆಗಲಿ ಯಾವುದೇ ಪ್ರತಿಕ್ರಿಯೆ ನೀಡಿರಲ್ಲ. ಸಿನಿಮಾ ಬ್ಯಾನ್ ಮಾಡುವ ಮಟ್ಟಕ್ಕೆ ಬಂದರೂ ಮತ್ತೆ ತಮ್ಮ ಮೊಂಡುತನವನ್ನೇ ಮುಂದುವರೆಸಿಕೊಂಡು ಹೋಗಿತ್ತು ಚಿತ್ರತಂಡ. ಕೋರ್ಟ್ ಕಟಕಟೆ ಏರಿದ ನಂತರ ಇದೀಗ ತಣ್ಣಗಾಗಿದೆ.

    ಈ ಹಿಂದೆ ಅಲಹಾಬಾದ್ (Allahabad) ಹೈಕೋರ್ಟ್ ಚಿತ್ರತಂಡಕ್ಕೆ ಛೀಮಾರಿ ಹಾಕಿತ್ತು. ಧಾರ್ಮಿಕ ನಂಬಿಕೆಗಳನ್ನು ಘಾಸಿಗೊಳಿಸಿದ್ದರ ಬಗ್ಗೆ ತೀವ್ರ ರೀತಿಯಲ್ಲೇ ಅಸಮಾಧಾನ ಹೊರಹಾಕಿತ್ತು. ಕೋರ್ಟಿಗೆ ಖುದ್ದಾಗಿ ಹಾಜರಾಗಬೇಕು ಎಂದು ಮನೋಜ್ ಮುಂತಾಶಿರ್ ಸೇರಿದಂತೆ ನಿರ್ಮಾಪಕರಿಗೆ ಮತ್ತು ನಿರ್ದೇಶಕರಿಗೆ ನೋಟಿಸ್ ಜಾರಿ ಮಾಡಿತ್ತು. ಕೋರ್ಟ್ ಬಿಸಿ ತಾಗುತ್ತಿದ್ದಂತೆಯೇ ಬರಹಗಾರ ಮನೋಜ್ ಟ್ವೀಟ್ ಮಾಡಿದ್ದಾರೆ.

    ತಮ್ಮಿಂದ ಚಿತ್ರದಲ್ಲಿ ತಪ್ಪಾಗಿದೆ ಎಂದು ಒಪ್ಪಿಕೊಂಡಿರುವ ಮನೋಜ್, ಧಾರ್ಮಿಕ ಭಾವನೆಗಳನ್ನು ಘಾಸಿಗೊಳಿಸಿದ್ದಕ್ಕೆ ಜನರಲ್ಲಿ ಕ್ಷಮೆ ಕೇಳಿದ್ದಾರೆ. ಜನರಿಗೆ ನೋವು ಆಗಿದ್ದನ್ನು ಒಪ್ಪಿಕೊಳ್ಳುತ್ತೇನೆ. ನಾನು ಎರಡೂ ಕೈಗಳನ್ನು ಮುಗಿದು ಕ್ಷಮೆ ಕೇಳುತ್ತೇನೆ. ಪ್ರಭು ಬಜರಂಗ ಬಲಿ ನಮಗೆ ಮತ್ತಷ್ಟು ಶಕ್ತಿ ನೀಡಲಿ. ಪವಿತ್ರ ಸನಾತನ ಹಾಗೂ ನಮ್ಮ ರಾಷ್ಟ್ರ ಸೇವೆ ಮಾಡಲು ಮತ್ತಷ್ಟು ಶಕ್ತಿ ತುಂಬಲಿ ಎಂದು ಅವರು ಟ್ವಿಟರ್ ನಲ್ಲಿ ಬರೆದುಕೊಂಡಿದ್ದಾರೆ. ಇದನ್ನೂ ಓದಿ:ಪ್ಯಾರಿಸ್‌ನ ರೊಮ್ಯಾಂಟಿಕ್‌ ಫೋಟೋ ಹಂಚಿಕೊಂಡ ಅದಿತಿ ಪ್ರಭುದೇವ

    ಈ ಹಿಂದೆ ಆದಿಪುರುಷ (Adipurush) ಸಿನಿಮಾವನ್ನು ನೇಪಾಳ ಸರಕಾರ ಬ್ಯಾನ್ ಮಾಡಿತ್ತು. ಚಿತ್ರದಲ್ಲಿ ಸೀತೆ ಬಗ್ಗೆ ಹೇಳಲಾದ ಡೈಲಾಗ್ ಸರಿಯಾಗಿಲ್ಲ ಎಂದು ಕಠ್ಮಂಡು ಮೇಯರ್ ಕೋರ್ಟ್ ಮೆಟ್ಟಿಲು ಏರಿದ್ದರು. ಸಿನಿಮಾವನ್ನು ಬ್ಯಾನ್ ಮಾಡುವುದು ಸರಿಯಲ್ಲ ಎಂದು ಅಲ್ಲಿನ ಹೈಕೋರ್ಟ್ ಹೇಳಿದ್ದರೂ, ಇತಿಹಾಸಕ್ಕೆ ಅಪಚಾರ ಮಾಡಬಾರದು ಎನ್ನುವುದನ್ನು ಎತ್ತಿ ಹಿಡಿದಿತ್ತು. ನಂತರ ಅಲಹಾಬಾದ್ (Allahabad) ಹೈಕೋರ್ಟ್ ಮೊನ್ನೆಯಷ್ಟೇ ಚಿತ್ರದ ಬಗ್ಗೆ ಅಸಮಾಧಾನ ಹೊರಹಾಕಿದೆ.

    ಆದಿಪುರುಷ ಸಿನಿಮಾದ ಚಿತ್ರಕಥೆ ಮತ್ತು ಸಂಭಾಷಣೆ ಕುರಿತಂತೆ  ಸಲ್ಲಿಸಲಾದ ಅರ್ಜಿಯನ್ನು ಕೈಗೆತ್ತಿಕೊಂಡ ಅಲಹಾಬಾದ್ ಹೈಕೋರ್ಟಿನ (High Court) ಲಕ್ನೋ ಪೀಠವು ಚಿತ್ರತಂಡದ ಜೊತೆ ಸೆನ್ಸಾರ್ ಮಂಡಳಿಯನ್ನು ತೀವ್ರವಾಗಿ ಟೀಕಿಸಿತ್ತು. ‘ಭಾರತೀಯರು ಸಹಿಷ್ಟುಗಳು ಎನ್ನುವ ಕಾರಣಕ್ಕೆ ಸಹನೆ ಪರೀಕ್ಷೆ ಮಾಡಲಾಗುತ್ತಿದೆಯೇ?’ ಎಂದು ಪ್ರಶ್ನೆ ಮಾಡಿತ್ತು.

    ರಾಮಾಯಣವನ್ನು ಜನರು ಪವಿತ್ರ ಎಂದು ದಿನವೂ ಪಠಿಸುತ್ತಾರೆ. ರಾಮಚರಿತಮಾನಸವನ್ನು ಓದುತ್ತಾರೆ. ಇಂತಹ ರಾಮಾಯಣವನ್ನೇ ಸಿನಿಮಾ ಮಾಡಿ, ಆ ನಂತರ ಸಿನಿಮಾಗೂ ರಾಮಾಯಣಕ್ಕೂ ಸಂಬಂಧವಿಲ್ಲ ಎಂದರೆ ಮಾಡಿದ ತಪ್ಪು ಮುಚ್ಚಿದಂತೆ ಆಗುತ್ತದೆ? ಚಿತ್ರದಲ್ಲಿನ ಸಂಭಾಷಣೆಗಳು ಕೂಡ ಅಪಮಾನ ಮಾಡುವಂತಿವೆ. ಈ ಸಿನಿಮಾ ನೋಡಿದ ಮೇಲೂ ಜನರು ತಾಳ್ಮೆ ಕಳೆದುಕೊಂಡಿಲ್ಲ ಎನ್ನುವುದು ಅವರ ಸಹಿಷ್ಣುತೆಯನ್ನು ತೋರಿಸುತ್ತದೆ’ ಎಂದು ಅಭಿಪ್ರಾಯ ವ್ಯಕ್ತ ಪಡಿಸಿತ್ತು.

     

    ದೇವರು ಎಂದು ಪೂಜಿಸುವ ಭಗವಾನ್ ಹನುಮಾನ್ ಮತ್ತು ಸೀತೆಯನ್ನು ಸಿನಿಮಾದಲ್ಲಿ ಏನೂ ಅಲ್ಲ ಎನ್ನುವಂತೆ ತೋರಿಸಿದ್ದೀರಿ. ಕೆಲವು ದೃಶ್ಯಗಳು ವಯಸ್ಕ ವರ್ಗಕ್ಕೆ ಸೇರುವಂತಹವು ಆಗಿವೆ. ನೀವು ಏನನ್ನು ತೋರಿಸಲು ಹೊರಟಿದ್ದೀರಿ ಎಂದು ಪ್ರಶ್ನೆ ಮಾಡಿದ್ದಲ್ಲದೇ, ಸಂಭಾಷಣೆ ಬರೆದಿರುವ ಮನೋಜ್ (Manoj) ಅವರಿಗೂ ನೋಟಿಸ್ ನೀಡಿ, ಕಕ್ಷಿದಾರನನ್ನಾಗಿ ಮಾಡಿ ಎಂದು ನಿರ್ದೇಶನ ನೀಡಿತ್ತು. ಈ ನಿರ್ದೇಶನದ ಹಿನ್ನೆಲೆಯಲ್ಲಿ ಬರಹಗಾರ ಮನೋಜ್ ಕ್ಷಮೆ ಕೇಳಿದ್ದಾರೆ.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ವಿಚಾರಣೆಗೆ ಬರುವಂತೆ ‘ಆದಿ ಪುರುಷ’ ತಂಡಕ್ಕೆ ಹೈಕೋರ್ಟ್ ಸೂಚನೆ

    ವಿಚಾರಣೆಗೆ ಬರುವಂತೆ ‘ಆದಿ ಪುರುಷ’ ತಂಡಕ್ಕೆ ಹೈಕೋರ್ಟ್ ಸೂಚನೆ

    ದಿ ಪುರುಷ ಸಿನಿಮಾವನ್ನು ನಿಷೇಧಿಸುವಂತೆ ಕೋರಿ ಕುಲದೀಪ್ ತಿವಾರಿ ಹಾಗೂ ನವೀನ್ ಧವನ್ ಸಲ್ಲಿಸಿದ್ದ ಅರ್ಜಿಯ ವಿಚಾರಣೆಗೆ ನಡೆಸಿದ ಅಲಹಾಬಾದ್ ಹೈಕೋರ್ಟಿನ ನ್ಯಾಯಮೂರ್ತಿಗಳಾದ ರಾಜೇಶ್ ಸಿಂಗ್ ಚೌಹಾನ್ ಮತ್ತು ಪ್ರಕಾಶ್ ಸಿಂಗ್ ಅವರಿದ್ದ ದ್ವಿಸದಸ್ಯ ಪೀಠ  ಜುಲೈ 27ಕ್ಕೆ ಸಿನಿಮಾದ ನಿರ್ದೇಶಕ ಓಂ ರಾವುತ್, ನಿರ್ಮಾಪಕ ಭೂಷಣ್ ಕುಮಾರ್ ಹಾಗೂ ಬರಹಗಾರ ಮನೋಜ್ ಗೆ ವಿಚಾರಣೆಗೆ ಹಾಜರಾಗುವಂತೆ ಸೂಚನೆ ನೀಡಿದೆ.

    ಅಲ್ಲದೇ, ಈ ಸಿನಿಮಾವು ಸಾರ್ವಜನಿಕರ ಭಾವನೆಗೆ ಧಕ್ಕೆ ತರುವಂತಿದೆಯೇ ಎಂದು ಪರಿಶೀಲಿಸಿದ ಐವರು ಸದಸ್ಯರಿರುವ ಸಮಿತಿಯನ್ನು ನೇಮಿಸಬೇಕು ಎಂದು ಸರಕಾರಕ್ಕೂ ಹೈಕೋರ್ಟ್ ಸೂಚನೆ ನೀಡಿದೆ. ಚಿತ್ರಕ್ಕೆ ಸೆನ್ಸಾರ್ ಮಂಡಳಿಯು ನೀಡಿರುವ ಪ್ರಮಾಣಪತ್ರವನ್ನು ಮರುಪರಿಶೀಲಿಸಲು ನ್ಯಾಯಮೂರ್ತಿಗಳು ಸೂಚಿಸಿದ್ದಾರೆ.

    ಆದಿಪುರುಷ ಸಿನಿಮಾ ರಿಲೀಸ್ ಆಗಿ ವಾರದ ನಂತರ ಬಾಕ್ಸ್ ಆಫೀಸಿನಲ್ಲಿ ಮಕಾಡೆ ಮಲಗಿದ್ದರೂ, ಅದರ ಕುರಿತಾಗಿ ನಡೆಯುತ್ತಿರುವ ಚರ್ಚೆ ಮಾತ್ರ ನಿಂತಿಲ್ಲ. ಹಲವು ಕಡೆ ಸಿನಿಮಾದ ಬಗ್ಗೆ ದೂರು ನೀಡಲಾಗಿದೆ. ದೇಶದ ಹೈಕೋರ್ಟ್ ಗಳು ಚಿತ್ರದ ಚಿಂತನೆಯನ್ನು ಗಂಭೀರವಾಗಿ ತಗೆದುಕೊಂಡಿವೆ. ಹೀಗಾಗಿ ಚಿತ್ರ ತಂಡಕ್ಕೆ ಸಂಕಷ್ಟ ಎದುರಾಗುತ್ತಲೇ ಇದೆ.

    ಆದಿಪುರುಷ (Adipurush) ಸಿನಿಮಾವನ್ನು ನೇಪಾಳ ಸರಕಾರ ಬ್ಯಾನ್ ಮಾಡಿತ್ತು. ಚಿತ್ರದಲ್ಲಿ ಸೀತೆ ಬಗ್ಗೆ ಹೇಳಲಾದ ಡೈಲಾಗ್ ಸರಿಯಾಗಿಲ್ಲ ಎಂದು ಕಠ್ಮಂಡು ಮೇಯರ್ ಕೋರ್ಟ್ ಮೆಟ್ಟಿಲು ಏರಿದ್ದರು. ಸಿನಿಮಾವನ್ನು ಬ್ಯಾನ್ ಮಾಡುವುದು ಸರಿಯಲ್ಲ ಎಂದು ಅಲ್ಲಿನ ಹೈಕೋರ್ಟ್ ಹೇಳಿದ್ದರೂ, ಇತಿಹಾಸಕ್ಕೆ ಅಪಚಾರ ಮಾಡಬಾರದು ಎನ್ನುವುದನ್ನು ಎತ್ತಿ ಹಿಡಿದಿತ್ತು. ಇದೀಗ ಅಲಹಾಬಾದ್ (Allahabad) ಹೈಕೋರ್ಟ್ ಕೂಡ ಈ ಪ್ರಕರಣವನ್ನು ಗಂಭೀರವಾಗಿ ತೆಗೆದುಕೊಂಡಿದೆ. ಇದನ್ನೂ ಓದಿ:ಗೋಲ್ಡನ್ ಟೆಂಪಲ್‌ನಲ್ಲಿ ಪಾತ್ರೆ ತೊಳೆದು ಸೇವೆ ಸಲ್ಲಿಸಿದ ರಾಘವ್- ಪರಿಣಿತಿ ಜೋಡಿ

    ಆದಿಪುರುಷ ಸಿನಿಮಾದ ಚಿತ್ರಕಥೆ ಮತ್ತು ಸಂಭಾಷಣೆ ಕುರಿತಂತೆ  ಸಲ್ಲಿಸಲಾದ ಅರ್ಜಿಯನ್ನು ಕೈಗೆತ್ತಿಕೊಂಡ ಅಲಹಾಬಾದ್ ಹೈಕೋರ್ಟಿನ (High Court) ಲಕ್ನೋ ಪೀಠವು ಚಿತ್ರತಂಡದ ಜೊತೆ ಸೆನ್ಸಾರ್ ಮಂಡಳಿಯನ್ನು ತೀವ್ರವಾಗಿ ಟೀಕಿಸಿದೆ. ‘ಭಾರತೀಯರು ಸಂಹಿಷ್ಟುಗಳು ಎನ್ನುವ ಕಾರಣಕ್ಕೆ ಸಹನೆ ಪರೀಕ್ಷೆ ಮಾಡಲಾಗುತ್ತಿದೆಯೇ?’ ಎಂದು ಪ್ರಶ್ನೆ ಮಾಡಿದೆ.

    ರಾಮಾಯಣವನ್ನು ಜನರು ಪವಿತ್ರ ಎಂದು ದಿನವೂ ಪಠಿಸುತ್ತಾರೆ. ರಾಮಚರಿತಮಾನಸವನ್ನು ಓದುತ್ತಾರೆ. ಇಂತಹ ರಾಮಾಯಣವನ್ನೇ ಸಿನಿಮಾ ಮಾಡಿ, ಆ ನಂತರ ಸಿನಿಮಾಗೂ ರಾಮಾಯಣಕ್ಕೂ ಸಂಬಂಧವಿಲ್ಲ ಎಂದರೆ ಮಾಡಿದ ತಪ್ಪು ಮುಚ್ಚಿದಂತೆ ಆಗುತ್ತದೆ? ಚಿತ್ರದಲ್ಲಿನ ಸಂಭಾಷಣೆಗಳು ಕೂಡ ಅಪಮಾನ ಮಾಡುವಂತಿವೆ. ಈ ಸಿನಿಮಾ ನೋಡಿದ ಮೇಲೂ ಜನರು ತಾಳ್ಮೆ ಕಳೆದುಕೊಂಡಿಲ್ಲ ಎನ್ನುವುದು ಅವರ ಸಹಿಷ್ಣುತೆಯನ್ನು ತೋರಿಸುತ್ತದೆ’ ಎಂದು ಅಭಿಪ್ರಾಯ ವ್ಯಕ್ತ ಪಡಿಸಿದೆ.

     

    ದೇವರು ಎಂದು ಪೂಜಿಸುವ ಭಗವಾನ್ ಹನುಮಾನ್ ಮತ್ತು ಸೀತೆಯನ್ನು ಸಿನಿಮಾದಲ್ಲಿ ಏನೂ ಅಲ್ಲ ಎನ್ನುವಂತೆ ತೋರಿಸಿದ್ದೀರಿ. ಕೆಲವು ದೃಶ್ಯಗಳು ವಯಸ್ಕ ವರ್ಗಕ್ಕೆ ಸೇರುವಂತಹವು ಆಗಿವೆ. ನೀವು ಏನನ್ನು ತೋರಿಸಲು ಹೊರಟಿದ್ದೀರಿ ಎಂದು ಪ್ರಶ್ನೆ ಮಾಡಿದ್ದಲ್ಲದೇ, ಸಂಭಾಷಣೆ ಬರೆದಿರುವ ಮನೋಜ್ (Manoj) ಅವರಿಗೂ ನೋಟಿಸ್ ನೀಡಿ, ಕಕ್ಷಿದಾರನನ್ನಾಗಿ ಮಾಡಿ ಎಂದು ನಿರ್ದೇಶನ ನೀಡಿದೆ.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಸಿನಿಮಾ ಮಾಡುವವರು ಧಾರ್ಮಿಕ ವಿಚಾರಗಳಿಂದ ದೂರವಿರಿ : ಅಲಹಾಬಾದ್ ಹೈಕೋರ್ಟ್

    ಸಿನಿಮಾ ಮಾಡುವವರು ಧಾರ್ಮಿಕ ವಿಚಾರಗಳಿಂದ ದೂರವಿರಿ : ಅಲಹಾಬಾದ್ ಹೈಕೋರ್ಟ್

    ದಿಪುರುಷ (Adipurush) ಸಿನಿಮಾ ವಿಚಾರವಾಗಿ ಅಲಹಾಬಾದ್ (Allahabad) ಹೈಕೋರ್ಟ್ ತೀವ್ರ ಅಸಮಾಧಾನ ವ್ಯಕ್ತ ಪಡಿಸಿದೆ. ಕೇವಲ ಆದಿಪುರುಷ ಸಿನಿಮಾ ಟೀಮ್ ಗೆ ಮಾತ್ರವಲ್ಲ, ಇತರ ಸಿನಿಮಾ ಮಾಡುವ ನಿರ್ದೇಶಕರಿಗೆ ಅದು ಕಿವಿಮಾತು ಹೇಳಿದೆ. ಸಿನಿಮಾ ಮಾಡುವವರು ಧಾರ್ಮಿಕ ವಿಚಾರಗಳಿಂದ ದೂರವಿರಿ ಎಂದು ಹೇಳಿದೆ.

    ಆದಿಪುರುಷ ಸಿನಿಮಾದ ಅರ್ಜಿಯನ್ನು ವಿಚಾರಣೆಗೆ ಕೈಗೆತ್ತಿಕೊಂಡ ಅಲಹಾಬಾದ್ ಹೈಕೋರ್ಟ್ (High Court) ನ್ಯಾಯಮೂರ್ತಿಗಳಾದ ರಾಜೇಶ್ ಸಿಂಗ್ ಚೌಹಾಣ್ ಮತ್ತು ನ್ಯಾಯಮೂರ್ತಿ ಶ್ರೀ ಪ್ರಕಾಶ್ ಸಿಂಗ್ ಆದಿಪುರುಷ ಚಿತ್ರತಂಡವನ್ನು ತರಾಟೆಗೆ ತಗೆದುಕೊಂಡಿದ್ದಷ್ಟೇ ಅಲ್ಲ, ‘ನೀವು ಇದೇ ರೀತಿ ತಪ್ಪಾಗಿ ಕುರಾನ್ (Quran) ಬಗ್ಗೆ ಸಣ್ಣದೊಂದು ಡಾಕ್ಯೂಮೆಂಟರಿ ಮಾಡಿ ಮುಂದೇನಾಗತ್ತೆ ಅಂತ ನೋಡಿ’ ಎಂದು ಮೌಖಿಕವಾಗಿ ಕುಟುಕಿದರು. ಇದನ್ನೂ ಓದಿ:ಹಾಲಿವುಡ್ ಸಂದರ್ಶನದಲ್ಲಿ ಆಲಿಯಾ ಭಟ್ ಹೀಗಾ ಮಾಡೋದು- ರಣ್‌ಬೀರ್ ಪತ್ನಿ ಟ್ರೋಲ್

    ಮುಂದುವರೆದು ಮಾತನಾಡಿದ ನ್ಯಾಯಾಧೀಶರು, ‘ಯಾವುದೇ ಧರ್ಮದ (Religious) ವಿಷಯಗಳನ್ನು ತಪ್ಪಾಗಿ ತೋರಿಸಬೇಡಿ. ಕೋರ್ಟಿಗೆ ಯಾವುದೇ ಧರ್ಮವಿಲ್ಲ. ಬೈಬಲ್ (Bible), ಕುರಾನ್ ಅಂತ ವಿಚಾರಗಳನ್ನೂ ತೆಗೆದುಕೊಳ್ಳಬೇಡಿ’ ಎಂದು ತಾಕೀತು ಮಾಡಿದರು. ಧಾರ್ಮಿಕ ವಿಷಯಗಳನ್ನು ಎತ್ತಿಕೊಂಡು ಸಿನಿಮಾ ಮಾಡುವುದು ತಮಾಷೆ ವಿಷಯವಲ್ಲ. ಆದಿಪುರುಷ ಸಿನಿಮಾದ ನಿರ್ಮಾಪಕರು ನ್ಯಾಯಾಲಯಕ್ಕೆ ಹಾಜರಾಗಬೇಕು’ ಎಂದು ತಿಳಿಸಿದರು.

    ಆದಿಪುರುಷ ಸಿನಿಮಾದ ವಿಚಾರವಾಗಿ ಈ ಚಿತ್ರವನ್ನು ನಿಷೇಧಿಸಬೇಕು ಎಂದು ಅಲಹಾಬಾದ್ ಕೋರ್ಟಿಗೆ ಅರ್ಜಿ ಸಲ್ಲಿಸಲಾಗಿತ್ತು. ಈ ಅರ್ಜಿಯನ್ನು ಕೈಗೆತ್ತಿಕೊಂಡ ನ್ಯಾಯಧೀಶರು, ಸಿನಿಮಾ ಮತ್ತು ಧರ್ಮದ ಬಗ್ಗೆ ಸಾಕಷ್ಟು ಪಾಠಗಳನ್ನು ಮಾಡಿದರು. ಸೂಕ್ಷ್ಮ ವಿಷಯಗಳನ್ನು ಸಿನಿಮಾದಲ್ಲಿ ತರದಂತೆ ಮೌಖಿಕ ಆದೇಶ ಮಾಡಿದರು.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ‘ಆದಿಪುರುಷ’ ಸಿನಿಮಾ ತಂಡಕ್ಕೆ ಬಿಸಿ ಮುಟ್ಟಿಸಿದ ಅಲಹಾಬಾದ್ ಹೈಕೋರ್ಟ್

    ‘ಆದಿಪುರುಷ’ ಸಿನಿಮಾ ತಂಡಕ್ಕೆ ಬಿಸಿ ಮುಟ್ಟಿಸಿದ ಅಲಹಾಬಾದ್ ಹೈಕೋರ್ಟ್

    ಪ್ರಭಾಸ್ (Prabhas) ನಟನೆಯ ಆದಿಪುರುಷ ಸಿನಿಮಾ ರಿಲೀಸ್ ಆಗಿ ವಾರದ ನಂತರ ಬಾಕ್ಸ್ ಆಫೀಸಿನಲ್ಲಿ ಮಕಾಡೆ ಮಲಗಿದ್ದರೂ, ಅದರ ಕುರಿತಾಗಿ ನಡೆಯುತ್ತಿರುವ ಚರ್ಚೆ ಮಾತ್ರ ನಿಂತಿಲ್ಲ. ಹಲವು ಕಡೆ ಸಿನಿಮಾದ ಬಗ್ಗೆ ದೂರು ನೀಡಲಾಗಿದೆ. ದೇಶದ ಹೈಕೋರ್ಟ್ ಗಳು ಚಿತ್ರದ ಚಿಂತನೆಯನ್ನು ಗಂಭೀರವಾಗಿ ತಗೆದುಕೊಂಡಿವೆ. ಹೀಗಾಗಿ ಚಿತ್ರ ತಂಡಕ್ಕೆ ಸಂಕಷ್ಟ ಎದುರಾಗುತ್ತಲೇ ಇದೆ.

    ಆದಿಪುರುಷ (Adipurush) ಸಿನಿಮಾವನ್ನು ನೇಪಾಳ ಸರಕಾರ ಬ್ಯಾನ್ ಮಾಡಿತ್ತು. ಚಿತ್ರದಲ್ಲಿ ಸೀತೆ ಬಗ್ಗೆ ಹೇಳಲಾದ ಡೈಲಾಗ್ ಸರಿಯಾಗಿಲ್ಲ ಎಂದು ಕಠ್ಮಂಡು ಮೇಯರ್ ಕೋರ್ಟ್ ಮೆಟ್ಟಿಲು ಏರಿದ್ದರು. ಸಿನಿಮಾವನ್ನು ಬ್ಯಾನ್ ಮಾಡುವುದು ಸರಿಯಲ್ಲ ಎಂದು ಅಲ್ಲಿನ ಹೈಕೋರ್ಟ್ ಹೇಳಿದ್ದರೂ, ಇತಿಹಾಸಕ್ಕೆ ಅಪಚಾರ ಮಾಡಬಾರದು ಎನ್ನುವುದನ್ನು ಎತ್ತಿ ಹಿಡಿದಿತ್ತು. ಇದೀಗ ಅಲಹಾಬಾದ್ (Allahabad) ಹೈಕೋರ್ಟ್ ಚಿತ್ರದ ಬಗ್ಗೆ ಅಸಮಾಧಾನ ಹೊರಹಾಕಿದೆ.

    ಆದಿಪುರುಷ ಸಿನಿಮಾದ ಚಿತ್ರಕಥೆ ಮತ್ತು ಸಂಭಾಷಣೆ ಕುರಿತಂತೆ  ಸಲ್ಲಿಸಲಾದ ಅರ್ಜಿಯನ್ನು ಕೈಗೆತ್ತಿಕೊಂಡ ಅಲಹಾಬಾದ್ ಹೈಕೋರ್ಟಿನ (High Court) ಲಕ್ನೋ ಪೀಠವು ಚಿತ್ರತಂಡದ ಜೊತೆ ಸೆನ್ಸಾರ್ ಮಂಡಳಿಯನ್ನು ತೀವ್ರವಾಗಿ ಟೀಕಿಸಿದೆ. ‘ಭಾರತೀಯರು ಸಹಿಷ್ಟುಗಳು ಎನ್ನುವ ಕಾರಣಕ್ಕೆ ಸಹನೆ ಪರೀಕ್ಷೆ ಮಾಡಲಾಗುತ್ತಿದೆಯೇ?’ ಎಂದು ಪ್ರಶ್ನೆ ಮಾಡಿದೆ. ಇದನ್ನೂ ಓದಿ: ಪಡ್ಡೆಹುಡುಗರ ಕಣ್ಣು ಕುಕ್ಕುವಂತೆ ಹಾಟ್‌ ಆಗಿ ಕಾಣಿಸಿಕೊಂಡ ‘ಕೆಜಿಎಫ್‌’ ನಟಿ

    ರಾಮಾಯಣವನ್ನು ಜನರು ಪವಿತ್ರ ಎಂದು ದಿನವೂ ಪಠಿಸುತ್ತಾರೆ. ರಾಮಚರಿತಮಾನಸವನ್ನು ಓದುತ್ತಾರೆ. ಇಂತಹ ರಾಮಾಯಣವನ್ನೇ ಸಿನಿಮಾ ಮಾಡಿ, ಆ ನಂತರ ಸಿನಿಮಾಗೂ ರಾಮಾಯಣಕ್ಕೂ ಸಂಬಂಧವಿಲ್ಲ ಎಂದರೆ ಮಾಡಿದ ತಪ್ಪು ಮುಚ್ಚಿದಂತೆ ಆಗುತ್ತದೆ? ಚಿತ್ರದಲ್ಲಿನ ಸಂಭಾಷಣೆಗಳು ಕೂಡ ಅಪಮಾನ ಮಾಡುವಂತಿವೆ. ಈ ಸಿನಿಮಾ ನೋಡಿದ ಮೇಲೂ ಜನರು ತಾಳ್ಮೆ ಕಳೆದುಕೊಂಡಿಲ್ಲ ಎನ್ನುವುದು ಅವರ ಸಹಿಷ್ಣುತೆಯನ್ನು ತೋರಿಸುತ್ತದೆ’ ಎಂದು ಅಭಿಪ್ರಾಯ ವ್ಯಕ್ತ ಪಡಿಸಿದೆ.

     

    ದೇವರು ಎಂದು ಪೂಜಿಸುವ ಭಗವಾನ್ ಹನುಮಾನ್ ಮತ್ತು ಸೀತೆಯನ್ನು ಸಿನಿಮಾದಲ್ಲಿ ಏನೂ ಅಲ್ಲ ಎನ್ನುವಂತೆ ತೋರಿಸಿದ್ದೀರಿ. ಕೆಲವು ದೃಶ್ಯಗಳು ವಯಸ್ಕ ವರ್ಗಕ್ಕೆ ಸೇರುವಂತಹವು ಆಗಿವೆ. ನೀವು ಏನನ್ನು ತೋರಿಸಲು ಹೊರಟಿದ್ದೀರಿ ಎಂದು ಪ್ರಶ್ನೆ ಮಾಡಿದ್ದಲ್ಲದೇ, ಸಂಭಾಷಣೆ ಬರೆದಿರುವ ಮನೋಜ್ (Manoj) ಅವರಿಗೂ ನೋಟಿಸ್ ನೀಡಿ, ಕಕ್ಷಿದಾರನನ್ನಾಗಿ ಮಾಡಿ ಎಂದು ನಿರ್ದೇಶನ ನೀಡಿದೆ. ಈ ಎಲ್ಲ ಪ್ರಶ್ನೆಗಳಿಗೆ ಒಂದು ವಾರದಲ್ಲಿ ಉತ್ತರಿಸುವಂತೆ ಕೋಟ್‍ ನಿರ್ದೇಶಿಸಿದೆ.

    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_title” view=”carousel” /]

  • UP ಉಮೇಶ್ ಪಾಲ್ ಕೊಲೆ ಕೇಸ್ – ಎನ್‍ಕೌಂಟರ್‌ಗೆ ಆರೋಪಿ ಬಲಿ

    UP ಉಮೇಶ್ ಪಾಲ್ ಕೊಲೆ ಕೇಸ್ – ಎನ್‍ಕೌಂಟರ್‌ಗೆ ಆರೋಪಿ ಬಲಿ

    ಲಕ್ನೋ: ಬಿಎಸ್‍ಪಿ (BSP) ನಾಯಕ ರಾಜು ಪಾಲ್ ಕೊಲೆಯ ಪ್ರಮುಖ ಸಾಕ್ಷಿಯಾಗಿದ್ದ ಉಮೇಶ್ ಪಾಲ್ ಕೊಲೆ ಪ್ರಕರಣದ ಆರೋಪಿಯೊಬ್ಬ ಎನ್‍ಕೌಂಟರ್‌ನಲ್ಲಿ ಹತ್ಯೆಯಾಗಿದ್ದಾನೆ. ಉತ್ತರ ಪ್ರದೇಶದ ವಿಶೇಷ ಪೊಲೀಸ್ ಪಡೆ ಹಾಗೂ ಜಿಲ್ಲಾ ಪೊಲೀಸರು ಪ್ರಯಾಗ್‍ರಾಜ್‍ನ ನೆಹರು ಪಾರ್ಕ್‍ನಲ್ಲಿ (Nehru Park) ನಡೆಸಿದ ಗುಂಡಿನ ದಾಳಿಯಲ್ಲಿ ಆರೋಪಿ ಅರ್ಬಾಜ್ ಸಾವಿಗೀಡಾಗಿದ್ದಾನೆ.

    POLICE JEEP

    ಇದುವರೆಗೂ ಪೊಲೀಸರು ಉಮೇಶ್ ಪಾಲ್ ಹತ್ಯೆ ಪ್ರಕರಣದಲ್ಲಿ ಮಾಜಿ ಸಂಸದ ಅತಿಕ್‍ನ ಸಂಬಂಧಿಕರು ಸೇರಿ 40 ಜನರನ್ನ ವಶಕ್ಕೆ ಪಡೆದು ಅಹಮದಾಬಾದ್‍ನ ಸಬರಮತಿ ಜೈಲಿನಲ್ಲಿ ವಿಚಾರಣೆ ನಡೆಸಿದ್ದಾರೆ. ಇದನ್ನೂ ಓದಿ: ನೀವು ಓಟು ಹಾಕದೇ ಮನೆಯಲ್ಲಿಯೇ ಕುಳಿತರೆ ಬಿಜೆಪಿಗೆ ಲಾಭ: ಮುಸ್ಲಿಮರಲ್ಲಿ ಜಮೀರ್ ಮನವಿ

    ಉಮೇಶ್ ಪಾಲ್ ಕೊಲೆಯ ನಂತರ ಪತ್ನಿ ಜಯಾ ಪಾಲ್ ಪ್ರಯಾಗ್‍ರಾಜ್ ಪೊಲೀಸ್ ಠಾಣೆಯಲ್ಲಿ ಅತಿಕ್ ಅಹಮ್ಮದ್ ಅವರ ಸಹೋದರ, ಪತ್ನಿ ಸಹಿಸ್ತಾ ಫರ್ವಿನ್ ಹಾಗೂ ಮಗ ಅಹಜಾನ್ ಮತ್ತು ಅಬ್ಬಾನ್ ವಿರುದ್ಧ ದೂರು ದಾಖಲಿಸಿದ್ದರು.

    ಫೆ. 24 ರಂದು ಪ್ರಯಾಗ್‍ರಾಜ್‍ನಲ್ಲಿ ಹುಂಡೈ ಕ್ರೇಟಾ ಎಸ್‍ಯುವಿ (Hyundai Creta SUV) ಕಾರಿನ ಹಿಂಬದಿ ಸೀಟಿನಿಂದ ಇಳಿಯುತ್ತಿದ್ದ ಉಮೇಶ್ ಪಾಲ್ ಅವರಿಗೆ ವ್ಯಕ್ತಿಯೊಬ್ಬ ಗುಂಡು ಹಾರಿಸಿದ್ದ. ಅವರನ್ನು ಸ್ವರೂಪ ರಾಣಿ ನೆಹರು ಆಸ್ಪತ್ರೆಗೆ ಕರೆದೊಯಯ್ಯಲಾಗಿತ್ತು. ಚಿಕಿತ್ಸೆ ಫಲಿಸದೇ ಮೃತಪಟ್ಟಿದ್ದರು. ಈ ಪ್ರಕರಣದಲ್ಲಿ ಬಿಜೆಪಿ ನಾಯಕ ರಹಿಲ್ ಹಸನ್ ಅವರ ಸಹೋದರ ಗುಲಾಮ್ ಅವರ ಹೆಸರು ಕೇಳಿ ಬಂದ ನಂತರ ಪಕ್ಷದಿಂದ ಅವರನ್ನು ಹೊರ ಹಾಕಲಾಗಿದೆ.

    ಇದರ ನಡುವೆ ಅತಿಕ್ ಅಹಮ್ಮದ್ ಅವರ ಪತ್ನಿ ಸಹಿಸ್ತಾ ಪರ್ವಿನ್ ಅವರು ಮುಖ್ಯಮಂತ್ರಿ ಯೋಗಿ ಅದಿತ್ಯನಾಥ್‍ಗೆ (Yogi Adityanath) ಪತ್ರ ಬರೆದು ಉಮೇಶ್ ಪಾಲ್ ಕೊಲೆ ಪ್ರಕರಣವನ್ನು ಸಿಬಿಐಗೆ ವಹಿಸುವಂತೆ ಒತ್ತಾಯಿಸಿದ್ದಾರೆ. ಪ್ರಯಾಗ್‍ರಾಜ್‍ನ (Prayagraj) ಪೊಲೀಸ್ ಕಮಿಷನರ್ ರಮೇಶ್ ಶರ್ಮಾ ಮತ್ತು ಎಡಿಜಿ ಎಸ್‍ಟಿಎಫ್ ಎದುರಾಳಿಗಳೊಂದಿಗೆ ಸೇರಿಕೊಂಡು ಪತಿ ಹಾಗೂ ಅವರ ಸಹೋದರನನ್ನು ಅಶ್ರಫ್‍ನನ್ನು ಕೊಲ್ಲಲು ತಿರ್ಮಾನಿಸಿದ್ದಾರೆ ಎಂದು ಆರೋಪಿಸಿದ್ದಾರೆ.

    ಏನಿದು ಪ್ರಕರಣ?
    ರಾಜು ಪಾಲ್ ಅವರು 2005ರ ಅಲಹಾಬಾದ್ (Allahabad) ವಿಧಾನಸಭಾ ಚುನಾವಣೆಯಲ್ಲಿ ಮಾಜಿ ಸಂಸದ ಅತೀಕ್ ಅಹಮ್ಮದ್ ಸಹೋದರ ಖಾಲಿದ್ ಅಜೀಮ್ ಅವರ ವಿರುದ್ಧ ಬಿಎಸ್‍ಪಿ ಪಕ್ಷದಿಂದ ಸ್ಪರ್ಧಿಸಿ ಗೆಲುವು ಸಾಧಿಸಿದ್ದರು. ಅದಾದ ಒಂದು ತಿಂಗಳ ನಂತರ ಅವರ ಕೊಲೆಯಾಗಿತ್ತು. ಉಮೇಶ್ ಪಾಲ್ ಈ ಪ್ರಕರಣದ ಪ್ರಮುಖ ಸಾಕ್ಷಿಯಾಗಿದ್ದರು. ಇದನ್ನೂ ಓದಿ: ನೆಟ್‌ನಲ್ಲಿ ಬೆವರಳಿಸಿದ ಕೊಹ್ಲಿ – ನಿರ್ಣಾಯಕ ಪಂದ್ಯದ ಗೆಲುವಿಗೆ ಭಾರತ ಭರ್ಜರಿ ತಯಾರಿ

  • UP ಸಿಎಂ ಅಲಹಾಬಾದ್ ಹೈಕೋರ್ಟ್‍ನ ಮುಖ್ಯ ನ್ಯಾಯಮೂರ್ತಿಯಾಗಿದ್ದಾರೆ: ಓವೈಸಿ ಕಿಡಿ

    UP ಸಿಎಂ ಅಲಹಾಬಾದ್ ಹೈಕೋರ್ಟ್‍ನ ಮುಖ್ಯ ನ್ಯಾಯಮೂರ್ತಿಯಾಗಿದ್ದಾರೆ: ಓವೈಸಿ ಕಿಡಿ

    ಗಾಂಧಿನಗರ: ಯುಪಿ ಸಿಎಂ ಯೋಗಿ ಆದಿತ್ಯನಾಥ್ ಅವರು ಅಲಹಾಬಾದ್ ಹೈಕೋರ್ಟ್‍ನ ಮುಖ್ಯ ನ್ಯಾಯಮೂರ್ತಿಯಾಗಿದ್ದಾರೆ ಎಂದು ಎಐಎಂಐಎಂ ಮುಖ್ಯಸ್ಥ ಅಸಾದುದ್ದೀನ್ ಓವೈಸಿ ಕಿಡಿಕಾರಿದರು.

    ಪ್ರಯಾಗ್‍ರಾಜ್ ಹಿಂಸಾಚಾರದ ಪ್ರಮುಖ ಆರೋಪಿಯ ಮನೆ ಧ್ವಂಸ ಪ್ರಕರಣಕ್ಕೆ ಸಂಬಂಧಿಸಿದಂತೆ ಯೋಗಿ ಆದಿತ್ಯನಾಥ್ ವಿರುದ್ಧ ಓವೈಸಿ ವಾಗ್ದಾಳಿ ನಡೆಸಿದರು. ಗುಜರಾತ್‍ನ ಕಚ್‍ನಲ್ಲಿ ರ‍್ಯಾಲಿಯನ್ನುದ್ದೇಶಿಸಿ ಮಾತನಾಡಿದ ಅವರು, ಯುಪಿ ಸಿಎಂ ಅಲಹಾಬಾದ್ ಹೈಕೋರ್ಟ್‍ನ ಮುಖ್ಯ ನ್ಯಾಯಮೂರ್ತಿಯಾಗಿದ್ದಾರೆ. ಅವರು ಯಾರನ್ನಾದರೂ ಅಪರಾಧಿ ಎಂದು ಘೋಷಿಸುತ್ತಾರೆ. ಅವರ ಮನೆಗಳನ್ನು ಕೆಡವುತ್ತಾರೆ ಎಂದು ಆರೋಪಿಸಿದರು. ಇದನ್ನೂ ಓದಿ:  ಡ್ರಗ್ಸ್ ಕೇಸ್: ಬಾಲಿವುಡ್ ನಟಿ ಶ್ರದ್ಧಾ ಕಪೂರ್ ಸಹೋದರ, ನಟ ಸಿದ್ಧಾಂತ್ ಕಪೂರ್ ಬಂಧನ

    OWAISI

    ಪ್ರಯಾಗ್‍ರಾಜ್‍ನಲ್ಲಿ ಜೂನ್ 10 ರಂದು ನಡೆದ ಹಿಂಸಾಚಾರದ ಸಂಚುಕೋರ ಜಾವೇದ್ ಮೊಹಮ್ಮದ್ ಅಲಿಯಾಸ್ ಪಂಪ್ ಅವರ ಮನೆಯನ್ನು ಪೊಲೀಸ್ ನಿಯೋಜನೆಯ ನಡುವೆ ಪ್ರಯಾಗ್‍ರಾಜ್ ಅಭಿವೃದ್ಧಿ ಪ್ರಾಧಿಕಾರ(ಪಿಡಿಎ) ಭಾನುವಾರ ನೆಲಸಮಗೊಳಿಸಿದೆ.

    ವೆಲ್ಫೇರ್ ಪಾರ್ಟಿ ಆಫ್ ಇಂಡಿಯಾದ ಮುಖಂಡೆ ಮತ್ತು ಕಾರ್ಯಕರ್ತೆ ಅಫ್ರೀನ್ ಫಾತಿಮಾ ಅವರು ಕಳೆದ ವರ್ಷ ಕೇಂದ್ರದ ವಿವಾದಾತ್ಮಕ ಪೌರತ್ವ ಕಾನೂನಿನ ವಿರುದ್ಧದ ಪ್ರತಿಭಟನೆಯಲ್ಲಿ ಭಾಗಿಯಾಗಿದ್ದರು. ಈ ಹಿನ್ನೆಲೆ ಹಿಂಸಾಚಾರಕ್ಕೆ ಸಂಬಂಧಿಸಿದಂತೆ ಫಾತಿಮಾ ಪಾತ್ರವಿದೆ ಎಂದು ಆಕೆಯ ವಿರುದ್ಧ ತನಿಖೆ ನಡೆಸಲಾಗುತ್ತಿದೆ. ಈ ಕಾರಣಗಳಿಂದ ಓವೈಸಿ ಅವರು ಯೋಗಿ ಆದಿತ್ಯನಾಥ್ ವಿರುದ್ಧ ಕಿಡಿಕಾರಿದರು. ಇದನ್ನೂ ಓದಿ: ದಿನಗೂಲಿ ನೌಕರರ ಮಕ್ಕಳಿಗಾಗಿ ಬಿಬಿಎಂಪಿಯಿಂದ ರಾತ್ರಿ ಸ್ಕೂಲ್

  • ಗೋ ಶಾಲೆಯಲ್ಲಿ ಒಂದು ತಿಂಗಳ ಕಾಲ ಸೇವೆ – ಷರತ್ತು ವಿಧಿಸಿ ಆರೋಪಿಗೆ ಜಾಮೀನು

    ಗೋ ಶಾಲೆಯಲ್ಲಿ ಒಂದು ತಿಂಗಳ ಕಾಲ ಸೇವೆ – ಷರತ್ತು ವಿಧಿಸಿ ಆರೋಪಿಗೆ ಜಾಮೀನು

    ಲಕ್ನೋ: ಗೋ ಹತ್ಯೆ ಪ್ರಕರಣದಲ್ಲಿ ಜೈಲು ಸೇರಿದ್ದ ಆರೋಪಿಗೆ ಗೋ ಶಾಲೆಯಲ್ಲಿ ಒಂದು ತಿಂಗಳು ಗೋವುಗಳ ಸೇವೆ ಮಾಡುವಂತೆ ಷರತ್ತು ವಿಧಿಸಿ ಅಲಹಾಬಾದ್ ಹೈಕೋರ್ಟ್ ಜಾಮೀನು ಮಂಜೂರು ಮಾಡಿದೆ.

    ಸಲೀಂ ಅಲಿಯಾಸ್ ಕಾಲಿಯಾ ಗೋ ಹತ್ಯೆ ಪ್ರಕರಣದಲ್ಲಿ ಜೈಲು ಸೇರಿದ್ದ. ಆ ಬಳಿಕ ಜಾಮೀನು ಕೋರಿ ಅಲಹಾಬಾದ್ ಹೈಕೋರ್ಟ್‍ಗೆ ಅರ್ಜಿ ಸಲ್ಲಿಸಿದ್ದರು. ಈ ಅರ್ಜಿಯನ್ನುವಿಚಾರಣೆ ನಡೆಸಿದ ನ್ಯಾಯಮೂರ್ತಿ ಶೇಖರ್ ಕುಮಾರ್ ಯಾದವ್, ಆರೋಪಿ ಒಂದು ತಿಂಗಳ ಕಾಲ ಗೋವುಗಳ ಸೇವೆ ಮಾಡಬೇಕು ಮತ್ತು ನೋಂದಾಯಿತ ಗೋಶಾಲೆಗೆ 1 ಲಕ್ಷ ರೂ. ದಂಡ ಕಟ್ಟಬೇಕು ಎಂದು ಷರತ್ತು ವಿಧಿಸಿ ಜಾಮೀನು ಮಂಜೂರು ಮಾಡಿದ್ದಾರೆ. ಇದನ್ನೂ ಓದಿ: ರೇಪ್‌ಗೆ ಉತ್ತೇಜನ ನೀಡುವ ಪರ್ಫ್ಯೂಮ್ ಜಾಹೀರಾತು ತೆಗೆಯುವಂತೆ ಕೇಂದ್ರ ಸೂಚನೆ

    ಸಲೀಂ ವಿರುದ್ಧ ಐಪಿಸಿ ಸೆಕ್ಷನ್ 379 ಕಳ್ಳತನ ಮತ್ತು ಉತ್ತರ ಪ್ರದೇಶ ಗೋ ಹತ್ಯೆ ತಡೆ ಕಾಯ್ದೆಯಡಿ ಬರೈಲಿ ಜಿಲ್ಲೆಯ ಬೊಜಿಪುರ ಪೊಲೀಸ್ ಠಾಣೆಯಲ್ಲಿ ಎಫ್‍ಐಆರ್ ದಾಖಲಿಸಲಾಗಿತ್ತು. ಆ ಬಳಿಕ ಜಾಮೀನು ಅರ್ಜಿ ಸಲ್ಲಿಸಿ ಕೋರ್ಟ್‍ನಲ್ಲಿ ಸಲೀಂ ಪರ ವಾದಿಸಿದ ವಕೀಲರು, ಸಲೀಂ ಮುಗ್ಧ ಆತ ಮತ್ತು ಆತನ ಸಹಚರರು ಬಂಧನದ ಬಳಿಕ ಗೊಂದಲದ ಹೇಳಿಕೆ ನೀಡಿದ್ದಾರೆ. ಆರೋಪಿ ಜಾಮೀನಿನ ಮೇಲೆ ಬಿಡುಗಡೆಯಾದರೆ ಬರೈಲಿ ಗೋ ಶಾಲೆಗೆ 1 ಲಕ್ಷ ರೂ.  ದಂಡ ಕಟ್ಟಲಾಗುವುದು ಹಾಗೂ ಒಂದು ತಿಂಗಳ ಕಾಲ ಗೋವುಗಳ ಸೇವೆ ಮಾಡುವುದಾಗಿ ವಾದ ಮಂಡಿಸಿದರು.

    court order law

    ಆ ಬಳಿಕ ಕೋರ್ಟ್ ಈ ಬಗ್ಗೆ ಅರ್ಜಿದಾರನಿಂದ ವೈಯಕ್ತಿಕ ಬಾಂಡ್ ಹಾಗೂ ಎರಡು ಶ್ಯೂರಿಟಿ ಪಡೆದುಕೊಂಡು ಜಾಮೀನು ಮಂಜೂರು ಮಾಡಿದೆ. ಗೋ ಶಾಲೆಯಲ್ಲಿ ಕೆಲಸ ಮಾಡಿದ ಮತ್ತು ಕಟ್ಟಿರುವ ಹಣದ ಬಗ್ಗೆ ದಾಖಲೆ ಕೋರ್ಟ್‍ಗೆ ಸಲ್ಲಿಸುವಂತೆ ಆದೇಶಿಸಿದೆ. ಇದನ್ನೂ ಓದಿ: ಕೆಮಿಕಲ್ ಫ್ಯಾಕ್ಟರಿಯಲ್ಲಿ ಬಾಯ್ಲರ್ ಸ್ಫೋಟ – 9 ಸಾವು, 20 ಮಂದಿಗೆ ಗಾಯ

  • ಕಾಶಿ ದೇವಸ್ಥಾನ, ಜ್ಞಾನವಾಪಿ ಮಸೀದಿ ಭೂ ವಿವಾದ – ಮಾ 29 ರಿಂದ ನಿತ್ಯ ವಿಚಾರಣೆ

    ಕಾಶಿ ದೇವಸ್ಥಾನ, ಜ್ಞಾನವಾಪಿ ಮಸೀದಿ ಭೂ ವಿವಾದ – ಮಾ 29 ರಿಂದ ನಿತ್ಯ ವಿಚಾರಣೆ

    ಲಕ್ನೋ: ವಾರಣಾಸಿಯ ಕಾಶಿ ವಿಶ್ವನಾಥ ದೇವಸ್ಥಾನ ಮತ್ತು ಜ್ಞಾನವಾಪಿ ಮಸೀದಿ ಭೂ ವಿವಾದಕ್ಕೆ ಸಂಬಂಧಿಸಿದ ಅರ್ಜಿಗಳನ್ನು ಮಾರ್ಚ್ 29 ರಿಂದ ನಿರಂತರ ವಿಚಾರಣೆ ನಡೆಸಲಾಗುವುದು ಎಂದು ಅಲಹಾಬಾದ್ ಹೈಕೋರ್ಟ್ ತಿಳಿಸಿದೆ.

    ವಾರಣಾಸಿ ಜಿಲ್ಲಾ ನ್ಯಾಯಾಲಯದ ವಿಚಾರಣೆಗೆ ತಡೆ ಕೋರಿ ವಾರಣಾಸಿಯ ಅಂಜುಮನ್ ಇಂತಾಝಾಮಿಯಾ ಮಸಾಜಿದ್ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ನ್ಯಾ. ಪ್ರಕಾಶ್ ಪಾಡಿಯಾ ಅವರ ಪೀಠ ನಿರಂತರ ವಿಚಾರಣೆ ನಡೆಸುವುದಾಗಿ ಹೇಳಿದೆ. ಇದನ್ನೂ ಓದಿ: ಸತತ 3ನೇ ದಿನ ಪೆಟ್ರೋಲ್, ಡೀಸೆಲ್ ದರ ಏರಿಕೆ

    ಜ್ಞಾನವಾಪಿ-ಕಾಶಿ ಭೂ ವಿವಾದ ಪ್ರಕರಣದಲ್ಲಿ ವಾರಣಾಸಿ ಕೆಳ ನ್ಯಾಯಾಲಯದ ಆದೇಶ ಸೇರಿದಂತೆ ಮೊಕದ್ದಮೆಗೆ ನ್ಯಾಯಾಲಯವು ಈಗಾಗಲೇ ತಡೆ ನೀಡಿದೆ. ಇದರಲ್ಲಿ ಮಸೀದಿ ಸಂಕೀರ್ಣದ ಸಮೀಕ್ಷೆಯನ್ನು ನಡೆಸುವಂತೆ ಭಾರತೀಯ ಪುರಾತತ್ವ ಸರ್ವೇಕ್ಷಣಾ ಇಲಾಖೆಗೆ (ಎಎಸ್‍ಐ) ನಿರ್ದೇಶನ ನೀಡಿತ್ತು. ಇದನ್ನೂ ಓದಿ: ವರದಕ್ಷಿಣೆ ಕಿರುಕುಳ – ತಾಯಿ, ಮಗ ಆತ್ಮಹತ್ಯೆ

    ಸ್ವಯಂ ಭೂ ಭಗವಂತ ವಿಶ್ವೇಶ್ವರನು ವಿವಾದಿತ ರಚನೆಯಲ್ಲಿ ನೆಲೆಸಿದ್ದಾನೆ. ಆದ್ದರಿಂದ ವಿವಾದಿತ ಭೂಮಿ ಸ್ವತಃ ವಿಶ್ವೇಶ್ವರನ ಅವಿಭಾಜ್ಯ ಅಂಗವಾಗಿದೆ ಎಂದು ಸಲ್ಲಿಕೆಯಾಗಿತ್ತು. ಇದಕ್ಕೆ ಪ್ರತಿವಾದ ಮಂಡಿಸಿದ ಮಜಿದ್ ಸಮಿತಿಯು ಪೂಜಾ ಸ್ಥಳಗಳ (ವಿಶೇಷ ನಿಬಂಧನೆಗಳು) ಕಾಯಿದೆ, 1991 ರ ನಿಬಂಧನೆಗಳ ಪ್ರಕಾರ ಅನ್ವಯವಾಗುವುದಿಲ್ಲ. ಹೀಗಾಗಿ ಅರ್ಜಿ ವಜಾ ಮಾಡುವಂತೆ ಮನವಿ ಮಾಡಿತ್ತು.

  • ಗೋವನ್ನು ರಾಷ್ಟ್ರೀಯ ಪ್ರಾಣಿಯನ್ನಾಗಿ ಘೋಷಿಸಿ – ಅಲಹಾಬಾದ್ ಹೈಕೋರ್ಟ್

    ಗೋವನ್ನು ರಾಷ್ಟ್ರೀಯ ಪ್ರಾಣಿಯನ್ನಾಗಿ ಘೋಷಿಸಿ – ಅಲಹಾಬಾದ್ ಹೈಕೋರ್ಟ್

    ಅಲಹಾಬಾದ್: ಗೋವುಗಳು ಭಾರತೀಯ ಸಂಸ್ಕೃತಿಯ ಅವಿಭಾಜ್ಯ ಅಂಗವಾಗಿದೆ. ಹೀಗಾಗಿ ಗೋವನ್ನು ರಾಷ್ಟ್ರೀಯ ಪ್ರಾಣಿಯನ್ನಾಗಿ ಘೋಷಿಸಬೇಕು ಎಂದು ಉತ್ತರಪ್ರದೇಶದ ಅಲಹಾಬಾದ್ ಹೈಕೋರ್ಟ್ ಅಭಿಪ್ರಾಯಪಟ್ಟಿದೆ.

    ಗೋಹತ್ಯೆ ತಡೆ ಕಾಯ್ದೆಯ ಅಡಿ ಬಂಧನಕ್ಕೆ ಒಳಗಾಗಿದ್ದ ಜಾವೇದ್ ಎಂಬಾತನ ಜಾಮೀನು ಅರ್ಜಿಯನ್ನು ವಜಾಗೊಳಿಸಿದ ನ್ಯಾ. ಶೇಖರ್ ಯಾದವ್ ಅವರಿದ್ದ ಏಕಸದಸ್ಯ ಪೀಠ, ಗೋವಿನ ರಕ್ಷಣೆಯನ್ನು ಹಿಂದೂಗಳ ಮೂಲಭೂತ ಹಕ್ಕುಗಳ ಪೈಕಿ ಒಂದು ಎಂದು ಪರಿಗಣಿಸಬೇಕು. ಒಂದು ದೇಶದ ಸಂಸ್ಕೃತಿ ಮತ್ತು ನಂಬಿಕೆಗೆ ಧಕ್ಕೆ ಉಂಟಾದರೆ ದೇಶ ದುರ್ಬಲವಾಗುತ್ತದೆ ಎನ್ನುವುದು ನಮಗೆ ತಿಳಿದಿದೆ ಎಂದು ಅಭಿಪ್ರಾಯಪಟ್ಟಿದೆ.

    ಆದೇಶದಲ್ಲಿ ಏನಿದೆ?
    ಹಸುಗಳು ಭಾರತೀಯ ಸಂಸ್ಕೃತಿಯ ಅವಿಭಾಜ್ಯ ಅಂಗ. ಪ್ರಾಚೀನ ಗ್ರಂಥಗಳಾದ ವೇದ ಮತ್ತು ಮಹಾಭಾರತಗಳಲ್ಲಿ ಭಾರತೀಯ ಸಂಸ್ಕೃತಿಯನ್ನು ವಿವರಿಸುವ ಪ್ರಮುಖ ಭಾಗವಾಗಿ ಗೋವನ್ನು ತೋರಿಸಲಾಗಿದೆ ಎಂದು 12 ಪುಟಗಳ ಆದೇಶದಲ್ಲಿ ಉಲ್ಲೇಖಿಸಲಾಗಿದೆ. ಇದನ್ನೂ ಓದಿ : 157 ಘೋಲ್ ಮೀನು ಹಿಡಿದು ಒಂದೇ ದಿನದಲ್ಲಿ ಕೋಟ್ಯಧಿಪತಿಯಾದ ಮೀನುಗಾರ

    ಗೋಮಾಂಸ ತಿನ್ನುವವರಿಗೆ ಮಾತ್ರ ಮೂಲಭೂತ ಹಕ್ಕು ಅನ್ವಯಿಸುವುದಿಲ್ಲ. ಗೋವನ್ನು ಪೂಜಿಸುವವರು, ಆರ್ಥಿಕವಾಗಿ ಹಸುಗಳ ಮೇಲೆ ಅವಲಂಬಿತರಾಗಿರುವವರು ಸಹ ಅರ್ಥಪೂರ್ಣವಾದ ಜೀವನವನ್ನು ನಡೆಸುವರೂ ಹಕ್ಕನ್ನು ಹೊಂದಿದ್ದಾರೆ.

    ಗೋವುಗಳು ಕಲ್ಯಾಣವಾದಾಗ ಮಾತ್ರ ದೇಶವು ಸುರಕ್ಷಿತವಾಗಿರುತ್ತದೆ ಮತ್ತು ಆಗ ದೇಶವು ಏಳಿಗೆಯಾಗುತ್ತದೆ. ಜೀವಿಸುವ ಹಕ್ಕು, ಹತ್ಯೆಗೈಯುವ ಹಕ್ಕಿಗಿಂತಲೂ ದೊಡ್ಡದು. ಗೋಮಾಂಸ ಸೇವನೆಯನ್ನು ಮೂಲಭೂತ ಹಕ್ಕು ಎಂದು ಪರಿಗಣಿಸಲು ಸಾಧ್ಯವಿಲ್ಲ. ಗೋಶಾಲೆಗಳ ಹೆಸರಿನಲ್ಲಿ ಮೋಸ ಮಾಡುತ್ತಿರುವವರ ವಿರುದ್ಧ ಕಾನೂನು ಜಾರಿ ಮಾಡಬೇಕು. ಇದನ್ನೂ ಓದಿ : ಲೀಕ್ ಆಯ್ತು ಜೋ ಬೈಡನ್- ಅಶ್ರಫ್ ಘನಿ ಫೋನ್ ಸಂಭಾಷಣೆ

    ಜಾವೇದ್ (59) ಮಾಂಸಕ್ಕಾಗಿ ಹಸುವನ್ನು ಕದ್ದು ಹತ್ಯೆ ಮಾಡಿದ್ದ. ಇದು ಅರ್ಜಿದಾರರ ಮೊದಲ ಅಪರಾಧವಲ್ಲ. ಈ ಹಿಂದೆಯೂ ಈತ ಗೋಹತ್ಯೆಯನ್ನು ಎಸಗಿ ಸಮಾಜದ ಸಾಮರಸ್ಯವನ್ನು ಕದಡಿದ್ದ ಎಂದು ನ್ಯಾಯಮೂರ್ತಿ ಯಾದವ್ ಅಭಿಪ್ರಾಯಪಟ್ಟಿದ್ದಾರೆ.