Tag: Allahabad highcourt

  • ಜ್ಞಾನವಾಪಿ ಮಸೀದಿ ಸರ್ವೆ ಕೇಸ್‌ – ಅಲಹಾಬಾದ್ ಹೈಕೋಟ್‌ನಲ್ಲಿ ಇಂದು ವಿಚಾರಣೆ

    ಜ್ಞಾನವಾಪಿ ಮಸೀದಿ ಸರ್ವೆ ಕೇಸ್‌ – ಅಲಹಾಬಾದ್ ಹೈಕೋಟ್‌ನಲ್ಲಿ ಇಂದು ವಿಚಾರಣೆ

    ಲಕ್ನೋ: ಉತ್ತರ ಪ್ರದೇಶದ (UP) ವಾರಣಾಸಿಯಲ್ಲಿರುವ ಜ್ಞಾನವಾಪಿ ಮಸೀದಿ (Gyanvapi Mosque) ಸರ್ವೆ ಪ್ರಕರಣಕ್ಕೆ ಸಂಬಂಧಿಸಿದಂತೆ ಅಲಹಾಬಾದ್‌ ಹೈಕೋರ್ಟ್‌ನಲ್ಲಿ (Allahabad HighCourt) ಗುರುವಾರ (ಇಂದು) ವಿಚಾರಣೆ ನಡೆಯಲಿದೆ. ಜುಲೈ 26ರಂದು ವಿಚಾರಣೆ ನಡೆಸಿದ್ದ ಕೋರ್ಟ್‌, ಜುಲೈ 27ರಂದು ಮಧ್ಯಾಹ್ನ 3 ಗಂಟೆಗೆ ಮತ್ತೆ ವಿಚಾರಣೆ ನಡೆಸಲಿದೆ.

    ಕಾಶಿ ವಿಶ್ವನಾಥ ದೇವಾಲಯದ ಪಕ್ಕದಲ್ಲಿರುವ ಜ್ಞಾನವಾಪಿ ಮಸೀದಿಯಲ್ಲಿ ಸರ್ವೆ ಕೈಗೊಳ್ಳಲು ವಾರಣಾಸಿ ಕೋರ್ಟ್‌ (Varanasi Court) ಅನುಮತಿ ನೀಡಿತ್ತು. ಜ್ಞಾನವಾಪಿ ಮಸೀದಿಯಲ್ಲಿ ಪತ್ತೆಯಾಗಿರುವ ವಿವಾದಿತ ಶಿವಲಿಂಗದ ರಚನೆಯನ್ನು ಹೊರತುಪಡಿಸಿ ಸಂಕೀರ್ಣದಲ್ಲಿ ಕಾರ್ಬನ್ ಡೇಟಿಂಗ್ ನಡೆಸಲು ಅನುಮತಿ ನೀಡಲಾಗಿತ್ತು. ಭಾರತೀಯ ಪುರಾತತ್ವ ಸರ್ವೇಕ್ಷಣಾ ಇಲಾಖೆ (ASI) ವೈಜ್ಞಾನಿಕ ಸರ್ವೆ ಪ್ರಾರಂಭಿಸಿತ್ತು. ಇದೇ ತಿಂಗಳ ಜುಲೈ 24ರಂದು ಬೆಳಗ್ಗೆ 7 ಗಂಟೆಗೆ ಸರ್ವೆ ಆರಂಭಗೊಂಡಿತ್ತು. ಈ ನಡುವೆ ಮಸೀದಿ ಪರಿಶೀಲನೆಗೆ ಅವಕಾಶ ನೀಡಿರುವ ವಾರಣಾಸಿ ಜಿಲ್ಲಾ ನ್ಯಾಯಾಲಯದ ಆದೇಶದ ವಿರುದ್ಧ ಮಸೀದಿ ಆಡಳಿತ ಸಮಿತಿ ಸುಪ್ರೀಂ ಕೋರ್ಟ್‌ಗೆ ಅರ್ಜಿ ಸಲ್ಲಿಸಿತ್ತು.

    ಆ ನಂತರ ಜ್ಞಾನವ್ಯಾಪಿ ಮಸೀದಿಯಲ್ಲಿ ಭಾರತೀಯ ಪುರಾತತ್ವ ಸರ್ವೇಕ್ಷಣಾ ಇಲಾಖೆ ನಡೆಸುತ್ತಿರುವ ಸರ್ವೆ ಕಾರ್ಯಕ್ಕೆ ಸುಪ್ರೀಂ ಕೋರ್ಟ್ ತಡೆ ನೀಡಿತ್ತು. ವಾರಣಾಸಿ ಜಿಲ್ಲಾ ನ್ಯಾಯಲಯದ ಆದೇಶದ ವಿರುದ್ಧ ಹೈಕೋರ್ಟ್‍ಗೆ ಮೇಲ್ಮನವಿ ಸಲ್ಲಿಸಲು ಅರ್ಜಿದಾರರಿಗೆ ಅವಕಾಶ ನೀಡಿತ್ತು. ಅಂಜುಮನ್ ಇಂಟೆಝಾಮಿಯಾ ಮಸೀದಿಯ ನಿರ್ವಹಣಾ ಸಮಿತಿ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ್ದ ಸಿಜೆಐ ಡಿ.ವೈ ಚಂದ್ರಚೂಡ್ ನೇತೃತ್ವದ ಪೀಠ ತಾತ್ಕಾಲಿಕ ತಡೆ ನೀಡಿತ್ತು. ಅಲ್ಲದೇ ಯಥಾಸ್ಥಿತಿ ಕಾಯ್ದುಕೊಳ್ಳಲು ಸೂಚಿಸಿತ್ತು. ಇದನ್ನೂ ಓದಿ: ಜ್ಞಾನವ್ಯಾಪಿ ಮಸೀದಿ ಸರ್ವೆಗೆ ತಾತ್ಕಾಲಿಕ ತಡೆ ನೀಡಿದ ಸುಪ್ರೀಂಕೋರ್ಟ್

    ಕನಿಷ್ಠ ಒಂದು ವಾರದವರೆಗೆ ಸ್ಥಳದಲ್ಲಿ ಯಾವುದೇ ಉತ್ಖನನಗಳು ನಡೆಯುವುದಿಲ್ಲ. ಪ್ರಸ್ತುತ ಅಳತೆ ಪಡೆಯುವುದು, ಫೋಟೋ ತೆಗೆಯುವುದು ನಡೆಯುತ್ತಿದೆ. ಮುಂದಿನ ಸೋಮವಾರದವರೆಗೆ ಮಸೀದಿ ಜಾಗದಲ್ಲಿ ಯಾವುದೇ ಉತ್ಖನನವನ್ನು ನಡೆಸಲು ಯೋಜಿಸುವುದಿಲ್ಲ ಎಂಬ ಎಎಸ್‍ಐ ಹೇಳಿಕೆಯನ್ನು ನಾವು ದಾಖಲಿಸುತ್ತೇವೆ ಎಂದು ಸುಪ್ರೀಂ ಕೋರ್ಟ್ ಹೇಳಿತ್ತು. ಇದನ್ನೂ ಓದಿ: ವ್ಯಕ್ತಿಯ ತಲೆ ಮೇಲೆ ಒದ್ದು, ಮೂತ್ರ ವಿಸರ್ಜನೆ ಮಾಡಿ ದರ್ಪ – ಉತ್ತರ ಪ್ರದೇಶದಲ್ಲಿ ಮತ್ತೊಂದು ಅಮಾನವೀಯ ಘಟನೆ

    ವಿಚಾರಣಾ ನ್ಯಾಯಾಲಯದ ಆದೇಶದ ವಿರುದ್ಧ ಹೈಕೋರ್ಟ್ ಮೆಟ್ಟಿಲೇರಲು ಅರ್ಜಿದಾರರಿಗೆ ಅವಕಾಶ ನೀಡುತ್ತೇವೆ. ಯಾವುದೇ ಆಕ್ರಮಣಶೀಲವಲ್ಲದ ಕ್ರಮಗಳನ್ನು ತೆಗೆದುಕೊಳ್ಳಲಾಗುತ್ತಿದೆ ಎಂದು ನಾವು ಸ್ಪಷ್ಟಪಡಿಸುತ್ತೇವೆ. ಅರ್ಜಿದಾರರ ವಿಚಾರಣೆಯ ನಂತರ ಹೈಕೋರ್ಟ್‍ನ ಮುಂದಿನ ನಿರ್ದೇಶನಗಳಿಗೆ ಈ ಆದೇಶ ಒಳಪಟ್ಟಿರುತ್ತದೆ ಎಂದು ಮುಖ್ಯ ನ್ಯಾಯಮೂರ್ತಿ ಡಿ.ವೈ ಚಂದ್ರಚೂಡ್ ಅವರಿದ್ದ ಪೀಠ ಆದೇಶಿಸಿತ್ತು.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಮುಸ್ಲಿಂ ಪತಿ 2ನೇ ಮದುವೆಯಾಗುವಂತಿಲ್ಲ – ಕುರಾನ್ ಉಲ್ಲೇಖಿಸಿ ಹೈಕೋರ್ಟ್ ತೀರ್ಪು

    ಮುಸ್ಲಿಂ ಪತಿ 2ನೇ ಮದುವೆಯಾಗುವಂತಿಲ್ಲ – ಕುರಾನ್ ಉಲ್ಲೇಖಿಸಿ ಹೈಕೋರ್ಟ್ ತೀರ್ಪು

    – ಮೊದಲ ಪತ್ನಿಯನ್ನು ಚೆನ್ನಾಗಿ ನೋಡಿಕೊಳ್ಳದ ವ್ಯಕ್ತಿಗೆ ಮದುವೆಗೆ ಅವಕಾಶವಿಲ್ಲ
    – ಅಲಹಾಬಾದ್ ಹೈಕೋರ್ಟ್ ಮಹತ್ವದ ತೀರ್ಪು ಪ್ರಕಟ

    ಲಕ್ನೋ: ತನ್ನ ಹೆಂಡತಿ, ಮಕ್ಕಳನ್ನು ಚೆನ್ನಾಗಿ ನೋಡಿಕೊಳ್ಳಲು ಸಾಧ್ಯವಾಗದ ಮುಸ್ಲಿಂ ಸಮುದಾಯದ (Muslim Community) ಪುರುಷ ಕುರಾನ್ ಪ್ರಕಾರವೇ 2ನೇ ಮದುವೆಯಾಗಲು (Marriage) ಅವಕಾಶವಿಲ್ಲ ಎಂದು ಅಲಹಾಬಾದ್ ಹೈಕೋರ್ಟ್ (Allahabad HighCourt) ಮಹತ್ವದ ತೀರ್ಪು ನೀಡಿದೆ.

    ವೈವಾಹಿಕ ಹಕ್ಕುಗಳ ಮರುಸ್ಥಾಪನೆಗಾಗಿ ಕೌಟುಂಬಿಕ ನ್ಯಾಯಾಲಯ (Family Court) ನೀಡಿದ ತೀರ್ಪನ್ನು ಪ್ರಶ್ನಿಸಿ ಮುಸ್ಲಿಂ ವ್ಯಕ್ತಿಯೊಬ್ಬರು ಸಲ್ಲಿಸಿದ್ದ ಮೇಲ್ಮನವಿಯನ್ನು ವಿಚಾರಣೆ ನಡೆಸಿದ ನ್ಯಾಯಮೂರ್ತಿ ಸೂರ್ಯಪ್ರಕಾಶ್ ಕೇಸರವಾಣಿ ಹಾಗೂ ನ್ಯಾಯಮೂರ್ತಿ ರಾಜೇಂದ್ರ ಕುಮಾರ್ ಅವರಿದ್ದ ದ್ವಿಸದಸ್ಯ ಪೀಠವು ಈ ಆದೇಶ ಪ್ರಕಟಿಸಿದೆ. ಇದನ್ನೂ ಓದಿ: ನೌಕಾಪಡೆಯ MiG-29K ಪತನ – ಪೈಲಟ್‌ ಅಪಾಯದಿಂದ ಪಾರು

    ಇದರೊಂದಿಗೆ ಮೊದಲ ಪತ್ನಿಯ ಇಚ್ಛೆಯನ್ನು ವಿರೋಧಿಸಿ, 2ನೇ ಮದುವೆಯಾದ ವ್ಯಕ್ತಿ ಮೊದಲ ಪತ್ನಿಯೂ ತನ್ನೊಂದಿಗೆ ಇರಬೇಕು ಎಂದು ಒತ್ತಾಯಿಸುವಂತಿಲ್ಲ ಎಂದು ತಿಳಿಸಿದೆ.

    Allahabad high court 1

    ಮುಸ್ಲಿಂ ಪುರುಷನು ತನ್ನ ಹೆಂಡತಿ ಮತ್ತು ಮಕ್ಕಳನ್ನು ಪೋಷಿಸುವ ಸಾಮರ್ಥ್ಯ ಹೊಂದಿಲ್ಲದಿದ್ದರೆ, ಆತನಿಗೆ ಇತರ ಮಹಿಳೆಯರನ್ನು ಮದುವೆಯಾಗುವ ಅರ್ಹತೆ ಇಲ್ಲವೆಂದು ಕುರಾನ್ (Quran) ಹೇಳುತ್ತದೆ. ಈ ವಿಚಾರದಲ್ಲಿ ನ್ಯಾಯಾಲಯದ ನಿರ್ಣಯವೂ ಅದೇ ಆಗಿರುತ್ತದೆ ಎಂದು ಕೋರ್ಟ್ ಅಭಿಪ್ರಾಯ ವ್ಯಕ್ತಪಡಿಸಿದೆ. ಇದನ್ನೂ ಓದಿ: ಬಿಗ್ ಬಾಸ್ ಮನೆಯಲ್ಲಿ ರೂಪೇಶ್ ರಾಜಣ್ಣ ಮೇಲೆ ಪ್ರಶಾಂತ್ ಸಂಬರ್ಗಿ ವಾಗ್ದಾಳಿ

    ನ್ಯಾಯಾಲಯವು (Court) ಮದುವೆಯ  ಪಾವಿತ್ರ‍್ಯತೆ ಗೌರವಿಸುತ್ತದೆ. ಆದರೆ ಮೊದಲ ಹೆಂಡತಿಯ ಇಚ್ಛೆಗೆ ವಿರುದ್ಧವಾಗಿ, ಮತ್ತೊಬ್ಬರನ್ನು ಮದುವೆಯಾದ ಮುಸ್ಲಿಂ ಪುರುಷನು ಮತ್ತೆ ಮೊದಲ ಪತ್ನಿ ತನ್ನೊಂದಿಗೆ ವಾಸಿಸುವಂತೆ ಒತ್ತಾಯಿಸುವಂತಿಲ್ಲ. ಹಾಗೆ ಮಾಡಿದರೆ ಅದು ಅಸಮಾನತೆ ಎಂದು ಹೇಳಿದೆ.

    ಏನಿದು ಪ್ರಕರಣ?
    ಅಝೀಝುರ್ರಹ್ಮಾನ್, ಹಮೀದುನ್ನಿಶಾ ದಂಪತಿ ವಿವಾಹವಾಗಿ ನಾಲ್ಕು ಮಕ್ಕಳನ್ನ ಹೊಂದಿದ್ದಾರೆ. ಹೀಗಿದ್ದೂ ಪತಿ ಅಝೀಝುರ್ರಹ್ಮಾನ್ 2ನೇ ವಿವಾಹವಾಗಿ, ಆಕೆಯೊಂದಿಗೂ ಮಕ್ಕಳನ್ನು ಹೊಂದಿದ್ದನು. ಈ ವಿಷಯ ಮೊದಲ ಪತ್ನಿಯಿಂದ ಮರೆ ಮಾಚಿದ್ದ. ಹೇಗೋ ಹಂಮೀದುನ್ನಿಶಾಗೆ ವಿಷಯ ತಿಳಿದು ಆಕೆ ತನ್ನ ತವರು ಮನೆಯಲ್ಲಿ ವಾಸಿಸುತ್ತಿದ್ದಳು. ನಂತರ ಅಝೀಝುರ್ರಹ್ಮಾನ್ ಕೌಟುಂಬಿಕ ನ್ಯಾಯಾಲಯ ಸಂಪರ್ಕಿಸಿ ಮೊದಲ ಪತ್ನಿ ತನ್ನೊಂದಿಗೆ ವಾಸಿಸುವಂತೆ ನಿರ್ದೇಶನ ನೀಡುವಂತೆ ಮನವಿಯಲ್ಲಿ ಕೋರಿದ್ದ. ಕಳೆದ ಆಗಸ್ಟ್ನಲ್ಲಿ ಮನವಿಯನ್ನು ತಿರಸ್ಕರಿಸಿದ್ದ ನ್ಯಾಯಾಲಯ ಮಹಿಳೆಯರ ಹಕ್ಕುಗಳನ್ನೂ ಗೌರವಿಸುವಂತೆ ಹೇಳಿತ್ತು. ಈ ಆದೇಶವನ್ನು ಪ್ರಶ್ನಿಸಿ ಆತ ಹೈಕೋರ್ಟ್ ಮೊರೆ ಹೋಗಿದ್ದ.

    Live Tv
    [brid partner=56869869 player=32851 video=960834 autoplay=true]