Tag: allegations

  • ನನ್ನ ವಿರುದ್ಧ ರಾಜಕೀಯ ಷಡ್ಯಂತ್ರ: ಡಾ. ಸೂರಜ್‌ ರೇವಣ್ಣ

    ನನ್ನ ವಿರುದ್ಧ ರಾಜಕೀಯ ಷಡ್ಯಂತ್ರ: ಡಾ. ಸೂರಜ್‌ ರೇವಣ್ಣ

    ಹಾಸನ: ನನ್ನ ವಿರುದ್ಧ ಷಡ್ಯಂತ್ರ ಮಾಡಿದ್ದಾರೆ. ಈ ಷಡ್ಯಂತ್ರ ಎಷ್ಟು ದಿನದಿಂದ ನಡೆಯುತ್ತಿದೆ ಎಂಬ ಬಗ್ಗೆ ನನಗೆ ಮಾಹಿತಿ ಇಲ್ಲ ಎಂದು ವಿಧಾನ ಪರಿಷತ್ ಸದಸ್ಯ ಡಾ.ಸೂರಜ್‌ ರೇವಣ್ಣ (Dr Suraj Revanna) ಹೇಳಿದ್ದಾರೆ.

    ಹೊಳೆನರಸೀಪುರ ತಾಲೂಕಿನ ಗನ್ನಕಡ ಫಾರ್ಮ್‌ಹೌಸ್‌ನಲ್ಲಿ ಸುದ್ದಿಗಾರರಿಗೆ ಪ್ರತಿಕ್ರಿಯಿಸಿದ ಅವರು, ನನ್ನ ಮೇಲೆ ಇಲ್ಲಸಲ್ಲದ ಆರೋಪ ಮಾಡುತ್ತಿದ್ದಾರೆ. ಈ ಆರೋಪವನ್ನು ಖಡಾಖಂಡಿತವಾಗಿ ತಿರಸ್ಕಾರ ಮಾಡುತ್ತೇನೆ. ಕಾನೂನು ವ್ಯವಸ್ಥೆಯಲ್ಲಿ ಏನು ತೀರ್ಮಾನ ಆಗಬೇಕು ಆಗುತ್ತೆ. ಅವನ ಮೇಲೆಯೂ ಎಫ್‌ಐಆರ್ ಆಗಿದೆ ಎಂದರು.

    ಕಾನೂನಿನಲ್ಲಿ ತನಿಖೆ ಆಗಲಿ, ಸತ್ಯಾಸತ್ಯತೆ ಹೊರಗೆ ಬರಲಿ. ಸತ್ಯ ಏನಿದೆ ಅದು ಹೊರಗೆ ಬಂದೇ ಬರುತ್ತೆ. ನಾಡಿನ ಕಾನೂನಿನ ಮೇಲೆ ನನಗೆ ವಿಶ್ವಾಸವಿದೆ. ಇದು ಸಂಪೂರ್ಣ ರಾಜಕೀಯ ಷಡ್ಯಂತ್ರ. ಅದರ ಬಗ್ಗೆ ನಾನು ಇಂದು ಏನೂ ಪ್ರತಿಕ್ರಿಯೆ ಕೊಡಲ್ಲ ಎಂದು ಹೇಳಿದರು. ಇದನ್ನೂ ಓದಿ: ಡಾ.ಸೂರಜ್ ರೇವಣ್ಣ ವಿರುದ್ದ ಎಫ್ಐಆರ್ ದಾಖಲು

    ಇಂತಹವರು, ಅಂತಹವರು, ಅವರು, ಇವರು ಮಾಡಿದ್ರು ಅಂತ ನಾನು ಚರ್ಚೆ ಮಾಡಲು ಹೋಗಲ್ಲ. ತನಿಖೆ ಪ್ರಗತಿಯಲ್ಲಿದೆ, ಸತ್ಯಾಸತ್ಯತೆ ಹೊರಗೆ ಬರುತ್ತೆ. ಇಡೀ ರಾಜ್ಯದ ಜನತೆ ಅದನ್ನು ನೋಡುತ್ತಾರೆ ಎಂದು ಸೂರಜ್‌ ರೇವಣ್ಣ ತಿಳಿಸಿದ್ದಾರೆ.

  • ತೇಜಸ್ವಿ ವಿರುದ್ಧದ ಮೀಟೂ ಆರೋಪದಲ್ಲಿ ದೋಸ್ತಿಗಳ ಕೈವಾಡ: ಈಶ್ವರಪ್ಪ

    ತೇಜಸ್ವಿ ವಿರುದ್ಧದ ಮೀಟೂ ಆರೋಪದಲ್ಲಿ ದೋಸ್ತಿಗಳ ಕೈವಾಡ: ಈಶ್ವರಪ್ಪ

    ಬೆಂಗಳೂರು: ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ತೇಜಸ್ವಿ ಸೂರ್ಯ ವಿರುದ್ಧದ ಮೀಟೂ ಆರೋಪದ ಹಿಂದೆ ಕಾಂಗ್ರೆಸ್-ಜೆಡಿಎಸ್‍ನವರ ಕೈವಾಡವಿದೆ ಎಂದು ಬಿಜೆಪಿ ಮುಖಂಡ ಕೆ.ಎಸ್.ಈಶ್ವರಪ್ಪ ಆರೋಪಿಸಿದ್ದಾರೆ.

    ನಗರದಲ್ಲಿ ಮಾತನಾಡಿದ ಅವರು, ನಾಟಕ ಮಾಡಿ ಮೀಟೂ ಕೇಸ್‍ಗಳನ್ನು ಹಾಕಿಸುವುದು ಕಾಂಗ್ರೆಸ್ ಹಾಗೂ ಜೆಡಿಎಸ್‍ನವರಿಗೆ ಅಭ್ಯಾಸವಾಗಿದೆ. ಮೀಟೂ ವಿಷಯವನ್ನು ರಾಜಕೀಯವಾಗಿ ದುರುಯೋಗ ಪಡಿಸಿಕೊಳ್ಳಲಾಗುತ್ತಿದೆ. ಆದರೆ ಈ ಪ್ರಯತ್ನದಲ್ಲಿ ಅವರು ಸಂಪೂರ್ಣ ವಿಫಲರಾಗುತ್ತಾರೆ. ತೇಜಸ್ವಿ ಸೂರ್ಯ ಅವರ ಮೇಲೆ ನಮಗೆ ಸಂಪೂರ್ಣ ನಂಬಿಕೆ ಇದೆ. ಆತ ಅಂಥ ಹುಡುಗನಲ್ಲ ಎಂದು ಹೇಳಿದರು.

    ಅಧಿಕಾರಿಗಳ ವರ್ಗಾವಣೆ ಬಗ್ಗೆ ಸಿಎಂ ಕುಮಾರಸ್ವಾಮಿ ಅಸಮಧಾನ ವಿಚಾರವಾಗಿ ಪ್ರತಿಕ್ರಿಯೆ ನೀಡಿದ ಕೆ.ಎಸ್.ಈಶ್ವರಪ್ಪ ಅವರು, ತಮಗೆ ಬೇಕಾದವರನ್ನು ಸರಿಯಾದ ಜಾಗಗಳಿಗೆ ಅಧಿಕಾರಿಗಳನ್ನು ವರ್ಗಾವಣೆ ಮಾಡುವ ಅಭ್ಯಾಸ ಕುಮಾರಸ್ವಾಮಿ ಅವರಿಗೆ ಇದೆ. ಚುನಾವಣೆ ಆಯೋಗ ಜಾರಿ ಮಾಡಿದ ಅಧಿಕಾರಿಗಳ ವರ್ಗಾವಣೆಯನ್ನು ಸಿಎಂ ಸ್ವಾಗತಿಸಬೇಕಿತ್ತು. ಆದರೆ ಹಾಗೇ ಮಾಡಲಿಲ್ಲ. ಅವರಿಗೆ ಬೇಕಾದ ಅಧಿಕಾರಿಗಳೇ ಇರಬೇಕು ಅಂದ್ರೆ ಹೇಗೆ ಸಾಧ್ಯ ಎಂದು ಪ್ರಶ್ನಿಸಿದರು.

    ಐಟಿ ಅಧಿಕಾರಿಗಳ ಕೆಲಸವನ್ನು ಸಿಎಂ ಕುಮಾರಸ್ವಾಮಿ ಹೊಗಳಬೇಕಿತ್ತು. ಆದರೆ ಅವರೇ ನಾಳೆ ಐಟಿ ದಾಳಿ ಆಗುತ್ತದೆ ಎಂದು ಸುದ್ದಿಗೋಷ್ಠಿ ಮೂಲಕ ಹೇಳಿದರು. ಈ ಮೂಲಕ ಹಣ, ದಾಖಲೆಗಳನ್ನು ಮುಚ್ಚಿಟ್ಟುಕೊಳ್ಳಿ ಎಂದು ಅಧಿಕಾರಿಗಳಿಗೆ ಮುನ್ನೆಚ್ಚರಿಕೆ ನೀಡಿದರು. ಕೇಂದ್ರ ಸಂಸ್ಥೆಗಳ ಕಾರ್ಯದ ಬಗ್ಗೆ ಗೌಪ್ಯತೆ ಕಾಪಾಡುವಲ್ಲಿ ಕುಮಾರಸ್ವಾಮಿ ವಿಫಲರಾಗಿದ್ದಾರೆ. ಅವರಿಗೆ ಮುಖ್ಯಮಂತ್ರಿ ಸ್ಥಾನದಲ್ಲಿ ಉಳಿಯಲು ಯೋಗ್ಯತೆಯಿಲ್ಲ ಎಂದರು.

    ತೇಜಸ್ವಿ ಮೇಲಿರುವ ಆರೋಪವೇನು?:
    ಉದ್ಯಮಿ ಡಾ.ಸೋಮ್ ದತ್ತಾ ಅವರು ತಮ್ಮ ಟ್ವಿಟ್ಟರ್ ಖಾತೆಯಲ್ಲಿ ತೇಜಸ್ವಿ ವಿರುದ್ಧ ಗಂಭೀರ ಆರೋಪ ಮಾಡಿದ್ದರು. ತೇಜಸ್ವಿ ಸೂರ್ಯ ಕೈಯಲ್ಲಿ ನಾನು 5 ವರ್ಷಗಳ ಕಾಲ ನಲುಗಿದ್ದೇನೆ. ನನ್ನ ಪ್ರೀತಿ ಕುರುಡಾಗಿತ್ತು. ತೇಜಸ್ವಿ ಅವರನ್ನು ನಂಬಿ ಬಲಿಪಶು ಆದವರಲ್ಲಿ ನಾನು ಮೊದಲೇನಲ್ಲ, ಕೊನೆಯವಳೂ ಅಲ್ಲ. ಪ್ರತಿಯೊಬ್ಬ ಹಿಂದೂವು ನಿಜವಾದ ಅರ್ಥದಲ್ಲಿ ಧಾರ್ಮಿಕನಾಗಿರಲ್ಲ. ದೊಡ್ಡದಾಗಿ ಭಾಷಣ ಮಾಡೋರೆಲ್ಲ ದೊಡ್ಡ ವ್ಯಕ್ತಿ ಆಗಿರಲಿಲ್ಲ ಎಂದು ಹೇಳಿದ್ದರು.

    ಸತ್ಯ ಗೊತ್ತಿಲ್ಲದೆ ತೇಜಸ್ವಿ ಸೂರ್ಯಗೆ ಪುಕ್ಕಟೆ ಪ್ರಚಾರ ಕೊಡಬೇಡಿ. ಇಂಥ ವ್ಯಕ್ತಿಗೆ ಟಿಕೆಟ್ ಕೊಡುವ ಮೊದಲು ಬಿಜೆಪಿ ಹಿನ್ನೆಲೆಯನ್ನ ಪರಿಶೀಲಿಸಬೇಕಿತ್ತು. ತೇಜಸ್ವಿ ಸೂರ್ಯ ಜೊತೆಗಿನ ನಂಟಿದ್ದ ನನ್ನ ತಂದೆ-ತಾಯಿ ಕೂಡ ನೋವು ಅನುಭವಿಸಿದ್ದಾರೆ. ನನ್ನ ತಂದೆ-ತಾಯಿ ಮತ್ತಷ್ಟು ಕೊರಗುವುದು ನನಗೆ ಇಷ್ಟವಿಲ್ಲ ಎಂದು ಆರೋಪಿಸಿದ್ದರು.

  • 2ನೇ ಪತ್ನಿ ಮೇಲೆ ಹಲ್ಲೆ ಮಾಡಿದ್ದಕ್ಕೆ ಆತ್ಮಹತ್ಯೆ ಮಾಡಿಕೋ ಎಂದ ಪತಿ!

    2ನೇ ಪತ್ನಿ ಮೇಲೆ ಹಲ್ಲೆ ಮಾಡಿದ್ದಕ್ಕೆ ಆತ್ಮಹತ್ಯೆ ಮಾಡಿಕೋ ಎಂದ ಪತಿ!

    ಧಾರವಾಡ: 2ನೇ ಪತ್ನಿ ಮೇಲೆ ಹಲ್ಲೆ ಮಾಡಿದ್ದಕ್ಕೆ ಆತ್ಮಹತ್ಯೆ ಮಾಡು ಎಂದು ಪತಿ ನನಗೆ ಕಿರುಕುಳ ನೀಡುತ್ತಿದ್ದಾನೆ ಎಂದು ಮಹಿಳೆಯೊಬ್ಬರು ಆರೋಪಿಸಿದ್ದಾರೆ.

    ಧಾರವಾಡ ನಗರದ ಗಣೇಶನಗರದ ಅಲ್ಲಾವುದ್ದಿನ್ ಬಳೆಗಾರ ತನ್ನ ಮೊದಲನೇ ಪತ್ನಿ ಜಾಹಿದಾ ಮೇಲೆ ಹಲ್ಲೆ ಎಸಗಿದ ಆರೋಪ ಕೇಳಿ ಬಂದಿದೆ. ಜಾಹಿದಾ ಈ ಆರೋಪ ಮಾಡಿದ್ದು, ಸದ್ಯ ಆಕೆ ಜಿಲ್ಲಾಸ್ಪತ್ರೆಯಲ್ಲಿ ದಾಖಲಾಗಿದ್ದಾರೆ. ಪತಿ ಅಲ್ಲಾವುದ್ದಿನ್ ಎರಡನೇ ಪತ್ನಿಯನ್ನು ನಾನು ಬಿಡಬೇಕಾದರೆ 12 ಲಕ್ಷ ರೂ. ತರಲು ಒತ್ತಾಯ ಮಾಡುತ್ತಿದ್ದಾನೆ. ಅಷ್ಟೇ ಅಲ್ಲದೇ ನಾನು ಆತ್ಮಹತ್ಯೆ ಮಾಡಿಕೊಳ್ಳುವಂತೆ ಅಲ್ಲಾವುದ್ದಿನ್ ಎರಡು ದಿನಗಳಿಂದ ಒತ್ತಾಯ ಮಾಡುತ್ತಿದ್ದಾನೆ ಎಂದು ಜಾಹಿದಾ ಆರೋಪಿಸಿದ್ದಾರೆ.

    ಕಳೆದ 7 ವರ್ಷಗಳ ಹಿಂದೆ ಧಾರವಾಡ ನಗರದ ಮನಕಿಲ್ಲಾ ಬಡಾವಣೆಯ ಜಾಹಿದಾಳನ್ನು ಮದುವೆಯಾಗಿದ್ದ ಅಲ್ಲಾವುದಿನ್‍ಗೆ ಇಬ್ಬರು ಮಕ್ಕಳಿದ್ದಾರೆ. ಇವರಿಬ್ಬರ ನಡುವೆ ಸಂಸಾರ ಚೆನ್ನಾಗಿ ನಡೆಯದ ಕಾರಣ ಇವರಿಬ್ಬರು ಬೇರೆಯಾಗಿದ್ದರು.

    ಕಂಪ್ಯೂಟರ್ ಸೆಂಟರ್ ನಡೆಸುತ್ತಿದ್ದ ಅಲ್ಲಾವುದ್ದಿನ್ ಕಳೆದ ವಾರ ಮತ್ತೊಂದು ಮದುವೆಯಾಗಿದ್ದ. ಈ ಹಿನ್ನೆಲೆಯಲ್ಲಿ ಮೊದಲ ಪತ್ನಿ ಜಾಹಿದಾ ಪ್ರಶ್ನಿಸಿಲು ಹೋದಾಗ ಜಗಳ ಆರಂಭವಾಗಿ ಪತಿ, ಎರಡನೇ ಪತ್ನಿ ಜೊತೆ ಹೊಡೆದಾಟ ನಡೆದಿತ್ತು.

    ಈ ಘಟನೆ ನಂತರ ಹಿರಿಯರು ಮಧ್ಯಪ್ರವೇಶಿಸಿ ಪೊಲೀಸರ ಸಮ್ಮುಖದಲ್ಲಿ ಸಮಸ್ಯೆಯನ್ನು ಇತ್ಯರ್ಥಗೊಳಿಸಿದ್ದರು. ಆದರೆ ಈಗ ಮತ್ತೆ ಇವರ ನಡುವೆ ಜಗಳ ಆರಂಭವಾಗಿದ್ದು, ಈ ಜಗಳ ಪೊಲೀಸ್ ಠಾಣೆ ಮೆಟ್ಟಿಲೇರಿದೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

  • ಮುತ್ತಪ್ಪ ರೈಗೆ ಸಿಸಿಬಿಯಿಂದ ನೋಟಿಸ್

    ಮುತ್ತಪ್ಪ ರೈಗೆ ಸಿಸಿಬಿಯಿಂದ ನೋಟಿಸ್

    ಬೆಂಗಳೂರು: ಆಯುಧ ಪೂಜೆಯಂದು ಶಸ್ತಾಸ್ತ್ರಗಳನ್ನ ಇಟ್ಟು ಪೂಜೆ ಮಾಡಿದ್ದ ಜಯ ಕರ್ನಾಟಕ ಸಂಘಟನೆಯ ಮುಖ್ಯಸ್ಥ ಮುತ್ತಪ್ಪ ರೈ ಅವರಿಗೆ ಸಿಸಿಬಿ ಪೊಲೀಸರು ನೋಟಿಸ್ ಜಾರಿ ಮಾಡಿದ್ದಾರೆ.

    ಇತ್ತೀಚಿಗಷ್ಟೆ ಸಿಸಿಬಿಯ ಹೆಚ್ಚುವರಿ ಪೊಲೀಸ್ ಆಯುಕ್ತರಾಗಿ ಅಧಿಕಾರ ಸ್ವೀಕಾರ ಮಾಡಿಕೊಂಡಿರುವ ಅಲೋಕ್ ಕುಮಾರ್ ಮುತ್ತಪ್ಪ ರೈ ಅವರಿಗೆ ನೋಟಿಸ್ ಕಳಿಸಿದ್ದಾರೆ. ಇಷ್ಟೊಂದು ಆಯುಧಗಳಿಗೆ ಸರ್ಕಾರದಿಂದ ಅನುಮತಿ ಇದೆಯೇ? ನಿಮ್ಮ ಮೇಲೆ ಏಕೆ ಕ್ರಮ ಕೈಗೊಳ್ಳಬಾರದು ಎಂದು ಪ್ರಶ್ನಿಸಿ ಸಿಸಿಬಿ ನೋಟಿಸ್ ಜಾರಿ ಮಾಡಿದೆ. ನೋಟಿಸ್ ಜಾರಿಯಾದ 24 ಗಂಟೆಯ ಒಳಗಡೆ ಮುತ್ತಪ್ಪ ರೈ ಸಿಸಿಬಿ ಮುಂದೆ ಹಾಜರಾಗಿ ವಿವರಣೆ ನೀಡಬೇಕಾಗುತ್ತದೆ.

    ಆಯುಧ ಪೂಜೆಯಂದು ಮುತ್ತಪ್ಪ ರೈ ಗನ್, ಪಿಸ್ತೂಲ್, ರಿವಾಲ್ವಾರ್, ಡ್ಯಾಗರ್ ಗೆ ಪೂಜೆ ಮಾಡಿದ್ದರು. ಶಸ್ತಾಸ್ತ್ರಗಳನ್ನ ಇಟ್ಟು ಪೂಜೆ ಮಾಡಿದ್ದ ಫೋಟೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿತ್ತು. ಇದನ್ನ ಕಂಡ ಜನರು ಪೊಲೀಸರಿಗೆ ಪ್ರಶ್ನೆಗಳ ಸುರಿಮಳೆ ಹರಿಸಿದ್ದರು. ಇದರ ಬೆನ್ನಲ್ಲೇ ಶಸ್ತ್ರಾಸ್ತ್ರ ಕಾಯ್ದೆಯ ಅಡಿಯಲ್ಲಿ ಸಿಸಿಬಿ ನೋಟಿಸ್ ಜಾರಿ ಮಾಡಿದೆ.

    1959ರ ಶಸ್ತ್ರಾಸ್ತ್ರ ಕಾಯ್ದೆಯ ಪ್ರಕಾರ ಯಾವುದೇ ಶಸ್ತ್ರಾಸ್ತ್ರಗಳನ್ನ ವ್ಯಕ್ತಿಗಳು ಹೊಂದಿರಬೇಕಾದರೇ ಪರವಾನಿಗೆ ಪಡೆದಿರಬೇಕು. ಪರವಾನಿಗೆ ಹೊಂದದೇ ಶಸ್ತ್ರಾಸ್ತ್ರಗಳನ್ನ ಹೊಂದಿದ್ದರೆ ಅದು ಅಕ್ರಮ ಶಸ್ತ್ರಾಸ್ತ್ರ ಕಾಯ್ದೆಯಡಿ ಶಿಕ್ಷಾರ್ಹ ಅಪರಾಧವಾಗುತ್ತದೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

  • #MeToo ಅಭಿಯಾನಕ್ಕೆ ಜಯ – ಕೇಂದ್ರ ಸಚಿವ ಸ್ಥಾನಕ್ಕೆ ಅಕ್ಬರ್ ರಾಜೀನಾಮೆ?

    #MeToo ಅಭಿಯಾನಕ್ಕೆ ಜಯ – ಕೇಂದ್ರ ಸಚಿವ ಸ್ಥಾನಕ್ಕೆ ಅಕ್ಬರ್ ರಾಜೀನಾಮೆ?

    ನವದೆಹಲಿ: ಮಿಟೂ ಅಭಿಯಾನಕ್ಕೆ ಗುರಿಯಾಗಿದ್ದ ಕೇಂದ್ರ ವಿದೇಶಾಂಗ ವ್ಯವಹಾರಗಳ ಖಾತೆ ರಾಜ್ಯ ಸಚಿವ ಎಂ.ಜಿ.ಅಕ್ಬರ್ ಅವರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ ಎಂದು ವರದಿಯಾಗಿದೆ.

    ನೈಜೀರಿಯಾ ಪ್ರವಾಸದಲ್ಲಿ ಸಚಿವರು ಇಂದು ದೆಹಲಿಗೆ ಆಗಮಿಸಿದ್ದು ಲೈಂಗಿಕ ಕಿರುಕುಳ ಆರೋಪದ ಕುರಿತು ಮಾಧ್ಯಮಗಳು ಪ್ರಶ್ನಿಸಿದ್ದಕ್ಕೆ, ಇದಕ್ಕೆ ತಕ್ಕ ಹೇಳಿಕೆಯನ್ನು ನಂತರ ನೀಡುತ್ತೇನೆ ಎಂದು ಸಚಿವರು ಹೇಳಿದ್ದಾರೆ.

    ಇತ್ತ ಸಚಿವ ಅಕ್ಬರ್ ಅವರು ಪ್ರಧಾನ ಮಂತ್ರಿ ಅವರ ಮುಖ್ಯ ಕಾರ್ಯದರ್ಶಿ ನೃಪೇಂದ್ರ ಮಿಶ್ರಾ ಅವರಿಗೆ ರಾಜೀನಾಮೆ ಪತ್ರ ಕಳುಹಿಸಿದ್ದಾರೆ. ಅಷ್ಟೇ ಅಲ್ಲದೆ ವಿದೇಶಾಂಗ ಸಚಿವೆ ಸುಷ್ಮಾ ಸ್ವರಾಜ್ ಅವರನ್ನು ಭೇಟಿ ಮಾಡ ಸಮಯ ಕೋರಿದ್ದಾರೆ ಎಂದು ಮಾಧ್ಯಮವೊಂದು ವರದಿ ಮಾಡಿದೆ. ಆದರೆ ಅಧಿಕೃತವಾಗಿ ಪ್ರಧಾನಮಂತ್ರಿಗಳ ಸಚಿವಲಾಯದಿಂದ ರಾಜೀನಾಮೆ ಸಂಬಂಧ ಯಾವುದೇ ಹೇಳಿಕೆ ಪ್ರಕಟವಾಗಿಲ್ಲ.

    ಏನಿದು ಪ್ರಕರಣ?:
    ಸಚಿವ ಅಕ್ಬರ್ ವಿರುದ್ಧ ಪತ್ರಕರ್ತೆ ಪ್ರಿಯಾ ರಮಣಿ ಅವರು ಮೊದಲು ಆರೋಪ ಮಾಡಿದ್ದರು. ಎಂಜಿ ಅಕ್ಬರ್ ಕತೆಯೊಂದಿಗೆ ಇದನ್ನು ಆರಂಭಿಸುತ್ತೇನೆ. ಆದರೆ ಅವರ ಹೆಸರನ್ನು ಉಲ್ಲೇಖಿಸಿಲ್ಲ, ಏಕೆಂದರೆ ಅವರೇನೂ ಮಾಡಿಲ್ಲ. ಈ ಬೇಟೆಗಾರನಿಂದ ಅನೇಕ ಮಹಿಳೆಯರಿಗೆ ಕೆಟ್ಟ ಅನುಭವ ಆಗಿರಬಹುದು. ಬಹುಶಃ ಅವರು ಅ ಹಂಚಿಕೊಳ್ಳಬಹುದು ಎಂದು ಬರೆದು ಅಕ್ಟೋಬರ್ 8ರಂದು ಟ್ವೀಟ್ ಮಾಡಿದ್ದರು.

    https://twitter.com/priyaramani/status/1049279608263245824

    ಅಷ್ಟೇ ಅಲ್ಲದೆ ತಮ್ಮ ಮೇಲಾದ ಲೈಂಗಿಕ ಕಿರುಕುಳ ಕುರಿತು 2017ರ ಅಕ್ಟೋಬರ್ ನಲ್ಲಿ ಲೇಖನವೊಂದನ್ನು ಪ್ರಿಯಾ ರಮಣಿ ಬರೆದಿದ್ದರು. ಪ್ರಿಯಾ ರಮಣಿ ಆರೋಪದ ಬನ್ನಲ್ಲೇ ಅನೇಕ ಪ್ರತಕರ್ತೆಯರು ಅಕ್ಬರ್ ಲೈಂಗಿಕ ಕಿರುಕುಳ ಆರೋಪ ಮಾಡಿದ್ದರು.

    ಈ ಆರೋಪಗಳನ್ನು ಗಂಭೀರವಾಗಿ ಪರಿಗಣಿಸಿದ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಆರೋಪಗಳ ಕುರಿತು ಪರಿಶೀಲನೆ ಮಾಡಿ ಕ್ರಮ ಕೈಗೊಳ್ಳಲಿದ್ದೇವೆ ಅಂತಾ ಹೇಳಿದ್ದರು. ಇತ್ತ ಎಂ.ಜೆ.ಅಕ್ಬರ್ ವಿರೋಧ ಪಕ್ಷಗಳು ರಾಜೀನಾಮೆ ನೀಡಬೇಕು ಎಂದು ಒತ್ತಾಯಿಸಿದ್ದವು.

    https://twitter.com/priyaramani/status/1051361254776983552

    ಮಿ ಟೂ ಅಭಿಯಾನ:
    ಬಾಲಿವುಡ್ ನಟಿ ತನುಶ್ರೀ ದತ್ತ ಲೈಂಗಿಕ ಕಿರುಕುಳ ಆರೋಪದ ನಂತರ ದೇಶದಲ್ಲಿ ಮಿ ಟೂ ಅಭಿಯಾನ ಚುರುಕುಗೊಂಡಿದೆ. ಈ ಅಭಿಯಾನದಲ್ಲಿ ಪುರುಷರಿಂದ ಲೈಂಗಿಕ ಕಿರುಕುಳಕ್ಕೆ ಒಳಗಾದ ಮಹಿಳೆಯರು #ಮಿಟೂ ಅಭಿಯಾನದ ಮೂಲಕ ಸಾಮಾಜಿಕ ಜಾಲತಾಣದಲ್ಲಿ ಆರೋಪಗಳನ್ನು ವ್ಯಕ್ತಪಡಿಸುತ್ತಿದ್ದಾರೆ. ಚಿತ್ರ ನಟಿಯರು, ಕ್ರೀಡಾಪಟುಗಳು ಹಾಗೂ ಇತರ ಮಹಿಳೆಯರು ತಮಗೆ ಆದಂತಹ ಲೈಂಗಿಕ ಕಿರುಕುಳದ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ದನಿಯೆತ್ತುತ್ತಿದ್ದಾರೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

  • ಬಿಜೆಪಿ ತೊರೆದು ಕಾಂಗ್ರೆಸ್ ಸೇರ್ತಾರ ಗೂಳಿಹಟ್ಟಿ ಶೇಖರ್..?

    ಬಿಜೆಪಿ ತೊರೆದು ಕಾಂಗ್ರೆಸ್ ಸೇರ್ತಾರ ಗೂಳಿಹಟ್ಟಿ ಶೇಖರ್..?

    ಚಿತ್ರದುರ್ಗ: ಹೊಸದುರ್ಗ ವಿಧಾನಸಭಾ ಕ್ಷೇತ್ರದ ಬಿಜೆಪಿ ಶಾಸಕ ಗೂಳಿಹಟ್ಟಿ ಶೇಖರ್ ಬಿಜೆಪಿ ತೊರೆದು ಕಾಂಗ್ರೆಸ್ ಸೇರುತ್ತಾರೆ ಎಂಬ ಸುದ್ದಿಯೊಂದು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ. ಈ ಸಂಬಂಧ ಪ್ರತಿಕ್ರಿಯಿಸಿರುವ ಶಾಸಕರು, ಪಕ್ಷ ತೊರೆಯುವ ಮಾತಿಲ್ಲ. ವಿರೋಧಿಗಳು ಈ ರೀತಿಯ ಸುಳ್ಳು ಸುದ್ದಿಗಳನ್ನು ಹರಿಬಿಡುತ್ತಿದ್ದಾರೆ. ನನ್ನ ಮೇಲೆ ಕೇಳಿಬರುತ್ತಿರುವ ಆರೋಪಗಳಿಗೆ ಹಾಗೂ ಸುಳ್ಳು ಸುದ್ದಿ ಹಬ್ಬಿಸುವವರ ವಿರುದ್ಧ ಮಾನನಷ್ಟ ಮೊಕದ್ದಮೆ ಹೂಡುತ್ತೇನೆ ಎಂದು ಎಚ್ಚರಿಕೆ ನೀಡಿದ್ದಾರೆ.

    ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ನಾವು ಅಭಿವೃದ್ಧಿ ವಿಚಾರವಾಗಿ ಮುಖ್ಯಮಂತ್ರಿ ಹಾಗು ಡಿಕೆ ಶಿವಕುಮಾರ್ ಬಳಿಯೂ ಹೋಗಬೇಕಾಗುತ್ತದೆ. ರಾಜ್ಯದ ಎಲ್ಲಾ ಸಚಿವರನ್ನು ಭೇಟಿ ಆಗಬೇಕಾಗುತ್ತದೆ. ನನ್ನ ಕ್ಷೇತ್ರದಲ್ಲಿ ಹಲವಾರು ಸಮಸ್ಯೆಗಳಿವೆ. ಹೀಗಾಗಿ ಕ್ಷೇತ್ರ ಅಭಿವೃದ್ಧಿಗಾಗಿ ಪ್ರತಿಯೊಬ್ಬರನ್ನು ಭೇಟಿ ಮಾಡುವುದು ನನ್ನ ಕರ್ತವ್ಯ. ಆದರೆ ಆ ಕರ್ತವ್ಯ ನಿರ್ವಹಿಸಲು ಅಡ್ಡಿ ಪಡಿಸುತ್ತಾ ಇಲ್ಲಸಲ್ಲದ ಆರೋಪಗಳನ್ನು ಮಾಡುತ್ತಿದ್ದಾರೆ ಇದನ್ನ ಜನರೇ ತೀರ್ಮಾನಿಸಬೇಕು ಎಂದು ಹೇಳಿದರು.

    ರಾಜಕೀಯ ವಿರೋಧಿಗಳು ಇಲ್ಲ ಸಲ್ಲದ ಸುದ್ದಿ ಹಬ್ಬಿಸುತ್ತಿದ್ದಾರೆ. ಚಿತ್ರದುರ್ಗ ಲೋಕಸಭೆ ಚುನಾವಣೆಗೆ ಸ್ಪರ್ಧಿಸುವ ಸುದ್ದಿಯೂ ಸುಳ್ಳು. ಕ್ಷೇತ್ರದ ಜನರಿಗೆ, ಬಿಜೆಪಿಗೆ ದ್ರೋಹ ಬಗೆಯುವುದಿಲ್ಲ. ವಿರೋಧಿಗಳು ಸುಳ್ಳು ಸುದ್ದಿಗಳನ್ನು ಸಾಮಾಜಿಕ ಜಾಲತಾಣದಲ್ಲಿ ಹರಿಬಿಟ್ಟಿದ್ದಾರೆ. ನನ್ನ ಪಕ್ಷ ಹಾಗೂ ನನ್ನ ಜನ ನನ್ನನ್ನು ಗೆಲ್ಲಿಸಿದ್ದಾರೆ, ಯಡಿಯೂರಪ್ಪ ಅವರು ನನಗೆ ಟಿಕೆಟ್ ಕೊಟ್ಟಿದ್ದಾರೆ. ಪಕ್ಷದ ವ್ಯಕ್ತಿನಿಷ್ಠೆಯಾಗಿ ಜನರಿಗೆ ದ್ರೋಹ ಬಗೆಯುವ ಕೆಲಸ ಯಾವತ್ತು ಮಾಡುವುದಿಲ್ಲ. ಹೀಗಾಗಿ ಹೊಸದುರ್ಗ ಕ್ಷೇತ್ರದ ಜನ ಸುಳ್ಳನ್ನು ನಂಬದಂತೆ ಮನವಿ ಮಾಡಿಕೊಂಡರು.

    ಯಾವುದೇ ಕಾರಣಕ್ಕೂ ಬಿಜೆಪಿಯನ್ನು ತೊರೆಯುವುದಿಲ್ಲ. 5 ವರ್ಷ ನಾನು ಇಲ್ಲಿಯೇ ಇದ್ದು ಅಭಿವೃದ್ಧಿ ಕೆಲಸಗಳನ್ನು ಮಾಡಿಕೊಂಡು ಹೋಗುತ್ತೇನೆ. ಎಂಪಿ ಚುನಾವಣೆಯಲ್ಲಿ ನಾನು ಭಾಗವಹಿಸುವುದಿಲ್ಲ ಎಂದರು.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

  • ಫೋಟೋ ತೆಗಿಬೇಡ ಅಂತಾ ಹೇಳಿದ್ದೇ ತಪ್ಪಾ: ಯಜಮಾನ ಚಿತ್ರೀಕರಣ ಕಿರಿಕ್‍ಗೆ ದರ್ಶನ್ ಪ್ರತಿಕ್ರಿಯೆ

    ಫೋಟೋ ತೆಗಿಬೇಡ ಅಂತಾ ಹೇಳಿದ್ದೇ ತಪ್ಪಾ: ಯಜಮಾನ ಚಿತ್ರೀಕರಣ ಕಿರಿಕ್‍ಗೆ ದರ್ಶನ್ ಪ್ರತಿಕ್ರಿಯೆ

    ಬೆಂಗಳೂರು: ನಿರ್ಮಾಪಕ 30 ಕೋಟಿ ರೂ. ಬಂಡವಾಳ ಹಾಕಿ ಸಿನಿಮಾ ನಿರ್ಮಿಸುತ್ತಾರೆ. ಫೋಟೋ ತೆಗಿಬೇಡ ಅಂತಾ ಹೇಳಿದ್ದೇ ತಪ್ಪಾ ಅಂತಾ ಚಾಲೆಜಿಂಗ್ ಸ್ಟಾರ್ ದರ್ಶನ್ ಪ್ರಶ್ನಿಸಿದ್ದಾರೆ

    ‘ಯಜಮಾನ’ ಸಿನಿಮಾ ಚಿತ್ರೀಕರಣದ ವೇಳೆ ಜೂನಿಯರ್ ಕಲಾವಿದನ ಮೇಲೆ ಹಲ್ಲೆ ಕುರಿತು ಪಬ್ಲಿಕ್ ಟಿವಿಗೆ ಪ್ರತಿಕ್ರಿಯೆ ನೀಡಿದ ಚಾಲೆಜಿಂಗ್ ಸ್ಟಾರ್, ಸಾರ್ವಜನಿಕ ಸ್ಥಳದಲ್ಲಿ ಚಿತ್ರೀಕರಣ ಮಾಡುತ್ತಿದ್ದಾಗ ಫೋಟೋ ತೆಗೆಯಲು ಬೇಡಾ ಅಂತಾ ಹೇಳುವುದಕ್ಕೆ ಬರುವುದಿಲ್ಲ. ಆದರೆ ಖಾಸಗಿ ಜಾಗದಲ್ಲಿ ಸಾವಿರಾರು ರೂಪಾಯಿ ವೆಚ್ಚ ಮಾಡಿ ಚಿತ್ರೀಕರಣ ಮಾಡುತ್ತಿದ್ದಾಗ ಒಬ್ಬ ಜೂನಿಯರ್ ಕಲಾವಿದ ಹೀಗೆ ಮಾಡುವುದು ಸರಿಯಲ್ಲ ಅಂತಾ ತಿಳಿ ಹೇಳಿದೆ. ತಪ್ಪು ಮಾಡಿದರೆ ಕೇಳುವುದೇ ತಪ್ಪಾ ಅಂತಾ ದರ್ಶನ್ ಪ್ರಶ್ನಿಸಿದ್ದಾರೆ. ಇದನ್ನೂ ಓದಿ:  ದರ್ಶನ್ ಜೂನಿಯರ್ ಕಲಾವಿದನ ಮೇಲೆ ಹಲ್ಲೆ ಮಾಡಿಲ್ಲ: ನಿರ್ಮಾಪಕಿ ಶೈಲಜಾ ನಾಗ್

    ಬೃಹತ್ ಮೊತ್ತದಲ್ಲಿ ಸಿನಿಮಾ ಚಿತ್ರೀಕರಣ ಮಾಡಲಾಗುತ್ತಿದೆ. ಜೂನಿಯರ್ ಕಲಾವಿದರಿಗೆ ಊಟ, ತಿಂಡಿ ಹಾಗೂ ಸಾರಿಗೆ ವ್ಯವಸ್ಥೆ ಕೂಡಾ ಇರುತ್ತದೆ. ಇಷ್ಟು ವೆಚ್ಚದಲ್ಲಿ ಸಿನಿಮಾ ಮಾಡುವಾಗ ಫೋಟೋ ತೆಗೆದುಕೊಂಡು ಸಾಮಾಜಿಕ ಜಾಲತಾಣದಲ್ಲಿ ಶೇರ್ ಮಾಡಿ, ಲೈಕ್, ಕಮೆಂಟ್ಸ್ ತಗೊಂಡರೆ ಚಿತ್ರಮಂದಿರಕ್ಕೆ ಬಂದು ಜನ ಸಿನಿಮಾ ನೋಡುತ್ತಾರಾ? ಇದರಿಂದ ನಿರ್ಮಾಪಕರ ಕಥೆ ಏನಾಗುತ್ತದೆ ಎಂದು ಖರವಾಗಿ ಪ್ರತಿಕ್ರಿಯೆ ನೀಡಿದ್ದಾರೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

  • ದರ್ಶನ್ ಜೂನಿಯರ್ ಕಲಾವಿದನ ಮೇಲೆ ಹಲ್ಲೆ ಮಾಡಿಲ್ಲ: ನಿರ್ಮಾಪಕಿ ಶೈಲಜಾ ನಾಗ್

    ದರ್ಶನ್ ಜೂನಿಯರ್ ಕಲಾವಿದನ ಮೇಲೆ ಹಲ್ಲೆ ಮಾಡಿಲ್ಲ: ನಿರ್ಮಾಪಕಿ ಶೈಲಜಾ ನಾಗ್

    ಬೆಂಗಳೂರು: ‘ಯಜಮಾನ’ ಚಿತ್ರದ ಚಿತ್ರೀಕರಣದ ವೇಳೆ ಚಾಲೆಜಿಂಗ್ ಸ್ಟಾರ್ ದರ್ಶನ್ ಜೂನಿಯರ್ ಕಲಾವಿದನ ಮೇಲೆ ಹಲ್ಲೆ ನಡೆಸಿಲ್ಲ ಎಂದು ನಿರ್ಮಾಪಕಿ ಶೈಲಜಾ ನಾಗ್ ಹೇಳಿದ್ದಾರೆ.

    ಯಜಮಾನ ಸಿನಿಮಾ ಚಿತ್ರೀಕರಣದ ವೇಳೆ ಸಹ ಕಲಾವಿದ ಶಿವಶಂಕರ್ ಎಂಬವರು ಮೊಬೈಲ್‍ನಲ್ಲಿ ಸೆರೆಹಿಡಿಯುತ್ತಿದ್ದರು. ಈ ವೇಳೆ ಚಿತ್ರತಂಡ ಸಾಕಷ್ಟು ಬಾರಿ ಎಚ್ಚರಿಕೆ ನೀಡಿದರೂ ಶೂಟಿಂಗ್ ರೆಕಾರ್ಡ್ ಮಾಡಿದ್ದಕ್ಕೆ ದರ್ಶನ್ ಹೊಡೆದಿದ್ದಾರೆ ಎನ್ನುವ ವಿಚಾರಕ್ಕೆ ಪಬ್ಲಿಕ್ ಟಿವಿಗೆ ಪ್ರತಿಕ್ರಿಯೆ ನೀಡಿದ ಅವರು, ನಾವು ಖಾಸಗಿ ಸ್ಟುಡಿಯೋವೊಂದರಲ್ಲಿ ಹಾಡಿನ ಚಿತ್ರೀಕರಣವೊಂದು ಮಾಡುತ್ತಿದ್ದೇವು. ಈ ಚಿತ್ರದ ಹಾಡಿಗಾಗಿ 450ಕ್ಕೂ ಹೆಚ್ಚು ನೃತ್ಯಗಾರರು ಹಾಗೂ ಸಹ ಕಲಾವಿದರು ಬಂದಿದ್ದಾರೆ. ಅದರಲ್ಲಿ ಒಬ್ಬ ಸಹ ಕಲಾವಿದ ಬೆಳಗ್ಗೆಯಿಂದ ಎರಡು ಬಾರಿ ಮೊಬೈಲ್‍ನಲ್ಲಿ ಚಿತ್ರೀಕರಣವನ್ನು ಸೆರೆಹಿಡಿದಿದ್ದ. ಹೀಗೆ ಸಹ ಕಲಾವಿದ ಮೊಬೈಲಿನಲ್ಲಿ ಚಿತ್ರೀಕರಿಸುವಾಗ ಚಿತ್ರತಂಡದಲ್ಲಿ ಆತನನ್ನು ಎಚ್ಚರಿಸಿದ್ದರು. ಈ ರೀತಿ ಮಾಡಬೇಡ ನಿನ್ನನ್ನು ಹಣ ನೀಡಿ ಅಭಿನಯಕ್ಕೆ ಕರೆಸಿಕೊಂಡಿದ್ದೇವೆ. ನೀನು ಈ ರೀತಿ ಮಾಡಬೇಡ ಎಂದು ಹೇಳಿದರೂ ಆತ ಪದೇ ಪದೇ ಈ ರೀತಿ ಮಾಡುತ್ತಿದ್ದನು ಎಂದು ವಿವರಿಸಿದರು.

    ಆ ಸಹ ಕಲಾವಿದನನ್ನು ಪದೇ ಪದೇ ಎಚ್ಚರಿಸಿದ್ದರೂ ಈ ರೀತಿ ಮಾಡಿದ್ದನ್ನು ನೋಡಿ ಗಂಭೀರವಾಗಿ ಆತನನ್ನು ಎಚ್ಚರಿಸಿದ್ದೇವು. ನಮ್ಮ ತಂಡದಲ್ಲಿ ಯಾರೇ ಇರಲಿ ನಾವು ಅವರನ್ನು ಮೊಬೈಲಿನಲ್ಲಿ ಚಿತ್ರೀಕರಿಸಬೇಡಿ ಎಂದು ಎಚ್ಚರಿಸುತ್ತೇವೆ. ಚಿತ್ರಮಂದಿರದಲ್ಲಿ ತೋರಿಸುವ ಸಲುವಾಗಿ ನಾವು ಹಾಡನ್ನು ಚಿತ್ರೀಕರಿಸುತ್ತಿದ್ದೇವೆ. ಆದರೆ ಸಹ ಕಲಾವಿದ ಈ ರೀತಿ ಮಾಡುವುದರಿಂದ ಎಲ್ಲರೂ ತಮ್ಮ ಮೊಬೈಲಿನಲ್ಲೇ ಹಾಡನ್ನು ನೋಡಿದರೆ, ನಾವು ಚಿತ್ರೀಕರಣ ಮಾಡುವುದು ಯಾವುದೇ ಉಪಯೋಗವಿರುದಿಲ್ಲ. ಹಾಗಾಗಿ ನಾವು ಅದನ್ನು ವಿರೋಧಿಸಿದ್ದೇವು. ಆತನನ್ನು ತಡೆದದ್ದೇ ತಪ್ಪು ಎಂದರೆ ಅದೇ ತಪ್ಪಾಗುತ್ತದೆ ಎಂದು ತಿಳಿಸಿದರು.

    ನಮ್ಮ ಚಿತ್ರತಂಡದಲ್ಲಿರುವ ಎಲ್ಲರೂ ಆತನನ್ನು ಎಚ್ಚರಿಸಿದ್ದರು. ಸ್ಟುಡಿಯೋಗೆ ಬಾಡಿಗೆ ಕಟ್ಟಿ, ಸೆಟ್ ಹಾಕಿ ಹಾಡಿನ ಚಿತ್ರೀಕರಣ ಮಾಡುವಾಗ ಆತ ನಮ್ಮದೇ ಚಿತ್ರವನ್ನು ಚಿತ್ರೀಕರಣ ಮಾಡಿದರೆ ನಾವು ಅದನ್ನು ಪ್ರಶ್ನಿಸಲೇ ಬೇಕಾಗುತ್ತದೆ. ಹಾಗಾಗಿ ಚಿತ್ರತಂಡದಲ್ಲಿರುವವರು ಎಲ್ಲರೂ ಆತನನ್ನು ಪ್ರಶ್ನಿಸಿದ್ದಾರೆ. ಸದ್ಯ ಈಗ ಯಾವುದೇ ಸಮಸ್ಯೆಯಿಲ್ಲದೇ ಚಿತ್ರದ ಹಾಡಿನ ಚಿತ್ರೀಕರಣ ನಡೆಯುತ್ತಿದೆ. ದರ್ಶನ್ ಅವರೇ ಈ ಹಾಡಿಗೆ ಡ್ಯಾನ್ಸ್ ಮಾಡುತ್ತಿದ್ದರು. ಈ ವೇಳೆ ದರ್ಶನ್ ಆ ಸಹ ಕಲಾವಿದನನ್ನು, “ಅಪ್ಪ, ನೀನು ಮೊಬೈಲ್ ಇಳಿಸು. ಎಲ್ಲರು ಬೆಳಗ್ಗೆಯಿಂದಲೂ ಎರಡು ಬಾರಿ ನಿನ್ನನ್ನು ಎಚ್ಚರಿಸುತ್ತಿದ್ದಾರೆ. ಈ ರೀತಿ ಮಾಡಬೇಡ” ಎಂದು ದರ್ಶನ್ ಹೇಳಿದರೆ ಹೊರತು ಆತನ ಮೇಲೆ ಹಲ್ಲೆ ಮಾಡಿಲ್ಲ ಎಂದು ಯಜಮಾನ ನಿರ್ಮಾಪಕಿ ಹಲ್ಲೆ ನಡೆದಿದೆ ಎನ್ನಲಾದ ಸುದ್ದಿಗೆ ಸ್ಪಷ್ಟನೆ ನೀಡಿದರು.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

  • ರೈತರ ಭೂಮಿ ರೈತರಿಗೆ ಇಲ್ಲ – 6 ಲಕ್ಷದ ಜಮೀನಿಗೆ 70 ಲಕ್ಷ ರೂ. ಕೊಡುವಂತೆ ಬಿಡಿಎ ಡಿಮ್ಯಾಂಡ್!

    ರೈತರ ಭೂಮಿ ರೈತರಿಗೆ ಇಲ್ಲ – 6 ಲಕ್ಷದ ಜಮೀನಿಗೆ 70 ಲಕ್ಷ ರೂ. ಕೊಡುವಂತೆ ಬಿಡಿಎ ಡಿಮ್ಯಾಂಡ್!

    ಬೆಂಗಳೂರು: ರೈತರ ಸಾಲ ಮನ್ನಾ ಮಾಡೋದು ಇರಲಿ ಸ್ವಾಮಿ, ನಮ್ಮ ಸೈಟ್ ನಮಗೆ ಕೊಟ್ಟುಬಿಡಿ ಎಂದು ಮುಖ್ಯಮಂತ್ರಿ ಕುಮಾರಸ್ವಾಮಿ ಅವರಿಗೆ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ (ಬಿಡಿಎ) ಯೋಜನಾ ನಿರಾರ್ಶಿತ ರೈತರು ದುಂಬಾಲು ಬಿದ್ದಿದ್ದಾರೆ.

    ರೈತರೇ ಹೆದರಬೇಡಿ, ನಿಮ್ಮ ಸಾಲವನ್ನು ನಾನು ಮನ್ನಾ ಮಾಡುತ್ತೇನೆ ಎನ್ನುತ್ತಿರುವ ಕುಮಾರಸ್ವಾಮಿ ಅವರು ಬಿಡಿಎ ರೈತರಿಗೆ ಆಗುತ್ತಿರುವ ಅನ್ಯಾಯವನ್ನು ಕಂಡೂ ಕಾಣದಂತೆ ಸುಮ್ಮನಿದ್ದಾರೆ. ನಮಗೆ ನ್ಯಾಯ ಒದಗಿಸಿಕೊಡಿ ಎಂದು ಪಟ್ಟು ಹಿಡಿದಿದ್ದಾರೆ.

    ಬಿಡಿಏ ಭರವಸೆ ಏನು?:
    ಬೆಂಗಳೂರು ಸುತ್ತಮುತ್ತ ಲೇಔಟ್‍ಗಳನ್ನು ನಿರ್ಮಾಣ ಮಾಡಲು ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ(ಬಿಡಿಎ) ರೈತರ ಭೂಮಿಯನ್ನ ಕಡಿಮೆ ಹಣಕ್ಕೆ ಖರೀದಿ ಮಾಡಿತ್ತು. ಒಂದು ಎಕರೆಗೆ ಕೇವಲ 6 ಲಕ್ಷ ದಂತೆ ಅಧಿಕ ಪ್ರಮಾಣದಲ್ಲಿ ಭೂಮಿಯನ್ನು ಖರೀದಿ ಮಾಡಲಾಗಿದ್ದು, ಲೇಔಟ್ ಅಭಿವೃದ್ಧಿ ನಂತರ ರೈತರು ಕೊಟ್ಟ ಜಮೀನಿಗೆ ಅನುಗುಣವಾಗಿ ಸೈಟ್‍ನ್ನು ಸಹ ನೀಡಲಾಗುತ್ತದೆ ಎಂದು ಬಿಡಿಎ ರೈತರಿಗೆ ಭರವಸೆ ನೀಡಿತ್ತು.

    ಸದ್ಯ ತನ್ನ ವರಸೆಯನ್ನು ಬದಲಿಸಿಕೊಂಡಿರುವ ಬಿಡಿಎ, ಮಾರುಕಟ್ಟೆ ದರದಲ್ಲಿ ಹಣ ಪಾವತಿಸಿ ಸೈಟ್ ಪಡೆಯಲು ರೈತರಿಗೆ ಸುತ್ತೋಲೆ ಹೊರಡಿಸಿದೆ. ಸುತ್ತೋಲೆ ಪ್ರಕಾರ ಒಂದು ಸೈಟ್ ಅನ್ನು ಪಡೆಯಲು 70 ಲಕ್ಷ ರೂ. ಗಿಂತಲೂ ಅಧಿಕ ಹಣವನ್ನು ನೀಡಬೇಕಾದ ಪರಿಸ್ಥಿತಿ ರೈತರಿಗೆ ಉಂಟಾಗಿದೆ.

    ಇತ್ತ ಜಮೀನು ಇಲ್ಲ, ಸೈಟೂ ಇಲ್ಲ. ಹೀಗಾಗಿ ರೈತರು ಕಂಗಾಲಾಗಿದ್ದು, ಬಿಡಿಎನಲ್ಲಿ ಸೈಟ್ ಸಿಗುತ್ತೆ ನಮ್ಮ ಜಮೀನಿನಲ್ಲಿಯೇ ನಾವು ಮನೆ ಕಟ್ಟಿಕೊಳ್ಳಬಹುದು ಎನ್ನುವ ಭರವಸೆ ಇಟ್ಟುಕೊಂಡಿದ್ದ ರೈತರಿಗೆ ಬಿಡಿಎ ತಣ್ಣೀರೆರಚಿದೆ. ಅಧಿಕಾರಿಗಳು ನಮ್ಮ ಜಮೀನು ಖರೀದಿಸುವಾಗ ಇಲ್ಲ ಸಲ್ಲದ ಆಸೆ ತೋರಿಸಿದ್ದರು. ಆದರೆ ಈಗ ತಮಗೆ ಇಷ್ಟ ಬಂದ ಹಾಗೆ ಕಾನೂನು ಮಾಡುತ್ತಿದ್ದಾರೆ. ಬಿಡಿಎ ಅಧಿಕಾರಿಗಳು ಜನಸಾಮಾನ್ಯರಿಗಾಗಿ ಇದ್ದಾರ ಅಥವಾ ರಿಯಲ್ ಎಸ್ಟೇಟ್ ಬ್ರೋಕರ್‍ಗಳಿಗಾಗಿ ಇದ್ದಾರ ಎಂದು ಭೂಮಿ ಕಳೆದುಕೊಂಡ ರೈತರು ತಮ್ಮ ಆಕ್ರೋಶ ಹೊರಹಾಕಿದ್ದಾರೆ.

    ಸರ್ಕಾರ ಒಂದು ಕಡೆ ರೈತರು ಮಾಡಿರುವ ಸಾಲವನ್ನು ಸಂಪೂರ್ಣವಾಗಿ ಮನ್ನಾ ಮಾಡುತ್ತೇವೆ ಅಂತಾ ಹೇಳುತ್ತಿದೆ. ಆದರೆ ಮತ್ತೊಂದು ಕಡೆ ರೈತರ ಬಳಿ ಲಕ್ಷಾಂತರ ರೂ. ಮೌಲ್ಯದ ಭೂಮಿಯನ್ನು ಸರ್ಕಾರ ಸುಲಿಗೆ ಮಾಡುತ್ತಿದೆ. ಮುಂದೆಯಾದರೂ ರೈತರಿಗೆ ಸುಳ್ಳು ಭರವಸೆಗಳನ್ನ ನೀಡುವುದನ್ನು ಬಿಟ್ಟು ಆಗಿರುವ ಅನ್ಯಾಯಕ್ಕೆ ನ್ಯಾಯ ದೊರಕಿಸಿಕೊಡಬೇಕು ಎನ್ನುವುದೆ ನಮ್ಮ ಆಗ್ರಹ ಎಂದು ರೈತರು ಆಗ್ರಹಿಸಿದ್ದಾರೆ.