Tag: Allied Government

  • ಸಿಎಂ ಗ್ರಾಮ ವಾಸ್ತವ್ಯ ಮೈತ್ರಿ ಸರ್ಕಾರಕ್ಕೆ ಲಾಭ – ಸಿದ್ದರಾಮಯ್ಯ

    ಸಿಎಂ ಗ್ರಾಮ ವಾಸ್ತವ್ಯ ಮೈತ್ರಿ ಸರ್ಕಾರಕ್ಕೆ ಲಾಭ – ಸಿದ್ದರಾಮಯ್ಯ

    ಹುಬ್ಬಳ್ಳಿ: ಇಂದು ಹುಬ್ಬಳ್ಳಿಯ ವಿಮಾನ ನಿಲ್ದಾಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಮಾಜಿ ಸಿಎಂ ಸಿದ್ದರಾಮಯ್ಯ, ಗ್ರಾಮ ವಾಸ್ತವ್ಯ ಕಾರ್ಯಕ್ರಮಗಳು ಈ ಹಿಂದೆಯೇ ಮಾಡಿದ್ದರು. ಈಗಲೂ ಮಾಡುತ್ತಿದ್ದಾರೆ. ಈ ಕಾರ್ಯಕ್ರಮದಿಂದ ನಮ್ಮ ಮೈತ್ರಿ ಸರ್ಕಾರಕ್ಕೆ ಲಾಭವಾಗಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ.

    ನಾನು ದೆಹಲಿಯಲ್ಲಿ ಕಾಂಗ್ರೆಸ್ ಅಧ್ಯಕ್ಷರಿಗೆ ದೂರು ನೀಡಿದ್ದೇನೆ ಎಂದು ಯಾರು ಹೇಳಿದರು. ನಾನು ರಾಹುಲ್‍ಗಾಂಧಿ ಅವರನ್ನ ಮಾತ್ರ ಭೇಟಿಯಾಗಿದ್ದು, ಅವರು ಯಾರಿಗೂ ಏನು ಹೇಳಿಲ್ಲ, ನಾನು ಏನು ಹೇಳಿಲ್ಲ ಎಂದ ಮೇಲೆ ನೀವೇ ಏಕೆ ದೇವೇಗೌಡರು ಈ ರೀತಿ ಹೇಳಿರಬಹುದು, ರಾಹುಲ್ ಗಾಂಧಿ ಹಾಗೇ ಹೇಳಿರಬಹುದು ಎಂದು ಊಹೇ ಮಾಡಿಕೊಳ್ಳುತ್ತಿರಾ. ಈ ಊಹೇ ಪತ್ರಿಕೋದ್ಯಮ ಒಳ್ಳೆಯದಲ್ಲ ಎಂದರು.

    ಮಾಜಿ ಪ್ರಧಾನಿ ಹಾಗೂ ಜೆಡಿಎಸ್ ವರಿಷ್ಠ ದೇವೇಗೌಡರ ಮಧ್ಯಂತರ ಚುನಾವಣಾ ಹೇಳಿಕೆಯ ಬಗ್ಗೆ ಕೇಳಿದಾಗ, ಅವರು ಅ ಹೇಳಿಕೆಗೆ ಆಗಲೇ ಸ್ಪಷ್ಟನೆ ನೀಡಿದ್ದಾರೆ. ಲೋಕಸಭಾ ಚುನಾವಣೆ ವೇಳೆ ಮೈಸೂರ ಕ್ಷೇತ್ರ ನಮಗೆ ಬೇಕು ಅಂದಿದ್ದು ನಿಜ. ಆದರೆ ತುಮಕೂರು ಕ್ಷೇತ್ರವನ್ನು ಒತ್ತಾಯ ಪೂರ್ವಕ ಅವರಿಗೆ ಕೊಟ್ಟಿಲ್ಲ. ತುಮಕೂರು ಅವರು ಕೇಳಿದರು ಅದಕ್ಕೆ ಬಿಟ್ಟುಕೊಡಲಾಗಿತ್ತು ಎಂದು ತಿಳಿಸಿದರು.

    [wonderplugin_video iframe=”https://www.youtube.com/watch?v=7Z2BzrhFEKQ” lightbox=0 lightboxsize=1 lightboxwidth=960 lightboxheight=540 autoopen=0 autoopendelay=0 autoclose=0 lightboxtitle=”” lightboxgroup=”” lightboxshownavigation=0 showimage=”” lightboxoptions=”” videowidth=600 videoheight=400 keepaspectratio=1 autoplay=1 loop=1 videocss=”position:relative;display:block;background-color:#000;overflow:hidden;max-width:100%;margin:0 auto;” playbutton=”https://publictv.in/wp-content/plugins/wonderplugin-video-embed/engine/playvideo-64-64-0.png”]

  • ‘ಕೈ’ ಕೊಟ್ಟು ಕಮಲ ಸೇರ್ತಾರಾ ಸುಧಾಕರ್? ಶಾಸಕರ ತಂದೆ ಸ್ಪಷ್ಟನೆ

    ‘ಕೈ’ ಕೊಟ್ಟು ಕಮಲ ಸೇರ್ತಾರಾ ಸುಧಾಕರ್? ಶಾಸಕರ ತಂದೆ ಸ್ಪಷ್ಟನೆ

    ಚಿಕ್ಕಬಳ್ಳಾಪುರ: ಸಿಎಂ ವಿರುದ್ಧ ಮುನಿಸಿಕೊಂಡಿರುವ ಚಿಕ್ಕಬಳ್ಳಾಪುರ ವಿಧಾನಸಭಾ ಕ್ಷೇತ್ರದ ಅತೃಪ್ತ ಶಾಸಕ ಡಾ ಕೆ. ಸುಧಾಕರ್ ಕಾಂಗ್ರೆಸ್ ಪಕ್ಷಕ್ಕೆ ಕೈ ಕೊಟ್ಟು ಬಿಜೆಪಿ ಸೇರೋದು ಪಕ್ಕನಾ ಅನ್ನೋ ಅನುಮಾನ ಮತ್ತಷ್ಟು ಬಲವಾಗ್ತಿದೆ. ಈ ಅನುಮಾನಗಳಿಗೆ ಪುಷ್ಠಿ ಕೊಡುವಂತೆ, ಸದ್ದಿಲ್ಲದೇ ಶಾಸಕ ಸುಧಾಕರ್ ತಂದೆ ಪಿ.ಎನ್ ಕೇಶವರೆಡ್ಡಿ ಕೆಲ ರಹಸ್ಯ ಸಭೆಗಳನ್ನು ನಡೆಸುತ್ತಿದ್ದು, ಸಮ್ಮಿಶ್ರ ಸರ್ಕಾರದ ವಿರುದ್ಧವೇ ಸಿಡಿದೆದ್ದಿದ್ದಾರೆ.

    ಸತತ ಎರಡನೇ ಬಾರಿಗೆ ಕಾಂಗ್ರೆಸ್ ಶಾಸಕರಾಗಿ ಆಯ್ಕೆಯಾದ ಸುಧಾಕರ್ ಸಮ್ಮಿಶ್ರ ಸರ್ಕಾರದಲ್ಲಿ ಸಚಿವ ಸ್ಥಾನದ ಆಕಾಂಕ್ಷಿ ಆಗಿದ್ದರು. ಆದರೆ ಸಚಿವ ಸ್ಥಾನ ಸಿಗಲಿಲ್ಲ ಎಂದು ಮುನಿಸಿಕೊಂಡಿದ್ದ ಸುಧಾಕರ್ ಪದೇ ಪದೇ ಸರ್ಕಾರದ ವಿರುದ್ಧ ಅಸಮಾಧಾನದ ಮಾತುಗಳನ್ನಾಡುತ್ತಲೇ ಮುಖ್ಯಮಂತ್ರಿಗಳ ಕೆಂಗಣ್ಣಿಗೆ ಗುರಿಯಾಗಿದ್ದರು. ಹೀಗಾಗಿ ಸಮ್ಮಿಶ್ರ ಸರ್ಕಾರದ ವಿರೋಧ ಕಟ್ಟಿಕೊಂಡ ಸುಧಾಕರ್ ಬಿಜೆಪಿ ನಾಯಕರ ಜೊತೆ ಓಡನಾಟ ಹೊಂದಿಕೊಂಡು ಅಪರೇಷನ್ ಕಮಲದತ್ತ ಮುಖ ಮಾಡಿದ್ದಾರೆ ಎಂದು ರಾಜಕೀಯ ಅಂಗಳದಲ್ಲಿ ಹರಿದಾಡುತ್ತಿರುವ ವಿಷಯ.

    ಸರ್ಕಾರ ಉಳಿಸಿಕೊಳ್ಳೋಕೆ ಕೇವಲ ಪಕ್ಷೇತರರಿಗೆ ಸಚಿವ ಸ್ಥಾನ ಕೊಟ್ಟಿರುವುದರಿಂದ ಮತ್ತಷ್ಟು ಅಸಮಾಧಾನಗೊಂಡಿರೋ ಶಾಸಕ ಸುಧಾಕರ್ ಒಳಗೊಳಗೆ ಬಿಜೆಪಿ ಪಕ್ಷ ಸೇರೋಕೆ ರಣತಂತ್ರ ರೂಪಿಸುತ್ತಿದ್ದಾರೆ ಎನ್ನಲಾಗಿದೆ. ಹೀಗಾಗಿ ತಂದೆಯ ನೇತೃತ್ವದಲ್ಲಿ ಇಡೀ ಕ್ಷೇತ್ರದಲ್ಲಿ ಬೆಂಬಲಿಗರ ಜೊತೆ ರಹಸ್ಯ ಸಭೆಗಳನ್ನು ನಡೆಸಿ ಪಕ್ಷ ಬಿಡುವ ಅಭಿಪ್ರಾಯ ಸಂಗ್ರಹಕ್ಕೆ ಮುಂದಾಗಿದ್ದಾರೆ. ಈಗಾಗಲೇ ಕಳೆದ ಎರಡು ದಿನಗಳಿಂದ ಬೆಂಬಲಿಗರ ಜೊತೆ ಸಭೆ ನಡೆಸಿ ಮಾತನಾಡಿರುವ ಶಾಸಕ ಸುಧಾಕರ್ ತಂದೆ ಹಾಲಿ ಜಿಲ್ಲಾ ಪಂಚಾಯತ್ ಸದಸ್ಯ ಹಾಗೂ ಮಾಜಿ ಅಧ್ಯಕ್ಷ ಪಿ.ಎನ್ ಕೇಶವರೆಡ್ಡಿ ಸಮ್ಮಿಶ್ರ ಸರ್ಕಾರದ ವಿರುದ್ಧವೇ ಸಿಡಿದೆದ್ದಿದ್ದು ಸ್ವತಃ ವರಿಷ್ಠರ ವಿರುದ್ಧವೇ ವಾಗ್ದಾಳಿ ನಡೆಸಿದ್ದಾರೆ.

    ಇದರ ಬಗ್ಗೆ ಮಾತನಾಡಿರುವ ಕೇಶವರೆಡ್ಡಿ ಅವರು, ಮೊದಲ ಬಾರಿ ಗೆದ್ದರು ವರಿಷ್ಠರ ಮಕ್ಕಳಿಗೆ ಸಚಿವ ಸ್ಥಾನ ಕೊಡುತ್ತಾರೆ. ಆದರೆ ಎರಡು ಬಾರಿ ಗೆದ್ದರು ನನ್ನ ಮಗನಿಗೆ ಸಚಿವ ಸ್ಥಾನ ಇಲ್ಲ. ಸಿದ್ದರಾಮಯ್ಯ ಸರ್ಕಾರದ ಅವಧಿಯಲ್ಲಿ ಕ್ಷೇತ್ರಕ್ಕೆ ತಂದ ಅನುದಾನ, ಸುಧಾಕರ್ ಮಾಡಿದ ಅಭಿವೃದ್ಧಿ ಕೆಲಸಗಳು ಸದ್ಯ ಸಮ್ಮಿಶ್ರ ಸರ್ಕಾರದಲ್ಲಿ ಮಾಡಲಾಗುತ್ತಿಲ್ಲ. ಸಮ್ಮಿಶ್ರ ಸರ್ಕಾರದಲ್ಲಿ ಕಾಂಗ್ರೆಸ್ ರಾಜ್ಯ ಮಟ್ಟದ ಕೆಲ ನಾಯಕರು ಸ್ವಾರ್ಥಕ್ಕಾಗಿ ಜೆಡಿಎಸ್ ಪಕ್ಷದ ಜೊತೆ ಕೈ ಜೋಡಿಸಿದ್ದಾರೆ ಎಂದು ಮೈತ್ರಿ ಪಕ್ಷದ ವಿರುದ್ಧ ಗುಡುಗಿದರು.

    ನನ್ನ ಮಗ ಸುಧಾಕರ್ ಬೆಳೆದು ಬಿಡುತ್ತಾನೆ ಎಂದು ಸಚಿವ ಸ್ಥಾನ ಕೊಡುತ್ತಾ ಇಲ್ಲ. ನಿಗಮ ಮಂಡಳಿಯೂ ಕೊಡಲಿಲ್ಲ. ಇದಲ್ಲದೇ ಕನಿಷ್ಠ ಕ್ಷೇತ್ರಕ್ಕೆ ಅನುದಾನವನ್ನೇ ಕೊಡದೇ ತಾರತಮ್ಯ ಮಾಡುತ್ತಿದ್ದಾರೆ. ಹೀಗಾಗಿ ನಾವು ಕಾಂಗ್ರೆಸ್ ಪಕ್ಷ ಬಿಟ್ಟು ಬಿಜೆಪಿ ಸೇರೋದಾದ್ರೇ ತಾವೆಲ್ಲಾ ಬೆಂಬಲಿಸುತ್ತಿರಾ ಅನ್ನೋ ಪ್ರಶ್ನೆಯನ್ನು ಬೆಂಬಲಿಗರ ಮುಂದಿಟ್ಟಿದ್ದೇವೆ. ಇದಕ್ಕೆ ಬೆಂಬಲಿಗರೆಲ್ಲರೂ ಕೂಡ ಶಾಸಕರು ಎಲ್ಲಿದ್ರೇ ಅಲ್ಲೇ ನಾವು ಎಂದು ಎಲ್ಲರೂ ಬೆಂಬಲಿಸುತ್ತಿದ್ದಾರೆ ಎಂದು ಹೇಳುವ ಮೂಲಕ ಕಾಂಗ್ರೆಸ್ ಪಕ್ಷ ತೊರೆಯುವ ಸೂಚನೆ ನೀಡಿದ್ದಾರೆ.

    ಒಟ್ಟಿನಲ್ಲಿ ಸಚಿವ ಸ್ಥಾನವೂ ಇಲ್ಲ, ಅತ್ತ ನಿಗಮ ಮಂಡಳಿಯೂ ಕೊಡಲ್ಲ ಎಂದು ಅವಮಾನ ಮಾಡಿದ ಸಮ್ಮಿಶ್ರ ಸರ್ಕಾರದ ನಾಯಕರಿಗೆ ಪಾಠ ಕಲಿಸಲೇಬೇಕು ಎಂದು ಪಣ ತೊಟ್ಟಂತಿರೋ ಶಾಸಕ ಸುಧಾಕರ್ ಈಗ ಪಕ್ಷ ಬಿಡೋಕೆ ಎಲ್ಲಾ ತಯಾರಿಗಳನ್ನು ಮಾಡಿಕೊಳ್ಳುತ್ತಿದ್ದಾರೆ ಅನ್ನೋ ಹಾಗೆ ಭಾಸವಾಗುತ್ತಿದೆ.

  • ಪ್ರಿಯಾಂಕ, ರಾಹುಲ್ ಮಕ್ಕಳಿದ್ದಂತೆ – ಸಂಸದ ಶ್ರೀನಿವಾಸ್‍ಪ್ರಸಾದ್

    ಪ್ರಿಯಾಂಕ, ರಾಹುಲ್ ಮಕ್ಕಳಿದ್ದಂತೆ – ಸಂಸದ ಶ್ರೀನಿವಾಸ್‍ಪ್ರಸಾದ್

    ಚಾಮರಾಜನಗರ: ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಮತ್ತು ಅವರ ಸಹೋದರಿ ಪ್ರಿಯಾಂಕಗಾಂಧಿ ಮಕ್ಕಳಿದ್ದಂತೆ ಎಂದು ಸಂಸದ ಶ್ರೀನಿವಾಸ್‍ಪ್ರಸಾದ್ ಅವರು ವ್ಯಂಗ್ಯವಾಡಿದ್ದಾರೆ.

    ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಚೇ ಪಾಪ ನಾನು ಇದ್ದಾಗ ಮಕ್ಕಳು ರಾಜಕೀಯಕ್ಕೆ ಬಂದಿದ್ದಾರೆ ಎಂದು ಪ್ರಿಯಾಂಕಗಾಂಧಿ ಮತ್ತು ರಾಹುಲ್‍ಗಾಂಧಿಯನ್ನು ವ್ಯಂಗ್ಯವಾಡಿದ್ದಾರೆ.

    ಬಹು ದೊಡ್ಡ ಪ್ರಜಾಪ್ರಭುತ್ವ ರಾಷ್ಟ್ರ ಭಾರತದಲ್ಲಿ ಅವರಿಗೆ ವಿರೋಧ ಪಕ್ಷದಲ್ಲಿ ಕುಳಿತುಕೊಳ್ಳುವುದಕ್ಕೂ ಸ್ಥಾನ ಇಲ್ಲ. ಕಳೆದ ಲೋಕಸಭಾ ಚುನಾವಣೆಯಲ್ಲಿ 44 ಸ್ಥಾನದಿಂದ ಈ ಬಾರಿ ಚುನಾವಣೆಯಲ್ಲಿ 52 ಸ್ಥಾನಕ್ಕೆ ಬಂದಿದ್ದಾರೆ. ಏಕೆ ಪ್ರಿಯಾಂಕಗಾಂಧಿ ಮತ್ತು ರಾಹುಲ್‍ಗಾಂಧಿ ಬಗ್ಗೆ ಮಾತಾನಾಡುತ್ತೀರಾ? ಅವರು ಮೊದಲು ಪಕ್ಷ ಸಂಘಟನೆ ಮಾಡುವ ಕಡೆ ಗಮನಹರಿಸಲಿ ಬಿಡಿ ಎಂದು ಹೇಳಿದರು.

    ಇದೇ ವೇಳೆ ಮೈತ್ರಿ ಸರ್ಕಾರದ ಬಗ್ಗೆ ಮಾತಾನಾಡಿದ ಅವರು, ಮಾಜಿ ಪ್ರಧಾನಿ ದೇವೇಗೌಡರು ಸಿದ್ದರಾಮಯ್ಯ ಬಗ್ಗೆ ಎಷ್ಟು ಸಲ ಅಸಮಾಧಾನ ತೋಡಿಕೊಂಡಿದ್ದಾರೆ ಎಂದು ಎಲ್ಲರಿಗೂ ಗೊತ್ತು. ಸಿದ್ದರಾಮಯ್ಯ ಅವರ ಮೇಲೆ ಚುನಾವಣೆ ಮುನ್ನವೇ ಅಸಮಾಧಾನ ತೋಡಿಕೊಂಡಿದ್ದಾರೆ. ಕುಮಾರ ಪರ್ವ ಆರಂಭ ಆಗಿದ್ದೆ ಚಾಮುಂಡೇಶ್ವರಿ ಕ್ಷೇತ್ರದಿಂದ. ಇದೆಲ್ಲವೂ ಲೋಕಸಭಾ ಫಲಿತಾಂಶದಲ್ಲಿ ಗೊತ್ತಾಗಿದೆ ಎಂದು ಹೇಳಿದರು.

    ದೇವೇಗೌಡರು ಸೋತು ಮನೆಗೆ ಹೋಗಿದ್ದು, ಮಂಡ್ಯದಲ್ಲಿ ಸೋತಿದ್ದು, ಚುನಾವಣೆಯಲ್ಲಿ ಕಾಂಗ್ರೆಸ್ ಮತ್ತು ಜೆಡಿಎಸ್ ಒಂದೊಂದು ಒಂದು ಸ್ಥಾನ ಬಂದಿರೋದು ಇಲ್ಲೇ ದೋಸ್ತಿ ಸರ್ಕಾರದ ಸಾಧನೆ ಏನು ಎನ್ನುವುದು ಗೊತ್ತಾಗುತ್ತದೆ ಎಂದು ತಿಳಿಸಿದರು.

  • ಮೈತ್ರಿ ಸರ್ಕಾರದ ಪರಿಸ್ಥಿತಿ ಹೆಂಡತಿ ಸತ್ತ ಗಂಡನ ಲವ್ ಮ್ಯಾರೇಜ್‍ನಂತಿದೆ – ಲಕ್ಷ್ಮಣ ಸವದಿ

    ಮೈತ್ರಿ ಸರ್ಕಾರದ ಪರಿಸ್ಥಿತಿ ಹೆಂಡತಿ ಸತ್ತ ಗಂಡನ ಲವ್ ಮ್ಯಾರೇಜ್‍ನಂತಿದೆ – ಲಕ್ಷ್ಮಣ ಸವದಿ

    ಬೆಳಗಾವಿ: ರಾಜ್ಯ ಮೈತ್ರಿ ಸರ್ಕಾರದ ಪರಿಸ್ಥಿತಿ ಗಂಡ ಬಿಟ್ಟ ಹೆಂಡತಿ ಮತ್ತು ಹೆಂಡತಿ ಸತ್ತ ಗಂಡನ ಲವ್ ಮ್ಯಾರೇಜ್‍ನಂತಿದೆ ಎಂದು ಅಥಣಿ ಮಾಜಿ ಶಾಸಕ ಲಕ್ಷ್ಮಣ ಸವದಿ ವ್ಯಂಗ್ಯವಾಡಿದ್ದಾರೆ.

    ಅಥಣಿ ಪಟ್ಟಣದಲ್ಲಿರುವ ತಮ್ಮ ಸ್ವಗೃಹದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಮೈತ್ರಿ ಸರ್ಕಾರ ಸದ್ಯ ಹೊಸದಾಗಿ ಮದುವೆಯಾದ ಗಂಡ ಹೆಂಡತಿಯಂತಿದೆ. ಸರ್ಕಾರದಲ್ಲಿ ಒಬ್ಬರಿಗೊಬ್ಬರು ತಾಳ ತಂತಿ ಇಲ್ಲ ಹೊಂದಾಣಿಕೆ ಇಲ್ಲ ಎಂದು ಲೇವಡಿ ಮಾಡಿದರು.

    ಮೈತ್ರಿ ಸರ್ಕಾರ ಅಧಿಕಾರಕ್ಕೆ ಬಂದು ಒಂದು ವರ್ಷವಾದರೂ ಸಹ ಯಾವುದೇ ಹೊಸ ಯೋಜನೆ ಇಲ್ಲ. ರಾಜ್ಯ ಸರ್ಕಾರದವರು ನರೇಗಾ ಯೋಜನೆಯಲ್ಲಿ ಕೆಲಸ ಮಾಡಿಸಿ ಅಂತ ಹೇಳುತ್ತಾರೆ. ಆದರೆ ಆ ಯೋಜನೆ ಕೇಂದ್ರ ಸರ್ಕಾರದ್ದು. ಹಾಗಾದರೆ ಇವರ ಕೊಡುಗೆ ಏನು ಎಂದು ಪ್ರಶ್ನಿಸಿವ ಮೂಲಕ ಮೈತ್ರಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡರು.

    ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೂ ಹಾಗೂ ಮಾಜಿ ಪ್ರಧಾನಿ ದೇವೇಗೌಡರಿಗೂ 20 ವರ್ಷಗಳ ಹಳೆಯ ರಾಜಕೀಯ ದ್ವೇಷವಿದೆ. 2004 ರಲ್ಲಿ ಸಿದ್ದರಾಮಯ್ಯಗೆ ಮುಖ್ಯಮಂತ್ರಿಯಾಗುವ ಅವಕಾಶವಿತ್ತು ಆದರೆ ದೇವೇಗೌಡರು ಅದಕ್ಕೆ ಅಡ್ಡಗಾಲು ಹಾಕಿ ಆ ಅವಕಾಶ ಕಸಿದುಕೊಂಡಿದ್ದರು. ತಮ್ಮಿಂದ ಸಿಎಂ ಸ್ಥಾನ ಕಸಿದಿದ್ದಕ್ಕೆ ಸಿದ್ದು ಅವರ ಜೊತೆ ಮೈತ್ರಿ ಮಾಡಿಕೊಂಡು ದ್ವೇಷದ ರಾಜಕಾರಣ ಮಾಡುತ್ತಿದ್ದಾರೆ. ಆ ಒಂದು ಆಕ್ರೋಶದಿಂದಲೇ ಸಿದ್ದರಾಮಯ್ಯ ಗೌಡರ ವಿರುದ್ಧ ಸೇಡು ತೀರಿಸಿಕೊಳ್ಳುತ್ತಿದ್ದಾರೆ. ಸಿದ್ದರಾಮಯ್ಯನವರ ರಾಜಕೀಯ ಒಳ ಸುಳಿವು ನೋಡಿದಾಗ ಇದೆಲ್ಲ ಗೊತ್ತಾಗುತ್ತದೆ ಎಂದು ಲಕ್ಷ್ಮಣ ಸವದಿ ಹೇಳಿದರು.

  • ಅನುಕಂಪ, ಮೋದಿ ಅಲೆಯಿಂದ ಸುಮಲತಾ ಗೆದ್ದಿದ್ದಾರೆ ಹೊರತು ಕೈ ಬೆಂಬಲದಿಂದಲ್ಲ – ರವೀಂದ್ರ ಶ್ರೀಕಂಠಯ್ಯ

    ಅನುಕಂಪ, ಮೋದಿ ಅಲೆಯಿಂದ ಸುಮಲತಾ ಗೆದ್ದಿದ್ದಾರೆ ಹೊರತು ಕೈ ಬೆಂಬಲದಿಂದಲ್ಲ – ರವೀಂದ್ರ ಶ್ರೀಕಂಠಯ್ಯ

    ಮಂಡ್ಯ: ಈ ಬಾರಿಯ ಚುನಾವಣೆಯಲ್ಲಿ ಅಂಬರೀಶ್ ಸಾವಿನ ಅನುಕಂಪ, ಮೋದಿ ಸರ್ಕಾರದ ಬೆಂಬಲದಿಂದ ಸುಮಲತಾ ಗೆದ್ದಿದ್ದಾರೆ. ಅದನ್ನು ಬಿಟ್ಟರೆ ಕಾಂಗ್ರೆಸ್ಸಿಗರ ಬೆಂಬಲದಿಂದ ಸುಮಲತಾ ಗೆದ್ದಿಲ್ಲ ಎಂದು ಶಾಸಕ ರವೀಂದ್ರ ಶ್ರೀಕಂಠಯ್ಯ ಹೇಳಿದ್ದಾರೆ.

    ಕಾಂಗ್ರೆಸ್ ಕಾರ್ಯಕರ್ತರಿಗೆ ಹಾಗೂ ನಮಗೂ ಮಂಡ್ಯದಲ್ಲಿ ರಕ್ಷಣೆ ಇಲ್ಲ ಎಂದು ಹೇಳಿಕೆ ನೀಡಿದ್ದ ಶ್ರೀರಂಗಪಟ್ಟಣ ಮಾಜಿ ಶಾಸಕ ರಮೇಶ್ ಬಂಡಿಸಿದ್ದೇಗೌಡರಿಗೆ ಟಾಂಗ್ ನೀಡಿದ ರವೀಂದ್ರ ಅವರು, ಹಾಗೆ ಯಾರಾದರೂ ಹೊಡೆಯಲು ಬಂದರೆ ನನಗೆ ತಿಳಿಸಲಿ ನಾನು ಭದ್ರತೆ ಕೊಡಿಸುತ್ತೇನೆ. ಅಗಲೇ ಮೂರು ಗನ್ ಮ್ಯಾನ್‍ಗಳು ಅವರ ಜೊತೆ ಇದ್ದಾರೆ ಬೇಕಾದರೆ ಇನ್ನೂ ಇಬ್ಬರನ್ನು ಕಳಿಸುತ್ತೇನೆ ಎಂದು ಹೇಳಿದರು.

    ಕೇಂದ್ರಕ್ಕೆ ಸಂಬಂಧಿಸಿದ ಚುನಾವಣೆಯಲ್ಲಿ ಬಿಜೆಪಿ ಮುನ್ನಡೆ ಸಾಧಿಸಿದೆ. ಆದರೆ ರಾಜ್ಯ ಚುನಾವಣೆಯಲ್ಲಿ ಮತದಾರರು ಮೈತ್ರಿ ಸರ್ಕಾರದ ಪರ ಇದ್ದಾರೆ ಎನ್ನುವುದು ಸಾಬೀತಾಗಿದೆ. ಮೋದಿ ಪ್ರಭಾವಿ ವ್ಯಕ್ತಿ ಅವರ ನೇತೃತ್ವದಲ್ಲಿ ಬಿಜೆಪಿ ಅವರು ಆಪರೇಷನ್ ಕಮಲಕ್ಕೆ ಕೈ ಹಾಕಲ್ಲ ಎಂದುಕೊಂಡಿದ್ದೇನೆ. ಆಪರೇಷನ್ ಕಮಲ ಸತ್ಯಕ್ಕೆ ದೂರವಾದ ವಿಚಾರ ಆಪರೇಷನ್ ಕಮಲದ ಟೇಬಲ್ ತೆಗೆಯಲಾಗಿದೆ, ಲೈಟ್ ಆಫ್ ಆಗಿದೆ ಎಂದು ಟೀಕೆ ಮಾಡಿದರು.

    ನಾನು ಜೆಡಿಎಸ್ ಶಾಸಕ ನನ್ನ ನಿಲುವು ಪಕ್ಷದ ಪರ ಹಾಗೂ ದೇವೇಗೌಡ ಮತ್ತು ಕುಮಾರಸ್ವಾಮಿ ಪರ ಇರುತ್ತದೆ. ಶ್ರೀರಂಗಪಟ್ಟಣ ಪುರಸಭೆ ಫಲಿತಾಂಶ ಜೆಡಿಎಸ್ ಪರ ಬಂದಿರೋದು ಸಂತಸ ತಂದಿದೆ. ರಾಜ್ಯದಲ್ಲಿ ಕುಮಾರಸ್ವಾಮಿ ಕೈ ಬಲಪಡಿಸಲು ಸ್ಥಳೀಯ ಸಂಸ್ಥೆ ಜೆಡಿಎಸ್ ಪರ ಬಂದಿದೆ ಎಂದು ಸಂತಸ ವ್ಯಕ್ತಪಡಿಸಿದರು.

  • ನಾನು ಕಾಂಗ್ರೆಸ್ಸಿನಲ್ಲೇ ಇರಬೇಕೇ – ಕಾರ್ಯಕರ್ತರ ಬಳಿ ಕೌರವ ಪ್ರಶ್ನೆ

    ನಾನು ಕಾಂಗ್ರೆಸ್ಸಿನಲ್ಲೇ ಇರಬೇಕೇ – ಕಾರ್ಯಕರ್ತರ ಬಳಿ ಕೌರವ ಪ್ರಶ್ನೆ

    ಹಾವೇರಿ: ಮೈತ್ರಿ ಸರ್ಕಾರ ರಚನೆಯಾಗಿ ಒಂದು ವರ್ಷ ಕಳೆದಿದ್ದು ಸತತ ಮೂರು ಬಾರಿ ಎಂಎಲ್‍ಎ ಆಗಿ ಅಯ್ಕೆಯಾಗಿರುವ ಹಿರೇಕೆರೂರು ಕ್ಷೇತ್ರದ ಕಾಂಗ್ರೆಸ್ ಶಾಸಕ ಬಿ.ಸಿ ಪಾಟೀಲ್‍ಗೆ ಸಚಿವ ಸ್ಥಾನ ದೊರಕುತ್ತಿಲ್ಲ. ಇದರಿಂದ ಬೇಸರಗೊಂಡಿರುವ ಪಾಟೀಲ್ ಈಗ ಬಿಜೆಪಿ ಸೇರುತ್ತಾರಾ ಎಂಬ ಪ್ರಶ್ನೆ ಎಲ್ಲ ಕಡೆ ಚರ್ಚೆಯಾಗುತ್ತಿದೆ.

    ಈ ಹಿಂದೆ ಸಚಿವ ಸ್ಥಾನದ ಸಿಗದೇ ಇರುವ ಕಾರಣ ಬಿ.ಸಿ ಪಾಟೀಲ್ ಅವರು ಮೈತ್ರಿ ಸರ್ಕಾರದ ಮೇಲೆ ನೇರವಾಗಿಯೇ ಅಸಮಾಧಾನ ಹೊರಹಾಕಿದ್ದರು. ಈಗ ಲೋಕಸಭಾ ಚುನಾವಣೆಯ ಫಲಿತಾಂಶ ಬಂದ ಬಳಿಕ ಮತ್ತೆ ಮೈತ್ರಿ ಸರ್ಕಾರದ ವಿರುದ್ಧ ಅಸಮಾಧಾನಗೊಂಡಿರುವ ಅವರು ಈಗ ಕಾಂಗ್ರೆಸ್ ಪಕ್ಷದಲ್ಲಿ ಇರಬೇಕಾ? ಬೇಡವೇ ಎಂದು ಕ್ಷೇತ್ರದ ಕಾರ್ಯಕರ್ತರನ್ನು ಮತ್ತು ಕೆಲ ಶಾಸಕರನ್ನು ಕೇಳುತ್ತಿದ್ದಾರೆ ಎನ್ನಲಾಗಿದೆ.

    ಹಾವೇರಿ ಜಿಲ್ಲೆ ಹಿರೇಕೆರೂರು ಕ್ಷೇತ್ರದಿಂದ ಮೊದಲ ಬಾರಿ ಜೆಡಿಎಸ್‍ನಿಂದ ಶಾಸಕರಾಗಿದ್ದ ಪಾಟೀಲ್, ನಂತರ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾಗಿ ಎರಡು ಬಾರಿ ಶಾಸಕರಾಗಿ ಆಯ್ಕೆ ಆಗಿದ್ದಾರೆ. ಹೀಗೆ ಮೂರು ಬಾರಿ ಎಂಎಲ್‍ಎ ಆಗಿ ಆಯ್ಕೆಯಾಗಿದ್ದರೂ ಸಚಿವ ಸ್ಥಾನ ಸಿಕ್ಕಿರಲಿಲ್ಲ. ಆದರೆ ಕಾಂಗ್ರೆಸ್ ಜೆಡಿಎಸ್ ಮೈತ್ರಿ ಸರ್ಕಾರದಲ್ಲಿ ಮಂತ್ರಿ ಸ್ಥಾನದ ಪ್ರಬಲ ಆಕಾಂಕ್ಷಿಯಾಗಿದ್ದ ಬಿ.ಸಿ ಪಾಟೀಲ್, ಸಚಿವ ಸ್ಥಾನ ನೀಡದ ಮೈತ್ರಿ ಸರ್ಕಾರದ ಮೇಲೆ ಮೊದಲಿನಿಂದಲೂ ಅಸಮಾಧಾನಗೊಂಡಿದ್ದರು. ಉತ್ತರ ಕರ್ನಾಟಕ ಭಾಗದಲ್ಲಿ ವೀರಶೈವ ಲಿಂಗಾಯತರಿಗೆ ಕಾಂಗ್ರೆಸ್ ಪಕ್ಷ ಭಾರೀ ಅನ್ಯಾಯ ಮಾಡಿದೆ. ವೀರಶೈವ ಲಿಂಗಾಯತರಿಗೆ ಏಕೆ ಮಂತ್ರಿ ಸ್ಥಾನವನ್ನು ನೀಡಿಲ್ಲ ಎಂದು ಬಹಿರಂಗವಾಗಿ ಹೇಳುವ ಮೂಲಕ ತಮ್ಮ ಅಸಮಾಧಾನವನ್ನು ಹೊರಹಾಕಿದ್ದರು.

    ಮೂರು ದಿನಗಳ ಹಿಂದೆ ಲೋಕಸಭಾ ಚುನಾವಣೆಯ ಫಲಿತಾಂಶ ಬಂದಿದೆ. ರಾಜ್ಯ ಹಾಗೂ ದೇಶದಲ್ಲಿ ಮೋದಿ ಅಲೆಗೆ ಕಾಂಗ್ರೆಸ್ ಧೂಳೀಪಟವಾಗಿದೆ. ಈ ಹಿನ್ನೆಲೆಯಲ್ಲಿ ಆಪರೇಷನ್ ಕಮಲ ಮತ್ತು ಅತೃಪ್ತ ಶಾಸಕರು ಚುರುಕುಗೊಂಡಿದ್ದಾರೆ. ಮತ್ತೆ ರೆಸಾರ್ಟ್ ರಾಜಕಾರಣ ಪ್ರಾರಂಭವಾಗಿದೆ. ಈ ಸಮಯದಲ್ಲೇ ಬಿ.ಸಿ ಪಾಟೀಲ್ ಲೋಕಸಭಾ ಚುನಾವಣೆಯಲ್ಲಿ ವೀರಶೈವ ಲಿಂಗಾಯತರನ್ನು ಕಾಂಗ್ರೆಸ್ ಪಕ್ಷದವರು ಕಡೆಗಣಿಸಿದ್ದಾರೆ. ಆದರ ಪ್ರತಿಫಲ ಲೋಕಸಭಾ ಚುನಾವಣೆಯ ಫಲಿತಾಂಶ ಬಿಜೆಪಿ ಕಡೆಗೆ ಬಂದಿದೆ. ಹಾಗಾಗಿ ಕ್ಷೇತ್ರದ ಜನರ ತೀರ್ಮಾನವನ್ನು ಕೇಳುತ್ತಿದ್ದೇನೆ ಅವರು ಏನೂ ತೀರ್ಮಾನ ನೀಡುತ್ತಾರೆ ನೋಡೋಣ ಎಂದು ಹೇಳಿದ್ದರು. ಆದರೆ ಕೆಲವು ಕಾರ್ಯಕರ್ತರು ಬಿಜೆಪಿ ಪಕ್ಷಕ್ಕೆ ಹೋಗಿ ಎಂದು ಹೇಳಿದ್ದರೆ, ಇನ್ನೂ ಕೆಲವು ಕಾರ್ಯಕರ್ತರು ನಮ್ಮ ಸಿದ್ದಾಂತ ಬೇರೆ ಹಾಗಾಗಿ ಬಿಜೆಪಿ ಹೋಗುವುದು ಬೇಡ ಎಂದು ಸಲಹೆ ನೀಡಿದ್ದಾರಂತೆ.

    ಈ ಎಲ್ಲಾ ವಿದ್ಯಮಾನಗಳು ನೋಡಿದರೆ ಮೈತ್ರಿ ಸರ್ಕಾರದಲ್ಲಿ ಸಚಿವ ಸ್ಥಾನ ಸಿಗದೇ ಹೋದರೆ ಬಿ.ಸಿ ಪಾಟೀಲ್ ಬಿಜೆಪಿಗೆ ಹೋಗುತ್ತಾರೆ ಎನ್ನುವ ಗುಸುಗುಸು ಮಾತುಗಳು ಬಹಳ ಚರ್ಚೆ ಆಗುತ್ತಿವೆ. ಆದರೆ ಬಿಸಿ.ಪಾಟೀಲ್ ಮಾತ್ರ ಕಾದುನೋಡುವ ತಂತ್ರ ಅನುಸರಿಸಿ ಅಡ್ಡಗೋಡೆಯ ಮೇಲೆ ದೀಪ ಇಡುವ ಕೆಲಸ ಮಾಡುತ್ತಿದ್ದಾರೆ.

  • ದಿನಕ್ಕೆ 18 ಗಂಟೆ ಕೆಲ್ಸ: ಮಗನ ಆರೋಗ್ಯದ ಬಗ್ಗೆ ಎಚ್‍ಡಿಡಿ ಆತಂಕ

    ದಿನಕ್ಕೆ 18 ಗಂಟೆ ಕೆಲ್ಸ: ಮಗನ ಆರೋಗ್ಯದ ಬಗ್ಗೆ ಎಚ್‍ಡಿಡಿ ಆತಂಕ

    ಬೆಂಗಳೂರು: ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಆರೋಗ್ಯದ ಬಗ್ಗೆ ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ ಅವರು ಆತಂಕ ವ್ಯಕ್ತಪಡಿಸಿದ್ದಾರೆ.

    ನಗರದ ಜೆಡಿಎಸ್ ಭವನದಲ್ಲಿ ಆಯೋಜಿಸಿದ್ದ ಅಭಿನಂದನಾ ಸಮಾರಂಭದಲ್ಲಿ ಮಾತನಾಡಿದ ಅವರು, ಕುಮಾರಣ್ಣ ಬೆಳಗ್ಗೆಯಿಂದ ರಾತ್ರಿವರೆಗೆ ಕೆಲಸ ಮಾಡುತ್ತಿರುವ ಕಾರಣ ಗ್ರಾಮವಾಸ್ತವ್ಯ ಮಾಡಲು ಸಮಯ ಸಿಗುತ್ತಿಲ್ಲ. 18 ಗಂಟೆ ಗಂಟೆಗಳ ಕಾಲ ಕೆಲಸ ಮಾಡುವ ಕಾರಣ ಆರೋಗ್ಯದ ಬಗ್ಗೆ ನನಗೆ ಆತಂಕವಾಗುತ್ತಿದೆ ಎಂದು ಮಗನ ಬಗ್ಗೆ ದೇವೇಗೌಡರು ಕಾಳಜಿ ವ್ಯಕ್ತಪಡಿಸಿದ್ದಾರೆ.

    ನಮ್ಮನ್ನು ಜನ ಕೈಬಿಟ್ಟರೂ, ನಾವು ಕೊಟ್ಟ ಮಾತು ಬಿಡೊಲ್ಲ ಎಂದು ಭಾವಿಸಿ ಕುಮಾರಸ್ವಾಮಿ ರೈತರ ಸಾಲಮನ್ನಾ ಮಾಡಿದ್ದಾರೆ. ಒಂದು ಕಡೆಗೆ ಮಾಜಿ ಸ್ನೇಹಿತರ ಅಸಹಕಾರ, ಮತ್ತೊಂದು ಕಡೆ ವಿಧಾನಸಭೆಯಲ್ಲಿ ಹೋರಾಟ ಮಾಡುವ ಸ್ಥಿತಿ ಇದೆ. ಈ ಬೆಳವಣಿಗೆಯನ್ನು ನಾನು ಸೂಕ್ಷ್ಮವಾಗಿ ಗಮನಿಸುತ್ತಿರುವೆ ಎಂದು ದೇವೇಗೌಡರು ಅಸಮಾಧಾನ ಹೊರ ಹಾಕಿದರು.

    ನಾನು ವಿಶ್ರಾಂತಿ ಪಡೆಯಲ್ಲ, ಹೋರಾಟಕ್ಕೆ ಸಿದ್ಧವಾಗಿರುವೆ. ಮತ್ತೆ ನಾವೆಲ್ಲರೂ ಹೋರಾಟ ಮಾಡೋಣ. ಆದರೆ ಮೈತ್ರಿ ಸರ್ಕಾರಕ್ಕೆ ಕುಂದು ಬಾರದಂತೆ ನಡೆದುಕೊಳ್ಳಬೇಕು ಎಂದು ಪಕ್ಷದ ಕಾರ್ಯಕರ್ತರು ಹಾಗೂ ಮುಖಂಡರಿಗೆ ಕರೆಕೊಟ್ಟರು.

    ಸಮ್ಮಿಶ್ರ ಸರ್ಕಾರದ ಜವಾಬ್ದಾರಿಯನ್ನು ಕುಮಾರಸ್ವಾಮಿ ಹೊತ್ತಿದ್ದಾರೆ. ಆದರೆ ರಾಜ್ಯದ ಜನರು ಅವರನ್ನು ಗುರುತಿಸಿಲ್ಲ. ಕುಮಾರಸ್ವಾಮಿ ಕಳೆದ 3 ವರ್ಷಗಳಿಂದ ರಾಜ್ಯಾದಂತ ಪ್ರವಾಸ ಮಾಡಿದ್ದಾರೆ. ನಮ್ಮ ಪಕ್ಷ 100 ಕ್ಕೂ ಹೆಚ್ಚು ಮತಕ್ಷೇತ್ರಗಳಲ್ಲಿ ಗೆಲುವು ಸಾಧಿಸುತ್ತದೆ ಎನ್ನುವ ಭರವಸೆ ಇತ್ತು. ಆದರೆ ಅದು ಆಗಲಿಲ್ಲ. ಈಗ ಜನರ ತೀರ್ಪನ್ನು ತಲೆಬಾಗಿ ಒಪ್ಪಿಕೊಂಡಿದ್ದೇವೆ. ಸೋಲಿಗೆ ಕಾರ್ಯಕರ್ತರಲ್ಲಿ ದೋಷಗಳು ಕಾರಣವಾಗಿದ್ದರೆ ಅದನ್ನು ತಿದ್ದಿಕೊಳ್ಳಬೇಕು ಎಂದು ಸಲಹೆ ನೀಡಿದರು.

    2018ರ ವಿಧಾನಸಭೆ ಚುನಾವಣೆಯಲ್ಲಿ 20 ತಿಂಗಳ ಕಾರ್ಯಕ್ರಮಗಳನ್ನು ಜನರಿಗೆ ತಿಳಿಸುವಲ್ಲಿ ನಮ್ಮ ಕಾರ್ಯಕರ್ತರು ವಿಫಲರಾಗಿದ್ದಾರೆ. ಮುಂದಿನ ದಿನಗಳಲ್ಲಿ ಇದನ್ನು ಸರಿಪಡಿಸಿಕೊಳ್ಳಬೇಕು. ನಾವು ಕಾಂಗ್ರೆಸ್ ಪಕ್ಷವನ್ನು ದೂರಲು ಸಾಧ್ಯವಿಲ್ಲ. ಮೈತ್ರಿ ಸರ್ಕಾರ ನಡೆಸಿಕೊಂಡು ಹೋಗುವುದು ತುಂಬ ಕಷ್ಟ. ವಿರೋಧ ಪಕ್ಷದಲ್ಲಿ 104 ಜನ ಇರುವುದು ಕರ್ನಾಟಕ ಇತಿಹಾಸದಲ್ಲೆ ಇದೇ ಮೊದಲು. ಬಿಜೆಪಿಯವರನ್ನು ಎದುರಿಸುವ ಶಕ್ತಿ ಬೆಳೆಸಿಕೊಳ್ಳಬೇಕು ಎಂದು ಹೇಳಿದರು.