Tag: alvas college

  • ಆಳ್ವಾಸ್ ಕಾಲೇಜಿನಲ್ಲಿ ಬೆಂಗ್ಳೂರು ವಿದ್ಯಾರ್ಥಿನಿ ಆತ್ಮಹತ್ಯೆ

    ಆಳ್ವಾಸ್ ಕಾಲೇಜಿನಲ್ಲಿ ಬೆಂಗ್ಳೂರು ವಿದ್ಯಾರ್ಥಿನಿ ಆತ್ಮಹತ್ಯೆ

    ಮಂಗಳೂರು: ಮೂಡಬಿದಿರೆಯ ಪ್ರಸಿದ್ಧ ಆಳ್ವಾಸ್ ಕಾಲೇಜಿನಲ್ಲಿ ಬೆಂಗಳೂರು ಮೂಲದ ವಿದ್ಯಾರ್ಥಿನಿ ಆತ್ಮಹತ್ಯೆಗೆ ಶರಣಾಗಿದ್ದಾಳೆ.

    ಬೆಂಗಳೂರಿನ ಆನೆಕಲ್ ನಿವಾಸಿ ವಿನುತಾ(18) ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿನಿ. ವಿನುತಾ ಪಿಯುಸಿ ವ್ಯಾಸಂಗ ಮಾಡುತ್ತಿದ್ದಳು. ಆದರೆ ವಿನುತಾ ಇಂದು ಬೆಳಗ್ಗೆ ಕಾಲೇಜಿಗೆ ಹೋಗದೆ ಹಾಸ್ಟೆಲಿನಲ್ಲಿ ಯಾರು ಇಲ್ಲದ ವೇಳೆ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾಳೆ. ಬಳಿಕ ಆಕೆಯ ಸ್ನೇಹಿತರು ಹಾಸ್ಟೆಲಿಗೆ ಬಂದಾಗ ಈ ಪ್ರಕರಣ ಬೆಳಕಿಗೆ ಬಂದಿದೆ.

    ಈ ಬಗ್ಗೆ ಮಾಹಿತಿ ತಿಳಿದು ಮಂಗಳೂರಿನ ಮೂಡಬಿದಿರೆ ಪೊಲೀಸರು ಘಟನೆ ನಡೆದ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ. ವಿದ್ಯಾರ್ಥಿನಿ ಆತ್ಮಹತ್ಯೆ ಮಾಡಿಕೊಂಡಿದ್ದು ಯಾಕೆ ಎನ್ನುವುದು ತಿಳಿದು ಬಂದಿಲ್ಲ. ಈ ಕುರಿತು ಮೂಡಬಿದಿರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

    ಈ ಹಿಂದೆ ಇದೇ ಕಾಲೇಜಿನಲ್ಲಿ ಓದುತ್ತಿದ್ದ ಕಾವ್ಯಾ ಪೂಜಾರಿ ಆತ್ಮಹತ್ಯೆ ಮಾಡಿಕೊಂಡಿದ್ದಳು. ಈ ಸುದ್ದಿ ರಾಜ್ಯಾದ್ಯಂತ ಚರ್ಚೆಗೆ ಕಾರಣವಾಗಿತ್ತು.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

  • ಪರೀಕ್ಷೆ ಬಳಿಕ ಹಾಸ್ಟೆಲ್‍ನಲ್ಲಿ ಪಾರ್ಟಿ-ಆಳ್ವಾಸ್ ಕಾಲೇಜು ಸಿಬ್ಬಂದಿಯಿಂದ ವಿದ್ಯಾರ್ಥಿಗಳಿಗೆ ಥಳಿತ

    ಪರೀಕ್ಷೆ ಬಳಿಕ ಹಾಸ್ಟೆಲ್‍ನಲ್ಲಿ ಪಾರ್ಟಿ-ಆಳ್ವಾಸ್ ಕಾಲೇಜು ಸಿಬ್ಬಂದಿಯಿಂದ ವಿದ್ಯಾರ್ಥಿಗಳಿಗೆ ಥಳಿತ

    ಮಂಗಳೂರು: ಮೂಡುಬಿದ್ರೆಯ ಆಳ್ವಾಸ್ ಕಾಲೇಜಿನಲ್ಲಿ ಮತ್ತೊಂದು ಎಡವಟ್ಟು ಮರುಕಳಿಸಿದೆ. ಹಾಸ್ಟೆಲ್ ನಲ್ಲಿದ್ದ ವಿದ್ಯಾರ್ಥಿಗಳಿಗೆ ಕಾಲೇಜು ಸಿಬ್ಬಂದಿ ಸೇರಿ ಯದ್ವಾತದ್ವಾ ಹೊಡೆದಿದ್ದಾರೆ.

    ಶನಿವಾರ ರಾತ್ರಿ ಕಾಲೇಜಿನ ಪುಷ್ಪಗಿರಿ ಹಾಸ್ಟೆಲ್ ನಲ್ಲಿ ಘಟನೆ ನಡೆದಿದ್ದು, ಸಿಬ್ಬಂದಿ ಕೃತ್ಯ ವಿರೋಧಿಸಿ ವಿದ್ಯಾರ್ಥಿಗಳು ಇಂದು ಬೆಳಗ್ಗಿನಿಂದಲೇ ಪ್ರತಿಭಟನೆ ಆರಂಭಿಸಿದ್ದಾರೆ.

    ಪರೀಕ್ಷೆ ಮುಗಿದ ಹಿನ್ನೆಲೆಯಲ್ಲಿ ಕೆಲವು ವಿದ್ಯಾರ್ಥಿಗಳು ಸೇರಿ ಹಾಸ್ಟೆಲ್ ನಲ್ಲಿ ಸಂಭ್ರಮಾಚರಣೆ ನಡೆಸುತ್ತಿದ್ದರು. ಆದರೆ ಇದಕ್ಕೆ ವಾರ್ಡನ್ ಮತ್ತು ಸಿಬ್ಬಂದಿ ಆಕ್ಷೇಪ ವ್ಯಕ್ತಪಡಿಸಿದ್ದರು ಎನ್ನಲಾಗಿದೆ. ಮತ್ತೊಬ್ಬ ವಿದ್ಯಾರ್ಥಿಯ ಮಾಹಿತಿ ಪ್ರಕಾರ, ಊಟದ ವಿಚಾರದಲ್ಲಿ ವಿದ್ಯಾರ್ಥಿಗಳು ಸಿಬ್ಬಂದಿಯನ್ನು ಪ್ರಶ್ನೆ ಮಾಡಿದ್ದರಂತೆ. ಇದೇ ನೆಪ ಇಟ್ಟುಕೊಂಡು ವಾರ್ಡನ್ ಮತ್ತು ಇತರೇ ಕಾಲೇಜು ಸಿಬ್ಬಂದಿ ಸೇರಿ ರಾತ್ರಿ ವಿದ್ಯಾರ್ಥಿಗಳ ಮೇಲೆ ಹಲ್ಲೆ ನಡೆಸಿದ್ದಾರೆ.

    20ಕ್ಕಿಂತಲೂ ಹೆಚ್ವು ವಿದ್ಯಾರ್ಥಿಗಳ ಮೇಲೆ ತೀವ್ರವಾಗಿ ಥಳಿಸಿದ್ದಾರೆ. ಥಳಿಸುವ ವಿಡಿಯೋವನ್ನು ಸ್ವತಃ ವಿದ್ಯಾರ್ಥಿಗಳೇ ತಮ್ಮ ಮೊಬೈಲಿನಲ್ಲಿ ಚಿತ್ರೀಕರಿಸಿ, ಮಾಧ್ಯಮಕ್ಕೆ ನೀಡಿದ್ದಾರೆ. ಘಟನೆ ಬಗ್ಗೆ ವಿದ್ಯಾರ್ಥಿಗಳ ಹೆತ್ತವರು ಮೂಡುಬಿದಿರೆ ಪೊಲೀಸರಿಗೆ ದೂರು ನೀಡಿದ್ದಾರೆ. ಸದ್ಯ ಥಳಿಸಿದ ವಿಚಾರದಲ್ಲಿ ಪೊಲೀಸರು ಮತ್ತು ವಿದ್ಯಾರ್ಥಿಗಳ ನಡುವೆ ಕಾಲೇಜು ಕ್ಯಾಂಪಸ್ ನಲ್ಲಿ ಜಟಾಪಟಿ ನಡೀತಿದೆ.

  • ವಿದ್ಯಾರ್ಥಿನಿ ಕಾವ್ಯಶ್ರೀ ನಿಗೂಢ ಸಾವು ಪ್ರಕರಣ: ಆಳ್ವಾಸ್ ಬೆನ್ನಿಗೆ ನಿಂತ ಎಚ್‍ಡಿಕೆ

    ವಿದ್ಯಾರ್ಥಿನಿ ಕಾವ್ಯಶ್ರೀ ನಿಗೂಢ ಸಾವು ಪ್ರಕರಣ: ಆಳ್ವಾಸ್ ಬೆನ್ನಿಗೆ ನಿಂತ ಎಚ್‍ಡಿಕೆ

    ಉಡುಪಿ: ಬ್ಯಾಡ್ಮಿಂಟನ್ ಆಟಗಾರ್ತಿ ಕಾವ್ಯ ಶ್ರೀ ನಿಗೂಢ ಸಾವಿನ ಪ್ರಕರಣ ಇದೀಗ ದಿನಕ್ಕೊಂದು ತಿರುವು ಪಡೆದುಕೊಳ್ಳುತ್ತಿದೆ. ಈ ಹಿನ್ನೆಲೆಯಲ್ಲಿ ಆಳ್ವಾಸ್ ಶಿಕ್ಷಣ ಸಂಸ್ಥೆಯ ಹೆಸರಿಗೆ ಮಸಿ ಬಳಿಯಬೇಡಿ ಅಂತ ಹೇಳುವ ಮೂಲಕ ಮಾಜಿ ಸಿಎಂ ಹೆಚ್ ಡಿ ಕುಮಾರಸ್ವಾಮಿ ಸಂಸ್ಥೆಯ ಬೆನ್ನಿಗೆ ನಿಂತಿದ್ದಾರೆ.

    ನಗರದಲ್ಲಿ ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಆಳ್ವಾಸ್ ಕಾಲೇಜು ಮೂರು ಲಕ್ಷ ಕುಟುಂಬಕ್ಕೆ ನೆರವಾಗಿದೆ. ಇಲ್ಲಿ ಸಾವಿರಾರು ವಿದ್ಯಾರ್ಥಿಗಳಿಗೆ ಶಿಕ್ಷಣ ಸಿಗುತ್ತಿದೆ. ಸಾವಿನ ಪ್ರಕರಣದ ಬಗ್ಗೆ ಚರ್ಚೆ ಆರಂಭವಾಗಿದೆ. ಸರ್ಕಾರ ಪ್ರಕರಣ ಸತ್ಯಾಸತ್ಯತೆ ಅರಿಯಬೇಕು ಅಂತ ಹೇಳಿದ್ದಾರೆ.

    ಆಳ್ವಾಸ್ ಶಿಕ್ಷಣ ಸಂಸ್ಥೆಯ ಅಧ್ಯಕ್ಷ ಮೋಹನ ಆಳ್ವ ಈ ವಿಚಾರವಾಗಿ ಮಾನಸಿಕವಾಗಿ ಹಿಂಸೆ ಅನುಭವಿಸುತ್ತಿದ್ದಾರೆ. 26 ಸಾವಿರ ಮಕ್ಕಳು ಹಾಸ್ಟೆಲ್ ನಲ್ಲಿದ್ದಾರೆ. 4 ಸಾವಿರ ಬಡಮಕ್ಕಳಿಗೆ ಉಚಿತ ಶಿಕ್ಷಣ ನೀಡುತ್ತಿದ್ದಾರೆ. ಕಾವ್ಯ ನಿಗೂಢ ಸಾವಿನ ಪ್ರಕರಣಕ್ಕೆ ಸಂಬಂಧಿಸಿದಂತೆ ರೆಕ್ಕೆ ಪುಕ್ಕ ಕಟ್ಟಲಾಗುತ್ತಿದೆ. ಈ ಮೂಲಕ ಸಂಸ್ಥೆಯ ಹೆಸರಿಗೆ ಮಸಿ ಬಳಿಯಬೇಡಿ. ಎಲ್ಲಾ ಸಂಘಟನೆಗಳು ರಾಜಕೀಯ ನಿಲ್ಲಿಸಬೇಕು ಅಂತಾ ಕುಮಾರಸ್ವಾಮಿ ಸಿಡಿಮಿಡಿಗೊಂಡಿದ್ದಾರೆ.

    ಇದನ್ನೂ ಓದಿ: ಬಿಗ್ ಬುಲೆಟಿನ್ ನಲ್ಲಿ ಕಾವ್ಯ ಶ್ರೀ ಪ್ರಕರಣದ ಬಿಗ್ ಚರ್ಚೆ – ತನಿಖೆಗೆ ಸಹಕರಿಸುವೆ ಎಂದ ಮೋಹನ್ ಆಳ್ವ

    ಸಿಬ್ಬಂದಿ, ವಿದ್ಯಾರ್ಥಿಗಳ ವಿಚಾರಣೆ: ಆಳ್ವಾಸ್ ವಿದ್ಯಾರ್ಥಿನಿ ಕಾವ್ಯಾ ನಿಗೂಢ ಸಾವು ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ಆಳ್ವಾಸ್ ಶಿಕ್ಷಣ ಸಂಸ್ಥೆಯ ಸಿಬ್ಬಂದಿ ಸಹಿತ 6 ವಿದ್ಯಾರ್ಥಿಗಳ ವಿಚಾರಣೆ ನಡೆಸಲಾಗುತ್ತಿದೆ.

    ಎಸಿಪಿ ರಾಜೇಂದ್ರ ನೇತೃತ್ವದ ತಂಡದಿಂದ ಹಾಸ್ಟೆಲ್ ವಾರ್ಡನ್, ಶಿಕ್ಷಕರು, ಸಹಪಾಠಿಗಳು, ಸಿಬ್ಬಂದಿ ವಿಚಾರಣೆ ನಡೆಯುತ್ತಿದೆ. ಅಲ್ಲದೇ ಸಿಸಿಟಿವಿ ಫೂಟೇಜ್, ಹಿಂದಿ ಪರೀಕ್ಷೆಯ ಪ್ರಶ್ನೆ ಪತ್ರಿಕೆಯ ಪರಿಶೀಲನೆ ಹಾಗೂ ಫೋನ್ ಸಂಭಾಷಣೆ, ಹೆತ್ತವರು ಹೇಳಿಕೆಗಳ ಪರಿಶೀಲನೆ ನಡೆಸಲಾಗುತ್ತಿದೆ. ಅಂತೆಯೇ ಕಾವ್ಯಾಳ ಮರಣೋತ್ತರ ವರದಿ ಕೂಡ ಇಂದು ಸಲ್ಲಿಕೆಯಾಗುವ ಸಾಧ್ಯತೆಗಳಿವೆ.

    https://www.youtube.com/watch?v=75vzrVm8Z6w

    https://www.youtube.com/watch?v=BgvrrloxXoQ

    https://www.youtube.com/watch?v=9upWi0NOWqw