Tag: Amar Jawan Jyoti

  • ಅಮರ ಜವಾನ್ ಜ್ಯೋತಿ ವಿಲೀನ – ಹುತಾತ್ಮರಿಗೆ ಮಾಡಿದ ಅಗೌರವ: ಬಿಕೆ ಹರಿಪ್ರಸಾದ್

    ಅಮರ ಜವಾನ್ ಜ್ಯೋತಿ ವಿಲೀನ – ಹುತಾತ್ಮರಿಗೆ ಮಾಡಿದ ಅಗೌರವ: ಬಿಕೆ ಹರಿಪ್ರಸಾದ್

    ಬೆಂಗಳೂರು: 1971ರ ಯುದ್ದದಲ್ಲಿ ಹುತಾತ್ಮರಾದ ಯೋಧರ ನೆನಪಿಗೆ ಇಂಡಿಯಾ ಗೇಟ್‌ನಲ್ಲಿ ಹಚ್ಚಲಾದ ಅಮರ ಜವಾನ್ ಜ್ಯೋತಿಯನ್ನು ವಿಲೀನಗೊಳಿಸಿರುವುದು ಹುತಾತ್ಮರಿಗೆ ಮಾಡಿದ ಅಗೌರವ ಎಂದು ಮಾಜಿ ಸಂಸದ ಹಾಗೂ ಹಾಲಿ ವಿಧಾನಪರಿಷತ್ ಸದಸ್ಯ ಬಿ.ಕೆ. ಹರಿಪ್ರಸಾದ್ ಹೇಳಿದ್ದಾರೆ.

    ಬೆಂಗಳೂರಿನಲ್ಲಿ ಪ್ರತಿಕ್ರಿಯಿಸಿರುವ ಅವರು, ಕಳೆದ 50 ವರ್ಷಗಳಿಂದ ಈ ಜ್ಯೋತಿ ನಮ್ಮ ದೇಶಕ್ಕಾಗಿ ಹುತಾತ್ಮರಾದ ಯೋಧರ ಸ್ಮರಣೆಯ ಪ್ರತೀಕವಾಗಿತ್ತು. ಅಮರ ಜವಾನ್ ಶಾಶ್ವತ ಜ್ಯೋತಿ ನಮ್ಮ ದೇಶಭಕ್ತಿಯ ಹಾಗೂ ದೇಶಪ್ರೇಮದ ಸಂಕೇತವಾಗಿ ಪ್ರಜ್ವಲಿಸುತ್ತಿತ್ತು. ಎರಡೂ ಜ್ಯೋತಿಗಳ ನಿರ್ವಹಣೆ ಕಷ್ಟ ಎನ್ನುವ ಹಿನ್ನೆಲೆಯಲ್ಲಿ ಯುದ್ಧ ಸ್ಮಾರಕದಲ್ಲಿ ನಿರ್ಮಿಸಲಾಗಿರುವ ಜ್ಯೋತಿಯಲ್ಲಿ ವಿಲೀನಗೊಳಿಸಿರುವುದು ಸರಿಯಲ್ಲ ಎಂದು ಆಕ್ಷೇಪ ವ್ಯಕ್ತಪಡಿಸಿದರು. ಇದನ್ನೂ ಓದಿ: 50 ವರ್ಷಗಳಿಂದ ಬೆಳಗುತ್ತಿದ್ದ ಅಮರ್‌ ಜವಾನ್‌ ಜ್ಯೋತಿ ಇನ್ಮುಂದೆ ಇಂಡಿಯಾ ಗೇಟ್‌ನಲ್ಲಿ ಬೆಳಗಲ್ಲ!

    1971ರಲ್ಲಿ ಇಂದಿರಾ ಗಾಂಧಿಯವರ ನೇತೃತ್ವದ ಕಾಂಗ್ರೆಸ್ ಸರ್ಕಾರ ಅಧಿಕಾರದಲ್ಲಿದ್ದಾಗ ಅಮರ ಜವಾನ್ ಜ್ಯೋತಿಯನ್ನು ಇಂಡಿಯಾ ಗೇಟ್‌ನಲ್ಲಿ ಇರಿಸಲಾಗಿತ್ತು. ಆನಂತರ ಹಲವಾರು ಯುದ್ಧಗಳಲ್ಲಿ ತಮ್ಮ ಪ್ರಾಣವನ್ನು ದೇಶಕ್ಕಾಗಿ ನೀಡಿದ ಹಲವಾರು ಧೀರ ಯೋಧರ ನೆನಪೂ ಕೂಡಾ ಇದರಲ್ಲೇ ಸಮ್ಮಿಳಿತವಾಗಿತ್ತು ಎಂದರು. ಇದನ್ನೂ ಓದಿ: ಇಂಡಿಯಾ ಗೇಟ್‍ನಲ್ಲಿ ನೇತಾಜಿ ಸುಭಾಷ್ ಚಂದ್ರಬೋಸ್ ಭವ್ಯ ಪ್ರತಿಮೆ ಅನಾವರಣ: ಮೋದಿ

    ಈಗ ಮೋದಿ ನೇತೃತ್ವದ ಸರ್ಕಾರ ಇದನ್ನು ಯುದ್ಧ ಸ್ಮಾರಕದಲ್ಲಿ ವಿಲೀನಗೊಳಿಸುವ ನಿರ್ಧಾರ ಕೈಗೊಳ್ಳುವ ಮೂಲಕ ಹುತಾತ್ಮರಿಗೆ ಅವಮಾನ ಮಾಡಿದೆ. ಇಂತಹ ನಿರ್ಧಾರಗಳನ್ನು ಕೈಗೊಳ್ಳುವ ಮೂಲಕ ನಮ್ಮ ಇತಿಹಾಸವನ್ನು ತಿರುಚುವಂತಹ ಕಾರ್ಯಕ್ಕೆ ಕೇಂದ್ರ ಸರ್ಕಾರ ಕೈ ಹಾಕಿದೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

  • 50 ವರ್ಷಗಳಿಂದ ಬೆಳಗುತ್ತಿದ್ದ ಅಮರ್‌ ಜವಾನ್‌ ಜ್ಯೋತಿ ಇನ್ಮುಂದೆ ಇಂಡಿಯಾ ಗೇಟ್‌ನಲ್ಲಿ ಬೆಳಗಲ್ಲ!

    50 ವರ್ಷಗಳಿಂದ ಬೆಳಗುತ್ತಿದ್ದ ಅಮರ್‌ ಜವಾನ್‌ ಜ್ಯೋತಿ ಇನ್ಮುಂದೆ ಇಂಡಿಯಾ ಗೇಟ್‌ನಲ್ಲಿ ಬೆಳಗಲ್ಲ!

    ನವದೆಹಲಿ: ಇಂಡಿಯಾ ಗೇಟ್‌ನಲ್ಲಿ ಕಳೆದ 50 ವರ್ಷಗಳಿಂದ ಉರಿಯುತ್ತಿರುವ ಅಮರ್‌ ಜವಾನ್‌ ಜ್ಯೋತಿ ಇನ್ಮುಂದೆ ಅಲ್ಲಿ ಬೆಳಗುವುದಿಲ್ಲ. ಗಣರಾಜ್ಯೋತ್ಸವಕ್ಕೂ ಮುನ್ನ, ಇಂದು ನಡೆಯುವ ಕಾರ್ಯಕ್ರಮದಲ್ಲಿ ರಾಷ್ಟ್ರೀಯ ಯುದ್ಧ ಸ್ಮಾರಕದಲ್ಲಿರುವ ಜ್ಯೋತಿಯೊಂದಿಗೆ ಇದನ್ನು ವಿಲೀನಗೊಳಿಸಲಾಗುವುದು.

    ಅಮರ್‌ ಜವಾನ್‌ ಜ್ಯೋತಿಯನ್ನು ನಂದಿಸಲಾಗುತ್ತಿದೆ ಎಂಬ ಸುದ್ದಿಗಳು ಹರಿದಾಡುತ್ತಿದ್ದವು. ಇದಕ್ಕೆ ಕೇಂದ್ರದ ವಿರುದ್ಧ ವ್ಯಾಪಕ ಟೀಕೆ ವ್ಯಕ್ತವಾಗಿತ್ತು. ಈ ಕುರಿತು ಪ್ರತಿಕ್ರಿಯಿಸಿರುವ ಕೇಂದ್ರ ಸರ್ಕಾರ, ಸುಳ್ಳು ಸುದ್ದಿಗಳನ್ನು ಹರಡಲಾಗುತ್ತಿದೆ ಎಂದು ಅಲ್ಲಗಳೆದಿದೆ. ಇದನ್ನೂ ಓದಿ: ಕೆಲವರಿಗೆ ದೇಶ ಭಕ್ತಿ ಅರ್ಥವಾಗುವುದಿಲ್ಲ: ರಾಹುಲ್ ಗಾಂಧಿ

    ಅಮರ್‌ ಜವಾನ್‌ ಜ್ಯೋತಿಯನ್ನು ನಂದಿಸಲಾಗುತ್ತಿಲ್ಲ. ಬದಲಿಗೆ ಅದನ್ನು ರಾಷ್ಟ್ರೀಯ ಯುದ್ಧ ಸ್ಮಾರಕದ ಜ್ಯೋತಿಯೊಂದಿಗೆ ವಿಲೀನಗೊಳಿಸಲಾಗುತ್ತಿದೆ ಕೇಂದ್ರ ಸರ್ಕಾರ ಸ್ಪಷ್ಟಪಡಿಸಿದೆ.

    ಮೊದಲನೆಯ ಮಹಾಯುದ್ಧದಲ್ಲಿ ಮಡಿದ ಬ್ರಿಟಿಷ್‌ ಭಾರತೀಯ ಸೇನೆಯ ಸೈನಿಕರ ಸ್ಮರಣಾರ್ಥ ಇಂಡಿಯಾ ಗೇಟ್‌ ಅನ್ನು ಬ್ರಿಟಿಷರು ನಿರ್ಮಿಸಿದ್ದರು. 1971ರಲ್ಲಿ ಇಂದಿರಾ ಗಾಂಧಿ ನೇತೃತ್ವದ ಕಾಂಗ್ರೆಸ್‌ ಸರ್ಕಾರ ಅಧಿಕಾರದಲ್ಲಿದ್ದಾಗ ಅಮರ್‌ ಜವಾನ್‌ ಜ್ಯೋತಿಯನ್ನು ಇಂಡಿಯಾ ಗೇಟ್‌ ಬಳಿ ಇರಿಸಿತ್ತು. ಇಂಡಿಯಾ ಗೇಟ್‌ನಲ್ಲಿ ಕೆತ್ತಲಾದ ಹೆಸರುಗಳು ವಿಶ್ವಯುದ್ಧ-1 ಮತ್ತು ಆಂಗ್ಲೋ ಆಫ್ಘನ್‌ ಯುದ್ಧದಲ್ಲಿ ಬ್ರಿಟಿಷರಿಗಾಗಿ ಹೋರಾಡಿದ ಯೋಧರದ್ದಾಗಿದೆ. ಇದು ವಸಾಹತುಶಾಹಿಯ ಗತಕಾಲದ ಸಂಕೇತ ಎಂದು ಸರ್ಕಾರ ತನ್ನ ನಿಲುವಿಗೆ ಸ್ಪಷ್ಟನೆಯನ್ನು ನೀಡಿದೆ. ಇದನ್ನೂ ಓದಿ: ರಾಷ್ಟ್ರಪಿತನ ಬಗ್ಗೆ ಅವಹೇಳನಕಾರಿ ಹೇಳಿಕೆ – ಕಾಳಿಚರಣ್ ಮಹಾರಾಜ್ ಬಂಧನ

    1971ರ ಯುದ್ಧ ಸೇರಿದಂತೆ ಸ್ವಾತಂತ್ರ್ಯದ ನಂತರದ ಯುದ್ಧಗಳಲ್ಲಿ ಮಡಿದ ಭಾರತೀಯ ಸೈನಿಕರ ಹೆಸರನ್ನು ರಾಷ್ಟ್ರೀಯ ಯುದ್ಧ ಸ್ಮಾರಕದಲ್ಲಿ ಕೆತ್ತಲಾಗಿದೆ. ದೇಶದ ಯೋಧರಿಗೆ ನಿಜವಾಗಿಯೂ ಶ್ರದ್ಧಾಂಜಲಿ ಸಲ್ಲಿಸಬೇಕಿರುವುದು ಈ ಸ್ಮಾರಕದಲ್ಲಿ ಎಂದು ಸರ್ಕಾರ ತಿಳಿಸಿದೆ.

    ದಶಕಗಳಷ್ಟು ಹಳೆಯದಾದ ಸಂಪ್ರದಾಯದಲ್ಲಿ ಬದಲಾವಣೆ ತಂದಿರುವುದಕ್ಕೆ ವಿರೋಧ ಪಕ್ಷಗಳು ಸಾಮಾಜಿಕ ಮಾಧ್ಯಮದಲ್ಲಿ ಟೀಕೆಗಳನ್ನು ವ್ಯಕ್ತಪಡಿಸುತ್ತಿವೆ. ಈ ಟೀಕೆಗಳು ವಿಪರ್ಯಾಸ ಎಂದು ಹೇಳಿರುವ ಕೇಂದ್ರ ಸರ್ಕಾರ, ಜ್ಯೋತಿಯನ್ನು ವಿಲೀನಗೊಳಿಸುವ ತನ್ನ ನಿಲುವನ್ನು ಸಮರ್ಥಿಸಿಕೊಂಡಿದೆ.

    ಜ್ಯೋತಿಯು ವಿಲೀನಗೊಳ್ಳುವ ರಾಷ್ಟ್ರೀಯ ಯುದ್ಧ ಸ್ಮಾರಕವು 40 ಎಕರೆ ವ್ಯಾಪ್ತಿಯಲ್ಲಿ ವಿಸ್ತಾರವಾಗಿದೆ. ಇದನ್ನು 2019ರಲ್ಲಿ 176 ಕೋಟಿ ವೆಚ್ಚದಲ್ಲಿ ನಿರ್ಮಿಸಲಾಯಿತು. ಪ್ರಧಾನಿ ನರೇಂದ್ರ ಮೋದಿ ಅವರು ಸ್ಮಾರಕವನ್ನು ಉದ್ಘಾಟಿಸಿದ್ದರು.

  • ಕೆಲವರಿಗೆ ದೇಶ ಭಕ್ತಿ ಅರ್ಥವಾಗುವುದಿಲ್ಲ: ರಾಹುಲ್ ಗಾಂಧಿ

    ಕೆಲವರಿಗೆ ದೇಶ ಭಕ್ತಿ ಅರ್ಥವಾಗುವುದಿಲ್ಲ: ರಾಹುಲ್ ಗಾಂಧಿ

    ನವದೆಹಲಿ: ರಾಷ್ಟ್ರರಾಜಧಾನಿಯ ಅಪ್ರತಿಮ ಹೆಗ್ಗುರುತಾಗಿರುವ ಇಂಡಿಯಾ ಗೇಟ್ ಹುಲ್ಲುಹಾಸಿನಲ್ಲಿ 50 ವರ್ಷಗಳಿಂದ ಉರಿಯುತ್ತಿರುವ ಅಮರ್ ಜವಾನ್ ಜ್ಯೋತಿಯ ಜ್ವಾಲೆಯು ಶಾಶ್ವತವಾಗಿ ನಂದಲಿದೆ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ದುಃಖ ವ್ಯಕ್ತಪಡಿಸಿದ್ದಾರೆ.

    ಈ ಕುರಿತಂತೆ ರಾಹುಲ್ ಗಾಂಧಿ ಅವರು ತಮ್ಮ ಟ್ವಿಟ್ಟರ್‌ನಲ್ಲಿ ನಮ್ಮ ವೀರ ಸೈನಿಕರಿಗಾಗಿ ಉರಿಯುತ್ತಿದ್ದ ಅಮರ ಜ್ವಾಲೆ ಇಂದು ನಂದಿಸಲಾಗುತ್ತಿರುವುದು ಅತ್ಯಂತ ದುಃಖದ ಸಂಗತಿ. ಕೆಲವರಿಗೆ ದೇಶಭಕ್ತಿ ಮತ್ತು ತ್ಯಾಗವನ್ನು ಅರ್ಥವಾಗುವುದಿಲ್ಲ. ಆದರೂ ಪರವಾಗಿಲ್ಲ ನಾವು ಮತ್ತೊಮ್ಮೆ ನಮ್ಮ ಸೈನಿಕರಿಗಾಗಿ ಅಮರ್ ಜವಾನ್ ಜ್ಯೋತಿಯನ್ನು ಬೆಳಗಿಸುತ್ತೇವೆ ಎಂದು ಟ್ವೀಟ್ ಮಾಡಿದ್ದಾರೆ. ಇದನ್ನೂ ಓದಿ: ರೆಮೋ ಡಿಸೋಜಾ ಸೋದರ ಮಾವ ಸಾವು – ಆತ್ಮಹತ್ಯೆ ಶಂಕೆ

    ಇಂಡಿಯಾ ಗೇಟ್‍ನಿಂದ 400 ಮೀಟರ್ ದೂರದಲ್ಲಿರುವ ರಾಷ್ಟ್ರೀಯ ಯುದ್ಧ ಸ್ಮಾರಕದಲ್ಲಿ ಅಮರ್ ಜವಾನ್ ಜ್ಯೋತಿಯ ಜ್ವಾಲೆಯನ್ನು ನಂದಿಸಲಾಗುತ್ತದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಇದನ್ನೂ ಓದಿ: ರಾಷ್ಟ್ರಪಿತನ ಬಗ್ಗೆ ಅವಹೇಳನಕಾರಿ ಹೇಳಿಕೆ – ಕಾಳಿಚರಣ್ ಮಹಾರಾಜ್ ಬಂಧನ

    1972ರ ಜನವರಿ 26 ರಂದು ಅಮರ್ ಜವಾನ್ ಜ್ಯೋತಿಯನ್ನು ಮಾಜಿ ಪ್ರಧಾನಿ ಇಂದಿರಾ ಗಾಂಧಿ ಅವರು ಉದ್ಘಾಟಿಸಿದ್ದರು. ಸ್ವಾತಂತ್ರ್ಯದ ನಂತರ ದೇಶಕ್ಕಾಗಿ ತಮ್ಮ ಪ್ರಾಣವನ್ನು ಅರ್ಪಿಸಿದ ವೀರ ಯೋಧರ ಮತ್ತು ಹುತಾತ್ಮರ ಸ್ಮಾರಕವಾಗಿದೆ. ಸ್ಮಾರಕದಲ್ಲಿರುವ ಗ್ರಾನೈಟ್ ಫಲಕಗಳ ಮೇಲೆ 25,942 ಸೈನಿಕರ ಹೆಸರನ್ನು ಸುವರ್ಣಾಕ್ಷರಗಳಲ್ಲಿ ಕೆತ್ತಲಾಗಿದೆ.