Tag: amaran film

  • ಆಮೀರ್ ಖಾನ್ ಜೊತೆ ಬಾಲಿವುಡ್ ಸಿನಿಮಾ?: ಶಿವಕಾರ್ತಿಕೇಯನ್ ರಿಯಾಕ್ಷನ್

    ಆಮೀರ್ ಖಾನ್ ಜೊತೆ ಬಾಲಿವುಡ್ ಸಿನಿಮಾ?: ಶಿವಕಾರ್ತಿಕೇಯನ್ ರಿಯಾಕ್ಷನ್

    ಮಿಳು ನಟ ಶಿವಕಾರ್ತಿಕೇಯನ್ (Sivakarthikeyan) ಅವರು ಕಾಲಿವುಡ್‌ನ ಟಾಪ್ ನಟರಲ್ಲಿ ಒಬ್ಬರಾಗಿದ್ದಾರೆ. ಇನ್ನೂ ಸಾಕಷ್ಟು ಬಾರಿ ಅವರ ಬಾಲಿವುಡ್‌ಗೆ (Bollywood) ಎಂಟ್ರಿಯ ಬಗ್ಗೆ ಚರ್ಚೆಗೆ ಗ್ರಾಸವಾಗುತ್ತಲೇ ಇತ್ತು. ಈಗ ಆಮೀರ್ ಖಾನ್ ಜೊತೆಗಿನ ಸಿನಿಮಾ ಸುದ್ದಿ ಬಗ್ಗೆ ಸ್ವತಃ ಶಿವಕಾರ್ತಿಕೇಯನ್ ಮಾತನಾಡಿದ್ದಾರೆ. ಇದನ್ನೂ ಓದಿ:ದೇವಿ ಗೆಟಪ್‌ನಲ್ಲಿ ಕಾಜಲ್- ‘ಕಣ್ಣಪ್ಪ’ ಚಿತ್ರದ ಫಸ್ಟ್ ಲುಕ್ ಔಟ್

    ಆಮೀರ್ ಖಾನ್ (Aamir Khan) ಜೊತೆ ಶಿವಕಾರ್ತಿಕೇಯನ್ ಸಿನಿಮಾ ಮಾಡುತ್ತಾರೆ ಎಂಬ ವಿಚಾರಕ್ಕೆ ನಟ ಸ್ಪಷ್ಟನೆ ನೀಡಿದ್ದಾರೆ. ಸಂದರ್ಶನದಲ್ಲಿ ಅವರು ಮಾತನಾಡಿ, ನಾನು ಆಮೀರ್ ಖಾನ್ ಅವರನ್ನು ಹಲವು ಬಾರಿ ಭೇಟಿಯಾಗಿದ್ದೇನೆ. ಆಗ ಅವರು ನೀವು ಹಿಂದಿ ಚಿತ್ರಕ್ಕೆ ಎಂಟ್ರಿ ಕೊಡುತ್ತೀರಾ ಅಂದರೆ ಅದು ನನ್ನ ನಿರ್ಮಾಣ ಸಂಸ್ಥೆಯಿಂದಲೇ ಎಂದು ಹೇಳಿದ್ದರು. ನಿಮ್ಮ ಬಳಿ ಯಾವುದಾದರೂ ಉತ್ತಮ ಕಥೆ ಇದ್ದರೆ ತಿಳಿಸಿ ಎಂದು ಆಮೀರ್ ಹೇಳಿದ್ದರು. ಒಂದಿಷ್ಟು ಸಿನಿಮಾ ಕಥೆಗಳನ್ನು ಕೇಳಿದ್ದೇನೆ. ಆದರೆ ಅದು ಇದುವರೆಗೂ ಕಾರ್ಯರೂಪಕ್ಕೆ ಬಂದಿಲ್ಲ ಎಂದು ಶಿವಕಾರ್ತಿಕೇಯನ್ ಮಾತನಾಡಿದ್ದಾರೆ.

    ಇನ್ನೂ ಸುಧಾ ಕೊಂಗರ (Sudha Kongara) ಜೊತೆಗಿನ ಹೊಸ ಸಿನಿಮಾಗೆ ಶಿವಕಾರ್ತಿಕೇಯನ್ ಓಕೆ ಎಂದಿದ್ದಾರೆ. ‘ಅಮರನ್’ ಸಿನಿಮಾದ ಸಕ್ಸಸ್ ನಂತರ ಸುಧಾ ಕೊಂಗರ ಜೊತೆ ನಟ ಕೈಜೋಡಿಸಿದ್ದಾರೆ. ಈ ಸಿನಿಮಾದಲ್ಲಿ ನಟನಿಗೆ ಶ್ರೀಲೀಲಾ ಜೋಡಿ ಎಂದು ಹೇಳಲಾಗುತ್ತಿದೆ.

  • ‘ಅಮರನ್’ ಚಿತ್ರದಲ್ಲಿ ಮುಸ್ಲಿಮರ ಅವಹೇಳನ – ತಮಿಳುನಾಡಿನ ಚಿತ್ರಮಂದಿರಕ್ಕೆ ಪೆಟ್ರೋಲ್ ಬಾಂಬ್ ದಾಳಿ

    ‘ಅಮರನ್’ ಚಿತ್ರದಲ್ಲಿ ಮುಸ್ಲಿಮರ ಅವಹೇಳನ – ತಮಿಳುನಾಡಿನ ಚಿತ್ರಮಂದಿರಕ್ಕೆ ಪೆಟ್ರೋಲ್ ಬಾಂಬ್ ದಾಳಿ

    ತಿರುನಲ್ವೇಲಿ: ತಮಿಳುನಾಡಿನ (Tamil Nadu) ತಿರುನಲ್ವೇಲಿಯಲ್ಲಿರುವ ಥಿಯೇಟರ್‌ವೊಂದಕ್ಕೆ ಇಂದು ಮುಂಜಾನೆ ಇಬ್ಬರು ಅಪರಿಚಿತ ದುಷ್ಕರ್ಮಿಗಳು ಮೂರು ಪೆಟ್ರೋಲ್ ಬಾಂಬ್‌ಗಳನ್ನು ಎಸೆದಿದ್ದಾರೆ.

    ನಟ ಶಿವಕಾರ್ತಿಕೇಯನ್ (Sivakarthikryan) ಅಭಿನಯದ ಅಮರನ್ ಚಿತ್ರದಲ್ಲಿ (Amaran Film) ಮುಸ್ಲಿಮರನ್ನು ನಕಾರಾತ್ಮಕವಾಗಿ ಚಿತ್ರಿಸಿರುವುದನ್ನು ವಿರೋಧಿಸಿ ಹಲವಾರು ಗುಂಪುಗಳು ಪ್ರತಿಭಟನೆ ನಡೆಸುತ್ತಿರುವ ನಡುವೆಯೇ ಈ ದಾಳಿ ನಡೆದಿದೆ. ಇದನ್ನೂ ಓದಿ: ಇದು ವೈಯಕ್ತಿಕ ದ್ವೇಷ: ಧನುಷ್ ವಿರುದ್ಧ ನಯನತಾರಾ ಗರಂ

    ಚಿತ್ರವು ಅಲಂಗಾರ್ ಚಿತ್ರಮಂದಿರಗಳಲ್ಲಿ ಮತ್ತು ಇತರ ಸ್ಥಳಗಳಲ್ಲಿ ಪ್ರದರ್ಶನಗೊಳ್ಳುತ್ತಿತ್ತು. ಹಿರಿಯ ಪೊಲೀಸ್ ಅಧಿಕಾರಿಗಳ ಪ್ರಕಾರ, ಹೆಚ್ಚಿನ ತನಿಖೆಯ ನಂತರವೇ ದಾಳಿಯ ಹಿಂದಿನ ನಿಖರವಾದ ಉದ್ದೇಶವನ್ನು ನಿರ್ಧರಿಸಲಾಗುತ್ತದೆ. ಘಟನೆಯು ಶುಕ್ರವಾರ ಸ್ಥಳೀಯರ ನಡುವಿನ ವಿವಾದಕ್ಕೆ ಸಂಬಂಧಿಸಿರಬಹುದು ಎಂದು ಪೊಲೀಸರು ಹೇಳಿದ್ದಾರೆ. ಇದನ್ನೂ ಓದಿ: ತಮಿಳು ನಿರ್ದೇಶಕ ಸುರೇಶ್ ಸಂಗಯ್ಯ ನಿಧನ

    ಸ್ಥಳದಿಂದ ಪರಾರಿಯಾಗುವ ಮೊದಲು ಇಬ್ಬರು ವ್ಯಕ್ತಿಗಳು ಥಿಯೇಟರ್‌ಗೆ ಪೆಟ್ರೋಲ್ ಬಾಂಬ್ ಎಸೆದಿರುವುದು ಸಿಸಿಟಿವಿ ದೃಶ್ಯಗಳಲ್ಲಿ ಸೆರೆಯಾಗಿದೆ. ಅದೃಷ್ಟವಶಾತ್ ದಾಳಿಯಿಂದ ಯಾವುದೇ ಹಾನಿ ಸಂಭವಿಸಿಲ್ಲ. ತನಿಖೆ ಮುಂದುವರಿದಿದ್ದು, ದುಷ್ಕರ್ಮಿಗಳನ್ನು ಬಂಧಿಸಲು ಕಾರ್ಯಾಚರಣೆ ನಡೆಯುತ್ತಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಇದನ್ನೂ ಓದಿ: ಧನುಷ್, ರಶ್ಮಿಕಾ ಮಂದಣ್ಣ ನಟನೆಯ ‘ಕುಬೇರ’ ಚಿತ್ರದ ಗ್ಲಿಂಪ್ಸ್ ರಿಲೀಸ್

  • ‘ಅಮರನ್‌’ ಟ್ರೈಲರ್ ರಿಲೀಸ್- ಮೇಜರ್ ಮುಕುಂದ್ ವರದರಾಜನ್ ಜೀವನಗಾಥೆಯಲ್ಲಿ ಶಿವಕಾರ್ತಿಕೇಯನ್

    ‘ಅಮರನ್‌’ ಟ್ರೈಲರ್ ರಿಲೀಸ್- ಮೇಜರ್ ಮುಕುಂದ್ ವರದರಾಜನ್ ಜೀವನಗಾಥೆಯಲ್ಲಿ ಶಿವಕಾರ್ತಿಕೇಯನ್

    ಕಾಲಿವುಡ್ ನಟ ಶಿವಕಾರ್ತಿಕೇಯನ್ (Sivakarthikeyan) ನಟನೆಯ ಬಹುನಿರೀಕ್ಷಿತ ಪ್ಯಾನ್ ಇಂಡಿಯಾ ‘ಅಮರನ್’ (Amaran) ಚಿತ್ರದ ಟ್ರೈಲರ್ ರಿಲೀಸ್ ಆಗಿದೆ. ಅಮರನ್, ಭಯೋತ್ಪಾದಕ ದಾಳಿಯಲ್ಲಿ ವೀರ ಮರಣವನ್ನಪ್ಪಿದ ಮೇಜರ್ ಮುಕುಂದ್ ವರದರಾಜನ್ ಜೀವನ ಚರಿತ್ರೆಯಾಗಿದೆ. ಈ ಚಿತ್ರದ ಟ್ರೈಲರ್ ಬಿಡುಗಡೆಯಾಗಿದೆ. ಎಮೋಷನ್ ಜೊತೆಗೆ ಆ್ಯಕ್ಷನ್ ಅಂಶಗಳನ್ನು ಬ್ಲೆಂಡ್ ಮಾಡಿ ಟ್ರೈಲರ್ ಕಟ್ ಮಾಡಲಾಗಿದೆ. ಇದನ್ನೂ ಓದಿ:ಜೈಲು ನಿಯಮ ಉಲ್ಲಂಘನೆ – ದರ್ಶನ್ ಒಳಿತಿಗೆ ಪತ್ನಿ ಕಟ್ಟಿದ್ದ ದಾರ ತೆಗೆಸುವ ಸಾಧ್ಯತೆ

     

    View this post on Instagram

     

    A post shared by Kamal Haasan (@ikamalhaasan)

    ಸೇನಾ ರಜೆಯಲ್ಲಿ ಮನೆಗೆ ಬಂದಿರುವ ಯೋಧ ತನ್ನ ಮಗಳೊಂದಿಗೆ ಇರುವ ಕ್ಷಣ, ಮಗಳಿಗೆ ಒಂದು ಪ್ರೀತಿಯ ಅಪ್ಪುಗೆ ಕೊಟ್ಟು ಮತ್ತೆ ದೇಶ ಸೇವೆಗೆ ಹೋಗುವ ದೃಶ್ಯ, ನಮ್ಮನ್ನು ಬಿಟ್ಟು ನೀನು ದೂರ ಆಗಿದ್ರೂ ಪರವಾಗಿಲ್ಲ, ಸೇಫ್ ಆಗಿರು ಎನ್ನುವ ಪತ್ನಿ ಡೈಲಾಗ್ ನೋಡುಗರಿಗೆ ಕಾಡುತ್ತದೆ. ಶಿವಕಾರ್ತಿಕೇಯನ್ ಮೇಜರ್ ಮುಕುಂದ್ ವರದರಾಜನ್ ಪಾತ್ರದಲ್ಲಿ ಜೀವಿಸಿದ್ದಾರೆ. ಸಾಯಿ ಪಲ್ಲವಿ (Sai Pallavi) ಅವರ ಪತ್ನಿ ಇಂದೂ ರೆಬೆಕಾ ವರ್ಗೀಸ್ ಪಾತ್ರದಲ್ಲಿ ನಟಿಸಿದ್ದಾರೆ. ಇದನ್ನೂ ಓದಿ:ಪ್ರೀತಿಸಿ ಮದುವೆಯಾಗೋಕೆ ನನಗೆ ಸಮಯವಿಲ್ಲ: ಸುನೈನಾ

    ಚಿತ್ರವನ್ನು ರಾಜ್‌ಕುಮಾರ್ ಪೆರಿಯಸಾಮಿ ನಿರ್ದೇಶಿಸಿದ್ದಾರೆ. ಭುವನ್ ಅರೋರಾ, ರಾಹುಲ್ ಬೋಸ್ ಮುಂತಾದವರು ನಟಿಸಿದ್ದಾರೆ. ಇಂಡಿಯಾಸ್ ಮೋಸ್ಟ್ ಫಿಯರ್‌ಲೆಸ್ ಪುಸ್ತಕದಲ್ಲಿ ಶಿವ್ ಅರೂರ್ ಮತ್ತು ರಾಹುಲ್ ಸಿಂಗ್ ಅವರು ಮೇಜರ್ ವರದರಾಜನ್ ಬಗ್ಗೆ ಸಾಕಷ್ಟು ಬರೆದಿದ್ದಾರೆ. ಅದರಲ್ಲಿನ ಅಂಶಗಳನ್ನು ತೆಗೆದುಕೊಂಡು ನಿರ್ದೇಶಕ ರಾಜ್‌ಕುಮಾರ್ ಪೆರಿಯಸಾಮಿ ಕಥೆ ಬರೆದು, ನಿರ್ದೇಶಿಸಿದ್ದಾರೆ.

    ಜಿ.ವಿ.ಪ್ರಕಾಶ್ ಕುಮಾರ್ ಅವರ ಸಂಗೀತ ಸಂಯೋಜನೆ, ಸಿ.ಎಚ್.ಸಾಯಿ ಅವರ ಛಾಯಾಗ್ರಹಣ ಮತ್ತು ಆರ್. ಕಲೈವನನ್ ಅವರ ಸಂಕಲನವಿರುವ ಸಿನಿಮಾವನ್ನು ಕಮಲ್ ಹಾಸನ್ ಅವರ ರಾಜ್ ಕಮಲ್ ಫಿಲ್ಮ್ಸ್ಇಂಟರ್ನ್ಯಾಷನಲ್ ಜಂಟಿಯಾಗಿ ನಿರ್ಮಾಣ ಮಾಡಿದೆ.

  • 2 ವರ್ಷಗಳ ನಂತರ ಬೆಳ್ಳಿಪರದೆಗೆ ಮರಳಿದ ಸಾಯಿ ಪಲ್ಲವಿ

    2 ವರ್ಷಗಳ ನಂತರ ಬೆಳ್ಳಿಪರದೆಗೆ ಮರಳಿದ ಸಾಯಿ ಪಲ್ಲವಿ

    ಟನೆ, ಡ್ಯಾನ್ಸಿಂಗ್‌ ಅಪಾರ ಅಭಿಮಾನಿಗಳ ಮನಗೆದ್ದಿರುವ ಸಾಯಿ ಪಲ್ಲವಿ (Sai Pallavi) ಇದೀಗ ಎರಡು ವರ್ಷಗಳ ನಂತರ ಬೆಳ್ಳಿಪರದೆಗೆ ಮರಳಿದ್ದಾರೆ. ‘ಅಮರನ್’ (Amaran) ಚಿತ್ರದ ಮೂಲಕ ಮತ್ತೆ ನಟಿ ಸದ್ದು ಮಾಡುತ್ತಿದ್ದಾರೆ. ನಟಿಯ ಕ್ಯಾರೆಕ್ಟರ್ ಟೀಸರ್ ರಿವೀಲ್ ಚಿತ್ರತಂಡ ಸರ್ಪ್ರೈಸ್ ನೀಡಿದೆ. ಇದನ್ನೂ ಓದಿ:10 ವರ್ಷ ಕಾಲ ಮ್ಯೂಸಿಕ್‌ ವಾಹಿನಿ ನಡೆದಿದ್ದೇ ಸಂತೋಷ, ಆಶ್ಚರ್ಯ: ಹೆಚ್‌ ಆರ್‌ ರಂಗನಾಥ್‌

    ಶಿವಕಾರ್ತಿಕೇಯನ್ ನಟನೆಯ ‘ಅಮರನ್’ ಚಿತ್ರದಲ್ಲಿ ಸಾಯಿ ಪಲ್ಲವಿ ಹೀರೋಯಿನ್ ಆಗಿ ನಟಿಸಿದ್ದಾರೆ. ವೀರಯೋಧ ಮೇಜರ್ ಮುಕುಂದ ವರದರಾಜನ್ ಬಯೋಪಿಕ್ ಆಗಿದೆ. ಇದರಲ್ಲಿ ವೀರಯೋಧನಾಗಿ ಶಿವಕಾರ್ತಿಕೇಯನ್ ನಟಿಸಿದ್ರೆ, ಅವರ ಪತ್ನಿ ರೆಬೆಕಾ ವರ್ಗೀಸ್ ಪಾತ್ರದಲ್ಲಿ ಸಾಯಿ ಪಲ್ಲವಿ ಜೀವ ತುಂಬಿದ್ದಾರೆ.

     

    View this post on Instagram

     

    A post shared by Sai Pallavi (@saipallavi.senthamarai)

    ಇನ್ನೂ ಚಿತ್ರದಲ್ಲಿ ನಟಿಯ ಕ್ಯಾರೆಕ್ಟರ್ ಟೀಸರ್ 1:22 ನಿಮಿಷವಿದ್ದು, ಸಾಯಿ ಪಲ್ಲವಿ ಗುಂಗುರು ಕೂದಲು ಬಿಟ್ಟು ನಯಾ ಲುಕ್‌ನಲ್ಲಿ ಮುದ್ದಾಗಿ ಕಾಣಿಸಿಕೊಂಡಿದ್ದಾರೆ.

    ಇನ್ನೂ ‘ಅಮರನ್’ ಚಿತ್ರವನ್ನು ರಾಜಕುಮಾರ ಪೆರಿಯಸ್ವಾಮಿ ನಿರ್ದೇಶನ ಮಾಡಿದ್ದಾರೆ. ಈ ಸಿನಿಮಾ ಇದೇ ಅಕ್ಟೋಬರ್ 11ಕ್ಕೆ ರಿಲೀಸ್ ಆಗಲಿದೆ.

  • ಶೂಟಿಂಗ್ ಮುಗಿಸಿದ ಶಿವಕಾರ್ತಿಕೇಯನ್, ಸಾಯಿ ಪಲ್ಲವಿ ನಟನೆಯ ‘ಅಮರನ್’ ಸಿನಿಮಾ

    ಶೂಟಿಂಗ್ ಮುಗಿಸಿದ ಶಿವಕಾರ್ತಿಕೇಯನ್, ಸಾಯಿ ಪಲ್ಲವಿ ನಟನೆಯ ‘ಅಮರನ್’ ಸಿನಿಮಾ

    ‘ಪ್ರೇಮಂ’ ನಟಿ ಸಾಯಿ ಪಲ್ಲವಿ ಬಾಲಿವುಡ್ ಮತ್ತು ಸೌತ್ ಸಿನಿಮಾಗಳಲ್ಲಿ ಬ್ಯುಸಿಯಾಗಿದ್ದಾರೆ. ಸದ್ಯ ಶಿವಕಾರ್ತಿಕೇಯನ್ (Sivakarthikeyan) ಜೊತೆ ಸಾಯಿ ಪಲ್ಲವಿ ನಟಿಸಿರುವ ‘ಅಮರನ್’ (Amaran Film) ಸಿನಿಮಾದ ಶೂಟಿಂಗ್ ಪೂರ್ಣಗೊಂಡಿದೆ. ಸಿನಿಮಾ ರಿಲೀಸ್‌ಗೆ ಸಿದ್ಧತೆ ಕೂಡ ನಡೆಯುತ್ತಿದೆ. ಇದನ್ನೂ ಓದಿ:ಟ್ರೋಲ್‌ಗಳ ಬಗ್ಗೆ ಸ್ಫೋಟಕ ಹೇಳಿಕೆ ನೀಡಿದ ನೇಹಾ ಶೆಟ್ಟಿ

    ‘ಅಮರನ್’ ಮೇಜರ್ ಮುಕುಂದ ವರದರಾಜನ್ ಜೀವನ ಚರಿತ್ರೆಯನ್ನು ಆಧರಿಸಿ ಸಿನಿಮಾ ಮಾಡಲಾಗಿದೆ. ಯೋಧನಾಗಿ ಲೀಡ್ ರೋಲ್‌ನಲ್ಲಿ ಶಿವಕಾರ್ತಿಕೇಯನ್ ನಟಿಸಿದ್ದು, ನಾಯಕಿಯಾಗಿ ಸಾಯಿ ಪಲ್ಲವಿ (Sai Pallavi)  ಕಾಣಿಸಿಕೊಂಡಿದ್ದಾರೆ. ಈ ಚಿತ್ರವನ್ನು ಖ್ಯಾತ ನಟ ಕಮಲ್ ಹಾಸನ್ (Kamal Haasan), ಆರ್. ಮಹೇಂದ್ರನ್, ವಿವೇಕ್ ಸೇರಿ ನಿರ್ಮಾಣ ಮಾಡಿದ್ದಾರೆ.

    ರಾಜಕುಮಾರ್ ಪೆರಿಸ್ವಾಮಿ ನಿರ್ದೇಶನದ ಈ ಚಿತ್ರದ ಶೂಟಿಂಗ್ ಈಗ ಪೂರ್ಣಗೊಂಡಿದ್ದು, ಸದ್ಯದಲ್ಲೇ ಸಿನಿಮಾದ ರಿಲೀಸ್ ಡೇಟ್ ಕೂಡ ಘೋಷಿಸಲಿದ್ದಾರೆ. ಇನ್ನೂ ಸಾಯಿ ಪಲ್ಲವಿ ಮತ್ತು ಶಿವಕಾರ್ತಿಕೇಯನ್‌ ಜೋಡಿಯನ್ನು ನೋಡಲು ಫ್ಯಾನ್ಸ್‌ ಕಾತರದಿಂದ ಕಾಯುತ್ತಿದ್ದಾರೆ.

    ಅಂದಹಾಗೆ, ರಾಮಾಯಣ, ತಾಂಡೇಲ್, ಆಮೀರ್ ಖಾನ್ ಪುತ್ರನ ಜೊತೆಗಿನ ಸಿನಿಮಾ ಸೇರಿದಂತೆ ಹಲವು ಪ್ರಾಜೆಕ್ಟ್‌ಗಳು ಸಾಯಿ ಪಲ್ಲವಿ ಕೈಯಲ್ಲಿವೆ. ಬಾಲಿವುಡ್‌ನಲ್ಲಿ ಕೂಡ ನಟಿ ಅದೃಷ್ಟ ಪರೀಕ್ಷೆಗಿಳಿದಿದ್ದಾರೆ.