Tag: amaregowda

  • ಕೊಪ್ಪಳ ಜಿಲ್ಲೆಯಲ್ಲಿ ಸಿದ್ದರಾಮಯ್ಯ ಸ್ಪರ್ಧೆ ಬಯಸಿದ್ರೆ, ಆ ಕ್ಷೇತ್ರ ಬಿಟ್ಟುಕೊಡ್ತೀವಿ: ಅಮರೇಗೌಡ

    ಕೊಪ್ಪಳ ಜಿಲ್ಲೆಯಲ್ಲಿ ಸಿದ್ದರಾಮಯ್ಯ ಸ್ಪರ್ಧೆ ಬಯಸಿದ್ರೆ, ಆ ಕ್ಷೇತ್ರ ಬಿಟ್ಟುಕೊಡ್ತೀವಿ: ಅಮರೇಗೌಡ

    ಕೊಪ್ಪಳ: ಮಾಜಿ ಸಿಎಂ ಸಿದ್ದರಾಮಯ್ಯ ಕೊಪ್ಪಳ ಜಿಲ್ಲೆಯಲ್ಲಿ ಎಲ್ಲಿಯೇ ಸ್ಪರ್ಧಿಸಲಿ. ಅವರು ಸ್ಪರ್ಧೆ ಬಯಸಿದರೆ ಕುಷ್ಟಗಿಯಿಂದ ನಾನು, ಕೊಪ್ಪಳದಿಂದ ಕೆ.ರಾಘವೇಂದ್ರ ಹಿಟ್ನಾಳ್ ಬಿಟ್ಟುಕೊಡುತ್ತೀವಿ ಎಂದು ಅಮರೇಗೌಡ ಬಯ್ಯಾಪುರ ಹೇಳಿದರು.

    ಇದೇ ಸಂದರ್ಭದಲ್ಲಿ ಮಾತನಾಡಿದ ಕೊಪ್ಪಳ ಶಾಸಕ ಕೆ ರಾಘವೇಂದ್ರ ಹಿಟ್ನಾಳ್, ಸಿದ್ದರಾಮಯ್ಯ ರಾಜ್ಯದ ಯಾವ ಕ್ಷೇತ್ರದಲ್ಲಿ ಸ್ಪರ್ಧೆ ಮಾಡಿದರೂ ಗೆಲ್ಲುತ್ತಾರೆ. ಅವರನ್ನು ಬಿಟ್ಟರೆ ಬೇರೆ ಯಾರಿಗೂ ಈ ಶಕ್ತಿ ಇಲ್ಲ. ಕೊಪ್ಪಳ ಕ್ಷೇತ್ರಕ್ಕೆ ಬಂದರೂ ನಾನು ಬಿಟ್ಟು ಕೊಡಲು ರೆಡಿ ಇದ್ದೇನೆ. ಹೆಚ್ಚಿನ ಮತಗಳ ಅಂತರದಿಂದ ಗೆಲ್ಲಿಸುವ ಕೆಲಸ ಮಾಡುತ್ತೇವೆ. ಮಾಜಿ ಸಿಎಂ ಸಿದ್ದರಾಮಯ್ಯ ಎಲ್ಲೇ ಬಂದರೂ ಗೆಲ್ಲುತ್ತಾರೆ ಎಂದು ಹೇಳಿದರು.

    ರಾಜ್ಯದಲ್ಲಿ ಕೋಮು, ಜಾತಿಗಳು ಮೊದಲಿನಿಂದಲೂ ಇವೆ. ಆದರೆ ಈಗ ಅವುಗಳನ್ನು ಪ್ರಚೋದನೆ ಮಾಡಲಾಗುತ್ತಿದೆ. ಇದು ರಾಜಕೀಯ ಕಾರಣಕ್ಕೆ ಪ್ರಚೋದನೆ ಮಾಡಲಾಗುವುದು ಎಂದು ಅಮರೇಗೌಡ ಹೇಳಿದರು. ಇದನ್ನೂ ಓದಿ: ಇಂದು 90 ಕೇಸ್ – ಬೆಂಗ್ಳೂರಲ್ಲಿ 85, ಐದು ಜಿಲ್ಲೆಗಳಲ್ಲಿ ತಲಾ 5 ಪ್ರಕರಣ

    ರಾಜ್ಯದಲ್ಲಿಯ ಶಾಖೋತ್ಪನ್ನ ಸ್ಥಾವರಗಳನ್ನು ಖಾಸಗಿ ನೀಡುವ ವದಂತಿ ಇದೆ. ಆರ್ ಟಿಪಿಎಸ್, ಬಿಟಿಪಿಎಸ್ ಹಾಗೂ ವೈಟಿಪಿಎಸ್ ಖಾಸಗಿಯವರಿಗೆ ನೀಡುತ್ತಾರೆ ಎಂಬ ವದಂತಿ ಇದೆ. ಇದು ಆತಂಕಕಾರಿ. ಏ.24 ರಂದು ಕುಷ್ಟಗಿಯಲ್ಲಿ ಸಂವಿಧಾನ ಉಳಿಸಿ, ಸಂವಿಧಾನ ರಕ್ಷಣೆ ಕಾರ್ಯಕ್ರಮ ವಿವಿಧ ಸಂಘಟನೆಗಳಿಂದ ಆಯೋಜನೆ, ಈ ಕಾರ್ಯಕ್ರಮವು ಪಕ್ಷಾತೀತವಾಗಿ ಆಯೋಜನೆ ಮಾಡಲಾಗಿದೆ. ಸಿದ್ದರಾಮಯ್ಯ, ಸತೀಶ್ ಜಾರಕಿಹೊಳಿ, ಪ್ರಿಯಾಂಕ್ ಖರ್ಗೆ ಸೇರಿ ಭಾಗಿಯಾಗುತ್ತಿದ್ದಾರೆ ಎಂದರು.

    ಸಂವಿಧಾನವನ್ನು ಉಳಿಸಿಕೊಳ್ಳುವುದರ ಜೊತೆಗೆ ಇನ್ಜಷ್ಟು ಬಡವರಿಗೆ ಯೋಜನೆ ನೀಡುವ ಕುರಿತು ಚರ್ಚೆ ಸಂವಿಧಾನ ಬದಲಾವಣೆ ಮಾಡುತ್ತೇವೆ ಎಂದಿದ್ದಾರೆ. ಸಂವಿದಾನದ ಬದಲಾವಣೆ ಯಾದರೆ, ಸಮಾಜದಲ್ಲಿ ಆತಂಕವಿದೆ, ಸಂವಿದಾನ ಬದಲಾವಣೆ ಬೇಡ ಸಂವಿಧಾನ ಗಟ್ಟಿಗೊಳಿಸಬೇಕು, ಸಂವಿಧಾನ ತಿದ್ದಪಡಿ ಸಹಜ. ಆದರೆ ಮೀಸಲಾತಿ ವ್ಯವಸ್ಥೆ ಬದಲಾಗಿಲ್ಲ. ಸಂವಿಧಾನ ತಿದ್ದುಪಡಿಯಾಗಲಿ, ಸಂವಿಧಾನ ಬದಲಾವಣೆ ಬೇಡ ಎಂದರು.

  • ರಮೇಶ್ ಜಾರಕಿಹೊಳಿಗೆ ಬಿಜೆಪಿಯ ಗರ್ಭಗುಡಿ ಸಂಸ್ಕೃತಿ ಒಗ್ಗುತ್ತಿಲ್ಲ: ಅಮರೇಗೌಡ

    ರಮೇಶ್ ಜಾರಕಿಹೊಳಿಗೆ ಬಿಜೆಪಿಯ ಗರ್ಭಗುಡಿ ಸಂಸ್ಕೃತಿ ಒಗ್ಗುತ್ತಿಲ್ಲ: ಅಮರೇಗೌಡ

    ಕೊಪ್ಪಳ: ಮಾಜಿ ಸಚಿವ ರಮೇಶ್ ಜಾರಕಿಹೊಳಿ ಬಿಜೆಪಿ ಬಿಟ್ಟು ಬೇರೆ ಪಕ್ಷ ಸೇರಬಹುದು. ಅವರಿಗೆ ಬಿಜೆಪಿಯ ಗರ್ಭಗುಡಿ ಸಂಸ್ಕೃತಿ ಒಗ್ಗುತ್ತಿಲ್ಲ ಎನ್ನುವುದು ಅವರ ನಡುವಳಿಕೆಯಿಂದ ತಿಳಿಯುತ್ತಿದೆ ಎಂದು ಕುಷ್ಟಗಿ ಕ್ಷೇತ್ರದ ಶಾಸಕ ಅಮರೇಗೌಡ ಪಾಟೀಲ್ ಬಯ್ಯಾಪುರ ಹೇಳಿದ್ದಾರೆ.

    ಕೊಪ್ಪಳದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅಮರೇಗೌಡರು, ಜಾರಕಿಹೊಳಿ ಇತ್ತೀಚೆಗೆ ಕೆಲವರೊಂದಿಗೆ ಮುಂಬೈಗೆ ಹೋಗಿರುವುದನ್ನು ನೋಡಿದರೆ ಅವರು ಬಿಜೆಪಿ ತೊರೆಯುವ ಸಾಧ್ಯತೆ ಇದೆ. ಅವರೊಂದಿಗೆ ಕೆಲವರು ಕಾಂಗ್ರೆಸ್ ಅಥವಾ ಜೆಡಿಎಸ್‍ಗೆ ಮತ್ತೆ ಸೇರುವ ಸಾಧ್ಯತೆ ಇದೆ. ಒಂದು ವೇಳೆ ಅವರು ವಾಪಸ್ ಬಂದರೆ ಪಕ್ಷಕ್ಕೆ ಸೇರಿಸಿಕೊಳ್ಳುವ ಬಗ್ಗೆ ಪರಿಶೀಲಿಸಲಾಗುವುದು ಎಂದು ಅಭಿಪ್ರಾಯಪಟ್ಟರು. ಇದನ್ನೂ ಓದಿ: ಸರ್ಕಾರ ಬೀಳಿಸಿ, ರಚಿಸುವ ಶಕ್ತಿ ದೇವರು ಕೊಟ್ಟಿದ್ದಾನೆ: ರಮೇಶ್ ಜಾರಕಿಹೊಳಿ

    ಯಾವುದೇ ಪಕ್ಷದ ಶಾಸಕರಾಗಲಿ ಅವಧಿಯ ಮುನ್ನ ಪಕ್ಷಾಂತರ ಮಾಡಬಾರದು. ಚುನಾವಣಾ ಸಂದರ್ಭದಲ್ಲಿ ಪಕ್ಷಾಂತರ ಮಾಡಿದರೆ ನಡೆಯುತ್ತೆ. ಜಾರಕಿಹೊಳಿಯವರು ಯಡಿಯೂರಪ್ಪರನ್ನು ಸಿಎಂ ಸ್ಥಾನದಿಂದ ತೆಗೆಯಲು ಹೊರಟಿಲ್ಲ ಅನಿಸುತ್ತದೆ. ಯಾಕೆಂದರೆ ಯಡಿಯೂರಪ್ಪ ಅಧಿಕಾರಕ್ಕೆ ಬರಲು ರಮೇಶ್ ಜಾರಕಿಹೊಳಿ ಕಾರಣ. ಬಿಜೆಪಿ ಯಡಿಯೂರಪ್ಪ ಅವರನ್ನು ಬದಲಾಯಿಸುವುದು ಕಷ್ಟ ಬಿಜೆಪಿಯಲ್ಲಿ ಯಡಿಯೂರಪ್ಪ ಇಲ್ಲಂದ್ರೆ ಬಿಜೆಪಿ ಇಲ್ಲ ಎಂದು ಮತ್ತೊಮ್ಮೆ ಹೇಳಿದರು.

    ಸಮಯ ಸಂದರ್ಭ ಬಂದಾಗ ಶಾಸಕರು ಪಕ್ಷ ಬದಲಾಯಿಸುವುದು ಸಹಜ, ಆದರೆ ಇತ್ತೀಚಿನ ದಿನಗಳಲ್ಲಿ ಅವರು ಅತಿರೇಕಕ್ಕೆ ಹೋಗಿದೆ. ಕಾಂಗ್ರೆಸ್ ಸಿಎಂ ಸ್ಥಾನದ ಬಗ್ಗೆ ಈಗ ಚರ್ಚಿಸಿದರೆ ಬಿಜೆಪಿಗೆ ಅನುಕೂಲವಾಗಲಿದೆ. ನಾವೇ ಅವರಿಗೆ ಆಹಾರವಾಗುವುದು ಬೇಡ, ಕಾಂಗ್ರೆಸ್ 7-8 ಜನ ಸಿಎಂ ಸ್ಥಾನದ ಅರ್ಹತೆ ಹೊಂದಿದವರು ಇದ್ದಾರೆ. ಚುನಾವಣೆಯ ನಂತರ ಹೈಕಮಾಂಡ್ ನಿರ್ಧಾರ ತೆಗೆದುಕೊಳ್ಳಲಿದೆ. ಕೆಲವರು ಕೆಲವರ ಹೆಸರು ಹೇಳುತ್ತಿದ್ದರೂ ತಪ್ಪೇನಿಲ್ಲ ಎಂದು ಸಮಾಜಾಯಿಷಿ ನೀಡಿದರು.

  • ಮುಂದಿನ ಮುಖ್ಯಮಂತ್ರಿ ಸಿದ್ದರಾಮಯ್ಯ ಅಂತ ಈಗ ಹೇಳೋದು ತಪ್ಪು: ಅಮರೇಗೌಡ

    ಮುಂದಿನ ಮುಖ್ಯಮಂತ್ರಿ ಸಿದ್ದರಾಮಯ್ಯ ಅಂತ ಈಗ ಹೇಳೋದು ತಪ್ಪು: ಅಮರೇಗೌಡ

    ಕೊಪ್ಪಳ: ಮುಂದಿನ ಮುಖ್ಯಮಂತ್ರಿ ಸಿದ್ದರಾಮಯ್ಯ ಎಂದು ಈಗ ಹೇಳೋದು ತಪ್ಪು ಎಂದು ಕುಷ್ಟಗಿ ಕ್ಷೇತ್ರದ ಶಾಸಕ ಅಮರೇಗೌಡ ಪಾಟೀಲ್ ಹೇಳಿದ್ದಾರೆ.

    ಕೊಪ್ಪಳದ ಬಸಾಪುರದಲ್ಲಿ ಮಾತನಾಡಿದ ಶಾಸಕ, ಕಾಂಗ್ರೆಸ್ ಪಕ್ಷದಲ್ಲಿ ಮುಂದಿನ ಸಿಎಂ ಬಗ್ಗೆ ಚರ್ಚೆ ಮಾಡೋದು ಈಗ ಸೂಕ್ತವಲ್ಲ. ಕಾಂಗ್ರೆಸ್ ಪಕ್ಷದಲ್ಲಿ ನಾವು ಹೇಳಿದಂತೆ ಮುಖ್ಯಮಂತ್ರಿ ಮಾಡುವುದಿಲ್ಲ. ಹೈಕಮಾಂಡ್ ತೀರ್ಮಾನವೇ ಅಂತಿಮವಾಗಿರುತ್ತದೆ. ಹೀಗಾಗಿ ಯಾರೂ ಅದರ ಬಗ್ಗೆ ಪ್ರಸ್ತಾಪ ಮಾಡಬಾರದು. ಈ ಬಗ್ಗೆ ಜಮೀರ್ ಅಹಮ್ಮದ್ ಗೆ ಈಗಾಗಲೇ ಪಕ್ಷ ನಿರ್ದೇಶನ ಕೊಟ್ಟಿದೆ. ಅವರು ಪದೇ ಪದೇ ಹೇಳೋದು ಸರಿಯಲ್ಲ. ಹೀಗೆ ಹೇಳುವುದರಿಂದ ಪಕ್ಷಕ್ಕೆ ಮುಜುಗರವಾಗುತ್ತದೆ ಎಂದರು.

    ಈ ಹಿಂದೆ ಸಿಎಂ ಆಗಿದ್ದಾಗ ಸಿದ್ದರಾಮಯ್ಯ ಒಳ್ಳೆಯ ಕೆಲಸ ಮಾಡಿದ್ದಾರೆ. ಹೈಕಮಾಂಡ್ ತೀರ್ಮಾನ ಮಾಡಿದ್ರೆ ಸಿದ್ದರಾಮಯ್ಯರನ್ನೇ ಮುಖ್ಯಮಂತ್ರಿ ಮಾಡ್ತಾರೆ. ಅದರಲ್ಲಿ ಏನಿದೆ? ಆದರೆ ಇದನ್ನ ತೀರ್ಮಾನ ಮಾಡೋದು ಹೈಕಮಾಂಡ್. ಮುಂದಿನ ಸಿಎಂ ಬಗ್ಗೆ ಈ ಸಮಯದಲ್ಲಿ ಹೇಳುವ ಅವಶ್ಯಕತೆ ಇಲ್ಲ. ಸೂಕ್ತ ಸಮಯದಲ್ಲಿ ಇದನ್ನು ಹೇಳಬೇಕು. ಇನ್ನೂ ಎರಡು ವರ್ಷದ ಬಳಿಕ ಚುನಾವಣೆ ಇದೆ. ಹೈಕಮಾಂಡ್ ಮೊದಲೇ ಮುಖ್ಯಮಂತ್ರಿ ಅಭ್ಯರ್ಥಿ ಘೋಷಣೆ ಮಾಡಿದ್ರೆ ನಾವು ಅದನ್ನೇ ಹೇಳ್ತೀವಿ ಅಂದ್ರು. ಇದನ್ನೂ ಓದಿ: ಜಮೀರ್ ಮೊದಲು ಬಿಎಸ್‍ವೈ ಮನೆ ವಾಚ್‍ಮೆನ್ ಆಗಿ: ರೇಣುಕಾಚಾರ್ಯ

    ಬಿಜೆಪಿಯವರ ಬಗ್ಗೆ ನಾವು ಮಾತಾಡೋದು ಸರಿಯಲ್ಲ. ಆದರೆ ಅಮರೇಗೌಡ ರಾಜಕಾರಣ ಮಾಡ್ತಾರೆ ಅಂತ ಕುಷ್ಟಗಿಯ ಬಿಜೆಪಿ ಮಾಜಿ ಶಾಸಕ ದೊಡ್ಡನಗೌಡ ಪಾಟೀಲ್ ಹೇಳುತ್ತಾರೆ. ಹಾಗಾದ್ರೆ ನಾವು ರಾಜಕಾರಣ ಮಾಡೋಕೆ ಬಂದೀವಾ? ದನಕಾಯೋಕೆ ಬಂದೀವಾ ಎಂದರು. ಇದನ್ನೂ ಓದಿ: ಎಚ್‍ಡಿಕೆ ಸರ್ಕಾರ ಬೀಳಿಸಲು ಯಾರು ಷಡ್ಯಂತ್ರ ಮಾಡ್ತಿಲ್ಲ ಜಮೀರ್ ಅಹಮ್ಮದ್

  • ಕೇವಲ 100ರೂ. ವ್ಯಾಕ್ಸಿನ್‍ನಲ್ಲಿ ಪ್ರಚಾರ ಪಡೆಯಲು ಬಿಜೆಪಿ ಮುಂದಾಗಿದೆ: ಅಮರೇಗೌಡ

    ಕೇವಲ 100ರೂ. ವ್ಯಾಕ್ಸಿನ್‍ನಲ್ಲಿ ಪ್ರಚಾರ ಪಡೆಯಲು ಬಿಜೆಪಿ ಮುಂದಾಗಿದೆ: ಅಮರೇಗೌಡ

    ಕೊಪ್ಪಳ: ಕೇಂದ್ರ ಸರ್ಕಾರ ಕತ್ತೆಯ ಮುಂದೆ ಹುಲ್ಲು ಕಟ್ಟಿದಂತೆ ನಡೆದುಕೊಳ್ಳುತ್ತಿದೆ. ಅಚ್ಚೆ ದಿನ್, ಅಚ್ಚೆ ದಿನ್ ಎಂದು ಹೇಳುತ್ತಾ ಮಾತಿನಲ್ಲಿ ಕಾಲಹರಣ ಮಾಡುತ್ತಿದ್ದಾರೆ ಎಂದು ಕುಷ್ಟಗಿ ಶಾಸಕ ಅಮರೇಗೌಡ ಪಾಟೀಲ್ ಭಯ್ಯಾಪುರ ಟೀಕಿಸಿದ್ದಾರೆ.

    ಕೊಪ್ಪಳದ ಕುಷ್ಟಗಿಯಲ್ಲಿ ಅಲೆಮಾರಿ ಜನಾಂಗದವರಿಗೆ ಆಹಾರ ಕಿಟ್ ವಿತರಿಸಿದ ಬಳಿಕ ಮಾತನಾಡಿದ ಅವರು, ಅಚ್ಛೆದಿನ್ ಯಾರಿಗೆ ಬಂದಿದೆ ಎಂದು ಪ್ರಶ್ನಿಸಿದರು. ನಮಗ್ಯಾರಿಗೂ ಅಚ್ಛೆದಿನ್ ಬಂದಿಲ್ಲ. 7 ವರ್ಷದಲ್ಲಿ ಕೇಂದ್ರ ಸಾಧನೆ ಏನು? 70 ವರ್ಷದಲ್ಲಿ ಮಾಡಿದಿರುವ ಸಾಧನೆ ಮಾಡಿದ್ದೇವೆ ಎಂದು ಬಿಜೆಪಿಯವರು ಹೇಳುತ್ತಿದ್ದಾರೆ. ಈ ಸಾಧನೆ ಏನು ಎಂಬುವುದನ್ನು ಶ್ವೇತಪತ್ರ ಹೊರಡಿಸಲಿ ಎಂದು ಆಗ್ರಹಿಸಿದರು.

    ಲಾಕ್ ಡೌನ್ ಮಾಡಿದರೂ ಕೊರೊನಾ ನಿಯಂತ್ರಿಸಲಾಗಿಲ್ಲ. ಕೊರೊನಾ ನಿಯಂತ್ರಿಸಲು ರಾಜ್ಯ ಹಾಗೂ ಕೇಂದ್ರ ಸರಕಾರಗಳು ವಿಫಲವಾಗಿವೆ. ಲಾಕ್ ಡೌನ್ ಸಂದರ್ಭದಲ್ಲಿ ಸರ್ಕಾರ ಬಡವರ ನೆರವಿಗೆ ಬರಬೇಕಿತ್ತು. ವ್ಯಾಕ್ಸಿನ್ ಹಾಕಬೇಕಿತ್ತು. ವ್ಯಾಕ್ಸಿನ್ ನಲ್ಲಿ ಕಾಂಗ್ರೆಸ್ ರಾಜಕಾರಣ ಮಾಡಿದೆ ಎನ್ನುತ್ತಾರೆ. ಆದರೆ ಕಾಂಗ್ರೆಸ್ ಅವುಗಳ ಪರೀಕ್ಷೆ ಮಾಡಲು ಹೇಳಿದ್ದು ಸತ್ಯ. ಈಗ ವ್ಯಾಕ್ಸಿನ್ ಹಾಕಿಸಿಕೊಂಡು ಎಲ್ಲರೂ ಹಾಕಿಸಿಕೊಳ್ಳಲು ಹೇಳುತ್ತಿದ್ದೇವೆ. ಕೇವಲ ನೂರು ರೂಪಾಯಿಯ ವ್ಯಾಕ್ಸಿನ್ ನಲ್ಲಿ ಪ್ರಚಾರ ಪಡೆಯಲು ಬಿಜೆಪಿ ಮುಂದಾಗಿದೆ. ವ್ಯಾಕ್ಸಿನ್ ಮುಕ್ತ ಮಾರುಕಟ್ಟೆ ಗೆ ಬಂದರೆ ಎಲ್ಲರೂ ಹಾಕಿಸಿಕೊಳ್ಳುತ್ತಾರೆ ಎಂದರು.