Tag: Amavasya

  • ರಾಯಚೂರಿನಲ್ಲಿ ಮಣ್ಣೆತ್ತಿನ ಅಮವಾಸ್ಯೆ ಸಂಭ್ರಮ – ಜೋಡಿ ಎತ್ತುಗಳಿಗೆ ಫುಲ್ ಡಿಮ್ಯಾಂಡ್

    ರಾಯಚೂರಿನಲ್ಲಿ ಮಣ್ಣೆತ್ತಿನ ಅಮವಾಸ್ಯೆ ಸಂಭ್ರಮ – ಜೋಡಿ ಎತ್ತುಗಳಿಗೆ ಫುಲ್ ಡಿಮ್ಯಾಂಡ್

    ರಾಯಚೂರು: ಜಿಲ್ಲೆಯಲ್ಲಿ ಮಣ್ಣೆತ್ತಿನ ಅಮವಾಸ್ಯೆ ಸಂಭ್ರಮ ಜೋರಾಗಿದೆ. ಕಳೆದೆರಡು ವರ್ಷಕ್ಕಿಂತಲೂ ಹೆಚ್ಚು ಸಂಭ್ರಮದಿಂದ ಜೋಡಿ ಮಣ್ಣೆತ್ತುಗಳನ್ನು ಖರೀದಿಸಿ ಜನರು ಪೂಜಿಸುತ್ತಿದ್ದಾರೆ.

    ಭಾರತೀಯ ಸಂಸ್ಕೃತಿಯಲ್ಲಿ ಮಣ್ಣೆತ್ತಿನ ಹಬ್ಬ ಬಹಳ ವಿಶೇಷವಾಗಿದ್ದು, ಮುಂಗಾರು ಮಳೆ ಉತ್ತಮವಾಗಿ ಬರಲಿ ಅಂತ ರೈತರು ಮಾತ್ರವಲ್ಲದೆ ಎಲ್ಲರೂ ಪ್ರಾರ್ಥಿಸುತ್ತಾರೆ. ಲಾಕ್ ಡೌನ್ ಬಳಿಕ ಬಂದಿರುವ ಹಬ್ಬದ ಸಂಭ್ರಮ ಜೋರಾಗಿರುವುದರಿಂದ ಮಣ್ಣೆತ್ತಿಗೆ ಈ ವರ್ಷ ಬೇಡಿಕೆ ಜಾಸ್ತಿಯಾಗಿದೆ. ಆದರೆ ಮಣ್ಣೆತ್ತು ಮಾಡುವವರ ಕೊರತೆ ಜಿಲ್ಲೆಯಲ್ಲಿ ಎದ್ದು ಕಾಣುತ್ತಿದೆ. ಅಲ್ಲದೆ ಜನ ಮಣ್ಣೆತ್ತು ಖರೀದಿಗೆ ಬರುತ್ತಾರೋ ಇಲ್ಲವೋ ಅಂತ ಕುಂಬಾರರು ಕಡಿಮೆ ಎತ್ತುಗಳನ್ನ ಮಾಡಿದ್ದಾರೆ. ತಂಡೋಪತಂಡವಾಗಿ ಬಂದು ಜನ ಮಣ್ಣೆತ್ತು ಖರೀದಿಸುತ್ತಿದ್ದಾರೆ. ಮನೆಯಲ್ಲೇ ಮಣ್ಣೆತ್ತುಗಳಿಗೆ ಪೂಜೆ ಸಲ್ಲಿಸಲಾಗುತ್ತಿದೆ.

    ಗ್ರಾಮೀಣ ಭಾಗದಲ್ಲಿ ಹೆಚ್ಚಾಗಿ ಆಚರಿಸುವ ಮಣ್ಣೆತ್ತಿನ ಹಬ್ಬವನ್ನು ನಗರದ ಜನರು ಸಹ ಸಂಭ್ರಮಿಸುತ್ತಿದ್ದಾರೆ. 80 ರಿಂದ 100 ರೂಪಾಯಿಗೆ ಒಂದು ಜೋಡಿ ಎತ್ತುಗಳ ಮಾರಾಟ ನಡೆದಿದೆ. ಕಳೆದ ವರ್ಷ 40 ರಿಂದ 80 ರೂಪಾಯಿಗೆ ಮಾರಾಟ ಮಾಡಲಾಗಿತ್ತು. ಅಲ್ಲದೆ ಬೇಡಿಕೆಗೆ ಅನುಗುಣವಾಗಿ ಈ ವರ್ಷ ಎತ್ತುಗಳನ್ನ ಗ್ರಾಹಕರ ಮುಂದೆಯೇ ಮಾಡಿಕೊಡಲಾಗುತ್ತಿದೆ.  ಇದನ್ನೂ ಓದಿ: ಜಿ.ಪಂ ಸದಸ್ಯ ಯೋಗೇಶ್ ಗೌಡ ಕೊಲೆ ಕೇಸ್ – ಇಂದು ಬಾಂಬ್ ಸಿಡಿಸ್ತಾರಾ ಬಸವರಾಜ್ ಮುತ್ತಗಿ..?

  • ಭೂತಾಯಿಗೆ ಪೂಜೆ ಸಲ್ಲಿಸಿದ ರೈತರು

    ಭೂತಾಯಿಗೆ ಪೂಜೆ ಸಲ್ಲಿಸಿದ ರೈತರು

    ಕೊಪ್ಪಳ: ಪ್ರತಿವರ್ಷದಂತೆ ಈ ವರ್ಷವೂ ಕೂಡ ಜಿಲ್ಲೆಯಲ್ಲಿ ರೈತಾಪಿ ವರ್ಗದವರು ಎಳ್ಳು ಅಮಾವಾಸ್ಯೆಯ ದಿನದಂದು ಸೂರ್ಯ ಗ್ರಹಣ ಹಿನ್ನೆಲೆಯಲ್ಲಿ ಶ್ರದ್ಧಾ-ಭಕ್ತಿಯಿಂದ ಜಮೀನಿನಲ್ಲಿ ಬೆಳೆದಿರುವ ಫಸಲಿಗೆ ಪೂಜೆ ಸಲ್ಲಿಸಿದ್ದಾರೆ.

    ಎಳ್ಳು ಅಮವಾಸ್ಯೆ ದಿನದಂದು ಗ್ರಹಣ ಹಿನ್ನೆಲೆಯಲ್ಲಿ ಇಂದು ರೈತರು ಎತ್ತು ಬಂಡಿ ಕಟ್ಟಿಕೊಂಡು ತಮ್ಮ ತಮ್ಮ ಹೊಲಗಳಿಗೆ ಹೋಗಿದ್ದರು. ಜೊತೆಗೆ ನೆರೆಹೊರೆಯವರು, ಸ್ನೇಹಿತರನ್ನು ಕರೆದುಕೊಂಡು ಹೋಗಿ ಭೂತಾಯಿಗೆ ಪೂಜೆ ಸಲ್ಲಿಸಿದ್ದಾರೆ. ನಂತರ ಭೂಮಿಗೆ ಬಿತ್ತಿದ ಫಸಲು ಚೆನ್ನಾಗಿ ಬರಲಿ ಎಂದು ಬೆಳೆದು ನಿಂತಿರುವ ಬೆಳೆಗಳಿಗೆ ಹೊಲದಲ್ಲಿರುವ ಐದು ಕಲ್ಲುಗಳನ್ನು ಪ್ರತಿಷ್ಠಾಪಿಸಿ ಪೂಜೆ ಸಲ್ಲಿಸಿ ಹುಡಿ ತುಂಬಿದರು.

    ನೈವೇದ್ಯ ಮಾಡಿ ಆ ನೈವೇದ್ಯವನ್ನು ಇಡೀ ಹೊಲದ ತುಂಬೆಲ್ಲಾ ಚೆಲ್ಲಿ ತಮ್ಮನ್ನು ಕಾಪಾಡುವ ಭೂತಾಯಿಗೆ ಉಣಬಡಿಸುವರು. ಎಳ್ಳು ಹೊಳಿಗೆ, ಸೇಗಾ ಹೊಳಿಗೆ, ಸಜ್ಜಿ ರೋಟಿ, ಬಿಳಿಜೊಳದ ರೋಟಿ, ಸೇಗಾ ಚಟ್ನಿ, ಗುರೇಳ್ಳು ಚಟ್ನಿ, ಅನೇಕ ತಿಂಡಿ ತಿನಿಸುಗಳನ್ನು ಕಟ್ಟಿಕೊಂಡು ತಮ್ಮ ತಮ್ಮ ಹೊಲಕ್ಕೆ ಹೋಗಿ ಪೂಜೆ ಮಾಡಿ ಚರಗ ಚಲ್ಲಿದ್ದು ವಿಶೇಷವಾಗಿತ್ತು.

    ಊಟದ ಸವಿ:
    ಎಣ್ಣೆ ಬುಟ್ಟಿಯಲ್ಲಿ ತಂದ ಅಡುಗೆಯನ್ನು ಬಿಚ್ಚಿ ಕುಟುಂಬದವರು, ಬೀಗರು, ನೆರೆಹೊರೆಯವರು ಮತ್ತು ಸ್ನೇಹಿತರು ಸಾಮೂಹಿಕವಾಗಿ ಗಂಟೆಗಟ್ಟಲೇ ಊಟ ಸವಿದಿದ್ದಾರೆ. ಹೊಲದ ಫಸಲಿನ ಇಳುವರಿ ಕುರಿತು ‘ಕಾಕಾ ಈ ಸಲ ಗೋದಿ ಇಪ್ಪತ್ತು ಚೀಲ ಆದೀತನ, ಜ್ವಾಳಾ ಒಂದು ಮೂವತ್ತ ಚೀಲ ಆದೀತನ’ ಎಂದು ಲೆಕ್ಕಾಚಾರ ಹಾಕುತ್ತಾ ಊಟ ಸವಿದರು. ಮತ್ತೆ ಹೊಲದಲ್ಲಿನ ಕಡಲೆ ಗಿಡ ಕಿತ್ತುಕೊಂಡು ಸವಿಯುತ್ತಾ ಸಂಜೆಯಾಗುತ್ತಿದ್ದಂತೆ  ಮನೆಗೆ ಹೋಗಿದ್ದಾರೆ.

    ಹೊಲದಲ್ಲಿ ಉತ್ತಮ ಫಸಲು:
    ಹಿಂಗಾರಿ ಜೋಳ, ಕಡಲೆ, ಗೋಧಿ ಇತ್ತೀಚೆಗೆ ಸುರಿದ ಮಳೆಯಿಂದ ಬೆಳೆಗಳು ಚೆನ್ನಾಗಿ ಬಂದಿವೆ. ಎಳ್ಳು ಅಮಾವಾಸ್ಯೆ ರೈತ ಸಮುದಾಯದಲ್ಲಿ ಸಂಭ್ರಮ ಮನೆ ಮಾಡಿದೆ. ಎಂದಿನಂತೆಯೇ ಸಂಬಂಧಿಕರು, ಸ್ನೇಹಿತರಿಗೆ, ಆತ್ಮೀಯ ಒಡನಾಡಿಗಳಿಗೆ ಹೊಲಕ್ಕೆ ಊಟಕ್ಕೆ ಬರಲು ಆಹ್ವಾನ ನೀಡಿದ್ದರು. ಹೊಲದಲ್ಲಿ ಎಲ್ಲರೂ ಒಟ್ಟಾಗಿ ಸೇರಿ ಪೂಜೆ ಸಲ್ಲಿಸಿ, ಎಳ್ಳು ಅಮಾವಾಸ್ಯೆ ಆಚರಿಸಿದ್ದಾರೆ.

  • ಮಹಾಲಯ ಅಮವಾಸ್ಯೆ ಎಫೆಕ್ಟ್ – ದಸರಾ ಗಜಪಡೆ ತಾಲೀಮು ರದ್ದು

    ಮಹಾಲಯ ಅಮವಾಸ್ಯೆ ಎಫೆಕ್ಟ್ – ದಸರಾ ಗಜಪಡೆ ತಾಲೀಮು ರದ್ದು

    ಮೈಸೂರು: ದಸರಾ ಪ್ರಯುಕ್ತ ಪ್ರತಿದಿನ ಬೆಳಗ್ಗೆ ಮತ್ತು ಸಂಜೆ ಆನೆಗಳಿಗೆ ತಾಲೀಮು ನಡೆಯುತ್ತಿತ್ತು. ಆದರೆ ಇಂದು ಮಹಾಲಯ ಅಮವಾಸ್ಯೆಯ ಹಿನ್ನೆಲೆಯಲ್ಲಿ ಗಜಪಡೆಯ ತಾಲೀಮು ರದ್ದಾಗಿದೆ.

    ಅರಮನೆ ಆವರಣದ ಒಳಗೆಯೇ ಆನೆಗಳು ವಿಶ್ರಾಂತಿ ಪಡೆಯುತ್ತಿವೆ. ಅರಮನೆ ಆವರಣದ ಒಳಗೆ ಒಂದೆರಡು ಸುತ್ತು ವಾಕಿಂಗ್ ಮಾಡಿದ ಗಜಪಡೆ ನಂತರ ವಿಶ್ರಾಂತಿಗೆ ಜಾರಿವೆ. ಅಮವಾಸ್ಯೆ ಆಗಿರುವ ಕಾರಣ ಅರಮನೆ ಆವರಣದಿಂದ ಆನೆಗಳನ್ನು ಹೊರಕ್ಕೆ ಕರೆದೊಯ್ದರೆ ಏನಾದರೂ ಅನಾಹುತ ಆಗಬಹುದೆಂಬ ಭಯ ಆನೆಯ ಮಾವುತರು ಮತ್ತು ಕಾವಾಡಿಗಳದ್ದು. ಈ ಹಿನ್ನೆಲೆಯಲ್ಲಿ ಅರಮನೆಯ ಆವರಣದಲ್ಲೇ ಗಜಪಡೆಗೆ ತಾಲೀಮು ನೀಡಲಾಯಿತು. ಕಳೆದ ಅಮಾವಾಸ್ಯೆಯಂದು ಕೂಡ ದಸರಾ ಗಜಪಡೆಯ ತಾಲೀಮನ್ನು ಅರಮನೆ ಆವರಣಕ್ಕೆ ಸೀಮಿತಗೊಳಿಸಲಾಗಿತ್ತು.

    ಪ್ರತಿದಿನ ಅರಮನೆಯಿಂದ ಕೆ.ಆರ್ ವೃತ್ತ ಸಯ್ಯಾಜಿರಾವ್ ರಸ್ತೆ ತಿಲಕ್‍ನಗರ ಬಂಬೂಬಜಾರ್, ಹೈವೇ ವೃತ್ತದ ಮೂಲಕ ಬನ್ನಿಮಂಟಪ ತಲುಪುತ್ತಿದ್ದವು. ಬಳಿಕ ಅದೇ ಮಾರ್ಗವಾಗಿ ಆನೆಗಳು ಮೈಸೂರು ಅರಮನೆಗೆ ವಾಪಸ್ಸಾಗುತ್ತಿದ್ದವು. ಆದರೆ ಇಂದು ಅಮಾವಾಸ್ಯೆಯಾಗಿದ್ದರಿಂದ ತಾಲೀಮು ನಡೆಯುತ್ತಿಲ್ಲ. ಪ್ರತಿ ಅಮಾವಾಸ್ಯೆಯ ಸಮಯದಲ್ಲಿ ಆನೆಗಳಿಗೆ ತಾಲೀಮು ನಡೆಸುವುದಿಲ್ಲ.

    ತಾಲೀಮು ಏಕೆ?
    ಆನೆಗಳಿಗೆ ಜನರ ಗದ್ದಲ, ವಾಹನಗಳ ಧ್ವನಿ ಮತ್ತು ರಸ್ತೆಯ ಪರಿಚಯ ಮಾಡುವ ಉದ್ದೇಶದಿಂದ ಈ ತಾಲೀಮು ಮಾಡಿಸಲಾಗುತ್ತದೆ. ಅಲ್ಲದೆ ಕಾಡಿನಲ್ಲಿ ಓಡಾಡುವ ಆನೆಗಳು ಸಿಮೆಂಟ್ ಹಾಗೂ ಕಾಂಕ್ರಿಟ್ ರಸ್ತೆ ಮೇಲೆ ನಡೆಯುವುದನ್ನು ಅಭ್ಯಾಸ ಮಾಡಿಸುವುದು ಈ ತಾಲೀಮಿನ ಉದ್ದೇಶವಾಗಿದೆ. ತಾಲೀಮು ಮುಗಿದ ನಂತರ ಆನೆಗಳಿಗೆ ಪೌಷ್ಠಿಕ ಆಹಾರ ನೀಡಿ ಅವು ಸದೃಢವಾಗಿರುವಂತೆ ನೋಡಿಕೊಳ್ಳಲಾಗುತ್ತದೆ. ಯಾವುದೇ ಹಂತದಲ್ಲೂ ಆನೆಗಳು ಸಿಮೆಂಟ್ ಹಾಗೂ ಕಾಂಕ್ರಿಟ್ ರಸ್ತೆ ಮೇಲೆ ಸಾಗಿ ಸುಸ್ತಾಗದಂತೆ ನೋಡಿಕೊಳ್ಳುವುದು ಅತಿ ಮುಖ್ಯವಾಗಿದೆ ಎಂದು ಆನೆ ವೈದ್ಯರಾದ ಡಾ. ನಾಗರಾಜ್ ಹೇಳಿದ್ದರು.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

  • ಮೈಸೂರು ದಸರಾ ಗಜಪಡೆ ತಾಲೀಮಿಗೆ ಬ್ರೇಕ್!

    ಮೈಸೂರು ದಸರಾ ಗಜಪಡೆ ತಾಲೀಮಿಗೆ ಬ್ರೇಕ್!

    ಮೈಸೂರು: ಇಂದು ಅಮಾವಾಸ್ಯೆ ಹಿನ್ನೆಲೆಯಲ್ಲಿ ದಸರಾ ಗಜಪಡೆಗೂ ಅಮಾವಾಸ್ಯೆ ಬಿಸಿ ಮುಟ್ಟಿದ್ದು, ಗಜಪಡೆ ತಾಲೀಮಿಗೆ ಬ್ರೇಕ್ ಬಿದ್ದಿದೆ.

    ದಸರಾ ಪ್ರಯುಕ್ತ ಪ್ರತಿದಿನ ಬೆಳಗ್ಗೆ ಸಂಜೆ ಆನೆಗಳಿಗೆ ತಾಲೀಮು ನಡೆಯುತ್ತಿತ್ತು. ಪ್ರತಿದಿನ ಅರಮನೆಯಿಂದ ಕೆ.ಆರ್ ವೃತ್ತ ಸಯ್ಯಾಜಿರಾವ್ ರಸ್ತೆ ತಿಲಕ್‍ನಗರ ಬಂಬೂಬಜಾರ್, ಹೈವೆ ವೃತ್ತದ ಮೂಲಕ ಬನ್ನಿಮಂಟಪ ತಲುಪುತ್ತಿದ್ದವು. ಬಳಿಕ ಅದೇ ಮಾರ್ಗವಾಗಿ ಆನೆಗಳು ಮೈಸೂರು ಅರಮನೆಗೆ ವಾಪಸ್ಸಾಗುತ್ತಿದ್ದವು. ಆದರೆ ಇಂದು ಅಮಾವಾಸ್ಯೆಯಾಗಿದ್ದರಿಂದ ತಾಲೀಮು ನಡೆಯುತ್ತಿಲ್ಲ. ಪ್ರತಿ ಅಮಾವಾಸ್ಯೆ ಬಂದರೂ ಆನೆಗಳಿಗೆ ತಾಲೀಮು ನಡೆಸುವುದಿಲ್ಲ. ಇದನ್ನೂ ಓದಿ: ಮೈಸೂರೊಳಗೆ ದಸರಾ ಆನೆ ಟೀಂ ವಾಕಿಂಗ್- ವಿಡಿಯೋ ನೋಡಿ

    ಮೈಸೂರಿನ ಒಳಗೆ 40 ದಿನ ಗಜಪಡೆಯೂ ವಾಕಿಂಗ್ ಮಾಡುತ್ತದೆ. ದಸರಾ ತಾಲೀಮು ರೂಪದ ವಾಕಿಂಗ್ ಅನ್ನು ಗಜಪಡೆಯೂ ಬೆಳಗ್ಗೆ ಮತ್ತು ಸಂಜೆ ಮಾಡಲಿವೆ. ಕ್ಯಾಪ್ಟನ್ ಅರ್ಜುನ ನೇತೃತ್ವದ ಗಜಪಡೆಯ ವಾಕಿಂಗ್ ಪ್ರತಿದಿನ ಅರಮನೆಯ ಆವರಣದಿಂದ ಆರಂಭವಾಗುತ್ತದೆ.

    ತಾಲೀಮು ಏಕೆ?
    ಆನೆಗಳಿಗೆ ಜನರ ಗದ್ದಲ, ವಾಹನಗಳ ಧ್ವನಿ ಮತ್ತು ರಸ್ತೆಯ ಪರಿಚಯ ಮಾಡುವ ಉದ್ದೇಶದಿಂದ ಈ ತಾಲೀಮು ಮಾಡಿಸಲಾಗುತ್ತದೆ. ಅಲ್ಲದೆ ಕಾಡಿನಲ್ಲಿ ಓಡಾಡುವ ಆನೆಗಳು ಸಿಮೆಂಟ್ ಹಾಗೂ ಕಾಂಕ್ರಿಟ್ ರಸ್ತೆ ಮೇಲೆ ನಡೆಯುವುದನ್ನು ಅಭ್ಯಾಸ ಮಾಡಿಸುವುದು ಈ ತಾಲೀಮಿನ ಉದ್ದೇಶವಾಗಿದೆ. ತಾಲೀಮು ಮುಗಿದ ನಂತರ ಆನೆಗಳಿಗೆ ಪೌಷ್ಠಿಕ ಆಹಾರ ನೀಡಿ ಅವು ಸದೃಢವಾಗಿರುವಂತೆ ನೋಡಿಕೊಳ್ಳಲಾಗುತ್ತದೆ. ಯಾವುದೇ ಹಂತದಲ್ಲೂ ಆನೆಗಳು ಸಿಮೆಂಟ್ ಹಾಗೂ ಕಾಂಕ್ರಿಟ್ ರಸ್ತೆ ಮೇಲೆ ಸಾಗಿ ಸುಸ್ತಾಗದಂತೆ ನೋಡಿಕೊಳ್ಳುವುದು ಅತಿ ಮುಖ್ಯವಾಗಿದೆ ಎಂದು ಆನೆ ವೈದ್ಯರಾದ ಡಾ. ನಾಗರಾಜ್ ಹೇಳಿದ್ದರು.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv