Tag: ambani

  • AR Wedding Celebrations Photo Gallery: ಅನಂತ್‌ ಅಂಬಾನಿ – ರಾಧಿಕಾ ಮರ್ಚೆಂಟ್‌ ವಿವಾಹಮಹೋತ್ಸವದಲ್ಲಿ ತಾರೆಗಳ ದಂಡು!

    AR Wedding Celebrations Photo Gallery: ಅನಂತ್‌ ಅಂಬಾನಿ – ರಾಧಿಕಾ ಮರ್ಚೆಂಟ್‌ ವಿವಾಹಮಹೋತ್ಸವದಲ್ಲಿ ತಾರೆಗಳ ದಂಡು!

    ರಿಲಯನ್ಸ್‌ ಇಂಡಸ್ಟ್ರೀಸ್‌ ಅಧ್ಯಕ್ಷ ಮುಕೇಶ್ ಅಂಬಾನಿ (Mukesh Ambani) ಅವರ ಕಿರಿಯ ಪುತ್ರ ಅನಂತ್‌ ಅಂಬಾನಿ‌ (Anant Ambani) ಹಾಗೂ ಕೈಗಾರಿಕೋದ್ಯಮಿ ವೀರೇನ್ ಮರ್ಚಂಟ್‌ ಅವರ ಪುತ್ರಿ ರಾಧಿಕಾ ಮರ್ಚೆಂಟ್‌ (RadhikaMerchant) ಅವರ ವಿವಾಹ ಮಹೋತ್ಸವ ವೈಭವೋಪೇತವಾಗಿ ನೆರವೇರಿದೆ. ಜುಲೈ 12ರಂದು ವಿವಾಹಮಹೋತ್ಸವ ನೆರವೇರಿದ್ದರೂ ಜು.13, 14ರಂದು ರಿಸೆಪ್ಷನ್ ಮಾದರಿಯ ಎರಡು ಸಮಾರಂಭ ಜರುಗಲಿದೆ. ಮುಂಬೈನ ಜಿಯೋ ವರ್ಲ್ಡ್ ಕನ್ವೆನ್ಶನ್‌ ಸೆಂಟರ್‌ನಲ್ಲಿ ನಡೆಯುತ್ತಿರುವ ಈ ಅದ್ಧೂರಿ ವಿವಾಹ ಮಹೋತ್ಸವಕ್ಕೆ ದೇಶ-ವಿದೇಶಗಳಿಂದ ನೂರಾರು ಗಣ್ಯರು ಆಗಮಿಸಿದ್ದಾರೆ. ಅನಂತ್-ರಾಧಿಕಾ ಮದುವೆಗೆ ಯಾರೆಲ್ಲ ಆಗಮಿಸಿದ್ದಾರೆ? ಎಂಬುದನ್ನಿಲ್ಲಿ ನೋಡಿ….

    ಎಂ.ಎಸ್‌ ಧೋನಿ ಅವರೊಂದಿಗೆ ಪತ್ನಿ ಸಾಕ್ಷಿ ಧೋನಿ ಮತ್ತು ಮಗಳು ಝಿವಾ

    ಅನಂತ್‌ ಅಂಬಾನಿ-ರಾಧಿಕಾ ಮರ್ಚೆಂಟ್‌ ವಿವಾಹ ಮಹೋತ್ಸವದಲ್ಲಿ ಸಾರಾ ಅಲಿ ಖಾನ್ ಮತ್ತು ಸಹೋದರ ಇಬ್ರಾಹಿಂ ಅಲಿ ಖಾನ್‌

    ಅನಂತ್‌ ಅಂಬಾನಿ-ರಾಧಿಕಾ ಮರ್ಚೆಂಟ್‌ ವಿವಾಹ ಮಹೋತ್ಸವದಲ್ಲಿ ಬಾಲಿವುಡ್‌ ನಟಿ ಅನನ್ಯಾ ಪಾಂಡೆ

    ಅನಂತ್‌ ಅಂಬಾನಿ-ರಾಧಿಕಾ ಮರ್ಚೆಂಟ್‌ ವಿವಾಹ ಮಹೋತ್ಸವದಲ್ಲಿ ಬಾಲಿವುಡ್‌ ನಟಿ ಅನನ್ಯಾ ಪಾಂಡೆ

    ಅನಂತ್‌ ಅಂಬಾನಿ-ರಾಧಿಕಾ ಮರ್ಚೆಂಟ್‌ ವಿವಾಹ ಮಹೋತ್ಸವದಲ್ಲಿ ಹಾಟ್‌ ಆಗಿ ಕಾಣಿಸಿಕೊಂಡ ದಿಶಾ ಪಠಾಣಿ

    ಅನಂತ್‌ ಅಂಬಾನಿ-ರಾಧಿಕಾ ಮರ್ಚೆಂಟ್‌ ವಿವಾಹ ಮಹೋತ್ಸವ – ಕ್ರೇಜಿ ಲುಕ್‌ನಲ್ಲಿ ಅರ್ಜುನ್‌ ಕಪೂರ್‌

    ಅನಂತ್‌ ಅಂಬಾನಿ-ರಾಧಿಕಾ ಮರ್ಚೆಂಟ್‌ ವಿವಾಹ ಮಹೋತ್ಸವದಲ್ಲಿ ಖ್ಯಾತ ಗಾಯಕ ಶಂಕರ್‌ ಮಹಾದೇವನ್‌ – ಪತ್ನಿ ಸಂಗೀತಾ ಮಹಾದೇವನ್‌

    ಅನಂತ್‌ ಅಂಬಾನಿ-ರಾಧಿಕಾ ಮರ್ಚೆಂಟ್‌ ವಿವಾಹ ಮಹೋತ್ಸವದಲ್ಲಿ ರಾಣಾ ದಗ್ಗುಬಾಟಿ – ಮಿಹೀಕಾ ದಗ್ಗುಬಾಟಿ ದಂಪತಿ

    ಅಂಬಾನಿ ಪುತ್ರನ ಮದುವೆ ಸಮಾರಂಭದಲ್ಲಿ ಫಿಫಾ ಅಧ್ಯಕ್ಷ ಗಿಯಾನಿ ಇನ್ಫಾಂಟಿನೊ ಹಾಗೂ ಪತ್ನಿ ಲೀನಾ ಅಲ್ ಅಶ್ಕರ್

    ಅನಂತ್‌ ಅಂಬಾನಿ-ರಾಧಿಕಾ ಮರ್ಚೆಂಟ್‌ ವಿವಾಹ ಮಹೋತ್ಸವದಲ್ಲಿ ಮಹೇಶ್‌ ಬಾಬು ಜೊತೆಗೆ ಪತ್ನಿ ನಮ್ರತಾ ಶಿರೋಡ್ಕರ್

    ನಟ ಮಹೇಶ್‌ ಬಾಬು
    ಅನಂತ್‌ ಅಂಬಾನಿ-ರಾಧಿಕಾ ಮರ್ಚೆಂಟ್‌ ವಿವಾಹ ಮಹೋತ್ಸವದಲ್ಲಿ ಬಾಲಿವುಡ್‌ ನಟಿ ಮಾಧುರಿ ದೀಕ್ಷಿತ್ ಮತ್ತು ಕುಟುಂಬ
    ಬಾಲಿವುಡ್‌ ನಟಿ ಮಾಧುರಿ ದೀಕ್ಷಿತ್
    ಬಾಲಿವುಡ್‌ ಚಿತ್ರ ನಿರ್ಮಾಪಕ ಕರಣ್ ಜೋಹರ್
    ಅನಂತ್‌ ಅಂಬಾನಿ-ರಾಧಿಕಾ ಮರ್ಚೆಂಟ್‌ ವಿವಾಹ ಮಹೋತ್ಸವದಲ್ಲಿ ಸಾರಾ ಅಲಿ ಖಾನ್ ಮತ್ತು ಸಹೋದರ ಇಬ್ರಾಹಿಂ ಅಲಿ ಖಾನ್‌
    ಅನಂತ್‌ ಅಂಬಾನಿ-ರಾಧಿಕಾ ಮರ್ಚೆಂಟ್‌ ವಿವಾಹ ಮಹೋತ್ಸವದಲ್ಲಿ ಕರಣ್‌ ಜೋಹರ್‌, ಸ್ನೇಹಿತ ಪ್ರಬಲ್ ಗುರುಂಗ್

    ಅನಂತ್‌ ಅಂಬಾನಿ-ರಾಧಿಕಾ ಮರ್ಚೆಂಟ್‌ ವಿವಾಹ ಮಹೋತ್ಸವದಲ್ಲಿ ಖುಷಿ ಕಪೂರ್‌!

    ಅನಂತ್‌ ಅಂಬಾನಿ-ರಾಧಿಕಾ ಮರ್ಚೆಂಟ್‌ ವಿವಾಹ ಮಹೋತ್ಸವದಲ್ಲಿ ಪತ್ನಿಯೊಂದಿಗೆ ಮಿಂಚಿದ ಲೆಂಜೆಡರಿ ಕ್ರಿಕೆಟರ್‌ ಕೃಷ್ಣಮಾಚಾರಿ ಶ್ರೀಕಾಂತ್

    ಅನಂತ್‌ ಅಂಬಾನಿ-ರಾಧಿಕಾ ಮರ್ಚೆಂಟ್‌ ವಿವಾಹ ಮಹೋತ್ಸವದಲ್ಲಿ ಮಿಂಚಿದ ಶನಯಾ ಕಪೂರ್ಅನಂತ್‌ ಅಂಬಾನಿ-ರಾಧಿಕಾ ಮರ್ಚೆಂಟ್‌ ವಿವಾಹ ಮಹೋತ್ಸವದಲ್ಲಿ ಮಿಂಚಿದ ಶನಯಾ ಕಪೂರ್

    ಅನಂತ್‌ ಅಂಬಾನಿ-ರಾಧಿಕಾ ಮರ್ಚೆಂಟ್‌ ವಿವಾಹ ಮಹೋತ್ಸವದಲ್ಲಿ ಆತ್ಮೀಯ ಗೆಳೆಯ ಓರ್ರಿ ಅವತ್ರಮಣಿ
    ಅನಂತ್‌ ಅಂಬಾನಿ-ರಾಧಿಕಾ ಮರ್ಚೆಂಟ್‌ ವಿವಾಹ ಮಹೋತ್ಸವದಲ್ಲಿ ಪತ್ನಿಯೊಂದಿಗೆ ಎ.ಆರ್‌ ರೆಹಮಾನ್‌
    ಅನಂತ್‌ ಅಂಬಾನಿ-ರಾಧಿಕಾ ಮರ್ಚೆಂಟ್‌ ವಿವಾಹ ಮಹೋತ್ಸವದಲ್ಲಿ ತೆಲುಗು ನಟ ದಗ್ಗುಬಾಟಿ ವೆಂಕಟೇಶ್‌
    ಅನಂತ್‌ ಅಂಬಾನಿ-ರಾಧಿಕಾ ಮರ್ಚೆಂಟ್‌ ವಿವಾಹ ಮಹೋತ್ಸವದಲ್ಲಿ ಇಶಾನ್‌ ಕಿಶನ್‌, ಕೃನಾಲ್‌ ಪಾಂಡ್ಯ, ಕೃನಾಲ್‌ ಪತ್ನಿ ಪಂಖೂರಿ ಶರ್ಮಾ ಹಾಗೂ ಹಾರ್ದಿಕ್‌ ಪಾಂಡ್ಯ

    ಅನಂತ್‌ ಅಂಬಾನಿ-ರಾಧಿಕಾ ಮರ್ಚೆಂಟ್‌ ವಿವಾಹ ಮಹೋತ್ಸವದಲ್ಲಿ ಖ್ಯಾತ ಸಿನಿ ನಿರ್ದೇಶಕ ಅಟ್ಲಿ ಕುಮಾರ್ – ಕೃಷ್ಣ ಪ್ರಿಯಾ ದಂಪತಿ

    ಅನಂತ್‌ ಅಂಬಾನಿ-ರಾಧಿಕಾ ಮರ್ಚೆಂಟ್‌ ವಿವಾಹ ಮಹೋತ್ಸವದಲ್ಲಿ ನಟ ರಜನಿಕಾಂತ್‌ ಕುಟುಂಬ

    ಅನಂತ್‌ ಅಂಬಾನಿ-ರಾಧಿಕಾ ಮರ್ಚೆಂಟ್‌ ವಿವಾಹ ಮಹೋತ್ಸವದಲ್ಲಿ ತಲೈವಾ

    ಅನಂತ್‌ ಅಂಬಾನಿ-ರಾಧಿಕಾ ಮರ್ಚೆಂಟ್‌ ವಿವಾಹ ಮಹೋತ್ಸವದಲ್ಲಿ ನಟ ಅನಿಲ್‌ ಕಪೂರ್‌ ಖದರ್‌ ಲುಕ್‌

    ಅನಂತ್‌ ಅಂಬಾನಿ-ರಾಧಿಕಾ ಮರ್ಚೆಂಟ್‌ ವಿವಾಹ ಮಹೋತ್ಸವದಲ್ಲಿ ಕೃತಿ ಸನೋನ್

    ಅನಂತ್‌ ಅಂಬಾನಿ-ರಾಧಿಕಾ ಮರ್ಚೆಂಟ್‌ ವಿವಾಹ ಮಹೋತ್ಸವದಲ್ಲಿ ಬಾಲಿವುಡ್‌ ನಟ ವರುಣ್‌ ಧವನ್‌

    ಅನಂತ್‌ ಅಂಬಾನಿ-ರಾಧಿಕಾ ಮರ್ಚೆಂಟ್‌ ವಿವಾಹ ಮಹೋತ್ಸವದಲ್ಲಿ ಟ್ರೆಡಿಷನಲ್‌ ಲುಕ್‌ನಲ್ಲಿ ಮಿಂಚಿದ WWE ಸ್ಟಾರ್‌ ಜಾನ್‌ ಸೀನಾ

    ಅನಂತ್‌ ಅಂಬಾನಿ-ರಾಧಿಕಾ ಮರ್ಚೆಂಟ್‌ ವಿವಾಹ ಮಹೋತ್ಸವದಲ್ಲಿ ಬಾಲಿವುಡ್‌ ನಟ ಜಾಕಿ ಶ್ರಾಫ್ ಖದರ್‌

    ಅನಂತ್‌ ಅಂಬಾನಿ-ರಾಧಿಕಾ ಮರ್ಚೆಂಟ್‌ ಮದುವೆ ಸಮಾರಂಭದಲ್ಲಿ ಪತ್ನಿಯೊಂದಿಗೆ ರಾಜಕುಮಾರ್ ರಾವ್ ಪತ್ರಲೇಖ

    ಅನಂತ್‌ ಅಂಬಾನಿ-ರಾಧಿಕಾ ಮರ್ಚೆಂಟ್‌ ವಿವಾಹ ಮಹೋತ್ಸವದಲ್ಲಿ ಕುಟುಂಬದೊಂದಿಗೆ ರಾಜ್‌ಕುಮಾರ್ ಹಿರಾಣಿ
  • ಅಂಬಾನಿ, ಅದಾನಿ ಟೆಂಪೋದಲ್ಲಿ ಹಣ ಕಳುಹಿಸುತ್ತಾರೆ- ಮೋದಿಗೆ ರಾಗಾ ತಿರುಗೇಟು

    ಅಂಬಾನಿ, ಅದಾನಿ ಟೆಂಪೋದಲ್ಲಿ ಹಣ ಕಳುಹಿಸುತ್ತಾರೆ- ಮೋದಿಗೆ ರಾಗಾ ತಿರುಗೇಟು

    ನವದೆಹಲಿ: ಅಂಬಾನಿ, ಅದಾನಿ ಹೆಸರು ಉಲ್ಲೇಖಿಸಿ ಪ್ರಧಾನಿ ನರೇಂದ್ರ ಮೋದಿಯವರು ಟಾಂಗ್‌ ನೀಡಿದ್ದಕ್ಕೆ ಇದೀಗ ಕೈ ನಾಯಕ ರಾಹುಲ್‌ ಗಾಂಧಿ (Rahul Gandhi) ತಿರುಗೇಟು ಕೊಟ್ಟಿದ್ದಾರೆ.

    ಈ ಸಂಬಂಧ ವೀಡಿಯೋ ಮಾಡಿದ ರಾಗಾ, ನಮಸ್ಕಾರ ಮೋದಿ ಅವರೇ, ಏನು ಭಯಗೊಂಡಿದ್ದೀರಾ..?. ಸಾಮಾನ್ಯವಾಗಿ ನೀವು ಮುಚ್ಚಿದ ಕೋಣೆಯಲ್ಲಿ ಅಂಬಾನಿ (Mukesh Ambani), ಅದಾನಿ (Adani) ಬಗ್ಗೆ ನೀವು ಮಾತನಾಡುತ್ತೀರಿ. ಆದರೆ ಇಂದು ಮೊದಲ ಬಾರಿಗೆ ಸಾರ್ವಜನಿಕವಾಗಿ ಮಾತನಾಡಿದ್ದೀರಿ. ಅವರು ಟೆಂಪೋದಲ್ಲಿ ಹಣ ಕೊಡ್ತಾರೆ ಅಂತಾ ನಿಮಗೆ ಗೊತ್ತು. ಇದು ನಿಮ್ಮ ವೈಯಕ್ತಿಕ ಅನುಭವನಾ ಎಂದು ಪ್ರಶ್ನಿಸಿದ್ದಾರೆ.

    ಸಿಬಿಐ, ಇಡಿ ಕಳುಹಿಸಿ ಸಾಧ್ಯವಾದಷ್ಟು ಬೇಗ ವಿಚಾರಣೆ ನಡೆಸಿ ಹೆದರಿಕೊಳ್ಳಬೇಡಿ. ನಾನು ಮತ್ತೆ ಹೇಳುತ್ತೇನೆ ಪ್ರಧಾನಿ ನರೇಂದ್ರ ಮೋದಿಯವರು (Narendra Modi) ಅಂಬಾನಿ, ಅದಾನಿಗೆ ನೀಡಿದ್ದಾರೆ. ಅಷ್ಟೇ ಹಣವನ್ನು ನಾನು ಭಾರತದ ಬಡವರಿಗೆ ನೀಡುತ್ತೇವೆ ಎಂದು ಹೇಳಿದರು. ಇದನ್ನೂ ಓದಿ: ಈ ಚುನಾವಣೆಯಲ್ಲಿ ಅದಾನಿ-ಅಂಬಾನಿಯನ್ನು ನಿಂದಿಸುತ್ತಿಲ್ಲ ಯಾಕೆ – ರಾಹುಲ್‌ಗೆ ಮೋದಿ ಪ್ರಶ್ನೆ

    ಮಹಾಲಕ್ಷ್ಮಿ, ಮೊದಲ ಉದ್ಯೋಗ ಯೋಜನೆ ಮೂಲಕ ಕೋಟ್ಯಂತರ ಜನರನ್ನು ಲಕ್ಷಾಧಿಪತಿಯನ್ನಾಗಿ ಮಾಡುತ್ತೇವೆ. ಮೋದಿ ಅವರು 22 ಜನರನ್ನು ಕೊಟ್ಯಾಧಿಪತಿ ಮಾಡಿದ್ದಾರೆ. ಆದರೆ ನಾವು ಕೋಟ್ಯಾಂತರ ಜನರನ್ನು ಲಕ್ಷಾಧಿಪತಿ ಮಾಡಲಿದ್ದೇವೆ ಎಂದು ರಾಹುಲ್‌ ಗಾಂಧಿ ಭರವಸೆ ಕೊಟ್ಟರು.

    ಮೋದಿ ಹೇಳಿದ್ದೇನು..?; ತೆಲಂಗಾಣದ ಕರೀಂಪುರದಲ್ಲಿ ನಡೆದ ಪಕ್ಷದ ಪ್ರಚಾರ ಸಭೆಯಲ್ಲಿ ಭಾಷಣ ಮಾಡಿದ ಅವರು, ಐದು ವರ್ಷಗಳಿಂದ ಕಾಂಗ್ರೆಸ್‌ನ ಶೆಹಜಾದ (ರಾಹುಲ್‌ ಗಾಂಧಿ) ಒಂದು ಮಾತನ್ನು ಜಪಿಸುತ್ತಲೇ ಇದ್ದರು. ಅವರ ರಫೇಲ್ ವಿವಾದದ ನಂತರ ಅವರು ಹೊಸ ಜಪವನ್ನು ಪ್ರಾರಂಭಿಸಿದರು. ಹೋದಲ್ಲಿ ಬಂದಲ್ಲಿ ಐದು ಕೈಗಾರಿಕೋದ್ಯಮಿಗಳು, ಐದು ಕೈಗಾರಿಕೋದ್ಯಮಿಗಳು ಎಂದು ಹೇಳುತ್ತಿದ್ದರು. ನಂತರ ಅವರು ಅಂಬಾನಿ-ಅದಾನಿ ಎಂದು ಹೇಳಲು ಪ್ರಾರಂಭಿಸಿದರು. ಆದರೆ ಚುನಾವಣೆ ಘೋಷಣೆಯಾದಾಗಿನಿಂದ ಅವರು ಅಂಬಾನಿ ಮತ್ತು ಅದಾನಿಯನ್ನು ನಿಂದಿಸುತ್ತಿಲ್ಲ ಯಾಕೆ ಎಂದು ಪ್ರಶ್ನಿಸಿದ್ದರು.

  • ಈ ಚುನಾವಣೆಯಲ್ಲಿ ಅದಾನಿ-ಅಂಬಾನಿಯನ್ನು ನಿಂದಿಸುತ್ತಿಲ್ಲ ಯಾಕೆ – ರಾಹುಲ್‌ಗೆ ಮೋದಿ ಪ್ರಶ್ನೆ

    ಈ ಚುನಾವಣೆಯಲ್ಲಿ ಅದಾನಿ-ಅಂಬಾನಿಯನ್ನು ನಿಂದಿಸುತ್ತಿಲ್ಲ ಯಾಕೆ – ರಾಹುಲ್‌ಗೆ ಮೋದಿ ಪ್ರಶ್ನೆ

    – ರಫೇಲ್‌ ವಿವಾದದ ನಂತರ ಅದಾನಿ ವಿರುದ್ಧ ರಾಹುಲ್‌ ವಾಗ್ದಾಳಿ
    – RR ತೆರಿಗೆ RRR ಸಿನಿಮಾ ಕಲೆಕ್ಷನ್‌ ಹಿಂದಿಕ್ಕಿದೆ

    ಹೈದರಾಬಾದ್‌: ಈ ಚುನಾವಣೆಯಲ್ಲಿ ಅದಾನಿ-ಅಂಬಾನಿಯನ್ನು (Adani-Ambani) ರಾಹುಲ್‌ ಗಾಂಧಿ (Rahul Gandhi) ನಿಂದಿಸುತ್ತಿಲ್ಲ ಯಾಕೆ ಎಂದು ಪ್ರಧಾನಿ ನರೇಂದ್ರ ಮೋದಿ (PM Narendra Modi) ಪ್ರಶ್ನಿಸಿದ್ದಾರೆ.

    ತೆಲಂಗಾಣದ ಕರೀಂಪುರದಲ್ಲಿ ನಡೆದ ಪಕ್ಷದ ಪ್ರಚಾರ ಸಭೆಯಲ್ಲಿ ಭಾಷಣ ಮಾಡಿದ ಅವರು, ಐದು ವರ್ಷಗಳಿಂದ ಕಾಂಗ್ರೆಸ್‌ನ ಶೆಹಜಾದ (ರಾಹುಲ್‌ ಗಾಂಧಿ) ಒಂದು ಮಾತನ್ನು ಜಪಿಸುತ್ತಲೇ ಇದ್ದರು. ಅವರ ರಫೇಲ್ ವಿವಾದದ ನಂತರ ಅವರು ಹೊಸ ಜಪವನ್ನು ಪ್ರಾರಂಭಿಸಿದರು. ಹೋದಲ್ಲಿ ಬಂದಲ್ಲಿ ಐದು ಕೈಗಾರಿಕೋದ್ಯಮಿಗಳು, ಐದು ಕೈಗಾರಿಕೋದ್ಯಮಿಗಳು ಎಂದು ಹೇಳುತ್ತಿದ್ದರು. ನಂತರ ಅವರು ಅಂಬಾನಿ-ಅದಾನಿ ಎಂದು ಹೇಳಲು ಪ್ರಾರಂಭಿಸಿದರು. ಆದರೆ ಚುನಾವಣೆ ಘೋಷಣೆಯಾದಾಗಿನಿಂದ ಅವರು ಅಂಬಾನಿ ಮತ್ತು ಅದಾನಿಯನ್ನು ನಿಂದಿಸುತ್ತಿಲ್ಲ ಯಾಕೆ ಎಂದು ಪ್ರಶ್ನಿಸಿದರು. ಇದನ್ನೂ ಓದಿ: ಪೂರ್ವ ಭಾರತದ ಜನರು ಚೀನಿಯರಂತೆ, ದಕ್ಷಿಣದ ಜನರು ಆಫ್ರಿಕನ್ನರಂತೆ ಕಾಣುತ್ತಾರೆ: ಸ್ಯಾಮ್‌ ಪಿತ್ರೋಡಾ

    ಅವರು ಅಂಬಾನಿಯಿಂದ ಎಷ್ಟು ಹಣವನ್ನು ತೆಗೆದುಕೊಂಡಿದ್ದಾರೆ ಎಂಬುದನ್ನು ಅವರು ಘೋಷಿಸಬೇಕು, ನೀವು ಅಂಬಾನಿ ಮತ್ತು ಅದಾನಿಯನ್ನು ರಾತ್ರೋರಾತ್ರಿ ದುರುಪಯೋಗಪಡಿಸಿಕೊಂಡಿದ್ದೀರಾ? ಐದು ವರ್ಷಗಳ ಕಾಲ ಅವರನ್ನು ನಿಂದಿಸಿದ ನೀವು ರಾತ್ರೋರಾತ್ರಿ ನಿಂದನೆಯನ್ನು ನಿಲ್ಲಿಸಿದ್ದು ಯಾಕೆ? ಏನಾದ್ರೂ ರಹಸ್ಯ ಒಪ್ಪಂದ ನಡೆದಿದ್ಯಾ ಎಂದು ರಾಹುಲ್‌ ಗಾಂಧಿಗೆ ಪ್ರಶ್ನೆ ಕೇಳಿದರು.

    ತೆಲಂಗಾಣದಿಂದ ದೆಹಲಿಯವರೆಗೆ, ‘ಡಬಲ್ ಆರ್’ (RR) ತೆರಿಗೆಯ ಬಗ್ಗೆ ಸಾಕಷ್ಟು ಮಾತನಾಡಲಾಗುತ್ತಿದೆ. RRR ಹೆಸರಿನ ತೆಲುಗು ಚಿತ್ರ ಬಿಡುಗಡೆಯಾಗಿ ಭರ್ಜರಿ ಹಿಟ್‌ ಆಯ್ತು. ಆದರೆ ಕಲೆಕ್ಷನ್‌ ವಿಚಾರದಲ್ಲಿ RRR ಸಿನಿಮಾವನ್ನು RR ತೆರಿಗೆ ಬಹಳ ಹಿಂದೆಯೇ ಹಿಂದಿಕ್ಕಿದೆ ಎಂದು ಯಾರೋ ನನಗೆ ಹೇಳಿದ್ದಾರೆ ಎನ್ನುವ ಮೂಲಕ ರೇವಂತ್‌ ರೆಡ್ಡಿ ಸರ್ಕಾರವನ್ನು ಟೀಕಿಸಿದರು.

     

    ತೆಲಂಗಾಣದಲ್ಲಿ ಗೌತಮ್‌ ಅದಾನಿ ಹೂಡಿಕೆ ಮಾಡಿದ್ದಾರೆ. ರೇವಂತ್‌ ರೆಡ್ಡಿ ನೇತೃತ್ವದ ಕಾಂಗ್ರೆಸ್‌ ಸರ್ಕಾರ ಗೌತಮ್‌ ಅದಾನಿ ಜೊತೆ ಒಪ್ಪಂದ ಮಾಡಿದ್ದನ್ನು ಪರೋಕ್ಷವಾಗಿ ಮೋದಿ ಪ್ರಸ್ತಾಪಿಸಿ ರಾಹುಲ್‌ ಗಾಂಧಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.  ಇದನ್ನೂ ಓದಿ: ಭಾರತದಲ್ಲಿ ಪಿತ್ರಾರ್ಜಿತ ಆಸ್ತಿ ತೆರಿಗೆ ವಿಧಿಸಿದರೆ ಅಂಬಾನಿ, ಅದಾನಿಯಂಥ ಶ್ರೀಮಂತರು ದುಬೈಗೆ ಹೋಗ್ತಾರೆ: ಆರ್ಥಶಾಸ್ತ್ರಜ್ಞ

    ವಿಶ್ವ ಆರ್ಥಿಕ ವೇದಿಕೆ-2024 ರಲ್ಲಿ ತೆಲಂಗಾಣ ಸರ್ಕಾರದೊಂದಿಗೆ ಅದಾನಿ ಗ್ರೂಪ್‌ ಬಹುಕೋಟಿ ರೂಪಾಯಿ ಮೊತ್ತದ ಹೂಡಿಕೆಗೆ ಒಡಂಬಡಿಕೆ ಮಾಡಿಕೊಂಡಿತ್ತು. ಪ್ರಮುಖ ಸಂಸ್ಥೆಯಾದ ಅದಾನಿ ಎಂಟರ್‌ಪ್ರೈಸಸ್‌ನ ಹೂಡಿಕೆಯು 50 ಶತಕೋಟಿ ರೂಪಾಯಿಗಳಿಗೆ ಸ್ಥಾಪಿಸಲು 100 ಮೆಗಾವ್ಯಾಟ್ ಡೇಟಾ ಕೇಂದ್ರವನ್ನೂ ಒಳಗೊಂಡಿದೆ. ಅದಾನಿ ಗ್ರೀನ್ ಎನರ್ಜಿ, ಅಂಬುಜಾ ಸಿಮೆಂಟ್ಸ್ ಮತ್ತು ಅದಾನಿ ಡಿಫೆನ್ಸ್ ಸಿಸ್ಟಮ್ಸ್ ಮತ್ತು ಟೆಕ್ನಾಲಜೀಸ್ ರಾಜ್ಯದಲ್ಲಿ ಯೋಜನೆಗಳನ್ನು ಜಾರಿಗೆ ತರುವ ಒಪ್ಪಂದಗಳಿಗೆ ಸಹಿ ಹಾಕಿವೆ.

    ಇಂಧನ ಕ್ಷೇತ್ರದಲ್ಲಿ ಅದಾನಿ ಎನರ್ಜಿ ತೆಲಂಗಾಣದಲ್ಲಿ 5 ಸಾವಿರ ಕೋಟಿ ರೂ., ಅಂಬುಜಾ ಸಿಮೆಂಟ್‌ ತಯಾರಿಕೆಗೆ 1,400 ಕೋಟಿ ರೂ. ಹೂಡಿಕೆ ಮಾಡಲಿದೆ. ಅಷ್ಟೇ ಅಲ್ಲದೇ, 1,000 ಕೋಟಿ ರೂ. ವೆಚ್ಚದಲ್ಲಿ ಡ್ರೋನ್‌ ಮತ್ತು ಕ್ಷಿಪಣಿ ವ್ಯವಸ್ಥೆ ಸಂಶೋಧನೆ, ಅಭಿವೃದ್ಧಿ ಮತ್ತು ವಿನ್ಯಾಸ ಘಟಕ ಸ್ಥಾಪಿಸುವ ಪ್ರಸ್ತಾವನೆಯೂ ಇದೆ.

     

  • ಅಂಬಾನಿ ಮಗನ ಪ್ರೀ-ವೆಡ್ಡಿಂಗ್ ಕಾರ್ಯಕ್ರಮದ ಝಲಕ್

    ಅಂಬಾನಿ ಮಗನ ಪ್ರೀ-ವೆಡ್ಡಿಂಗ್ ಕಾರ್ಯಕ್ರಮದ ಝಲಕ್

    ಅಂಬಾನಿ ಕುಟುಂಬದಲ್ಲಿ ಸಂಭ್ರಮ ಮನೆ ಮಾಡಿದೆ. ಅನಂತ್ ಅಂಬಾನಿ ಮತ್ತು ರಾಧಿಕಾ ಮರ್ಚೆಂಟ್ (Radhika Merchant) ವಿವಾಹ ಪೂರ್ವ ಕಾರ್ಯಕ್ರಮ (Pre-Wedding) ಅದ್ಧೂರಿಯಾಗಿ ಜರುತ್ತಿದೆ. ಅಂಬಾನಿ ಮನೆ ಪಾರ್ಟಿಯಲ್ಲಿ ಬಿಟೌನ್ (Bollywood) ಸ್ಟಾರ್ಸ್ ಮಿಂಚಿದ್ದಾರೆ. ನವಜೋಡಿ ಅನಂತ್-ರಾಧಿಕಾ ಜೋಡಿ ರಾಯಲ್ ಆಗಿ ಎಂಟ್ರಿ ಕೊಟ್ಟಿದ್ದಾರೆ.

    ಅನಂತ್ (Ananth Ambani) ಮತ್ತು ರಾಧಿಕಾ ಮದುವೆ ಇದೇ ಜೂನ್ 12ಕ್ಕೆ ಫಿಕ್ಸ್ ಆಗಿದೆ. ಮಾರ್ಚ್ 1ರಿಂದ 3ರವರೆಗೆ ವಿವಾಹ ಪೂರ್ವ ಕಾರ್ಯಕ್ರಮ ನಡೆಯುತ್ತಿವೆ. ಅದಕ್ಕಾಗಿ ಗುಜರಾತ್‌ನ ಜಾಮ್‌ನಗರವನ್ನು ಸಿಂಗರಿಸಲಾಗಿದೆ. ಅನಂತ್ ಪ್ರೀ-ವೆಡ್ಡಿಂಗ್ ಮದುವೆ ಸಂಗೀತ, ನೃತ್ಯ ಹೀಗೆ ವಿವಿಧ ರೀತಿಯ ಪ್ರದರ್ಶನಗಳು ನಡೆಯುತ್ತಿದೆ. ಇದನ್ನೂ ಓದಿ:‘ವಿದ್ಯಾರ್ಥಿ ವಿದ್ಯಾರ್ಥಿನಿಯರೇ’ ಎನ್ನುತ್ತಾ ಬಂತು ಮೋಷನ್ ಪೋಸ್ಟರ್

    ಅನಂತ್ ಅಂಬಾನಿ ಪ್ರೀ-ವೆಡ್ಡಿಂಗ್‌ನ ಮುಖ್ಯ ಆಕರ್ಷಣೆ ಎಂದರೆ ಸುಪ್ರಸಿದ್ಧ ಗಾಯಕಿ ರಿಯಾನಾ ಅವರ ಸಂಗೀತ ಕಾರ್ಯಕ್ರಮ. ಅನಂತ್-ರಾಧಿಕಾ ಪ್ರೀ-ವೆಡ್ಡಿಂಗ್ ಕಾರ್ಯಕ್ರಮದ ಸುಂದರ ಸಂಜೆಗೆ ರಿಯಾನಾ ಗಾಯನ ಕಿಕ್ ಕೊಟ್ಟಿದೆ. ಕಾರ್ಯಕ್ರಮದಲ್ಲಿ ಹಾಡಲು ರಿಯಾನಾ, ಬರೋಬ್ಬರಿ 74 ಕೋಟಿ ರೂ. ಸಂಭಾವನೆ ಪಡೆದು ಎಲ್ಲರ ಹುಬ್ಬೇರಿಸಿದ್ದಾರೆ. ಇದನ್ನೂ ಓದಿ:ಪ್ರಶಾಂತ್ ನೀಲ್ ಮನೆಯಲ್ಲಿ ಒಟ್ಟಾದ ಜ್ಯೂ.ಎನ್‌ಟಿಆರ್, ರಿಷಬ್ ಶೆಟ್ಟಿ

    ಅನಂತ್ ಅಂಬಾನಿ ಮದುವೆಯಾಗಿ ಅದ್ಧೂರಿ ದೇಗುಲ ನಿರ್ಮಿಸಲಾಗಿದೆ. ಸೊಗಸಾಗಿ ಕೆತ್ತನೆ ಮಾಡಿದ ಸ್ಥಂಭಗಳು, ಕಲಾಕೃತಿಗಳು ಹಾಗೂ ಕರಕುಶಲವಸ್ತುಗಳು ಇಲ್ಲಿ ಕಾಣಬಹುದು. ಇದನ್ನೂ ಓದಿ:ಸದ್ದಿಲ್ಲದೇ ಹಸೆಮಣೆ ಏರಿದ ‘ಬಿಗ್ ಬಾಸ್’ ಖ್ಯಾತಿಯ ದೀಪಿಕಾ ದಾಸ್

    ಮದುವೆಯ ಪೂರ್ವ ಸಂಭ್ರಮದಲ್ಲಿ ಶಾರುಖ್ ಖಾನ್, ಗೌರಿ ಖಾನ್, ಸಲ್ಮಾನ್ ಖಾನ್, ಬಿಲ್ ಗೇಟ್ಸ್, ಮಾರ್ಕ್ ಜುಕರ್‌ಬರ್ಗ್, ಸದ್ಗುರು, ಅಕ್ಷಯ್ ಕುಮಾರ್, ಮುಂತಾದ ಸೆಲೆಬ್ರಿಟಿಗಳು ಭಾಗವಹಿಸಿದ್ದರು. ಆಲಿಯಾ ಭಟ್, ದೀಪಿಕಾ ಪಡುಕೋಣೆ, ರಣವೀರ್ ಸಿಂಗ್, ರಣಬೀರ್ ಕಪೂರ್, ನೀತು ಕಪೂರ್, ಅನನ್ಯಾ ಪಾಂಡೆ, ಜಾಹ್ನವಿ ಕಪೂರ್, ಶನಯಾ ಕಪೂರ್, ಶ್ರದ್ಧಾ ಕಪೂರ್, ಸೋನಮ್ ಕಪೂರ್ ಅಹುಜಾ, ಅನಿಲ್ ಕಪೂರ್ ಭಾಗಿಯಾಗಿದ್ದರು.

    ಡೇವಿಡ್ ಧವನ್, ಎಂಎಸ್ ಧೋನಿ, ರೋಹಿತ್ ಶರ್ಮಾ, ಹಾರ್ದಿಕ್ ನೆಹ್ವಾಲ್, ಹಾರ್ದಿಕ್ ಪಾಂಡ್ಯ ಜಾಫ್ರಿ, ಅಮೀರ್ ಖಾನ್, ಸುಹಾನಾ ಖಾನ್, ರಿಯಾ ಕಪೂರ್, ಕರೀನಾ ಕಪೂರ್ ಖಾನ್, ಸೈಫ್ ಅಲಿ ಖಾನ್, ಸಾರಾ ಅಲಿ ಖಾನ್, ಇಬ್ರಾಹಿಂ ಅಲಿ ಖಾನ್, ಜಾನ್ ಅಬ್ರಹಾಂ, ಕರಿಷ್ಮಾ ಕಪೂರ್, ಅಟ್ಲೀ, ರಾಮ್ ಚರಣ್, ಮನೀಶ್ ಮಲ್ಹೋತ್ರಾ, ಮಾಧುರಿ ದೀಕ್ಷಿತ್ ನೇನೆ, ಕಿಯಾರಾ ಅಡ್ವಾಣಿ ಮತ್ತು ಸಿದ್ಧಾರ್ಥ್ ಮಲ್ಹೋತ್ರಾ ಇತರರ ಇದ್ದರು.

  • ಕರಣ್ ಜೋಹಾರ್ ನ ತಬ್ಬಿಕೊಂಡ ಪ್ರಿಯಾಂಕಾ : ಕಂಗನಾ ಈಗ ಏನ್ ಹೇಳ್ಬೋದು?

    ಕರಣ್ ಜೋಹಾರ್ ನ ತಬ್ಬಿಕೊಂಡ ಪ್ರಿಯಾಂಕಾ : ಕಂಗನಾ ಈಗ ಏನ್ ಹೇಳ್ಬೋದು?

    ದ್ಯ ಹಾಲಿವುಡ್ ನಲ್ಲಿ ಮಿಂಚುತ್ತಿರುವ ಪ್ರಿಯಾಂಕಾ ಚೋಪ್ರಾ (Priyanka Chopra) ಬಾಲಿವುಡ್ ಬಿಡುವುದಕ್ಕೆ ನಿರ್ಮಾಪಕ, ನಿರ್ದೇಶಕ ಕರಣ್ ಜೋಹಾರ್ (Karan Johar) ಕಾರಣ ಎಂದು ಮೊನ್ನೆಯಷ್ಟೇ ಕಂಗನಾ ರಣಾವತ್ (Kangana Ranaut) ಹೇಳಿದ್ದರು. ಇದಕ್ಕೆ ದಿ ಕಾಶ್ಮೀರ್ ಫೈಲ್ಸ್ ನಿರ್ದೇಶಕ ವಿವೇಕ್ ಅಗ್ನಿಹೋತ್ರಿ (Vivek Agnihotri) ಧ್ವನಿಗೂಡಿಸಿದ್ದರು. ಈ ಸುದ್ದಿ ಬಿಟೌನ್ ನಲ್ಲಿ ಭಾರೀ ಸದ್ದು ಮಾಡಿತ್ತು. ಕಂಗನಾ ಹಚ್ಚಿರುವ ಬೆಂಕಿ ಇನ್ನೂ ಉರಿಯುತ್ತಿರುವಾಗಲೇ ಬಾಲಿವುಡ್ ಗೆ ಬಂದಿಳಿದಿದ್ದಾರೆ ಪ್ರಿಯಾಂಕಾ ಚೋಪ್ರಾ.

    ಅಂಬಾನಿ (Ambani) ಸಾಂಸ್ಕೃತಿಕ ಕೇಂದ್ರದ ಉದ್ಘಾಟನಾ ಸಮಾರಂಭದಲ್ಲಿ ಪಾಲ್ಗೊಳ್ಳುವುದಕ್ಕಾಗಿ ಮೊದಲ ಬಾರಿಗೆ ಮಗಳ ಜೊತೆ ಆಗಮಿಸಿರುವ ಪ್ರಿಯಾಂಕಾ ಚೋಪ್ರಾಗೆ ಅಚ್ಚರಿಯ ಕ್ಷಣವೊಂದು ಎದುರಾಯಿತು. ಕಂಗನಾ ಯಾರು ಮೇಲೆ ಆರೋಪ ಮಾಡಿದ್ದರೋ, ಅವರೇ ಪ್ರಿಯಾಂಕಾಗೆ ಎದುರಾಗಿ ತಬ್ಬಿಕೊಂಡ ಘಟನೆ ನಡೆಯಿತು. ಉದ್ಘಾಟನಾ ಕಾರ್ಯಕ್ರಮಕ್ಕೆ ಆಗಮಿಸಿದ್ದ ಕರಣ್ ಜೋಹಾರ್ ಮತ್ತು ಪ್ರಿಯಾಂಕಾ ಪರಸ್ಪರ ತಬ್ಬಿಕೊಂಡು ಮತ್ತೊಂದು ಸಂದೇಶ ರವಾನಿಸಿದ್ದಾರೆ. ಇದನ್ನೂ ಓದಿ: ಹಿಂದಿ ಚಿತ್ರರಂಗದಲ್ಲಿ ಸೌತ್‌ನಷ್ಟು ಶಿಸ್ತಿಲ್ಲ: ಕಾಜಲ್ ಅಗರ್‌ವಾಲ್

    ಈ ದೃಶ್ಯವನ್ನು ಕ್ಯಾಮೆರಾಗಳು ಕೂಡ ಅಚ್ಚರಿಯಿಂದಲೇ ಸೆರೆ ಹಿಡಿದಿವೆ. ಆ ವಿಡಿಯೋಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಕೂಡ ಆಗಿವೆ. ಅಲ್ಲದೇ, ಈ ದೃಶ್ಯಕ್ಕೆ ನಿಮ್ಮ ಪ್ರತಿಕ್ರಿಯೆ ಏನು ಎಂದು ಕೆಲವರು ಕಂಗನಾ ರಣಾವತ್ ಅವರಿಗೆ ಕಾಲೆಳೆದಿದ್ದಾರೆ. ಈ ವಿಡಿಯೋ ಕುರಿತಾಗಿ ಈವರೆಗೂ ಕಂಗನಾ ಯಾವುದೇ ಪ್ರತಿಕ್ರಿಯೆ ನೀಡಿಲ್ಲ. ಏನು ಹೇಳುತ್ತಾರೆ ಎನ್ನುವ ಕುತೂಹಲವಂತೂ ಇದ್ದೇ ಇದೆ.

    ನಿನ್ನೆ ನಡೆದ ಅಂಬಾನಿ ಸಾಂಸ್ಕೃತಿಕ ಕೇಂದ್ರದ ಉದ್ಘಾಟನಾ ಸಮಾರಂಭಕ್ಕೆ ಬಾಲಿವುಡ್ ನ ಅನೇಕ ಗಣ್ಯರು ಹಾಜರಿದ್ದರು. ದೀಪಿಕಾ ಪಡುಕೋಣೆ, ರಣವೀರ್ ಸೇರಿದಂತೆ ಇಡೀ ಚಿತ್ರೋದ್ಯಮವೇ ಈ ಸಮಾರಂಭದಲ್ಲಿ ಪಾಲ್ಗೊಂಡಿತ್ತು. ಈ ಕಾರ್ಯಕ್ರಮದ ಸಲುವಾಗಿಯೇ ಪತಿ ಮತ್ತು ಮಗಳ ಜೊತೆ ಪ್ರಿಯಾಂಕಾ ಚೋಪ್ರಾ ಕೂಡ ಆಗಮಿಸಿದ್ದರು.

  • ಅದಾನಿ, ಅಂಬಾನಿ, ಬಿರ್ಲಾಗಿಂತ ನನ್ನ ಸಮಯದ ಮೌಲ್ಯ ಹೆಚ್ಚು: ಬಾಬಾ ರಾಮದೇವ್

    ಅದಾನಿ, ಅಂಬಾನಿ, ಬಿರ್ಲಾಗಿಂತ ನನ್ನ ಸಮಯದ ಮೌಲ್ಯ ಹೆಚ್ಚು: ಬಾಬಾ ರಾಮದೇವ್

    ಪಣಜಿ: ಅದಾನಿ, ಅಂಬಾನಿ (Ambani), ಬಿರ್ಲಾಗಿಂತ ನನ್ನ ಸಮಯದ ಮೌಲ್ಯ ಹೆಚ್ಚು ಎಂದು ಬಾಬಾ ರಾಮ್‌ದೇವ್ (Ramdev) ಹೇಳಿದರು.

    ಗೋವಾದ ಪಣಜಿಯಲ್ಲಿ (Panaji) ಮುಖ್ಯಮಂತ್ರಿ ಪ್ರಮೋದ್ ಸಾವಂತ್ (Pramod Sawant) ಮತ್ತು ಕೇಂದ್ರ ಸಚಿವ ಶ್ರೀಪಾದ್ ನಾಯಕ್ ಅವರ ಸಮ್ಮುಖದಲ್ಲಿ ರಾಮ್‌ದೇವ್ ತಮ್ಮ ಸಹಾಯಕ ಆಚಾರ್ಯ ಬಾಲಕೃಷ್ಣ ಅವರನ್ನು ಸನ್ಮಾನಿಸಲು ಆಯೋಜಿಸಿದ್ದ ಸಮಾರಂಭವನ್ನು ಉದ್ದೇಶಿಸಿ ಮಾತನಾಡಿದರು.

    ಕಾರ್ಪೊರೇಟ್‌ಗಳು ತಮ್ಮ ಶೇ. 99ರಷ್ಟು ಸಮಯವನ್ನು ಸ್ವಹಿತಾಸಕ್ತಿಗಾಗಿ ಬಳಸುತ್ತಾರೆ, ಆದರೆ ನೋಡುವವರಿಗೆ ಸಮಯವು ಎಲ್ಲರ ಒಳಿತಿಗಾಗಿ ಎಂದು ಅನಿಸುತ್ತದೆ. ಆದರೆ ನನಗೆ ಇಲ್ಲಿದ್ದ ಮೂರು ದಿನಗಳು ಅಂಬಾನಿ ಮತ್ತು ಅದಾನಿಗಳಂತಹ ಬಿಲಿಯನೇರ್ ಕೈಗಾರಿಕೋದ್ಯಮಿಗಳ ಸಮಯಕ್ಕಿಂತ ಹೆಚ್ಚು ಮೌಲ್ಯಯುತವಾಗಿದೆ ಎಂದರು. ಇದನ್ನೂ ಓದಿ: ಅಮಿತ್‌ ಶಾ ಕೊಟ್ಟ ಟಾಸ್ಕ್‌ನಲ್ಲಿ ಕರ್ನಾಟಕ ಬಿಜೆಪಿ ಫೇಲ್‌

    ನಾನು ಹರಿದ್ವಾರದಿಂದ 3 ದಿನಗಳ ಕಾಲ ಇಲ್ಲಿಗೆ ಬಂದಿದ್ದೇನೆ. ನನ್ನ ಸಮಯದ ಮೌಲ್ಯವು ಅದಾನಿ, ಅಂಬಾನಿ, ಟಾಟಾ ಮತ್ತು ಬಿರ್ಲಾ ಅವರ ಸಮಯಕ್ಕಿಂತ ಹೆಚ್ಚು. ಕಾರ್ಪೊರೇಟ್‌ಗಳು ತಮ್ಮ ಸಮಯದ 99 ಪ್ರತಿಶತವನ್ನು ಸ್ವಹಿತಾಸಕ್ತಿಯಲ್ಲಿ ಕಳೆಯುತ್ತಾರೆ, ಆದರೆ ನೋಡುವವರ ಸಮಯ ಸಾಮಾನ್ಯವಾಗಿದೆ ಎಂದು ಹೇಳಿದರು.

    LIVE TV
    [brid partner=56869869 player=32851 video=960834 autoplay=true]

    Join our Whatsapp group by clicking the below link
    https://chat.whatsapp.com/E6YVEDajTzH06LOh77r25k

  • ರಿಲಯನ್ಸ್ ಕುಟುಂಬದಲ್ಲಿ ಶೀಘ್ರದಲ್ಲೇ ರಾಯಲ್ ವೆಡ್ಡಿಂಗ್

    ರಿಲಯನ್ಸ್ ಕುಟುಂಬದಲ್ಲಿ ಶೀಘ್ರದಲ್ಲೇ ರಾಯಲ್ ವೆಡ್ಡಿಂಗ್

    ಮುಂಬೈ: ಅನಿಲ್ ಅಂಬಾನಿ ಅವರ ಮಗ ಜೈ ಅನ್ಮೋಲ್ ಅಂಬಾನಿ ಮತ್ತು ಕ್ರಿಶ್ ಶಾ ಅವರು ದಾಂಪತ್ಯ ಜೀವನಕ್ಕೆ ಕಾಲಿಡುತ್ತಿದ್ದಾರೆ. ವಿವಾಹಕ್ಕೆ ಭರ್ಜರಿ ಸಿದ್ಧತೆ ಮಾಡಲಾಗುತ್ತಿದೆ ಎಂದ ಮೂಲಗಳಿಂದ ತಿಳಿದು ಬಂದಿದೆ.

    ರಿಲಯನ್ಸ್ ಕುಟುಂಬದಲ್ಲಿ ಶೀಘ್ರದಲ್ಲೇ ಮತ್ತೊಂದು ರಾಯಲ್ ವೆಡ್ಡಿಂಗ್ ಕಾರ್ಯಕ್ರಮ ನಡೆಯಲಿದೆ. ಅನ್ಮೋಲ್ ಬಾಳ ಸಂಗಾತಿಯಾಗಿ ಬರುತ್ತಿರುವ ಕ್ರಿಶಾ ಕೂಡಾ ಉದ್ಯಮಿಯಾಗಿದ್ದಾರೆ. ಇತ್ತೀಚೆಗಷ್ಟೇ ಅವರು ನಿಶ್ಚಿತಾರ್ಥ, ಮತ್ತು ಮದುವೆಗೂ ಮುದಲು ಕುಟುಂಬದ ಜೊತೆಗೆ ಕ್ಲಿಕ್ಕಿಸಿಕೊಂಡ ಫೋಟೋಗಳನ್ನು ರಾಜಕಾರಣಿ ಸುಪ್ರಿಯಾ ಸುಳೆ ಅವರು ಪೋಸ್ಟ್ ಮಾಡಿದ್ದಾರೆ. ಇದರೊಂದಿಗೆ ಈ ವಿಚಾರ ಸದ್ಯ ಸಾಮಾಜಿಕ ಜಾಲತಾಣಗಳಲ್ಲಿ ಸದ್ದು ಮಾಡುತ್ತಿದೆ.

     

    View this post on Instagram

     

    A post shared by Supriya Sule (@supriyasule)

    ಇಶಾ ಅಂಬಾನಿ ಅವರ ಮದುವೆಯಂತೆ, ಅನೇಕ ಬಾಲಿವುಡ್ ಸೆಲೆಬ್ರಿಟಿಗಳು ಮತ್ತು ಉದ್ಯಮಿಗಳು ಅವರ ಮದುವೆಗೆ ಹಾಜರಾಗುವ ನಿರೀಕ್ಷೆಯಿದೆ. ಅನಿಲ್ ಅಂಬಾನಿ ಕುಟುಂಬವು ಪ್ರಸ್ತುತ ಮದುವೆಗೆ ಹಾಜರಾಗಬೇಕಾದವರ ಪಟ್ಟಿಯನ್ನು ಅಂತಿಮಗೊಳಿಸುವ ಪ್ರಕ್ರಿಯೆಯಲ್ಲಿದೆ ಎಂದು ತಿಳಿದು ಬಂದಿದೆ. ಇದನ್ನೂ ಓದಿ:  ಮಗಳ ವಿಚಾರದಲ್ಲಿ ನಮ್ಮ ನಿರ್ಧಾರ, ಮನವಿ ಮೊದಲಿನಂತೆಯೇ ಇರಲಿದೆ: ಅನುಷ್ಕಾ ಶರ್ಮಾ

     

    View this post on Instagram

     

    A post shared by Tina Ambani (@tinaambaniofficial)

    ಈ ಹಿಂದೆ ಮುಖೇಶ್ ಅಂಬಾನಿ ಅವರ ಪುತ್ರಿ ಇಶಾ ಅಂಬಾನಿ ಅವರ ವಿವಾಹವು ಅತ್ಯಂತ ಸಂಭ್ರಮಾಚರಣೆಯಿಂದ ನಡೆದಿತ್ತು. 2018 ರಲ್ಲಿ ಆನಂದ್ ಪಿರಮಾಲ್ ಜೊತೆ ನಡೆದ ಅದ್ದೂರಿ ಮದುವೆಗೆ ಕುಟುಂಬ ನೂರಾರು ಕೋಟಿ ಖರ್ಚು ಮಾಡಿದೆ ಎಂದು ವರದಿಯಾಗಿದೆ. ಈಗ ಅಂಬಾನಿ ಕುಟುಂಬ ಮತ್ತೊಂದು ಅದ್ದೂರಿ ವಿವಾಹಕ್ಕೆ ತಯಾರಿ ನಡೆಸುತ್ತಿದೆ ಎನ್ನಲಾಗಿದೆ.