Tag: Ambedkar Jayanti

  • ವಿವಾದಿತ ಕ್ಲಾಕ್ ಟವರ್ ಬಳಿ ಅಂಬೇಡ್ಕರ್ ಸ್ತಬ್ಧ ಚಿತ್ರಗಳ ಮೆರವಣಿಗೆ

    ವಿವಾದಿತ ಕ್ಲಾಕ್ ಟವರ್ ಬಳಿ ಅಂಬೇಡ್ಕರ್ ಸ್ತಬ್ಧ ಚಿತ್ರಗಳ ಮೆರವಣಿಗೆ

    ಕೋಲಾರ: ಸಂವಿಧಾನ ಶಿಲ್ಪಿ ಬಾಬಾ ಸಾಹೆಬ್ ಅಂಬೇಡ್ಕರ್ ಅವರ 131 ನೇ ಜಯಂತಿಯನ್ನು ಕೋಲಾರದಲ್ಲಿ ಅದ್ಧೂರಿಯಾಗಿ ಆಚರಿಸಲಾಯಿತು. ನಗರದ ಕ್ಲಾಕ್ ಟವರ್‌ಗೆ ಆಗಮಿಸಿದ ಅಂಬೇಡ್ಕರ್ ಜಯಂತಿ ಮೆರವಣಿಗೆಯನ್ನು ಮುಸ್ಲಿಂ ಬಾಂಧವರು ಹೂ ಚೆಲ್ಲುವ ಮೂಲಕ ಸ್ವಾಗತಿಸಿದರು.

    ಮತ್ತೊಂದೆಡೆ ನಗರದ ಅಂಜುಮನ್ ಇಸ್ಲಾಂ ವತಿಯಿಂದ ಅಂಬೇಡ್ಕರ್ ಜಯಂತಿ ಮೆರವಣಿಗೆ ಮೇಲೆ ಪುಷ್ಪಾರ್ಚನೆ ಮಾಡುವ ಮೂಲಕ ಭಾತೃತ್ವವನ್ನು ಮೆರೆದು ಗಮನ ಸೆಳೆದರು. ಇದೇ ಸಂದರ್ಭದಲ್ಲಿ ಮಾತನಾಡಿದ ಕೋಲಾರದ ಅಂಜುಮನ್ ಸಂಸ್ಥೆ ಮುಖ್ಯಸ್ಥ ಝಮೀರ್ ಅಹಮದ್ ಕ್ಲಾಕ್ ಟವರ್ ಪದೇ ಪದೇ ಚರ್ಚೆಗೆ ಗ್ರಾಸವಾಗುತ್ತಿದೆ ಎಂದರು. ಇದನ್ನೂ ಓದಿ: ಆಧಾರ್ ಕಾರ್ಡ್ ಇರೋರೆಲ್ಲ ಭಾರತೀಯರು: ವಚನಾನಂದ ಶ್ರೀ

    ಕೋಲಾರದಲ್ಲಿ ಹಿಂದೂ ಮುಸ್ಲಿಂ ಎಂಬ ಭೇದ-ಭಾವ ಇಲ್ಲದೆ ಜೀವಿಸುತ್ತಿದ್ದೇವೆ. ರಾಜಕಾರಣಿಗಳು ಎಷ್ಟು ಪ್ರಯತ್ನ ಪಟ್ಟರೂ ನಮ್ಮ ಮಧ್ಯೆ ವಿಷ ಬೀಜ ಹಾಕಲು ಸಾಧ್ಯವಿಲ್ಲ. ನಾವು ಒಬ್ಬರನ್ನೊಬ್ಬರು ನಂಬಿಕೆ ಮತ್ತು ಅವಲಂಬಿಕೆಯಿಂದ ಜೀವನ ಸಾಗಿಸುತಿದ್ದೇವೆ ಎಂದು ಹೇಳಿದರು. ಇದನ್ನೂ ಓದಿ: ಕಲಾವಿದನ ನಾಲಿಗೆಯಿಂದ ಅರಳಿತು ಅಂಬೇಡ್ಕರ್ ಚಿತ್ರ

     

  • ಕಲಾವಿದನ ನಾಲಿಗೆಯಿಂದ ಅರಳಿತು ಅಂಬೇಡ್ಕರ್ ಚಿತ್ರ

    ಕಲಾವಿದನ ನಾಲಿಗೆಯಿಂದ ಅರಳಿತು ಅಂಬೇಡ್ಕರ್ ಚಿತ್ರ

    ದಾವಣಗೆರೆ: ಮಹಾನಾಯಕ ಅಂಬೇಡ್ಕರ್ ಜನ್ಮದಿನಕ್ಕೆ ಹರಿಹರದ ಯುವಕನೊಬ್ಬ ವಿಶೇಷ ನಮನ ಸಲ್ಲಿಸಿದ್ದಾರೆ.

    ನಾಲಿಗೆಗೆ ಪ್ಲಾಸ್ಟರ್ ಸುತ್ತಿಕೊಂಡು ನಾಲಿಗೆ ಮೂಲಕ ಅಂಬೇಡ್ಕರ್ ಚಿತ್ರ ಬಿಡಿಸಿದ್ದಾನೆ. ಚಿತ್ರ ಬಿಡಿಸಿ ಮಹಾಮಾನವತಾವಾದಿಯ ಜನ್ಮದಿನ್ಕಕೆ ಕೊಡುಗೆಯಾಗಿ ನೀಡಿದ್ದಾನೆ. ಇದು ಭಾರತದಲ್ಲೇ ಮೊಟ್ಟ ಮೊದಲ ಬಾರಿಯ ಮೌತ್ ಅರ್ಟ್ ಎಂಬ ಹೆಗ್ಗಳಿಕೆ ಪಾತ್ರವಾಗಿದೆ. ಇದನ್ನೂ ಓದಿ: ಪರಿಸ್ಥಿತಿಯನ್ನು ಕೆರಳಿಸಲು ಬಂದಿದ್ದಾರೆ – ತೇಜಸ್ವಿ ಸೂರ್ಯ ಮೇಲೆ ಅಶೋಕ್ ಗೆಹ್ಲೋಟ್ ಕಿಡಿ

    ಜಿಲ್ಲೆಯ ಹರಿಹರ ನಗರದ ಜಯಕುಮಾರ್ ಮೌತ್ ಆರ್ಟ್‍ನ ಖ್ಯಾತಿಯ ತಮ್ಮ ನಾಲಿಗೆಗೆ ಪ್ಲಾಸ್ಟಿಕ್ ರ್ಯಾಪ್ ಸುತ್ತಿಕೊಂಡು ಈ ವಿಭಿನ್ನ ಕಲೆಯ ಮೂಲಕ ಬೃಹತ್ ಕಲಾಕೃತಿ ರಚಿಸಿದ್ದಾರೆ. ಹರಿಹರ ನಗರದಲ್ಲಿ ಆರ್ಟ್ ಹಾಗೂ ಟ್ಯಾಟೋ ಅಂಗಡಿ ಇಟ್ಟುಕೊಂಡಿರುವ ಜಯಕುಮಾರ್ ಇಂತಹ ಚಿತ್ರ ರಚನೆಯಿಂದಲೇ ಕರ್ನಾಟಕದಾದ್ಯಂತ ಫೇಮಸ್ ಆಗಿದ್ದಾರೆ. ಇದನ್ನೂ ಓದಿ: ಎಲೋನ್ ಮಸ್ಕ್ ಟ್ವಿಟ್ಟರ್ ಮಂಡಳಿಯ ಭಾಗವಲ್ಲ: ಪರಾಗ್ ಅಗರ್ವಾಲ್

    ಸತತ ಐದಾರು ಗಂಟೆಗಳ ಪರಿಶ್ರಮದ ಫಲವಾಗಿ ನಾಲಿಗೆಯಲ್ಲಿ ಅಂಬೇಡ್ಕರ್‍ರವರ ಕಪ್ಪು ಬಿಳಿಪು ಚಿತ್ರ ಅರಳಿ ನಿಂತಿದೆ. ಇದನ್ನೂ ಬಿಡಿಸಲು ನಾಲಿಗೆಗೆ ಪ್ಲಾಸ್ಟಿಕ್ ರ್ಯಾಪ್ ಸುತ್ತಿಕೊಂಡು, ಬ್ಲಾಕ್ ಕ್ಯಾನ್ವಸ್ ಶೀಟ್‍ನಲ್ಲಿ ಬಿಳಿ ಬಣ್ಣದಲ್ಲಿ ಈ ಚಿತ್ರ ಬಿಡಿಸಿ ಅಂಬೇಡ್ಕರ್‍ರವರ ಜಯಂತಿ ಅಂಗವಾಗಿ ವಿಶೇಷ ನಮನ ಸಲ್ಲಿಸಲಾಗಿದೆ.

    ಕಪ್ಪು ಬಿಳುಪು ಚಿತ್ರವನ್ನು 5 ಅಡಿ ಅಗಲ ಹಾಗೂ 6 ಅಡಿ ಉದ್ದದ ಚಿತ್ರ ತಯಾರಿಸಿದ್ದಾರೆ. ಪೆನ್ಸಿಲ್ ಆರ್ಟ್, ಮೌತ್ ಆರ್ಟ್, ಬಾಯಿಯಲ್ಲಿ ಕುಂಚ ಹಿಡಿದು ಬಿಡಿಸುವುದು, ನಾಲಿಗೆಯಲ್ಲಿ ಚಿತ್ರಬಿಡಿಸುವುದು, ಹೀಗೆ ನಾನಾ ರೀತಿಯಲ್ಲಿ ಸಾಕಷ್ಟು ಸೆಲೆಬ್ರಿಟಿಗಳ ಚಿತ್ರಗಳನ್ನು ಬಿಡಿಸಿ ಗಮನ ಸೆಳೆದಿದ್ದಾರೆ.

  • ದೇಶಕ್ಕಾಗಿ ಬಾಬಾಸಾಹೇಬ್‌ ಅಂಬೇಡ್ಕರರು ಕಂಡ ಕನಸು ನನಸಾಗಿಸಲು ಬದ್ಧರಾಗೋಣ: ಮೋದಿ

    ದೇಶಕ್ಕಾಗಿ ಬಾಬಾಸಾಹೇಬ್‌ ಅಂಬೇಡ್ಕರರು ಕಂಡ ಕನಸು ನನಸಾಗಿಸಲು ಬದ್ಧರಾಗೋಣ: ಮೋದಿ

    ನವದೆಹಲಿ: ಸಂವಿಧಾನ ಶಿಲ್ಪಿ ಡಾ. ಬಿ.ಆರ್.ಅಂಬೇಡ್ಕರ್‌ ಅವರ 131ನೇ ಜಯಂತಿ ಅಂಗವಾಗಿ ಪ್ರಧಾನಿ ನರೇಂದ್ರ ಮೋದಿ, ರಾಷ್ಟ್ರಪತಿ ರಾಮನಾಥ್‌ ಕೋವಿಂದ್‌ ಸೇರಿದಂತೆ ನಾಡಿನ ಅನೇಕ ಗಣ್ಯರು ಗೌರವ ಸಲ್ಲಿಸಿದ್ದಾರೆ.

    ಡಾ. ಬಾಬಾಸಾಹೇಬ್‌ ಅಂಬೇಡ್ಕರ್‌ ಜಯಂತಿಗೆ ನನ್ನ ನಮನಗಳು. ಭಾರತದ ಪ್ರಗತಿಗಾಗಿ ಅವರು ಅಪಾರ ಸೇವೆ ಸಲ್ಲಿಸಿದ್ದಾರೆ. ನಮ್ಮ ದೇಶಕ್ಕಾಗಿ ಅವರು ಕಂಡ ಕನಸನ್ನು ನಾವು ನನಸಾಗಿಸಲು ಬದ್ಧರಾಗುವ ದಿನ ಬಂದಿದೆ ಎಂದು ಪ್ರಧಾನಿ ಮೋದಿ ಟ್ವೀಟ್‌ ಮಾಡಿ ತಿಳಿಸಿದ್ದಾರೆ. ಇದನ್ನೂ ಓದಿ: ರಂಗೋಲಿಯಲ್ಲಿ ಮೂಡಿಬಂದ 20 ಅಡಿ ಯಶ್ ಭಾವಚಿತ್ರ

    ಅಂಬೇಡ್ಕರ್ ಜಯಂತಿಯಂದು ಬಾಬಾಸಾಹೇಬರಿಗೆ ನಮನ! ಸಾಮಾಜಿಕ ನ್ಯಾಯದ ಪ್ರಬಲ ವಕೀಲರಾದ ಬಾಬಾಸಾಹೇಬರು ಸಂವಿಧಾನದ ಶಿಲ್ಪಿಯಾಗಿ ಆಧುನಿಕ ಭಾರತಕ್ಕೆ ಅಡಿಪಾಯ ಹಾಕಿದರು. ‘ಮೊದಲು ಭಾರತೀಯ, ನಂತರವೂ ಭಾರತೀಯ ಮತ್ತು ಕೊನೆಯಲ್ಲೂ ಭಾರತೀಯ’ ಎಂಬ ಅವರ ಆದರ್ಶಗಳನ್ನು ಅನುಸರಿಸಿ, ಎಲ್ಲರನ್ನೂ ಒಳಗೊಳ್ಳುವ ಸಮಾಜವನ್ನು ನಿರ್ಮಿಸುವಲ್ಲಿ ನಮ್ಮ ಪಾತ್ರವನ್ನು ಮಾಡೋಣ ಎಂದು ರಾಷ್ಟ್ರಪತಿ ರಾಮನಾಥ್‌ ಕೋವಿಂದ್‌ ಅವರು ಹಿಂದಿಯಲ್ಲಿ ಟ್ವೀಟ್‌ ಮಾಡಿದ್ದಾರೆ.

    ಬಾಬಾಸಾಹೇಬ್‌ ಅಂಬೇಡ್ಕರ್‌ ಅವರ 131 ನೇ ಜಯಂತಿಗೆ ನಮನಗಳು. ಭಾರತಕ್ಕೆ ಬಲವಾದ ಶಕ್ತಿಯ ಆಧಾರ ಸ್ತಂಭವಾದ ನಮ್ಮ ಪವಿತ್ರ ಸಂವಿಧಾನವನ್ನು ನೀಡಿದ ಬಾಬಾಸಾಹೇಬ್ ಡಾ. ಬಿ.ಆರ್.ಅಂಬೇಡ್ಕರ್ ಅವರಿಗೆ ನನ್ನ ನಮನಗಳು ಎಂದು ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಟ್ವೀಟ್‌ ಮಾಡಿ ಗೌರವ ಸಮರ್ಪಿಸಿದ್ದಾರೆ. ಇದನ್ನೂ ಓದಿ: ಕೆಜಿಎಫ್ 2 ಬದಲು ಕೆಜಿಎಫ್ 1 ಪ್ರದರ್ಶನ, ಆಕ್ರೋಶಗೊಂಡ ಅಭಿಮಾನಿಗಳು

  • ಕನ್ನಡದ ನಟರೊಬ್ಬರು ಮಹಿಳೆಯನ್ನು ನಾಯಿ, ನರಿ, ಕ್ರಿಮಿ ಕೀಟ ಎನ್ನುತ್ತಾರೆ: ಚೇತನ್

    ಕನ್ನಡದ ನಟರೊಬ್ಬರು ಮಹಿಳೆಯನ್ನು ನಾಯಿ, ನರಿ, ಕ್ರಿಮಿ ಕೀಟ ಎನ್ನುತ್ತಾರೆ: ಚೇತನ್

    ಬೆಂಗಳೂರು: ಕನ್ನಡ ಚಲನಚಿತ್ರದ ನಟರೊಬ್ಬರು ಮಹಿಳೆಯನ್ನು ನಾಯಿ, ನರಿ, ಕ್ರಿಮಿ, ಕೀಟ ಎನ್ನುತ್ತಾರೆ ಎಂದು ಆ ದಿನಗಳು ಖ್ಯಾತಿಯ ನಟ ಚೇತನ್ ಅವರು ಟ್ವೀಟ್ ಮಾಡಿದ್ದಾರೆ.

    ಚೇತನ್ ಅವರು ಮಾಡಿರುವ ಟ್ವೀಟ್ ಬಹಳ ವೈರಲ್ ಆಗುತ್ತಿದ್ದು, ಚೇತನ್ ಅವರು ಯಾರಿಗೇ ಈ ಮಾತನ್ನು ಹೇಳಿದ್ದಾರೆ ಎಂದು ಸಖತ್ ಚರ್ಚೆಯಾಗುತ್ತಿದೆ. ಸಾಮಾಜಿಕ ಜಾಲತಾಣದಲ್ಲಿ ಸಖತ್ ಸಕ್ರಿಯವಾಗಿ ಇರುವ ನಟ ಚೇತನ್ ಇತ್ತೀಚೆಗಷ್ಟೇ ಸುಳ್ಳು ಸುದ್ದಿ ಹಬ್ಬಿಸಬೇಡಿ ಸುದೀಪ್ ಎಂದು ಕಿಚ್ಚ ಸುದೀಪ್ ಅವರ ಕುರಿತು ಟ್ವೀಟ್ ಮಾಡಿದ್ದರು.

    ಈ ವಿಚಾರವಾಗಿ ಟ್ವೀಟ್ ಮಾಡಿರುವ ಚೇತನ್, ಕನ್ನಡ ಚಲನಚಿತ್ರ ನಟರೊಬ್ಬರು ಮಹಿಳೆಯನ್ನು ಪದೇ ಪದೇ ನಾಯಿ, ನರಿ, ಕ್ರಿಮಿ ಕೀಟ ಎಂದು ಅನುಮೋದಿಸುತ್ತಾರೆ. ನಂತರ ಅವರು ಹಾಡೊಂದರಲ್ಲಿ ನಟಿಸುವಾಗ ಅಲ್ಲಿ ಪ್ರಣಯದ ಹೆಸರಿನಲ್ಲಿ ನಾಯಕಿಯ ಕೂದಲನ್ನು ಎಳೆಯುತ್ತಾರೆ. ನಾಯಕಿಯನ್ನು ಕರೆಂಟ್ ಶಾಕ್ ಮತ್ತು ತುಂಡು ತುಂಡಾಗಿ ಕತ್ತರಿಸುವ ಬೆದರಿಕೆ ಹಾಕುತ್ತಾರೆ. ಅಲ್ಲದೆ ಮಹಿಳೆಯರ ಮೇಲೆ ಹಲ್ಲೆ ಮಾಡುತ್ತಾರೆ. ಒಪ್ಪಿಗೆ ಇಲ್ಲದಿದ್ದರೂ ಒತ್ತಾಯಿಸುವುದು ಕಿರುಕುಳ ಎಂದು ಬರೆದುಕೊಂಡಿದ್ದಾರೆ.

    ನಿನ್ನೆ ಅವರು ಧಾರ್ಮಿಕತೆಯನ್ನು ವೈಭವೀಕರಿಸುವ ಮುಖೇನ ಅಂಬೇಡ್ಕರ್ ಜಯಂತಿ ಶುಭಾಶಯಗಳನ್ನು ಬರೆಯುತ್ತಾರೆ. ಕಾಯಿಲೆ, ಅಜ್ಞಾನ ಮತ್ತು ವಿಪರ್ಯಾಸ ಎಂದು ಚೇತನ್ ಕನ್ನಡ ಮತ್ತು ಇಂಗ್ಲಿಷ್ ನಲ್ಲಿ ಬರೆದು ಟ್ವೀಟ್ ಮಾಡಿದ್ದಾರೆ. ಇಗ ಚೇತನ್ ಅವರ ಟ್ವೀಟ್ ಭಾರೀ ಚರ್ಚೆಯಾಗುತ್ತಿದ್ದು, ಈ ಟ್ವೀಟ್‍ಗಳನ್ನು ಚೇತನ್ ನಟ ಧ್ರುವ ಸರ್ಜಾ ವಿರುದ್ಧವೇ ಮಾಡಿರಬಹುದಾ ಎಂದು ಅಭಿಮಾನಿಗಳು ಪ್ರಶ್ನಿಸುತ್ತಿದ್ದಾರೆ.

    ಈ ಅನುಮಾನ ಮೂಡಲು ಕಾರಣ, 2018ರಲ್ಲಿ ನಟಿ ಶೃತಿ ಹರಿಹರನ್ ನಟ ಅರ್ಜುನ್ ಸರ್ಜಾ ಅವರ ಮೇಲೆ ಮೀಟೂ ಆರೋಪ ಮಾಡಿದ್ದರು. ಈ ಸಮಯದಲ್ಲಿ ಮಾವನ ಬೆನ್ನಿಗೆ ನಿಂತಿದ್ದ ಧ್ರುವ ಮಾಧ್ಯಮಗಳ ಮುಂದೇ ನಾಯಿ, ನರಿ, ಕ್ರಿಮಿ ಕೀಟಗಳು ಹೇಳಿದ್ದನ್ನೆಲ್ಲ ನಾನು ಕೇಳುವುದಿಲ್ಲ ಎಂದು ಶ್ರುತಿ ವಿರುದ್ಧ ಮತ್ತು ಆಕೆಯ ಬೆಂಬಲಕ್ಕೆ ನಿಂತಿದ್ದ ಚೇತನ್ ವಿರುದ್ಧ ಕಿಡಿಕಾರಿದ್ದರು.

    ಜೊತೆಗೆ ಇತ್ತೀಚೆಗೆ ಧ್ರುವ ಸರ್ಜಾ ಅಭಿನಯದ ಪೊಗರು ಚಿತ್ರದ ಹಾಡೊಂದು ರಿಲೀಸ್ ಆಗಿದ್ದು, ಈ ಹಾಡಿನಲ್ಲಿ ಧ್ರುವ ನಟಿಯಗೆ ಬೆದರಿಕೆ ಹಾಕುವುದು ಮತ್ತು ಎಳೆದಾಡುವ ದೃಶ್ಯಗಳು ಇವೆ ಹಾಗೂ ನಿನ್ನೆ ನಡೆದ ಅಂಬೇಡ್ಕರ್ ಜಯಂತಿಗೆ ನಟ ಧ್ರುವ ಕೂಡ ಟ್ವೀಟ್ ಮಾಡುವ ಮೂಲಕ ವಿಶ್ ಮಾಡಿದ್ದಾರೆ. ಈ ಮೂರು ವಿಷಯಗಳನ್ನು ಆಧಾರವಾಗಿ ಇಟ್ಟುಕೊಂಡು ಚೇತನ್ ಈ ರೀತಿ ಟ್ವೀಟ್ ಮಾಡಿದ್ದಾರೆ ಎಂದು ಹೇಳಲಾಗುತ್ತಿದೆ.

    https://twitter.com/chetan_club/status/1250271598373769218

    ಈಗ ಚೇತನ್ ಅವರ ಟ್ವೀಟ್‍ಗೆ ಪರ ಮತ್ತು ವಿರೋಧವಾಗಿ ಚರ್ಚೆ ನಡೆಯುತ್ತಿದ್ದು, ಕೆಲವರು ಈ ಮಾತನನ್ನು ಇವರು ಡಾಲಿ ಧನಂಜಯ್ ಅವರಿಗೆ ಹೇಳಿದ್ದಾರೆ ಎಂದು ಕಮೆಂಟ್ ಮಾಡಿದ್ದಾರೆ. ಇನ್ನೂ ಕೆಲವರು ಧ್ರುವಗೆ ಹೇಳಿದ್ದಾರೆ ಎಂದು ಹೇಳಿದ್ದಾರೆ. ಈ ರೀತಿ ಟ್ವೀಟ್ ಮಾಡುವುದು ಸರಿಯಲ್ಲ ಸಿನಿಮಾದ ಪಾತ್ರವೇ ಬೇರೆ ಹಾಗೇ ನಿಜ ಜೀವನವೇ ಬೇರೆ ಎಂದು ಕೆಲವರು ಕಮೆಂಟ್ ಮಾಡಿ ಚೇತನ್ ವಿರುದ್ಧ ಕಿಡಿಕಾರಿದ್ದಾರೆ.

  • ರಾಜಕೀಯ ವೈರತ್ವ ಮರೆತು ಜೊತೆಗೆ ಕುಣಿದ ಖೂಬಾ, ಖಂಡ್ರೆ – ವಿಡಿಯೋ ನೋಡಿ

    ರಾಜಕೀಯ ವೈರತ್ವ ಮರೆತು ಜೊತೆಗೆ ಕುಣಿದ ಖೂಬಾ, ಖಂಡ್ರೆ – ವಿಡಿಯೋ ನೋಡಿ

    ಬೀದರ್: ಸಂವಿಧಾನ ಶಿಲ್ಪಿ ಡಾ. ಬಾಬಾ ಸಾಹೇಬ್ ಅಂಬೇಡ್ಕರ್ ಅವರ 128ನೇ ಜನ್ಮ ದಿನಾಚರಣೆ ಹಿನ್ನೆಲೆ ಬೀದರ್ ನಲ್ಲಿ ಬಿಜೆಪಿ, ಕಾಂಗ್ರೆಸ್ ಹಾಗೂ ಜೆಡಿಎಸ್ ನಾಯಕರು ಪಕ್ಷಬೇದ ಮರೆತು ಸಖತ್ ಸ್ಟೆಪ್ಸ್ ಹಾಕಿದ್ದಾರೆ.

    ಲೊಕಸಭಾ ಚುನಾವಣಾ ಗುಂಗು ಮರೆತು ಅಭ್ಯರ್ಥಿಗಳು ಹಾಗೂ ರಾಜಕೀಯ ಮುಖಂಡರು ಖುಷಿಯಿಂದ ಹೆಜ್ಜೆ ಹಾಕಿದ್ದಾರೆ. ಪರಸ್ಪರ ಎದುರಾಳಿಯಾಗಿದ್ದರೂ ಕಾಂಗ್ರೆಸ್ ನಾಯಕ ಈಶ್ವರ ಖಂಡ್ರೆ ಹಾಗೂ ಬಿಜೆಪಿಯ ಭಗವಂತ ಖೂಬಾ ವೈರತ್ವವನ್ನು ಮರೆತು ಕುಣಿದು ಸಂತೋಷ ಪಟ್ಟಿದ್ದಾರೆ. ಅವರಿಗೆ ಸಚಿವ ಬಂಡೆಪ್ಪ ಕಾಶೆಂಪೂರ್, ಎಂಎಲ್‍ಸಿ ವಿಜಯ ಸಿಂಗ್, ಸೇರಿದಂತೆ ಅನೇಕ ರಾಜಕೀಯ ಮುಖಂಡರು ಸಾಥ್ ನೀಡಿದರು.

    ಇಂದು ಅಂಬೇಡ್ಕರ್ ಅವರ 128ನೇ ಜನ್ಮ ದಿನಾಚರಣೆ ಹಿನ್ನೆಲೆ ಬೀದರ್ ನಲ್ಲಿ ಕಾರ್ಯಕ್ರಮವೊಂದನ್ನು ಆಯೋಜಿಸಲಾಗಿತ್ತು. ಈ ಕಾರ್ಯಕ್ರಮದಲ್ಲಿ ಕಾಂಗ್ರೆಸ್, ಬಿಜೆಪಿ ಹಾಗೂ ಜೆಡಿಎಸ್ ನಾಯಕರು ಭಾಗಿಯಾಗಿದ್ದರು. ಈ ವೇಳೆ ಎಲ್ಲಾ ಪಕ್ಷದ ನಾಯಕರು ಒಟ್ಟಾಗಿ ಕುಣಿದು ಲೋಕಸಭಾ ಚುನಾವಣಾ ಪ್ರಚಾರದಿಂದ ಕೊಂಚ ರಿಲೀಫ್ ಪಡೆದಿದ್ದಾರೆ.

  • ಅಂಬೇಡ್ಕರ್ ಜಯಂತಿ ಮೆರವಣಿಗೆ ವೇಳೆ ಗುಂಪು ಘರ್ಷಣೆ- ಪರಸ್ಪರ ಕಲ್ಲು ತೂರಾಟ

    ಅಂಬೇಡ್ಕರ್ ಜಯಂತಿ ಮೆರವಣಿಗೆ ವೇಳೆ ಗುಂಪು ಘರ್ಷಣೆ- ಪರಸ್ಪರ ಕಲ್ಲು ತೂರಾಟ

    ಚಿಕ್ಕೋಡಿ: ಅಂಬೇಡ್ಕರ್ ಜಯಂತಿ ಮೆರವಣಿಗೆ ವೇಳೆ ಎರಡು ಗುಂಪುಗಳ ಮಧ್ಯೆ ಕಲ್ಲು ತೂರಾಟವಾಗಿರುವ ಘಟನೆ ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ತಾಲೂಕಿನ ನಾಗರಾಳ ಗ್ರಾಮದಲ್ಲಿ ನಡೆದಿದೆ.

    ಎರಡು ಗುಂಪುಗಳ ನಡುವೆ ನಡೆದ ಗಲಭೆಯಲ್ಲಿ ಸುಮಾರು 30 ಕ್ಕೂ ಹೆಚ್ಚು ದ್ವಿಚಕ್ರ ವಾಹನಗಳು ಹಾಗೂ 4 ಕಾರುಗಳು ಜಖಂಗೊಂಡಿವೆ. ಅಲ್ಲದೇ 5 ಕ್ಕೂ ಹೆಚ್ಚು ಅಂಗಡಿಗಳು ಹಾಗೂ ಮನೆಗಳ ಗಾಜುಗಳನ್ನ ಧ್ವಂಸಗೊಳಿಸಲಾಗಿದೆ.

     

    ಅಂಬೇಡ್ಕರ್ ಜಯಂತಿ ಕಾರ್ಯಕ್ರಮದ ಅಂಗವಾಗಿ ಹಮ್ಮಿಕೊಳ್ಳಲಾಗಿದ್ದ ಮೆರವಣಿಗೆ ವೇಳೆ ಸವರ್ಣೀಯರ ಕೇರಿಯಲ್ಲಿ ಹೋದ ಸಂದರ್ಭದಲ್ಲಿ ಎರಡು ಗುಂಪುಗಳ ನಡೆದ ವಾಗ್ವಾದವೇ ಘಟನೆಗೆ ಕಾರಣ ಎನ್ನಲಾಗಿದೆ. ಸದ್ಯ ಗ್ರಾಮದಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಗಿದ್ದು ಸ್ಥಳಕ್ಕೆ ಅರೆ ಸೇನಾ ಪಡೆ ಸೇರಿದಂತೆ ಹೆಚ್ಚಿನ ಪೊಲೀಸ್ ಬಂದೋಬಸ್ತ್ ಕಲ್ಪಿಸಲಾಗಿದೆ.

    ಚಿಕ್ಕೋಡಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದ್ದು, ಗಲಾಟೆಯಲ್ಲಿ ಭಾಗಿಯಾಗಿರುವ ಕಿಡಿಗೇಡಿಗಳ ಬಂಧನಕ್ಕೆ ಪೊಲೀಸರು ಬಲೆ ಬೀಸಿದ್ದಾರೆ.