Tag: Ambergris

  • 10 ಕೋಟಿ ರೂಪಾಯಿ ಮೌಲ್ಯದ ತಿಮಿಂಗಿಲ ವಾಂತಿ ವಶ – 10 ಮಂದಿ ಅರೆಸ್ಟ್‌

    10 ಕೋಟಿ ರೂಪಾಯಿ ಮೌಲ್ಯದ ತಿಮಿಂಗಿಲ ವಾಂತಿ ವಶ – 10 ಮಂದಿ ಅರೆಸ್ಟ್‌

    ಮಡಿಕೇರಿ: ಸುಮಾರು 10 ಕೋಟಿ ರೂ. ಮೌಲ್ಯದ ತಿಮಿಂಗಿಲ ವಾಂತಿ (Ambergris) ವಶಪಡಿಸಿಕೊಂಡು 10 ಮಂದಿಯನ್ನು ಬಂಧಿಸಿರುವ ಘಟನೆ ಕೊಡಗು ಜಿಲ್ಲೆ (Kodagu District) ವಿರಾಜಪೇಟೆ ತಾಲ್ಲೂಕಿನ ಬೇಟೋಳಿ ಗ್ರಾಮದಲ್ಲಿ ನಡೆದಿದೆ.

    ಕೇರಳದ ತಿರುನಂತಪುರಂನಿಂದ ತಂದು ಆಂಧ್ರಪ್ರದೇಶ ಅಥವಾ ಬೆಂಗಳೂರಿನಲ್ಲಿ (Bengaluru) ಮಾರಾಟ ಮಾಡಲು ಯತ್ನಿಸಿದ್ದ ಆರೋಪಿಗಳನ್ನು ವಿರಾಜಪಟೇಟೆ ಪೊಲೀಸರು (Virajpet Police) ಬಂಧಿಸಿದ್ದಾರೆ. ಬಳಿಕ ಬಂಧಿತರಿಂದ 10 ಕೋಟಿ ರೂ. ಮೌಲ್ಯದ 10 ಕೆ.ಜಿ 390 ಗ್ರಾಂ ತೂಕದ ತಿಮಿಂಗಿಲ ವಾಂತಿಯನ್ನು ವಶಕ್ಕೆ ಪಡೆದುಕೊಂಡಿದ್ದಾರೆ.

    ಸ್. ಶಂಶುದ್ದೀನ್ (45), ಎಂ.ನವಾಜ್ (54 ವರ್ಷ), ವಿ.ಕೆ ಲತೀಶ್ (53), ಜೇಶ್.ವಿ (40), ಪ್ರಶಾಂತ್.ಟಿ (52), ಎ.ವಿ ಶಂಶುದ್ದೀನ್ (48), ಬಾಲಚಂದ್ರನಾಯಕ್ (55), ಕೆ.ಕೆ ಜೋಬಿಸ್ (33) ವರ್ಷ ಬಂಧಿತ ಆರೋಪಿಗಳು. ಇದನ್ನೂ ಓದಿ: ಗುತ್ತಿಗೆದಾರರು ಕಮಿಷನ್ ಆರೋಪದ ಸಾಕ್ಷಿ ಕೊಟ್ಟರೆ ತನಿಖೆ ಮಾಡಿಸುತ್ತೇವೆ – ಕೃಷ್ಣಬೈರೇಗೌಡ

    ತಿಮಿಂಗಿಲ ವಾಂತಿಗೆ ಯಾಕಿಷ್ಟು ಬೇಡಿಕೆ?
    ಅಂಬರ್ ಗ್ರೀಸ್ ಅಥವಾ ತಿಮಿಂಗಿಲ ವಾಂತಿ ಎನ್ನುವುದು ಮೇಣದಂಥ ವಸ್ತುವಾಗಿದ್ದು, ಇದನ್ನ ಸುಗಂಧ ದ್ರವ್ಯಗಳ ತಯಾರಿಕೆಯಲ್ಲಿ ಬಳಸಲಾಗುತ್ತದೆ. ಕಚ್ಚಾವಸ್ತುವಾಗಿದ್ದಾಗಲೂ ಅಂಬರ್ ಗ್ರೀಸ್ ಕೊಂಚ ಸುವಾಸನೆ ಬೀರುವಂಥದ್ದಾಗಿರುತ್ತದೆ. ಕೆಲವು ದೇಶಗಳಲ್ಲಿ ಕಾಮೋತ್ತೇಜಕ ವಸ್ತುಗಳ ತಯಾರಿಕೆಯಲ್ಲೂ ಇದನ್ನ ಬಳಸಲಾಗುತ್ತದೆ.  ಇದನ್ನೂ ಓದಿ: ಮುಂದಿನ ದಿನಗಳಲ್ಲಿ ಭಾರೀ ಇಳಿಕೆಯಾಗಲಿದೆ ಟಿವಿ, ಫ್ರಿಡ್ಜ್‌, ಮೊಬೈಲ್‌ ಬೆಲೆ!

    ತಿಮಿಂಗಿಲ ವಾಂತಿ ಸಿಗುವುದು ಬಹಳ ಅಪರೂಪ. ಏಕೆಂದರೆ, ತಿಮಿಂಗಿಲಗಳು ಸಮುದ್ರದಲ್ಲಿ ವಾಂತಿ ಮಾಡಿಕೊಳ್ಳುವುದು ಅಪರೂಪ ಹಾಗೂ ಅವು ಜನಸಾಮಾನ್ಯರಿಗೆ ಸಿಗುವುದು ತುಂಬಾ ವಿರಳ. ಹಾಗಾಗಿ ಈ ವಸ್ತುವಿಗೆ ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಭಾರೀ ಬೇಡಿಕೆಯಿದೆ. ಆದರೆ ಕಳ್ಳಸಾಗಣೆದಾರರು ಅಂಬರ್ ಗ್ರೀಸ್‌ಗಾಗಿ ಸಮುದ್ರಗಳಿಗೆ ದಾಂಗುಡಿ ಇಡುವುದನ್ನು ತಪ್ಪಿಸಲು ಬಹುತೇಕ ದೇಶಗಳು ಇದರ ಮಾರಾಟ ನಿಷೇಧಿಸಿವೆ. ಹಾಗಾಗಿ ಇದು ಕಳ್ಳಸಾಗಣೆಯಾಗುತ್ತಿದೆ.  ಇದನ್ನೂ ಓದಿ: ಕೋಟ್ಯಂತರ ರೂಪಾಯಿ ಮೌಲ್ಯದ ತಿಮಿಂಗಿಲ ವಾಂತಿ ವಶ – ಇಬ್ಬರು ಅರೆಸ್ಟ್‌

  • ಅಕ್ರಮವಾಗಿ ಮಾರಾಟ ಮಾಡ್ತಿದ್ದ 1 ಕೋಟಿ ರೂ. ಮೌಲ್ಯದ ತಿಮಿಂಗಲ ವಾಂತಿ ವಶ – ಮೂವರು ಅರೆಸ್ಟ್‌

    – ತಿಮಿಂಗಲ ವಾಂತಿಗೆ ಯಾಕಿಷ್ಟು ಬೇಡಿಕೆ? – ಇದರಿಂದ ಪ್ರಯೋಜನ ಏನು?

    ಬೀದರ್‌: ಕಾಳಸಂತೆಯಲ್ಲಿ ತಿಮಿಂಗಲ ವಾಂತಿ (Ambergris) ಮಾರಾಟ ಮಾಡುತ್ತಿದ್ದ ಖತರ್ನಾಕ್‌ ಗ್ಯಾಂಗ್‌ಗೆ ಹೆಡೆಮುರಿ ಕಟ್ಟಿರುವ ಪೊಲೀಸರು ಸುಮಾರು 1 ಕೋಟಿ ರೂ. ಮೌಲ್ಯದ 980 ಗ್ರಾಂ ನಷ್ಟು ಅಂಬರ್‌ಗ್ರಿಸ್ ವಶಪಡಿಸಿಕೊಂಡಿದ್ದಾರೆ.

    ಭರ್ಜರಿ ಕಾರ್ಯಾಚರಣೆ ಮಾಡಿದ ಬೀದರ್ ಪೊಲೀಸರು (Bidar Police) ಸೌಂದರ್ಯ ವರ್ಧಕ ಹಾಗೂ ಸುಗಂಧ ದ್ರವ್ಯ ತಯಾರಿಸಲು ಬಳಕೆ ಮಾಡುತ್ತಾರೆ. ಹಾಗಾಗಿ ತಿಮಿಂಗಲ ವಾಂತಿಯನ್ನು ಗೋವಾದಿಂದ ಅಕ್ರಮವಾಗಿ ಬೀದರ್‌ಗೆ ತಂದಿದ್ದ ಮಹಾರಾಷ್ಟ್ರ ರಾಜ್ಯದ ರತ್ನಗಿರಿ ಜಿಲ್ಲೆಯ ಮೂವರು ಆರೋಪಿಗಳನ್ನು ಅರೆಸ್ಟ್ ಬಂಧಿಸಿ ಜೈಲಿಗಟ್ಟಿದ್ದಾರೆ.

    15 ದಿನಗಳಲ್ಲಿ 28 ಕೇಸ್‌:
    ಕಳೆದ 15 ದಿನಗಳಲ್ಲಿ 28 ಕಳ್ಳತನ ಪ್ರಕರಣ ಭೇದಿಸಿದ್ದಾರೆ. ಜಿಲ್ಲೆಯ 13 ಠಾಣೆಗಳಲ್ಲಿ ದಾಖಲಾಗಿದ್ದ ಜಾನುವಾರು ಮತ್ತು ವಿವಿಧ ಸ್ವತ್ತಿನ 28 ಪ್ರಕರಣಗಳನ್ನು ಭೇದಿಸಿ ಅಂತಾರಾಜ್ಯ ಕಳ್ಳರು ಸೇರಿ 28 ಆರೋಪಿಗಳನ್ನ ಬಂಧಿಸಿದ್ದಾರೆ.

    ಒಟ್ಟಾರೆಯಾಗಿ ಬಂಧಿತ ಆರೋಪಿಗಳಿಂದ 53 ಲಕ್ಷ ರೂ. ಮೌಲ್ಯದ ವಸ್ತುಗಳನ್ನ ಜಪ್ತಿ ಮಾಡಲಾಗಿದೆ. ಅದರಲ್ಲಿ 7.76 ಲಕ್ಷ ನಗದು, 23.91 ಲಕ್ಷ ಮೌಲ್ಯದ 396 ಗ್ರಾಂ ಚಿನ್ನ, 320 ಗ್ರಾಂ ಬೆಳ್ಳಿ, 7 ಜಾನುವಾರು, 6 ಪಂಪ್ ಸೆಟ್, 7 ವಾಹನಗಳು, 16 ಸಾವಿರ ರೂ. ಮೌಲ್ಯದ ಮದ್ಯವನ್ನು ಜಪ್ತಿ ಮಾಡಲಾಗಿದೆ. ಬೀದರ್‌ ಪೊಲೀಸರ ಕಾರ್ಯಾಚರಣೆಗೆ ಎಸ್ಪಿ ಚನ್ನಬಸವಣ್ಣ ಲಂಗೋಟಿ ಶ್ಲಾಘಿಸಿದ್ದಾರೆ.

    ತಿಮಿಂಗಲ ವಾಂತಿಗೆ ಯಾಕಿಷ್ಟು ಬೇಡಿಕೆ?
    ಅಂಬರ್ ಗ್ರೀಸ್ ಎಂಬ ವಸ್ತುವು ಮೇಣದಂಥ ವಸ್ತುವಾಗಿದ್ದು, ಇದನ್ನ ಸುಗಂಧ ದ್ರವ್ಯಗಳ ತಯಾರಿಕೆಯಲ್ಲಿ ಬಳಸಲಾಗುತ್ತದೆ. ಕಚ್ಚಾವಸ್ತುವಾಗಿದ್ದಾಗಲೂ ಅಂಬರ್ ಗ್ರೀಸ್ ಕೊಂಚ ಸುವಾಸನೆ ಬೀರುವಂಥದ್ದಾಗಿರುತ್ತದೆ. ಕೆಲವು ದೇಶಗಳಲ್ಲಿ ಕಾಮೋತ್ತೇಜಕ ವಸ್ತುಗಳ ತಯಾರಿಕೆಯಲ್ಲೂ ಇದನ್ನ ಬಳಸಲಾಗುತ್ತದೆ.

    ತಿಮಿಂಗಿಲ ವಾಂತಿ ಸಿಗುವುದು ಬಹಳ ಅಪರೂಪ. ಏಕೆಂದರೆ, ತಿಮಿಂಗಿಲಗಳು ಸಮುದ್ರದಲ್ಲಿ ವಾಂತಿ ಮಾಡಿಕೊಳ್ಳುವುದು ಅಪರೂಪ. ಆದ್ದರಿಂದ ಇವು ಜನಸಾಮಾನ್ಯರಿಗೆ ಸಿಗುವುದು ತುಂಬಾ ವಿರಳ. ಹಾಗಾಗಿ ಈ ವಸ್ತುವಿಗೆ ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಭಾರೀ ಬೇಡಿಕೆಯಿದೆ. ಆದರೆ ಕಳ್ಳಸಾಗಣೆದಾರರು ಅಂಬರ್‌ಗ್ರೀಸ್‌ಗಾಗಿ ಸಮುದ್ರಗಳಿಗೆ ದಾಂಗುಡಿ ಇಡುವುದನ್ನು ತಪ್ಪಿಸಲು ಬಹುತೇಕ ದೇಶಗಳು ಇದರ ಮಾರಾಟ ನಿಷೇಧಿಸಿವೆ. ಹಾಗಾಗಿ ಇದು ಕಳ್ಳಸಾಗಣೆಯಾಗುತ್ತಿದೆ.

  • ಕೋಟ್ಯಂತರ ರೂಪಾಯಿ ಮೌಲ್ಯದ ತಿಮಿಂಗಿಲ ವಾಂತಿ ವಶ – ಇಬ್ಬರು ಅರೆಸ್ಟ್‌

    ಕೋಟ್ಯಂತರ ರೂಪಾಯಿ ಮೌಲ್ಯದ ತಿಮಿಂಗಿಲ ವಾಂತಿ ವಶ – ಇಬ್ಬರು ಅರೆಸ್ಟ್‌

    ಚಾಮರಾಜನಗರ: ಸುಮಾರು 3 ಕೆಜಿಯಷ್ಟು ತಿಮಿಂಗಿಲ ವಾಂತಿ (Ambergris) ವಶಪಡಿಸಿಕೊಂಡು ಇಬ್ಬರನ್ನ ಬಂಧಿಸಿರುವ ಘಟನೆ ಚಾಮರಾಜನಗರದಲ್ಲಿ (Chamarajanagar) ನಡೆದಿದೆ‌.

    ಉತ್ತರ ಕನ್ನಡ ಜಿಲ್ಲೆಯ ಭಟ್ಕಳ ಮೂಲದ ಆನಂದ ದೇವಾಡಿಗ ಹಾಗೂ ಅಪ್ಪಣ್ಣ ನಾಯಕ ಬಂಧಿತ ಆರೋಪಿಗಳು. ಕೋಟ್ಯಂತರ ರೂಪಾಯಿ ಬೆಲೆ ಬಾಳುವ ತಿಮಿಂಗಿಲ ವಾಂತಿಯನ್ನು ತಮಿಳುನಾಡಿನ (TamilNadu) ಕೊಯಮತ್ತೂರಿಗೆ ಸಾಗಿಸುತ್ತಿದ್ದ ವೇಳೆ ಕೊಳ್ಳೇಗಾಲ ತಾಲೂಕಿನ ಟಗರಪುರ ರಸ್ತೆಯಲ್ಲಿ ಅರಣ್ಯ ಸಂಚಾರ ದಳದ ಪೊಲೀಸರು ಕಾರ್ಯಾಚರಣೆ ನಡೆಸಿ ಆರೋಪಿಗಳನ್ನ ಬಂಧಿಸಿದ್ದಾರೆ. ಇದನ್ನೂ ಓದಿ: ನಾರಾಯಣಪುರದ ಬಸವಸಾಗರ ಜಲಾಶಯ ಬಹುತೇಕ ಭರ್ತಿ – ರೈತರ ಮೊಗದಲ್ಲಿ ಮಂದಹಾಸ

    ಆರೋಪಿಗಳಿಂದ 3 ಕೆಜಿ ತಿಮಿಂಗಿಲ ವಾಂತಿ, ಒಂದು ಅಲ್ಟೋ ಕಾರು, ಎರಡು ಮೊಬೈಲ್, 7 ಸಾವಿರ ನಗದು ವಶಪಡಿಸಿಕೊಳ್ಳಲಾಗಿದೆ. ಕೊಳ್ಳೇಗಾಲ ಪೊಲೀಸ್ ಠಾಣೆಯಲ್ಲಿ ಸಂರಕ್ಷಣಾ ಕಾಯ್ದೆ ಅನ್ವಯ ಪ್ರಕರಣ ದಾಖಲಿಸಲಾಗಿದೆ. ಇದನ್ನೂ ಓದಿ: ಸಿನಿಮೀಯ ಸ್ಟೈಲ್‌ನಲ್ಲಿ ದೇವಸ್ಥಾನದಲ್ಲಿ ಜೆಡಿಎಸ್‌ ಮುಖಂಡನ ಹತ್ಯೆಗೆ ಯತ್ನ – ಕೊಲೆಗೆ ಸ್ನೇಹಿತನಿಂದಲೇ ಸ್ಕೆಚ್‌

    ತಿಮಿಂಗಲ ವಾಂತಿಗೆ ಯಾಕಿಷ್ಟು ಬೇಡಿಕೆ?
    ಅಂಬರ್ ಗ್ರೀಸ್ ಎಂಬ ವಸ್ತುವು ಮೇಣದಂಥ ವಸ್ತುವಾಗಿದ್ದು, ಇದನ್ನ ಸುಗಂಧ ದ್ರವ್ಯಗಳ ತಯಾರಿಕೆಯಲ್ಲಿ ಬಳಸಲಾಗುತ್ತದೆ. ಕಚ್ಚಾವಸ್ತುವಾಗಿದ್ದಾಗಲೂ ಅಂಬರ್ ಗ್ರೀಸ್ ಕೊಂಚ ಸುವಾಸನೆ ಬೀರುವಂಥದ್ದಾಗಿರುತ್ತದೆ. ಕೆಲವು ದೇಶಗಳಲ್ಲಿ ಕಾಮೋತ್ತೇಜಕ ವಸ್ತುಗಳ ತಯಾರಿಕೆಯಲ್ಲೂ ಇದನ್ನ ಬಳಸಲಾಗುತ್ತದೆ.

    ತಿಮಿಂಗಿಲ ವಾಂತಿ ಸಿಗುವುದು ಬಹಳ ಅಪರೂಪ. ಏಕೆಂದರೆ, ತಿಮಿಂಗಿಲಗಳು ಸಮುದ್ರದಲ್ಲಿ ವಾಂತಿ ಮಾಡಿಕೊಳ್ಳುವುದು ಅಪರೂಪ ಹಾಗೂ ಅವು ಜನಸಾಮಾನ್ಯರಿಗೆ ಸಿಗುವುದು ತುಂಬಾ ವಿರಳ. ಹಾಗಾಗಿ ಈ ವಸ್ತುವಿಗೆ ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಭಾರೀ ಬೇಡಿಕೆಯಿದೆ. ಆದರೆ ಕಳ್ಳಸಾಗಣೆದಾರರು ಅಂಬರ್ ಗ್ರೀಸ್ ಗಾಗಿ ಸಮುದ್ರಗಳಿಗೆ ದಾಂಗುಡಿ ಇಡುವುದನ್ನು ತಪ್ಪಿಸಲು ಬಹುತೇಕ ದೇಶಗಳು ಇದರ ಮಾರಾಟ ನಿಷೇಧಿಸಿವೆ. ಹಾಗಾಗಿ ಇದು ಕಳ್ಳಸಾಗಣೆಯಾಗುತ್ತಿದೆ.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • 80 ಕೋಟಿ ಮೌಲ್ಯದ ತಿಮಿಂಗಿಲದ ವಾಂತಿ ಮಾರಾಟಕ್ಕೆ ಯತ್ನ – ನಾಲ್ವರು ಅರೆಸ್ಟ್

    80 ಕೋಟಿ ಮೌಲ್ಯದ ತಿಮಿಂಗಿಲದ ವಾಂತಿ ಮಾರಾಟಕ್ಕೆ ಯತ್ನ – ನಾಲ್ವರು ಅರೆಸ್ಟ್

    ಬೆಂಗಳೂರು: 80 ಕೋಟಿ ರೂ. ಮೌಲ್ಯದ ತಿಮಿಂಗಿಲದ ವಾಂತಿಯನ್ನು ಮಾರಾಟ ಮಾಡಲು ಯತ್ನಿಸಿದ್ದ ನಾಲ್ವರು ಆರೋಪಿಗಳನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.

    ಪಾಷ, ಮಹಮ್ಮದ್ ಮುನ್ನಾ, ಸಂತೋಷ್, ಜಗನ್ನಾಥಚರ್ ಬಂಧಿತ ಆರೋಪಿಗಳು. ನಗರದ ಬಗಲಗುಂಟೆ ಸಮೀಪ ನಾಲ್ವರು ಆರೋಪಿಗಳು 80.ಕೋಟಿ ಮೌಲ್ಯದ ತಿಮಿಂಗಿಲ ವಾಂತಿ(ಅಂಬರ್ ಗ್ರಿಸ್ ಗಟ್ಟಿ) ಮತ್ತು ಬ್ರಿಟಿಷ್ ಈಸ್ಟ್ ಇಂಡಿಯಾ ಕಂಪನಿಯ ಮರ್ಕ್ಯೂರಿ ತಾಮ್ರದ ಬಾಟಲ್ ಗಳನ್ನು ಮಾರಾಟಕ್ಕೆ ಮುಂದಾಗಿದ್ದರು.

    ಈ ವೇಳೆ ಖಚಿತ ಮಾಹಿತಿ ಆಧಾರಿಸಿದ ಸಿಸಿಬಿ ಪೊಲೀಸರು ಆರೋಪಿಗಳನ್ನು ಬಂಧಿಸಿದ್ದಾರೆ. ಅಪರೂಪದ ಅಂಬರ್ ಗ್ರಿಸ್ ಮತ್ತು ಪುರಾತನ ಕಾಲದ ಮರ್ಕ್ಯೂರಿ ತಾಮ್ರದ ಬಾಟಲ್, ಈಸ್ಟ್ ಇಂಡಿಯಾ ಕಂಪನಿಯ ಪುರಾತನ ಸ್ಟೀಮ್ ಫ್ಯಾನ್ ನೋಡಿ ಪೊಲೀಸರೇ ಶಾಕ್ ಆಗಿದ್ದಾರೆ. ಇದನ್ನೂ ಓದಿ: ಏನಿದು ತಿಮಿಂಗಿಲ ವಾಂತಿ? ವಿಶೇಷತೆ ಏನು?

    ಇನ್ನೂ ಅಂಬರ್ ಗ್ರಿಸ್ ಗೆ ವಿದೇಶದಲ್ಲಿ ಬಾರಿ ಬೇಡಿಕೆಯಿದ್ದು, ಸುಗಂಧ ದ್ರವ್ಯಕ್ಕೆ ಇದನ್ನು ಉಪಯೋಗ ಮಾಡುತ್ತಾರೆ ಎನ್ನುವ ಬಗ್ಗೆ ಮಾಹಿತಿ ಸಿಕ್ಕಿದೆ. ಇದೇ ಕಾರಣಕ್ಕೆ ಅಂಬರ್ ಗ್ರಿಸ್ ಒಂದು ಕೆಜಿಗೆ ಬರೋಬ್ಬರಿ ಒಂದು ಕೋಟಿ ರೂಪಾಯಿ ಬೆಲೆ ಇದೆ ಎನ್ನಲಾಗಿದೆ. ಸದ್ಯ ಈ ನಾಲ್ವರು ಆರೋಪಿಗಳಿಗೆ ಇಷ್ಟು ಅಮೂಲ್ಯವಾದ ವಸ್ತುಗಳು ಸಿಕ್ಕಿದಾದಾದರೂ ಹೇಗೆ ಎನ್ನುವುದರ ಬಗ್ಗೆ ಸಿಸಿಬಿ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.