Tag: Amit Malaviya

  • ಅಮೇಥಿಯಿಂದ ರಾಗಾ ಕಣಕ್ಕಿಳಿಸಲು ಕಾಂಗ್ರೆಸ್‌ ಹೆದರಿದೆಯೇ?: ಅಮಿತ್ ಮಾಳವೀಯ

    ಅಮೇಥಿಯಿಂದ ರಾಗಾ ಕಣಕ್ಕಿಳಿಸಲು ಕಾಂಗ್ರೆಸ್‌ ಹೆದರಿದೆಯೇ?: ಅಮಿತ್ ಮಾಳವೀಯ

    ನವದೆಹಲಿ: ಕೊನೆಗೂ ಅಳೆದುತೂಗಿ ಕಾಂಗ್ರೆಸ್‌ ತನ್ನ ಮೊದಲ ಪಟ್ಟಿ ರಿಲೀಸ್‌ ಮಾಡಿದೆ. ಆದರೆ ಈ ಪಟ್ಟಿಯಲ್ಲಿ ಬಹುನಿರೀಕ್ಷಿತ ಕ್ಷೇತ್ರ ಅಮೇಥಿಯನ್ನು ಕೈಬಿಡಲಾಗಿದೆ. ಈ ಹಿನ್ನೆಲೆಯಲ್ಲಿ ಬಿಜೆಪಿಯ ಐಟಿ ಸೆಲ್ ಉಸ್ತುವಾರಿ ಅಮಿತ್ ಮಾಳವೀಯ (Amit Malviya) ಅವರು ಕೈ ನಾಯಕರನ್ನು ಕಾಲೆಳೆದಿದ್ದಾರೆ.

    ಕಾಂಗ್ರೆಸ್‌ ಮೊದಲ ಪಟ್ಟಿ ಬಿಡುಗಡೆ ಮಾಡುತ್ತಿದ್ದಂತೆಯೇ ತಮ್ಮ ಎಕ್ಸ್‌ ಖಾತೆಯಲ್ಲಿ, “ಅಮೇಥಿ ಕ್ಷೇತ್ರದಿಂದ (Amethi Constituency) ರಾಹುಲ್ ಗಾಂಧಿಯವರನ್ನು ಕಣಕ್ಕಿಳಿಸಲು ಕಾಂಗ್ರೆಸ್‌ ಹೆದರಿದೆಯೇ..?” ಎಂದು ಬರೆದುಕೊಂಡಿದ್ದಾರೆ.

    ಉತ್ತರಪ್ರದೇಶ ಬಿಟ್ಟು ಕಾಂಗ್ರೆಸ್‌ 39 ಅಭ್ಯರ್ಥಿಗಳ ಹೆಸರನ್ನು ಇಂದು (ಶುಕ್ರವಾರ) ಘೋಷಣೆ ಮಾಡಿದ ಬಳಿಕ ಮಾಳವೀಯ ಈ ಮೂಲಕ ವ್ಯಂಗ್ಯವಾಡಿದ್ದಾರೆ. ಇಂದು ಬಿಡುಗಡೆ ಮಾಡಿದ ಕಾಂಗ್ರೆಸ್‌ನ ಪಟ್ಟಿಯಲ್ಲಿ 2019ರ ಲೋಕಸಭಾ ಚುನಾವಣೆಯಲ್ಲಿ (Loksabha Elections 2024) ರಾಹುಲ್ ಗಾಂಧಿ ಗೆದ್ದು ಬಿಜೆಪಿ ಸೋತ ರಾಯ್ ಬರೇಲಿ ಅಥವಾ ಅಮೇಥಿಯನ್ನು ಉಲ್ಲೇಖಿಸಿಲ್ಲ.

    ಮೊದಲ ಪಟ್ಟಿಯ ಪ್ರಕಾರ, ಈ ಬಾರಿಯ ಲೋಕಸಭಾ ಚುನಾವಣೆಗೆ ಕೇರಳದ ವಯನಾಡ್ ಕ್ಷೇತ್ರದಿಂದ (Wayanad Constituency) ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರನ್ನು ಕಣಕ್ಕಿಳಿಸಲಾಗಿದೆ. ಆದರೆ ರಾಹುಲ್ ಗಾಂಧಿ ಅವರು ಅಮೇಥಿಗೆ ಮರಳುತ್ತಾರೆಯೇ ಮತ್ತು ಅವರ ಹಳೆಯ ಕ್ಷೇತ್ರದಿಂದಲೇ ಸ್ಪರ್ಧಿಸುತ್ತಾರೆಯೇ ಎಂಬುದು ಇನ್ನೂ ಖಚಿತವಾಗಿಲ್ಲ.

    ಕಳೆದ ಸಾರ್ವತ್ರಿಕ ಚುನಾವಣೆಯಲ್ಲಿ ಬಿಜೆಪಿಯ ಸ್ಮೃತಿ ಇರಾನಿ (Smriti Irani) ಅವರನ್ನು ಸೋಲಿಸುವ ಮೊದಲು ರಾಹುಲ್ ಗಾಂಧಿ (Rahul Gandhi) ಅವರು ಸತತವಾಗಿ ಮೂರು ಬಾರಿ ಗೆದ್ದಿದ್ದರು. 2014ರಲ್ಲಿ ಬಿಜೆಪಿಯಿಂದ ಸ್ಪರ್ಧಿಸಿದ್ದ ಸ್ಮೃತಿ ಇರಾನಿ ಸೋಲನ್ನು ಕಂಡರು. ಆದರೆ 2019ರಲ್ಲಿ ಅಮೇಥಿಯ ಮತದಾರರು ಇರಾನಿ ಅವರ ಕೈಹಿಡಿದರು. ಈ ಹಿನ್ನೆಲೆಯಲ್ಲಿ ಎರಡೂ ಪಕ್ಷಗಳಿಗೆ ಅಮೇಥಿ ಪ್ರತಿಷ್ಠೆಯ ಕ್ಷೇತ್ರವಾಗಿದೆ.

    ಹಾಲಿ ಸಂಸದೆ ಸ್ಕೃತಿ ಇರಾನಿಯವರು ಈ ಹಿಂದೆ ಕಾಂಗ್ರೆಸ್‌ (Congress First List) ಬಗ್ಗೆ ವ್ಯಂಗ್ಯವಾಡಿದ್ದರು. ಸದ್ಯದ ಪರಿಸ್ಥಿತಿಯಲ್ಲಿ ಯಾರು ಚುನಾವಣೆಗೆ ಸ್ಪರ್ಧಿಸುತ್ತಾರೆ ಎಂಬುದು ನನಗೆ ತಿಳಿದಿಲ್ಲ. ಆದರೆ ಅಭ್ಯರ್ಥಿಯನ್ನು ಘೋಷಿಸಲು ಕಾಂಗ್ರೆಸ್ಸಿಗರಿಗೆ ಸಾಧ್ಯವಾಗುತ್ತಿಲ್ಲ, ಸೋಲಿನ ಭಯ ಅವರನ್ನು ಕಾಡುತ್ತಿದೆ. ಅಮೇಥಿಯ ಜನರು ಮತ್ತೆ ತಮ್ಮ ಶಕ್ತಿಯನ್ನು ತೋರುತ್ತಾರೆ ಎಂಬ ಸತ್ಯ ಕಾಂಗ್ರೆಸ್​ಗೆ ಗೊತ್ತಿದೆ ಎಂದಿದ್ದರು.

  • ಸೋಶಿಯಲ್ ಮೀಡಿಯಾದಲ್ಲಿ ಭಾರೀ ಕುಸ್ತಿ- ಆದ್ರೆ ಹೊರಗೆ ಮಾತ್ರ ಒಳ್ಳೆ ದೋಸ್ತಿ!

    ಸೋಶಿಯಲ್ ಮೀಡಿಯಾದಲ್ಲಿ ಭಾರೀ ಕುಸ್ತಿ- ಆದ್ರೆ ಹೊರಗೆ ಮಾತ್ರ ಒಳ್ಳೆ ದೋಸ್ತಿ!

    – ಕುತೂಹಲ ಮೂಡಿಸಿದೆ ರಮ್ಯಾ-ಅಮಿತ್ ನಡೆ

    ಬೆಂಗಳೂರು: ಕಾಂಗ್ರೆಸ್ ಮತ್ತು ಬಿಜೆಪಿ ಸಾಮಾಜಿಕ ಜಾಲತಾಣಗಳ ಮುಖ್ಯಸ್ಥರಾಗಿರುವ ರಮ್ಯಾ ಹಾಗು ಅಮಿತ್ ಮಾಳವೀಯ ಚುನಾವಣಾ ರಾಜಕೀಯದ ರಣರಂಗದಲ್ಲಿ ಯಾವಾಗಲೂ ಕಾದಾಡುತ್ತಿರುತ್ತಾರೆ. ಪ್ರತಿದಿನ ಸಹ ಇಬ್ಬರು ಟ್ವಿಟ್ಟರ್ ನಲ್ಲಿ ಒಬ್ಬರಿಗೊಬ್ಬರು ಟಾಂಗ್ ಕೊಡುತ್ತಿರುತ್ತಾರೆ.

    ಸೋಶಿಯಲ್ ಮೀಡಿಯಾದಲ್ಲಿ ಕಾದಾಟ ನಡೆಸುವ ರಮ್ಯಾ ಮತ್ತು ಅಮಿತ್ ಮಾಳವೀಯಾ ಮಾತ್ರ ಖಾಸಗಿ ಜೀವನದಲ್ಲಿ ಒಳ್ಳೆಯ ಸ್ನೇಹಿತರಾಗಿದ್ದಾರೆ. ಇತ್ತೀಚೆಗೆ ಬೆಂಗಳೂರಿನಲ್ಲಿ ಭೇಟಿಯಾದ ಇಬ್ಬರೂ ಜೊತೆ ಜೊತೆಯಾಗಿ ನಗುತ್ತಾ ಫೋಟೋ ತೆಗೆಸಿಕೊಂಡಿದ್ದಾರೆ.

    ಸದ್ಯ ಇಬ್ಬರ ನಡೆಯ ಮೇಲೆ ರಾಜಕೀಯ ವಲಯದಲ್ಲಿ ಸಾಕಷ್ಟು ಚರ್ಚೆಗಳು ಸಹ ನಡೆಯುತ್ತೀವೆ. ಕೆಲವು ದಿನಗಳ ಹಿಂದೆ ಖಾಸಗಿ ಚಾನೆಲ್‍ಗೆ ಫೋನ್ ನಲ್ಲಿ ನೇರ ಸಂಪರ್ಕಕ್ಕೆ ಬಂದಿದ್ದ ಇಬ್ಬರೂ ಒಬ್ಬರ ಮೇಲೋಬ್ಬರು ಆರೋಪ-ಪ್ರತ್ಯಾರೋಪಗಳನ್ನು ಮಾಡಿದ್ದರು.

  • ಸಾರ್ವಜನಿಕ ಸ್ಥಳಗಳಲ್ಲಿ ಮಹಿಳೆಯರನ್ನು ಮುಟ್ಟಬಹುದೇ- ಸಿಎಂ ಬಗ್ಗೆ ಬಿಜೆಪಿ ನಾಯಕ ಅವಹೇಳನ

    ಸಾರ್ವಜನಿಕ ಸ್ಥಳಗಳಲ್ಲಿ ಮಹಿಳೆಯರನ್ನು ಮುಟ್ಟಬಹುದೇ- ಸಿಎಂ ಬಗ್ಗೆ ಬಿಜೆಪಿ ನಾಯಕ ಅವಹೇಳನ

    ಬೆಂಗಳೂರು: ಸಾರ್ವಜನಿಕ ಸ್ಥಳಗಳಲ್ಲಿ ಮುಖ್ಯಮಂತ್ರಿಗಳು ಮಹಿಳೆಯರೊಂದಿಗೆ ಸೆಲ್ಫಿ ತೆಗೆಸಿಕೊಳ್ಳುವುದು ತಪ್ಪಾ? ಎಂಬ ಪ್ರಶ್ನೆ ಹುಟ್ಟಿಕೊಂಡಿದೆ. ಹೌದು, ಬಿಜೆಪಿ ನಾಯಕರೊಬ್ಬರು ಅದೇ ಫೋಟೋ ಮತ್ತು ವಿಡಿಯೋಗಳನ್ನು ಬಳಸಿಕೊಂಡು ಸಿಎಂ ಸಿದ್ದರಾಮಯ್ಯರನ್ನು ಅವಹೇಳನ ಮಾಡುತ್ತಿದ್ದಾರೆ.

    ಶಿವಮೊಗ್ಗದಲ್ಲಿ ನಡೆದಿದ್ದ ಹಕ್ಕು ಪತ್ರ ವಿತರಣಾ ಕಾರ್ಯಕ್ರಮಕ್ಕೆ ಆಗಮಿಸಿದ್ದ ಹಲವು ವಿದ್ಯಾರ್ಥಿನಿಯರು ಮುಖ್ಯಮಂತ್ರಿಗಳೊಂದಿಗೆ ಸೆಲ್ಫಿ ತೆಗೆದುಕೊಂಡಿದ್ದರು. ಇಂದು ಅದೇ ವಿಡಿಯೋವನ್ನು ಬಳಸಿ ಬಿಜೆಪಿ ನಾಯಕ, ಐಟಿ ಸೆಲ್‍ನ ಉಸ್ತುವಾರಿ ಅಮಿತ್ ಮಾಳವಿಯಾ ಸಿಎಂರನ್ನು ಅವಹೇಳನ ಮಾಡುತ್ತಿದ್ದಾರೆ.

    ಸಾರ್ವಜನಿಕ ಕಾರ್ಯಕ್ರಮದಲ್ಲಿ ಸಿಎಂ ವಿದ್ಯಾರ್ಥಿನಿಯ ಕೈ ಹಿಡಿದು ಎಳೆದು ಫೋಟೋ ತೆಗೆದುಕೊಂಡಿದ್ದಾರೆ ಎಂದು ಅಮಿತ್ ಮಾಳವಿಯಾ ತಮ್ಮ ಟ್ವಿಟರ್ ಖಾತೆಯಲ್ಲಿ ಬರೆದುಕೊಂಡಿದ್ದಾರೆ. ಈ ಹಿಂದೆ ಸಿಎಂ ಮಂಗಳೂರಿನಲ್ಲಿ ಮೇಯರ್ ಕವಿತಾ ಸನೀಲ್ ಅವರ ಹೊಟ್ಟೆಗೆ ಪಂಚ್ ಕೊಟ್ಟಿರುವ ಫೋಟೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿತ್ತು. 2016ರಲ್ಲಿ ಬೆಂಗಳೂರಿನಲ್ಲಿ ನಡೆದ ಕಾರ್ಯಕ್ರಮದಲ್ಲಿ ತರೀಕೆರೆ ತಾಲೂಕು ಪಂಚಾಯ್ತಿ ಸದಸ್ಯೆಯಾಗಿರುವ ಗಿರಿಜಾ ಶ್ರೀನಿವಾಸ್ ಎಂಬವರು ಸಿಎಂಗೆ ಮುತ್ತು ಕೊಟ್ಟಿದ್ದರು.

    ಅಮಿತ್ ಮಾಳವಿಯಾ