Tag: amit malviya

  • ರಾಮನಗರ ಹೆಸರು ಬದಲಾವಣೆ| ಹಿಂದೂಗಳು ತಮ್ಮ‌ ತಾಯ್ನಾಡಿನಲ್ಲಿ ಉಳಿಬೇಕಾದ್ರೆ ಕಾಂಗ್ರೆಸ್ ಸಾಯಬೇಕು: ಮಾಳವಿಯ

    ರಾಮನಗರ ಹೆಸರು ಬದಲಾವಣೆ| ಹಿಂದೂಗಳು ತಮ್ಮ‌ ತಾಯ್ನಾಡಿನಲ್ಲಿ ಉಳಿಬೇಕಾದ್ರೆ ಕಾಂಗ್ರೆಸ್ ಸಾಯಬೇಕು: ಮಾಳವಿಯ

    ನವದೆಹಲಿ: ರಾಮನಗರ (Ramanagara) ಜಿಲ್ಲೆ ಹೆಸರು‌ ಬದಲಾವಣೆ ವಿಚಾರವಾಗಿ ಬಿಜೆಪಿಯ ಸಾಮಾಜಿಕ ಜಾಲತಾಣ ವಿಭಾಗದ ಮುಖ್ಯಸ್ಥ ಅಮಿತ್‌ ಮಾಳವೀಯ (Amit Malviya) ಹಿಂದುತ್ವವನ್ನು ಲಿಂಕ್‌ ಮಾಡಿ ಕಾಂಗ್ರೆಸ್‌ (Congress) ವಿರುದ್ಧ ಆಕ್ರೋಶ ಹೊರಹಾಕಿದ್ದಾರೆ.

    ಭಗವಾನ್ ರಾಮನ ಹೆಸರನ್ನ ಕೈ ಬಿಟ್ಟು ಬೆಂಗಳೂರು ದಕ್ಷಿಣ (Bengaluru South) ಎಂದು ಹೆಸರು ಬದಲಾಯಿಸಿದ್ದಾರೆ. ಹಿಂದೂಗಳ (Hindu) ಅಸ್ತಿತ್ವಕ್ಕೆ ಅಪಾಯ ಇದೆ ಎಂದು ಎಕ್ಸ್‌ನಲ್ಲಿ ಪೋಸ್ಟ್‌ ಮಾಡಿದ್ದಾರೆ. ಇದನ್ನೂ ಓದಿ: ರಾಮನಗರ ಹೆಸರು ಬದಲಾವಣೆ – ತಮ್ಮ ಭೂಮಿಗಳ ಬೆಲೆ ಹೆಚ್ಚಿಸುವ ಷಡ್ಯಂತ್ರದ ಭಾಗ: ಹೆಚ್‌ಡಿಕೆ ಕೆಂಡ


    ಹಿಂದೂಗಳು ಮತ್ತು ಅವರ ನಂಬಿಕೆಗಳ ಬಗ್ಗೆ ಕಾಂಗ್ರೆಸ್‌ನ ತೀವ್ರ ದ್ವೇಷವು ನಮ್ಮ ನಾಗರಿಕತೆಯ ಅಸ್ತಿತ್ವಕ್ಕೆ ಅಪಾಯವನ್ನುಂಟುಮಾಡುತ್ತದೆ. ಹಿಂದೂಗಳು ತಮ್ಮ ಏಕೈಕ ತಾಯ್ನಾಡಿನಲ್ಲಿ ಉಳಿಯಬೇಕಾದರೆ ಕಾಂಗ್ರೆಸ್ ಸಾಯಬೇಕು. ಈ ಆಯ್ಕೆ ಬಿಟ್ಟರೆ ಬೇರೆ ದಾರಿಯಿಲ್ಲ ಎಂದು ಬರೆದಿದ್ದಾರೆ. ಇದನ್ನೂ ಓದಿ: ಬ್ರಿಜೇಶ್ ಚೌಟ ಸೇರಿ ಭಾರತ ಸಂಸದರ ನಿಯೋಗ ಆಗಮಿಸುವ ಹೊತ್ತಲ್ಲೇ ಮಾಸ್ಕೋದಲ್ಲಿ ಡ್ರೋನ್‌ ದಾಳಿ!

    ಗುರುವಾರ ನಡೆದ ಕ್ಯಾಬಿನೆಟ್‌ ಸಭೆಯಲ್ಲಿ ರಾಮನಗರವನ್ನು ಬೆಂಗಳೂರು ದಕ್ಷಿಣ ಜಿಲ್ಲೆ ಎಂದು ಮರುನಾಮಕರಣ ಮಾಡಲು ತೀರ್ಮಾನ ತೆಗೆದುಕೊಳ್ಳಲಾಗಿದೆ. ಈ ನಿರ್ಧಾರಕ್ಕೆ ಬಿಜೆಪಿ, ಜೆಡಿಎಸ್‌ ವಿರೋಧ ವ್ಯಕ್ತಪಡಿಸಿವೆ. ರಿಯಲ್‌ ಎಸ್ಟೇಟ್‌ ಅಭಿವೃದ್ಧಿಗಾಗಿ ಈ ನಿರ್ಧಾರವನ್ನು ತೆಗೆದುಕೊಳ್ಳಲಾಗಿದೆ ಎಂದು ವಿಪಕ್ಷಗಳು ಕಿಡಿಕಾರಿವೆ.

  • ಮಮತಾ ಬ್ಯಾನರ್ಜಿಯ ಟಿಎಂಸಿಯಲ್ಲಿ ನಾಯಕರ ತಿಕ್ಕಾಟ – ಟಿಎಂಸಿ ವಾಟ್ಸಪ್ ಚಾಟ್ ಬಹಿರಂಗಪಡಿಸಿದ ಬಿಜೆಪಿಯ ಅಮಿತ್ ಮಾಳವೀಯ

    ಮಮತಾ ಬ್ಯಾನರ್ಜಿಯ ಟಿಎಂಸಿಯಲ್ಲಿ ನಾಯಕರ ತಿಕ್ಕಾಟ – ಟಿಎಂಸಿ ವಾಟ್ಸಪ್ ಚಾಟ್ ಬಹಿರಂಗಪಡಿಸಿದ ಬಿಜೆಪಿಯ ಅಮಿತ್ ಮಾಳವೀಯ

    ಕೋಲ್ಕತ್ತಾ: ಸಿಎಂ ಮಮತಾ ಬ್ಯಾನರ್ಜಿಯ (Mamata Banergee) ಟಿಎಂಸಿಯಲ್ಲಿ ನಾಯಕರು ಪರಸ್ಪರ ಕಿತ್ತಾಡಿಕೊಂಡಿದ್ದಾರೆ. ನಾಯಕರ ಮಾತಿನ ಚಕಮಕಿಯ ವಾಟ್ಸಪ್‌ ಚಾಟ್‌ನ್ನು ಬಿಜೆಪಿಯ ಅಮಿತ್‌ ಮಾಳವೀಯ ಬಹಿರಂಗಪಡಿಸಿದ್ದಾರೆ.

    ಟಿಎಂಸಿ ಸಂಸದರಾದ ಕಲ್ಯಾಣ್ ಬ್ಯಾನರ್ಜಿ, ಕೀರ್ತಿ ಆಜಾದ್ ನಡುವಿನ ಮೆಸೇಜ್ ವೈರಲ್ ಆಗಿದೆ. ಮಹುವಾ ಮೊಯಿತ್ರಾ ಉಲ್ಲೇಖಿಸಿ ಕಲ್ಯಾಣ್‌ ಬ್ಯಾನರ್ಜಿ ಮೆಸೇಜ್ ಮಾಡಿದ್ದಾರೆ. ಇಬ್ಬರು ನಾಯಕರ ಕದನದಲ್ಲಿ ಮಮತಾ ಬ್ಯಾನರ್ಜಿ ಮಧ್ಯಪ್ರವೇಶ ಮಾಡಿದ್ದಾರೆ. ಮಾಧ್ಯಮಗಳಿಗೆ ಸಂದರ್ಶನ ನೀಡದಂತೆ ಸೂಚನೆ ನೀಡಿದ್ದಾರೆ. ಆದರೆ, ಟಿಎಂಸಿ ನಾಯಕರ ನಡುವಿನ ತಿಕ್ಕಾಟವನ್ನು ಹಿರಿಯ ಸಂಸದ ಸೌಗತಾ ರಾಯ್ ಖಚಿತಪಡಿಸಿದ್ದಾರೆ.

    ನಾನು ಕಳೆದ 40 ವರ್ಷಗಳಿಂದ ರಾಜಕೀಯದಲ್ಲಿದ್ದೇನೆ. ಈ ಮಹಿಳಾ ಸಂಸದೆ ಚುನಾವಣಾ ಆಯೋಗದ ಕಚೇರಿಯ ಹೊರಗೆ ಭದ್ರತಾ ಸಿಬ್ಬಂದಿಯನ್ನು ಸಂಪರ್ಕಿಸಿ ನನ್ನನ್ನು ಬಂಧಿಸುವಂತೆ ಕೇಳುತ್ತಿದ್ದರು. ನನ್ನನ್ನು ಜೈಲಿಗೆ ಕಳುಹಿಸಲು ಅವರು ಯಾರು? ಅವರು ನನ್ನ ಮೇಲೆ ನಿಂದನೆ ಮಾಡಿದ್ದಾರೆ. ಸಂಸತ್ತಿನಲ್ಲಿ ಹೋರಾಡುವುದು ನಾನೇ. ನಾನು ನಿರ್ದಿಷ್ಟ ಕೈಗಾರಿಕಾ ಸಂಸ್ಥೆಯ ಬಗ್ಗೆ ಮಾತ್ರ ಗೀಳು ಹೊಂದಿರುವ ವ್ಯಕ್ತಿಯಲ್ಲ ಎಂದು ಕಲ್ಯಾಣ್‌ ಬ್ಯಾನರ್ಜಿ ಪ್ರತಿಕ್ರಿಯೆ ನೀಡಿದ್ದಾರೆ.

    ಮಹಿಳಾ ಸಂಸದೆ ನಿರರ್ಗಳವಾಗಿ ಇಂಗ್ಲಿಷ್ ಮಾತನಾಡುತ್ತಾರೆ ಎಂದ ಮಾತ್ರಕ್ಕೆ ಅವರು ಯಾರನ್ನಾದರೂ ಅವಮಾನಿಸಬಹುದು ಎಂದರ್ಥವಲ್ಲ ಎಂದು ಬ್ಯಾನರ್ಜಿ ಅಸಮಾಧಾನ ಹೊರಹಾಕಿದ್ದಾರೆ.

  • 7 ದಿನಗಳ ಒಳಗಡೆ ವಿಚಾರಣೆಗೆ ಹಾಜರಾಗಿ – ನಡ್ಡಾ, ವಿಜಯೇಂದ್ರಗೆ ಬೆಂಗಳೂರು ಪೊಲೀಸರಿಂದ ಸಮನ್ಸ್‌

    7 ದಿನಗಳ ಒಳಗಡೆ ವಿಚಾರಣೆಗೆ ಹಾಜರಾಗಿ – ನಡ್ಡಾ, ವಿಜಯೇಂದ್ರಗೆ ಬೆಂಗಳೂರು ಪೊಲೀಸರಿಂದ ಸಮನ್ಸ್‌

    ಬೆಂಗಳೂರು: ಬಿಜೆಪಿ ರಾಷ್ಟ್ರಾಧ್ಯಕ್ಷ ಜೆಪಿ ನಡ್ಡಾ (JP Nadda), ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ (BY Vijayendra), ಪಕ್ಷದ ಐಟಿ ಸೆಲ್ ಮುಖ್ಯಸ್ಥ ಅಮಿತ್ ಮಾಳವೀಯ (Amit Malviya) ಅವರಿಗೆ ಬೆಂಗಳೂರು ಪೊಲೀಸರು ಸಮನ್ಸ್ ಜಾರಿ ಮಾಡಿದ್ದಾರೆ.

    ನೋಟಿಸ್ ತಲುಪಿದ 7 ದಿನಗಳ ಒಳಗಾಗಿ ಬೆಳಗ್ಗೆ 11 ಗಂಟೆ ವೇಳೆಗೆ ನಗರದ ಹೈಗ್ರೌಂಡ್ಸ್ ಪೊಲೀಸ್ ಠಾಣೆಯಲ್ಲಿ (High Grounds Police Station) ವಿಚಾರಣೆಗೆ ಹಾಜರಾಗುವಂತೆ ಸಮನ್ಸ್‌ನಲ್ಲಿ ಸೂಚಿಸಲಾಗಿದೆ. ಇದನ್ನೂ ಓದಿ: ಜನಾಂಗೀಯ ನಿಂದನೆ ಹೇಳಿಕೆ – ಸ್ಯಾಮ್‌ ಪಿತ್ರೋಡಾ ತಲೆದಂಡ

     

    ಜನ ಪ್ರತಿನಿಧಿಗಳ ಕಾಯ್ದೆ ಹಾಗೂ ಸೆಕ್ಷನ್ 505 (2) (ವರ್ಗಗಳ ನಡುವೆ ದ್ವೇಷ, ದ್ವೇಷ ಅಥವಾ ದುಶ್ಚಟವನ್ನು ಸೃಷ್ಟಿಸುವ ಅಥವಾ ಉತ್ತೇಜಿಸುವ ಹೇಳಿಕೆಗಳು) ಅಡಿಯಲ್ಲಿ ಮೂವರು ಬಿಜೆಪಿ ನಾಯಕರ ವಿರುದ್ಧ ಪ್ರಕರಣ ದಾಖಲಾಗಿತ್ತು.

    ಎಸ್‌ಸಿ, ಎಸ್‌ಟಿ ಅನುದಾನ ಮುಸ್ಲಿಂ ಪಾಲಾಗುತ್ತಿದೆ ಎಂದು ಬಿಜೆಪಿ ತನ್ನ ಎಕ್ಸ್‌ ಖಾತೆಯನ್ನು ವಿಡಿಯೋ ಜಾಹೀರಾತು ಪ್ರಕಟಿಸಿತ್ತು. ಈ ವಿಡಿಯೋಗೆ ಕಾಂಗ್ರೆಸ್‌ ನಾಯಕ ರಮೇಶ್‌ ಬಾಬು ಅವರು ಮೇ 4 ರಂದು ಹೈಗ್ರೌಂಡ್ಸ್‌ ಪೊಲೀಸ್‌ ಠಾಣೆಯಲ್ಲಿ ದೂರು ನೀಡಿದ್ದರು. ಇದನ್ನೂ ಓದಿ: ಭಾರತದಲ್ಲಿ ಪಿತ್ರಾರ್ಜಿತ ಆಸ್ತಿ ತೆರಿಗೆ ವಿಧಿಸಿದರೆ ಅಂಬಾನಿ, ಅದಾನಿಯಂಥ ಶ್ರೀಮಂತರು ದುಬೈಗೆ ಹೋಗ್ತಾರೆ: ಆರ್ಥಶಾಸ್ತ್ರಜ್ಞ

     

  • ದೀದಿ ಆಡಳಿತದ ಬಂಗಾಳ ಭಯೋತ್ಪಾದಕರಿಗೆ ಸುರಕ್ಷಿತ ಸ್ವರ್ಗ: ರಾಮೇಶ್ವರಂ ಕೆಫೆ ಬಾಂಬರ್‌ ಅರೆಸ್ಟ್‌ ಬಗ್ಗೆ ಅಮಿತ್‌ ಮಾಳವಿಯ ಮಾತು

    ದೀದಿ ಆಡಳಿತದ ಬಂಗಾಳ ಭಯೋತ್ಪಾದಕರಿಗೆ ಸುರಕ್ಷಿತ ಸ್ವರ್ಗ: ರಾಮೇಶ್ವರಂ ಕೆಫೆ ಬಾಂಬರ್‌ ಅರೆಸ್ಟ್‌ ಬಗ್ಗೆ ಅಮಿತ್‌ ಮಾಳವಿಯ ಮಾತು

    ನವದೆಹಲಿ: ಮಮತಾ ಬ್ಯಾನರ್ಜಿ (Mamata Banerjee) ಆಡಳಿತದಲ್ಲಿ ಭಯೋತ್ಪಾದಕರಿಗೆ ಪಶ್ಚಿಮ ಬಂಗಾಳ (West Bengal) ಸುರಕ್ಷಿತ ಸ್ವರ್ಗವಾಗಿದೆ ಬಿಜೆಪಿ ಐಟಿ ಸೆಲ್‌ ಮುಖ್ಯಸ್ಥ ಅಮಿತ್‌ ಮಾಳವಿಯ (Amit Malviya) ಗಂಭೀರ ಆರೋಪ ಮಾಡಿದ್ದಾರೆ.

    ಬೆಂಗಳೂರಿನ ರಾಮೇಶ್ವರಂ ಕೆಫೆ ಬಾಂಬ್‌ ಬ್ಲಾಸ್ಟ್‌ (Rameshwaram Cafe Blast) ಪ್ರಕರಣದ ಬಾಂಬರ್‌ ಪಶ್ಚಿಮ ಬಂಗಾಳದಲ್ಲಿ ಬಂಧನಕ್ಕೊಳಗಾಗಿರುವ ಬಗ್ಗೆ ಎಕ್ಸ್‌ನಲ್ಲಿ ಪ್ರತಿಕ್ರಿಯೆ ನೀಡಿದ ಅಮಿತ್‌, ಸ್ಫೋಟಕ್ಕೆ ಸಂಬಂಧಿಸಿದಂತೆ ಇಬ್ಬರು ಆರೋಪಿಗಳನ್ನು ಕೊಲ್ಕತ್ತಾದಲ್ಲಿ ಬಂಧಿಸಲಾಗಿದೆ. ದುರದೃಷ್ಟವಶಾತ್ ಮಮತಾ ಬ್ಯಾನರ್ಜಿ ಆಡಳಿತದಲ್ಲಿ ಭಯೋತ್ಪಾದಕರಿಗೆ ಪ.ಬಂಗಾಳ ಸುರಕ್ಷಿತ ಸ್ವರ್ಗವಾಗಿದೆ ಎಂದು ದೀದಿ ಸರ್ಕಾರವನ್ನು ಟೀಕಿಸಿದ್ದಾರೆ. ಇದನ್ನೂ ಓದಿ: ರಾಮೇಶ್ವರಂ ಕೆಫೆ ಬಾಂಬರ್ ಪಶ್ಚಿಮ ಬಂಗಾಳದಲ್ಲಿ ಅರೆಸ್ಟ್

    ಅಮಿತ್ ಮಾಳವಿಯ ಟೀಕೆಗೆ ಬಂಗಾಳ ಪೊಲೀಸರು ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಪಶ್ಚಿಮ ಬಂಗಾಳವು ಎಂದಿಗೂ ಭಯೋತ್ಪಾದಕರಿಗೆ ಸುರಕ್ಷಿತ ಸ್ವರ್ಗವಾಗಿಲ್ಲ. ರಾಜ್ಯ ಪೊಲೀಸರು ತನ್ನ ಜನರನ್ನು ಕೆಟ್ಟ ಚಟುವಟಿಕೆಗಳಿಂದ ಸುರಕ್ಷಿತವಾಗಿರಿಸುವಲ್ಲಿ ಸದಾ ಜಾಗರೂಕತೆಯಿಂದ ಕೆಲಸ ಮಾಡುತ್ತಿದ್ದಾರೆ. ಅಸತ್ಯವು ಅತ್ಯಂತ ಕೆಟ್ಟದಾಗಿದೆ. ಆರೋಪಿಗಳ ಬಂಧನಕ್ಕೆ ಬಂಗಾಳ ಪೊಲೀಸರೂ ಕೆಲಸ ಮಾಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

    ಪಶ್ಚಿಮ ಬಂಗಾಳ ಪೊಲೀಸರು ಮತ್ತು ಕೇಂದ್ರ ಗುಪ್ತಚರ ಸಂಸ್ಥೆಗಳ ಜಂಟಿ ಕಾರ್ಯಾಚರಣೆಯಲ್ಲಿ ಪುರ್ಬಾ ಮೇದಿನಿಪುರದಿಂದ ಆರೋಪಿಗಳನ್ನು ಬಂಧಿಸಲಾಗಿದೆ. ಪಶ್ಚಿಮ ಬಂಗಾಳ ಸುರಕ್ಷಿತವಾಗಿಲ್ಲ ಎಂಬ ಬಿಜೆಪಿ ಆರೋಪಕ್ಕೆ ಸಿಎಂ ಮಮತಾ ಬ್ಯಾನರ್ಜಿ ತಿರುಗೇಟು ನೀಡಿದ್ದಾರೆ. ಇದನ್ನೂ ಓದಿ: ರಾಮೇಶ್ವರಂ ಕೆಫೆ ಬ್ಲಾಸ್ಟ್ ಪ್ರಕರಣ- ತಲೆಮರೆಸಿಕೊಂಡಿದ್ದ ಇಬ್ಬರ ಬಂಧನ

    ಕೂಚ್‌ಬೆಹಾರ್‌ನಲ್ಲಿ ಸಾರ್ವಜನಿಕ ರ‍್ಯಾಲಿಯನ್ನುದ್ದೇಶಿಸಿ ಮಾತನಾಡಿದ ಅವರು, ಆ ಜನರು ಬಂಗಾಳ ಸುರಕ್ಷಿತವಲ್ಲ ಎಂದು ಹೇಳುತ್ತಾರೆ. ರಾಜಸ್ಥಾನ, ಗುಜರಾತ್, ಮಧ್ಯಪ್ರದೇಶ ಮತ್ತು ದೆಹಲಿ ಸುರಕ್ಷಿತವಾಗಿದೆಯೇ? ಅವರು ಏನು ಕೆಲಸ ಮಾಡಿದ್ದಾರೆಂದು ಅವರನ್ನು ಕೇಳಿ ಎಂದು ಬಿಜೆಪಿ ವಿರುದ್ಧ ಮಮತಾ ಬ್ಯಾನರ್ಜಿ ಕಿಡಿಕಾರಿದ್ದಾರೆ.

  • ಭಾರತ ದೇಶವಲ್ಲ, ಜೈ ಶ್ರೀರಾಮ್ ಘೋಷಣೆಯನ್ನು ಒಪ್ಪಲ್ಲ; ಡಿಎಂಕೆ ಸಂಸದನ ವಿವಾದಾತ್ಮಕ ಹೇಳಿಕೆ

    ಭಾರತ ದೇಶವಲ್ಲ, ಜೈ ಶ್ರೀರಾಮ್ ಘೋಷಣೆಯನ್ನು ಒಪ್ಪಲ್ಲ; ಡಿಎಂಕೆ ಸಂಸದನ ವಿವಾದಾತ್ಮಕ ಹೇಳಿಕೆ

    – ನಾವು ಶ್ರೀರಾಮಚಂದ್ರನ ಶತ್ರುಗಳು ಎಂದ ಸಂಸದ ಎ.ರಾಜ

    ನವದೆಹಲಿ: ಭಾರತ (India) ದೇಶವಲ್ಲ. ನಾವು ಜೈ ಶ್ರೀರಾಮ್ (Jai Shree Ram) ಘೋಷಣೆಯನ್ನು ಒಪ್ಪಲ್ಲ ಎಂದು ಹಿಂದೂ ಧರ್ಮ ಮತ್ತು ಸನಾತನದ (Sanatan) ಬಗ್ಗೆ ಹೇಳಿಕೆ ನೀಡಿ ಡಿಎಂಕೆ (DMK) ಸಂಸದ ಎ.ರಾಜ (A.Raja) ಜನರ ಕೆಂಗಣ್ಣಿಗೆ ಗುರಿಯಾಗಿದ್ದಾರೆ.

    ಮಧುರೈನಲ್ಲಿ ಹಿಂದೂ ಧರ್ಮ ಮತ್ತು ಸನಾತನ ಧರ್ಮದ ಬಗ್ಗೆ ಮಾತನಾಡಿದ ಅವರು, ನಾವು ಶ್ರೀರಾಮನ ಶತ್ರುಗಳು. ನಾವು ರಾಮಾಯಣದಲ್ಲಿ ನಂಬಿಕೆಯನ್ನು ಇಟ್ಟುಕೊಳ್ಳದವರು. ಜೈ ಶ್ರೀರಾಮ್ ಎನ್ನುತ್ತಾರೆ, ‘ಛೀ’ ಎಂದು ಕಟುವಾಗಿ ಟೀಕಿಸಿದರು. ಅಲ್ಲದೇ ನಾವು ಭಾರತ್ ಮಾತಾ ಕೀ ಜೈ ಘೋಷಣೆಯನ್ನು ಒಪ್ಪಲ್ಲ. ನಮಗೆ ರಾಮಾಯಣದಲ್ಲಿ ನಂಬಿಕೆ ಇಲ್ಲ ಎಂದು ಹೇಳಿದರು. ಇದನ್ನೂ ಓದಿ: ಕರ್ನಾಟಕದಲ್ಲಿ ಎನ್‌ಡಿಎ ಮೈತ್ರಿಕೂಟಕ್ಕೆ 24, ಕಾಂಗ್ರೆಸ್‌ ಗೆಲ್ಲಲಿದೆ 4 ಸ್ಥಾನ

    ದೇಶವೆಂದರೆ ಒಂದೇ ಭಾಷೆ ಮತ್ತು ಸಂಸ್ಕೃತಿಯನ್ನು ಒಳಗೊಂಡಿರುತ್ತದೆ. ಭಾರತದಲ್ಲಿ ಹಲವಾರು ಸಂಪ್ರದಾಯ ಮತ್ತು ಸಂಸ್ಕೃತಿಗಳಿವೆ. ಹಾಗಾಗಿ ಭಾರತ ದೇಶವಲ್ಲ. ಭಾರತ ಒಂದು ಉಪಖಂಡ. ತಮಿಳುನಾಡೇ ಒಂದು ದೇಶ, ಕೇರಳವೇ ಒಂದು ದೇಶ. ಒರಿಯಾವೇ ಒಂದು ದೇಶ, ಒಂದು ನಾಡು. ಈ ಎಲ್ಲಾ ದೇಶಗಳು ಸೇರಿ ಭಾರತವಾಗಿದೆ. ಹೀಗಾಗಿ ಭಾರತ ಒಂದು ಉಪಖಂಡ ಎಂದರು. ಅವರ ಈ ವಿವಾದಾತ್ಮಕ ಹೇಳಿಕೆಗೆ ಬಿಜೆಪಿ ನಾಯಕರು ತೀವ್ರ ವಿರೋಧ ವ್ಯಕ್ತಪಡಿಸಿದ್ದಾರೆ. ಇದನ್ನೂ ಓದಿ: ಯುಪಿ ಪೊಲೀಸ್ ನೇಮಕಾತಿ ಪ್ರಶ್ನೆ ಪತ್ರಿಕೆ ಸೋರಿಕೆ – ನೇಮಕಾತಿ ಮಂಡಳಿಯ ಅಧ್ಯಕ್ಷೆ ರೇಣುಕಾ ಮಿಶ್ರಾ ವಜಾ

    ಈ ಕುರಿತು ಬಿಜೆಪಿ ಪಕ್ಷದ ಐಟಿ ಸೆಲ್ ಮುಖ್ಯಸ್ಥ ಅಮಿತ್ ಮಾಳವಿಯಾ (Amit Malviya), ಡಿಎಂಕೆ ನಾಯಕ ಭಾರತದ ವಿಭಜನೆಗೆ ಕರೆ ನೀಡಿದ್ದು, ಭಗವಾನ್ ರಾಮನನ್ನು ಅಪಹಾಸ್ಯ ಮಾಡಿದ್ದಾರೆ. ಅಲ್ಲದೇ ಮಣಿಪುರಿಗಳ ಬಗ್ಗೆ ಅವಹೇಳನಾಕಾರಿ ಕಾಮೆಂಟ್‌ಗಳನ್ನು ಮಾಡಿ ಭಾರತದ ಪರಿಕಲ್ಪನೆಯನ್ನು ಪ್ರಶ್ನಿಸಿದ್ದಾರೆ ಎಂದು ವಾಗ್ದಾಳಿ ನಡೆಸಿದ್ದಾರೆ. ಇದನ್ನೂ ಓದಿ: ಬೆಂಗ್ಳೂರು ಜೈಲಿನಲ್ಲಿದ್ದುಕೊಂಡೇ ಸಹ ಕೈದಿಗಳನ್ನು ಸೆಳೆದು ಉಗ್ರ ಚಟುವಟಿಕೆಗೆ ಬಳಕೆ – ದೇಶದ 17 ಕಡೆ ಎನ್‌ಐಎ ದಾಳಿ

    ಈ ಹಿಂದೆ ಉದಯನಿಧಿ ಸ್ಟಾಲಿನ್ ಸನಾತನ ಧರ್ಮವನ್ನು ಡೆಂಗ್ಯೂ ಮತ್ತು ಮಲೇರಿಯಾಗೆ ಹೋಲಿಸಿ ಲೇವಡಿ ಮಾಡಿದ್ದರು. ಅವರ ಈ ವಿವಾದಾತ್ಮಕ ಹೇಳಿಕೆ ಜನರ ಆಕ್ರೋಶಕ್ಕೆ ಕಾರಣವಾಗಿತ್ತು. ಇದನ್ನೂ ಓದಿ: 140 ಕೋಟಿ ಜನರೇ ನನ್ನ ಕುಟುಂಬ: ಲಾಲೂಗೆ ಮೋದಿ ತಿರುಗೇಟು

  • ರಾಹುಲ್‌ ಗಾಂಧಿ ಮೊದಲು ಪಕ್ಷದ ನಾಯಕರಿಗೆ ನ್ಯಾಯ ಕೊಡಿಸಲಿ- ʼಕೈʼ ಯಾತ್ರೆಗೆ ಅಮಿತ್‌ ಮಾಳವಿಯಾ ವ್ಯಂಗ್ಯ

    ರಾಹುಲ್‌ ಗಾಂಧಿ ಮೊದಲು ಪಕ್ಷದ ನಾಯಕರಿಗೆ ನ್ಯಾಯ ಕೊಡಿಸಲಿ- ʼಕೈʼ ಯಾತ್ರೆಗೆ ಅಮಿತ್‌ ಮಾಳವಿಯಾ ವ್ಯಂಗ್ಯ

    ಮುಂಬೈ: ಕಾಂಗ್ರೆಸ್ (Congress) ಪಕ್ಷದ ಹಿರಿಯ ನಾಯಕ ಮಿಲಿಂದ್ ದಿಯೋರಾ ಅವರು ಪಕ್ಷಕ್ಕೆ ರಾಜೀನಾಮೆ ನೀಡಿದ್ದು ಹಾಗೂ ಕಾಂಗ್ರೆಸ್‌ನ ಭಾರತ್‌ ಜೋಡೋ ನ್ಯಾಯ ಯಾತ್ರೆ (Bharat Jodo Nyay Yatre) ಕುರಿತು ಬಿಜೆಪಿಯ ಐಟಿ ಸೆಲ್ ಮುಖ್ಯಸ್ಥ ಅಮಿತ್ ಮಾಳವೀಯ (Amit Malviya) ವ್ಯಂಗ್ಯವಾಡಿದ್ದಾರೆ.

    ಮಿಲಿಂದ್ ದಿಯೋರಾ ಅವರ ರಾಜೀನಾಮೆ ಕುರಿತು ತಮ್ಮ ಎಕ್ಸ್‌ ಖಾತೆಯಲ್ಲಿ ಬರೆದುಕೊಂಡಿರುವ ಅವರು, ರಾಹುಲ್ ಗಾಂಧಿ (Rahul Gandhi) ಮೊದಲು ತಮ್ಮ ಪಕ್ಷದ ನಾಯಕರಿಗೆ ನ್ಯಾಯ ಕೊಡಿಸಬೇಕು. ನಂತರ ನ್ಯಾಯ ಯಾತ್ರೆ ಮಾಡಲಿ ಎಂದು ಹೇಳಿದ್ದಾರೆ.

    ಮಿಲಿಂದ್‌ ಹೇಳಿದ್ದೇನು..?: ಕಾಂಗ್ರೆಸ್‌ಗೆ ರಾಜೀನಾಮೆ ನೀಡಿರುವುದಾಗಿ ಹೇಳಿರುವ ಹಿರಿಯ ನಾಯಕ ಮಿಲಿಂದ್ ದಿಯೋರಾ, ಇಂದು ನನ್ನ ರಾಜಕೀಯ ಪಯಣದಲ್ಲಿ ಮಹತ್ವದ ಅಧ್ಯಾಯವೊಂದು ಮುಕ್ತಾಯವಾಗಿದೆ. ರಾಷ್ಟ್ರೀಯ ಕಾಂಗ್ರೆಸ್ ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ನಾನು ರಾಜೀನಾಮೆ ನೀಡಿದ್ದೇನೆ. ಪಕ್ಷದೊಂದಿಗೆ ನನ್ನ ಕುಟುಂಬದ 55 ವರ್ಷಗಳ ಸಂಬಂಧವನ್ನು ಕೊನೆಗೊಳಿಸಿದ್ದೇನೆ. ನಾನು ಎಲ್ಲಾ ನಾಯಕರು, ಸಹೋದ್ಯೋಗಿಗಳು ಹಾಗೂ ಕೃತಜ್ಞನಾಗಿದ್ದೇನೆ ಎಂದಿದ್ದಾರೆ. ಇದನ್ನೂ ಓದಿ: 55 ವರ್ಷಗಳ ಬಾಂಧವ್ಯ ಅಂತ್ಯಗೊಳಿಸಿದ್ದೇನೆ – ಕಾಂಗ್ರೆಸ್‌ಗೆ ಮಿಲಿಂದ್‌ ದಿಯೋರಾ ಗುಡ್‌ಬೈ

    ಇಂದಿನಿಂದ ಭಾರತ್ ನ್ಯಾಯ್ ಯಾತ್ರೆ ಎಂಬ ಹೆಸರಿನಲ್ಲಿ ಮಣಿಪುರದಿಂದ (Manipura) ಮಹಾರಾಷ್ಟ್ರದ (Maharastra) ಕಡೆಗೆ ರಾಗಾ ಯಾತ್ರೆ ಮಾಡಲಿದ್ದಾರೆ. ಮಣಿಪುರದಿಂದ ಮುಂಬೈಗೆ 67 ದಿನಗಳ ಅವಧಿಯಲ್ಲಿ ಪಾದಯಾತ್ರೆ ಮಾಡಲಿದ್ದಾರೆ. ಇಂದಿನಿಂದ ಮಾರ್ಚ್ 20 ರವರೆಗೆ ಇಂಫಾಲ್‍ನಿಂದ ಮುಂಬೈಗೆ ಯಾತ್ರೆ ಪ್ರಯಾಣಿಸಲಿದೆ. ಇದೇ ಹೊತ್ತಲ್ಲಿ ಮಿಲಿಂದ್ ದಿಯೋರಾ ಅವರು ಮಹಾರಾಷ್ಟ್ರ ಮುಖ್ಯಮಂತ್ರಿ ಏಕನಾಥ್ ಶಿಂಧೆ ನೇತೃತ್ವದ ಶಿವಸೇನೆಗೆ ಸೇರ್ಪಡೆಯಾಗುತ್ತಾರೆ ಎಂಬ ಗುಮಾನಿ ಇದೆ. ಈ ಮೂಲಕ ಮಹಾರಾಷ್ಟ್ರದಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಭಾರೀ ಹಿನ್ನಡೆಯಾಗಿದೆ.

  • ಬಿಜೆಪಿ ಐಟಿ ಸೆಲ್ ಮುಖ್ಯಸ್ಥ ಅಮಿತ್ ಮಾಳವೀಯ ವಿರುದ್ಧ ಎಫ್‍ಐಆರ್

    ಬಿಜೆಪಿ ಐಟಿ ಸೆಲ್ ಮುಖ್ಯಸ್ಥ ಅಮಿತ್ ಮಾಳವೀಯ ವಿರುದ್ಧ ಎಫ್‍ಐಆರ್

    ನವದೆಹಲಿ: ಭಾರತೀಯ ಜನತಾ ಪಾರ್ಟಿ (BJP) ಯ ಐಟಿ ಸೆಲ್ (IT Cell) ಮುಖ್ಯಸ್ಥ ಅಮಿತ್ ಮಾಳವೀಯ (Amit Malaviya) ವಿರುದ್ಧ ಎಫ್‍ಐಆರ್ ದಾಖಲಾಗಿದೆ.

    ಕಾಂಗ್ರೆಸ್ ಸಚಿವ ಪ್ರಿಯಾಂಕ್ ಖರ್ಗೆ (Priyank Kharge) ಹಾಗೂ ರಮೇಶ್ ಬಾಬು (Ramesh Babu) ಅವರು ಅಮಿತ್ ವಿರುದ್ಧ ದೂರು ನಿಡಿದ ಹಿನ್ನೆಲೆಯಲ್ಲಿ ಇದೀಗ ಎಫ್‍ಐಆರ್ ದಾಖಲಾಗಿದೆ. ಇದನ್ನೂ ಓದಿ: ಜನವರಿಯವರೆಗೆ ಬಿಜೆಪಿಯವರು ಗ್ಯಾರಂಟಿ ಬಗ್ಗೆ ಮಾತನಾಡಬಾರದು: ಕಿಮ್ಮನೆ ರತ್ನಾಕರ್

    ಏನಿದು ಪ್ರಕರಣ..?: ಕಾಂಗ್ರೆಸ್ ನಾಯಕರ ವಿರುದ್ಧ ಅವಹೇಳನಕಾರಿ ಪೋಸ್ಟ್ ಮಾಡಿರುವ ಹಿನ್ನೆಲೆಯಲ್ಲಿ ಪ್ರಿಯಾಂಕ್ ಖರ್ಗೆ ಹಾಗೂ ರಮೇಶ್ ಬಾಬು ಹೈ ಗ್ರೌಂಡ್ಸ್ ಪೊಲೀಸ್ ಸ್ಟೇಷನ್ ನಲ್ಲಿ ದೂರು ನೀಡಿದ್ದರು. ಇದೀಗ ದೂರು ಸ್ವೀಕರಿಸಿಕೊಂಡ ಪೊಲೀಸರು ಅಮಿತ್ ಮಾಳವೀಯಾ ವಿರುದ್ಧ ಎಫ್‍ಐಆರ್ ದಾಖಲಿಸಿಕೊಂಡಿದ್ದಾರೆ.

    ಪೋಸ್ಟ್ ನಲ್ಲಿ ಏನಿತ್ತು..?: ಅಮಿತ್ ಮಾಳವಿಯಾ ಪೋಸ್ಟ್ ಮಾಡಿರುವ ಆ್ಯನಿಮೇಟೆಡ್ ವೀಡಿಯೋದಲ್ಲಿ ಕಾಂಗ್ರೆಸ್ ಪಕ್ಷ ದೇಶದ್ರೋಹಿ ಚಟುವಟಿಕೆಗಳಲ್ಲಿ ಭಾಗಿಯಾಗುತ್ತಿದೆ ಎಂದು ಉಲ್ಲೇಖ ಮಾಡಲಾಗಿತ್ತು. ರಾಹುಲ್ ಗಾಂಧಿ (Rahul Gandhi) ವಿರುದ್ಧದ ವೀಡಿಯೋ ಪೋಸ್ಟ್ ಹಿನ್ನೆಲೆಯಲ್ಲಿ ಹೈಗ್ರೌಂಡ್ ಸ್ಟೇಷನ್ ನಲ್ಲಿ ಕಾಂಗ್ರೆಸ್ ದೂರು ಸಲ್ಲಿಕೆ ಮಾಡಿತ್ತು.

    ದೂರಿನಲ್ಲೇನಿದೆ..?: ಸಾಮಾಜಿಕ ಜಾಲತಾಣಗಳನ್ನು ಸುಳ್ಳು ಸುದ್ದಿ ಹರಡಲೆಂದೇ ಬಳಸುತ್ತಿದ್ದಾರೆ. ರಾಹುಲ್ ಗಾಂಧಿಯವರ ಕುರಿತು ಸುಳ್ಳು ಜನಾಭಿಪ್ರಾಯ ಸೃಷ್ಠಿಸಲು ನೆಲದ ಕಾನೂನಿನ ಬಗ್ಗೆ ಗೌರವವೇ ಇಲ್ಲದಂತೆ ಟ್ವಿಟ್ಟರ್ ನಲ್ಲಿ ಸುಳ್ಳು ವೀಡಿಯೋವನ್ನು ಬಿಜೆಪಿ ಐಟಿ ಸೆಲ್ ಮುಖ್ಯಸ್ಥ ಅಮಿತ್ ಮಾಳವೀಯಾ ಹರಿಬಿಟ್ಟಿದ್ದಾರೆ ಎಂದು ಜೂನ್ 17ರಂದು ಸಚಿವ ಪ್ರಿಯಾಂಕ್ ಖರ್ಗೆ ಹೈಗ್ರೌಂಡ್ಸ್ ಠಾಣೆಯಲ್ಲಿ ದಾಖಲಿಸಿದ್ದ ದೂರಿನಲ್ಲಿ ಉಲ್ಲೇಖಿಸಿದ್ದಾರೆ.

    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_title” view=”carousel” /]

  • ಜೆಪಿ ನಡ್ಡಾ, ಅಮಿತ್‌ ಮಾಳವೀಯ ವಿರುದ್ಧ ಪ್ರಿಯಾಂಕ್‌ ಖರ್ಗೆಯಿಂದ ಬೆಂಗಳೂರಿನಲ್ಲಿ ದೂರು

    ಜೆಪಿ ನಡ್ಡಾ, ಅಮಿತ್‌ ಮಾಳವೀಯ ವಿರುದ್ಧ ಪ್ರಿಯಾಂಕ್‌ ಖರ್ಗೆಯಿಂದ ಬೆಂಗಳೂರಿನಲ್ಲಿ ದೂರು

    ಬೆಂಗಳೂರು: ಬಿಜೆಪಿ (BJP) ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ (JP Nadda) ಮತ್ತು ಸೆಲ್ ಮುಖ್ಯಸ್ಥ ಅಮಿತ್ ಮಾಳವೀಯ (Amit Malviya) ವಿರುದ್ಧ ಬೆಂಗಳೂರಿನಲ್ಲಿ ದೂರು ದಾಖಲಾಗಿದೆ.

    ರಾಹುಲ್ ಗಾಂಧಿ (Rahul Gandhi) ಮತ್ತು ಕಾಂಗ್ರೆಸ್‌ (Congress) ನಾಯಕರ ವಿರುದ್ಧ ಅವಹೇಳನಕಾರಿ ವೀಡಿಯೋವನ್ನು ಸಾಮಾಜಿಕ ಜಾಲತಾಣದಲ್ಲಿ ಹರಿಬಿಟ್ಟ ಹಿನ್ನೆಲೆಯಲ್ಲಿ ಬೆಂಗಳೂರಿನ ಹೈಗ್ರೌಂಡ್ಸ್‌ ಪೊಲೀಸ್‌ ಠಾಣೆಯಲ್ಲಿ ಸಚಿವ ಪ್ರಿಯಾಂಕ್ ಖರ್ಗೆ (Priyank Kharge) ಹಾಗೂ ರಮೇಶ್ ಬಾಬು (Ramesh Babu) ಅವರು ದೂರು ನೀಡಿದ್ದಾರೆ.

    ಕಾಂಗ್ರೆಸ್‌ (Congress) ದೇಶದ್ರೋಹ ಚಟುವಟಿಕೆಯಲ್ಲಿ ಭಾಗಿಯಾಗುತ್ತಿದೆ ಎಂದು ಅನಿಮೇಷನ್‌ ವೀಡಿಯೋ ಮೂಲಕ ಪ್ರಕಟಿಸಿ ಅವಹೇಳನ ಮಾಡಲಾಗಿದೆ ಎಂದು ದೂರಿನಲ್ಲಿ ಆರೋಪಿಸಲಾಗಿದೆ.

    ದೂರು ನೀಡಿದ ಬಳಿಕ ಪ್ರತಿಕ್ರಿಯಿಸಿದ ಪ್ರಿಯಾಂಕ್‌ ಖರ್ಗೆ, ಬಿಜೆಪಿಯ ಸುಳ್ಳು ಫ್ಯಾಕ್ಟರಿಯನ್ನು ನಾವು ಬಂದ್ ಮಾಡುತ್ತೇವೆ. ಹೋದ ಸಲ ಅವರ ಸರ್ಕಾರದಲ್ಲಿ ಅವರ ಆಟ ನಡೆದಿತ್ತು. ಯಾರು ಶಾಂತಿ ಕದಡುವ ಪ್ರಯತ್ನ ಮಾಡುತ್ತಾರೆ ಅವರ ವಿರುದ್ದ ಕಾನೂನು ಚೌಕಟ್ಟಿನ ಅಡಿ ಕ್ರಮ ಕೈಗೊಳ್ಳುತ್ತೇವೆ ಎಂದು ಹೇಳಿದರು. ಇದನ್ನೂ ಓದಿ: ಚಿತ್ರದುರ್ಗದಿಂದ ಹಾರಿದ ಸ್ವದೇಶಿ ತಪಸ್ ಯುಎವಿ ಕಾರವಾರದ ಅರಬ್ಬಿ ಸಮುದ್ರದಲ್ಲಿ ಯಶಸ್ವಿ ಲ್ಯಾಂಡಿಂಗ್

    ಫ್ಯಾಕ್ಟ್ ಚೆಕ್ ಯುನಿಟ್ ಮೊದಲೇ ಇತ್ತು. ಆದರೆ ಬಿಜೆಪಿ ಪೊಲೀಸ್ ಇಲಾಖೆಯ ಫ್ಯಾಕ್ಟ್ ಚೆಕ್ ಯುನಿಟ್ ಬಂದ್ ಮಾಡಿತ್ತು. ಸ್ವತಃ ಬಿಜೆಪಿಯವರೇ ಫೇಕ್ ನ್ಯೂಸ್ ಗಳನ್ನು ಸೃಷ್ಟಿ ಮಾಡುತ್ತಿದ್ದರು. ಆದರೆ ನಾವು ಇನ್ನು ಮುಂದೆ ಬಿಡುವುದಿಲ್ಲ. ಫ್ಯಾಕ್ಟ್ ಚೆಕ್ ಯುನಿಟ್ ಮತ್ತಷ್ಟು ಪ್ರಬಲಗೊಳಿಸುತ್ತೇವೆ. ಈಗಾಗಲೇ ಸಿಎಂ ಜೊತೆ ನಾವು ಮಾತನಾಡಿದ್ದೇನೆ. ಕೋಮುಗಲಭೆ, ಶಾಂತಿ ಕದಡುವ ಪೋಸ್ಟ್ ಗಳನ್ನು ಮಾಡಿದರೆ ಅಂಥವರ ವಿರುದ್ದ ಸೂಕ್ತ ಕ್ರಮ ಜರುಗಿಸುತ್ತೇವೆ. ಗೃಹ ಇಲಾಖೆ ಜೊತೆಗೆ ಮಾತನಾಡಿ ಪ್ರತ್ಯೇಕ ತಂಡ ರಚನೆ ಮಾಡುತ್ತೇವೆ ಎಂದು ತಿಳಿಸಿದರು.

  • ಮುಸ್ಲಿಂ ಲೀಗ್ ಜಾತ್ಯಾತೀತ ಪಕ್ಷ ಎಂದ ರಾಹುಲ್ – ಬಿಜೆಪಿ ಕೆಂಡಾಮಂಡಲ

    ಮುಸ್ಲಿಂ ಲೀಗ್ ಜಾತ್ಯಾತೀತ ಪಕ್ಷ ಎಂದ ರಾಹುಲ್ – ಬಿಜೆಪಿ ಕೆಂಡಾಮಂಡಲ

    ನವದೆಹಲಿ: ಕೇರಳದಲ್ಲಿ ಅಸ್ತಿತ್ವದಲ್ಲಿರುವ ಇಂಡಿಯನ್ ಯೂನಿಯನ್ ಮುಸ್ಲಿಂ ಲೀಗ್ (IUML) ಪಕ್ಷವನ್ನು ಜಾತ್ಯಾತೀತ ಪಕ್ಷ (Secular Party) ಎಂದು ಕಾಂಗ್ರೆಸ್ (Congress) ನಾಯಕ ರಾಹುಲ್ ಗಾಂಧಿ (Rahul Gamdhi) ಬಣ್ಣಿಸಿರುವುದು ಬಿಜೆಪಿ (BJP) ಆಕ್ರೋಶಕ್ಕೆ ಕಾರಣವಾಗಿದೆ.

    ವಾಷಿಂಗ್ಟನ್ ಡಿಸಿಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಪತ್ರಕರ್ತರೊಬ್ಬರು ಕೇಳಿದ ಪ್ರಶ್ನೆಗೆ ಉತ್ತರಿಸಿದ ರಾಹುಲ್ ಗಾಂಧಿ, ಮುಸ್ಲಿಂ ಲೀಗ್ ಸಂಪೂರ್ಣವಾಗಿ ಲೌಕಿಕವಾದದ ಪಕ್ಷವಾಗಿದೆ. ಮುಸ್ಲಿಂ ಲೀಗ್‌ನಲ್ಲಿ ನಾನ್ ಸೆಕ್ಯುಲರ್ ಅಂಶಗಳು ಇಲ್ಲ ಎಂದು ತಿಳಿಸಿದ್ದಾರೆ. ಈ ಬೆನ್ನಲ್ಲೇ ರಾಹುಲ್ ಗಾಂಧಿ ವಿರುದ್ಧ ಬಿಜೆಪಿ ಮುಗಿಬಿದ್ದಿದೆ.

    ನಮ್ಮ ದೇಶ ಧಾರ್ಮಿಕವಾಗಿ ಬೇರ್ಪಡಲು ಕಾರಣಕರ್ತರಾದ ಮಹ್ಮದ್ ಆಲಿ ಜಿನ್ನಾಗೆ ಸಂಬಂಧಿಸಿದ ಮುಸ್ಲಿಂ ಲೀಗ್ ಅನ್ನು ರಾಹುಲ್ ಗಾಂಧಿ ಜಾತ್ಯಾತೀತ ಎನ್ನುತ್ತಿದ್ದಾರೆ. ಅವರ ಮಾತುಗಳಲ್ಲಿ ಕಪಟತ್ವವೇ ತುಂಬಿದೆ. ವಯನಾಡ್ ಸಂಸದ ಸ್ಥಾನವನ್ನು ಮರುಸ್ಥಾಪಿಸಿಕೊಳ್ಳಲು ಹೀಗೆಲ್ಲಾ ಓಲೈಕೆ ರಾಜಕೀಯ ಮಾಡುತ್ತಿದ್ದಾರೆ ಎಂದು ಬಿಜೆಪಿ ಐಟಿ ಸೆಲ್ ಮುಖ್ಯಸ್ಥ ಅಮಿತ್ ಮಾಳವೀಯ ಟ್ವೀಟ್ ಮಾಡಿದ್ದಾರೆ. ಇದನ್ನೂ ಓದಿ: ಹಳಿ ತಪ್ಪಿದ ರೈಲಿಗೆ ಯಶವಂತಪುರದಿದ ಸಾಗುತ್ತಿದ್ದ ರೈಲು ಡಿಕ್ಕಿ – 50 ಸಾವು

    ಇದಕ್ಕೆ ಕಾಂಗ್ರೆಸ್ ವಕ್ತಾರ ಪವನ್ ಖೇರಾ ತಿರುಗೇಟು ನೀಡಿದ್ದಾರೆ. ಏನ್ ಬ್ರದರ್ ಓದಿಕೊಂಡಿಲ್ವಾ? ಕೇರಳದ ಮುಸ್ಲಿಂ ಲೀಗ್‌ಗೂ, ಜಿನ್ನಾ ಸ್ಥಾಪಿಸಿದ್ದ ಮುಸ್ಲಿಂ ಲೀಗ್‌ಗೂ ಏನು ಸಂಬಂಧ ಎಂದು ಪ್ರಶ್ನಿಸಿದ್ದಾರೆ. 2012ರಲ್ಲಿ ನಾಗ್ಪುರ ಪಾಲಿಕೆಯಲ್ಲಿ ಅಧಿಕಾರಕ್ಕಾಗಿ ಬಿಜೆಪಿ ಇದೇ ಐಯುಎಂಎಲ್ ಜೊತೆ ಕೈಜೋಡಿಸಿರಲಿಲ್ವಾ ಎಂದು ಬಿಜೆಪಿಗೆ ತಿರುಗೇಟು ನೀಡಿದ್ದಾರೆ. ಅಮಿತ್ ಮಾಳವೀಯ ಸುಳ್ಳು ಸುದ್ದಿ ಹಬ್ಬಿಸುವ ವ್ಯಕ್ತಿ ಎಂದು ಕಾಂಗ್ರೆಸ್ ಆರೋಪಿಸಿದೆ. ಇದನ್ನೂ ಓದಿ: 200 ಯೂನಿಟ್ ಫ್ರೀ ನಿರೀಕ್ಷೆಯಲ್ಲಿದ್ದವರಿಗೆ ಶಾಕ್ – ವಾರ್ಷಿಕ ಸರಾಸರಿ ಅಸ್ತ್ರ ಬಳಸಿ ಬಿಲ್ ವಸೂಲಿ

  • ಜೋಡೋ ಯಾತ್ರೆ ವೇಳೆ ಮಾಜಿ ಸಚಿವರಿಂದ ಶೂ ಕಟ್ಟಿಸಿಕೊಂಡ ರಾಗಾ – ಬಿಜೆಪಿ ಆರೋಪ

    ಜೋಡೋ ಯಾತ್ರೆ ವೇಳೆ ಮಾಜಿ ಸಚಿವರಿಂದ ಶೂ ಕಟ್ಟಿಸಿಕೊಂಡ ರಾಗಾ – ಬಿಜೆಪಿ ಆರೋಪ

    ನವದೆಹಲಿ: ಭಾರತ್ ಜೋಡೋ ಯಾತ್ರೆ (Bharat Jodo Yatra) ವೇಳೆ ಕಾಂಗ್ರೆಸ್ (Congress) ನಾಯಕ ರಾಹುಲ್ ಗಾಂಧಿ (Rahul Gandhi) ಅವರು ಕೇಂದ್ರ ಮಾಜಿ ಸಚಿವರೊಬ್ಬರ ಕೈಯಿಂದ ಶೂ ಕಟ್ಟಿಸಿಕೊಂಡಿದ್ದಾರೆ ಎಂದು ಬಿಜೆಪಿ (BJP) ಆರೋಪಿಸಿದೆ.

    ಜೋಡೋ ಯಾತ್ರೆ ವೇಳೆ ಮಾಜಿ ಸಚಿವ ಜೀತೇಂದ್ರ ಸಿಂಗ್ ಅಹಿರ್ವಾರ್ (Jitendra Singh Ahirwar) ಅವರು ರಾಹುಲ್ ಗಾಂಧಿ ಅವರ ಕಾಲಿನ ಬಳಿ ಮಂಡಿಯೂರಿ ಶೂ ಕಟ್ಟಿಸಿಕೊಳ್ಳುವಂತೆ ಭಾಸವಾಗುತ್ತಿರುವ ವೀಡಿಯೋವೊಂದು ಸಾಮಾಜಿಕ ಮಾಧ್ಯಮಗಳಲ್ಲಿ ಹರಿದಾಡಿದೆ. ಮಾಜಿ ಸಚಿವರ ಕೈಯಿಂದ ಶೂ ಕಟ್ಟಿಸಿಕೊಂಡಿರುವ ರಾಹುಲ್ ಗಾಂಧಿ ಅವರು ಈ ಕೂಡಲೇ ಅಹಿರ್ವಾರ್ ಅವರಿಗೆ ಕ್ಷಮೆ ಕೋರಬೇಕು. ಇಲ್ಲದೇ ಹೋದಲ್ಲಿ ಕಾನೂನು ಕ್ರಮ ತೆಗೆದುಕೊಳ್ಳಲಾಗುವುದು ಎಂದು ಬಿಜೆಪಿಯ ಐಟಿ ಸೆಲ್ ಮುಖ್ಯಸ್ಥ ಅಮಿತ್ ಮಾಳವಿಯಾ (Amit Malviya) ಒತ್ತಾಯಿಸಿದ್ದಾರೆ.

    ಮಾಜಿ ಸಚಿವರು ರಾಗಾ ಅವರ ಶೂ ಕಟ್ಟುತ್ತಿರುವಂತೆ ಕಾಣಿಸಿಕೊಂಡಿರುವ ವೀಡಿಯೋವನ್ನು ಮಾಳವಿಯಾ ಟ್ವಿಟ್ಟರ್‌ನಲ್ಲಿ ಹಂಚಿಕೊಂಡಿದ್ದು, ಮಾಜಿ ಕೇಂದ್ರ ಸಚಿವ ಭನ್ವರ್ ಜಿತೇಂದ್ರ ಸಿಂಗ್ ಅವರು ರಾಹುಲ್ ಗಾಂಧಿ ಅವರ ಶೂ ಲೇಸ್ ಕಟ್ಟಲು ಮಂಡಿಯೂರಿದ್ದಾರೆ. ಆದರೆ ದುರಹಂಕಾರಿ, ದಂಗೆಕೋರ ತನ್ನ ಕೆಲಸ ತಾನು ಮಾಡದೇ ಮಂಡಿಯೂರಿದ ಮಾಜಿ ಸಚಿವರ ಬೆನ್ನು ತಟ್ಟಿದ್ದಾರೆ ಎಂದು ಕಿಡಿ ಕಾರಿದ್ದಾರೆ. ಇದನ್ನೂ ಓದಿ: ಸೌದಿ ಪರೀಕ್ಷಾ ಕೇಂದ್ರಗಳಲ್ಲಿ ಬುರ್ಖಾ ಬ್ಯಾನ್

    ಈ ಬಗ್ಗೆ ಬಳಿಕ ಪ್ರತಿಕ್ರಿಯೆ ನೀಡಿರುವ ಅಹಿರ್ವಾರ್ ಅವರು, ತಾವು ತಮ್ಮ ಸ್ವಂತ ಶೂ ಲೇಸ್ ಅನ್ನು ಕಟ್ಟುತ್ತಿದ್ದುದಾಗಿ ಸ್ಪಷ್ಟಪಡಿಸಿದ್ದಾರೆ. ಮಾಳವಿಯಾ ವಿರುದ್ಧ ಕಿಡಿ ಕಾರಿದ ಅವರು, ನಿಮ್ಮ ಟ್ವೀಟ್ ಸಂಪೂರ್ಣ ಸುಳ್ಳಾಗಿದೆ ಹಾಗೂ ಮಾನಹಾನಿಕರವಾಗಿದೆ. ವಾಸ್ತವವಾಗಿ ನನ್ನ ಕೋರಿಕೆಯ ಮೇರೆಗೆ ರಾಹುಲ್ ಗಾಂಧಿಯವರು ಯಾತ್ರೆಯಲ್ಲಿ ನಡೆಯುತ್ತಿದ್ದುದನ್ನು ನಿಲ್ಲಿಸಿ, ನನ್ನ ಶೂ ಲೇಸ್‌ಗಳನ್ನು ಕಟ್ಟಲು ಅನುಮತಿ ನೀಡಿದ್ದರು ಎಂದು ಹೇಳಿದ್ದಾರೆ.

    ಸುಳ್ಳು ಮಾಹಿತಿಯನ್ನು ಹರಡಿರುವ ನಿಮ್ಮ ಟ್ವೀಟ್ ಅನ್ನು ಅಳಿಸಿ ಹಾಗೂ ಕ್ಷಮೆಯಾಚಿಸಿ. ಇಲ್ಲದೇ ಹೋದಲ್ಲಿ ನೀವು ಕಾನೂನು ಕ್ರಮಗಳನ್ನು ಎದುರಿಸಬೇಕಾಗುತ್ತದೆ ಎಂದು ಅಹಿರ್ವಾರ್ ಅವರು ಮಾಳವಿಯಾಗೆ ಎಚ್ಚರಿಕೆ ನೀಡಿದ್ದಾರೆ. ಇದನ್ನೂ ಓದಿ: ಪಂಚಮಸಾಲಿ ಮೀಸಲಾತಿ – ಇನ್ನೂ ಸ್ಪಷ್ಟ ನಿಲುವು ಪ್ರಕಟಿಸದ ಕಾಂಗ್ರೆಸ್

    ಭಾರತ್ ಜೋಡೋ ಯಾತ್ರೆ ಇದೀಗ ರಾಜಸ್ಥಾನವನ್ನು ದಾಟಿ ಹರಿಯಾಣವನ್ನು ಪ್ರವೇಶಿಸಿದೆ. ರಾಜಸ್ಥಾನ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್, ಅವರ ಮಾಜಿ ಉಪಮುಖ್ಯಮಂತ್ರಿ ಸಚಿನ್ ಪೈಲಟ್ ಮತ್ತು ರಾಜ್ಯ ಪಕ್ಷದ ಮುಖ್ಯಸ್ಥ ಗೋವಿಂದ್ ಸಿಂಗ್ ದೋಟಸಾರಾ ಅವರು ಗಾಂಧಿಯವರೊಂದಿಗೆ ಬಿಜೆಪಿ ಆಡಳಿತವಿರುವ ಹರಿಯಾಣಕ್ಕೆ ತೆರಳಿದ್ದಾರೆ. ಹರಿಯಾಣದ ವಿರೋಧ ಪಕ್ಷದ ನಾಯಕ ಭೂಪಿಂದರ್ ಸಿಂಗ್ ಹೂಡಾ, ರಣದೀಪ್ ಸಿಂಗ್ ಸುರ್ಜೆವಾಲಾ, ಕುಮಾರಿ ಸೆಲ್ಜಾ ಮತ್ತು ದೀಪೇಂದರ್ ಸಿಂಗ್ ಹೂಡಾ ಅವರನ್ನು ಸ್ವಾಗತಿಸಿದ್ದಾರೆ.

    Live Tv
    [brid partner=56869869 player=32851 video=960834 autoplay=true]