Tag: amith sha

  • ನಾನು ಕೂಡ ʻಕಾಂತಾರʼ ಸಿನಿಮಾ ನೋಡಿದೆ: ಅಮಿತ್‌ ಶಾ

    ನಾನು ಕೂಡ ʻಕಾಂತಾರʼ ಸಿನಿಮಾ ನೋಡಿದೆ: ಅಮಿತ್‌ ಶಾ

    ರಿಷಬ್ ಶೆಟ್ಟಿ (Rishab Shetty) ನಟಿಸಿ, ನಿರ್ದೇಶಿಸಿದ `ಕಾಂತಾರ’ (Kantara Film) ಸಿನಿಮಾ ಹವಾ ಇನ್ನೂ ಮುಗಿದಿಲ್ಲ. ವಿಶ್ವಾದ್ಯಂತ ಈ ಸಿನಿಮಾ ಭರ್ಜರಿ ಕಲೆಕ್ಷನ್ ಮಾಡುವ ಮೂಲಕ ದಾಖಲೆ ಬರೆದಿದೆ. ಇದೀಗ ಈ ಚಿತ್ರದ ಬಗ್ಗೆ ಕೇಂದ್ರ ಸಚಿವ ಅಮಿತ್ ಶಾ (Amit Shah) ಅವರು ಮಾತನಾಡಿದ್ದಾರೆ. ಪುತ್ತೂರಿನ ಕ್ಯಾಂಪ್ಕೋ ಸುವರ್ಣ ಸಮಾವೇಶದಲ್ಲಿ ಪಾಲ್ಗೊಂಡ ವೇಳೆ ಅಮಿತ್ ಶಾ ಅವರು ಕಾಂತಾರ ಸಿನಿಮಾ ಬಗ್ಗೆ ಹಾಡಿ ಹೊಗಳಿದ್ದಾರೆ. ಈ ಸಿನಿಮಾ ನೋಡಿದ ಮೇಲೆ ದಕ್ಷಿಣ ಕನ್ನಡದಲ್ಲಿನ ಸಂಸ್ಕೃತಿ ಬಗ್ಗೆ ತಿಳಿಯಿತು ಎಂದು ಮಾತನಾಡಿದ್ದಾರೆ.

    ಕನ್ನಡದ `ಕಾಂತಾರ’ (Kantara) ಸಿನಿಮಾ ಯಶಸ್ಸಿನ ಅಲೆಯಲ್ಲಿ ತೇಲುತ್ತಿದೆ. 400 ಕೋಟಿ ಕಲೆಕ್ಷನ್ ಮಾಡಿ ಹಿಸ್ಟರಿ ಕ್ರಿಯೇಟ್ ಮಾಡಿದೆ. ಪರಭಾಷಿಕರು `ಕಾಂತಾರ’ ಚಿತ್ರ ನೋಡಿ ಭೇಷ್ ಎಂದಿದ್ದು ಆಗಿದೆ. ಹೀಗಿರುವಾಗ ಕ್ಯಾಂಪ್ಕೋ ಸುವರ್ಣ ಸಂಭ್ರಮ ಸಮಾವೇಶದಲ್ಲಿ ಪಾಲ್ಗೊಂಡ ಅಮಿತ್ ಶಾ ಚಿತ್ರದ ಬಗ್ಗೆ ಪ್ರತಿಕ್ರಿಯೆ ನೀಡಿದ್ದಾರೆ.

    ಪುತ್ತೂರು ಇದು ಪವಿತ್ರ ಭೂಮಿಯಾಗಿದೆ. ಪರಶುರಾಮ ಸೃಷ್ಟಿಯ ನಾಡು ಎಂದೇ ವಿಶ್ವದಲ್ಲಿ ಪ್ರಸಿದ್ಧಿಯಾಗಿದೆ. ಧಾರ್ಮಿಕ ಪರಂಪರೆ, ಸಾಂಸ್ಕೃತಿಕ ಪರಂಪರೆ ಈ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಹಾಸುಹೊಕ್ಕಿದೆ. ಈಗಷ್ಟೇ ನಾನು `ಕಾಂತಾರ’ ನೋಡಿದೆ. ದಕ್ಷಿಣ ಕನ್ನಡದಲ್ಲಿನ ಸಂಸ್ಕೃತಿ ಯಾವ ರೀತಿ ಮೇಳೈಸಿದೆ ಅನ್ನೋದು ತಿಳಿಯಿತು ಎಂದು ಅಮಿತ್ ಶಾ ಹಾಡಿ ಹೊಗಳಿದ್ದಾರೆ. ಇದನ್ನೂ ಓದಿ:`ಕಾಂತಾರ’ ಚಿತ್ರ ಪ್ಯಾನ್ ಇಂಡಿಯಾ ಸಿನಿಮಾವಾಗಿ ಗೆಲ್ಲಲು ಅಸಲಿ ಕಾರಣ ಬಿಚ್ಚಿಟ್ಟ ರಿಷಬ್ ಶೆಟ್ಟಿ

    Amithಇನ್ನೂ `ಕಾಂತಾರ’ ಸಕ್ಸಸ್ ನಂತರ ಚಿತ್ರದ ಪ್ರೀಕ್ವೆಲ್‌ಗೆ ರಿಷಬ್ ಶೆಟ್ಟಿ ಅವರು ಸಕಲ ಸಿದ್ಧತೆ ಮಾಡ್ತಿದ್ದಾರೆ. ಸಿನಿಮಾ ಕಥೆ ರೆಡಿ ಮಾಡ್ತಿದ್ದಾರೆ. ಸದ್ಯದಲ್ಲೇ ಸಿನಿಮಾ ಶೂಟಿಂಗ್ ಬಗ್ಗೆ ಅಪ್‌ಡೇಟ್ ಕೊಡಲಿದ್ದಾರೆ.

    Live Tv
    [brid partner=56869869 player=32851 video=960834 autoplay=true]

    Join our Whatsapp group by clicking the below link
    https://chat.whatsapp.com/E6YVEDajTzH06LOh77r25k

  • ಅಮಿತ್ ಶಾಗೆ ರಾಜಾಹುಲಿ ನೀಡಿದ ಫಸ್ಟ್ ರಿಪೋರ್ಟ್ ರಿವೀಲ್ – ಸಿದ್ದರಾಮೋತ್ಸವ ಎಫೆಕ್ಟ್!

    ಅಮಿತ್ ಶಾಗೆ ರಾಜಾಹುಲಿ ನೀಡಿದ ಫಸ್ಟ್ ರಿಪೋರ್ಟ್ ರಿವೀಲ್ – ಸಿದ್ದರಾಮೋತ್ಸವ ಎಫೆಕ್ಟ್!

    ಬೆಂಗಳೂರು: ಸಿದ್ದರಾಮೋತ್ಸವದಿಂದ ಕಾಂಗ್ರೆಸ್‍ಗೆ ಈಗ ಅಮೃತ ಘಳಿಗೆ ಶುರುವಾದಂತೆ ಕಾಣುತ್ತಿದೆ. ಬಿಜೆಪಿ ಒಳಗೊಳಗೆ ದಿಗಿಲು ಶುರುವಾಗಿದ್ದು, ಅಮಿತ್ ಶಾಗೆ ಫಸ್ಟ್ ರಿಪೋರ್ಟ್ ತಲುಪಿದೆ. ಇದೇ ವೇಳೆ ಬಿಜೆಪಿ ಕಾರ್ಯಕರ್ತರ ಆಕ್ರೋಶದ ಬಗ್ಗೆ ವರದಿ ಪಡೆದ ಅಮಿತ್ ಶಾ ಸಿಎಂ ಎದುರೇ ವಾರ್ನ್ ಮಾಡಿರುವುದು ವಿಶೇಷ.

    ಅಂದಹಾಗೆ ನಿನ್ನೆ ದಾವಣಗೆರೆಯಲ್ಲಿ ಎತ್ತ ನೋಡಿದ್ರೂ ಜನ. ಕಣ್ಣು ಹಾಯಿಸಿದ್ದಷ್ಟು ಕಂಡ ತಲೆಗಳು. ಸಿದ್ದರಾಮೋತ್ಸವಕ್ಕೆ ನಿರೀಕ್ಷೆಗೂ ಮೀರಿದ ಜನಸಾಗರ ಸಿದ್ದರಾಮಯ್ಯಗಷ್ಟೇ ಅಚ್ಚರಿ ಅಲ್ಲ. ರಾಜ್ಯ ಬಿಜೆಪಿ ನಾಯಕರಿಗೂ ಶಾಕ್ ಕೊಟ್ಟಿದೆ. ಕಾಂಗ್ರೆಸ್‍ನವರಿಗೆ ಸಿದ್ರಾಮಣ್ಣ ಮಾಸ್ ಆದ್ರೆ ಬಿಜೆಪಿಯಲ್ಲಿ ನಮಗ್ಯಾರು ಬಾಸ್? ಎಂಬ ಪ್ರಶ್ನೆಗಳು ಶುರುವಾಗಿವೆ. ಈ ಬೆನ್ನಲ್ಲೇ ಮಾಜಿ ಸಿಎಂ ಯಡಿಯೂರಪ್ಪ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ದಿಢೀರ್ ಭೇಟಿ ಮಾಡಿದ್ರು. ಬೆಂಗಳೂರು ಪ್ರವಾಸದಲ್ಲಿದ್ದ ಅಮಿತ್ ಶಾ ಖಾಸಗಿ ಹೋಟೆಲ್‌ನಲ್ಲಿ ವಾಸ್ತವ್ಯ ಹೂಡಿದ್ರು. ಸೀದಾ ಕಾವೇರಿ ನಿವಾಸದಿಂದ ಹೊರಟ ಯಡಿಯೂರಪ್ಪ ಇಂದು ಬೆಳಗ್ಗೆ 8.30ಕ್ಕೆ ಅಮಿತ್ ಶಾ ಭೇಟಿ ಮಾಡಿ 15 ನಿಮಿಷಗಳ ಕಾಲ ಮಾತುಕತೆ ನಡೆಸಿದ್ದಾರೆ. ಈ ವೇಳೆ ಸಿದ್ದರಾಮೋತ್ಸವಕ್ಕೆ ನಿರೀಕ್ಷೆಗೂ ಮೀರಿ ಜನ ಸೇರಿದ್ದರ ಬಗ್ಗೆ ಅಮಿತ್ ಶಾಗೆ ಪ್ರಾಥಮಿಕ ವರದಿ ನೀಡಿದ್ರು ಎನ್ನಲಾಗಿದೆ. ಇದೇ ವೇಳೆ ಸಂಘಟನಾತ್ಮಕವಾಗಿ ಹಲವು ವಿಚಾರ ಚರ್ಚೆ ನಡೆಸಿದ್ರಂತೆ. ಬಳಿಕ ಎಲ್ಲವನ್ನೂ ಕೇಳಿಸಿಕೊಂಡು ಹೆಚ್ಚು ಮಾತನಾಡದ ಅಮಿತ್ ಶಾ, ಪಕ್ಷದ ವೇದಿಕೆಯಲ್ಲಿ ಚರ್ಚಿಸೋಣ. ದೆಹಲಿ ಮಟ್ಟದಲ್ಲೂ ಚರ್ಚೆ ಆಗಲಿದೆ ಎಂದಷ್ಟೇ ಹೇಳಿದ್ರು ಎಂಬುದು ಬಿಜೆಪಿ ಉನ್ನತ ಮೂಲಗಳಿಂದ ಮಾಹಿತಿ ಹೊರಬಿದ್ದಿದೆ. ಇದನ್ನೂ ಓದಿ: ಎಷ್ಟೇ ಸಿದ್ದರಾಮೋತ್ಸವ ಮಾಡಿದ್ರೂ 2023ರಲ್ಲಿ ಅಧಿಕಾರಕ್ಕೆ ಬರೋದೇ ಬಿಜೆಪಿ – ಆರಗ ಜ್ಞಾನೇಂದ್ರ ಭವಿಷ್ಯ

    ರಾಜಾಹುಲಿ ರಿಪೋರ್ಟ್:
    ಸಿದ್ದರಾಮೋತ್ಸವ ಮಾಸ್ ಸಮಾವೇಶ ಚುನಾವಣಾ ಪ್ರಚಾರದ ದಿಕ್ಕನ್ನು ತೋರಿಸಿದೆ. ಹೀಗೆ ಸಿದ್ದು, ಡಿಕೆಶಿ ಹೊಂದಾಣಿಕೆ ಕ್ಯಾಂಪೇನ್ ಆದ್ರೆ ಬಿಜೆಪಿ ಎದುರಿಸಲು ಕಷ್ಟ ಆಗುತ್ತೆ. ಕಾಂಗ್ರೆಸ್ ಕೂಡ ಆ ಜನರನ್ನ ನಿರೀಕ್ಷೆ ಮಾಡಿರಲಿಲ್ಲ. ನಮಗೆ ಪರಿಣಾಮಕಾರಿ ರಾಜಕೀಯ ತಂತ್ರಗಾರಿಕೆ ಅಗತ್ಯ ಇದೆ. ಪಕ್ಷ ಸಂಘಟನೆಯಲ್ಲಿ ಕೆಲ ಬದಲಾವಣೆ ತನ್ನಿ. ಸರ್ಕಾರ, ಪಕ್ಷ ವೇಗವಾಗಿ ಹೋಗಬೇಕು, ಇಲ್ಲ ಅಂದ್ರೆ 2023 ನಮಗೆ ಕಷ್ಟ. ಸಿದ್ದರಾಮೋತ್ಸವದಲ್ಲಿನ ಜನ ವೋಟ್ ಆಗಿ ಕನ್ವರ್ಟ್ ಆದ್ರೆ ಬಿಜೆಪಿಗೆ ದೊಡ್ಡ ಲಾಸ್. ನಿನ್ನೆಯ ಜನರನ್ನು ನಾನು ನಿರೀಕ್ಷೆ ಮಾಡಿರಲಿಲ್ಲ, ಸಿದ್ದರಾಮಯ್ಯ ಕೂಡ ನಿರೀಕ್ಷೆ ಮಾಡಿರಲಿಲ್ಲ ಅನ್ಸುತ್ತೆ. ಹಾಗಾಗಿ ಇದು ನಮಗೆ ಆಲರಾಂ ಆಗ್ಬೇಕು. ಸ್ವಾತಂತ್ರ್ಯ ಅಮೃತ ಮಹೋತ್ಸವದ ಬಳಿಕ ಈ ಕಡೆ ಗಮನ ಹರಿಸಿ ಎಂದು ಹೇಳಿದ್ದಾರೆ ಎಂದು ವರದಿಯಾಗಿದೆ. ಇದನ್ನೂ ಓದಿ: ಹರಿದ ಧ್ವಜಗಳನ್ನು ಹಾರಿಸಬೇಕಾ? ಬಿಜೆಪಿಯವರಿಗೆ ಮಾನ, ಮರ್ಯಾದೆ ಇಲ್ವಾ?: ಮುತಾಲಿಕ್

    ಯಡಿಯೂರಪ್ಪ ಭೇಟಿ ಬಳಿಕ ಸಿಎಂ ಬಸವರಾಜ ಬೊಮ್ಮಾಯಿ, ಅಮಿತ್ ಶಾ ಅವರನ್ನು ಭೇಟಿ ಮಾಡಿದ್ರು. ಕರಾವಳಿಯ ಸರಣಿ ಕೊಲೆ ಪ್ರಕರಣಗಳು, ಪ್ರವೀಣ್ ಕೊಲೆಗೆ ಬಿಜೆಪಿ ಕಾರ್ಯಕರ್ತರ ಆಕ್ರೋಶ ಬೆಳವಣಿಗೆಗಳ ಬಗ್ಗೆ ಸಿಎಂ ಸಂಪೂರ್ಣ ಮಾಹಿತಿ ನೀಡಿದ್ದಾರೆ. ಇದೇ ವೇಳೆ ಕಾರ್ಯಕರ್ತರೇ ನಮ್ಮ ಆಸ್ತಿ. ಕಾರ್ಯಕರ್ತರನ್ನು ಕೆರಳಿಸಿದ್ರೆ ಹುಷಾರ್ ಎಂದು ರಾಜ್ಯ ಬಿಜೆಪಿ ನಾಯಕರಿಗೆ ಅಮಿತ್ ಶಾ ಖಡಕ್ ಎಚ್ಚರಿಕೆ ನೀಡಿದ್ದಾರೆ ಎನ್ನಲಾಗಿದೆ. ಬಿಜೆಪಿ ಕಾರ್ಯಕರ್ತ ರಾಜೀನಾಮೆ ಬಗ್ಗೆ ಕೆಲ ನಾಯಕರ ಮಾತುಗಳಿಗೆ ಅಮಿತ್ ಶಾ ಅಸಮಾಧಾನ ವ್ಯಕ್ತಪಡಿಸಿದ್ದು, ಕೆಲ ನಾಯಕರ ವರ್ತನೆ ಬಗ್ಗೆ ಕಿಡಿಕಾರಿದ್ದಾರಂತೆ. ನಮ್ಮದು ನಂಬರ್ 1 ಕೇಡರ್ ಬೇಸ್ ಪಾರ್ಟಿ, ಕಾರ್ಯಕರ್ತರೇ ಪಕ್ಷದ ಆಧಾರಸ್ತಂಭ. ಕಾರ್ಯಕರ್ತರನ್ನು ಕೆರಳಿಸುವ ಕೆಲಸ ಮಾಡಿದ್ರೆ ಹುಷಾರ್. ಆಗಿರುವ ಡ್ಯಾಮೇಜ್ ಕಂಟ್ರೋಲ್ ಮಾಡುವತ್ತ ಗಮನ ಕೊಡಿ ಎಂದು ಸಿಎಂಗೆ ಅಮಿತ್ ಶಾ ಸೂಚನೆ ನೀಡಿದ್ದಾರೆ ಎನ್ನಲಾಗಿದೆ. ಇದನ್ನೂ ಓದಿ: ಹಮಾರೆ ಪಾರ್ಟಿ ಮೆ ಕ್ಯಾ ಚಲ್ ರಹಾಹೈ ಬೊಮ್ಮಾಯಿ ಜೀ?- CMಗೆ ಅಮಿತ್ ಶಾ ಫುಲ್ ಕ್ಲಾಸ್

    ಬಿಎಸ್‍ವೈ ಬಳಿಕ ಮಾಸ್ ಲೀಡರ್ ಕೊರತೆ ಎದುರಿಸುತ್ತಿರುವ ಬಿಜೆಪಿಗೆ ಈಗ ಸಿದ್ದರಾಮೋತ್ಸವ ನೋಡಿ ರಾಜಕೀಯ ಆತಂಕ ಉಂಟಾಗಿದ್ದು, ಸಂಘಟನೆಯಲ್ಲಿ ಕೆಲ ಬದಲಾವಣೆಗೆ ಕೇಳಿ ಬಂದಿರುವ ಕೂಗಿಗೆ ಹೈಕಮಾಂಡ್ ನಿಲುವು ಏನು ಎಂಬುದನ್ನು ಕಾದುನೋಡಬೇಕಿದೆ.

    Live Tv
    [brid partner=56869869 player=32851 video=960834 autoplay=true]

  • ದೆಹಲಿಯಲ್ಲಿ ಅಮಿತ್ ಶಾರನ್ನು ಭೇಟಿಯಾದ ಸೋಮಶೇಖರ್ – ರಾಜ್ಯಕ್ಕೆ ಬರುವಂತೆ ಆಹ್ವಾನ

    ದೆಹಲಿಯಲ್ಲಿ ಅಮಿತ್ ಶಾರನ್ನು ಭೇಟಿಯಾದ ಸೋಮಶೇಖರ್ – ರಾಜ್ಯಕ್ಕೆ ಬರುವಂತೆ ಆಹ್ವಾನ

    ನವದೆಹಲಿ: ಕೇಂದ್ರ ಗೃಹ ಹಾಗೂ ಕೇಂದ್ರ ಸಹಕಾರ ಸಚಿವ ಅಮಿತ್ ಶಾ ಅವರನ್ನು ನವದೆಹಲಿಯ ನಂ.6 ಕೃಷ್ಣ ಮೆನನ್ ಮಾರ್ಗದಲ್ಲಿನ ನಿವಾಸದಲ್ಲಿ ಕರ್ನಾಟಕ ರಾಜ್ಯ ಸಹಕಾರ ಸಚಿವ ಎಸ್.ಟಿ.ಸೋಮಶೇಖರ್ ಅವರು ಭೇಟಿ ಮಾಡಿ ಅಭಿನಂದನೆ ಸಲ್ಲಿಸಿ ಸನ್ಮಾನಿಸಿದರು.

    ಇದೇ ಸಂದರ್ಭದಲ್ಲಿ ನವೆಂಬರ್ ಅಥವಾ ಡಿಸೆಂಬರ್ ನಲ್ಲಿ ರಾಜ್ಯದಲ್ಲಿ ನಡೆಸಲು ಉದ್ದೇಶಿಸಲಾಗಿರುವ ಕರ್ನಾಟಕ ರಾಜ್ಯ ಮಟ್ಟದ ಸಹಕಾರ ಸಮ್ಮೇಳನದಲ್ಲಿ ಭಾಗವಹಿಸುವಂತೆ ಆಹ್ವಾನ ನೀಡಿದರು. ‘ಸಹಕಾರ್ ಸೇ ಸಮೃದ್ಧಿ’ ಧ್ಯೇಯಘೋಷದೊಂದಿಗೆ ಹಮ್ಮಿಕೊಳ್ಳುತ್ತಿರುವ ಈ ಕಾರ್ಯಕ್ರಮದಲ್ಲಿ ಸಹಕಾರ ಇಲಾಖೆಗೆ ಹೊಸ ರೂಪ ನೀಡುವುದು ಹಾಗೂ ಸಹಕಾರ ಇಲಾಖೆಯನ್ನು ಮತ್ತಷ್ಟು ಬಲಪಡಿಸುವ ಉದ್ದೇಶದಿಂದ ಸಮ್ಮೇಳನ ಹಮ್ಮಿಕೊಳ್ಳಲಾಗುತ್ತಿದೆ ಎಂದು ಅಮಿತ್ ಶಾ ಅವರಿಗೆ ತಿಳಿಸಿದರು. ಇದನ್ನೂ ಓದಿ: ಭಾರತ್ ಬಂದ್ ಯಾವುದೇ ಪರಿಣಾಮ ಬೀರುವುದಿಲ್ಲ: ಜೋಶಿ

    ಅಲ್ಲದೆ ಸಹಕಾರ ಇಲಾಖೆ ಆಧುನೀಕರಣಕ್ಕೆ 5 ಸಾವಿರ ಕೋಟಿ ರೂ. ಅನುದಾನ ಬಿಡುಗಡೆ ಮಾಡುವಂತೆ ಅಮಿತ್ ಶಾ ಅವರನ್ನು ಕೋರಿದರು. ಸಚಿವ ಎಸ್.ಟಿ.ಸೋಮಶೇಖರ್ ಅವರ ಮನವಿಗೆ ಅಮಿತ್ ಶಾ ಅವರು ಸಕಾರಾತ್ಮಕವಾಗಿ ಸ್ಪಂದಿಸಿದ್ದು ಅಭಿವೃದ್ಧಿ ಕಾರ್ಯಗಳಿಗೆ ಬೆಂಬಲ ನೀಡುವುದಾಗಿ ತಿಳಿಸಿದ್ದಾರೆ. ಇದನ್ನೂ ಓದಿ: ವಿಶ್ವಸಂಸ್ಥೆಯಲ್ಲಿ ಪಾಕಿಸ್ತಾನಕ್ಕೆ ಪರೋಕ್ಷ ಎಚ್ಚರಿಕೆ ನೀಡಿದ ಪ್ರಧಾನಿ ಮೋದಿ

    ಭೇಟಿ ಸಂದರ್ಭದಲ್ಲಿ ಕರ್ನಾಟಕ ಸೌಹಾರ್ದ ಒಕ್ಕೂಟದ ಅಧ್ಯಕ್ಷರಾದ ಕೃಷ್ಣರೆಡ್ಡಿ, ಸಹಕಾರ ಭಾರತೀಯ ರಾಷ್ಟ್ರೀಯ ಅಧ್ಯಕ್ಷರಾದ ರಮೇಶ್ ವೈದ್ಯ, ಮಂಡ್ಯ ಜಿಲ್ಲಾ ಸಹಕಾರ ಬ್ಯಾಂಕಿನ ಅಧ್ಯಕ್ಷರಾದ ಸಿ.ಪಿ.ಉಮೇಶ್, ಸಹಕಾರ ಸಚಿವರ ವಿಶೇಷ ಕರ್ತವ್ಯಾಧಿಕಾರಿ ದಿನೇಶ್ ಗೂಳಿಗೌಡ ಸೇರಿದಂತೆ ಇನ್ನಿತರೆ ಸಹಕಾರಿ ಧುರೀಣರು ಉಪಸ್ಥಿತರಿದ್ದರು.

  • ವಿಶೇಷ ನ್ಯಾಯಾಲಯದಿಂದ ಅಮಿತ್ ಶಾಗೆ ಸಮನ್ಸ್ ಜಾರಿ

    ವಿಶೇಷ ನ್ಯಾಯಾಲಯದಿಂದ ಅಮಿತ್ ಶಾಗೆ ಸಮನ್ಸ್ ಜಾರಿ

    ಕೋಲ್ಕತಾ: ತೃಣಮೂಲ ಕಾಂಗ್ರೆಸ್ ಸಂಸದ ಅಭಿಷೇಕ್ ಬ್ಯಾನರ್ಜಿ ಅವರು ದಾಖಲಿಸಿದ್ದ ಮಾನಹಾನಿ ಪ್ರಕರಣಕ್ಕೆ ಸಂಬಂಧಿಸಿದಂತೆ ಪಶ್ಚಿಮ ಬಂಗಾಳದ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯವು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರಿಗೆ ಸಮನ್ಸ್ ಜಾರಿ ಮಾಡಿದೆ.

    ಅಭಿಷೇಕ್ ಬ್ಯಾನರ್ಜಿ ಅವರು ದಾಖಲಿಸಿದ್ದ ಮಾನಹಾನಿ ಪ್ರಕರಣದ ವಿಚಾರಣೆ ನಡೆಸಿದ ಜನಪ್ರತಿನಿಧಿಗಳ ವಿಶೇಷ ಕೋರ್ಟ್, ಫೆಬ್ರವರಿ 22 ರಂದು ಖುದ್ದಾಗಿ ಅಥವಾ ವಕೀಲರ ಮೂಲಕ ವಿಚಾರಣೆಗೆ ಹಾಜರಾಗುವಂತೆ ಅಮಿತ್ ಶಾ ಅವರಿಗೆ ಸಮನ್ಸ್ ನಲ್ಲಿ ಸೂಚಿಸಿದೆ.

    2018 ರ ಆಗಸ್ಟ್ 11 ರಂದು ಕೋಲ್ಕತ್ತಾದ ಮಾಯೊ ರಸ್ತೆಯಲ್ಲಿ ನಡೆದ ಬಿಜೆಪಿ ಸಮಾವೇಶದಲ್ಲಿ ಅಮಿತ್ ಶಾ ಅವರು ಟಿಎಂಸಿ ಸಂಸದ ಅಭಿಷೇಕ್ ಬ್ಯಾನರ್ಜಿ ಅವರಿಗೆ ಮಾನಹಾನಿಕರ ಹೇಳಿಕೆಗಳನ್ನು ನೀಡಿದ್ದರು ಎಂದು ದೂರು ದಾಖಲಿಸಲಾಗಿತ್ತು. ಅಭಿಷೇಕ್ ಬ್ಯಾನರ್ಜಿ ಪರ ವಕೀಲ ಸಂಜಯ್ ಬಸು ಅವರು ನ್ಯಾಯಾಲಯದಲ್ಲಿ ವಾದಮಂಡಿಸಿದ್ದರು. ವಾದವನ್ನು ಆಲಿಸಿರುವ ನ್ಯಾಯಾಧೀಶರು ಖುದ್ದು ಅಮಿತ್ ಶಾ ಹಾಜರಾಗುವಂತೆ ತಿಳಿಸಿದ್ದಾರೆ ಎಂದು ಸಂಜಯ್ ಬಸು ತಿಳಿಸಿದ್ದಾರೆ.

  • ‘ಅಮಿತ್ ಶಾ ಹಠಾವೋ, ದೇಶ್ ಬಚಾವೋ’ – ಬೆಳಗಾವಿಯಲ್ಲಿ ರೈತರು ಪ್ರತಿಭಟನೆಗೆ ಸಜ್ಜು

    ‘ಅಮಿತ್ ಶಾ ಹಠಾವೋ, ದೇಶ್ ಬಚಾವೋ’ – ಬೆಳಗಾವಿಯಲ್ಲಿ ರೈತರು ಪ್ರತಿಭಟನೆಗೆ ಸಜ್ಜು

    ಬೆಳಗಾವಿ: ಬೆಳಗಾವಿ ಜಿಲ್ಲೆಗೆ ಇಂದು ಕೆಂದ್ರ ಗೃಹ ಸಚಿವ ಅಮಿತ್ ಶಾ ಆಗಮಿಸುತ್ತಿರುವ ಹಿನ್ನೆಲೆ ಇಂದು ನೂತನ ಕೃಷಿ ಮಸೂದೆಗಳನ್ನು ವಾಪಸ್ ಪಡೆಯುವಂತೆ ಒತ್ತಾಯಿಸಿ ರೈತರು ಪ್ರತಿಭಟನೆ ನಡೆಸಲಿದ್ದಾರೆ.

    ಬೆಳಗಾವಿ ಜಿಲ್ಲೆಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಭೇಟಿ ನೀಡಲಿದ್ದಾರೆ. ಈ ವೇಳೆ ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಮೂರು ನೂತನ ಕೃಷಿ ಕಾಯಿದೆಯನ್ನು ರದ್ದುಗೊಳಿಸುವಂತೆ ಇಂದು ಬೆಳಗಾವಿಯ ಚನ್ನಮ್ಮ ವೃತ್ತದಲ್ಲಿ ರೈತ ಸಂಘಟನೆಗಳು ಅಮಿತ್ ಶಾ ರನ್ನು ತಡೆದು ಪ್ರತಿಭಟನೆ ನಡೆಸಲು ಸಿದ್ಧರಾಗಿದ್ದಾರೆ. ಪ್ರತಿಭಟನೆಯಲ್ಲಿ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ವತಿ ಸಂಘಟನೆಗಳು ಪಾಲ್ಗೊಳ್ಳಲಿದ್ದು, ರೈತ ಮುಖಂಡ ಚೂನಪ್ಪ ಪೂಜಾರಿ ನೇತೃತ್ವದಲ್ಲಿ ಪ್ರತಿಭಟನೆ ನಡೆಯಲಿದೆ.

    ಪ್ರತಿಭಟನೆ ವೇಳೆ ‘ಅಮಿತ್ ಶಾ ಹಠಾವೋ… ದೇಶ ಬಚಾವೋ’ ಎನ್ನುವುದರ ಮೂಲಕ ರೈತ ವಿರೋಧಿ ಕಾನೂನುಗಳು ವಾಪಸ್ ಆಗಲೇಬೇಕು ಎಂದು ಆಗ್ರಹಿಸಿ ಘೋಷಣೆ ಕೂಗಲಿದ್ದಾರೆ. ಜೊತೆಗೆ ಪ್ರಧಾನಿ ಮೋದಿ, ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ವಿರುದ್ಧವೂ ಧಿಕ್ಕಾರ ಕೂಗಿ ಆಕ್ರೋಶ ಹೊರಹಾಕಲಿದ್ದಾರೆ.

    ಶನಿವಾರ ಬೆಂಗಳೂರಿಗೆ ಆಗಮಿಸಿದ ಅಮಿತ್ ಶಾ ಸಂಜೆ ವಿಧಾನಸೌಧದದಲ್ಲಿ ಗೃಹ ಇಲಾಖೆ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದರು. ಸರ್ಕಾರ ಕರ್ನಾಟಕದಲ್ಲಿ ಆಗುತ್ತಿರುವ ಅಭಿವೃದ್ಧಿ ಮತ್ತು ಮುಖ್ಯಮಂತ್ರಿ ಯಡಿಯೂರಪ್ಪನವರ ಕಾರ್ಯವೈಖರಿಯನ್ನು ವಿಚಾರವಾಗಿ ಕೊಂಡಾಡಿದರು.

  • ಸಿಎಂಗೆ `ಬಾದಾಮಿ’ ಸಿಗಬಾರದು, ಬಿಜೆಪಿಗೆ ಸಿಗಬೇಕು: ಚರ್ಚೆ ನಂತ್ರ ಕೊನೆಗೆ ರೆಡಿಯಾದ್ರು ಅಭ್ಯರ್ಥಿ

    ಸಿಎಂಗೆ `ಬಾದಾಮಿ’ ಸಿಗಬಾರದು, ಬಿಜೆಪಿಗೆ ಸಿಗಬೇಕು: ಚರ್ಚೆ ನಂತ್ರ ಕೊನೆಗೆ ರೆಡಿಯಾದ್ರು ಅಭ್ಯರ್ಥಿ

    ಬೆಂಗಳೂರು: ಬಾದಾಮಿಯಲ್ಲಿ ಸ್ಪರ್ಧಿಸಲು ಮುಂದಾಗುತ್ತಿರುವ ಸಿಎಂ ಸಿದ್ದರಾಮಯ್ಯನವರನ್ನು ಸೋಲಿಸಲೇಬೇಕೆಂದು ಹಠಕ್ಕೆ ಬಿದ್ದಿರುವ ಬಿಜೆಪಿ ನಾಯಕರು ಒಮ್ಮತದ ಅಭ್ಯರ್ಥಿಯನ್ನು ಕಣಕ್ಕೆ ಇಳಿಸಲು ನಿರ್ಧರಿಸಿದ್ದಾರೆ.

    ಹೌದು. ರಾಜ್ಯ ಪ್ರವಾಸದಲ್ಲಿರುವ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಗುರುವಾರ ಬಾದಾಮಿಯಲ್ಲಿ ಯಾರನ್ನು ಕಣಕ್ಕೆ ಇಳಿಸಬೇಕು ಎನ್ನುವ ಬಗ್ಗೆ ಚರ್ಚೆ ನಡೆಸಿದ್ದಾರೆ. ಈ ಗಂಭೀರ ಚರ್ಚೆಯಲ್ಲಿ ಒಮ್ಮತದ ಅಭ್ಯರ್ಥಿ ಆಯ್ಕೆ ಮಾಡಿ, ಬಂಡಾಯ ಇರಬಾರದು ಎಂದು ಸೂಚನೆ ನೀಡಿದ್ದಾರೆ.

    ಈ ಬಾರಿ ಶತಾಯುಗತಾಯವಾದರೂ ಬಾದಾಮಿಯಲ್ಲಿ ಬಿಜೆಪಿ ಗೆಲ್ಲಲೇಬೇಕು ಎಂದು ಅಮಿತ್ ಶಾ ಹೇಳಿದ ಹಿನ್ನೆಲೆಯಲ್ಲಿ ಓರ್ವ ಅಭ್ಯರ್ಥಿಯನ್ನು ಕಣಕ್ಕೆ ಇಳಿಸಲು ಸಿದ್ಧತೆ ನಡೆದಿದೆ.

    ಯಾರು ಅಭ್ಯರ್ಥಿ?
    ಕಳೆದ ಬಾರಿ ಜೆಡಿಎಸ್‍ನಿಂದ ಸ್ಪರ್ಧೆ ಮಾಡಿದ್ದ ಮಹಾಂತೇಶ್ ಗುರುಪಾದಪ್ಪ ಮಮದಾಪುರ ಅವರನ್ನು ಸಿಎಂ ವಿರುದ್ಧ ಕಣಕ್ಕೆ ಇಳಿಸಲು ಬಿಜೆಪಿ ನಿರ್ಧರಿಸಿದೆ ಎಂದು ಮೂಲಗಳು ತಿಳಿಸಿವೆ. 2013ರಲ್ಲಿ ಬಿಜೆಪಿ ಅಭ್ಯರ್ಥಿಯಾಗಿ ಎಂ.ಕೆ.ಪಟ್ಟಣಶೆಟ್ಟಿ ಕಣಕ್ಕೆ ಇಳಿದಿದ್ದರು. ಆದರೆ ಈ ಬಾರಿ ಅವರಿಗೆ ಟಿಕೆಟ್ ನೀಡದೇ ಇರಲು ಬಿಜೆಪಿ ನಿರ್ಧಾರ ಮಾಡಿದೆ.

    ಮಮದಾಪುರ, ಎಂ.ಕೆ.ಪಟ್ಟಣಶೆಟ್ಟಿ ಇಬ್ಬರು ಸಂಬಂಧಿಗಳಾಗಿದ್ದು ಮಾವ, ಅಳಿಯನ ಸಂಬಂಧವಿದೆ. ಹೀಗಾಗಿ ಅಂತಿಮವಾಗಿ ಮಾವನನ್ನ ಮನವೊಲಿಸುವ ಕಾರ್ಯವನ್ನು ಅಳಿಯನಿಗೆ ಬಿಟ್ಟಿದ್ದಾರೆ. ಅಮಿತ್ ಶಾ ಜೊತೆಗಿನ ಸಭೆಯಲ್ಲಿ ಅಭ್ಯರ್ಥಿ ಕ್ಲಿಯರ್ ಆಗಿದ್ದು, ದೆಹಲಿಯಲ್ಲಿ ಭಾನುವಾರ ನಡೆಯಲಿರುವ ಸಭೆಯ ಬಳಿಕ ಅಧಿಕೃತವಾಗಿ ಪ್ರಕಟವಾಗಲಿದೆ ಎಂದು ಮೂಲಗಳು ತಿಳಿಸಿವೆ.

    ಕಳೆದ ಬಾರಿ ಜೆಡಿಎಸ್‍ನಿಂದ ಸ್ಪರ್ಧಿಸಿದ್ದ ಮಮಾದಪುರ 42,333 ಮತ ಪಡೆದಿದ್ದರೆ, ಬಿಬಿ ಚಿಮ್ಮನ್ನಕಟ್ಟಿ 57446 ಮತಗಳನ್ನು ಪಡೆದಿದ್ದರು.

  • ನಾನು 23 ದಿನಗಳ ಸಂಸದರ ಸಂಬಳವನ್ನು ಪಡೆಯುತ್ತೇನೆ: ಸುಬ್ರಮಣಿಯನ್ ಸ್ವಾಮಿ

    ನಾನು 23 ದಿನಗಳ ಸಂಸದರ ಸಂಬಳವನ್ನು ಪಡೆಯುತ್ತೇನೆ: ಸುಬ್ರಮಣಿಯನ್ ಸ್ವಾಮಿ

    ನವದೆಹಲಿ: 23 ದಿನಗಳ ಕಲಾಪ ನಡೆಯದಿರುವುದಕ್ಕೆ ನಾನು ಕಾರಣ ಅಲ್ಲ. ಹೀಗಾಗಿ ನಾನು ಸಂಸದರ ಸಂಬಳವನ್ನು ಪಡೆಯುತ್ತೇನೆ ಎಂದು ಬಿಜೆಪಿ ರಾಜ್ಯಸಭಾ ಸದಸ್ಯ ಸುಬ್ರಮಣಿಯನ್ ಸ್ವಾಮಿ ಹೇಳಿದ್ದಾರೆ.

    ಅಧಿವೇಶನದ ಎಲ್ಲಾ ದಿನಗಳೂ ಹಾಜರಿದ್ದೇನೆ. 23 ದಿನಗಳೂ ಕಲಾಪ ನಡೆದಿಲ್ಲ ಇದರಲ್ಲಿ ನನ್ನ ತಪ್ಪೇನು ಇಲ್ಲ. ನಾನು ರಾಷ್ಟ್ರಪತಿಗಳ ಪ್ರತಿನಿಧಿ. ಅವರು ಹೇಳೋ ತನಕ ನಾನು ಹೇಗೆ ಸಂಬಳ ಬೇಡವೆಂದು ಹೇಗೆ ಹೇಳಲಿ ಎಂದು ಸ್ವಾಮಿ ಪ್ರಶ್ನಿಸಿದ್ದಾರೆ.

    ಈ ಬಾರಿ ಅಧಿವೇಶನದ ಎಲ್ಲಾ ದಿನಗಳೂ ವ್ಯರ್ಥವಾಗಿದೆ. ಕಾಂಗ್ರೆಸ್‍ನ ಅಸಂವಿಧಾನಿಕ ರಾಜಕಾರಣದಿಂದಾಗಿ ಲೋಕಸಭೆ ಮತ್ತು ರಾಜ್ಯಸಭಾ ಕಲಾಪಗಳಿಗೆ ಅಡ್ಡಿಯಾಗಿದೆ. ಇದರಿಂದಾಗಿ ಬಹಳಷ್ಟು ಮಸೂದೆಗಳು ಅಂಗೀಕಾರ ಆಗಿಲ್ಲ. ಸಾರ್ವಜನಿಕ ಹಿತಾಸಕ್ತಿಯ ಯಾವ ವಿಚಾರಗಳನ್ನು ಚರ್ಚಿಸಿಲ್ಲ. ಸಾರ್ವಜನಿಕರ ಕೆಲಸಗಳನ್ನು ಮಾಡಿದಾಗ ಮಾತ್ರ ಸಂಬಳವನ್ನು ತೆಗೆದುಕೊಳ್ಳಬೇಕು. ಬಿಜೆಪಿ ಹಾಗೂ ಮಿತ್ರ ಪಕ್ಷಗಳ ಸಂಸದರು ಅಧಿವೇಶನದ ಸಂಬಳ ಮತ್ತು ಭತ್ಯೆಗಳನ್ನು ತೆಗೆದುಕೊಳ್ಳುವುದಿಲ್ಲ. ಪ್ರಧಾನಿ ನರೇಂದ್ರ ಮೋದಿ, ಪಕ್ಷದ ರಾಷ್ಟ್ರಾಧ್ಯಕ್ಷ ಅಮಿತ್ ಶಾ ಹಾಗೂ ಮಿತ್ರ ಪಕ್ಷಗಳೊಂದಿಗೆ ಚರ್ಚೆ ಮಾಡಿದ್ದೇವೆ ಎಂದು ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವ ಅನಂತ ಕುಮಾರ್ ನಿನ್ನೆ ತಿಳಿಸಿದ್ದರು.

    ನಾವು ಜನರ ಹಣವನ್ನು ಪಡೆದು ಪ್ರಜೆಗಳ ಸೇವೆ ಮಾಡುತ್ತೇವೆ. ಜನರ ಸೇವೆ ಮಾಡಲು ಸಾಧ್ಯವಾಗದೇ ಇದ್ದರೆ ಅವರ ಹಣವನ್ನು ಪಡೆಯಲು ನಮಗೆ ಯಾವುದೇ ಹಕ್ಕಿಲ್ಲ ಎಂದು ಅನಂತ್ ಕುಮಾರ್ ಸುದ್ದಿಗೋಷ್ಠಿಯಲ್ಲಿ ಹೇಳಿದ್ದರು.

    ಸಂಬಳ ಮತ್ತು ಭತ್ಯೆ ತೆಗೆದುಕೊಳ್ಳುವುದಿಲ್ಲ ಅನ್ನುವುದು ಸಚಿವ ಸಂಪುಟದ ನಿರ್ಣಯವಾಗಿದೆ. ಅಧಿವೇಶನದ ಎಲ್ಲಾ ದಿನಗಳು ವ್ಯರ್ಥವಾಗಿದ್ದಕ್ಕೆ ವಿರೋಧ ಪಕ್ಷಗಳೇ ಕಾರಣ ಎನ್ನುವ ಸಂದೇಶವನ್ನು ಜನರಿಗೆ ತಿಳಿಸಲು ಎನ್‍ಡಿಎ ಸದಸ್ಯರು ಈ ನಿರ್ಧಾರವನ್ನು ತೆಗೆದುಕೊಂಡಿದ್ದಾರೆ.