Tag: AmitShah

  • ರಾಜ್ಯಕ್ಕೆ ಅಮಿತ್ ಶಾ ಎಂಟ್ರಿ- ಮೈತ್ರಿ ನಾಯಕರ ಭೇಟಿ ಇಂದೇ ನಡೆಯುತ್ತಾ?

    ರಾಜ್ಯಕ್ಕೆ ಅಮಿತ್ ಶಾ ಎಂಟ್ರಿ- ಮೈತ್ರಿ ನಾಯಕರ ಭೇಟಿ ಇಂದೇ ನಡೆಯುತ್ತಾ?

    ಬೆಂಗಳೂರು: ರಾಜ್ಯಕ್ಕೆ ಬಿಜೆಪಿಯ ಚುನಾವಣಾ ಚಾಣಕ್ಯ ಅಮಿತ್ ಶಾ ಎಂಟ್ರಿ ಕೊಟ್ಟಿದ್ದಾರೆ. ಸಾಂಸ್ಕೃತಿಕ ನಗರಿ ಮೈಸೂರಿನಲ್ಲೆ ಮೈತ್ರಿ ನಾಯಕರ ಭೇಟಿ ಇಂದೆ ನಡೆಯಬಹುದು ಎಂಬ ಚರ್ಚೆಗಳು ನಡೆಯುತ್ತಿದೆ.

    ಮೈತ್ರಿ ಪ್ರಾಬಲ್ಯದ ಅಂಗಳದಲ್ಲೆ ಸೀಟ್ ಬೇಡಿಕೆಯ ಒತ್ತಡ ಹೆಚ್ಚಿಸಲು ಮಾಜಿ ಸಿಎಂ ಕುಮಾರಸ್ವಾಮಿ ಮುಂದಾಗುವ ಸಾಧ್ಯತೆಗಳಿವೆ. ಅಮಿತ್ ಶಾ, ಕುಮಾರಸ್ವಾಮಿ ಭೇಟಿ ಹಾಗೂ ಮಾತುಕತೆಗೆ ಸಾಂಸ್ಕೃತಿಕ ನಗರಿ ವೇದಿಕೆ ಆದರೂ ಅಚ್ಚರಿ ಇಲ್ಲ. ಮೈತ್ರಿ ಪಾಲಿನ ಹಕ್ಕು ಮಂಡಿಸಿ ಮಾಜಿ ಸಿಎಂ ಕುಮಾರಸ್ವಾಮಿ ಅವರು ಅಮಿತ್ ಶಾ ಮುಂದೆ ರಾಜಕೀಯ ದಾಳ ಉರುಳಿಸುವ ಸಾಧ್ಯತೆ ಇದೆ ಎನ್ನಲಾಗಿದೆ.

    ಒಟ್ಟಾರೆ ಕೇಂದ್ರ ಗೃಹ ಸಚಿವ ಅಮಿತ್ ಶಾ (Amitshah) ರಾಜ್ಯಕ್ಕೆ ಬಂದಿರುವುದು ಮೈತ್ರಿ ನಾಯಕರ ಮಾತುಕತೆಯ ಕುತೂಹಲವನ್ನು ಹೆಚ್ಚಿಸಿದೆ ಎನ್ನಲಾಗುತ್ತಿದೆ. ಇದನ್ನೂ ಓದಿ: ಮೈಸೂರಿಗೆ ಅಮಿತ್ ಶಾ ಆಗಮನ- ಲೋಕಸಭಾ ಚುನಾವಣೆ ಗೆಲ್ಲಲು ರಣತಂತ್ರ

    ಅಮಿತ್ ಶಾ ಮೀಟಿಂಗ್ ಅಜೆಂಡಾ ಏನು?: ರಾಜ್ಯದ 28 ಕ್ಷೇತ್ರಗಳ ಕ್ಷೇತ್ರವಾರು ಸರ್ವೆ ಮಾಡಿಸಿರೋ ಅಮಿತ್ ಶಾ ಅವರು 28 ಕ್ಷೇತ್ರಗಳಲ್ಲಿ ಸೋಲು- ಗೆಲುವಿನ ಮಾಹಿತಿ ಸಂಗ್ರಹ ಮಾಡಲಿದ್ದಾರೆ. ಯಾವ ಕ್ಷೇತ್ರ ಜೆಡಿಎಸ್‍ಗೆ ಬಿಟ್ಟು ಕೊಡಬೇಕು ಅನ್ನೋ ಬಗ್ಗೆ ಅಭಿಪ್ರಾಯ ಸಂಗ್ರಹಿಸಲಿದ್ದಾರೆ.

    ಈಗಾಗಲೇ ಜೆಡಿಎಸ್ (JDS) 5-6 ಕ್ಷೇತ್ರಗಳ ಪಟ್ಟಿ ಬಿಜೆಪಿ (BJP) ಹೈಕಮಾಂಡ್‍ಗೆ ನೀಡಿದೆ. ಈ ಪಟ್ಟಿಯಲ್ಲಿ ಮಂಡ್ಯ, ಚಿಕ್ಕಬಳ್ಳಾಪುರ, ಹಾಸನ, ಕೋಲಾರ, ತುಮಕೂರು, ಬೆಂಗಳೂರು ಗ್ರಾಂ., ಬೆಂಗಳೂರು ಉತ್ತರ ಕ್ಷೇತ್ರಗಳನ್ನ ಪ್ರಸ್ತಾಪ ಮಾಡಿದೆ. 7 ಕ್ಷೇತ್ರಗಳಲ್ಲಿ ಬಿಜೆಪಿ-ಜೆಡಿಎಸ್ ಪ್ರಾಬಲ್ಯದ ಬಗ್ಗೆ ರಿಪೆÇೀರ್ಟ್ ಪಡೆಯುತ್ತಾರೆ. ಬಳಿಕ ಹೆಚ್‍ಡಿಕೆ ಸ್ಪರ್ಧೆ & ಕ್ಷೇತ್ರ, ಸ್ಪರ್ಧೆಯಿಂದಾಗುವ ಲಾಭಗಳ ಬಗ್ಗೆ ಚರ್ಚೆ ನಡೆಯುವ ಸಾಧ್ಯತೆಗಳಿವೆ ಎಂಬ ಮಾಹಿತಿ ಲಭ್ಯವಾಗಿದೆ.

  • ಇಂದು ರಾತ್ರಿ ಮೈಸೂರಿಗೆ ಆಗಮಿಸಲಿದ್ದಾರೆ ಅಮಿತ್‌ ಶಾ

    ಇಂದು ರಾತ್ರಿ ಮೈಸೂರಿಗೆ ಆಗಮಿಸಲಿದ್ದಾರೆ ಅಮಿತ್‌ ಶಾ

    ಮೈಸೂರು: ಸುತ್ತೂರು ಜಾತ್ರಾ ಮಹೋತ್ಸವದ ಹಿನ್ನೆಲೆ ಕೇಂದ್ರ ಗೃಹ ಸಚಿವ ಅಮಿತ್ ಶಾ (Amitshah) ಇಂದು ಮೈಸೂರಿಗೆ ಆಗಮಿಸಲಿದ್ದಾರೆ.

    ರಾತ್ರಿ 10.50ಕ್ಕೆ ದೆಹಲಿಯಿಂದ ಮಂಡಕಹಳ್ಳಿ ವಿಮಾನ ನಿಲ್ದಾಣಕ್ಕೆ ಬಂದಿಳಿಯಲಿರುವ ಅವರು, ನಗರದ ಖಾಸಗಿ ಹೊಟೇಲಿನಲ್ಲಿ ವಾಸ್ತವ್ಯ ಹೂಡಲಿದ್ದಾರೆ. ನಾಳೆ ಬೆಳಗ್ಗೆ 11 ಗಂಟೆಗೆ ಚಾಮುಂಡಿಬೆಟ್ಟಕ್ಕೆ ಭೇಟಿ ನೀಡಿ, ನಾಡದೇವತೆ ಚಾಮುಂಡೇಶ್ವರಿ ದರ್ಶನ‌ ಪಡೆದು ವಿಶೇಷ ಪೂಜೆ ಸಲ್ಲಿಸಲಿದ್ದಾರೆ.

    ನಂತರ 11.45ಕ್ಕೆ ಹೆಲಿಕಾಪ್ಟರ್​ ಮೂಲಕ ಸುತ್ತೂರು ಗ್ರಾಮಕ್ಕೆ ಪ್ರಯಾಣ ಬೆಳೆಸಿ ಜಾತ್ರಾ ಮಹೋತ್ಸವದಲ್ಲಿ ಭಾಗಿಯಾಗಲಿದ್ದಾರೆ. ಮಧ್ಯಾಹ್ನ 1.30ಕ್ಕೆ ಸುತ್ತೂರು ಮಠದಲ್ಲಿ ಊಟದ ವ್ಯವಸ್ಥೆ ಮಾಡಲಾಗಿದ್ದು, ಮಧ್ಯಾಹ್ನ 2.30ಕ್ಕೆ ಖಾಸಗಿ ಹೋಟೆಲ್‌ಗೆ ಆಗಮಿಸಲಿದ್ದಾರೆ.

    ಸಂಜೆ 3.30 ರಿಂದ 4.30ರ ತನಕ ಮೈಸೂರು ಕ್ಲಸ್ಟರ್ ಗೆ ಬರುವ ಮೈಸೂರು, ಚಾಮರಾಜನಗರ, ಮಂಡ್ಯ ಹಾಗೂ ಹಾಸನ ಲೋಕಸಭೆ ಕ್ಷೇತ್ರಗಳ ಸಿದ್ಧತೆ ಬಗ್ಗೆ ಮಹತ್ವದ ಸಭೆ ನಡೆಸಲಿದ್ದಾರೆ. ಈ ವೇಳೆ ಮಂಡ್ಯ ಗೊಂದಲ ಬಗ್ಗೆ ಪ್ರತ್ಯೇಕ ಚರ್ಚೆ ನಡೆಸುವ ಸಾಧ್ಯತೆ ಇದೆ. ಬಳಿಕ ಸಂಜೆ 5 ಗಂಟೆಗೆ ಮೈಸೂರಿನಿಂದ ಗುಜರಾತ್ ಗೆ ತೆರಳಲಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.

  • SIMI ಸಂಘಟನೆ ಮೇಲಿನ ನಿಷೇಧ ಮತ್ತೆ 5 ವರ್ಷ ವಿಸ್ತರಿಸಿದ ಕೇಂದ್ರ

    SIMI ಸಂಘಟನೆ ಮೇಲಿನ ನಿಷೇಧ ಮತ್ತೆ 5 ವರ್ಷ ವಿಸ್ತರಿಸಿದ ಕೇಂದ್ರ

    ನವದೆಹಲಿ: ಭಯೋತ್ಪಾದನೆಯನ್ನು ಉತ್ತೇಜಿಸುವ ಮತ್ತು ದೇಶದಲ್ಲಿ ಶಾಂತಿ ಮತ್ತು ಕೋಮು ಸೌಹಾರ್ದತೆಯನ್ನು ಕದಡುವ ಭಯೋತ್ಪಾದಕ ಗುಂಪು ಸ್ಟೂಡೆಂಟ್ಸ್ ಇಸ್ಲಾಮಿಕ್ ಮೂವ್‌ಮೆಂಟ್ ಆಫ್ ಇಂಡಿಯಾ (SIMI) ಮೇಲೆ ವಿಧಿಸಲಾದ ನಿಷೇಧವನ್ನು ಕೇಂದ್ರ ಸರ್ಕಾರ (Central Govt) 5 ವರ್ಷಗಳವರೆಗೆ ವಿಸ್ತರಿಸಿದೆ.

    ಈ ಸಂಬಂಧ ಗೃಹ ಸಚಿವ ಅಮಿತ್‌ ಶಾ ತಮ್ಮ ಎಕ್ಸ್‌ನಲ್ಲಿ, ಕಾನೂನುಬಾಹಿರ ಚಟುವಟಿಕೆಗಳ ತಡೆ ಕಾಯಿದೆಯಡಿಯಲ್ಲಿ SIMIಯನ್ನು ಮತ್ತೆ ಮುಂದಿನ 5 ವರ್ಷಗಳ ಅವಧಿಗೆ ‘ಕಾನೂನುಬಾಹಿರ ಸಂಘʼ ಎಂದು ಘೋಷಿಸಲಾಗಿದೆ. ಭಾರತದ ಸಾರ್ವಭೌಮತೆ, ಭದ್ರತೆ ಮತ್ತು ಸಮಗ್ರತೆಗೆ ಧಕ್ಕೆ ತರಲು ಭಯೋತ್ಪಾದನೆಯನ್ನು ಉತ್ತೇಜಿಸುವಲ್ಲಿ, ಶಾಂತಿ ಮತ್ತು ಕೋಮು ಸೌಹಾರ್ದತೆಗೆ ಧಕ್ಕೆ ತರುವಲ್ಲಿ ಸಿಮಿ ತೊಡಗಿಸಿಕೊಂಡಿದೆ ಎಂದು ಅಮಿತ್ ಶಾ‌ (Amitshah) ತಿಳಿಸಿದ್ದಾರೆ.

    ಗೃಹಸಚಿವಾಲಯದ ಅಧಿಸೂಚನೆಯಲ್ಲಿ ಏನಿದೆ?: SIMI ತನ್ನ ವಿಧ್ವಂಸಕ ಚಟುವಟಿಕೆಗಳನ್ನು ಮುಂದುವರಿಸಿದೆ ಮತ್ತು ಇನ್ನೂ ತಲೆಮರೆಸಿಕೊಂಡಿರುವ ತನ್ನ ಕಾರ್ಯಕರ್ತರನ್ನು ಪುನಃ ಸಂಘಟಿಸುವ ಪ್ರಯತ್ನ ಮಾಡುತ್ತಿದೆ. ಈ ಗುಂಪು ಕೋಮುವಾದ, ಸೌಹಾರ್ದತೆಯನ್ನು ಸೃಷ್ಟಿಸುವ ಮೂಲಕ ಜನರ ಮನಸ್ಸನ್ನು ಕದಡಿಸುವುದರ ಜೊತೆಗೆ ದೇಶ ವಿರೋಧಿ ಭಾವನೆಗಳನ್ನು ಹರಡುವ ಕೆಲಸ ಮಾಡುತ್ತಿದೆ. ಈ ಮೂಲಕ ಮತ್ತು ಉಗ್ರವಾದವನ್ನು ಬೆಂಬಲಿಸುವ ಮೂಲಕ ದೇಶದ ಸಮಗ್ರತೆ ಮತ್ತು ಭದ್ರತೆಗೆ ಹಾನಿಯುಂಟು ಮಾಡುವ ಚಟುವಟಿಕೆಗಳನ್ನು ಕೈಗೊಳ್ಳುತ್ತಿವೆ. ಹೀಗಾಗಿ ಸಿಮಿಯ ಮೇಲಿನ ನಿಷೇಧವನ್ನು ಮತ್ತೆ 5 ವರ್ಷ ಮುಂದುವರಿದಲಾಗುವುದು ಎಂದು ತಿಳಿಸಲಾಗಿದೆ.

    2001 ರಲ್ಲಿ ಅಟಲ್ ಬಿಹಾರಿ ವಾಜಪೇಯಿ ಸರ್ಕಾರ ಅಧಿಕಾರದಲ್ಲಿದ್ದಾಗ ಸಿಮಿಯನ್ನು ಮೊದಲು ನಿಷೇಧಿಸಲಾಯಿತು. ಅಂದಿನಿಂದ ಪ್ರತಿ 5 ವರ್ಷಗಳಿಗೊಮ್ಮೆ ನಿಷೇಧವನ್ನು ವಿಸ್ತರಿಸುತ್ತಾ ಬರಲಾಗಿದೆ. 2014ರ ಫೆಬ್ರವರಿ 1ರಂದು ಸಿಮಿ ಸಂಘಟನೆಯನ್ನು ನಿಷೇಧಿಸಲಾಯಿತು. ನಂತರ ಈ ನಿಷೇಧವನ್ನು 2019ರವರೆಗೆ ವಿಸ್ತರಿಸಲಾಗಿತ್ತು. ಇದೀಗ ಈ ಸಂಘಟನೆಯನ್ನು ಮತ್ತೆ ಐದು ವರ್ಷಗಳ ಕಾಲ ಯುಎಪಿಎ ಅಡಿಯಲ್ಲಿ ಕಾನೂನುಬಾಹಿರ ಸಂಘಟನೆ ಎಂದು ಘೋಷಿಸಲಾಗಿದೆ.

    ಸಿಮಿಯ ಗುರಿಯೇನು..?: ಭಾರತವನ್ನು ಇಸ್ಲಾಮಿಕ್ ಭೂಮಿಯಾಗಿ ಪರಿವರ್ತಿಸುವ ಮೂಲಕ ವಿಮೋಚನೆ ನೀಡುವುದು. ದಾರ್-ಉಲ್-ಇಸ್ಲಾಂ ಅಂದರೆ ಬಲವಂತವಾಗಿ ಅಥವಾ ಹಿಂಸೆಯ ಮೂಲಕ ಇಸ್ಲಾಂಗೆ ಮತಾಂತರಿಸುವುದಾಗಿದೆ.

  • ಅಮಿತ್‌ ಶಾ ಭೇಟಿಯಾಗಿ ಸುದೀರ್ಘ ಚರ್ಚೆ ನಡೆಸಿದ ಮಾಜಿ ಸಿಎಂ ಹೆಚ್‌ಡಿಕೆ

    ಅಮಿತ್‌ ಶಾ ಭೇಟಿಯಾಗಿ ಸುದೀರ್ಘ ಚರ್ಚೆ ನಡೆಸಿದ ಮಾಜಿ ಸಿಎಂ ಹೆಚ್‌ಡಿಕೆ

    ನವದೆಹಲಿ: ಮುಂಬರುವ ಲೋಕಸಭಾ ಚುನಾವಣೆಗೆ ಸಿದ್ಧತೆಗೆ ಸಂಬಂಧಿಸಿ ಕೇಂದ್ರ ಗೃಹ ಸಚಿವ ಅಮಿತ್ ಶಾ (Amitshah) ಅವರೊಂದಿಗೆ ಮಾಜಿ ಮುಖ್ಯಮಂತ್ರಿ ಹಾಗೂ ಜೆಡಿಎಸ್ ರಾಜ್ಯಾಧ್ಯಕ್ಷ ಹೆಚ್.ಡಿ.ಕುಮಾರಸ್ವಾಮಿಯವರು (HD Kumaraswamy) ಮಹತ್ವದ ಮಾತುಕತೆ ನಡೆಸಿದರು.

    ಇಂದು ಸಂಜೆ ಅಮಿತ್ ಶಾ ಅವರ ನಿವಾಸದಲ್ಲಿ ನಡೆದ ಸಭೆಯಲ್ಲಿ ಮೈತ್ರಿಯ ವಿಷಯವೂ ಸೇರಿ ರಾಜ್ಯ ರಾಜಕೀಯದ ಬಗ್ಗೆ ಸುಮಾರು 45 ನಿಮಿಷಕ್ಕೂ ಹೆಚ್ಚು ಕಾಲ ದೀರ್ಘ ಸಮಾಲೋಚನೆ ನಡೆಸಿದ್ದಾರೆ. ಈ ವೇಳೆ ಹೆಚ್‌ಡಿಕೆ ಕರ್ನಾಟಕದ ಪ್ರತಿಯೊಂದು ವಿದ್ಯಮಾನವನ್ನು ಅವರ ಗಮನಕ್ಕೆ ತಂದರು.

    ಆಗ ಅಮಿತ್‌ ಶಾ ಅವರು, ಕ್ಷೇತ್ರ ಹಂಚಿಕೆಯ ಸೇರಿದಂತೆ ಜೆಡಿಎಸ್ ಪಕ್ಷ ಅಧಿಕೃತವಾಗಿ ಎನ್ ಡಿ ಎ (NDA) ಮೈತ್ರಿಕೂಟಕ್ಕೆ ಸೇರುವ ಪ್ರಕ್ರಿಯೆಗಳನ್ನು ಅಯೋಧ್ಯೆಯಲ್ಲಿ ಶ್ರೀರಾಮ ದೇವರ ಪ್ರಾಣ ಪ್ರತಿಷ್ಠೆ ಕಾರ್ಯಕ್ರಮ ಮುಗಿದ ನಂತರ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ (JP Nadda) ಅವರ ಜೊತೆ ಕೂತು ಚರ್ಚೆ ನಡೆಸಿದ ನಂತರ ಅಂತಿಮಗೊಳಿಸೋಣ ಎಂದು ಹೆಚ್‌ಡಿಕೆಗೆ ಹೇಳಿದ್ದಾರೆ. ಇದನ್ನೂ ಓದಿ: ಪ್ರತಿಭಾವಂತ ಆಟಗಾರ ಪ್ರಖರ್ ಚತುರ್ವೇದಿಯನ್ನು ಅಭಿನಂದಿಸಿದ ಸಿಎಂ

    ರಾಜ್ಯದ 28 ಲೋಕಸಭೆ ಕ್ಷೇತ್ರಗಳೆಲ್ಲವನ್ನೂ ಎನ್ ಡಿ ಎ ಮೈತ್ರಿಕೂಟ ಗೆದ್ದು ಮತ್ತೊಮ್ಮೆ ನರೇಂದ್ರ ಮೋದಿ ಅವರು ಭಾರತದ ಪ್ರಧಾನಮಂತ್ರಿ ಆಗಬೇಕು. ಅದಕ್ಕಾಗಿ ಕರ್ನಾಟಕದಲ್ಲಿ ಏನೆಲ್ಲಾ ಮಾಡಬೇಕೋ ಅದೆಲ್ಲವನ್ನೂ ಒಟ್ಟಾಗಿ ಮಾಡೋಣ. ಬಿಜೆಪಿ ಮತ್ತು ಜೆಡಿಎಸ್ ಪಕ್ಷಗಳೆರಡು ಅತ್ಯಂತ ವಿಶ್ವಾಸ, ನಂಬಿಕೆಯ ಆಧಾರದ ಚುನಾವಣೆ ಎದುರಿಸುವ ನಿಟ್ಟಿನಲ್ಲಿ ಎಲ್ಲಾ ನಿರ್ಧಾರಗಳನ್ನು ಮಾಡೋಣ ಎಂದು ಶಾ ಅವರು ಕುಮಾರಸ್ವಾಮಿಗೆ ತಿಳಿಸಿದ್ದಾರೆ.

    ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರಕ್ಕೆ ಒಂದು ವರ್ಷ ತುಂಬುವುದಕ್ಕೆ ಮೊದಲೇ ಆಡಳಿತ ವಿರೋಧಿ ಅಲೆ ಸೃಷ್ಟಿಯಾಗಿದೆ. ಜನರು ಇನ್ನಿಲ್ಲದ ಸಂಕಷ್ಟ ಅನುಭವಿಸುತ್ತಿದ್ದಾರೆ. ರಾಜ್ಯ ಸರ್ಕಾರದ ವೈಫಲ್ಯಗಳನ್ನು ಜನರ ಗಮನಕ್ಕೆ ಪರಿಣಾಮಕಾರಿಯಾಗಿ ತರುವ ನಿಟ್ಟಿನಲ್ಲಿ ಇಬ್ಬರೂ ನಾಯಕರು ಚರ್ಚೆ ನಡೆಸಿದರು.

    ಮಾತುಕತೆಯ ಬಗ್ಗೆ ಸಂತಸ ವ್ಯಕ್ತಪಡಿಸಿರುವ ಹೆಚ್‌ಡಿಕೆ, ರಾಜ್ಯದಲ್ಲಿ ಉಂಟಾಗಿರುವ ಭೀಕರ ಬರದ ಬಗ್ಗೆಯೂ ಗೃಹ ಸಚಿವರ ಗಮನಕ್ಕೆ ತಂದಿದ್ದೇನೆ. ರಾಜ್ಯ ಸರಕಾರ ಈವರೆಗೂ ಬಿಡಿಗಾಸನ್ನು ಬರಪೀಡಿತ ಜನರಿಗೆ ಕೊಟ್ಟಿಲ್ಲ ಎನ್ನುವುದು ಅವರಿಗೆ ಗೊತ್ತಿದೆ. ಈ ಬಗ್ಗೆ ಶಾ ಅವರಿಗೆ ಎಲ್ಲಾ ಮಾಹಿತಿ ನೀಡಿದ್ದೇನೆ ಎಂದು ಹೇಳಿದ್ದಾರೆ.

    ಮುಕ್ಕಾಲು ಗಂಟೆ ಕಾಲ ನಡೆದ ಈ ಸಭೆಯಲ್ಲಿ ಗೃಹ ಸಚಿವರ ಜತೆ ಎಲ್ಲಾ ವಿಷಯಗಳನ್ನು ಮುಕ್ತವಾಗಿ ಚರ್ಚೆ ಮಾಡಿದ್ದೇನೆ. ಕೇಂದ್ರದಲ್ಲಿ ಎನ್ ಡಿ ಎ ಮೈತ್ರಿಕೂಟ ಅಧಿಕಾರಕ್ಕೆ ಬಂದು ಮತ್ತೊಮ್ಮೆ ನರೇಂದ್ರ ಮೋದಿ (Narendra Modi) ಅವರು ಪ್ರಧಾನಿ ಆಗಬೇಕು. ಈ ಬಗ್ಗೆ ಜೆಡಿಎಸ್ ಮತ್ತು ಬಿಜೆಪಿ ಒಟ್ಟಾಗಿ ಕೆಲಸ ಮಾಡುವ ಬಗ್ಗೆ ಮಾತುಕತೆ ನಡೆಸಿದ್ದೇವೆ ಎಂದು ತಿಳಿಸಿದ್ದಾರೆ.

    ಅಮಿತ್‌ ಶಾ ಬೇಟಿ ವೇಳೆ ಮಾಜಿ ಮುಖ್ಯಮಂತ್ರಿಗಳ ಜೊತೆಯಲ್ಲಿ ಜೆಡಿಎಸ್ ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಹಾಗೂ ಮಾಜಿ ಸಂಸದ ಕುಪೇಂದ್ರ ರೆಡ್ಡಿ ಇದ್ದರು.

  • ಕೇಂದ್ರ ಗೃಹ ಸಚಿವ ಅಮಿತ್‌ ಶಾ ಸಹೋದರಿ ನಿಧನ

    ಕೇಂದ್ರ ಗೃಹ ಸಚಿವ ಅಮಿತ್‌ ಶಾ ಸಹೋದರಿ ನಿಧನ

    ನವದೆಹಲಿ: ಕೇಂದ್ರ ಗೃಹ ಸಚಿವ ಅಮಿತ್ ಶಾ (Amitshah) ಅವರ ಹಿರಿಯ ಸಹೋದರಿ ರಾಜೇಶ್ವರಿಬೆನ್ ಶಾ (Rajeshwariben Shah) ಇಂದು ನಿಧನರಾಗಿದ್ದಾರೆ.

    ರಾಜೇಶ್ವರಿಬೆನ್ ಅವರಿಗೆ ಸುಮಾರು 60 ವರ್ಷ ವಯಸ್ಸಾಗಿತ್ತು. ಕೆಲದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಇವರು ಮುಂಬೈನ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ ಇಂದು ಚಿಕಿತ್ಸೆ ಫಲಿಸದೇ ಆಸ್ಪತ್ರೆಯಲ್ಲಿಯೇ ಕೊನೆಯುಸಿರೆಳೆದಿದ್ದಾರೆ.

    ಸಹೋದರಿಯ ನಿಧನದ ಹಿನ್ನೆಲೆಯಲ್ಲಿ ಹೇಗ ಸಚಿವರು ಇಂದು ಗುಜರಾತ್‌ನಲ್ಲಿ (Gujrat) ನಡೆಯಬೇಕಿದ್ದ ಎಲ್ಲಾ ಕಾರ್ಯಕ್ರಮಗಳನ್ನು ರದ್ದುಗೊಳಿಸಿದ್ದಾರೆ. ಕೆಲ ದಿನಗಳಿಂದ ರಾಜೇಶ್ವರಿಬೆನ್ ಅವರ ಆರೋಗ್ಯದಲ್ಲಿ ಏರುಪೇರಾಗಿತ್ತು. ಹೀಗಾಗಿ ಅವರು ಮುಂಬೈನ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ ಇಂದು ಮುಂಜಾನೆ ಅವರು ಕೊನೆಯುಸಿರೆಳೆದರು ಎಂದು ಬಿಜೆಪಿ ಅಧಿಕಾರಿಯೊಬ್ಬರು ಮಾಹಿತಿ ನೀಡಿದ್ದಾರೆ.

    ಸಹೋದರಿಯ ರಾಜೇಶ್ವರಿಬೆನ್ ಪಾರ್ಥಿವ ಶರೀರವನ್ನು ಇಂದು ಬೆಳಗ್ಗೆ ಅಹಮದಾಬಾದ್‌ನಲ್ಲಿರುವ ಅವರ ನಿವಾಸಕ್ಕೆ ತರಲಾಗಿತ್ತು. ನಂತರ ಥಾಲ್ತೇಜ್ ಚಿತಾಗಾರದಲ್ಲಿ ಅವರ ಅಂತಿಮ ಸಂಸ್ಕಾರ ನಡೆದಿದೆ. ಇದನ್ನೂ ಓದಿ: 60 ವರ್ಷಗಳಿಂದ ಮಾಡಿದ ಅನ್ಯಾಯಕ್ಕೆ ಕಾಂಗ್ರೆಸ್ಸಿಗರು ಈಗ ನ್ಯಾಯ ಕೇಳಲು ಹೊರಟಿದ್ದಾರೆ: ಮುನಿಸ್ವಾಮಿ ವ್ಯಂಗ್ಯ

    ಅಹಮದಾಬಾದ್‌ಗೆ ಬಂದಿದ್ದರು ಗೃಹ ಸಚಿವ: ಅಮಿತ್‌ ಶಾ ಗಾಂಧಿನಗರ ಲೋಕಸಭಾ ಕ್ಷೇತ್ರವನ್ನು ಪ್ರತಿನಿಧಿಸುತ್ತಿದ್ದಾರೆ. ಹೀಗಾಗಿ ಬಿಜೆಪಿ ಬೆಂಬಲಿಗರೊಂದಿಗೆ ಮಕರ ಸಂಕ್ರಾಂತಿಯನ್ನು ಆಚರಿಸಲು ಅವರು ಭಾನುವಾರದಿಂದ ಅಹಮದಾಬಾದ್‌ನಲ್ಲಿದ್ದರು. ಇಂದು ಬನಸ್ಕಾಂತ ಮತ್ತು ಗಾಂಧಿನಗರ ಜಿಲ್ಲೆಗಳಲ್ಲಿ ಎರಡು ಕಾರ್ಯಕ್ರಮಗಳಲ್ಲಿ ಭಾಗವಹಿಸಬೇಕಿತ್ತು. ಬನಸ್ಕಾಂತದ ದೇವದರ್ ಗ್ರಾಮದ ಬನಸ್ ಡೈರಿ ಉದ್ಘಾಟನೆ ಮಾಡಬೇಕಿತ್ತು. ಬಳಿಕ ಮಧ್ಯಾಹ್ನ ಅವರು ಗಾಂಧಿನಗರದ ರಾಷ್ಟ್ರೀಯ ರಕ್ಷಣಾ ವಿಶ್ವವಿದ್ಯಾಲಯದಲ್ಲಿ ವಿವಿಧ ಅಭಿವೃದ್ಧಿ ಯೋಜನೆಗಳನ್ನು ಉದ್ಘಾಟಿಸುವವರಿದ್ದರು. ಈ ಎರಡೂ ಕಾರ್ಯಕ್ರಮಗಳನ್ನು ರದ್ದುಗೊಳಿಸಿದ್ದಾರೆ.

    ಉತ್ತರಾಯಣ ಹಬ್ಬದ ನಿಮಿತ್ತ ಗೃಹ ಸಚಿವ ಶಾ ಭಾನುವಾರ ಭಗವಾನ್ ಜಗನ್ನಾಥ ದೇವಸ್ಥಾನಕ್ಕೆ ಆಗಮಿಸಿದ್ದರು. ಅಲ್ಲಿ ಕುಟುಂಬ ಸದಸ್ಯರೊಂದಿಗೆ ಪೂಜೆ ಸಲ್ಲಿಸಿದರು. ಇದಾದ ಬಳಿಕ ವೇಜಲಪುರದಲ್ಲೂ ಗಾಳಿಪಟ ಹಾರಿಸಿದರು. ಸೋಮವಾರ ಅಹಮದಾಬಾದ್ ಮತ್ತು ಗಾಂಧಿನಗರದ ಉತ್ತರಾಯಣ ಆಚರಣೆಯಲ್ಲಿ ಭಾಗವಹಿಸುವ ಯೋಜನೆ ಇತ್ತು.

  • ಲೋಕಸಭೆ ಟಿಕೆಟ್‍ಗಾಗಿ ಸೋಮಣ್ಣ ಲಾಬಿ- ಬುಧವಾರ ಅಮಿತ್ ಶಾ ಭೇಟಿ

    ಲೋಕಸಭೆ ಟಿಕೆಟ್‍ಗಾಗಿ ಸೋಮಣ್ಣ ಲಾಬಿ- ಬುಧವಾರ ಅಮಿತ್ ಶಾ ಭೇಟಿ

    ನವದೆಹಲಿ: ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ (Vidhanasabha Election) ಎರಡು ಕ್ಷೇತ್ರಗಳಿಂದ ಸ್ಪರ್ಧಿಸಿ ಸೋಲು ಕಂಡಿರುವ ಮಾಜಿ ಸಚಿವ ವಿ.ಸೋಮಣ್ಣ ಲೋಕಸಭಾ ಚುನಾವಣೆಗೆ ಸ್ಪರ್ಧಿಸಲು ತಯಾರಿ ಆರಂಭಿಸಿದ್ದು, ಈ ಸಂಬಂಧ ಹೈಕಮಾಂಡ್ ಚರ್ಚಿಸಲು ದೆಹಲಿಯಲ್ಲಿ ಠಿಕಾಣಿ ಹೂಡಿದ್ದಾರೆ. ಬುಧವಾರ ಅವರು ಕೇಂದ್ರ ಗೃಹ ಸಚಿವ ಅಮಿತ್ ಶಾ (Amitshah) ಭೇಟಿಯಾಗುವ ಸಾಧ್ಯತೆಗಳಿದೆ.

    ಸೋಮವಾರ ರಾತ್ರಿ ದೆಹಲಿಗೆ ಆಗಮಿಸಿದ ವಿ.ಸೋಮಣ್ಣ (V Somanna) ಮಂಗಳವಾರ ರಾಷ್ಟ್ರೀಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಬಿ.ಎಲ್ ಸಂತೋಷ್ ಅವರನ್ನು ಭೇಟಿ ಮಾಡಿ ಈ ಬಗ್ಗೆ ಚರ್ಚೆ ನಡೆಸಿದ್ದಾರೆ. ವಿಧಾನಸಭಾ ಚುನಾವಣೆಯಲ್ಲಿ ತಮ್ಮನ್ನು ಉದ್ದೇಶ ಪೂರ್ವಕವಾಗಿ ಸೋಲಿಸುವ ಯತ್ನ ಆಗಿದೆ. ಕುತಂತ್ರದ ಕಾರಣಗಳಿಂದ ನಾನು ಸೋಲು ಕಂಡಿದ್ದೇನೆ. ಹೀಗಾಗಿ ಮುಂಬರುವ ಚುನಾವಣೆಯಲ್ಲಿ ಅವಕಾಶ ನೀಡಬೇಕು ಎಂದು ಮನವಿ ಮಾಡಿದ್ದಾರೆ ಎನ್ನಲಾಗಿದೆ. ಇದನ್ನೂ ಓದಿ: ಸಂವಿಧಾನದ ತಿದ್ದುಪಡಿ ಮಾಡಿ 224 ಕ್ಷೇತ್ರಗಳಲ್ಲೂ ಸಿಎಂ, ಡಿಸಿಎಂ ಘೋಷಿಸಿ – ಈಶ್ವರಪ್ಪ ಲೇವಡಿ

    ಈ ನಡುವೆ ಸೋಮಣ್ಣ ಅವರಿಗೆ ತುಮಕೂರು ಟಿಕೆಟ್ ಕೊಡಿಸಲು ಸಂಸದ ಬಸವರಾಜು ಪ್ರಯತ್ನ ಮಾಡುತ್ತಿದ್ದಾರೆ. ಲಿಂಗಾಯತ ನಾಯಕರಿಗೆ ಬಿಜೆಪಿ ಟಿಕೆಟ್ ನೀಡುವಂತೆ ಪಟ್ಟು ಹಿಡಿದಿರುವ ಸಂಸದ ಬಸವರಾಜು, ಸೋಮಣ್ಣ ಪರ ಬ್ಯಾಟ್ ಬೀಸುತ್ತಿದ್ದಾರೆ. ತಮ್ಮ ಬದಲಿಗೆ ವಿ.ಸೋಮಣ್ಣ ಅವರಿಗೆ ಟಿಕೇಟ್ ನೀಡುವಂತೆ ಅಮಿತ್ ಶಾ ಅವರಿಗೂ ಮನವಿ ಮಾಡಲಿದ್ದಾರೆ ಎನ್ನಲಾಗಿದೆ.

  • ನೂರಕ್ಕೆ ನೂರರಷ್ಟು ಕಾಂಗ್ರೆಸ್ ಸರ್ಕಾರ ದಿವಾಳಿಯಾಗಿದೆ: ಆರ್. ಅಶೋಕ್

    ನೂರಕ್ಕೆ ನೂರರಷ್ಟು ಕಾಂಗ್ರೆಸ್ ಸರ್ಕಾರ ದಿವಾಳಿಯಾಗಿದೆ: ಆರ್. ಅಶೋಕ್

    ಬೆಂಗಳೂರು: ಉಚಿತ ಯೋಜನೆಗಳಿಗೆ ಹಣ ಕೊಡಲು ಆಗುತ್ತಿಲ್ಲ. ಈ ಸರ್ಕಾರ 100ಕ್ಕೆ ನೂರರಷ್ಟು ದಿವಾಳಿಯಾಗಿದೆ ಎಂದು ವಿರೋಧ ಪಕ್ಷದ ನಾಯಕ ಆರ್.ಅಶೋಕ್ (R Ashok) ಕಿಡಿಕಾರಿದರು.

    ವಿಧಾನಸೌಧದಲ್ಲಿ (Vidhanasoudha) ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಕಾಂಗ್ರೆಸ್ ಸರ್ಕಾರದ ವಿರುದ್ಧ ವಾಗ್ದಾಳಿಗಳನ್ನು ನಡೆಸಿದ್ದಾರೆ. ನಾವು ಪರಿಹಾರ ಕೊಟ್ಟಿದ್ದೆವು, ಅಷ್ಟೇ ಪರಿಹಾರ ಇವರು ಕೊಡಬೇಕಿತ್ತು. ಯಾವ ಗ್ಯಾರಂಟಿ ಸರಿಯಾಗಿ ಈಡೇರಿಸಿಲ್ಲ. ಈ ಸರ್ಕಾರ ಆರ್ಥಿಕವಾಗಿ ಸಂಪೂರ್ಣ ದಿವಾಳಿಯಾಗಿದೆ ಎಂದು ಗರಂ ಆದರು.

    ರಾಜ್ಯದಲ್ಲಿ ಭೀಕರ ಬರಗಾಲ ಇದೆ. ಬರ ಪರಿಹಾರ ಎರಡು ಸಾವಿರ ಕೊಡ್ತೀವಿ ಅಂತಾರೆ. ಆನೆ ಹೊಟ್ಟೆಗೆ ಅರೆಕಾಸಿನ ಮಜ್ಜಿಗೆ ಗಾದೆ ಮಾತಿನಂತೆ ಆಗಿದೆ. ರೈತರಿಗೆ ಬರ ಪರಿಹಾರ ಕೊಡುವಲ್ಲೂ ವಿಫಲವಾಗಿದೆ. ಪಿಎಂ ಮೋದಿ (Narendra Modi) ಭೇಟಿಗೆ ಅವಕಾಶ ಕೊಟ್ಟಿದ್ದಾರೆ, ಅಮಿತ್ ಶಾ (Amitshah) ಭೇಟಿ ಸಹ ಆಗಿದೆ. ಕೂಡಲೇ ರಾಜ್ಯ ಸರ್ಕಾರ ಬರ ಪರಿಹಾರ ಬಿಡುಗಡೆ ಮಾಡಿ. ನಮ್ಮಲ್ಲಿ ಹಸಿರು ಬರ ಇದೆ, ಕೇಂದ್ರ ಸರ್ಕಾರ ಎಲ್ಲ ರಾಜ್ಯಗಳಿಗೂ ಒಂದೇ ಸಲ ಬಿಡುಗಡೆ ಮಾಡುವುದು. ಕರ್ನಾಟಕಕ್ಕೆ ಮೊದಲು ಬಿಡುಗಡೆ ಮಾಡಲ್ಲ. ನಿಮ್ಮ ಪಾಲಿನ ಹಣ ಬಿಡುಗಡೆ ಮಾಡಿ ಎಂದು ಅಶೋಕ್ ಒತ್ತಾಯಿಸಿದರು. ಇದನ್ನೂ ಓದಿ: ಇನ್ಮುಂದೆ KSRTC, BMTC ಬಸ್‌ಗಳಲ್ಲಿ ಮಾಸ್ಕ್ ಕಡ್ಡಾಯ: ರಾಮಲಿಂಗಾ ರೆಡ್ಡಿ

    ರಾಜ್ಯದಲ್ಲಿ ಭಯೋತ್ಪಾದನಾ ಚಟುವಟಿಕೆ ಜಾಸ್ತಿ ಆಗುತ್ತಿದೆ. ರಾಜ್ಯದಲ್ಲಿ ಎನ್‍ಐಎ ತಂಡ ಬಳ್ಳಾರಿ ಸೇರಿದಂತೆ ಹಲವು ಕಡೆ ಶೋಧ ಮಾಡಿದೆ. ಪಿಎಫ್‍ಐ ಸಂಘಟನೆಯನ್ನ ಸರ್ಕಾರ ನಿಷೇಧ ಮಾಡಿದೆ. ಸಿದ್ದರಾಮಯ್ಯ ಈ ಹಿಂದೆ ಸಿಎಂ ಆಗಿದ್ದಾಗ ಇವರ ಮೇಲೆ ಕೇಸ್ ವಾಪಸ್ ಪಡೆದಿದ್ರು. ಕಾಂಗ್ರೆಸ್ ಸರ್ಕಾರ ಬಂದ ಬಳಿಕ ಮತ್ತೆ ಈ ಚಟುವಟಿಕೆಗಳು ಶುರುವಾಗಿವೆ. ಐಸಿಸ್ ಸೇರಿದಂತೆ ಉಗ್ರ ಸಂಘಟನೆಗಳಿಗೆ ಸಪೆÇೀರ್ಟ್ ಮಾಡೋರು ಬೆಳೆಯುತ್ತಿದ್ದಾರೆ ಎಂದು ತಿಳಿಸಿದರು.

    ರಾಜ್ಯದಲ್ಲಿ ಮಹಿಳಾ ವಿವಸ್ತ್ರ ಮಾಡಿದ ಪ್ರಕರಣವನ್ನ ಗಂಭೀರವಾಗಿ ತೆಗೆದುಕೊಳ್ಳಲಿಲ್ಲ. ವಿರೋಧ ಪಕ್ಷಗಳು ಭೇಟಿ ಬಳಿಕ ಪರಿಹಾರ ಘೋಷಣೆ ಮಾಡಿದರು. ಕೋಲಾರ ಜಿಲ್ಲೆಯ ಮಾಲೂರಿನಲ್ಲಿ ವಿದ್ಯಾರ್ಥಿಗಳನ್ನು ಶಾಲೆಯ ಗುಂಡಿ ಕ್ಲೀನ್ ಮಾಡಲು ಇಳಿಸಿದ್ದು ಸರಿಯಲ್ಲ. ಬಿಜೆಪಿ ಕಾರ್ಯಕರ್ತರ ಮೇಲೆ ಹಲ್ಲೆ ಆಗಿದೆ. ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹಾಳಾಗಿದೆ ಎಂದು ಅಶೋಕ್ ಕಿಡಿಕಾರಿದರು.

  • ಪಿಓಕೆ ಸಮಸ್ಯೆ ಕುರಿತ ಅಮಿತ್ ಶಾ ಹೇಳಿಕೆಗೆ ರಾಗಾ ಆಕ್ಷೇಪ

    ಪಿಓಕೆ ಸಮಸ್ಯೆ ಕುರಿತ ಅಮಿತ್ ಶಾ ಹೇಳಿಕೆಗೆ ರಾಗಾ ಆಕ್ಷೇಪ

    ನವದೆಹಲಿ: ನೆಹರೂ ಅವರ ಪ್ರಮಾದವೇ ಕಾಶ್ಮೀರ-ಪಿಓಕೆ ಸಮಸ್ಯೆಯ ಮೂಲ ಬೇರು ಅಂತ ಲೋಕಸಭೆ (Loksabha), ರಾಜ್ಯಸಭೆಯಲ್ಲಿ (Rajya Sabha) ಕೇಂದ್ರ ಸಚಿವ ಅಮಿತ್ ಶಾ ಗುಡುಗಿದ್ದರು. ಅಮಿತ್ ಶಾ ಹೇಳಿಕೆಗೆ ರಾಹುಲ್ ಗಾಂಧಿ (Rahul Gandhi) ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದಾರೆ.

    ಸಂಸತ್ ಭವನದ ಬಳಿ ವಾಗ್ದಾಳಿ ನಡೆಸಿದ ಅವರು, ಪಂಡಿತ್ ನೆಹರೂ ಅವರು ಭಾರತಕ್ಕಾಗಿ ಪ್ರಾಣ ಅರ್ಪಿಸಿದ್ದಾರೆ. ಹಲವಾರು ವರ್ಷಗಳ ಕಾಲ ಜೈಲಿನಲ್ಲಿದ್ದರು. ಅಮಿತ್ ಶಾಗೆ (Amitshah) ಇತಿಹಾಸದ ಅರಿವೇ ಇಲ್ಲ. ಅವರು ಇತಿಹಾಸ ತಿಳಿದುಕೊಳ್ತಾರೆ ಅಂತ ನಾನು ನಿರೀಕ್ಷಿಸಲ್ಲ. ಯಾಕೆಂದರೆ ಅಮಿತ್ ಶಾಗೆ ಇತಿಹಾಸವನ್ನು ತಿರುಚೋದೇ ಅವರ ಕಾಯಕ ಎಂದು ಕಿಡಿಕಾರಿದ್ದಾರೆ.

    ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಕೂಡ ಅಮಿತ್ ಶಾ ಹೇಳಿಕೆಗೆ ವ್ಯಂಗ್ಯವಾಡಿದ್ದಾರೆ. ಅಮಿತ್ ಶಾ ಅವರಷ್ಟು ನೆಹರೂ ಅವರು ಜ್ಞಾನಿಯಾಗಿರಲಿಲ್ಲ ಅನ್ನಿಸುತ್ತೆ. ನೀವು ಏನೇ ಮಾಡಿದರೂ ಅದು ಸರಿಯೇ ಬಿಡಿ. ಹಾಗಾದರೆ ನೀವು ಪಿಓಕೆಯನ್ನು ಯಾವಾಗ ವಾಪಸ್ ತಗೋತೀರಾ..? ಅಂತ ಅಧೀರ್ ರಂಜನ್ ಪ್ರಶ್ನಿಸಿದ್ದಾರೆ. ಇದನ್ನೂ ಓದಿ: Article 370 Verdict – ಇಂದಿನ ತೀರ್ಪು ಕೇವಲ ತೀರ್ಪಲ್ಲ, ಭರವಸೆಯ ದಾರಿದೀಪ: ಮೋದಿ ಸಂತಸ

    ಕಾಶ್ಮೀರ ಮಾಜಿ ಸಿಎಂ ಫಾರೂಕ್ ಅಬ್ದುಲ್ಲಾ ಕೂಡ ಅಮಿತ್ ಶಾ ಟೀಕೆಗೆ ಖಂಡಿಸಿದ್ದಾರೆ. ಜಮ್ಮು-ಕಾಶ್ಮೀರ ನರಕಕ್ಕೆ ಹೋಗಲಿ, ಬಿಜೆಪಿಗರು ಜನತೆಗೆ ಮೋಸ ಮಾಡಿದರು. ನೆಹರೂ ಅಂದರೆ ಯಾಕೆ ಬಿಜೆಪಿಗರು ಇಷ್ಟೊಂದು ವಿಷಕಾರುತ್ತಿದ್ದಾರೆ ಅಂತ ನನಗೆ ಗೊತ್ತಾಗ್ತಿಲ್ಲ. ನೆಹರೂ ಒಬ್ಬರೇ ಕಾರಣ ಅಲ್ಲ. ಆರ್ಟಿಕಲ್ 370 ಜಾರಿಗೆ ತರುವಾಗ ಸರ್ದಾರ್ ಪಟೇಲ್ ಇಲ್ಲಿದ್ದರು. ನೆಹರೂ ಅಮೆರಿಕದಲ್ಲಿದ್ದರು ಅಂದಿದ್ದಾರೆ.

  • ನನ್ನ ಸೋಲಿಸೋಕೆ ಇದು ಗುಜರಾತ್ ಅಲ್ಲ, ಇದು ಕರ್ನಾಟಕ: ಜಗದೀಶ್ ಶೆಟ್ಟರ್ ಗುಡುಗು

    ನನ್ನ ಸೋಲಿಸೋಕೆ ಇದು ಗುಜರಾತ್ ಅಲ್ಲ, ಇದು ಕರ್ನಾಟಕ: ಜಗದೀಶ್ ಶೆಟ್ಟರ್ ಗುಡುಗು

    ಕೊಪ್ಪಳ: ನನ್ನ ಸೋಲಿಸೋಕೆ ಇದು ಗುಜರಾತ್ ಅಲ್ಲ, ಇದು ಕರ್ನಾಟಕ ಎಂದು ಅಮಿತ್ ಶಾ ಹೇಳಿಕೆಗೆ ಮಾಜಿ ಸಿಎಂ ಜಗದೀಶ್ ಶೆಟ್ಟರ್ (Jagadeesh Shettar) ತೀರುಗೇಟು ನೀಡಿದ್ದಾರೆ.

    ಕೊಪ್ಪಳ(Koppala) ದ ಕಾಂಗ್ರೆಸ್ ಪ್ರಚಾರ ಸಭೆಯಲ್ಲಿ ಮಾತನಾಡುತ್ತಾ ಶೆಟ್ಟರ್, ಸವದಿ 50 ಸಾವಿರ ಮತಗಳ ಅಂತರದಿಂದ ಸೋಲ್ತಾರೆ ಎನ್ನೋ ಅಮಿತ್ ಶಾ (Amitshah) ಹೇಳಿಕೆಗೆ ತೀರುಗೇಟು ನೀಡಿದರು. ಹುಬ್ಬಳ್ಳಿಯ ಜನರ ಹೃದಯದಲ್ಲಿದ್ದೇನೆ. ಹುಬ್ಬಳ್ಳಿ (Hubballi) ಜನ ಏನು ಅಂತ ನಂಗೆ ಗೊತ್ತಿದೆ. ನಾನೇನು ಎನ್ನೋದು ನನ್ನ ಜನತೆಗೆ ಗೊತ್ತಿದೆ. ನಾನು ಗೆದ್ದು ಬರುತ್ತೇನೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

    ನನ್ನನ್ನ ಕಾಂಗ್ರೆಸ್ ಸೇರ್ಪಡೆಯಾಗುವಂತೆ ಮಾಡಿದ್ದೇ ಬಿಜೆಪಿ. ರಾಜ್ಯದ ಕೆಲವೇ ಕೆಲವು ಜನರ ಕಪಿಮುಷ್ಠಿಯಲ್ಲಿ ಬಿಜೆಪಿ ಇದೆ. ನಂಗೆ ಎಲ್ಲಾ ಕೊಟ್ಟಿದ್ದೀವಿ ಅಂತಾರೆ. ನಮ್ಮ ಕುಟುಂಬ ಬಿಜೆಪಿಗೆ ಏನು ಮಾಡಿದೆ ಅನ್ನೋದು ಎಲ್ಲರಿಗೂ ಗೊತ್ತಿದೆ. ಉತ್ತರ ಕರ್ನಾಟಕದಲ್ಲಿ ಬಿಜೆಪಿ (BJP) ಕಟ್ಟೋಕೆ ಶೆಟ್ಟರ್ ಶ್ರಮವಿದೆ. ನಂಗೆ ಒಬ್ಬ ಎಂಎಲ್‍ಎ ರೀತಿ ಪತ್ರ ಬರೀರಿ ಅಂತಾರೆ. ನಾನು ರಾಜಕೀಯಕ್ಕೆ ಬಂದಾಗ ಧರ್ಮೇಂದ್ರ ಇನ್ನು ರಾಜಕೀಯಕ್ಕೆ ಬಂದಿರಲಿಲ್ಲ. ಅಂತವರು ನಂಗೆ ಎಲೆಕ್ಷನ್ ನಿಲ್ಲಬೇಡ ಅಂತಾರೆ ಎಂದು ಮತ್ತೊಮ್ಮೆ ಬಿಜೆಪಿ ನಾಯಕರ ವಿರುದ್ಧ ವಾಗ್ದಾಳಿ ನಡೆಸಿದರು.

    ರಾಹುಲ್ ಗಾಂಧಿ (Rahul Gandhi) ನಂಗೆ ಒಂದ್ ಮಾತು ಹೇಳಿದ್ರು. ಶೆಟ್ರೆ ನೀವು ಭ್ರಷ್ಟಾಚಾರಿ ಅಲ್ಲ ಅದಿಕ್ಕೆ ನಿಮಗೆ ಟಿಕೆಟ್ ಕೊಟ್ಟಿಲ್ಲ ಅಂದ್ರು. ನನ್ನ ಸ್ವಾಭಿಮಾನಕ್ಕೆ ಧಕ್ಕೆ ಬಂತು. ಅಷ್ಟೇ ಏಕೆ ಆರು ಬಾರಿ ಗೆಲ್ಲಿಸಿದ ನನ್ನ ಕ್ಷೇತ್ರದ ಜನರ ಸ್ವಾಭಿಮಾನಕ್ಕೆ ಧಕ್ಕೆಯಾಯ್ತು. ಅದಕ್ಕೆ ನಾನು ಸಿಡಿದೆದ್ದೆ, ಸ್ವಾಭಿಮಾನಕ್ಕೆ ಧಕ್ಕೆಯಾದ್ರೆ ಇದ್ದರೂ ಸತ್ತಂಗೆ. ಅದು ಗುಲಾಮಗಿರಿಯ ಸಂಕೇತ ಎಂದು ಸಿಡಿಮಿಡಿಗೊಂಡರು. ಇದನ್ನೂ ಓದಿ: ಕಾಂಗ್ರೆಸ್‌ ಅಧಿಕಾರಕ್ಕೆ ಬಂದ್ರೆ, ಬಿಜೆಪಿ ಸರ್ಕಾರ ಲೂಟಿ ಮಾಡಿರುವ ಹಣವನ್ನ ಜನರಿಗೆ ವಾಪಸ್‌ ಕೊಡ್ತೀವಿ – ರಾಗಾ

    ಮತ್ತೆ ಬಿಜೆಪಿಯಿಂದ ಗೆದ್ರೆ ನಂಬರ್ 1 ಸ್ಥಾನಕ್ಕೆ ಬರ್ತೀನಿ ಅನ್ನೋ ಆತಂಕ ಕೆಲವರಲ್ಲಿ ಶುರುವಾಯಿತು. ಹೀಗಾಗೇ ನನ್ನನ್ನ ಹೊರಗಡೆ ಕಳಿಸೋಕೆ ಸಂಚು ರೂಪಿಸಲಾಯಿತು. ಬಿಎಸ್ ವೈ ಮನೆಗೆ ಹೊಂಟ್ರು, ಶೆಟ್ಟರ್ ನ ಆಚೆ ಹಾಕಿದ್ರೆ ಇಡೀ ಪಾರ್ಟಿ ತಮ್ಮ ಕೈಯಲ್ಲೂ ಬರುತ್ತೆ ಎಂಬ ಹಿಡನ್ ಅಜೆಂಡಾವಿತ್ತು. ನಂಗೆ ಯಾವ ಅಧಿಕಾರದ ಆಮಿಷವಿಲ್ಲ. ನನ್ನನ್ನ ಕಾಂಗ್ರೆಸ್ ಗೌರವಯುತವಾಗಿ ನಡೆಸಿ ಕೊಂಡರೆ ಸಾಕು ಎಂದಿದ್ದೀನಿ. ಕಾಂಗ್ರೆಸ್ ಅದನ್ನ ಮಾಡುತ್ತಿದೆ ಎಂದರು.

    ಈ ಬಾರಿ ರಾಜ್ಯದಲ್ಲಿ ಕಾಂಗ್ರೆಸ್ 140ಕ್ಕೂ ಸೀಟ್‍ನಿಂದ ಗೆಲ್ಲುತ್ತೆ. ಜನ ನಂಗೆ ಅನೇಕ ಜನ ಹೇಳ್ತಿದ್ದಾರೆ. ಶೆಟ್ಟರ್ ನೀವು ಗುಲಾಮಗಿರಿಗೆ ಸೆಡ್ಡು ಹೊಡೆದು ಬಂದಿದ್ದೀರಿ ನಿಮಗೆ ಶಹಬ್ಬಾಶ್ ಅಂತಿದ್ದಾರೆ. ಅಷ್ಟೇ ಸಾಕು ನನ್ನ 30 ವರ್ಷದ ರಾಜಕೀಯ ಜೀವನಕ್ಕೆ. ಶೆಟ್ಟರ್ ಸೋಲಿಸೋಕೆ ಘಟಾನುಘಟಿಗಳು ನನ್ನ ಸೋಲಿಸೋಕೆ ಚಾಲೆಂಜ್ ಮಾಡಿದ್ದಾರೆ. ಅದನ್ನ ಮೆಟ್ಟಿನಿಂತು ಗೆದ್ದು ಬರುತ್ತೇನೆ ಎಂದು ಅಮಿತ್ ಶಾ ಚಾಲೆಂಜ್ ಗೆ ಟಾಂಗ್ ನೀಡಿದರು.

    ಕುಟುಂಬ ರಾಜಕೀಯಿಲ್ಲ ಅಂತಾರೆ. ನಿಮ್ಮ ಸೊಸೆಗೆ ಟಿಕೆಟ್ ಕೊಡ್ತೀನಿ, ನಿಮ್ಮ ಪತ್ನಿಗೆ ಟಿಕೆಟ್ ಕೊಡ್ತೀನಿ ಎನ್ನೋದು ಯಾಕೆ..?. ಲಿಂಗಾಯತರಿಗೆ ಅವಮಾನ ಮಾಡಿದ್ದಾರೆ. ಬಿಜೆಪಿಯವರಿಗೆ ಯಾವುದೇ ನೈತಿಕತೆ ಇಲ್ಲ. ಚಿತ್ತಾಪುರದಲ್ಲಿ 80 ಕ್ರಿಮಿನಲ್ ಕೇಸ್ ಇರೋ ರೌಡಿ ಶೀಟರ್ ಗೆ ಟಿಕೆಟ್ ನೀಡಿದ್ದಾರೆ. ಬಿಜೆಪಿ ಪ್ರಣಾಳಿಕೆಗೆ ಹೆಚ್ಚು ಮಹತ್ವ ಕೊಡಬೇಕಾಗಿಲ್ಲ. ಈಗಾಗಲೇ ಕಾಂಗ್ರೆಸ್ ಐದು ಗ್ಯಾರೆಂಟಿ ನೀಡಿದೆ. ಅದು ಜನಮಾನಸದಲ್ಲಿ ನಾಟಿದೆ. ಅದಕ್ಕಿಂತ ಹೊಸ ಯೋಜನೆ ಬಿಜೆಪಿಯಲಿಲ್ಲ. ನಂಗೆ ಮಾಜಿ ಸಿಎಂ ಎನ್ನೋ ಹಣೆ ಪಟ್ಟಿ ಬಂದಿದೆ. ಮತ್ತೆ ನಾನು ಅಧಿಕಾರದ ಆಸೆಯಿಲ್ಲ ಎಂದರು.

  • ಅಮಿತ್ ಶಾ ಸೂಚನೆಯನ್ನೇ ಧಿಕ್ಕರಿಸಿದ ಏಕನಾಥ ಶಿಂಧೆ

    ಅಮಿತ್ ಶಾ ಸೂಚನೆಯನ್ನೇ ಧಿಕ್ಕರಿಸಿದ ಏಕನಾಥ ಶಿಂಧೆ

    ಬೆಳಗಾವಿ: ಕೇಂದ್ರ ಸಚಿವ ಅಮಿತ್ ಶಾ (Amitshah) ಸೂಚನೆಯನ್ನೇ ಮಹಾರಾಷ್ಟ್ರ ಮುಖ್ಯಮಂತ್ರಿ ಏಕನಾಥ ಶಿಂಧೆ (Ekanath Shindhe) ಧಿಕ್ಕರಿಸಿದ್ದು 19 ವರ್ಷಗಳಿಂದ ಸುಪ್ರೀಂಕೋರ್ಟ್ (Supreme Court) ನಲ್ಲಿರುವ ಕರ್ನಾಟಕ-ಮಹಾರಾಷ್ಟ್ರ ಗಡಿ (Karnataka- Maharastra Border) ವಿವಾದ ಇತ್ಯರ್ಥವಾಗುವವರೆಗೆ ಕೆಣಕದಂತೆ ಕೇದ್ರ ಗೃಹ ಸಚಿವ ಅಮಿತ್ ಶಾ ಸೂಚನೆ ನೀಡಿದ್ದರು. ಆದರೆ ಇದೀಗ ಅವರ ಮಾತನ್ನೇ ಮಹಾರಾಷ್ಟ್ರ ಸಿಎಂ ಧಿಕ್ಕರಿಸಿದ್ದಾರೆ.

    ಕರ್ನಾಟಕ-ಮಹಾರಾಷ್ಟ್ರ ಗಡಿವಿವಾದ ಇತ್ಯರ್ಥವಾಗುವವರೆಗೆ ಗಡಿವಿವಾದ ಕೆಣಕದಂತೆ ಅಮಿತ್ ಶಾ ಸೂಚನೆ ನೀಡಿದ್ದರು. ಅಷ್ಟೇ ಅಲ್ಲದೇ ಪರಸ್ಪರರು ಪ್ರದೇಶಗಳ ಬಗ್ಗೆ ಬೇಡಿಕೆ ಇಡದಂತೆಯೂ ತಿಳಿಸಿದ್ದರು. ನಾಲ್ಕು ತಿಂಗಳ ಹಿಂದೆಯೇ ದೆಹಲಿಯ ತಮ್ಮ ನಿವಾಸದಲ್ಲಿ ಸಭೆ ನಡೆಸಿ ಗಡಿಯಲ್ಲಿ ಶಾಂತತೆ ಕಾಪಾಡುವಂತೆ ಸೂಚನೆ ಬಸವರಾಜ್ ಬೊಮ್ಮಾಯಿ, ಮಹಾರಾಷ್ಟ್ರ ಸಿಎಂ ಏಕನಾಥ ಶಿಂಧೆಗೆ ಅಮಿತ್ ಶಾ ಸೂಚಿಸಿದ್ದರು. ಇದನ್ನೂ ಓದಿ: ಭವಾನಿಗೆ ಟಿಕೆಟ್ ಮಿಸ್ ಆದ್ರೆ ಕೆಆರ್ ಪೇಟೆ ಮೇಲೂ ಪ್ರಭಾವ?

    ಅಮಿತ್ ಶಾ ಮಾತಿಗೆ ಒಪ್ಪಿ ಕರ್ನಾಟಕ ಸರ್ಕಾರ ಸುಮ್ಮನಿದ್ದರೂ ಮಹಾರಾಷ್ಟ್ರದಿಂದ ಪ್ರಚೋದನಾತ್ಮಕ ನಿರ್ಣಯ ಕೈಗೊಳ್ಳಲಾಗಿದೆ. ತನ್ನ ಯೋಜನೆಯನ್ನು ಕರ್ನಾಟಕದಲ್ಲಿ ಜಾರಿಗೆಗೆ ಮುಂದಾಗಿರುವ ಏಕನಾಥ ಶಿಂಧೆ ಒಕ್ಕೂಟ ವ್ಯವಸ್ಥೆ ಧಿಕ್ಕರಿಸುತ್ತಿರುವ ಶಿಂಧೆಗೆ ಪ್ರತ್ಯುತ್ತರವನ್ನ ಕರ್ನಾಟಕ ಸರ್ಕಾರ ನೀಡಬೇಕಿದೆ.