ಚಿಕ್ಕಮಗಳೂರು: ಜಿಲ್ಲೆಯ ಬೀರೂರಿನ ಅಕ್ಕಮಹಾದೇವಿ ಮಹಿಳಾ ಸಮಾಜದ (Akkamahadevi Mahila Samaja) ಅಮೃತ ಮಹೋತ್ಸವಕ್ಕೆ ಇಂದು (ಶುಕ್ರವಾರ) ಅದ್ಧೂರಿ ಚಾಲನೆ ಸಿಕ್ಕಿದೆ. ಅಕ್ಕಮಹಾದೇವಿ ಹಿರಿಯ ಪ್ರಾಥಮಿಕ ಶಾಲಾ ಆವರಣದಲ್ಲಿ 75ನೇ ವರ್ಷದ ಮಹೋತ್ಸವ ಸಮಾರಂಭ ನಡೆಯುತ್ತಿದೆ.
ಶನಿವಾರ (ಫೆ.24) ಸಂಜೆ 6 ಗಂಟೆಗೆ ಬೀರೂರಿನ ಶಾಲಾ ಸಲಹಾ ಸಮಿತಿ ಅಧ್ಯಕ್ಷರಾದ ವಿಶಾಲಾ ಷಡಾಕ್ಷರಪ್ಪ ಅವರು 75ನೇ ವರ್ಷದ ಮಹೋತ್ಸವದ ಸಭಾ ಕಾರ್ಯಕ್ರಮವನ್ನು ಉದ್ಘಾಟಿಸಲಿದ್ದಾರೆ. ಅಮೃತ ಮಹೋತ್ಸವದಲ್ಲಿ ಅಕ್ಕಮಹಾದೇವಿ ಮಹಿಳಾ ಸಮಾಜದ ಅಧ್ಯಕ್ಷೆ ಶೈಲಜಾ ಸದಾಶಿವನ್, ಕಾರ್ಯದರ್ಶಿ ಕೋಡಿಹಳ್ಳಿ ಉಷಾಸ್ವಾಮಿ, ಖಜಾಂಚಿ ಕಲ್ಪನ ಡಿ.ಪತ್ರೆ, ದಾವಣಗೆರೆಯ ಕದಳಿ ವೇದಿಕೆ ಜಿಲ್ಲಾಧ್ಯಕ್ಷೆ ಗಾಯತ್ರಿ ವಸ್ತ್ರದ್ ಇತರರು ಮುಖ್ಯ ಅತಿಥಿಗಳಾಗಿ ಪಾಲ್ಗೊಳ್ಳಲಿದ್ದಾರೆ.
ಬೀರೂರಿನ ಹಿರಿಯ ವಕೀಲರು ಮತ್ತು ನೋಟರಿ ಎಂ.ಹೆಚ್.ನಿರ್ಮಲಾ ಅವರನ್ನು ಸಮಾರಂಭದಲ್ಲಿ ಸನ್ಮಾನಿಸಲಾಗುವುದು. ಅಕ್ಕಮಹಾದೇವಿ ಮಹಿಳಾ ಸಮಾಜದ ಸದಸ್ಯೆ ಆಶಾ ಶಶಿಧರ್ ಅವರಿಂದ ಬಹುಮಾನ ವಿತರಣೆ ಕಾರ್ಯಕ್ರಮ ಇರಲಿದೆ. ಇದೇ ವೇಳೆ ‘ಶರಣ ಸಂಸ್ಕೃತಿ ಸಂಗಮ’ ಸಾಂಸ್ಕೃತಿಕ ಕಾರ್ಯಕ್ರಮ ಕೂಡ ಜರುಗಲಿದೆ. ಇದನ್ನೂ ಓದಿ: ಅಯೋಧ್ಯೆ ಯಾತ್ರಿಕರ ರೈಲು ಗಲಾಟೆ ಕಾಂಗ್ರೆಸ್ ತುಷ್ಟೀಕರಣ ರಾಜಕಾರಣದ ಫಲ: ಪ್ರಹ್ಲಾದ್ ಜೋಶಿ
ಚಿಕ್ಕಬಳ್ಳಾಪುರ: 75ನೇ ಸ್ವಾತಂತ್ರ್ಯ ದಿನಾಚರಣೆ ಅಮೃತ ಮಹೋತ್ಸವ ಅಂಗವಾಗಿ ದೇಶಾದ್ಯಂತ ಹರ್ ಘರ್ ತಿರಂಗಾ ಅಭಿಯಾನಕ್ಕೆ ಕರೆ ನೀಡಲಾಗಿದೆ. ಈ ಹಿನ್ನಲೆಯಲ್ಲಿ ಜನರಲ್ಲಿ ಜಾಗೃತಿ ಹಾಗೂ ಪ್ರೇರೇಪಣೆ ಮೂಡಿಸುವ ಸಲುವಾಗಿ ಇಂದು ಚಿಕ್ಕಬಳ್ಳಾಪುರ ನಗರದಲ್ಲಿ 2,500 ಅಡಿ ಉದ್ದದ ತಿರಂಗಾ ಯಾತ್ರೆ ನಡೆಸಲಾಯಿತು.
ಚಿಕ್ಕಬಳ್ಳಾಪುರ ಜಿಲ್ಲಾಡಳಿತ ವತಿಯಿಂದ ಆರೋಗ್ಯ ಸಚಿವ ಡಾ.ಕೆ ಸುಧಾಕರ್ ನೇತೃತ್ವದಲ್ಲಿ 2,500 ಅಡಿ ಉದ್ದದ ತ್ರಿವರ್ಣ ಧ್ವಜದ ವಾಕಥಾನ್ ನಡೆಸಲಾಗಿಯಿತು. ನಗರದ ಎಂಜಿ ರಸ್ತೆಯ ಜೈ ಭೀಮ್ ವಿದ್ಯಾರ್ಥಿನಿಲಯದಿಂದ ಬಿಬಿರಸ್ತೆಯ ಮೂಲಕ ಸಾಗಿ ಒಕ್ಕಲಿಗರ ಕಲ್ಯಾಣಮಂಟಪದ ಬಳಿ ವಾಕಥಾನ್ ಅಂತ್ಯವಾಯಿತು. ಈ ವಾಕಥಾನ್ನಲ್ಲಿ ಸಾವಿರಾರು ಮಂದಿ ವಿದ್ಯಾರ್ಥಿಗಳು ಭಾಗವಹಿಸಿದ್ದರು. ಇದನ್ನೂ ಓದಿ: ಊಟ ನೀಡೋ ವಿಚಾರಕ್ಕೆ ಜಗಳ – ಬಾಮೈದನಿಂದಲೇ ಯೋಧನ ಕೊಲೆ
ಆಗಸ್ಟ್ 13 ರಿಂದ 15 ರವರೆಗೆ ದೇಶದಲ್ಲಿ ಹರ್ ಘರ್ ತಿರಂಗಾ ಅಭಿಯಾನ ನಡೆಯಲಿದ್ದು, ಚಿಕ್ಕಬಳ್ಳಾಪುರ ಜಿಲ್ಲಾಡಳಿತ ಇಂದು ಆಯೋಜಿಸಿದ್ದ ವಾಕಥಾನ್ ಇಡೀ ನಗರದಲ್ಲಿ ಸಂಚಲನವನ್ನೇ ಮೂಡಿಸಿತ್ತು. ಸುಮಾರು 2,500 ಅಡಿಗಳ ಉದ್ದದ ರಾಷ್ಟ್ರಧ್ವಜದೊಂದಿಗೆ ಹೆಜ್ಜೆ ಹಾಕಿದ ಸಾವಿರಾರು ಶಾಲಾ-ಕಾಲೇಜ್ ವಿದ್ಯಾರ್ಥಿಗಳೊಂದಿಗೆ ಬೆಳ್ಳಂ ಬೆಳಗ್ಗೆ ಆರೋಗ್ಯ ಸಚಿವರು ಹೆಜ್ಜೆ ಹಾಕಿ ಹುರುಪು ತುಂಬಿದರು. ಹೆಜ್ಜೆ ಹೆಜ್ಜೆಗೂ ಭಾರತ್ ಮಾತಾಕಿ ಜೈ ಉದ್ಘೋಷ ಅನುಕರಣಿಸುತ್ತಿದ್ದ ಮೆರವಣಿಗೆಯಲ್ಲಿ ಎಲ್ಲರ ಕೈಯಲ್ಲೂ ತ್ರಿವರ್ಣ ಧ್ವಜಗಳು ರಾರಾಜಿಸುತ್ತಿದ್ದವು. ಬ್ಯಾಂಡ್ ಸೆಟ್ಗಳು, ಡಿಜೆ ಶಬ್ದದ ಅಬ್ಬರದ ನಡುವೆ ರಾಷ್ಟ್ರಪ್ರೇಮ ಉಕ್ಕೇರಿಸುವ ಘೋಷಣೆಗಳು ಮೊಳಗಿದವು. ಇದನ್ನೂ ಓದಿ: ಹರ್ ಘರ್ ತಿರಂಗಾ ಅಭಿಯಾನ – ಅಂಚೆ ಇಲಾಖೆಯಿಂದ 10 ದಿನಗಳಲ್ಲಿ 1 ಕೋಟಿ ಧ್ವಜ ಮಾರಾಟ
ರಸ್ತೆಯುದ್ದಕ್ಕೂ ತ್ರಿವರ್ಣ ಧ್ವಜಗಳ ಹಾರಾಟ ಯುವ ವಿದ್ಯಾರ್ಥಿಗಳ ಜೈಕಾರದ ಅರ್ಭಟ ಕೇಳಿಬಂತು. ನಾಗರಿಕರು, ಅಧಿಕಾರಿಗಳು, ಶಿಕ್ಷಕರು ವಾಕಥಾನ್ನಲ್ಲಿ ಭಾಗವಹಿಸಿ ತಿರಂಗಾ ಅಭಿಯಾನ ಜಾಗೃತಿ ನಡಿಗೆಗೆ ಮೆರುಗು ತುಂಬಿದರು.
Live Tv
[brid partner=56869869 player=32851 video=960834 autoplay=true]
ಬೆಂಗಳೂರು: ಭಾರತದ ಸ್ವಾತಂತ್ರ್ಯಕ್ಕಾಗಿ ಸಾವಿರಾರು ಜನರ ತ್ಯಾಗ, ಬಲಿದಾನಗಳು ನಡೆದಿವೆ. ಆ ತ್ಯಾಗ, ಬಲಿದಾನ ಮಾಡಿರುವ ಮಹನೀಯರನ್ನು ನೆನೆಯಬೇಕು ಎಂಬ ಉದ್ದೇಶದಿಂದ ಪ್ರಧಾನಿ ನರೇಂದ್ರ ಮೋದಿ ಅವರು ದೇಶಾದ್ಯಂತ ಸ್ವಾತಂತ್ರ್ಯೋತ್ಸವದ ಅಮೃತ ಮಹೋತ್ಸವ ಆಚರಣೆಗೆ ಕರೆ ನೀಡಿದ್ದಾರೆ ಎಂದು ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್.ಅಶ್ವಥ್ನಾರಾಯಣ ಹೇಳಿದರು.
ಅಜಾದಿ ಕಾ ಅಮೃತ ಮಹೋತ್ಸವ ನಿಮಿತ್ತ ಬೆಂಗಳೂರು ವಿಶ್ವವಿದ್ಯಾಲಯದಲ್ಲಿ ವಿದ್ಯುನ್ಮಾನ ಮಾಧ್ಯಮ ವಿಭಾಗ ಮತ್ತು ದಿಶಾ ಭಾರತ ಸಹಯೋಗದಲ್ಲಿ ಹಮ್ಮಿಕೊಂಡಿದ್ದ ರಾಜ್ಯಮಟ್ಟದ ವಿಚಾರ ಸಂಕಿರಣ ಉದ್ಘಾಟನೆ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಕಳೆದ 75 ವರ್ಷಗಳಲ್ಲಿ ಭಾರತವು ವಿವಿಧತೆಯಲ್ಲಿ ಏಕತೆ ಸಾಧಿಸಿದೆ. ಅದಕ್ಕಾಗಿಯೇ ಪ್ರಧಾನಿ ಮೋದಿ ಅವರು ಇದೊಂದು ಅಮೃತ ಕಾಲ ಎಂದು ಘೋಷಿಸಿದ್ದಾರೆ ಎಂದರು.
ನಮ್ಮ ರಾಜ್ಯದಲ್ಲಿ ಆರೂವರೆ ಕೋಟಿ ಜನಸಂಖ್ಯೆ ಇದ್ದರೂ, ಗುಣಮಟ್ಟದ ಶಿಕ್ಷಣದ ಕೊರತೆಯಿಂದಾಗಿ ಟ್ಯಾಲೆಂಟ್ಗೂ ಕೊರತೆ ಉಂಟಾಗಿದೆ. ತರಗತಿಯ ಕಲಿಕೆಯಿಂದ ಹೊರಬಂದರೆ ಮಾತ್ರ ಗುಣಮಟ್ಟದ ಶಿಕ್ಷಣ ಪಡೆಯಲು ಸಾಧ್ಯ. ಆ ನಿಟ್ಟಿನಲ್ಲಿ ದೇಶದಲ್ಲೇ ಪ್ರಪ್ರಥಮ ಬಾರಿಗೆ ಕರ್ನಾಟಕದಲ್ಲಿ ಎನ್ಇಪಿ ಜಾರಿಗೆ ತರಲಾಗಿದೆ. ಈ ನಾಡಿನಲ್ಲಿ ಪ್ರತಿಯೊಬ್ಬ ಯುವಕರೂ ಕೌಶಲ ಹೊಂದಬೇಕು. ಆ ಮೂಲಕ ಪ್ರತಿಯೊಬ್ಬರೂ ಉದ್ಯೋಗ ಪಡೆಯುವಂತಾಗಬೇಕು ಎಂಬ ನಿಟ್ಟಿನಲ್ಲಿ ನಮ್ಮ ಸರ್ಕಾರ ಕೆಲಸ ಮಾಡುತ್ತಿದೆ ಎಂದು ಹೇಳಿದರು. ಇದನ್ನೂ ಓದಿ: ಇಡಿ, ಸಿಬಿಐಯವರು ಬರ್ತಾರೆ ಅಂತ ನಿದ್ದೆ ಬರ್ತಿಲ್ಲ, ಟೆನ್ಶನ್ ಹೆಚ್ಚಾಗಿದೆ: ಕೆಜಿಎಫ್ ಬಾಬು
ಕರ್ನಾಟಕ ಸಾಹಿತ್ಯ ಅಕಾಡೆಮಿ ಅಧ್ಯಕ್ಷ ಡಾ.ಬಿ.ವಿ.ವಸಂತ್ಕುಮಾರ್ ಮಾತನಾಡಿ, ಮನೆಗಿಂತ ದೊಡ್ಡ ವಿಶ್ವವಿದ್ಯಾಲಯ ಮತ್ತೊಂದಿಲ್ಲ. ಮನೆಯ ಸಂಸ್ಕೃತಿಯಿಂದ ಕಲಿಯದ ಪಾಠ ಬೇರೆ ಎಲ್ಲಿಂದಲೂ ಕಲಿಯಲು ಸಾಧ್ಯವಿಲ್ಲ. ದಾನ, ಧರ್ಮದ ಬಗ್ಗೆ ಯಾವ ವಿಶ್ವವಿದ್ಯಾಲಯದಲ್ಲಿ ಕಲಿಸುವುದಿಲ್ಲ. ಆದರೆ ನಮ್ಮ ಹಳ್ಳಿಗಳಲ್ಲಿರುವ ರೈತರು ಬೆಳೆ ಬಂದಾಗ ಬಡವರಿಗೆ, ದರಿದ್ರರಿಗೆ ದಾನ ಮಾಡಿ ನಂತರ ಮನೆಗೆ ತೆಗೆದುಕೊಂಡು ಹೋಗುತ್ತಿದ್ದರು. ಪರಂಪರಾಗತದಿಂದ ಇಂತಹ ಗುಣವನ್ನು ಕಲಿಸಿದ್ದು ಭಾರತ ಎಂದು ಹೇಳಿದರು.
ನವದೆಹಲಿ: ಸ್ವಾತಂತ್ರ್ಯವೆಂಬುದು ಎಲ್ಲರಿಗೂ ಸಿಗದಿದ್ದಾಗ ಅದು ಎಂತಹ ಸ್ವಾತಂತ್ರ್ಯ? ದೇಶದಲ್ಲಿ ದ್ವೇಷದ ವಿಷವನ್ನು ಬಿತ್ತುತ್ತಿರುವಾಗ ಅಮೃತ ಮಹೋತ್ಸವ ಎಂಬುದಕ್ಕೆ ಅರ್ಥವಿದೆಯೇ? ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ( rahul gandhi) ಮಾರ್ಮಿಕವಾಗಿ ಪ್ರಶ್ನಿಸಿದ್ದಾರೆ.
ಅಸ್ಸಾಂನ ದರಂಗ್ ಜಿಲ್ಲೆಯಲ್ಲಿ ಸರ್ಕಾರಿ ಜಮೀನು ಒತ್ತುವರಿ ಸಂದರ್ಭ ಪೊಲೀಸರು ಮತ್ತು ಭೂಮಿ ಕಬಳಿಸಿದ್ದಾರೆ ಎನ್ನಲಾಗಿರುವ ಆರೋಪಿಗಳ ನಡುವಿನ ಸಂಘರ್ಷದಿಂದ ಉದ್ಭವಿಸಿದ ಹಿಂಸಾಚಾರವನ್ನು ಗುರಿಯಾಗಿಸಿಕೊಂಡು ರಾಹುಲ್ ಗಾಂಧಿ ಈ ಹೇಳಿಕೆ ನೀಡಿದ್ದಾರೆ.
ಗುರುವಾರ ನಡೆದ ಹಿಂಸಾಚಾರದಲ್ಲಿ ಇಬ್ಬರು ಮೃತಪಟ್ಟಿದ್ದಾರೆ. 20ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ. ಎದೆಗೆ ಗುಂಡೇಟು ತಗುಲಿ ಬಿದ್ದಿದ್ದ ವ್ಯಕ್ತಿಯ ಮೇಲೆ ಛಾಯಾಗ್ರಾಹಕನೊಬ್ಬ ಹಾರಿ, ನೆಗೆದು ಹಲ್ಲೆ ನಡೆಸುತ್ತಿರುವ ವೀಡಿಯೋ ಸಾಮಾಜಿಕ ತಾಣಗಳಲ್ಲಿ ವೈರಲ್ ಆಗಿತ್ತು. ಸತ್ತು ಬಿದ್ದಿರುವ ವ್ಯಕ್ತಿಯ ಮೇಲೆ ನಡೆಸಿದ ದೌರ್ಜನ್ಯ ದ್ವೇಷದ ಪರಮಾವಧಿ ಎಂದು ಹಲವರು ಅಭಿಪ್ರಾಯ ವ್ಯಕ್ತಪಡಿಸಿದ್ದರು. ಇದರ ಬೆನ್ನಲ್ಲೇ ಆತನನ್ನು ಬಂಧಿಸಿ, ನ್ಯಾಯಾಂಗದ ವಶಕ್ಕೆ ನೀಡಲಾಯಿತು ಇದನ್ನೂ ಓದಿ: ತಾಲಿಬಾನಿ ಬಿಜೆಪಿ ಸರ್ಕಾರದಿಂದ ದೇಶವನ್ನು ಮುನ್ನಡೆಸಲು ಸಾಧ್ಯವಿಲ್ಲ: ಮಮತಾ ಬ್ಯಾನರ್ಜಿ
ಅಸ್ಸಾಂನಲ್ಲಿ ನಡೆಯುತ್ತಿರುವ ಸರ್ಕಾರಿ ಭೂ-ಒತ್ತುವರಿ ಕಾರ್ಯಾಚರಣೆಯನ್ನು ಸ್ಥಗಿತಗೊಳಿಸುವಂತೆ ಒತ್ತಾಯಿಸಿ ಅಸ್ಸಾಂನ ರಾಜ್ಯಪಾಲ ಜಗದೀಶ್ ಮುಖಿ ಅವರನ್ನು ಕಾಂಗ್ರೆಸ್ ನಾಯಕರು ಭೇಟಿ ಮಾಡಿದ್ದಾರೆ. ವಿವಿಧ ಸಂಘಟನೆಗಳು ದರಂಗ್ ಜಿಲ್ಲೆಯಲ್ಲಿ ಶುಕ್ರವಾರ 12 ಗಂಟೆಗಳ ಬಂದ್ಗೆ ಕರೆ ನೀಡಿದ್ದವು. ಇದನ್ನೂ ಓದಿ: ಸೂರತ್ನಲ್ಲಿ ಸಿಗುತ್ತೆ ವಿಶಿಷ್ಟವಾದ ಮಡಿಕೆ ಪಿಜ್ಜಾ – ವೀಡಿಯೋ ವೈರಲ್
जब देश में नफ़रत का ज़हर फैलाया जा रहा है तो कैसा अमृत महोत्सव?
ವ್ಯಾಪಕ ಟೀಕೆ, ಪ್ರತಿಪಕ್ಷಗಳ ವಿರೋಧ, ಸ್ಥಳೀಯರ ಆಕ್ರಂದನಗಳ ಮಧ್ಯೆಯೇ ಭೂ-ಒತ್ತುವರಿ ಕಾರ್ಯಚರಣೆಯನ್ನು ಯಾವುದೇ ಕಾರಣಕ್ಕೂ ನಿಲ್ಲಿಸುವುದಿಲ್ಲ ಎಂದು ಅಸ್ಸಾಂ ಮುಖ್ಯಮಂತ್ರಿ ಹಿಮಾಂತ ಬಿಸ್ವಾ ಶರ್ಮಾ ಸ್ಪಷ್ಟಪಡಿಸಿದ್ದಾರೆ.
ಬೆಂಗಳೂರು: ಭಾರತ ಸ್ವಾತಂತ್ರ್ಯ ಅಮೃತ ಮಹೋತ್ಸವನ ಸವಿ ನೆನಪಿಗಾಗಿ ಕರ್ನಾಟಕ ಸರ್ಕಾರ ವಿಶೇಷ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲು ನಿರ್ಧರಿಸಿದೆ ಎಂದು ಸಿಎಂ ಬೊಮ್ಮಾಯಿ ತಿಳಿಸಿದ್ದಾರೆ.
1. ಅಮೃತ ಗ್ರಾಮ ಪಂಚಾಯತಿಗಳು:
ಆಯ್ದ 750 ಗ್ರಾಮ ಪಂಚಾಯತಿಗಳಲ್ಲಿ ಬೀದಿ ದೀಪಗಳು, ಪ್ರತಿ ಮನೆಗೆ ಕುಡಿಯುವ ನೀರಿನ ಸರಬರಾಜು, ಶೇ.100 ರಷ್ಟು ಘನತ್ಯಾಜ್ಯ ವಿಂಗಡಣೆ ಹಾಗೂ ವಿಲೇವಾರಿ, ತ್ಯಾಜ್ಯ ನೀರನ್ನು ವೈಜ್ಞಾನಿಕವಾಗಿ ವಿಸರ್ಜಿಸುವುದು, ಸೌರವಿದ್ಯುತ್ ಅಳವಡಿಕೆ, ಡಿಜಿಟಲ್ ಲೈಬ್ರರಿಗಳೊಂದಿಗೆ ಸುಸಜ್ಜಿತವಾದ ಶಾಲೆಗಳನ್ನು ಸ್ಥಾಪಿಸಿ ಸಮಗ್ರ ಮೂಲಸೌಕರ್ಯ ಅಭಿವೃದ್ಧಿಗೆ ಒತ್ತು ನೀಡುವ ಯೋಜನೆ ಅನುಷ್ಠಾನಗೊಳಿಸಲಾಗುವುದು.
2. ಅಮೃತ ಗ್ರಾಮೀಣ ವಸತಿ ಯೋಜನೆ:
ಆಯ್ದ 750 ಗ್ರಾಮ ಪಂಚಾಯಿತಿಗಳಲ್ಲಿ ವಸತಿ ರಹಿತ ಮತ್ತು ಆಶ್ರಯರಹಿತರನ್ನು ಗುರುತಿಸಿ ಸರ್ವರಿಗೂ ವಸತಿ ಕಲ್ಪಿಸುವ ಯೋಜನೆ ಅನುಷ್ಠಾನಗೊಳಿಸಲಾಗುವುದು.
3. ಅಮೃತ ರೈತ ಉತ್ಪಾದಕ ಸಂಸ್ಥೆಗಳು:
ರೈತ, ನೇಕಾರ ಮತ್ತು ಮೀನುಗಾರರ ಉತ್ಪನ್ನಗಳ ಉತ್ಪಾದನೆ ಹಾಗೂ ಮಾರಾಟಕ್ಕೆ ವಿಶೇಷ ಪ್ರೋತ್ಸಾಹ ನೀಡಲು 750 ಅಮೃತ ರೈತ ಉತ್ಪಾದಕ ಸಂಸ್ಥೆಗಳನ್ನು ಸ್ಥಾಪಿಸಿ ಪ್ರತಿ ಸಂಸ್ಥೆಗೆ 30 ಲಕ್ಷ ರೂ. ನಂತೆ ಮೂರು ವರ್ಷದ ಅವಧಿಗೆ 225 ಕೋಟಿ ರೂ. ಅನುದಾನ ನೀಡಲಾಗುವುದು.
4. ಅಮೃತ ನಿರ್ಮಲ ನಗರ:
ಆಯ್ದ 75 ನಗರ ಸ್ಥಳೀಯ ಸಂಸ್ಥೆಗಳಲ್ಲಿ ಸ್ವಚ್ಛತೆ ಮತ್ತು ಸೌಂದರ್ಯ ಕಾಪಾಡಿಕೊಳ್ಳಲು ಅಮೃತ ನಿರ್ಮಲ ನಗರ ಯೋಜನೆ ರೂಪಿಸಿ ಪ್ರತಿ ಸ್ಥಳೀಯ ಸಂಸ್ಥೆಗೆ 1 ಕೋಟಿ ರೂ.ನಂತೆ 75 ಕೋಟಿ ರೂ.ಗಳನ್ನು ಒದಗಿಸಲಾಗುವುದು.
5. ಅಮೃತ ಶಾಲಾ ಸೌಲಭ್ಯ ಯೋಜನೆ:
ಆಯ್ದ 750 ಶಾಲೆಗಳಿಗೆ ಸುಸಜ್ಜಿತ ಕಟ್ಟಡ, ಪ್ರಯೋಗಾಲಯ, ಗ್ರಂಥಾಲಯ, ಶೌಚಾಲಯ ಇತ್ಯಾದಿ ಸಮಗ್ರ ಸೌಲಭ್ಯ ಒದಗಿಸಲು ತಲಾ 10 ಲಕ್ಷ ರೂ. ಗಳಂತೆ 75 ಕೋಟಿ ರೂ.ಗಳನ್ನು ವೆಚ್ಚ ಮಾಡಲಾಗುವುದು. ಇದನ್ನೂ ಓದಿ: ಮೇಕೆದಾಟು, ಮಹದಾಯಿ ಯೋಜನೆ ಪ್ರಾರಂಭಿಸುತ್ತೇವೆ: ಸಿಎಂ ಬೊಮ್ಮಾಯಿ
6. ಅಮೃತ ಅಂಗನವಾಡಿ ಕೇಂದ್ರಗಳು:
ಆಯ್ದ 750 ಅಂಗನವಾಡಿ ಕೇಂದ್ರಗಳ ಮೂಲಸೌಕರ್ಯ ಮೇಲ್ದರ್ಜೆಗೇರಿಸಲು ಪ್ರತಿ ಅಂಗನವಾಡಿಗೆ 1 ಲಕ್ಷ ರೂ.ನಂತೆ 7.5 ಕೋಟಿ ರೂ. ಗಳನ್ನು ಹಣ ವಿನಿಯೋಗಿಸಲಾಗುವುದು.
7. ಅಮೃತ ಸ್ವಸಹಾಯ ಕಿರು ಉದ್ದಿಮೆಗಳು:
ಆಯ್ದ 7,500 ಸ್ವಸಹಾಯ ಗುಂಪುಗಳನ್ನು ಕಿರು ಉದ್ಯಮ ಸಂಸ್ಥೆಗಳಾಗಿ ರೂಪಿಸಲು ತಲಾ 1 ಲಕ್ಷ ರೂ. ನಂತೆ 75 ಕೋಟಿ ರೂ. ಬೀಜ ಧನವನ್ನು ಒದಗಿಸಲಾಗುವುದು.
8. ಅಮೃತ ಸಮುದಾಯ ಅಭಿವೃದ್ಧಿ ಯೋಜನೆ:
ಆಯ್ದ 750 ಶಾಲಾ ಕಾಲೇಜುಗಳ ವಿದ್ಯಾರ್ಥಿಗಳನ್ನು ಗುರುತಿಸಿ ರಚನಾತ್ಮಕ ಸಾಮುದಾಯಿಕ ಸೇವೆಗಳಲ್ಲಿ ತೊಡಗಿಕೊಳ್ಳುವಂತೆ ಪ್ರೇರೇಪಿಸಲಾಗುವುದು.
9. ಅಮೃತ ಆರೋಗ್ಯ ಮೂಲಸೌಕರ್ಯ ಉನ್ನತೀಕರಣ ಯೋಜನೆ:
ಆಯ್ದ 750 ಪ್ರಾಥಮಿಕ ಕೇಂದ್ರಗಳ ಮೂಲಸೌಕರ್ಯಗಳ ವಿಸ್ತರಣೆ ಮತ್ತು ಉನ್ನತೀಕರಣಕ್ಕೆ ತಲಾ 20 ಲಕ್ಷ ರೂ.ಗಳಂತೆ 150 ಕೋಟಿ ರೂ. ವೆಚ್ಚದಲ್ಲಿ ಮಾಡಲಾಗುವುದು.
10. ಅಮೃತ ಕೌಶಲ್ಯ ತರಬೇತಿ ಯೋಜನೆ:
ರಾಜ್ಯದ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಹಿಂದುಳಿದ ವರ್ಗ ಮತ್ತು ಅಲ್ಪಸಂಖ್ಯಾತ ಅಮುದಾಯಗಳ 75 ಸಾವಿರ ಯುವಕ ಯುವತಿಯರ ಕೌಶಲ್ಯಾಭಿವೃದ್ಧಿಗೆ 2 ವರ್ಷಗಳ ತರಬೇತಿ ಯೋಜನೆಯನ್ನು 112 ಕೋಟಿ ರೂ. ವೆಚ್ಚದಲ್ಲಿ ಹಮ್ಮಿಕೊಳ್ಳಲಾಗುವುದು.
11. ಅಮೃತ ಕ್ರೀಡಾ ದತ್ತು ಯೋಜನೆ:
ಟೋಕಿಯೋ ಒಲಿಂಪಿಕ್ಸ್ನಲ್ಲಿ ಭಾರತದ ಮತ್ತು ಕರ್ನಾಟಕದ ಕ್ರೀಡಾಪಟುಗಳ ಸಾಧನೆ ಗಮನಾರ್ಹವಾದುದು. ಮುಂದಿನ ಪ್ಯಾರೀಸ್ ಒಲಿಂಪಿಕ್ ಕ್ರೀಡಾಕೂಟದಲ್ಲಿ ಉತ್ತಮ ಸಾಧನೆ ತೋರಿ ಪದಕ ವಿಜೇತ ಸಾಮಥ್ರ್ಯವುಳ್ಳ ಆಯ್ದ 75 ಕ್ರೀಡಾಪಟುಗಳನ್ನು ರೂಪಿಸಲು ಅಗತ್ಯವಾದ ತರಬೇತಿ ಮತ್ತು ಪ್ರೋತ್ಸಾಹ ನೀಡಲು ಅಮೃತ ಕ್ರೀಡಾ ದತ್ತು ಯೋಜನೆ ಅನುಷ್ಠಾನಗೊಳಿಸಲಾಗುವುದು.