Tag: amrut desai

  • ಶಾಸಕನ ವಿರುದ್ಧ ತೊಡೆ ತಟ್ಟಿದ್ದ ಇಬ್ಬರು ಪಕ್ಷೇತರ ಅಭ್ಯರ್ಥಿಗಳು ಒಂದೇ ವಾಹನದಲ್ಲಿ ಬಂದು ನಾಮಪತ್ರ ಸಲ್ಲಿಕೆ

    ಶಾಸಕನ ವಿರುದ್ಧ ತೊಡೆ ತಟ್ಟಿದ್ದ ಇಬ್ಬರು ಪಕ್ಷೇತರ ಅಭ್ಯರ್ಥಿಗಳು ಒಂದೇ ವಾಹನದಲ್ಲಿ ಬಂದು ನಾಮಪತ್ರ ಸಲ್ಲಿಕೆ

    ಧಾರವಾಡ: ಧಾರವಾಡ ಗ್ರಾಮೀಣ (Dharawada Rural) ಕ್ಷೇತ್ರದ ಹಾಲಿ ಶಾಸಕನ ವಿರುದ್ಧ ತೊಡೆ ತಟ್ಟಿದ್ದ ಇಬ್ಬರು ಪಕ್ಷೇತರ ಅಭ್ಯರ್ಥಿಗಳು ಒಂದೇ ವಾಹನದಲ್ಲಿ ಬಂದು ಗುರುವಾರ ನಾಮಪತ್ರ ಸಲ್ಲಿಸಿದ್ದಾರೆ.

    ಧಾರವಾಡ ಗ್ರಾಮೀಣ ಕ್ಷೇತ್ರಕ್ಕೆ ಇಂದು ನಾಲ್ಕು ಅಭ್ಯರ್ಥಿಗಳು ನಾಮಪತ್ರ ಸಲ್ಲಿಕೆ ಮಾಡಿದ್ದಾರೆ. ಅದರಲ್ಲಿ ಎರಡು ನಾಮಪತ್ರ ಪಕ್ಷೇತರವಾಗಿ ನೀಡಿರೋದು ಬಿಜೆಪಿಗೆ ನುಂಗಲಾರದ ಬಿಸಿ ತುಪ್ಪವಾಗಿ ಪರಿಣಮಿಸಿದೆ. ಇದನ್ನೂ ಓದಿ: ಯಾರು ತೆರೆಯುತ್ತಾರೆ ಬೆಂಗಳೂರಿನ ಹೆಬ್ಬಾಗಿಲು?

    ಕಳೆದ 2018 ರ ಚುನಾವಣೆಗೆ ಧಾರವಾಡ ಗ್ರಾಮೀಣ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಹಾಗೂ ಹಾಲಿ ಶಾಸಕ ಅಮೃತ ದೇಸಾಯಿ (Amruta Desai) ಅವರೊಂದಿಗೆ ನಿಂತು ಪಕ್ಷದ ಗೆಲುವಿನಲ್ಲಿ ಪ್ರಮುಖ ಪಾತ್ರ ವಹಿಸಿದ್ದ ಬಸವರಾಜ ಕೊರವರ ಹಾಗೂ ತವನಪ್ಪ ಅಷ್ಟಗಿ ಇಂದು ಪಕ್ಷೇತರ ಅಭ್ಯರ್ಥಿಗಳಾಗಿ ನಾಮಪತ್ರ ಸಲ್ಲಿಸಿದ್ದಾರೆ.

    ಗಮನಾರ್ಹ ವಿಷಯ ಏನಂದ್ರೆ, ಬಸವರಾಜ ಕೊರವರ ಹಾಗೂ ತವನಪ್ಪ ಅಷ್ಟಗಿ ಇಬ್ಬರೂ ಸಹ ಒಂದೇ ವಾಹನದಲ್ಲಿ ಮೆರವಣಿಗೆ ಮೂಲಕ ಆಗಮಿಸಿ, ಬೇರೆ ಬೇರೆಯಾಗಿ ನಾಮಪತ್ರ ಸಲ್ಲಿಸಿದ್ದಾರೆ. ಇದರಿಂದ ಧಾರವಾಡ ಗ್ರಾಮೀಣ ಕ್ಷೇತ್ರದ ಬಿಜೆಪಿಗೆ ಹಿನ್ನಡೆಯಾಗುತ್ತಾ ಎನ್ನುವ ಚರ್ಚೆ ಸಾರ್ವಜನಿಕ ವಲಯದಲ್ಲಿ ಕೇಳಿ ಬರುತ್ತಿದೆ. ಇದನ್ನೂ ಓದಿ: ಎಲೆಕ್ಷನ್ ಹೊತ್ತಿನಲ್ಲೇ ಡಿಕೆಶಿಗೆ ಶಾಕ್ – CBI ತನಿಖೆಗೆ ಕೋರ್ಟ್ ಅಸ್ತು

  • ರಾಷ್ಟ್ರಧ್ವಜದ ಕೆಳಗೆ ಭಗವಾಧ್ವಜ ಹಾರಿದರೆ ತಪ್ಪೇನು: ಅಮೃತ್ ದೇಸಾಯಿ

    ರಾಷ್ಟ್ರಧ್ವಜದ ಕೆಳಗೆ ಭಗವಾಧ್ವಜ ಹಾರಿದರೆ ತಪ್ಪೇನು: ಅಮೃತ್ ದೇಸಾಯಿ

    ಧಾರವಾಡ: ರಾಷ್ಟ್ರಧ್ವಜದ ಕೆಳಗೆ ಭಗವಾಧ್ವಜ ಹಾರಿದರೆ ತಪ್ಪೇನು? ಎಂದು ಧಾರವಾಡ ಬಿಜೆಪಿ ಶಾಸಕ ಅಮೃತ್ ದೇಸಾಯಿ ಪ್ರಶ್ನಿಸಿದ್ದಾರೆ.

    ಈಶ್ವರಪ್ಪ ಮುಂದೊಂದು ದಿನ ಕೆಂಪು ಕೋಟೆಯಲ್ಲಿ ಭಗವಾಧ್ವಜ ಹಾರಬಹುದು ಎಂದಿದ್ದಾರೆ. ಅವರು ರಾಷ್ಟ್ರಧ್ವಜ ತೆಗೆಯುತ್ತೇವೆ ಎಂದಿಲ್ಲ. ರಾಷ್ಟ್ರಧ್ವಜದ ಕೆಳಗೆ ಭಗವಾಧ್ವಜ ಹಾರಿದರೆ ತಪ್ಪೇನು? ಎಲ್ಲರಿಗೂ ರಾಷ್ಟ್ರಧ್ವಜ ಮುಖ್ಯ. ಈಶ್ವರಪ್ಪ ನೂರಾರು ವರ್ಷಗಳ ಬಳಿಕ ಭಗವಾಧ್ವಜ ಹಾರಬಹುದು ಎಂದಿದ್ದಾರೆ ಎಂದು ಧಾರವಾಡದಲ್ಲಿ ಅಮೃತ್ ದೇಸಾಯಿ ಹೇಳಿಕೆ ನೀಡಿದರು. ಇದನ್ನೂ ಓದಿ: ನಟ ಚೇತನ್ ಗೆ ಷರತ್ತುಬದ್ಧ ಜಾಮೀನು

    ಹಿಜಬ್ ವಿವಾದ ಕುರಿತು ಮಾತನಾಡಿದ ದೇಸಾಯಿ, ದೇಶದ ಕಾನೂನು ಗೌರವಿಸುವವರು ಈ ದೇಶದಲ್ಲಿ ಇರಲಿ. ಇಲ್ಲವೇ ದೇಶ ಬಿಟ್ಟು ಹೋಗಲಿ. ಕಳೆದೊಂದು ತಿಂಗಳಿನಿಂದ ಹಿಜಬ್ ವಿವಾದ ಆಗಿದೆ. ಕೋರ್ಟ್ ಮಧ್ಯಂತರ ಆದೇಶ ನೀಡಿದೆ. ಆದರೂ ಕೆಲವರು ಅದನ್ನು ಪಾಲಿಸುತ್ತಿಲ್ಲ ಎಂದರು. ಇದನ್ನೂ ಓದಿ: ಕೋರ್ಟ್ ಮೆಟ್ಟಿಲೇರಿದ ಟಿವಿ ವ್ಯಾಲ್ಯೂಮ್ ವಿವಾದ..!

    ಕೆಲವು ಮುಸ್ಲಿಂ ವಿದ್ಯಾರ್ಥಿನಿಯರು ಹಿಜಬ್ ಧರಿಸಿಯೇ ತರಗತಿಗೆ ಹೋಗುವ ಪ್ರಯತ್ನ ಮಾಡುತ್ತಿದ್ದಾರೆ. ಕೋರ್ಟ್ ಆದೇಶವನ್ನೇ ಉಲ್ಲಂಘಿಸುವ ಸೊಕ್ಕಿನ ಮಾತು ಆಡುತ್ತಿದ್ದಾರೆ. ಇದಕ್ಕೆ ಸರ್ಕಾರ ಕಠಿಣ ಕ್ರಮ ತೆಗೆದುಕೊಳ್ಳಬೇಕು ಎಂದರು.