Tag: Amruthavarshini

  • ಹಿರಿಯ ನಟ ಶರತ್ ಬಾಬು ಆರೋಗ್ಯ ಸ್ಥಿತಿ ಗಂಭೀರ, ಆಸ್ಪತ್ರೆಗೆ ದಾಖಲು

    ಹಿರಿಯ ನಟ ಶರತ್ ಬಾಬು ಆರೋಗ್ಯ ಸ್ಥಿತಿ ಗಂಭೀರ, ಆಸ್ಪತ್ರೆಗೆ ದಾಖಲು

    ನ್ನಡ ಸೇರಿದಂತೆ ಬಹುಭಾಷೆಗಳಲ್ಲಿ ನಟಿಸಿರುವ ನಟ ಶರತ್ ಬಾಬು (Sarath Babu) ಅವರ ಆರೋಗ್ಯ ಚಿಂತಾಜನಕವಾಗಿದೆ. ಸದ್ಯ ಅವರು ಚೆನ್ನೈನ ಖಾಸಗಿ ಆಸ್ಪತ್ರೆಯಲ್ಲಿ (Hospital)  ಚಿಕಿತ್ಸೆ ಪಡೆಯುತ್ತಿದ್ದಾರೆ.

    ʻಅಮೃತವರ್ಷಿಣಿ’ (Amruthavarshini)  ಚಿತ್ರದಲ್ಲಿ ರಮೇಶ್ ಅರವಿಂದ್, ಸುಹಾಸಿನಿ ಜೊತೆ ಶರತ್ ಬಾಬು (Sarath Babu)  ಪ್ರಮುಖ ಪಾತ್ರದಲ್ಲಿ ನಟಿಸಿದ್ದರು. ಇದೀಗ ಅವರ ಆರೋಗ್ಯ ಸ್ಥಿತಿ ಗಂಭೀರವಾಗಿದೆ. 71 ವರ್ಷ ವಯಸ್ಸಿನ ಶರತ್ ಬಾಬು ಇತ್ತೀಚಿನ ದಿನಗಳಲ್ಲಿ ಅನಾರೋಗ್ಯಕ್ಕೆ ತುತ್ತಾಗಿದ್ದರು. ಅವರ ಆರೋಗ್ಯದಲ್ಲಿ ಹೆಚ್ಚಿನ ಏರುಪೇರಾದ ಹಿನ್ನಲೆಯಲ್ಲಿ ಬುಧವಾರ ಚೆನ್ನೈನ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಇದನ್ನೂ  ಓದಿ:ರವಿತೇಜ ನಟನೆಯ `ಟೈಗರ್ ನಾಗೇಶ್ವರ್ ರಾವ್’ ರಿಲೀಸ್ ಡೇಟ್ ಫಿಕ್ಸ್

    ಕನ್ನಡ ಮಾತ್ರವಲ್ಲದೆ, ತೆಲುಗು ಹಾಗೂ ತಮಿಳು ಭಾಷೆಗಳಲ್ಲಿ 200ಕ್ಕೂ ಹೆಚ್ಚು ಚಿತ್ರಗಳಲ್ಲಿ ನಟಿಸಿದ್ದ ಶರತ್ ಬಾಬು ಅವರನ್ನು ಚೆನ್ನೈನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ವೈದ್ಯರು ಅವರಿಗೆ ಚಿಕಿತ್ಸೆ ನೀಡುತ್ತಿದ್ದು, ಯಾವ ಕಾಯಿಲೆಗಾಗಿ ಅವರು ಆಸ್ಪತ್ರೆಗೆ ದಾಖಲಾಗಿದ್ದಾರೆ ಎನ್ನುವ ಮಾಹಿತಿ ಹೊರಬಂದಿಲ್ಲ. ಶರತ್ ಬಾಬು ಅವರನ್ನು ನೋಡಲು ಚಿತ್ರರಂಗದ ಗಣ್ಯರು ಆಸ್ಪತ್ರೆಗೆ ಭೇಟಿ ನೀಡುತ್ತಿದ್ದಾರೆ ಎಂದು ವರದಿಯಾಗಿದೆ. ಅಭಿಮಾನಿಗಳು ಕೂಡ ಶರತ್ ಬಾಬು ಆರೋಗ್ಯದಲ್ಲಿ ಶೀಘ್ರದಲ್ಲಿ ಚೇತರಿಕೆ ಕಾಣಲಿ ಎಂದು ಪ್ರಾರ್ಥನೆ ಮಾಡಿಕೊಳ್ಳುತ್ತಿದ್ದಾರೆ.

    ಶರತ್ ಬಾಬು ಅವರ ಆರೋಗ್ಯ ಹದಗೆಟ್ಟಿರುವ ಕುರಿತಾಗಿ ತೆಲುಗು ನಟಿ ಕಲ್ಯಾಣಿ ಪಾದಲಾ (ಕರಾಟೆ ಕಲ್ಯಾಣಿ) ಬರೆದುಕೊಂಡಿದ್ದಾರೆ. ಸೋಶಿಯಲ್ ಮೀಡಿಯಾದಲ್ಲಿ ಪೋಸ್ಟ್ ಹಂಚಿಕೊಳ್ಳುವ ಮೂಲಕ ಈ ಮಾಹಿತಿ ನೀಡಿದ್ದಾರೆ. ಅದರೊಂದಿಗೆ ನನ್ನ ನೆಚ್ಚಿನ ಹೀರೋ, ಬೇಗ ಗುಣಮುಖರಾಗಲಿ ಎಂದು ಬರೆದುಕೊಂಡಿದ್ದಾರೆ.

  • ಅಮೃತವರ್ಷಿಣಿ ಎಫ್‍ಎಂ ಚಾನೆಲ್ ಸ್ಥಗಿತಗೊಳಿಸದಂತೆ ಪಿಎಂಗೆ ಮನವಿ

    ಅಮೃತವರ್ಷಿಣಿ ಎಫ್‍ಎಂ ಚಾನೆಲ್ ಸ್ಥಗಿತಗೊಳಿಸದಂತೆ ಪಿಎಂಗೆ ಮನವಿ

    ಬೆಂಗಳೂರು: ಆಕಾಶವಾಣಿಯ ಅಮೃತವರ್ಷಿಣಿ ಎಫ್‍ಎಂ ಚಾನೆಲ್ (100.10 ಎಫ್‍ಎಂ) ಅನ್ನು ಸ್ಥಗಿತಗೊಳಿಸಬಾರದು ಎಂದು ಹಿರಿಯ ವಕೀಲರಾದ ಎಸ್.ವಿ.ಶ್ರೀನಿವಾಸ್ ಅವರು ಪ್ರಧಾನಿ ನರೇಂದ್ರ ಮೋದಿ ಅವರನ್ನು ಒತ್ತಾಯಿಸಿದ್ದಾರೆ.

    ರಾಜ್ಯದ ರೈತರು ಹಾಗೂ ಜನಸಾಮಾನ್ಯರ ಸಮಸ್ಯೆಗಳ ಪರವಾಗಿ ಹಲವಾರು ವ್ಯಾಜ್ಯಗಳನ್ನು ಮುನ್ನಡೆಸಿರುವ ಹಿರಿಯ ವಕೀಲರಾದ ಶ್ರೀನಿವಾಸ್ ಅವರು ಈ ಸಂಬಂಧ ಪ್ರಧಾನಿಗೆ ಪತ್ರ ಬರೆದಿದ್ದಾರೆ. ಆಕಾಶವಾಣಿಯು ಸ್ಥಳೀಯ ಕಲೆ ಮತ್ತು ಸಂಸ್ಕೃತಿಯನ್ನು ಪಸರಿಸುವಲ್ಲಿ ಸದಾ ಮುಂಚೂಣಿಯಲ್ಲಿರುವ ಮಾಧ್ಯಮವಾಗಿದೆ. ಇದಕ್ಕೆ ಪೂರಕವಾಗಿ 2002ರಿಂದ ಇಲ್ಲಿವರೆಗೆ ಆಕಾಶವಾಣಿಯ ಅಮೃತವರ್ಷಿಣಿ ಎಫ್‍ಎಂ ಚಾನೆಲ್ ಕನ್ನಡನಾಡಿನ ಕಲೆ ಸಂಸ್ಕೃತಿಯನ್ನು ಬಿತ್ತರಿಸುತ್ತಾ ಬಂದಿದೆ ಎಂದು ಹೇಳಿದ್ದಾರೆ.  ಇದನ್ನೂ ಓದಿ: 14 ವರ್ಷದ ಬಳಿಕ ಬೆಂಕಿಪೊಟ್ಟಣದ ಬೆಲೆ ಏರಿಕೆ

    Amruthavarshini FM

    ಅಮೃತವರ್ಷಿಣಿಯು ಕರ್ನಾಟಕ ಶಾಸ್ತ್ರೀಯ ಸಂಗೀತ ಕಲಾವಿದರು ಮತ್ತು ಕಲಾವಿದರಿಗೆ ಸೂಕ್ತ ವೇದಿಕೆಯಾಗಿದೆ ಮತ್ತು ಪ್ರತಿಭಾನ್ವಿತರನ್ನು ಹೊರ ಜಗತ್ತಿಗೆ ತೋರಿಸುವ ಒಂದು ಉತ್ತಮ ಸಜ್ಜಿಕೆಯಾಗಿದೆ. ಕಳೆದ 2 ದಶಕಗಳಿಂದ ದಿನದ 24 ಗಂಟೆಯೂ ಶಾಸ್ತ್ರೀಯ ಕಲಾವಿದರಿಂದ ಹಲವಾರು ಕಾರ್ಯಕ್ರಮಗಳನ್ನು ಪ್ರಸಾರ ಮಾಡುತ್ತಿದ್ದು, ಇದುವರೆಗೂ 3000 ಕ್ಕೂ ಹೆಚ್ಚು ಕಲಾವಿದರು ತಮ್ಮ ಕಲೆಯನ್ನು ಈ ಚಾನೆಲ್ ಮೂಲಕ ನೀಡಿದ್ದಾರೆ ಎಂದು ಅವರು ತಮ್ಮ ಪತ್ರದಲ್ಲಿ ತಿಳಿಸಿದ್ದಾರೆ. ಇದನ್ನೂ ಓದಿ: ಠಾಣೆ ಮೆಟ್ಟಿಲೇರಿದ ಕಸ ಫೈಟ್ – ಪ್ರೊಡ್ಯೂಸರ್ ಪುತ್ರ, ಪತ್ನಿ ವಿರುದ್ಧ FIR

     Amruthavarshini FM

    ಇಂತಹ ಸ್ಥಳೀಯ ಕಲೆ ಮತ್ತು ಸಂಸ್ಕೃತಿಯನ್ನು ಬಿಂಬಿಸುವಂತಹ ಅಮೃತವರ್ಷಿಣಿಯಂತಹ ದೇಶದ 14 ಚಾನೆಲ್‍ಗಳನ್ನು ಸ್ಥಗಿತಗೊಳಿಸುವ ನಿರ್ಧಾರವನ್ನು ಕೈಬಿಟ್ಟು, ಚಾನೆಲ್ ಅನ್ನು ಇನ್ನೂ ಸದೃಢಗೊಳಿಸಲು ಕ್ರಮ ಕೈಗೊಳ್ಳಬೇಕು. ರಾಜ್ಯದ ಸಮಸ್ತ ಕನ್ನಡಿಗರ ಪರವಾಗಿ ಹಾಗೂ ರಾಜ್ಯದ ಸಮಸ್ತ ಕಲಾವಿದರ ಪರವಾಗಿ ಸಾಮಾಜಿಕ ಕಾಳಜಿಯನ್ನು ತೋರಿಸಿರುವ ಹಿರಿಯ ವಕೀಲರಾದ ಶ್ರೀನಿವಾಸ್ ಪ್ರಧಾನಿಗಳಿಗೆ ಮನವಿ ಮಾಡಿದ್ದಾರೆ.

    ವಕೀಲರಾದ ಎಸ್.ವಿ ಶ್ರೀನಿವಾಸ್ ಸಮಸ್ಯೆಗಳಿಂದ ತೊಂದರೆಗೀಡಾದ ಜನಸಾಮಾನ್ಯರ ಧ್ವನಿಯಾಗಿದ್ದಾರೆ. ಕಳೆದ ದಶಕಗಳಿಂದ ರಾಜ್ಯದ ಪ್ರಮುಖ ಸಮಸ್ಯೆಗಳಾದ ರೈತರು ಹಾಗೂ ಜನಸಾಮಾನ್ಯರ ಪರವಾಗಿ ಉಚ್ಛನ್ಯಾಯಾಲಯಗಳಲ್ಲಿ ಧ್ವನಿ ಎತ್ತಿದ್ದಾರೆ. ಈ ಬಾರಿ ರಾಜ್ಯದ ಕಲಾವಿದರ ಪರವಾಗಿ ಪ್ರಧಾನಿಗಳಿಗೆ ಪತ್ರ ಬರೆದಿದ್ದು ಮನವಿ ಮಾಡಿದ್ದಾರೆ.