Tag: amulya

  • ಘಾಟಿ ಸುಬ್ರಹ್ಮಣ್ಯಕ್ಕೆ ಅಮೂಲ್ಯ ದಂಪತಿ ಭೇಟಿ

    ಘಾಟಿ ಸುಬ್ರಹ್ಮಣ್ಯಕ್ಕೆ ಅಮೂಲ್ಯ ದಂಪತಿ ಭೇಟಿ

    ಚಿತ್ರರಂಗದಲ್ಲಿ (Kannada Films) ಗೋಲ್ಡನ್ ಕ್ವೀನ್ ಆಗಿ ಮಿಂಚಿದ್ದ ಅಮೂಲ್ಯ (Amulya) ಈಗ ಮದುವೆ, ಸಂಸಾರ, ಮಕ್ಕಳು ಅಂತಾ ಬ್ಯುಸಿಯಾಗಿದ್ದಾರೆ. ಸದ್ಯ ಅವಳಿ ಮಕ್ಕಳೊಂದಿಗೆ ಘಾಟಿ ಸುಬ್ರಹ್ಮಣ್ಯಕ್ಕೆ (Ghati Subramanya) ಅಮೂಲ್ಯ ಮತ್ತು ಜಗದೀಶ್ ಭೇಟಿ ನೀಡಿದ್ದಾರೆ.

    ಸ್ಟಾರ್ ನಟಿಯಾಗಿ ಮಿಂಚ್ತಿದ್ದ ಅಮೂಲ್ಯ ಬೇಡಿಕೆಯಿರುವಾಗಲೇ ಜಗದೀಶ್ ಜೊತೆ ಹಸೆಮಣೆ ಏರಿದ್ದರು. ಈಗ ಅವಳಿ ಮಕ್ಕಳ ತಾಯಿಯಾಗಿ ಅವರ ಆರೈಕೆಯಲ್ಲಿ ನಟಿ ಫುಲ್ ಬ್ಯುಸಿಯಾಗಿದ್ದಾರೆ. ಇತ್ತೀಚಿಗಷ್ಟೇ ಅವಳಿ ಮಕ್ಕಳಿಗೆ ಅದ್ದೂರಿಯಾಗಿ ನಾಮಕರಣ ಮಾಡಿದ್ದರು. ಇದನ್ನೂ ಓದಿ: `ಧಮಾಕ’ ಸಕ್ಸಸ್ ನಂತರ ಕನ್ನಡತಿ ಶ್ರೀಲೀಲಾಗೆ ತೆಲುಗಿನಲ್ಲಿ ಡಿಮ್ಯಾಂಡ್

    ಅಮೂಲ್ಯ ಅವರು ಕುಟುಂಬದ ಜೊತೆ ಬೆಂಗಳೂರು ಗ್ರಾಮಾಂತರ ಜಿಲ್ಲೆ ಘಾಟಿ ಸುಬ್ರಹ್ಮಣ್ಯಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದ್ದಾರೆ. ಘಾಟಿಗೆ ಸುಬ್ರಹ್ಮಣ್ಯಕ್ಕೆ ಭೇಟಿ ನೀಡಿದ್ದ ವೇಳೆ ಕೆಲ ಸಮಯ ಆವರಣದಲ್ಲಿ ಕುಳಿತುಕೊಂಡಿದ್ದರು. ಬಳಿಕ ಕುಟುಂಬದ ಜೊತೆ ಸೇರಿ ವಿಶೇಷ ಪೂಜೆ ಸಲ್ಲಿಸಿದ್ದಾರೆ. 

    ಅಮೂಲ್ಯ ಅವರನ್ನು ನೋಡಿದ ಸಂತಸದಲ್ಲಿ ಫ್ಯಾನ್ಸ್ ಅವರನ್ನು ಭೇಟಿ ಮಾಡಲು ಮುಗಿಬಿದ್ದಿದ್ದಾರೆ. ಸೆಲ್ಫಿಗಾಗಿ ತೆಗೆದುಕೊಂಡು ನಟಿಯ ಜೊತೆ ಸಂಭ್ರಮಿಸಿದ್ದಾರೆ.

    Live Tv
    [brid partner=56869869 player=32851 video=960834 autoplay=true]

    Join our Whatsapp group by clicking the below link
    https://chat.whatsapp.com/E6YVEDajTzH06LOh77r25k

  • ಬಿಗ್ ಬಾಸ್ : ಅಮೂಲ್ಯಗೆ ಅಹಂಕಾರ ಜಾಸ್ತಿ ಎಂದು ದೂರ ಉಳಿದ ರಾಕೇಶ್ ಅಡಿಗ

    ಬಿಗ್ ಬಾಸ್ : ಅಮೂಲ್ಯಗೆ ಅಹಂಕಾರ ಜಾಸ್ತಿ ಎಂದು ದೂರ ಉಳಿದ ರಾಕೇಶ್ ಅಡಿಗ

    ಬಿಗ್ ಬಾಸ್  (Big Boss) ಮನೆಯಲ್ಲಿ ರಾಕೇಶ್ ಅಡಿಗ ಮತ್ತು ಅಮೂಲ್ಯ (Amulya) ಗೌಡ ಜೋಡಿಯೇ ವಿಚಿತ್ರ. ಇವರು ಯಾವಾಗ ಹೇಗೆ ಇರುತ್ತಾರೆ ಎನ್ನುವುದು ಊಹಿಸಲು ಸಾಧ್ಯವಿಲ್ಲ. ಒಂದು ಹೊತ್ತಲ್ಲಿ ಅಪ್ಪಟ ಪ್ರೇಮಿಗಳಂತೆ ಕಾಣಿಸಿಕೊಂಡರೆ ಮತ್ತೊಂದು ಹೊತ್ತಲ್ಲಿ ಜನ್ಮಜನ್ಮಾಂತರದ ವೈರಿಗಳು ಎನ್ನುವಂತೆ ಮುನಿಸಿಕೊಳ್ಳುತ್ತಾರೆ. ನಿನ್ನೆಯೂ ಹಾಗೆಯೇ ಆಯಿತು. ಮಂಜು ಪಾವಗಡ ಮನೆಗೆ ಎಂಟ್ರಿ ಕೊಟ್ಟ ನಂತರ ಅಮೂಲ್ಯ ಬದಲಾಗಿದ್ದಾರೆ ಎನ್ನುವ ಕಾರಣಕ್ಕಾಗಿ ಅಮೂಲ್ಯಗೆ ಅಹಂಕಾರ ಜಾಸ್ತಿ ಎಂದಿದ್ದಾರೆ ರಾಕೇಶ್. ಹಾಗಾಗಿ ಅಂತರವನ್ನು ಕಾಪಾಡಿಕೊಳ್ಳುತ್ತಿದ್ದಾರೆ.

    ಬಿಗ್ ಬಾಸ್ ಮನೆಗೆ ಹಾಸ್ಯ ಕಲಾವಿದ ಮಂಜು ಪಾವಗಡ (Manju Pavagada) ಪ್ರವೇಶ ಮಾಡಿದ್ದರು. ಈಗಾಗಲೇ ಬಿಗ್ ಬಾಸ್ ಟೈಟಲ್ ಗೆದ್ದಿರುವ ಮಂಜು ಆಗಮನ ಮನೆಯಲ್ಲಿ ನವ ಉಲ್ಲಾಸ ತಂದಿದೆ. ಈ ಉಲ್ಲಾಸವನ್ನು ತಡೆಯುವುದಕ್ಕೆ ಆಗದೇ ಮಂಜು ಪಾವಗಡ ಮುಂದೆ ಕೂತು ಅಮೂಲ್ಯ ಪ್ರೇಮ ನಿವೇದನೆ ಮಾಡಿಕೊಂಡಿದ್ದಾರೆ. ‘ಐ ಲವ್ ಯೂ’ ಎಂದು ಹೇಳುವ ಮೂಲಕ ರಾಕೇಶ್ ಅಡಿಗನಿಗೆ (Rakesh Adiga) ಕಕ್ಕಾಬಿಕ್ಕಿ ಆಗುವಂತೆ ಮಾಡಿದ್ದರು. ಇದನ್ನೂ ಓದಿ : ಬೆಂಗಳೂರು ವಿಶ್ವವಿದ್ಯಾಲಯ ಬಿಕಾಂ ಪಠ್ಯದಲ್ಲಿ ಪುನೀತ್ ರಾಜಕುಮಾರ್

    ರಾಕೇಶ್ ಅಡಿಗ ಮತ್ತು ಅಮೂಲ್ಯ ಬಿಗ್ ಬಾಸ್ ಮನೆಯಲ್ಲಿ ಕ್ಲೋಸ್ ಆಗಿರುವ ಜೋಡಿ. ಪ್ರೇಮಿಗಳ ರೀತಿಯಲ್ಲೇ ಅವರು ಯಾವಾಗಲೂ ವರ್ತಿಸುತ್ತಿರುತ್ತಾರೆ. ಇತ್ತೀಚಿನ ದಿನಗಳಲ್ಲಂತೂ ರಾಕೇಶ್ ಅಡಿಗನ ಜೊತೆಯೇ ಅಮೂಲ್ಯ ಹೆಚ್ಚು ಸಮಯ ಕಳೆಯುತ್ತಾರೆ. ಹೀಗಾಗಿ ಅಮೂಲ್ಯ ಆಡಿದ ಮಾತುಗಳು ರಾಕೇಶ್ ಅಚ್ಚರಿ ಮೂಡಿಸಿದ್ದವು. ಮಂಜು ಪಾವಗಡ ಮನೆಗೆ ಬಂದ ಕೆಲವೇ ಗಂಟೆಗಳಲ್ಲೇ ಅಮೂಲ್ಯಗೆ ಪ್ರೀತಿ ಹುಟ್ಟಲು ಹೇಗೆ ಸಾಧ್ಯ ಎನ್ನುವ ಪ್ರಶ್ನೆಯನ್ನೂ ಮೂಡಿಸಿವೆ.

    ಮಂಜು ಪಾವಗಡ ಮುಂದೆ ಮಂಡೆಯೂರಿ ಕುಳಿತು ‘ಐ ಲವ್ ಯೂ’ ಎಂದು ಅಮೂಲ್ಯ ಹೇಳಿದಾಗ, ಅಲ್ಲಿಯೇ ನಿಂತಿದ್ದ ರಾಕೇಶ್ ಅಡಿಗೆ ಅಚ್ಚರಿಯಿಂದಲೇ ಆ ದೃಶ್ಯವನ್ನು ನೋಡುತ್ತಾ, ‘ಈ ದೃಶ್ಯ ನೋಡ್ತಿದ್ದರೆ, ನನಗೆ ಹಾವು ಕಚ್ಚಿದಂತೆ ಫೀಲ್ ಆಗುತ್ತಿದೆ’ ಎಂದು ಪ್ರತಿಕ್ರಿಯಿಸುತ್ತಾರೆ. ರಾಕಿ ಮಾತಿಗೆ ಅಮೂಲ್ಯ ಸ್ಮೈಲ್ ನೀಡುತ್ತಾರೆ. ಅದು ಹಾವು ಏಣಿಯ ಆಟವಾಗಿದ್ದರಿಂದ, ಆ ಆಟವನ್ನು ಬಳಸಿಕೊಂಡೇ ಈ ಮೂವರು ಮಾತನಾಡುತ್ತಾರೆ. ಆನಂತರ ಅಮೂಲ್ಯ ಮತ್ತು ರಾಕೇಶ್ ನಡುವೆ ಅಂತರದ ಗೇಮ್ ಅಂತೂ ಶುರುವಾಗಿದೆ.

    Live Tv
    [brid partner=56869869 player=32851 video=960834 autoplay=true]

  • ದೀಪಿಕಾ ದಾಸ್ ಗೆ ‘ಐ ಲವ್ ಯೂ’ ಹೇಳಿ ಪ್ರಪೋಸ್ ಮಾಡಿದ ಮಂಜು ಪಾವಗಡ

    ದೀಪಿಕಾ ದಾಸ್ ಗೆ ‘ಐ ಲವ್ ಯೂ’ ಹೇಳಿ ಪ್ರಪೋಸ್ ಮಾಡಿದ ಮಂಜು ಪಾವಗಡ

    ಬಿಗ್ ಬಾಸ್ (Bigg Boss) ಮನೆಯಲ್ಲಿ ಯಾರು, ಯಾರಿಗೆ ಐ ಲವ್ ಯೂ ಅಂತ ಪ್ರಪೋಸ್ ಮಾಡುತ್ತಾರೆ ಎನ್ನುವುದನ್ನು ಊಹಿಸಲೂ ಸಾಧ್ಯವಿಲ್ಲ. ಎರಡು ದಿನಗಳ ಹಿಂದೆಯಷ್ಟೇ ಬಿಗ್ ಬಾಸ್ ಮನೆಯೊಳಗೆ ಸರ್ ಪ್ರೈಸ್ ಎನ್ನುವಂತೆ ಕಾಲಿಟ್ಟಿದ್ದ ಮಂಜು ಪಾವಗಡಗೆ (Manju Pavagada) ನಟಿ ಅಮೂಲ್ಯಗೌಡ ‘ಐ ಲವ್ ಯೂ’ ಎಂದು ಪ್ರಪೋಸ್ ಮಾಡಿದ್ದರು. ಈ ನಡೆಗೆ ರಾಕೇಶ್ ಅಡಿಗ ತುಂಬಾ ನೊಂದುಕೊಂಡಿದ್ದರು. ಆ ದೃಶ್ಯವನ್ನು ಕಂಡು ನನ್ನ ನಾಗರಹಾವು ಕಡಿದಷ್ಟು ನೋವು ಆಗುತ್ತಿದೆ ಎಂದು ಕಾಮೆಂಟ್ ಕೂಡ ಮಾಡಿದ್ದರು.

    ಈ ಮಧ್ಯೆ ಅಮೂಲ್ಯ ಗೌಡ (Amulya) ಅವರ ಪ್ರಪೋಸ್ ಅನ್ನು ಸ್ವೀಕರಿಸದೇ, ತಿರಸ್ಕರಿಸದೇ ತಟಸ್ಥವಾಗಿದ್ದ ಮಂಜು ಪಾವಗಡ ಅವರು ದೀಪಿಕಾ ದಾಸ್ ಅವರಿಗೆ ‘ಐ ಲವ್ ಯೂ’ ಹೇಳಿದ್ದಾರೆ. ಹಾವು ಏಣಿ ಆಟವಾಡಲೆಂದೇ ಬಂದಿದ್ದ ಮಂಜು, ಈ ರೀತಿಯಾಗಿ ಪ್ರಪೋಸ್ ಮಾಡಿದಾಗ ಅದಕ್ಕೆ ಅಷ್ಟೇ ಕೂಲಾಗಿಯೇ ದೀಪಿಕಾ (Deepika Das) ಉತ್ತರಿಸಿದ್ದಾರೆ. ‘ಐ ಲವ್ ಯೂ ಟೂ’ ಎಂದು ಹೇಳುವ ಮೂಲಕ ಪ್ರೀತಿಯನ್ನು ಸ್ವೀಕರಿಸಿದ್ದಾರೆ.

    ಕಳೆದ ಸೀಸನ್ ನಲ್ಲಿ ಮನೆ ಮಾತಾಗಿದ್ದ ಸ್ಪರ್ಧಿ ಮಂಜು ಪಾವಗಡ. ನಗಿಸುತ್ತಲೇ, ಕಾಲೆಳೆಯುತ್ತದೇ ಸಖತ್ ಮನರಂಜನೆ ನೀಡಿದ್ದ ಸ್ಪರ್ಧಿ. ಇದೀಗ ಅವರು ದೊಡ್ಮನೆಗೆ ಲಗ್ಗೆ ಇಟ್ಟಿದ್ದು, ಸ್ವತಃ ಮನೆ ಒಳಗೆ ಇರುವವರಿಗೆ ಅಚ್ಚರಿ ಮೂಡಿಸಿದೆ. ಮಂಜು ಪ್ರವೇಶ ಸಾಕಷ್ಟು ಚರ್ಚೆಗೂ ಕಾರಣವಾಗಿದೆ. ಅನುಪಮಾ ಎಲಿಮಿನೇಷನ್ ನಂತರ 8 ಜನ ಸ್ಪರ್ಧಿಗಳಿರುವ‌ ಮನೆಯಲ್ಲಿ, ಕೇವಲ  ಜಟಾಪಟಿ ಮಾತ್ರ ಕಾಣಿಸುತ್ತಿತ್ತು. ಅದನ್ನು ಶಮನ ಮಾಡಲು ಮಂಜು ಬಂದಿದ್ದಾರೆ ಎನ್ನುವ ಮಾತೂ ಕೇಳಿ ಬರುತ್ತಿದೆ. ಇದನ್ನೂ ಓದಿ: ಬಾಯ್‌ಫ್ರೆಂಡ್ ಜೊತೆಗಿನ ರೊಮ್ಯಾಂಟಿಕ್ ಫೋಟೋ ಹಂಚಿಕೊಂಡ ಶ್ರುತಿ ಹಾಸನ್

    ಹಾವು – ಏಣಿ  ಟಾಸ್ಕ್ ವೇಳೆ ಮಂಜು ಪಾವಗಡ ಕೂಡ ಸ್ಪರ್ಧಿಗಳ ಜೊತೆಗೆ ಆಟವಾಡಿದ್ದಾರೆ. ಸ್ಪರ್ಧಿಗಳು ಹೇಳುವ ಸಂಖ್ಯೆಗೆ ದಾಳ ಕೂಡ ಹಾಕಿದ್ದಾರೆ. ಈ ವೇಳೆ, ಮಂಜುಗೆ ಅಮೂಲ್ಯ ಪ್ರಪೋಸ್ ಮಾಡಿದ್ದು, ಇದನ್ನ ನೋಡಿರೋ ರಾಕಿ, ಅಯ್ಯೋ ನನಗೆ ಹಾವು ಕಚ್ಚಿದ ಹಾಗೇ ಆಗುತ್ತಿದೆ ಎಂದಿದ್ದಾರೆ. ರಾಕಿ ಮಾತಿಗೆ ಮನೆಮಂದಿ ನಕ್ಕಿದ್ದಾರೆ.

    ಕಳೆದ ಸೀಸನ್ ನಲ್ಲಿ ಸ್ಪರ್ಧಿಯಾಗಿ ಮನೆ ಒಳಗೆ ಪ್ರವೇಶ ಬಯಸಿದ್ದ ಮಂಜು ಪಾವಗಡ ಈ ಬಾರಿ ಮನೆಗೆ ಸ್ಪೆಷಲ್ ಗೆಸ್ಟ್ ಆಗಿ ಬಂದಿದ್ದಾರೆ ಎಂದು ಹೇಳಲಾಗುತ್ತಿದೆ. ಎಷ್ಟು ಸಮಯ ಅವರು ಮನೆಯಲ್ಲಿ ಇರುತ್ತಾರೋ, ಅಷ್ಟು ಹೊತ್ತು ನೋಡುಗರಿಗೆ ಮನರಂಜನೆ ದುಪ್ಪಟ್ಟಾಗುವುದು ಖಚಿತ.

    Live Tv
    [brid partner=56869869 player=32851 video=960834 autoplay=true]

  • ಮಂಜು ಪಾವಗಡ ಮೇಲೆ ಅಮೂಲ್ಯ ಲವ್: ರಾಕೇಶ್ ಅಡಿಗ ಕಕ್ಕಾಬಿಕ್ಕಿ

    ಮಂಜು ಪಾವಗಡ ಮೇಲೆ ಅಮೂಲ್ಯ ಲವ್: ರಾಕೇಶ್ ಅಡಿಗ ಕಕ್ಕಾಬಿಕ್ಕಿ

    ಬಿಗ್ ಬಾಸ್ ಮನೆಗೆ ಹಾಸ್ಯ ಕಲಾವಿದ ಮಂಜು ಪಾವಗಡ ಪ್ರವೇಶ ಮಾಡಿದ್ದಾರೆ. ಗೆಸ್ಟ್ ರೀತಿಯಲ್ಲಿ ಮಂಜು ಎಂಟ್ರಿ ಕೊಟ್ಟಿದ್ದಾರೆ. ಈಗಾಗಲೇ ಬಿಗ್ ಬಾಸ್ ಟೈಟಲ್ ಗೆದ್ದಿರುವ ಮಂಜು ಆಗಮನ ಮನೆಯಲ್ಲಿ ನವ ಉಲ್ಲಾಸ ತಂದಿದೆ. ಈ ಉಲ್ಲಾಸವನ್ನು ತಡೆಯುವುದಕ್ಕೆ ಆಗದೇ ಮಂಜು ಪಾವಗಡ ಮುಂದೆ ಕೂತು ಅಮೂಲ್ಯ ಪ್ರೇಮ ನಿವೇದನೆ ಮಾಡಿಕೊಂಡಿದ್ದಾರೆ. ‘ಐ ಲವ್ ಯೂ’ ಎಂದು ಹೇಳುವ ಮೂಲಕ ರಾಕೇಶ್ ಅಡಿಗನಿಗೆ ಕಕ್ಕಾಬಿಕ್ಕಿ ಆಗುವಂತೆ ಮಾಡಿದ್ದಾರೆ.

    ರಾಕೇಶ್ ಅಡಿಗ ಮತ್ತು ಅಮೂಲ್ಯ ಬಿಗ್ ಬಾಸ್ ಮನೆಯಲ್ಲಿ ಕ್ಲೋಸ್ ಆಗಿರುವ ಜೋಡಿ. ಪ್ರೇಮಿಗಳ ರೀತಿಯಲ್ಲೇ ಅವರು ಯಾವಾಗಲೂ ವರ್ತಿಸುತ್ತಿರುತ್ತಾರೆ. ಇತ್ತೀಚಿನ ದಿನಗಳಲ್ಲಂತೂ ರಾಕೇಶ್ ಅಡಿಗನ ಜೊತೆಯೇ ಅಮೂಲ್ಯ ಹೆಚ್ಚು ಸಮಯ ಕಳೆಯುತ್ತಾರೆ. ಹೀಗಾಗಿ ಅಮೂಲ್ಯ ಆಡಿದ ಮಾತುಗಳು ರಾಕೇಶ್ ಅಚ್ಚರಿ ಮೂಡಿಸಿದ್ದವು. ಮಂಜು ಪಾವಗಡ ಮನೆಗೆ ಬಂದ ಕೆಲವೇ ಗಂಟೆಗಳಲ್ಲೇ ಅಮೂಲ್ಯಗೆ ಪ್ರೀತಿ ಹುಟ್ಟಲು ಹೇಗೆ ಸಾಧ್ಯ ಎನ್ನುವ ಪ್ರಶ್ನೆಯನ್ನೂ ಮೂಡಿಸಿವೆ. ಇದನ್ನೂ ಓದಿ: ಮಗ ರೂಪಿಗಾಗಿ, ಮಗುವಿನಂತೆ ಗಳಗಳನೇ ಅತ್ತ ಆರ್ಯವರ್ಧನ್‌ ಗುರೂಜಿ

    ಮಂಜು ಪಾವಗಡ ಮುಂದೆ ಮಂಡೆಯೂರಿ ಕುಳಿತು ‘ಐ ಲವ್ ಯೂ’ ಎಂದು ಅಮೂಲ್ಯ ಹೇಳಿದಾಗ, ಅಲ್ಲಿಯೇ ನಿಂತಿದ್ದ ರಾಕೇಶ್ ಅಡಿಗೆ ಅಚ್ಚರಿಯಿಂದಲೇ ಆ ದೃಶ್ಯವನ್ನು ನೋಡುತ್ತಾ, ‘ಈ ದೃಶ್ಯ ನೋಡ್ತಿದ್ದರೆ, ನನಗೆ ಹಾವು ಕಚ್ಚಿದಂತೆ ಫೀಲ್ ಆಗುತ್ತಿದೆ’ ಎಂದು ಪ್ರತಿಕ್ರಿಯಿಸುತ್ತಾರೆ. ರಾಕಿ ಮಾತಿಗೆ ಅಮೂಲ್ಯ ಸ್ಮೈಲ್ ನೀಡುತ್ತಾರೆ. ಅದು ಹಾವು ಏಣಿಯ ಆಟವಾಗಿದ್ದರಿಂದ, ಆ ಆಟವನ್ನು ಬಳಸಿಕೊಂಡೇ ಈ ಮೂವರು ಮಾತನಾಡುತ್ತಾರೆ.

    ಕಳೆದ ಸೀಸನ್ ನಲ್ಲಿ ಸ್ಪರ್ಧಿಯಾಗಿ ಮನೆ ಒಳಗೆ ಪ್ರವೇಶ ಬಯಸಿದ್ದ ಮಂಜು ಪಾವಗಡ ಈ ಬಾರಿ ಮನೆಗೆ ಸ್ಪೆಷಲ್ ಗೆಸ್ಟ್ ಆಗಿ ಬಂದಿದ್ದಾರೆ ಎಂದು ಹೇಳಲಾಗುತ್ತಿದೆ. ಎಷ್ಟು ಸಮಯ ಅವರು ಮನೆಯಲ್ಲಿ ಇರುತ್ತಾರೋ, ಅಷ್ಟು ಹೊತ್ತು ನೋಡುಗರಿಗೆ ಮನರಂಜನೆ ದುಪ್ಪಟ್ಟಾಗುವುದು ಖಚಿತ.

    Live Tv
    [brid partner=56869869 player=32851 video=960834 autoplay=true]

  • ಬಿಗ್ ಬಾಸ್ ಮನೆಗೆ ಅಚ್ಚರಿಯ ಎಂಟ್ರಿ : ಹಾವು ಏಣಿ ಆಟದಲ್ಲಿ ಮಂಜು ಪಾವಗಡ

    ಬಿಗ್ ಬಾಸ್ ಮನೆಗೆ ಅಚ್ಚರಿಯ ಎಂಟ್ರಿ : ಹಾವು ಏಣಿ ಆಟದಲ್ಲಿ ಮಂಜು ಪಾವಗಡ

    ಬಿಗ್ ಬಾಸ್ (Bigg Boss) ಮನೆಯ ಆಟ ಇದೀಗ ಕಡೆಯ ಘಟ್ಟದತ್ತ ಸಾಗುತ್ತಿದೆ. ಫಿನಾಲೆಗೆ ಕೆಲವೇ ದಿನಗಳು ಬಾಕಿಯಿದೆ. ಈ ವೇಳೆಯಲ್ಲಿ ‌ಮನೆಗೆ ಹೊಸ ಅತಿಥಿಯ ಆಗಮನವಾಗಿದೆ. ಅದೂ ಅಚ್ಚರಿಯ ರೀತಿಯಲ್ಲಿ ಎನ್ನುವುದು ವಿಶೇಷ. ಹೌದು, ದೊಡ್ಮನೆಗೆ ಬಿಗ್ ಬಾಸ್ ಸೀಸನ್ 8ರ ವಿನ್ನರ್ ಮಂಜು ಪಾವಗಡ ಪ್ರವೇಶ ಪಡೆದಿದ್ದಾರೆ. ಫಿನಾಲೆ ಕೆಲವೇ ದಿನಗಳು ಬಾಕಿ ಇರುವಾಗ ಈ ಎಂಟ್ರಿ ಕುತೂಹಲವನ್ನು ಮೂಡಿಸಿದೆ.

    ಕಳೆದ ಸೀಸನ್ ನಲ್ಲಿ ಮನೆ ಮಾತಾಗಿದ್ದ ಸ್ಪರ್ಧಿ ಮಂಜು ಪಾವಗಡ (Manju Pavagada). ನಗಿಸುತ್ತಲೇ, ಕಾಲೆಳೆಯುತ್ತದೇ ಸಖತ್ ಮನರಂಜನೆ ನೀಡಿದ್ದ ಸ್ಪರ್ಧಿ. ಇದೀಗ ಅವರು ದೊಡ್ಮನೆಗೆ ಲಗ್ಗೆ ಇಟ್ಟಿದ್ದು, ಸ್ವತಃ ಮನೆ ಒಳಗೆ ಇರುವವರಿಗೆ ಅಚ್ಚರಿ ಮೂಡಿಸಿದೆ. ಮಂಜು ಪ್ರವೇಶ ಸಾಕಷ್ಟು ಚರ್ಚೆಗೂ ಕಾರಣವಾಗಿದೆ. ಅನುಪಮಾ ಎಲಿಮಿನೇಷನ್ ನಂತರ 8 ಜನ ಸ್ಪರ್ಧಿಗಳಿರುವ‌ ಮನೆಯಲ್ಲಿ, ಕೇವಲ  ಜಟಾಪಟಿ ಮಾತ್ರ ಕಾಣಿಸುತ್ತಿತ್ತು. ಅದನ್ನು ಶಮನ ಮಾಡಲು ಮಂಜು ಬಂದಿದ್ದಾರೆ ಎನ್ನುವ ಮಾತೂ ಕೇಳಿ ಬರುತ್ತಿದೆ. ಇದನ್ನೂ ಓದಿ: ಪುನೀತ್ ಬಯೋಗ್ರಫಿ ‘ನೀನೇ ರಾಜಕುಮಾರ’ 4ನೇ ಆವೃತ್ತಿ ಬಿಡುಗಡೆ ಮಾಡಿದ ಅಶ್ವಿನಿ ಪುನೀತ್ ರಾಜ ಕುಮಾರ

    ಹಾವು – ಏಣಿ  ಟಾಸ್ಕ್ ವೇಳೆ ಮಂಜು ಪಾವಗಡ ಕೂಡ ಸ್ಪರ್ಧಿಗಳ ಜೊತೆಗೆ ಆಟವಾಡಿದ್ದಾರೆ. ಸ್ಪರ್ಧಿಗಳು ಹೇಳುವ ಸಂಖ್ಯೆಗೆ ದಾಳ ಕೂಡ ಹಾಕಿದ್ದಾರೆ. ಈ ವೇಳೆ, ಮಂಜುಗೆ ಅಮೂಲ್ಯ (Amulya) ಪ್ರಪೋಸ್ ಮಾಡಿದ್ದು, ಇದನ್ನ ನೋಡಿರೋ ರಾಕಿ, ಅಯ್ಯೋ ನನಗೆ ಹಾವು ಕಚ್ಚಿದ ಹಾಗೇ ಆಗುತ್ತಿದೆ ಎಂದಿದ್ದಾರೆ. ರಾಕಿ ಮಾತಿಗೆ ಮನೆಮಂದಿ ನಕ್ಕಿದ್ದಾರೆ.

    ಕಳೆದ ಸೀಸನ್ ನಲ್ಲಿ ಸ್ಪರ್ಧಿಯಾಗಿ ಮನೆ ಒಳಗೆ ಪ್ರವೇಶ ಬಯಸಿದ್ದ ಮಂಜು ಪಾವಗಡ ಈ ಬಾರಿ ಮನೆಗೆ ಸ್ಪೆಷಲ್ ಗೆಸ್ಟ್ ಆಗಿ ಬಂದಿದ್ದಾರೆ ಎಂದು ಹೇಳಲಾಗುತ್ತಿದೆ. ಎಷ್ಟು ಸಮಯ ಅವರು ಮನೆಯಲ್ಲಿ ಇರುತ್ತಾರೋ, ಅಷ್ಟು ಹೊತ್ತು ನೋಡುಗರಿಗೆ ಮನರಂಜನೆ ದುಪ್ಪಟ್ಟಾಗುವುದು ಖಚಿತ.

    Live Tv
    [brid partner=56869869 player=32851 video=960834 autoplay=true]

  • ಬೆಂಗಳೂರಿನ ಚುಮು ಚುಮು ಚಳಿಗೆ ವಾಟ್ ಎ ವೆದರ್ ಎಂದ ಅಮೂಲ್ಯ

    ಬೆಂಗಳೂರಿನ ಚುಮು ಚುಮು ಚಳಿಗೆ ವಾಟ್ ಎ ವೆದರ್ ಎಂದ ಅಮೂಲ್ಯ

    ಸ್ಯಾಂಡಲ್‌ವುಡ್ (Sandalwood) ನಟಿ ಅಮೂಲ್ಯ (Amulya) ಇತ್ತೀಚೆಗಷ್ಟೇ ಮುದ್ದು ಮಕ್ಕಳ ನಾಮಕರಣ ಮಾಡಿ ಸುದ್ದಿಯಲ್ಲಿದ್ದರು. ಇದೀಗ ಸಿಲಿಕಾನ್ ಸಿಟಿಯ ಚುಮು ಚುಮು ಚಳಿಗೆ ವಾಟ್ ಎ ವೆದರ್ ಎಂದಿದ್ದಾರೆ. ಕೂಲ್ ವೆದರ್‌ನಲ್ಲಿ ನಟಿ ಚೆಂದದ ಫೋಟೋಶೂಟ್‌ ಮಾಡಿಸಿದ್ದಾರೆ. ಈ ಫೋಟೋ ಸೋಷಿಯಲ್‌ ಮೀಡಿಯಾ ಸದ್ದು ಮಾಡ್ತಿದೆ.

    ಗೋಲ್ಡನ್ ಕ್ವೀನ್ ಅಮೂಲ್ಯ (Golden Queen Amulya) ಹೊಸ ಫೋಟೋಶೂಟ್‌ನಲ್ಲಿ ಮಿಂಚಿದ್ದಾರೆ. ಸೈಕ್ಲೋನ್ ಎಫೆಕ್ಟ್ ಬೆಂಗಳೂರಿಗೂ ತಟ್ಟಿದೆ. ಸಿಟಿಯಲ್ಲಿ ಸಿಕ್ಕಾಪಟ್ಟೆ ಚಳಿಯಿದೆ. ಜಿಟಿ ಜಿಟಿ ಮಳೆ ಕೂಡ ಆರ್ಭಟಿಸುತ್ತಿದೆ. ಸೂಪರ್ ವಾತಾವರಣ ನಿರ್ಮಾಣವಾಗಿದೆ. ಈ ವೇಳೆ ಕೂಲ್ ಕೂಲ್ ವೆದರ್‌ನಲ್ಲಿ ಅಮೂಲ್ಯ ಕ್ಯೂಟ್ ಆಗಿ ಕಾಣಿಸಿಕೊಂಡಿದ್ದಾರೆ.

     

    View this post on Instagram

     

    A post shared by Amulya (@nimmaamulya)

    ಚಳಿ ಮಳೆಯಿಂದ ಬೆಂಗಳೂರು ಕೂಲ್ ಆಗಿದೆ. ವಾಟ್ ಎ ವೆದರ್ ಸೂಪರ್ ಬೆಂಗಳೂರು ಎಂದು ನಟಿ ತಮ್ಮ ಇನ್ಸ್ಟಾಗ್ರಾಂ ಖಾತೆಯಲ್ಲಿ ಬರೆದುಕೊಂಡಿದ್ದಾರೆ. ಗಿಳಿ ಹಸಿರು ಚಕ್ಸ್ ಡ್ರೆಸ್‌ನಲ್ಲಿ ನಟಿ ಕ್ಯಾಮೆರಾ ಕಣ್ಣಿಗೆ ಕ್ಯೂಟ್ ಆಗಿ ಪೋಸ್ ನೀಡಿದ್ದಾರೆ. ನಟಿಯ ಲುಕ್‌ಗೆ ಫ್ಯಾನ್ಸ್ ಫಿದಾ ಆಗಿದ್ದಾರೆ. ಇದನ್ನೂ ಓದಿ:ಹಿರಿಯ ನಟ ಶರತ್‌ಕುಮಾರ್‌ಗೆ ಅನಾರೋಗ್ಯ: ಆಸ್ಪತ್ರೆಗೆ ದಾಖಲು

    ಬಂಗಾಳಕೊಲ್ಲಿಯಲ್ಲಿ ಮ್ಯಾಂಡಸ್ ಚಂಡಮಾರುತ ಸೃಷ್ಟಿಯಾಗಿದ್ದು, ಚೆನ್ನೈ ಸೇರಿದಂತೆ ತಮಿಳುನಾಡಿನ  ಹಲವೆಡೆ ಮಳೆ ಆರ್ಭಟಿಸುತ್ತಿದೆ. ಈ ಪರಿಣಾಮ ಕರ್ನಾಟಕದ ಹಲವು ಕಡೆ ಚಳಿ ಮತ್ತು ಮಳೆ ಜೋರಾಗಿದೆ.

    Live Tv
    [brid partner=56869869 player=32851 video=960834 autoplay=true]

  • ತಿರುಪತಿಯಲ್ಲಿ ಅವಳಿ ಮಕ್ಕಳ ಮುಡಿ ಕೊಟ್ಟ ಅಮೂಲ್ಯ ಜಗದೀಶ್ ದಂಪತಿ

    ತಿರುಪತಿಯಲ್ಲಿ ಅವಳಿ ಮಕ್ಕಳ ಮುಡಿ ಕೊಟ್ಟ ಅಮೂಲ್ಯ ಜಗದೀಶ್ ದಂಪತಿ

    ಸ್ಯಾಂಡಲ್‌ವುಡ್(Sandalwood) ಗೋಲ್ಡನ್ ಕ್ವೀನ್ ಅಮೂಲ್ಯ(Actree Amulya) ತಾಯ್ತನದ ಖುಷಿಯಲ್ಲಿದ್ದಾರೆ. ಇತ್ತೀಚೆಗಷ್ಟೇ ಅವಳಿ ಮಕ್ಕಳ ನಾಮಕರಣವನ್ನ ಅದ್ದೂರಿಯಾಗಿ ಮಾಡಿದ್ದರು. ಈ ಬೆನ್ನಲ್ಲೇ ಅವಳಿ ಮಕ್ಕಳ ಮುಡಿ ಅಮೂಲ್ಯ ಮುಡಿ ಕೊಟ್ಟಿದ್ದಾರೆ.

    `ಚೆಲುವಿನ ಚಿತ್ತಾರ’ ಸಿನಿಮಾ ಮೂಲಕ ಸಂಚಲನ ಮೂಡಿಸಿದ್ದ ನಟಿ ಅಮೂಲ್ಯ ಇದೀಗ ಸಂಸಾರಿಕ ಜೀವನದಲ್ಲಿ ಬ್ಯುಸಿಯಾಗಿದ್ದಾರೆ. ಸಿನಿಮಾಗೆ ಬ್ರೇಕ್ ಹಾಕಿ, ಮದುವೆ, ಪತಿ ಮತ್ತು ಮಕ್ಕಳು ಅಂತಾ ಬ್ಯುಸಿಯಾಗಿದ್ದಾರೆ. ಇದೀಗ ಇಡೀ ಕುಟುಂಬ ಸಮೇತ ತಿರುಪತಿಗೆ ತೆರಳಿದ್ದಾರೆ. ನಾಮಕರಣ ಆಗಿ ಕೆಲವೇ ದಿನಗಳಲ್ಲಿ ಅಮೂಲ್ಯಾ ಮತ್ತು ಜಗದೀಶ್ ದಂಪತಿ ಮಕ್ಕಳ ಮುಡಿ ಕೊಟ್ಟಿದ್ದಾರೆ. ಇದನ್ನೂ ಓದಿ:ಕನ್ನಡತಿ ಅನುಷಾ ಶೆಟ್ಟಿ ಜೊತೆ ಹಸೆಮಣೆ ಏರಿದ ತೆಲುಗು ನಟ ನಾಗಶೌರ್ಯ

    ಹೊಸ ಲುಕ್‌ಲ್ಲಿ ಕಾಣಿಸಿಕೊಂಡಿರುವ ಅಥರ್ವ್ ಮತ್ತು ಆಧವ್ ಜೊತೆ ಇಡೀ ಕುಟುಂಬ ಕ್ಯಾಮರಾಗೆ ಪೋಸ್ ನೀಡಿದೆ. ಅಥರ್ವ ಮತ್ತು ಆಧವ್ ಫೋಟೋಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.

    ತಿರುಪತಿ ದೇವ್ಥಾನದ ಮುಂದೆ ನಿಂತು ಕ್ಯಾಮರಾಗೆ ಪೋಸ್ ನೀಡಿರುವ ಫೋಟೋಗಳಿಗೆ ಅಭಿಮಾನಿಗಳು ಮೆಚ್ಚುಗೆ ವ್ಯಕ್ತಪಡಿಸುತ್ತಿದ್ದಾರೆ.

    Live Tv
    [brid partner=56869869 player=32851 video=960834 autoplay=true]

  • ಅ ಅಕ್ಷರದಿಂದಲೇ ಮಕ್ಕಳಿಗೆ ಮುದ್ದಾದ ಹೆಸರಿಟ್ಟ ಅಮೂಲ್ಯ

    ಅ ಅಕ್ಷರದಿಂದಲೇ ಮಕ್ಕಳಿಗೆ ಮುದ್ದಾದ ಹೆಸರಿಟ್ಟ ಅಮೂಲ್ಯ

    ಗೋಲ್ಡನ್ ಕ್ವೀನ್ ಅಮೂಲ್ಯ(Amulya) ಮನೆಯಲ್ಲಿ ಸಂಭ್ರಮ ಮನೆ ಮಾಡಿದೆ. ಇಬ್ಬರು ಮುದ್ದು ಮಕ್ಕಳ ನಾಮಕರಣದ ಸಂಭ್ರಮದಲ್ಲಿದ್ದಾರೆ. ನಟಿ ಅಮೂಲ್ಯ ಜಗದೀಶ್ ಅವರ ಅವಳಿ ಮಕ್ಕಳಿಗೆ ನಾಮಕರಣಕ್ಕೆ ಇಡೀ ಸ್ಯಾಂಡಲ್‌ವುಡ್(Sandalwood) ಸಾಕ್ಷಿಯಾಗಿದೆ.

    ಚಂದನವನದಲ್ಲಿ ಸಾಲು ಸಾಲು ಸಿನಿಮಾಗಳಲ್ಲಿ ನಟಿಯಾಗಿ ಮಿಂಚಿದ ಗೋಲ್ಡನ್ ನಟಿ ಅಮೂಲ್ಯ ಮದುವೆ, ಸಂಸಾರ, ಮಕ್ಕಳು ಎಂದು ಬ್ಯುಸಿಯಾಗಿದ್ದಾರೆ. ಇದನ್ನೂ ಓದಿ:ಭಾರತಕ್ಕೆ ಬೈ ಹೇಳಿದ ಬೆನ್ನಲ್ಲೇ ಕ್ರಿಸ್‌ಮಸ್‌ಗೆ ಪ್ರಿಯಾಂಕಾ ಚೋಪ್ರಾ ತಯಾರಿ

    ಕೆಲ ತಿಂಗಳುಗಳ ಹಿಂದೆ ಅಮೂಲ್ಯ ಅವಳಿ ಮಕ್ಕಳಿಗೆ ಜನ್ಮ ನೀಡಿದ್ದರು. ಅಮೂಲ್ಯ ಜಗದೀಶ್(Amulya Jagadeesh) ದಂಪತಿ ಅವಳಿ ಮಕ್ಕಳಿಗೆ (ನ.10) ನಾಮಕರಣ ಶಾಸ್ತ್ರ ಮಾಡಿದ್ದಾರೆ. ಮಕ್ಕಳಿಗೆ ಅಥರ್ವ್ ಮತ್ತು ಆಧವ್ ಎಂದು ಮುದ್ದಾದ ಹೆಸರನ್ನ ಇಟ್ಟಿದ್ದಾರೆ.

    ಅಮೂಲ್ಯ ತಮ್ಮ ಅವಳಿ ಮಕ್ಕಳಿಗೆ ಅಥರ್ವ್ ಮತ್ತು ಆಧವ್ ಎಂಬ ಭಿನ್ನ ಹೆಸರನ್ನ ಇಟ್ಟಿದ್ದಾರೆ. ಇನ್ನೂ ಈ ಅದ್ದೂರಿ ಕಾರ್ಯಕ್ರಮಕ್ಕೆ ಸ್ಯಾಂಡಲ್‌ವುಡ್ ತಾರೆಯರು, ಆಪ್ತರು ಸಾಕ್ಷಿಯಾಗಿದ್ದಾರೆ. ಮುದ್ದಾದ ಮಕ್ಕಳಿಗೆ ಸೋಷಿಯಲ್ ಮೀಡಿಯಾ ಮೂಲಕ ಫ್ಯಾನ್ಸ್ ಶುಭಹಾರೈಸಿದ್ದಾರೆ.

    ಅಮೂಲ್ಯ ಮಕ್ಕಳ ನಾಮಕರಣಕ್ಕೆ ಶಿವರಾಜ್‌ಕುಮಾರ್ ದಂಪತಿ, ಡಾರ್ಲಿಂಗ್ ಕೃಷ್ಣ ಮತ್ತು ಮಿಲನಾ ನಾಗರಾಜ್ ದಂಪತಿ, ಲವ್ಲೀ ಸ್ಟಾರ್ ಪ್ರೇಮ್ ಕುಟುಂಬ, ಹಿರಿಯ ನಟಿ ತಾರಾ, ಆಲ್ ಓಕೆ, ಅಜಯ್ ರಾವ್, ಧ್ರುವಾ ಸರ್ಜಾ, ಸೋನು ಗೌಡ, ಗೋಲ್ಡನ್‌ ಸ್ಟಾರ್‌ ಗಣೇಶ್‌,  ಹೀಗೆ ಸಾಕಷ್ಟು ತಾರೆಯರು ಈ ಸಂಭ್ರಮಕ್ಕೆ ಸಾಕ್ಷಿಯಾಗಿದ್ದಾರೆ.

    Live Tv
    [brid partner=56869869 player=32851 video=960834 autoplay=true]

  • ಅಥರ್ವ್-ಆಧವ್ ಎಂದು ಅವಳಿ ಮಕ್ಕಳಿಗೆ ಮುದ್ದಾದ ಹೆಸರಿಟ್ಟ ನಟಿ ಅಮೂಲ್ಯ

    ಅಥರ್ವ್-ಆಧವ್ ಎಂದು ಅವಳಿ ಮಕ್ಕಳಿಗೆ ಮುದ್ದಾದ ಹೆಸರಿಟ್ಟ ನಟಿ ಅಮೂಲ್ಯ

    ಗೋಲ್ಡನ್ ಕ್ವೀನ್ ಅಮೂಲ್ಯ(Amulya) ಸದ್ಯ ತಾಯ್ತನದ ಖುಷಿಯಲ್ಲಿದ್ದಾರೆ. ಇಬ್ಬರು ಮುದ್ದು ಮಕ್ಕಳ ಆರೈಕೆಯಲ್ಲಿ ಬ್ಯುಸಿಯಾಗಿದ್ದಾರೆ. ಇಂದು ಅವಳಿ ಮಕ್ಕಳಿಗೆ ನಾಮಕರಣ ಮಾಡಿದ್ದಾರೆ.

     

    View this post on Instagram

     

    A post shared by Jagdish R Chandra (@jagdishrchandra)

    ಚಂದನವನದಲ್ಲಿ ಸಾಲು ಸಾಲು ಸಿನಿಮಾಗಳಲ್ಲಿ ನಟಿಯಾಗಿ ಮಿಂಚಿದ ಗೋಲ್ಡನ್ ನಟಿ ಅಮೂಲ್ಯ ಮದುವೆ, ಸಂಸಾರ, ಮಕ್ಕಳು ಎಂದು ಬ್ಯುಸಿಯಾಗಿದ್ದಾರೆ. ಕೆಲ ತಿಂಗಳುಗಳ ಹಿಂದೆ ಅಮೂಲ್ಯ ಅವಳಿ ಮಕ್ಕಳಿಗೆ ಜನ್ಮ ನೀಡಿದ್ದರು. ಅಮೂಲ್ಯ ಜಗದೀಶ್ ದಂಪತಿ ಅವಳಿ ಮಕ್ಕಳಿಗೆ (ನ.10) ನಾಮಕರಣ ಶಾಸ್ತ್ರ ಮಾಡಿದ್ದಾರೆ. ಇದನ್ನೂ ಓದಿ:ದೊಡ್ಮನೆ ಕುಡಿ ಯುವ ಚಿತ್ರದ ಬಗ್ಗೆ ಗುಡ್ ನ್ಯೂಸ್ ಕೊಟ್ರು ಸಂತೋಷ್ ಆನಂದ್‌ರಾಮ್

    ಅಮೂಲ್ಯ ತಮ್ಮ ಅವಳಿ ಮಕ್ಕಳಿಗೆ ಅಥರ್ವ್ ಮತ್ತು ಆಧವ್(Atharva & Aadhav) ಎಂಬ ಭಿನ್ನ ಹೆಸರನ್ನ ಇಟ್ಟಿದ್ದಾರೆ. ಇನ್ನೂ ಈ ಅದ್ದೂರಿ ಕಾರ್ಯಕ್ರಮಕ್ಕೆ ಸ್ಯಾಂಡಲ್‌ವುಡ್ ತಾರೆಯರು, ಆಪ್ತರು ಸಾಕ್ಷಿಯಾಗಿದ್ದಾರೆ. ಮುದ್ದಾದ ಮಕ್ಕಳಿಗೆ ಸೋಷಿಯಲ್ ಮೀಡಿಯಾ ಮೂಲಕ ಫ್ಯಾನ್ಸ್ ಶುಭಹಾರೈಸಿದ್ದಾರೆ.

    Live Tv
    [brid partner=56869869 player=32851 video=960834 autoplay=true]

  • ಮಾತಿನಿಂದಲೇ ಎಲ್ಲಾ ಶುರುವಾಗೋದು: ರಾಕಿಗೆ ಅಮೂಲ್ಯ ಕ್ಲಾಸ್

    ಮಾತಿನಿಂದಲೇ ಎಲ್ಲಾ ಶುರುವಾಗೋದು: ರಾಕಿಗೆ ಅಮೂಲ್ಯ ಕ್ಲಾಸ್

    ಬಿಗ್ ಬಾಸ್ ಮನೆಯಲ್ಲಿ(Bigg Boss House) ಸಾಕಷ್ಟು ವಿಚಾರಗಳು ಹೈಲೈಟ್ ಆಗುತ್ತಿದೆ. ಕಳೆದ ಸೀಸನ್‌ನಲ್ಲಿ ಸೋನು ಮತ್ತು ರಾಕೇಶ್ ಅಡಿಗ ಪ್ರೇಮ ಪ್ರಸಂಗ ಸಖತ್ ಸದ್ದು ಮಾಡಿತ್ತು. ಇದೀಗ ಟಿವಿ ಬಿಗ್ ಬಾಸ್‌ನಲ್ಲಿ ರಾಕೇಶ್ ಅಡಿಗ(Rakesh Adiga) ಮತ್ತು ಅಮೂಲ್ಯ (Amulya Gowda) ನಡುವೆ ಆಪ್ತತೆ ಬೆಳೆಯುತ್ತಿದೆ.

    ದೊಡ್ಮನೆ ಇದೀಗ ನಾಲ್ಕನೇ ವಾರಕ್ಕೆ ಕಾಲಿಟ್ಟಿದೆ. ಪ್ರತಿ ಸ್ಪರ್ಧಿಗಳು ಕೂಡ ಒಂದಲ್ಲಾ ಒಂದು ವಿಚಾರವಾಗಿ ಹೈಲೈಟ್ ಆಗುತ್ತಿದ್ದಾರೆ. ಈ ನಡುವೆ ಹಲವರ ಮಧ್ಯೆ ಅಟ್ಯಾಚ್‌ಮೆಂಟ್ ಬೆಳೆಯುತ್ತಿದೆ. ಓಟಿಟಿಯಿಂದ ಗಮನ ಸೆಳೆದ ರಾಕೇಶ್ ಅಡಿಗ ಟಿವಿ ಬಿಗ್ ಬಾಸ್‌ನಲ್ಲೂ ಕಮಾಲ್ ಮಾಡುತ್ತಿದ್ದಾರೆ. ಈ ಸೀಸನ್‌ನಲ್ಲಿ ನಟಿ ಅಮೂಲ್ಯ ಜೊತೆ ಹೆಚ್ಚಾಗಿ ಕಾಣಿಸಿಕೊಳ್ಳುತ್ತಿದ್ದಾರೆ. ಇಬ್ಬರ ನಡುವೆ ಆಪ್ತತೆ ಬೆಳೆಯುತ್ತಿದೆ. ಇದನ್ನೂ ಓದಿ:ರಿಷಬ್ ಶೆಟ್ಟಿಗೆ ತೆಲುಗಿನಿಂದ ಭಾರೀ ಆಫರ್: ಸಣ್ಣದೊಂದು ಬ್ರೇಕ್ ಕೇಳಿದ ನಟ

    ಇನ್ನೂ ಮನೆಯಲ್ಲಿ ಕಸ ಗುಡಿಸುವ ವೇಳೆಯಲ್ಲಿ ರಾಕೇಶ್ ಅಡಿಗ, ಅಮೂಲ್ಯಗೆ(Amulya Gowda) ಸಹಾಯ ಮಾಡಿದ್ದಾರೆ. ಅಟ್ಯಾಚ್‌ಮೆಂಟ್ ಬಗ್ಗೆ ಕ್ಲಾಸ್ ತೆಗೆದುಕೊಂಡಿದ್ದಾರೆ. ನಾನು ಬಿಗ್ ಬಾಸ್‌ಗೆ ಬರುವ ಮುಂಚೆನೇ ಡಿಸೈಡ್ ಆಗಿದ್ದೆ, ಯಾರಿಗೂ ಜಾಸ್ತಿ ಕ್ಲೋಸ್ ಆಗಬಾರದು ಎಂಬ ಮಾತನ್ನ ರಾಕೇಶ್ ಮಾತನಾಡಿದರು. ಈ ವೇಳೆ ಅಮೂಲ್ಯ ಕೂಡ ಈ ಮಾತಿನಿಂದಲೇ ಎಲ್ಲಾ ಶುರುವಾಗೋದು, ಆಮೇಲೆ ಫ್ರೆಂಡ್‌ಶಿಪ್‌ನಲ್ಲಿ(Friendship) ಹರ್ಟ್ ಆದರೆ ಅದನ್ನ ಸಹಿಸಿಕೊಳ್ಳಲು ಸಾಧ್ಯವಿಲ್ಲ ಎಂದಿದ್ದಾರೆ.

    ಈ ವೇಳೆ ಅಮೂಲ್ಯಗೆ ಕಸ ಗುಡಿಸುವ ಸಂದರ್ಭದಲ್ಲಿ ರಾಕೇಶ್ ಸಹಾಯ ಮಾಡ್ತಿರೋದನ್ನ ನೋಡಿ, ಉಳಿದ ಹುಡುಗಿಯರಿಗೂ ಸಹಾಯ ಮಾಡಪ್ಪ ಎಂದು ದೀಪಿಕಾ ದಾಸ್ ಅವರು ರಾಕೇಶ್ ಅಡಿಗ ಕಾಲೆಳೆದಿದ್ದಾರೆ.

    Live Tv
    [brid partner=56869869 player=32851 video=960834 autoplay=true]