Tag: amulya

  • ಸಂಕ್ರಾಂತಿಗೆ ಅಮೂಲ್ಯ ಮನೆಗೆ ಗಂಗೆ, ದ್ರೌಪದಿ ಆಗಮನ

    ಸಂಕ್ರಾಂತಿಗೆ ಅಮೂಲ್ಯ ಮನೆಗೆ ಗಂಗೆ, ದ್ರೌಪದಿ ಆಗಮನ

    ಬೆಂಗಳೂರು: ಸ್ಯಾಂಡಲ್‍ವುಡ್ ನಟಿ ಅಮೂಲ್ಯ ಅವರ ಮನೆಗೆ ಗೋವುಗಳನ್ನು ತಂದು ಗೋವುಗಳಿಗೆ ಪೂಜೆ ಮಾಡಿ ಅದ್ಧೂರಿಯಾಗಿ ಸಂಕ್ರಾಂತಿ ಹಬ್ಬವನ್ನು ಆಚರಿಸಿದ್ದಾರೆ.

    ಅಮೂಲ್ಯ ಹಾಗೂ ಪತಿ ಜಗದೀಶ್ ಸೇರಿ ಸಂಕ್ರಾತಿಯನ್ನು ಅದ್ಧೂರಿಯಾಗಿ ಆಚರಿಸಿದ್ದಾರೆ. ಅಮೂಲ್ಯ ಅವರು ಗೋವಿಗೆ ಪೂಜೆ ಮಾಡುತ್ತಿರುವ ಫೋಟೋವನ್ನು ತಮ್ಮ ಇನ್‍ಸ್ಟಾಗ್ರಾಮ್‍ನಲ್ಲಿ ಶೇರ್ ಮಾಡಿಕೊಂಡಿದ್ದು, ಮಕರ ಸಂಕ್ರಾಂತಿ ಹಬ್ಬದ ಹಾರ್ದಿಕ ಶುಭಾಶಯ ಕೋರಿ ನಮ್ಮ ಮನೆಗೆ ಸಂಕ್ರಾಂತಿ ಹಬ್ಬದ ದಿನ ಗಂಗೆ ಮತ್ತು ದ್ರೌಪದಿ ಎಂಬ ಹೆಸರಿನ ಹೊಸ ಅತಿಥಿಗಳ ಆಗಮನವಾಗಿದೆ ಎಂದು ಸಾಮಾಜಿಕ ಜಾಲತಾಣದಲ್ಲಿ ಬರೆದುಕೊಂಡಿದ್ದಾರೆ.

    ನಟಿ ಮೊದಲ ಮಗುವಿನ ನಿರೀಕ್ಷೆಯಲ್ಲಿ ಇದ್ದಾರೆ ಎನ್ನುವ ವಿಚಾರ ಎಲ್ಲರಿಗೂ ತಿಳಿದಿದೆ. ತುಂಬು ಗರ್ಭಿಣಿಯಾಗಿರುವ ನಟಿ ಅಮೂಲ್ಯ ಫೋಟೋಶೂಟ್ ಮಾಡಿಸಿರುವ ಫೋಟೋ ಭಾರೀ ವೈರಲ್ ಆಗಿತ್ತು. ಈ ಫೋಟೋಗಳನ್ನು ತಮ್ಮ ಇನ್‍ಸ್ಟಾಗ್ರಾಮ್‍ನಲ್ಲಿ ಪೋಸ್ಟ್ ಮಾಡಿದ್ದಾರೆ. ಅಭಿಮಾನಿಗಳು ಮೆಚ್ಚುಗೆ ಸೂಚಿಸಿ ಕಾಮೆಂಟ್ ಮಾಡುತ್ತಿದ್ದಾರೆ. ಇದನ್ನೂ ಓದಿ: ಬೇಬಿ ಬಂಪ್ ಫೋಟೋಶೂಟ್‍ನಲ್ಲಿ ನಟಿ ಅಮೂಲ್ಯ

    ಅಮೂಲ್ಯ ಸ್ಯಾಂಡಲ್‍ವುಡ್‍ಗೆ ಬಾಲ ನಟಿಯಾಗಿ ಎಂಟ್ರಿಕೊಟ್ಟರು. ನಂತರ ಚೆಲುವಿನ ಚಿತ್ತಾರ ಸಿನಿಮಾ ಮೂಲಕ ಹೀರೋಯಿನ್ ಆಗಿ ಚಿರಪರಿಚಿತರಾದರು. ಉತ್ತಮವಾದ ನಟನೆಯ ಮೂಲಕವಾಗಿ ಅಭಿಮಾನಿಗಳ ಮನದಲ್ಲಿ ಜಾಗ ಗಿಟ್ಟಿಸಿಕೊಂಡರು. 2017ರಲ್ಲಿ ಜಗದೀಶ್ ಅವರ ಜೊತೆಗೆ ದಾಂಪತ್ಯ ಜೀವನಕ್ಕೆ ಕಾಲಿಟ್ಟರು. ದಂಪತಿ ಮೊದಲ ಮಗುವಿನ ನೀರಿಕ್ಷೆಯಲ್ಲಿದ್ದಾರೆ. ಇದನ್ನೂ ಓದಿ: ರಿಯಲ್ ಸ್ಟಾರ್  ಉಪ್ಪಿ ಮನೆಯಲ್ಲಿ ಸಂಕ್ರಾಂತಿ ಸಡಗರ

  • ಬೇಬಿ ಬಂಪ್ ಫೋಟೋಶೂಟ್‍ನಲ್ಲಿ ನಟಿ ಅಮೂಲ್ಯ

    ಬೇಬಿ ಬಂಪ್ ಫೋಟೋಶೂಟ್‍ನಲ್ಲಿ ನಟಿ ಅಮೂಲ್ಯ

    ಬೆಂಗಳೂರು: ಸ್ಯಾಂಡಲ್‍ವುಡ್ ನಟಿ ಅಮೂಲ್ಯ ಅವರು ತುಂಬು ಗರ್ಭಿಣಿ ಎನ್ನುವುದು ಗೊತ್ತಿರುವ ವಿಚಾರವಾಗಿದೆ. ಇದೀಗ ಅವರು ಬೇಬಿ ಬಂಪ್ ಫೋಟೋಶೂಟ್ ಮಾಡಿಸಿದ್ದು, ಸೋಶಿಯಲ್ ಮೀಡಿಯಾದಲ್ಲಿ ಈ ಫೋಟೋಗಳು ಸಖತ್ ವೈರಲ್ ಆಗುತ್ತಿದೆ.

    ನಟಿ ಅಮೂಲ್ಯ ಅವರು ಮೊದಲ ಮಗುವಿನ ನಿರೀಕ್ಷೆಯಲ್ಲಿ ಇದ್ದಾರೆ ಎನ್ನುವ ವಿಚಾರ ಎಲ್ಲರಿಗೂ ತಿಳಿದಿದೆ. ಇದೀಗ ತುಂಬು ಗರ್ಭಿಣಿಯಾಗಿರುವ ನಟಿ ಅಮೂಲ್ಯ ಫೋಟೋಶೂಟ್ ಮಾಡಿಸಿದ್ದಾರೆ. ಈ ಫೋಟೋಗಳನ್ನು ತಮ್ಮ ಇನ್‍ಸ್ಟಾಗ್ರಾಮ್‍ನಲ್ಲಿ ಪೋಸ್ಟ್ ಮಾಡಿದ್ದಾರೆ. ಅಭಿಮಾನಿಗಳು ಮೆಚ್ಚುಗೆ ಸೂಚಿಸಿ ಕಾಮೆಂಟ್ ಮಾಡುತ್ತಿದ್ದಾರೆ.

     

    View this post on Instagram

     

    A post shared by Amulya (@nimmaamulya)

    ತಾವು ತಾಯಿಯಾಗುತ್ತಿರುವ ವಿಚಾರವನ್ನು ಸ್ವತಃ ಅಮೂಲ್ಯ ಅವರೇ ತಿಳಿಸಿದ್ದರು. ಪತಿ ಜಗದೀಶ್ ಜೊತೆ ಇರುವ ಒಂದು ವಿಶೇಷ ಫೋಟೋವನ್ನು ಹಂಚಿಕೊಂಡು ಸದ್ಯ ನಾವು ಈಗ ಇಬ್ಬರಲ್ಲ. 2022ರಲ್ಲಿ ಮೂವರಾಗುತ್ತಿದ್ದೇವೆ ಎಂದು ಬರೆದುಕೊಂಡಿದ್ದರು. ಇದೀಗ ಬೇಬಿ ಬಂಪ್ ಫೋಟೋವನ್ನು ಹಂಚಿಕೊಂಡಿದ್ದಾರೆ. ಇದನ್ನೂ ಓದಿ:  ಪತಿಗೆ ತಾನು ಇಟ್ಟಿರೋ ಹೆಸರನ್ನು ಮೊದಲ ಬಾರಿ ರಿವೀಲ್ ಮಾಡಿದ ರಾಧಿಕಾ

     

    View this post on Instagram

     

    A post shared by Amulya (@nimmaamulya)

    ಅಮೂಲ್ಯ ಸ್ಯಾಂಡಲ್‍ವುಡ್‍ಗೆ ಬಾಲನಟಿಯಾಗಿ ಎಂಟ್ರಿಕೊಟ್ಟರು. ನಂತರ ಚೆಲುವಿನ ಚಿತ್ತಾರ ಸಿನಿಮಾ ಮೂಲಕ ಹೀರೋಯಿನ್ ಆಗಿ ಚಿರಪರಿಚಿತರಾದರು. ಉತ್ತಮವಾದ ನಟನೆಯ ಮೂಲಕವಾಗಿ ಅಭಿಮಾನಿಗಳ ಮನದಲ್ಲಿ ಜಾಗ ಗಿಟ್ಟಿಸಿಕೊಂಡರು. 2017ರಲ್ಲಿ ಜಗದೀಶ್ ಅವರ ಜೊತೆಗೆ ದಾಂಪತ್ಯ ಜೀವನಕ್ಕೆ ಕಾಲಿಟ್ಟರು. ದಂಪತಿ ಮೊದಲ ಮಗುವಿನ ನೀರಿಕ್ಷೆಯಲ್ಲಿದ್ದಾರೆ. ಇದನ್ನೂ ಓದಿ: ಸಖತ್ ಸದ್ದು ಮಾಡುತ್ತಿದೆ ಜಡ್ಡುವಿನ ಪುಷ್ಟ ಲುಕ್

  • ರಾಮಂದಿರ ನಿರ್ಮಾಣಕ್ಕೆ 2.50 ಲಕ್ಷ ರೂ. ದೇಣಿಗೆ ನೀಡಿದ ಅಮೂಲ್ಯ ದಂಪತಿ

    ರಾಮಂದಿರ ನಿರ್ಮಾಣಕ್ಕೆ 2.50 ಲಕ್ಷ ರೂ. ದೇಣಿಗೆ ನೀಡಿದ ಅಮೂಲ್ಯ ದಂಪತಿ

    ಬೆಂಗಳೂರು: ನಟಿ ಅಮೂಲ್ಯ, ಜಗದೀಶ್ ದಂಪತಿ ರಾಮ ಮಂದಿರ ನಿರ್ಮಾಣಕ್ಕೆ 2.50 ಲಕ್ಷ ರೂಪಾಯಿ ದೇಣಿಗೆಯನ್ನು ನೀಡಿದ್ದಾರೆ.

    ಶ್ರೀರಾಮ ಮಂದಿರ ನಿರ್ಮಾಣ ನಿಧಿ ಸಮರ್ಪಣಾ ಅಭಿಯಾನ ದೇಶಾದ್ಯಂತ ನಡೆಯುತ್ತಿದ್ದು, ಪ್ರತಿಯೊಬ್ಬರೂ ಈ ಅಭಿಯಾನದಲ್ಲಿ ಪಾಲ್ಗೊಳ್ಳುತ್ತಿದ್ದಾರೆ. ನಮ್ಮ ಮನೆಗೆ ಬಿಜೆಪಿ ಸಂಘಟನಾ ಕಾರ್ಯದರ್ಶಿ ಅರುಣ್ ಕುಮಾರ್ ಅವರು ಆಗಮಿಸಿದ್ದರು. ಪ್ರತಿ ವರ್ಷವೂ ಜನ್ಮದಿನಾಚರಣೆಗಾಗಿ ಖರ್ಚು ಮಾಡುತ್ತಿದ್ದ ಹಣಕ್ಕೆ ನಮ್ಮಿಂದಾದ ಮೊತ್ತವನ್ನು ಸೇರಿಸಿ ಶ್ರೀರಾಮ ಮಂದಿರಕ್ಕಾಗಿ ಅರ್ಪಿಸಿದೆವು. ಈ ಕ್ಷಣ ನಮಗೆ ಅತ್ಯಂತ ಸಾರ್ಥಕತೆಯ ಕ್ಷಣವೆನಿಸಿತು ಜೈ ಶ್ರೀರಾಮ್ ಎಂದು ಬರೆದುಕೊಂಡು ಸೋಶಿಯಲ್ ಮೀಡಿಯಾದಲ್ಲಿ ಹಣವನ್ನು ನೀಡಿರುವ ರಶೀದಿಗಳನ್ನು ಅಮೂಲ್ಯ ಮತ್ತು ಜಗದೀಶ್ ಹಂಚಿಕೊಂಡಿದ್ದಾರೆ.

    ಜಗದೀಶ್ ಅವರು 1.50 ಲಕ್ಷ ರೂ. ಹಾಗೂ ಅವರ ತಂದೆ ಜಿ.ಎಚ್. ರಾಮಚಂದ್ರ ಅವರ ಹೆಸರಿನಲ್ಲಿ 1 ಲಕ್ಷ ರೂಪಾಯಿ ಹಣವನ್ನು ರಾಮಂದಿರ ನಿರ್ಮಾಣಕ್ಕೆ ನೀಡಲಾಗಿದೆ. ಚೆಕ್‍ಗೆ ಸಹಿ ಹಾಕುತ್ತಿರುವ ಹಾಗೂ ರಶೀದಿಗಳ ಫೋಟೋಗಳನ್ನು ಅಮೂಲ್ಯ ತಮ್ಮ ಫೇಸ್‍ಬುಕ್ ಖಾತೆಯಲ್ಲಿ ಶೇರ್ ಮಾಡಿಕೊಂಡಿದ್ದಾರೆ. ಜೊತೆಗೆ ಅಯೋಧ್ಯೆ ಶ್ರೀರಾಮನಿಗಾಗಿ ನಮ್ಮ ಕಿರುಕಾಣಿಕೆ ಎಂದು ಕ್ಯಾಪ್ಷನ್ ಕೂಡ ನೀಡಿದ್ದಾರೆ. ಸದ್ಯ ಸೋಶಿಯಲ್ ಮೀಡಿಯಾದಲ್ಲಿ ಅಮೂಲ್ಯ ಕುಟುಂಬದ ಈ ಕಾರ್ಯಕ್ಕೆ ಸಾಕಷ್ಟು ಮೆಚ್ಚುಗೆ ಮತ್ತು ಉತ್ತಮವಾದ ಪ್ರಶಂಸೆಗಳ ಮಹಾಪೂರವೇ ಹರಿದು ಬರುತ್ತಿದೆ.

    ಅಯೋಧ್ಯೆಯಲ್ಲಿ ಭವ್ಯ ಮಂದಿರ ನಿರ್ಮಾಣಕ್ಕೆ ಚಾಲನೆ ಸಿಕ್ಕಿದ ದಿನದಿಂದ ದೇಶಾದ್ಯಂತ ದೇಣಿಗೆ ಸಂಗ್ರಹ ಕಾರ್ಯ ಮಾಡಲಾಗುತ್ತಿದೆ. ಅನೇಕ ರಾಜಕೀಯ ನಾಯಕರು, ರಾಮ ಭಕ್ತರು, ಉದ್ಯಮಿಗಳು, ನಟ-ನಟಿಯರು ರಾಮ ಮಂದಿರ ನಿರ್ಮಾಣಕ್ಕೆ ದೇಣಿಗೆ ನೀಡುತ್ತಿದ್ದಾರೆ. ಬಾಲಿವುಡ್ ನಟ ಅಕ್ಷಯ್ ಕುಮಾರ್ ಅವರು ರಾಮಮಂದಿರ ನಿರ್ಮಾಣಕ್ಕೆ ದೇಣಿಗೆ ನೀಡುವಂತೆ ಕರೆ ನೀಡಿದ್ದರು. ನಟ ಜಗ್ಗೇಶ್, ಬಹುಭಾಷಾ ನಟಿ ಪ್ರಣಿತಾ, ತೆಲುಗು ನಟ ಪವನ್ ಕಲ್ಯಾಣ್, ಇದೀಗ ಸ್ಯಾಂಡಲ್‍ವುಡ್ ನಟಿ ಅಮೂಲ್ಯ ಮತ್ತು ಜಗದೀಶ್ ದಂಪತಿ ಕೂಡ ದೇಣಿಗೆ ನೀಡಿದ್ದಾರೆ.

    ಶ್ರೀರಾಮ ಮಂದಿರ ನಿರ್ಮಾಣ ನಿಧಿ ಸಮರ್ಪಣಾ ಅಭಿಯಾನ ದೇಶಾದ್ಯಂತ ನಡೆಯುತ್ತಿದ್ದು, ಪ್ರತಿಯೊಬ್ಬರೂ ಈ ಅಭಿಯಾನದಲ್ಲಿ ಪಾಲ್ಗೊಳ್ಳುತ್ತಿದ್ದಾರೆ. ಈ…

    Posted by Amulya & Jagdish on Sunday, 24 January 2021

  • ಅಭಿಮಾನಿಗಳ ಬಳಿ ನಟಿ ಅಮೂಲ್ಯ ಮನವಿ

    ಅಭಿಮಾನಿಗಳ ಬಳಿ ನಟಿ ಅಮೂಲ್ಯ ಮನವಿ

    ಬೆಂಗಳೂರು: ಸ್ಯಾಂಡಲ್‍ವುಡ್ ನಟಿ ಅಮೂಲ್ಯ ಜಗದೀಶ್ ಮದುವೆಯಾದ ನಂತರ ಯಾವುದೇ ಸಿನಿಮಾದಲ್ಲಿ ಅಭಿನಯಿಸಿಲ್ಲ. ಆದರೂ ಸದಾ ಸೋಶಿಯಲ್ ಮೀಡಿಯಾದಲ್ಲಿ ಸಕ್ರಿಯರಾಗಿರುತ್ತಾರೆ. ಇದೀಗ ತಮ್ಮ ಅಭಿಮಾನಿಗಳ ಬಳಿ ಒಂದು ಮನವಿ ಮಾಡಿಕೊಂಡಿದ್ದಾರೆ.  ಇದನ್ನೂ ಓದಿ: ಸ್ನೇಹಿತರಾದ ನಿಮಗೆಲ್ಲ ಒಂದು ಸಣ್ಣ ಮನವಿ: ಕಿಚ್ಚ ಸುದೀಪ್

    ಸೋಮವಾರ ಅಂದರೆ ನಾಳೆ ನಟಿ ಅಮೂಲ್ಯ ಹುಟ್ಟುಹಬ್ಬ ಇದೆ. ಆದರೆ ಈ ಬಾರಿ ಅದ್ಧೂರಿಯಾಗಿ ಹುಟ್ಟುಹಬ್ಬವನ್ನು ಆಚರಿಸಿಕೊಳ್ಳುತ್ತಿಲ್ಲ. ಆದ್ದರಿಂದ ಬರ್ತ್ ಡೇಗೂ ಒಂದು ದಿನ ಮುನ್ನವೇ ಸೋಶಿಯಲ್ ಮೀಡಿಯಾದ ಮೂಲಕ ಅಭಿಮಾನಿಗಳಲ್ಲಿ ಮನವಿ ಮಾಡಿಕೊಂಡಿದ್ದಾರೆ.

    “ನನ್ನ ಪ್ರೀತಿಯ ಅಭಿಮಾನಿಗಳೇ, ನಿಮ್ಮಲ್ಲೊಂದು ಮನವಿ. ನಿಮಗೆಲ್ಲಾ ತಿಳಿದಿರುವ ಹಾಗೆ ನಾಳೆ ನನ್ನ ಜನ್ಮದಿನ. ಪ್ರತಿವರ್ಷ ದೂರದೂರುಗಳಿಂದ ಬಂದು ನನ್ನನ್ನು ನೀವು ಹರಸುತ್ತೀರಾ, ಶುಭಾಶಯಗಳನ್ನು ತಿಳಿಸುತ್ತೀರಾ. ನಿಮ್ಮ ಪ್ರೀತಿ, ಅಭಿಮಾನವನ್ನು ಕಂಡು ನಾನು ಮೂಕವಿಸ್ಮಿತಳಾಗಿದ್ದೇನೆ” ಎಂದು ಅಭಿಮಾನಿಗಳ ಪ್ರೀತಿಯ ಬಗ್ಗೆ ಬರೆದುಕೊಂಡಿದ್ದಾರೆ.

    ಅಲ್ಲದೇ ಅಲ್ಲದೇ, “ಈ ಬಾರಿ ಕಾರಣಾಂತರಗಳಿಂದ ನಾನು ಮನೆಯಲ್ಲಿ ಇರುವುದಿಲ್ಲ. ಹೀಗಾಗಿ ನೀವಿರುವ ಸ್ಥಳದಿಂದಲೇ ನನಗೆ ಶುಭ ಹಾರೈಸಿ ಎಂಬ ಕೋರಿಕೆ ನನ್ನದು. ನಿಮ್ಮ ಪ್ರೀತಿ, ವಿಶ್ವಾಸ ಸದಾ ಇರಲಿ. ನಿಮ್ಮ ಪ್ರೀತಿಯ ಅಮೂಲ್ಯ ಜಗದೀಶ್” ಎಂದು ಫೇಸ್‍ಬುಕ್, ಟ್ವಿಟ್ಟರಿನಲ್ಲಿ ಬರೆದುಕೊಂಡಿದ್ದಾರೆ.

    ನಟಿ ಅಮೂಲ್ಯ ಲಾಕ್‍ಡೌನ್ ಸಂದರ್ಭದಲ್ಲಿ ತಮ್ಮ ಪತಿಯ ಜೊತೆ ಸೇರಿಕೊಂಡು ಬಡವರಿಗೆ, ಕಾರ್ಮಿಕರಿಗೆ ತಮ್ಮ ಕೈಲಾದ ಸಹಾಯವನ್ನು ಮಾಡಿದ್ದಾರೆ. ಸದ್ಯಕ್ಕೆ ಕುಟುಂಬದವರ ಜೊತೆ ಕಾಲಕಳೆಯುತ್ತಿದ್ದಾರೆ. ನಟಿ ಅಮೂಲ್ಯ ಮದುವೆಯಾದ ನಂತರ ಯಾವುದೇ ಸಿನಿಮಾದಲ್ಲಿ ಅಭಿನಯಿಸಿಲ್ಲ. ಆದರೆ ಒಳ್ಳೆಯ ಸ್ಕ್ರಿಪ್ಟ್ ಸಿಕ್ಕರೆ ಖಂಡಿತ ಮತ್ತೆ ತೆರೆ ಮೇಲೆ ಅಭಿನಯಿಸುವುದಾಗಿ ಹೇಳಿದ್ದಾರೆ.

    ಕೊರೊನಾದಿಂದ ಅಮೂಲ್ಯ ಮಾತ್ರವಲ್ಲದೇ ಅನೇಕ ನಟ, ನಟಿಯರು ತಮ್ಮ ಹುಟ್ಟುಹಬ್ಬವನ್ನು ಆಚರಿಸಿಕೊಂಡಿಲ್ಲ. ಇತ್ತೀಚೆಗೆ ನಟ ಸುದೀಪ್ ಕೂಡ ತಮ್ಮ ಹುಟ್ಟುಹಬ್ಬದ ಪ್ರಯುಕ್ತ ತುಮಕೂರಿನ ಸಿದ್ದಗಂಗಾ ಮಠಕ್ಕೆ ಹೋಗಿದ್ದರು. ಅವರು  ಕೂಡ ಅಭಿಮಾನಿಗಳಿಗೆ ಮನೆಯ ಬಳಿ ಬರಬಾರದೆಂದು ಮನವಿ ಮಾಡಿಕೊಂಡಿದ್ದರು.

  • ಕೊರೊನಾ ವಾರಿಯರ್ಸ್ ಸುರಕ್ಷತೆಗೆ ಮುಂದಾದ ಅಮೂಲ್ಯ-ಜಗದೀಶ್

    ಕೊರೊನಾ ವಾರಿಯರ್ಸ್ ಸುರಕ್ಷತೆಗೆ ಮುಂದಾದ ಅಮೂಲ್ಯ-ಜಗದೀಶ್

    ಬೆಂಗಳೂರು: ಸಾಮಾಜಿಕ ಕಾರ್ಯಗಳ ಮೂಲಕವೇ ಗುರುತಿಸಿಕೊಂಡಿರುವ ನಟಿ ಅಮೂಲ್ಯ- ಜಗದೀಶ ಚಂದ್ರ ದಂಪತಿ ಈ ಹಿಂದೆ ಆರ್‍ಎಸ್‍ಎಸ್ ಮೂಲಕ ಅಸಹಾಯಕರಿಗೆ 1 ಟನ್ ಅಕ್ಕಿ ನೀಡಿದ್ದರು. ಇದೀಗ ಇನ್ನೂ ಒಂದು ಹೆಜ್ಜೆ ಮುಂದೆ ಹೋಗಿದ್ದು, ಕೊರೊನಾ ವಾರಿಯರ್ಸ್ ಸುರಕ್ಷತೆಗೆ ಮುಂದಾಗಿದ್ದಾರೆ. ಈ ಮೂಲಕ ಎಲ್ಲರ ಮೆಚ್ಚುಗೆಗೆ ಪಾತ್ರರಾಗಿದ್ದಾರೆ. ಬಡವರಿಗೆ, ವೈದ್ಯರ ಸುರಕ್ಷತೆಗೆ, ಪೊಲೀಸರಿಗೆ ಕೈಲಾದಷ್ಟು ಸಹಾಯ ಮಾಡಿ, ಅವರನ್ನು ಗೌರವಿಸಿ ಎಂದು ಪ್ರಧಾನಿ ನರೇಂದ್ರ ಮೋದಿ ಕರೆ ನೀಡಿದ ಹಿನ್ನೆಲೆ ಅಮೂಲ್ಯಾ-ಜಗದೀಶ್ ದಂಪತಿ ಈ ಕಾರ್ಯ ಮಾಡುತ್ತಿದ್ದಾರೆ.

    ಪ್ರಧಾನಿ ಮೋದಿ ಕರೆಗೆ ಓಗುಟ್ಟು ನಟಿ ಅಮೂಲ್ಯಾ-ಜಗದೀಶ್ ದಂಪತಿ ಮಹತ್ತರ ಕೆಲಸಕ್ಕೆ ಕೈ ಹಾಕಿದ್ದು, ವೈದ್ಯರು, ಪೊಲೀಸರು, ಸ್ವಚ್ಛತಾ ಕೆಲಸಗಳಲ್ಲಿ ತೊಡಗಿರುವವರಿಗಾಗಿ ಒಟ್ಟು 10 ಸಾವಿರ ಮಾಸ್ಕ್‍ಗಳನ್ನು ತಯಾರಿಸುತ್ತಿದ್ದಾರೆ. ಇನ್ನೂ ವಿಶೇಷವೆಂದರೆ ಇವುಗಳನ್ನು ಯಾವುದೇ ಫ್ಯಾಕ್ಟರಿ ಅಥವಾ ಅಂಗಡಿಗಳಿಂದ ತರಿಸದೆ. 25ಕ್ಕೂ ಹೆಚ್ಚು ಜನ ಬಡ ಮಹಿಳಾ ಕಾರ್ಮಿಕರಿಂದ ಹೊಲಿಸುತ್ತಿದ್ದಾರೆ. ಈ ಮೂಲಕ ಮಹಿಳೆಯರಿಗೂ ಕೆಲಸ ನೀಡಿ, ಸಂಬಳ ಕೊಟ್ಟು ನೆರವಾಗುತ್ತಿದ್ದಾರೆ. ಹೀಗೆ ವಿವಿಧ ಸಾಮಾಜಿಕ ಕೆಲಸಗಳಲ್ಲಿ ತೊಡಗಿದ್ದಾರೆ.

    ಈ ಕುರಿತು ನಟಿ ಅಮೂಲ್ಯ ಪತಿ ಜಗದೀಶ್ ಅವರು ಸಾಮಾಜಿಕ ಜಾಲತಾಣಗಳಲ್ಲಿ ವಿಡಿಯೋ ಪೋಸ್ಟ್ ಮಾಡಿದ್ದು, ನಮ್ಮ ಹೆಮ್ಮೆಯ ಪ್ರಧಾನಿ ನರೇಂದ್ರ ಮೋದಿಯವರ ಮಾತುಗಳಿಂದ ಸ್ಫೂರ್ತಿ ಹೊಂದಿ ಈ ಕೆಲಸ ಮಾಡುತ್ತಿದ್ದೇವೆ. ಕೊರೊನಾ ವೈರಸ್ ವಿರುದ್ಧದ ಹೋರಾಟದಲ್ಲಿ ಹಗಲಿರುಳು ದುಡಿಯುತ್ತಿರುವ ಕೊರೊನಾ ವಾರಿಯರ್ಸ್ ಗಳಾದ ವೈದ್ಯಕೀಯ, ಪೊಲೀಸ್, ಸ್ವಚ್ಛತಾ ಕೆಲಸ ಮಾಡುವವರು, ಸ್ವಯಂ ಸೇವಕರಿಗೆ ಸಹಾಯ ಮಾಡಲು ಇರುವುದು ಒಂದೇ ದಾರಿ ಅದು ಅವರ ಸುರಕ್ಷತೆ. ಇಂತಹ ಸಂದರ್ಭದಲ್ಲಿ ಸಾಮಾಜಿಕ ಅಂತರ ಕಾಯ್ದುಕೊಳ್ಳುವುದು, ಮಾಸ್ಕ್ ಧರಿಸುವುದು ಅಗತ್ಯವಾಗಿದೆ.

    ಜಪಾನ್ ಸೇರಿದಂತೆ ಕೆಲವು ದೇಶಗಳು ಈ ಮಹಾಮಾರಿಯಿಂದ ಜಾಸ್ತಿ ತೊಂದರೆ ಅನುಭವಿಸಿಲ್ಲ. ಕಾರಣ ಅಲ್ಲಿ ಕಡ್ಡಾಯವಾಗಿ ಮಾಸ್ಕ್ ಧರಿಸುತ್ತಾರೆ. ನಮ್ಮ ಸರ್ಕಾರ ಸಹ ಮಾಸ್ಕ್ ಧರಿಸುವಂತೆ ಅರಿವು ಮೂಡಿಸುತ್ತಿದೆ. ಹೀಗಾಗಿ ಕೊರೊನಾ ವಾರಿಯರ್ಸ್ ಸುರಕ್ಷತೆ ದೃಷ್ಟಿಯಿಂದ ನಾವು ಅಳಿಲು ಸೇವೆ ಮಾಡುತ್ತಿದ್ದೇವೆ. ರಾಜರಾಜೇಶ್ವರಿ ನಗರ ವ್ಯಾಪ್ತಿಯಲ್ಲಿ ಸುಮಾರು 25ಕ್ಕೂ ಹೆಚ್ಚು ಮಹಿಳೆಯರನ್ನು ನಾವು ಕೆಲಸಕ್ಕೆ ತೆಗೆದುಕೊಂಡಿದ್ದೇವೆ. ಅವರೆಲ್ಲರೂ ಅವರ ಮನೆಯಿಂದಲೇ ಕೆಲಸ ಮಾಡುತ್ತಾರೆ. ಇದರಿಂದ ಬರುವ ಆದಾಯದಲ್ಲಿ ಅವರೂ ಸಹ ಒಂದೆರಡು ತಿಂಗಳುಗಳ ಕುಟುಂಬ ನಿರ್ವಹಿಸಬಹುದು. ಇವರು ತಯಾರಿಸಿದ ಬಟ್ಟೆ ಮಾಸ್ಕ್‍ಗಳನ್ನು ಕೊರೊನಾ ವಾರಿಯರ್ಸ್‍ಗೆ ಹಾಗೂ ಅಗತ್ಯವಿರುವವರಿಗೆ ನೀಡುತ್ತಿದ್ದೇವೆ. ಈ ಮೂಲಕ ನಮ್ಮ ತಂಡದಿಂದ ಅಳಿಲು ಸೇವೆ ಮಾಡುತ್ತಿದ್ದೇವೆ. ನೀವೂ ಮಾಸ್ಕ್ ಧರಿಸಿ ಸುರಕ್ಷಿತವಾಗಿರಿ ಎಂದು ಅವರು ಮನವಿ ಮಾಡಿದ್ದಾರೆ.

    ಸದಾ ಒಂದಿಲ್ಲೊಂದು ಸಾಮಾಜಿಕ ಕಾರ್ಯಗಳಲ್ಲಿ ತೊಡಗುವ ದಂಪತಿ. ಇದೀಗ ಕೊರೊನಾ ವಾರಿಯರ್ಸ್‍ಗಾಗಿ ಮಾಸ್ಕ್ ತಯಾರಿಸಿ ಹಂಚುವ ಕಾರ್ಯ ಮಾಡುತ್ತಿದ್ದಾರೆ. ಇದಕ್ಕೆ ಪೊಲೀಸರೂ ಮೆಚ್ಚುಗೆ ವ್ಯಕ್ತಪಡಿಸಿದ್ದು, ಈ ಕುರಿತು ಬೆಂಗಳೂರು ಸಿಟಿ ಪೊಲೀಸ್ ಖಾತೆಯಿಂದ ಟ್ವೀಟ್ ಮಾಡಿ ಹೀರೋಸ್ ಆಫ್ ದಿ ಡೇ ಎಂದು ಹಾಡಿ ಹೊಗಳಿದ್ದಾರೆ.

  • ಆರ್‌ಎಸ್‌ಎಸ್ ಮೂಲಕ ‘ಅಮೂಲ್ಯ’ ನೆರವು

    ಆರ್‌ಎಸ್‌ಎಸ್ ಮೂಲಕ ‘ಅಮೂಲ್ಯ’ ನೆರವು

    ಬೆಂಗಳೂರು: ಚೆಲುವಿನ ಚಿತ್ತಾರ ಬೆಡಗಿ ನಟಿ ಅಮೂಲ್ಯಾ ದಂಪತಿ ಹಲವು ನಟ, ನಟಿಯರು ಹಾಗೂ ಗಣ್ಯರಂತೆ ಅವರೂ ಸಾಮಾಜಿಕ ಹೊಣೆಗಾರಿಕೆ ತೋರಿದ್ದು, ಸಹಾಯ ಹಸ್ತ ಚಾಚುವ ಮೂಲಕ ಇತರರಿಗೆ ಮಾದರಿಯಾಗಿದ್ದಾರೆ.

    ಸ್ಯಾಂಡಲ್‍ವುಡ್ ಚೆಲುವೆ ನಟಿ ಅಮೂಲ್ಯಾ ಅವರೂ ಸಾಮಾಜಿಗ ಹೊಣೆಗಾರಿಕೆಯನ್ನು ತೋರಿದ್ದು, ಹಲವರಿಗೆ ಈಗಾಗಲೇ ನೆರವು ನೀಡುತ್ತಿರುವ ರಾಷ್ಟ್ರೀಯ ಸ್ವಯಂಸೇವಕ ಸಂಘದ ಮೂಲಕ ನೆರವನ್ನು ನೀಡಿದ್ದಾರೆ. ಬಡವರಿಗೆ, ನಿರ್ಗತಿಕರಿಗೆ, ಅಸಹಾಯಕರಿಗೆ ಆರ್‍ಎಸ್‍ಎಸ್ ಈಗಾಗಲೇ ಸಹಾಯ ಮಾಡುತ್ತಿದ್ದು, ಇದೀಗ ನಟಿ ಅಮೂಲ್ಯ ಸಂಘದ ಮೂಲಕ ಸಹಾಯ ಮಾಡಿದ್ದಾರೆ.

    ಕೊರೊನಾ ತುರ್ತು ಪರಿಸ್ಥಿತಿ ಹಿನ್ನೆಲೆ ಕೆಲಸವಿಲ್ಲದಂತಾಗಿದ್ದು, ಹಲವು ಬಡವರು ಊಟವಿಲ್ಲದೆ ಕಷ್ಟಪಡುತ್ತಿದ್ದಾರೆ. ಅಂತಹ ಅಸಹಾಯಕರಿಗೆ ಹಲವು ದಿನಗಳಿಂದ ನಟ, ನಟಿಯರು, ಧನಿಕರು, ಸಹಾಯ ಹಸ್ತ ಚಾಚುತ್ತಿದ್ದಾರೆ. ಕೆಲವರು ನೇರವಾಗಿ ಸಹಾಯ ಮಾಡಿದರೆ, ಇನ್ನೂ ಕೆಲವರು, ಸಂಘ, ಸಂಸ್ಥೆಗಳು, ಸಿಎಂ ಪರಿಹಾರ ನಿಧಿ, ಪಿಎಂ ಕೇರ್ಸ್ ಫಂಡ್‍ಗಳ ಮೂಲಕ ಧನ ಸಹಾಯ ಮಾಡುತ್ತಿದ್ದಾರೆ. ಇನ್ನೂ ಕೆಲವರು ಕಾರ್ಮಿಕರ ಖಾತೆಗೆ ನೇರವಾಗಿ ಹಣ ಹಾಕುತ್ತಿದ್ದಾರೆ. ಇದರ ಮಧ್ಯೆ ಅಲ್ಲಲ್ಲಿ ಆಹಾರ ಧಾನ್ಯ ವಿತರಿಸುವ ಕಾರ್ಯ ಸಹ ನಡೆಯುತ್ತಿದೆ.

    ಇದೀಗ ನಟಿ ಅಮೂಲ್ಯಾ ಜಗದೀಶ್ ದಂಪತಿ ಆರ್‌ಎಸ್‌ಎಸ್ ಗೆ ಸುಮಾರು 1 ಟನ್ ಅಕ್ಕಿಯನ್ನು ನೀಡಿದ್ದು, ಈ ಮೂಲಕ ಬಡವರ ಹೊಟ್ಟೆ ತುಂಬಿಸಲು ಮುಂದಾಗಿದ್ದಾರೆ. ಇಂದು ಬೆಳಗ್ಗೆ ಆರ್‌ಎಸ್‌ಎಸ್ ನ ಅಭ್ಯುದಯ ಉಚಿತ ಕಲಿಕಾ ಕೇಂದ್ರಕ್ಕೆ ತೆರಳಿ ಅಕ್ಕಿ ಹಾಗೂ ಮಾಸ್ಕ್ ಗಳನ್ನು ನೀಡಿದ್ದಾರೆ. ಅಲ್ಲದೆ ಅವರ ಪತಿ ಸಹ ಹಲವು ದಿನಗಳಿಂದ ಬೀದಿ ನಾಯಿಗಳಿಗೆ ಆಹಾರ ನೀಡುತ್ತಿದ್ದಾರೆ. ಅಂದಹಾಗೆ ಇವರು ಸಹಾಯ ಮಾಡುತ್ತಿರುವುದು ಇದೇ ಮೊದಲ್ಲ ಹುಟ್ಟುಹಬ್ಬದಂತಹ ವಿಶೇಷ ಸಂದರ್ಭಗಳಲ್ಲಿ ಅನಾಥಾಶ್ರಮದ ಮಕ್ಕಳಿಗೆ ಪುಸ್ತಕ, ಬ್ಯಾಗ್ ನೀಡಿ, ಅವರೊಂದಿಗೆ ಕಾಲ ಕಳೆಯುತ್ತಾರೆ.

    ಈ ಕುರಿತು ಇನ್‍ಸ್ಟಾಗ್ರಾಮ್‍ನಲ್ಲಿ ಪೋಸ್ಟ್ ಮಾಡಿರುವ ಅವರು, ದೇಶದಲ್ಲಿ ಪ್ರವಾಹ, ಭೂಕಂಪದಂತಹ ಪ್ರಕೃತಿ ವಿಕೋಪಗಳಾದಾಗ ಮತ್ತು ಈಗಿನ ಕೋರೋನಾ ವಿಪತ್ತಿನ ಸಂದರ್ಭದಲ್ಲಿಯೂ ಯಾವುದೇ ಜಾತಿ, ಧರ್ಮ ಎಂದು ಭೇದ ಮಾಡದೆ ಪ್ರತಿಯೊಬ್ಬರೂ ಭಾರತೀಯರು ಎಂದು ಸಹಾಯ ಮಾಡುವ ಆರ್‌ಎಸ್‌ಎಸ್ ಸಂಘಟನೆಗೆ ನಮ್ಮ ಕಿರು ಸಹಾಯ ನೀಡಿದ ಕ್ಷಣ. ಬಿ ಗುಡ್ ಡು ಗುಡ್ ಎಂದು ಬರೆದುಕೊಂಡಿದ್ದಾರೆ.

    ಬಾಲ ನಟಿಯಾಗಿ ಹಲವು ಸಿನಿಮಾಗಳಲ್ಲಿ ನಟಿಸಿದರೂ ಅಮೂಲ್ಯಾ ಅವರು ಹೆಚ್ಚು ಪ್ರಚಲಿತಕ್ಕೆ ಬಂದಿದ್ದು ಚೆಲುವಿನ ಚಿತ್ತಾರ ಸಿನಿಮಾ ಮೂಲಕ ಅವರ ಐಶು ಪಾತ್ರ ಇನ್ನೂ ಜನಪ್ರಿಯ. 2001ರಲ್ಲಿ ‘ಪರ್ವ’ ಚಿತ್ರದ ಮೂಲಕ ಬಣ್ಣ ಹಚ್ಚಿದ್ದ ಇವರು, ಚಿಕ್ಕವಯಸ್ಸಿನಲ್ಲಿಯೇ ಹೀರೋಯಿನ್ ಸಹ ಆದರು. 2017ರಲ್ಲಿ ಗೋಲ್ಡನ್ ಸ್ಟಾರ್ ಗಣೇಶ್ ನಟನೆಯ ‘ಮುಗುಳು ನಗೆ’ ಸಿನಿಮಾ ನಂತರ ಅಮೂಲ್ಯ ಯಾವ ಸಿನಿಮಾದಲ್ಲಿಯೂ ನಟಿಸಿಲ್ಲ. ಜಗದೀಶ್ ಆರ್ ಚಂದ್ರ ಜೊತೆ ಮೂರು ವರ್ಷಗಳ ಹಿಂದೆ ಹಸೆಮಣೆ ಏರಿದ್ದಾರೆ. ಸಿನಿಮಾಗಳಲ್ಲಿ ಹೆಚ್ಚು ನಟಿಸುತ್ತಿಲ್ಲ. ಆದರೆ ಸಾಮಾಜಿಕ ಕೆಲಸಗಳಲ್ಲಿ ಸಂಪೂರ್ಣ ತೊಡಗಿಸಿಕೊಂಡಿದ್ದಾರೆ.

  • ಅಮೂಲ್ಯ ಲಿಯೋನಾಳಿಂದ ಜಾಮೀನಿಗೆ ಅರ್ಜಿ ಸಲ್ಲಿಕೆ!

    ಅಮೂಲ್ಯ ಲಿಯೋನಾಳಿಂದ ಜಾಮೀನಿಗೆ ಅರ್ಜಿ ಸಲ್ಲಿಕೆ!

    ಬೆಂಗಳೂರು: ಪಾಕ್ ಪರ ಘೋಷಣೆ ಕೂಗಿ ಜೈಲು ವಾಸ ಅನುಭವಿಸುತ್ತಿರುವ ಅಮೂಲ್ಯ ಕೊನೆಗೂ ಜಾಮೀನಿಗೆ ಅರ್ಜಿಯನ್ನು ಸಲ್ಲಿಕೆ ಮಾಡಿದ್ದಾಳೆ.

    ಅಸಾವುದ್ದೀನ್ ಓವೈಸಿ ಆಗಮಿಸಿದ್ದ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದ ಅಮೂಲ್ಯ ಇಂದು ಸೆಷನ್ ಕೋರ್ಟಿನಲ್ಲಿ ಜಾಮೀನಿಗಾಗಿ ಅರ್ಜಿಯನ್ನು ಸಲ್ಲಿಕೆ ಮಾಡಿದ್ದಾಳೆ. ಅರ್ಜಿ ಸ್ವೀಕರಿಸಿದ ನ್ಯಾಯಾಲಯ ಸರ್ಕಾರಿ ಪರ ವಕೀಲರಿಗೆ ಆಕ್ಷೇಪಣೆ ಸಲ್ಲಿಸಲು ಸೂಚನೆ ನೀಡಲಾಗಿದೆ. ಇದನ್ನೂ ಓದಿ:   ಪಾಕ್ ಪರ ಘೋಷಣೆ ಕೂಗಿದ್ದ ಅಮೂಲ್ಯ ತಾಯಿ ಕಣ್ಣೀರು

    ಸದ್ಯ ಜೈಲಿನಲ್ಲಿಯೇ ಇರುವ ಅಮೂಲ್ಯ ಇಷ್ಟು ದಿನ ಜಾಮೀನಿಗೆ ಅರ್ಜಿಯನ್ನು ಸಲ್ಲಿಕೆ ಮಾಡಿರಲಿಲ್ಲ. ಇಂದು ಅರ್ಜಿ ಸಲ್ಲಿಕೆ ಮಾಡಿದ್ದಾಳೆ. ಅಮೂಲ್ಯ ಬಂಧನದಿಂದ ಬೇಸತ್ತು ಪ್ರತಿಭಟಿಸಿದ್ದ ಆದ್ರಾ  ಕೂಡ ಜೈಲಿನಲ್ಲಿಯೇ ಇದ್ದು, ಆಕೆಗೂ ಕೂಡ ಜಾಮೀನು ಮಂಜೂರಾಗಿಲ್ಲ.

    ಮೂಲತಃ ಚಿಕ್ಕಮಗಳೂರಿನ ಕೊಪ್ಪದ ಅಮೂಲ್ಯ ಸಿಎಎ ವಿರೋಧಿ ಹೋರಾಟದಲ್ಲಿ ಗುರುತಿಸಿಕೊಂಡು ಹೋದಲ್ಲಿ ಬಂದಲ್ಲಿ ಮೈಕ್ ತಾನೇ ಕೇಳಿ ಪಡೆದುಕೊಂಡು ಮಾತನಾಡುತ್ತಿದ್ದಳು. ಅದರಂತೆ ಫ್ರೀಡಂ ಪಾರ್ಕ್ ನಲ್ಲಿ ನಡೆದಿದ್ದ ಸಿಎಎ ವಿರೋಧಿ ಹೋರಾಟದಲ್ಲಿ ಅಮೂಲ್ಯ ಇದ್ದಕ್ಕಿದ್ದಂತೆ ಕಾಣಿಸಿಕೊಂಡು ‘ಪಾಕಿಸ್ತಾನ್ ಜಿಂದಾಬಾದ್’ ಎಂದು ಘೋಷಣೆ ಕೂಗಿದ್ದಳು.

  • ಪಾಕ್ ಪರ ಘೋಷಣೆ ಕೂಗಿದ್ದ ಅಮೂಲ್ಯ ತಾಯಿ ಕಣ್ಣೀರು

    ಪಾಕ್ ಪರ ಘೋಷಣೆ ಕೂಗಿದ್ದ ಅಮೂಲ್ಯ ತಾಯಿ ಕಣ್ಣೀರು

    ಬೆಂಗಳೂರು: ಪಾಕ್ ಪರ ಘೋಷಣೆ ಕೂಗಿ ಜೈಲು ಸೇರಿರುವ ಅಮೂಲ್ಯಳ ತಾಯಿ ಮಗಳ ಕೃತ್ಯವನ್ನು ತೀವ್ರವಾಗಿ ಖಂಡಿಸಿ ಕಣ್ಣೀರು ಹಾಕಿದ್ದಾರೆ.

    ಎಸ್‍ಐಟಿ ಪೊಲೀಸರ ಮುಂದೆ ಹಾಜರಾಗಿದ್ದ ಅಮೂಲ್ಯ ತಾಯಿ, ಪಾಕ್ ಪರ ಘೋಷಣೆಯನ್ನು ತೀವ್ರವಾಗಿ ಖಂಡಿಸಿದ್ದಾರೆ. ಚಿಕ್ಕಮಗಳೂರಿನ ಕೊಪ್ಪ ಬಳಿ ಪುಟ್ಟ ಗ್ರಾಮದವರು ನಾವು, ಮಗಳು ಚನ್ನಾಗಿ ಓದಿ ದೊಡ್ಡ ವ್ಯಕ್ತಿಯಾಗಲಿ ಎಂದು ಎಲ್ಲಾ ರೀತಿಯ ಸ್ವಾತಂತ್ರ್ಯ ನೀಡಿದ್ದೇವು. ಆದರೆ ಮಗಳು ಈ ರೀತಿ ಮಾಡ್ತಾಳೆ ಎಂದು ಗೊತ್ತಿರಲಿಲ್ಲ. ಈ ಹಿಂದೆಯೇ ಅವಳಿಗೆ ನಾವು ಬುದ್ಧಿ ಹೇಳಿದ್ವಿ. ಆದರೆ ಅವಳು ಅದನ್ನು ತಿದ್ದಿಕೊಳ್ಳಲಿಲ್ಲ ಎಂದರು.

    ಇದೇ ವೇಳೆ ಯಾವುದೇ ಪಾಕ್ ಪರ ಘೋಷಣೆಯನ್ನು ನಾವು ಸಮರ್ಥಿಸಿಕೊಳ್ಳಲ್ಲ. ನಾವು ಭಾರತಿಯರು ಹೇಗೆ ಬೇರೆ ದೇಶದ ಪರ ಮಾತನಾಡುವುದಕ್ಕೆ ಆಗುತ್ತೆ. ಅಮೂಲ್ಯ ಪಾಕಿಸ್ತಾನದ ಪರ ಘೋಷಣೆ ಕೂಗಿದ್ದ ತಪ್ಪು ಅವಳಿಗೆ ಬುದ್ಧಿ ಹೇಳ್ತಿವಿ. ಮತ್ತೆ ಈ ರೀತಿ ಅವಳು ನಡೆದುಕೊಳ್ಳದಂತೆ ನೋಡಿಕೊಳ್ತೇವೆ ಅವಳ ಭವಿಷ್ಯ ಹಾಳಾಗುತ್ತೆ ಎಂದು ಅಮೂಲ್ಯ ತಾಯಿ ಪೊಲೀಸರ ಮುಂದೆ ಕಣ್ಣೀರು ಹಾಕಿದ್ದಾರೆ.

    ನಾವು ಅಮೂಲ್ಯ ತಂದೆಗೂ ನೋಟಿಸ್ ನೀಡಿದ್ದು, ಘಟನೆ ನಡೆದ ನಂತರ ಅಮೂಲ್ಯ ತಂದೆ ಮಾನಸಿಕವಾಗಿ ಕುಗ್ಗಿದ್ದಾರೆ. ಅದೇ ಕಾರಣಕ್ಕೆ ನಮ್ಮ ಮುಂದೆ ಹಾಜರಾಗಿಲ್ಲ ಎಂದು ವಿಶೇಷ ತನಿಖಾ ತಂಡ(ಎಸ್‍ಐಟಿ) ಪೊಲೀಸರು ತಿಳಿಸಿದರು.

  • ತಮ್ಮ ಜೀವನದ ಪವರ್‌ಫುಲ್ ಪುರುಷರನ್ನು ಪರಿಚಯಿಸಿದ ಅಮೂಲ್ಯ

    ತಮ್ಮ ಜೀವನದ ಪವರ್‌ಫುಲ್ ಪುರುಷರನ್ನು ಪರಿಚಯಿಸಿದ ಅಮೂಲ್ಯ

    ಬೆಂಗಳೂರು: ಚೆಲುವಿನ ಚಿತ್ತಾರ ಸಿನಿಮಾ ಖ್ಯಾತಿ ನಟಿ ಅಮೂಲ್ಯ ಅವರು ತಮ್ಮ ಜೀವನದ ಪವರ್‌ಫುಲ್ ಪುರುಷರನ್ನು ಪರಿಚಯಿಸಿದ್ದಾರೆ.

    ಹೌದು ತಮ್ಮ ಕ್ಯೂಟ್ ನಟನೆಯ ಮೂಲಕ ಎಲ್ಲರ ಮನಸ್ಸು ಕದ್ದಿದ್ದ ಅಮೂಲ್ಯ ಅವರು, ಮದುವೆಯಾದ ನಂತರ ಚಿತ್ರರಂಗದಿಂದ ಕೊಂಚ ದೂರ ಉಳಿದಿದ್ದಾರೆ. ಈಗ ಅಮೂಲ್ಯ ಅವರು ತಮ್ಮ ಟ್ವಿಟ್ಟರ್ ಖಾತೆಯಲ್ಲಿ ತಮ್ಮ ಅಣ್ಣಂದಿರ ಮತ್ತು ಪತಿಯ ಫೋಟೋ ಹಾಕಿ ಇವರೆಲ್ಲರೂ ನನ್ನ ಜೀವನದ ಪವರ್‍ಫುಲ್ ಪುರುಷರು ಎಂದು ಬರೆದುಕೊಂಡಿದ್ದಾರೆ.

    ಈ ಬಗ್ಗೆ ಟ್ವೀಟ್ ಮಾಡಿರುವ ಅಮೂಲ್ಯ, ಇವೆರೆಲ್ಲರು ನನ್ನ ಜೀವನದ ಪವರ್‌ಫುಲ್ ಪುರುಷರು. ಇವರು ನನ್ನ ಕಠಿಣ ಸಮಯದಲ್ಲೂ ನನ್ನನ್ನು ನಂಬಿದ್ದಾರೆ. ನನ್ನ ಪುಟ್ಟ ಪ್ರಪಂಚ ಶಾಂತಿಯುತವಾಗಿ ಮತ್ತು ಖುಷಿಯಾಗಿ ಇರಲು ಇವರೇ ಕಾರಣ ಎಂದು ಬರೆದು ತಮ್ಮ ಪತಿ ಜಗದೀಶ್ ಮತ್ತು ಅವರ ಮೂರು ಅಣ್ಣಂದಿರ ಫೋಟೋವನ್ನು ಟ್ವಿಟ್ಟರ್ ನಲ್ಲಿ ಹಂಚಿಕೊಂಡಿದ್ದಾರೆ.

    ಅಮೂಲ್ಯ ಅವರು, ಬೆಂಗಳೂರಿನ ಮಾಜಿ ಪಾಲಿಕೆ ಸದಸ್ಯ ರಾಮಚಂದ್ರೇಗೌಡರ ಮಗ ಉದ್ಯಮಿ ಜಗದೀಶ್ ಆರ್ ಚಂದ್ರ ಅವರನ್ನು 2017 ಮೇ 12ರಂದು ಮದುವೆಯಾಗಿದ್ದರು. ಮದುವೆಯ ನಂತರ ಅವರು ಯಾವುದೇ ಸಿನಿಮಾದಲ್ಲಿ ನಟನೆ ಮಾಡಿರಲಿಲ್ಲ. ಕೊನೆಯದಾಗಿ 2017 ರಲ್ಲಿ ತೆರೆಕಂಡ ಮಾಸ್ತಿಗುಡಿ ಚಿತ್ರದಲ್ಲಿ ಅಮೂಲ್ಯ ಕಾಣಿಸಿಕೊಂಡಿದ್ದರು. ಅದನ್ನು ಬಿಟ್ಟರೆ ಕಳೆದ ವರ್ಷ ಬಿಡುಗಡೆಯಾದ ಕಾಳಿದಾಸ ಕನ್ನಡ ಮೇಷ್ಟ್ರು ಸಿನಿಮಾದಲ್ಲಿ ಅತಿಥಿ ಪಾತ್ರದಲ್ಲಿ ಕಾಣಿಸಿಕೊಂಡಿದ್ದರು.

    ಮೊದಲಿಗೆ ಬಾಲನಟಿಯಾಗಿ ಅಭಿನಯಿಸುತ್ತಿದ್ದ ಅಮೂಲ್ಯ ಮೊದಲ ಬಾರಿಗೆ 2007 ರಲ್ಲಿ ಬಿಡುಗಡೆಯಾದ ಚೆಲುವಿನ ಚಿತ್ತಾರ ಸಿನಿಮಾದಲ್ಲಿ ಗೋಲ್ಡನ್ ಸ್ಟಾರ್ ಗಣೇಶ್ ಅವರಿಗೆ ನಾಯಕಿಯಾಗಿ ನಟಿಸಿದ್ದರು. ಈ ಚಿತ್ರ ಅವರಿಗೆ ಬಹಳ ಹೆಸರು ತಂದುಕೊಟ್ಟಿತ್ತು. ಈ ಸಿನಿಮಾದ ಬಳಿಕ ಬಹಳ ಹೆಸರು ಮಾಡಿದ ಅಮೂಲ್ಯ, ನಂತರ ಕನ್ನಡದ ಬಿಗ್ ಸ್ಟಾರ್ ನಟರ ಜೊತೆ ಅಭಿನಯಿಸಿ ಸೈ ಅನಿಸಿಕೊಂಡಿದ್ದರು.

    ಅಮೂಲ್ಯ ಅವರು ಸೆಪ್ಟೆಂಬರ್ 14 ರಂದು ಜನಿಸಿದ್ದು, ಮದುವೆಯಾದ ಮೊದಲ ವರ್ಷದ ಹುಟ್ಟುಹಬ್ಬವನ್ನು ರಾಮನಗರದ ಅಂಧ ಮಕ್ಕಳ ಜೊತೆ ಅಚರಿಸಿಕೊಂಡು ಸರಳತೆ ಮೆರೆದಿದ್ದರು. 25ನೇ ಹುಟ್ಟಹಬ್ಬವನ್ನು ತಮ್ಮ ಪತಿ ಜಗದೀಶ್ ಜೊತೆಯಲ್ಲಿ ರಾಮನಗರ ಹೊರವಲಯದ ಶ್ರೀ ಬಾಲಗಂಗಾಧರನಾಥ ಸ್ವಾಮಿ ಶಾಖಾ ಮಠದ ಅಂಧರ ಶಾಲೆಗೆ ತೆರಳಿ ಹುಟ್ಟುಹಬ್ಬ ಸಂಭ್ರಮವನ್ನು ಆಚರಿಸಿಕೊಂಡಿದ್ದರು.

  • ದೇಶದ್ರೋಹದ ಹೇಳಿಕೆಯನ್ನು ಬೇರು ಸಮೇತ ಕಿತ್ತು ಹಾಕಲು ಕ್ರಮ: ಬೊಮ್ಮಾಯಿ

    ದೇಶದ್ರೋಹದ ಹೇಳಿಕೆಯನ್ನು ಬೇರು ಸಮೇತ ಕಿತ್ತು ಹಾಕಲು ಕ್ರಮ: ಬೊಮ್ಮಾಯಿ

    – ವಿದ್ಯಾಸಂಸ್ಥೆ, ಹಾಸ್ಟೆಲ್‍ಗಳಲ್ಲಿ ನಿಗಾ ವಹಿಸಬೇಕು

    ಹಾವೇರಿ: ದೇಶ ದ್ರೋಹದ ಹೇಳಿಕೆ ನೀಡುವ ಪ್ರಕರಣಗಳ ಕುರಿತು ಸರ್ಕಾರ ನಿಗಾ ವಹಿಸಲಿದೆ. ಇಂತಹ ಪ್ರಕರಣಗಳನ್ನು ರಾಜ್ಯದಿಂದ ಬೇರು ಸಮೇತ ಕಿತ್ತು ಹಾಕುವ ನಿಟ್ಟಿನಲ್ಲಿ ಕ್ರಮ ಕೈಗೊಳ್ಳಲಾಗುವುದು ಎಂದು ಗೃಹ ಸಚಿವ ಬಸವರಾಜ್ ಬೊಮ್ಮಾಯಿ ಹೇಳಿದ್ದಾರೆ.

    ಈ ಕುರಿತು ಹಾವೇರಿಯಲ್ಲಿ ಮಾತನಾಡಿದ ಅವರು, ಇಂತಹ ಪ್ರಕರಣಗಳನ್ನು ಕರ್ನಾಟಕದಿಂದ ಬೇರು ಸಮೇತ ಕಿತ್ತು ಹಾಕಲು ಕ್ರಮ ಕೈಗೊಳ್ಳುತ್ತೆವೆ. ಬೆಂಗಳೂರಲ್ಲಿ ಉನ್ನತ ಮಟ್ಟದ ಅಧಿಕಾರಿಗಳ ಸಭೆ ಕರೆಯಲಾಗಿದೆ. ಈ ಕುರಿತು ಚರ್ಚಿಸಿ ಕ್ರಮ ಕೈಗೊಳ್ಳುತ್ತೇವೆ. ಮಾತ್ರವಲ್ಲದೆ ವಿದ್ಯಾಸಂಸ್ಥೆ, ಹಾಸ್ಟೆಲ್ ಮ್ಯಾನೇಜ್ಮೆಂಟ್ ಇಂತಹ ಘಟನೆಗಳ ಬಗ್ಗೆ ನಿಗಾ ವಹಿಸಬೇಕು. ಗೊತ್ತಿದ್ದೂ ಸುಮ್ಮನಿದ್ದರೆ ಅಂತಹ ಸಂಸ್ಥೆಗಳ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದರು.

    ವಾಟ್ಸಪ್, ಫೇಸ್ಬುಕ್ ನಲ್ಲಿ ಪೋಸ್ಟ್ ಮಾಡುವ ಕುರಿತು ಸಹ ಪರಿಶೀಲಿಸಬೇಕಿದೆ. ಇಂತಹ ಪೋಸ್ಟ್‍ಗಳಿಗೆ ನಿರ್ಬಂಧ ಹಾಕಬೇಕಿದೆ. ಈ ಬಗ್ಗೆ ಕೇಂದ್ರ ಸರ್ಕಾರದ ಗಮನಕ್ಕೆ ತರಲಾಗುವುದು. ಕೆಲ ಸಂಘಟನೆಗಳಿಗೆ ವಿದೇಶದಿಂದ ಹಣ ಬರುತ್ತಿರುವ ಬಗ್ಗೆ ಈಗಾಗಲೇ ತನಿಖೆ ನಡೆಯುತ್ತಿದೆ ಎಂದು ಮಾಹಿತಿ ನೀಡಿದರು.

    ಹುಬ್ಬಳ್ಳಿಯಲ್ಲಿ ಕಾಶ್ಮೀರಿ ವಿದ್ಯಾರ್ಥಿಗಳ ದೇಶದ್ರೋಹ ಹೇಳಿಕೆ ಪ್ರಕರಣವನ್ನು ಬೆಳಗಾವಿಗೆ ವರ್ಗಾಯಿಸಲಾಗಿದೆ. ಐಜಿಪಿಯವರು ಇದನ್ನು ನೋಡಿಕೊಳ್ಳುತ್ತಿದ್ದಾರೆ. ಬೆಂಗಳೂರಲ್ಲಿ 20 ಜನ ವಕೀಲರು ಅವರ ಪರ ವಾದ ಮಾಡಲು ಮುಂದೆ ಬಂದಿದ್ದಾರೆ, ರಕ್ಷಣೆ ಕೇಳಿದ್ದಾರೆ. ಈ ಪ್ರಕರಣದಲ್ಲಿ ಪೊಲೀಸರ ನೈತಿಕತೆ ಕುಗ್ಗುವ ರೀತಿ ಮಾತನಾಡುವುದಿಲ್ಲ. ಮೊದಲ ಹಂತದಲ್ಲಿ ಪೊಲೀಸರ ಕ್ರಮ ಊರ್ಜಿತವಾಗಿದೆ ಎಂದು ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.

    ಅಫ್ಜಲ್ ಗುರುಗೆ ಗಲ್ಲು ಹಾಕುವ ಸಂದರ್ಭದಲ್ಲಿ ಕೆಲವು ಸಂಘಟನೆಗಳು ಅವನ ಪರ ನಿಂತವು. ಅದರಿಂದ ಕುಮ್ಮಕ್ಕು ಸಿಕ್ಕಿತು. ನಂತರ ಜೆಎನ್‍ಯುನಲ್ಲಿ ಗಲಭೆ ಏಳಲು ಪ್ರಾರಂಭವಾಯಿತು. ನಂತರ ಮುಸ್ಲಿಂ ವಿವಿಯಲ್ಲಿ ಗಲಭೆ ಇದೀಗ ಎಲ್ಲ ರಾಜ್ಯದಲ್ಲೂ ಇದು ಪ್ರಾರಂಭವಾಗಿದೆ. ವಿಶೇಷವಾಗಿ ಸಿಎಎ ವಿಚಾರದಲ್ಲಿ ವಿವಾದ ಸೃಷ್ಟಿಸುತ್ತಿದ್ದಾರೆ. ಸಿಎಎ ಪೌರತ್ವ ಕಿತ್ತುಕೊಳ್ಳುವುದಲ್ಲ. ಪೌರತ್ವ ಕೊಡುವುದು. ಇದರ ವಿರುದ್ಧ ಪ್ರತಿಭಟಿಸಲು ವಿರೋಧ ಪಕ್ಷಗಳು ಕುಮ್ಮಕ್ಕು ನೀಡುತ್ತಿವೆ. ಎಲ್ಲೆಲ್ಲಿ ಸಿಎಎ ವಿರುದ್ಧ ಪ್ರತಿಭಟನೆ ನಡೆಯುತ್ತಿದೆಯೋ ಅಲ್ಲಿ ಕುಮ್ಮಕ್ಕು ನೀಡುವಂಥ ಪ್ರಕರಣಗಳು ನಡಿಯುತ್ತಿವೆ. ಇದೆಲ್ಲದರ ಬಗ್ಗೆ ತನಿಖೆ ನಡೆಸಲಾಗುತ್ತಿದೆ ಎಂದರು.