Tag: Anand Raj

  • ಅನಿರುದ್ಧ ಸಿನಿಮಾದಲ್ಲಿ ಲವ್ ಮಾಕ್ಟೇಲ್ ಹುಡುಗಿಗೆ ಅವಕಾಶ

    ಅನಿರುದ್ಧ ಸಿನಿಮಾದಲ್ಲಿ ಲವ್ ಮಾಕ್ಟೇಲ್ ಹುಡುಗಿಗೆ ಅವಕಾಶ

    ವ್ ಮಾಕ್ಟೇಲ್ ಚಿತ್ರದ ಮೂಲಕ ಎಲ್ಲರ ಮನ ಗೆದ್ದಿರುವ ನಟಿ ರೆಚೆಲ್ ಡೇವಿಡ್. ಇವರು ಎಂ.ಆನಂದರಾಜ್ ನಿರ್ದೇಶನದ ಹಾಗೂ ಅನಿರುದ್ದ್ ಜತಕರ್ ನಾಯಕನಾಗಿ ನಟಿಸಿರುವ  ‘chef ಚಿದಂಬರ’ ಚಿತ್ರದ ಪ್ರಮುಖಪಾತ್ರದಲ್ಲಿ ಅಭಿನಯಿಸಿದ್ದಾರೆ. ಈ ಚಿತ್ರದಲ್ಲಿ ಅನು ಎಂಬ ಪಾತ್ರದಲ್ಲಿ ರೆಚೆಲ್ ಡೇವಿಡ್ ಕಾಣಿಸಿಕೊಳ್ಳಲಿದ್ದಾರೆ‌.  ರೆಚೆಲ್ ಅವರ ಪಾತ್ರವನ್ನು ಪರಿಚಯಿಸುವ ಪೋಸ್ಟರ್ ಅನ್ನು ಇತ್ತೀಚಿಗೆ ಚಿತ್ರತಂಡ ಬಿಡುಗಡೆ ಮಾಡಿದೆ.

    ಪ್ರಸ್ತುತ ಪೋಸ್ಟ್ ಪ್ರೊಡಕ್ಷನ್ ಕೆಲಸದಲ್ಲಿ ಬ್ಯುಸಿಯಾಗಿರುವ ಈ ಸಿನಿಮಾ ಸದ್ಯದಲ್ಲೇ ತೆರೆಯ ಮೇಲೆ ರಾರಾಜಿಸಲಿದ್ದಾನೆ. ಈಗಾಗಲೇ ಪೋಸ್ಟರ್, ಕ್ಯಾರೆಕ್ಟರ್ ಟೀಸರ್ ಮೂಲಕ ಮನೆಮಾತಾಗಿರುವ ಈ ಚಿತ್ರದ ಬಿಡುಗಡೆಗೆ ಅಭಿಮಾನಿಗಳು ಕಾತುರದಿಂದ ಕಾಯುತ್ತಿದ್ದಾರೆ.

    ದಮ್ತಿ ಪಿಕ್ಚರ್ಸ್ ಲಾಂಛನದಲ್ಲಿ ರೂಪ ಡಿ.ಎನ್ ನಿರ್ಮಿಸುತ್ತಿರುವ ಈ ಚಿತ್ರಕ್ಕೆ ನಿರ್ದೇಶಕರೆ ಕಥೆ ಬರೆದಿದ್ದು, ಚಿತ್ರಕಥೆ ಹಾಗೂ ಸಂಭಾಷಣೆ ಗಣೇಶ್ ಪರಶುರಾಮ್ ಬರೆದಿದ್ದಾರೆ. ಉದಯಲೀಲಾ ಛಾಯಾಗ್ರಹಣ, ರಿತ್ವಿಕ್ ಮುರಳಿಧರ್ ಸಂಗೀತ ನಿರ್ದೇಶನ, ವಿಜೇತ್ ಚಂದ್ರ ಸಂಕಲನ, ವಿಕ್ರಾಂತ್ ರೋಣ ಖ್ಯಾತಿಯ ಆಶಿಕ್ ಕುಸುಗೊಳ್ಳಿ ಡಿ.ಐ, ನರಸಿಂಹಮೂರ್ತಿ ಸಾಹಸ ನಿರ್ದೇಶನ ಹಾಗೂ ಮಾಧುರಿ ಪರಶುರಾಮ್ ಅವರ ನೃತ್ಯ ನಿರ್ದೇಶನ ಈ ಚಿತ್ರಕ್ಕಿದೆ.

    ಅನಿರುದ್ಧ್ ಅವರಿಗೆ ನಾಯಕಿಯರಾಗಿ ನಿಧಿ ಸುಬ್ಬಯ್ಯ ಹಾಗೂ ಲವ್ ಮಾಕ್ಟೇಲ್ ಖ್ಯಾತಿಯ ರೆಚೆಲ್ ಡೇವಿಡ್‌ ಅಭಿನಯಿಸಿದ್ದಾರೆ. ಶರತ್ ಲೋಹಿತಾಶ್ವ, ಕೆ.ಎಸ್ ಶ್ರೀಧರ್‌, ಶಿವಮಣಿ ಮುಂತಾದವರು chef ಚಿದಂಬರ ಚಿತ್ರದ ತಾರಾಬಳಗದಲ್ಲಿದ್ದಾರೆ.

  • ‘chef ಚಿದಂಬರ’ ಚಿತ್ರದ ಡಬ್ಬಿಂಗ್ ಕಾರ್ಯದಲ್ಲಿ ಅನಿರುದ್ಧ

    ‘chef ಚಿದಂಬರ’ ಚಿತ್ರದ ಡಬ್ಬಿಂಗ್ ಕಾರ್ಯದಲ್ಲಿ ಅನಿರುದ್ಧ

    ಟ ಅನಿರುದ್ಧ್ ಜತ್ಕರ್ (Aniruddha) ನಾಯಕನಾಗಿ ಅಭಿನಯಿಸಿರುವ ಹಾಗೂ ರಾಘು ಚಿತ್ರ ಖ್ಯಾತಿಯ ನಿರ್ದೇಶಕ ಎಂ.ಆನಂದರಾಜ್ ನಿರ್ದೇಶನದ ‘chef ಚಿದಂಬರ’ (Chef Chidambara) ಚಿತ್ರದ ಚಿತ್ರೀಕರಣ ಇತ್ತೀಚಿಗೆ ಮುಕ್ತಾಯವಾಗಿದೆ. ಪ್ರಸ್ತುತ ಚಿತ್ರಕ್ಕೆ ಮಾತಿನ ಜೋಡಣೆ (ಡಬ್ಬಿಂಗ್) (Dubbing)  ನಡೆಯುತ್ತಿದೆ.   ನಾಯಕ ಅನಿರುದ್ದ್ ಮಾತಿನ ಮೂಲಕ ತಮ್ಮ ಪಾತ್ರಕ್ಕೆ ಜೀವ ತುಂಬುತಿದ್ದಾರೆ.

    ಡಾರ್ಕ್ ಕಾಮಿಡಿ ಜಾನರ್ ನ ಈ ಚಿತ್ರದಲ್ಲಿ ಅನಿರುದ್ಧ್ ಶೆಫ್ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ಪಾತ್ರಕ್ಕಾಗಿ ಸಾಕಷ್ಟು ತಯಾರಿ ಮಾಡಿಕೊಂಡಿದ್ದಾರೆ.  ದಮ್ತಿ ಪಿಕ್ಚರ್ಸ್ ಲಾಂಛನದಲ್ಲಿ ರೂಪ ಡಿ.ಎನ್ ನಿರ್ಮಿಸುತ್ತಿರುವ ಈ ಚಿತ್ರಕ್ಕೆ ನಿರ್ದೇಶಕರೆ ಕಥೆ ಬರೆದಿದ್ದು, ಚಿತ್ರಕಥೆ ಹಾಗೂ ಸಂಭಾಷಣೆ ಗಣೇಶ್ ಪರಶುರಾಮ್ ಬರೆದಿದ್ದಾರೆ.

    ಉದಯಲೀಲ ಛಾಯಾಗ್ರಹಣ, ರಿತ್ವಿಕ್ ಮುರಳಿಧರ್ ಸಂಗೀತ ನಿರ್ದೇಶನ, ವಿಜೇತ್ ಚಂದ್ರ ಸಂಕಲನ, ವಿಕ್ರಾಂತ್ ರೋಣ ಖ್ಯಾತಿಯ ಆಶಿಕ್ ಕುಸುಗೊಳ್ಳಿ ಡಿ.ಐ, ನರಸಿಂಹಮೂರ್ತಿ ಸಾಹಸ ನಿರ್ದೇಶನ ಹಾಗೂ ಮಾಧುರಿ ಪರಶುರಾಮ್ ಅವರ ನೃತ್ಯ ನಿರ್ದೇಶನ ಈ ಚಿತ್ರಕ್ಕಿದೆ.

    ಅನಿರುದ್ಧ್ ಅವರಿಗೆ ನಾಯಕಿಯರಾಗಿ ನಿಧಿ ಸುಬ್ಬಯ್ಯ ಹಾಗೂ ಲವ್ ಮಾಕ್ಟೇಲ್ ಖ್ಯಾತಿಯ ರೆಚೆಲ್ ಡೇವಿಡ್‌ ಅಭಿನಯಿಸಿದ್ದಾರೆ. ಶರತ್ ಲೋಹಿತಾಶ್ವ, ಕೆ.ಎಸ್ ಶ್ರೀಧರ್‌, ಶಿವಮಣಿ ಮುಂತಾದವರು chef ಚಿದಂಬರ ಚಿತ್ರದ ತಾರಾಬಳಗದಲ್ಲಿದ್ದಾರೆ.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಸಂಪೂರ್ಣ ಶೂಟಿಂಗ್ ಮುಗಿಸಿದ ಅನಿರುದ್ಧ್ ಜತ್ಕರ್

    ಸಂಪೂರ್ಣ ಶೂಟಿಂಗ್ ಮುಗಿಸಿದ ಅನಿರುದ್ಧ್ ಜತ್ಕರ್

    ಕಿರುತೆರೆಯಲ್ಲಿ ತಮ್ಮದೇ ಆದ ಅಭಿಮಾನಿ ಬಳಗ ಹೊಂದಿರುವ ನಟ ಅನಿರುದ್ಧ್  (Aniruddha Jatkar) ನಾಯಕರಾಗಿ ನಟಿಸಿರುವ, ‘ರಾಘು’ ಚಿತ್ರದ ಖ್ಯಾತಿಯ ಎಂ.ಆನಂದರಾಜ್ ನಿರ್ದೇಶನದ ‘chef ಚಿದಂಬರ’ (Chef Chidambara) ಚಿತ್ರದ ಚಿತ್ರೀಕರಣ ಮುಕ್ತಾಯವಾಗಿದೆ. ಈ ಕುರಿತು ಹೆಚ್ಚಿನ ಮಾಹಿತಿಯನ್ನು ಚಿತ್ರತಂಡದ ಸದಸ್ಯರು ಪತ್ರಿಕಾಗೋಷ್ಠಿಯಲ್ಲಿ ನೀಡಿದರು.

    ನಮ್ಮ ಚಿತ್ರದ ಚಿತ್ರೀಕರಣ ಆಗಸ್ಟ್ 10ರಂದು ಆರಂಭವಾಗಿತ್ತು. ಅಕ್ಟೋಬರ್ 10ರಂದು ಮುಕ್ತಾಯವಾಗಿದೆ ಎಂದು ಮಾತು ಪ್ರಾರಂಭಿಸಿದ ನಿರ್ದೇಶಕ ಆನಂದರಾಜ್, ನಮ್ಮ ಚಿತ್ರಕ್ಕೆ ಒಟ್ಟು 29 ದಿನಗಳ ಕಾಲ ಬೆಂಗಳೂರು, ಮಂಗಳೂರು, ತುಮಕೂರು, ದೇವರಾಯನದುರ್ಗ ಮುಂತಾದ ಕಡೆ ಚಿತ್ರೀಕರಣ ನಡೆದಿದೆ. ಇದೊಂದು ಆಕ್ಷನ್ ಥ್ರಿಲ್ಲರ್ ಕಥಾಹಂದರ ಹೊಂದಿರುವ ಡಾರ್ಕ್ ಹ್ಯೂಮರ್ ಜಾನರ್ ನ ಚಿತ್ರ. ಅನಿರುದ್ದ್ ಅವರು ಶೆಫ್ ಪಾತ್ರದಲ್ಲಿ ಅಭಿನಯಿಸಿದ್ದಾರೆ. ನಿಧಿ ಸುಬ್ಬಯ್ಯ ಈತನಕ ಮಾಡಿರದ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ರೆಚೆಲ್ ಡೇವಿಡ್ ಅವರ ಪಾತ್ರ ಕೂಡ ವಿಭಿನ್ನವಾಗಿದೆ. ಶರತ್ ಲೋಹಿತಾಶ್ವ, ಶಿವಮಣಿ, ಶ್ರೀಧರ್, ಮಾಹಂತೇಶ್ ಮುಂತಾದವರು ಚಿತ್ರದಲ್ಲಿ ನಟಿಸಿದ್ದಾರೆ.

    ದಮ್ತಿ ಪಿಕ್ಚರ್ಸ್ ಲಾಂಛನದಲ್ಲಿ ರೂಪ ಡಿ.ಎನ್ ಈ ಚಿತ್ರ ನಿರ್ಮಾಣ ಮಾಡಿದ್ದಾರೆ. ಚಿತ್ರತಂಡದ ಸಹಕಾರದಿಂದ ಚಿತ್ರೀಕರಣ ಮುಕ್ತಾಯವಾಗಿದೆ. ಪೋಸ್ಟ್ ಪ್ರೊಡಕ್ಷನ್ ವರ್ಕ್ ಆರಂಭವಾಗಲಿದೆ ಎಂದು ತಿಳಿಸಿದರು. ನಾನು ಯಾವತ್ತಿಗೂ ಅಡುಗೆಮನೆ ಕಡೆ ಹೋದವನಲ್ಲ. ಈ ಚಿತ್ರದಲ್ಲಿ ಮೊದಲ ಬಾರಿಗೆ ಶೆಫ್ ಪಾತ್ರ ನಿರ್ವಹಿಸಿದ್ದೇನೆ. ತರಬೇತಿ ಪಡೆದು ಈ ಪಾತ್ರ ನಿರ್ವಹಣೆ ಮಾಡಿದ್ದೇನೆ. ಕ್ರೈಮ್ ಥ್ರಿಲ್ಲರ್ ಕಥಾಹಂದರ ಹೊಂದಿರುವ ಚಿತ್ರವಾದರೂ, ನಿರ್ದೇಶಕರು ಕಥೆಯನ್ನು ಹಾಸ್ಯದ ಮೂಲಕ ಹೇಳಿದ್ದಾರೆ.  ಸಹ ಕಲಾವಿದರ ಅಭಿನಯ ಹಾಗೂ ತಂತ್ರಜ್ಞರ ಕಾರ್ಯವೈಖರಿ ಚೆನ್ನಾಗಿದೆ ಎಂದರು ನಾಯಕ ಅನಿರುದ್ಧ್ ಜತಕರ್.

    ನಾನು ಈವರೆಗೂ ಮಾಡಿರದ ಪಾತ್ರದಲ್ಲಿ ಕಾಣಿಸಿಕೊಂಡಿದ್ದೇನೆ. ಈ ಪಾತ್ರ ಎಲ್ಲರಿಗೂ ಮೆಚ್ಚುಗೆಯಾಗಲಿದೆ ಎನ್ನುತ್ತಾರೆ ನಾಯಕಿ ನಿಧಿ ಸುಬ್ಬಯ್ಯ (Nidhi Subbaiah). ಅನು ಎಂಬುದು ನನ್ನ ಪಾತ್ರದ ಹೆಸರು. ನನ್ನ ಪಾತ್ರ ಹಾಗೂ ಕಥೆ ಎರಡೂ ಚೆನ್ನಾಗಿದೆ ಎಂದರು ನಾಯಕಿ ರೆಚೆಲ್ ಡೇವಿಡ್. ನಿರ್ಮಾಪಕಿ ರೂಪ ಡಿ.ಎನ್, ಛಾಯಾಗ್ರಾಹಕ ಉದಯ್ ಲೀಲಾ, ಚಿತ್ರದಲ್ಲಿ ‌ನಟಿಸಿರುವ ಮಹಾಂತೇಶ್, ಸೌಂಡ್ ಇಂಜಿನಿಯರ್ ಬಿ.ಆರ್ ನವೀನ್ ಕುಮಾರ್ ಮುಂತಾದವರು ಪತ್ರಿಕಾಗೋಷ್ಠಿಯಲ್ಲಿ ಉಪಸ್ಥಿತರಿದ್ದರು.

    ಚಿತ್ರಕ್ಕೆ ನಿರ್ದೇಶಕರೆ ಕಥೆ ರಚಿಸಿದ್ದು, ಚಿತ್ರಕಥೆ ಹಾಗೂ ಸಂಭಾಷಣೆಯನ್ನು ಗಣೇಶ್ ಪರಶುರಾಮ್ ಬರೆದಿದ್ದಾರೆ. ಉದಯಲೀಲಾ ಛಾಯಾಗ್ರಹಣ, ವಿಜೇತ್ ಚಂದ್ರ ಸಂಕಲನ, ರಿತ್ವಿಕ್ ಮುರಳಿಧರ್ ಸಂಗೀತ ನಿರ್ದೇಶನ, ಆಶಿಕ್ ಹುಸಗುಳ್ಳಿ ಡಿ.ಐ, ನರಸಿಂಹಮೂರ್ತಿ ಸಾಹಸ ನಿರ್ದೇಶನ ಹಾಗೂ ಮಾಧುರಿ ಪರಶುರಾಮ ಅವರ ನೃತ್ಯ ನಿರ್ದೇಶನ “chef ಚಿದಂಬರ” ಚಿತ್ರಕ್ಕಿದೆ.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ನುರಿತ ಚೆಫ್ ಗಳಿಂದ ತರಬೇತಿ ಪಡೆಯುತ್ತಿದ್ದಾರೆ ನಟ ಅನಿರುದ್ದ್

    ನುರಿತ ಚೆಫ್ ಗಳಿಂದ ತರಬೇತಿ ಪಡೆಯುತ್ತಿದ್ದಾರೆ ನಟ ಅನಿರುದ್ದ್

    ಟ ಅನಿರುದ್ದ್ ನಾಯಕರಾಗಿ ನಟಿಸುತ್ತಿರುವ ‘chef ಚಿದಂಬರ’ (Chef Chidambara) ಚಿತ್ರದ ಮುಹೂರ್ತ ಸಮಾರಂಭ ಇತ್ತೀಚೆಗೆ ನಡೆದಿತ್ತು. ಈಗ ಮೊದಲ ಹಂತದ ಚಿತ್ರೀಕರಣ ಕೂಡ ಯಶಸ್ವಿಯಾಗಿ ಮುಕ್ತಾಯವಾಗಿದೆ. ಅನಿರುದ್ದ್ ಈ ಚಿತ್ರದಲ್ಲಿ ಚೆಫ್ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ಈ ಪಾತ್ರಕ್ಕಾಗಿ ಅವರು ಸಾಕಷ್ಟು ತಯಾರಿ ಮಾಡಿಕೊಳ್ಳುತ್ತಿದ್ದಾರೆ.

    ಅನಿರುದ್ದ್ (Anirudh) ಅವರಿಗೆ ಹೆಸರಾಂತ ಬಾಣಸಿಗರು ತರಬೇತಿ ನೀಡುತ್ತಿದ್ದು, ಈ ಟ್ರೈನಿಂಗ್ ವಿಡಿಯೋವನ್ನು ಚಿತ್ರತಂಡ ಬಿಡುಗಡೆ ಮಾಡಿದೆ.  ದಮ್ತಿ ಪಿಕ್ಚರ್ಸ್ ಲಾಂಛನದಲ್ಲಿ ರೂಪ ಡಿ.ಎನ್ ಈ ಸಿನಿಮಾವನ್ನು ನಿರ್ಮಿಸುತ್ತಿದ್ದು, ಎಂ.ಆನಂದರಾಜ್ (Anand Raj) ನಿರ್ದೇಶಿಸುತ್ತಿದ್ದಾರೆ. ರೆಚೆಲ್ ಡೇವಿಡ್ (Rachel David) ಹಾಗೂ ನಿಧಿ ಸುಬ್ಬಯ್ಯ (Nidhi Subbaiah) ಈ ಚಿತ್ರದ ನಾಯಕಿಯರು.

     

    ಚಿತ್ರದ ಕುರಿತು ಮಾತನಾಡಿದ ನಿರ್ದೇಶಕ ಆನಂದರಾಜ್, ಇದೊಂದು ಡಾರ್ಕ್ ಕಾಮಿಡಿ ಜಾನರ್ ನ ಚಿತ್ರ. ಅನಿರುದ್ಧ್ ಅವರು ಐದು ವರ್ಷಗಳ ನಂತರ ನಟಿಸುತ್ತಿರುವ ಚಿತ್ರವಿದು. ಇಂದಿನಿಂದ ಬೆಂಗಳೂರು ಸುತ್ತಮುತ್ತ ಚಿತ್ರೀಕರಣ ಆರಂಭವಾಗಲಿದೆ. ನಾಯಕಿಯರಾಗಿ ನಿಧಿ ಸುಬ್ಬಯ್ಯ ಹಾಗೂ ರೆಚೆಲ್ ಡೇವಿಡ್ ನಟಿಸುತ್ತಿದ್ದಾರೆ.  ಶರತ್ ಲೋಹಿತಾಶ್ವ, ಕೆ.ಎಸ್ ಶ್ರೀಧರ್, ರಘು ರಮಣಕೊಪ್ಪ, ಶಿವಮಣಿ ಮುಂತಾದವರು ತಾರಾಬಳಗದಲ್ಲಿದ್ದಾರೆ. ಉದಯ್ ಲೀಲ ಛಾಯಾಗ್ರಹಣ, ರಿತ್ವಿಕ್ ಮುರಳಿಧರ್ ಸಂಗೀತ ನಿರ್ದೇಶನ, ಬಿ.ಆರ್ ನವೀನ್ ಕುಮಾರ್  ಸೌಂಡ್ ಡಿಸೈನ್ ಹಾಗೂ ವಿಜೇತ್ ಚಂದ್ರ ಸಂಕಲನ ಈ ಚಿತ್ರಕ್ಕಿದೆ ಎಂದು ವಿವರಣೆ ನೀಡಿದರು.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಸೋಲೋ ಆಕ್ಟರ್ ಆಗಿ ತೆರೆ ಮೇಲೆ ವಿಜಯ ರಾಘವೇಂದ್ರ

    ಸೋಲೋ ಆಕ್ಟರ್ ಆಗಿ ತೆರೆ ಮೇಲೆ ವಿಜಯ ರಾಘವೇಂದ್ರ

    ಯುವ ನಿರ್ದೇಶಕ ಎಂ. ಆನಂದ್ ರಾಜ್ ನಿರ್ದೇಶನದಲ್ಲಿ ವಿಜಯ ರಾಘವೇಂದ್ರ ನಟಿಸುತ್ತಿರುವ ಸಿನಿಮಾ ರಾಘು. ಫಸ್ಟ್ ಲುಕ್ ಮೂಲಕ ಗಮನ ಸೆಳೆದಿರೋ ಈ ಚಿತ್ರ ವಿಜಯ ರಾಘವೇಂದ್ರ ಸಿನಿ ಕೆರಿಯರ್ ನ ವಿಭಿನ್ನ ಸಿನಿಮಾ ಅನ್ನೋದನ್ನ ಚಿತ್ರತಂಡ ಆರಂಭದಿಂದ ಹೇಳಿಕೊಂಡು ಬಂದಿತ್ತು. ಇದೀಗ ಅದಕ್ಕೆ ಸಾಕ್ಷಿ ಎನ್ನುವಂತೆ ಚಿತ್ರದ ಮೋಷನ್ ಪೋಸ್ಟರ್ ಬಿಡುಗಡೆಯಾಗಿ ಸಿನಿ ಪ್ರೇಕ್ಷಕರಲ್ಲಿ ಕ್ಯೂರಿಯಾಸಿಟಿ ಮೂಡಿಸಿದೆ.

    ‘ರಾಘು’ ಸಿನಿಮಾ ಮೂಲಕ ತಮ್ಮ ಸಿನಿ ಕೆರಿಯರ್ ನಲ್ಲೇ ಹೊಸದೊಂದು ಪ್ರಯೋಗಕ್ಕೆ ವಿಜಯ ರಾಘವೇಂದ್ರ ತಮ್ಮನ್ನು ತಾವು ಒಡ್ಡಿಕೊಂಡಿದ್ದಾರೆ. ಆ ಸಿಕ್ರೇಟ್ ಮೋಷನ್ ಪೋಸ್ಟರ್ ಮೂಲಕ ರಿವೀಲ್ ಆಗಿದೆ. ‘ರಾಘು’ ಸಿನಿಮಾ ಸೋಲೋ ಆಕ್ಟಿಂಗ್ ಸಿನಿಮಾವಾಗಿದ್ದು ಇಂಟ್ರಸ್ಟಿಂಗ್ ಮೋಷನ್ ಪೋಸ್ಟರ್ ಬಿಡುಗಡೆಯಾಗಿ ಕ್ಯೂರಿಯಾಸಿಟಿ ಹುಟ್ಟು ಹಾಕಿದೆ. ಕನ್ನಡದ ಮಟ್ಟಿಗೆ ಇದೊಂದು ಹೊಸ ರೀತಿಯ ಪ್ರಯೋಗವಾಗಿದ್ದು, ಅಷ್ಟೇ ವಿಭಿನ್ನತೆಯನ್ನು ಸಿನಿಮಾ ಒಳಗೊಂಡಿದೆ. ಹೊಸ ರೀತಿಯ ಥ್ರಿಲ್ಲರ್ ಕಥಾಹಂದರ ಒಳಗೊಂಡ ಈ ಚಿತ್ರದಲ್ಲಿ ಪೂರ್ತಿ ಸಿನಿಮಾ ವಿಜಯ ರಾಘವೇಂದ್ರ ಒಬ್ಬರೇ ನಟಿಸಿದ್ದಾರೆ. ಇದನ್ನೂ ಓದಿ: ತಮಿಳಿನತ್ತ ಹೊಂಬಾಳೆ ಫಿಲ್ಮ್ಸ್:ಕೀರ್ತಿ ಸುರೇಶ್ ನಟನೆಯ `ರಘುತಥಾ’ ಚಿತ್ರ ನಿರ್ಮಾಣಕ್ಕೆ ಸಾಥ್

    ‘ಆನ’ ಹಾಗೂ ‘ಬ್ಯಾಂಗ್’ ಸಿನಿಮಾಗಳಿಗೆ ಸಹಾಯಕ ನಿರ್ದೇಶಕರಾಗಿ ಕೆಲಸ ಮಾಡಿ ಅನುಭವ ಇರುವ ಎಂ. ಆನಂದ್ ರಾಜ್ ಈ ಚಿತ್ರದ ಮೂಲಕ ಸ್ವತಂತ್ರ ನಿರ್ದೇಶಕರಾಗಿ ಗುರುತಿಸಿಕೊಳ್ಳುತ್ತಿದ್ದಾರೆ. ಸಂಪೂರ್ಣ ಹೊಸತನದಿಂದ ಕೂಡಿರುವ ಈ ಸಿನಿಮಾ ಕನ್ನಡದಲ್ಲಿ ಹೊಸ ಪ್ರಯೋಗ. ವಿಜಯ ರಾಘವೇಂದ್ರ ಸಿನಿ ಕೆರಿಯರ್ ನ ಡಿಫ್ರೆಂಟ್ ಸಿನಿಮಾ ಇದಾಗಿದ್ದು, ಹಿಂದಿನ ಎಲ್ಲಾ ಸಿನಿಮಾಗಳಿಗಿಂತ ಡಿಫ್ರೆಂಟ್ ಶೇಡ್ ನಲ್ಲಿ ತೆರೆ ಮೇಲೆ ಪ್ರೇಕ್ಷಕರನ್ನು ಎದುರುಗೊಳ್ಳಲಿದ್ದಾರೆ ಎನ್ನುತ್ತಾರೆ ನಿರ್ದೇಶಕ ಎಂ. ಆನಂದ್ ರಾಜ್.

    ತಾಂತ್ರಿಕವಾಗಿ ಹಾಗೂ ಕ್ವಾಲಿಟಿ ವಿಚಾರದಲ್ಲಿ ಯಾವುದೇ ಕಾಂಪ್ರಮೈಸ್ ಆಗದೇ ಶ್ರೀಮಂತವಾಗಿ ಸಿನಿಮಾವನ್ನು ಸೆರೆ ಹಿಡಿಯಲಾಗಿದೆ. ಅದಕ್ಕೆಂದೇ ಹೊಸ ಟೆಕ್ನಾಲಜಿ ಇರುವ ಕ್ಯಾಮೆರಾಗಳು, ಅದ್ದೂರಿ ಸೆಟ್ ನಿರ್ಮಾಣ ಮಾಡಿ ‘ರಾಘು’ ಸಿನಿಮಾ ಚಿತ್ರೀಕರಣ ಮಾಡಲಾಗಿದೆ. ಚಿತ್ರಕ್ಕಾಗಿ ಸೌಂಡ್ ಡಿಸೈನಿಂಗ್ ನಲ್ಲಿ ಹೊಸ ರೀತಿಯ ಪ್ರಯೋಗವನ್ನು ಮಾಡಲಾಗಿದ್ದು, ಬಿ.ಆರ್.ನವೀನ್ ಕುಮಾರ್ ಡಿಫ್ರೆಂಟ್ ಇನ್ಸ್ ಟ್ರುಮೆಂಟ್ ಬಳಸಿ ಚಿತ್ರಕ್ಕೆ ಹೊಸ ರೀತಿಯ ಸೌಂಡ್ ಎಫೆಕ್ಟ್ ನೀಡಿದ್ದಾರೆ.

    ರಾಘು ಚಿತ್ರದ ಪೋಸ್ಟ್ ಪ್ರೊಡಕ್ಷನ್ ಕೆಲಸಗಳು ಪೂರ್ಣಗೊಂಡಿದ್ದು ಚಿತ್ರದ ಪ್ರಚಾರ ಕಾರ್ಯವನ್ನು  ಚಿತ್ರತಂಡ ಆರಂಭಿಸಿದೆ. ಸದ್ಯದಲ್ಲೇ ಸಿನಿಮಾ ಬಿಡುಗಡೆ ದಿನಾಂಕವನ್ನು ಚಿತ್ರತಂಡ ಅನೌನ್ಸ್ ಮಾಡಲಿದೆ. ಡಿ ಕೆ ಎಸ್ ಸ್ಟುಡಿಯೋ, ಕೋಟಾ ಫಿಲಂ ಫ್ಯಾಕ್ಟರಿ ಪ್ರೊಡಕ್ಷನ್ ಹೌಸ್ ನಡಿ ಸಿನಿಮಾ ನಿರ್ಮಾಣವಾಗಿದ್ದು, ರಣ್ವಿತ್ ಶಿವಕುಮಾರ್, ಅಭಿಷೇಕ್ ಕೋಟ ಚಿತ್ರಕ್ಕೆ ಬಂಡವಾಳ ಹೂಡಿದ್ದಾರೆ. ವಿಜೇತ್ ಚಂದ್ರ ಸಂಕಲನ, ಉದಯ್ ಲೀಲಾ ಕ್ಯಾಮೆರಾ ವರ್ಕ್, ಹಾಡುಗಳಿಗೆ ಸೂರಜ್ ಜೋಯಿಸ್ ಸಂಗೀತ ಸಂಯೋಜನೆ ಮಾಡಿದ್ದು, ರಿತ್ವಿಕ್ ಮುರಳಿಧರ್ ಹಿನ್ನೆಲೆ ಸಂಗೀತ ಚಿತ್ರಕ್ಕಿದೆ.

    Live Tv
    [brid partner=56869869 player=32851 video=960834 autoplay=true]