Tag: anand swarup shukla

  • ಶ್ರೀಕೃಷ್ಣ ಜನ್ಮಭೂಮಿಯಲ್ಲಿರೋ ಮಸೀದಿಗಳನ್ನು ಹಿಂದೂಗಳಿಗೆ ಹಸ್ತಾಂತರಿಸಿ: ಯುಪಿ ಸಚಿವ

    ಶ್ರೀಕೃಷ್ಣ ಜನ್ಮಭೂಮಿಯಲ್ಲಿರೋ ಮಸೀದಿಗಳನ್ನು ಹಿಂದೂಗಳಿಗೆ ಹಸ್ತಾಂತರಿಸಿ: ಯುಪಿ ಸಚಿವ

    ಲಕ್ನೋ: ಶ್ರೀಕೃಷ್ಣ ಜನ್ಮಭೂಮಿ ಮಥುರಾದಲ್ಲಿರುವ ದೇವಸ್ಥಾನದ ಸುತ್ತಮುತ್ತ ಇರುವ ಮಸೀದಿಗಳನ್ನು ಮುಸ್ಲಿಮರು, ಹಿಂದೂಗಳಿಗೆ ಹಸ್ತಾಂತರಿಸಬೇಕು ಎಂದು ಉತ್ತರ ಪ್ರದೇಶ ಸಚಿವ ಆನಂದ್‌ ಸ್ವರೂಪ್‌ ಶುಕ್ಲಾ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.

    ಸಚಿವರು ತಮ್ಮ ಪ್ರಚೋದನಕಾರಿ ಭಾಷಣದಲ್ಲಿ, ಅಯೋಧ್ಯೆ ವಿವಾದವನ್ನು ನ್ಯಾಯಾಲಯ ಬಗೆಹರಿಸಿತು. ವಾರಣಾಸಿ ಮತ್ತು ಮಥುರಾದಲ್ಲಿರುವ ಬಿಳಿ ಬಣ್ಣದ ಕಟ್ಟಡಗಳು (ಮಸೀದಿಗಳು) ಹಿಂದೂಗಳ ಮನಸ್ಸಿಗೆ ನೋವುಂಟು ಮಾಡುತ್ತಿವೆ. ನ್ಯಾಯಾಲಯದ ಸಹಕಾರದೊಂದಿಗೆ ಈ ಕಟ್ಟಡಗಳನ್ನು ತೆರವುಗೊಳಿಸುವ ಕಾಲ ಬರಲಿದೆ ಎಂದು ಹೇಳಿದ್ದಾರೆ. ಇದನ್ನೂ ಓದಿ: ಸಿದ್ದರಾಮಯ್ಯ ಮೇಲೆ ಮೃದು ಧೋರಣೆ ತೋರಿದ ನಿರಾಣಿ

    ರಾಮ ಮತ್ತು ಕೃಷ್ಣ ತಮ್ಮ ಪೂರ್ವಜರು, ಬಾಬರ್‌, ಅಕ್ಬರ್‌ ಮತ್ತು ಔರಂಗಜೇಬ್‌ ಆಕ್ರಮಣಕಾರರು ಎಂದು ಭಾರತದ ಮುಸ್ಲಿಮರು ನಂಬಬೇಕೆಂದು ರಾಮ್‌ ಮನೋಹರ್‌ ಲೋಹಿಯಾ ಹೇಳಿದ್ದರು. ಹೀಗಾಗಿ ಬಾಬರ್‌ರಂಥವರು ನಿರ್ಮಿಸಿದ ಯಾವುದೇ ಕಟ್ಟಡದೊಂದಿಗೆ ನಿಮ್ಮ ಸಂಬಂಧವನ್ನು ಮಾಡಿಕೊಳ್ಳಬೇಡಿ ಎಂದು ಶುಕ್ಲಾ ತಿಳಿಸಿದ್ದಾರೆ.

    ಶ್ರೀಕೃಷ್ಣ ಜನ್ಮಭೂಮಿಯ ಸಂಕೀರ್ಣದ ಸುತ್ತಮುತ್ತ ಇರುವ ಮಸೀದಿಗಳನ್ನು ಮುಸ್ಲಿಂ ಸಮುದಾಯದವರು ಹಿಂದೂಗಳಿಗೆ ಹಸ್ತಾಂತರಿಸಬೇಕು. ಮುಸ್ಲಿಮರು ಹಿಂದೂ ಧರ್ಮಕ್ಕೆ ವಾಪಸ್ಸಾಗಬೇಕು (ಘರ್‌ ವಾಪ್ಸಿ) ಎಂದು ಹೇಳಿದ್ದಾರೆ. ಇದನ್ನೂ ಓದಿ: ಏಳಕ್ಕೆ ಏಳು ಜೆಡಿಎಸ್ ಶಾಸಕರಿದ್ದರೂ ಮಂಡ್ಯ ಅಭಿವೃದ್ಧಿಯಾಗಿಲ್ಲ ಯಾಕೆ: ಸಿದ್ದರಾಮಯ್ಯ

    ಭಾರತದಲ್ಲಿರುವ ಎಲ್ಲಾ ಮುಸ್ಲಿಮರು ಮತಾಂತರಗೊಂಡವರು. 200-250 ವರ್ಷಗಳ ಇತಿಹಾಸವನ್ನು ಗಮನಿಸಿದರೆ, ಅವರೆಲ್ಲ ಹಿಂದೂ ಧರ್ಮದಿಂದ ಇಸ್ಲಾಂ ಧರ್ಮಕ್ಕೆ ಮತಾಂತರ ಆಗಿದ್ದಾರೆ. ಅವರೆಲ್ಲರೂ ಹಿಂದೂ ಧರ್ಮಕ್ಕೆ (ಘರ್‌ ವಾಪ್ಸಿ) ವಾಪಸ್‌ ಬರಬೇಕು ಎಂಬುದೇ ನಮ್ಮ ಆಶಯ ಎಂದು ಶುಕ್ಲಾ ಅಭಿಪ್ರಾಯಪಟ್ಟಿದ್ದಾರೆ.

  • ಮುಸ್ಲಿಮರನ್ನು ಓಲೈಸಲು ಅಖಿಲೇಶ್‌ ಯಾದವ್‌ ಮತಾಂತರವಾಗಬಹುದು: ಯುಪಿ ಸಚಿವ

    ಮುಸ್ಲಿಮರನ್ನು ಓಲೈಸಲು ಅಖಿಲೇಶ್‌ ಯಾದವ್‌ ಮತಾಂತರವಾಗಬಹುದು: ಯುಪಿ ಸಚಿವ

    ಲಕ್ನೋ: ಮುಸ್ಲಿಮರನ್ನು ಓಲೈಸಲು ಸಮಾಜವಾದಿ ಪಕ್ಷದ (ಎಸ್‌ಪಿ) ಮುಖ್ಯಸ್ಥ ಅಖಿಲೇಶ್‌ ಯಾದವ್‌ ಮತಾಂತರ ಆಗಬಹುದು ಎಂದು ಉತ್ತರ ಪ್ರದೇಶ ಸಚಿವ ಆನಂದ್‌ ಸ್ವರೂಪ್‌ ಟೀಕಿಸಿದ್ದಾರೆ.

    ಅಖಿಲೇಶ್‌ ಅವರು ಪಾಕಿಸ್ತಾನದ ಬೇಹುಗಾರಿಕಾ ಸಂಸ್ಥೆ ಇಂಟರ್‌-ಸರ್ವೀಸಸ್‌ ಇಂಟೆಲಿಜೆನ್ಸ್‌ (ಐಎಸ್‌ಐ)ನೊಂದಿಗೆ ಬಾಂಧವ್ಯ ಹೊಂದಿದ್ದಾರೆ. ಅವರು ನೆರೆಯ ದೇಶದ ಐಎಸ್‌ಐನಿಂದ ಆರ್ಥಿಕ ಬೆಂಬಲ ಪಡೆಯುತ್ತಿರಬಹುದು ಎಂದು ಸಚಿವರು ಆರೋಪಿಸಿದ್ದಾರೆ.

    Akhilesh Yadav

    “ಇಸ್ಲಾಮಿಕ್‌ ಜಗತ್ತಿಗೆ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್‌ ಅವರು ಸವಾಲು ಹಾಕಿದ್ದಾರೆ. ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್‌ ಯಾದವ್‌ ಅವರು ಇಸ್ಲಾಮಿನವರಿಂದ ಬೆಂಬಲ ಪಡೆದಿದ್ದಾರೆ. ಅಲ್ಲದೇ ಆರ್ಥಿಕ ಬೆಂಬಲವನ್ನೂ ಪಡೆಯುತ್ತಿರಬಹುದು” ಎಂದು ಗಂಭೀರ ಆರೋಪ ಮಾಡಿದ್ದಾರೆ. ಇದನ್ನೂ ಓದಿ: ವ್ಯಾಕ್ಸಿನೇಷನೇಷನ್ ಪ್ರಮಾಣ ಕಡಿಮೆ – 48 ಜಿಲ್ಲೆಗಳ ಜಿಲ್ಲಾಧಿಕಾರಿಗಳಿಗೆ ಮೋದಿ ಖಡಕ್ ಎಚ್ಚರಿಕೆ

    ಭಾರತದ ಸ್ವಾತಂತ್ರ್ಯ ಹೋರಾಟದಲ್ಲಿ ಮಹಾತ್ಮ ಗಾಂಧಿ, ಸರ್ದಾರ್‌ ವಲ್ಲಭಬಾಯ್‌ ಪಟೇಲ್‌, ಜವಾಹರಲಾಲ್‌ ನೆಹರೂ, ಮೊಹಮ್ಮದ್‌ ಆಲಿ ಜಿನ್ನಾ ಅವರೆಲ್ಲ ಭಾರತದ ಸ್ವಾತಂತ್ರ್ಯ ಹೋರಾಟಕ್ಕಾಗಿ ಶ್ರಮಿಸಿದ್ದಾರೆ ಅಜಿತ್‌ ಪವಾರ್‌ ಹೇಳಿಕೆ ನೀಡಿದ್ದರು.

    ಮುಸಲ್ಮಾನರನ್ನು ಸೆಳೆಯಲು ಯಾದವ್‌ ಅವರು ನಮಾಜ್‌ ಮಾಡಿ, ಉಪವಾಸ ಆಚರಿಸಿದರು. ಹಾಗೆಯೇ ಅವರ ಮತಗಳನ್ನು ಪಡೆಯಲು ಅವರು ಮತಾಂತರ ಆಗಬಹುದು ಎಂದು ಸಚಿವ ಆನಂದ್‌ ಟೀಕಿಸಿದ್ದಾರೆ. ಇದನ್ನೂ ಓದಿ: ಬೆಲೆ ಏರಿಕೆ ಉತ್ತುಂಗದಲ್ಲಿದೆ, ಇದು ತಮಾಷೆಯ ವಿಚಾರವಲ್ಲ: ರಾಹುಲ್ ಗಾಂಧಿ

    ಐಎಸ್‌ಐ ನಿರ್ದೇಶನದ ಮೇರೆಗೆ ಯಾದವ್‌ ಜಿನ್ನಾರನ್ನು ವೈಭವೀಕರಿಸುತ್ತಿದ್ದಾರೆ. ಪಾಕಿಸ್ತಾನ ಮತ್ತು ತಾಲಿಬಾನ್‌ಗೆ ಬೇಕಾಗುವಂತೆ ಯಾದವ್‌ ಹೇಳಿಕೆಗಳನ್ನು ನೀಡುತ್ತಿದ್ದಾರೆ ಎಂದು ಸಂಸದೀಯ ವ್ಯವಹಾರಗಳ ರಾಜ್ಯ ಸಚಿವ ಶುಕ್ಲಾ ಆರೋಪಿಸಿದ್ದರು.