Tag: anant kumar hegde

  • ಸಸಿಕಾಂತ್ ಸೆಂಥಿಲ್ ರಾಜದ್ರೋಹ ಎಸಗಿದ್ದಾರೆ: ಅನಂತ್ ಕುಮಾರ್ ಹೆಗ್ಡೆ

    ಸಸಿಕಾಂತ್ ಸೆಂಥಿಲ್ ರಾಜದ್ರೋಹ ಎಸಗಿದ್ದಾರೆ: ಅನಂತ್ ಕುಮಾರ್ ಹೆಗ್ಡೆ

    ಬೆಂಗಳೂರು: ದಕ್ಷಿಣ ಕನ್ನಡ ಜಿಲ್ಲಾಧಿಕಾರಿಯಾಗಿದ್ದ ಸಸಿಕಾಂತ್ ಸೆಂಥಿಲ್ ರಾಜದ್ರೋಹ ಎಸಗಿದ್ದಾರೆ ಎಂದು ಉತ್ತರ ಕನ್ನಡ ಸಂಸದ ಅನಂತ್ ಕುಮಾರ್ ಹೆಗ್ಡೆ ಆರೋಪಿಸಿದ್ದಾರೆ.

    ಟ್ವಿಟ್ಟರ್ ನಲ್ಲಿ ಸಸಿಕಾಂತ್ ಸೆಂಥಿಲ್ ಅವರ ವಿರುದ್ಧ ವಾಗ್ದಾಳಿ ನಡೆಸಿರುವ ಸಂಸದರು, ಕೇಂದ್ರ ಸರ್ಕಾರ ಸಂಸತ್‍ನಲ್ಲಿ ಬಹುಮತದಿಂದ ಕೈಗೊಂಡ ನಿರ್ಧಾರವನ್ನು ಸರ್ಕಾರಿ ಅಧಿಕಾರಿ ಪ್ರಶ್ನಿಸಬಾರದು. ಅಂತಹ ದುಸ್ಸಾಹಸಕ್ಕೆ ಸೆಂಥಿಲ್ ಕೈಹಾಕಿದ್ದಾರೆ. ಇದಕ್ಕಿಂತ ದೊಡ್ಡ ದ್ರೋಹ ಮತ್ತೊಂದಿಲ್ಲ ಎಂದು ಗುಡುಗಿದರು.

    ಸಸಿಕಾಂತ್ ಸೆಂಥಿಲ್ ಅವರ ಹೇಳಿಕೆ ವಿರುದ್ಧ ಸಂಬಂಧಪಟ್ಟ ಅಧಿಕಾರಿಗಳು ಕ್ರಮ ಕೈಗೊಳ್ಳಬೇಕು. ರಾಜ್ಯಪಾಲರಿಗೂ ಕ್ರಮಕೈಗೊಳ್ಳುವ ಅಧಿಕಾರವಿದೆ. ಜನರು ಕೂಡ ಇದನ್ನು ಬಯಸುತ್ತಿದ್ದಾರೆ. ಅಭಿವ್ಯಕ್ತಿ ಸ್ವಾತಂತ್ರ್ಯದ ಹೆಸರಿನಲ್ಲಿ ಇಂತಹ ದುಷ್ಕೃತ್ಯ ಎಸಗಿದ್ದಾರೆ. ಇದರ ಹಿಂದೆ ಇರುವ ಕೈಗಳ ಕೈವಾಡ ಬೆಳಕಿಗೆ ಬರಬೇಕು. ಹೀಗಾಗಿ ತನಿಖೆ ಅಗತ್ಯವಾಗಿದೆ ಎಂದು ಒತ್ತಾಯಿಸಿದರು.

    ಸಂವಿಧಾನ ಬದ್ಧವಾಗಿ ಕೈಗೊಂಡ ನಿರ್ಧಾರವನ್ನು ಸರ್ಕಾರಿ ಅಧಿಕಾರಿ ಪ್ರಶ್ನಿಸಿರುವುದು ಸೂಕ್ತವಲ್ಲ. ಸಸಿಕಾಂತ್ ಸೆಂಥಿಲ್ ಸರ್ಕಾರದ ನಿರ್ಧಾರವನ್ನು ಪ್ರಶ್ನಿಸಿ ದುರಂಹಕಾರ, ಅಸಭ್ಯತೆ ಮೆರೆದಿದ್ದಾರೆ. ತಕ್ಷಣವೇ ಅವರ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು.

    ಸಂಸದರು ಭಾನುವಾರವೂ ಟ್ವೀಟ್ ಮೂಲಕ ಸಸಿಕಾಂತ್ ಸೆಂಥಿಲ್ ಅವರ ವಿರುದ್ಧ ವಾಗ್ದಾಳಿ ನಡೆಸಿದ್ದರು. ಸಸಿಕಾಂತ್ ಸೆಂಥಿಲ್ ಅವರ ಪತ್ರಿಕಾ ಹೇಳಿಕೆಯ ತುಣುಕನ್ನು ಟ್ವೀಟ್ ಮಾಡಿದ್ದ ಹೆಗ್ಡೆ, ಈತ ಮಾಡಬೇಕಾದ ಮೊದಲ ಕೆಲಸವೆಂದರೆ ಕೂಡಲೇ ತನ್ನ ನಿಲುವನ್ನು ಬೆಂಬಲಿಸಿದವರೊಂದಿಗೆ ಪಾಕಿಸ್ತಾನಕ್ಕೆ ವಲಸೆ ಹೋಗುವುದು. ಇದು ಪ್ರಾಯೋಗಿಕವಾಗಿಯೂ ಸುಲಭ ಮತ್ತು ಅಂತಿಮ ಪರಿಹಾರ ಕೂಡ. ಇಲ್ಲೇ ಇದ್ದು ದೇಶ ಒಡೆಯುವ ಬದಲು, ಅಲ್ಲಿಗೆ ಹೋಗಿ ನಮ್ಮ ದೇಶ ಮತ್ತು ನಮ್ಮ ಸರ್ಕಾರದ ವಿರುದ್ಧ ನೇರ ಹೋರಾಟ ಮಾಡುವುದು ಒಳಿತು. ಇದರಲ್ಲಾದರೂ ನಿಯತ್ತು ತೋರಿಸಲಿ ಎಂದು ಹೇಳಿದ್ದರು.

  • ಪ್ರವಾಹ ಪೀಡಿತ ಗ್ರಾಮಗಳ ಭೇಟಿಗೆ ಅನಂತ್‍ಕುಮಾರ್ ಹೆಗಡೆ ನಕಾರ- ಗ್ರಾಮಸ್ಥರಿಂದ ಹಿಡಿಶಾಪ

    ಪ್ರವಾಹ ಪೀಡಿತ ಗ್ರಾಮಗಳ ಭೇಟಿಗೆ ಅನಂತ್‍ಕುಮಾರ್ ಹೆಗಡೆ ನಕಾರ- ಗ್ರಾಮಸ್ಥರಿಂದ ಹಿಡಿಶಾಪ

    ಕಾರವಾರ: ಪ್ರವಾಹ ಪೀಡಿತ ಗ್ರಾಮಗಳಿಗೆ ಭೇಟಿ ನೀಡಲು ಒಪ್ಪದ ಸಂಸದ ಅನಂತ್‍ಕುಮಾರ್ ಹೆಗಡೆ ಅವರಿಗೆ ಗ್ರಾಮಸ್ಥರು ಮುತ್ತಿಗೆ ಹಾಕಿ, ಹಿಡಿ ಶಾಪ ಹಾಕಿದ ಪ್ರಸಂಗ ಇಂದು ಮುಂಡಗೋಡ ತಾಲೂಕಿನ ಕಾತೂರಿನಲ್ಲಿ ನಡೆಯಿತು.

    ಚಿಗಳ್ಳಿ ಚೆಕ್ ಡ್ಯಾಂ ಒಡೆದುಹೋದ ಹಿನ್ನೆಲೆಯಲ್ಲಿ ನೀರಾವರಿ ಇಲಾಖೆಗೆ ಮುತ್ತಿಗೆ ಹಾಕಿ ಪ್ರತಿಭಟಿಸಲು ಮುಂಡಗೋಡ ತಾಲೂಕಿನ ಕೆಲ ಗ್ರಾಮಸ್ಥರು ಆಗಮಿಸಿದ್ದರು. ಈ ವೇಳೆ ಸ್ಥಳ ಪರಿಶೀಲನೆಗೆ ಆಗಮಿಸಿದ್ದ ಅನಂತ್‍ಕುಮಾರ್ ಹೆಗಡೆ ಅವರಿಗೆ ಗ್ರಾಮಸ್ಥರು, ಸರ್ ನಮ್ಮ ಗ್ರಾಮಕ್ಕೆ ಬಂದು ಪರಿಸ್ಥಿತಿ ನೋಡಿ. ಚಿಗಳ್ಳಿ ಚೆಕ್ ಡ್ಯಾಂ ಒಡೆದು ಜಮೀನು, ಮನೆ ಎಲ್ಲವೂ ನೀರು ಪಾಲಾಗಿದೆ. ಬದುಕು ತುಂಬಾ ಕಷ್ಟವಾಗಿದೆ ಎಂದು ಮನವಿ ಮಾಡಿಕೊಂಡರು. ಆಗ ಸಂಸದರು, ನಾನು ಬರುವುದು ಮುಖ್ಯವಲ್ಲ ಅಧಿಕಾರಿಗಳು ಕೆಲಸ ಮಾಡುವುದು ಮುಖ್ಯ ಎಂದು ಜಾರಿಕೊಂಡರು.

    ಅನಂತ್‍ಕುಮಾರ್ ಹೆಗಡೆ ಅವರ ಮಾತಿನಿಂದ ಕೋಪಗೊಂಡ ಗ್ರಾಮಸ್ಥರು ಸಂಸದರನ್ನು ಮುತ್ತಿಗೆ ಹಾಕಿ, ಹಿಡಿ ಶಾಪ ಹಾಕಿದರು. ಆದರೆ ಅನಂತ್‍ಕುಮಾರ್ ಹೆಗಡೆ ಅವರು ಅಲ್ಲಿಂದ ಕೆಲವೇ ನಿಮಿಷಗಳಲ್ಲಿ ಬೇರೆ ಕಡೆಗೆ ಪ್ರಯಾಣ ಬೆಳೆಸಿದರು. ಇದರಿಂದ ಕೋಪಗೊಂಡ ಗ್ರಾಮಸ್ಥರು, ವೋಟ್ ಕೇಳುವಾಗ ನಾವು ಬೇಡ ಅಂದ್ರೂ ಕಾಲು ಮುಗಿಯುತ್ತಾರೆ. ವೋಟ್‍ಗಾಗಿ ಏನ್ ಬೇಕಾದರೂ ಮಾಡುತ್ತಾರೆ. ಈಗ ಪ್ರವಾಹದಿಂದ ಜನರು, ರೈತರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಗ್ರಾಮಕ್ಕೆ ಭೇಟಿ ನೀಡುತ್ತಿಲ್ಲ. ಸಂಸದರಿಗೆ ಅರ್ಥವಾಗೊಲ್ವಾ? ಹೊಟ್ಟೆಗೆ ಏನು ತಿನ್ನುತ್ತಾರೆ ಎಂದು ಕಿಡಿಕಾರಿದ್ದಾರೆ.

    ಸಂಸದ ಅನಂತ್‍ಕುಮಾರ್ ಹೆಗಡೆ ಅವರು ನಿನ್ನೆಯಷ್ಟೇ ಸಂತ್ರಸ್ತರ ಮಾತು ಕೇಳದೆ ಅವರನ್ನು ನಿರ್ಲಕ್ಷಿಸಿ ಜನರ ಆಕ್ರೋಶಕ್ಕೆ ಕಾರಣವಾಗಿದ್ದರು. ಬೆಳಗಾವಿ ಜಿಲ್ಲೆಯ ಕಿತ್ತೂರು ತಾಲೂಕಿನ ನೇಗಿನಹಾಳ ಗ್ರಾಮದ ಪರಿಹಾರ ಕೇಂದ್ರದಲ್ಲಿದ್ದ ನಿರಾಶ್ರಿತರನ್ನು ಭೇಟಿ ಮಾಡಲು ಅನಂತಕುಮಾರ್ ಹೆಗಡೆ ಅವರು ಹೋಗಿದ್ದರು. ಈ ವೇಳೆ ಮಲಪ್ರಭಾ ನದಿಯಿಂದ ಉಂಟಾದ ಪ್ರವಾಹಕ್ಕೆ ಮನೆಗಳನ್ನ ಕಳೆದುಕೊಂಡ ನಿರಾಶ್ರಿತರು, ದೂರದಿಂದ ನೋಡಲು ಮನೆಗಳು ಸರಿಯಾಗಿದೆ ಎಂದು ಕಾಣುತ್ತದೆ. ಆದರೆ ಮನೆಗಳ ಒಳಗೆ ಎಲ್ಲವೂ ಹಾನಿಯಾಗಿದೆ. ನಮಗೆ ಮನೆ ಕಟ್ಟಿಸಿಕೊಡಿ ಎಂದು ಕೇಳಿದ್ದರು. ಆದರೆ ಜನರ ಮಾತನ್ನು ಕೇಳದೆ, ಸರಿಯಾಗಿ ಸ್ಪಂದಿಸದ ಅನಂತ್‍ಕುಮಾರ್ ಅವರು ನಿರ್ಲಕ್ಷಿಸಿದ್ದ. ಇದರಿಂದ ಸಿಟ್ಟಿಗೆದ್ದ ಸಂತ್ರಸ್ತರು ಸಂಸದರನ್ನು ತರಾಟೆಗೆ ತೆಗೆದುಕೊಂಡಿದ್ದರು.

    ಅಲ್ಲದೆ ಪ್ರವಾಹದ ಬಗ್ಗೆ ಪ್ರತಿಕ್ರಿಯೆ ಕೇಳಿದ ಮಾಧ್ಯಮ ಪ್ರತಿನಿಧಿಗಳ ವಿರುದ್ಧ ಕೂಡ ಅನಂತ್‍ಕುಮಾರ್ ಅವರು ಕಿಡಿಕಾರಿದ್ದರು. ವಿಡಿಯೋ ಮಾಡುವುದನ್ನು ನಿಲ್ಲಿಸಿ ಎಂದು ಹೇಳಿದ್ದರು. ಸಂಸದರ ನಡವಳಿಕೆಯಿಂದ ಸಿಟ್ಟಲಿದ್ದ ಸಂತ್ರಸ್ತ ಮಹಿಳೆಯರು ನಿನಗೆ ವೋಟ್ ಹಾಕುವುದಿಲ್ಲ ಎಂದು ಕೂಗಿ ಆಕ್ರೋಶ ಹೊರಹಾಕಿದ್ದರು. ಆದರೆ ಸಂಸದರು ಮಹಿಳೆಯರ ಮಾತು ಕೇಳಿಯೂ ಕೇಳಿಸದಂತೆ ಕುಳಿತ್ತಿದ್ದರು. ಹೀಗೆ ಗ್ರಾಮಸ್ಥರ ತೀವ್ರ ತರಾಟೆಗೆ ತೆಗೆದುಕೊಂಡ ನಂತರ ಬೇರೆ ಪರಿಹಾರ ಕೇಂದ್ರಕ್ಕೆ ಅನಂತ್‍ಕುಮಾರ್ ಹೆಗಡೆ ತೆರಳಿದ್ದರು.

  • ಪರಿಸರ ದಿನಾಚರಣೆಯೇ ಹಾಸ್ಯಾಸ್ಪದ ವಿಷಯ: ಅನಂತ್‍ಕುಮಾರ್ ಹೆಗಡೆ

    ಪರಿಸರ ದಿನಾಚರಣೆಯೇ ಹಾಸ್ಯಾಸ್ಪದ ವಿಷಯ: ಅನಂತ್‍ಕುಮಾರ್ ಹೆಗಡೆ

    – ಒಂದು ದಿನದ ಪರಿಸರ ನಾಟಕ ಅಗತ್ಯವಿಲ್ಲ

    ಕಾರವಾರ: ಪರಿಸರ ದಿನ ಆಚರಣೆಯೇ ಒಂದು ಹಾಸ್ಯಾಸ್ಪದ ವಿಷಯವಾಗಿದೆ ಎಂದು ಕೇಂದ್ರ ಮಾಜಿ ಸಚಿವ ಅನಂತ್‍ಕುಮಾರ್ ಹೆಗಡೆ ಹೇಳಿದ್ದಾರೆ.

    ಈ ಕುರಿತು ಫೇಸ್‍ಬುಕ್‍ನಲ್ಲಿ ಅನಿಸಿಕೆ ಹಂಚಿಕೊಂಡಿರುವ ಅನಂತ್‍ಕುಮಾರ್ ಹೆಗ್ಡೆ ಅವರು, ಹಿಂದೂಗಳಿಗೆ ಪರಿಸರ ದಿನಾಚರಣೆ ವಿಷಯವಲ್ಲ. ಪರಿಸರದ ಜೊತೆಗೆ ಬದುಕುವುದು ಹಿಂದೂಗಳ ಸಂಪ್ರದಾಯ. ಪರಿಸರ ರಕ್ಷಣೆ ನಮ್ಮ ಕರ್ತವ್ಯ. ನಮ್ಮ ಜೀವನ ಪದ್ಧತಿ ಮೂಲ ಸನಾತನ ಆಶಯದಂತೆ ನಡೆದಲ್ಲಿ ಒಂದು ದಿನದ ಪರಿಸರ ದಿನದ ನಾಟಕ ಅಗತ್ಯವಿರುವುದಿಲ್ಲ ಎಂದು ತಿಳಿದ್ದಾರೆ.

    ಹಿಂದೂಗಳು ಪರಿಸರ ರಕ್ಷಣೆ ಬದುಕಿನಲ್ಲಿ ನಡೆಸಿಕೊಂಡು ಬಂದಿರುವುದಾಗಿದೆ ಹಾಗೂ ಬದುಕಿನ ಹಾದಿ ಇದಾಗಿದೆ. ಹಿಂದೂ ಜೀವನದ ಪದ್ಧತಿ ಪ್ರಬುದ್ಧವಾಗಿದೆ. ಮತಿಗೆಟ್ಟ ಮೂಲಭೂತವಾದಿಗಳು ಮಾತ್ರ ಇನ್ನೊಂದು ಕೋಮಿನ ವಿಚಾರಕ್ಕೆ ಹೋಲಿಸುತ್ತಾರೆ. ಅದಕ್ಕೆ ನಾವು ಏನೂ ಮಾಡಲು ಬರುವುದಿಲ್ಲ ಎಂದರು.

    ಪರಿಸರ ರಕ್ಷಣೆ ಹಿಂದೂಗಳಿಗೆ ಟಾಸ್ಕ್ ಅಲ್ಲ. ತಾಯಿಯ ಸೇವೆ ಮಗನ ಜನ್ಮಜಾತ ಕರ್ತವ್ಯ. ಅದು ಕೆಲಸವಲ್ಲ, ಕರ್ತವ್ಯ. ಪರಿಸರನ್ನು ಉಳಿಸಿ, ಬೆಳೆಸಿಕೊಂಡು ಮುಂದಿನ ತಲೆಮಾರಿಗೆ ಹೀಗೆ ಇಡಬೇಕು ಎಂದು ಹೆಗಡೆ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

  • ಮೈತ್ರಿ ಸರ್ಕಾರಕ್ಕೆ ಜನರು ಇಚ್ಛಾ ಮರಣದ ವರ ಕೊಟ್ಟಿದ್ದಾರೆ: ಅನಂತ್‍ಕುಮಾರ್ ಹೆಗ್ಡೆ

    ಮೈತ್ರಿ ಸರ್ಕಾರಕ್ಕೆ ಜನರು ಇಚ್ಛಾ ಮರಣದ ವರ ಕೊಟ್ಟಿದ್ದಾರೆ: ಅನಂತ್‍ಕುಮಾರ್ ಹೆಗ್ಡೆ

    ಕಾರವಾರ: ರಾಜ್ಯದ ಜನರು ಕಾಂಗ್ರೆಸ್-ಜೆಡಿಎಸ್ ದೋಸ್ತಿ ಸರ್ಕಾರಕ್ಕೆ ಇಚ್ಛಾ ಮರಣದ ವರವನ್ನು ಕೊಟ್ಟಿದ್ದಾರೆ. ಯಾವತ್ತು ಅವರ ಕಲಹ, ಭಿನ್ನಾಭಿಪ್ರಾಯ ಹೆಚ್ಚಾಗುತ್ತದೆಯೋ ಅಂದು ಸರ್ಕಾರ ಬೀಳುತ್ತದೆ ಎಂದು ಕೇಂದ್ರ ಸಚಿವ ಅನಂತ್‍ಕುಮಾರ್ ಹೆಗ್ಡೆ ಹೇಳಿದ್ದಾರೆ.

    ಉತ್ತರ ಕನ್ನಡ ಜಿಲ್ಲೆಯ ಕಾರವಾರದಲ್ಲಿ ನಡೆದ ಕಾರ್ಯಕರ್ತರಿಗೆ ಅಭಿನಂದನಾ ಸಭೆಯಲ್ಲಿ ಮಾತನಾಡಿದ ಕೇಂದ್ರ ಸಚಿವರು, ಸರ್ಕಾರ ಬೀಳಿಸಲು ಬೇರೆ ಯಾರ ಪ್ರಯತ್ನವೂ ಬೇಡ. ಅದು ಇಚ್ಛಾ ಮರಣ ವರ ಪಡೆದುಕೊಂಡು ಹೊರಟಿದೆ. ಅದಕ್ಕೆ ಯಾವ ದಿನಾಂಕ ನಿಗದಿ ಮಾಡುವುದು ಬೇಡ. ದೋಸ್ತಿ ನಾಯಕರೇ ನಿರ್ಧರಿಸುವ ದಿನವೇ ಸರ್ಕಾರ ತಾನಾಗಿಯೇ ಬೀಳುತ್ತದೆ ಎಂದು ಲೇವಡಿ ಮಾಡಿದರು.

    ಬಿಜೆಪಿಯು ರಾಜ್ಯದಲ್ಲಿ ಈ ಬಾರಿ 22ಕ್ಕೂ ಹೆಚ್ಚು ಸ್ಥಾನ ಗೆಲ್ಲಲಿದೆ. ಕೇಂದ್ರದಲ್ಲಿ ಬಿಜೆಪಿ ಮತ್ತೆ ಅಧಿಕಾರಕ್ಕೆ ಬರುತ್ತೆ, ನರೇಂದ್ರ ಮೋದಿ ಅವರು ಪ್ರಧಾನಿಯಾಗುತ್ತಾರೆ ಎಂದು ತಿಳಿಸಿದರು.

    ಶಿರಸಿಯಲ್ಲಿ ಏಪ್ರಿಲ್ 23ರಂದು ಬಿಜೆಪಿ ಅಲ್ಪಸಂಖ್ಯಾತ ಮೋರ್ಚ ಉಪಾಧ್ಯಕ್ಷ ಅನಿಶ್ ಮೇಲೆ ಎಸ್‍ಡಿಪಿಐ ಕಾರ್ಯಕರ್ತರು ಮಾರಣಾಂತಿಕ ಹಲ್ಲೆ ಮಾಡಿದ್ದರು. ಈ ಕುರಿತು ಪ್ರತಿಕ್ರಿಯೆ ನೀಡಿದ ಕೇಂದ್ರ ಸಚಿವರು, ಇದೊಂದು ಎಸ್‍ಡಿಪಿಐಯ ದೊಡ್ಡ ವಿಕೃತಿಯಾಗಿದೆ. ಎಲ್ಲೆಲ್ಲಿ ಎಸ್‍ಡಿಪಿಐ ಬೆಳೆದಿದೆಯೋ ಅಲ್ಲಲ್ಲಿ ಗೊಂದಲ ಕೋಮು ದ್ವೇಷ ಬೆಳೆಸುತ್ತಿದೆ. ಉತ್ತರ ಕನ್ನಡ ಜಿಲ್ಲೆಗೂ ಕಾಲಿಟ್ಟಿದ್ದು ಸಾರ್ವಜನಿಕರು ಈ ಬಗ್ಗೆ ಜಾಗೃತವಾಗಿರಬೇಕು ಎಂದರು.

    ಎಸ್‍ಡಿಪಿಐ ಮುಸ್ಲಿಂ ಸಮುದಾಯವನ್ನು ತನ್ನ ಹಿಡಿತದಲ್ಲಿ ಇಟ್ಟುಕೊಳ್ಳಲು ಪ್ರಯತ್ನಿಸುತ್ತಿದೆ. ಈ ನಿಟ್ಟಿನಲ್ಲಿ ಮೊದಲು ತನ್ನ ಸಮುದಾಯದವರ ಮೇಲೆಯೇ ಹಲ್ಲೆ ಮಾಡಿದೆ. ಇದು ಅಪಾಯಕಾರಿ ಬೆಳವಣಿಗೆ ಎಂದು ಕಿಡಿ ಕಾರಿದರು.

  • ಲೋಕಸಭಾ ಫಲಿತಾಂಶದ ಬಳಿಕ ಮೈತ್ರಿ ಸರ್ಕಾರ ಬೀಳುತ್ತೆ: ಅನಂತ್‍ಕುಮಾರ್ ಹೆಗ್ಡೆ

    ಲೋಕಸಭಾ ಫಲಿತಾಂಶದ ಬಳಿಕ ಮೈತ್ರಿ ಸರ್ಕಾರ ಬೀಳುತ್ತೆ: ಅನಂತ್‍ಕುಮಾರ್ ಹೆಗ್ಡೆ

    ಕಾರವಾರ: ಲೋಕಸಭಾ ಚುನಾವಣೆ ಬಳಿಕ ರಾಜ್ಯ ಸರ್ಕಾರ ಬೀಳುವ ಸಾಧ್ಯತೆಗಳಿವೆ. ಹೀಗಾಗಿ ಎಲ್ಲ ರೀತಿಯಿಂದಲೂ ನಾವು ಸಿದ್ಧವಾಗಿರಬೇಕು ಎಂದು ಕೇಂದ್ರ ಸಚಿವ ಅನಂತ್‍ಕುಮಾರ್ ಹೆಗ್ಡೆ ಕಾರ್ಯಕರ್ತರಿಗೆ ಕರೆಕೊಟ್ಟಿದ್ದಾರೆ.

    ಉತ್ತರ ಕನ್ನಡ ಜಿಲ್ಲೆ ಶಿರಸಿಯಲ್ಲಿ ಇಂದು ನಡೆದ ಬಿಜೆಪಿ ಕಾರ್ಯಕರ್ತರ ಅವಲೋಕನ ಸಭೆಯಲ್ಲಿ ಮಾತನಾಡಿದ ಕೇಂದ್ರ ಸಚಿವರು, ಮತ್ತೊಂದು ಚುನಾವಣೆಗೆ ಈಗಿಂದಲೇ ಸಿದ್ಧತೆ ಮಾಡಿಕೊಳ್ಳಬೇಕಿದೆ. ಕಾರ್ಯರ್ತರು ರೆಸ್ಟ್ ಮೂಡ್‍ಗೆ ಹೋಗುವುದು ಬೇಡ. ಲೋಕಸಭಾ ಚುನಾವಣೆ ಫಲಿತಾಂಶದ ಬಳಿಕ ರಾಜ್ಯ ರಾಜಕೀಯದಲ್ಲಿ ಬದಲಾವಣೆಯಾಗುತ್ತದೆ ಎಂದರು.

    ಮುಂದಿನ ಲೋಕಸಭಾ ಚುನಾವಣೆಯಲ್ಲಿಯೂ ಕಾಂಗ್ರೆಸ್ ಚಿಹ್ನೆ ಇರುತ್ತದೆ. ರಾಜ್ಯದಲ್ಲಿ ಹೊಂದಾಣಿಕೆ ಮಾಡಿಕೊಂಡು ಸರ್ಕಾರ ರಚನೆ ಮಾಡಿದರು. ಆದರೆ ಈಗ ಅದು ಅಲುಗಾಡುತ್ತಿದೆ ಎಂದು ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದರು.

    ಸಾಧನೆ ಮಾಡಬೇಕು ಎನ್ನುವ ವ್ಯಕ್ತಿ ವಿಶ್ರಾಂತಿ ಬಗ್ಗೆ ಹೆಚ್ಚು ಗಮನ ಹರಿಸಬಾರದು. ಮಲಗಿದ್ದಾಗಲೂ ಒಂದು ವಿಷಯದ ಕುರಿತು ವಿಚಾರ ಮಾಡುತ್ತಿರಬೇಕು. ನಾನು ಒಂದು ದಿನವೂ ವಿಶ್ರಾಂತಿ ತೆಗೆದುಕೊಂಡಿಲ್ಲ. ಉತ್ತರ ಕನ್ನಡ ಲೋಕಸಭಾ ಕ್ಷೇತ್ರದ ಚುನಾವಣೆ ಏಪ್ರಿಲ್ 23ರಂದು ಮುಗಿಯುತ್ತಿದ್ದಂತೆ ಮತ್ತೆ ನನ್ನ ಕಾರ್ಯಕ್ಕೆ ಹಾಜರಾದೆ ಎಂದು ಹೇಳಿದರು.

  • ನಿಖಿಲ್ ಎಲ್ಲಿದೀಯಪ್ಪಾ ಅಂತ ಹುಡುಕಬೇಡಿ, ನಿಖಿಲ್ ಈಗ ಸಿಕ್ಕಿದ್ದಾನೆ: ಅನಂತ್‍ಕುಮಾರ್ ಹೆಗ್ಡೆ ವ್ಯಂಗ್ಯ

    ನಿಖಿಲ್ ಎಲ್ಲಿದೀಯಪ್ಪಾ ಅಂತ ಹುಡುಕಬೇಡಿ, ನಿಖಿಲ್ ಈಗ ಸಿಕ್ಕಿದ್ದಾನೆ: ಅನಂತ್‍ಕುಮಾರ್ ಹೆಗ್ಡೆ ವ್ಯಂಗ್ಯ

    ಬೆಳಗಾವಿ: ನಿಖಿಲ್ ಎಲ್ಲಿದೀಯಪ್ಪಾ ಅಂತ ಕೇಳಬೇಡಿ, ಹುಡುಕಬೇಡಿ. ಯಾಕಂದ್ರೆ ನಿಖಿಲ್ ಸಿಕ್ಕಿದ್ದಾನೆ ಎಂದು ಕೇಂದ್ರ ಸಚಿವ ಅನಂತ್‍ಕುಮಾರ್ ಹೆಗ್ಡೆ ವ್ಯಂಗವಾಡಿದ್ದಾರೆ.

    ಇಲ್ಲಿನ ಕಿತ್ತೂರು ನಗರದಲ್ಲಿ ಇಂದು ಸಂಜೆ ನಡೆದ ಚುನಾವಣಾ ಪ್ರಚಾರದಲ್ಲಿ ಮಾತನಾಡಿದ ಕೇಂದ್ರ ಸಚಿವರು, ಮಂಡ್ಯದಲ್ಲಿ ಕಾಂಗ್ರೆಸ್-ಮೈತ್ರಿ ನಾಯಕರು ಕಾರ್ಯಕರ್ತರಿಗೆ ಟಿಶರ್ಟ್ ಕೊಟ್ಟಿದ್ದಾರೆ. ಅದರ ಮೇಲೆ ನಾನು ನಿಖಿಲ್ ಅಂತ ಬರೆದಿದ್ದಾರೆ. ಟಿಶರ್ಟ್ ಅಷ್ಟೇ ಅಲ್ಲದೇ ಮದ್ಯದ ಬಾಟಲ್‍ಗಳನ್ನು ಕೂಡ ಹಂಚಿದ್ದಾರೆ. ಹೀಗಾಗಿ ಟಿಶರ್ಟ್ ಹಾಕಿಕೊಂಡಿದ್ದ ಒಬ್ಬ ಯುವಕ ಎಣ್ಣೆ ಹೊಡೆದು, ಫುಲ್ ಟೈಟ್ ಆಗಿ ದಾರಿಯಲ್ಲಿ ಬಿದ್ದಿದ್ದ. ಪತ್ರಕರ್ತರೊಬ್ಬರು ಅವನ ಫೋಟೋವನ್ನು ತೆಗೆದು, ಎಲ್ಲರಿಗೂ ಕಳುಹಿಸಿ ನಿಖಿಲ್ ಸಿಕ್ಕಿದ್ದಾನೆ ಅಂತ ಮಾಹಿತಿ ಮುಟ್ಟಿಸಿದ್ದಾರೆ ಎಂದು ಹೇಳಿದರು.

    ಕೇಂದ್ರ ಸಚಿವ ಅನಂತ್‍ಕುಮಾರ್ ಹೆಗ್ಡೆ ಅವರ ಪ್ರಚಾರ ಭಾಷಣವನ್ನು ಸಭೆಯಲ್ಲಿದ್ದ ಕೆಲವರು ತಮ್ಮ ಮೊಬೈಲ್‍ನಲ್ಲಿ ಸೆರೆಹಿಡಿದಿದ್ದಾರೆ. ಬಳಿಕ ಅದನ್ನು ಸಾಮಾಜಿಕ ಜಾಲತಾಣದಲ್ಲಿ ಹರಿಬಿಟ್ಟಿದ್ದಾರೆ.

    ನಟ, ಮಂಡ್ಯ ಲೋಕಸಭಾ ಕ್ಷೇತ್ರದ ಮೈತ್ರಿ ಅಭ್ಯರ್ಥಿ ನಿಖಿಲ್ ಕುಮಾರಸ್ವಾಮಿ ನಟನೆಯ `ಜಾಗ್ವಾರ್’ ಚಿತ್ರದ ಆಡಿಯೋ ಸಮಾರಂಭ ನಡೆಸಿತ್ತು. ಆಗ ಸಿಎಂ ಕುಮಾರಸ್ವಾಮಿ ಅವರು, `ನಿಖಿಲ್ ಎಲ್ಲಿದೀಯಪ್ಪಾ’ ಎಂದು ಹೇಳಿದ್ದರು. ಈ ಡೈಲಾಗ್ ಲೋಕಸಭಾ ಚುನಾವಣೆ ಕಾವೇರುತ್ತಿದ್ದಂತೆ ಫುಲ್ ವೈರಲ್ ಆಗಿದ್ದು, ಅಂತರ್ಜಾಲ ಲೋಕವನ್ನು ಆವರಿಸಿ ಕೊಂಡಿದೆ.

    ಸಾಮಾಜಿಕ ಜಾಲತಾಣದಲ್ಲಿ, ಕಾಲೇಜ್ ಫಂಕ್ಷನ್‍ಗಳಲ್ಲಿ, ಅಲ್ಲದೆ ಐಪಿಎಲ್ ಕ್ರಿಕೆಟ್‍ನಲ್ಲೂ ಇದೇ ಡೈಲಾಗ್ ಕೇಳಿ ಬಂದಿತ್ತು. ಅಷ್ಟೇ ಅಲ್ಲದೆ ವಿದೇಶಗಳಲ್ಲೂ ನಿಖಿಲ್ ಎಲ್ಲಿದೀಯಪ್ಪಾ ಡೈಲಾಗ್ ಭಾರೀ ಸದ್ದು ಮಾಡಿದೆ. ಹೀಗಾಗಿ ನಿಖಿಲ್ ಎಲ್ಲಿದೀಯಪ್ಪಾ ಸಿನಿಮಾ ಟೈಟಲ್‍ಗೆ ಈಗ ಭರ್ಜರಿ ಬೇಡಿಕೆ ಶುರುವಾಗಿದ್ದು, ಚಿತ್ರತಂಡಗಳು ಈ ಟೈಟಲ್ ಪಡೆಯಲು ಚಲನಚಿತ್ರ ವಾಣಿಜ್ಯ ಮಂಡಳಿಯಲ್ಲಿ ಸಾಕಷ್ಟು ಅರ್ಜಿಗಳನ್ನ ಸಲ್ಲಿಸಿವೆ. ಆದರೆ ಇದು ರಾಜಕೀಯಕ್ಕೆ ಸಂಬಂಧಿಸಿದ ವಿಚಾರವಾಗಿದ್ದು, ಟೈಟಲ್ ಕೊಡಲು ಫಿಲ್ಮ್ ಚೇಂಬರ್ ನಿರಾಕರಿಸಿದೆ ಎಂದು ಎನ್ನಲಾಗುತ್ತಿದೆ.

  • ಅನಂತಕುಮಾರ್ ಹೆಗ್ಡೆ ರಾಜಕೀಯಕ್ಕೆ ಅನ್‍ಫಿಟ್: ಮಾಜಿ ಸಿಎಂ

    ಅನಂತಕುಮಾರ್ ಹೆಗ್ಡೆ ರಾಜಕೀಯಕ್ಕೆ ಅನ್‍ಫಿಟ್: ಮಾಜಿ ಸಿಎಂ

    – ಸುಮಲತಾ ಬಗ್ಗೆ ಸಚಿವ ರೇವಣ್ಣ ಹೇಳಿಕೆ ಸರಿಯಿಲ್ಲ
    – ಈಶ್ವರಪ್ಪನನ್ನು ಜನ ಹುಚ್ಚ ಅಂತಾರೆ

    ಉಡುಪಿ: ಕೇಂದ್ರ ಸಚಿವ ಅನಂತಕುಮಾರ್ ಹೆಗ್ಡೆ ರಾಜಕೀಯದಲ್ಲಿ ಮುಂದುವರಿಯಲು ಯೋಗ್ಯ ವ್ಯಕ್ತಿಯಲ್ಲ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಕಿಡಿಕಾರಿದ್ದಾರೆ.

    ನಗರದಲ್ಲಿ ಮಾತನಾಡಿದ ಮಾಜಿ ಸಿಎಂ, ಅನಂತಕುಮಾರ್ ಹೆಗ್ಡೆ ಅವರಿಗೆ ಕಾನೂನು, ಸಂವಿಧಾನದ ಬಗ್ಗೆ ಜ್ಞಾನವಿಲ್ಲ. ಬಾಯಿಗೆ ಬಂದಂತೆ ಮಾತನಾಡುತ್ತಾನೆ. ಹೀಗಾಗಿ ಅಂತವರು ರಾಜಕಾರಣದಲ್ಲಿ ಇರಬಾರದು. ಅವರ ಬಗ್ಗೆ ಪ್ರತಿಕ್ರಿಯೆ ನೀಡದೇ ಇರುವುದು ಉತ್ತಮ ಎಂದು ಕುಟುಕಿದರು. ಇದನ್ನು ಓದಿ : ಮುಸಲ್ಮಾನನ ಮಗ ಗಾಂಧಿ ಹೇಗಾದ ಎನ್ನುವ ಪ್ರಶ್ನೆಗೆ ಕಾಂಗ್ರೆಸ್ ಉತ್ತರ ಕೊಡಲಿ: ಅನಂತಕುಮಾರ್ ಹೆಗ್ಡೆ

    ಸುಮಲತಾ ಅಂಬರೀಶ್ ಅವರ ಬಗ್ಗೆ ಲೋಕೋಪಯೋಗಿ ಸಚಿವ ಎಚ್.ಡಿ.ರೇವಣ್ಣ ಹೇಳಿಕೆ ಸರಿಯಿಲ್ಲ. ಇಟ್ ಈಸ್ ನಾಟ್ ಇನ್ ಗುಡ್ ಟೇಸ್ಟ್ ಎಂದ ಅವರು, ಮಂಡ್ಯದಲ್ಲಿ ಬಹುತೇಕ ಜೆಡಿಎಸ್ ಅಭ್ಯರ್ಥಿಯೇ ಸ್ಪರ್ಧಿಸುತ್ತಾರೆ. ಕಾಂಗ್ರೆಸ್ ಅಭ್ಯರ್ಥಿ ಇರಲ್ಲ ಎಂದು ಹೇಳಿದರು.

    ಲೋಕಸಭಾ ಚುನಾವಣೆಯಲ್ಲಿ 20 ಸೀಟು ಗೆಲ್ಲುತ್ತೇವೆ. ನಾವು ಚುನಾವಣೆ ಎದುರಿಸಲು ಸಿದ್ಧರಾಗಿದ್ದೇವೆ. ಭಾರತೀಯ ಸೇನೆಯನ್ನು ಬಿಜೆಪಿ ದುರುಪಯೋಗ ಮಾಡಿಕೊಂಡಿದೆ. ಈ ಹಿಂದೆ ಯುದ್ಧಗಳು ಆಗಿದೆ. ಪಾಕಿಸ್ತಾನದ ಜೊತೆ ಸಂಘರ್ಷ ನಡೆಯುತ್ತಲೇ ಇದೆ. ಆದರೆ ಸೇನೆಯನ್ನು ಚುನಾವಣೆಗೆ ಬಳಸಿಕೊಳ್ಳಬಾರದು. ಯೋಧರು ದೇಶಕ್ಕಾಗಿ ಪ್ರಾಣ ತ್ಯಾಗ ಮಾಡಿರುತ್ತಾರೆ. ಯಾವುದೇ ಪಕ್ಷ ಇದರ ಲಾಭ ತೆಗೆದುಕೊಳ್ಳಬಾರದು ಎಂದು ಬಿಜೆಪಿಯ ವಿರುದ್ಧ ಕಿಡಿಕಾರಿದರು.

    ನಾನು ಯಾವ ಕ್ಷೇತ್ರದಿಂದಲೂ ಸ್ಪರ್ಧಿಸುವುದಿಲ್ಲ. ಕೊಪ್ಪಳದಿಂದ ಸ್ಪರ್ಧೆಸುತ್ತೇನೆ ಎನ್ನುವುದು ಸುಳ್ಳು ಎಂದ ಅವರು, ಬಿಜೆಪಿ ಮುಖಂಡ ಕೆ.ಎಸ್.ಈಶ್ವರಪ್ಪ ಅವರು ಈ ಹಿಂದೆ ಶಿವಮೊಗ್ಗ ವಿಧಾನಸಭಾ ಕ್ಷೇತ್ರದಿಂದ ಸೋತಿದ್ದರು. ಆದಲೇ ರಾಜಕೀಯ ಸನ್ಯಾಸ ತಗೆದುಕೊಳ್ಳಬೇಕಿತ್ತು. ಈಗ್ಯಾಕೆ ಸವಾಲಿನ ಮಾತು. ಜನ ಈಶ್ವರಪ್ಪನನ್ನು ಹುಚ್ಚರು ಅಂತಾರೆ ಎಂದು ವ್ಯಂಗ್ಯವಾಡಿದರು.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv ಮತ್ತು Live  ವೀಕ್ಷಿಸಲು  ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್  ಮಾಡಿ: play.google.com/publictv

  • ಸಚಿವ ಅನಂತ್ ಕುಮಾರ್ ಹೆಗ್ಡೆಗೆ ಮಾಜಿ ಸಚಿವ ಅಸ್ನೋಟಿಕರ್ ಓಪನ್ ಚಾಲೆಂಜ್

    ಸಚಿವ ಅನಂತ್ ಕುಮಾರ್ ಹೆಗ್ಡೆಗೆ ಮಾಜಿ ಸಚಿವ ಅಸ್ನೋಟಿಕರ್ ಓಪನ್ ಚಾಲೆಂಜ್

    ಕಾರವಾರ: ಅಂಕೋಲಾದಲ್ಲಿ ಪಾಸ್‍ಪೋರ್ಟ್ ಕಚೇರಿ ಆರಂಭಿಸುತ್ತೇನೆ ಎಂದು ಕೇಂದ್ರ ಸಚಿವ ಅನಂತ್ ಕುಮಾರ್ ಹೆಗ್ಡೆ ಹೇಳುತ್ತಿದ್ದಾರೆ. ಅವರಿಂದ ಈ ಕಾರ್ಯ ಸಾಧ್ಯವಿಲ್ಲ ಎಂದು ಮಾಜಿ ಸಚಿವ ಆನಂದ್ ಅಸ್ನೋಟಿಕರ್ ಸವಾಲು ಹಾಕಿದ್ದಾರೆ.

    ಉತ್ತರ ಕನ್ನಡ ಜಿಲ್ಲೆಯ ಕಾರವಾರದಲ್ಲಿ ಮಾಧ್ಯಮಗಳ ಜೊತೆಗೆ ಮಾತನಾಡಿದ ಅವರು, ಐದು ಬಾರಿ ಸಂಸದರಾಗಿ ಆಯ್ಕೆಯಾದರೂ ಒಮ್ಮೆಯೂ ಜಿಲ್ಲೆಗೆ 5 ಕೋಟಿ ರೂ. ಅನುದಾನದ ಅಭಿವೃದ್ಧಿ ಕಾರ್ಯವನ್ನು ತರಲಿಲ್ಲ. ರಾಮಾಯಣ, ಮಹಾಭಾರತ ಗೊತ್ತಿದೆ ಅಷ್ಟೇ. ಅದನ್ನು ಬಿಟ್ಟರೆ 5 ವರ್ಷ ಮಾಡಿದಂತಹ ಕರ್ಮ ಏನೂ ಇಲ್ಲ. ಆದರೆ ಈಗ ಅಂಕೋಲಾದಲ್ಲಿ ಪಾಸ್‍ಪೋರ್ಟ್ ಕಚೇರಿ ಆರಂಭಿಸುವ ಸುಳ್ಳು ಭರವಸೆಯನ್ನು ನೀಡುತ್ತಿದ್ದಾರೆ. ಕೇಂದ್ರ ಬಿಜೆಪಿ ಸರ್ಕಾರ ಅಧಿಕಾರ ಪೂರ್ಣಗೊಳ್ಳಲು ಇನ್ನು ಸಮಯವಿದೆ. ಸವಲಾಗಿ ಸ್ವೀಕರಿಸಿ, ಪ್ರಧಾನಿ ನರೇಂದ್ರ ಮೋದಿ ಅವರ ಗಮನಕ್ಕೆ ತಂದು ಪಾರ್ಸ್ ಪೋರ್ಟ್ ಕಚೇರಿ ತೆರೆಯಲಿ ಎಂದು ಹೇಳಿದರು.

    ಜನಪರ ಕಾಳಜಿ ಇಲ್ಲದ ಇಂತಹವರನ್ನು ರಾಜಕಾರಣದಿಂದಲೇ ಹೊರಗೆ ಹಾಕಬೇಕು. ಪರೇಶ್ ಮೇಸ್ತಾ ಪ್ರಕರಣವನ್ನು ಕೇವಲ ರಾಜಕೀಯ ಅಸ್ತ್ರವಾಗಿ ಬಳಸಿಕೊಳ್ಳುತ್ತಿದ್ದಾನೆ. ಜಿಲ್ಲೆಯಲ್ಲಿರುವ ಹಿಂದುಳಿದ 350 ಯುವಕರು ಪರೇಶ್ ಮೇಸ್ತಾ ಗಲಾಟೆಯಲ್ಲಿ ಸಿಕ್ಕಿಬಿದ್ದಿದ್ದು, ಅವರ ವಿರುದ್ಧ ಪ್ರಕರಣ ದಾಖಲಾಗಿದ್ದು, ಅವರು ಪರದಾಡುವಂತಾಗಿದೆ. ಮೃತ ಯುವಕನ ಕುಟುಂಬಕ್ಕೆ ನ್ಯಾಯ ಕೊಡಿಸಲಿಲ್ಲ. ಅನಂತ್ ಕುಮಾರ್ ಭಾಷಣಕ್ಕೆ ಒಳಗಾಗಬೇಡಿ ಎಂದು ಯುವಕರಿಗೆ ಕರೆ ನೀಡಿದರು.

    ಅನಂತ್ ಕುಮಾರ್ ಹೆಗ್ಡೆ ಒಟ್ಟು ಐದು ಬಾರಿ ಸಂಸದರಾಗಿ ಆಯ್ಕೆಯಾಗಿದ್ದಾರೆ. ಆದರೆ ಒಮ್ಮೆಯೂ ಜಿಲ್ಲೆಗೆ 5 ಕೋಟಿ ರೂ. ಅನುದಾನದ ಅಭಿವೃದ್ಧಿ ಕಾರ್ಯವನ್ನು ತಂದಿಲ್ಲ. ಈ ಮಧ್ಯೆ ಅಂಕೋಲಾದಲ್ಲಿ ಪಾಸ್‍ಪೋರ್ಟ್ ಕಚೇರಿ ತೆರೆಯುವುದಾಗಿ ಸುಳ್ಳು ಭರವಸೆ ನೀಡುತ್ತಿದ್ದಾರೆ. ಅವರಿಂದ ಅದು ಸಾಧ್ಯವಿಲ್ಲ ಅಂತಾ ಸ್ಪಷ್ಟಪಡಿಸುತ್ತೇನೆ ಎಂದು ನಾನು ಸವಾಲು ಹಾಕಿದ್ದಾರೆ.

    ತಾನು ರಾಜಕೀಯ ಮಾಡುವುದಕ್ಕೆ ಬಂದಿದ್ದು, ಸಮಾಜಸೇವೆಗೆ ಅಲ್ಲ ಅಂತಾ ಹೇಳುತ್ತಾನೆ. ಇಂತಹ ನಾಲಾಯಕ್ ಸಂಸದನನ್ನು ಜನರು ಮತ್ತೊಮ್ಮೆ ಆಯ್ಕೆ ಮಾಡಬಾರದು. ರಾಜಕಾರಣಿಗಳು ಇರುವುದೇ ಜನರ ಸೇವೆಗಾಗಿ. ಅದನ್ನು ನಾನು ಮಾಡಲ್ಲ ಅಂತಾ ಹೇಳಿ, ಮತ್ತೆ ತಮ್ಮ ಬುದ್ಧಿಯನ್ನು ತೋರಿಸಿದ್ದಾರೆ ಎಂದು ಆರೋಪಿಸಿದರು.

    ಏನು ಬೇಕಾದರೂ ಬರೆದುಕೊಳ್ಳಿ ಅಂತಾ ಮಾಧ್ಯಮಗಳಿಗೆ ಹೇಳುತ್ತಾರೆ. ಹೀಗೆ ಹೇಳಿ ಮಾಧ್ಯಮಗಳನ್ನು ಕೀಳಾಗಿ ಕಾಣುತ್ತಿದ್ದಾರೆ. ಇಂತಹ ಹಲ್ಕಟ್ ರಾಜಕಾರಣಿಯನ್ನು ನಾನು ನೋಡಿಲ್ಲ ಎಂದು ಏಕವಚನದಲ್ಲಿಯೇ ವಾಗ್ದಾಳಿ ನಡೆಸಿದ್ದಾರೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

    https://youtu.be/GL6-u6xfoSM

  • ಪ್ರಧಾನಿ ಆಗಬೇಕು ಅಂತ ದೇಶ ವಿಭಜನೆಗೆ ಸಹಿ ಹಾಕಿದ್ರು – ಅನಂತ್‍ಕುಮಾರ್ ಹೆಗ್ಡೆ

    ಪ್ರಧಾನಿ ಆಗಬೇಕು ಅಂತ ದೇಶ ವಿಭಜನೆಗೆ ಸಹಿ ಹಾಕಿದ್ರು – ಅನಂತ್‍ಕುಮಾರ್ ಹೆಗ್ಡೆ

    ಬೆಂಗಳೂರು: ದೇಶದ ವಿಭಜನೆಯ ವೇಳೆ ಇದ್ದ ಅಂದಿನ ನಾಯಕತ್ವದ ದೌರ್ಬಲ್ಯದಿಂದ ಹಾಗೂ ದೇಶದ ಪ್ರಧಾನಿ ಆಗಬೇಕು ಎಂಬ ಉದ್ದೇಶದಿಂದ ದೇಶ ವಿಭಜನೆಗೆ ಸಹಿ ಹಾಕಿದ್ದಾರೆ ಎಂದು ಕೇಂದ್ರ ಸಚಿವ ಅನಂತ್‍ಕುಮಾರ್ ಹೆಗ್ಡೆ ಹೇಳಿದ್ದಾರೆ.

    ನಗರದ ಡಿ.ವಿ.ಜಿ ರಸ್ತೆಯಲ್ಲಿರುವ ಅಬಲಾಶ್ರಮದಲ್ಲಿ ಜಾಗೃತ ಭಾರತಿ ಪ್ರಕಾಶನ ವತಿಯಿಂದ ಆಯೋಜಿಸಿದ್ದ ಉಪನ್ಯಾಸ ಕಾರ್ಯಕ್ರಮದಲ್ಲಿ ಅನಂತ್‍ಕುಮಾರ್ ಹೆಗ್ಡೆ ಭಾಗವಹಿಸಿ ಮಾತನಾಡಿದರು. ಸಭೆಯಲ್ಲಿ ವಿಭಜಿತ ಭಾರತ 1947 ಎಂಬ ವಿಚಾರವಾಗಿ ಉಪನ್ಯಾಸ ನೀಡಲಾಯಿತು. ಈ ವೇಳೆ ಮಾತನಾಡಿದ ಸಚಿವರು ಅಂದಿನ ರಾಜಕೀಯ ನಾಯಕತ್ವದ ಕುರಿತು ಟೀಕೆ ಮಾಡಿದರು. ಯಾರದ್ದೋ ಅವಶ್ಯಕತೆಗೆ, ಯಾರಿಗೋ ನಿದ್ದೆ ಬಂದಿಲ್ಲ ಎಂದು ಅಂದು ದೇಶ ವಿಭಜನೆ ಮಾಡಲಾಯಿತು. ಆದರೆ ದೇಶದ ಬಗ್ಗೆ ಯೋಚನೆ ಮಾಡುವ ಮನಸ್ಸುಗಳಿಗೆ ಅದನ್ನು ಒಪ್ಪಿಕೊಳ್ಳಲು ಸಾಧ್ಯವಾಗಿಲ್ಲ ಎಂದರು.

    ದೇಶ ವಿಭಜನೆ ಬಗ್ಗೆ ರಾಜಕೀಯವಾಗಿ ಒಪ್ಪಿದರು, ಯಾರು ಸಾಂಸ್ಕೃತಿಕವಾಗಿ ಒಪ್ಪಲು ಅದನ್ನು ಸಾಧ್ಯವಿಲ್ಲ. ಮುಂದೊಂದು ದಿನ ಒಡೆದು ಹೋದ ಜಾಗ ಮತ್ತೆ ನಮ್ಮ ತೆಕ್ಕೆಗೆ ಸೇರಿಲ್ಲವಾದರೆ ನಾವು ಭಾರತೀಯರೆ ಅಲ್ಲ. ಅದನ್ನು ಪ್ರೀತಿಯಿಂದ ಪಡೆಯುತ್ತಿರೋ ಅಥವಾ ರಾಜಕೀಯವಾಗಿ ಪಡೆಯುತ್ತೆವೊ ಅದು ಗೊತ್ತಿಲ್ಲ ಎಂದರು.

    ಇವತ್ತಿನ ಬಹುತೇಕ ರಾಜಕಾರಣಿಗಳು, ಬರಹಗಾರರಿಗೆ ಇತಿಹಾಸ ಗೊತ್ತಿಲ್ಲ. ಅದ್ದರಿಂದಲೇ ಅವರು ಬಾಯಿಗೆ ಬಂದಂತೆ ಮಾತನಾಡುತ್ತಾರೆ. ಕೆಲವರು ಪ್ರಜಾಪ್ರಭುತ್ವದ ಬಗ್ಗೆ ಮಾತನಾಡುತ್ತಾರೆ. ಪ್ರಜಾಪ್ರಭುತ್ವದ ಬಗ್ಗೆ ಮಾತನಾಡುವ ಯೋಗ್ಯತೆಯೇ ಇಲ್ಲದ ಜನರಿಂದ ಪ್ರಜಾಸತ್ತಾತ್ಮಕ ಹೋರಾಟಗಾರ ಒಕ್ಕೂಟ ಹುಟ್ಟಿದೆ. ಅಪ್ಪ ಅಮ್ಮನ ಪರಿಚಯ ಇಲ್ಲದವರ ಕುಲ ಒಂದು ದೇಶದಲ್ಲಿ ಬೆಳೆಯುತ್ತಿದೆ. ಅಪ್ಪ ಅಮ್ಮನ ಪರಿಚಯ ಇಲ್ಲದವರು ಜ್ಯಾತ್ಯಾತೀತರು. ಚಟಕ್ಕಾಗಿ ನನಗೆ ರಾಜಕೀಯ ಬೇಕಿಲ್ಲ. ನಾನು ಈ ಕುರಿತು ಮಾತನಾಡಿದರೆ ಮತ ಹಾಕಲ್ಲ ಎಂದು ಕೆಲವರು ಸಲಹೆ ನೀಡಿದರು. ಆದರೆ ಇಂತಹ ಮತಗಳು ನನಗೆ ಬೇಡ ಎಂದು ವಾಗ್ದಾಳಿ ನಡೆಸಿದರು.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

  • ನಾನು ಹಿಂದೂ ವಿರೋಧಿಯಲ್ಲ ಮೋದಿ ವಿರೋಧಿ, ಅಮಿತ್ ಶಾ ವಿರೋಧಿ, ಹೆಗ್ಡೆ ವಿರೋಧಿ- ಪ್ರಕಾಶ್ ರೈ

    ನಾನು ಹಿಂದೂ ವಿರೋಧಿಯಲ್ಲ ಮೋದಿ ವಿರೋಧಿ, ಅಮಿತ್ ಶಾ ವಿರೋಧಿ, ಹೆಗ್ಡೆ ವಿರೋಧಿ- ಪ್ರಕಾಶ್ ರೈ

    ಹೈದರಾಬಾದ್: ಪ್ರಧಾನಿ ಮೋದಿ, ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ಹಾಗೂ ಕೇಂದ್ರ ಕೌಶಲ್ಯಾಭಿವೃದ್ಧಿ ಸಚಿವ ಅನಂತ್ ಕುಮಾರ್ ಹೆಗ್ಡೆ ವಿರುದ್ಧ ಬಹುಭಾಷಾ ನಟ ಪ್ರಕಾಶ್ ರೈ ವಾಗ್ದಾಳಿ ನಡೆಸಿದ್ದಾರೆ. ನಾನು ಹಿಂದೂ ವಿರೋಧಿಯಲ್ಲ, ಆದರೆ ಮೋದಿ ವಿರೋಧಿ, ಅಮಿತ್ ಶಾ ವಿರೋಧಿ, ಹೆಗ್ಡೆ ವಿರೋಧಿ ಎಂದು ಹೇಳಿದ್ದಾರೆ.

    ಹೈದರಾಬಾದ್‍ನಲ್ಲಿ ನಡೆದ ಇಂಡಿಯಾ ಟುಡೆ ಸೌತ್ ಕಾನ್‍ಕ್ಲೇವ್ ನಲ್ಲಿ ಮಾತನಾಡಿದ ಅವರು, ನಾನು ಹಿಂದೂ ವಿರೋಧಿ ಎಂದು ಹೇಳ್ತಾರೆ. ಇಲ್ಲ, ನಾನು ಮೋದಿ ವಿರೋಧಿ, ನಾನು ಹೆಗ್ಡೆ ವಿರೋಧಿ, ನಾನು ಅಮಿತ್ ಶಾ ವಿರೋಧಿ. ನನ್ನ ಪ್ರಕಾರ ಅವರು ಹಿಂದೂಗಳಲ್ಲ. ಕೊಲ್ಲುವುದನ್ನು ಬೆಂಬಲಿಸುವ ವ್ಯಕ್ತಿ ಹಿಂದೂ ಅಲ್ಲ ಎಂದರು.

    ಈ ವೇಳೆ ತೆಲಂಗಾಣ ಬಿಜೆಪಿ ವಕ್ತಾರರಾದ ಕೃಷ್ಣ ಸಾಗರ್ ರಾವ್ ಎದ್ದು ನಿಂತು ಮೋದಿ ಹಾಗೂ ಶಾ ವಿರುದ್ಧ ಹೇಳಿಕೆ ನೀಡಿದ್ದನ್ನು ಖಂಡಿಸಿದ್ರು. “ನೀವು ಮಾತನಾಡಿದಾಗ ವಾಕ್ ಸ್ವಾತಂತ್ರ್ಯ, ಅವರು ಮಾತನಾಡಿದಾಗ ಮತೀಯತೆ” ಎಂದು ಕೃಷ್ಣ ಸಾಗರ್ ರಾವ್ ಪ್ರಶ್ನಿಸಿದ್ರು.

    ಕಾರ್ಯಕ್ರಮದಲ್ಲಿ ಪ್ರಕಾಶ್ ರೈ, ಪದ್ಮಾವತ್ ಸಿನಿಮಾವನ್ನ ನಿಷೇಧಿಸಿರೋ ರಾಜ್ಯ ಸರ್ಕಾರಗಳು ಹಾಗೂ ಸಂಘಟನೆಗಳ ಮೇಲೂ ವಾಗ್ದಾಳಿ ನಡೆಸಿದ್ರು. ಈ ರಾಜ್ಯ ಸರ್ಕಾರಗಳು ಕೆಳಗಿಳಿಯಬೇಕು. ಯಾಕಂದ್ರೆ ಮೊದಲು ಅವುಗಳು ಅಲ್ಲಿರಲು ಯಾವ ಅರ್ಹತೆಯೂ ಇಲ್ಲ ಅಂದ್ರು.

    ಅಲ್ಲದೆ ಕೆಲವು ದಿನಗಳ ಹಿಂದೆ ಶಿರಸಿಯ ಕಾರ್ಯಕ್ರಮವೊಂದರಲ್ಲಿ ಅನಂತ್ ಕುಮಾರ್ ಹೆಗ್ಡೆ ವಿರುದ್ಧ ಮಾತನಾಡಿದ್ದಕ್ಕೆ, ವೇದಿಕೆಯನ್ನು ಗೋಮೂತ್ರ ಹಾಕಿ ಸ್ವಚ್ಛ ಮಾಡಿದ ಬಗ್ಗೆಯೂ ಪ್ರಕಾಶ್ ರೈ ಪ್ರಸ್ತಾಪ ಮಾಡಿದ್ರು. ಮೋದಿ ಹೆಗ್ಡೆಗೆ ಮಾತನಾಡಲು ಬಿಡಬಾರದು ಎಂದು ಹೇಳಿದ್ರು.

    ಈ ಜಗತ್ತಿನಿಂದ ಒಂದು ಧರ್ಮವನ್ನು ಅಳಿಸಿಹಾಕಿಬಿಡುತ್ತೇನೆ ಅಂತ ಹೇಳಬಾರದು ಎಂದು ಪ್ರಧಾನಿ ತನ್ನ ಚುನಾಯಿತ ಸಚಿವರಿಗೆ ಹೇಳಬೇಕು. ಇದು ಹಿಂದುತ್ವವಲ್ಲ. ಪ್ರಧಾನಿ ತನ್ನ ಮಂತ್ರಿಗೆ ಬಾಯಿಮುಚ್ಚಿಕೊಂಡಿರಲು ಹೇಳದಿದ್ರೆ, ನಾನು ಪ್ರಧಾನಿಗೆ ಕೇಳ್ತಿದ್ದೀನಿ, ನೀವೂ ಹಿಂದೂ ಅಲ್ಲ ಎಂದು ರೈ ಹೇಳಿದ್ರು.