Tag: Ananthkumar hegde

  • ಸಚಿವ ಅನಂತ್‍ಕುಮಾರ್ ಹೆಗ್ಡೆಯನ್ನು ನಾಯಿಬಾಲಕ್ಕೆ ಹೋಲಿಸಿದ ಮಲ್ಲಿಕಾರ್ಜುನ ಖರ್ಗೆ!

    ಸಚಿವ ಅನಂತ್‍ಕುಮಾರ್ ಹೆಗ್ಡೆಯನ್ನು ನಾಯಿಬಾಲಕ್ಕೆ ಹೋಲಿಸಿದ ಮಲ್ಲಿಕಾರ್ಜುನ ಖರ್ಗೆ!

    ಮಂಡ್ಯ: ಬಿಜೆಪಿ ಮುಖಂಡ ಅನಂತಕುಮಾರ್ ಹೆಗ್ಡೆಯನ್ನು ನಾಯಿಬಾಲಕ್ಕೆ ಹೋಲಿಸಿ ಕಾಂಗ್ರೆಸ್ ಮುಖಂಡ ಮಲ್ಲಿಕಾರ್ಜುನ ಖರ್ಗೆ ಲೇವಡಿ ಮಾಡಿದ್ದಾರೆ.

    ಮಂಡ್ಯದ ಮಳವಳ್ಳಿಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ನರೇಂದ್ರಸ್ವಾಮಿ ಪರ ಪ್ರಚಾರ ಭಾಷಣ ಮಾಡುತ್ತಾ, ಪ್ರಧಾನಿ ನರೇಂದ್ರಮೋದಿ ಮತ್ತು ಬಿಜೆಪಿ ಮುಖಂಡರ ವಿರುದ್ಧ ಏಕವಚನದಲ್ಲಿಯೇ ತಮ್ಮ ಆಕ್ರೋಶ ಹೊರಹಾಕಿದ್ರು.

    ಮೋದಿ ಒಬ್ಬ ಸುಳ್ಳಿನ ಸರದಾರ. ಬಿಜೆಪಿ ಮುಖಂಡರು, ಮಂತ್ರಿಗಳು ನಾವು ಆರಿಸಿ ಬಂದಿದ್ದು ಸಂವಿಧಾನ ಬದಲಾಯಿಸಲು ಅಂತಾರೆ. ಅಂನಂತಕುಮಾರ್ ಹೆಗ್ಡೆ ಅವನು ಬಾಯಿ ತೆರೆದ್ರೆ ಸಂವಿಧಾನದ ವಿರುದ್ಧ ಹೋರಾಟ ಮಾಡುತ್ತಾನೆ. ಈ ಬಗ್ಗೆ ಪಾರ್ಲಿಮೆಂಟ್ ನಲ್ಲಿ ಕ್ಷಮೆ ಕೇಳಿಸಿದ್ದೆವು. ಆದ್ರೆ ನಾಯಿ ಬಾಲ ಡೊಂಕೇ. ಎಲ್ಲಿ ಹೋದ್ರು ಅದನ್ನೆ ಮಾತನಾಡ್ತಾನೆ ಈಗ ಸ್ವಲ್ಪ ಬಿಟ್ಟಿದ್ದಾನೆ ಎಂದು ಕಿಡಿಕಾರಿದ್ರು.

    ಇದೇ ವೇಳೆ ಮೋದಿ ವಿರುದ್ಧವೂ ವಾಗ್ದಾಳಿ ನಡೆಸಿ, ಮೋದಿಯವರು ಬಂದಾಗ ನನ್ನ ಮೇಲೆ ಬಹಳ ಅನುಕಂಪ ತೋರಿಸಿದ್ರು. ಆದ್ರೆ ಇದು ರಾಜಕೀಯವಾದ ಮಾತು. ಅವರಿಗೆ ನಿಜವಾಗಿ ಪ್ರೀತಿ ಇದ್ದಿದ್ರೆ, ಪ್ರೀತಿ ಬೇಡ. ಯಾಕಂದ್ರೆ ಅವರು ಪ್ರೀತಿ ಮಾಡೋದು ಬಹಳ ಡೇಂಜರ್. ಮೋದಿಗೆ ದಲಿತರ ಬಗೆಗೆ ನಿಜವಾಗಲೂ ಕಾಳಜಿ ಇದ್ದಿದ್ದರೆ ನನ್ನನ್ನು ಲೋಕಸಭೆಯಲ್ಲಿ ವಿರೋಧ ಪಕ್ಷದ ನಾಯಕನನ್ನಾಗಿ ಮಾಡುತ್ತಿದ್ದರು ಅಂದ್ರು.

    ನಮ್ಮ ಪಕ್ಷದಲ್ಲಿ 48 ಜನ ಸಂಸದರಿದ್ದೇವೆ. ನಮ್ಮ ಪಕ್ಷಕ್ಕೆ ವಿರೋಧ ಪಕ್ಷದ ಸ್ಥಾನ ಮಾನ ನೀಡಿದ್ದರೆ ನನಗೂ ಸರ್ಕಾರಿ ಸೌಲಭ್ಯ ಸಿಗುತ್ತಿತ್ತು. ಸಚಿವ ಸ್ಥಾನಮಾನದ ಗೌರವ ಸಿಗುತ್ತಿತ್ತು. ಇದಕ್ಕೇನು ಕಾನೂನು ಬೇಕಿಲ್ಲ, ಸಂವಿಧಾನ ತಿದ್ದುಪಡಿ ಬೇಡ. ಆದರೆ ಇಚ್ಛಾಶಕ್ತಿ ಬೇಕು ಎಂದು ಮೋದಿ ವಿರುದ್ಧ ಖರ್ಗೆ ಆಕ್ರೋಶ ಹೊರಹಾಕಿದ್ರು.

  • ನಾನು ಮುಸ್ಲಿಂ ದ್ವೇಷಿಯಲ್ಲ, ಕಾಂಗ್ರೆಸ್ಸನ್ನು ಅಟ್ಟಾಡಿಸಿಕೊಂಡು ಬಡಿಯುತ್ತೇವೆ: ಸಚಿವ ಅನಂತ್ ಕುಮಾರ್ ಹೆಗ್ಡೆ

    ನಾನು ಮುಸ್ಲಿಂ ದ್ವೇಷಿಯಲ್ಲ, ಕಾಂಗ್ರೆಸ್ಸನ್ನು ಅಟ್ಟಾಡಿಸಿಕೊಂಡು ಬಡಿಯುತ್ತೇವೆ: ಸಚಿವ ಅನಂತ್ ಕುಮಾರ್ ಹೆಗ್ಡೆ

    ಕಾರವಾರ: ಕಾಂಗ್ರೆಸ್ ಅನ್ನು ಅಟ್ಟಾಡಿಸಿಕೊಂಡು ಬಡಿಯುತ್ತೇವೆ. ಕಾಂಗ್ರೆಸ್ ಇದ್ದರೆ ರೋಗವಿದ್ದಂತೆ ಎಂದು ಕೇಂದ್ರ ಕೌಶಲ್ಯಾಭಿವೃದ್ಧಿ ಸಚಿವ ಅನಂತ್ ಕುಮಾರ್ ಹೆಗ್ಡೆ ಹೇಳಿದ್ದಾರೆ.

    ಇಂದು ಕಾರವಾರದ ಶೇಜಾವಾಡದ ಸದಾನಂದ ಸಭಾ ಭವನದಲ್ಲಿ ನಡೆದ ಪ್ರಚಾರ ಸಭೆಯನ್ನುದ್ದೇಶಿಸಿ ಮಾತನಾಡಿದ ಅವರು, ಹಿಂದುಳಿದ ವರ್ಗಗಳಲ್ಲಿ ನೀವು ಹಿಂದುಳಿದವರು, ದಲಿತರು ಎಂದು ಬೇರ್ಪಡಿಸಿ ಹಿಂದುಳಿದ ರೋಗವನ್ನು ಕೊಟ್ಟವರು ಕಾಂಗ್ರೆಸ್ಸಿನವರು ಎಂದು ವಾಗ್ದಾಳಿ ನಡೆಸಿದರು.

    ಕಾಂಗ್ರೆಸ್ ಅನ್ನು ಶಾಶ್ವತವಾಗಿ ಮನೆಗೆ ಕಳುಹಿಸಬೇಕು, 70 ವರ್ಷಗಳಿಂದ ಕಾಂಗ್ರೆಸ್ ನಮ್ಮ ಧರ್ಮವನ್ನು ಅವಹೇಳನ ಮಾಡಿದೆ. ನಮ್ಮ ದೇಶಕ್ಕೆ ಸ್ವಾತಂತ್ರ ಬಂದಾಗ ದೇಶದಲ್ಲಿ ನಾಲ್ಕೂ ಐದೋ ಶೇಕಡಾ ಮುಸ್ಲಿಮರಿದ್ದರು. ಆದರೆ ಅನಧಿಕೃತವಾಗಿ 30% ಮುಸ್ಲೀಮರಾಗಿದ್ದಾರೆ. ಎಲ್ಲಿ 30% ಮುಸಲ್ಮಾನರಾಗುತ್ತಾರೋ ಆ ದೇಶ ಮುಸ್ಲಿಂ ರಾಷ್ಟ್ರವಾಗುತ್ತೆ ಇದಕ್ಕೆ ಇತಿಹಾಸ ಸಾಕ್ಷಿ ಎಂದರು.

    ನಾನು ಮುಸ್ಲಿಂ ದ್ವೇಷಿಯಲ್ಲ. ಇನ್ನೂಂದು ಧರ್ಮವನ್ನು ತುಳಿದು ನಾಶಮಾಡಿ ಬದುಕುವ ಸಂಸ್ಕøತಿ ನಮ್ಮದಲ್ಲ. ಆದರೆ ಈ ಕಾಂಗ್ರೇಸ್ ಅಲ್ಪಸಂಖ್ಯಾತರ ತುಷ್ಟೀಕರಣದ ಹೆಸರಿನಲ್ಲಿ ಭಯೋತ್ಪಾದಕರ ಜೊತೆ ರಾಜಿ ಮಾಡಿಕೊಳ್ಳುತ್ತಿದೆ. ದೇಶಭಕ್ತರನ್ನು ಧಮನಿಸುತ್ತಿದೆ. ಯಾರು ಭಯೋತ್ಪಾದಕರು ಕೊಲೆಗಡುಕರು ಇದ್ದಾರೋ ಅವರು ಮುಖ್ಯಮಂತ್ರಿ ಜೊತೆ ಕುಳಿತು ಮೀಟಿಂಗ್ ಮಾಡುತಿದ್ದಾರೆ ಎಂದು ಕಿಡಿಕಾರಿದರು.

  • ಅನಂತಕುಮಾರ್ ಹೆಗ್ಡೆ ಪೊಲೀಸ್ ಬೆಂಗಾವಲು ಕಾರಿಗೆ ಡಿಕ್ಕಿ ಹೊಡೆದ ಲಾರಿಯ ಒಡೆತನದ ಬಗ್ಗೆ ಒಂದಿಷ್ಟು ಮಾಹಿತಿ

    ಅನಂತಕುಮಾರ್ ಹೆಗ್ಡೆ ಪೊಲೀಸ್ ಬೆಂಗಾವಲು ಕಾರಿಗೆ ಡಿಕ್ಕಿ ಹೊಡೆದ ಲಾರಿಯ ಒಡೆತನದ ಬಗ್ಗೆ ಒಂದಿಷ್ಟು ಮಾಹಿತಿ

    ಚಿಕ್ಕಮಗಳೂರು: ಕೇಂದ್ರ ಸಚಿವ ಅನಂತಕುಮಾರ್ ಹೆಗ್ಡೆ ಕಾರಿಗೆ ಅಪಘಾತ ಮಾಡಿದ KA 18 A 8733 ಸಂಖ್ಯೆಯ ಲಾರಿ ಚಿಕ್ಕಮಗಳೂರು ಜಿಲ್ಲೆ ಎನ್.ಆರ್ ಪುರ ತಾಲೂಕಿನ ನಾಜೀರ್ ಅಹಮದ್ ಸನ್ ಆಫ್ ನೂರಹಮದ್ ಎಂಬವರಿಗೆ ಸೇರಿದ ಲಾರಿ ಆಗಿದೆ.

    ನಾಜೀರ್ ಆಹಮದ್ ಈ ಲಾರಿಯನ್ನ ಖರೀದಿಸುವ ಮುನ್ನ ಕೊಪ್ಪ ತಾಲೂಕಿನ ಆಹಾರ ಇಲಾಖೆಯ ಅಧಿಕಾರಿ ರಮೇಶ್ ಸಹೋದರ ನಾಗೇಶ್ ಎಂಬವರ ಹೆಸರಿನಲ್ಲಿತ್ತು. ನಾಗೇಶ್ ಈ ಗಾಡಿಯನ್ನ ಫೆಬ್ರವರಿ 16, 2018 ರಂದು ಎನ್.ಆರ್.ಪುರ ತಾಲೂಕಿನ ಬೆಳಗುಳ ನಿವಾಸಿ ನಾಜೀರ್ ಎಂಬವರಿಗೆ ಮಾರಿದ್ದಾರೆ. ಲಾರಿಯ ಮೂಲ ಮಾಲೀಕ ನಾಗೇಶ್ ಕೊಪ್ಪ ಬಿಜೆಪಿ ಘಟಕದ ಅಧ್ಯಕ್ಷರಾಗಿದ್ದಾರೆ.

    ಅಂದು ಲಾರಿಗೆ ನೀಡುವಷ್ಟು ಹಣ ಇಲ್ಲದ ನಾಜೀರ್ ಎರಡು ಲಕ್ಷ ನೀಡಿ ಲಾರಿಯನ್ನ ಖರೀದಿಸಿದ್ದರು. ಲಾರಿ ಮೇಲೆ 2.91 ಲಕ್ಷ ಲೋನ್ ಇತ್ತು. ಗಾಡಿ ಖರೀದಿಸಿದ ನಾಜೀರ್ ಹಣಕ್ಕಾಗಿ ಬೇರೆ ಫೈನಾನ್ಸ್ ನಲ್ಲಿ ಸಾಲ ಕೇಳಿದ್ದ. ಅಲ್ಲಿ ಹಣ ಸಿಕ್ಕ ಮೇಲೆ ಲಾರಿ ನಾಗೇಶ್ ಹೆಸರಿನಲ್ಲಿದ್ದಾಗ ಶ್ರೀರಾಮ ಫೈನಾನ್ಸ್ ನಲ್ಲಿ ಇದ್ದ ಹಣವನ್ನ ಕಟ್ಟಿದ್ದಾರೆ.

    ಆದರೆ ಶ್ರೀರಾಮ ಫೈನಾನ್ಸ್ ಹೆಡ್ ಆಫೀಸ್ ಬಾಂಬೆಯಲ್ಲಿರೋದ್ರಿಂದ ಲೋನ್ ಕ್ಲಿಯರ್ ಆಗಿ ಬರೋದು ತಡವಾಗಿದೆ. ಲೋನ್ ಕ್ಲೀಯರ್ ಆಗಿ ಬಂದ ನಂತರ ಲಾರಿ ಮಾಲೀಕ ನಾಜೀರ್ ಏಪ್ರಿಲ್ 13, 2018 ರಂದು ಬಂದು ಲಾರಿ ಮಾಲೀಕ ನಾಗೇಶ್‍ಗೆ ಬಾಕಿ ಕೊಡಬೇಕಿದ್ದ ಹಣವನ್ನ ನೀಡಿ ಫಾರಂ 29-30 ಕ್ಕೆ ಸಹಿ ಹಾಕಿಸಿಕೊಂಡು ಎಲ್ಲಾ ಡಾಕ್ಯೂಮೆಂಟ್ ಪಡೆದುಕೊಂಡು ಬಂದಿದ್ದಾರೆ. ಆದರೆ ಡಾಕ್ಯೂಮೆಂಟ್ ತೆಗೆದುಕೊಂಡು ಬಂದ ನಾಜೀರ್ ಗಾಡಿಯನ್ನು ತನ್ನ ಹೆಸರಿಗೆ ಆರ್ ಟಿಓ ಕಚೇರಿಯಲ್ಲಿ ವರ್ಗಾವಣೆ ಮಾಡಿಸಿಕೊಂಡಿಲ್ಲ. ಲಾರಿ ಇನ್ನು ನಾಗೇಶ್ ಹೆಸರಿನಲ್ಲೇ ಇದೆ. ಆದರೆ ನಾಗೇಶ್ ಗಾಡಿ ಮಾರಾಟ ಮಾಡಿ ಮೂರು ತಿಂಗಳಾಗಿದೆ.

  • ಪ್ರಧಾನಿಯ ಪ್ರತೀ ಮಾತಿನಲ್ಲೂ ಹೊಸ ಕಲ್ಪನೆಯಿದೆ, ಜನ ಇದ್ರ ಸದುಪಯೋಗ ಪಡೆದುಕೊಳ್ಬೇಕು  – ಹೆಗ್ಡೆ

    ಪ್ರಧಾನಿಯ ಪ್ರತೀ ಮಾತಿನಲ್ಲೂ ಹೊಸ ಕಲ್ಪನೆಯಿದೆ, ಜನ ಇದ್ರ ಸದುಪಯೋಗ ಪಡೆದುಕೊಳ್ಬೇಕು – ಹೆಗ್ಡೆ

    ಧಾರವಾಡ: ಕೇವಲ ನಾಲ್ಕು ಗೊಡೆಗಳ ಮಧ್ಯೆ ಕುಳಿತು ಇದೇ ನನ್ನ ಜಗತ್ತು ಎಂದುಕೊಳ್ಳಬಾರದು, ಅದರಿಂದ ಹೊರಬಂದು ಕೌಶಲ್ಯಗಳನ್ನ ಪಡೆಯಬೇಕು ಎಂದು ಕೌಶಾಲ್ಯಾಭಿವೃದ್ಧಿ ಸಚಿವ ಅನಂತಕುಮಾರ್ ಹೆಗ್ಡೆ ನುಡಿದ್ರು.

    ಧಾರವಾಡದ ಸುವರ್ಣಾ ಕಾಲೇಜ್‍ನಲ್ಲಿ ಕೌಶಲ್ಯ ತರಬೇತಿ ಪ್ರಮಾಣ ಪತ್ರ ವಿತರಣಾ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ನಮ್ಮ ದೇಶದ ಪ್ರಧಾನ ಮಂತ್ರಿಗಳು ಪ್ರತಿನಿತ್ಯ ಮಾತನಾಡುವಾಗಲೂ ಅವರಲ್ಲೊಂದು ಹೊಸ ಕಲ್ಪನೆ ಅಥವಾ ಯೋಜನೆ ಇರುತ್ತೆ. ಆ ಕಲ್ಪನೆಯನ್ನಿಟ್ಟುಕೊಂಡು ಇವತ್ತು ಅವರು ಮಾರ್ಗದರ್ಶನ ಮಾಡುತ್ತಿದ್ದಾರೆ. ಹೀಗಾಗಿ ಎಲ್ಲರೂ ಅದರ ಲಾಭ ಪಡೆದುಕೊಳ್ಳಬೇಕು ಅಂತ ಅವರು ಈ ಸಂದರ್ಭದಲ್ಲಿ ವಿನಂತಿಸಿದ್ರು.

    ಕೇಂದ್ರ ಸರ್ಕಾರ ಕೌಶಲಾಭಿವೃದ್ಧಿ ಯೋಜನೆ ಅಡಿಯಲ್ಲಿ ಮೂರೂವರೆ ವರ್ಷದಲ್ಲಿ ಸಾಕಷ್ಟು ಅಭಿವೃದ್ಧಿ ಕೆಲಸ ಮಾಡಿದೆ. ಜನರಿಗೆ ಉದ್ಯೋಗ ಅವಕಾಶ ನೀಡಬೇಕು ಹಾಗೂ ನಾವು ಅವರಿಗೆ ತಲುಪುವ ಕೆಲಸ ಮಾಡುತ್ತಿದ್ದೆವೆ ಎಂದು ಹೇಳಿದರು.

    ಅಂತರಾಷ್ಟ್ರೀಯ ಮಟ್ಟದಲ್ಲಿ ಜ್ಞಾನ ಬೇಕಾದರೆ ಸ್ಕಿಲ್ ಡೆವೆಲಪಮೆಂಟ್ ಕೇಂದ್ರಗಳಿವೆ. ಅಲ್ಲಿ ಕೂಡ ಹೋಗಿ ತರಬೇತಿಗಳನ್ನು ಪಡೆದುಕೊಳ್ಳಬಹುದು. ಸುಮಾರು 18 ದೇಶಗಳ ಜೊತೆ ತಂತ್ರಜ್ಞಾನದ ತರಬೇತಿಗಳನ್ನು ಪಡೆದುಕೊಳ್ಳಬಹುದು. ಇತ್ತೀಚೆಗೆ ಸ್ವಿಡನ್ ಹಾಗೂ ಜಪಾನ್ ದೇಶ ಕೆಲಸಗಾರರ ಬೇಡಿಕೆ ಇಟ್ಟಿವೆ. ಸುಮಾರು 20 ಸಾವಿರ ಮಹಿಳೆಯರಿಗೆ ತರಬೇತಿ ಜೊತೆ ಕೆಲಸ ನೀಡುವುದಾಗಿ ಹೇಳಿದ್ದವು. ಹೀಗೆ ಇಂದು ಅಂತರಾಷ್ಟ್ರೀಯ ಮಟಟದಲ್ಲಿ ಬೇಡಿಕೆ ಹೆಚ್ಚಾಗುತ್ತಿದೆ. ಇದೀಗ ನಾವು ಈಗಿರುವ ತಂತ್ರಜ್ಞಾನವನ್ನ ಮಾತ್ರ ಬಳಸುತ್ತಿದ್ದೇವೆ. ಬದಲಾಗಿ ಮುಂಬರುವ ತಂತ್ರಜ್ಞಾನ ಬಳಸುವ ಬಗ್ಗೆ ತಯಾರಾಗಬೇಕು ಅಂದ್ರು.

    ಇಂಗ್ಲಿಷ್ ಕಲಿತರೆ ಮಾತ್ರ ನಮ್ಮ ಬದುಕು ಅಂತ ತುಂಬಾ ಜನರಿಗೆ ಅನಿಸಿತ್ತು. ಒಟ್ಟಿನಲ್ಲಿ ದೇಶದ ಜನತೆಗೆ ಹೊಸ ಬದುಕಿನ ವ್ಯವಸ್ಥೆಯನ್ನು ಕಲ್ಪಿಸಿಕೊಡಬೇಕಾಗಿದೆ ಅಂದ್ರು.

  • `ಕೈ’ ಸಭೆಯಲ್ಲಿ ಪ್ರತಾಪ್ ಸಿಂಹ, ಹೆಗ್ಡೆ ಭಾಷಣಕ್ಕೆ ಸಿಎಂ ಮೆಚ್ಚುಗೆ!

    `ಕೈ’ ಸಭೆಯಲ್ಲಿ ಪ್ರತಾಪ್ ಸಿಂಹ, ಹೆಗ್ಡೆ ಭಾಷಣಕ್ಕೆ ಸಿಎಂ ಮೆಚ್ಚುಗೆ!

    ಬೆಂಗಳೂರು: ಕೇಂದ್ರ ಕೌಶಲ್ಯಾಭಿವೃದ್ಧಿ ಸಚಿವ ಅನಂತ್ ಕುಮಾರ್ ಹೆಗ್ಡೆ ಮತ್ತು ಸಂಸದ ಪ್ರತಾಪ್ ಸಿಂಹರಂತೆ ನಾವು ಕೂಡ ಜನರ ಮುಂದೆ ಬಹಳ ಅಗ್ರೆಸ್ಸಿವ್ ಆಗಿ ಮಾತಾಡಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.

    ನಗರದ ಖಾಸಗಿ ಹೊಟೇಲ್ ನಲ್ಲಿ ಚುನಾವಣಾ ಪ್ರಚಾರ ಸಮಿತಿ ಸದಸ್ಯರ ಮಹತ್ವದ ಸಭೆಯಲ್ಲಿ ಮಾತನಾಡಿ, ಕಳೆದ ಒಂದು ವರ್ಷದಲ್ಲಿ ಅನಂತ್ ಕುಮಾರ್ ಹೆಗಡೆ ಹಾಗೂ ಪ್ರತಾಪ್ ಸಿಂಹ ಬಹಳ ಅಗ್ರೆಸ್ಸಿವ್ ಆಗಿ ಮಾತಾಡ್ತಾರೆ. ಆದ್ರೆ ಕಾಂಗ್ರೆಸ್ ನಲ್ಲಿ ಅಗ್ರೆಸ್ಸಿವ್ ಆಗಿ ಮಾತಾನಾಡುವವರು ಯಾರು ಇಲ್ಲ ಅಂತ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.

    ಬಹಳ ಜನ ಅಂದುಕೊಂಡಿದ್ದಾರೆ ಅನಂತ್ ಕುಮಾರ್ ಹೆಗ್ಡೆ ಮತ್ತು ಪ್ರತಾಪ್ ಸಿಂಹ ಮಾತುಗಳಿಂದ ಬಿಜೆಪಿಗೆ ನೆಗಟಿವ್ ಆಗುತ್ತೆ ಅಂತ. ಆದ್ರೆ ಅದು ಪಾಸಿಟಿವ್ ಆಗ್ತಾ ಇದೆ. ಜನ ಅವರ ಅಗ್ರೆಸ್ಸಿವ್ ಆಗಿ ಮಾತಾನಾಡುವ ಶೈಲಿಯನ್ನು ಇಷ್ಟ ಪಡುತ್ತಾರೆ. ಹಾಗಾಗಿ ನಾವು ಕೂಡ ಜನರ ಮುಂದೆ ಬಹಳ ಅಗ್ರೆಸ್ಸಿವ್ ಆಗಿ ಮಾತಾಡಬೇಕು. ಆದ್ರೆ ಮಾತಾನಾಡುವ ವೇಳೆ ಮಾತಿನ ಹಿಡಿತ ಕಳೆದುಕೊಳ್ಳಬಾರದು ಅಂತ ಸಿಎಂ ಪಕ್ಷದ ನಾಯಕರಿಗೆ ಸೂಚನೆ ನೀಡಿದ್ದಾರೆ ಎಂದು ಮೂಲಗಳಿಂದ ತಿಳಿದುಬಂದಿದೆ.


    ಸಭೆಗೆ ಎಐಸಿಸಿ ಸೋಶಿಯಲ್ ಮೀಡಿಯಾ ಮುಖ್ಯಸ್ಥೆ ರಮ್ಯ, ಸಂಸದರಾದ ಕೆಎಚ್ ಮುನಿಯಪ್ಪ, ಹರಿಪ್ರಸಾದ್, ಸಚಿವರಾದ ರಾಮಲಿಂಗಾ ರೆಡ್ಡಿ, ಕೆ.ಜೆ.ಜಾರ್ಜ್, ಎಚ್ ಸಿ ಮಹದೇವಪ್ಪ, ಕಾಗೋಡು ತಿಮ್ಮಪ್ಪ, ಟಿ ಬಿ ಜಯಚಂದ್ರ, ಎಚ್ ಆಂಜನೇಯ, ಪ್ರಿಯಾಂಕ ಖರ್ಗೆ, ಪ್ರಮೋದ್ ಮದ್ವರಾಜ್, ತನ್ವೀರ್ ಸೇಠ್, ರಮಾನಾಥ್ ರೈ, ರಮೇಶ್ ಜಾರಕಿಹೊಳಿ ವಿಧಾನ ಪರಿಷತ್ ಸದಸ್ಯೆ ಜಯಮಾಲ, ಕೆಪಿಸಿಸಿ ಮಹಿಳಾ ಘಟಕದ ಅಧ್ಯಕ್ಷೆ ಲಕ್ಷ್ಮಿ ಹೆಬ್ಬಾಳ್ಕರ್, ಸ್ಯಾಂಡಲ್‍ವುಡ್ ಕಲಾವಿದರಾದ ಸಾಧು ಕೋಕಿಲಾ, ಮಾಲಾಶ್ರೀ, ಅಭಿನಯ ಹಾಗೂ ಪ್ರಚಾರ ಸಮಿತಿ ಸದಸ್ಯರು ಕೂಡ ಪಾಲ್ಗೊಂಡಿದ್ದರು.

  • ನಾಲಾಯಕ್ ಎಂದ ಸಚಿವ ಅನಂತ್ ಕುಮಾರ್ ಹೆಗ್ಡೆಗೆ ಹೆಚ್‍ಡಿಕೆ ತಿರುಗೇಟು

    ನಾಲಾಯಕ್ ಎಂದ ಸಚಿವ ಅನಂತ್ ಕುಮಾರ್ ಹೆಗ್ಡೆಗೆ ಹೆಚ್‍ಡಿಕೆ ತಿರುಗೇಟು

    ಕಲಬುರಗಿ: ನೀವು ಐದರಿಂದ ಆರು ಬಾರಿ ಸಂಸದರಾಗಿ ಆಯ್ಕೆಯಾಗಿದ್ದೀರಿ. ನಿಮ್ಮ ಕ್ಷೇತ್ರದಲ್ಲಿ ಏನು ಅಭಿವೃದ್ಧಿ ಮಾಡಿದ್ದೀರಿ ಅಂತ ಕೌಶಲ್ಯಾಭಿವೃದ್ಧಿ ಸಚಿವ ಅನಂತ್ ಕುಮಾರ್ ಹೆಗ್ಡೆಯವರನ್ನು ಜೆಡಿಎಸ್ ರಾಜ್ಯಾಧ್ಯಕ್ಷ ಹೆಚ್‍ಡಿ ಕುಮಾರಸ್ವಾಮಿ ಪ್ರಶ್ನಿಸಿದ್ದಾರೆ.

    ನಗರದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ನಾಲಾಯಕ್ ಎಂಬ ಪದ ಬಳಸಿದ ಅನಂತ್ ಕುಮಾರ್ ಹೆಗಡೆಯವರೇ ನಿಮ್ಮ ಕ್ಷೇತ್ರದಲ್ಲಿ ಇರುವ ಕಾರ್ಖಾನೆ ಬಂದ್ ಆಗುತ್ತಿವೆ. ಹಾಗಾದ್ರೆ ನಿಮ್ಮನ್ನು ನೀವೇ ನಾಲಾಯಕ್ ಅಂತ ಹೇಳಿಕೊಂಡತ್ತಾಗುತ್ತೆ ಅಂತ ತಿರುಗೇಟು ನೀಡಿದ್ರು. ಅಲ್ಲದೇ ವಾಮಮಾರ್ಗದಿಂದ ಅನಂತಕುಮಾರ್ ಹೆಗ್ಡೆ ಪ್ರಚಾರ ಪಡೆಯುತ್ತಿದ್ದಾರೆ ಅಂದ್ರು.

    ರಾಯಚೂರಿನ ಇಬ್ಬರು ಜೆಡಿಎಸ್ ಶಾಸಕರ ರಾಜೀನಾಮೆ ವಿಚಾರ ಸಂಬಂಧ ಮಾತನಾಡಿದ ಅವರು, ಆ ಇಬ್ಬರು ಶಾಸಕರು ಎರಡು ದೋಣಿಯಲ್ಲಿ ಕಾಲಿಟ್ಟು ಎರಡು ವರ್ಷಗಳಾಗಿವೆ. ಅವರಿಬ್ಬರಿಂದಾಗಿ ಬಿಜೆಪಿಗೆ ಇದೀಗ ಆನೆ ಬಲ ಬಂದಿದೆ ಅಂತಾ ಬಿಎಸ್‍ವೈ ಹೇಳಿದ್ದಾರೆ. ಹಾಗಾದ್ರೆ ಇಷ್ಟು ದಿನ ಬಿಜೆಪಿಗೆ ಶಕ್ತಿಯಿರಲಿಲ್ಲ. ಆ ಇಬ್ಬರು ನಾಯಕರು ಶಾಸಕರಾದ ಬಳಿಕ ಪಕ್ಷದ ಜೊತೆಗಿಲ್ಲ. ಅವರು ಪಕ್ಷ ಬಿಟ್ಟರೂ ಜೆಡಿಎಸ್ ಗೆ ತೊಂದರೆಯಾಗಲ್ಲ. ಆ ಇಬ್ಬರು ನಾಯಕರಿಗಿಂತ ಸಮರ್ಥ ಅಭ್ಯರ್ಥಿಗಳು ನಮ್ಮಲ್ಲಿದ್ದಾರೆ. ಮಿಷನ್ 150 ಕನಸು ಕಾಣುವ ಬಿಜೆಪಿ ಬೇರೆ ಪಕ್ಷದ ಶಾಸಕರನ್ನು ಸೆಳೆಯುತ್ತಿದೆ ಅಂತ ಹೇಳಿದ್ರು. ಇದನ್ನೂ ಓದಿ: ಚುನಾವಣೆಗೂ ಮೊದಲೇ ಆಪರೇಷನ್ ಕಮಲ- ಜೆಡಿಎಸ್‍ಗೆ ಇಬ್ಬರು ಶಾಸಕರು ಗುಡ್ ಬೈ

    ಇದೇ ವೇಳೆ ಸಿಎಂ ಸಿದ್ದರಾಮಯ್ಯ ವಿರುದ್ಧ ಮಾತನಾಡಿದ ಹೆಚ್‍ಡಿಕೆ, ಬಿಎಸ್‍ವೈ ಚೆಕ್ ಮುಖಾಂತರ ಹಣ ಪಡೆದು ಫಜೀತಿಗೆ ಬಿದ್ದಿದ್ದಾರೆ. ಹೀಗಾಗಿ ಸಿಎಂ ಸಿದ್ದರಾಮಯ್ಯ ಚೆಕ್ ಮುಖಾಂತರ ಹಣ ಪಡೆಯಲ್ಲ. ರಾಮನ ಲೆಕ್ಕ-ಕೃಷ್ಣನ ಲೆಕ್ಕದಲ್ಲಿ ಹಣ ಪಡೆಯುತ್ತಾರೆ. ಅದಕ್ಕಾಗಿ ವಿಶೇಷ ವಿಮಾನ ಇಟ್ಟಿದ್ದಾರೆ. ಅದಕ್ಕಾಗಿ ಮೂರು ನಾಲ್ಕು ಸಚಿವರನ್ನು ಇಟ್ಟಿದ್ದಾರೆ. ಇದಕ್ಕೆ ನೀರಾವರಿ ಸಚಿವ ಎಂ.ಬಿ.ಪಾಟೀಲ್ ಅವರೇ ಉದಾಹರಣೆ. ನಾನು ಹಿಟ್ & ರನ್ ಮಾಡಲ್ಲ ಅಂತ ಹೇಳಿದ್ರು.

    ಇತ್ತೀಚೆಗೆ ಲಿಂಗಸುಗೂರು ಕ್ಷೇತ್ರದ ಮಾನಪ್ಪ ವಜ್ಜಲ್ ಹಾಗೂ ರಾಯಚೂರು ನಗರ ಕ್ಷೇತ್ರದ ಡಾ. ಶಿವರಾಜ್ ಪಾಟೀಲ್ ತಮ್ಮ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿ ಬಿಜೆಪಿ ಪಕ್ಷ ಸೇರಿದ್ದರು.

  • ಸಚಿವ ಅನಂತ್ ಕುಮಾರ್ ಹೆಗ್ಡೆಯನ್ನು ರೂಟ್ ನಂ.4ರ ಬಸ್ ಹತ್ತಿಸ್ಬೇಕು – ರೇವಣ್ಣ ಕಿಡಿ

    ಸಚಿವ ಅನಂತ್ ಕುಮಾರ್ ಹೆಗ್ಡೆಯನ್ನು ರೂಟ್ ನಂ.4ರ ಬಸ್ ಹತ್ತಿಸ್ಬೇಕು – ರೇವಣ್ಣ ಕಿಡಿ

    ಬೆಂಗಳೂರು: ಸಾಹಿತಿಗಳ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿದ ಹಿನ್ನೆಲೆಯಲ್ಲಿ ಕೇಂದ್ರ ಕೌಶಲ್ಯಾಭಿವೃದ್ಧಿ ಸಚಿವ ಅನಂತ್ ಕುಮಾರ್ ಹೆಗ್ಡೆ ವಿರುದ್ಧ ಸಾರಿಗೆ ಸಚಿವ ಎಚ್ ಎಂ ರೇವಣ್ಣ ಕಿಡಿಕಾರಿದ್ದಾರೆ.

    ವಿವಿಧ ಬೇಡಿಕೆ ಈಡೇರಿಸಿ ನಾಳೆ ರಾಜ್ಯ ರಸ್ತೆ ಸಾರಿಗೆ ನೌಕಕರರ ಸಂಘ (ಸಿಐಟಿಯು) ದಿಂದ ಪ್ರತಿಭಟನೆ ಹಿನ್ನಲೆಯಲ್ಲಿ ವಿಕಾಸಸೌಧದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಕೇಂದ್ರ ಸಚಿವ ಅನಂತ್ ಕುಮಾರ್ ಹೆಗ್ಡೆಯವರು ಇತ್ತೀಚೆಗೆ ಮಾತಾಡೊದನ್ನ ನಿಲ್ಲಿಸಿದ್ರು ಈಗ ಮತ್ತೆ ಸಾಹಿತಿಗಳ ಬಗ್ಗೆ ಮಾತಾಡಿದ್ದಾರೆ. ಹೀಗಾಗಿ ಅವರನ್ನು ರೂಟ್ ನಂಬರ್ 4ರ ಬಸ್ ಹತ್ತಿಸಬೇಕು. ರೂಟ್ ನಂಬರ್ 4 ಅಂದ್ರೆ ಹುಚ್ಚಾಸ್ಪತ್ರೆಗೆ ಕಳುಹಿಸಬೇಕು ಅಂತ ಸಿಡಿಮಿಡಿಗೊಂಡಿದ್ದಾರೆ.

    ಮಂಗಳೂರು-ಪುತ್ತೂರು ವಿಭಾಗಕ್ಕೆ ನೇಮಕಾತಿ:
    ಪುತ್ತೂರು-ಮಂಗಳೂರು ವಿಭಾಗದಲ್ಲಿ ಚಾಲಕರು, ನಿರ್ವಾಹಕರ ಕೊರತೆ ಇದೆ. ಆ ಭಾಗದಲ್ಲಿ ಕೆಲಸ ಮಾಡುತ್ತಿರುವವರು ವರ್ಗಾವಣೆ ಕೇಳಿದ್ದಾರೆ. ಆದರೆ ಅಲ್ಲಿ ಕೆಲಸ ಮಾಡಲು ಸಿಬ್ಬಂದಿ ಇಲ್ಲ. ಅಲ್ಲಿನವರು ಪ್ರಪಂಚದಾದ್ಯಂತ ಕೆಲಸ ಮಾಡ್ತಾರೆ. ಆದ್ರೆ ಚಾಲಕ, ನಿರ್ವಾಹಕ ವೃತ್ತಿಗೆ ಬರುವವರು ಕಡಿಮೆ. ಹೀಗಾಗಿ ಸಮಸ್ಯೆ ಸೃಷ್ಟಿಯಾಗಿದೆ. ಈ ಎಲ್ಲಾ ಕಾರಣದಿಂದ ಮಂಗಳೂರು-ಪುತ್ತೂರು ವಿಭಾಗಕ್ಕೆ ತಕ್ಷಣವೇ ನೇಮಕಾತಿಗೆ ಚಾಲನೆ ಕೊಟ್ಟಿದ್ದೇವೆ. ಇನ್ನು ರಾಜ್ಯ ರಸ್ತೆ ಸಾರಿಗೆ ನಿಗಮದ 4 ನಿಗಮಗಳು ಲಾಸ್ ನಲ್ಲಿ ನಡೀತಿದೆ. ಈಶಾನ್ಯ ಸಾರಿಗೆ ಹೆಚ್ಚು ಲಾಸ್ ನಲ್ಲಿ ನಡೀತಿದೆ ಅಂತ ತಿಳಿಸಿದ್ರು.

    ಪ್ರತಿಭಟನೆ ವಾಪಸ್:
    ಪ್ರತಿಭಟನೆ ಕುರಿತು ಮಾತನಾಡಿದ ಅವರು, ಈಗಾಗಲೇ ಸಂಘಟನೆಯವರ ಜೊತೆ ಮಾತುಕತೆ ನಡೆಸಲಾಗಿದೆ. 1.30 ಲಕ್ಷಕ್ಕೂ ಹೆಚ್ಚು ಕಾರ್ಮಿಕರನ್ನ ಹೊಂದಿರುವ ಇಲಾಖೆ ಇದು. ಈಗಾಗಲೇ ಸಂಘಟನೆಯ ಬಹುತೇಕ ಬೇಡಿಕೆ ಈಡೇರಿಸಲಾಗಿದೆ. 6 ಬೇಡಿಕೆಗಳ ಬಗ್ಗೆ ಸಂಘಟನೆಯವರು ಇಲಾಖೆ ಮುಂದೆ ಇಟ್ಟಿದ್ರು. ಇದ್ರಲ್ಲಿ ಬಹುತೇಕ ಬೇಡಿಕೆ ಈಡೇರಿಸಿದ್ದೇವೆ. ಕೆಲವು ಬೇಡಿಕೆ ಈಡೇರಿಕೆಗೆ ಸಮಯ ಕೇಳಿದ್ದೇವೆ. ಈಗಾಗಲೇ ಸರ್ಕಾರ 4 ರಸ್ತೆ ಸಾರಿಗೆ ನಿಗಮದ ನೌಕರರಿಗೆ 12.5% ವೇತನ ಹೆಚ್ಚಳ ಮಾಡಲಾಗಿದೆ. ನೌಕರರಿಗೆ ಅನುಕೂಲವಾಗುವ ನಿಟ್ಟಿನಲ್ಲಿ ಎಲ್ಲಾ ಕ್ರಮ ತೆಗೆದುಕೊಂಡಿದ್ದೇವೆ. ಹೀಗಾಗಿ ಸಂಘಟನೆಯವರು ಪ್ರತಿಭಟನೆ ಮಾಡೋದು ಬೇಡ ಅಂತ ಮನವಿ ಮಾಡಿದ್ದೇವೆ. ಹೀಗಾಗಿ ಪ್ರತಿಭಟನೆಯನ್ನ ಸಂಘಟನೆಯವರು ವಾಪಸ್ ಪಡೆದಿದ್ದಾರೆ ಎಂದು ಅವರು ಹೇಳಿದ್ರು.

    ಚುನಾವಣೆಯಲ್ಲಿ ಸ್ಫರ್ಧೆ:
    ಇದೇ ವೇಳೆ ಮಹಾಲಕ್ಷ್ಮಿ ಲೇಔಟ್ ನಿಂದ ಚುನಾವಣೆಗೆ ಸ್ಪರ್ಧೆ ವಿಚಾರದ ಕುರಿತು ಮಾತನಾಡಿ, ನನ್ನ ಮನೆ ಮಹಾಲಕ್ಷ್ಮಿ ಲೇಔಟ್ ನಲ್ಲಿ ಇದೆ. ದಿನ ಹೋಗಿ ಬರ್ತಿನಿ. ಹೆಬ್ಬಾಳ, ಮಾಗಡಿ ಕ್ಷೇತ್ರ ಈಗಾಗಲೇ ಬಿಟ್ಟಿದ್ದೇನೆ. ಹೈಕಮಾಂಡ್ ನಿರ್ಧಾರ ಮಾಡಿದ್ರೆ ಸ್ಪರ್ಧೆ ಮಾಡ್ತೀನಿ. ನನಗೆ ಇನ್ನು ಎರಡೂವರೆ ವರ್ಷ ಎಂಎಲ್‍ಸಿ ಅವಧಿ ಇದೆ. ನಾನೇನು ತಲೆಕೆಡಿಸಿಕೊಂಡಿಲ್ಲ. ಹೈಕಮಾಂಡ್ ಹೇಳಿದ್ರೆ ಎಲ್ಲಿಂದ ಬೇಕಾದ್ರು ಸ್ಪರ್ಧೆ ಮಾಡ್ತೀನಿ ಅಂತ ಸ್ಪಷ್ಟಪಡಿಸಿದ್ರು.

    ಅನಂತ್ ಕುಮಾರ್ ಹೆಗ್ಡೆ ಏನ್ ಹೇಳಿದ್ದರು?:
    ಸೋ ಕಾಲ್ಡ್ ಬುದ್ಧಿ ಜೀವಿಗಳು ಬರಿದಿದ್ದೆಲ್ಲಾ ಸಾಹಿತ್ಯ, ಗೀಚಿದ್ದೆಲ್ಲಾ ಕಾವ್ಯ, ಅರ್ಥವೂ ಇರೋದಿಲ್ಲಾ, ತಲೆ, ಬುಡವೂ ಇರೋದಿಲ್ಲ. ಅವರಿಗೆ ಯಾವುದು ಇಂದು ಸರ್ಕಾರಿ ಸೈಟ್ ಬೇಕಾಗಿರುತ್ತೆ, ಅದಕ್ಕೆ ವಿಚಾರವಾದಿಗಳ ಪಟ್ಟ ಕಟ್ಟಿಕೊಂಡಿರುತ್ತಾರೆ. ನಾವು ಮಾನವರಾಗಬೇಕು ಎಂದು ಸ್ಪಷ್ಟನೆ ಇಲ್ಲದವರು ಏನಾಗಬೇಕು ಎಂದು ಕೇಳಿದಾಗ ಮಾನವರಾಗಬೇಕು ಅಂತಾರೆ. ಹಾಗಾದ್ರೆ ನಾವು ದನಾನಾ ಎಂದು ಪ್ರಶ್ನಿಸಿದ ಅವರು, ನಾವು ಪ್ರಾಣಿಗಳ ತರಾ ಇದ್ದಿವಾ? ನಾವು ಹುಟ್ಟಿದ್ದೆ ಮಾನವರಾಗಿ. ಇನ್ನು ಆಗಬೇಕಾಗಿರುವುದು ದೇವರಾಗಿ. ಮನುಷ್ಯ ದೇವರಾಗಲು ಪ್ರಯತ್ನ ಮಾಡಬೇಕು. ಆದ್ರೆ ಕಲಿತಿರುವ ಸೋ ಕಾಲ್ಡ್ ಬುದ್ಧಿ ಜೀವಿಗಳು ಹೇಳ್ತಾರೆ ನಾವು ಮಾನವರಾಗಬೇಕು. ಅವರ ದೃಷ್ಟಿಯಲ್ಲಿ ನಾವು ಹೆಂಗೆ ಕಂಡಿದ್ದೇವೆ ಗೊತ್ತಿಲ್ಲ. ಅವರಿಗೆ ದೃಷ್ಟಿ ದೋಷ ಆಗಿರಬೇಕು ಅಂತ ಹೇಳಿದ್ದರು.

    https://www.youtube.com/watch?v=4JKXmwu0JR0

  • ರಾಜ್ಯ ಬಿಜೆಪಿಯಲ್ಲಿ ಮಿಂಚಿನ ಸಂಚಲನ- ನಮ್ಗೂ ಟಿಕೆಟ್ ಬೇಕು ಅಂತಿರೋ ಸಂಸದರು

    ರಾಜ್ಯ ಬಿಜೆಪಿಯಲ್ಲಿ ಮಿಂಚಿನ ಸಂಚಲನ- ನಮ್ಗೂ ಟಿಕೆಟ್ ಬೇಕು ಅಂತಿರೋ ಸಂಸದರು

    ಬೆಂಗಳೂರು: ಉತ್ತರಪ್ರದೇಶ ಚುನಾವಣೆಯಲ್ಲಿ ಬಿಜೆಪಿ ಜಯಭೇರಿ ಬಾರಿಸಿರುವ ಹಿನ್ನೆಲೆಯಲ್ಲಿ ರಾಜ್ಯ ಬಿಜೆಪಿ ಪಾಳೆಯದಲ್ಲಿ ಮಿಂಚಿನ ಸಂಚಲನ ನಡೆಯುತ್ತಿದೆ. ನಮಗೂ ಟಿಕೆಟ್ ಬೇಕು ಅಂತಾ ಕೆಲ ಸಂಸದರು ಕ್ಯೂ ನಿಲ್ತಿದ್ದಾರೆ.

    ಸಂಸತ್ತಿನಿಂದ ವಿಧಾನಸಭೆಗೆ ಬರಲು ಸಂಸದರು ಪ್ಲಾನ್ ಮಾಡಿದ್ದಾರೆ. ಕ್ಷೇತ್ರ ಹುಡುಕಿದ್ದೇವೆ, ನಮಗೂ ವಿಧಾನಸಭಾ ಕ್ಷೇತ್ರದ ಟಿಕೆಟ್ ಕೊಡಿ ಅಂತ ಕೆಲ ಸಂಸದರು ಬಿಜೆಪಿ ವರಿಷ್ಠರಿಗೆ ಬೇಡಿಕೆ ಇಟ್ಟಿದ್ದಾರೆ ಎಂದು ಹೇಳಲಾಗಿದೆ. ಆದ್ರೆ ಸಂಸದರ ಬೇಡಿಕೆಗೆ ಸೊಪ್ಪು ಹಾಕದ ವರಿಷ್ಠರು, ಸದ್ಯಕ್ಕೆ ಎಂಪಿಗಳಿಗೆ ಟಿಕೆಟ್ ಇಲ್ಲ ಎಂದು ಹೇಳಿದ್ದಾರೆ ಎನ್ನಲಾಗಿದೆ.

    ಯಾರಿಗೆ ಯಾವ ಕ್ಷೇತ್ರ ಬೇಕಂತೆ?
    > ಶೋಭಾ ಕರಂದ್ಲಾಜೆ – ಪುತ್ತೂರು ಕ್ಷೇತ್ರ
    > ಅನಂತಕುಮಾರ್ ಹೆಗಡೆ- ಯಲ್ಲಾಪುರ ಕ್ಷೇತ್ರ
    > ಕರಡಿಸಂಗಣ್ಣ – ಕೊಪ್ಪಳ ಕ್ಷೇತ್ರ
    > ಶ್ರೀರಾಮುಲು- ಬಳ್ಳಾರಿ ಗ್ರಾಮಾಂತರ ಕ್ಷೇತ್ರ, ಸಂಡೂರು ಕ್ಷೇತ್ರ
    > ಪಿ.ಸಿ.ಮೋಹನ್- ಗಾಂಧಿನಗರ ಕ್ಷೇತ್ರ