Tag: AnanthRaju

  • ಪತ್ನಿ ಕ್ಷಮಿಸಿ ಬಿಡು, ನಿನಗೆ ಮೋಸ ಮಾಡಿದ್ದೇನೆ – ಬಿಜೆಪಿ ಮುಖಂಡನ ಆತ್ಮಹತ್ಯೆ ಸೀಕ್ರೆಟ್ ರಿವೀಲ್

    ಪತ್ನಿ ಕ್ಷಮಿಸಿ ಬಿಡು, ನಿನಗೆ ಮೋಸ ಮಾಡಿದ್ದೇನೆ – ಬಿಜೆಪಿ ಮುಖಂಡನ ಆತ್ಮಹತ್ಯೆ ಸೀಕ್ರೆಟ್ ರಿವೀಲ್

    ಬೆಂಗಳೂರು: ಪ್ರಿಯ ಪತ್ನಿ ಸುಮ ಕ್ಷಮಿಸಿ ಬಿಡು, ನಿನಗೆ ಮೋಸ ಮಾಡಿದ್ದೇನೆ ಎಂದು ನಗರದ ಹೇರೋಹಳ್ಳಿ ವಾರ್ಡ್‍ನ ಬಿಜೆಪಿ ಮುಖಂಡ ಅನಂತರಾಜು ಆತ್ಮಹತ್ಯೆಗೂ ಮುನ್ನ ಬರೆದಿರುವ ಡೇತ್ ನೋಟ್‍ನಲ್ಲಿ ಆತ್ಮಹತ್ಯೆಗೆ ಕಾರಣವನ್ನು ಬಹಿರಂಗಪಡಿಸಿದ್ದಾರೆ.

    ಡೇತ್ ನೋಟ್‍ನಲ್ಲಿ ಏನಿದೆ?
    ಪ್ರಿಯ ಪತ್ನಿ ಸುಮ ಕ್ಷಮಿಸಿ ಬಿಡು, ನಿನಗೆ ಮೋಸ ಮಾಡಿದ್ದೇನೆ. ನಿನ್ನಲ್ಲಿ ಕ್ಷಮೆ ಕೇಳಲು ನಾನು ಅರ್ಹನಲ್ಲ. ಹೆಣ್ಣಿನ ಸಹವಾಸ ಮಾಡಿ ಅವಳಿಂದ ಪೋಟೋ ವೀಡಿಯೋಗಳ ಟ್ರ್ಯಾಪ್‍ಗೆ ಸಿಲುಕಿ, ಬ್ಲ್ಯಾಕ್‍ಮೇಲ್ ಮಾಡಿಸಿಕೊಂಡು ನಿನಗೆ ಮುಖ ತೋರಿಸಲು ಸಾಧ್ಯವಾಗ್ತಿಲ್ಲ. ತೃಪ್ತಿ, ತನ್ಮಯ ಮತ್ತು ಅಭಯ್‍ನನ್ನು ಚೆನ್ನಾಗಿ ನೋಡಿಕೊ. ಇಂತಿ ನಿನ್ನ ಮೋಸಗಾರ. ಇದನ್ನೂ ಓದಿ: ಬೆಂಗಳೂರಿನ ಬಿಜೆಪಿ ಮುಖಂಡ ನೇಣಿಗೆ ಶರಣು

    ಅನಂತರಾಜು ಹನಿಟ್ರ್ಯಾಪ್‍ಗೆ ಸಿಲುಕಿ ಮೇ 12ರಂದು ಬ್ಯಾಡರಹಳ್ಳಿಯ ಮನೆಯಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದರು. ಆತ್ಮಹತ್ಯೆಗೂ ಮುನ್ನ ಡೇತ್ ನೋಟ್‍ನಲ್ಲಿ ರೇಖಾ, ವಿನೋದ್, ಸ್ಪಂದನ ಎಂಬುವರಿಂದ ಹನಿಟ್ರ್ಯಾಪ್‍ಗೆ ಒಳಗಾಗಿದ್ದೇನೆ. ಕೆಅರ್‌ಪುರದ ರೇಖಾ ಎಂಬಾಕೆ ಫೇಸ್‍ಬುಕ್ ಮುಖಾಂತರ ಪರಿಚಯವಾಗಿದ್ಲು. ಆ ಬಳಿಕ ಖಾಸಗಿ ವೀಡಿಯೋಗಳನ್ನು ಮಾಡಿಟ್ಟುಕೊಂಡು ಬೆದರಿಕೆ ಹಾಕ್ತಿದ್ಲು. ಹಣ ಕೊಡದಿದ್ರೆ ಮಾಧ್ಯಮಗಳಿಗೆ, ರಾಜಕೀಯ ನಾಯಕರಿಗೆ ಫೋಟೋ ವೀಡಿಯೋ ಕಳುಹಿಸಿಕೊಡುವುದಾಗಿ ಬ್ಲ್ಯಾಕ್‍ಮೇಲ್ ಮಾಡುತ್ತಾ ಈ ಮೂಲಕ ಮಾನ ಮರ್ಯಾದೆ ಕಳೆಯೋದಾಗಿ ಬೆದರಿಕೆ ಹಾಕಿದ್ದರು. ಸಾಕಷ್ಟು ಹಣ ಕೊಟ್ಟು ಸಾಕಾಗಿದೆ ಎಂದು ಅನಂತರಾಜು ಡೇತ್ ನೋಟ್‍ನಲ್ಲಿ ಉಲ್ಲೇಖಿಸಿದ್ದಾರೆ. ಇದನ್ನೂ ಓದಿ: ಮಗಳಿಗಾಗಿ 36 ವರ್ಷ ಪುರುಷನ ವೇಷದಲ್ಲಿದ್ದ ತಾಯಿ

    ಎರಡು ಬಾರಿ ಬಿಬಿಎಂಪಿ ಚುನಾವಣೆಯಲ್ಲಿ ಸ್ಪರ್ಧಿಸಿ ಸೋತಿದ್ದ ಅನಂತರಾಜು ಈ ಬಾರಿ ಬಿಬಿಎಂಪಿ ಚುನಾವಣೆಗೆ ಸ್ಪರ್ಧಿಸಲು ತಯಾರಿ ಮಾಡಿಕೊಳ್ಳುತ್ತಿದ್ದರು. ಈ ನಡುವೆ ಹನಿಟ್ರ್ಯಾಪ್‍ಗೆ ಸಿಲುಕಿ ಆತ್ಮಹತ್ಯೆ ಶರಣಾಗಿದ್ದರು. ಇದೀಗ ಈ ಬಗ್ಗೆ ಬ್ಯಾಡರಹಳ್ಳಿ ಪೊಲೀಸ್ ಠಾಣೆಯಲ್ಲಿ ಅನಂತರಾಜು ಪತ್ನಿ ಸುಮ ದೂರು ದಾಖಲಿಸಿದ್ದಾರೆ.

  • ಬೆಂಗಳೂರಿನ ಬಿಜೆಪಿ ಮುಖಂಡ ನೇಣಿಗೆ ಶರಣು

    ಬೆಂಗಳೂರಿನ ಬಿಜೆಪಿ ಮುಖಂಡ ನೇಣಿಗೆ ಶರಣು

    ಬೆಂಗಳೂರು: ಸಿಲಿಕಾನ್ ಸಿಟಿಯ ಬಿಜೆಪಿ ಮುಖಂಡ ಆತ್ಮಹತ್ಯೆಗೆ ಶರಣಾಗಿದ್ದಾರೆ.

    ಅನಂತರಾಜು(46) ಆತ್ಮಹತ್ಯೆ ಮಾಡಿಕೊಂಡ ಬಿಜೆಪಿ ನಾಯಕ. ಹೇರೋಹಳ್ಳಿ ವಾರ್ಡ್‌ನ ಬಿಜೆಪಿ ಮುಖಂಡರಾಗಿದ್ದ ಅನಂತರಾಜು ಬ್ಯಾಡರಹಳ್ಳಿಯ ನಿವಾಸದಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.  ಇದನ್ನೂ ಓದಿ: ಬಾಬರಿ ಮಸೀದಿಯಂತೆ ಇನ್ನೊಂದು ಮಸೀದಿ ಕಳೆದುಕೊಳ್ಳಲು ನಾನು ಬಯಸುವುದಿಲ್ಲ: ಓವೈಸಿ

    BBMP

    ಎರಡು ಬಾರಿ ಬಿಬಿಎಂಪಿ ಚುನಾವಣೆಯಲ್ಲಿ ಸ್ಪರ್ಧಿಸಿ ಸೋತಿದ್ದ ಅನಂತರಾಜು ಈ ಬಾರಿ ಬಿಬಿಎಂಪಿ ಚುನಾವಣೆಗೆ ಸ್ಪರ್ಧಿಸಲು ತಯಾರಿ ಮಾಡಿಕೊಳ್ಳುತ್ತಿದ್ದರು.

    ಸ್ಥಳಕ್ಕೆ ಬ್ಯಾಡರಹಳ್ಳಿ ಪೊಲೀಸರು ಭೇಟಿ ನೀಡಿದ್ದು ಪರಿಶೀಲನೆ ನಡೆಯುತ್ತಿದೆ.