Tag: AnathKumar

  • ಕಾವೇರಿ ನದಿಯಲ್ಲಿ ಅನಂತಕುಮಾರ್ ಅಸ್ಥಿ ವಿಸರ್ಜನೆ

    ಕಾವೇರಿ ನದಿಯಲ್ಲಿ ಅನಂತಕುಮಾರ್ ಅಸ್ಥಿ ವಿಸರ್ಜನೆ

    ಮಂಡ್ಯ: ಸೋಮವಾರ ನಿಧನರಾಗಿದ್ದ ಕೇಂದ್ರ ಸಚಿವ ಅನಂತಕುಮಾರ್ ಅವರ ಅಸ್ಥಿಯನ್ನು ಜಿಲ್ಲೆಯ ಶ್ರೀರಂಗಪಟ್ಟಣದಲ್ಲಿ ಹರಿಯುವ ಕಾವೇರಿ ನದಿಯಲ್ಲಿ ವಿಸರ್ಜಿಸಲಾಯಿತು.

    ದಿವಂಗತ ಅನಂತಕುಮಾರ್ ಅವರ ಸಹೋದರ ನಂದ ಕುಮಾರ್ ಅವರು ಇಂದು ಅಸ್ಥಿ ವಿಸರ್ಜನೆಯನ್ನು, ವೇದಬ್ರಹ್ಮ ಡಾಕ್ಟರ್ ಭಾನುಪ್ರಕಾಶ್ ಶರ್ಮಾ ಅವರ ನೇತೃತ್ವದಲ್ಲಿ ಹಮ್ಮಿಕೊಳ್ಳಲಾಗಿತ್ತು. ಬ್ರಾಹ್ಮಣ ಸಂಪ್ರದಾಯದಂತೆ ಅಸ್ಥಿಗೆ ಪಂಚಾಮೃತ, ಪಂಚಗವ್ಯ ಅಭಿಷೇಕವನ್ನು ಮಾಡಿ, ನಂತರ ದೂಪ ದೀಪ ನೈವೇದ್ಯದಿಂದ ಕಾವೇರಿ ಮಾತೆಗೆ ಫಲಗಳ ಅರ್ಪಣೆ ಮಾಡಿ ಪಶ್ಚಿಮ ವಾಹಿನಿಯಲ್ಲಿ ಅವರ ಅಸ್ಥಿಯನ್ನು ವಿಸರ್ಜನೆ ಮಾಡಲಾಯಿತು.

    ತುಲಾಮಾಸದಲ್ಲಿ ಗಂಗೆಯೇ ಕಾವೇರಿಯಲ್ಲಿ ವಾಸ ಮಾಡುತ್ತಾಳೆ ಎಂಬ ನಂಬಿಕೆ ಇದೆ. ಈ ಸಮಯದಲ್ಲಿ ಕಾವೇರಿ ನದಿಯಲ್ಲಿ ಅಸ್ಥಿ ವಿಸರ್ಜನೆ ಮಾಡಿದ್ದು, ಧಾರ್ಮಿಕವಾಗಿಯೂ ಮಹತ್ವ ಪಡೆದುಕೊಂಡಿತ್ತು. ಅಸ್ಥಿ ವಿಸರ್ಜನೆ ವೇಳೆ ಅನಂತಕುಮಾರ್ ಕುಟುಂಬಸ್ಥರು, ಬಿಜೆಪಿ ಮುಖಂಡರಾದ ಪ್ರಹ್ಲಾದ್ ಜೋಷಿ, ರಾಮದಾಸ್, ಪ್ರತಾಪ್ ಸಿಂಹ, ಶ್ರೀರಂಗಪಟ್ಟಣದ ತಾಲೂಕು ಬಿಜೆಪಿ ಅಧ್ಯಕ್ಷ ಶ್ರೀಧರ್ ಸೇರಿದಂತೆ ಹಲವರು ಪಾಲ್ಗೊಂಡಿದ್ದರು.

    ಕ್ಯಾನ್ಸರ್ ನಿಂದ ಬಳಲುತ್ತಿದ್ದ ಕೇಂದ್ರ ಸಚಿವ ಅನಂತ ಕುಮಾರ್ ಅವರು ಸೋಮವಾರ ನಸುಕಿನ ಜಾವ ಶಂಕರ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದರು. ನಂತರ ಅವರ ಮೃತದೇಹವನ್ನು ಬೆಂಗಳೂರಿನ ಬಸವನಗುಡಿಯಲ್ಲಿರೋ ನಿವಾಸದಲ್ಲಿ ಅಂತಿಮ ದರ್ಶನಕ್ಕೆ ಇಡಲಾಗಿತ್ತು. ರಾಜಕೀಯ ಮುಖಂಡರು ಹಾಗೂ ಗಣ್ಯರು ಸೇರಿದಂತೆ ಪ್ರಧಾನಿ ನರೇಂದ್ರ ಮೋದಿಯವರು ಕೂಡ ಸೋಮವಾರ ಅಂತಿಮ ದರ್ಶನ ಪಡೆದಿದ್ದರು.

    ಅದಮ್ಯ ಚೇತನ, ದೆಹಲಿಯ ಕನ್ನಡದ ಧ್ವನಿ, ಬಡವರ ಬಂಧು, ಧೀಮಂತ ನಾಯಕ, ಸ್ನೇಹ ಜೀವಿ, ಕರ್ನಾಟಕ ಬಿಜೆಪಿಯ ಆಧಾರಸ್ತಂಭ ಅನಂತಕುಮಾರ್‍ರ ಪಾರ್ಥಿವ ಶರೀರವನ್ನು ಮಂಗಳವಾರ ಸ್ಮಾರ್ತ ಬ್ರಾಹ್ಮಣ ಸಂಪ್ರದಾಯದಂತೆ ಅಂತ್ಯಸಂಸ್ಕಾರವನ್ನು ಚಾಮರಾಜಪೇಟೆ ಹಿಂದೂ ರುದ್ರಭೂಮಿಯಲ್ಲಿ ನೆರವೇರಿಸಲಾಗಿತ್ತು. ಪುರೋಹಿತ ಶ್ರೀನಾಥ್ ಅವರ ನೇತೃತ್ವದಲ್ಲಿ ಸಹೋದರ ನಂದಕುಮಾರ್ ಅವರು ಅಂತಿಮ ವಿಧಿ ವಿಧಾನ ನೆರವೇರಿಸಿ, ಅಗ್ನಿ ಸ್ಪರ್ಶ ಮಾಡಿದ್ದರು. ಈ ವೇಳೆ ಅನಂತ ಕುಮಾರ್ ಅವರ ಕುಟುಂಬಸ್ಥರು, ಸಂಬಂಧಿಕರು, ಆಪ್ತರು, ಬಿಜೆಪಿ, ಕಾಂಗ್ರೆಸ್ ಹಾಗೂ ಜೆಡಿಎಸ್ ನಾಯಕರು ಭಾಗವಹಿಸಿದ್ದರು.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv
    ಪಬ್ಲಿಕ್ ಟಿವಿ ಆಪ್ ಡೌನ್ ಲೋಡ್ ಮಾಡಿ: play.google.com/publictv
    ಯೂ ಟ್ಯೂಬ್‍ನಲ್ಲಿ ಪಬ್ಲಿಕ್ ಟಿವಿಯನ್ನು ಸಬ್ ಸ್ಕ್ರೈಬ್ ಮಾಡಿ: youtube.com/publictvnewskannada
    ಫೇಸ್‍ಬುಕ್‍ನಲ್ಲಿ ಪಬ್ಲಿಕ್ ಟಿವಿಯನ್ನು ಲೈಕ್ ಮಾಡಿ: facebook.com/publictv
    ಟ್ವಿಟ್ಟರ್‌ನಲ್ಲಿ ಪಬ್ಲಿಕ್ ಟಿವಿಯನ್ನು ಫಾಲೋ ಮಾಡಿ: twitter.com/publictvnews

  • ಆತ್ಮೀಯ ಸ್ನೇಹಿತ, ಅಜಾತಶತ್ರುವನ್ನು ಕಳೆದುಕೊಂಡಿದ್ದೇನೆ: ಸಿಎಂ ಕುಮಾರಸ್ವಾಮಿ

    ಆತ್ಮೀಯ ಸ್ನೇಹಿತ, ಅಜಾತಶತ್ರುವನ್ನು ಕಳೆದುಕೊಂಡಿದ್ದೇನೆ: ಸಿಎಂ ಕುಮಾರಸ್ವಾಮಿ

    ಬೆಂಗಳೂರು: ಆತ್ಮೀಯ ಸ್ನೇಹಿತ ಹಾಗೂ ಅಜಾತಶತ್ರುವಾಗಿದ್ದ ಕೇಂದ್ರ ಸಚಿವ ಹಾಗೂ ರಾಜ್ಯ ಬಿಜೆಪಿ ಮುಖಂಡ ಅನಂತಕುಮಾರ್ ಸಾವಿನ ಸುದ್ದಿ ಸಿಡಿಲುಬಡಿದಂತಾಗಿದೆ ಎಂದು ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಕಂಬನಿ ಮಿಡಿದಿದ್ದಾರೆ.

    ವಿಶ್ರಾಂತಿ ನಿಮಿತ್ತ ಮೈಸೂರಿಗೆ ತೆರಳಿದ್ದ ಸಿಎಂ ಕುಮಾರಸ್ವಾಮಿಯವರು ಅನಂತಕುಮಾರ್ ಅವರ ಸಾವಿನ ಸುದ್ದಿ ಕೇಳುತ್ತಲೇ ಬೆಂಗಳೂರಿಗೆ ವಾಪಾಸ್ಸಾಗಿದ್ದರು. ನಂತರ ಬಸವನಗುಡಿಯಲ್ಲಿರುವ ಸುಮೇರು ನಿವಾಸಕ್ಕೆ ಭೇಟಿ ನೀಡಿ, ಅನಂತಕುಮಾರ್ ಅವರ ಅಂತಿಮ ದರ್ಶನ ಪಡೆದುಕೊಂಡರು.

    ದರ್ಶನ ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಕೇಂದ್ರ ಸಚಿವರು ಹಾಗೂ ನನ್ನ ಆತ್ಮೀಯ ಸ್ನೇಹಿತರಾಗಿದ್ದ ಅನಂತಕುಮಾರ್ ಅವರ ನಿಧನ ಸುದ್ದಿ ನನಗೂ ಸೇರಿದಂತೆ ಲಕ್ಷಾಂತರ ಅಭಿಮಾನಿಗಳಿಗೆ ಆಘಾತ ತಂದಿದೆ. ಈ ದುಃಖವನ್ನು ಭರಿಸುವ ಶಕ್ತಿ, ದೇವರು ಅವರ ಕುಟುಂಬಕ್ಕೆ ನೀಡಲಿ. ಈ ರೀತಿ ಅವರು ನಮ್ಮನ್ನೆಲ್ಲಾ ಅಗಲಿ ಹೋಗುತ್ತಾರೆಂದು ನಿರೀಕ್ಷಿಸಿರಲಿಲ್ಲ. ನಾಡಿನ ಲಕ್ಷಾಂತರ ಅಭಿಮಾನಿಗಳನ್ನು ಅನಾಥರನ್ನಾಗಿ ಬಿಟ್ಟು ಹೋಗಿದ್ದಾರೆ. ಅವರ ಆತ್ಮಕ್ಕೆ ಶಾಂತಿ ಸಿಗಲೆಂದು ಪ್ರಾರ್ಥಿಸುತ್ತೇನೆಂದು ಹೇಳಿದರು.

    ಸಾಮಾನ್ಯ ಕುಟುಂಬದಲ್ಲಿ ಜನಿಸಿ, ರಾಷ್ಟ್ರಮಟ್ಟದಲ್ಲಿ ಹಲವಾರು ಹುದ್ದೆಗಳನ್ನು ನಿರ್ವಹಣೆ ಮಾಡಿದ್ದರು. ಕೇಂದ್ರದ ಸಚಿವರಾಗಿ ನಾಡಿಗೆ ಸಲ್ಲಿಸಿರುವ ಸೇವೆ ಅಪಾರ. ಒಂದು ಪಕ್ಷದ ನಾಯಕರಾಗಿ, ಯಾವೊಂದು ಪಕ್ಷದ ಮುಖಂಡರ ಜೊತೆ ಸಂಘರ್ಷಕ್ಕೆ ಅವಕಾಶ ಮಾಡಿಕೊಡದೇ, ಎಲ್ಲರೊಂದಿಗೂ ಆತ್ಮೀಯವಾಗಿ ಬೆರೆಯುವ ಮೂಲಕ ಅಜಾತಶತ್ರು ಎಂದೆನಿಸಿಕೊಂಡಿದ್ದರು. ಕಾಕತಾಳಿಯವಂತೆ ಇಬ್ಬರೂ 1996 ರಲ್ಲಿ ಲೋಕಸಭೆ ಸಂಸದರಾಗಿ ಆಯ್ಕೆಯಾಗಿದ್ದೆವು ಎಂದು ತಮ್ಮ ನೆನಪನ್ನು ಹಂಚಿಕೊಂಡರು.

    ತಮ್ಮ ಕಿರಿಯ ವಯಸ್ಸಿನಲ್ಲೇ ನಾಡಿಗೆ ಅಪಾರವಾದ ಸೇವೆ ಸಲ್ಲಿಸಿದ್ದರು. ಆದರೆ ಅವಶ್ಯಕತೆಯಿರುವಾಗ ಅವರ ಸಾವು ವೈಯಕ್ತಿಕವಾಗಿ ನನಗೆ ತುಂಬಲಾರದ ನಷ್ಟತಂದಿದೆ. ನಾನು 2ನೇ ಬಾರಿ ಮುಖ್ಯಮಂತ್ರಿಯಾಗಿ ಜೂನ್ ತಿಂಗಳಲ್ಲಿ ದೆಹಲಿಗೆ ಹೋಗಿದ್ದೆ, ಆಗ ಅವರನ್ನು ಭೇಟಿ ಮಾಡಿದ್ದೆ. ಅಂದು ಅವರು ಆರೋಗ್ಯವಾಗಿಯೇ ಇದ್ದರು. ಅಚಾನಕ್ ಆಗಿ ಅನಾರೋಗ್ಯದಿಂದ ಆಸ್ಪತ್ರೆ ಸೇರಿಕೊಂಡು, ನಾವು ಊಹೆ ಮಾಡದ ರೀತಿ ಬಾರದ ಲೋಕಕ್ಕೆ ಹೋಗಿದ್ದಾರೆಂದು ಬೇಸರ ವ್ಯಕ್ತಪಡಿಸಿದರು.

    ಜವರಾಯ ಕರೆದಾಗ ಎಲ್ಲರೂ ಹೋಗಲೇಬೇಕು. ಅವನಿಂದ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ. ಜವರಾಯನ ಕರೆಗೆ ಎಲ್ಲರೂ ತಲೆಬಾಗಲೇ ಬೇಕು. ಆದರೆ ಈ ರೀತಿ ಆಗುತ್ತದೆಂದು ನಿರೀಕ್ಷಿಸಿರಲಿಲ್ಲ. ನಾನು ಆತ್ಮೀಯ ಸ್ನೇಹಿತನನ್ನು ಕಳೆದುಕೊಂಡಿದ್ದೇನೆಂದು ಭಾವುಕರಾದರು. ಇದನ್ನೂ ಓದಿ: ರಾಜಕಾರಣಕ್ಕೂ ಮೀರಿದ ಸ್ನೇಹ ನಮ್ಮ ಕುಟುಂಬಗಳ ಮಧ್ಯೆ ಇತ್ತು- ಸಿಎಂ ಸಂತಾಪ

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv
    ಪಬ್ಲಿಕ್ ಟಿವಿ ಆಪ್ ಡೌನ್ ಲೋಡ್ ಮಾಡಿ: play.google.com/publictv
    ಯೂ ಟ್ಯೂಬ್‍ನಲ್ಲಿ ಪಬ್ಲಿಕ್ ಟಿವಿಯನ್ನು ಸಬ್ ಸ್ಕ್ರೈಬ್ ಮಾಡಿ: youtube.com/publictvnewskannada
    ಫೇಸ್‍ಬುಕ್‍ನಲ್ಲಿ ಪಬ್ಲಿಕ್ ಟಿವಿಯನ್ನು ಲೈಕ್ ಮಾಡಿ: facebook.com/publictv
    ಟ್ವಿಟ್ಟರ್‌ನಲ್ಲಿ ಪಬ್ಲಿಕ್ ಟಿವಿಯನ್ನು ಫಾಲೋ ಮಾಡಿ: twitter.com/publictvnews

  • ಶಿಷ್ಯನ ಸಾವಿಗೆ ಕಂಬನಿ ಮಿಡಿದ ಬಿಜೆಪಿಯ ಭೀಷ್ಮ

    ಶಿಷ್ಯನ ಸಾವಿಗೆ ಕಂಬನಿ ಮಿಡಿದ ಬಿಜೆಪಿಯ ಭೀಷ್ಮ

    ನವದೆಹಲಿ: ಬಿಜೆಪಿಯ ಭೀಷ್ಮನೆಂದೇ ಕರೆಯುವ ಎಲ್.ಕೆ.ಅಡ್ವಾಣಿಯವರು ತಮ್ಮ ನೆಚ್ಚಿನ ಶಿಷ್ಯ ಅನಂತಕುಮಾರ್ ರವರ ಅಕಾಲಿಕ ಸಾವಿಗೆ ಕಂಬನಿ ಮಿಡಿದಿದ್ದಾರೆ.

    ಈ ಕುರಿತು ಮಾಧ್ಯಮಗಳೊಂದಿಗೆ ಮಾತನಾಡಿ ಅವರು, ಕೇಂದ್ರ ಸಚಿವ ಅನಂತಕುಮಾರ್ ರವರ ಅಕಾಲಿಕ ಸಾವಿನ ಸುದ್ದಿ ಕೇಳಿ ನನಗೆ ತುಂಬಾ ಆಘಾತವಾಗಿದೆ. ಅವರು ಬಡವರ ಮತ್ತು ಕೆಳವರ್ಗದ ನಾಯಕರೆಂದು ಹೆಚ್ಚು ಪ್ರಸಿದ್ಧರಾಗಿದ್ದರು. ಅನಂತಕುಮಾರ್ ಸಾವು ನಮಗೆ ಹಾಗೂ ರಾಷ್ಟ್ರಕ್ಕೆ ತುಂಬಲಾರದ ನಷ್ಟವಾಗಿದೆ. ಅವರ ಆತ್ಮಕ್ಕೆ ಶಾಂತಿ ಸಿಗಲೆಂದು ಪ್ರಾರ್ಥಿಸಿಕೊಳ್ಳುತ್ತೇನೆ ಎಂದು ಹೇಳಿದ್ದಾರೆ.

    ಅನಂತಕುಮಾರ್ ಅವರು ಅಡ್ವಾಣಿ ಶಿಷ್ಯರೆಂದೇ ಹೆಸರು ಪಡೆದುಕೊಂಡಿದ್ದರು. ಅಲ್ಲದೇ ಎಲ್ಲರೂ ಅವರನ್ನು ಅಡ್ವಾಣಿಯವರ ಮನೆ ಮಗನೆಂದೂ ಕರೆಯುತ್ತಿದ್ದರು. ಆಡ್ವಾಣಿ ಅವರ ರಥಯಾತ್ರೆಯ ಸಮಯದಲ್ಲಿ ಕರ್ನಾಟಕದಲ್ಲಿ ಹೆಚ್ಚು ಅನಂತ್ ಕುಮಾರ್ ಸಂಚರಿಸಿದ್ದರು.

    ಕ್ಯಾನ್ಸರ್ ನಿಂದ ಬಳಲುತ್ತಿದ್ದ ಅನಂತ್ ಸೋಮವಾರ ನಸುಕಿನ ಜಾವ ಎರಡು ಗಂಟೆ ಸುಮಾರಿಗೆ ಖಾಸಗಿ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ.

    ಕೇಂದ್ರ ರಾಸಾಯನಿಕ ಮತ್ತು ರಸಗೊಬ್ಬರ ಖಾತೆ ಸಚಿವ, ಕರ್ನಾಟಕ ಬಿಜೆಪಿಯ ಹಿರಿಯ ಮುಖಂಡ ಎಚ್.ಎನ್. ಅನಂತಕುಮಾರ್ ಅವರಿಗೆ 59 ವರ್ಷ ವಯಸ್ಸಾಗಿತ್ತು. ಇತ್ತೀಚೆಗೆ ತೀವ್ರ ಅನಾರೋಗ್ಯ ಪೀಡಿತರಾಗಿದ್ದ ಅವರನ್ನು ಕಳೆದ ಎರಡು ದಿನಗಳಿಂದ ಬೆಂಗಳೂರಿನ ಶಂಕರ್ ಕ್ಯಾನ್ಸರ್ ಆಸ್ಪತ್ರೆಯ ವೆಂಟಿಲೇಟರ್‍ನಲ್ಲಿ ಇಡಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾರೆ. ಅನಂತ್ ಕುಮಾರ್ ಅವರು ಪತ್ನಿ ಹಾಗೂ ಇಬ್ಬರು ಮಕ್ಕಳನ್ನು ಅಗಲಿದ್ದಾರೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv
    ಪಬ್ಲಿಕ್ ಟಿವಿ ಆಪ್ ಡೌನ್ ಲೋಡ್ ಮಾಡಿ: play.google.com/publictv
    ಯೂ ಟ್ಯೂಬ್‍ನಲ್ಲಿ ಪಬ್ಲಿಕ್ ಟಿವಿಯನ್ನು ಸಬ್ ಸ್ಕ್ರೈಬ್ ಮಾಡಿ: youtube.com/publictvnewskannada
    ಫೇಸ್‍ಬುಕ್‍ನಲ್ಲಿ ಪಬ್ಲಿಕ್ ಟಿವಿಯನ್ನು ಲೈಕ್ ಮಾಡಿ: facebook.com/publictv
    ಟ್ವಿಟ್ಟರ್‌ನಲ್ಲಿ ಪಬ್ಲಿಕ್ ಟಿವಿಯನ್ನು ಫಾಲೋ ಮಾಡಿ: twitter.com/publictvnews

  • ನಿಮ್ಮನ್ನು ಯಾವ ಸಮಯದಲ್ಲಾದ್ರೂ ಕರೀಬಹುದು- ಸಂಸತ್ತಿನ ಹಾಜರಾತಿ ಬಗ್ಗೆ ಜನಪ್ರತಿನಿಧಿಗಳಿಗೆ ಮೋದಿ ವಾರ್ನಿಂಗ್

    ನಿಮ್ಮನ್ನು ಯಾವ ಸಮಯದಲ್ಲಾದ್ರೂ ಕರೀಬಹುದು- ಸಂಸತ್ತಿನ ಹಾಜರಾತಿ ಬಗ್ಗೆ ಜನಪ್ರತಿನಿಧಿಗಳಿಗೆ ಮೋದಿ ವಾರ್ನಿಂಗ್

    ನವದೆಹಲಿ: ಸಂಸತ್ತಿನಲ್ಲಿ ಸಂಸದರ ಹಾಜರಾತಿಯ ಕೊರತೆ ಬಗ್ಗೆ ಪ್ರಧಾನ ಮಂತ್ರಿ ನರೇಂದ್ರ ಮೋದಿ ಇಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

    ಈ ಬಗ್ಗೆ ಬಿಜೆಪಿಯ ಸಂಸದರಿಗೆ ಎಚ್ಚರಿಕೆ ನೀಡಿರೋ ಮೋದಿ, “ನಿಮಲ್ಲಿ ಯಾರನ್ನು ಬೇಕಾದ್ರೂ ಯಾವ ಸಮಯದಲ್ಲಾದ್ರೂ ನಾನು ಕರೆಯಬಹುದು” ಎಂದು ಮುನ್ನೆಚ್ಚರಿಕೆ ನೀಡಿದ್ದಾರೆ. ಈ ಮೂಲಕ ಸಂಸತ್ತಿನಲ್ಲಿ ಒಂದು ದಿನವೂ ಗೈರಾಗದಂತೆ ಪಕ್ಷದ ಶಾಸಕರು ಹಾಗೂ ಸಂಸದರಿಗೆ ಸಭೆಯಲ್ಲಿ ಮೋದಿ ಎಚ್ಚರಿಸಿದ್ದಾರೆ.

    ಸಂಸತ್ತಿನ ಕಲಾಪಗಳಲ್ಲಿ ಭಾಗವಹಿಸುವುದು ನಿಮ್ಮ ಆದ್ಯ ಕರ್ತವ್ಯ. ನಾನು ಸಾಕಷ್ಟು ಕೆಲಸಗಳನ್ನ ಮಾಡಬಹುದು. ಆದ್ರೆ ಉಭಯ ಸದನಗಳಲ್ಲಿ ನಿಮ್ಮ ಪರವಾಗಿ ಹಾಜರಾಗಲು ಸಾಧ್ಯವಿಲ್ಲ ಎಂದು ಮೋದಿ ಖಡಕ್ ಆಗಿ ಹೇಳಿದ್ದಾರೆ ಎನ್ನಲಾಗಿದೆ.

    ಬಜೆಟ್ ಅಧಿವೇಶನದ ವೇಳೆ ಲೋಕಸಭೆ ಮತ್ತು ರಾಜ್ಯಸಭೆಯಲ್ಲಿ ಹಾಜರತಿ ಕೊರತೆ/ಕೋರಂನ ಕೊರತೆ ಮತ್ತು ಖಾಲಿ ಬೆಂಚ್‍ಗಳ ಬಗ್ಗೆ ಸಂಸದೀಯ ವ್ಯವಹಾರಗಳ ಸಚಿವ ಅನಂತ್ ಕುಮಾರ್ ಮಾತನಾಡಿದ ಬಳಿಕ ಮೋದಿ ಈ ಎಚ್ಚರಿಕೆ ನೀಡಿದ್ದಾರೆ. ಸದನದಲ್ಲಿ ಕೋರಂಗೆ ಅವಶ್ಯವಿರುವಷ್ಟು ಜನಪ್ರತಿನಿಧಿಗಳು ಹಾಜರಿಲ್ಲವಾದ್ರೆ ಕೋರಂ ಬೆಲ್ ಅಲರ್ಟ್ ನೀಡುತ್ತದೆ ಹಾಗೂ ಹೆಚ್ಚಿನ ಸಂಖ್ಯೆಯಲ್ಲಿ ಜನಪ್ರತಿನಿಧಿಗಳು ಬರುವವರೆಗೂ ಕಲಾಪ ಸ್ಥಗಿತಗೊಳ್ಳುತ್ತದೆ.

    ಇದರಿಂದ ನಿರಾಸೆಗೊಂಡ ಮೋದಿ, ಸಂಸತ್ತಿನಲ್ಲಿ ಹಾಜರಾಗುವಂತೆ ಸಂಸದರನ್ನು ಮನವಿ ಮಾಡಬೇಕಿಲ್ಲ. ಅದು ಅವರ ಜವಾಬ್ದಾರಿಯಾಗಿದೆ. ತಮ್ಮ ಕೇತ್ರದ ಲಕ್ಷಾಂತರ ಜನರ ಪ್ರತಿನಿಧಿಯಾಗಿ ಕಲಾಪದಲ್ಲಿ ಭಾಗವಹಿಸುವುದು ಅವರ ಕರ್ತವ್ಯ ಅಂತ ಹೇಳಿದ್ದಾರೆ.

    ಪ್ರಧಾನಿಯಾಗಿ ಮೋದಿ ಅಧಿಕಾರಕ್ಕೆ ಬಂದಾಗಿನಿಂದಲೂ ಸಂಸತ್ತಿನಲ್ಲಿ ಹಾಜರಿರುವಂತೆ ಹೇಳುತ್ತಲೇ ಇದ್ದರು. ಆದ್ರೆ ಇದೇ ಮೊದಲ ಬಾರಿಗೆ ಸಂಸದರಿಗೆ ಖಡಕ್ ಆಗಿ ಹೇಳುವ ಮೂಲಕ ಎಚ್ಚರಿಕೆ ನೀಡಿದ್ದಾರೆ ಎಂದು ಪಕ್ಷದ ಮುಖಂಡರು ಹೇಳಿದ್ದಾರೆ.