Tag: anchor

  • Exclusive: ಅನುಶ್ರೀ ವಿರುದ್ಧ ನಾನು ಹೇಳಿಕೆ ನೀಡಿದ್ದೇನೆ ಎಂಬುದು ಸುಳ್ಳು: ಕಿಶೋರ್ ಅಮನ್ ಶೆಟ್ಟಿ

    Exclusive: ಅನುಶ್ರೀ ವಿರುದ್ಧ ನಾನು ಹೇಳಿಕೆ ನೀಡಿದ್ದೇನೆ ಎಂಬುದು ಸುಳ್ಳು: ಕಿಶೋರ್ ಅಮನ್ ಶೆಟ್ಟಿ

    – ನಾನು ಎರಡು ಬಾರಿ ಡ್ರಗ್ಸ್ ಸೇವಿಸಿದ್ದೇನೆ
    – ಅನುಶ್ರೀ ಕಷ್ಟಪಟ್ಟು ಬಂದಿದ್ದು, ಗೌರವಿಸುತ್ತೇನೆ

    ಮಂಗಳೂರು: ನಿರೂಪಕಿ ಅನುಶ್ರೀ ವಿರುದ್ಧ ನಾನು ಹೇಳಿಕೆ ಕೊಟ್ಟಿದ್ದೇನೆ ಎಂಬುದು ಸುಳ್ಳು. ಅವರ ವಿರುದ್ಧ ನಾನು ಈ ರೀತಿಯ ಹೇಳಿಕೆ ನೀಡಿಲ್ಲ. ಇದು ಸುಳ್ಳು ಆರೋಪ ಎಂದು ಡ್ರಗ್ಸ್ ಆರೋಪ ಎದುರಿಸುತ್ತಿರುವ ಕಿಶೋರ್ ಅಮನ್ ಶೆಟ್ಟಿ ಹೇಳಿಕೆ ನೀಡಿದ್ದಾರೆ.

    ಈ ಬಗ್ಗೆ ಪಬ್ಲಿಕ್ ಟಿವಿ ಜೊತೆ ಮಾತನಾಡಿದ ಕಿಶೋರ್ ಅಮನ್ ಶೆಟ್ಟಿ, ನನಗೂ ಅನುಶ್ರೀಗೂ ಯಾವುದೇ ರೀತಿಯ ಸಂಪರ್ಕ ಇಲ್ಲ. ಕುಣಿಯೋಣ ಬಾರಾ ಡ್ಯಾನ್ಸ್ ಕಾರ್ಯಕ್ರಮದಲ್ಲಿ ಪರಿಚಯ ಆಗಿದೆ. 2009ರಲ್ಲಿ ಡ್ಯಾನ್ಸ್ ಗೆ ಕೊರಿಯೋಗ್ರಾಫ್ ಮಾಡಿದ್ದೇ ಅದೇ ಮೊದಲು ಮತ್ತು ಕೊನೆ. ಬಳಿಕ 4-5 ವರ್ಷಗಳ ಹಿಂದೆ ಮಂಗಳೂರಲ್ಲಿ ನಡೆದ ಡ್ಯಾನ್ಸ್ ಕ್ಲಾಸ್ ಕಾರ್ಯಕ್ರಮದಲ್ಲಿ ನಾವು ಭೇಟಿಯಾಗಿದ್ದೆವು. ಬಳಿಕ ನಾವಿಬ್ಬರು ಎಲ್ಲೂ ಭೇಟಿಯಾಗಿಲ್ಲ, ಫೋನ್ ಸಂಪರ್ಕವೂ ಇಲ್ಲ. ಅವರ ಫೋನ್ ನಂಬರ್ ಕೂಡ ನನ್ನ ಬಳಿ ಇಲ್ಲ. ಇದೆಲ್ಲವೂ ಸುಳ್ಳು ಆರೋಪ ಎಂದರು. ಇದನ್ನೂ ಓದಿ: ಡ್ರಗ್ಸ್ ಸೇವಿಸಿ ಡ್ಯಾನ್ಸ್ ಮಾಡಿದ್ರೆ ಖುಷಿ ಆಗುತ್ತೆ ಅಂತಿದ್ರು ಅನುಶ್ರೀ: ಕಿಶೋರ್ ಅಮನ್ ಶೆಟ್ಟಿ

    ಖಾಸಗಿ ವಾಹಿನಿಯ ಶೋ ಒಂದರ ಫೈನಲ್‍ನಲ್ಲಿ ಕೊರಿಯೋಗ್ರಾಫ್ ಮಾಡಿದ್ದೆ ನಾನು. ಆ ಬಳಿಕ ಯಾವುದೇ ಸಂಪರ್ಕವಿಲ್ಲ. ಎಲ್ಲವೂ ಸುಳ್ಳು ಸುದ್ದಿಗಳು, ಅನುಶ್ರೀ ವಿರುದ್ಧ ನಾನು ಹೇಳಿಕೆ ನೀಡಿದ್ದೇನೆ ಎಂಬುದು ಸುಳ್ಳು. ಪೆಡ್ಲಿಂಗ್ ಮಾಡಲು ಹೋಗಿಲ್ಲ. ಯಾಕಂದ್ರೆ ನಮ್ಮ ವೃತ್ತಿಯೇ ಬೇರೆ. ಜಾರ್ಜ್ ಶೀಟ್‍ನಲ್ಲಿ ಸುಳ್ಳು ಹೇಳಿಕೆ ಹಾಕಲಾಗಿದೆ. ಪಾರ್ಟಿ ಬಿಡಿ ನಾವು ರಿಹರ್ಸಲ್ ಮಾಡಿ ಬರೋದೇ ಲೇಟ್ ನೈಟ್ ಅಂತ್ರದಲ್ಲಿ ಇದೆಲ್ಲ ಮಾಡಲು ಸಾಧ್ಯವೇ ಎಂದು ಕಿಶೋರ್ ಹೇಳಿದರು. ಇದನ್ನೂ ಓದಿ: ಬರೀ ಯೂರಿನ್, ರಕ್ತ ಪರೀಕ್ಷೆ ಮಾಡಿದ್ರೆ ಸಾಲದು -ಹೇರ್ ಫೋಲಿಕಲ್ ಟೆಸ್ಟ್‌ಗೆ ಇಂದ್ರಜಿತ್ ಆಗ್ರಹ

    ಅನುಶ್ರೀ ಬಗ್ಗೆ ಇಂತಹ ಹೇಳಿಕೆಗಳನ್ನು ನಾನು ಕೊಡಲೇ ಇಲ್ಲ. ಅನುಶ್ರೀ ತುಂಬಾ ಕಷ್ಟಪಟ್ಟು ಮೇಲೆ ಬಂದಿದ್ದಾರೆ. ಅವರಿಗೆ ತುಂಬಾ ಗೌರವ ಕೊಡುತ್ತೇವೆ. ನಾನು ಅವರಿಗೆ ಬರೀ ಕೊರಿಯೋಗ್ರಾಫ್ ಮಾತ್ರ ಮಾಡಿದ್ದೇನೆ ಇದು ಕಿಶೋರ್ ಹೇಳುತ್ತಿರುವ ಪಕ್ಕಾ ಮಾಹಿತಿ ಎಂದರು. ಇದನ್ನೂ ಓದಿ: ಡ್ರಗ್ಸ್ ಲಿಂಕ್ ಪ್ರಕರಣ – ಚಾರ್ಜ್‍ಶೀಟ್‍ನಲ್ಲಿ ಆ್ಯಂಕರ್ ಅನುಶ್ರೀ ಹೆಸರು

    ನನ್ನ ಲೈಫ್ ಹಾಳು ಮಾಡುತ್ತಿದ್ದಾರೆ. ಯಾರು ಈ ರೀತಿ ಮಾಡುತ್ತಿದ್ದಾರೆ ಗೊತ್ತಿಲ್ಲ. ಒಳ್ಳೆಯ ಕೊರಿಯೋಗ್ರಾಫರ್ ಆಗಬೇಕೆಂಬ ಕನಸು ನನಗಿದೆ ಅದನ್ನು ಈಡೇರಿಸವಲ್ಲಿ ನಿರತನಾಗಿದ್ದೇನೆ. ನಾನು ಯಾರಿಗೂ ತೊಂದರೆ ಕೊಟ್ಟಿಲ್ಲ. ಹುಟ್ಟಿದಾಗಿನಿಂದ ತಪ್ಪು ಮಾಡಿಲ್ಲ. ಯಾರು ಈ ರೀತಿ ಮಾಡುತ್ತಾರೋ ಅವೆರಿಗೆ ಒಳ್ಳೆಯದಾಗಲಿ ಎಂದು ಬೆಸರ ವ್ಯಕ್ತಪಡಿಸಿದ ಅವರು, ಪಾರ್ಟಿಗೆ ಹೋಗುತ್ತಿದ್ದೇನೆ, ಆದರೆ ಡ್ರಗ್ಸ್ ಪಾರ್ಟಿಗಳಿಗೆಲ್ಲ ಹೋಗಿಲ್ಲ. ಡ್ರಗ್ಸ್ ಸೇವನೆ ಎರಡು ಬಾರಿ ಮಾಡಿದ್ದೇನೆ. ಆದರೆ ಪೆಡ್ಲಿಂಗ್- ಗಿಡ್ಲಿಂಗ್ ಎಲ್ಲ ಮಾಡಿಲ್ಲ ಎಂದರು. ಇದನ್ನೂ ಓದಿ: ಡ್ರಗ್ಸ್ ಕೇಸ್- ಅನುಶ್ರೀ ಮೊಬೈಲ್‍ನಿಂದ ಮೂವರು ಪ್ರಭಾವಿ ವ್ಯಕ್ತಿಗಳಿಗೆ ಕರೆ 

  • ಡ್ರಗ್ಸ್ ಸೇವಿಸಿ ಡ್ಯಾನ್ಸ್ ಮಾಡಿದ್ರೆ ಖುಷಿ ಆಗುತ್ತೆ ಅಂತಿದ್ರು ಅನುಶ್ರೀ: ಕಿಶೋರ್ ಅಮನ್ ಶೆಟ್ಟಿ

    ಡ್ರಗ್ಸ್ ಸೇವಿಸಿ ಡ್ಯಾನ್ಸ್ ಮಾಡಿದ್ರೆ ಖುಷಿ ಆಗುತ್ತೆ ಅಂತಿದ್ರು ಅನುಶ್ರೀ: ಕಿಶೋರ್ ಅಮನ್ ಶೆಟ್ಟಿ

    ಮಂಗಳೂರು: ಡ್ರಗ್ಸ್ ಸೇವನೆಯಿಂದ ಡ್ಯಾನ್ಸ್ ಪ್ರಾಕ್ಟೀಸ್ ಸುಲಭ. ಡ್ರಗ್ಸ್ ಸೇವಿಸಿ ಡ್ಯಾನ್ ಮಾಡಿದ್ರೆ ಖುಷಿ ಆಗುತ್ತೆ. ಡ್ರಗ್ಸ್ ಸೇವಿಸಿದ್ರೆ ಡ್ಯಾನ್ಸ್ ಗೆ ತಾಕತ್ತು ಅನುಶ್ರೀ ಹೀಗೆ ನಮಗೆ ಹೇಳುತ್ತಿದ್ದರು ಎಂದು ಸ್ಫೋಟಕ ಹೇಳಿಕೆಯನ್ನು ಕಿಶೋರ್ ಅಮನ್ ಶೆಟ್ಟಿ ಮಂಗಳೂರು ಪೊಲೀಸರ ತನಿಖೆ ವೇಳೆ ತಿಳಿಸಿದ್ದಾರೆ ಎಂದು ವರದಿಯಾಗಿದೆ.

    ಕಿಶೋರ್ ಅಮನ್ ಶೆಟ್ಟಿ ಆರೋಪ:
    ಬೆಂಗಳೂರಿನಲ್ಲಿ ಡ್ಯಾನ್ಸ್ ಪ್ರಾಕ್ಟೀಸ್ ಮಾಡುತ್ತಿದ್ದ ವೇಳೆ ನಾವು ಡ್ರಗ್ಸ್ ಸೇವನೆ ಮಾಡುತ್ತಿದ್ದೆವು. ಅನುಶ್ರೀಗೆ ದಂಧೆಕೋರರ ಪರಿಚಯವಿದೆ. ಅವರು ನಮಗೆ ಡ್ರಗ್ಸ್ ತಂದು ಕೊಡುತ್ತಿದ್ದರು ಕಿಶೋರ್ ಅಮನ್ ಶೆಟ್ಟಿ ಅನುಶ್ರೀ ವಿರುದ್ಧ ಹೇಳಿಕೆ ನೀಡಿದ್ದಾರೆ. ಇದನ್ನೂ ಓದಿ: ಡ್ರಗ್ ಲಿಂಕ್ ಪ್ರಕರಣ – ಚಾರ್ಜ್‍ಶೀಟ್‍ನಲ್ಲಿ ಆ್ಯಂಕರ್ ಅನುಶ್ರೀ ಹೆಸರು

    ಪೊಲೀಸರ ತನಿಖೆ ವೇಳೆ ತರುಣ್ ಅನುಶ್ರೀ ರಿಯಾಲಿಟಿ ಶೋ ಅಲ್ಲಿ ಗೆದ್ದಿದ್ದಕ್ಕೆ ಡ್ರಗ್ಸ್ ಪಾರ್ಟಿ ಮಾಡಿದ್ರು. ಖಾಸಗಿ ವಾಹಿನಿ ರಿಯಾಲಿಟಿ ಶೋವನ್ನು ಅನುಶ್ರೀ ಗೆದ್ದಿದ್ದರು. ಇದಕ್ಕಾಗಿ ಡ್ರಗ್ಸ್ ಪಾರ್ಟಿ ಮಾಡಿದ್ವಿ. ಡ್ರಗ್ಸ್ ಪಾರ್ಟಿ ಮಾಡೋದು ಅವರಿಗೂ ಕೂಡ ಗೊತ್ತಿತ್ತು. ಡ್ರಗ್ಸ್ ಪಾರ್ಟಿಯಲ್ಲಿ ನಾನು ನಮ್ಮ ಕೋರಿಯೋಗ್ರಾಫರ್ ಅನುಶ್ರೀ ಜೊತೆ ಸೇರಿ ಪಾರ್ಟಿಯನ್ನು ಮಾಡಿದ್ವಿ ಎಂದಿದ್ದರು.

    ಅನುಶ್ರೀ ಮಾದಕದ್ರವ್ಯ ಸೇವಿಸುತ್ತಿದ್ದರು, ಸಾಗಿಸುತ್ತಿದ್ದರು. ಸ್ನೇಹಿತರ ಜೊತೆಗೆ ಅನುಶ್ರೀ ಡ್ರಗ್ ಪಾರ್ಟಿ ಮಾಡುತ್ತಿದ್ದರು. ರೂಂನಲ್ಲಿ ನಡೆಯುತ್ತಿದ್ದ ಪಾರ್ಟಿಗೆ ಡ್ರಗ್ಸ್ ತರುತ್ತಿದ್ದರು. ಡ್ಯಾನ್ಸ್ ಪ್ರಾಕ್ಟೀಸ್‍ಗೆ ಬರುವಾಗ ಡ್ರಗ್ಸ್ ತರುತ್ತಿದ್ದರು. ಅವರೇ ಹೆಚ್ಚು ಡ್ರಗ್ಸ್ ಸೇವನೆ ಮಾಡುತ್ತಿದ್ದರು. ಅವರೇ ಡ್ರಗ್ಸ್ ತಂದು ನಮಗೂ ಕೊಡುತ್ತಿದ್ದರು ಎಂದು ಕಿಶೋರ್ ಹೇಳಿದ್ದು, ಇದರಿಂದ ಅನುಶ್ರೀಗೆ ಸಂಕಷ್ಟ ಎದುರಾಗುವ ಸಾಧ್ಯತೆಗಳಿವೆ. ಇದನ್ನೂ ಓದಿ: ಡ್ರಗ್ಸ್ ಕೇಸ್- ಅನುಶ್ರೀ ಮೊಬೈಲ್‍ನಿಂದ ಮೂವರು ಪ್ರಭಾವಿ ವ್ಯಕ್ತಿಗಳಿಗೆ ಕರೆ 

    ಡ್ರಗ್ಸ್ ಜಾಲ ಬೆಳಕಿಗೆ ಬಂದಿದ್ದು ಹೇಗೆ?
    ಬೆಂಗಳೂರು ಸಿಸಿಬಿ ಪೊಲೀಸರು ದಾಖಲಿಸಿದ್ದ ಡ್ರಗ್ಸ್ ಕೇಸ್ ನಿಂದ ಮಂಗಳೂರು ಡ್ರಗ್ಸ್ ಜಾಲ ಬೆಳಕಿಗೆ ಬಂದಿತ್ತು. ಕಾಟನ್ ಪೇಟೆ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಸ್ಯಾಂಡಲ್‍ವುಡ್ ಡ್ರಗ್ ಕೇಸ್ ಈ ಪ್ರಕರಣದಲ್ಲಿ ಸುಮಾರು 20ಕ್ಕೂ ಹೆಚ್ಚು ಜನರನ್ನು ಬೆಂಗಳೂರು ಸಿಸಿಬಿ ಪೊಲೀಸರು ಬಂಧಿಸಿ ವಿಚಾರಣೆ ನಡೆಸಿದ್ದರು. ಈ ವೇಳೆ ಓರ್ವ ಆರೋಪಿ ಕೊಟ್ಟ ಸುಳಿವಿನಿಂದ ಮಂಗಳೂರು ಡ್ರಗ್ಸ್ ಜಾಲ ಬೆಳಕಿಗೆ ಬಂದಿತ್ತು. ಎ.15 ಪ್ರತೀಕ್ ಶೆಟ್ಟಿ ವಿಚಾರಣೆ ವೇಳೆ ಸಿಕ್ಕಿದ್ದ ಮಹತ್ವದ ಸುಳಿವಿನಿಂದಾಗಿ ಮಂಗಳೂರಿನ ಡ್ಯಾನ್ಸರ್ ಕಿಶೋರ್ ಶೆಟ್ಟಿ ಹಾಗೂ ತರುಣ್ ಬಗ್ಗೆ ಮಾಹಿತಿ ಸಿಕ್ಕಿತ್ತು. ಕೂಡಲೇ ಬೆಂಗಳೂರು ಸಿಸಿಬಿ ಇನ್ಸ್‍ಪೆಕ್ಟರ್ ರಿಂದ ಮಂಗಳೂರು ಸಿಸಿಬಿಗೆ ಮಾಹಿತಿ ರವಾನೆ ಮಾಡಿತ್ತು. ಜೊತೆಗೆ ಡ್ರಗ್ಸ್ ಜಾಲದ ಬಗ್ಗೆ ಕಣ್ಣಿಡುವಂತೆ ಮಂಗಳೂರಿನ ಪೊಲೀಸರಿಗೆ ತಿಳಿಸಿದ್ದರು.

    ಬೆಂಗಳೂರು ಸಿಸಿಬಿ ಪೊಲೀಸರ ಮಾಹಿತಿ ಮೇರೆಗೆ ಅಲರ್ಟ್ ಆದ ಮಂಗಳೂರು ಸಿಸಿಬಿ ತನಿಖೆ ನಡೆಸಿ ಡ್ಯಾನ್ಸರ್ ಕಿಶೋರ್ ಶೆಟ್ಟಿ ಮತ್ತು ತರುಣ್ ಬಂಧಿಸಿದ್ದರು. ಡ್ಯಾನ್ಸರ್ ಕಿಶೋರ್ ಶೆಟ್ಟಿ ಜೊತೆಗಿನ ಸಂಪರ್ಕದಿಂದ ಆನುಶ್ರೀಗೆ ನೋಟಿಸ್ ನೀಡಿದ್ದ ಮಂಗಳೂರು ಸಿಸಿಬಿ ಪೊಲೀಸರು, ಕಿಶೋರ್ ಶೆಟ್ಟಿ ಹೇಳಿಕೆ ಮತ್ತು ಸಿಡಿಆರ್ ಆಧರಿಸಿ ಸಿಸಿಬಿ ಅನುಶ್ರೀ ವಿಚಾರಣೆ ನಡೆಸಿತ್ತು. ಅಲ್ಲದೇ ಬೆಂಗಳೂರಿನಲ್ಲಿ ಅರೆಸ್ಟ್ ಆಗಿದ್ದ ಪ್ರತೀಕ್ ಶೆಟ್ಟಿ, ಡ್ಯಾನ್ಸರ್ ಕಿಶೋರ್ ಶೆಟ್ಟಿ ಮತ್ತು ತರುಣ್ ಮೂವರು ಗೆಳೆಯರಾಗಿದ್ದರು ಎಂಬ ಅಂಶ ಆಗ ಬಯಲಾಗಿತ್ತು. ಇದನ್ನೂ ಓದಿ: ಕನ್ನಡಿಗರು ಕೊಟ್ಟ ಹೆಸರಿಗೆ ಧಕ್ಕೆ ಮಾಡಿಲ್ಲ, ಯಾವತ್ತೂ ಮಾಡಲ್ಲ: ಕಣ್ಣೀರಿಟ್ಟ ಅನುಶ್ರೀ

    ವಿಚಾರಣೆ ಬಳಿಕ ಅನುಶ್ರೀ ಹೇಳಿದ್ದೇನು..?
    ತರುಣ್ ಮತ್ತು ಕಿಶೋರ್ ಶೆಟ್ಟಿ ಪರಿಚಯ ಇದ್ದರೂ ಅದಕ್ಕಾಗಿ ಮಂಗಳೂರಿಗೆ ಬಂದಿದ್ದೇ. ಅವರಿಬ್ಬರೂ ನನಗೆ ಕೋರಿಯಾಗ್ರಾಫರ್ ಆಗಿದ್ರು. ನನಗೆ 12 ವರ್ಷಗಳ ಮುಂಚೆ ಸಂಪರ್ಕವಿತ್ತು, ಈಗ ಇಲ್ಲ. ನನ್ನ ಜೊತೆ ಡ್ಯಾನ್ಸ್ ಪಾಟ್ರ್ನರ್ ಮಾಡಿದ್ದಕ್ಕಾಗಿ ನಾನು ಬಂದಿದ್ದೇನೆ ಅಷ್ಟೇ ನಾನು ಯಾವುದೇ ಪಾರ್ಟಿಗಳನ್ನು ಕೂಡ ಮಾಡಿಲ್ಲ. ಡ್ರಗ್ಸ್ ಪ್ರಕರಣಕ್ಕೂ ನನಗೂ ಯಾವುದೇ ಸಂಬಂಧವಿಲ್ಲ ಎಂದು ಮಾಧ್ಯಮಗಳ ಮುಂದೆ ಹೇಳಿಕೆ ನೀಡಿದ್ದರು.

    ಒಟ್ಟಿನಲ್ಲಿ ಸದ್ಯ ಕಿಶೋರ್ ಅಮನ್ ಶೆಟ್ಟಿ ಹೇಳಿಕೆಯಿಂದ ಇದೀಗ ಅನುಶ್ರೀಗೆ ಕಂಟಕ ಶುರುವಾಗಿದ್ದು, ಸಾಕ್ಷ್ಯಧಾರ ಕೊರತೆ ಇದ್ದರೆ ಚಾರ್ಜ್ ಶೀಟ್ ಅಲ್ಲಿ ಅನುಶ್ರೀ ಹೆಸರು ಉಲ್ಲೇಖ ಆಗುತ್ತಿರಲಿಲ್ಲ. ಇದೀಗ ಪೊಲೀಸರ ತನಿಖೆ ದಾಖಲೆಗಳು ಮತ್ತು ಕಿಶೋರ್ ಶೆಟ್ಟಿ ಅಮನ್ ಶೆಟ್ಟಿ ಹೇಳಿಕೆ ಮೇಲೆ ಮಂಗಳೂರು ಪೊಲೀಸರು ಆರೋಪ ಪಟ್ಟಿ ಸಲ್ಲಿಸಿದ್ದಾರೆ.

  • ಡ್ರಗ್ಸ್ ಲಿಂಕ್ ಪ್ರಕರಣ – ಚಾರ್ಜ್‍ಶೀಟ್‍ನಲ್ಲಿ ಆ್ಯಂಕರ್ ಅನುಶ್ರೀ ಹೆಸರು

    ಡ್ರಗ್ಸ್ ಲಿಂಕ್ ಪ್ರಕರಣ – ಚಾರ್ಜ್‍ಶೀಟ್‍ನಲ್ಲಿ ಆ್ಯಂಕರ್ ಅನುಶ್ರೀ ಹೆಸರು

    ಮಂಗಳೂರು: ಸ್ಯಾಂಡಲ್‍ವುಡ್‍ನ ಖ್ಯಾತ ಆ್ಯಂಕರ್ ಕಮ್ ನಟಿ ಅನುಶ್ರೀ ವಿರುದ್ಧ ಸ್ಯಾಂಡಲ್‍ವುಡ್ ಡ್ರಗ್ಸ್ ಲಿಂಕ್ ಪ್ರಕರಣ ಮತ್ತೆ ಅಂಟಿಕೊಂಡಿದೆ. ಇದೀಗ ಮಂಗಳೂರು ಪೊಲೀಸರು ಸಲ್ಲಿಸಿರುವ ಚಾರ್ಜ್  ಶೀಟ್‍ನಲ್ಲಿ ಅನುಶ್ರೀ ಹೆಸರು ಉಲ್ಲೇಖ ಮಾಡಲಾಗಿದೆ.

    ಡ್ರಗ್ಸ್ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರ ವಿಚಾರಣೆ ವೇಳೆ ಸ್ನೇಹಿತ ಕಿಶೋರ್ ಅಮನ್ ಶೆಟ್ಟಿ, ಅನುಶ್ರೀ ಮಾದಕ ದ್ರವ್ಯ ಮಾರಾಟ ಮಾಡುತ್ತಿದ್ದರು. ಅಲ್ಲದೆ ರೂಂಗೆ ಕೂಡ ತರುತ್ತಿದ್ದರು ಎಂದು  ಹೇಳಿಕೆ ನೀಡಿದ್ದಾರೆ. ಇದನ್ನೂ ಓದಿ: ಡ್ರಗ್ಸ್ ಕೇಸ್- ಅನುಶ್ರೀ ಮೊಬೈಲ್‍ನಿಂದ ಮೂವರು ಪ್ರಭಾವಿ ವ್ಯಕ್ತಿಗಳಿಗೆ ಕರೆ 

    ಅನುಶ್ರೀ ಮಾದಕ ದ್ರವ್ಯ ಸಾಗಾಟದೊಂದಿಗೆ ಸ್ನೇಹಿತರೊಂದಿಗೆ ಡ್ರಗ್ಸ್ ಪಾರ್ಟಿ ಮಾಡುತ್ತಿದ್ದರು. ತರುಣ್, ನಾನು ಹಾಗೂ ಅನುಶ್ರೀ ಡ್ರಗ್ಸ್ ಪಾರ್ಟಿ ಮಾಡುತ್ತಿದ್ದೆವು. ಆಗ ಅನುಶ್ರೀ ನಮ್ಮ ರೂಂಗೆ ಎಕ್ಟಸಿ ಡ್ರಗ್ಸ್ ತರುತ್ತಿದ್ದರು ಎಂದು ಅಮನ್ ಶೆಟ್ಟಿ ಪೊಲೀಸರ ವಿಚಾರಣೆ ವೇಳೆ ತಿಳಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಮಂಗಳೂರು ಪೊಲೀಸರು ಆರೋಪ ಪಟ್ಟಿಯಲ್ಲಿ ಅನುಶ್ರೀ ಹೆಸರು ಉಲ್ಲೇಖ ಮಾಡಿದ್ದಾರೆ. ಈ ಮೂಲಕ ಅನುಶ್ರೀ ಮತ್ತೆ ಡ್ರಗ್ಸ್ ಶಾಕ್ ಎದುರಾಗಿದೆ. ಇದನ್ನೂ ಓದಿ: ಡ್ರಗ್ಸ್ ಪ್ರಕರಣ – ನಿರೂಪಕಿ ಅನುಶ್ರೀಗೆ ಕ್ಲೀನ್ ಚಿಟ್ ಸಾಧ್ಯತೆ

  • ಖ್ಯಾತ ಪತ್ರಕರ್ತ, ಹಿರಿಯ ನಿರೂಪಕ ರೋಹಿತ್ ಸರ್ದಾನ ಕೊರೊನಾಗೆ ಬಲಿ

    ಖ್ಯಾತ ಪತ್ರಕರ್ತ, ಹಿರಿಯ ನಿರೂಪಕ ರೋಹಿತ್ ಸರ್ದಾನ ಕೊರೊನಾಗೆ ಬಲಿ

    ನವದೆಹಲಿ: ಟೆಲಿವಿಷನ್‍ನ ಪತ್ರಕರ್ತ ಮತ್ತು ಹಿರಿಯ ನಿರೂಪಕ ರೋಹಿತ್ ಸರ್ದಾನರವರು ಶುಕ್ರವಾರ ಕೊರೊನಾದಿಂದ ನಿಧನರಾಗಿದ್ದಾರೆ.

    ರೋಹಿತ್ ಸರ್ದಾನ ಅವರು ಆಜ್‍ತಕ್ ವಾಹಿನಿಯಲ್ಲಿ ಕಾರ್ಯನಿರ್ವಹಿಸುತ್ತಿದ್ದರು ಮತ್ತು ಜನಪ್ರಿಯ ಕಾರ್ಯಕ್ರಮ ‘ದಂಗಲ್’ ನಿರೂಪಣೆ ಮಾಡಿದ್ದರು. ಈ ಕಾರ್ಯಕ್ರಮದಲ್ಲಿ ಪ್ರಸಕ್ತ ವ್ಯವಹಾರಗಳ ಬಗ್ಗೆ ಚರ್ಚೆ ನಡೆಸಲಾಗುತ್ತಿತ್ತು. ಈ ಮುನ್ನ ಜೀ ನ್ಯೂಸ್‍ನಲ್ಲಿ ಕೆಲಸ ಮಾಡಿದ್ದರು. ಅಲ್ಲಿ ಕೂಡ ಚರ್ಚಾ ಆಧಾರಿತ ‘ತಾಲ್ ಥೋಕ್ ಕೆ’ ಎಂಬ ಕಾರ್ಯಕ್ರಮಕ್ಕೆ ನಿರೂಪಣೆ ಮಾಡಿದ್ದರು.

    ರೋಹಿತ್ ಸರ್ದಾನಾ ಅವರಿಗೆ ಸರ್ಕಾರವು 2018ರಲ್ಲಿ ‘ಗಣೇಶ ಶಂಕರ್ ವಿದ್ಯಾರ್ಥ’ ಪುರಸ್ಕರ ಪ್ರಶಸ್ತಿಯನ್ನು ನೀಡಿತ್ತು. ಮಾಧ್ಯಮದ ಮಿತ್ರರು, ಮಂತ್ರಿಗಳು ಸೇರಿದಂತೆ ಅನೇಕ ರಾಜಕಾರಣಿಗಳು ಸದ್ಯ ನಿರೂಪಕನಿಗೆ ಕಂಬನಿ ಮಿಡಿಯುವ ಮೂಲಕ ಗೌರವ ಸಲ್ಲಿಸಿದ್ದಾರೆ.

    ಪ್ರಧಾನಿ ಮೋದಿ ತಮ್ಮ ಟ್ವಿಟ್ಟರ್ ಖಾತೆಯಲ್ಲಿ, ರೋಹಿತ್ ಸರ್ದಾನಾ ಬಹು ಬೇಗ ನಮ್ಮನ್ನು ಅಗಲಿದ್ದಾರೆ. ಭಾರತದ ಅಭಿವೃದ್ದಿ ಕುರಿತಂತೆ ಬಹಳ ಉತ್ಸಾಹ ಹೊಂದಿದ್ದರು. ಹೃದಯ ವಂತರು. ಅವರ ಅಕಾಲಿಕ ಮರಣವು ಮಾಧ್ಯಮ ಜಗತ್ತಿಗೆ ತುಂಬಾಲಾರದ ನಷ್ಟವನ್ನುಂಟು ಮಾಡಿದೆ. ಅವರ ಕುಟುಂಬ, ಸ್ನೇಹಿತರು ಮತ್ತು ಅಭಿಮಾನಿಗಳಿಗೆ ಸಂತಾಪ ಸೂಚಿಸುತ್ತೇನೆ. ಓಂ ಶಾಂತಿ ಎಂದು ಟ್ವೀಟ್ ಮಾಡಿದ್ದಾರೆ.

    ಕೇಂದ್ರ ಗೃಹ ಸಚಿವ ಅಮಿತ್ ಶಾರವರು, ರೋಹಿತ್ ಸರ್ದಾನ ಅವರ ಸಾವಿನ ಸುದ್ದಿ ನೋವುಂಟು ಮಾಡಿದೆ. ಪಕ್ಷಪಾತವಿಲ್ಲದ ಮತ್ತು ನ್ಯಾಯಯುತ, ಬುದ್ದಿವಂತ ಪತ್ರಕರ್ತನನ್ನು ದೇಶವು ಕಳೆದುಕೊಂಡಿದೆ. ಈ ದುರಂತ ನಷ್ಟವನ್ನು ಭರಿಸಲು ದೇವರು ಅವರ ಕುಟುಂಬಕ್ಕೆ ಶಕ್ತಿಯನ್ನು ನೀಡಲಿ. ಅವರ ಕುಟುಂಬ ಹಾಗೂ ಅನುಯಾಯಿಗಳಿಗೆ ನನ್ನ ಸಂತಾಪ ಎಂದು ಟ್ವೀಟ್ ಮಾಡಿದ್ದಾರೆ.

  • ಟ್ರಕ್ ಟ್ರೇಲರ್‌ಗೆ ಡಿಕ್ಕಿ ಹೊಡೆದ ಬೈಕ್ – ನಿರೂಪಕಿ ಸೇರಿದಂತೆ ಮೂವರ ದುರ್ಮರಣ

    ಟ್ರಕ್ ಟ್ರೇಲರ್‌ಗೆ ಡಿಕ್ಕಿ ಹೊಡೆದ ಬೈಕ್ – ನಿರೂಪಕಿ ಸೇರಿದಂತೆ ಮೂವರ ದುರ್ಮರಣ

    – ಹೆದ್ದಾರಿಯಲ್ಲಿ ತ್ರಿಬಲ್ ರೈಡಿಂಗ್ ಹೊರಟಿದ್ರು

    ಜೈಪುರ: ಟ್ರಕ್ ಟ್ರೇಲರ್ ಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ನಿರೂಪಕಿ ಸೇರಿದಂತೆ ಮೂವರು ಸಾವನ್ನಪ್ಪಿರೋ ಘಟನೆ ರಾಜಸ್ಥಾನದ ಚಿತ್ತೋಡಗಢ ಜಿಲ್ಲೆಯ ಗಂಗಾನಗರದ ಬಳಿ ನಡೆದಿದೆ.

    ವೀರೇಂದ್ರ, ಆಶೀಷ್ ಮತ್ತು ಶಹಜಾದ್ ಉರ್ಫ್ ಖುಷ್ಬೂ ಮೃತರು. ಶಹಜಾದ್ ಖಾಸಗಿ ಕಾರ್ಯಕ್ರಮಗಳಲ್ಲಿ ನಿರೂಪಕಿಯಾಗಿ ಕೆಲಸ ಮಾಡಿಕೊಂಡಿದ್ರೆ, ಬೈಕ್ ಸವಾರ ವೀರೇಂದ್ರ ಡಿಜೆ ಸೌಂಡಿಂಗ್ ಮಾಡಿಕೊಂಡಿದ್ದನು. ಇನ್ನೋರ್ವ ವೀರೇಂದ್ರ ಗೆಳೆಯನಾಗಿದ್ದು ಮೂವರು ಚಿತ್ತೋಡಗಢಗೆ ತೆರಳುತ್ತಿದ್ದರು.

    ಗಂಗಾನಗರದ ಚತುಷ್ಪತ ಹೆದ್ದಾರಿಯಲ್ಲಿ ಟ್ರೇಲರ್ ಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ವೀರೇಂದ್ರ ಸ್ಥಳದಲ್ಲಿ ಸಾವನ್ನಪ್ಪಿದ್ರೆ, ಶಹಜಾದ್ ಮತ್ತು ಆಶೀಷ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದ್ದಾರೆ. ಮೂವರು ಬಿಲ್ವಾಡದ ನಿವಾಸಿಗಳಾಗಿದ್ದು, 22 ರಿಂದ 25 ವರ್ಷದೊಳಗಿನವರು ಎಂದು ವರದಿಯಾಗಿದೆ.

    ಅಪಘಾತದ ಬಳಿಕ ಮೂರು ಮೃತದೇಹಗಳ ಬೇರೆ ಬೇರೆ ಆಸ್ಪತ್ರೆಗಳಲ್ಲಿರಿಸಲಾಗಿದ್ದು, ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ. ಇನ್ನೂ ಅಪಘಾತದ ಬಳಿಕ ಟ್ರೇಲರ್ ಚಾಲಕ ಪರಾರಿಯಾಗಿದ್ದಾನೆ.

  • ಅನುಶ್ರೀ ವಿಚಾರಣೆ ನಡೆಸಿದ್ದ ಇನ್ಸ್‌ಪೆಕ್ಟರ್ ವರ್ಗಾವಣೆ – ಸ್ಥಳೀಯ ಶಾಸಕರ ಪ್ರಭಾವದ ಶಂಕೆ

    ಅನುಶ್ರೀ ವಿಚಾರಣೆ ನಡೆಸಿದ್ದ ಇನ್ಸ್‌ಪೆಕ್ಟರ್ ವರ್ಗಾವಣೆ – ಸ್ಥಳೀಯ ಶಾಸಕರ ಪ್ರಭಾವದ ಶಂಕೆ

    – ದೆಹಲಿಯಿಂದ್ಲೂ ಪೊಲೀಸರಿಗೆ ಒತ್ತಡ
    – 6 ಸಿಮ್ ಬಳಸ್ತಿದ್ದ ನಿರೂಪಕಿ

    ಮಂಗಳೂರು: ಡ್ರಗ್ಸ್ ಪ್ರಕರಣಕ್ಕೆ ಸಂಬಂಧಿಸಿದಂತೆ ನಿರೂಪಕಿ, ನಟಿ ಅನುಶ್ರೀ ಅವರನ್ನು ವಿಚಾರಣೆ ನಡೆಸಿದ್ದ ಇನ್ಸ್ ಪೆಕ್ಟರ್ ಅವರನ್ನು ಏಕಾಏಕಿ ವರ್ಗಾವಣೆ ಮಾಡಲಾಗಿದ್ದು, ಇದರ ಹಿಂದೆ ಸ್ಥಳೀಯ ಶಾಸಕರೊಬ್ಬರ ಕೈವಾಡವಿದೆ ಎಂಬ ಮಾಹಿತಿ ಸಿಸಿಬಿ ಮೂಲಗಳಿಂದ ಪಬ್ಲಿಕ್ ಟಿವಿಗೆ ಲಭ್ಯವಾಗಿದೆ.

    ಹೌದು. ಇನ್ಸ್ ಪೆಕ್ಟರ್ ಶಿವಪ್ರಕಾಶ್ ನಾಯ್ಕ್ ಅವರನ್ನು ಮಂಗಳೂರು ಸಿಸಿಬಿ ಪೊಲೀಸರು ವರ್ಗಾವಣೆ ಮಾಡಿದ್ದಾರೆ. ಪ್ರಕರಣ ಸಂಬಂಧ ಮಂಗಳೂರಿನಲ್ಲಿ ಇನ್ಸ್ ಪೆಕ್ಟರ್ ಶಿವಪ್ರಕಾಶ್ ನಾಯ್ಕ್ ಅವರು ಮೊದಲು ಡಾನ್ಸರ್ ಕಿಶೋರ್ ಶೆಟ್ಟಿಯನ್ನು ಬಂಧಿಸಿದ್ದರು. ಈ ವೇಳೆ ಕಿಶೋರ್ ಶೆಟ್ಟಿಯನ್ನು ಬಿಡುಗಡೆ ಮಾಡುವಂತೆ ಶಾಸಕರು ಒತ್ತಡ ಹಾಕಿದ್ದರು ಎನ್ನಲಾಗಿದೆ. ಇದನ್ನೂ ಓದಿ: ಮಂಡ್ಯದ ನಿಮಿಷಾಂಬ ದೇಗುಲಕ್ಕೆ ಅನುಶ್ರೀ ಭೇಟಿ – ವಿಶೇಷ ಪೂಜೆ ಸಲ್ಲಿಕೆ

    ಕಿಶೋರ್ ಶೆಟ್ಟಿಯನ್ನು ಪ್ರಕರಣದಿಂದ ಕೈ ಬಿಡುವಂತೆ ಒತ್ತಾಯ ಹೇರಿದ್ದರು. ಆದರೆ ಶಾಸಕನ ಒತ್ತಾಯಕ್ಕೆ ಶಿವಪ್ರಕಾಶ್ ಮಣಿದಿರಲಿಲ್ಲ. ಹೀಗಾಗಿ ಇದೀಗ ಶಿವಪ್ರಕಾಶ್ ನೇತೃತ್ವದಲ್ಲೇ ನಡೆಯುತ್ತಿದ್ದ ಕಂಪ್ಲೀಟ್ ಡ್ರಗ್ಸ್ ಪ್ರಕರಣ ತನಿಖಾ ಉತ್ತುಂಗದಲ್ಲಿದ್ದಾಗ ಅವರನ್ನು ದಿಢೀರ್ ವರ್ಗಾವಣೆ ಮಾಡಲಾಗಿದೆ. ಇದನ್ನೂ ಓದಿ: 14 ವರ್ಷದ ಹಿಂದೆ ಬಸ್ ಹತ್ಕೊಂಡು ಬಂದು ಬೆಂಗ್ಳೂರಲ್ಲಿ ನೆಲೆ ಕಂಡಿದ್ದೇನೆ: ಗಳಗಳನೇ ಅತ್ತ ಅನುಶ್ರೀ

    ಇಷ್ಟು ಮಾತ್ರವಲ್ಲದೆ ಅನುಶ್ರೀ ಬಚಾವ್ ಮಾಡಲು ದೆಹಲಿಯಿಂದಲೂ ಪ್ರಭಾವ ಬೀರಲಾಗುತ್ತಿದೆ. ದೆಹಲಿಯಲ್ಲಿರುವ ಪ್ರಭಾವಿ ನಾಯಕರು ಕೂಡ ಪ್ರಕರಣದಿಂದ ಅನುಶ್ರೀಯನ್ನು ಕೈಬಿಡುವಂತೆ ಪೊಲೀಸ್ ಅಧಿಕಾರಿಗಳ ಮೇಲೆ ಒತ್ತಡ ಹಾಕುತ್ತಿದ್ದಾರೆ ಎಂಬ ಮಾಹಿತಿ ಕೂಡ ಲಭ್ಯವಾಗಿದೆ. ಇದನ್ನೂ ಓದಿ: ಡ್ರಗ್ಸ್ ಕೇಸ್- ಅನುಶ್ರೀ ಮೊಬೈಲ್‍ನಿಂದ ಮೂವರು ಪ್ರಭಾವಿ ವ್ಯಕ್ತಿಗಳಿಗೆ ಕರೆ

    ಅನುಶ್ರೀ ದೂರವಾಣಿ ಕರೆಗಳ ಸಾಕ್ಷ್ಯ ಕೆದಕಿರುವ ಸಿಸಿಬಿಗೆ ಅಚ್ಚರಿಯಾಗಿದೆ. 6 ಸಿಮ್ ಬಳಸ್ತಿದ್ದ ಅನುಶ್ರೀ, ಸಿಸಿಬಿ ನೋಟಿಸ್ ಬೆನ್ನಲ್ಲೇ ನಾಲ್ವರು ಪ್ರಭಾವಿಗಳಿಗೆ ಫೋನ್ ಮಾಡಿದ್ದಾರೆ. ಮಾಜಿ ಸಿಎಂ, ಮಾಜಿ ಸಿಎಂ ಮಗ ಹಾಗೂ ಕರಾವಳಿ ಭಾಗದ ಪ್ರಭಾವಿ ರಾಜಕಾರಣಿಗೂ ಕರೆ ಮಾಡಿದ್ದರು. 3 ಪಕ್ಷಗಳ ಮೂವರು ನಾಯಕರಿಗೆ ಕಾಲ್ ಮಾಡಿದ್ದರು ಎಂದು ದೂರವಾಣಿ ಕರೆ ದಾಖಲೆ ಪರಿಶೀಲನೆ ವೇಳೆ ಪೊಲೀಸರಿಗೆ ಮಾಹಿತಿ ಲಭ್ಯವಾಗಿದೆ.

  • ಕನ್ನಡಿಗರು ಕೊಟ್ಟ ಹೆಸರಿಗೆ ಧಕ್ಕೆ ಮಾಡಿಲ್ಲ, ಯಾವತ್ತೂ ಮಾಡಲ್ಲ: ಕಣ್ಣೀರಿಟ್ಟ ಅನುಶ್ರೀ

    ಕನ್ನಡಿಗರು ಕೊಟ್ಟ ಹೆಸರಿಗೆ ಧಕ್ಕೆ ಮಾಡಿಲ್ಲ, ಯಾವತ್ತೂ ಮಾಡಲ್ಲ: ಕಣ್ಣೀರಿಟ್ಟ ಅನುಶ್ರೀ

    – ನನ್ನ ಅಪರಾಧಿಯಾಗಿ ಬಿಂಬಿಸಿದ್ದು ನೋವಾಗಿದೆ
    – 1 ವಾರದಿಂದ ನೆಮ್ಮದಿ ಹಾಳಾಗಿದೆ

    ಬೆಂಗಳೂರು: ಸ್ಯಾಂಡಲ್‍ವುಡ್ ಡ್ರಗ್ಸ್ ಪ್ರಕರಣ ಸಂಬಂಧ ಈಗಾಗಲೇ ಸಿಸಿಬಿ ವಿಚಾರಣೆ ಎದುರಿಸಿರುವ ನಿರೂಪಕಿ, ನಟಿ ಅನುಶ್ರೀ ಇಂದು ಕಣ್ಣೀರು ಹಾಕಿದ್ದಾರೆ.

    ಈ ಸಂಬಂಧ ವೀಡಿಯೋ ಮಾಡಿರುವ ಅವರು, ಈ ವೀಡಿಯೋವನ್ನು ನಾನು ನನ್ನನ್ನು ಸಮರ್ಥಿಸಿಕೊಳ್ಳಲು ಅಥವಾ ಕರುಣೆಗೋಸ್ಕರ ಮಾಡುತ್ತಿಲ್ಲ. ಎಲ್ಲರೂ ತಮ್ಮ ತಮ್ಮ ಅಭಿಪ್ರಾಯಗಳನ್ನು ಸುತ್ತಮುತ್ತ ಹೇಳುತ್ತಿದ್ದಾರೆ. ಈ ಅಭಿಪ್ರಾಯಗಳು ನನ್ನ ಬಗ್ಗೆ ಇರುವುದರಿಂದ ಈ ವೀಡಿಯೋ ಮಾಡುತ್ತಿದ್ದೇನೆ ಎಂದು ಹೇಳಿ ಗಳಗಳನೇ ಕಣ್ಣೀರಿಟ್ಟಿದ್ದಾರೆ.

    ವೀಡಿಯೋದಲ್ಲಿ ಹೇಳಿದ್ದೇನು?
    20020ರ ಸೆಪ್ಟೆಂಬರ್ 24 ನನ್ನ ಜೀವನದ ಯಾವ ಘಟ್ಟದಲ್ಲೂ ನಾನು ಮತ್ತೆ ನೆನಪಿಸಿಕೊಳ್ಳೋದಕ್ಕೆ ಇಷ್ಟಪಡದಿರುವಂತಹ ದಿನ. 12 ವರ್ಷಗಳ ಹಿಂದೆ ನಾನು ಡ್ಯಾನ್ಸ್ ರಿಯಾಲಿಟಿ ಶೋ ಒಂದರಲ್ಲಿ ಗೆದ್ದಾಗ, ಆ ದಿನ ಭವಿಷ್ಯದಲ್ಲಿ ಮುಳ್ಳಾಗುತ್ತೆ ಅಂತ ಅಂದುಕೊಂಡಿರಲಿಲ್ಲ ಎಂದು ಬೇಸರ ವ್ಯಕ್ತಪಡಿಸಿದ್ದಾರೆ.

    ನೋಟಿಸ್ ಬಂದಿರುವುದು ನನಗೆ ಬೇಜಾರಾಗಿಲ್ಲ. ಸಿಸಿಬಿ ಕಚೇರಿಗೆ ಹೋದ ಮಾತ್ರಕ್ಕೆ ನಾನು ಅಪರಾಧಿ ಅಥವಾ ಆರೋಪಿ ಅಂತ ಆಗುವುದಿಲ್ಲ. ಆ ವಿಚಾರದಲ್ಲಿ ನನ್ನನ್ನು ಬಿಂಬಿಸಿದ ರೀತಿ ನನಗೆ ತುಂಬಾನೇ ನೋವು ಮಾಡಿತ್ತು. ನೋವು ತುಂಬಾ ಸಣ್ಣ ಪದ. ಕಳೆದ ಒಂದು ವಾರದಿಂದ ನಮ್ಮ ಮನೆಯವರ ನೆಮ್ಮದಿಯನ್ನು ಹಾಳು ಮಾಡಿತ್ತು. ಆದರು ಕೂಡ ಈ ಕಷ್ಟಕಾಲದಲ್ಲಿ ಏನೂ ಹೆಳದೆ, ಏನೂ ಕೇಳದೆ ಅನುಶ್ರೀ ನೀವೇನು ಅಂತ ನಮಗೆ ಚೆನ್ನಾಗಿ ಗೊತ್ತು. ನಿಮ್ಮ ಮೇಲೆ ನಮಗೆ ಅಪಾರವಾದ ನಂಬಿಕೆ ಇದೆ ಅಂತ ನನ್ನ ಜೊತೆ ನಿಂತಿರುವ ಎಲ್ಲಾ ಕನ್ನಡಿಗರಿಗೆ ತುಂಬು ಹೃದಯದ ಧನ್ಯವಾದಗಳು. ಇದನ್ನು ನಾನು ಯಾವತ್ತೂ ಮರೆಯಲ್ಲ ಎಂದು ಹೇಳಿದ್ದಾರೆ.

    ಇದನ್ನು ಮೀರಿ ಕೂಡ ಸುತ್ತಮುತ್ತ ಕೆಲವೊಂದಷ್ಟು ಅಭಿಪ್ರಾಯಗಳು, ವಿಚಾರಗಳು, ಅಂತೆಕಂತೆಗಳು ಇದು ನಮ್ಮ ನೆಮ್ಮದಿನ ತುಂಬಾನೇ ಹಾಳು ಮಾಡುತ್ತಿದೆ. ದಯಮಾಡಿ ಇಂತಹ ವಿಚಾರಗಳನ್ನು ಹರಿದಾಡಿಸುವ ಮುನ್ನ ಒಂದು ಬಾರಿ ನಮ್ಮ ಮನಸ್ಥಿತಿ ಬಗ್ಗೆ ಯೋಚನೆ ಮಾಡಿ. ನಾನಿಷ್ಟೆ ನಿಮ್ಮಲ್ಲಿ ಕೇಳಿಕೊಳ್ಳುತ್ತಿದ್ದೇನೆ ಎಂದು ಮನವಿ ಮಾಡಿಕೊಂಡಿದ್ದಾರೆ.

    ಇಷ್ಟೊಂದು ಕಷ್ಟದ ದಿನಗಳಲ್ಲಿ ನನಗೆ ನೆರಳಾಗಿ ನಿಂತಿರುವ ನನ್ನ ಕುಟುಂಬ, ನನ್ನ ತಂಡ, ಸ್ನೇಹಿತರು ಎಲ್ಲರಿಗೂ ಧನ್ಯವಾದಗಳು. ನನ್ನ ಪರಿಸ್ಥಿತಿಯನ್ನು ಅರ್ಥಮಾಡಿಕೊಂಡು ನನ್ನನ್ನು ಬೆಂಬಲಿಸುತ್ತಿರೋ ಮಾಧ್ಯಮಮಿತ್ರರಿಗೂ ಧನ್ಯವಾದ. ಕನ್ನಡಿಗರು ಕೊಟ್ಟ ಈ ಹೆಸರಿಗೆ ಯಾವುದೇ ಧಕ್ಕೆ ಬರುವಂತಹ ಯಾವುದೇ ಕೆಲಸವನ್ನು ನಾನು ಮಾಡಿಲ್ಲ. ಮುಂದೆಯೂ ಮಾಡಲ್ಲ ಎಂದು ಹೇಳುತ್ತಾ ಅನುಶ್ರೀ ಗದ್ಗದಿತರಾಗಿದ್ದಾರೆ.

    ಡ್ರಗ್ಸ್ ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗೇ ನಟಿಯರಾದ ರಾಗಿಣಿ ದ್ವಿವೇದಿ ಹಾಗೂ ಸಂಜನಾ ಜೈಲುಪಾಲಾಗಿದ್ದಾರೆ. ಈ ಮಧ್ಯೆ ಮಂಗೂರಿನಲ್ಲಿ ಡ್ಯಾನ್ಸರ್ ಕಿಶೋರ್ ಹಾಗೂ ತರುಣ್, ನೌಶೀನ್ ಎಂಬವರನ್ನು ಬಂಧಿಸಲಾಗಿತ್ತು. ವಿಚಾರಣೆಯ ವೇಳೆ ತರುಣ್, ಅನುಶ್ರೀ ಕುಡಿತಿದ್ದಳು ಅಂತ ಮಾತ್ರ ಹೇಳಿದ್ದ. ಆದರೆ ಪೊಲೀಸರು ತನಿಖೆ ಚುರುಕುಗೊಳಿಸಿದ ಬಳಿಕ ಒಂದೊಂದೇ ಮಾಹಿತಿ ಬಾಯ್ಬಿಟ್ಟಿದ್ದಾನೆ. ನಾವು ಡ್ರಗ್ ಪಾರ್ಟಿ ಮಾಡುತ್ತಿದ್ವಿ, ಪಾರ್ಟಿಯಲ್ಲಿ ಅನುಶ್ರೀ ಡ್ರಗ್ಸ್ ತೆಗೆದುಕೊಳ್ಳತ್ತಿದ್ದಳು ಎಂದು ಬಾಯ್ಬಿಟ್ಟಿದ್ದಾನೆ ಎನ್ನಲಾಗಿತ್ತು. ಡ್ರಗ್ಸ್ ಪೆಡ್ಲರ್ ಗಳ ಜೊತೆ ಸಂಪರ್ಕ ಹೊಂದಿದ್ದ ಆರೋಪದ ಮೇಲೆ ನಿರೂಪಕಿ ಅನುಶ್ರೀಗೆ ಈ ಹಿಂದೆ ಸಿಸಿಬಿ ನೋಟಿಸ್ ನೀಡಿತ್ತು. ಹೀಗಾಗಿ ಅನುಶ್ರೀ ವಿಚಾರಣೆಗೆ ಹಾಜರಾಗಿದ್ದರು.

    https://www.instagram.com/tv/CF0503kHBr2/?igshid=14r1wus7ksbwq

  • ಡ್ರಗ್ಸ್ ಕೇಸ್ ಪ್ರಕರಣ – ಡ್ಯಾನ್ಸರ್ ಕಿಶೋರ್ ಕೇಸ್ ಕೈ ಬಿಡುವಂತೆ ಕರಾವಳಿ ಶಾಸಕನಿಂದ ಒತ್ತಡ

    ಡ್ರಗ್ಸ್ ಕೇಸ್ ಪ್ರಕರಣ – ಡ್ಯಾನ್ಸರ್ ಕಿಶೋರ್ ಕೇಸ್ ಕೈ ಬಿಡುವಂತೆ ಕರಾವಳಿ ಶಾಸಕನಿಂದ ಒತ್ತಡ

    ಮಂಗಳೂರು: ಆ್ಯಂಕರ್ ಕಂ ನಟಿ ಅನುಶ್ರೀ ಡ್ರಗ್ಸ್ ಪ್ರಕರಣಕ್ಕೆ ಇದೀಗ ಸ್ಫೋಟಕ ಟ್ವಿಸ್ಟ್ ದೊರೆತಿದೆ. ಅನುಶ್ರೀ ಹೆಸರು ಹೇಳಿದ್ದ ಡ್ಯಾನ್ಸರ್ ಕಿಶೋರ್ ರಕ್ಷಣೆಗೆ ಭಾರೀ ಒತ್ತಡ ಹೇರಲಾಗುತ್ತಿದೆ ಎಂಬ ಮಾಹಿತಿಯೊಂದು ಪಬ್ಲಿಕ್ ಟಿವಿಗೆ ಲಭಿಸಿದೆ.

    ಡ್ಯಾನ್ಸರ್ ಕಿಶೋರ್ ಅರೆಸ್ಟ್ ಆದ ದಿನವೇ ದೊಡ್ಡ ಲಾಬಿ ನಡೆದಿತ್ತು. ಪ್ರಕರಣದಿಂದ ಕಿಶೋರ್‍ನನ್ನು ಕೈ ಬಿಡುವಂತೆ ಕರಾವಳಿಯ ಶಾಸಕರೊಬ್ಬರು ಒತ್ತಡ ಹೇರುತ್ತಿದ್ದಾರೆ. ಶಾಸಕನ ಒತ್ತಡ ಸಫಲ ಆಗಿದ್ದರೆ ಅನುಶ್ರೀ ಸೇರಿದಂತೆ ಎಲ್ಲರು ಬಚಾವ್ ಆಗುತ್ತಿದ್ದರು ಎಂಬ ಮಾತುಗಳು ಕೂಡ ಕೇಳಿಬರುತ್ತಿವೆ.

    ಡ್ರಗ್ ಪೆಡ್ಲರ್ ಗೂ ಶಾಸಕನಿಗೂ ಇರೋ ಸಂಬಂಧ ಏನು..?
    ಮಂಗಳೂರಿನ ಪ್ರತಿಷ್ಠಿತ ವ್ಯಕ್ತಿಯೊಬ್ಬರು ಆ ಶಾಸಕನಿಗೆ ಆಪ್ತರಾಗಿದ್ದಾರೆ. ಆ ಪ್ರತಿಷ್ಠಿತ ವ್ಯಕ್ತಿ ಕ್ರಿಕೆಟ್ ಬೆಟ್ಟಿಂಗ್ ದಂಧೆಯ ರೂವಾರಿ. ಕಿಶೋರ್ ಕೂಡ ಆತನ ಅಣತಿಯಂತೆ ಬುಕ್ಕಿಗಳಿಗೆ ಡ್ರಗ್ಸ್ ಪಾರ್ಟಿ ಕೊಟ್ಟಿದ್ದ. ಆ ಪ್ರತಿಷ್ಠಿತ ವ್ಯಕ್ತಿ ರಾಜಕೀಯ ಒತ್ತಡ ತಂದು ಕಿಶೋರ್ ನನ್ನು ಪ್ರಕರಣದಿಂದ ಕೈ ಬಿಡುವ ಯೋಜನೆ ಹಾಕಿದ್ದ. ಆದರೆ ಆ ಯೋಜನೆಯನ್ನು ಸಿಸಿಬಿ ಪೊಲೀಸರು ಸಂಪೂರ್ಣ ಪ್ಲಾಪ್ ಮಾಡಿದ್ದಾರೆ ಎನ್ನಲಾಗಿದೆ.

    ಮತ್ತೋರ್ವ ಕೋರಿಯೋಗ್ರಾಫರ್ ಅರೆಸ್ಟ್:
    ಡ್ರಗ್ಸ್ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಮತ್ತೋರ್ವ ಕೋರಿಯೋಗ್ರಾಫರ್‍ನನ್ನು ಬಂಧಿಸಲಾಗಿದೆ. ಬೆಂಗಳೂರಿನಲ್ಲಿ ಸ್ಯಾಮ್ ಫರ್ನಾಂಡೀಸ್ ನನ್ನು ಅರೆಸ್ಟ್ ಮಾಡಲಾಗಿದ್ದು, ಈತ ವಿಚಾರಣೆ ವೇಳೆ ಹಲವು ಮಾಹಿತಿಗಳನ್ನು ಬಾಯ್ಬಿಟ್ಟಿದ್ದಾನೆ. ಅನುಶ್ರೀ ಸೇರಿದಂತೆ ಸ್ಯಾಂಡಲ್ ವುಡ್ ನಟ-ನಟಿಯರ ಹೆಸರುಗಳನ್ನು ಹೇಳಿದ್ದಾನೆ. ಬೆಂಗಳೂರು, ಮಂಗಳೂರಿನಲ್ಲಿ ನಡೆದಿದ್ದ ಡ್ರಗ್ಸ್ ಪಾರ್ಟಿಯಲ್ಲಿ ಕಿರುತೆರೆ ಕಲಾವಿದರು, ಡ್ಯಾನ್ಸರ್ ಗಳು ಭಾಗಿಯಾಗಿದ್ರು. ವಿಶೇಷವಾಗಿ ಕಿರುತೆರೆ ಸ್ಟಾರ್ ಗಳು ಪಾರ್ಟಿಯಲ್ಲಿ ಭಾಗಿರುವುದಾಗಿ ಹೇಳಿದ್ದಾನೆ. ಸದ್ಯ ಸ್ಯಾಮ್ ಹೇಳಿಕೆಯಿಂದ ಕಿರುತೆರೆ, ರಿಯಾಲಿಟಿ ಶೋಗಳ ಸ್ಟಾರ್ ಗಳಿಗೆ ಢವ ಢವ ಶುರುವಾಗಿದೆ.

    ಅನುಶ್ರೀ ವಿಚಾರಣೆ:
    ಡ್ರಗ್ಸ್ ಪ್ರಕರಣಕ್ಕೆ ಸಂಬಂಧಿಸಿದಂತೆ ಮಂಗಳೂರಿನಲ್ಲಿ ಕಿಶೋರ್, ತರುಣ್ ಹಾಗೂ ನೌಶೀನ್ ಎಂಬವರನ್ನು ಬಂಧಿಸಲಾಗಿತ್ತು. ವಿಚಾರಣೆಯ ವೇಳೆ ತರುಣ್, ಅನುಶ್ರೀ ಕುಡಿತಿದ್ದಳು ಅಂತ ಮಾತ್ರ ಹೇಳಿದ್ದ. ಆದರೆ ಪೊಲೀಸರು ತನಿಖೆ ಚುರುಕುಗೊಳಿಸಿದ ಬಳಿಕ ಒಂದೊಂದೇ ಮಾಹಿತಿ ಬಾಯ್ಬಿಟ್ಟಿದ್ದಾನೆ. ನಾವು ಡ್ರಗ್ ಪಾರ್ಟಿ ಮಾಡುತ್ತಿದ್ವಿ, ಪಾರ್ಟಿಯಲ್ಲಿ ಅನುಶ್ರೀ ಡ್ರಗ್ಸ್ ತೆಗೆದುಕೊಳ್ಳತ್ತಿದ್ದಳು ಎಂದು ಬಾಯ್ಬಿಟ್ಟಿದ್ದಾನೆ ಎನ್ನಲಾಗಿತ್ತು. ಡ್ರಗ್ಸ್ ಪೆಡ್ಲರ್‍ಗಳ ಜೊತೆ ಸಂಪರ್ಕ ಹೊಂದಿದ್ದ ಆರೋಪದ ಮೇಲೆ ನಿರೂಪಕಿ ಅನುಶ್ರೀಗೆ ಈ ಹಿಂದೆ ಸಿಸಿಬಿ ನೋಟಿಸ್ ನೀಡಿತ್ತು. ಹೀಗಾಗಿ ಅನುಶ್ರೀ ವಿಚಾರಣೆಗೆ ಹಾಜರಾಗಿದ್ದರು.

  • ಮಾಯಂತಿ ಲ್ಯಾಂಗರ್ ಔಟ್ – ಐಪಿಎಲ್ ಹೊಸ ನಿರೂಪಕರ ಲಿಸ್ಟ್ ಬಿಡುಗಡೆ

    ಮಾಯಂತಿ ಲ್ಯಾಂಗರ್ ಔಟ್ – ಐಪಿಎಲ್ ಹೊಸ ನಿರೂಪಕರ ಲಿಸ್ಟ್ ಬಿಡುಗಡೆ

    ನವದೆಹಲಿ: ಐಪಿಎಲ್‍ನಲ್ಲಿ ನಿರೂಪಣೆ ಮಾಡುವ ಆ್ಯಂಕರ್ಸ್ ಗಳ ಪಟ್ಟಿಯನ್ನು ಸ್ಟಾರ್ ಸ್ಪೋರ್ಟ್ಸ್ ಬಿಡುಗಡೆ ಮಾಡಿದ್ದು, ಇದರಲ್ಲಿ ಸ್ಟಾರ್ ನಿರೂಪಕಿ, ಸ್ಟುವರ್ಟ್ ಬಿನ್ನಿ ಪತ್ನಿ ಮಾಯಂತಿ ಲ್ಯಾಂಗರ್ ಅವರ ಹೆಸರನ್ನು ಕೈಬಿಡಲಾಗಿದೆ.

    ನಾಳೆಯಿಂದ ಐಪಿಎಲ್ ಹಬ್ಬ ಶುರುವಾಗಲಿದೆ. 6 ತಿಂಗಳು ತಡವಾಗಿ ಐಪಿಎಲ್ ಆರಂಭವಾಗುತ್ತಿದೆ. ಪ್ರಪಂಚದ ಅತ್ಯಂತ ಶ್ರೀಮಂತ ಕ್ರಿಕೆಟ್ ಲೀಗ್‍ಗಾಗಿ ಇಡೀ ವಿಶ್ವದ ಕ್ರಿಕೆಟ್ ಪ್ರೇಮಿಗಳು ಕಾಯುತ್ತಿದ್ದಾರೆ. ಇದಕ್ಕೆ ತಕ್ಕ ಸಿದ್ಧತೆಗಳನ್ನು ಬಿಸಿಸಿಐ ಕೂಡ ಮಾಡಿಕೊಳ್ಳುತ್ತಿದೆ. ಪಾಕಿಸ್ತಾನ ಹೊರತು ಪಡಿಸಿ ಪ್ರಪಂಚದ 120 ದೇಶದಲ್ಲಿ ಐಪಿಎಲ್ ಪ್ರಸಾರವಾಗಲಿದೆ.

    ಐಪಿಎಲ್-2020 ಮೊದಲ ಪಂದ್ಯ ನಾಳೆ ಆರಂಭವಾಗಲಿದೆ. ಇದಕ್ಕಾಗಿ ಭರ್ಜರಿ ತಯಾರಿ ನಡೆಸಿರುವ ಸ್ಟಾರ್ ಸ್ಪೋರ್ಟ್ಸ್ ರಂಗುರಂಗಾಗಿ ಮಾತನಾಡುವ ನಿರೂಪಕರ ಪಟ್ಟಿಯನ್ನು ಬಿಡುಗಡೆ ಮಾಡಿದೆ. ಆದರೆ ಈ ಹಿಂದೆ ಐಪಿಎಲ್‍ನಲ್ಲಿ ನಿರೂಪಣೆ ಮಾಡುತ್ತಿದ್ದ ಸ್ಟಾರ್ ನಿರೂಪಕಿ ಮಾಯಂತಿ ಲ್ಯಾಂಗರ್ ಅವರ ಹೆಸರು ಪಟ್ಟಿಯಲ್ಲಿ ಕಾಣಿಸಿಕೊಂಡಿಲ್ಲ. ಅವರನ್ನು ಕೈಬಿಡಲು ಕಾರಣವೇನು ಎಂಬುದನ್ನು ಸ್ಟಾರ್ ಸ್ಪೋರ್ಟ್ಸ್ ತಿಳಿಸಿಲ್ಲ. ಇದರ ಬಗ್ಗೆ ಮಾಯಂತಿ ಲ್ಯಾಂಗರ್ ಕೂಡ ಇಲ್ಲಿಯೂ ಮಾಹಿತಿ ಹಂಚಿಕೊಂಡಿಲ್ಲ.

    ಸ್ಟಾರ್ ಸ್ಪೋರ್ಟ್ಸ್ ಬಿಡುಗಡೆ ಮಾಡಿದ ನಿರೂಪಕರ ಪಟ್ಟಿ
    ಸುರೇನ್ ಸುಂದರಂ, ಕಿರಾ ನಾರಾಯಣನ್, ನಶ್ಪ್ರೀತ್ ಕೌರ್, ತಾನ್ಯಾ ಪುರೋಹಿತ್, ಧೀರಜ್ ಜುನೇಜಾ, ಜತಿನ್ ಸಪ್ರು, ಸುಹೇಲ್ ಚಂದೋಕ್, ಸಂಜನಾ ಗಣೇಶನ್, ಅನಂತ್ ತ್ಯಾಗಿ ಸೇರಿದಂತೆ 9 ಮಂದಿ ನಿರೂಪಕರ ಪಟ್ಟಿಯನ್ನು ಬಿಸಿಸಿಐ ಬಿಡುಗಡೆ ಮಾಡಿದೆ. ಕನ್ನಡದ ಸ್ಟಾರ್ ಸ್ಪೋರ್ಟ್ಸ್ ವಾಹಿನಿಯಲ್ಲಿ ಮಂಗಳೂರಿನ ವೀಣಾ ಡಿಸೋಜಾ ನಿರೂಪಕಿಯಾಗಿ ಕಾರ್ಯನಿರ್ವಹಿಸಲಿದ್ದಾರೆ. ಆದರೆ ಮಾಯಂತಿ ಲ್ಯಾಂಗರ್ ಕಾಣದಿರುವುದು ಕೆಲ ಅಭಿಮಾನಿಗಳಿಗೆ ನಿರಾಸೆಯಾಗಿದೆ.

    ಸ್ಟಾರ್ ಸ್ಪೋರ್ಟ್ಸ್ ವಾಹಿನಿ ಮುಂಬರುವ ಐಪಿಎಲ್‍ಗಾಗಿ ಆಸ್ಟ್ರೇಲಿಯಾದ ಜನಪ್ರಿಯ ಟಿವಿ ನಿರೂಪಕ ನೆರೋಲಿ ಮೆಡೋಸ್ ಅವರನ್ನು ಕರೆತಂದಿದೆ. ಉಳಿದ ಸುರೇನ್ ಸುಂದರಂ, ಕಿರಾ ನಾರಾಯಣನ್, ನಶ್ಪ್ರೀತ್ ಕೌರ್, ತಾನ್ಯಾ ಪುರೋಹಿತ್ ಮತ್ತು ಧೀರಜ್ ಜುನೇಜಾ ಐಪಿಎಲ್ ಅಂಗಳದಲ್ಲಿ ಕಾಣಿಸಿಕೊಳ್ಳಲಿದ್ದು, ಸುರೇನ್ ಸುಂದರಂ ಇದಕ್ಕೂ ಮೊದಲು ಕೋಲ್ಕತ್ತಾ ನೈಟ್ ರೈಡರ್ಸ್ ತಂಡದ ನಿರೂಪಕರಾಗಿದ್ದರು. ಅವರು ಕಳೆದ ವರ್ಷದಿಂದ ಸ್ಟಾರ್ ನೆಟ್‍ವರ್ಕ್‍ನೊಂದಿಗೆ ಕೆಲಸ ಮಾಡುತ್ತಿದ್ದಾರೆ.

    ಕಿರಾ ನಾರಾಯಣನ್ ಭಾರತೀಯ ಚಲನಚಿತ್ರ ಮತ್ತು ರಂಗಭೂಮಿ ನಟಿಯಾಗಿದ್ದು, ಕ್ರೀಡಾ ನಿರೂಪಕಿಯಾಗಿಯೂ ಹೆಸರುವಾಸಿಯಾಗಿದ್ದಾರೆ. ತಾನ್ಯಾ ಪುರೋಹಿತ್ ಕೂಡ ನಟಿಯಾಗಿದ್ದು, ಹಲವಾರು ಸಿನಿಮಾದಲ್ಲಿ ಮತ್ತು ಟಿವಿ ಚಾನೆಲ್‍ಗಳಲ್ಲಿ ಕಾಣಿಸಿಕೊಂಡಿದ್ದಾರೆ. ತಾನ್ಯಾ ಅನುಷ್ಕಾ ಶರ್ಮಾ ಅಭಿನಯದ ಎನ್‍ಎಚ್-10 ಚಿತ್ರದಲ್ಲಿ ನಟಿಸಿದ್ದಾರೆ. ಮಾಯಂತಿ ಲ್ಯಾಂಗರ್ ಅವರ ಅನುಪಸ್ಥಿತಿಯಲ್ಲಿ, ಈ ಬಾರಿಯ ಐಪಿಎಲ್‍ನಲ್ಲಿ ಹೊಸ ನಿರೂಪಕರ ತಂಡ ಕೆಲಸ ಮಾಡಲಿದೆ.

  • ಬೆಂಗ್ಳೂರಿಗೆ ಬಂದಾಗ ಅನುಭವಿಸಿದ್ದ ಕಷ್ಟ ಹೇಳಿ ಅನುಶ್ರೀ ಕಣ್ಣೀರು

    ಬೆಂಗ್ಳೂರಿಗೆ ಬಂದಾಗ ಅನುಭವಿಸಿದ್ದ ಕಷ್ಟ ಹೇಳಿ ಅನುಶ್ರೀ ಕಣ್ಣೀರು

    ಬೆಂಗಳೂರು: ನಿರೂಪಕಿ ಅನುಶ್ರೀ ಖಾಸಗಿ ವಾಹಿನಿಯಲ್ಲಿ ಪ್ರಸಾರವಾಗುವ ಕಾರ್ಯಕ್ರಮದಲ್ಲಿ ತಮ್ಮ ವೃತ್ತಿ ಜೀವನದ ಆರಂಭದ ದಿನಗಳನ್ನು ಮೆಲುಕು ಹಾಕಿಕೊಂಡು ಕಣ್ಣೀರು ಹಾಕಿದ್ದಾರೆ.

    ಮೊದಲಿಗೆ ಬೆಂಗಳೂರಿಗೆ ಬಂದಾಗ ಇಲ್ಲಿ ಸಂಬಳ ಏನೂ ಸಾಕಾಗಲ್ಲ. ನಾನು ವಾಪಸ್ ಬರ್ತೀನಿ ಎಂದು ಅಮ್ಮನಿಗೆ ಎಸ್‍ಟಿಡಿ ಮಾಡಿದೆ. ಆದ್ರೆ ಅಮ್ಮ ನೀನು ಸೋತು ಮನೆಗೆ ಬರಬೇಡ. ಗೆದ್ದು ಬಾ ಅಥವಾ ಪ್ರಯತ್ನ ಮಾಡಿಯಾದ್ರೂ ಬಾ ಅಂತ ಹೇಳಿರುವುದಾಗಿ ತಿಳಿಸಿದರು.

    ರಿಯಾಲಿಟಿ ಶೋನಲ್ಲಿ ಕೂಡು ಕುಟುಂಬ ನೋಡಿದಾಗ ಭಾವುಕರಾದ ಅನುಶ್ರೀ, ನಾನು 10 ವರ್ಷ ಪಿಜಿಯಲ್ಲಿದ್ದೆ. ಶೂಟಿಂಗ್ ಮುಗಿಸಿಕೊಂಡು ಬಂದಾಗ ನಮಗೆ ಬಾಗಿಲು ತೆಗೆಯುವವರು ಯಾರೂ ಇರಲ್ಲ. ಊಟ ಮಾಡಿದ್ರಾ, ಹುಷಾರ್ ಇದ್ದೀರಾ ಕೇಳುವವರೂ ಇರಲಿಲ್ಲ. ಎಷ್ಟೋ ಬಾರಿ ಇದನ್ನೇ ನೆನಪು ಮಾಡಿಕೊಂಡು ರಾತ್ರಿ ಊಟ ಸಹ ಮಾಡದೇ ಮಲಗಿಕೊಂಡಿದ್ದೇನೆ. ಆ ಒಂಟಿತನ ಬೆಂಗಳೂರಿಗೆ ಬಂದಾಗ ನನ್ನನ್ನು ಕಾಡಿತ್ತು. ಏನೇ ಜಗಳ ಇರಲಿ, ಮನೆಯಲ್ಲಿರಬೇಕು ಎಂಬುದು ನನ್ನ ಅಭಿಪ್ರಾಯ. ಇದನ್ನೂ ಓದಿ: ಸುಷ್ಮಾ ನೀಡಿದ 250 ರೂ. ನೋಡಿ ಕಣ್ಣೀರಿಟ್ಟ ಅನುಶ್ರೀ

    ಒಂದು ಬಾರಿ ನನಗೆ ಹುಷಾರ್ ಇರಲಿಲ್ಲ. ಒಬ್ಬಳೇ ಆಸ್ಪತ್ರೆಗೆ ಹೋಗಿದ್ದೆ. ದೇಹದಲ್ಲಿ ಸಣ್ಣ ಇನ್ಪೆಕ್ಷನ್ ಅಂತ ಅನ್ಕೊಂಡು ಹೋದೆ. ಚಿಕಿತ್ಸೆ ಮಾಡುವಾಗ ನೋವು ಆಗುತ್ತೆ ಅನ್ನೋದು ಗೊತ್ತಿರಲಿಲ್ಲ. ವೈದ್ಯರು ಟ್ರೀಟ್ ಮಾಡುವಾಗ ನನ್ನ ಕೈ ಹಿಡಿದುಕೊಳ್ಳಲು ಯಾರೂ ಇಲ್ಲ ಅನ್ನೋ ನೋವು ನನ್ನನ್ನು ತುಂಬಾ ಕುಂದಿಸ್ತು. ಅದೇ ನೋವಿನಲ್ಲಿ ಮಲ್ಲೇಶ್ವರಂನಲ್ಲಿದ್ದ ಆಸ್ಪತ್ರೆಯಿಂದ ಹೊರ ಬಂದು ಆಟೋ ಹತ್ತಿ ಹಲ್ಲನ್ನು ಬಿಗಿ ಹಿಡಿದು ಹಾಸ್ಟೆಲ್ ವರೆಗೂ ಹೋದೆ. ಆವತ್ತೇ ಫಸ್ಟ್ ಟೈಂ ಜೋರಾಗಿ ಅತ್ತಿದ್ದು. ಬೆಂಗಳೂರಿನಲ್ಲಿ ನನಗೆ ಅಂತ ಯಾರೂ ಇಲ್ಲವಲ್ಲ ಎಂಬ ನೋವು ಕಾಡಿತ್ತು. ಅವತ್ತು ಸಹ ಅಮ್ಮನಿಗೆ ಫೋನ್ ಮಾಡಿ ಕಣ್ಣೀರು ಹಾಕಿದ್ದೆ.

    ಗುಂಡ್ಲುಪೇಟೆಯ ಈ ಕುಟುಂಬದವರು ಅದೃಷ್ಟವಂತರು. ಒಂದೇ ಮನೆಯಲ್ಲಿ 47 ಜನರು ವಾಸವಾಗಿರುವ ವಿಷಯ ಕೇಳಿ ಮತ್ತು ಈ ತುಂಬು ಕುಟುಂಬ ನೋಡಿ ಖುಷಿಯಾಯ್ತು. ಜೊತೆಯಲ್ಲಿ ಕುಳಿತು ಮಾತಾಡ್ತಾ ಊಟ ಮಾಡ್ತೀರಿ. ಒಂದು ಮಾತು ಬರುತ್ತೆ ಹೋಗುತ್ತೆ. ರಾತ್ರಿ ಮಲಗಿದ ವ್ಯಕ್ತಿ ಬೆಳಗ್ಗೆ ಏಳುತ್ತಾನೆ ಎಂಬುವುದು ಯಾರಿಗೂ ಗೊತ್ತಿಲ್ಲ ಅಂತ ಬೇಸರ ವ್ಯಕ್ತಪಡಿಸಿದರು.