Tag: Ancient Temple

  • ಹಿಂದೂ ಪುರಾತನ ದೇವಾಲಯವನ್ನು ಪುನರ್‌ನಿರ್ಮಿಸಲು ಆದೇಶಿದ ಪಾಕ್ ನ್ಯಾಯಮೂರ್ತಿ

    ಹಿಂದೂ ಪುರಾತನ ದೇವಾಲಯವನ್ನು ಪುನರ್‌ನಿರ್ಮಿಸಲು ಆದೇಶಿದ ಪಾಕ್ ನ್ಯಾಯಮೂರ್ತಿ

    ಇಸ್ಲಾಮಾಬಾದ್: ಪಾಕಿಸ್ತಾನದ ಉಗ್ರಗಾಮಿಗಳು ಧ್ವಂಸಗೊಳಿಸಿದ್ದ ಹಳೆಯ ಹಿಂದೂ ದೇವಾಲಯವನ್ನು ಪುನರ್ ನಿರ್ಮಿಸಲು ಮುಖ್ಯ ನ್ಯಾಯಮೂರ್ತಿ ಗುಲ್ಜಾರ್ ಅಹ್ಮದ್ ಆದೇಶಿಸಿದ್ದಾರೆ.

    ಕಳೆದ ವರ್ಷ ವಾಯುವ್ಯ ಪಾಕಿಸ್ತಾನದಲ್ಲಿ ಉಗ್ರಗಾಮಿಗಳ ಗುಂಪೊಂದು ಶತಮಾನದಷ್ಟು ಹಳೆಯದಾದ ಹಿಂದೂ ದೇವಾಲಯವನ್ನು ಧ್ವಂಸಗೊಳಿಸಿತ್ತು. ಈಗ ಮತ್ತೆ ಆ ದೇವಾಲಯವನ್ನು ನಿರ್ಮಿಸಲು ಹಾಗೂ ಭಕ್ತರಿಗೆ ದೇವಾಲಯವನ್ನು ನೋಡಲು ಅವಕಾಶ ಮಾಡಿಕೊಡಲು ಗುಲ್ಜಾರ್ ಅಹ್ಮದ್ ಅವರು ಅಧಿಕಾರಿಗಳಿಗೆ ಆದೇಶಿಸಿದ್ದಾರೆ. ಇದನ್ನೂ ಓದಿ: ಕೇರಳ ಪೊಲೀಸರಿಂದ ಶೃಂಗೇರಿ ಮೂಲದ ನಕ್ಸಲರ ಬಂಧನ 

    ನಿನ್ನೆ ಈ ಕುರಿತು ಮಾತನಾಡಿದ ಅವರು, ಕಳೆದ ವರ್ಷ ಡಿಸೆಂಬರ್‌ನಲ್ಲಿ, ಖೈಬರ್ ಪಖ್ತುನ್‍ಖ್ವಾದ ಕರಕ್ ಜಿಲ್ಲೆಯ ತೇರಿ ಗ್ರಾಮದಲ್ಲಿ ಶತಮಾನದಷ್ಟು ಹಳೆಯದಾದ ಶ್ರೀ ಪರಮ ಹನ್ಸ್ ಜಿ ಮಹಾರಾಜ್ ದೇವಸ್ಥಾನವನ್ನು ಜಮಿಯತ್ ಉಲೇಮಾ-ಎ-ಇಸ್ಲಾಂ ಫಜಲ್(ಜೆಯುಐ-ಎಫ್) ಗೆ ಸೇರಿದ ಕೆಲವು ಸ್ಥಳೀಯ ಧರ್ಮಗುರುಗಳ ನೇತೃತ್ವದ ಗುಂಪೊಂದು ಧ್ವಂಸಗೊಳಿಸಿ ಕೆಡವಲಾಯಿತು. ಈ ಹಿನ್ನೆಲೆಯಲ್ಲಿ ದೇವಾಲಯವನ್ನು ಪುನರ್ ನಿರ್ಮಿಸಲು ಅಧಿಕಾರಿಗಳಿಗೆ ಆದೇಶಿಸಲಾಗಿದೆ ಎಂದರು.

    ಈ ಘಟನೆಯಿಂದ ಪಾಕಿಸ್ತಾನಕ್ಕೆ ಅಂತಾರಾಷ್ಟ್ರೀಯ ಮುಜುಗರ ಉಂಟಾಗಿದ್ದು, ಅದಕ್ಕೆ ದೇವಾಲಯದ ಮೇಲೆ ದಾಳಿ ಮಾಡಿದ ದಾಳಿಕೋರರಿಂದ ದೇವಾಲಯದ ಜೀರ್ಣೋದ್ಧಾರ ಕಾರ್ಯಕ್ಕಾಗಿ ಹಣವನ್ನು ಮರುಪಡೆಯಲು ಸೂಚಿಸಲಾಗಿದೆ ಎಂದು ತಿಳಿಸಿದರು.

    ಸೋಮವಾರ ಧ್ವಂಸಗೊಳಿಸಿದ ದೇವಾಲಯವನ್ನು ಪುನರ್‌ನಿರ್ಮಿಸಲು ಬೃಹತ್ ಸಮಾರಂಭವನ್ನು ಹಿಂದೂ ಸಮುದಾಯದವರಿಗೆ ನಾವೆಲ್ಲರೂ ಒಂದೇ ಎಂದು ಹೇಳುವ ನಿಟ್ಟಿನಲ್ಲಿ ಈ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು. ಈ ಕಾರ್ಯಕ್ರಮಕ್ಕೆ ಅಹ್ಮದ್ ಅವರು ಹಿಂದೂಗಳ ಜೊತೆ ಒಗ್ಗಟ್ಟನ್ನು ವ್ಯಕ್ತಪಡಿಸಲು ದೀಪಾವಳಿ ಹಬ್ಬವನ್ನು ಆಚರಿಸಲು ಹೋಗಿದ್ದರು. ಇದನ್ನೂ ಓದಿ: ಸೌದೆ ಹಿಡಿದು ದೇವಿರಮ್ಮನ ದರ್ಶನ – ಅಪ್ಪು ಅಭಿಮಾನಿಯ ವಿಶೇಷ ಹರಕೆ!

    ಈ ವೇಳೆ ಉದ್ಘಾಟನಾ ಸಮಾರಂಭವನ್ನು ಉದ್ದೇಶಿಸಿ ಮಾತನಾಡಿದ ಅವರು, ಪಾಕಿಸ್ತಾನದ ಸರ್ವೋಚ್ಚ ನ್ಯಾಯಾಲಯವು ಅಲ್ಪಸಂಖ್ಯಾತರ ಹಕ್ಕುಗಳನ್ನು ರಕ್ಷಿಸಲು ಯಾವಾಗಲೂ ಕ್ರಮಗಳನ್ನು ತೆಗೆದುಕೊಳ್ಳುತ್ತದೆ. ಮುಂದೆ ಭವಿಷ್ಯದಲ್ಲಿ ಅದನ್ನು ಮುಂದುವರಿಸುತ್ತದೆ ಎಂದು ಹೇಳಿದ್ದರು.

  • ಯುವಕರಿಂದ ಗಂಗರ ಕಾಲದ ಪುರಾತನ ದೇವಾಲಯ ಜೀರ್ಣೋದ್ಧಾರ

    ಯುವಕರಿಂದ ಗಂಗರ ಕಾಲದ ಪುರಾತನ ದೇವಾಲಯ ಜೀರ್ಣೋದ್ಧಾರ

    – ಲಾಕ್‍ಡೌನ್ ವೇಳೆ ಊರಿಗೆ ಬಂದಾಗ ದೇವಾಲಯದ ಕೆಲಸ

    ನೆಲಮಂಗಲ: ಬೆಂಗಳೂರಿನಲ್ಲಿ ಕೆಲಸ ಮಾಡುತ್ತಿದ್ದ ಯುವಕರು ಲಾಕ್‍ಡೌನ್ ಹಿನ್ನೆಲೆ ಊರಿಗೆ ಬಂದಿದ್ದು, ಇದೇ ಸಮಯವನ್ನು ಸದುಪಯೋಗಪಡಿಸಿಕೊಂಡು ಶಿಥಿಲಗೊಂಡಿದ್ದ ಗ್ರಾಮದಲ್ಲಿನ ಪುರಾತನ ಗಂಗರ ಕಾಲದ ಆಂಜನೇಯ ದೇವಾಲಯವನ್ನು ಜೀರ್ಣೋದ್ಧಾರ ಮಾಡಿದ್ದಾರೆ.

    ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲ ತಾಲೂಕಿನ ತ್ಯಾಮಗೊಂಡ್ಲು ಹೋಬಳಿಯ ಮದ್ದೇನಹಳ್ಳಿ ಗ್ರಾಮದ ಪುರಾತನ ಗಂಗರ ಕಾಲದ ಆಂಜನೇಯ ದೇವಾಲಯ ಶಿಥಿಲವಾಗಿತ್ತು. ಲಾಕ್‍ಡೌನ್ ಹಿನ್ನೆಲೆ ಗ್ರಾಮದಲ್ಲಿ ಕಾಲ ಕಳೆಯುತ್ತಿದ್ದ ಯುವಕರು ಈ ದೇವಸ್ಥಾನದ ಅವಸ್ಥೆ ನೋಡಿ ಜೀರ್ಣೋದ್ಧಾರ ಮಾಡಲು ಪಣ ತೊಟ್ಟರು. ಅದರಂತೆ ಯುವಕರು ಒಟ್ಟಾಗಿ, ಗ್ರಾಮಸ್ಥರ ಮನವೊಲಿಸಿ ಹಣ ಹೊಂದಿಸಿ, ಕಾಮಗಾರಿ ನಡೆಸಲು ಅನುಮತಿ ಪಡೆದು ಇದೀಗ ದೇವಸ್ಥಾನವನ್ನು ಪುಶ್ಚೇತನಗೊಳಿಸಿದ್ದಾರೆ.

    ಸರ್ಕಾರದಿಂದ ಅನುಮತಿ ಪಡೆದು, ಸಾಮಾಜಿಕ ಅಂತರ ಹಾಗೂ ಸರ್ಕಾರದ ಇತರೆ ಕಟ್ಟುನಿಟ್ಟಿನ ನಿಯಮ ಪಾಲಿಸಿ ಕಾಮಗಾರಿ ನಡೆಸಲಾಗಿದೆ. ಗ್ರಾಮದಲ್ಲಿರುವ ಏಕೈಕ ಆಂಜನೇಯ ದೇವಾಲಯವನ್ನು ಸುಸ್ಥಿಯಲ್ಲಿಡಬೇಕೆಂಬ ಗ್ರಾಮಸ್ಥರ ಕನಸು ಇದರಿಂದ ನನಸಾಗಿದೆ. ಜೀರ್ಣೋದ್ಧಾರವಾದ ಖುಷಿಯಲ್ಲಿ ದೇಶ ಬೇಗ ಕರೊನಾ ಮುಕ್ತವಾಗಲಿ ಎಂಬ ಸಂಕಲ್ಪದಿಂದ ಪೂಜಾ ಕಾರ್ಯಕ್ರಮ ನಡೆಸಲಾಯಿತು. ಪುರಾತನ ದೇವಾಲಯಗಳನ್ನು ಉಳಿಸುವಲ್ಲಿ ಯುವಕರ ಕೊಡುಗೆ ದೊಡ್ಡದು ಎಂದು ಊರಿನ ಹಿರಿಯ ಮುಖಂಡ ಭಾನುಪ್ರಕಾಶ್ ಹೇಳಿದರು.