Tag: Andhra

  • ಸೋಮವಾರ 4ನೇ ಹಂತದ ಚುನಾವಣೆ – ಯಾವ ರಾಜ್ಯ, ಎಷ್ಟು ಕ್ಷೇತ್ರಗಳಲ್ಲಿ ಮತದಾನ? ಕಣದಲ್ಲಿರೋ ಪ್ರಮುಖರು ಯಾರು?

    ಸೋಮವಾರ 4ನೇ ಹಂತದ ಚುನಾವಣೆ – ಯಾವ ರಾಜ್ಯ, ಎಷ್ಟು ಕ್ಷೇತ್ರಗಳಲ್ಲಿ ಮತದಾನ? ಕಣದಲ್ಲಿರೋ ಪ್ರಮುಖರು ಯಾರು?

    ನವದೆಹಲಿ: ಸೋಮವಾರ (ಮೇ 12) 4ನೇ ಹಂತದ ಲೋಕಸಭೆ ಚುನಾವಣೆ (Lok Sabha Elections 2024) ನಡೆಯಲಿದ್ದು, ಸುಗಮ ಮತದಾನಕ್ಕೆ ಕೇಂದ್ರ ಚುನಾವಣಾ ಆಯೋಗ ಸಂಪೂರ್ಣ ಸಜ್ಜಾಗಿದೆ.

    9 ರಾಜ್ಯಗಳು ಮತ್ತು 1 ಕೇಂದ್ರಾಡಳಿತ ಪ್ರದೇಶದ 96 ಲೋಕಸಭಾ ಕ್ಷೇತ್ರಗಳಿಗೆ ಮತದಾನ ನಡೆಯಲಿದೆ. ಇದನ್ನೂ ಓದಿ: ಕೇಜ್ರಿವಾಲ್‌ಗೆ ಹುಚ್ಚು, ಬಿಜೆಪಿಯಲ್ಲಿ ವಯಸ್ಸಿನ ಮಿತಿ ಬಗ್ಗೆ ನಿರ್ಧಾರ ಕೈಗೊಂಡಿಲ್ಲ: ಆರ್‌.ಅಶೋಕ್

    ಆಂಧ್ರ ಪ್ರದೇಶದ 25, ತೆಲಂಗಾಣದ 17, ಉತ್ತರಪ್ರದೇಶದ 13, ಮಹಾರಾಷ್ಟ್ರದ 11, ಬಂಗಾಳದ 8, ಬಿಹಾರದ 5, ಒಡಿಶಾ, ಜಾರ್ಖಂಡ್‌ನ ತಲಾ 4 ಹಾಗೂ ಜಮ್ಮು ಮತ್ತು ಕಾಶ್ಮೀರದ 1 ಸ್ಥಾನಕ್ಕೆ ಮತದಾನ ನಡೆಯಲಿದ್ದು, 1717 ಅಭ್ಯರ್ಥಿಗಳು ಅದೃಷ್ಟ ಪರೀಕ್ಷೆ ಮಾಡಿಕೊಳ್ತಿದ್ದಾರೆ. ಇದನ್ನೂ ಓದಿ: ಭಾರತವನ್ನು ಅಭಿವೃದ್ಧಿಪಡಿಸಬೇಕಾದರೆ, ಪೂರ್ವ ಭಾರತವನ್ನು ಅಭಿವೃದ್ಧಿಪಡಿಸಬೇಕು – ಮೋದಿ

    ಕೇಂದ್ರ ಸಚಿವರಾದ ನಿತ್ಯಾನಂದ ರೈ, ಅಜಯ್ ಮಿಶ್ರಾ, ಮಾಜಿ ಸಿಎಂ ಅಖಿಲೇಶ್ ಯಾದವ್, ಅಧೀರ್ ರಂಜನ್ ಚೌಧರಿ, ಮಹುವಾ ಮೊಯಿತ್ರಾ, ಮಾಜಿ ಕ್ರಿಕೆಟಿಗ ಯುಸೂಫ್ ಪಠಾಣ್, ನಟ ಶತ್ರುಜ್ಞ ಸಿನ್ಹಾ, ಹೈದ್ರಾಬಾದ್‌ನಲ್ಲಿ ಅಸಾದುದ್ದೀನ್ ಓವೈಸಿ (Asaduddin Owaisi), ಮಾಧವಿಲತಾ ಸೇರಿ ಹಲವು ಪ್ರಮುಖರು ಕಣದಲ್ಲಿದ್ದಾರೆ.

    ಇದೇ ವೇಳೆ, ಆಂಧ್ರಪ್ರದೇಶ ವಿಧಾನಸಭೆಗೂ ಸೋಮವಾರವೇ ಚುನಾವಣೆ ನಡೆಯಲಿದೆ. ಸಿಎಂ ಜಗನ್ ನೇತೃತ್ವದ ವೈಎಸ್‌ಆರ್ ಪಾರ್ಟಿ ಏಕಾಂಗಿಯಾಗಿ ಸ್ಪರ್ಧೆ ಮಾಡಿದೆ. ಜಗನ್ ವಿರುದ್ಧ ಚಂದ್ರಬಾಬು ನಾಯ್ಡು, ಪವನ್ ಕಲ್ಯಾಣ್ ಮತ್ತು ಬಿಜೆಪಿ ಜಂಟಿ ಹೋರಾಟ ನಡೆಸುತ್ತಿದೆ. ಕಾಂಗ್ರೆಸ್ ಕೂಡ ಕಣದಲ್ಲಿ ಕಾಣಿಸಿಕೊಂಡಿದೆ.

  • ಮಾವು ತುಂಬಿದ್ದ ಲಾರಿ ಪಲ್ಟಿ – ಮೂವರು ಮಹಿಳೆಯರು ಸೇರಿ 6ಮಂದಿ ದುರ್ಮರಣ

    ಮಾವು ತುಂಬಿದ್ದ ಲಾರಿ ಪಲ್ಟಿ – ಮೂವರು ಮಹಿಳೆಯರು ಸೇರಿ 6ಮಂದಿ ದುರ್ಮರಣ

    ಕೋಲಾರ: ಚಾಲಕನ ನಿಯಂತ್ರಣ ತಪ್ಪಿ ಮಾವು ತುಂಬಿದ್ದ ಲಾರಿ ಪಲ್ಟಿಯಾದ ಪರಿಣಾಮ ಲಾರಿಯಲ್ಲಿದ್ದ ಆರು ಮಂದಿ ಕೂಲಿಯಾಳುಗಳು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಜಿಲ್ಲೆಯ ಆಂಧ್ರದ ಗಡಿಯಲ್ಲಿ ಸಂಭವಿಸಿದೆ.

    ಗಡಿ ಕುಪ್ಪಂ ಸಮೀಪದ ನಾಸೂರು ಬಳಿ ತಡರಾತ್ರಿ ಈ ಅಪಘಾತ ಸಂಭವಿಸಿದೆ. ನಾಸೂರು ಬಳಿ ಮಾವು ಕೀಳಲು ತಮಿಳುನಾಡಿನ ಕೊತ್ತಪೇಟೆ ಮೂಲದ 21 ಜನ ಕೂಲಿಯಾಳುಗಳು ಬಂದಿದ್ದರು. ಮಾವು ಕಿತ್ತು ಲಾರಿ ಮೂಲಕ ಕುಪ್ಪಂ ನಿಂದ ವಾಣಿಯಂಬಾಡಿ ಮಾರ್ಗವಾಗಿ ತೆರಳುತ್ತಿದ್ದರು.

    ಈ ವೇಳೆ ನಾಸೂರು ಬಳಿ ಅತಿವೇಗ ಹಾಗೂ ಚಾಲಕನ ನಿಯಂತ್ರಣ ತಪ್ಪಿದ ಹಿನ್ನೆಲೆಯಲ್ಲಿ ಲಾರಿ ಪಲ್ಟಿಯಾಗಿದೆ. ಪರಿಣಾಮ ಮೂರು ಮಂದಿ ಮಹಿಳೆಯರು ಹಾಗೂ 3 ಮಂದಿ ಪುರುಷರು ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ. ಇನ್ನು ಈ ಅಪಘಾತದಿಂದ 15 ಜನ ಪ್ರಾಣಾಪಯದಿಂದ ಪಾರಾಗಿದ್ದು, ಸಣ್ಣ ಪುಟ್ಟ ಗಾಯಗಳಾಗಿವೆ.

    ಈ ಘಟನೆ ಬಗ್ಗೆ ಮಾಹಿತಿ ಪಡೆದು ಸ್ಥಳಕ್ಕೆ ಕುಪ್ಪಂ ಪೊಲೀಸರು ಭೇಟಿ ನೀಡಿ, ಗಾಯಾಳುಗಳನ್ನು ಕೂಡಲೇ ತಮಿಳುನಾಡಿನ ಕೃಷ್ಣಗಿರಿ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿದ್ದಾರೆ. ಇನ್ನು ಸ್ಥಳದಲ್ಲಿ ಮೃತ ಸಂಬಂಧಿಕರ ಆಕ್ರಂದನ ಮುಗಿಲು ಮುಟ್ಟಿತ್ತು.

    ಸೀಮಾಂದ್ರ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ಚಿತ್ತೂರು ಜಿಲ್ಲಾಧಿಕಾರಿ ಪ್ರದ್ಯುಮ್ನರಿಂದ ಘಟನೆಯ ಸಂಪೂರ್ಣ ಮಾಹಿತಿ ಪಡೆದಿದ್ದು, ಸರ್ಕಾರದಿಂದ ವೈದ್ಯಕೀಯ ನೆರವು ನೀಡಿದ್ದಾರೆ.