Tag: Andhra Police

  • 25,000 ರೂ.ಗೆ ಜೀತಕ್ಕಿರಿಸಿದ್ದ ಮಗ ಸಾವು – ರಹಸ್ಯವಾಗಿ ಸಮಾಧಿಯಲ್ಲಿ ಹೂತಿಟ್ಟಿದ್ದ ಮಾಲೀಕ ಅರೆಸ್ಟ್‌

    25,000 ರೂ.ಗೆ ಜೀತಕ್ಕಿರಿಸಿದ್ದ ಮಗ ಸಾವು – ರಹಸ್ಯವಾಗಿ ಸಮಾಧಿಯಲ್ಲಿ ಹೂತಿಟ್ಟಿದ್ದ ಮಾಲೀಕ ಅರೆಸ್ಟ್‌

    – ಕರುಳು ಹಿಂಡುವ ಕಥೆ – ಪೊಲೀಸರು ಪ್ರಕರಣ ಭೇದಿಸಿದ್ದೇ ರೋಚಕ

    ಚೆನ್ನೈ/ಹೈದರಾಬಾದ್‌: 25,000 ರೂ. ಸಾಲಕ್ಕಾಗಿ (Loan) ಜೀತಕ್ಕಿರಿಸಿಕೊಂಡಿದ್ದ ಹುಡುಗನೊಬ್ಬನ ಶವ ತಮಿಳುನಾಡಿನಲ್ಲಿ (TamilNadu) ಸಮಾಧಿಯಲ್ಲಿ ಹೂತಿಟ್ಟ ಸ್ಥಿತಿಯಲ್ಲಿ ಪತ್ತೆಯಾಗಿರುವ ಘಟನೆ ನಡೆದಿದೆ. ಈ ಘಟನೆ ತಡವಾಗಿ ಬೆಳಕಿಗೆ ಬಂದಿದೆ.

    ಹೌದು. ಆಂಧ್ರ ಪ್ರದೇಶದ ಬಾತುಕೋಳಿ ಸಾಕಣೆದಾರ (Duck Rearer) ಯಾನಾಡಿ ಬುಡಕಟ್ಟು ಸಮುದಾಯದ ಮಹಿಳೆ ಮತ್ತು ಆಕೆಯ ಮೂವರು ಮಕ್ಕಳನ್ನು 25,000 ರೂ. ಸಾಲಕ್ಕೆ ಜೀತದಾಳುಗಳಾಗಿ ಇರಿಸಿಕೊಂಡಿದ್ದ. ಬಳಿಕ ತಾಯಿ ಇಬ್ಬರು ಮಕ್ಕಳನ್ನ ಬಿಟ್ಟು ಒಬ್ಬ ಮಗನನ್ನ ಮೇಲಾಧಾರವಾಗಿ (collateral) ಇರಿಸಿಕೊಂಡಿದ್ದ. ಮಹಿಳೆ ಬಡ್ಡಿ ಸಮೇತ ಸಾಲದ ಹಣ ಹೊಂದಿಸಿ ಮಗನನ್ನ ಬಿಡುವಂತೆ ಮಹಿಳೆ ಕೇಳಿದಾಗ ಹುಡುಗ ಓಡಿಹೋಗಿದ್ದಾನೆಂದು ಕಥೆ ಕಟ್ಟಿದ್ದ. ಇದನ್ನೂ ಓದಿ: ಪಾಕ್‌ ಏಜೆಂಟ್‌ ಜೊತೆ ಭಾರತೀಯ ಸೇನಾ ತಾಣಗಳ ಫೋಟೊ ಹಂಚಿಕೆ – ಗುಜರಾತ್‌ ವ್ಯಕ್ತಿ ಬಂಧನ

    ಈ ಸಂಬಂಧ ಮಹಿಳೆ ನೀಡಿನ ದೂರಿನ ಮೇರೆಗೆ ಕೇಸ್‌ ದಾಖಲಿಸಿಕೊಂಡ ಪೊಲೀಸರು (Andhra Police) ಬಾತುಕೋಳಿ ಸಾಕಣೆದಾರನನ್ನ ಬಂಧಿಸಿ ವಿಚಾರಣೆ ನಡೆಸಿದಾಗ ಹುಡುಗ ಮೃತಪಟ್ಟಿರುವುದು ಗೊತ್ತಾಗಿದೆ. ವಿಚಾರಣೆ ವೇಳೆ ಮಾಲೀಕನೇ ತಮಿಳುನಾಡಿನ ಕಾಂಚಿಪುರಂನಲ್ಲಿರುವ ತನ್ನ ಅತ್ತೆಯ ಮನೆಯ ಬಳಿ ಶವವನ್ನು ಹೂತಿದ್ದಾನೆಂದು ಬಾಯ್ಬಿಟ್ಟಿದ್ದಾನೆ. ಬಳಿಕ ಮಂಗಳವಾರ (ಮೇ 20) ಪೊಲೀಸರು ಹುಡುಗನ ಶವವನ್ನ ಹೊರತೆಗೆದಾಗ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿತ್ತು. ಇದನ್ನೂ ಓದಿ: Davanagere | ಚಾಲಕನ ನಿಯಂತ್ರಣ ತಪ್ಪಿ ಸಾರಿಗೆ ಬಸ್ ಪಲ್ಟಿ – 40ಕ್ಕೂ ಹೆಚ್ಚು ಮಂದಿಗೆ ಗಾಯ

    ಕರುಳು ಹಿಂಡುವ ಕಥೆ ನೀವೂ ಓದಿ…
    ಆಂಧ್ರ ಪ್ರದೇಶದ ನಿವಾಸಿ ಅನಕಮ್ಮ ಮತ್ತು ಆಕೆಯ ದಿ. ಪತಿ ಚೆಂಚಯ್ಯ ಮತ್ತವರ ಮೂವರು ಮಕ್ಕಳು ಬಾತುಕೋಳಿ ಸಾಕಣೆದಾರನ ಬಳಿ ಒಂದು ವರ್ಷದಿಂದ ಜೀತದಾಳುಗಳಾಗಿ ಕೆಲಸ ಮಾಡಿಕೊಂಡಿದ್ದರು. ಚೆಂಚಯ್ಯ ಮರಣದ ನಂತರ ಮಾಲೀಕ ಅನಕಮ್ಮ ಮತ್ತು ಆಕೆಯ ಮಕ್ಕಳನ್ನ ವಿರೀತವಾಗಿ ಶೋಷಣೆ ಮಾಡುತ್ತಿದ್ದ. ಆದ್ರೆ ಚೆಂಚಯ್ಯ ಮರಣಕ್ಕೂ ಮುನ್ನ 25,000 ರೂ. ಸಾಲ ಪಡೆದುಕೊಂಡಿದ್ದ ಕಾರಣ ಅವರು ಹೊರಗೆ ಹೋಗಲು ಸಾಧ್ಯವಿರಲಿಲ್ಲ. ಸಂಬಳ ಹೆಚ್ಚು ಮಾಡುವಂತೆ ಕೇಳಿಕೊಂಡಿದ್ದರೂ ಮಾಲೀಕನ ಮನಸ್ಸು ಕರಗಲಿಲ್ಲ. ಇದನ್ನೂ ಓದಿ: Bengaluru | ಅಕ್ರಮವಾಗಿ ನಾಡ ಪಿಸ್ತೂಲ್ ಮಾರಾಟ ಮಾಡುತ್ತಿದ್ದ ರೌಡಿಶೀಟರ್ ಬಂಧನ

    ಕೊನೆಗೆ ಆಕೆ ಮನೆಯಿಂದ ಹೊರಹೋಗಲು ನಿರ್ಧರಿಸಿದಾಗ 25,000 ರೂ. ಸಾಲಕ್ಕೆ 20 ಸಾವಿರ ರೂ. ಬಡ್ಡಿ ಹಣ ಸೇರಿ 45,000 ರೂ. ಕೊಡುವಂತೆ ಪಟ್ಟು ಹಿಡಿದಿದ್ದ. ಇದರಿಂದ ವಿಧಿಯಿಲ್ಲದೇ ಅನಕಮ್ಮ ತಮ್ಮ ಮೂವರು ಮಕ್ಕಳಲ್ಲಿ ಒಬ್ಬ ಮಗನನ್ನ ಜೀತದಾಳಾಗಿ ಬಿಟ್ಟು ಹೋಗಲು ಒಪ್ಪಿಕೊಂಡಳು. ಆಗಾಗ್ಗೆ ತನ್ನ ಮಗನೊಂದಿಗೆ ಫೋನ್‌ನಲ್ಲಿ ಮಾತನಾಡುತ್ತಿದ್ದಳು. ಅಮ್ಮ ಫೋನ್‌ ಮಾಡಿದಾಗೆಲ್ಲ ಮಾಲೀಕ ತೊಂದ್ರೆ ಕೊಡ್ತಿದ್ದಾನೆ, ನನ್ನನ್ನು ಇಲ್ಲಿಂದು ಕರೆದುಕೊಂಡು ಹೋಗು ಅಂತ ಮಗ ಬೇಡಿಕೊಳ್ಳುತ್ತಿದ್ದ. ಅನಕಮ್ಮ ಏಪ್ರಿಲ್‌ನಲ್ಲಿ ಮಗನೊಂದಿಗೆ ಕೊನೆಯ ಬಾರಿ ಮಾತನಾಡಿದ್ದಳು.

    ಹೇಗೋ ಏಪ್ರಿಲ್‌ ಅಂತ್ಯದ ವೇಳೆಗೆ ಅನಕಮ್ಮ ಕಟ್ಟಪಟ್ಟು ದುಡಿದು ಹಣ ಹೊಂದಿಸಿದಳು. ಸಾಲ ಪಾವತಿಸಿ ಮಗನನ್ನ ಬಿಡಿಸಿಕೊಂಡು ಬರಲೆಂದು ಆ ಬಾತುಕೋಳಿ ಸಾಕಣೆದಾರನ ಬಳಿ ಹೋದಾಗ ಆತ ತಕ್ಷಣಕ್ಕೆ ಆಟವಾಡಿಸಿದ. ಮೊದಮೊದಲು ಹುಡುಗನನ್ನ ಬೇರೆಡೆಗೆ ಕೆಲಸಕ್ಕೆ ಕಳುಹಿಸಿರುವುದಾಗಿ ಹೇಳುತ್ತಿದ್ದ ಮಾಲೀಕ ಬಳಿಕ ಓಡಿ ಹೋಗಿದ್ದಾನೆಂದು ಕಥೆ ಕಟ್ಟಿದ್ದ. ಇದರಿಂದ ಅನುಮಾನಗೊಂಡ ಅನಕಮ್ಮ ಬುಡಕಟ್ಟು ಸಮುದಾಯ ಮುಖಂಡದ ಸಹಾಯ ಪಡೆದು ಪೊಲೀಸರನ್ನು ಸಂಪರ್ಕಿಸಿ ದೂರು ನೀಡಿದ್ದರು. ಬಳಿಕ ಪ್ರಕರಣ ದಾಖಲಿಸಿಕೊಂಡ ಪೊಲೀಸರು ಆ ಬಾತುಕೋಳಿ ಸಾಕಣೆದಾರನನ್ನ ಬಂಧಿಸಿ ವಿಚಾರಣೆಗೆ ಒಳಪಡಿಸಿದ್ದರು.

    ವಿಚಾರಣೆ ವೇಳೆ ಬಾತುಕೋಳಿ ಸಾಕಣೆದಾರ ಹುಡುಗ ಸಾವನ್ನಪ್ಪಿದ್ದಾನೆ ಮತ್ತು ಆತನನ್ನ ಕಾಂಚಿಪುರಂನಲ್ಲಿರುವ ತನ್ನ ಅತ್ತೆಯ ಮನೆಯ ಬಳಿ ರಹಸ್ಯವಾಗಿ ಸಮಾಧಿ ಮಾಡಿರುವುದಾಗಿ ಒಪ್ಪಿಕೊಂಡಿದ್ದಾನೆ. ನಂತರ ಈ ಪ್ರಕರಣದಲ್ಲಿ ಆರೋಪಿಗೆ ಸಹಕರಿಸಿದ್ದ ಬಾತುಕೋಳಿ ಸಾಗಣೆದಾರನ ಪತ್ನಿ, ಮಗನನ್ನೂ ಬಂಧಿಸಿ, ಜೀತ ಪದ್ಧತಿ (ನಿರ್ಮೂಲನೆ) ಕಾಯ್ದೆ, ಬಾಲ ಕಾರ್ಮಿಕ ಕಾಯ್ದೆ, ಬಾಲ ನ್ಯಾಯ ಕಾಯ್ದೆ, ಎಸ್‌ಸಿ/ಎಸ್‌ಟಿ ದೌರ್ಜನ್ಯ ತಡೆ ಕಾಯ್ದೆ ಮತ್ತು ಭಾರತೀಯ ನ್ಯಾಯ ಸಂಹಿತಾ (ಬಿಎನ್‌ಎಸ್) ವಿವಿಧ ಸೆಕ್ಷನ್‌ಗಳ ಅಡಿಯಲ್ಲಿ ಕೇಸ್‌ ದಾಖಲಿಸಲಾಗಿದೆ. ಮಂಗಳವಾರ ಶವ ಹೊರತೆಗೆದು ಮರಣೋತ್ತರ ಪರೀಕ್ಷೆ ನಡೆಸಲಾಗಿದೆ.

    ಯಾನಾಡಿ ಬುಡಕಟ್ಟು ಜನಾಂಗದವರು ಜೀತಪದ್ದತಿಗೆ ಹೆಚ್ಚು ಗುರಿಯಾಗುತ್ತಿದ್ದಾರೆ. ಇತ್ತೀಚೆಗೆ ಈ ಸಮುದಾಯದ 50 ಜನರನ್ನ ರಕ್ಷಣೆ ಮಾಡಲಾಗಿದೆ ಎಂದು ವರದಿಗಳು ತಿಳಿಸಿವೆ. ಇದನ್ನೂ ಓದಿ: ವಿಧಾನಸೌಧ ಗೈಡೆಡ್ ಟೂರ್‌ಗೆ ಭಾನುವಾರ ಚಾಲನೆ – ಜೂ.1ರಿಂದ ಸಾರ್ವಜನಿಕರಿಗೆ ಪ್ರವೇಶ, ಶುಲ್ಕ ಪ್ರಕಟ

  • ಬ್ಯಾನರ್‌ ಕಟ್ಟುತ್ತಿದ್ದಾಗ ವಿದ್ಯುತ್‌ ಶಾಕ್‌ – ನಟ ಸೂರ್ಯನ ಅಭಿಮಾನಿಗಳು ಸಾವು!

    ಬ್ಯಾನರ್‌ ಕಟ್ಟುತ್ತಿದ್ದಾಗ ವಿದ್ಯುತ್‌ ಶಾಕ್‌ – ನಟ ಸೂರ್ಯನ ಅಭಿಮಾನಿಗಳು ಸಾವು!

    ಅಮರಾವತಿ: ತಮಿಳು ಚಿತ್ರರಂಗದ ನಟ ಸೂರ್ಯ (Actor Surya) ಅವರ ಹುಟ್ಟುಹಬ್ಬದ ಬ್ಯಾನರ್‌ ಕಟ್ಟುತ್ತಿದ್ದ ವೇಳೆ ವಿದ್ಯುತ್‌ ಸ್ಪರ್ಶಿಸಿ ಇಬ್ಬರು ಅಭಿಮಾನಿಗಳು ಸಾವನ್ನಪ್ಪಿರುವ ಘಟನೆ ಆಂಧ್ರಪ್ರದೇಶದಲ್ಲಿ (Andhra Pradesh) ನಡೆದಿದೆ.

    ಆಂಧ್ರಪ್ರದೇಶದ ಪಲ್ನಾಡು ಜಿಲ್ಲೆಯ ಮೋಪುಲವಾರಿಪಾಲೆಂ ಗ್ರಾಮದಲ್ಲಿ ನರಸರಾವ್‌ ಪೇಟೆ ಮಂಡಲದ ನಕ್ಕಾ ವೆಂಕಟೇಶ್‌ ಮತ್ತು ಪೋಲೂರಿ ಸಾಯಿ ಹೆಸರಿನ ಅಭಿಮಾನಿಗಳಿಬ್ಬರು ಸಾವನ್ನಪ್ಪಿರುವುದಾಗಿ ಪೊಲೀಸರು (Andhra Police) ತಿಳಿಸಿದ್ದಾರೆ. ಇದನ್ನೂ ಓದಿ: ವಿದೇಶಿ ಪ್ರಜೆಯಿಂದ 5,000 ರೂ. ಪಡೆದು ರಶೀದಿ ಕೊಡದೇ ಯಾಮಾರಿಸಿದ್ದ ಟ್ರಾಫಿಕ್‌ ಪೊಲೀಸ್‌ ಅಮಾನತು

    ಪೊಲೀಸರ ಪ್ರಕಾರ, ಬ್ಯಾನರ್‌ ಕಟ್ಟುತ್ತಿದ್ದ ಇಬ್ಬರೂ ನಟ ಸೂರ್ಯ ಅವರ ಅಭಿಮಾನಿಗಳು. ಅವರ ಹುಟ್ಟುಹಬ್ಬಕ್ಕೆ ಬ್ಯಾನರ್‌ ಕಟ್ಟುತ್ತಿದ್ದರು. ಈ ವೇಳೆ ಫ್ಲೆಕ್ಸ್‌ನ ಕಬ್ಬಿಣದ ರಾಡ್‌ ಓವರ್ಹೆಡ್‌ ವಿದ್ಯುತ್‌ ತಂತಿಗೆ ತಗುಲಿ ದುರಂತ ಸಂಭವಿಸಿದೆ. ಇಬ್ಬರು ಯುವಕರೂ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಇಬ್ಬರೂ ನರಸರಾವ್‌ಪೇಟೆಯ ಖಾಸಗಿ ಪದವಿ ಕಾಲೇಜಿನಲ್ಲಿ 2ನೇ ವರ್ಷದಲ್ಲಿ ವ್ಯಾಸಂಗ ಮಾಡುತ್ತಿದ್ದರು. ಮೃತದೇಹಗಳನ್ನ ನರಸರಾವ್‌ಪೇಟೆ ಸರ್ಕಾರಿ ಆಸ್ಪತ್ರೆಗೆ ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದೆ ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ಮುದ್ದಿನ ನಾಯಿ ನಾಪತ್ತೆ – ಭದ್ರತಾ ಸಿಬ್ಬಂದಿ ಅಮಾನತು ಮಾಡುವಂತೆ ಪೊಲೀಸ್ ಅಧಿಕಾರಿಗೆ ಪತ್ರ ಬರೆದ ನ್ಯಾಯಾಧೀಶ

    ಈ ನಡುವೆ ಮೃತ ಪೋಲೂರಿ ಸಾಯಿ ಅವರ ಸಹೋದರಿ ಅನನ್ಯಾ ತನ್ನ ಅಣ್ಣನ ಸಾವಿಗೆ ತಾನೇ ಕಾರಣ ಎಂಬುದಾಗಿ ಮರುಕ ವ್ಯಕ್ತಪಡಿಸಿದ್ದಾಳೆ. ಕಾಲೇಜಿಗೆ ಸಾಕಷ್ಟು ಶುಲ್ಕ ಕಟ್ಟುತ್ತಿದ್ದೇವೆ. ಕಾಲೇಜಿಗೆ ಸೇರುವ ಮುನ್ನವೇ ವಿದ್ಯಾರ್ಥಿಗಳಿಗೆ ಭದ್ರತೆ, ನಿಗಾ ಇಡುವುದಾಗಿ ಭರವಸೆ ನೀಡಿದ್ದರು. ಆದ್ರೆ ಕಾಲೇಜು ಹಾಸ್ಟೆಲ್‌ನಲ್ಲಿರುವ ವಿದ್ಯಾರ್ಥಿಗಳ ರಕ್ಷಣೆ, ನಿಗಾ ಇಡುತ್ತಿಲ್ಲ. ನಾವು ದಿನಗೂಲಿ ನೌಕರರು, ಕಾಲೇಜು ಶುಲ್ಕ ಕಟ್ಟಲು ಅಣ್ಣ ಪಾರ್ಟ್‌ ಟೈಂ ಕೆಲಸ ಮಾಡುತ್ತಿದ್ದ. ನನಗಾಗಿ ಶುಲ್ಕ ಕಟ್ಟಲು ಕೆಲಸ ಮಾಡುತ್ತಿದ್ದ ವೇಳೆ ನನ್ನ ಅಣ್ಣ ಸಾವನ್ನಪ್ಪಿದ್ದಾನೆ ಎಂಬುದಾಗಿ ಹೇಳಿಕೊಂಡಿದ್ದಾಳೆ.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಕರ್ನಾಟಕ ರೈತರಿಗೆ ಆಂಧ್ರ ಪೊಲೀಸರಿಂದ ಎಚ್ಚರಿಕೆ

    ಕರ್ನಾಟಕ ರೈತರಿಗೆ ಆಂಧ್ರ ಪೊಲೀಸರಿಂದ ಎಚ್ಚರಿಕೆ

    – ಎಚ್‍ಎಲ್‍ಸಿ/ ಎಲ್‍ಎಲ್‍ಸಿ ಕಾಲುವೆ ನೀರು ಬಳಸಿ ಭತ್ತ ನಾಟಿ ಮಾಡದಂತೆ ಎಚ್ಚರಿಕೆ

    ಬಳ್ಳಾರಿ: ಎಚ್‍ಎಲ್‍ಸಿ ( ತುಂಗಭದ್ರ ಮೇಲ್ದಂಡೆ ಕಾಲುವೆ)/ ಎಲ್‍ಎಲ್‍ಸಿ ( ತುಂಗಭದ್ರ ಕೆಳದಂಡೆ ಕಾಲುವೆ) ನೀರು ಬಳಸಿ ಭತ್ತ ನಾಟಿ ಮಾಡಬಾರದು, ಪೊಲೀಸರ ಮಾತು ಮೀರಿ ನಾಟಿ ಮಾಡಿದರೆ ಅವರ ವಿರುದ್ಧ ಕೇಸ್ ದಾಖಲಿಸುತ್ತೇವೆ ಎಂದು ಆಂಧ್ರ ಪೊಲೀಸರು ಕರ್ನಾಟಕ ಗಡಿಭಾಗಗಳಲ್ಲಿ ಡಂಗೂರ ಸಾರಿಸುವ ಮೂಲಕ ರೈತರಿಗೆ ಎಚ್ಚರಿಕೆ ನೀಡಿದ್ದಾರೆ.

    ಬಳ್ಳಾರಿ ಜಿಲ್ಲೆಯ ನಾಲ್ಕು ತಾಲೂಕುಗಳ ಮುಖಾಂತರ ಆಂಧ್ರಕ್ಕೆ ಎಲ್‍ಎಲ್‍ಸಿ ಕಾಲುವೆ ನೀರು ಹರಿಯುತ್ತದೆ. ಜಿಲ್ಲೆಯ ಕಂಪ್ಲಿ, ಕುರುಗೋಡು, ಸಿರಗುಪ್ಪ ತಾಲೂಕಿನ ಗ್ರಾಮಗಳಿಗೆ ನೇರವಾಗಿ ಆಂಧ್ರ ಪೊಲೀಸರೇ ತೆರಳಿ ಎಚ್‍ಎಲ್‍ಸಿ/ ಎಲ್‍ಎಲ್‍ಸಿ ಕಾಲುವೆ ನೀರು ಬಳಸಿ ಭತ್ತ ನಾಟಿ ಮಾಡಬಾರದು, ಭತ್ತ ನಾಟಿ ಮಾಡಿದ್ರೆ ಅಂತವರ ಮೇಲೆ ಕೇಸ್ ದಾಖಲಿಸುತ್ತೇವೆ. ಆಂಧ್ರ ಪೊಲೀಸರ ಈ ನಡೆ ರಾಜ್ಯದ ರೈತರಲ್ಲಿ ಆತಂಕ ಸೃಷ್ಟಿಸಿದೆ.

    ತುಂಗಭದ್ರ ನೀರು ನಿರ್ವಹಣಾ ಮಂಡಳಿ ಇತ್ತೀಚೆಗೆ ಕೆಳ ಮಟ್ಟದ ಕಾಲುವೆಗಳಿಗೆ ಎಪ್ರಿಲ್ 1 ರವರೆಗೆ ನೀರು ಬಿಡುವುದಾಗಿ ಪ್ರಕಟಿಸಿದೆ. ಆದ್ರೆ ಈಗ ಕಾಲುವೆ ವ್ಯಾಪ್ತಿಯ ಹತ್ತಾರು ಗ್ರಾಮಗಳಲ್ಲಿ ಆಂಧ್ರ ಪೊಲೀಸರ ಬಿಗಿ ಭದ್ರತೆ ಜೊತೆಗೆ ತಮಟೆ ಬಾರಿಸಿ ಕಾಲುವೆ ನೀರು ವ್ಯವಸಾಯಕ್ಕೆ ಬಳಸದಂತೆ ಡಂಗೂರ ಸಾರಿದ್ದರಿಂದ ರಾಜ್ಯ ಗಡಿಭಾಗದ ರೈತರು ಇಕ್ಕಟ್ಟಿನ ಪರಿಸ್ಥಿತಿಗೆ ಸಿಲುಕಿದ್ದಾರೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv