Tag: Andhra Pradesh CM

  • ದಕ್ಷಿಣ ಭಾರತ ರಾಜ್ಯಗಳ ಜನರು ಹೆಚ್ಚಿನ ಮಕ್ಕಳನ್ನು ಹೊಂದಬೇಕು: ಆಂಧ್ರ ಸಿಎಂ ಕರೆ

    ದಕ್ಷಿಣ ಭಾರತ ರಾಜ್ಯಗಳ ಜನರು ಹೆಚ್ಚಿನ ಮಕ್ಕಳನ್ನು ಹೊಂದಬೇಕು: ಆಂಧ್ರ ಸಿಎಂ ಕರೆ

    – ವೃದ್ಧರ ಸಂಖ್ಯೆ ಹೆಚ್ಚಳಕ್ಕೆ ಕಳವಳ ವ್ಯಕ್ತಪಡಿಸಿದ ಚಂದ್ರಬಾಬು ನಾಯ್ಡು

    ಅಮರಾವತಿ: ದಕ್ಷಿಣ ಭಾರತ ರಾಜ್ಯಗಳ ಜನರು ಹೆಚ್ಚಿನ ಮಕ್ಕಳನ್ನು ಹೊಂದಬೇಕು ಎಂದು ಆಂಧ್ರಪ್ರದೇಶದ ಮುಖ್ಯಮಂತ್ರಿ ಎನ್‌.ಚಂದ್ರಬಾಬು ನಾಯ್ಡು (Chandrababu Naidu) ಕರೆ ನೀಡಿದ್ದಾರೆ.

    ವಯಸ್ಸಾದವರ ಸಂಖ್ಯೆ ಹೆಚ್ಚಳದ ಬಗ್ಗೆ ಕಳವಳ ವ್ಯಕ್ತಪಡಿಸಿದ ಸಿಎಂ, ಹೆಚ್ಚಿನ ಮಕ್ಕಳಿರುವ ಕುಟುಂಬಗಳನ್ನು ಪ್ರೋತ್ಸಾಹಿಸಲು ಹೊಸ ಕಾನೂನನ್ನು ಜಾರಿಗೊಳಿಸಲಾಗುವುದು. ಜನಸಂಖ್ಯೆ ನಿರ್ವಹಣೆಯನ್ನು ಜಾರಿಗೆ ತರಲು ರಾಜ್ಯ ಸರ್ಕಾರ ಯೋಜಿಸುತ್ತಿದೆ ಎಂದು ಹೇಳಿದ್ದಾರೆ. ಇದನ್ನೂ ಓದಿ: Wayanad By Eelections| ಪ್ರಿಯಾಂಕಾ ವಿರುದ್ಧ ಸ್ಪರ್ಧಿಸುತ್ತಿರುವ ನವ್ಯಾ ಹರಿದಾಸ್‌ ಯಾರು?

    ಎರಡಕ್ಕಿಂತ ಹೆಚ್ಚು ಮಕ್ಕಳಿರುವವರು ಮಾತ್ರ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಸ್ಪರ್ಧಿಸಲು ಅರ್ಹರಾಗುವ ಕಾನೂನು ತರಲು ರಾಜ್ಯ ಸರ್ಕಾರ ಚಿಂತನೆ ನಡೆಸಿದೆ ಎಂದು ನಾಯ್ಡು ತಿಳಿಸಿದ್ದಾರೆ.

    2 ಕ್ಕಿಂತ ಹೆಚ್ಚು ಮಕ್ಕಳನ್ನು ಹೊಂದಿರುವವರು ಸ್ಥಳೀಯ ಚುನಾವಣೆಯಲ್ಲಿ ಸ್ಪರ್ಧಿಸದಂತೆ ರಾಜ್ಯವು ಈ ಹಿಂದೆ ಕಾನೂನನ್ನು ಅಂಗೀಕರಿಸಿದೆ ಎಂದು ಅವರು ಉಲ್ಲೇಖಿಸಿದ್ದಾರೆ. ನಾವು ಆ ಕಾನೂನನ್ನು ರದ್ದುಗೊಳಿಸಿದ್ದೇವೆ. ಈಗ ಅದನ್ನು ಹಿಂತೆಗೆದುಕೊಳ್ಳಲು ನಾವು ಪರಿಗಣಿಸುತ್ತಿದ್ದೇವೆ. ಹೆಚ್ಚು ಮಕ್ಕಳನ್ನು ಹೊಂದಿರುವ ಕುಟುಂಬಗಳಿಗೆ ಸರ್ಕಾರವು ಹೆಚ್ಚಿನ ಪ್ರಯೋಜನಗಳನ್ನು ಒದಗಿಸಲಿದೆ ಎಂದು ಸ್ಪಷ್ಟಪಡಿಸಿದ್ದಾರೆ. ಇದನ್ನೂ ಓದಿ: ಕಾಶ್ಮೀರದ ಹಲವೆಡೆ ಗ್ರೆನೇಡ್ ದಾಳಿ ನಡೆಸಿದ್ದ ಇಬ್ಬರು ಉಗ್ರರು ಅರೆಸ್ಟ್‌

    ನಾವು 2047 ರ ವರೆಗೆ ಜನಸಂಖ್ಯಾ ಪ್ರಯೋಜನವನ್ನು ಹೊಂದಿದ್ದರೂ, ಆಂಧ್ರ ಸೇರಿದಂತೆ ದಕ್ಷಿಣ ಭಾರತದಲ್ಲಿ ವೃದ್ಧರ ಸಂಖ್ಯೆ ಏರಿಕೆಯಾಗುತ್ತಿದೆ. ಜಪಾನ್, ಚೀನಾ ಮತ್ತು ಯುರೋಪಿಯನ್ ರಾಷ್ಟ್ರಗಳಂತಹ ಅನೇಕ ದೇಶಗಳು ಈ ಸಮಸ್ಯೆಯೊಂದಿಗೆ ಹೋರಾಡುತ್ತಿವೆ. ಹೆಚ್ಚಿನ ವಯಸ್ಸಾದ ಜನಸಂಖ್ಯೆಯನ್ನು ಹೊಂದಿವೆ. ದಕ್ಷಿಣದಲ್ಲಿ ಭಾರತದ ಯುವಜನರು ಹೆಚ್ಚಿನ ಸಂಖ್ಯೆಯಲ್ಲಿ ದೇಶದ ಇತರ ಭಾಗಗಳಿಗೆ ಅಥವಾ ವಿದೇಶಗಳಿಗೆ ವಲಸೆ ಹೋಗುವುದರಿಂದ ಸಮಸ್ಯೆ ಉಲ್ಬಣಗೊಂಡಿದೆ ಎಂದು ಸಿಎಂ ತಿಳಿಸಿದ್ದಾರೆ.

  • ಆಂಧ್ರ ಸರ್ಕಾರದಿಂದ ದೆಹಲಿ ಪ್ರತಿಭಟನೆಗೆ ಜನರನ್ನ ಕೊಂಡ್ಯೊಯಲು 1.12 ಕೋಟಿ ರೂ. ಖರ್ಚು

    ಆಂಧ್ರ ಸರ್ಕಾರದಿಂದ ದೆಹಲಿ ಪ್ರತಿಭಟನೆಗೆ ಜನರನ್ನ ಕೊಂಡ್ಯೊಯಲು 1.12 ಕೋಟಿ ರೂ. ಖರ್ಚು

    ಹೈದರಾಬಾದ್: ಕೇಂದ್ರ ಸರ್ಕಾರದ ವಿರುದ್ಧ ಆಂಧ್ರ ಪ್ರದೇಶ ಸಿಎಂ ಚಂದ್ರಬಾಬು ನಾಯ್ಡು ಅವರು ಫೆ.11 ರಂದು ನಡೆಸಲು ಉದ್ದೇಶಿಸಿರುವ ಪ್ರತಿಭಟನೆಗೆ ಜನರನ್ನು ಕೊಂಡ್ಯೊಯಲು ಬರೋಬ್ಬರಿ 1.23 ಕೋಟಿ ರೂ. ಹಣವನ್ನು ಬಿಡುಗಡೆ ಮಾಡಿದೆ.

    ಆಂಧ್ರ ಪ್ರದೇಶ ಆಡಳಿತಾತ್ಮಕ ಇಲಾಖೆ ರಾಜ್ಯದಿಂದ ರೈಲುಗಳಲ್ಲಿ ಜನರನ್ನು ಕರೆದುಕೊಂಡು ಹೋಗಲು ಹಣವನ್ನು ಬಿಡುಗಡೆ ಮಾಡಿದೆ. ಅನಂತಪುರಂ, ಶ್ರೀಕಾಕುಳಂ ಸೇರಿದಂತೆ ವಿವಿಧ ಜಿಲ್ಲೆಗಳಿಂದ ಪಕ್ಷದ ಕಾರ್ಯಕರ್ತರು, ವಿವಿಧ ಸಂಘಟನೆಗಳ ಸ್ವಯಂ ಸೇವಕರನ್ನು ದೆಹಲಿಗೆ ಕರೆತರಲಿದ್ದು, ಫೆ.11 ರಂದು ‘ದೀಕ್ಷಾ’ ಹೆಸರಿನಲ್ಲಿ ಬೃಹತ್ ಪ್ರತಿಭಟನೆಯನ್ನು ಚಂದ್ರಬಾಬು ನಾಯ್ಡು ಅವರು ಕೈಗೊಳ್ಳಲಿದ್ದಾರೆ.

    ಆಂಧ್ರ ಪ್ರದೇಶದಿಂದ ಹೊರಡುವ ಎರಡು ರೈಲುಗಳು ಭಾನುವಾರ 10 ಗಂಟೆಗೆ ದೆಹಲಿಯನ್ನು ತಲುಪಲಿದ್ದು, ಆಂಧ್ರ ಪ್ರದೇಶ ರಾಜ್ಯಕ್ಕೆ ವಿಶೇಷ ಸ್ಥಾನಮಾನ ಆಗ್ರಹಿಸಿ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ. 2014ರಲ್ಲಿ ಆಂಧ್ರಪ್ರದೇಶ ವಿಭಜನೆ ಕಾಯ್ದೆ ಆನ್ವಯ ಕೇಂದ್ರ ಸರ್ಕಾರ ತಮಗೇ ನೀಡಿರುವ ಆಶ್ವಾಸನೆಗಳನ್ನು ಈಡೇರಿಸಬೇಕು ಎಂಬುವುದು ಚಂದ್ರಬಾಬು ನಾಯ್ಡು ಸರ್ಕಾರದ ಪ್ರಮುಖ ಬೇಡಿಕೆ ಆಗಿದೆ.

    ಕೇವಲ ಚಂದ್ರಬಾಬು ನಾಯ್ಡು ಅವರ ತೆಲುಗು ದೇಶಂ ಪಕ್ಷ ಮಾತ್ರವಲ್ಲದೇ ವಿರೋಧಿ ಪಕ್ಷಗಳ ಸಹಕಾರವನ್ನು ಕೂಡ ಚಂದ್ರಬಾಬು ನಾಯ್ಡು ಅವರು ಕೋರಿದ್ದು, ಬಿಜೆಪಿ ಪಕ್ಷ ಹೊರತು ಪಡಿಸಿ ಉಳಿದೆಲ್ಲಾ ಪಕ್ಷಗಳು ಕೂಡ ಪ್ರತಿಭಟನೆಯಲ್ಲಿ ಭಾಗವಹಿಸುವ ನಿರೀಕ್ಷೆ ಇದೆ. ಅಂದಹಾಗೇ ಕಳೆದ ವರ್ಷವಷ್ಟೇ ಟಿಡಿಪಿ ಪಕ್ಷ ಎನ್‍ಡಿಎ ಒಕ್ಕೂಟದಿಂದ ಹೊರ ಬಂದಿತ್ತು.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

  • ಮೋದಿ ಬೆಂಬಲಿಸುವ ನಾಯಕರಿಗೆ ಸಿಬಿಐ ಭಯವಿಲ್ಲ- ಚಂದ್ರಬಾಬು ನಾಯ್ಡು

    ಮೋದಿ ಬೆಂಬಲಿಸುವ ನಾಯಕರಿಗೆ ಸಿಬಿಐ ಭಯವಿಲ್ಲ- ಚಂದ್ರಬಾಬು ನಾಯ್ಡು

    ಹೈದರಾಬಾದ್: ಪ್ರಧಾನಿ ನರೇಂದ್ರ ಮೋದಿ ತಮ್ಮನ್ನು ಬೆಂಬಲಿಸುವ ಪಕ್ಷದ ನಾಯಕರನ್ನು ರಕ್ಷಿಸುತ್ತಾರೆ ಎಂದು ಆಂಧ್ರಪ್ರದೇಶದ ಸಿಎಂ ಚಂದ್ರಬಾಬು ನಾಯ್ಡು ಆರೋಪಿಸಿದ್ದಾರೆ.

    ಆಂಧ್ರ ಪ್ರದೇಶದ ಅಮರಾವತಿಯಲ್ಲಿ ಮಾತನಾಡಿ ಅವರು, ಕೆ.ಚಂದ್ರಶೇಖರ್ ರಾವ್ ನಿವಾಸದ ಮೇಲೆ ದಾಳಿ ಮಾಡಲು ಸಿಬಿಐ ತಂಡವು ಹೈದ್ರಾಬಾದ್‍ಗೆ ಬಂದಿತ್ತು. ಆಗ ಕೆ.ಚಂದ್ರಶೇಖರ್ ರಾವ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಬೆಂಬಲ ನೀಡುತ್ತಿದ್ದಂತೆ ಸಿಬಿಐ ತಂಡವು ವಾಪಾಸ್ ಆಗಿದೆ. ಜೊತೆಗೆ ಕೆ.ಚಂದ್ರಶೇಖರ್ ರಾವ್ ಅವರ ಮೇಲಿರುವ ಇಎಸ್‍ಐ ಆಸ್ಪತ್ರೆಯ ಹಗರಣವನ್ನು ಮುಚ್ಚಿ ಹಾಕಲಾಗುತ್ತಿದೆ ಎಂದು ದೂರಿದ್ದಾರೆ.

    ರಾಜಕೀಯ ಪಕ್ಷಗಳನ್ನು ತಮ್ಮ ಮುಂದೆ ಶರಣಾಗುವಂತೆ ಪ್ರಧಾನಿ ಮೋದಿ ಅವರು ಪ್ಲಾನ್ ಮಾಡುತ್ತಿದ್ದಾರೆ. ತಮ್ಮ ವಿರುದ್ಧ ನಿಲ್ಲುವ ರಾಜಕೀಯ ನಾಯಕರ ವಿರುದ್ಧ ಸಿಬಿಐ ಅಸ್ತ್ರವನ್ನು ಪ್ರಯೋಗಿಸುತ್ತಾರೆ. ಹೀಗಾಗಿ ತಮ್ಮ ಮುಂದೆ ಶರಣಾಗುವ ನಾಯಕರನ್ನು ರಕ್ಷಿಸುತ್ತಾರೆ ಎಂದು ಚಂದ್ರಬಾಬು ನಾಯ್ಡು ಕಿಡಿಕಾರಿದ್ದಾರೆ.

    ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ನೇತೃತ್ವದ ಸರ್ಕಾದಲ್ಲಿ ಕೆ.ಚಂದ್ರಶೇಖರ್ ರಾವ್ ಅವರು 2004ರಿಂದ 2006ರವರೆಗೆ ಕಾರ್ಮಿಕ ಹಾಗೂ ಉದ್ಯೋಗ ಸಚಿವರಾಗಿದ್ದರು. ಈ ವೇಳೆ ಅವರ ವಿರುದ್ಧ ಇಎಸ್‍ಐ ಆಸ್ಪತ್ರೆಯ ಬಹುಕೋಟಿ ಹಗರಣ ದಾಖಲಾಗಿತ್ತು ಎಂದರು.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv