ಬೀದರ್: ರಾಜ್ಯದ ಇತಿಹಾಸದಲ್ಲೇ ಮೊಟ್ಟ ಮೊದಲ ಬಾರಿಗೆ ಎನ್ಸಿಬಿ (NCB) ಹಾಗೂ ಬೀದರ್ ಪೊಲೀಸರು ಭರ್ಜರಿ ಕಾರ್ಯಾಚರಣೆ ಮಾಡಿ ಬರೋಬ್ಬರಿ 15.50 ಕೋಟಿ ರೂ. ಮೌಲ್ಯದ 1,596 ಕೆಜಿ ಗಾಂಜಾ (Cannabis) ಜಪ್ತಿ ಮಾಡಿದ್ದಾರೆ.
ಲಾರಿಯಲ್ಲಿ ಅಕ್ರಮವಾಗಿ ಆಂಧ್ರಪ್ರದೇಶದಿಂದ (Andhra Pradesh) ಬೀದರ್ (Bidar) ಮುಖಾಂತರ ಮಹಾರಾಷ್ಟ್ರಕ್ಕೆ (Maharashtra) ಸಾಗಿಸುತ್ತಿದ್ದ 1,596 ಕೆ.ಜಿ ಗಾಂಜಾವನ್ನು ಪೊಲೀಸರು ಜಪ್ತಿ ಮಾಡಿದ್ದಾರೆ. ಖಚಿತ ಮಾಹಿತಿಯ ಮೇರೆಗೆ ಬೀದರ್ ಜಿಲ್ಲೆಯ ಔರಾದ್ ತಾಲೂಕಿನ ವನಮಾರಪ್ಪಳ್ಳಿ ಚೆಕ್ಪೋಸ್ಟ್ ಬಳಿ ಎನ್ಸಿಬಿ ಹಾಗೂ ಬೀದರ್ ಪೊಲೀಸರು ದಾಳಿ ಮಾಡಿ ಭರ್ಜರಿ ಬೇಟೆಯಾಡಿದ್ದಾರೆ. ಇದನ್ನೂ ಓದಿ: ಸಿಲಿಂಡರ್ ಸ್ಫೋಟ – ಕಾರ್ಮಿಕರ ಕಾಲೋನಿ ಮನೆಗಳಿಗೆ ಬೆಂಕಿ
ದಾಳಿ ವೇಳೆ 1,596 ಕೆ.ಜಿಯ ಅಕ್ರಮ ಗಾಂಜಾ ಪ್ಯಾಕೆಟ್ಗಳು ಪತ್ತೆಯಾಗಿದ್ದು, ಅಕ್ರಮವಾಗಿ ಗಾಂಜಾ ಸಾಗಾಟ ಮಾಡುತ್ತಿದ್ದ ಡ್ರೈವರ್, ಕ್ಲೀನರ್ನನ್ನು ಬಂಧಿಸಲಾಗಿದೆ. ಇಬ್ಬರು ಆರೋಪಿಗಳನ್ನು ಬಂಧಿಸಿ ಎನ್ಸಿಬಿ ಪೊಲೀಸರು ವಿಚಾರಣೆ ಮಾಡುತ್ತಿದ್ದಾರೆ. ಈ ಕುರಿತು ಔರಾದ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಇದನ್ನೂ ಓದಿ: ರಾಮೇಶ್ವರಂ ಕೆಫೆ ಬ್ಲಾಸ್ಟ್ ಪ್ರಕರಣ- ಕಲಬುರಗಿಯಲ್ಲೇ ಬೀಡುಬಿಟ್ಟಿರೋ NIA
ಅಮರಾವತಿ: ಆಂಧ್ರಪ್ರದೇಶ ವಿಧಾನಸಭೆಯ (Andhra Pradesh Assembly) ಸ್ಪೀಕರ್ ತಮ್ಮಿನೇನಿ ಸೀತಾರಾಮ್ ಅವರು ಪಕ್ಷಾಂತರದ ವಿರುದ್ಧ ನಿರ್ಣಾಯಕ ನಿಲುವು ತೆಗೆದುಕೊಂಡಿದ್ದು, 8 ಶಾಸಕರನ್ನು ಅನರ್ಹಗೊಳಿಸಿದ್ದಾರೆ.
ಯುವಜನ ಶ್ರಮಿಕ ರೈತ ಕಾಂಗ್ರೆಸ್ ಪಕ್ಷ (ವೈಎಸ್ಆರ್ಸಿಪಿ) ಸಲ್ಲಿಸಿದ ಅರ್ಜಿಯ ಮೇರೆಗೆ ಮುಖ್ಯಮಂತ್ರಿ ಕಚೇರಿ (ಸಿಎಂಒ) ಅಧಿಕೃತ ಪ್ರಕಟಣೆಯ ಪ್ರಕಾರ, ಅನರ್ಹಗೊಂಡ ಸದಸ್ಯರಲ್ಲಿ ಆನಂ ರಾಮನಾರಾಯಣ ರೆಡ್ಡಿ, ಮೇಕಪತಿ ಚಂದ್ರಶೇಖರ್ ರೆಡ್ಡಿ, ಕೋಟಂ ರೆಡ್ಡಿ ಶ್ರೀಧರ್ ರೆಡ್ಡಿ ಮತ್ತು ಉಂಡವಳ್ಳಿ ಶ್ರೀದೇವಿ ಸೇರಿದ್ದಾರೆ. ಇದನ್ನೂ ಓದಿ: ರಾಹುಲ್ಗೆ ಶಾಕ್ – ವಯನಾಡಿನಲ್ಲಿ ಸಿಪಿಐ ಅಭ್ಯರ್ಥಿ ಕಣಕ್ಕೆ
ಮುಖ್ಯಮಂತ್ರಿ ಕಚೇರಿ ಪ್ರಕಟಣೆ ಪ್ರಕಾರ, ಉಲ್ಲೇಖಿಸಲಾದ ಶಾಸಕರ ವಿರುದ್ಧ ವೈಎಸ್ಆರ್ಸಿಪಿಯ ಅರ್ಜಿಯಲ್ಲಿ ಸಲ್ಲಿಸಲಾದ ಆರೋಪಗಳು ಮತ್ತು ಸಾಕ್ಷ್ಯಗಳನ್ನು ಕೂಲಂಕಷವಾಗಿ ಪರಿಶೀಲಿಸಿದ ನಂತರ ಅನರ್ಹತೆ ನಿರ್ಧಾರಕ್ಕೆ ಬರಲಾಗಿದೆ.
ಅನರ್ಹಗೊಂಡ ಸದಸ್ಯರು ಪಕ್ಷದ ಶಿಸ್ತು ಉಲ್ಲಂಘಿಸಿದ್ದಾರೆ. ಪಕ್ಷದ ತತ್ವಗಳಿಗೆ ವಿರುದ್ಧವಾದ ಚಟುವಟಿಕೆಗಳಲ್ಲಿ ತೊಡಗಿದ್ದಾರೆ ಎಂದು ಆರೋಪಿಸಲಾಗಿದೆ. ಇದಲ್ಲದೇ, ತೆಲುಗು ದೇಶಂ ಪಕ್ಷ (ಟಿಡಿಪಿ) ಸಲ್ಲಿಸಿದ ಅರ್ಜಿಯ ಆಧಾರದ ಮೇಲೆ ಮದ್ದಲಗಿರಿ, ಕರಣಂ ಬಲರಾಮ್, ವಲ್ಲಭನೇನಿ ವಂಶಿ ಮತ್ತು ವಾಸುಪಲ್ಲಿ ಗಣೇಶ್ ಅನರ್ಹಗೊಂಡಿದ್ದಾರೆ. ಟಿಡಿಪಿ ಕೂಡ ತನ್ನ ಶಾಸಕರ ವಿರುದ್ಧ ಇದೇ ಆರೋಪ ಮಾಡಿದೆ. ಇದನ್ನೂ ಓದಿ: ಜಾರ್ಖಂಡ್ನ ಮಾಜಿ ಸಿಎಂ ಮಧು ಕೋಡ ಪತ್ನಿ, ಕಾಂಗ್ರೆಸ್ ಸಂಸದೆ ಗೀತಾ ಕೋಡಾ ಬಿಜೆಪಿ ಸೇರ್ಪಡೆ
ಅಮರಾವತಿ: ಆಂಧ್ರಪ್ರದೇಶದ ಸಿಎಂ ಜಗನ್ ಮೋಹನ್ ರೆಡ್ಡಿ (Jagan Mohan Reddy) ಅವರು ತಮ್ಮ ಚಿಕ್ಕಪ್ಪ ವೈ.ಎಸ್ ವಿವೇಕಾನಂದ ರೆಡ್ಡಿ ಅವರನ್ನು ಹತ್ಯೆ ಮಾಡಿದ್ದಾರೆ ಎಂದು ತೆಲುಗು ದೇಶಂ ಪಕ್ಷದ (TDP) ಪ್ರಧಾನ ಕಾರ್ಯದರ್ಶಿ ನಾರಾ ಲೋಕೇಶ್ (Nara Lokesh) ಗಂಭೀರ ಆರೋಪ ಮಾಡಿದ್ದಾರೆ.
ಆಂಧ್ರಪ್ರದೇಶದ (Andhra Pradesh) ಶ್ರೀಕಾಕುಳಂ ಜಿಲ್ಲೆಯಲ್ಲಿ ರ್ಯಾಲಿಯನ್ನುದ್ದೇಶಿಸಿ ಮಾತನಾಡಿದ ಅವರು, ಜಗನ್ ತಮ್ಮ ಚಿಕ್ಕಪ್ಪನನ್ನ (ಬಾಬಾಯ್) ಹತ್ಯೆ ಮಾಡಿದ್ದಾರೆ. ಇನ್ನಷ್ಟು ಕುಟುಂಬಗಳನ್ನ ಕೊಲ್ಲಲು ಅವರು ಸಿದ್ಧರಿದ್ದಾರೆ? ಅಮರನಾಥ್ ಗೌಡ ಅವರಂತಹ ಹಿಂದುಳಿದ ವರ್ಗದ ನಾಯಕ ಮತ್ತು ಡಾ.ಸುಧಾಕರ್ ಅವರಂತಹ ದಲಿತರನ್ನು ಹತ್ಯೆ ಮಾಡಲು ಸಿದ್ಧರಿದ್ದಾರಾ? ಈ ರಾಜ್ಯವನ್ನು ನಾಶ ಮಾಡೋದಕ್ಕಾಗಿಯೇ ನಿಂತಿದ್ದೀರಾ ರೆಡ್ಡಿಯವರೇ? ಎಂದು ಪ್ರಶ್ನೆಗಳ ಮಳೆ ಸುರಿಸಿದ್ದಾರೆ. ಇದನ್ನೂ ಓದಿ: ಪಾಕಿಸ್ತಾನಿಯರು ಭಾರತದ ಅತಿದೊಡ್ಡ ಆಸ್ತಿ – ಕಾಂಗ್ರೆಸ್ ಮಾಜಿ ಸಚಿವ
ಜಗನ್ ರೆಡ್ಡಿ ನೇತೃತ್ವದ ವೈಎಸ್ಆರ್ಸಿಪಿ ಸರ್ಕಾರ ತನ್ನ ತಂದೆಯಾಗಿರುವ ಟಿಡಿಪಿ ಮುಖ್ಯಸ್ಥ ಎನ್.ಚಂದ್ರಬಾಬು ನಾಯ್ಡು (Chandrababu Naidu) ಅವರನ್ನ ಕಾನೂನು ಬಾಹಿರವಾಗಿ ಬಂಧಿಸಿ, 53 ದಿನಗಳ ಕಾಲ ಜೈಲಿನಲ್ಲಿರಿಸಿದೆ ಎಂದು ನಾರಾ ಲೋಕೇಶ್ ವಾಗ್ದಾಳಿ ನಡೆಸಿದ್ದಾರೆ. ಇದನ್ನೂ ಓದಿ: 200 ಸಂಘಟನೆಗಳು, 20,000 ರೈತರಿಂದ ನಾಳೆ `ದೆಹಲಿ ಚಲೋ’ – ದೆಹಲಿ ಗಡಿ ಬಂದ್!
ಅಷ್ಟೇ ಅಲ್ಲ ಕಳೆದ ನಾಲ್ಕು ವರ್ಷಗಳಲ್ಲಿ ತೆಲುಗು ದೇಶಂ ಪಕ್ಷದ ಕಾರ್ಯಕರ್ತರ ವಿರುದ್ಧ ಕೊಲೆಗೆ ಯತ್ನ & ದೌರ್ಜನ್ಯ ಸೇರಿದಂತೆ 22 ಪ್ರಕರಣಗಳನ್ನ ದಾಖಲಿಸಿದ್ದಾರೆ. ವೈಎಸ್ಆರ್ಸಿಪಿ ಪಕ್ಷದ ಮುಖಂಡರು ಉದ್ದೇಶಪೂರ್ವಕವಾಗಿಯೇ ಟಿಡಿಪಿ ನಾಯಕರಿಗೆ ಕಿರುಕುಳ ನೀಡುತ್ತಿದ್ದಾರೆ. ನಮ್ಮ ಪಕ್ಷದ ಕಾರ್ಯಕರ್ತರನ್ನು ರೆಡ್ಲಿಸ್ಟ್ನಲ್ಲಿ ಇಟ್ಟಿದ್ದಾರೆ ಎಂದರಲ್ಲದೇ, ಭಾರತದಲ್ಲಿ ಆಂಧ್ರಪ್ರದೇಶವನ್ನ ಗಾಂಜಾ ರಾಜಧಾನಿಯನ್ನಾಗಿ ಮಾಡಿದ್ದಾರೆ ಎಂದು ಕಿಡಿ ಕಾರಿದ್ದಾರೆ. ಇದನ್ನೂ ಓದಿ: ಭಾರತಕ್ಕೆ ದೊಡ್ಡ ಗೆಲುವು – ಕತಾರ್ನಲ್ಲಿ ಅರೆಸ್ಟ್ ಆಗಿದ್ದ ನೌಕಾ ಅಧಿಕಾರಿಗಳು ಬಿಡುಗಡೆ, ಸ್ವದೇಶಕ್ಕೆ ವಾಪಸ್
ಅಮರಾವತಿ: ಅಯೋಧ್ಯೆಯಲ್ಲಿ (Ayodhya Ram Mandir) ಬಾಲರಾಮನ ಪ್ರಾಣಪ್ರತಿಷ್ಠೆಯ ಸಮೀಪಿಸುತ್ತಿರುವ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿಯವರು (Narendra Modi) ರಾಮಾಯಣದಲ್ಲಿ (Ramayana) ಮಹತ್ವದ ಸ್ಥಾನ ಪಡೆದಿರುವ ಆಂಧ್ರಪ್ರದೇಶದ (Andhra Pradesh) ಲೇಪಾಕ್ಷಿಯ ವೀರಭದ್ರ ದೇವಸ್ಥಾನಕ್ಕೆ (Lepakshi Veerbhadra Temple) ಭೇಟಿ ನೀಡಿದ್ದಾರೆ.
ಸೀತಾ ಮಾತೆಯನ್ನು ರಾವಣ ಅಪಹರಿಸುವಾಗ ಜಟಾಯು (Jatayu) ಇದೇ ಜಾಗದಲ್ಲಿ ಆತನನ್ನು ಬೆನ್ನಟ್ಟಿ ಹೋರಾಟ ನಡೆಸಿತ್ತು. ಬಳಿಕ ರಾವಣನ ದಾಳಿಯಿಂದ ನೆಲಕ್ಕೆ ಬಿದ್ದು ಸಾಯುವ ಸ್ಥಿತಿಯಲ್ಲಿದ್ದ ಜಟಾಯು ಸೀತಾ ದೇವಿಯನ್ನು ರಾವಣ ಅಪಹರಿಸಿದ ವಿಚಾರವನ್ನು ಶ್ರೀರಾಮನಿಗೆ ತಿಳಿಸಿ ಪ್ರಾಣ ಬಿಟ್ಟಿತ್ತು. ಬಳಿಕ ರಾಮ ಜಟಾಯುವಿನ ಅಂತ್ಯಕ್ರಿಯೆ ನಡೆಸಿ ಮೋಕ್ಷ ಕಲ್ಪಿಸಿದ್ದ ಎಂಬ ಪ್ರತೀತಿ ಇದೆ. ಇದನ್ನೂ ಓದಿ: ಅಯೋಧ್ಯೆ ರಾಮಮಂದಿರದಲ್ಲಿ ಪ್ರಾಣ ಪ್ರತಿಷ್ಠೆ; ಇಂದಿನಿಂದ ಪೂಜಾಕಾರ್ಯ ಆರಂಭ – ಯಾವ ದಿನ ಏನು ಕಾರ್ಯಕ್ರಮ?
ಇನ್ನೂ ಬುಧವಾರ, ಮೋದಿಯವರು ಕೇರಳದ ಗುರುವಾಯೂರು ಮತ್ತು ತ್ರಿಪ್ರಯಾರ್ನ ಶ್ರೀ ರಾಮಸ್ವಾಮಿ ದೇವಾಲಯಗಳಲ್ಲಿ ಪ್ರಾರ್ಥನೆ ಸಲ್ಲಿಸಲಿದ್ದಾರೆ ಎಂದು ಪ್ರಧಾನ ಮಂತ್ರಿ ಕಚೇರಿ ತಿಳಿಸಿದೆ.
ಜ.22 ರಂದು ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಅಯೋಧ್ಯೆಯಲ್ಲಿ ಸಿದ್ಧತೆ ನಡೆಯುತ್ತಿದೆ. ಇನ್ನೂ ಮೈಸೂರಿನ ಶಿಲ್ಪಿ ಅರುಣ್ ಯೋಗಿರಾಜ್ ಅವರು ಕೆತ್ತಿರುವ ವಿಗ್ರಹವನ್ನು ಪ್ರಾಣಪ್ರತಿಷ್ಠೆಗೆ ಆಯ್ಕೆ ಮಾಡಲಾಗಿದೆ. ಈ ಸಮಾರಂಭಕ್ಕೆ ಕೋಟ್ಯಂತರ ರಾಮನ ಭಕ್ತರು ಉತ್ಸಾಹದಿಂದ ಕಾದಿದ್ದಾರೆ. ಈ ಸಮಯದಲ್ಲಿ ದೇಶ ವಿದೇಶಗಳಿಂದ ಲಕ್ಷಾಂತರ ಜನ ಅಯೋಧ್ಯೆಗೆ ತೆರಳುವ ಸಾಧ್ಯತೆ ಇದ್ದು, ಉತ್ತರ ಪ್ರದೇಶ ಸರ್ಕಾರ ಸಕಲ ಸಿದ್ಧತೆಯನ್ನು ಮಾಡಿಕೊಂಡಿದೆ. ದೇವಾಲಯ ಹಾಗೂ ಅಯೋಧ್ಯೆ ನಗರದ ಸುತ್ತಮುತ್ತ ಸೂಕ್ತ ಭದ್ರತೆ ಕೈಗೊಳ್ಳಲಾಗಿದೆ. ಇದನ್ನೂ ಓದಿ: ಅಯೋಧ್ಯೆಯ ರಾಮಮಂದಿರದಲ್ಲಿ ಚಿನ್ನದ ಬಾಗಿಲು ಅಳವಡಿಕೆ ಕಾರ್ಯ ಪೂರ್ಣ
ಬೆಂಗಳೂರು: ರೌದ್ರ ರೂಪ ತಾಳಿದ ಮಿಂಚಾಂಗ್ ಚಂಡ ಮಾರುತಕ್ಕೆ ತಮಿಳುನಾಡು, ಆಂಧ್ರ ಪ್ರದೇಶದಲ್ಲಿ ಜನ ಜೀವನ ಅಸ್ತವ್ಯಸ್ಥಗೊಂಡಿದೆ. ಈ ಬೆನ್ನಲ್ಲೇ ಮುಂದಿನ 24 ಗಂಟೆಗಳಲ್ಲಿ ರಾಜ್ಯದ ಕೆಲ ಭಾಗಗಳಲ್ಲಿ ಭಾರೀ ಮಳೆಯಾಗುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ.
ಮುಂದಿನ 24 ಗಂಟೆಗಳಲ್ಲಿ ರಾಜ್ಯದ ಕೆಲ ಭಾಗಗಳಲ್ಲಿ ಮಳೆ ಸಾಧ್ಯತೆಯಿದೆ. ಬೆಂಗಳೂರಿನ ಕೆಲವೆಡೆ ಸಾಧಾರಣ ಮಳೆಯಾಗಲಿದೆ. ನಗರದಲ್ಲಿಂದು ಗರಿಷ್ಠ 27 ಡಿಗ್ರಿ ಸೆಲ್ಸಿಯಸ್, ಕನಿಷ್ಠ 18 ಡಿಗ್ರಿ ಸೆಲ್ಸಿಯಸ್ ತಾಪಮಾನ ಇರಲಿದೆ. ಮುಂದಿನ 24 ಗಂಟೆಗಳ ನಂತರ ಈ ತಾಪಮಾನ ಬದಲಾಗಲಿದ್ದು, ಗರಿಷ್ಠ ಉಷ್ಣಾಂಶ 24 ಡಿಗ್ರಿ ಸೆಲ್ಸಿಯಸ್ ಮತ್ತು ಕನಿಷ್ಠ ಉಷ್ಣಾಂಶ 19 ಡಿಗ್ರಿ ಸೆಲ್ಸಿಯಸ್ಗೆ ಬರುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ. ಇದನ್ನೂ ಓದಿ: ರಾಜ್ಯ ಸರ್ಕಾರದಿಂದ ಗುಡ್ನ್ಯೂಸ್ – ಮನೆಯ 2ನೇ ಯಜಮಾನರ ಖಾತೆಗೆ ಅನ್ನಭಾಗ್ಯ ಹಣ
ಮಿಚಾಂಗ್ ಚಂಡಮಾರುತದಿಂದ ಕಳೆದ 80 ವರ್ಷಗಳಲ್ಲಿ ಕಂಡು ಕೇಳರಿಯದಂತಹ ಮಳೆಯಾಗಿದೆ. ಬಿರುಗಾಳಿ ಸಹಿತ ಭಾರೀ ಮಳೆಗೆ ತಮಿಳುನಾಡು, ಆಂಧ್ರ ಪ್ರದೇಶದಲ್ಲಿ ಅನೇಕ ರಸ್ತೆಗಳು ಜಲಾವೃತಗೊಂಡಿವೆ. ಬಿಟ್ಟುಬಿಡದೇ ಸುರಿತಿರೋ ಮಳೆಯ ಪರಿಣಾಮ ಪ್ರವಾಹ ಸ್ಥಿತಿ ನಿರ್ಮಾಣವಾಗಿದೆ. ಚೆನ್ನೈನಲ್ಲಿ 6 ಮಂದಿ ಬಲಿಯಾಗಿದ್ದು, ನೀರುಪಾಲಾಗ್ತಿದ್ದ 20ಕ್ಕೂ ಹೆಚ್ಚು ಜನರನ್ನು ರಕ್ಷಣಾ ಪಡೆಗಳು ಕಾಪಾಡಿವೆ. ನಗರದ 14 ರೈಲ್ವೇ ಸಬ್ವೇಗಳು ಬಂದ್ ಆಗಿವೆ. ರೈಲು-ವಿಮಾನ-ರಸ್ತೆ ಸಂಚಾರದಲ್ಲಿ ತೀವ್ರ ವ್ಯತ್ಯಯವಾಗಿವೆ.. ಚೆನ್ನೈ ವಿಮಾನ ನಿಲ್ದಾಣದಲ್ಲಿ ನೀರು ಆವರಿಸಿದೆ. ಪ್ರಮುಖ ರಸ್ತೆಗಳು ಜಲಮಯವಾಗಿವೆ. ಇದನ್ನೂ ಓದಿ: ನಿಮ್ಗೂ ದೇಶದ ಸಂಪತ್ತಿನಲ್ಲಿ ಪಾಲು ಸಿಗಬೇಕು, ಅನ್ಯಾಯ ಆಗೋಕೆ ಬಿಡಲ್ಲ – ಮುಸ್ಲಿಂ ಸಮಾವೇಶದಲ್ಲಿ ಸಿಎಂ ಅಭಯ
ಹೈದರಾಬಾದ್: ಕುಡಿಯುವ ನೀರಿಗಾಗಿ ಆಂಧ್ರಪ್ರದೇಶ (Andhra Pradesh) ಮತ್ತು ತೆಲಂಗಾಣ (Telangana) ರಾಜ್ಯಗಳ ನಡುವೆ ಉದ್ವಿಗ್ನತೆ ಉಂಟಾಗಿದೆ. ಆಂಧ್ರಪ್ರದೇಶವು ನಾಗಾರ್ಜುನ ಸಾಗರ ಅಣೆಕಟ್ಟಿನ ಉಸ್ತುವಾರಿ ವಹಿಸಿಕೊಂಡು ನೀರು ಬಿಡುಗಡೆ ಮಾಡಿದೆ. ಇದು ಎರಡು ರಾಜ್ಯಗಳ ಸಂಘರ್ಷಕ್ಕೆ ಕಾರಣವಾಗಿದೆ.
ನಾವು ಕುಡಿಯುವ ನೀರಿನ ಉದ್ದೇಶಕ್ಕಾಗಿ ಕೃಷ್ಣಾ ನದಿಯ ನಾಗಾರ್ಜುನಸಾಗರ ಬಲ ಕಾಲುವೆಯಿಂದ ನೀರು ಬಿಡುತ್ತಿದ್ದೇವೆ ಎಂದು ಆಂಧ್ರಪ್ರದೇಶ ರಾಜ್ಯದ ನೀರಾವರಿ ಸಚಿವ ಅಂಬಟಿ ರಾಮಬಾಬು ಗುರುವಾರ ಬೆಳಗ್ಗೆ ಎಕ್ಸ್ನಲ್ಲಿ ಪೋಸ್ಟ್ ಮಾಡಿದ್ದರು. ಆದರೆ ಆಂಧ್ರಪ್ರದೇಶ ಮತ್ತು ತೆಲಂಗಾಣ ನಡುವಿನ ಒಪ್ಪಂದದ ಪ್ರಕಾರ ರಾಜ್ಯಕ್ಕೆ ಸೇರಿದ ನೀರನ್ನು ಮಾತ್ರ ತೆಗೆದುಕೊಂಡಿದ್ದೇವೆ ಎಂದು ಸಚಿವರು ಸ್ಪಷ್ಟಪಡಿಸಿದ್ದಾರೆ.
ಉದ್ವಿಗ್ನತೆ ಭುಗಿಲೆದ್ದಿರುವ ಹೊತ್ತಲ್ಲೇ ಕೇಂದ್ರವು ಮಧ್ಯಪ್ರವೇಶಿಸಿದೆ. ಹೆಚ್ಚಿನ ಘರ್ಷಣೆಯನ್ನು ತಪ್ಪಿಸಲು ಕೇಂದ್ರೀಯ ಮೀಸಲು ಪೊಲೀಸ್ ಪಡೆ (ಸಿಆರ್ಪಿಎಫ್) ಅಣೆಕಟ್ಟು ಮೇಲ್ವಿಚಾರಣೆ ಮಾಡುತ್ತಿದೆ. ಒಪ್ಪಂದದ ಪ್ರಕಾರ ಎರಡೂ ಕಡೆ ನೀರು ಪಡೆಯಲಾಗುತ್ತಿದೆಯೇ ಎಂದು ಮೇಲ್ವಿಚಾರಣೆ ನಡೆಸಿದೆ.
ಆಂಧ್ರಪ್ರದೇಶದ ಸುಮಾರು 500 ಶಸ್ತ್ರಸಜ್ಜಿತ ಪೊಲೀಸರು ನಾಗಾರ್ಜುನ ಸಾಗರ ಅಣೆಕಟ್ಟಿಗೆ ಬಂದು ಸಿಸಿಟಿವಿ ಕ್ಯಾಮೆರಾಗಳನ್ನು ಹಾನಿಗೊಳಿಸಿದ್ದಾರೆ. ಗೇಟ್ ಸಂಖ್ಯೆ 5 ಮತ್ತು ಹೆಡ್ ರೆಗ್ಯುಲೇಟರ್ಗಳನ್ನು ತೆರೆದು ಸುಮಾರು 5,000 ಕ್ಯೂಸೆಕ್ ನೀರನ್ನು ಬಿಡುಗಡೆ ಮಾಡಿದ್ದಾರೆ ಎಂದು ತೆಲಂಗಾಣ ಮುಖ್ಯ ಕಾರ್ಯದರ್ಶಿ ಸಂತಿ ಕುಮಾರಿ ಗುರುವಾರ ಆರೋಪಿಸಿದ್ದಾರೆ. ಇದನ್ನೂ ಓದಿ: ರಾಜ್ಯ ರಾಜಕೀಯ ಒತ್ತಡದ ನಡುವೆ ಕ್ಷೇತ್ರಕ್ಕೆ ಟೈಂ ಕೊಡಲು ಆಗ್ತಿಲ್ಲ: ಡಿಕೆಶಿ
ಆಂಧ್ರಪ್ರದೇಶದ ಈ ಕ್ರಮವು ತೆಲಂಗಾಣದಲ್ಲಿ ಕಾನೂನು ಮತ್ತು ಸುವ್ಯವಸ್ಥೆಯನ್ನು ಅಡ್ಡಿಪಡಿಸಿದೆ. ರಾಜ್ಯ ವಿಧಾನಸಭಾ ಚುನಾವಣೆಗೆ ಮತದಾನ ನಡೆಯುತ್ತಿರುವಾಗ, ಹೈದರಾಬಾದ್ ಮತ್ತು ಸುತ್ತಮುತ್ತಲಿನ 2 ಕೋಟಿ ಜನರ ಕುಡಿಯುವ ನೀರಿನ ಪೂರೈಕೆಗೆ ಅಡ್ಡಿಪಡಿಸಿದೆ ಎಂದು ಬೇಸರ ವ್ಯಕ್ತಪಡಿಸಿದ್ದಾರೆ.
ತೆಲಂಗಾಣದ ನಲ್ಗೊಂಡ ಜಿಲ್ಲೆಯಲ್ಲಿ ಆಂಧ್ರ ಪೊಲೀಸರ ವಿರುದ್ಧ ಎರಡು ಪ್ರಕರಣಗಳು ದಾಖಲಾಗಿವೆ. 2015 ರಲ್ಲಿ ಆಂಧ್ರ ಪೊಲೀಸರು ಅಣೆಕಟ್ಟೆಗೆ ನುಗ್ಗಲು ಇದೇ ರೀತಿಯ ಪ್ರಯತ್ನ ಮಾಡಿದ್ದರು. ಆದರೆ ತೆಲಂಗಾಣ ಭದ್ರತಾ ಪಡೆಗಳು ಸ್ಥಳಕ್ಕೆ ಧಾವಿಸಿ ತಡೆದಿದ್ದವು.
ನವದೆಹಲಿ: ಪ್ರಧಾನಮಂತ್ರಿ ನರೇಂದ್ರ ಮೋದಿ (Narendra Modi) ಅವರು ಸೋಮವಾರ ತಿರುಪತಿ (Tirupati) ಶ್ರೀ ವೆಂಕಟೇಶ್ವರ ಸ್ವಾಮಿ ದೇವಸ್ಥಾನಕ್ಕೆ (Venkateshwara Swamy Temple) ಭೇಟಿ ನೀಡಿದ್ದು, 140 ಕೋಟಿ ಭಾರತೀಯರ ಉತ್ತಮ ಆರೋಗ್ಯ, ಯೋಗಕ್ಷೇಮ ಮತ್ತು ಸಮೃದ್ಧಿಗಾಗಿ ಪ್ರಾರ್ಥಿಸಿದರು.
ದೇವಾಲಯದ ಭೇಟಿ ಕುರಿತು ಪ್ರಧಾನಿ ಎಕ್ಸ್ನಲ್ಲಿ ಫೋಟೋ ಹಂಚಿಕೊಂಡಿದ್ದಾರೆ. ದೇಗುಲಕ್ಕೆ ಎರಡು ದಿನಗಳ ಭೇಟಿಯ ಅಂಗವಾಗಿ ಪ್ರಧಾನಿ ನರೇಂದ್ರ ಮೋದಿ ಭಾನುವಾರ ವೆಂಕಟೇಶ್ವರನ ಸನ್ನಿಧಿಗೆ ಆಗಮಿಸಿದರು. ಮೋದಿ ಭಾನುವಾರ ರಾತ್ರಿ ತಿರುಮಲದಲ್ಲಿ ತಂಗಿದ್ದರು. ಸೋಮವಾರ ಮುಂಜಾನೆ ವೆಂಕಟೇಶ್ವರ ದೇವಸ್ಥಾನಕ್ಕೆ ತೆರಳಿ ಪ್ರಾರ್ಥನೆ ಸಲ್ಲಿಸಿದ್ದಾರೆ. ಇದನ್ನೂ ಓದಿ: ಅಮಾಯಕ ಸೈನಿಕರ ಬಲಿ ಪಡೆದ ಕೀರ್ತಿ ಮೋದಿಗೆ ಸಲ್ಲುತ್ತೆ: ಬಾಲಕೃಷ್ಣ ವಾಗ್ದಾಳಿ
ತಿರುಪತಿ ವಿಮಾನ ನಿಲ್ದಾಣದಲ್ಲಿ ಪ್ರಧಾನಿಗೆ ಅದ್ಧೂರಿ ಸ್ವಾಗತ ನೀಡಲಾಯಿತು. ರಾಜ್ಯಪಾಲ ಎಸ್.ಅಬ್ದುಲ್ ನಜೀರ್ ಮತ್ತು ಮುಖ್ಯಮಂತ್ರಿ ವೈ.ಎಸ್. ಜಗನ್ ಮೋಹನ್ ರೆಡ್ಡಿ ಅವರು ಪ್ರಧಾನಿ ಮೋದಿ ಆಗಮನಕ್ಕೆ ಒಂದೆರಡು ಗಂಟೆಗಳ ಮೊದಲು ವಿಮಾನ ನಿಲ್ದಾಣಕ್ಕೆ ಆಗಮಿಸಿ ಅವರನ್ನು ಸ್ವಾಗತಿಸಿದರು. ಗವರ್ನರ್ ಅಬ್ದುಲ್ ನಜೀರ್ ಅವರು ಪ್ರಧಾನಿ ಮೋದಿಯವರೊಂದಿಗೆ ತಿರುಪತಿಗೆ ಹೋದರೆ, ಮುಖ್ಯಮಂತ್ರಿ ಜಗನ್ ಆರತಕ್ಷತೆಯ ನಂತರ ವಿಜಯವಾಡಕ್ಕೆ ಹಿಂದಿರುಗಿದರು. ಇದನ್ನೂ ಓದಿ: Constitution Day: ರಾಷ್ಟ್ರಪತಿಯಿಂದ ಸುಪ್ರೀಂ ಕೋರ್ಟ್ ಆವರಣದಲ್ಲಿ ಅಂಬೇಡ್ಕರ್ ಪ್ರತಿಮೆ ಅನಾವರಣ
ಚಿಕ್ಕಬಳ್ಳಾಪುರ: ಅಂತರ್ಜಾತಿ ಪ್ರೇಮ ವಿವಾಹವಾಗಿದ್ದ ಗೃಹಿಣಿಯೊಬ್ಬಳು ಅನುಮಾನಾಸ್ಪದವಾಗಿ ಸಾವನ್ನಪ್ಪಿರುವ ಘಟನೆ ಚೇಳೂರಿನ ಚಾಕವೇಲುವಿನಲ್ಲಿ ನಡೆದಿದೆ. ಮೃತ ಮಹಿಳೆಯ ಕುಟುಂಬಸ್ಥರು ಆಕೆಯ ಗಂಡನ ವಿರುದ್ಧ ಕೊಲೆ ಆರೋಪ ಮಾಡಿದ್ದಾರೆ.
ಗ್ರಾಮದ ಅನಿತಾ (23) ಮೃತ ಮಹಿಳೆಯಾಗಿದ್ದಾಳೆ. ಬಾಗೇಪಲ್ಲಿಗೆ ಗಾರ್ಮೆಂರ್ಟ್ಸ್ಗೆ ಬರುತ್ತಿದ್ದ ಆಂಧ್ರಪ್ರದೇಶದ (Andhra Pradesh) ರಾಚವಾರಪಲ್ಲಿಯ ಅನಿತಾ ಮಣಿಕಂಠ ಎಂಬವನ ಜೊತೆ ಒಂದು ವರ್ಷದ ಹಿಂದೆ ಪ್ರೀತಿಸಿ ಮನೆಯವರು ವಿರೋಧದ ನಡುವೆ ದೇವಾಲಯದಲ್ಲಿ ಮದುವೆಯಾಗಿದ್ದರು. ಮದುವೆಯಾದ ಸ್ವಲ್ಪ ದಿನಗಳು ಕಾಲ ಚಿಕ್ಕಬಳ್ಳಾಪುರ ಮತ್ತು ಅನಿತಾಳ ತವರೂರಿನಲ್ಲಿ ವಾಸವಾಗಿದ್ದರು. ಇದನ್ನೂ ಓದಿ: ಪ್ರವಾದಿಯನ್ನು ಅವಮಾನಿಸಿದ್ದಕ್ಕೆ ಬಸ್ ನಿರ್ವಾಕನನ್ನೇ ಹೊಡೆದು ಕೊಂದ ಎಂಜಿನಿಯರಿಂಗ್ ವಿದ್ಯಾರ್ಥಿ!
ಆರು ತಿಂಗಳ ಹಿಂದೆ ದಂಪತಿ ಚಾಕುವೇಲುವಿಗೆ ಬಂದಿದ್ದರು. ಈ ವೇಳೆ ಮಣಿಕಂಠನ ತಾಯಿ ಸಾವಿತ್ರಮ್ಮ, ಅಕ್ಕ ಕುಸುಮ ಹಾಗೂ ಬಾವ ರಾಘವೇಂದ್ರ ಗಲಾಟೆ ಮಾಡಿ ಮನೆಯೊಳಗೆ ಸೇರಿಸಿಕೊಂಡಿರಲಿಲ್ಲ ಎನ್ನಲಾಗಿದೆ. ಇದರಿಂದ ಹಳೆಯ ಮನೆಯಲ್ಲಿ 6 ತಿಂಗಳ ಕಾಲ ವಾಸವಾಗಿದ್ದರು. ಈಗ ಇದ್ದಕ್ಕಿದ್ದಂತೆ ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆಯ ಶವ ಪತ್ತೆಯಾಗಿದೆ.
ಕುಟುಂಬಸ್ಥರ ಮಾತು ಕೇಳಿ ಅನಿತಾಳನ್ನು ಮಣಿಕಂಠ ಕೊಲೆ ಮಾಡಿದ್ದಾನೆ ಎಂದು ಮೃತಳ ತಾಯಿ ಚೇಳೂರು ಪೊಲೀಸ್ (Police) ಠಾಣೆಯಲ್ಲಿ ದೂರು ದಾಖಲಿಸಿದ್ದಾಳೆ. ದೂರು ದಾಖಲಾಗುತ್ತಿದ್ದಂತೆ ಆರೋಪಿ ಪೊಲೀಸರಿಗೆ ಶರಣಾಗಿದ್ದಾನೆ. ಬಳಿಕ ಆರೋಪಿಯನ್ನು ಜೈಲಿಗೆ ಕರೆದೊಯ್ಯುವಾಗ ಜೀಪ್ ತಡೆದು ಮಹಿಳೆಯ ಕುಟುಂಬಸ್ಥರು ಹಲ್ಲೆ ಮಾಡಲು ಯತ್ನಿಸಿದ್ದಾರೆ. ಈ ವೇಳೆ ಪೊಲಿಸರು ಅವರನ್ನು ಸಮಾಧಾನ ಮಾಡಿ ಆರೋಪಿಯನ್ನು ಕರೆದೊಯ್ದಿದ್ದಾರೆ. ಇದನ್ನೂ ಓದಿ: ಹಲಾಲ್ ಉತ್ಪನ್ನ ನಿಷೇಧಿಸುವ ನಿರ್ಧಾರ ತೆಗೆದುಕೊಂಡಿಲ್ಲ – ಅಮಿತ್ ಶಾ
ಅಮರಾವತಿ: ದಲಿತ ಯುವಕನ (Dalit Youth) ಮೇಲೆ ಆರು ಜನರ ಗ್ಯಾಂಗ್ವೊಂದು ಹಲ್ಲೆ ನಡೆಸಿದ್ದು, ನೀರು ಕೇಳಿದಾಗ ಮೂತ್ರ ವಿಸರ್ಜಿಸಿರುವ (Urinate) ಅಮಾನವೀಯ ಕೃತ್ಯ ಆಂಧ್ರಪ್ರದೇಶದ (Andhra Pradesh) ಎನ್ಟಿಆರ್ (NTR) ಜಿಲ್ಲೆಯಲ್ಲಿ ನಡೆದಿದೆ.
ಹಲ್ಲೆಗೊಳಗಾದ ಯುವಕನನ್ನು ಶ್ಯಾಮ್ ಕುಮಾರ್ ಎಂದು ಗುರುತಿಸಲಾಗಿದೆ. ಘಟನೆಯ ಕುರಿತು ಜಾಮೀನು ರಹಿತ ಪ್ರಕರಣ ದಾಖಲಿಸಿಕೊಂಡ ಪೊಲೀಸರು ಎಲ್ಲಾ ಆರು ಮಂದಿ ಆರೋಪಿಗಳನ್ನು ಬಂಧಿಸಿದ್ದಾರೆ. ದಲಿತ ಯುವಕನನ್ನು ಆರು ಮಂದಿ ಆರೋಪಿಗಳು ಸೇರಿಕೊಂಡು ಸತತ ನಾಲ್ಕು ಗಂಟೆಗಳ ಕಾಲ ಥಳಿಸಿದ್ದು, ನೀರು ಕೇಳಿದಾಗ ಮೂತ್ರ ವಿಸರ್ಜನೆ ಮಾಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಇದನ್ನೂ ಓದಿ: ನ.19ಕ್ಕೆ ಏರ್ ಇಂಡಿಯಾ ವಿಮಾನದಲ್ಲಿ ಪ್ರಯಾಣಿಸಬೇಡಿ – ಖಲಿಸ್ತಾನಿ ಭಯೋತ್ಪಾದಕನ ಬೆದರಿಕೆ ವೀಡಿಯೋ
ಘಟನೆ ಮುನ್ನೆಲೆಗೆ ಬಂದ ನಂತರ, ತೆಲುಗು ದೇಶಂ ಪಕ್ಷದ (TDP) ಪರಿಶಿಷ್ಟ ಜಾತಿ (SC) ಸೆಲ್ ಪ್ರತಿಭಟನೆಯನ್ನು ನಡೆಸಿದ್ದು, ರಸ್ತೆಗಳನ್ನು ನಿರ್ಬಂಧಿಸಿದೆ. ಟಿಡಿಪಿ ಎಸ್ಸಿ ಸೆಲ್ ಅಧ್ಯಕ್ಷ ಎಂಎಂಎಸ್ ರಾಜು ನೇತೃತ್ವದಲ್ಲಿ ಕಂಚಿಕಚೆರ್ಲಾ ಬಳಿ ಹೆದ್ದಾರಿ ತಡೆದು ಪ್ರತಿಭಟನೆ ನಡೆಸಿದ್ದು, ಹೆದ್ದಾರಿಯ ಇಕ್ಕೆಲಗಳಲ್ಲಿ ಪ್ರತಿಭಟನಾ ಧರಣಿ ನಡೆಸಲಾಗಿದೆ. ಇದನ್ನೂ ಓದಿ: ಬೆಂಗಳೂರಿನಲ್ಲಿ ಚಾಕು ಇರಿದು ಉಪನಿರ್ದೇಶಕಿಯ ಬರ್ಬರ ಹತ್ಯೆ
ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಎಂಎಂಎಸ್ ರಾಜು, ಸಿಎಂ ವೈಎಸ್ ಜಗನ್ ಮೋಹನ್ ರೆಡ್ಡಿ ಅವರ ಆಡಳಿತದಲ್ಲಿ ದಲಿತರ ಮೇಲಿನ ಹಲ್ಲೆಗಳು ಹೆಚ್ಚಿವೆ. ರಾಜ್ಯದಲ್ಲಿ ದಲಿತರ ಮೇಲೆ ಸಾಕಷ್ಟು ದಾಳಿಗಳು ನಡೆಯುತ್ತಿವೆ. ಶ್ಯಾಮ್ ಕುಮಾರ್ ಎಂಬ ಬಾಲಕನ ಮೇಲೆ ಆಡಳಿತ ನಡೆಸುವ ಮೂಲಕ ಹಲ್ಲೆ ಮಾಡಲಾಗಿದೆ ಎಂದು ಕಿಡಿಕಾರಿದರು. ಶ್ಯಾಮ್ ಅವರ ದವಡೆಗೆ ಆಪರೇಷನ್ ಮಾಡುವಂತೆ ವೈದ್ಯರು ಸಲಹೆ ನೀಡಿದ್ದು, ಅದಕ್ಕೆ ಮೂರು ದಿನ ಬೇಕು. ದಲಿತರ ಮೇಲಿನ ಹಲ್ಲೆಯನ್ನು ಖಂಡಿಸಿದ ಅವರು, ಈ ಘಟನೆಯಲ್ಲಿ ಭಾಗಿಯಾದ ಎಲ್ಲರನ್ನೂ ಬಂಧಿಸಬೇಕು ಎಂದು ಒತ್ತಾಯಿಸಿದರು. ಇದನ್ನೂ ಓದಿ: ದೇಶದಲ್ಲಿ ಫಸ್ಟ್ – ಶಂಕಿತ ಉಗ್ರರ ಕಾಲಿಗೆ ಜಿಪಿಎಸ್ ಬಳೆ
ವಿಜಯವಾಡ ನಗರ ಪೊಲೀಸ್ ಕಮಿಷನರ್ ಕಂಠಿ ರಾಣಾ ಟಾಟಾ ಕೂಡ ಈ ಘಟನೆಯ ಬಗ್ಗೆ ಮಾತನಾಡಿ, ಕಂಚಿಕಚೆರ್ಲಾ ಗ್ರಾಮದ ನಿವಾಸಿ ಶ್ಯಾಮ್ ಕುಮಾರ್ ಎಂಬ ದಲಿತ ಯುವಕನ ಮೇಲೆ ಆತನ ಹಳೆಯ ಸ್ನೇಹಿತ ಹರೀಶ್ ರೆಡ್ಡಿ ಹಾಗೂ ಇತರ ಐವರು ಸೇರಿ ಹಲ್ಲೆ ನಡೆಸಿದ್ದಾರೆ. ಹರೀಶ್ ರೆಡ್ಡಿ ಅವರು ಶ್ಯಾಮ್ ಕುಮಾರ್ ಅವರನ್ನು ಶಿವಸಾಯಿ ಕ್ಷೇತ್ರ ಪ್ರದೇಶಕ್ಕೆ ಕರೆದು ಇತರ ಐವರ ಸಹಾಯದಿಂದ ಬಲವಂತವಾಗಿ ಕಾರಿಗೆ ತಳ್ಳಿ ಗುಂಟೂರಿಗೆ ಕರೆದೊಯ್ದರು. ಅಷ್ಟರಲ್ಲಿ ಕಾರಿನೊಳಗೆ ಕೆಟ್ಟದಾಗಿ ಹಲ್ಲೆ ಮಾಡಿದ್ದಾರೆ. ಆರೋಪಿಗಳನ್ನು ತ್ವರಿತ ನ್ಯಾಯಾಲಯದ ಮುಂದೆ ಹಾಜರುಪಡಿಸಿ, ವಶಕ್ಕೆ ಪಡೆಯಲಾಗುವುದು ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ಔಷಧಿ ಕಂಪನಿಯಲ್ಲಿ ಬೆಂಕಿ ಅವಘಡ – 8 ಮಂದಿ ಸಾವು
ಅಮರಾವತಿ: ಆಂಧ್ರ ಪ್ರದೇಶದಲ್ಲಿ (Andhra Pradesh) ಭಾನುವಾರ ರಾತ್ರಿ ಸಂಭವಿಸಿದ ರೈಲು ದುರಂತದಲ್ಲಿ (Train Tragedy) ಸಾವಿನ ಸಂಖ್ಯೆ 13ಕ್ಕೆ ಏರಿಕೆಯಾಗಿದ್ದು, 40ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ. ಎರಡು ರೈಲುಗಳ ಮಧ್ಯೆ ಸಂಭವಿಸಿದ ಅಪಘಾತದಿಂದಾಗಿ 12 ರೈಲುಗಳ ಸಂಚಾರವನ್ನು ರದ್ದುಗೊಳಿಸಲಾಗಿದೆ (Cancelled) ಎಂದು ರೈಲ್ವೆ ಇಲಾಖೆ (Railway Department) ತಿಳಿಸಿದೆ.
ಭಾನುವಾರ ಆಂಧ್ರ ಪ್ರದೇಶದ ವಿಜಯನಗರದಲ್ಲಿ (Vijayanagara) ಎರಡು ಪ್ಯಾಸೆಂಜರ್ ರೈಲುಗಳ ಮಧ್ಯೆ ಸಂಭವಿಸಿದ ಅಪಘಾತದ ನಂತರ 12 ರೈಲುಗಳನ್ನು ರದ್ದುಗೊಳಿಸಲಾಗಿದೆ. ಅಲ್ಲದೇ 15 ರೈಲುಗಳ ಮಾರ್ಗಗಳನ್ನು ಬದಲಾಯಿಸಲಾಗಿದ್ದು, 7 ಇತರ ರೈಲುಗಳನ್ನು ಭಾಗಶಃ ರದ್ದುಗೊಳಿಸಲಾಗಿದೆ ಎಂದು ಪೂರ್ವ ಕರಾವಳಿ ರೈಲ್ವೆ ಅಧಿಕಾರಿಯೊಬ್ಬರು ಮಾಹಿತಿ ನೀಡಿದ್ದಾರೆ. ಇದನ್ನೂ ಓದಿ: ಭೀಕರ ರೈಲು ದುರಂತ ಪ್ರಕರಣ- ಮೃತರ ಕುಟುಂಬಗಳಿಗೆ ತಲಾ 10 ಲಕ್ಷ ರೂ. ಪರಿಹಾರ
Bulletin1:
Status of Trains Diverted/Cancelled/Short Terminated in the wake of train accident near Kantakapalle. pic.twitter.com/dRlIEyGs4L
ಘಟನೆಯಲ್ಲಿ ಇಲ್ಲಿಯವರೆಗೆ 40 ಮಂದಿ ಗಾಯಗೊಂಡಿದ್ದಾರೆ. 32 ಮಂದಿಯನ್ನು ವಿಜಯನಗರದ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಮೆಡಿಕೋವರ್ ಆಸ್ಪತ್ರೆಯಲ್ಲಿ ಇಬ್ಬರನ್ನು ದಾಖಲಿಸಿದ್ದು, ಎನ್ಆರ್ಐ ಆಸ್ಪತ್ರೆಯಲ್ಲಿ ಒಬ್ಬರನ್ನು ದಾಖಲಿಸಲಾಗಿದೆ. 4 ಮಂದಿ ಚಿಂತಾಜನಕ ಸ್ಥಿತಿಯಲ್ಲಿದ್ದಾರೆ. ಗಾಯಗೊಂಡವರೆಲ್ಲರೂ ಆಂಧ್ರಪ್ರದೇಶದವರಾಗಿದ್ದಾರೆ ಎಂದು ವಿಜಯನಗರ ಜಿಲ್ಲಾಡಳಿತ ತಿಳಿಸಿದೆ. ಇದನ್ನೂ ಓದಿ: ಕೇರಳದಲ್ಲಿ ಸ್ಫೋಟ ಪ್ರಕರಣ- ಸಾವಿನ ಸಂಖ್ಯೆ ಮೂರಕ್ಕೆ ಏರಿಕೆ
ವಿಶಾಖಪಟ್ಟಣದಿಂದ ಪಲಾಸಕ್ಕೆ ಹೋಗುತ್ತಿದ್ದ ವಿಶೇಷ ಪ್ಯಾಸೆಂಜರ್ ರೈಲು ಸಿಗ್ನಲ್ ಇಲ್ಲದ ಕಾರಣ ಕೊತ್ಸವತ್ಸಲ ಬಳಿಯ ಅಳಮಂಡ ಮತ್ತು ಕಂಟಕಪಲ್ಲಿ ನಡುವೆ ಹಳಿಗಳ ಮೇಲೆ ನಿಂತಿದ್ದು, ವೈಜಾಗ್-ರಾಯಗಡ ಪ್ಯಾಸೆಂಜರ್ ರೈಲು ಡಿಕ್ಕಿ ಹೊಡೆದ ಪರಿಣಾಮ ಮೂರು ಬೋಗಿಗಳು ಹಳಿತಪ್ಪಿವೆ. ಮಾನವ ದೋಷದಿಂದ ದುರಂತ ಸಂಭವಿಸಿದೆ ಎಂದು ರೈಲ್ವೆ ಮೂಲಗಳು ತಿಳಿಸಿದ್ದು, ಸಿಗ್ನಲಿಂಗ್ ಅನ್ನು ಲೋಕೋ ಪೈಲಟ್ ಗಮನಿಸದ ಪರಿಣಾಮ ದುರಂತ ಸಂಭವಿಸಿದೆ ಎಂದು ವರದಿಗಳು ತಿಳಿಸಿವೆ. ಇದನ್ನೂ ಓದಿ: ಆಂಧ್ರದಲ್ಲಿ ನಿಂತಿದ್ದ ಪ್ಯಾಸೆಂಜರ್ ರೈಲಿಗೆ ಎಕ್ಸ್ಪ್ರೆಸ್ ರೈಲು ಡಿಕ್ಕಿ; 6 ಮಂದಿ ಸಾವು