Tag: Andhra Pradesh

  • ಶಿವನ ನೈವೇದ್ಯವಾಗಿ 10 ಕೆಜಿ ಐಸ್ ಕ್ರೀಮ್ ನೀಡಿದ ಭಕ್ತ

    ಶಿವನ ನೈವೇದ್ಯವಾಗಿ 10 ಕೆಜಿ ಐಸ್ ಕ್ರೀಮ್ ನೀಡಿದ ಭಕ್ತ

    ಹೈದರಾಬಾದ್: ಭಕ್ತನೊಬ್ಬ ಶಿವಲಿಂಗ ನೈವೇದ್ಯವಾಗಿ 10 ಕೆಜಿ ಐಸ್ ಕ್ರೀಮ್ ನೀಡಿರುವ ವಿಚಿತ್ರ ಘಟನೆ ಆಂಧ್ರಪ್ರದೇಶದ ಪಾಲಕೋಲ್‍ನಲ್ಲಿ ನಡೆದಿದೆ.

    ಪಂಚರಾಮ ಕ್ಷೇತ್ರಗಳಲ್ಲಿ ಒಂದಾದ ಕ್ಷೀರ ರಾಮಲಿಂಗೇಶ್ವರ ಸ್ವಾಮಿ ದೇವಸ್ಥಾನದಲ್ಲಿ ಶಿವನಿಗೆ, ಪಾಲಕೋಲಿನ ದೇವೆಲ್ಲ ನರಸಿಂಹ ಮೂರ್ತಿ ನೈವೇದ್ಯವಾಗಿ 10 ಕೆಜಿ ಐಸ್ ಕ್ರೀಮ್ ಅರ್ಪಿಸಿದ್ದು, ಸುತ್ತಮುತ್ತಲೂ ಬಹಳ ಪ್ರಸಿದ್ಧರಾಗಿದ್ದಾರೆ. ಐಸ್ ಕ್ರೀಮ್ ಅನ್ನು ಶಿವಲಿಂಗದ ಮೇಲೆ ಸುರಿಯಲಾಯಿತು. ಅದು ದೇವರ ಸುತ್ತಲೂ ತುಂಬಿಕೊಂಡಾಗ ಆ ಅದ್ಭುತ ದೃಶ್ಯವನ್ನು ವೀಕ್ಷಿಸಲು ಭಕ್ತರು ದೊಡ್ಡ ಸಂಖ್ಯೆಯಲ್ಲಿ ಸಾಲುಗಟ್ಟಿ ನಿಂತಿದ್ದರು. ದೇವರ ಪ್ರಸಾದವಾಗಿ ತಣ್ಣನೆಯ ಐಸ್ ಕ್ರೀಮ್ ಅನ್ನು ಪಡೆಯಲು ಭಕ್ತರು  ದೇವಾಲಯದಲ್ಲಿ ಸರತಿ ಸಾಲಿನಲ್ಲಿ ನಿಂತಿದ್ದರು. ಇದನ್ನೂ ಓದಿ: ಬೆಂಗಳೂರಿನಲ್ಲಿ ಶುರುವಾಗಿದೆ ಹೈಟೆಕ್ ಡ್ರಗ್ಸ್ ಪೆಡ್ಲಿಂಗ್

    ಶಿವನಿಗೆ ಮಾಂಸದ ಅಡುಗೆಯನ್ನು ನೈವೇದ್ಯವಾಗಿ ನೀಡಿದ ಉದಾಹರಣೆಗಳೂ ಪುರಾಣದಲ್ಲಿದೆ. ಇನ್ನು ಕೆಲವರು ಪಾಯಸ, ಸಕ್ಕರೆ ಪೊಂಗಲ್ ಮತ್ತು ಹೂರಣವನ್ನು ನೈವೇದ್ಯವಾಗಿ ಅರ್ಪಿಸುತ್ತಾರೆ. ಆದರೆ ಈ ಭಕ್ತ ಶಿವನ ನೈವೇದ್ಯಕ್ಕೆ ಐಸ್ ಕ್ರೀಮ್ ನೀಡಿರುವುದು ಎಲ್ಲಡೇ ಸುದ್ದಿಯಾಗುತ್ತಿದೆ. ಇದನ್ನೂ ಓದಿ: ಪತ್ನಿಯನ್ನು ಮನೆಗೆ ಕಳುಹಿಸದ ಅತ್ತೆಗೆ ಬ್ಲೇಡ್‌ನಿಂದ ಹಲ್ಲೆ ಮಾಡಿದ ಅಳಿಯ

  • ಆಂಧ್ರಪ್ರದೇಶದ ಮಾಜಿ ಮುಖ್ಯಮಂತ್ರಿ ಕೊನಿಜೇಟಿ ರೋಸಯ್ಯ ಇನ್ನಿಲ್ಲ

    ಆಂಧ್ರಪ್ರದೇಶದ ಮಾಜಿ ಮುಖ್ಯಮಂತ್ರಿ ಕೊನಿಜೇಟಿ ರೋಸಯ್ಯ ಇನ್ನಿಲ್ಲ

    ಹೈದರಾಬಾದ್: ಆಂಧ್ರಪ್ರದೇಶದ ಮಾಜಿ ಮುಖ್ಯಮಂತ್ರಿ ಕೊನಿಜೇಟಿ ರೋಸಯ್ಯ(88) ಅವರು ಶನಿವಾರ ನಿಧನರಾಗಿದ್ದಾರೆ.

    ಕೆಲವು ದಿನಗಳಿಂದ ವಯೋಸಹಜ ಅನಾರೋಗ್ಯಕ್ಕೆ ತುತ್ತಾಗಿದ್ದ ರೋಸಯ್ಯ ಅವರು ಚಿಕಿತ್ಸೆ ಫಲಕಾರಿಯಾಗದೇ ಹೈದರಾಬಾದ್​ನ ಆಸ್ಪತ್ರೆಯೊಂದರಲ್ಲಿ ಕೊನೆಯುಸಿರೆಳೆದಿದ್ದಾರೆ. ಕೊನಿಜೇಟಿ ರೋಸಯ್ಯ ಅವರ ಅಗಲಿಕೆಗೆ ದೇಶದ ರಾಜಕೀಯ ಗಣ್ಯರು, ಅಭಿಮಾನಿಗಳು ಕಂಬನಿ ಮಿಡಿದಿದ್ದಾರೆ. ಇದನ್ನೂ ಓದಿ: 76ರ ಹರೆಯದಲ್ಲಿ ಪೈಲಟ್ ಆಗುವ ಕನಸು ನನಸು

    ಕೊನಿಜೇಟಿ ರೋಸಯ್ಯ ಅವರು 2009 ರಿಂದ 2010 ರವರೆಗೆ ಆಂಧ್ರಪ್ರದೇಶದ ಮುಖ್ಯಮಂತ್ರಿಯಾಗಿ ಸೇವೆ ಸಲ್ಲಿಸಿದ್ದರು. ಕರ್ನಾಟಕದಲ್ಲಿ ಎರಡು ತಿಂಗಳ ಕಾಲ ರಾಜ್ಯಪಾಲರಾಗಿ ಮತ್ತು 2011 ರಿಂದ 2016 ರವರೆಗೆ ತಮಿಳುನಾಡಿನ ರಾಜ್ಯಪಾಲರಾಗಿ ಸೇವೆ ಸಲ್ಲಿಸಿದ್ದರು.

    ದಶಕಗಳ ಕಾಲ ತಮ್ಮ ವೃತ್ತಿಜೀವನದಲ್ಲಿ ಹಲವಾರು ಬಾರಿ ಕಾಂಗ್ರೆಸ್ ಎಂಎಲ್‍ಸಿ, ಎಂಎಲ್‍ಎ ಮತ್ತು ಎಂಪಿ ಆಗಿ ಸೇವೆ ಸಲ್ಲಿಸಿದ್ದ ಅವರು, ತಮ್ಮ ಸುದೀರ್ಘ ರಾಜಕೀಯ ಜೀವನದಲ್ಲಿ ಹಲವಾರು ಸಚಿವ ಸ್ಥಾನಗಳನ್ನು ನಿಭಾಯಿಸಿದ್ದಾರೆ. ಜೊತೆಗೆ ಸದಾ ಚಿಕ್ಕ ಸ್ಥಾನಗಳನ್ನು ನಿರ್ವಹಿಸುತ್ತಿದ್ದರು ಮತ್ತು ವಿವಾದಗಳಿಂದ ದೂರವಿರಲು ಪ್ರಯತ್ನಿಸುತ್ತಿದ್ದರು. ವಿಧಾನಸಭೆಯಲ್ಲಿ 15 ಬಜೆಟ್ ಮಂಡಿಸಿ ದಾಖಲೆಯನ್ನೂ ಸಹ ನಿರ್ಮಿಸಿದ್ದರು. ಇದನ್ನೂ ಓದಿ:  ಕೆಲವೊಮ್ಮೆ ಬಾಯಿ ತಪ್ಪಿ ಸತ್ಯ ಹೇಳುವ ಈಶ್ವರಪ್ಪಗೆ ಸಿಎಂ ಮೇಲೆ ನಂಬಿಕೆ ಇಲ್ಲ: ಸಿದ್ದರಾಮಯ್ಯ

    ಜುಲೈ 1933 ರಲ್ಲಿ ಗುಂಟೂರು ಜಿಲ್ಲೆಯ ವೇಮೂರಿನಲ್ಲಿ ಜನಿಸಿದ ಅವರು, ವಾಣಿಜ್ಯ ಪದವೀಧರರಾಗಿದ್ದು, ತಮ್ಮ ಕಾಲೇಜು ದಿನಗಳಿಂದಲೂ ರಾಜಕೀಯದಲ್ಲಿ ಸಕ್ರಿಯರಾಗಿದ್ದರು. 1968, 1974 ಮತ್ತು 1980 ರಲ್ಲಿ ಎಪಿ ಲೆಜಿಸ್ಲೇಟಿವ್ ಕೌನ್ಸಿಲ್ ಸದಸ್ಯರಾಗಿ ಸೇವೆ ಸಲ್ಲಿಸಿದ್ದರು ಮತ್ತು 1979 ರಲ್ಲಿ ಮರಿ ಚನ್ನಾ ರೆಡ್ಡಿ ಅವರ ಅಡಿಯಲ್ಲಿ ರಸ್ತೆ ಸಾರಿಗೆ ಮತ್ತು ಹೆದ್ದಾರಿಗಳ ಸಚಿವರಾಗಿದ್ದರು.

    ಕೊನಿಜೇಟಿ ರೋಸಯ್ಯ ಅವರು ಟಿ ಅಂಜಯ್ಯ, ಕೋಟ್ಲಾ ವಿಜಯ ಭಾಸ್ಕರ ರೆಡ್ಡಿ, ಎನ್ ಜನಾರ್ಧನ ರೆಡ್ಡಿ ಅವರ ಸಂಪುಟಗಳಲ್ಲಿ ಸಚಿವರಾಗಿ ಸೇವೆ ಸಲ್ಲಿಸಿದ್ದರು ಮತ್ತು ಮೇ 2004 ರಿಂದ ವೈಎಸ್ ರಾಜಶೇಖರ ರೆಡ್ಡಿ ಸಂಪುಟದಲ್ಲಿ ಸಚಿವರಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಇಲ್ಲಿಯವರೆಗೂ ಗೃಹ, ಆರೋಗ್ಯ, ಶಿಕ್ಷಣ, ಸಾರಿಗೆ ಸೇರಿದಂತೆ ಮುಂತಾದ ಖಾತೆಗಳನ್ನು ನಿರ್ವಹಿಸಿದ್ದಾರೆ. 1995 ಮತ್ತು 1997ರ ನಡುವೆ ಆಂಧ್ರ ಪ್ರದೇಶ ಕಾಂಗ್ರೆಸ್ ಸಮಿತಿಯ ಅಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದರು ಮತ್ತು 1998 ರಲ್ಲಿ ನರಸರಾವ್‍ಪೇಟೆಯಿಂದ ಲೋಕಸಭೆಗೆ ಆಯ್ಕೆಯಾಗಿದ್ದರು. ಇದನ್ನೂ ಓದಿ: ಅನೈತಿಕ ಸಂಬಂಧ ಶಂಕೆ – ಪತ್ನಿಯ ಕತ್ತು ಸೀಳಿ ಕೊಂದ ಪತಿ

    ಆಂಧ್ರ ವಿಶ್ವವಿದ್ಯಾನಿಲಯವು 2007ರಲ್ಲಿ ಕೊನಿಜೇಟಿ ರೋಸಯ್ಯ ಅವರಿಗೆ ಗೌರವ ಡಾಕ್ಟರೇಟ್ ಪ್ರಶಸ್ತಿ ನೀಡಿದೆ. ಇದೀಗ ಅವರು ಮೂವರು ಪುತ್ರರು ಮತ್ತು ಒಬ್ಬ ಪುತ್ರಿಯನ್ನು ಅಗಲಿದ್ದಾರೆ.

  • ಡಿ.4 ರಂದು ಆಂಧ್ರಪ್ರದೇಶ, ಒಡಿಶಾಗೆ ಅಪ್ಪಳಿಸಲಿರುವ ಜವಾದ್ ಚಂಡಮಾರುತ

    ಡಿ.4 ರಂದು ಆಂಧ್ರಪ್ರದೇಶ, ಒಡಿಶಾಗೆ ಅಪ್ಪಳಿಸಲಿರುವ ಜವಾದ್ ಚಂಡಮಾರುತ

    ನವದೆಹಲಿ: ಬಂಗಾಳಕೊಲ್ಲಿಯಲ್ಲಿ ವಾಯುಭಾರತ ಕುಸಿತದಿಂದಾಗಿ ಆಂಧ್ರ ಪ್ರದೇಶ ಮತ್ತು ಒಡಿಶಾದಲ್ಲಿ ಜವಾದ್ ಚಂಡಮಾರುತ ಆವರಿಸುವ ಭೀತಿ ಶುರುವಾಗಿದೆ.

    rain

    ಮುಂದಿನ 24 ಗಂಟೆಗಳಲ್ಲಿ ಅಂದರೆ ಡಿಸೆಂಬರ್ 4ರಂದು ಜವಾದ್ ಚಂಡಮಾರುತ ಆಂಧ್ರಪ್ರದೇಶ ಮತ್ತ ಒಡಿಶಾಗೆ ಅಪ್ಪಳಿಸುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ ಸೂಚಿಸಿದೆ. ಇದನ್ನೂ ಓದಿ: ಭೀಮಾತೀರದಲ್ಲಿ ಮತ್ತೆ ಹರಿದ ನೆತ್ತರು- ಪಟ್ಟಣ ಪಂಚಾಯ್ತಿ ಮಾಜಿ ಸದಸ್ಯನ ಬರ್ಬರ ಕೊಲೆ

    ಡಿ.4ರ ವೇಳೆಗೆ ಚಂಡಮಾರುತವು 90 ರಿಂದ 100 ಕಿ.ಮೀ. ವೇಗದಲ್ಲಿ ಒಡಿಶಾ ಕರಾವಳಿಗೆ ಅಪ್ಪಳಿಸಲಿದ್ದು, ಚಂಡಮಾರುತದಿಂದಾಗಿ ಕರಾವಳಿ ಆಂಧ್ರಪ್ರದೇಶ, ಒಡಿಶಾ ಮತ್ತು ಗಂಗಾನದಿ ಪಶ್ಚಿಮ ಬಂಗಾಳದಲ್ಲಿ ವಾರಾಂತ್ಯದಲ್ಲಿ ಭಾರೀ ಮಳೆಯಾಗಲಿದೆ ಎಂದು ಮುನ್ಸೂಚನೆ ನೀಡಿದೆ. ಈಗಾಗಲೇ ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆ (ಎನ್‍ಡಿಆರ್‍ಎಫ್) ಆಂಧ್ರಪ್ರದೇಶ, ಒಡಿಶಾ ಮತ್ತು ಪಶ್ಚಿಮ ಬಂಗಾಳದಲ್ಲಿ (8) 32 ತಂಡಗಳನ್ನು ನಿಯೋಜಿಸಿದೆ. ಭಾರತೀಯ ಸೇನೆ ಮತ್ತು ನೌಕಾಪಡೆಯ ತಂಡಗಳು ತಮ್ಮ ಹಡಗುಗಳು ಮತ್ತು ವಿಮಾನಗಳನ್ನು ಸಿದ್ಧಪಡಿಸಿದ್ದಾರೆ.

    ಜವಾದ್ ಚಂಡಮಾರುತ ಬಂಗಾಳಕೊಲ್ಲಿಯಲ್ಲಿರುವ ಕೆಲವು ಪ್ರದೇಶಗಳ ಮೇಲೆ ಭಾರೀ ಪರಿಣಾಮ ಬೀರುವ ಸಾಧ್ಯತೆ ಇರುವುದರಿಂದ ಒಡಿಶಾ ಸರ್ಕಾರ ಗುರುವಾರ ಸಂಜೆ ಕೆಲವು ಮಾರ್ಗಸೂಚಿಗಳನ್ನು ಹೊರಡಿಸಿದೆ. ಒಡಿಶಾ ಸರ್ಕಾರವು ಎನ್‍ಡಿಆರ್‍ಎಫ್, ರಾಜ್ಯ ಅಗ್ನಿಶಾಮಕ ದಳ ಮತ್ತು ಒಡಿಶಾ ಡಿಸಾಸ್ಟರ್ ರ್ಯಾಪಿಡ್ ಆಕ್ಷನ್ ಫೋರ್ಸ್ (ಒಡಿಆರ್‌ಎಫ್) ಸೇರಿದಂತೆ 266 ತಂಡಗಳನ್ನು ಕರಾವಳಿ ಜಿಲ್ಲೆಗಳಲ್ಲಿ ಯೋಜಿಸಿದೆ. ಜವಾದ್ ಚಂಡಮಾರುತದ ಪರಿಸ್ಥಿತಿಯನ್ನು ಎದುರಿಸಲು ರಾಜ್ಯ ಸರ್ಕಾರವು ಸನ್ನದ್ಧವಾಗಿದೆ, 14 ಕರಾವಳಿ ಜಿಲ್ಲೆಗಳನ್ನು ಅಲರ್ಟ್ ಘೋಷಿಸಲಾಗಿದೆ ಮತ್ತು ಎಲ್ಲಾ ಅಗತ್ಯ ಕ್ರಮಗಳನ್ನು ತೆಗೆದುಕೊಳ್ಳುವಂತೆ ಅಧಿಕಾರಿಗಳಿಗೆ ಸೂಚಿಸಲಾಗಿದೆ ಎಂದು ವಿಶೇಷ ಪರಿಹಾರ ಆಯುಕ್ತ (ಎಸ್‌ಆರ್‌ಸಿ) ಪ್ರದೀಪ್ ಕುಮಾರ್ ಜೆನಾ ತಿಳಿಸಿದ್ದಾರೆ. ಇದನ್ನೂ ಓದಿ: ಕೆ.ಆರ್.ಎಸ್ ಹಿನ್ನೀರಿಗೆ ಬಿದ್ದು ಪ್ರೇಮಿಗಳು ಆತ್ಮಹತ್ಯೆ

    ದೇಶದಲ್ಲಿ ಚಂಡಮಾರುತ ಸಂಬಂಧಿತ ಪರಿಸ್ಥಿತಿ ಕುರಿತು ಚರ್ಚಿಸಲು ಪ್ರಧಾನಿ ನರೇಂದ್ರ ಮೋದಿ ಅವರು ಗುರುವಾರ ಮಹತ್ವದ ಸಭೆ ನಡೆಸಿದರು. ಬಂಗಾಳಕೊಲ್ಲಿಯಲ್ಲಿ ಚಂಡಮಾರುತ ಉಂಟಾಗಲಿರುವ ಹಿನ್ನೆಲೆಯಲ್ಲಿ ಈ ಸಭೆ ನಡೆಸಲಾಗಿದ್ದು, ಒಡಿಶಾ ರಾಜ್ಯಕ್ಕೆ ರೆಡ್ ಅಲರ್ಡ್ ಘೋಷಿಸಲಾಗಿದೆ. ಆಂಧ್ರಪ್ರದೇಶಕ್ಕೂ ಎಚ್ಚರಿಕೆ ನೀಡಲಾಗಿದೆ.

  • ಆಂಧ್ರಪ್ರದೇಶ ಪ್ರವಾಹ – ತಲಾ 25 ಲಕ್ಷ ದೇಣಿಗೆ ನೀಡಿದ ಚಿರಂಜೀವಿ, ರಾಮ್‍ಚರಣ್

    ಆಂಧ್ರಪ್ರದೇಶ ಪ್ರವಾಹ – ತಲಾ 25 ಲಕ್ಷ ದೇಣಿಗೆ ನೀಡಿದ ಚಿರಂಜೀವಿ, ರಾಮ್‍ಚರಣ್

    ಹೈದರಾಬಾದ್: ಆಂಧ್ರಪ್ರದೇಶದಲ್ಲಿ ಸುರಿದ ಭಾರೀ ಮಳೆಯಿಂದಾಗಿ ಪ್ರವಾಹ ಉಂಟಾಗಿದ್ದು, ಮೆಗಾಸ್ಟಾರ್ ಚಿರಂಜೀವಿ ಹಾಗೂ ನಟ ರಾಮ್ ಚರಣ್ ತೇಜ ಸಂತ್ರಸ್ತರಿಗೆ ಸಹಾಯ ಹಸ್ತಚಾಚಿದ್ದಾರೆ.

    ಆಂಧ್ರಪ್ರದೇಶದಲ್ಲಿ ಸುರಿದ ಭಾರೀ ಮಳೆಯಿಂದಾಗಿ ಹಲವೆಡೆ ಹಾನಿಯುಂಟಾಗಿದ್ದು, ಜನರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಇನ್ನೂ ಜನರ ಕಷ್ಟಕ್ಕೆ ಟಾಲಿವುಡ್ ನಟ ಜೂನಿಯರ್ ಎನ್‍ಟಿಆರ್ ಮತ್ತು ಸೂಪರ್ ಸ್ಟಾರ್ ಮಹೇಶ್ ಬಾಬು ಮಳೆ ಮತ್ತು ಪ್ರವಾಹದಿಂದ ಹಾನಿಗೊಳಗಾದವರಿಗೆ ಸಹಾಯ ಮಾಡಲು ಆಂಧ್ರಪ್ರದೇಶ ಸಿಎಂ ಪರಿಹಾರ ನಿಧಿಗೆ ದೇಣಿಗೆ ನೀಡುವುದಾಗಿ ಬುಧವಾರ ಘೋಷಿಸಿದ್ದರು. ಇದನ್ನೂ ಓದಿ: ಐರಾಗೆ ಹುಟ್ಟುಹಬ್ಬದ ಸಂಭ್ರಮ – ನಿನ್ನ ಕೈ ಹಿಡಿಯಲು ಯಾವಾಗಲೂ ಇರುತ್ತೇನೆ ಅಂದ ರಾಧಿಕಾ

    ಇದೀಗ ನಟ ಚಿರಂಜೀವಿ ಮತ್ತು ಅವರ ಪುತ್ರ ರಾಮ್ ಚರಣ್ ತೇಜ ಅವರು ಆಂಧ್ರಪ್ರದೇಶ ಮುಖ್ಯಮಂತ್ರಿ ಪರಿಹಾರ ನಿಧಿಗೆ ತಲಾ 25 ಲಕ್ಷ ರೂ. ನೀಡುವುದಾಗಿ ಟ್ವೀಟ್ ಮೂಲಕ ತಿಳಿಸಿದ್ದಾರೆ. “ಆಂಧ್ರಪ್ರದೇಶದಲ್ಲಿ ಪ್ರವಾಹ ಮತ್ತು ಧಾರಾಕಾರ ಮಳೆಯಿಂದಾಗಿ ವ್ಯಾಪಕವಾಗಿ ಹಾನಿಯುಂಟಾಗಿರುವ ವಿಚಾರ ಬಹಳ ನೋವುಂಟು ಮಾಡಿದೆ. ಪ್ರವಾಹದಿಂದ ಉಂಟಾದ ವ್ಯಾಪಕ ವಿನಾಶ ಮತ್ತು ಹಾನಿಯಿಂದ ನನಗೆ ನೋವಾಗಿದೆ. ಸಂತ್ರಸ್ತರಿಗೆ ಸಹಾಯ ಮಾಡಲು ಮುಖ್ಯಮಂತ್ರಿ ಪರಿಹಾರ ನಿಧಿಗೆ ರೂ.25 ಲಕ್ಷ ರೂ. ಕೊಡುಗೆ ನೀಡುತ್ತಿದ್ದೇನೆ ಎಂದು ಚಿರಂಜೀವಿ ಟ್ವೀಟ್ ಮಾಡಿದ್ದಾರೆ. ಇದನ್ನೂ ಓದಿ: ಆಂಧ್ರಪ್ರದೇಶ ಪ್ರವಾಹ ಸಂತ್ರಸ್ತರಿಗೆ ಮಿಡಿದ ಟಾಲಿವುಡ್ ಸ್ಟಾರ್ಸ್

    ಮತ್ತೊಂದೆಡೆ ರಾಮ್‍ಚರಣ್ ತೇಜ ಅವರು, ಭಯಾನಕ ಪ್ರವಾಹದಿಂದಾಗಿ ಆಂಧ್ರಪ್ರದೇಶದ ಜನತೆ ಅನುಭವಿಸುತ್ತಿರುವ ಕಷ್ಟವನ್ನು ನೋಡಲು ಹೃದಯ ಭಾರವೆನಿಸುತ್ತಿದೆ. ಜನರಿಗೆ ಸಹಾಯ ಮಾಡಲು ಮುಖ್ಯಮಂತ್ರಿ ಪರಿಹಾರ ನಿಧಿಗೆ 25 ಲಕ್ಷ ರೂಪಾಯಿಯ ನನ್ನದೊಂದು ಪುಟ್ಟ ಕಾಣಿಕೆ ನೀಡುತ್ತಿದ್ದೇನೆ ಎಂದು  ಟ್ವಿಟ್ಟರ್‌ನಲ್ಲಿ ಬರೆದುಕೊಂಡಿದ್ದಾರೆ.

  • ಆಂಧ್ರಪ್ರದೇಶ ಪ್ರವಾಹ ಸಂತ್ರಸ್ತರಿಗೆ ಮಿಡಿದ ಟಾಲಿವುಡ್ ಸ್ಟಾರ್ಸ್

    ಆಂಧ್ರಪ್ರದೇಶ ಪ್ರವಾಹ ಸಂತ್ರಸ್ತರಿಗೆ ಮಿಡಿದ ಟಾಲಿವುಡ್ ಸ್ಟಾರ್ಸ್

    ಹೈದರಾಬಾದ್: ಆಂಧ್ರಪ್ರದೇಶದಲ್ಲಿ ಪ್ರವಾಹವಾಗುತ್ತಿದ್ದು, ಅದಕ್ಕೆ ಟಾಲಿವುಡ್ ಸ್ಟಾರ್ ಗಳು ಸಂತ್ರಸ್ತರಿಗಾಗಿ ಮಿಡಿದಿದ್ದಾರೆ.

    ಆಂಧ್ರ ಪ್ರವಾಹದಿಂದ ತತ್ತರಿಸುತ್ತಿರುವ ಜನರಿಗಾಗಿ ಟಾಲಿವುಡ್ ಸೂಪರ್ ಸ್ಟಾರ್ ಮಹೇಶ್ ಬಾಬು 25 ಲಕ್ಷ ರೂ. ದೇಣಿಗೆ ನೀಡುವುದಾಗಿ ಪ್ರಕಟಿಸಿದ್ದಾರೆ.

    ಟ್ವೀಟ್ ಮಾಡಿದ ಅವರು, ಆಂಧ್ರಪ್ರದೇಶದಲ್ಲಿ ವಿನಾಶಕಾರಿ ಪ್ರವಾಹವಾಗುತ್ತಿದೆ. ನಾನು ಸಿಎಂಆಎರ್‍ಎಫ್ ನಿಧಿಗೆ 25 ಲಕ್ಷ ರೂ. ನೀಡಲು ಬಯಸುತ್ತೇನೆ. ಈ ಬಿಕ್ಕಟ್ಟಿನ ಸಮಯದಲ್ಲಿ ಎಪಿಗೆ ಸಹಾಯ ಮಾಡಲು ಎಲ್ಲರೂ ಮುಂದೆ ಬರಲು ವಿನಂತಿಸಿಕೊಳ್ಳುತ್ತೇನೆ ಎಂದು ಜನರಲ್ಲಿ ಮನವಿ ಮಾಡಿದ್ದಾರೆ. ಇದನ್ನೂ ಓದಿ: ಸ್ನೇಹಿತರು ಒಬ್ಬರಿಗೊಬ್ಬರು ಟ್ವೀಟ್ ಮಾಡಬಾರದೇ – ಅಭಿಮಾನಿಗಳಲ್ಲಿ ಶ್ರೇಯಾ ಪ್ರಶ್ನೆ

    ಮಹೇಶ್ ಬಾಬು ಮಾತ್ರವಲ್ಲ ಟಾಲಿವುಡ್ ನ ಮತ್ತೊಬ್ಬ ಸೂಪರ್ ಸ್ಟಾರ್ ಜ್ಯೂ.ಎನ್ ಟಿಆರ್ ಸಹ ಸಂತ್ರಸ್ತರಿಗೆ ಸಹಾಯ ಮಾಡಲು ಮುಂದಾಗಿದ್ದು, ಆಂಧ್ರಪ್ರದೇಶದಲ್ಲಿ ಇತ್ತೀಚೆಗೆ ಸಂಭವಿಸಿದ ಪ್ರವಾಹದಿಂದ ಸಂತ್ರಸ್ತರಾದ ಜನರು ದುಃಸ್ಥಿತಿಯಲ್ಲಿ ಇದ್ದಾರೆ. ಅದಕ್ಕೆ ನಾನು ಅವರ ಚೇತರಿಕೆಗೆ ಒಂದು ಸಣ್ಣ ಹೆಜ್ಜೆಯನ್ನು ಇಡುತ್ತಿದ್ದು, ಸಿಎಂ ಪರಿಹಾರ ನಿಧಿಗೆ 25 ಲಕ್ಷವನ್ನು ನೀಡುತ್ತಿದ್ದೇನೆ ಎಂದು ಬರೆದು ಅಭಿಮಾನಿಗಳಲ್ಲಿ ನೀವು ಸಹ ಸಹಾಯ ಮಾಡಿ ಎಂದು ಮನವಿ ಮಾಡಿಕೊಂಡಿದ್ದಾರೆ.

    ಆಂಧ್ರಪ್ರದೇಶದಲ್ಲಿ ಪ್ರಕೃತಿ ವಿಕೋಪದಿಂದ ನೂರಾರು ಜನರು ತಮ್ಮ ಮನೆಗಳನ್ನು ಕಳೆದುಕೊಂಡು ಕಷ್ಟ ಪಡುತ್ತಿದ್ದಾರೆ. ಟಾಲಿವುಡ್ ಸ್ಟಾರ್ ಗಳು ಆಂಧ್ರ ಸಿಎಂ ಪರಿಹಾರ ನಿಧಿಗೆ ತಲಾ 25 ಲಕ್ಷ ದೇಣಿಗೆ ನೀಡುವ ಮೂಲಕ ತಮ್ಮ ಅಭಿಮಾನಿಗಳಿಗೆ ಸಂದೇಶವನ್ನು ನೀಡಿದ್ದಾರೆ. ಇದನ್ನೂ ಓದಿ:  ಉತ್ತರ ಪ್ರದೇಶದ ಸರ್ಕಾರಿ ನೌಕರರು, ವಕೀಲರಿಗೆ 1 ರೂ.ಗೆ ಸಿಗಲಿದೆ ಮನೆ

    ಆಂಧ್ರ ಸಿಎಂ ವೈ.ಎಸ್.ಜಗನ್ಮೋಹನ್ ರೆಡ್ಡಿ ಅವರು ಸಂತ್ರಸ್ತರ ಕಷ್ಟವನ್ನು ತಿಳಿದುಕೊಳ್ಳಲು ಜಿಲ್ಲೆಗಳಲ್ಲಿ ಪ್ರವಾಸ ಕೈಗೊಂಡಿದ್ದಾರೆ.

  • ಪೆನ್ಸಿಲ್ ನಿಬ್ ಕದ್ದ ಬಾಲಕನ ವಿರುದ್ಧ ದೂರು ದಾಖಲಿಸಲು ಠಾಣೆಗೆ ಹೋದ ಪುಟಾಣಿ

    ಪೆನ್ಸಿಲ್ ನಿಬ್ ಕದ್ದ ಬಾಲಕನ ವಿರುದ್ಧ ದೂರು ದಾಖಲಿಸಲು ಠಾಣೆಗೆ ಹೋದ ಪುಟಾಣಿ

    ಅಮರಾವತಿ: ತನ್ನ ಒಪ್ಪಿಗೆ ಪಡೆಯದೇ ಪೆನ್ಸಿಲ್ ನಿಬ್ ತೆಗೆದುಕೊಂಡಿದ್ದಕ್ಕೆ ಸಹಪಾಠಿಯ ವಿರುದ್ಧ ಪುಟ್ಟ ಬಾಲಕನೊಬ್ಬ ದೂರು ನೀಡಲು ಪೊಲೀಸ್ ಠಾಣೆಗೆ ಹೋಗುವ ಮೂಲಕವಾಗಿ ಸುದ್ದಿಯಾಗಿದ್ದಾನೆ.

    ಈ ವಿಚಿತ್ರ ಸಮಸ್ಯೆಯನ್ನು ಬಗೆಹರಿಸುವಲ್ಲಿ ನಿರತರಾಗಿರುವ ಪೊಲೀಸರು ಈ ವೀಡಿಯೋವನ್ನು ತಮ್ಮ ಸಾಮಾಜಿಕ ಜಾಲತಾಣದಲ್ಲಿ ಹಾಕಿಕೊಂಡಿದ್ದಾರೆ. ಇದಕ್ಕೆ ಭಾರೀ ಪ್ರಶಂಸೆ ವ್ಯಕ್ತವಾಗಿದ್ದು, ನೆಟ್ಟಿಗರು ಬಾಲಕನ ಮಾತಿಗೆ ಫಿದಾ ಆಗಿದ್ದಾರೆ.

    ವೀಡಿಯೋದಲ್ಲಿ ಏನಿದೆ?: ಪ್ರಾಥಮಿಕ ಶಾಲಾ ಮಕ್ಕಳ ಗುಂಪು ತಮ್ಮ ಸಹಪಾಠಿಯ ವಿರುದ್ಧ ದೂರು ದಾಖಲಿಸಲು ಕರ್ನೂಲ್ ಜಿಲ್ಲೆಯ ಪೇಡಾ ಕಡಬೂರು ಠಾಣೆಗೆ ಬಂದಿದ್ದಾರೆ. ಹಸಿರು ಬಣ್ಣದ ಶರ್ಟ್ ಧರಿಸಿರುವ ಬಾಲಕ ತನ್ನ ಪೆನ್ಸಿಲ್ ನಿಬ್ ಕದ್ದಿದ್ದಾನೆ. ಇವನ ವಿರುದ್ಧ ನಾನು ದೂರು ದಾಖಲಿಸುತ್ತೇನೆ ಎಂದು ಬಾಲಕನೊಬ್ಬ ಹೇಳಿದ್ದಾನೆ. ಅದಕ್ಕೆ ಹಸಿರು ಶರ್ಟ್ ಬಾಲಕನು ತೆಗೆದುಕೊಂಡಿದ್ದ ಪೆನ್ಸಿಲ್ ನಿಬ್‍ನ್ನು ವಾಪಸ್ ನೀಡಿರುವುದಾಗಿ ತಿಳಿಸುತ್ತಾನೆ. ಇಲ್ಲ ಎಂದು ವಾದಿಸುತ್ತಾ ದೂರು ದಾಖಲಿಸಲು ಬಂದಿರುವ ಬಾಲಕ ತನ್ನ ಹತ್ತಿರ ಇದ್ದ ನಿಬ್‍ನ್ನು ತೊರಿಸುತ್ತಾನೆ. ಇದನ್ನೂ ಓದಿ: ಒಳ್ಳೆ ಬುದ್ಧಿ ಕಲಿಯಿರಿ ಎಂದಿದ್ದಕ್ಕೆ ಸಾಮಾಜಿಕ ಕಾರ್ಯಕರ್ತನ ಕೊಲೆಗೈದ ಬಾಲಕರು!

    ಇದಲ್ಲೆವನ್ನು ತಾಳ್ಮೆಯಿಂದ ಆಲಿಸಿದ ಪೊಲೀಸರು ಪ್ರತಿಕ್ರಿಯಿಸಿ, ದೂರು ದಾಖಲಿಸುವುದರಿಂದ ಅವನ ತಂದೆ-ತಾಯಿಗೆ ತೊಂದರೆ ಆಗುತ್ತದೆ. ಇದರಿಂದ ಇದೊಂದು ಬಾರಿ ರಾಜಿ ಆಗಿ ಎಂದು ಸಲಹೆ ನೀಡುತ್ತಾರೆ. ಅದಕ್ಕೆ ಒಪ್ಪಿದ ಬಾಲಕ ನಂತರದಲ್ಲಿ ಅವನು ತಪ್ಪು ಮಾಡಿದ್ದಾನೆ. ದೂರು ದಾಖಲಿಸಬೇಕು ಎಂದು ವಾದಿಸುತ್ತಾನೆ. ಅದಕ್ಕೆ ಪೊಲೀಸರು ಇನ್ನೊಮ್ಮೆ ತಪ್ಪಾಗದಂತೆ ನಡೆದುಕೊಳ್ಳಬೇಕು ಎಂದು ಬಾಲಕನಿಗೆ ಬುದ್ಧಿವಾದ ಹೇಳುತ್ತಾರೆ. ಆರೋಪಿಗಳನ್ನು ಚೆನ್ನಾಗಿ ಓದಿ ಮತ್ತು ಇಬ್ಬರೂ ಸೌಹಾರ್ದಯುತ ಸಂಬಂಧವನ್ನು ಹೊಂದಬೇಕು ಎಂದು ಆಶಿಸಿರುವ ವೀಡಿಯೋ ಈಗ ಎಲ್ಲೆಡೆ ವೈರಲ್ ಆಗಿದೆ. ಇದನ್ನೂ ಓದಿ: IND vs NZ ಟೆಸ್ಟ್ ಪಂದ್ಯದಲ್ಲಿ ಸುದ್ದಿಯಾದ ಪಾನ್ ಭಾಯ್ – ವೀಡಿಯೋ ವೈರಲ್

    ಈ ವೀಡಿಯೋಕ್ಕೆ ನೆಟ್ಟಿಗರು ಆಶ್ಚರ್ಯವನ್ನು ವ್ಯಕ್ತಪಡಿದ್ದಾರೆ. ಹುಡುಗರು ಸಲೀಸಾಗಿ ಸಂವಹನ ನಡೆಸುತ್ತಿರುವುದನ್ನು ನೋಡಿ ಅನೇಕರಿಗೆ ಶಾಕ್ ಆದರೆ ಇನ್ನೂ ಕೆಲವರು ಅವರ ಜಾಗೃತಿಗಾಗಿ ಶ್ಲಾಘಿಸಿದ್ದಾರೆ. ಕೆಲವರು ಈ ಪುಟ್ಟ ಹುಡುಗ ಮುಂದೊಂದು ದಿನ ಪೊಲೀಸ್ ಅಧಿಕಾರಿಯಾಗಿ ದೊಡ್ಡ ಮಟ್ಟದಲ್ಲಿ ಸಾಧನೆ ಮಾಡಲಿದ್ದಾನೆ ಎಂದು ಆಶಿಸಿದ್ದಾರೆ.

  • ಪ್ರಾಣವನ್ನೇ ಪಣಕ್ಕಿಟ್ಟು ಅರ್ಚಕನನ್ನು ರಕ್ಷಿಸಿದ ಟ್ರಾಫಿಕ್ ಪೊಲೀಸ್ – ವೀಡಿಯೋ ವೈರಲ್

    ಪ್ರಾಣವನ್ನೇ ಪಣಕ್ಕಿಟ್ಟು ಅರ್ಚಕನನ್ನು ರಕ್ಷಿಸಿದ ಟ್ರಾಫಿಕ್ ಪೊಲೀಸ್ – ವೀಡಿಯೋ ವೈರಲ್

    ಹೈದರಾಬಾದ್: ಟ್ರಾಫಿಕ್ ಪೊಲೀಸ್ ಪ್ರವಾಹದಲ್ಲಿ ಸಿಲುಕಿದ್ದ ಅರ್ಚಕರೊಬ್ಬರನ್ನು ರಕ್ಷಿಸಲು ತನ್ನ ಪ್ರಾಣವನ್ನು ಪಣಕ್ಕಿಟ್ಟ ಘಟನೆ ಆಂಧ್ರಪ್ರದೇಶದಲ್ಲಿ ನಡೆದಿದೆ. ಈ ಸುದ್ದಿ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿದ್ದಂತೆ ನೆಟ್ಟಿಗರು ಹೀರೋ ಎಂದು ಪ್ರಶಂಸಿಸುತ್ತಿದ್ದಾರೆ.

    ಆಂಧ್ರಪ್ರದೇಶದ ನೆಲ್ಲೂರಿನಲ್ಲಿರುವ ಕೊಡವಲೂರು ಶಿವ ದೇವಸ್ಥಾನದ ಅರ್ಚಕರು ವೆಂಕಟೇಶ್ವರಪುರಂ ಸೇತುವೆ ಮೇಲೆ ಬೈಕ್‍ನಲ್ಲಿ ಹೋಗುತ್ತಿದ್ದರು. ಈ ವೇಳೆ ಪ್ರವಾಹದ ನೀರಿನ ಸೆಳೆತಕ್ಕೆ ಅರ್ಚಕರು ಕೊಚ್ಚಿಹೋಗುವ ವೇಳೆ ಸಹಾಯಕ್ಕಾಗಿ ಅಂಗಲಾಚಿದ್ದಾರೆ. ಇದನ್ನೂ ಓದಿ: ಕಾನ್‌ಸ್ಟೇಬಲ್ ನೇಮಕಾತಿ ಪರೀಕ್ಷೆಯಲ್ಲಿ ಹೈಟೆಕ್ ವಂಚನೆ

    ಈ ವೇಳೆ ಅಲ್ಲೇ ಇದ್ದ ಕರ್ತವ್ಯ ನಿರತ ಟ್ರಾಫಿಕ್ ಸರ್ಕಲ್ ಇನ್ಸ್ ಪೆಕ್ಟರ್ ನಾಯಕ್ ಅವರು ಅರ್ಚಕರನ್ನು ರಕ್ಷಿಸಲು ಮುಂದಾಗುತ್ತಾರೆ. ನಾಯಕ್ ಅವರು ಹಗ್ಗವನ್ನು ಬಳಸಿ ಅರ್ಚಕರು ಇರುವ ಸ್ಥಳಕ್ಕೆ ತಲುಪಿ ನಂತರ ಅವರು ಅರ್ಚಕರನ್ನು ಬಿಗಿಯಾಗಿ ಹಿಡಿದುಕೊಂಡು ಸುರಕ್ಷಿತವಾಗಿ ದಡ ಮುಟ್ಟಿಸುತ್ತಾರೆ.

    ನಾಯಕ್ ಅವರ ಸಾಹಸವನ್ನು ಟ್ವಿಟ್ಟರ್ ನಲ್ಲಿ ಹಂಚಿಕೊಳ್ಳಲಾಗಿದ್ದು, ನೆಲ್ಲೂರು ಜಿಲ್ಲೆಯ ಕೊಡವಲೂರು ಶಿವ ದೇವಾಲಯದಲ್ಲಿ ಕೆಲಸ ಮಾಡುವ ಅರ್ಚಕರೊಬ್ಬರು ವೆಂಕಟೇಶ್ವರಪುರಂ ಸೇತುವೆಯ ಬಳಿ ಬೈಕ್‍ನಲ್ಲಿ ಹೋಗುತ್ತಿದ್ದಾಗ ಅವರು ಪ್ರವಾಹದ ನೀರಿನಿಂದ ಕೊಚ್ಚಿಹೋಗುತ್ತಿದ್ದರು. ಆಗ ಸಮಯಕ್ಕೆ ಸರಿಯಾಗಿ ಧೈರ್ಯ ಮಾಡಿದ ಟ್ರಾಫಿಕ್ ಸಿಐ ನಾಯಕ್ ಅವರು ಸುರಕ್ಷಿತವಾಗಿ ಕರೆತಂದಿದ್ದಾರೆ ಎಂದು ಬರೆದು ಟ್ವೀಟ್ ಮಾಡಲಾಗಿದೆ.

    ಈ ವೀಡಿಯೋ ವೈರಲ್ ಆಗಿದ್ದು ಟ್ರಾಫಿಕ್ ಪೊಲೀಸ್ ಸಾಹಸವನ್ನು ನೆಟ್ಟಿಗರು ಶ್ಲಾಘಿಸಿದ್ದಾರೆ. ಪೊಲೀಸ್ ಮಹಾನಿರ್ದೇಶಕ ಗೌತಮ್ ಸವಾಂಗ್ ಈ ಕುರಿತು, ಸಾರ್ವಜನಿಕ ಸೇವೆಯಲ್ಲಿ ಮತ್ತು ವ್ಯಕ್ತಿಯ ಜೀವ ಉಳಿಸುವಲ್ಲಿ ಟ್ರಾಫಿಕ್ ಸಿಐ ಅವರು ತೋರಿದ ಶೌರ್ಯ ರಕ್ಷಣೆ ಮತ್ತು ಬದ್ಧತೆಯನ್ನು ಟ್ವೀಟ್ ಮಾಡಿ ಪ್ರಶಂಸಿದ್ದಾರೆ. ಇದನ್ನೂ ಓದಿ:  100 ರೂ. ನೋಟ್ ಒಳಗೆ ವೈಟ್ ಪೇಪರ್ ಇಟ್ಟು ವಂಚನೆ- ಐವರು ಅರೆಸ್ಟ್

  • ಬೆಂಗಳೂರಲ್ಲಿ ಇಂದು ಮಳೆ ಎಚ್ಚರಿಕೆ – ಕರಾವಳಿ, ದಕ್ಷಿಣ ಒಳನಾಡಿನಲ್ಲಿ ಭಾರೀ ಮಳೆ ಸಾಧ್ಯತೆ

    ಬೆಂಗಳೂರಲ್ಲಿ ಇಂದು ಮಳೆ ಎಚ್ಚರಿಕೆ – ಕರಾವಳಿ, ದಕ್ಷಿಣ ಒಳನಾಡಿನಲ್ಲಿ ಭಾರೀ ಮಳೆ ಸಾಧ್ಯತೆ

    ಬೆಂಗಳೂರು: ಅಕಾಲಿಕ ಮಳೆಯಿಂದ ಸದ್ಯಕ್ಕೆ ರಾಜ್ಯಕ್ಕೆ ವಿರಾಮ ಇಲ್ಲ ಎನ್ನಿಸುತ್ತಿದೆ. ಇಂದಿನಿಂದ ಮತ್ತೆ ಕೆಲವು ದಿನ ರಾಜ್ಯದಲ್ಲಿ ಧಾರಾಕಾರ ಮಳೆ ಆಗಬಹುದು ಎಂದು ಹವಾಮಾನ ತಜ್ಞರು ಎಚ್ಚರಿಸಿದ್ದಾರೆ.

    ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಶಿವಮೊಗ್ಗ, ಕೊಡಗು, ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಮಳೆಯಬ್ಬರಿಸುವ ನಿರೀಕ್ಷೆ ಇದೆ. ರಾಜಧಾನಿ ಬೆಂಗಳೂರು, ಮೈಸೂರು, ಚಿಕ್ಕಬಳ್ಳಾಪುರ, ಕೋಲಾರ, ಮಂಡ್ಯ, ಮೈಸೂರು, ತುಮಕೂರು ಜಿಲ್ಲೆಗಳಲ್ಲೂ ಇಂದಿನಿಂದ ಮತ್ತೆ ಕೆಲವು ದಿನ ಮಳೆ ಆಗಬಹುದು. ಉತ್ತರ ಒಳನಾಡಿನ ಕೆಲವು ಜಿಲ್ಲೆಗಳಲ್ಲೂ ಧಾರಾಕಾರ ಮಳೆಯ ಎಚ್ಚರಿಕೆ ನೀಡಲಾಗಿದೆ. ಆದರೆ ಹವಾಮಾನ ಇಲಾಖೆ ಅಧಿಕೃತವಾಗಿ ಮಳೆಯ ಮುನ್ನೆಚ್ಚರಿಕೆ ನೀಡಿಲ್ಲ. ಇದನ್ನೂ ಓದಿ: ದಲಿತರು ಕೋಳಿ ಕೊಟ್ಟರೆ ತಿನ್ನುತ್ತಾರಾ?: ಕ್ಷಮೆ ಕೇಳಿದ ಹಂಸಲೇಖ

    ಈ ನಡುವೆ ನವೆಂಬರ್ 26ರಿಂದ ಚಂಡಮಾರುತ ಮಳೆ ಆಗಲಿದ್ದು, ನವೆಂಬರ್ 29ರವರೆಗೂ ಧಾರಾಕಾರ ಮಳೆ ಆಗುವ ಸಾಧ್ಯತೆ ಇದೆ. ಚಿಂತಾಮಣಿ ತಾಲೂಕಿನಲ್ಲಿ ವಾಡಿಕೆಯಿಂದ ಎರಡು ಪಟ್ಟು ಅಂದರೆ 1,500 ಮಿಲಿ ಮೀಟರ್ ಮಳೆ ಆಗಿದೆ. ಚಿಕ್ಕಬಳ್ಳಾಪುರ, ಕೋಲಾರ, ತುಮಕೂರಲ್ಲಿ ನವೆಂಬರ್ ತಿಂಗಳಲ್ಲಿ ವಾಡಿಕೆಯ 60 ಮಿಲಿ ಮೀಟರ್ ಮಳೆಗಿಂತ 300 ಮಿಲಿ ಮೀಟರ್ ಮಳೆ ಆಗಿದೆ.

    ಇನ್ನೂ ಪ್ರವಾಹದಿಂದ ತತ್ತರಿಸಿರುವ ತಮಿಳುನಾಡು ಮತ್ತು ಆಂಧ್ರದಲ್ಲಿ ಮತ್ತೆ ರಣ ಮಳೆ ಎಚ್ಚರಿಕೆ ನೀಡಲಾಗಿದೆ. ನವೆಂಬರ್ 26ರವರೆಗೂ ತಮಿಳುನಾಡು, ಆಂಧ್ರಪ್ರದೇಶ, ಕೇರಳ ಮತ್ತು ಮಾಹೆಯಲ್ಲಿ ಧಾರಾಕಾರ ಮಳೆ ಆಗಲಿದೆ ಎಂದು ಎಚ್ಚರಿಸಲಾಗಿದೆ. ಇದನ್ನೂ ಓದಿ: ಮಟನ್ ಚೀಲ ಹೊತ್ತೊಯ್ದ ಬೀದಿ ನಾಯಿ ಹೊಡೆದು ಕೊಂದ

    ಬೆಂಗಳೂರಿನಲ್ಲಿ ಸೋಮವಾರ ಮಳೆ ಇರಲಿಲ್ಲ. ಆದರೆ ಅಮಾನಿಕೆರೆ ಪ್ರವಾಹದಿಂದ ಯಲಹಂಕದಲ್ಲಿರುವ ಕೇಂದ್ರೀಯ ವಿಹಾರ ಅಪಾರ್ಟ್‍ಮೆಂಟ್ ಜಲಾವೃತಗೊಂಡಿದ್ದು, ಇನ್ನೂ ನೀರು ಸಂಪೂರ್ಣವಾಗಿ ಇಳಿದಿಲ್ಲ. ಅಮಾನಿಕೆರೆಯಿಂದ ನೀರು ಇನ್ನೂ ಅಪಾರ್ಟ್‍ಮೆಂಟ್‍ನತ್ತ ಬರುತ್ತಲೇ ಇದೆ. 600 ಪ್ಲ್ಯಾಟ್‍ನಲ್ಲಿರುವ ನಿವಾಸಿಗಳು ದೋಣಿಗಳ ಮೂಲಕ ಮನೆ ಖಾಲಿ ಮಾಡಿಕೊಂಡು ಹೋಗುತ್ತಿದ್ದಾರೆ.

  • ಆಂಧ್ರಪ್ರದೇಶಕ್ಕೆ ಅಮರಾವತಿ ರಾಜಧಾನಿ:  ಜಗನ್ ಮೋಹನ್ ರೆಡ್ಡಿ

    ಆಂಧ್ರಪ್ರದೇಶಕ್ಕೆ ಅಮರಾವತಿ ರಾಜಧಾನಿ: ಜಗನ್ ಮೋಹನ್ ರೆಡ್ಡಿ

    ಅಮರಾವತಿ: ರಾಜಧಾನಿಗಳ ಬಗ್ಗೆ ವಿವಾದದ ನಡೆಯುತ್ತಿರುವ ಬೆನ್ನಲ್ಲೇ ಆಂಧ್ರಪ್ರದೇಶದ ಮುಖ್ಯಮಂತ್ರಿ ಜಗನ್ ಮೋಹನ್ ರೆಡ್ಡಿ ರಾಜ್ಯಕ್ಕೆ ಒಂದೇ ರಾಜಧಾನಿ ಅದು ಅಮರಾವತಿ ಎಂದು ಘೋಷಿಸಿದ್ದಾರೆ.

    ಎಪಿ ಮರುಸಂಘಟನೆ ಕಾಯಿದೆ, 2014 ಸೆಕ್ಷನ್ 6ರ ಅಡಿಯಲ್ಲಿ ಕೇಂದ್ರ ಸರ್ಕಾರವು 2014 ಮಾರ್ಚ್28 ರಂದು ಆಂಧ್ರಪ್ರದೇಶ ರಾಜ್ಯಕ್ಕೆ ಹೊಸ ರಾಜಧಾನಿಗಾಗಿ ಪರ್ಯಾಯಗಳನ್ನು ಅಧ್ಯಯನ ಮಾಡಲು ಕೆ.ಸಿ ಶಿವರಾಮಕೃಷ್ಣನ್ ಅವರ ಅಧ್ಯಕ್ಷತೆಯಲ್ಲಿ ತಜ್ಞರ ಸಮಿತಿಯನ್ನು ರಚಿಸಿದೆ ಎಂದು ಪ್ರತಿ-ಅಫಿಡವಿಟ್ ಉಲ್ಲೇಖಿಸಿದೆ. ಸಮಿತಿಯು ಅದೇ ವರ್ಷದ ಆಗಸ್ಟ್ 30 ರಂದು ತನ್ನ ವರದಿಯನ್ನು ಸಲ್ಲಿಸಿತು. ಎರಡು ದಿನಗಳ ನಂತರ ಸೆಪ್ಟೆಂಬರ್ 1 ರಂದು ಆಂಧ್ರ ಪ್ರದೇಶ ಸರ್ಕಾರಕ್ಕೆ ಕಳುಹಿಸಲಾಯಿತು. ಅಫಿಡವಿಟ್‍ನಲ್ಲಿ ರಾಜ್ಯ ಸರ್ಕಾರವು  2015 ಏಪ್ರಿಲ್ 23ರಂದು ರಾಜಧಾನಿಯನ್ನು ಅಮರಾವತಿ ಎಂದು ಸೂಚಿಸಿ ಆದೇಶವನ್ನು ಹೊರಡಿಸಿದೆ ಎಂದು ಉಲ್ಲೇಖಿಸಿದೆ. ಅದೇ ವೇಳೆ ರಾಜ್ಯದ ರಾಜಧಾನಿಯನ್ನು ಆಯಾ ರಾಜ್ಯ ಸರ್ಕಾರ ನಿರ್ಧರಿಸುತ್ತದೆ. ಇದರಲ್ಲಿ ಕೇಂದ್ರ ಸರ್ಕಾರದ ಪಾತ್ರವಿಲ್ಲ ಎಂದು ತಿಳಿಸಿದೆ. ಇದನ್ನೂ ಓದಿ:  ಲಿಂಗ ತಾರತಮ್ಯವಿಲ್ಲದೇ ಒಂದೇ ರೀತಿ ಸಮವಸ್ತ್ರ ನೀಡಿದ ಕೇರಳ ಶಾಲೆ

    2020 ಜುಲೈ 31 ರಂದು ರಾಜ್ಯ ಗೆಜೆಟ್ ಅಧಿಸೂಚನೆಯಲ್ಲಿ ಪ್ರಕಟಿಸಲಾದ ಆಂಧ್ರ ಪ್ರದೇಶ ವಿಕೇಂದ್ರೀಕರಣ ಮತ್ತು ಎಲ್ಲಾ ಪ್ರದೇಶಗಳ ಅಂತರ್ಗತ ಅಭಿವೃದ್ಧಿ ಕಾಯಿದೆ 2020ರ ಮೂಲಕ ಆಂಧ್ರ ಪ್ರದೇಶ ಸರ್ಕಾರವು ರಾಜ್ಯದಲ್ಲಿ ಮೂರು ಆಡಳಿತ ಸ್ಥಾನಗಳನ್ನು ಹೊಂದಿರಬೇಕು ಎಂದು ಎಂದು ಅಫಿಡವಿಟ್ ಉಲ್ಲೇಖಿಸಿದೆ. ಅವುಗಳನ್ನು ರಾಜಧಾನಿಗಳೆಂದು ಕರೆಯಬೇಕು. ಅಮರಾವತಿ ಮಹಾನಗರ ಪ್ರದೇಶ ಅಭಿವೃದ್ಧಿ ಪ್ರದೇಶವನ್ನು ಶಾಸಕ ರಾಜಧಾನಿ ಎಂದು ಕರೆಯಲಾಗುವುದು, ವಿಶಾಖಪಟ್ಟಣ ಮಹಾನಗರ ಪ್ರದೇಶ ಅಭಿವೃದ್ಧಿ ಪ್ರದೇಶವನ್ನು ಕಾರ್ಯನಿರ್ವಾಹಕ ರಾಜಧಾನಿ ಮತ್ತು ಕರ್ನೂಲ್ ನಗರಾಭಿವೃದ್ಧಿ ಪ್ರದೇಶವನ್ನು ನ್ಯಾಯಾಂಗ ರಾಜಧಾನಿ ಎಂದು ಕರೆಯಲಾಗುವುದು. ಆಂಧ್ರಪ್ರದೇಶದ ಬಿಜೆಪಿ ನಾಯಕ ವೈಎಸ್ ಚೌಧರಿ ಕಳೆದ ವಾರ ಅಮರಾವತಿಯನ್ನು ಆಂಧ್ರಪ್ರದೇಶದ ರಾಜಧಾನಿಯಾಗಿ ಘೋಷಿಸುವ ಬೇಡಿಕೆಯನ್ನು ತಮ್ಮ ಪಕ್ಷ ಬೆಂಬಲಿಸುತ್ತದೆ ಎಂದು ಹೇಳಿದ್ದಾರೆ. ಇದನ್ನೂ ಓದಿ:  ಪತ್ನಿಯನ್ನು ಕೊಂದು ವಿಷ ಸೇವಿಸಿ ಆಸ್ಪತ್ರೆ ಸೇರಿದ್ದ ಪತಿರಾಯ ಈಗ ಪೊಲೀಸರ ಅತಿಥಿ

    ಆಂಧ್ರಪ್ರದೇಶದ ರಾಜಧಾನಿಯಾಗಿ ಅಮರಾವತಿಯನ್ನು ಬೆಂಬಲಿಸಲು ಬಿಜೆಪಿ ಪರವಾಗಿ ನಾವು ನಿರ್ಣಯವನ್ನು ಅಂಗೀಕರಿಸಿದ್ದೇವೆ. ಯಾವುದೇ ಅಧಿಕಾರವಿಲ್ಲದೇ ರಾಜ್ಯದಲ್ಲಿ ಮೂರು ರಾಜಧಾನಿಗಳು ಎಂದು ವೈಎಸ್‌ಆರ್‌ಸಿಪಿ ಸರ್ಕಾರ ಘೋಷಿಸಿತು. ರಾಜಧಾನಿ ಅಭಿವೃದ್ಧಿಗೆ ಭೂಮಿ ನೀಡಿದ ಸ್ಥಳೀಯ ರೈತರನ್ನು ಬೆಂಬಲಿಸುವ ಸಲುವಾಗಿ ಬಿಜೆಪಿ ಅವರನ್ನು ಬೆಂಬಲಿಸುತ್ತದೆ ಮತ್ತು ಅಮರಾವತಿಯೇ ರಾಜಧಾನಿಯಾಗಿ ಉಳಿಯುವಂತೆ ಮಾಡುತ್ತದೆ ಎಂದು ಚೌಧರಿ ಹೇಳಿದ್ದರು.

  • ಆಂಧ್ರಪ್ರದೇಶದಲ್ಲಿ ಪ್ರವಾಹಪೀಡಿತ ಜನರ ನೆರವಿಗೆ ನಿಂತ ಸೋನು ಸೂದ್‌

    ಆಂಧ್ರಪ್ರದೇಶದಲ್ಲಿ ಪ್ರವಾಹಪೀಡಿತ ಜನರ ನೆರವಿಗೆ ನಿಂತ ಸೋನು ಸೂದ್‌

    ಹೈದರಾಬಾದ್‌: ಸಮಾಜ ಕಾರ್ಯಗಳ ಮೂಲಕವೇ ಜನಪ್ರಿಯರಾಗಿರುವ ಬಾಲಿವುಡ್‌ ನಟ ಸೋನು ಸೂದ್‌ ಆಂಧ್ರಪ್ರದೇಶದಲ್ಲಿ ಪ್ರವಾಹದಿಂದ ಸಂಷ್ಟಕ್ಕೆ ಸಿಲುಕಿರುವವರಿಗೆ ಸಹಾಯ ಮಾಡಲು ಮುಂದಾಗಿದ್ದಾರೆ.

    “ಸೋನು ಅವರೇ, ನೆಲ್ಲೂರು ಮತ್ತು ತಿರುಪತಿಯು ಅತಿವೃಷ್ಟಿಯಿಂದ ತೀವ್ರವಾಗಿ ಹಾನಿಗೊಳಗಾಗಿದೆ. ಮನೆಗಳಿಗೆ ಮಳೆ ನೀರು ನುಗ್ಗಿ ಸಮಸ್ಯೆ ಉಂಟುಮಾಡಿದೆ. ಎಷ್ಟೋ ಮಂದಿ ಮನೆಗಳನ್ನು ಕಳೆದುಕೊಂಡು ಬೀದಿಪಾಲಾಗಿದ್ದಾರೆ. ತಿನ್ನುವ ಆಹಾರಕ್ಕೂ ಪರದಾಡುವಂತಹ ಪರಿಸ್ಥಿತಿ ನಿರ್ಮಾಣವಾಗಿದೆ. ದಯವಿಟ್ಟು ಪ್ರವಾಹ ಪೀಡಿತರಿಗೆ ಸಹಾಯ ಮಾಡಿ” ಮನವಿ ಮಾಡಲಾಗಿತ್ತು. ಇದಕ್ಕೆ ಸಕಾರಾತ್ಮಕವಾಗಿ ಸ್ಪಂದಿಸಿರುವ ಸೋನು ಸೂದ್‌, ಮರಳಿ ನಮ್ಮ ಮನೆಗಳನ್ನು ನಿರ್ಮಿಸುವ ಸಮಯ ಬಂದಿದೆ ಎನ್ನುವ ಮೂಲಕ ಸಹಾಯದ ಭರವಸೆಯನ್ನು ನೀಡಿದ್ದಾರೆ. ಇದನ್ನೂ ಓದಿ: ವಾಯು ಮಾಲಿನ್ಯ ಹೆಚ್ಚಳದಿಂದ ಶಾಲಾ-ಕಾಲೇಜು ಬಂದ್ ಮಾಡಿದ ದೆಹಲಿ

    ವಾಯುಭಾರ ಕುಸಿತದಿಂದಾಗಿ ಆಂಧ್ರಪ್ರದೇಶದಲ್ಲಿ ಮಳೆಯ ಅಬ್ಬರ ಜೋರಾಗಿದೆ. ತಿರುಮಲ ತಿರುಪತಿಯಲ್ಲಿ ಭಾರೀ ಮಳೆಯಾಗುತ್ತಿದ್ದು, ಪ್ರವಾಹ ಉಂಟಾಗಿದೆ. ಆಂಧ್ರಪ್ರದೇಶದಲ್ಲಿ ಭಾರೀ ಮಳೆಗೆ 25ಕ್ಕೂ ಹೆಚ್ಚು ಜನರು ಅಸುನೀಗಿದ್ದಾರೆ. 100ಕ್ಕೂ ಹೆಚ್ಚು ಜನ ನಾಪತ್ತೆಯಾಗಿದ್ದಾರೆ ಎಂದು ವರದಿಗಳಾಗಿವೆ. ನೂರಾರು ಮಂದಿ ಮನೆಗಳನ್ನು ಕಳೆದುಕೊಂಡು ಸಂಕಷ್ಟಕ್ಕೆ ಸಿಲುಕಿದ್ದಾರೆ. ಈಗ ಸೋನು ಸೂದ್​ ಅವರು ಮಳೆಯಲ್ಲಿ ಸಿಲುಕಿದವರ ಸಹಾಯಕ್ಕೆ ಬಂದಿದ್ದಾರೆ. ಇದನ್ನೂ ಓದಿ: ಮತ್ತೆ ಸದ್ದು ಮಾಡಿದ ಕೊರೊನಾ – ಆಸ್ಟ್ರೀಯಾದಲ್ಲಿ ನಾಳೆಯಿಂದ ಲಾಕ್‍ಡೌನ್

    ಕೋವಿಡ್‌ನಿಂದ ಸಂಕಷ್ಟಕ್ಕೆ ಸಿಲುಕಿದ್ದವರಿಗೆ ಸೋನು ಸೂದ್‌ ಅವರು ದೊಡ್ಡ ಮಟ್ಟದಲ್ಲಿ ಸಹಾಯ ಮಾಡಿದ್ದರು. ಇದೇ ಕಾರಣಕ್ಕೆ ಎಷ್ಟೋ ಮಂದಿ ಸೋನು ಸೂದ್‌ ಅವರ ಫೋಟೋವನ್ನು ಮನೆಯಲ್ಲಿಟ್ಟು ಪೂಜೆ ಮಾಡುತ್ತಿದ್ದಾರೆ.